vastu for Windows Best Directions, Shapes and Remedies in kannada Vastu Tips : ಮನೆಯ ಈ ದಿಕ್ಕಿಗೆ ಕಿಟಕಿ ಇದ್ದರೆ ಆರ್ಥಿಕ ಲಾಭ, ಸಮೃದ್ಧಿ! - Vistara News

ಧಾರ್ಮಿಕ

Vastu Tips : ಮನೆಯ ಈ ದಿಕ್ಕಿಗೆ ಕಿಟಕಿ ಇದ್ದರೆ ಆರ್ಥಿಕ ಲಾಭ, ಸಮೃದ್ಧಿ!

ನಾವು ವಾಸಿಸುವ ಮನೆಯು ವಾಸ್ತು ಪ್ರಕಾರ ಇರುವುದು ಅತ್ಯಂತ ಮುಖ್ಯ. ಮನೆಯಲ್ಲಿ ಕಿಟಕಿ ಯಾವ ದಿಕ್ಕಿನಲ್ಲಿರಬೇಕು? ಕಿಟಕಿಗಳು ಹೇಗಿರಬೇಕೆಂದು ವಾಸ್ತು (Vastu Tips) ಶಾಸ್ತ್ರದಲ್ಲಿ ಹೇಳಲಾಗಿದೆ ಎಂಬುದನ್ನು ತಿಳಿಯೋಣ.

VISTARANEWS.COM


on

vastu for Windows Best Directions, Shapes and Remedies in kannada
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ವಾಸ್ತು ಶಾಸ್ತ್ರದಲ್ಲಿ ಮನೆಯ ಪ್ರತಿ ಮೂಲೆಗೂ ಪ್ರಾಶಸ್ತ್ಯವನ್ನು ನೀಡಲಾಗುತ್ತದೆ. ಮನೆ ನಿರ್ಮಾಣದ ಸಮಯದಲ್ಲೂ ವಾಸ್ತು ತಜ್ಞರು ಮನೆಯ ಅಡಿಪಾಯದಿಂದ ಆರಂಭಿಸಿ, ಮನೆಯ ಗೋಡೆ, ಬಾಗಿಲು ಮತ್ತು ಕಿಟಕಿಗೆ ಸಂಬಂಧಿಸಿದ ವಾಸ್ತು ನಿಯಮಗಳನ್ನು (Vastu Tips) ತಿಳಿಸುತ್ತಾರೆ.

ಮನೆಯನ್ನು ಸರಿಯಾದ ದಿಕ್ಕಿನಲ್ಲಿ ನಿರ್ಮಿಸಿದಂತೆಯೇ, ಮನೆಯ ಉತ್ತಮ ಗಾಳಿ ಮತ್ತು ಬೆಳಕಿಗೆ ಅವಶ್ಯಕವಾಗಿರುವ ಬಾಗಿಲು ಮತ್ತು ಕಿಟಕಿಗಳನ್ನು ಸರಿಯಾದ ದಿಕ್ಕಿನಲ್ಲಿ ವಾಸ್ತು ಪ್ರಕಾರ ನಿರ್ಮಿಸುವುದು ಸಹ ಅಷ್ಟೇ ಮುಖ್ಯವಾಗುತ್ತದೆ. ಮನೆಯ ಬಾಗಿಲು ಮತ್ತು ಕಿಟಕಿಗಳು ಸರಿಯಾದ ದಿಕ್ಕಿನಲ್ಲಿ ಇಲ್ಲದೇ ಇದ್ದರೆ ಅದು ವಾಸ್ತು ದೋಷಕ್ಕೆ ಕಾರಣವಾಗುತ್ತದೆ.

ಮನೆಯ ಕಿಟಕಿ ವಾಸ್ತು ಪ್ರಕಾರ ಇದ್ದದ್ದೇ ಆದರೆ ಇದರಿಂದ ಮನೆಗೆ ಸುಖ, ಸಮೃದ್ಧಿ ಮತ್ತು ಸೌಭಾಗ್ಯವು ಅವುಗಳ ಮೂಲಕ ಪ್ರವೇಶಿಸುತ್ತದೆ. ಸಕಾರಾತ್ಮಕ ಶಕ್ತಿಯ ಹರಿವು ಕಿಟಕಿಗಳ ಮೂಲಕವೇ ಆಗುತ್ತದೆ. ಕುಟುಂಬದ ಸದಸ್ಯರಲ್ಲಿ ಉತ್ತಮ ಬಾಂಧವ್ಯ ಏರ್ಪಡುವಂತೆ ಮಾಡುತ್ತವೆ. ಹಾಗಾಗಿ ಮನೆಯ ಕಿಟಕಿಗೆ ಸಂಬಂಧಿಸಿದಂತೆ ಇರುವ ವಾಸ್ತು ನಿಯಮಗಳನ್ನು ತಿಳಿಯೋಣ.

ಕಿಟಕಿ ಕೂರಿಸಲು ಈ ದಿಕ್ಕುಗಳು ಉತ್ತಮ

ಸರಿಯಾದ ರೀತಿಯಲ್ಲಿ ಮನೆಯನ್ನು ನಿರ್ಮಿಸುವಾಗ ಕಿಟಕಿಗಳನ್ನು ಸಹ ಸರಿಯಾದ ದಿಕ್ಕಿನಲ್ಲಿ ಇಡುವುದು ಉತ್ತಮ. ಕಿಟಕಿಗಳನ್ನು ಪೂರ್ವ, ಪಶ್ಚಿಮ ಮತ್ತು ಉತ್ತರ ದಿಕ್ಕಿನಲ್ಲಿ ನಿರ್ಮಿಸಬಹುದಾಗಿದೆ. ಈ ದಿಕ್ಕುಗಳು ಕಿಟಕಿ ಇಡಲು ಅತ್ಯಂತ ಶುಭವೆಂದು ವಾಸ್ತು ಶಾಸ್ತ್ರದಲ್ಲಿ ಉಲ್ಲೇಖಿಸಲಾಗಿದೆ. ಅದರಲ್ಲೂ ಮನೆಯ ಪೂರ್ವ ದಿಕ್ಕಿಗೆ ಹೆಚ್ಚಿನ ಕಿಟಕಿಗಳಿದ್ದರೆ ಉತ್ತಮ. ಸೂರ್ಯೋದಯದ ಮೊದಲ ಕಿರಣಗಳು ಮನೆಯೊಳಗೆ ಪ್ರವೇಶಿಸುವಂತೆ ಕಿಟಕಿ ಅಥವಾ ಬಾಗಿಲು ಇದ್ದರೆ ಅತ್ಯಂತ ಉತ್ತಮ. ಪೂರ್ವ ದಿಕ್ಕಿಗೆ ನಿರ್ಮಿಸಿದ ಕಿಟಕಿಯಿಂದ ಬರುವ ಗಾಳಿಯ ಮೂಲಕ ಮನೆಗೆ ಸುಖ ಮತ್ತು ಸೌಭಾಗ್ಯ ಬರುತ್ತದೆ.

ಉತ್ತರ ದಿಕ್ಕಿನಲ್ಲಿ ಕಿಟಕಿ ಇರುವುದರಿಂದ ಮನೆಯಲ್ಲಿ ಸಮೃದ್ಧಿ ನೆಲೆಸುತ್ತದೆ. ಉತ್ತರ ದಿಕ್ಕಿನಲ್ಲಿರುವ ಕಿಟಕಿಗಳು ಲಾಭವನ್ನು ತಂದುಕೊಡುತ್ತವೆ ಎಂದು ಹೇಳಲಾಗುತ್ತದೆ. ಹಾಗಾಗಿ ಉತ್ತರ ದಿಕ್ಕಿಗೆ ಹೆಚ್ಚು ಕಿಟಕಿಗಳಿದ್ದರೆ ಉತ್ತಮ. ಹಾಗೂ ಈ ಕಿಟಕಿಗಳು ಸದಾ ತೆರೆದುಕೊಂಡಿದ್ದರೆ ಶುಭ.

ಸರಿಯಾದ ಆಕಾರ ಮತ್ತು ಸಂಖ್ಯೆ

ಮನೆಯಲ್ಲಿ ಕಿಟಕಿಗಳು ಸರಿಯಾದ ದಿಕ್ಕಿನಲ್ಲಿ ಇರುವುದಲ್ಲದೇ ಅವುಗಳ ಆಕಾರವು ಸರಿಯಾಗಿಯೇ ಇರಬೇಕು. ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ಕಿಟಕಿಗಳು ಸಮ ಸಂಖ್ಯೆಯಲ್ಲಿರಬೇಕು. ಅಂದರೆ 2, 4, 6, 8 ಹೀಗೆ ಸಮ ಸಂಖ್ಯೆಯಲ್ಲಿದ್ದರೆ ಉತ್ತಮ. ವಿಷಮ ಸಂಖ್ಯೆಯ ಕಿಟಕಿಗಳು ಮನೆಗೆ ಉತ್ತಮವಲ್ಲ.

ಮನೆಯ ಬಾಗಿಲುಗಳ ಪಕ್ಕದಲ್ಲಿ ಎರಡೂ ಪಕ್ಕಗಳಲ್ಲಿ ಕಿಟಿಕಿಯನ್ನು ನಿರ್ಮಿಸುವುದರಿಂದ ಶುಭ ಫಲಗಳು ಪ್ರಾಪ್ತವಾಗುತ್ತವೆ. ಈ ಕಿಟಕಿಗಳಿಂದ ಸಕಾರಾತ್ಮಕ ಶಕ್ತಿ ಹೆಚ್ಚು ಪ್ರವಹಿಸುತ್ತವೆ.

vastu for Windows Best Directions, Shapes and Remedies in kannada

ಈ ದಿಕ್ಕಿಗೆ ಕಿಟಕಿ ಇರಿಸಬೇಡಿ!

ಮನೆಯ ದಕ್ಷಿಣ ದಿಕ್ಕಿಗೆ ಕಿಟಕಿಯನ್ನು ನಿರ್ಮಿಸಬಾರದು. ದಕ್ಷಿಣ ದಿಕ್ಕನ್ನು ಯಮನ ದಿಕ್ಕು ಎಂದು ಹೇಳಲಾಗುತ್ತದೆ. ಹಾಗಾಗಿ ಈ ದಿಕ್ಕಿಗಿರುವ ಕಿಟಕಿಗಳು ರೋಗ ಮತ್ತು ಶೋಕವನ್ನು ತರುತ್ತವೆ ಎಂಬ ನಂಬಿಕೆ ಇದೆ. ಈ ದಿಕ್ಕಿನಲ್ಲಿ ಕಿಟಕಿ ಇದ್ದದ್ದೇ ಆದರೆ ಅದನ್ನು ಯಾವಾಗಲೂ ಮುಚ್ಚಿಡುವುದು ಉತ್ತಮ. ಇಲ್ಲವೇ ದಪ್ಪವಾದ ಪರದೆಯನ್ನು ಹಾಕಿಡುವುದು ಉತ್ತಮ.

ನೈಋತ್ಯ ಮೂಲೆಯಲ್ಲಿ ಕಿಟಕಿ ಇರುವುದು ಸಹ ಉತ್ತಮವಲ್ಲ. ನೈಋತ್ಯ ಮೂಲೆಯ ಅಧಿಪತಿ ರಾಹು ಮತ್ತು ಕೇತು ಆಗಿರುವುದರಿಂದ ಈ ದಿಕ್ಕಿನಲ್ಲಿ ಕಿಟಕಿ ನಿರ್ಮಿಸುವುದು ಒಳ್ಳೆಯದಲ್ಲ ಎಂದು ಹೇಳಲಾಗುತ್ತದೆ.

ಕಿಟಕಿ ಹೀಗಿದ್ದರೆ ಒಳ್ಳೆಯದು

ಮನೆಯ ಕಿಟಕಿಗಳನ್ನು ಬಳ್ಳಿ ಅಥವಾ ಚಿಕ್ಕ ಗಿಡಗಳಿಂದ ಸಿಂಗರಿಸಿಡಬಹುದಾಗಿದೆ. ಇಲ್ಲವೇ ಕಿಟಕಿಗಳ ಮೇಲೆ ರಂಗೋಲಿ ಅಥವಾ ಇನ್ನಿತರ ಚಿತ್ತಾರಗಳನ್ನು ಬಿಡಿಸುವುದು ಉತ್ತಮ. ಕಿಟಕಿಗಳಿಗೆ ಉತ್ತಮವಾದ ಮತ್ತು ಕಣ್ಣಿಗೆ ಶಾಂತತೆಯನ್ನು ನೀಡುವ ಪರದೆಗಳನ್ನು ಬಳಸುವುದು ಉತ್ತಮ.

ಧಾರ್ಮಿಕ ಮತ್ತು ಆಧ್ಯಾತ್ಮಿಕ ಲೇಖನ, ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ.

ಎರಡು ಬಾಗಿಲಿನ ಕಿಟಕಿ ಇದ್ದರೆ ಒಳ್ಳೆಯದು. ಅದರಲ್ಲೂ ಕಿಟಕಿ ಬಾಗಿಲುಗಳು ಒಳಮುಖವಾಗಿ ತೆರೆದುಕೊಂಡರೆ ಉತ್ತಮವೆಂದು ಹೇಳಲಾಗುತ್ತದೆ. ಕಿಟಕಿಯನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಕಿಟಕಿ ಹಾಳಾಗಿದ್ದರೆ ಅಥವಾ ಒಡೆದಿದ್ದರೆ ಅದನ್ನು ತಕ್ಷಣವೇ ಸರಿ ಪಡಿಸಿಕೊಳ್ಳಬೇಕು ಎಂದು ವಾಸ್ತು ಶಾಸ್ತ್ರದಲ್ಲಿ ಹೇಳಲಾಗಿದೆ.

ಇದನ್ನೂ ಓದಿ : Vastu Tips: ಈ ಅಭ್ಯಾಸಗಳು ದಾರಿದ್ರ್ಯಕ್ಕೆ ದಾರಿ, ಇವುಗಳಿಂದ ದೂರವಿರಿ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಕೊಡಗು

Deepawalli 2024 : ಮಡಿಕೇರಿಯಲ್ಲಿ ಅದ್ಧೂರಿಯಾಗಿ ನಡೆದ ದೀಪಾವಳಿ ಉತ್ಸವ

Deepawalli 2024 : ಮಡಿಕೇರಿಯಲ್ಲಿ ದೀಪಾವಳಿ ಉತ್ಸವ ಅದ್ಧೂರಿಯಾಗಿ ನಡೆಯಿತು. ಕಾರ್ಯಕ್ರಮದಲ್ಲಿ ವಿಸ್ತಾರ ನ್ಯೂಸ್‌ನ ವರದಿಗಾರ ಹಾಗೂ ಕ್ಯಾಮೆರಾಮನ್‌ಗೆ ಸನ್ಮಾನಿಸಲಾಯಿತು.

VISTARANEWS.COM


on

Deepavali festival held in Madikeri

ಕೊಡಗು: ದೀಪಾವಳಿ ಹಬ್ಬದ (Deepawalli 2024) ಪ್ರಯುಕ್ತ ಮಡಿಕೇರಿಯ ಕಾಲನಗರ ಸಾಂಸ್ಕೃತಿಕ ವೇದಿಕೆ ವತಿಯಿಂದ ಆಯೋಜಿಸಿದ್ದ 11ನೇ ವರ್ಷದ ದೀಪಾವಳಿ ಉತ್ಸವವು ಬಹಳ ಸಂಭ್ರಮ ಸಡಗರದಿಂದ ನಡೆಯಿತು. ಕಾರ್ಯಕ್ರಮವನ್ನು ಸಮಾಜ ಸೇವಕ ಹಾಗೂ ಮುಳುಗು ತಜ್ಞ ಈಶ್ವರ್ ಮಲ್ಪೆ ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಈಶ್ವರ್ ಮಲ್ಪೆ, ಮಡಿಕೇರಿಯ ಕಲಾ ನಗರಕ್ಕೆ ಕರೆಸಿರೋದು ಬಹಳ‌ ಸಂತೋಷವಾಗಿದೆ‌. ನಾನೂ ರಾಜ್ಯದ ಬೇರೆ ಬೇರೆ ಭಾಗಗಳಿಗೆ ತೆರಳಿ ನೀರಿನಲ್ಲಿ ಮುಳುಗಿದ್ದ ಶವ ಹೊರ ತೆಗೆದಿದ್ದೇನೆ. ಕಳೆದ ವರ್ಷ ಕೂಡ ಇಲ್ಲಿಗೆ ಬಂದು ಒಂದು ಶವವನ್ನು ಹೊರ ತೆಗೆದಿದ್ದೇನೆ‌. ಈ ಒಂದು ಸಣ್ಣ ಸಮಾಜಮುಖಿ ಕಾರ್ಯವನ್ನು ಗುರುತಿಸಿ ನನ್ನ ಈ ಕಾರ್ಯಕ್ರಮಕ್ಕೆ ಕರೆಸಿರೋದು ಬಹಳ ಸಂತಸ ತಂದಿದೆ. ಕಲಾನಗರದಲ್ಲಿ ಕಲಾ ರಸಿಕರೆ ಇದ್ದು ತಮ್ಮಲ್ಲಿರುವ ಕಲೆಯನ್ನು ಪ್ರದರ್ಶನ ಮಾಡುವ ಮೂಲಕ ಮತ್ತಷ್ಟು ಸಾಧನೆ ಮಾಡಲೆಂದು ಹಾರೈಸಿದರು.

Deepavali festival held in Madikeri

ಇನ್ನೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಮಾಜ ಸೇವಕರನ್ನು ಗುರುತಿಸಿ ಸನ್ಮಾನಿಸಿ ಗೌರವಿಸಲಾಯಿತು. ಸಮಾಜ ಸೇವಕ ಮುಳುಗು ತಜ್ಞ ಈಶ್ವರ್ ಮಲ್ಪೆ ಹಾಗೂ ವಯನಾಡು ದುರಂತದ ಕುರಿತು ಪ್ರತ್ಯಕ್ಷ ವರದಿಗಾರಿಕೆ‌ ಮಾಡಿದ್ದ ಕೊಡಗಿನ ಪತ್ರಕರ್ತರಾದ ವಿಸ್ತಾರ ನ್ಯೂಸ್‌ನ ಜಿಲ್ಲಾ ವರದಿಗಾರ ಲೋಹಿತ್ ಎಂ.ಆರ್, ಕ್ಯಾಮೆರಾಮನ್ ಮನೋಜ್, ನ್ಯೂಸ್ ಫಸ್ಟ್ ಜಿಲ್ಲಾ ವರದಿಗಾರ ಪ್ರಜ್ವಲ್ ಎನ್‌.ಸಿ, ನಗರದ ಸ್ವಚ್ಚತಾ ಕಾರ್ಯದಲ್ಲಿ ಶ್ರಮಿಸುತ್ತಿರುವ ನಗರಸಭೆಯ ರಂಗಪ್ಪ , ಆರೋಗ್ಯ ಇಲಾಖೆಯ ಪ್ರತಿಮಾ ರೈ, ಅಣ್ಣಯ್ಯ, ಸೇರಿದಂತೆ ಹಲವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಬಳಿಕ ವಿವಿಧ ಆಟೋಟ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು‌‌. ಮಕ್ಕಳ ಮಂಟಪ, ಸಾಂಸ್ಕೃತಿಕ ಕಾರ್ಯಕ್ರಮಗಳು ಎಲ್ಲರನ್ನು ರಂಜಿಸಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾದ ಡಿವೈಎಸ್ಪಿ ಮಹೇಶ್ ಕುಮಾರ್, ಆಕಾಶವಾಣಿಯ ಸುಬ್ರಾಯ ಸಂಪಾಜೆ ಅಧ್ಯಕ್ಷರಾದ ಮಹೇಶ್, ಆಶಾ ನಟರಾಜ್, ಸ್ಥಾಪದ ಸದಸ್ಯರು ಚಂದ್ರು, ಕೆ.ಎಸ್ ರಮೇಶ್,ಕೋಡಿ ಭರತ್, ತಿಲಖ್ ಸಿಂಗ್ ಕುಮಾರ್ ಉಪಸ್ಥಿತರಿದ್ದರು.

Continue Reading

ಕರ್ನಾಟಕ

Mysore Dasara : ವಿಜಯ ದಶಮಿ ಜಂಬೂ ಸವಾರಿಗೆ ಕ್ಷಣಗಣನೆ; ಅರಮನೆ ಆವರಣದಲ್ಲಿ ವಜ್ರಮುಷ್ಠಿ ಕಾಳಗ

Mysore Dasara : ವಿಜಯ ದಶಮಿ ಜಂಬೂ ಸವಾರಿಗೆ ಕ್ಷಣಗಣನೆ ಶುರವಾಗಿದ್ದು, ಚಾಮುಂಡಿ ಬೆಟ್ಟದಿಂದ ಚಾಮುಂಡೇಶ್ವರಿ ಉತ್ಸವ ಮೂರ್ತಿಯನ್ನು ಅರಮನೆಗೆ ತರಲಾಗುತ್ತಿದೆ. ಜತೆಗೆ ಮೈಸೂರು ಆವರಣದಲ್ಲಿ ವಜ್ರಮುಷ್ಠಿ ಕಾಳಗ ನಡೆಯುತ್ತಿದೆ.

VISTARANEWS.COM


on

mysore dasara

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ (Mysore Dasara ) ಜಂಬೂ ಸವಾರಿಗೆ ಕ್ಷಣಗಣನೆ ಪ್ರಾರಂಭವಾಗಿದೆ. ಶನಿವಾರ ಮುಂಜಾನೆಯಿಂದಲೇ ಬಿರುಸಿನ ರೀತಿಯಲ್ಲಿ ಪೂಜಾ ಕೈಂಕರ್ಯಗಳನ್ನು ನೆರವೇರಿಸಿಕೊಂಡು ಬರಲಾಗುತ್ತಿದೆ. ಚಾಮುಂಡಿ ಬೆಟ್ಟದಲ್ಲಿ ನೆಲೆಸಿರುವ ತಾಯಿ ಚಾಮುಂಡೇಶ್ವರಿಯನ್ನು 750 ಕೆ.ಜಿ. ತೂಕದ ಚಿನ್ನದ ಅಂಬಾರಿಯಲ್ಲಿ ಕೂರಿಸಿ ಮೆರವಣಿಗೆ ಮಾಡುವ ಸಮಯ ಸನ್ನಿಹಿತವಾಗುತ್ತಿದೆ. ಇದಕ್ಕಿಂತ ಮೊದಲು ಚಾಮುಂಡಿ ಸನ್ನಿಧಿಯಲ್ಲಿ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸಿ ಬೆಳ್ಳಿ ರಥದ ಮೂಲಕ ಅರಮನೆಗೆ ಮೆರವಣಿಗೆ ಮೂಲಕ ಕಳಿಸಿಕೊಡಲಾಯಿತು.

ವಿಜಯ ದಶಮಿಯ ಜಂಬೂ ಸವಾರಿಗೆ ಅಂಬಾವಿಲಾಸ ಅರಮನೆ ಸಜ್ಜಾಗಿದೆ. ಅರಮನೆ ಅಂಗಳದಲ್ಲಿ 35 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆ 8 ಗಂಟೆಗೆ ಚಾಮುಂಡಿಬೆಟ್ಟದಿಂದ ಉತ್ಸವ ಮೂರ್ತಿ ಮೆರವಣಿಗೆ ಶುರುವಾಗಿದ್ದು, ಅಂಬಾವಿಲಾಸ ಅರಮನೆ ತಲುಪಲಿದೆ. ನೇರಳೆ ಬಣ್ಣದ ಸೀರೆಯಿಂದ ತಾಯಿ ಚಾಮುಂಡೇಶ್ವರಿ ಉತ್ಸವ ಮೂರ್ತಿಯನ್ನು ಅಲಂಕಾರ ಮಾಡಲಾಗಿತ್ತು. ಅಲ್ಲದೆ, ಅಶ್ವಾರೋಹಣ ಅಲಂಕಾರದಿಂದ ಕಂಗೊಳಿಸುತ್ತಿರುವ ಚಾಮುಂಡಿ ದೇವಿಯ ಉತ್ಸವ ಮೂರ್ತಿಯನ್ನು ಬೆಳ್ಳಿ ರಥದಲ್ಲಿ ಕುಳ್ಳಿರಿಸಿ ಅಲ್ಲಿಂದ ಅರಮನೆಗೆ ಮೆರವಣಿಗೆ ಮೂಲಕ ಕೊಂಡೊಯ್ಯಲಾಯಿತು.

Mysore dasara 2024

ಅರಮನೆ ಬಲರಾಮ ದ್ವಾರದ ಕೋಟೆ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ಶನಿವಾರ ಮಧ್ಯಾಹ್ನ 1:41 ರಿಂದ 2:10ರ ಶುಭ ಮಕರ ಲಗ್ನದಲ್ಲಿ ನಂದಿಧ್ವಜ ಪೂಜೆ ನೆರವೇರಲಿದೆ. ನಂದಿ ಧ್ವಜ ಪೂಜೆಯನ್ನು ಉದ್ಘಾಟಕ ಹಂಪನಾ, ಮುಖ್ಯಮಂತ್ರಿ ಸಿದ್ದರಾಮಯ್ಯ ನೆರವೇರಿಸಲಿದ್ದಾರೆ. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್ ಸಿ ಮಹದೇವಪ್ಪ ಸೇರಿದಂತೆ ಇತರೆ ಜನಪ್ರತಿನಿಧಿಗಳು ಭಾಗಿಯಾಗಲಿದ್ದಾರೆ.

ನಂದಿಧ್ವಜ ಪೂಜೆ ಬಳಿಕ ವಿಜಯದಶಮಿ ಮೆರವಣಿಗೆ ಆರಂಭವಾಗಲಿದ್ದು, ಅರಮನೆ ಒಳಂಗಣದಿಂದ ಪ್ರಾರಂಭಗೊಂಡು ಬನ್ನಿ ಮಂಟಪದ ವರಗೆ ಮೆರವಣಿಗೆ ನಡೆಯಲಿದೆ. ಜಂಬೂಸವಾರಿಯಲ್ಲಿ ವಿವಿಧ ಜಿಲ್ಲೆ ಹಾಗೂ ವಿವಿಧ ಇಲಾಖೆಗಳಿಂದ 49 ಸ್ಥಬ್ದ ಚಿತ್ರಗಳು ಸಂಚಾರ ಇರಲಿದೆ. ಸಂಜೆ 4ಗಂಟೆಯಿಂದ 4:30 ರವರೆಗೆ ಸಲ್ಲುವ ಶುಭ ಕುಂಭ ಲಗ್ನದಲ್ಲಿ ಜಂಬೂ ಸವಾರಿಗೆ ಪುಷ್ಪಾರ್ಚನೆ ನಡೆಯಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್ ಸಿ ಮಹದೇವಪ್ಪ, ಸಂಸದ ಹಾಗೂ ರಾಜ ವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ಜಿಲ್ಲಾಧಿಕಾರಿ ಜಿ ಲಕ್ಷ್ಮಿಕಾಂತ ರೆಡ್ಡಿ, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ರವರಿಂದ ಪುಷ್ಪರ್ಚನೆ ಮಾಡಲಿದ್ದಾರೆ. ಸಂಜೆ 7 ಗಂಟೆಗೆ ಬನ್ನಿಮಂಟಪ ಮೈದಾನದಲ್ಲಿ ಪಂಜಿನ ಕವಾಯತು, ರಾಜ್ಯಪಾಲ ಥಾವರ ಚಂದ್ ಗೆಹಲೊಟ್ ರಿಂದ ಕವಯತು ವೀಕ್ಷಣೆಯೊಂದಿಗೆ ಗೌರವ ವಂದನೆ ಸ್ವೀಕಾರ ಆಗಲಿದೆ.

Continue Reading

ಬೆಂಗಳೂರು

Ayudha Puja: ನಾಡಿನೆಲ್ಲೆಡೆ ಆಯುಧ ಪೂಜೆ ಸಂಭ್ರಮ; ಭಕ್ತಾಧಿಗಳಿಂದ ದೇವಸ್ಥಾನಗಳು ಹೌಸ್‌ಫುಲ್‌

Ayudha Puja: ನಾಡಿನೆಲ್ಲೆಡೆ ಆಯುಧ ಪೂಜೆ ಸಂಭ್ರಮ ಮನೆ ಮಾಡಿದ್ದು, ಭಕ್ತಾಧಿಗಳಿಂದ ದೇವಸ್ಥಾನಗಳು ಹೌಸ್‌ಫುಲ್‌ ಆಗಿವೆ. ಸವಾರರು ತಮ್ಮ ವಾಹನಗಳಿಗೆ ಪೂಜೆ ಸಲ್ಲಿಸಲು ದೇವಸ್ಥಾನಕ್ಕೆ ಲಗ್ಗೆ ಇಟ್ಟಿದ್ದರು.

VISTARANEWS.COM


on

Ayudha Puja celebrations across the karnataka state Temples housefull by devotees

ಬೆಂಗಳೂರು: ನಾಡಿನೆಲ್ಲೆಡೆ ಆಯುಧ ಪೂಜಾ (Ayudha Puja) ಸಂಭ್ರಮ ಜೋರಾಗಿದೆ. ಆಯುಧ ಪೂಜೆಯ ಸಲುವಾಗಿ ನಗರದ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನಡೆಯುತ್ತಿದೆ.

ಬನಶಂಕರಿ, ಆ್ಯಕ್ಸಿಡೆಂಡ್ ಗಣೇಶ, ಸರ್ಕಲ್ ಮಾರಮ್ಮ, ಕಾಡುಮಲ್ಲೆಶ್ವರಂ ದೇವಸ್ಥಾನಕ್ಕೆ ಭಕ್ತರು ದೌಡಾಯಿಸಿದ್ದಾರೆ. ಬೆಳಗಿನಿಂದಲೇ ಪಂಚಾಭಿಷೇಕ ನೇರಿವೇರಿದ್ದು, ವಿಶೇಷ ಅಲಂಕಾರ ಮಾಡಿ ನಂತರ ಭಕ್ತಾಧಿಗಳಿಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

Ayudha Puja celebrations across the karnataka state  Temples housefull by devotees

ಅಲ್ಲದೇ ಮನೆಗಳಲ್ಲಿ ಆಯುಧಗಳಿಗೆ ಪೂಜೆ ಮಾಡಿ ಸಲ್ಲಿಸಿದ್ದು, ವಾಹನಗಳಿಗೆ ಪೂಜೆ ಮಾಡುವ ಸಲುವಾಗಿ ಸಾಕಷ್ಟು ಸಂಖ್ಯೆಯಲ್ಲಿ ದೇವಸ್ಥಾನಕ್ಕೆ ವಾಹನ ಸವಾರರು ಆಗಮಿಸುತ್ತಿದ್ದಾರೆ. ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಸರ್ಕಲ್ ಮಾರಮ್ಮ ದೇವಸ್ಥಾನದಲ್ಲಿ ಆಯುಧ ಪೂಜೆಯ ಸಂಭ್ರಮ ಜೋರಾಗಿತ್ತು. ದೇವಿಗೆ ಮುತ್ತಿನ ಅಲಂಕಾರ ಮಾಡಲಾಗಿದ್ದು, ಬೆಳಗ್ಗೆಯಿಂದ ದೇವಿಗೆ ವಿಶೇಷ ಪೂಜೆ ಪುರಸ್ಕಾರ ನಡೆದಿದೆ.

Ayudha Puja celebrations across the karnataka state  Temples housefull by devotees

ಭಕ್ತರು ತಮ್ಮ ವಾಹನಗಳಿಗೆ ಪೂಜೆ ಮಾಡಿಸಲು ಮುಗಿಬಿದ್ದಿದ್ದರು. ಹೀಗಾಗಿ ಸರ್ಕಲ್ ಮಾರಮ್ಮ ದೇವಸ್ಥಾನದ ಸುತ್ತ ಟ್ರಾಫಿಕ್ ಜಾಮ್‌ ಉಂಟಾಗಿತ್ತು. ಟ್ರಾಫಿಕ್‌ ಕ್ಲಿಯರ್‌ ಮಾಡಲು ಪೊಲೀಸರು ಹರಸಾಹಸ ಪಡಬೇಕಾಯಿತು. ಇಂದು ಶುಕ್ರವಾರ ಬೆಳಗ್ಗೆಯಿಂದ ಸಂಜೆಯವೆಗೂ ದೇವಸ್ಥಾನದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ನಡೆಯಲಿದೆ.

ವಿಸ್ತಾರ ನ್ಯೂಸ್‌ ಕಚೇರಿಯಲ್ಲೂ ಆಯುಧ ಪೂಜೆ ಸಂಭ್ರಮ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದಸರಾ ಸಂಭ್ರಮ

Dasara 2024 : ಮೈಸೂರು ದಸರಾ ಉತ್ಸವದಲ್ಲಿ ಕಣ್ಮನ ಸೆಳೆಯುತ್ತಿದೆ ಹೊಯ್ಸಳ ದೇವಾಲಯದ ಮಾದರಿ ಪ್ರದರ್ಶನ

Dasara 2024 : ಮೈಸೂರು ದಸರಾ ಉತ್ಸವದಲ್ಲಿ ಹೊಯ್ಸಳ ದೇವಾಲಯದ ಮಾದರಿ ಪ್ರದರ್ಶನ ಗಮನ ಸೆಳೆಯುತ್ತಿದ್ದು, ಸಾರ್ವಜನಿಕ ವೀಕ್ಷಣೆಗೆ ಇರಿಸಲಾಗಿದೆ.

VISTARANEWS.COM


on

dasara 2024

ಬೆಂಗಳೂರು: ವೈಭವದ ದಸರಾ ಉತ್ಸವ (Dasara 2024 ) ಜೋರಾಗಿದ್ದು, ಭಿನ್ನ-ವಿಭಿನ್ನ ರೀತಿಯಲ್ಲಿ ಗೊಂಬೆಗಳನ್ನು ಕೂರಿಸಿ ಜನರು ಸಂಭ್ರಮಿಸುತ್ತಿದ್ದಾರೆ. ಸದ್ಯ ಮೈಸೂರು ದಸರಾ ಉತ್ಸವದಲ್ಲಿ ಹೊಯ್ಸಳ ದೇವಾಲಯದ ಮಾದರಿ ಪ್ರದರ್ಶನವು ಎಲ್ಲರ ಕಣ್ಮನ ಸೆಳೆಯುತ್ತಿದೆ.

ಕ್ರಿ. ಶ.12-14 ನೆಯ ಶತಮಾನದವರೆಗೆ ಪ್ರವರ್ಧಮಾನಕ್ಕೆ ಬಂದಿದ್ದ ಈ ಹೊಯ್ಸಳ ದೇವಾಲಯ ಶೈಲಿಯು, ಹೊಯ್ಸಳ ಸಾಮ್ರಾಜ್ಯದ ಪತನದೊಂದಿಗೆ ಲುಪ್ತವಾಗಿ ಹೋಯಿತು. ಹಾಗೂ ಸುಮಾರು 800 ವರ್ಷಗಳಿಂದೀಚೆಗೆ ಈ ಶೈಲಿಯಲ್ಲಿ ಯಾವುದೇ ದೇವಾಲಯವು ನಿರ್ಮಾಣವಾಗಿರುವುದು ಕಂಡು ಬಂದಿರುವುದಿಲ್ಲ.

ಪ್ರಸ್ತುತ ಆರ್ಕಿಟೆಕ್ಟ್ ಮೈತ್ರೇಯಿ ಎಂಬುವವರು 7 ಅಡಿ ಎತ್ತರದ ಹೊಯ್ಸಳ ದೇವಾಲಯದ ಮಾದರಿಯನ್ನು ಮರದಲ್ಲಿ ರಚಿಸುವ ವಿನಮ್ರ ಪ್ರಯತ್ನವನ್ನು ಮಾಡಿದ್ದಾರೆ. ಸದ್ಯಕ್ಕೆ 7’ಎತ್ತರ, 7’ಅಗಲ ಹಾಗೂ 7’ ಉದ್ದವಿರುವ ಗರ್ಭಗೃಹ ಮತ್ತು ಶುಕನಾಸಿಯ ಭಾಗದ ರಚನೆಯನ್ನು ಮಾಡಿದ್ದು, ನವರಂಗ ಮತ್ತು ಮಂಟಪಗಳನ್ನು ರಚಿಸಿ ಜೋಡಿಸಲಾಗುವುದು.

Hoysala temple model showcased at Mysuru Dasara festival

ಮಾದರಿಯ ಪೂರ್ಣ ಹಂತದಲ್ಲಿ ಒಟ್ಟು 9’x 11’ ವಿಸ್ತೀರ್ಣವನ್ನು ಹೊಂದಿರುತ್ತದೆ. ಈ ಮಾದರಿಯನ್ನು ಶಿಲ್ಪಾಶಾಸ್ತ್ರದ ಅಳತೆಗಳಿಗೆ ಅನುಗುಣವಾಗಿ ನಿರ್ಮಿಸಲಾಗಿರುತ್ತದೆ. ಪ್ರಸ್ತುತ ಮೈಸೂರು ದಸರಾ ಉತ್ಸವದ ಪ್ರದರ್ಶನದಲ್ಲಿ ಸಾರ್ವಜನಿಕ ವೀಕ್ಷಣೆಗೆ ಇರಿಸಲಾಗಿದೆ.

ಭಾರತೀಯ ಪರಂಪರೆಯು ಅನಾದಿ ಕಾಲದಿಂದಲೂ ಆಧ್ಯಾತ್ಮಿಕ, ತತ್ವಶಾಸ್ತ್ರ, ವೈಚಾರಿಕತೆ, ನಂಬಿಕೆ, ಶ್ರದ್ಧೆಗಳನ್ನೊಳಗೊಂಡ ಸಂಸ್ಕೃತಿಯೆಂಬ ಮೂಲಸ್ತೋತ್ರದಿಂದ ಹರಿದುಬಂದಿದೆ. ಭಾರತೀಯ ಸಂಸ್ಕೃತಿಯ ಭಾಗವಾಗಿ ಬೆಳೆದ ಶಿಲ್ಪ ಶಾಸ್ತ್ರಗಳ, ಆಗಮಗಳ ಆಧಾರದಲ್ಲಿ ಹಲವು ಪೂಜಾ ಪದ್ಧತಿಗಳು ಹಾಗೂ ದೇವಾಲಯ ವಾಸ್ತುಶಿಲ್ಪಗಳು ವಿವಿಧ ಆಯಮಗಳಲ್ಲಿ ಮೂರ್ತಗೊಂಡವು.

ಅವು ಕ್ರಿ. ಶ.ಆರನೆಯ ಶತಮಾನದ ನಂತರ ಶಿಲಾ ಮಾಧ್ಯಮದಲ್ಲಿ ಭಾರತದ ವಿವಿಧ ಪ್ರಾಂತ್ಯಗಳಲ್ಲಿ ವಿವಿಧ ಶೈಲಿಯಲ್ಲಿ ನಿರ್ಮಾಣಗೊಂಡವು. ಕರ್ನಾಟಕದಲ್ಲಿ ಚಾಲುಕ್ಯ, ರಾಷ್ಟ್ರಕೂಟ ಹಾಗೂ ಹೊಯ್ಸಳರ ಕಾಲಘಟ್ಟದಲ್ಲಿ, ಅಂದರೆ ಕ್ರಿ. ಶ. 6-14 ನೇ ಶತಮಾನದವರೆಗೆ ಸುಮಾರು 800 ವರ್ಷಗಳಲ್ಲಿ ವೇಸರ ಅಥವಾ ಕರ್ಣಾಟ ದ್ರಾವಿಡ ಎಂದು ಕರೆಯಲ್ಪಡುವ ಒಂದು ವಿಶಿಷ್ಟ ಶೈಲಿಯುಲ್ಲಿ ದೇವಾಲಯ ಶಿಲ್ಪವು ವಿಕಸಿತಗೊಂಡಿತು.

dasara 2024

ಹೊಯ್ಸಳರ ಕಾಲದಲ್ಲಿ (11 ರಿಂದ 14 ನೇ ಶತಮಾನ) ಈ ಶೈಲಿಯುಲ್ಲಿ ರಚಿತಗೊಂಡ ದೇವಾಲಯಗಳು ತಮ್ಮ ವಿನ್ಯಾಸ, ಆಕಾರ, ಅಲಂಕರಣ ಮತ್ತು ಕಲಾ ನೈಪುಣ್ಯತೆದಲ್ಲಿ ಪರಾಕಷ್ಟೆಯನ್ನು ತಲುಪಿದ್ದು ಹೊಯ್ಸಳ ದೇವಾಲಯಗಳೆಂದು ಪ್ರಸಿದ್ಧವಾಗಿದೆ. ಈ ಕಾಲಘಟ್ಟದಲ್ಲಿ ಹಲವು ಚಿಕ್ಕ ದೊಡ್ಡ ದೇವಾಲಯಗಳು ನಿರ್ಮಾಣಗೊಂಡಿದ್ದು, ಬೇಲೂರಿನ ಚೆನ್ನಕೇಶ್ವರ, ಹಳೆಬೀಡಿನ ಹೊಯ್ಸಳೇಶ್ವರ, ಸೋಮನಾಥಪುರದ ಕೇಶವ ದೇವಾಲಯಗಳು ಜಗತ್ಪ್ರಸಿದ್ಧವಾಗಿವೆ.

ಕ್ರಿ. ಶ. 14 ನೆಯ ಶತಮಾನದಲ್ಲಿ ಹೊಯ್ಸಳ ಶೈಲಿಯಿ ಲುಪ್ತವಾಗಿದ್ದು, ಅಲ್ಲಿಂದ ಈಚೆಗೆ ಅಂದರೆ ಸುಮಾರು 700 ವರ್ಷಗಳಿಂದ ಯಾವುದೇ ದೇವಾಲಯವು ವೇಸರ ಅಥವಾ ಹೊಯ್ಸಳ ಶೈಲಿಯಲ್ಲಿ ನಿರ್ಮಾಣಗೊಂಡಿರುವುದಿಲ್ಲ. ಹೀಗಾಗಿ ಪ್ರಸ್ತುತ ಆಧುನಿಕ ಆಕರ ಗ್ರಂಥ ಹಾಗೂ ಪ್ರಾಚೀನ ಶಾಸ್ತ್ರ ಗ್ರಂಥಗಳ ಕೂಲಂಕುಷ ಅಧ್ಯಯನದೊಂದಿಗೆ ಹೊಯ್ಸಳ ದೇವಾಲಯಗಳ ತುಲನಾತ್ಮಕ ವಿಶ್ಲೇಷಣೆ ಮಾಡಿ, 7 ಅಡಿ ಎತ್ತರದ ಹೊಯ್ಸಳ ದೇವಾಲಯದ ಮಾದರಿ ನಿರ್ಮಾಣದ ಪ್ರಯತ್ನವನ್ನು ಮಾಡಲಾಗಿದೆ. ಸೀಮಿತ ಸಂಪನ್ಮೂಲ ಹಾಗೂ ಸಮಯದಲ್ಲಿ ಹೊಯ್ಸಳ ವಾಸ್ತು ಶೈಲಿಯ ಪ್ರಮುಖ ಅಂಶಗಳನ್ನು ಅಳವಡಿಸಿ ಮಹಾಗನಿ ಮರ ಮತ್ತು plywood ಬಳಸಿ ರಚಿಸಲಾಗಿದೆ.

ಹೊಯ್ಸಳ ದೇವಾಲಯಗಳಲ್ಲಿ ಪ್ರಮುಖವಾಗಿ ನಾಲ್ಕು ಭಾಗಗಳಿವೆ. (1)ಗರ್ಭಗೃಹ (2)ಶುಕನಾಸಿ (3)ನವರಂಗ ; (4)ಮಂಟಪ ಹಾಗೂ ಹಲವು ಬಾರಿ 2, 3, 4 ಅಥವಾ 5 ಗರ್ಭಗೃಹಗಳನ್ನು ಹೊಂದಿರುತ್ತದೆ. ಆಗ ಅವುಗಳನ್ನು ದ್ವಿಕೂಟ, ತ್ರಿಕೂಟ, ಚತುಷಕೂಟ, ಪಂಚಕೂಟ ಎಂದು ಕ್ರಮವಾಗಿ ಕರೆಯುತ್ತಾರೆ. ಸಾಧಾರಣವಾಗಿ ಗರ್ಭಗೃಹ ಚೌಕ ಅಥವಾ ನಕ್ಷತ್ರಕಾರದ ತಲ ವಿನ್ಯಾಸವನ್ನು ಹೊಂದಿರುತ್ತದೆ. ಚೌಕ ವಿನ್ಯಾಸವು ಹಿಂಬಣೆ, ಮುಂಬಣೆಗಳನ್ನು ಹೊಂದಿದ್ದು ವಿಪುಲ ಅಲಂಕಾರಕ್ಕೆ ಅವಕಾಶ ಮಾಡಿ ಕೊಟ್ಟಿದೆ. ಒಟ್ಟಾಗಿ ವಿನ್ಯಾಸ ಮತ್ತು ಯೋಜನೆಯಲ್ಲಿ ಸಂಕೀರ್ಣವಾಗಿದ್ದು ಆಕರ್ಷಕವಾಗಿ ಮೂಡಿ ಬಂದಿರುತ್ತದೆ.

ಇದರ ಊರ್ಧ್ವಚ್ಛಂದದಲ್ಲಿ (Elevation) ಕೆಲವು ವರಗಗಳನ್ನು ಹೀಗೆ ಗುರುತಿಸಬಹುದು
⦁ ಜಗತಿ; ದೇವೇಲಾಯಗಳು ಎತ್ತರದ ಜಗತಿಯ ಮೇಲೆ ನಿಂತಿರುತ್ತವೆ. ಇದು ಪ್ರದಕ್ಷಿಣ ಪಥವಾಗಿ ಬಳಸಲ್ಪಡುತ್ತದೆ.
⦁ ಪೀಠ; ಜಗತಿಯ ಮೇಲೆ ಅಡ್ಡ ಪಟ್ಟಿಕೆಗಳ ಅಲಂಕರಣವುಳ್ಳ ಪೀಠವಿರುತ್ತದೆ.
⦁ ಜಂಘ; ಪೀಠದ ಮೇಲೆಯಿರುವ ಗೋಡೆಯನ್ನು ಜಂಘ ಎಂದು ಕರೆಯುತ್ತಾರೆ. ಕೂಟಛಾದ್ಯ ಎಂಬ ಮುಂಚಾಚು ಗೋಡೆಯನ್ನು ಜಂಘ ಮತ್ತು ಉಪರಿ ಜಂಘ ಎಂದು ವಿಂಗಡಿಸುತ್ತದೆ. ಜಂಘವು ಮೂರ್ತಿ ಶಿಲ್ಪದಿಂದಲೂ ಉಪರಿ ಜಂಘವು ಪಂಜರಗಳಿಂದ ಅಲಂಕೃತಗೊಂಡಿರುತ್ತದೆ.
⦁ ಛಾದ್ಯ; ವಿಶಾಲವಾದ ಮುಂಚಾಚು ಇರುವ ಸ್ತರ. ಇದು ಜಂಘ ಮತ್ತು ಶಿಖರವನ್ನು ವಿಂಗಡಿಸುತ್ತದೆ.
⦁ ಶಿಖರ; ಛಾದ್ಯದ ಮೇಲಿನ ಶಿಖರವು ಹಲವು ಅಂತಸ್ತು ಅಥವಾ ಭೂಮಿಗಳನ್ನು ಹೊಂದಿರುತ್ತದೆ. ಇಲ್ಲಿಯ ವಿಶೇಷ ಅಲಂಕಾರಣವು ಅಂತಸ್ತುಗಳನ್ನು ಗುರುತಿಸುವ ರೇಖೆಗಳನ್ನು ಮುಚ್ಚಿತ್ತವೆ.
⦁ ಕಂಠ/ಗಲ; ಶಿಖರ ಮತ್ತು ಘಂಟಾ ರಚನೆಯ ನಡುವೆ ಕಿರದಾದ ಕಂಠ ಅಥವಾ ಗಲ ಎಂಬ ವರ್ಗವಿರುತ್ತದೆ.
⦁ ಘಂಟಾ; ಶಿಖರದ ಮೇಲೆ ಘಂಟಾ ರಚನೆಯಿದ್ದು ಅದರ ಮೇಲ್ತುದಿಯಲ್ಲಿ ಅತಿ ಸುಂದರವಾದ ಕಲ್ಲಿನ ಕಲಶವಿರುತ್ತದೆ.
⦁ ಕಲಶ
ಹೀಗೆ ಸೂಕ್ಷ್ಮ ಕೆತ್ತನೆಗಳಿಂದ ಕೂಡಿದ ಕ್ರಮಭದ್ದವಾದ ಅಲಂಕರಣ, ಅಂಗಾಂಗ ಪ್ರಮಾಣ, ಬೇರೆ ಬೇರೆ ಭಾಗಗಳಲ್ಲಿರುವ ಸಂತುಲನ, ಯೋಜನಬದ್ದವಾದ ವಿನ್ಯಾಸಗಳಿಂದ ಹೊಯ್ಸಳ ದೇವಾಲಯವು ಅತ್ಯದ್ಭುತ ಸೌಂದರ್ಯದ ಆಗರವಾಗಿ ರೂಪಿತಗೊಂಡಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Latest2 ಗಂಟೆಗಳು ago

ಹೆಣ್ಣು ಮಗುವಿನ ತಂದೆಯಾದ ಖ್ಯಾತ ನಿರ್ದೇಶಕ ಅಟ್ಲಿ; ಅಭಿನಂದನೆಗಳ ಮಹಾಪೂರ

Latest3 ಗಂಟೆಗಳು ago

ಮಹಿಳಾ ಮೀಸಲು ಮಸೂದೆ ಕಾಂಗ್ರೆಸ್‌ ಪಕ್ಷದ ಕನಸು ಮತ್ತು ಕೂಸು: ಡಿ.ಕೆ.ಶಿವಕುಮಾರ್

ಅವಿಭಾಗೀಕೃತ3 ಗಂಟೆಗಳು ago

ಕಾಶ್ಮೀರ: ಕಂದಕಕ್ಕೆ ಉರುಳಿದ ಬಸ್; 15 ಸಾವು, ಹಲವರ ಸ್ಥಿತಿ ಗಂಭೀರ

ದೇಶ3 ಗಂಟೆಗಳು ago

ದೇಶದ ಪ್ರಧಾನಿಗೆ ಕೈಯಾರ ಚುರುಮುರಿ ಕೊಟ್ಟರೂ ಇಲ್ಲ ಖುಷಿ! ಆ ತಪ್ಪು ಮಾಡಬಾರದಿತ್ತು ಅಂದ ವ್ಯಾಪಾರಿ

Latest3 ಗಂಟೆಗಳು ago

ಗ್ಯಾಂಗ್‌ಸ್ಟರ್ ಸಿನಿಮಾ ಎಂಬ ಭ್ರಮೆಯಲ್ಲಿದ್ದವರಿಗೆ ಶಾಕ್ ಕೊಟ್ಟ ಯಶ್; ‘ಟಾಕ್ಸಿಕ್’ ಹಿಂದಿದೆ ಬೇರೆಯದೇ ಪ್ಲ್ಯಾನ್‌!

ಅವಿಭಾಗೀಕೃತ3 ಗಂಟೆಗಳು ago

ಅಹಿಂದ ರಕ್ಷಣೆ ಹೊಣೆ ಹೊತ್ತ ಸಚಿವ ಜಾರಕಿಹೊಳಿ: ಇದರ ಮರ್ಮವೇನು?

Latest4 ಗಂಟೆಗಳು ago

ಸಾಧ್ವಿ ಸೈಲ್ ಮಿಸ್ ವರ್ಲ್ಡ್ ಪ್ರಶಸ್ತಿ ಗೆಲ್ಲಲಿ: ಸಿಎಂ ಸಿದ್ದರಾಮಯ್ಯ ಆಶಯ

Latest4 ಗಂಟೆಗಳು ago

ಮೋದಿ-ಸಿದ್ದರಾಮಯ್ಯ ಗುಸುಗುಸು: ಇಬ್ಬರೂ ಮಾತನಾಡಿದ ವಿಷಯ ಬಹಿರಂಗ

Latest5 ಗಂಟೆಗಳು ago

ಪ್ರಧಾನಿ ಮೋದಿ ಸಾಮಾಜಿಕ ನ್ಯಾಯದ ಪರವಾಗಿಲ್ಲ: ಸಿಎಂ ಸಿದ್ದರಾಮಯ್ಯ ಟೀಕೆ

Latest6 ಗಂಟೆಗಳು ago

ಬಸವಣ್ಣನವರನ್ನು ಒಂದು ಸಮುದಾಯಕ್ಕೆ ಸೀಮಿತಗೊಳಿಸಬಾರದು: ಸಚಿವ ಸತೀಶ್‌ ಜಾರಕಿಹೊಳಿ

galipata neetu
ಕಿರುತೆರೆ2 ವರ್ಷಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 ವರ್ಷಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 ವರ್ಷಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ2 ವರ್ಷಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 ವರ್ಷಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 ವರ್ಷಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 ವರ್ಷಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 ವರ್ಷಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 ವರ್ಷಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 ವರ್ಷಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ವರ್ಷಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ವರ್ಷಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ವರ್ಷಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ವರ್ಷಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ವರ್ಷಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ವರ್ಷಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌