Nayanthara threatens to break fan’s phone during temple visit Nayanthara: ಮೊಬೈಲ್ ಒಡೆದು ಹಾಕುವುದಾಗಿ ಎಚ್ಚರಿಕೆ ಕೊಟ್ಟ ನಯನತಾರಾ; ನಟಿ ಗರಂ ಆಗಿದ್ಯಾಕೆ? - Vistara News

South Cinema

Nayanthara: ಮೊಬೈಲ್ ಒಡೆದು ಹಾಕುವುದಾಗಿ ಎಚ್ಚರಿಕೆ ಕೊಟ್ಟ ನಯನತಾರಾ; ನಟಿ ಗರಂ ಆಗಿದ್ಯಾಕೆ?

ನಟಿಯನ್ನು (Nayanthara) ನೋಡಲು ಜನರು ಜಮಾಯಿಸಿದ್ದರಿಂದ ದರ್ಶನ ಪಡೆಯಲು ದಂಪತಿಗೆ ಕಷ್ಟಕರ ವಾತಾವರಣ ಉಂಟಾಗಿದೆ. ಪೊಲೀಸರು ಕೂಡ ಪರಿಸ್ಥಿತಿ ನಿಯಂತ್ರಿಸಲು ಹರಸಾಹಸ ಪಟ್ಟರು ಎನ್ನಲಾಗಿದೆ.

VISTARANEWS.COM


on

Nayanthara threatens to break fan’s phone during temple visit
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಲೇಡಿ ಸೂಪರ್‌ಸ್ಟಾರ್‌ ನಯನತಾರಾ (Nayanthara) ಮತ್ತು ವಿಘ್ನೇಶ್ ಶಿವನ್ ಇತ್ತೀಚೆಗೆ ಕುಂಭಕೋಣಂ ಬಳಿಯ ಕಾಮಾಕ್ಷಿ ಅಮ್ಮನ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ನಟಿಯನ್ನು ನೋಡಲು ಜನರು ಜಮಾಯಿಸಿದ್ದರಿಂದ ದರ್ಶನ ಪಡೆಯಲು ದಂಪತಿಗೆ ಕಷ್ಟಕರ ವಾತಾವರಣ ಉಂಟಾಗಿದೆ. ಪೊಲೀಸರು ಕೂಡ ಪರಿಸ್ಥಿತಿ ನಿಯಂತ್ರಿಸಲು ಹರಸಾಹಸಪಟ್ಟರು ಎನ್ನಲಾಗಿದೆ. ಪೂಜೆ ಮುಗಿಸಿ ಇಬ್ಬರೂ ಮತ್ತೊಂದು ದೇವಸ್ಥಾನಕ್ಕೆ ತೆರಳುತ್ತಾರೆ. ಶಾಂತವಾಗಿ ಇರುವಂತೆ ಎಷ್ಟೇ ಮನವಿ ಮಾಡಿದರೂ ಅಭಿಮಾನಿಗಳು ಕೇಳದಿದ್ದಾಗ ಅನಿವಾರ್ಯವಾಗಿ ಗದರಿದ್ದಾರೆ. ಈ ಸಂದರ್ಭದಲ್ಲಿ ವಿಡಿಯೊ ಮಾಡುತ್ತ ಬಂದ ಅಭಿಮಾನಿಯ ವಿರುದ್ಧ ಗರಂ ಆದ ನಯನಾ, ಮೊಬೈಲ್ ಒಡೆದು ಹಾಕುವುದಾಗಿ ಎಚ್ಚರಿಸಿದ್ದಾರೆ.

ವಿಘ್ನೇಶ್ ಶಿವನ್ ಮತ್ತು ನಯನತಾರಾ ಕಾಮಾಕ್ಷಿ ಅಮ್ಮನ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಅದರ ನಂತರ, ಅವರು ಮತ್ತೊಂದು ದೇವಸ್ಥಾನಕ್ಕೆ ಹೋಗಲು ಪ್ರಯತ್ನಿಸಿದರು. ಸಾಲಾಗಿ ಬನ್ನಿ ಎಲ್ಲರಿಗೂ ಸೆಲ್ಫಿ ಕೊಡುವೆ ಎಂದು ನಯನತಾರಾ ಮನವಿ ಮಾಡಿಕೊಂಡರೂ ಅಭಿಮಾನಿಗಳು ಕೇಳಿಲ್ಲ. ಪರಿಸ್ಥಿತಿಯನ್ನು ಅರಿತ ಅವರು ಸಮಾಧಾನ ಮಾಡಲು ಪ್ರಯತ್ನಿಸಿದರೂ ಅದು ಸಾಧ್ಯವಾಗಿಲ್ಲ. ಹಾಗಾಗಿ ತರಾತುರಿಯಲ್ಲಿ ಪೂಜೆ ಮುಗಿಸಿ ಹೊರಟಿದ್ದಾರೆ.

ಇದನ್ನೂ ಓದಿ: Nayanthara: ಮೊದಲ ಬಾರಿ ಅವಳಿ ಮಕ್ಕಳೊಂದಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡ ನಯನತಾರಾ-ವಿಘ್ನೇಶ್

ಕಾಲಿವುಡ್‌ ಚಿತ್ರರಂಗದಲ್ಲಿ ಮಿಂಚಿದ ನಯನತಾರಾ ಅವರು ತಮ್ಮದೇ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಕೊನೆಯದಾಗಿ ʻಕನೆಕ್ಟ್‌ʼ ಸಿನಿಮಾದಲ್ಲಿ ಕಾಣಿಸಿಕೊಂಡರು. ಸಿನಿಮಾ ಮಿಶ್ರ ಪ್ರತಿಕ್ರಿಯೆನ್ನು ಪಡೆಯಿತು.ಈ ಸಿನಿಮಾವನ್ನು ಅಶ್ವಿನ್ ಸರವಣನ್ ನಿರ್ದೇಶಿಸಿದ್ದಾರೆ.

ಮುಂದೆ ಶಾರುಖ್‌ ಅಭಿನಯದ ಜವಾನ್‌ ಸಿನಿಮಾದಲ್ಲಿ ನಟಿಸಲಿದ್ದಾರೆ. ಈ ಸಿನಿಮಾದಲ್ಲಿ ವಿಜಯ್ ಸೇತುಪತಿ ಮತ್ತು ಪ್ರಿಯಾಮಣಿ ಕೂಡ ಇದ್ದಾರೆ. ನಯನತಾರಾ ʻಇರೈವನ್ʼಯೋಜನೆ ಕೂಡ ಹೊಂದಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಾಲಿವುಡ್

Kanguva Film: 10,000 ಜನರನ್ನು ಒಳಗೊಂಡಿತ್ತು ʻಕಂಗುವʼ ಚಿತ್ರದ ಸೂರ್ಯ-ಬಾಬಿ ಡಿಯೋಲ್‌ರ ಈ ದೃಶ್ಯ!

Kanguva Film: ಸೂರ್ಯ ಮತ್ತು ಬಾಬಿ ಡಿಯೋಲ್ ಎರಡು ಬುಡಕಟ್ಟುಗಳ ನಾಯಕರಾಗಿ ಇರುತ್ತಾರೆ. ಇವರಿಬ್ಬರ ನಡುವಿನ ಕಾಳಗ ಇಲ್ಲಿ ತೋರಿಸಲಾಗಿತ್ತು. ಟೀಸರ್‌ನಲ್ಲಿ ರಕ್ತಪಾತ ಮತ್ತು ಸಾವುಗಳು ಪ್ರಮುಖ ಹೈಲೈಟ್‌. ಬಾಬಿ ಡಿಯೋಲ್​ ಅವರು ‘ಕಂಗುವ’ ಚಿತ್ರದಲ್ಲಿ ಇನ್ನೂ ಕ್ರೂರವಾದ ಅವತಾರ ತಾಳಿದ್ದರು. ತಾತ್ಕಾಲಿಕವಾಗಿ ʻಸೂರ್ಯ 42ʼ ಎಂದು ಹೆಸರಿಸಲಾದ ಸೂರ್ಯ ಅವರ ಮುಂಬರುವ ಬಹು ನಿರೀಕ್ಷಿತ ಈ ಚಿತ್ರವು ಇದೀಗ ʻಕಂಗುವʼ ಎಂಬ ಹೆಸರನ್ನು ಪಡೆದುಕೊಂಡಿದೆ.

VISTARANEWS.COM


on

Kanguva Film Suriya-Bobby Deol's war scene with 10,000 people
Koo

ಬೆಂಗಳೂರು: ತಮಿಳು ಚಿತ್ರರಂಗದ (Tamil Cinema) ಖ್ಯಾತ ನಟ ಸೂರ್ಯ (Actor Surya) ಅವರ ಬಹು ನಿರೀಕ್ಷಿತ `ಕಂಗುವ’ (Kanguva Film) ಚಿತ್ರದ ಟೀಸರ್ ಔಟ್‌ ಆಗಿತ್ತು. ಬಾಲಿವುಡ್​ ನಟ ಬಾಬಿ ಡಿಯೋಲ್​ ಕೂಡ ಹೊಸ ಅವತಾರ ತಾಳಿದ್ದರು. ಬಾಬಿ ಡಿಯೋಲ್ ಒಳಗೊಂಡಿರುವ ಬೃಹತ್ ಯುದ್ಧದ ದೃಶ್ಯವನ್ನು ದೊಡ್ಡ ಪ್ರಮಾಣದಲ್ಲಿ ಚಿತ್ರೀಕರಿಸಲಾಗಿತ್ತು. ವರದಿಯ ಪ್ರಕಾರ ಬರೋಬ್ಬರಿ 10,000 ಜನರನ್ನು ಈ ದೃಶ್ಯದಲ್ಲಿ ಬಳಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ.

ಮೂಲಗಳ ಪ್ರಕಾರ ʻʻಗ್ರೀನ್‌ ಸ್ಟುಡಿಯೋ , ನಿರ್ದೇಶಕ ಶಿವ ಮತ್ತು ಇಡೀ ತಂಡ ಈ ದೃಶ್ಯಕ್ಕೆ ನ್ಯಾಯ ಸಲ್ಲಿಸಿದೆ ಎನ್ನಲಾಗಿದೆ. ಚಿತ್ರದಲ್ಲಿ ಸೂರ್ಯ ಶಿವಕುಮಾರ್, ಬಾಬಿ ಡಿಯೋಲ್ ಮತ್ತು 10,000ಕ್ಕೂ ಹೆಚ್ಚು ಜನರನ್ನು ಒಳಗೊಂಡಿರುವ ದೊಡ್ಡ ಯುದ್ಧದ ದೃಶ್ಯವನ್ನು ನಿರ್ದೇಶಕರು ಚೆನ್ನಾಗಿ ನಿಭಾಯಿಸಿದ್ದಾರೆʼʼಎನ್ನಲಾಗಿದೆ. ವರ್ಷದ ಅತಿ ದೊಡ್ಡ ಮತ್ತು ದುಬಾರಿ ಚಿತ್ರಗಳಲ್ಲಿ ಒಂದು ಎಂದು ಊಹಿಸಲಾಗಿರುವ ಕಂಗುವವನ್ನು (Kanguva Budget) ಸುಮಾರು 300 ಕೋಟಿಗೂ ಹೆಚ್ಚು ಬಜೆಟ್‌ ನಲ್ಲಿ ನಿರ್ಮಿಸಲಾಗುತ್ತಿದೆ ಎಂದು ತಿಳಿದು ಬಂದಿದೆ. ಈ ಚಿತ್ರವೂ ಚಿತ್ರರಂಗದಲ್ಲಿ ಬಹು ದಾಖಲೆಗಳನ್ನು ಮುರಿಯಲಿದೆ ಎಂದು ಊಹಿಸಲಾಗಿದೆ.

ಇದನ್ನೂ ಓದಿ: Kanguva Budget: ಭಾರಿ ಸದ್ದು ಮಾಡುತ್ತಿರುವ ಕಂಗುವ ಚಿತ್ರದ ಬಜೆಟ್ ಎಷ್ಟು ಗೊತ್ತೇ?

ಟೀಸರ್‌ನಲ್ಲಿ ಏನಿತ್ತು?

ಸೂರ್ಯ ಮತ್ತು ಬಾಬಿ ಡಿಯೋಲ್ ಎರಡು ಬುಡಕಟ್ಟುಗಳ ನಾಯಕರಾಗಿ ಇರುತ್ತಾರೆ. ಇವರಿಬ್ಬರ ನಡುವಿನ ಕಾಳಗ ಇಲ್ಲಿ ತೋರಿಸಲಾಗಿತ್ತು. ಟೀಸರ್‌ನಲ್ಲಿ ರಕ್ತಪಾತ ಮತ್ತು ಸಾವುಗಳು ಪ್ರಮುಖ ಹೈಲೈಟ್‌. ಬಾಬಿ ಡಿಯೋಲ್​ ಅವರು ‘ಕಂಗುವ’ ಚಿತ್ರದಲ್ಲಿ ಇನ್ನೂ ಕ್ರೂರವಾದ ಅವತಾರ ತಾಳಿದ್ದರು.

ಯುವಿ ಕ್ರಿಯೇಷನ್ಸ್ ಸಹಯೋಗದಲ್ಲಿ ಸ್ಟುಡಿಯೋ ಗ್ರೀನ್ ನಿರ್ಮಾಣ ಸಂಸ್ಥೆಯು ಸೂರ್ಯ ಮತ್ತು ದಿಶಾ ಪಟಾನಿ ಅಭಿನಯದ ‘ಕಂಗುವ’ ಚಿತ್ರವನ್ನು ನಿರ್ಮಿಸುತ್ತಿದೆ.

38 ಭಾಷೆಗಳಲ್ಲಿ ಕಂಗುವ ಬಿಡುಗಡೆಗೆ ಪ್ಲ್ಯಾನ್

ಖ್ಯಾತ ಕಾಲಿವುಡ್ ನಟ ಸೂರ್ಯ (Actor Suriya) ಅವರು ಸಿರುತೈ ಶಿವ ನಿರ್ದೇಶನದ ಬಹು ನಿರೀಕ್ಷಿತ ಪ್ರಾಜೆಕ್ಟ್ ʻಕಂಗುವʼ ಚಿತ್ರವನ್ನು 38 ಭಾಷೆಗಳಲ್ಲಿ ಬಿಡುಗಡೆ ಮಾಡುವುದಾಗಿ ಇತ್ತೀಚಿನ ಸಂದರ್ಶನವೊಂದರಲ್ಲಿ ಚಿತ್ರದ ನಿರ್ಮಾಪಕ ಕೆ.ಇ.ಜ್ಞಾನವೇಲ್ ರಾಜಾ ಅವರು ಹೇಳಿದ್ದರು. ‘ಕಂಗುವ’ ಸಿನಿಮಾವನ್ನು ಪ್ಯಾನ್ ಇಂಡಿಯಾ ಮಾತ್ರವಲ್ಲ ಪ್ಯಾನ್ ವರ್ಲ್ಡ್ ಮಟ್ಟದಲ್ಲಿ ಬಿಡುಗಡೆ ಮಾಡುವ ಆಲೋಚನೆಯನ್ನು ನಿರ್ಮಾಪಕರು ಹಾಕಿಕೊಂಡಿದ್ದರು.

ತಾತ್ಕಾಲಿಕವಾಗಿ ʻಸೂರ್ಯ 42ʼ ಎಂದು ಹೆಸರಿಸಲಾದ ಸೂರ್ಯ ಅವರ ಮುಂಬರುವ ಬಹು ನಿರೀಕ್ಷಿತ ಈ ಚಿತ್ರವು ಇದೀಗ ʻಕಂಗುವʼ ಎಂಬ ಹೆಸರನ್ನು ಪಡೆದುಕೊಂಡಿದೆ. ಮೂಲಗಳ ಪ್ರಕಾರ ಈ ಸಿನಿಮಾದಲ್ಲಿ ನಟ ಐದು ಅವತಾರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ವೆಂಕಟೇರ್, ಅರತಾರ್, ಮಂದಾಂಕರ್, ಮುಕಾತಾರ್ ಮತ್ತು ಪೆರುಮಾನಾಥರ್ ಎಂಬ ಐದು ಪಾತ್ರಗಳನ್ನು ನಿರ್ವಹಿಸಲಿದ್ದಾರೆ. ದಿಶಾ ಪಟಾನಿ ಈ ಚಿತ್ರದ ಮೂಲಕ ತಮಿಳಿಗೆ ಪದಾರ್ಪಣೆ ಮಾಡುತ್ತಿದ್ದಾರೆ. ಇದರಲ್ಲಿ ಕೋವೈ ಸರಳಾ, ಯೋಗಿ ಬಾಬು, ಆನಂದ್ ರಾಜ್, ರೆಡಿನ್ ಕಿಂಗ್ಸ್ಲಿ, ರವಿ ರಾಘವೇಂದ್ರ ಮತ್ತು ಇತರರು ಪೋಷಕ ಪಾತ್ರಗಳಲ್ಲಿ ನಟಿಸಿದ್ದಾರೆ.

Continue Reading

ಸ್ಯಾಂಡಲ್ ವುಡ್

Kannada New Movie: ಬಹು ನಿರೀಕ್ಷಿತ ʻಪೌಡರ್‌ʼ ಸಿನಿಮಾ ಟೀಸರ್‌ ಔಟ್‌!

Kannada New Movie : “ಪೌಡರ್”‌ ಚಿತ್ರವನ್ನು ಕೆ.ಆರ್‌.ಜಿ ಸ್ಟೂಡಿಯೋಸ್‌ ಮತ್ತು ಟಿ.ವಿ.ಎಫ್‌ ಮೋಷನ್‌ ಪಿಕ್ಚರ್ಸ್‌ನ ಸಹಯೋಗದಲ್ಲಿ ಮೂಡಿ ಬಂದಿರುವ ಮೊದಲ ಚಿತ್ರವಾಗಿದೆ. ಚಿರಪರಿಚಿತ ಚಿತ್ರ ನಿರ್ಮಾಣ ಹಾಗೂ ವಿತರಣಾ ಸಂಸ್ಥೆಯಾದ ಕೆ ಆರ್ ಜಿ ಸ್ಟುಡಿಯೋಸ್ ವಿಭನ್ನ ಕಥಾವಸ್ತುವನ್ನು ಸಿನಿ ಪ್ರೇಕ್ಷಕರ ಮುಂದಿಡುವ ಗುರಿಯೊಂದಿಗೆ ಈಗಾಗಲೇ ಹಲವಾರು ಪ್ರಖ್ಯಾತ ಚಿತ್ರಗಳನ್ನು ನಿರ್ಮಿಸಿವೆ.

VISTARANEWS.COM


on

Kannada New Movie powder Teaser Out
Koo

ಬೆಂಗಳೂರು: ಕೆ.ಆರ್‌.ಜಿ ಸ್ಟೂಡಿಯೋಸ್‌ ಮತ್ತು ಟಿ.ವಿ.ಎಫ್‌ ಮೋಷನ್‌ (Kannada New Movie) ಪಿಕ್ಚರ್ಸ್‌ನ ಚೊಚ್ಚಲ ಸಹಯೋಗ ಆಗಸ್ಟ್‌ ತಿಂಗಳಲ್ಲಿ ಕೆ.ಆರ್‌.ಜಿ ಮತ್ತು ಟಿ.ವಿ.ಎಫ್‌ ಘೋಷಿಸಿದ ಮೊದಲ ಚಿತ್ರವಾದ “ಪೌಡರ್”‌ ಇದೀಗ ಟೀಸರ್‌ ಬಿಡುಗಡೆ ಮಾಡಿದೆ.

ಇಬ್ಬರು ಯುವಕರು ಒಂದು ನಿಗೂಢವಾದ “ಪೌಡರ್”‌ ಪ್ರಭಾವದಿಂದಾಗಿ ದಿಢೀರನೇ ಸಿರಿವಂತರಾಗಲು ಮಾಡುವ ಪ್ರಯತ್ನಗಳು, ಅವರಿಗೆ ಎದುರಾಗುವ ಸಮಸ್ಯೆಗಳು ಇವೆಲ್ಲವನ್ನೂ ಎಳೆಯಾಗಿ ಬಿಚ್ಚಿಡುವ ಕಥೆಯೇ “ಪೌಡರ್”.‌ ಆ ಯುವಕರು ಎಲ್ಲಾ ಸಮಸ್ಯೆಗಳನ್ನು ಮೀರಿ ನಿಲ್ಲುವರೇ? ಅವರ ಎಲ್ಲಾ ಕನಸುಗಳು ನನಸಾಹುವುದೇ? “ಪೌಡರ್”‌ ಹಿಂದಿನ “ಪವರ್”‌ ಅವರಿಗೆ ತಿಳಿಯುವುದೇ? ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಜುಲೈ 12 ಚಿತ್ರಮಂದಿರಗಳಲ್ಲಿ ಸಿಗಲಿದೆ. ಈಗಾಗಲೇ ತನ್ನ ಟೀಸರ್‌ ಮೂಲಕ “ಪೌಡರ್”‌ ಎಲ್ಲೆಡೆ ನಗೆ ಚಟಾಕಿ ಹತ್ತಿಸಿದ್ದು, ಚಿತ್ರ ಬಿಡುಗಡೆಯ ನಂತರ ಈ ಹಾಸ್ಯ, ನಗು ದುಪ್ಪಟ್ಟುಗೊಳ್ಳಲಿದೆ ಎಂದರೆ ಉತ್ಪ್ರೇಕ್ಷೆಯಲ್ಲ.

“ಪೌಡರ್”‌ ಚಿತ್ರವನ್ನು ಕೆ.ಆರ್‌.ಜಿ ಸ್ಟೂಡಿಯೋಸ್‌ ಮತ್ತು ಟಿ.ವಿ.ಎಫ್‌ ಮೋಷನ್‌ ಪಿಕ್ಚರ್ಸ್‌ನ ಸಹಯೋಗದಲ್ಲಿ ಮೂಡಿ ಬಂದಿರುವ ಮೊದಲ ಚಿತ್ರವಾಗಿದೆ. ಚಿರಪರಿಚಿತ ಚಿತ್ರ ನಿರ್ಮಾಣ ಹಾಗೂ ವಿತರಣಾ ಸಂಸ್ಥೆಯಾದ ಕೆ ಆರ್ ಜಿ ಸ್ಟುಡಿಯೋಸ್ ವಿಭನ್ನ ಕಥಾವಸ್ತುವನ್ನು ಸಿನಿ ಪ್ರೇಕ್ಷಕರ ಮುಂದಿಡುವ ಗುರಿಯೊಂದಿಗೆ ಈಗಾಗಲೇ ಹಲವಾರು ಪ್ರಖ್ಯಾತ ಚಿತ್ರಗಳನ್ನು ನಿರ್ಮಿಸಿವೆ. ಇನ್ನು ಟಿ.ವಿ.ಎಫ್‌ ಮೋಷನ್‌ ಪಿಕ್ಚರ್ಸ್‌ ಹಲವಾರು ವೆಬ್‌ ಸೀರೀಸ್‌ ಗಳ ಮೂಲಕ ತನ್ನದೇ ಛಾಪನ್ನು ಮೂಡಿಸಿರುವ ಸಂಸ್ಥೆಯಾಗಿದ್ದು, ಇವರಿಬ್ಬರ ಸಹಯೋಗದಲ್ಲಿ ಮೂಡಿ ಬಂದಿರುವ “ಪೌಡರ್”‌ ಬಹುನಿರೀಕ್ಷಿತ ಚಿತ್ರವಾಗಿದೆ.

ಇದನ್ನೂ ಓದಿ: Kannada New Movie: ಕುತೂಹಲ ಮೂಡಿಸಿದೆ ರವಿಚಂದ್ರನ್ ಅಭಿನಯದ ‘ದ ಜಡ್ಜ್ ಮೆಂಟ್’ ಟ್ರೈಲರ್‌!

ಕೆ.ಆರ್‌.ಜಿ ಸ್ಟೂಡಿಯೋಸ್‌ನ ಮಾಲಿಕ ಕಾರ್ತಿಕ್‌ ಗೌಡ ಮತ್ತು ಟಿ.ವಿ.ಎಫ್‌ ಮೋಷನ್‌ ಪಿಕ್ಚರ್ಸ್‌ ನ ಮಾಲಿಕ ಅರುನಭ್‌ ಕುಮಾರ್‌ ಮಾತನಾಡಿ, “ಯುವಕರಿಗೆ, ಸಿನಿ ಪ್ರೇಕ್ಷಕರಿಗೆ ಹೊಸ ರೀತಿಯ ಕಥೆಗಳನ್ನು, ವಿಭಿನ್ನ ಕಥಾ ಹಂದರವನ್ನು ಹೊಂದಿರುವ ಚಿತ್ರಗಳನ್ನು ನೀಡುವುದು ನಮ್ಮ ಮುಖ್ಯ ಗುರಿಯಾಗಿದ್ದು, ಈ ನಿಟ್ಟಿನಲ್ಲಿ “ಪೌಡರ್”‌ ನಮ್ಮ ಸಹಯೋಗದ ಚೊಚ್ಚಲ ಪ್ರಯತ್ನ. ʼಮಡ್ಗಾನ್‌ ಎಕ್ಸ್‌ ಪ್ರೆಸ್‌ʼ , ʼಫುಕ್ರೇ” ,ʼಗೋ ಗೋವಾ ಗಾನ್‌ʼ, ʼಡೆಲ್ಲಿ ಬೆಲ್ಲಿʼ ನಂತಹ ಹಾಸ್ಯ ಚಿತ್ರಗಳ ಅಭಿಮಾನಿಗಳಾಗಿ ಕನ್ನಡದಲ್ಲಿ ಅಂತಹದ್ದೇ ನಗೆ ಚಟಾಕಿಯನ್ನು ಹತ್ತಿಸುವ ಚಿತ್ರವನ್ನು ನಿರ್ಮಿಸಿದ್ದೇವೆ ಎಂದು ನಂಬಿದ್ದೇವೆ. ಚಿತ್ರವನ್ನು ನೋಡಿ ಪ್ರೇಕ್ಷಕರು ತಮ್ಮ ಹೊಟ್ಟೆ ಹುಣ್ಣಾಗುವಂತೆ ನಗುತ್ತಾರೆ ಎಂಬ ಭರವಸೆ ನಮಗಿದೆ. ಮುಂಬರುವ ದಿನಗಳಲ್ಲಿ ಇದೇ ರೀತಿಯ ಇನ್ನಷ್ಟು ವಿಭಿನ್ನ ಕಥೆಗಳನ್ನು ಈ ಸಹಯೋಗದ ಮೂಲಕ ಮುಂದಿಡಲು ಬಯಸುತ್ತೇವೆʼʼಎಂದರು.

ಟಿ.ವಿ.ಎಫ್‌ ಮೋಷನ್‌ ಪಿಕ್ಚರ್ಸ್‌ ಕುರಿತು

ಸಂಸ್ಥೆಯ ಸಂಸ್ಥಾಪಕ ಅರುನಭ್‌ ಕುಮಾರ್‌ ಸಾರಥ್ಯದಲ್ಲಿ, ಆರಂಭದ ದಿನದಿಂದಲೂ, ಉತ್ತಮ ಗುಣ ಮಟ್ಟದ ಕಥೆಗಳ ಮೂಲಕ ಟಿ.ವಿ.ಎಫ್‌ ಪ್ರೇಕ್ಷಕರನ್ನು ರಂಜಿಸುತ್ತಾ ಬಂದಿದೆ. ತನ್ನ 1೦ ವರ್ಷಗಳ ಪಯಣದಲ್ಲಿ, ಹಲವಾರು “ಸ್ಟೀರಿಯೋ ಟೈಪ್”ಗಳನ್ನು ಭೇದಿಸಿದೆ. “ದಿ ವೈರಲ್‌ ಫೀವರ್” ಎಂಬ ಶೀರ್ಷಿಕೆಯೊಂದಿಗೆ ಸಾವಿರಾರು ಪ್ರೇಕ್ಷಕರ ಮನಮುಟ್ಟಿದೆ. ಈ ನಡುವೆ ಹಲವಾರು ನಿರ್ಮಾಣ ಸಂಸ್ಥೆಗಳು ಉಗಮವಾಗಿದ್ದರೂ, ಟಿ.ವಿ.ಎಫ್‌ ವೆಬ್‌ ಕಂಟೆಂಟ್‌ ಮೂಲಕ ತನ್ನದೇ ಆದ ಛಾಪನ್ನು ಮೂಡಿಸಿದೆ.

ಕೆ.ಆರ್.ಜಿ ಸ್ಟೂಡಿಯೋಸ್‌ ಕುರಿತು

ಕಾರ್ತಿಕ್‌ ಗೌಡ ಮತ್ತು ಯೋಗಿ ಜಿ ರಾಜ್‌ ಸಾರಥ್ಯದಲ್ಲಿ 7 ವರ್ಷಗಳ ಹಿಂದೆ ಆರಂಭಗೊಂಡ ಈ ಸಂಸ್ಥೆ ವಿಭಿನ್ನ ಕಥಾವಸ್ತುವನ್ನು ಹೊಂದಿರುವ ಚಿತ್ರಗಳನ್ನು ಕನ್ನಡ ಪ್ರೇಕ್ಷಕರಿಗೆ ಕೊಡುಗೆಯಾಗಿ ನೀಡುತ್ತಾ ಬಂದಿದೆ. ತನ್ನ ಚಿತ್ರಗಳ ಮೂಲಕ ಕನ್ನಡ ಚಿತ್ರರಂಗದಲ್ಲಿ ಹಾಗೂ ಸಿನಿ ಪ್ರೇಕ್ಷಕರ ಮನದಲ್ಲಿ ಮನೆ ಮಾಡಿದೆ, ಮತ್ತು ವಿಶೇಷ ಸ್ಥಾನವನ್ನು ಪಡೆದುಕೊಂಡಿದೆ. ಇದೀಗ ಇಂತಹ ಅರ್ಥಪೂರ್ಣ ಸಹಯೋಗಗಳ ಮೂಲಕ ಕನ್ನಡ ಚಿತ್ರರಂಗವನ್ನು ಇನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯುವ ಗುರಿಯನ್ನು ಹೊಂದಿದೆ.

Continue Reading

ಸ್ಯಾಂಡಲ್ ವುಡ್

Kannada New Movie: ಕುತೂಹಲ ಮೂಡಿಸಿದೆ ರವಿಚಂದ್ರನ್ ಅಭಿನಯದ ‘ದ ಜಡ್ಜ್ ಮೆಂಟ್’ ಟ್ರೈಲರ್‌!

Kannada New Movie: ಜಿ9 ಕಮ್ಯೂನಿಕೇಷನ್ ಮೀಡಿಯಾ & ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ, ‘ಕ್ರೇಜಿಸ್ಟಾರ್’ ರವಿಚಂದ್ರನ್ ಮುಖ್ಯಪಾತ್ರದಲ್ಲಿ ನಟಿಸುತ್ತಿರುವ ‘ದಿ ಜಡ್ಜ್‌ಮೆಂಟ್’ ಚಿತ್ರದಲ್ಲಿ ದಿಗಂತ್‌ ಕಾಣಿಸಿಕೊಳ್ಳುತ್ತಿದ್ದಾರೆ. ದಿ ಜಡ್ಜ್‌ಮೆಂಟ್’ ಚಿತ್ರದಲ್ಲಿ ದಿಗಂತ್‌ ಕಾಣಿಸಿಕೊಳ್ಳುತ್ತಿದ್ದಾರೆ.  “ದ ಜಡ್ಜ್ ಮೆಂಟ್” ಚಿತ್ರದ ಟ್ರೈಲರ್‌ ಇತ್ತೀಚಿಗೆ ಬಿಡುಗಡೆಯಾಯಿತು. ನಿರ್ಮಾಪಕ ಉದಯ್ ಕೆ ಮಹ್ತಾ ಟ್ರೈಲರ್‌ ಬಿಡುಗಡೆ ಮಾಡಿ ಶುಭ ಕೋರಿದರು.

VISTARANEWS.COM


on

Kannada New Movie The judgement Trailer Out Kannada
Koo

ಬೆಂಗಳೂರು: ಜಿ9 ಕಮ್ಯೂನಿಕೇಷನ್ ಮೀಡಿಯಾ & ಎಂಟರ್ಟೈನ್ಮೆಂಟ್ ಲಾಂಛನದಲ್ಲಿ (Kannada New Movie) ನಿರ್ಮಾಣವಾಗುತ್ತಿರುವ, ‘ಕ್ರೇಜಿಸ್ಟಾರ್’ ರವಿಚಂದ್ರನ್ ಮುಖ್ಯಪಾತ್ರದಲ್ಲಿ ನಟಿಸುತ್ತಿರುವ ‘ದಿ ಜಡ್ಜ್‌ಮೆಂಟ್’ ಚಿತ್ರದಲ್ಲಿ ದಿಗಂತ್‌ ಕಾಣಿಸಿಕೊಳ್ಳುತ್ತಿದ್ದಾರೆ.  “ದ ಜಡ್ಜ್ ಮೆಂಟ್” ಚಿತ್ರದ ಟ್ರೈಲರ್‌ ಇತ್ತೀಚಿಗೆ ಬಿಡುಗಡೆಯಾಯಿತು. ನಿರ್ಮಾಪಕ ಉದಯ್ ಕೆ ಮಹ್ತಾ ಟ್ರೈಲರ್‌ ಬಿಡುಗಡೆ ಮಾಡಿ ಶುಭ ಕೋರಿದರು.

ನಿರ್ದೇಶಕ ಗುರುರಾಜ ಕುಲಕರ್ಣಿ ಮಾತನಾಡಿ ʻ ಇದು ರವಿಚಂದ್ರನ್ ಅವರಿಗಾಗಿಯೇ ಮಾಡಿರುವ ಕಥೆ. ಲೀಗಲ್ ಥ್ರಿಲ್ಲರ್ ಜಾನರ್ ಚಿತ್ರ. “ಯದ್ದಕಾಂಡ” ಚಿತ್ರದಲ್ಲಿ ವಕೀಲರಾಗಿ ರವಿಚಂದ್ರನ್ ಅವರ ಅಭಿನಯ ಇಂದಿಗೂ ಜನಪ್ರಿಯ. ಬಹಳ ವರ್ಷಗಳ ನಂತರ ಈ‌ ಚಿತ್ರದಲ್ಲಿ ವಕೀಲರ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಲಕ್ಷ್ಮೀ ಗೋಪಾಲಸ್ವಾಮಿ, ದಿಗಂತ್, ಧನ್ಯ, ಮೇಘನಾ ಗಾಂವ್ಕರ್, ರಂಗಾಯಣ ರಘು, ಪ್ರಕಾಶ್ ಬೆಳವಾಡಿ ಅವರನ್ನು ಒಳಗೊಂಡ ಬಹು ದೊಡ್ಡ ತಾರಾಗಣ ಈ ಚಿತ್ರದಲ್ಲಿದೆ. ಚಿತ್ರತಂಡದ ಸದಸ್ಯರ ಸಹಕಾರದಿಂದ ಚಿತ್ರ ಚೆನ್ನಾಗಿ ಮೂಡಿ ಬಂದಿದೆ. ಮೇ 24 ಚಿತ್ರರಂದು ಕರ್ನಾಟಕ ಮಾತ್ರವಲ್ಲದೆ, ಡೆಲ್ಲಿ, ಮುಂಬೈ, ಲಕ್ನೋ, ಗೋವಾ, ಆಂದ್ರಪ್ರದೇಶ ಸೇರಿದಂತೆ ದೇಶದ ವಿವಿಧ ಕಡೆ ಪ್ರತಿಷ್ಠಿತ ರಿಲಯನ್ಸ್ ಎಂಟರ್ ಟೈನ್ಮೆಂಟ್ ಸಂಸ್ಥೆ ಮೂಲಕ ಬಿಡುಗಡೆಯಾಗಲಿದೆʼʼ ಎಂದರು.

ಇದನ್ನೂ ಓದಿ: Kannada New Movie: ಒಟಿಟಿಗೆ ಲಗ್ಗೆ ಇಟ್ಟ ತನುಷ್ ಶಿವಣ್ಣ ಅಭಿನಯದ ಕ್ರೈಮ್-ಆ್ಯಕ್ಷನ್ ಸಿನಿಮಾ ʻMr ನಟ್ವರ್ ಲಾಲ್ʼ!

ʻʻನಿರ್ದೇಶಕರು ಬಂದು ಕಥೆ ಹೇಳಿದಾಗ ಇಷ್ಟವಾಯಿತು. ಅಭಿನಯಿಸಲು ಒಪ್ಪಿಕೊಂಡೆ. ಈ ತಂಡದ ಜೊತೆಗೆ ಕೆಲಸ ಮಾಡಿದ್ದು ಖುಷಿಯಾಗಿದೆ‌. ಸಾಮಾನ್ಯವಾಗಿ ನನ್ನ ಸಿನಿಮಾ‌ ಹಾಡುಗಳ ಮೂಲಕ ಜನಪ್ರಿಯ.‌ ಆದರೆ ನನಗೆ ಈ ಚಿತ್ರದಲ್ಲಿ ಒಂದು ಹಾಡೂ ಇಲ್ಲ. ಈ ಚಿತ್ರದ ಹೆಸರು “ಜಡ್ಜ್ ಮೆಂಟ್”. ಆದರೆ ನಮ್ಮ ಸಿನಮಾ ನೋಡಿ ಪ್ರೇಕ್ಷಕ ನೀಡುವ ” ಜಡ್ಜ್ ಮೆಂಟ್ ” ಅಂತಿಮʼʼ ಎನ್ನುತ್ತಾರೆ ನಟ ರವಿಚಂದ್ರನ್.

ಚಿತ್ರದಲ್ಲಿ ಅಭಿನಯಿಸಿರುವ ಲಕ್ಷ್ಮೀ ಗೋಪಾಲಸ್ವಾಮಿ, ದಿಗಂತ್, ಧನ್ಯ ರಾಮಕುಮಾರ್, ಮೇಘನಾ ಗಾಂವ್ಕರ್, ರವಿಶಂಕರ್ ಗೌಡ, ರಾಜೇಂದ್ರ ಕಾರಂತ್, ಕೃಷ್ಣ ಹೆಬ್ಬಾಳೆ, ರೇಖಾ ಕೂಡ್ಲಗಿ, ನವಿಲ ಮುಂತಾದ ಕಲಾವಿದರು ಹಾಗೂ ಛಾಯಾಗ್ರಾಹಕ ಪಿ.ಕೆ.ಹೆಚ್ ದಾಸ್, ಸಂಕಲನಕಾರ ಕೆಂಪರಾಜ್, ಚಿತ್ರಕಥೆ ಬರೆದಿರುವ ವಾಸುದೇವ ಮೂರ್ತಿ ಸೇರಿದಂತೆ ಅನೇಕ ತಂತ್ರಜ್ಞರು “ದ ಜಡ್ಜ್ ಮೆಂಟ್” ಚಿತ್ರದ ಕುರಿತು ಮಾತನಾಡಿದರು.

ಅನೂಪ್ ಸೀಳಿನ್ ಸಂಗೀತ ನಿರ್ದೇಶನ, ಕೆಂಪರಾಜು ಬಿ ಎಸ್ ಸಂಕಲನ‌, ಪ್ರಮೋದ್ ಮರವಂತೆ ಈ ಚಿತ್ರದ ಹಾಡುಗಳನ್ನು ರಚಿಸಿದ್ದಾರೆ. ಎಂ ಎಸ್ ರಮೇಶ್ ಸಂಭಾಷಣೆ ಬರೆದಿದ್ದಾರೆ. ಡಾ. ರವಿ ವರ್ಮ ಸಾಹಸ ನಿರ್ದೇಶನ, ರೂಪೇಂದ್ರ ಆಚಾರ್ ಅವರ ಕಲಾ ನಿರ್ದೇಶನ ‘ದ ಜಡ್ಜ್ ಮೆಂಟ್’ ಚಿತ್ರಕ್ಕಿದೆ.

Continue Reading

ಸ್ಯಾಂಡಲ್ ವುಡ್

Dhruva Sarja: ‘ಸಿ’ ಅಂತಿದ್ದಾರೆ ಧ್ರುವ ಸರ್ಜಾ; ಇದು ಅಪ್ಪ-ಮಗಳ ಕಥೆ!

Dhruva Sarja: ಕಿರಣ್ ಸುಬ್ರಮಣಿ ಚೊಚ್ಚಲ ನಿರ್ದೇಶನದ ‘ಸಿ’ ಸಿನಿಮಾ ಶೂಟಿಂಗ್ ಮುಗಿಸಿ ಪ್ರಮೋಷನ್‌ನಲ್ಲಿ ಬ್ಯುಸಿಯಾಗಿದೆ. ಎಲೆಕ್ಷನ್ ಬಿಸಿ ಕಮ್ಮಿಯಾಗುತ್ತಿದ್ದಂತೆ ಥಿಯೇಟರ್‌ಗೆ ಲಗ್ಗೆ ಇಡಲು ಸಜ್ಜಾಗಿರುವ ‘ಸಿ’ ಸಿನಿಮಾ ಇದೀಗ ಹಾಡಿನ ಮೂಲಕ ಅಭಿಮಾನಿಗಳ ಮುಂದೆ ಬಂದಿದೆ. ‘ಸಿ’ ಸಿನಿಮಾದ ಅಪ್ಪ ಮಗಳ ಬಾಂಧವ್ಯದ ಹಾಡು ಈಗ ಗಾನ ಪ್ರಿಯರ ಗಮನ ಸೆಳೆಯುತ್ತಿದೆ. ಕಿರಣ್ ಸುಬ್ರಮಣಿ ನಿರ್ದೇಶನದ ಜೊತೆಗೆ ನಾಯಕನಾಗಿಯೂ ಮಿಂಚಿದ್ದಾರೆ.

VISTARANEWS.COM


on

dhruva sarja support C Cinema Kanda Kanda Video Song Release
Koo

ಬೆಂಗಳೂರು: `ಸಿ’..ಅಂದ್ರೆ ಇಲ್ನೋಡಿ ಅಂತಲ್ಲ, ಹಾಗಂತ ಸಮುದ್ರದ ಬಗ್ಗೆ ಹೇಳ್ತಾ ಇದ್ದೇವೆ ಅಂತನೂ (Dhruva Sarja) ಅಂದ್ಕೊಬೇಡಿ… ‘ಸಿ’ ಸ್ಯಾಂಡಲ್ ವುಡ್‌ನಲ್ಲಿ ರಿಲೀಸ್‌ಗೆ ಸಿದ್ಧವಾಗಿರುವ ಹೊಸ ಸಿನಿಮಾ. ಈಗಾಲೇ ಚಂದನವನದಲ್ಲಿ ʻಶ್ʼ..ʻಸೈʼ..ʻಎʼ..ʻಓಂʼ…ಹೀಗೆ ಒಂದೇ ಅಕ್ಷರದ ಹೆಸರಿನ ಹಲವು ಸಿನಿಮಾಗಳು ಬಂದು ಹೋದವು. ಇದೀಗ ಅದೇ ಸಾಲಿಗೆ ‘ಸಿ’ ಎನ್ನುವ ಮತ್ತೊಂದು ಸಿನಿಮಾ ಕೂಡ ಸೇರಿಕೊಳ್ಳುತ್ತಿರುವುದು ವಿಶೇಷ..

ಕಿರಣ್ ಸುಬ್ರಮಣಿ ಚೊಚ್ಚಲ ನಿರ್ದೇಶನದ ‘ಸಿ’ ಸಿನಿಮಾ ಶೂಟಿಂಗ್ ಮುಗಿಸಿ ಪ್ರಮೋಷನ್‌ನಲ್ಲಿ ಬ್ಯುಸಿಯಾಗಿದೆ. ಎಲೆಕ್ಷನ್ ಬಿಸಿ ಕಮ್ಮಿಯಾಗುತ್ತಿದ್ದಂತೆ ಥಿಯೇಟರ್‌ಗೆ ಲಗ್ಗೆ ಇಡಲು ಸಜ್ಜಾಗಿರುವ ‘ಸಿ’ ಸಿನಿಮಾ ಇದೀಗ ಹಾಡಿನ ಮೂಲಕ ಅಭಿಮಾನಿಗಳ ಮುಂದೆ ಬಂದಿದೆ. ‘ಸಿ’ ಸಿನಿಮಾದ ಅಪ್ಪ ಮಗಳ ಬಾಂಧವ್ಯದ ಹಾಡು ಈಗ ಗಾನ ಪ್ರಿಯರ ಗಮನ ಸೆಳೆಯುತ್ತಿದೆ. ಕಿರಣ್ ಸುಬ್ರಮಣಿ ನಿರ್ದೇಶನದ ಜೊತೆಗೆ ನಾಯಕನಾಗಿಯೂ ಮಿಂಚಿದ್ದಾರೆ. ಅಪ್ಪ ಮಗಳ ಬಾಂಧವ್ಯದ ಹಾಡಿನಲ್ಲಿ ಕಿರಣ್ ತಂದೆಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಇದೀಗ ಈ ಸುಂದರ ಹಾಡನ್ನು ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ರಿಲೀಸ್ ಮಾಡಿರುವುದು ವಿಶೇಷ. ಮುದ್ದು ಮಗಳ ಜತೆ ಸಂಭ್ರಮಿಸುತ್ತಿರುವ ಧ್ರುವ ಸಿ ಸಿನಿಮಾದ ಸುಂದರ ಹಾಡನ್ನು ರಿಲೀಸ್ ಮಾಡಿ ಸಿನಿಮಾ ತಂಡಕ್ಕೆ ಶುಭ ಹಾರೈಸಿದ್ದಾರೆ. ಅಂದಹಾಗೆ ʻಕಂದಾ…ಕಂದಾʼ ಎನ್ನುವ ಸಾಲಿನಿಂದ ಪ್ರಾರಂಭವಾಗುವ ಈ ಹಾಡನ್ನು ಹೃದಯ ಶಿವ ಬರೆದಿದ್ದು, ಗಾಯಕ ವಾಸುಕಿ ವೈಭವ್ ಹಾಡಿದ್ದಾರೆ.

ಇದನ್ನೂ ಓದಿ: Dhruva Sarja: ವಿಮಾನ ದುರಂತ: ಕೂದಲೆಳೆ ಅಂತರದಿಂದ ಪಾರಾದ ಧ್ರುವ ಸರ್ಜಾ!

ಈ ಬಗ್ಗೆ ನಟ ಧ್ರುವ ಸರ್ಜಾ ಮಾತನಾಡಿ ʻʻಸಿ ಎಂದರೆ ಕ್ರೈಂ. ಹೊಸ ತಂಡ ಸೇರಿ ಒಳ್ಳೆಯ ಸಿನಿಮಾ ಮಾಡಿದೆ. ಹೊಸಬರಿಗೆ ಸಪೋರ್ಟ್‌ ಮಾಡಿ. ಚಿತ್ರತಂಡಕ್ಕೆ ಶುಭವಾಗಲಿʼʼಎಂದರು.

ನಿರ್ದೇಶಕ, ನಾಯಕ ಕಿರಣ್ ಅವರಿಗೆ ಇದು ಮೊದಲ ಸಿನಿಮಾ. ಹಾಗಂತ ಸಿನಿಮಾರಂಗ ಏನು ಹೊಸದೇನಲ್ಲ. ಈಗಾಗಲೇ ಅನೇಕ ಸಿನಿಮಾಗಳಲ್ಲಿ ಕೆಲಸ ಮಾಡಿ ಅನುಭವ ಹೊಂದಿದ್ದಾರೆ. ಇದೀಗ ʻಸಿʼ ಸಿನಿಮಾ ಮೂಲಕ ಮೊದಲ ಬಾರಿಗೆ ಸ್ವಾತಂತ್ರ ನಿರ್ದೇಶಕರಾಗಿ ಹೊರಹೊಮ್ಮುತ್ತಿದ್ದಾರೆ.

ಸಿ ಸಿನಿಮಾ ತಂದೆ- ಮಗಳ ಬಾಂಧವ್ಯದ ಜತೆಗೆ ಮೆಡಿಕಲ್ ಮಾಫಿಯಾದ ಬಗ್ಗೆ ಇದೆ. ಎಜಿಎಸ್ ಪ್ರೊಡಕ್ಷನ್ ನಡಿ ನಿರ್ದೇಶಕ, ನಾಯಕ ಕಿರಣ್ ಅವರ ತಂದೆ ಸುಬ್ರಮಣಿ ಅವರು ನಿರ್ಮಾಣ ಮಾಡಿದ್ದಾರೆ.

Continue Reading
Advertisement
theft Case
ಕ್ರೈಂ14 mins ago

Theft Case : ಪೊಲೀಸ್‌ ಬಸ್ಸನ್ನೇ ಕದಿಯಲು ಬಂದ ಕುಡುಕ; ಪೇಡ ಕೇಳಿದವ 15 ಕೆಜಿ ತುಪ್ಪ ಎಗರಿಸಿದ

7 books release programme on May 19 in Bengaluru
ಬೆಂಗಳೂರು22 mins ago

Bengaluru News: ಬೆಂಗಳೂರಿನಲ್ಲಿ ಮೇ 19ರಂದು ವೀರಲೋಕ ಪ್ರಕಾಶನದ 7 ಕೃತಿಗಳ ಲೋಕಾರ್ಪಣೆ

Pension and NAREGA money credited to farmers loans CM Siddaramaiah slams bank
ರಾಜಕೀಯ27 mins ago

CM Siddaramaiah: ಪಿಂಚಣಿ, ನರೇಗಾ ಹಣ ರೈತರ ಸಾಲಕ್ಕೆ ಜಮೆ; ಬ್ಯಾಂಕ್‌ ವಿರುದ್ಧ ಸಿಎಂ ಗರಂ! ಕೂಡಲೇ ನಿಲ್ಲಿಸಲು ಸೂಚನೆ

Canne Film Festival 2024
ಪ್ರಮುಖ ಸುದ್ದಿ30 mins ago

Canne Film Festival 2024: ಕಾನ್‌ ಫಿಲ್ಮ್ ಫೆಸ್ಟಿವಲ್‌ನ ರೆಡ್‌ ಕಾರ್ಪೆಟ್‌ನಲ್ಲಿ ತಾರೆಯರ ಫ್ಯಾಷನ್ ಕಲರವ!

Konkani Book Release
ಕಲೆ/ಸಾಹಿತ್ಯ34 mins ago

Konkani Book Release: ಇಟಾಲಿಯನ್-ಬ್ರಿಟಿಷ್ ಲೇಖಕ ರಚಿಸಿರುವ ಜಿಎಸ್‌ಬಿ ಕೊಂಕಣಿ ಮಾರ್ಗದರ್ಶಿ ಕೃತಿ ಬಿಡುಗಡೆ

MLC Meeting
ರಾಜಕೀಯ42 mins ago

MLC Election: ಬೆಂಗಳೂರು ಪದವೀಧರ ಕ್ಷೇತ್ರದ ಚುನಾವಣಾ ಪೂರ್ವಸಿದ್ಧತೆ ಸಭೆ; ಬಿಜೆಪಿ ಅಭ್ಯರ್ಥಿ ಅ. ದೇವೇಗೌಡ ಗೆಲುವಿಗೆ ರಣತಂತ್ರ

Arvind Kejriwal
ದೇಶ47 mins ago

Arvind Kejriwal: ಅಬಕಾರಿ ಕೇಸ್‌: ಕೇಜ್ರಿವಾಲ್‌ಗೆ ಬಿಗ್ ಶಾಕ್; ಇ.ಡಿ ಚಾರ್ಜ್‌ಶೀಟ್‌ನಲ್ಲಿ ಇವರೇ ಆರೋಪಿ!

HD Revanna case Hearing in Holenarasipura sexual assault case adjourned to Monday
ಹಾಸನ1 hour ago

HD Revanna Case: ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ ಕೇಸ್‌ ವಿಚಾರಣೆ ಸೋಮವಾರಕ್ಕೆ ಮುಂದೂಡಿಕೆ; ರೇವಣ್ಣಗೆ ಜೈಲಾ? ಬೇಲಾ?

Kanguva Film Suriya-Bobby Deol's war scene with 10,000 people
ಕಾಲಿವುಡ್1 hour ago

Kanguva Film: 10,000 ಜನರನ್ನು ಒಳಗೊಂಡಿತ್ತು ʻಕಂಗುವʼ ಚಿತ್ರದ ಸೂರ್ಯ-ಬಾಬಿ ಡಿಯೋಲ್‌ರ ಈ ದೃಶ್ಯ!

karnataka weather Forecast
ಮಳೆ1 hour ago

Karnataka Weather : ತುಮಕೂರಲ್ಲಿ ಸಿಡಿಲಿಗೆ ಜಾನುವಾರು ಬಲಿ; ಚಿಕ್ಕಮಗಳೂರಲ್ಲಿ ಮಳೆ ಅವಾಂತರಕ್ಕೆ ಜನ ತತ್ತರ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ12 hours ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ14 hours ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ1 day ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು1 day ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ2 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ3 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ3 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20243 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20243 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌