Viral news: ಮೆಟ್ರೋನಲ್ಲಿ ಸೈಕಲ್‌ ಜೊತೆ ಟ್ಯೂಷನ್‌ಗೆ ಹೋಗುತ್ತಿರುವ ಹುಡುಗನಿಗೆ ಮೆಚ್ಚುಗೆಯ ಮಹಾಪೂರ! - Vistara News

ವೈರಲ್ ನ್ಯೂಸ್

Viral news: ಮೆಟ್ರೋನಲ್ಲಿ ಸೈಕಲ್‌ ಜೊತೆ ಟ್ಯೂಷನ್‌ಗೆ ಹೋಗುತ್ತಿರುವ ಹುಡುಗನಿಗೆ ಮೆಚ್ಚುಗೆಯ ಮಹಾಪೂರ!

ಹುಡುಗನೊಬ್ಬ ತನ್ನ ಸೈಕಲನ್ನು ಮೆಟ್ರೋ ರೈಲಿನೊಳಗೆ ಪಾರ್ಕ್‌ ಮಾಡಿಕೊಂಡು ತಾನೂ ಬದಿಯಲ್ಲೇ ಕೂತು, ಮೆಟ್ರೋನಲ್ಲಿ ಪಯಣ ಮಾಡುತ್ತಿರುವ ಫೋಟೋ ಒಂದನ್ನು ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ರಾಜೀವ್‌ ಎಂಬವರೊಬ್ಬರು ಶೇರ್‌ ಮಾಡಿದ್ದರು.

VISTARANEWS.COM


on

boy with cycle
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ ನಗರಿಯು ಲೋಕಲ್‌ ರೈಲುಗಳಿಗೆ ಪ್ರಸಿದ್ಧಿ. ಇಲ್ಲಿ ನಿತ್ಯವೂ ಲಕ್ಷಗಟ್ಟಲೆ ಮಂದಿ ಲೋಕಲ್‌ ರೈಲಿನಲ್ಲಿಯೂ, ಮೆಟ್ರೋನಲ್ಲಿಯೂ ಓಡಾಡುತ್ತಿರುತ್ತಾರೆ. ಇಲ್ಲಿನ ಜನದಟ್ಟಣೆ, ಸಂಚಾರದಟ್ಟಣೆಯು ರಸ್ತೆಯಲ್ಲಿ ನಿತ್ಯ ಪ್ರಯಾಣಕ್ಕೆ ಅಷ್ಟು ಅನುಕೂಲಕರವಿಲ್ಲ ಎಂಬುದು ಬಹುತೇಕರಿಗೆ ಗೊತ್ತಿರುವ ಸತ್ಯ. ಅದಕ್ಕಾಗಿಯೇ, ಜನರನ್ನು ಹೆಚ್ಚು ಹೆಚ್ಚು ರೈಲಿನ ಬಳಕೆಗೆ, ಮೆಟ್ರೋನ ಬಳಕೆಗೆ ಪ್ರೋತ್ಸಾಹಿಸಲಾಗುತ್ತದೆ. ಇಲ್ಲೊಬ್ಬ ಪುಟಾಣಿ ಹುಡುಗ ಮೆಟ್ರೋನಲ್ಲಿ ಸೈಕಲ್‌ ತೆಗೆದುಕೊಂಡು ದೂರದ ಜಾಗಕ್ಕೆ ಟ್ಯೂಷನ್‌ಗೆಂದು ಓಡಾಡುತ್ತಿರುವ ಚಿತ್ರವೊಂದು ಹಲವರ ಮೆಚ್ಚುಗೆಗೆ ಪಾತ್ರವಾಗಿ ವೈರಲ್‌ ಆಗಿದೆ.

ಹೌದು. ಹುಡುಗನೊಬ್ಬ ತನ್ನ ಸೈಕಲನ್ನು ಮೆಟ್ರೋ ರೈಲಿನೊಳಗೆ ಪಾರ್ಕ್‌ ಮಾಡಿಕೊಂಡು ತಾನೂ ಬದಿಯಲ್ಲೇ ಕೂತು, ಮೆಟ್ರೋನಲ್ಲಿ ಪಯಣ ಮಾಡುತ್ತಿರುವ ಫೋಟೋ ಒಂದನ್ನು ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ರಾಜೀವ್‌ ಎಂಬವರೊಬ್ಬರು ಶೇರ್‌ ಮಾಡಿದ್ದರು. ʻಈ ಹುಡುಗ ನಿತ್ಯವೂ ತನ್ನ ಸೈಕಲ್‌ ಜೊತೆಗೆ ಮೆಟ್ರೋನಲ್ಲಿ ಪಯಣ ಮಾಡುತ್ತಿದ್ದಾನೆ. ಆರಾಮವಾಗಿ, ಯಾವುದೇ ಭಯವಿಲ್ಲದೆ ಈ ಹುಡುಗ ಮೆಟ್ರೋಲ್ಲಿ ಪ್ರಮಾಣ ಮಾಡುತ್ತಿದ್ದು, ತನ್ನ ಸೈಕಲನ್ನು ಅಚ್ಚುಕಟ್ಟಾಗಿ ತೊಂದರೆಯಾಗದಂತೆ ಪಾರ್ಕ್‌ ಕೂಡಾ ಮಾಡುತ್ತಾನೆ. ಆತನ ಭವಿಷ್ಯಕ್ಕೆ ಶುಭ ಹಾರೈಕೆಗಳುʼ ಎಂದು ಬರೆದ ಪೋಸ್ಟ್‌ ಒಂದು ಜಾಲತಾಣದಲ್ಲಿ ಬಹುತೇಕರ ಗಮನ ಸೆಳೆದಿದೆ.

ಹಲವರು ಈ ಹುಡುಗನ ನಿತ್ಯದ ಪಯಣದ ಈ ಚಿತ್ರ ನೋಡಿ ಫಿದಾ ಆಗಿದ್ದು, ಬಹಳ ಒಳ್ಳೆಯ ಕಾರ್ಯ. ಈತ ಮೆಟ್ರೋವನ್ನು ಸರಿಯಾದ ರೀತಿಯಲ್ಲಿ ಬಳಸುತ್ತಿದ್ದಾನೆ. ಇಷ್ಟು ಸಣ್ಣ ವಯಸ್ಸಿನಲ್ಲಿ ಮಕ್ಕಳು ಇಷ್ಟು ಜವಾಬ್ದರಿಯುತವಾಗಿ ಪಯಣಿಸುವುದು ಕಡಿಮೆ. ಆದರೆ, ಈ ಹುಡುಗನನ್ನು ನೋಡಿದರೆ, ಹೆಲ್ಮೆಟ್‌ ಹಾಕಿ ಸರಿಯಾದ ಮಾದರಿಯಲ್ಲೇ ಇದನ್ನು ಬಳಸುತ್ತಿರುವುದು ಗಮನಕ್ಕೆ ಬರುತ್ತಿದೆ. ಈತನಿಗೆ ಒಳ್ಳೆಯದಾಗಲಿ ಎಂದು ಶುಭ ಹಾರೈಸಿದ್ದಾರೆ.

ವಾವ್‌, ಇಂಥ ಮಕ್ಕಳ ಕೈಯಲ್ಲಿ ಭವಿಷ್ಯ ಚೆನ್ನಾಗಿದೆ ಅನಿಸುತ್ತಿದೆ ಎಂದು ಇನ್ನೊಬ್ಬರು ಕಾಮೆಂಟ್‌ ಮಾಡಿದ್ದಾರೆ.

ಇನ್ನೂ ಒಬ್ಬರು, ಕಡೇ ಪಕ್ಷ ಮೆಟ್ರೋನಲ್ಲಿ ಉಚಿತವಾಗಿ ಸೈಕಲನ್ನು ತೆಗೆದುಕೊಂಡು ಪಯಣಸಿಬಹುದು. ಆದರೆ, ಲೋಕಲ್‌ ರೈಲಿನಲ್ಲಿ ಸೈಕಲ್‌ ತೆಗೆದುಕೊಂಡು ಹೋಗಬೇಕಾದರೆ, ೨೦೦ ರೂಪಾಯಿಗಳನ್ನು ಹೆಚ್ಚುವರಿ ಪಾವತಿಸಬೇಕು. ಸೈಕಲ್‌ ಸವಾರಿಯನ್ನು ಉತ್ತೇಜಿಸಬೇಕಾದರೆ, ಸ್ಥಳೀಯ ರೈಲು ವ್ಯವಸ್ಥೆಯಲ್ಲೂ ಸೈಕಲನ್ನು ಉಚಿತವಾಗಿ ತೆಗೆದುಕೊಂಡು ಹೋಗುವಂತಾಗಬೇಕು ಎಂದು ಪ್ರತಿಕ್ರಿಯಿಸಿದ್ದಾರೆ. ಅನೇಕರು ತಾವೂ ಕೂಡಾ ನಿತ್ಯ ಸೈಕಲ್‌ನಲ್ಲಿ ಮೆಟ್ರೋ ಮೂಲಕ ಪಯಣಿಸುತ್ತಿದ್ದೇವೆಂದು ಈ ಹುಡುಗನ ನಡೆಗೆ ಬೆಂಬಲವಾಗಿ ತಮ್ಮ ತಮ್ಮ ಫೋಟೋಗಳನ್ನು ಪೋಸ್ಟ್‌ ಮಾಡುತ್ತಿದ್ದು, ಹಲವು ಯುವಜನರು ಸೈಕಲ್‌ ಸವಾರಿಯತ್ತ ಹೊರಳುತ್ತಿರುವುದನ್ನು ತೋರಿಸುತ್ತಿದೆ.

ಇದನ್ನೂ ಓದಿ: Video Viral: ದಿಲ್ಲಿ ಮೆಟ್ರೋದಲ್ಲಿ ಬಿಕಿನಿ ರೀತಿ ಬಟ್ಟೆ ತೊಟ್ಟ ಯುವತಿಯ ವಿಡಿಯೋ ವೈರಲ್! ಡಿಎಂಆರ್‌‌ಸಿ ಹೇಳಿದ್ದೇನು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Viral News: ಮದುವೆಯೇ ಆಗಿಲ್ಲ ಎಂದ ಚಾಮರಾಜನಗರ ಸಂಸದ ನಿರ್ದೇಶಕಿ ಹಣೆಗೆ ಕುಂಕುಮ ಇಟ್ಟರು!

Viral News: ಮೈಸೂರಿನ ಚಾಮುಂಡೇಶ್ವರಿ ತಾಯಿ (Mysore Chamundeshwari Temple) ಗರ್ಭಗುಡಿಯಲ್ಲೇ ಈ ಘಟನೆ ನಡೆದಿದೆ. ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕಿ ಸವಿತಾ ಅವರ ಹಣೆಗೆ ಚಾಮರಾಜನಗರ ಸಂಸದ ಸುನೀಲ್‌ ಬೋಸ್ (Sunil Bose) ಕುಂಕುಮ ಇಟ್ಟಿದ್ದಾರೆ. ಆಷಾಢ ಮಾಸದ ಮೂರನೇ ಶುಕ್ರವಾರದಂದು ಚಾಮುಂಡಿ ಬೆಟ್ಟಕ್ಕೆ ಇವರಿಬ್ಬರೂ ಜತೆಯಾಗಿ ಬಂದಿದ್ದರು.

VISTARANEWS.COM


on

sunil bose savitha viral news
Koo

ಮೈಸೂರು: ಚಾಮರಾಜನಗರ ಸಂಸದರು (Chamarajanagar MP) ದೇವಾಲಯದ ಗರ್ಭಗುಡಿಯಲ್ಲಿ ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕಿ ಹಣೆಗೆ ಕುಂಕುಮ ಇಟ್ಟ ಘಟನೆ ನಡೆದಿದೆ. ಇದು ವಿಶೇಷ ಸುದ್ದಿಯಾಗುವ ಸಂಗತಿಯೇನೂ ಅಲ್ಲ. ಆದರೆ, ತನಗೆ ಮದುವೆಯೇ ಆಗಿಲ್ಲ ಎಂದು ಸಂಸದರು ಹೇಳಿಕೊಂಡಿದ್ದರು. ಹೀಗಾಗಿ ಇದೀಗ ಸುದ್ದಿಯಾಗಿದೆ. ಇವರಿಬ್ಬರ ಫೋಟೋ ಕೂಡ ವೈರಲ್‌ (Viral News) ಆಗಿದೆ.

ಮೈಸೂರಿನ ಚಾಮುಂಡೇಶ್ವರಿ ತಾಯಿ (Mysore Chamundeshwari Temple) ಗರ್ಭಗುಡಿಯಲ್ಲೇ ಈ ಘಟನೆ ನಡೆದಿದೆ. ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕಿ ಸವಿತಾ ಅವರ ಹಣೆಗೆ ಚಾಮರಾಜನಗರ ಸಂಸದ ಸುನೀಲ್‌ ಬೋಸ್ (Sunil Bose) ಕುಂಕುಮ ಇಟ್ಟಿದ್ದಾರೆ. ಆಷಾಢ ಮಾಸದ ಮೂರನೇ ಶುಕ್ರವಾರದಂದು ಚಾಮುಂಡಿ ಬೆಟ್ಟಕ್ಕೆ ಇವರಿಬ್ಬರೂ ಜತೆಯಾಗಿ ಬಂದಿದ್ದರು.

ಈ ವೇಳೆ ಗರ್ಭಗುಡಿಯಲ್ಲಿ ಇವರು ವಿಶೇಷ ಪೂಜೆ ಮಾಡಿಸಿದ್ದಾರೆ. ಪೂಜೆ ನೆರವೇರಿಸುವ ವೇಳೆ ಬೆಂಬಲಿಗರ ಸಮ್ಮುಖದಲ್ಲೇ ಸವಿತಾ ಹಣೆಗೆ ಸುನೀಲ್‌ ಬೋಸ್ ಕುಂಕುಮ ಇಟ್ಟರು. ಸಾರ್ವಜನಿಕ ವಲಯದಲ್ಲಿ ಸುನೀಲ್‌ ಬೋಸ್ ನಡೆ ಇದೀಗ ಚರ್ಚೆಗೆ ಕಾರಣವಾಗಿದೆ.

ಯಾಕೆಂದರೆ ಲೋಕಸಭಾ ಚುನಾವಣೆ ಸಂದರ್ಭದಲ್ಲಿ, ತಮಗೆ ಮದುವೆ ಆಗಿಲ್ಲ ಎಂದು ಸುನೀಲ್‌ ಬೋಸ್ ಅಫಿಡೆವಿಟ್ ಸಲ್ಲಿಸಿದ್ದರು. ಈ ಬಗ್ಗೆ ಚುನಾವಣಾ ಅಧಿಕಾರಿಗಳಿಗೆ ದೂರನ್ನೂ ಚಾಮರಾಜನಗರ ಬಿಜೆಪಿ ಸದಸ್ಯರು ನೀಡಿದ್ದರು. ಸುನೀಲ್‌ ಬೋಸ್ ಹಾಗೂ ಸವಿತಾ ಜತೆಯಲ್ಲಿ ಇರುವ ಫೋಟೋಗಳನ್ನು ನೀಡಿ ದೂರು ಕೊಟ್ಟಿದ್ದರು. ಸುನೀಲ್‌ ಬೋಸ್‌ಗೆ ಮದುವೆಯಾಗಿದೆ, ಆದರೆ ಅಫಿಡವಿಟ್‌ನಲ್ಲಿ ಸುಳ್ಳು ಹೇಳಿದ್ದಾರೆ ಎಂದು ದೂರಿದ್ದರು.

ʼಇದೀಗ, ಚಾಮುಂಡೇಶ್ವರಿ ಗರ್ಭಗುಡಿಯಲ್ಲಿ ನಡೆದದ್ದು ಸುಳ್ಳು ಅಲ್ಲ ತಾನೆ?ʼ ಎಂದು ಬಿಜೆಪಿ ಸದಸ್ಯರು ಪ್ರಶ್ನಿಸಿದ್ದಾರೆ. ʼಮದುವೆ ಆಗಿದ್ದರೆ, ಆಗಿದೆ ಎಂದು ಹೇಳಲಿ. ಇದರಲ್ಲಿ ಅಡಗಿಸಿ ಇಡುವ ಮುಜುಗರದ ಸಂಗತಿ ಏನಿದೆ?ʼ ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ.

ಕೇಂದ್ರ ಸಚಿವರಿಗೆ ಅವಮಾನ, ಎಚ್‌ಡಿಕೆ ಬಂದರೂ ತೆಗೆಯದ ಪ್ರವಾಸಿ ಮಂದಿರ ಬೀಗ

ಮೈಸೂರು: ಕೇಂದ್ರ ಸಚಿವರೇ ವಿಶ್ರಾಂತಿಗಾಗಿ ಬಂದರೂ ಬಾಗಿಲು ಬೀಗ ತೆಗೆಯದೆ ಅಧಿಕಾರಿಗಳು ಅವಮಾನ ಮಾಡಿ ಕಳಿಸಿದ ಘಟನೆ ನಂಜನಗೂಡಿನಲ್ಲಿ ನಡೆದಿದೆ. ಕೇಂದ್ರ ಸಚಿವ, ಜೆಡಿಎಸ್‌ ಮುಖಂಡ ಎಚ್‌ಡಿ ಕುಮಾರಸ್ವಾಮಿ ಅವರು ಇಂದು ನಂಜನಗೂಡು ಪ್ರವಾಸದಲ್ಲಿದ್ದು, ಕೆಲ ನಿಮಿಗಳ ವಿಶ್ರಾಂತಿಗಾಗಿ ನಂಜನಗೂಡು ಪ್ರವಾಸಿ ಮಂದಿರಕ್ಕೆ ತೆರಳಿದ್ದರು.

ಕೇಂದ್ರ ಸಚಿವರ ಭೇಟಿ ವಿಚಾರವನ್ನು ಪ್ರವಾಸಿ ಮಂದಿರದ ಅಧಿಕಾರಿಗಳಿಗೆ ಸಾಕಷ್ಟು ಮೊದಲೇ ತಿಳಿಸಲಾಗಿತ್ತು. ಈ ಬಗ್ಗೆ ಪ್ರವಾಸ ಪಟ್ಟಿಯನ್ನೂ ಸಚಿವಾಲಯದ ಅಧಿಕಾರಿಗಳು ಬಿಡುಗಡೆ ಮಾಡಿದ್ದರು. ಆದರೆ ಎಚ್‌ಡಿಕೆ ತೆರಳುವ ಹೊತ್ತಿಗೆ ಪ್ರವಾಸಿ ಮಂದಿರದ ಬಾಗಿಲಿಗೆ ಬೀಗ ಹಾಕಲಾಗಿತ್ತು. ಯಾರೂ ಅಧಿಕಾರಿಗಳು ಸ್ಥಳದಲ್ಲಿರಲಿಲ್ಲ.

10 ನಿಮಿಷಕ್ಕೂ ಅಧಿಕ ಸಮಯ ಕಾದರೂ ಯಾವುದೇ ಸಿಬ್ಬಂದಿ ಬಾಗಿಲು ತೆಗೆಯಲು ಬರಲಿಲ್ಲ. ಈ ಸಂದರ್ಭದಲ್ಲಿ ಎಚ್‌ಡಿಕೆ ಕಾರಿನಲ್ಲೇ ಕುಳಿತಿದ್ದರು. ಜೊತೆಗೆ ಮಾಜಿ ಸಚಿವ ಸಾ.ರಾ.ಮಹೇಶ್ ಅವರೂ ಇದ್ದರು. ಕಾದು ಸುಸ್ತಾದ ಎಚ್‌ಡಿ ಕುಮಾರಸ್ವಾಮಿ ಬಳಿಕ ಅಲ್ಲಿಂದ ತೆರಳಿದರು.

ಈ ಬಗ್ಗೆ ಸಾ.ರಾ ಮಹೇಶ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸಚಿವರು ಬಂದರೂ ಬಾಗಿಲು ತೆರೆಯದೆ ಇರುವುದರ ಹಿಂದೆ ರಾಜ್ಯ ಸರಕಾರದ ಚಿತಾವಣೆ ಇದೆ. ಅವಮಾನ ಮಾಡುವ ಉದ್ದೇಶಕ್ಕಾಗಿಯೇ ಹೀಗೆ ಮಾಡಲಾಗಿದೆ ಎಂದು ಜೆಡಿಎಸ್‌ ಮುಖಂಡರು ಆರೋಪಿಸಿದ್ದಾರೆ.

ಇದನ್ನೂ ಓದಿ: Political Rivalry : ರಾಜಕೀಯ ವೈಷಮ್ಯ; ಗುತ್ತಿಗೆ ನೌಕರಿಯಿಂದ JDS ಬೆಂಬಲಿಗನ ಹೊರಗಟ್ಟಿದ ಸುನಿಲ್‌ ಬೋಸ್‌?

Continue Reading

ದೇಶ

Rahul Gandhi: ನೀಟ್‌ನಲ್ಲಿ ‘ಎಷ್ಟು ವೋಟ್‌’ ಪಡೆದಿರಿ ಎಂದು ವಿದ್ಯಾರ್ಥಿಗಳಿಗೆ ಕೇಳಿದ ರಾಹುಲ್‌ ಗಾಂಧಿ; Video ವೈರಲ್

Rahul Gandhi: ರಾಹುಲ್‌ ಗಾಂಧಿ ಅವರು ಕಾರಿನಲ್ಲಿ ತೆರಳುವಾಗ ಮಾರ್ಗ ಮಧ್ಯೆ ನೀಟ್‌ ಅಭ್ಯರ್ಥಿಗಳ ಜತೆ ಮಾತುಕತೆ ನಡೆಸಿ, ಅವರ ಸಮಸ್ಯೆ, ಪ್ರಶ್ನೆಪತ್ರಿಕೆ ಸೋರಿಕೆ ಬಗ್ಗೆ ಕೇಳಿದ್ದಾರೆ. ಇದೇ ವೇಳೆ, ಪರೀಕ್ಷೆಯಲ್ಲಿ ಎಷ್ಟು ವೋಟ್‌ ಪಡೆದಿದ್ದೀರಿ ಎಂಬುದಾಗಿ ಬಾಯಿತಪ್ಪಿ ಕೇಳಿದ್ದಾರೆ. ಈ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ.

VISTARANEWS.COM


on

Rahul Gandhi
Koo

ನವದೆಹಲಿ: ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗೆ ನಡೆದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET UG 2024) ‌ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ. ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ (NTA) ಛೀಮಾರಿ ಹಾಕಿದೆ. ಪ್ರತಿಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿವೆ. ಇದರ ಬೆನ್ನಲ್ಲೇ, ನೀಟ್‌ ಅಭ್ಯರ್ಥಿಗಳಿಗೆ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ (Rahul Gandhi) ಅವರು ಕೇಳಿದ ಪ್ರಶ್ನೆ ಈಗ ಭಾರಿ ವೈರಲ್‌ ಆಗಿದೆ.

ಹೌದು, ರಾಹುಲ್‌ ಗಾಂಧಿ ಅವರು ಕಾರಿನಲ್ಲಿ ತೆರಳುವಾಗ ಮಾರ್ಗ ಮಧ್ಯೆ ನೀಟ್‌ ಅಭ್ಯರ್ಥಿಗಳ ಜತೆ ಮಾತುಕತೆ ನಡೆಸಿ, ಅವರ ಸಮಸ್ಯೆ, ಪ್ರಶ್ನೆಪತ್ರಿಕೆ ಸೋರಿಕೆ ಬಗ್ಗೆ ಕೇಳಿದ್ದಾರೆ. “ನೀಟ್‌ನಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಆಗಿದೆಯೇ” ಎಂಬುದಾಗಿ ರಾಹುಲ್‌ ಗಾಂಧಿ ಅವರು ವಿದ್ಯಾರ್ಥಿಗಳಿಗೆ ಕೇಳಿದ್ದಾರೆ. ಇದೇ ವೇಳೆ ವಿದ್ಯಾರ್ಥಿಗಳು ಹೌದು ಎಂದಿದ್ದಾರೆ. ಆಗ, ರಾಹುಲ್‌ ಗಾಂಧಿ ಅವರು, “ಪರೀಕ್ಷೆಯಲ್ಲಿ ಎಷ್ಟು ವೋಟು ಗಳಿಸಿದ್ದೀರಿ” ಎಂಬುದಾಗಿ ಪ್ರಶ್ನಿಸಿದ್ದಾರೆ. ಎಷ್ಟು ಅಂಕ ಪಡೆದಿದ್ದೀರಿ ಎಂಬುದಾಗಿ ಹೇಳುವ ಬದಲು ಅವರು ಎಷ್ಟು ವೋಟು ಗಳಿಸಿದ್ದೀರಿ ಎಂದು ಪ್ರಶ್ನಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊ ವೈರಲ್‌ ಆಗುತ್ತಲೇ ಜನ ತಮಾಷೆಯಾಗಿ ಪ್ರತಿಕ್ರಿಯಿಸಿದ್ದಾರೆ. “ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗಳಿಸಿದ 240 ಎಂಬುದಾಗಿ ವಿದ್ಯಾರ್ಥಿ ಹೇಳಬೇಕಿತ್ತು” ಎಂದು ವ್ಯಕ್ತಿಯೊಬ್ಬರು ಪ್ರತಿಕ್ರಿಯಿಸಿದ್ದಾರೆ. “ಚುನಾವಣೆ ಮುಗಿದರೂ ರಾಹುಲ್‌ ಗಾಂಧಿ ಅವರು ಇನ್ನೂ ಅದರಿಂದ ಹೊರಬಂದಿಲ್ಲ” ಎಂಬುದಾಗಿ ಮತ್ತೊಬ್ಬರು ಕಾಲೆಳೆದಿದ್ದಾರೆ. ಹೀಗೆ ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ವಿಡಿಯೊಗೆ ಕಮೆಂಟ್‌ ಮಾಡಿದ್ದಾರೆ.

ಏನಿದು ನೀಟ್‌ ಪ್ರಕರಣ?

ದೇಶಾದ್ಯಂತ 571 ನಗರಗಳಲ್ಲಿ ಹಾಗೂ ಹೊರಗಿನ 14 ನಗರಗಳು ಸೇರಿದಂತೆ 4750 ವಿವಿಧ ಕೇಂದ್ರಗಳಲ್ಲಿ 05 ಮೇ 2024 ರಂದು ನೀಟ್‌ ಯುಜಿ ಪರೀಕ್ಷೆಯನ್ನು ನಡೆಸಲಾಗಿತ್ತು. ಪರೀಕ್ಷೆಯನ್ನು 13 ಭಾಷೆಗಳಲ್ಲಿ (ಅಸ್ಸಾಮಿ, ಬಂಗಾಳಿ, ಇಂಗ್ಲಿಷ್, ಗುಜರಾತಿ, ಹಿಂದಿ, ಕನ್ನಡ, ಮಲಯಾಳಂ, ಮರಾಠಿ, ಒಡಿಯಾ, ಪಂಜಾಬಿ, ತಮಿಳು, ತೆಲುಗು, ಮತ್ತು ಉರ್ದು) ನಡೆಸಲಾಗಿತ್ತು. ನೀಟ್‌ ಪರೀಕ್ಷೆಗೆ 24,06,079 ಅಭ್ಯರ್ಥಿಗಳ ನೋಂದಾಯಿಸಿಕೊಂಡಿದ್ದರು. ಅದರಲ್ಲಿ 23,33,297 ಪರೀಕ್ಷೆ ಹಾಜರಾಗಿದ್ದು, 72782 ಗೈರು ಹಾಜರಾಗಿದ್ದರು. ಇದರಲ್ಲಿ ಬಾಲಕರು 10,29,154 ಹಾಗೂ ಬಾಲಕಿಯರು 13,76,831, ತೃತೀಯ ಲಿಂಗಿಗಳು 18 ಮಂದಿ ಪರೀಕ್ಷೆಯನ್ನು ಬರೆದಿದ್ದರು.

ನೀಟ್‌ ಪರೀಕ್ಷೆಯಲ್ಲಿ ರ‍್ಯಾಂಕ್‌ ಪಡೆದ 67 ವಿದ್ಯಾರ್ಥಿಗಳಲ್ಲಿ 44 ವಿದ್ಯಾರ್ಥಿಗಳು ಗ್ರೇಸ್‌ ಮಾರ್ಕ್ಸ್‌ ಆಧಾರದ ಮೇಲೆ ಟಾಪರ್‌ಗಳಾಗಿದ್ದರು. ಇನ್ನು, ಹರಿಯಾಣದಲ್ಲಿ ಒಂದೇ ಕೇಂದ್ರದಲ್ಲಿ ಪರೀಕ್ಷೆ ಬರೆದ ಆರು ವಿದ್ಯಾರ್ಥಿಗಳು ಜಂಟಿಯಾಗಿ ಟಾಪ್‌ ಸ್ಥಾನ ಪಡೆದಿದ್ದಾರೆ. ಇದರಿಂದಾಗಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ, ಪ್ರಶ್ನೆಪತ್ರಿಕೆ ಸೋರಿಕೆ ಮಾಡಲಾಗಿದೆ ಎಂಬುದಾಗಿ ಕೆಲವು ಪೋಷಕರು ಆರೋಪ ಮಾಡಿದ್ದಾರೆ. ಗ್ರೇಸ್‌ ಮಾರ್ಕ್ಸ್‌ ಪಡೆದ 1,500 ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಯನ್ನೂ ನಡೆಸಲಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ ಮಾಸ್ಟರ್‌ ಮೈಂಡ್‌ ಅಮಿತ್‌ ಆನಂದ್‌ ಸೇರಿ ಹಲವರನ್ನು ಬಂಧಿಸಲಾಗಿದ್ದು, ಕ್ಷಿಪ್ರವಾಗಿ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: Rahul Gandhi: ಚಮ್ಮಾರನ ಅಂಗಡಿಗೆ ದಿಢೀರ್‌ ಭೇಟಿ ನೀಡಿ, ಚಪ್ಪಲಿ ಹೊಲಿದ ರಾಹುಲ್‌ ಗಾಂಧಿ; Video ಇಲ್ಲಿದೆ

Continue Reading

ವೈರಲ್ ನ್ಯೂಸ್

Viral Video: ಅಪಘಾತವಾದ ಲಾರಿಯಿಂದ ಜ್ಯೂಸ್‌ ಪ್ಯಾಕ್‌ ಎತ್ತಿಕೊಂಡ ಐಫೋನ್‌ಧಾರಿ! ದೊಡ್ಡವರ ಸಣ್ಣತನ ಎಂದ ನೆಟ್ಟಿಗರು

Viral Video: ಸಾಮಾನ್ಯವಾಗಿ ರಸ್ತೆ ಅಪಘಾತವಾದಾಗ ಅಕ್ಕಪಕ್ಕ ಇದ್ದವರು ನೆರವಿಗೆ ಧಾವಿಸುತ್ತಾರೆ. ಆದರೆ ಇಲ್ಲೊಬ್ಬ ವ್ಯಕ್ತ್ ಅಪಘಾತವಾದ ಲಾರಿಯಿಂದ ಜ್ಯೂಸ್‌ ಪ್ಯಾಕ್‌ ಎತ್ತಿಕೊಂಡು ಹೋಗುತ್ತಿದ್ದಾನೆ! ಅಲ್ಲದೆ ಆತ ಕೈಯಲ್ಲಿ ದುಬಾರಿ ಐಫೋನ್‌ ಹಿಡಿದುಕೊಂಡಿದ್ದಾನೆ. ಸದ್ಯ ಆತನ ವರ್ತನೆಗೆ ನೆಟ್ಟಿಗರು ಛೀಮಾರಿ ಹಾಕುತ್ತಿದ್ದಾರೆ. ವೈರಲ್‌ ವಿಡಿಯೊ ನೀವೂ ನೋಡಿ.

VISTARANEWS.COM


on

Viral Video
Koo

ಲಕ್ನೋ: ಐಫೋನ್‌ ಹೊಂದಿದವರು ತಕ್ಕಮಟ್ಟಿನ ಶ್ರೀಮಂತರು ಎನ್ನುವ ಮಾತಿದೆ. ಈ ಫೋನ್‌ಗಳಿಗೆ ದುಬಾರಿ ಬೆಲೆ ಆಗಿರುವ ಕಾರಣ ಹೀಗೆ ಹೇಳಲಾಗುತ್ತದೆ. ಜತೆಗೆ ಐಫೋನ್‌ ಪ್ರತಿಷ್ಠೆಯ ವಿಷಯ ಎಂದೂ ಕೆಲವರು ಭಾವಿಸುತ್ತಾರೆ. ಇದೇ ಕಾರಣಕ್ಕೆ ಐಫೋನ್‌ ಕುರುತಾದ ತಹೇವಾರಿ ಮೀಮ್ಸ್‌, ರೀಲ್ಸ್‌ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತವೆ. ಇದೆಲ್ಲೆ ಫನ್ನಿ ವಿಡಿಯೊ ಬಿಡಿ. ಆದರೆ ಇದೀಗ ವೈರಲ್‌ ಆಗುತ್ತಿರುವ ವಿಡಿಯೊ ನೋಡಿದರೆ ನಿಮ್ಮ ರಕ್ತ ಕುದಿಯುವುದು ಖಚಿತ. ಅಂತಹದ್ದೇನಿದೆ ಈ ವಿಡಿಯೊದಲ್ಲಿ ಎನ್ನುವ ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ (Viral Video).

ಹೆದ್ದಾರಿಯೊಂದರಲ್ಲಿ ಲಾರಿ ಅಪಘಾತವಾಗಿದ್ದು, ಅದರಿಂದ ಹೊರಬಿದ್ದ ಜ್ಯೂಸ್‌ನ ಬಾಕ್ಸ್‌ ಅನ್ನು ಯುಕನೊಬ್ಬ ಎತ್ತಿಕೊಂಡು ಹೋಗುವ ದೃಶ್ಯ ಇದಾಗಿದೆ. ಅಪಘಾತಗೊಂಡ ಲಾರಿಯಲ್ಲಿದ್ದವರಿಗೆ ನೆರವಾಗುವುದು ಬಿಟ್ಟು ಈತ ಜ್ಯೂಸ್‌ ಎಗರಿಸಿರುವುದು ವಿಡಿಯೊದಲ್ಲಿ ಸೆರೆಯಾಗಿದೆ.

ವಿಡಿಯೊದಲ್ಲಿ ಏನಿದೆ?

ಉತ್ತರಪ್ರದೇಶದ ಗಾಜಿಯಾಬಾದ್‌ನ ಲಾಲ್ ಕುವಾನ್ ಪ್ರದೇಶದಲ್ಲಿ ಸರಕು ಸಾಗಿಸುತ್ತಿದ್ದ ಟ್ರಕ್ ಅಪಘಾತಕ್ಕೀಡಾಗಿತ್ತು. ಇದರಿಂದ ಹೊರ ಚೆಲ್ಲಿದ ತಂಪು ಪಾನೀಯಗಳ ಪ್ಯಾಕ್, ಬಾಕ್ಸ್‌ ರಸ್ತೆಯಲ್ಲಿ ಹರಡಿತ್ತು. ʼಕರ್ಮ್ ಕರೋ ಕಾಂಡ್ ನಹೀಂʼ (ಒಳ್ಳೆಯ ಕಾರ್ಯಗಳನ್ನು ಮಾಡಿ, ಕಿಡಿಗೇಡಿತನವನ್ನು ಮಾಡಬೇಡಿ) ಎಂದು ಬರೆದಿರುವ ಕಪ್ಪು ಟೀ ಶರ್ಟ್ ಧರಿಸಿದ ವ್ಯಕ್ತಿ ಅಪಘಾತ ಸಂಭವಿಸಿದ ಸ್ಥಳದ ಬಳಿ ನಡೆದುಕೊಂಡು ಬರುತ್ತಾನೆ. ಅವನು ಟ್ರಕ್‌ನಲ್ಲಿದ್ದವರಿಗೆ ನೆರವಾಗಲು ಬರುತ್ತಿದ್ದಾನೆ ಎಂದುಕೊಂಡರೆ ಅದು ತಪ್ಪು. ಅವನು ಫೋನಿನಲ್ಲಿ ಮಾತನಾಡುತ್ತ ರಸ್ತೆಯಲ್ಲಿ ಬಿದ್ದಿರುವ ತಂಪು ಪಾನೀಯದ ಪ್ಯಾಕ್‌ ಎತ್ತಿ ಏನೂ ನಡೆದೇ ಇಲ್ಲವೆನ್ನುವಂತೆ ತನ್ನ ಪಾಡಿಗೆ ತಾನು ಹೊರಟು ಹೋಗುತ್ತಾನೆ. ವಿಶೇಷ ಎಂದರೆ ಆತನ ಕೈಯಲ್ಲಿರುವುದು ದುಬಾರಿ ಐಫೋನ್‌ ಎನ್ನುವುದು ವಿಡಿಯೊದಲ್ಲಿ ಸ್ಪಷ್ಟವಾಗಿ ಕಾಣಿಸುತ್ತದೆ. ಒಟ್ಟಿನಲ್ಲಿ ಆತನ ಟೀಷರ್ಟ್‌ನ ಸಂದೇಶಕ್ಕೂ, ಕೈಯಲ್ಲಿರುವ ಐಫೋನ್‌ಗೂ ಆತನ ವರ್ತನೆಗೂ ಅಜಗಜಾಂತರ ವ್ಯತ್ಯಾಸ ಕಂಡು ಬಂದಿದೆ.

“ಬ್ರೋ, ತಂಪು ಪಾನೀಯವನ್ನು ಏಕೆ ಕದಿಯುತ್ತಿದ್ದೀಯಾ? ಅಪಘಾತ ಸಂಭವಿಸಿದೆ. ಕನಿಷ್ಠ ಅಪಘಾತ ಸ್ಥಳದಿಂದಾದರೂ ಕದಿಯಬೇಡ” ಎಂದು ವ್ಯಕ್ತಿಯೊಬ್ಬರು ಹೇಳುತ್ತಿರುವುದು ವಿಡಿಯೊದಲ್ಲಿ ಸೆರೆಯಾಗಿದೆ. ಅದಾಗ್ಯೂ ಐಫೋನ್‌ಧಾರಿ ತನಗೂ ಇದಕ್ಕೂ ಸಂಬಂಧವೇ ಇಲ್ಲ ಎನ್ನುವಂತೆ ತಂಪು ಪಾನೀಯ ಪ್ಯಾಕ್‌ನೊಂದಿಗೆ ಹೊರಟು ಹೋಗುತ್ತಾನೆ.

ಇದನ್ನೂ ಓದಿ: Rahul Gandhi: ಚಮ್ಮಾರನ ಅಂಗಡಿಗೆ ದಿಢೀರ್‌ ಭೇಟಿ ನೀಡಿ, ಚಪ್ಪಲಿ ಹೊಲಿದ ರಾಹುಲ್‌ ಗಾಂಧಿ; Video ಇಲ್ಲಿದೆ

ನೆಟ್ಟಿಗರಿಂದ ಟೀಕೆ

ಸದ್ಯ ಈ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು, ಆ ವ್ಯಕ್ತಿಯ ವರ್ತನೆಗೆ ನೆಟ್ಟಿಗರು ಛೀಮಾರಿ ಹಾಕುತ್ತಿದ್ದಾರೆ. ʼʼಆತನ ನಿಜವಾದ ಸ್ವಭಾವ ಹೊರ ಬಂದಿದೆʼʼ ಎಂದು ಒಬ್ಬರು ಅಸಮಾಧಾನ ತೋಡಿಕೊಂಡಿದ್ದಾರೆ. ʼʼಇಂತಹ ವ್ಯಕ್ತಿಗಳಿಂದ ಇನ್ನೇನನ್ನು ನಿರೀಕ್ಷಿಸಲು ಸಾಧ್ಯ?ʼʼ ಎಂದು ಇನ್ನೊಬ್ಬರು ಹತಾಶೆ ವ್ಯಕ್ತಪಡಿಸಿದ್ದಾರೆ. ʼʼತೀರ ಬಡವʼʼ ಎಂದು ಮತ್ತೊಬ್ಬರು ವ್ಯಂಗ್ಯವಾಡಿದ್ದಾರೆ. ʼʼಇಎಂಐ ಪಾವತಿಸಿ ಐಫೋನ್‌ ಖರೀದಿಸಿರಬೇಕುʼʼ ಎಂದು ಮಗದೊಬ್ಬರು ತಿಳಿಸಿದ್ದಾರೆ. ಮಾನವೀಯತೆ ಮರೆಯಾಗುತ್ತಿದೆ ಎನ್ನುವುದಕ್ಕೆ ಇದು ಸ್ಪಷ್ಟ ಉದಾಹರಣೆ ಎಂದು ಹಲವರು ಕಮೆಂಟ್‌ ಮಾಡಿದ್ದಾರೆ. ಕೆಲವರಂತೂ ಈತನ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಗಾಜಿಯಾಬಾದ್‌ ಪೊಲೀಸರನ್ನು ಒತ್ತಾಯಿಸಿದ್ದಾರೆ. ಒಟ್ಟಿನಲ್ಲಿ ಆತನ ವರ್ತನೆ ಸಾಕಷ್ಟು ಟೀಕೆಗೆ ಗುರಿಯಾಗಿದೆ.

Continue Reading

ಪ್ರಮುಖ ಸುದ್ದಿ

Viral News: ಜೈಲಿಂದ ಹೊರಬಂದ ಖುಷಿಗೆ ರೌಡಿಯ ಬೃಹತ್ ಮೆರವಣಿಗೆ; ಮತ್ತೆ ಜೈಲಿಗೇ ಕಳುಹಿಸಿದ ಪೊಲೀಸರು!

Viral News ಮಹಾರಾಷ್ಟ್ರ ಅಪಾಯಕಾರಿ ಚಟುವಟಿಕೆಗಳ ತಡೆ (ಎಂಪಿಡಿಎ) ಕಾಯ್ದೆಯಡಿ ಶಿಕ್ಷೆ ಅನುಭವಿಸುತ್ತಿದ್ದ ನಾಸಿಕ್‌ನ ಕುಖ್ಯಾತ ರೌಡಿ ಹರ್ಷದ್ ಪಟಾಂಕರ್ ಜುಲೈ 23 ರಂದು ಜೈಲಿನಿಂದ ಬಿಡುಗಡೆಯಾಗಿದ್ದ. ಜೈಲಿನಿಂದ ಬಿಡುಗಡೆಯಾದ ಹರ್ಷದ್ ಪಟಾಂಕರ್ ಅನ್ನು ಸ್ವಾಗತಿಸಲು ಆತನ ಬೆಂಬಲಿಗರು ಬೃಹತ್ ರ‍್ಯಾಲಿಯನ್ನು ಆಯೋಜಿಸಿದ್ದರು. ಇದರ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಆದರೆ ಈ ರ‍್ಯಾಲಿ ನಡೆಸಿ ಮತ್ತೆ ಆತ ಜೈಲು ಪಾಲಾಗಿದ್ದಾನೆ ಎನ್ನಲಾಗಿದೆ.

VISTARANEWS.COM


on

Viral News
Koo

ಮಹಾರಾಷ್ಟ್ರ : ಮದುವೆ, ದೇವಸ್ಥಾನದ ಪ್ರತಿಷ್ಠಾಪನೆ ಸಮಾರಂಭದ ವೇಳೆ ಬೃಹತ್ ಮೆರವಣಿಗೆಯನ್ನು ಮಾಡಲಾಗುತ್ತದೆ. ಆದರೆ ಇತ್ತೀಚೆಗೆ ಜೈಲಿನಿಂದ ಬಿಡುಗಡೆಯಾದ ಮಹಾರಾಷ್ಟ್ರದ ಕುಖ್ಯಾತ ರೌಡಿನೊಬ್ಬನನ್ನು ಸ್ವಾಗತಿಸಲು ಆತನ ಬೆಂಬಲಿಗರು ಬೃಹತ್‌ ರ‍್ಯಾಲಿಯನ್ನು  ಆಯೋಜಿಸಿದ್ದರು. ಇದರ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್(Viral News) ಆಗಿದೆ. ಆದರೆ ಈ ರ‍್ಯಾಲಿ ನಡೆಸಿ ಮತ್ತೆ ಆತ ಜೈಲು ಪಾಲಾಗಿದ್ದಾನೆ ಎನ್ನಲಾಗಿದೆ.

ಮಹಾರಾಷ್ಟ್ರ ಅಪಾಯಕಾರಿ ಚಟುವಟಿಕೆಗಳ ತಡೆ (ಎಂಪಿಡಿಎ) ಕಾಯ್ದೆಯಡಿ ಶಿಕ್ಷೆ ಅನುಭವಿಸುತ್ತಿದ್ದ ನಾಸಿಕ್‌ನ ಕುಖ್ಯಾತ ರೌಡಿ ಹರ್ಷದ್ ಪಟಾಂಕರ್ ಜುಲೈ 23 ರಂದು ಜೈಲಿನಿಂದ ಬಿಡುಗಡೆಯಾಗಿದ್ದ. ಹಾಗಾಗಿ ಆ ದಿನ ಮಧ್ಯಾಹ್ನ 3:30 ಕ್ಕೆ ಸುಮಾರು 15 ದ್ವಿಚಕ್ರ ವಾಹನಗಳೊಂದಿಗೆ ಬೃಹತ್ ಮೆರವಣಿಗೆ ನಡೆಸಲಾಗಿದೆ. ಈ ಮೆರವಣಿಗೆ ಬೆತೆಲ್ ನಗರದಿಂದ ಪ್ರಾರಂಭವಾಗಿ ಅಂಬೇಡ್ಕರ್ ಚೌಕ್, ಸಾಧು ವಾಸ್ವಾನಿ ರಸ್ತೆ ಮತ್ತು ಶರಣಪುರ ರಸ್ತೆ ಮೂಲಕ ಸಾಗಿದೆ. ಕಾರಿನ ಸನ್ ರೂಫ್‌ನಿಂದ ಕೈ ಬೀಸುತ್ತಿದ್ದ ಪಟಾಂಕರ್ ಅವರೊಂದಿಗೆ ಅವರ ಸ್ನೇಹಿತರು ಮತ್ತು ಕುಟುಂಬ ಸದಸ್ಯರು ಸಂಭ್ರಮಾಚರಣೆಯಲ್ಲಿ ಭಾಗವಹಿಸಿ ಘೋಷಣೆಗಳನ್ನು ಕೂಗುತ್ತಿದ್ದರು.

ವರದಿ ಪ್ರಕಾರ, ಪಟಾಂಕರ್ ಮಾತ್ರವಲ್ಲದೆ ಅವರ ಏಳು ಸಹಚರರ ವಿರುದ್ಧವೂ ಸರ್ಕಾರ್ವಾಡಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪಟಾಂಕರ್ ಅವರನ್ನು ಈ ಹಿಂದೆ ಕೊಲೆ ಯತ್ನ, ಕಳ್ಳತನ ಮತ್ತು ಹಿಂಸಾಚಾರ ಸೇರಿದಂತೆ ಹಲವಾರು ಅಪರಾಧಗಳಿಗಾಗಿ ಬಂಧಿಸಲಾಗಿತ್ತು ಮತ್ತು ಜೈಲಿಗೆ ಹಾಕಲಾಗಿತ್ತು.

ಇದನ್ನೂ ಓದಿ: 34 ಲಕ್ಷ ರೂ.ಗೆ ಮಾರಾಟವಾಯಿತು ʼರಾಮ ಜನ್ಮಭೂಮಿʼ ಸ್ಪೆಷಲ್‌ ವಾಚ್!

ಒಂದು ವರ್ಷದ ಹಿಂದೆ ಎಂಪಿಡಿಎ ಕಾಯ್ದೆಯಡಿ ಅವರನ್ನು ಬಂಧಿಸಲಾಗಿತ್ತು. ಆದಾಗ್ಯೂ, ಸಂಭ್ರಮಾಚರಣೆಯ ರ‍್ಯಾಲಿಯಿಂದಾಗಿ ಪೊಲೀಸ್ ಕ್ರಮಕೈಗೊಂಡು ಈಗ ಅವರನ್ನು ಮತ್ತೆ ಜೈಲಿಗೆ ತಳ್ಳಿದೆ ಎನ್ನಲಾಗಿದೆ. ಅವರ ಆರು ಸಹಚರರನ್ನು ಗೋಪಾಲ್ ನಾಗೋರ್ಕರ್, ವೇದಾಂತ್ ಚಾಲ್ಡೆ, ಶಾನ್ ಮೈಕೆಲ್, ಜಾಯ್ ಮೈಕೆಲ್, ರಾಬಿನ್ಸನ್ ಬ್ಯಾಟಿಸ್, ವೈಭವ್ ಖಂಡ್ರೆ ಮತ್ತು ವಿಕಾಸ್ ನೇಪಾಳಿ ಎಂದು ಗುರುತಿಸಲಾಗಿದೆ.

Continue Reading
Advertisement
sunil bose savitha viral news
ವೈರಲ್ ನ್ಯೂಸ್39 seconds ago

Viral News: ಮದುವೆಯೇ ಆಗಿಲ್ಲ ಎಂದ ಚಾಮರಾಜನಗರ ಸಂಸದ ನಿರ್ದೇಶಕಿ ಹಣೆಗೆ ಕುಂಕುಮ ಇಟ್ಟರು!

Geyser Blast
ತಂತ್ರಜ್ಞಾನ4 mins ago

Geyser Blast: ಬಾಂಬ್‌‌ನಂತೆ ಬ್ಲಾಸ್ಟ್ ಆಗಬಹುದು ಗೀಸರ್! ಮಳೆಗಾಲದಲ್ಲಿ ಈ ಮುನ್ನೆಚ್ಚರಿಕೆ ಇರಲಿ

Mysuru News
ಕ್ರೈಂ24 mins ago

Mysuru News : ಡೆತ್‌ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದ ಆಟೋ ಡ್ರೈವರ್ ಶವವಾಗಿ ಪತ್ತೆ

Actor Darshan case Police Serve Notice To Siddarudha Who Claimed To Met Darshan
ಸ್ಯಾಂಡಲ್ ವುಡ್28 mins ago

Actor Darshan: ದರ್ಶನ್​ ಭೇಟಿ ಮಾಡಿ, ಯೋಗ, ಧ್ಯಾನ ಹೇಳಿಕೊಟ್ಟೆ ಎಂದ ಸಿದ್ಧಾರೂಢನಿಗೆ ಸಂಕಷ್ಟ! ನೋಟಿಸ್‌ ಕೊಟ್ಟ ಪೊಲೀಸರು!

hd kumaraswamy nanjanagudu
ಪ್ರಮುಖ ಸುದ್ದಿ31 mins ago

HD Kumaraswamy: ಎಚ್‌ಡಿ ಕುಮಾರಸ್ವಾಮಿ ಬಂದರೂ ತೆಗೆಯದ ಪ್ರವಾಸಿ ಮಂದಿರ ಬೀಗ, ಕೇಂದ್ರ ಸಚಿವರಿಗೆ ಅವಮಾನ

RRB Recruitment 2024
ಉದ್ಯೋಗ33 mins ago

RRB Recruitment 2024: ರೈಲ್ವೇ ಇಲಾಖೆಯಲ್ಲಿದೆ ಬರೋಬ್ಬರಿ 7,951 ಹುದ್ದೆ; ಆನ್‌ಲೈನ್‌ ಮೂಲಕ ಅಪ್ಲೈ ಮಾಡಿ

Paris 2024 Olympics
ಕ್ರೀಡೆ34 mins ago

Paris 2024 Olympics: ಭಾರತೀಯ ಕ್ರೀಡಾಪಟುಗಳಿಗೆ ವಸ್ತ್ರ ವಿನ್ಯಾಸ ಮಾಡಿದ್ದ ತರುಣ್‌ ವಿರುದ್ಧ ಟೀಕೆಗಳ ಸುರಿಮಳೆ

road Accident
ರಾಯಚೂರು49 mins ago

Road Accident : ಕುಡಿದು ಕಾರು ಓಡಿಸಿ ಪ್ರಾಣ ಕಳೆದುಕೊಂಡ ಇಬ್ಬರು ಯುವಕರು ; ಕಾರ್ಕಳದಲ್ಲಿ ಸಿಲಿಂಡರ್ ಸ್ಫೋಟ

Delhi Floods
ದೇಶ56 mins ago

Delhi Floods: ದೆಹಲಿಯಲ್ಲಿ ಕೋಚಿಂಗ್‌ ಸೆಂಟರ್‌ಗೆ ನುಗ್ಗಿದ ನೀರು; ಮೃತರ ಸಂಖ್ಯೆ 3ಕ್ಕೆ ಏರಿಕೆ: ವಿದ್ಯಾರ್ಥಿಗಳಿಂದ ಪ್ರತಿಭಟನೆ

dog meat abdul razak
ಕ್ರೈಂ1 hour ago

Dog Meat: ಅಬ್ದುಲ್‌ ರಜಾಕ್‌ ತರಿಸುವ ಮಾಂಸದ ಮೇಲೆ ಹೆಚ್ಚುತ್ತಿದೆ ಅನುಮಾನ! ಹಲವು ಹೋಟೆಲ್‌ ಮಾಲಿಕರಿಗೆ ನೋಟೀಸ್‌

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ17 hours ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ22 hours ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ23 hours ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ2 days ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ2 days ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ2 days ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ2 days ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ3 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್3 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ3 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

ಟ್ರೆಂಡಿಂಗ್‌