ಮಕ್ಕಳ ಕಥೆ: ಸೌಂದರ್ಯ ಎಂದರೇನು? - Vistara News

Latest

ಮಕ್ಕಳ ಕಥೆ: ಸೌಂದರ್ಯ ಎಂದರೇನು?

ಸಂತೆಯಿಂದ ಕನ್ನಡಿ ಕೊಂಡು ತಂದ ಆ ಕುಟುಂಬಕ್ಕೆ ಅದರಲ್ಲಿ ಕಂಡದ್ದೇನು? ತಂಗಿಯ ಮುಖ ಚೆಲುವಾಗಿ ಕಾಣುವಂತೆ ಮಾಡಿದ ಕನ್ನಡಿಯ ಮ್ಯಾಜಿಕ್‌ ಯಾವುದು? ಓದಿ, ಈ ಮಕ್ಕಳ ಕಥೆ.

VISTARANEWS.COM


on

mirror children story
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಈ ಕಥೆಯನ್ನು ಇಲ್ಲಿ ಕೇಳಿ:

ಒಂದೂರಿನಲ್ಲಿ ಅಮ್ಮ, ಅಪ್ಪ, ಅಣ್ಣ ಮತ್ತು ತಂಗಿಯ ಕುಟುಂಬವೊಂದು ವಾಸಿಸುತ್ತಿತ್ತು. ಅಣ್ಣ ಮತ್ತು ತಂಗಿ ನೋಡುವುದಕ್ಕೆ ಒಂದೇ ರೀತಿಯಲ್ಲಿ ಕಾಣುತ್ತಿದ್ದರು. ಆದರೆ ತಂಗಿಯ ಕೆನ್ನೆಯ ಮೇಲೆ ದೊಡ್ಡದಾದ ಕೆಂಪು ಮಚ್ಚೆಯೊಂದಿತ್ತು. ಒಂದು ದಿನ ಸಂತೆಯಿಂದ ಬರುವಾಗ ತಂದೆ ಬಣ್ಣದ ಕನ್ನಡಿಯೊಂದನ್ನು ತಂದರು. ಎಲ್ಲರೂ ಅದರಲ್ಲಿ ತಂತಮ್ಮ ಮುಖವನ್ನು ನೋಡಿ ಸಂಭ್ರಮಿಸುತ್ತಿದ್ದರು. ತನ್ನ ಚರ್ಮ ಸುಕ್ಕಾಗುತ್ತಿದೆ ಎಂದು ತಾಯಿಗೆ ಅನಿಸಿದರೆ, ತಲೆಯಲ್ಲಿ ಬಿಳಿಕೂದಲು ಬರುತ್ತಿದೆ ಎನ್ನುವುದು ತಂದೆಗೆ ತಿಳಿಯಿತು. ತನ್ನ ಚರ್ಮ ಹೊಳೆಯುತ್ತಿದೆ ಎಂದು ಅಣ್ಣ ಸಂಭ್ರಮಿಸಿದರೆ, ತನ್ನ ಮುಖದ ಅಂದಗೆಡಿಸುವಂಥ ದೊಡ್ಡದಾದ ಮಚ್ಚೆಯೊಂದಿದೆ ಎನ್ನುವುದು ತಂಗಿಗೆ ಕಂಡಿತು.

ʻಛೇ! ಇದೇನು ನನ್ನ ಮುಖ ಹೀಗಿದೆ, ಕೆಂಪು ಮಚ್ಚೆಯಿಂದ ಕುರೂಪವಾಗಿದೆʼ ಎಂದು ತಂಗಿ ಮಂಕಾಗಿ ಕುಳಿತಳು. ಆದರೆ ಅಣ್ಣ ಮಾತ್ರ ಪದೇಪದೆ ಕನ್ನಡಿಯಲ್ಲಿ ತನ್ನ ಮುಖ ನೋಡಿಕೊಂಡು ಸಂಭ್ರಮಿಸುತ್ತಿದ್ದ. ತಂಗಿಯೆದುರು ತನ್ನ ಚಂದವನ್ನು ಹಾಡಿ ಹೊಗಳಿಕೊಳ್ಳುತ್ತಿದ್ದ. ಮೊದಲೇ ಬೇಸರದಲ್ಲಿದ್ದ ತಂಗಿ ಈಗ ಕೋಪಿಸಿಕೊಂಡು ಕನ್ನಡಿಯನ್ನೇ ಒಡೆದುಹಾಕಿ ಅಳುತ್ತಾ ಹೊರಟುಹೋದಳು. ಅಣ್ಣನಿಗೆ ಮೊದಲಿಗೆ ಸಿಟ್ಟು ಬಂದರೂ, ಅಳುತ್ತಾ ಕುಳಿತ ತಂಗಿಯನ್ನು ಕಂಡು ಕನಿಕರವೆನಿಸಿತು. ಅವಳ ಈ ಅವಸ್ಥೆಯ ಬಗ್ಗೆ ತಂದೆ-ತಾಯಿಯರಲ್ಲಿ ಮಾತನಾಡಿದ.

ʻಅವಳ ಬೇಸರ ಹೆಚ್ಚಾಗುವಂತೆ ಅವಳೆದುರು ನೀನು ವರ್ತಿಸಬಾರದಿತ್ತು. ಹಾಗಾಗಿಯೇ ಅವಳು ಕನ್ನಡಿ ಒಡೆದು ಹಾಕಿದಳುʼ ಎಂದರು ಅಮ್ಮ. ಅಣ್ಣನಿಗೆ ಹೌದೆನಿಸಿತು. ʻತಾನು ಚಂದವೇ ಇಲ್ಲ ಎಂದು ಅವಳಿಗನ್ನಿಸಿದೆ. ಆದರೆ ಆಕೆ ಬಹಳ ಒಳ್ಳೆಯ ಮನಸ್ಸಿನ ಹುಡುಗಿʼ ಎಂದರು ಅಪ್ಪ. ಅಣ್ಣನಿಗೆ ಅದೂ ಹೌದೆನಿಸಿತು. ʻಹಾಗಾದರೆ, ಅವಳ ಒಳ್ಳೆಯತನವನ್ನು ತೋರಿಸುವ ಇನ್ನೊಂದು ಕನ್ನಡಿಯನ್ನು ತರೋಣವೇ ಸಂತೆಯಿಂದ?ʼ ಕೇಳಿದ ಅಣ್ಣ. ಅಮ್ಮ-ಅಪ್ಪನಿಗೆ ಈ ಸಲಹೆ ಒಪ್ಪಿಗೆಯಾಯಿತು. ಚಂದದ ಬದಲು ಗುಣವನ್ನು ತೋರಿಸುವ ಕನ್ನಡಿಯನ್ನೇ ಅರಸುತ್ತಾ ಎಲ್ಲರೂ ಸಂತೆಗೆ ತೆರಳಿದರು.

ಸಂತೆಯ ಮೂಲೆಯ ಜಾಗದಲ್ಲಿ ಅಜ್ಜಿಯೊಬ್ಬಳು ಹತ್ತಾರು ಕನ್ನಡಿಗಳೊಂದಿಗೆ ಕುಳಿತಿದ್ದಳು. ಅವಳ ಜೊತೆಗೊಂದು ಕೋತಿಯೂ ಇತ್ತು. ಅದು ಆಗಾಗ ಕನ್ನಡಿಯೊಂದರಲ್ಲಿ ಇಣುಕಿ ನೋಡಿ ಕೇಕೆ ಹಾಕುತ್ತಿತ್ತು. ಕುತೂಹಲದಿಂದ ಅದನ್ನೆತ್ತಿಕೊಂಡು ಇಣುಕಿ ನೋಡಿದ ಅಣ್ಣ. ಮೊದಲಿಗೆ ಅದರಲ್ಲಿ ತನ್ನ ಬಿಂಬ ಮಾತ್ರವೇ ಕಾಣಿಸಿತು ಆತನಿಗೆ. ಅಷ್ಟರಲ್ಲಿ ಆತ ಚಿಕ್ಕವನಿದ್ದಾಗ ತಂಗಿಗೆ ಹೊಡೆಯುವುದು, ಅವಳಿಗೆ ಪಾಠ ಅರ್ಥವಾಗದಿದ್ದರೆ ಪ್ರೀತಿಯಿಂದ ಹೇಳಿಕೊಡುವುದು- ಇಂಥವೆಲ್ಲಾ ಕಾಣತೊಡಗಿದವು. ʻಇದೇ… ಇದೇ ಕನ್ನಡಿ ನಮಗೆ ಬೇಕಾದ್ದುʼ ಎಂದು ಖುಷಿಯಿಂದ ನುಡಿದ ಅಣ್ಣ. ಅಪ್ಪ ಅದನ್ನು ಖರೀದಿಸಿದರು.

ಇದನ್ನೂ ಓದಿ: ಮಕ್ಕಳ ಕಥೆ: ಉಪಾಯ ಚತುರರಾದ ನಾಲ್ವರು ಗೆಳೆಯರು

ಎಲ್ಲರೂ ಸಂಭ್ರಮದಿಂದ ಆ ಕನ್ನಡಿಯನ್ನು ಮನೆಗೆ ತಂದು ತಂಗಿಯ ಮುಂದಿರಿಸಿದರು. ಅದನ್ನಾಕೆ ಕಣ್ಣೆತ್ತಿಯೂ ನೋಡಲಿಲ್ಲ. ʻಎಲ್ಲಾ ಕನ್ನಡಿಗಳೂ ತೋರಿಸುವುದು ಅದನ್ನೇ. ಸುಮ್ಮನೆ ಇದನ್ನೇಕೆ ಖರೀದಿ ಮಾಡಿದಿರಿ?ʼ ಎಂದು ಆಕೆ ಬೇಸರದಿಂದ ನುಡಿದಳು. ʻಎಲ್ಲವೂ ಒಂದೇ ಅಲ್ಲ ಮಗಳೇ. ಈ ಕನ್ನಡಿಯನ್ನೊಮ್ಮೆ ನೋಡುʼ ಎಂದರು ತಂದೆ. ಒಲ್ಲದ ಮನಸ್ಸಿನಿಂದ ಆ ಕನ್ನಡಿಯನ್ನೆತ್ತಿಕೊಂಡಳು ತಂಗಿ. ಮೆಲ್ಲನೊಮ್ಮೆ ಇಣುಕಿ ನೋಡಿದಳು. ಅದರಲ್ಲಿ ಕಂಡಿದ್ದು ಅವಳ ಅದೇ ಮಚ್ಚೆ ಇದ್ದ ಮುಖ. ಆದರೆ ಅಷ್ಟೇ ಅಲ್ಲ-

ಒಂದೂ ಆಟಿಕೆಯೇ ಇಲ್ಲದ ತನ್ನ ಗೆಳತಿಗೆ ತನ್ನದೇ ಆಟಿಕೆಯನ್ನು ಆಡಲು ಕೊಡುತ್ತಿದ್ದ ತಂಗಿ, ಲೆಕ್ಕ ತಪ್ಪಿ ಹೆಚ್ಚಿನ ಚಿಲ್ಲರೆ ಕೊಟ್ಟಿದ್ದ ಅಂಗಡಿಯವನ ಹಣವನ್ನು ಹಿಂದಿರುಗಿಸುತ್ತಿದ್ದ ತಂಗಿ, ರೆಕ್ಕೆ ಮುರಿದಿದ್ದ ಹಕ್ಕಿಯ ಆರೈಕೆ ಮಾಡುತ್ತಿದ್ದ ತಂಗಿ- ಹೀಗೆ ಅವಳದ್ದೇ ಹಲವಾರು ಬೇರೆಬೇರೆ ಬಿಂಬಗಳು ಅದರಲ್ಲಿ ಕಾಣುತ್ತಿದ್ದವು. ನಂಬಲಾರದೆ ಆಕೆ ಮತ್ತೆ ಆ ಕನ್ನಡಿಯಲ್ಲಿ ಇಣುಕಿದಳು. ಈಗ ಅವಳ ಮೊದಲಿನ ಮುಖವೇ ಕಾಣುತ್ತಿತ್ತು- ಆದರೆ ಆ ಮುಖವೀಗ ಕಳೆಯಿಂದ ಹೊಳೆಯುತ್ತಿತ್ತು, ಮಚ್ಚೆ ಇದ್ದರೂ ಮುಖ ಸುಂದರವಾಗಿಯೇ ಕಾಣುತ್ತಿತ್ತು. ಇದು ಹೇಗೆ ಸಾಧ್ಯ ಎಂಬ ಗೊಂದಲದಲ್ಲೇ ಇದ್ದಳು ತಂಗಿ.

ʻಸೌಂದರ್ಯ ಎಂದರೆ ಮೇಲ್ನೋಟದ ಚಂದ ಮಾತ್ರವೇ ಅಲ್ಲ, ನಮ್ಮ ವ್ಯಕ್ತಿತ್ವದ ಘನತೆಯಿಂದಲೂ ಮುಖದ ತೇಜಸ್ಸು ಹೊಳೆಯುತ್ತದೆ. ನಿನ್ನ ಮನಸ್ಸು ಒಳ್ಳೆಯದು ಮಗೂ, ಹಾಗಾಗಿ ಕನ್ನಡಿಯ ಬಿಂಬ ಸುಂದರವಾಗಿಯೇ ಕಾಣುತ್ತಿದೆʼ ಎಂದರು ಅಮ್ಮ. ತಂಗಿಯ ಮುಖ ಇನ್ನಷ್ಟು ಕಾಂತಿಯಿಂದ ಮಿನುಗುತ್ತಿತ್ತು.

ಇದನ್ನೂ ಓದಿ: ಮಕ್ಕಳ ಕಥೆ: ಪ್ರಾಮಾಣಿಕ ಅಜ್ಜಿ ಮತ್ತು ಧೂರ್ತ ಸಹಾಯಕ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Vijayapura News : ಪ್ರೀತಿಸಿದವಳನ್ನೇ ಮದುವೆಯಾಗಲು ಯುವಕನ ಹಠ; ಪರಸ್ಪರ ಪೆಟ್ರೋಲ್ ಎರಚಿ ಬೆಂಕಿ ಹಚ್ಚಿಕೊಂಡು ಆಸ್ಪತ್ರೆ ಸೇರಿದರು!

Vijayapura News: ಘಟನೆಯಲ್ಲಿ ಯಾರು ಯಾರಿಗೆ ಪೆಟ್ರೋಲ್ ಎರಚಿ ಹತ್ಯೆಗೆ ಯತ್ನಿಸಿದರು ಅನ್ನೋದು ತನಿಖೆಯಿಂದ ಹೊರಬರಬೇಕಿದೆ. ತಮ್ಮ ಪ್ರೀತಿಗೆ ಮೋಸವಾಗಿದ್ದು ರಾಹುಲ್ ಸಿಟ್ಟಿಗೆ ಕಾರಣವಾಗಿತ್ತು. ಇನ್ನೊಂದು ಕಡೆಗೆ ರಾಹುಲ್​ ಕಿರುಕುಳದಿಂದ ಯುವತಿ ಮನೆಯವರು ಬೇಸತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ.

VISTARANEWS.COM


on

Vijayapura news
Koo

ವಿಜಯಪುರ : ತಮ್ಮ ಮಗಳನ್ನು ಮದುವೆಯಾಗಲು ಬಂದ ಆಕೆಯ ಪ್ರಿಯಕರನ ಮೇಲೆ ಪೋಷಕರೇ ಪೆಟ್ರೋಲ್​ ಹಾಕಿ ಸುಟ್ಟಿರುವ ಪ್ರಕರಣವೊಂದು ವಿಜಯಪುರ ಜಿಲ್ಲೆಯ (Vijayapura News) ಮುದ್ದೇಬಿಹಾಳ ಪಟ್ಟಣದಲ್ಲಿ ನಡೆದಿದೆ. ಅದರೆ, ಯುವತಿಯ ಪೋಷಕರು ಇದನ್ನು ನಿರಾಕರಿಸಿದ್ದು ಮಗಳನ್ನು ಕೊಡದಿರಲು ನಿರ್ಧರಿಸಿದ ನಮ್ಮನ್ನು ಸುಡಲು ಯುವಕ ಪೆಟ್ರೋಲ್ ತಂದಿದ್ದ ಎಂದು ಆರೋಪಿಸಿದ್ದಾರೆ. ಘಟನೆಯಲ್ಲಿ ಪ್ರಿಯಕರ ರಾಹುಲ್​ ರಾಮನಗೌಡ ಬಿರಾದಾರ ಸುಟ್ಟ ಗಾಯಗಳು ಹಾಗೂ ಮಾರಕಾಸ್ತ್ರಗಳ ಪೆಟ್ಟಿನಿಂದ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಯುವತಿಯ ಮನೆಯ ನಾಲ್ವರು ಆಸ್ಪತ್ರೆ ಸೇರಿದ್ದಾರೆ. ಘಟನೆ ಬಗ್ಗೆ ಎರಡೂ ಕಡೆಯಿಂದ ದೂರು ಹಾಗೂ ಪ್ರತಿದೂರು ದಾಖಲಾಗಿದೆ.

ಆಸ್ಪತ್ರೆ ಸೇರಿರುವ ಢವಳಗಿ ಗ್ರಾಮದ ರಾಹುಲ್ ರಾಮನಗೌಡ ಬಿರಾದಾರ ಅವರ ಕುಟುಂಬಸ್ಥರು ಆತನ ಪ್ರಿಯತಮೆ ಐಶ್ವರ್ಯ ಮದರಿ ಅವರ ಚಿಕ್ಕಪ್ಪ ಮುತ್ತು ಮದರಿ, ಚಿಕ್ಕಮ್ಮ ಸೀಮಾ ಮದರಿ ಎಂಬುವರ ಮೇಲೆ ದೂರು ದಾಖಲಿಸಿದ್ದಾರೆ. ಕನ್ಯೆ ಕೇಳಲು ಹೋದ ನಮ್ಮಣ್ಣನಿಗೆ ಬೆಂಕಿ ಹಾಕಿ ಸುಟ್ಟು ರಾಡ್​ನಿಂದ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಿದ್ದಾರೆ. ಆದರೆ ಐಶ್ವರ್ಯ ಸೇರಿದಂತೆ ಅವರ ಕುಟುಂಬಸ್ಥರು ಮದುವೆಗೆ ಒಪ್ಪದ ನಮ್ಮನ್ನು ಸುಡಲು ರಾಹುಲ್ ಯತ್ನಿಸಿದ್ದಾನೆ ಎಂದು ದೂರು ನೀಡಿದ್ದಾರೆ. ಶೇಕಡಾ 70ರಷ್ಟು ಸುಟ್ಟ ಗಾಯಗಳಿಗೆ ಒಳಗಾಗಿರುವ ರಾಹುಲ್​ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಏನಿದು ಪ್ರಕರಣ?

ರಾಹುಲ್ ರಾಮನಗೌಡ ಬಿರಾದಾರ ಅವರು ಐಶ್ವರ್ಯ ಎಂಬ ಯುವತಿಯನ್ನು ಪ್ರೀತಿಸುತ್ತಿದ್ದ. ಮೂರು ವರ್ಷದಿಂದ ಪರಸ್ಪರ ಪ್ರೀತಿಯ ಬಲೆಯಲ್ಲಿ ಬಿದ್ದಿದ್ದರು. ಅಂತೆಯೇ ಅವರು ಮದುವೆಯಾಗಲು ನಿರ್ಧರಿಸಿದ್ದರು. ಇಬ್ಬರ ಪ್ರೀತಿ ವಿಚಾರ ತಿಳಿದ ಯುವತಿಯ ಪೋಷಕರು ಹುಡುಗನ ಮನೆಯವರಿಗೆ ಬರಲು ಹೇಳಿದ್ದರು. ಅವರು ಅಲ್ಲಿಗೆ ಹೋಗಿದ್ದಾಗ ಯುವತಿ ಮದುವೆ ನಿರಾಕರಿಸಿದ್ದಳು. ಆತನ ಗುಣ ಸರಿ ಇಲ್ಲ, ಹೀಗಾಗಿ ನಾನು ಮದ್ವೆಯಾಗಲ್ಲ ಎಂದು ಹೇಳಿದ್ದಳು. ಹುಡುಗಿ ಮದುವೆ ನಿರಾಕರಣೆ ಮಾಡಿದ್ದಾಳೆ ಎಂದು ರಾಹುಲ್ ಮನೆಯವರು ವಾಪಸ್ ಹೋಗಿದ್ದರು.

ಪ್ರೀತಿಸಿದ ಹುಡುಗಿಯೇ ಸಿಗಬೇಕು ಹಠ ಹಿಡಿದು ರಾಹುಲ್​ ಮತ್ತೆ ಹುಡುಗಿ ಮನೆಗೆ ಹೋಗಿದ್ದ. ಅಲ್ಲದೆ, ಮದುವೆಯಾಗದೇ ಹೋದರೆ ತಾವಿಬ್ಬರು ಜತೆಗಿದ್ದ ಫೋಟೋಗಳನ್ನು ಸೋಷಿಯಲ್ ಮೀಡಿಯಾಗಳಲ್ಲಿ ಪೋಸ್ಟ್ ಮಾಡುವುದಾಗಿ ಬೆದರಿಸಿದ್ದ. ಫೋಟೋ ಬೆದರಿಕೆಗೆ ತಣ್ಣಾಗಾದ ಯುವತಿಯ ಕುಟುಂಬಸ್ಥರು ಆಕೆ ಒಪ್ಪಿದರೆ ಲಗ್ನ ಮಾಡಿ ಕೊಡುವುದಾಗಿ ರಾಜಿ ಮಾಡಿ ಕಳುಹಿಸಿದ್ದರು. ಆ ಬಳಿಕವೂ ವಿವಾದ ಮುಂದುವರಿದಿತ್ತು. ಅಲ್ಲದೆ, ಹಲವು ಬಾರಿ ರಾಜಿ ಪಂಚಾಯತಿ ಕೂಡಾ ಮಾಡಲಾಗಿತ್ತು.

ಇದನ್ನೂ ಓದಿ: Mandya News : ಬೆಳ್ಳೂರಿನಲ್ಲಿ ಮುಸ್ಲಿಮ್ ಯುವಕರ ಗುಂಪಿನಿಂದ ಅಭಿಲಾಷ್​ ಎಂಬುವರ ಮೇಲೆ ಮಾರಕ ಹಲ್ಲೆ

ಸೋಮವಾರ ಮತ್ತೆ ರಾಹುಲ್ ಬಿರಾದಾರ ಐಶ್ವರ್ಯಾ ಮನೆಗೆ ಮತ್ತೆ ಹೋಗಿದ್ದ. ಈ ವೇಳೆ ಮತ್ತೆ ಮಾತುಕತೆ ನಡೆದಿದೆ. ಐಶ್ವರ್ಯಾ ಪೋಷಕರ ಪ್ರಕಾರ ಆತ ಮಾತುಕತೆಗೆ ಬರುವಾಗ ಪೆಟ್ರೋಲ್ ತಂದಿದ್ದ. ಅದನ್ನು ನಮ್ಮ ಮೇಲೆ ಹಾಕಿ ಸುಡಲು ಯತ್ನಿಸಿದ್ದ. ಆದರೆ, ಯುವಕನ ಪೋಷಕರು ಹೇಳುವ ಪ್ರಕಾರ ಐಶ್ವರ್ಯಾ ಅವರ ಪೋಷಕರು ರಾಹುಲ್ ಕೈಯಲ್ಲಿದ್ದ ಮೊಬೈಲ್ ಕಸಿಯಲು ಯತ್ನಿಸಿದ್ದಾರೆ. ಕೊಡದೇ ಹೋದಾಗ ರಾಡ್​ನಿಂದ ತಲೆಗೆ ಹಲ್ಲೆ ಮಾಡಿದ್ದಾರೆ. ಬಳಿಕ ಮೊದಲೇ ತಂದಿಟ್ಟಿದ್ದ ಪೆಟ್ರೋಲ್​ನಿಂದ ಸುಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಬಸವನ ಬಾಗೇವಾಡಿ ಡಿಎಸ್ಪಿ ಬಾಳಪ್ಪ ನಂದಗಾಂವ, ಸಿಪಿಐ ಮಲ್ಲಿಕಾರ್ಜುನ ತುಳಸೀಗೇರಿ, ಪಿಎಸೈಗಳಾದ ಸಂಜಯ್ ತಿಪ್ಪರಡ್ಡಿ, ಎಸ್.ಆರ್.ನಾಯಕ ಅವರು ಭೇಟಿ ನೀಡಿ ತನಿಖೆ ಕೈಕೊಂಡಿದ್ದಾರೆ. ವಿಜಯಪುರದಿಂದ ಆಗಮಿಸಿದ್ದ ವಿಶೇಷ ತಂಡ ಘಟನಾ ಸ್ಥಳದಲ್ಲಿನ ಬೆರಳಚ್ಚು ಸೇರಿ ಹಲವು ಸಾಕ್ಷ್ಯಗಳನ್ನು ಸಂಗ್ರಹಿಸಿದೆ.

ಘಟನೆಯಲ್ಲಿ ಯಾರು ಯಾರಿಗೆ ಪೆಟ್ರೋಲ್ ಎರಚಿ ಹತ್ಯೆಗೆ ಯತ್ನಿಸಿದರು ಅನ್ನೋದು ತನಿಖೆಯಿಂದ ಹೊರಬರಬೇಕಿದೆ. ತಮ್ಮ ಪ್ರೀತಿಗೆ ಮೋಸವಾಗಿದ್ದು ರಾಹುಲ್ ಸಿಟ್ಟಿಗೆ ಕಾರಣವಾಗಿತ್ತು. ಇನ್ನೊಂದು ಕಡೆಗೆ ರಾಹುಲ್​ ಕಿರುಕುಳದಿಂದ ಯುವತಿ ಮನೆಯವರು ಬೇಸತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ.

Continue Reading

ಪ್ರಮುಖ ಸುದ್ದಿ

Prajwal Revanna Case : ವಿಡಿಯೋ ಹಂಚಿದ ಆರೋಪಿ ಚೇತನ್​ಗೆ ಎಸ್ಐಟಿ ನೋಟಿಸ್

Prajwal Revanna Case: ಮಂಗಳವಾರ (ಮೇ 27ರಂದು) ನಾಳೆ ಯಾವುದೇ ಪರಿಸ್ಥಿತಿಯಲ್ಲಿ ಸಿಐಡಿ ಕಚೇರಿಗೆ ಹಾಜರಾಗಿ ವಿಚಾರಣೆಗೆ ಒಳಪಡಬೇಕು ಎಂದು ಎಸ್ಐಟಿ ತಿಳಿಸಿದೆ. ಪೆನ್ ಡ್ರೈವ್ ಪ್ರಕರಣ ಸದ್ದು ಮಾಡಿದಾಗ ಅದರಲ್ಲಿ ಕೇಳಿ ಬಂದ ಹೆಸರಗಳಲ್ಲಿ ಒಂದು ಹೆಸರು ಚೇತನ್​. ಸದ್ಯ ಎಸ್ಐಟಿ ಯಿಂದ ಚೇತನ್ ಗೌಡ ಗೆ ನೋಟಿಸ್ ಜಾರಿ ಮಾಡಲಾಗಿದ್ದು ವಿಚಾರಣೆ ಬಳಿಕ ಮುಂದಿನ ಕ್ರಮ ಕೈಗೊಳ್ಳುವ ಸಾಧ್ಯತೆಗಳಿವೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಪ್ರಜ್ವಲ್ ರೇವಣ್ಣಗೆ ಸೇರಿದ್ದು ಎನ್ನಲಾದ ಲೈಂಗಿಕ ದೌರ್ಜನ್ಯದ ವಿಡಿಯೊ ಹಗರಣದ (Prajwal Revanna Case ) ಸಂಬಂಧ ತನಿಖೆ ನಡೆಸುತ್ತಿರುವ ಎಸ್​ಐಟಿ ಪೊಲೀಸರು ವಿಡಯೋ ಹಂಚಿದ ಸಂಬಂಧವಾಗಿ ಚೇತನ್ ಗೌಡ ಎಂಬಾತನಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಹಾಸನದ ಸೆನ್ ಪೋಲಿಸ್ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನೋಟಿಸ್ ಜಾರಿ ಮಾಡಿದ್ದಾರೆ.

ಮಂಗಳವಾರ (ಮೇ 27ರಂದು) ನಾಳೆ ಯಾವುದೇ ಪರಿಸ್ಥಿತಿಯಲ್ಲಿ ಸಿಐಡಿ ಕಚೇರಿಗೆ ಹಾಜರಾಗಿ ವಿಚಾರಣೆಗೆ ಒಳಪಡಬೇಕು ಎಂದು ಎಸ್ಐಟಿ ತಿಳಿಸಿದೆ. ಪೆನ್ ಡ್ರೈವ್ ಪ್ರಕರಣ ಸದ್ದು ಮಾಡಿದಾಗ ಅದರಲ್ಲಿ ಕೇಳಿ ಬಂದ ಹೆಸರುಗಳಲ್ಲಿ ಒಂದು ಹೆಸರು ಚೇತನ್​. ಸದ್ಯ ಎಸ್ಐಟಿ ಯಿಂದ ಚೇತನ್ ಗೌಡಗೆ ನೋಟಿಸ್ ಜಾರಿ ಮಾಡಲಾಗಿದ್ದು ವಿಚಾರಣೆ ಬಳಿಕ ಮುಂದಿನ ಕ್ರಮ ಕೈಗೊಳ್ಳುವ ಸಾಧ್ಯತೆಗಳಿವೆ.

ಇಬ್ಬರು ಚೇತನ್ ಈ ಪ್ರಕರಣದಲ್ಲಿ ಇದ್ದಾರೆ. ಒಬ್ಬ ಈಗಾಗಲೇ ಆರೆಸ್ಟ್ ಆಗಿದ್ದಾನೆ. ಆರೆಸ್ಟ್ ಆದವನು ಪ್ರೀತಂ ಗೌಡ ಆಪ್ತ. ಈಗ ನೋಟೀಸ್ ಬಂದಿರುವುದು ಇನ್ನೊಬ್ಬನಿಗೆ.

ನಾಳೆ ಚೇತನ್ ಗೌಡ ವಿಚಾರಣೆಗೆ ಹಾಜರಾಗುವ ಸಾಧ್ಯತೆಯಿದ್ದು, ಬೆಳಗ್ಗೆ 11 ಗಂಟೆ ಮೊದಲು ಬರಲು ಸೂಚನೆ ನೀಡಲಾಗಿದೆ. ಹೀಗಾಗಿ ಚೇತನ್​ 10 ಗಂಟೆ ಸುಮಾರಿಗೆ ಸಿಐಡಿ ಕಚೇರಿಗೆ ಬರಲಿದ್ದಾರೆ. ಪೆನ್ ಡ್ರೈವ್ ಲೀಕ್ ವಿಚಾರವಾಗಿ ಚೇತನ್ ಗೌಡ ನನ್ನು ಎಸ್.ಐ.ಟಿ ವಿಚಾರಿಸುವ ಸಾಧ್ಯತೆ ಇದೆ.

ಪ್ರಜ್ವಲ್‌ ಬಂದ್ರೆ ಎಸ್‌ಐಟಿ ಮುಂದೆ ನಾನೂ ಹಾಜರಾಗುವೆ: ಆರೋಪಿ ನವೀನ್‌ ಗೌಡ

ಪ್ರಜ್ವಲ್‌ ರೇವಣ್ಣ ಅವರು ಬರಲಿ ವಿಚಾರಣೆ ಎದುರಿಸಲಿ. ಸಂತ್ರಸ್ತೆಯರಲ್ಲಿ ಜೆಡಿಎಸ್‌ ಕಾರ್ಯಕರ್ತರೆಯರೇ ಹೆಚ್ಚಾಗಿದ್ದಾರೆ. ಅವರಿಗೆಲ್ಲ ನ್ಯಾಯ ದೊರಕಬೇಕು. ಪ್ರಜ್ವಲ್‌ ಕೇಸ್‌ನಿಂದ (Prajwal Revanna Case) ಎಷ್ಟೋ ಜನ ಹೆಣ್ಣು ಮಕ್ಕಳು ತಲೆ ಎತ್ತಿ ಓಡಾಡಲು ಆಗುತ್ತಿಲ್ಲ. ಎಸ್‌ಐಟಿ ಮುಂದೆ ವಿಚಾರಣೆಗೆ ಅವರೂ ಬರಲಿ, ನಾನೂ ಹಾಜರಾಗುತ್ತೇನೆ ಎಂದು ಅಶ್ಲೀಲ ವಿಡಿಯೊ ವೈರಲ್‌ ಪ್ರಕರಣದ ಆರೋಪಿ, ತಲೆಮರೆಸಿಕೊಂಡಿರುವ ನವೀನ್‌ ಗೌಡ ಹೇಳಿದ್ದಾನೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ಪ್ರತ್ಯಕ್ಷವಾದ ಬೆನ್ನಲ್ಲೇ ನಿರೀಕ್ಷಣಾ ಜಾಮೀನಿಗೆ ಭವಾನಿ ರೇವಣ್ಣ ಅರ್ಜಿ

ವಿದೇಶದಲ್ಲಿರುವ ಪ್ರಜ್ವಲ್‌ ರೇವಣ್ಣ ಮೇ 31ರಂದು ಬೆಂಗಳೂರಿಗೆ ಆಗಮಿಸುತ್ತೇನೆ ಎಂದು ಹೇಳಿದ ಬೆನ್ನಲ್ಲೇ ನವೀನ್‌ ಗೌಡ ವಿಸ್ತಾರ ನ್ಯೂಸ್‌ಗೆ ಪ್ರತಿಕ್ರಿಯೆ ನೀಡಿದ್ದಾನೆ.

ಅಶ್ಲೀಲ ವಿಡಿಯೊ ಆರೋಪದಲ್ಲಿ ಏ. 23ರಂದು ನನ್ನ ಮೇಲೆಯೂ ಎಫ್‌ಐಆರ್‌ ದಾಖಲಿಸಿದ್ದಾರೆ. ಹಾಸನದಲ್ಲಿ ಕಳೆದ 10 ವರ್ಷದಲ್ಲಿ ಎಷ್ಟು ಹೆಣ್ಣು ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಹಾಗೂ ನಾಪತ್ತೆಯಾಗಿದ್ದಾರೆ ಎಂಬುವುದು ಮರು ತನಿಖೆಯಾಗಬೇಕಿದೆ. ಈ ಆತ್ಮಹತ್ಯೆಗಳಿಗೂ ಕೂಡ ಪ್ರಜ್ವಲ್‌ ರೇವಣ್ಣಗೆ ಸಂಬಂಧವಿದೆ. ಎಸ್‌ಐಟಿಯವರುವ ವಿಚಾರಣೆಗೆ ನನ್ನನ್ನು ಕರೆದಿಲ್ಲ. ಅವರು ಕರೆದರೆ ನಾನು ಹೋಗುತ್ತೇನೆ. ನಾನು ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಹಾಕಿದ್ದಕ್ಕೆ ಕೇಸ್‌ ಹಾಕಿದ್ದಾರೆ ಹೇಳಿದ್ದಾನೆ.

ಅಶ್ಲೀಲ ವಿಡಿಯೊ ವಿಷಯ ಬಹಿರಂಗಪಡಿಸದಂತೆ ನನಗೂ ಪ್ರಜ್ವಲ್‌ ರೇವಣ್ಣ ಅವರು ಆಮಿಷ ಒಡ್ಡಿದ್ದರು. ಅವರ ಸಹಚರನನ್ನು ನನ್ನ ಭೇಟಿಯಾಗಲು ಕಳುಹಿಸಿದ್ದರು ಎಂದು ಆರೋಪಿಸಿದ್ದಾನೆ.

ನವೀನ್‌ ಗೌಡ ಯಾರು?

ನವೀನ್‌ ಗೌಡ ಕಾಂಗ್ರೆಸ್‌ ಕಾರ್ಯಕರ್ತರಾಗಿದ್ದು, ಶಾಸಕ ಜಮೀರ್‌ ಅಹಮ್ಮದ್‌ ಆಪ್ತರಲ್ಲೊಬ್ಬನಾಗಿದ್ದಾರೆ ಎಂದು ಹೇಳಲಾಗಿದೆ. ಅಲ್ಲದೆ, ಈತ ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಶ್ರೇಯಸ್‌ ಪಟೀಲ್‌ಗೂ ಆಪ್ತರಾಗಿದ್ದರು. ಚುನಾವಣೆ ವೇಳೆ ಶ್ರೇಯಸ್‌ ಪರವಾಗಿ ಪ್ರಚಾರವನ್ನೂ ಮಾಡಿದ್ದ. ಈತನೇ ಹಾಸನ ಜಿಲ್ಲಾದ್ಯಂತ ಪೆನ್‌ಡ್ರೈವ್‌ ಅನ್ನು ಹಂಚಿಕೆ ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದಿತ್ತು. ಹೀಗಾಗಿ ನವೀನ್ ಗೌಡ ಮೇಲೆ ಏ.23ರಂದು ಹಾಸನ ಸೆನ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಎಫ್‌ಐಆರ್ ಬಳಿಕ ನವೀನ್ ಗೌಡ ನಾಪತ್ತೆಯಾಗಿದ್ದ. ಆದರೆ, ಭಾನುವಾರ ಫೇಸ್‌ಬುಕ್‌ನಲ್ಲಿ ದಿಢೀರನೆ ಪ್ರತ್ಯಕ್ಷ

Continue Reading

ಕ್ರೀಡೆ

Yuvraj Singh : ಅಪಾರ್ಟ್​ಮೆಂಟ್ ವಿತರಣೆಯಲ್ಲಿ ಮೋಸ, ರಿಯಲ್ ಎಸ್ಟೇಟ್ ಸಂಸ್ಥೆಗಳಿಗೆ ನೋಟಿಸ್​ ಕೊಟ್ಟ ಯುವರಾಜ್ ಸಿಂಗ್

Yuvraj Singh : ಈ ಸಂಸ್ಥೆಗಳು ಭರವಸೆ ನೀಡಿದಂತೆ ಸ್ವಾಧೀನದ ದೃಷ್ಟಿಯಿಂದ ಯೋಜನೆಗಳ ವಿತರಣೆಯನ್ನು ಸಹ ಸರಿಯಾದ ಸಮಯದಲ್ಲಿ ಪೂರೈಸಲಾಗಿಲ್ಲ ಎಂದು ಸಿಂಗ್ ಹೇಳಿದ್ದಾರೆ. ವಿಶೇಷವೆಂದರೆ, ಮಾಜಿ ಕ್ರಿಕೆಟ್ ತಾರೆ 2020 ರಲ್ಲಿ ದೆಹಲಿಯ ಹೌಜ್ ಖಾಸ್ ಪ್ರದೇಶದಲ್ಲಿ ವಸತಿ ಘಟಕವನ್ನು ಕಾಯ್ದಿರಿಸಿದ್ದರು.

VISTARANEWS.COM


on

Yuvraj Singh
Koo

ನವದೆಹಲಿ: ಟೀಮ್ ಇಂಡಿಯಾದ ಮಾಜಿ ಆಲ್​ರೌಂಡರ್ ಯುವರಾಜ್ ಸಿಂಗ್ (Yuvraj Singh)​ ಅವರು ದೆಹಲಿ ಮೂಲದ ರಿಯಲ್ ಎಸ್ಟೇಟ್ ಸಂಸ್ಥೆಗಳಿಗೆ ಎರಡು ಕಾನೂನು ನೋಟಿಸ್ ನೀಡಿದ್ದಾರೆ. ಈ ಸಂಸ್ಥೆಗಳು ನಡೆಸುವ ಯೋಜನೆಗಳಿಗೆ ಮೋಸದ ಪ್ರಚಾರ ಚಟುವಟಿಕೆಗಳ ಮೂಲಕ ಗೌಪ್ಯತೆ ಹಕ್ಕುಗಳ ಉಲ್ಲಂಘನೆ ಮಾಡಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಈ ಸಂಸ್ಥೆಗಳು ಭರವಸೆ ನೀಡಿದಂತೆ ಸ್ವಾಧೀನದ ದೃಷ್ಟಿಯಿಂದ ಯೋಜನೆಗಳ ವಿತರಣೆಯನ್ನು ಸಹ ಸರಿಯಾದ ಸಮಯದಲ್ಲಿ ಪೂರೈಸಲಾಗಿಲ್ಲ ಎಂದು ಸಿಂಗ್ ಹೇಳಿದ್ದಾರೆ. ವಿಶೇಷವೆಂದರೆ, ಮಾಜಿ ಕ್ರಿಕೆಟ್ ತಾರೆ 2020 ರಲ್ಲಿ ದೆಹಲಿಯ ಹೌಜ್ ಖಾಸ್ ಪ್ರದೇಶದಲ್ಲಿ ವಸತಿ ಘಟಕವನ್ನು ಕಾಯ್ದಿರಿಸಿದ್ದರು. ಯುವರಾಜ್ ಸಿಂಗ್ ಅವರನ್ನು ಪ್ರತಿನಿಧಿಸುವ ರಿಜ್ವಾನ್ ಲಾ ಅಸೋಸಿಯೇಟ್ಸ್ ಎಂಬ ಕಾನೂನು ಸಂಸ್ಥೆಯು ಯೋಜನೆಯ ವಿಳಂಬದಿಂದಾಗಿ ಉಂಟಾದ ಹಾನಿಯ ಕ್ಲೇಮ್​ನೊಂದಿಗೆ ನೋಟಿಸ್ ನೀಡಿದೆ.

ಇದನ್ನೂ ಓದಿ: Kavya Maran : ಸೋತಾಗ ಕಣ್ಣೀರು ಹಾಕಿದ ಕಾವ್ಯಾ ಮಾರನ್​, ​ ಡ್ರೆಸಿಂಗ್​ ರೂಮ್​ಗೆ ತೆರಳಿ ಆಟಗಾರರನ್ನೇ ನಗಿಸಿದರು; ಇಲ್ಲಿದೆ ವಿಡಿಯೊ

ಸಿಂಗ್ ಅವರಿಗೆ ಪ್ರೀಮಿಯಂ ಗುಣಮಟ್ಟದ ಅಪಾರ್ಟ್​ಮೆಂಟ್​ ಕೊಡುವೆ ಭರವಸೆ ನೀಡಲಾಗಿತ್ತು. ಆದರೆ ರಿಯಲ್ ಎಸ್ಟೇಟ್ ಕಡಿಮೆ ಗುಣಮಟ್ಟದ ಅಪಾರ್ಟ್​​ಮೆಂಟ್​ ಮಂಜೂರು ಮಾಡುವ ಮೂಲಕ ಮೋಸ ಮಾಡಿದೆ ಎಂದು ಆರೋಪಿಸಲಾಗಿದೆ. ವಿಶೇಷವೆಂದರೆ, ಈ ಯೋಜನೆ ಮೆಸರ್ಸ್ ಉಪ್ಪಲ್ ಹೌಸಿಂಗ್ ಪ್ರೈವೇಟ್ ಲಿಮಿಟೆಡ್​ ಸೇರಿದೆ. ಬೌದ್ಧಿಕ ಆಸ್ತಿ ಹಕ್ಕುಗಳನ್ನು ಉಲ್ಲಂಘಿಸಿದ್ದಕ್ಕಾಗಿ ಮತ್ತು ಗೌಪ್ಯತೆ ಹಕ್ಕುಗಳ ಉಲ್ಲಂಘನೆಗಾಗಿ ಮೆಸರ್ಸ್ ಬ್ರಿಲಿಯಂಟ್ ಎಟೋಯಿಲ್ ಪ್ರೈವೇಟ್ ಲಿಮಿಟೆಡ್ ಎಂಬ ಮತ್ತೊಂದು ಸಂಸ್ಥೆಗೆ ಎರಡನೇ ನೋಟಿಸ್ ನೀಡಲಾಗಿದೆ.

ಈ ವಿವಾದವು ಮುಖ್ಯವಾಗಿ ವ್ಯಕ್ತಿತ್ವ ಹಕ್ಕುಗಳಿಗೆ ಸಂಬಂಧಿಸಿದಂತೆ ಬೌದ್ಧಿಕ ಆಸ್ತಿ ಹಕ್ಕುಗಳ ಉಲ್ಲಂಘನೆ ಮತ್ತು ಸೆಲೆಬ್ರಿಟಿಯ ಬ್ರಾಂಡ್ ಮೌಲ್ಯದ ದುರುಪಯೋಗಕ್ಕೆ ಸಂಬಂಧಿಸಿದೆ.

ಒಪ್ಪಂದವು ಕಳೆದ ವರ್ಷ ನವೆಂಬರ ನಲ್ಲಿ ಮುಕ್ತಾಯಗೊಂಡಿತ್ತು

ರಿಯಲ್ ಎಸ್ಟೇಟ್ ಸಂಸ್ಥೆ ಕೈಗೊಂಡ ಯೋಜನೆಗಳ ಪ್ರಚಾರ ಮತ್ತು ಅನುಮೋದನೆಗೆ ಸಂಬಂಧಿಸಿದಂತೆ ಸಂಬಂಧಿತ ಪಕ್ಷಗಳು ತಿಳಿವಳಿಕೆ ಒಪ್ಪಂದಕ್ಕೆ (ತಿಳಿವಳಿಕೆ ಒಪ್ಪಂದ) ಸಹಿ ಹಾಕಿರುವುದು ಅತ್ಯಗತ್ಯ. ಆದಾಗ್ಯೂ, ಈ ತಿಳಿವಳಿಕೆ ಒಪ್ಪಂದವು ಕಳೆದ ವರ್ಷ ನವೆಂಬರ್ 23 ರಂದು ಕೊನೆಗೊಂಡಿತು. ಅದರ ಹೊರತಾಗಿಯೂ, ಸಂಸ್ಥೆಯು ಯುವರಾಜ್ ಸಿಂಗ್ ಅವರ ಹೆಸರನ್ನು ಬಿಲ್ಬೋರ್ಡ್ ಜಾಹೀರಾತುಗಳ ಮೂಲಕ ಮತ್ತು ಯೋಜನಾ ಸ್ಥಳದಲ್ಲಿ ಬಳಸುವುದನ್ನು ಮುಂದುವರಿಸಿತ್ತು.

ಸಂಸ್ಥೆಯು ಸುದ್ದಿ ಲೇಖನಗಳ ಜೊತೆಗೆ ಅವರ ವ್ಯಕ್ತಿತ್ವವನ್ನು ತಮ್ಮ ಸಾಮಾಜಿಕ ಮಾಧ್ಯಮ ಅಭಿಯಾನಗಳಲ್ಲಿ ಬಳಸುವ ಮೂಲಕ ಉಲ್ಲಂಘನೆ ಮುಂದುವರಿಸಿತ್ತು. ಇದರಿಂದಾಗಿ ಕೃತಿಸ್ವಾಮ್ಯ, ಪ್ರಚಾರದ ಹಕ್ಕು ಮತ್ತು ವ್ಯಕ್ತಿತ್ವದ ಹಕ್ಕುಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಯುವರಾಜ್ ಸಿಂಗ್ ಆರೋಪಿಸಿದ್ದಾರೆ.

Continue Reading

ಪ್ರಮುಖ ಸುದ್ದಿ

Kavya Maran : ಸೋತಾಗ ಕಣ್ಣೀರು ಹಾಕಿದ ಕಾವ್ಯಾ ಮಾರನ್​, ​ ಡ್ರೆಸಿಂಗ್​ ರೂಮ್​ಗೆ ತೆರಳಿ ಆಟಗಾರರನ್ನೇ ನಗಿಸಿದರು; ಇಲ್ಲಿದೆ ವಿಡಿಯೊ

Kavya Maran: ಈ ಋತುವಿನಲ್ಲಿ ಎಲ್ಲಾ ಬ್ಯಾಟಿಂಗ್ ದಾಖಲೆಗಳನ್ನು ಮುರಿದ ರೀತಿಗೆ ನಿಜವಾಗಿಯೂ ಹೆಮ್ಮೆಯಿದೆ ಎಂದು ಕಾವ್ಯಾ ತಮ್ಮ ಭಾಷಣದಲ್ಲಿ ಉಲ್ಲೇಖಿಸಿದ್ದಾರೆ. ಐಪಿಎಲ್ 2023 ರಲ್ಲಿ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನ ಪಡೆದ ನಂತರ ಫೈನಲ್ ತಲುಪಿದ ಪ್ಯಾಟ್ ಕಮಿನ್ಸ್ ನೇತೃತ್ವದ ತಂಡಕ್ಕೆ ಅವರು ತಮ್ಮ ಭಾಷಣದಲ್ಲಿ ಕೃತಜ್ಞತೆ ಸಲ್ಲಿಸಿದ್ದಾರೆ.

VISTARANEWS.COM


on

Kavya Maran
Koo

ಚೆನ್ನೈ: ಐಪಿಎಲ್ 2024ರ (IPL 2024) ಆವೃತ್ತಿಯ ಫೈನಲ್​​ನಲ್ಲಿ ಕೆಕೆಆರ್ ವಿರುದ್ಧದ ಸೋಲಿನ ನಂತರ ಎಸ್​ಆರ್​ಎಚ್​ ತಂಡದ ಮಾಲೀಕರಾದ ಕಾವ್ಯಾ ಮಾರನ್​ (Kavya Maran) ಸ್ಟೇಡಿಯಮ್​ನಲ್ಲಿ ಕುಳಿತು ಕಣ್ಣೀರು ಹಾಕಿದ್ದರು. ಅದರೆ, ಆ ಬಳಿಕ ಅವರು ತಂಡದ ಡ್ರೆಸಿಂಗ್ ರೂಮ್​ಗೆ ತೆರಳಿ ಮಾತನಾಡಿ ಆಟಗಾರರನ್ನು ನಗಿಸಿದರು. ಈ ವೇಳೆ ಅವರು ಪ್ರೋತ್ಸಾಹಭರಿತ ಮಾತುಗಳನ್ನು ಆಡಿದರು. ಚೆನ್ನೈನ ಎಂ ಚಿದಂಬರಂ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಸನ್ ರೈಸರ್ಸ್ ತಂಡ ಹೀನಾಯ ಸೋಲನುಭವಿಸಿತ್ತು. ಇದು ಅಭಿಮಾನಿಗಳ ಮತ್ತು ಮಾಲೀಕರ ಹೃದಯವನ್ನು ಕಲ್ಲಾಗಿಸಿತ್ತು. ಆದಾಗ್ಯೂ ಕಾವ್ಯಾ ಅವರು ಡ್ರೆಸಿಂಗ್ ರೂಮ್​ಗೆ ಹೋಗಿ ಆಟಗಾರರ ಬಗ್ಗೆ ಅಭಿಮಾನದ ಮಾತುಗಳನ್ನು ಆಡಿದ್ದರು. ಫ್ರಾಂಚೈಸಿಯ ಅಧಿಕೃತ ಸಾಮಾಜಿಕ ಮಾಧ್ಯಮ ಹ್ಯಾಂಡಲ್ ಕಾವ್ಯಾ ಅವರ ಹೃದಯಸ್ಪರ್ಶಿ ಮಾತುಗಳ ವೀಡಿಯೊವನ್ನು ಪೋಸ್ಟ್ ಮಾಡಿದೆ.

ಈ ಋತುವಿನಲ್ಲಿ ಎಲ್ಲಾ ಬ್ಯಾಟಿಂಗ್ ದಾಖಲೆಗಳನ್ನು ಮುರಿದ ರೀತಿಗೆ ನಿಜವಾಗಿಯೂ ಹೆಮ್ಮೆಯಿದೆ ಎಂದು ಕಾವ್ಯಾ ತಮ್ಮ ಭಾಷಣದಲ್ಲಿ ಉಲ್ಲೇಖಿಸಿದ್ದಾರೆ. ಐಪಿಎಲ್ 2023 ರಲ್ಲಿ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನ ಪಡೆದ ನಂತರ ಫೈನಲ್ ತಲುಪಿದ ಪ್ಯಾಟ್ ಕಮಿನ್ಸ್ ನೇತೃತ್ವದ ತಂಡಕ್ಕೆ ಅವರು ತಮ್ಮ ಭಾಷಣದಲ್ಲಿ ಕೃತಜ್ಞತೆ ಸಲ್ಲಿಸಿದ್ದಾರೆ.

ಇದನ್ನೂ ಓದಿ: IPL 2024 : ಇದು ಕಾಕತಾಳಿಯವೇ? ಐಪಿಎಲ್ ಮತ್ತು ಡಬ್ಲ್ಯುಪಿಎಲ್​ ಫೈನಲ್ ರಿಸಲ್ಟ್​​ನಲ್ಲಿದೆ ಸಾಮ್ಯತೆ

ನೀವೆಲ್ಲರೂ ನಮ್ಮನ್ನು ತುಂಬಾ ಹೆಮ್ಮೆಪಡುವಂತೆ ಮಾಡಿದ್ದೀರಿ. ನಾನು ಇಲ್ಲಿಗೆ ಬಂದು ಅದನ್ನು ನಿಮಗೆ ಹೇಳಬೇಕಾಗಿತ್ತು. ಅಂದರೆ ನಾವು ಟಿ 20 ಕ್ರಿಕೆಟ್ ಆಡುವ ವಿಧಾನವನ್ನು ನೀವು ಮರು ವ್ಯಾಖ್ಯಾನಿಸಿದ್ದೀರಿ ಮತ್ತು ಎಲ್ಲರೂ ನಮ್ಮ ಬಗ್ಗೆ ಮಾತನಾಡುತ್ತಿದ್ದಾರೆ. ನಿಜವಾಗಿಯೂ ನೀವು ಉತ್ತಮ ಕೆಲಸ ಮಾಡಿದ್ದೀರಿ” ಎಂದು ಕಾವ್ಯಾ ಹೇಳಿದ್ದಾರೆ.

ಕಳೆದ ವರ್ಷ ನಾವು ಕೊನೆಯ ಸ್ಥಾನವನ್ನು ಪಡೆದಿದ್ದರೂ, ನಿಮ್ಮಲ್ಲಿರುವ ಸಾಮರ್ಥ್ಯದಿಂದಾಗಿ ನಾವು ಗಮನ ಸೆಳೆದಿದ್ದೇವೆ. ಎಲ್ಲರೂ ನಮ್ಮ ಬಗ್ಗೆ ಮಾತನಾಡುತ್ತಿದ್ದಾರೆ. ಕೆಕೆಆರ್ ಗೆದ್ದರೂ, ಎಲ್ಲರೂ ನಾವು ಆಡಿದ ಕ್ರಿಕೆಟ್ ಶೈಲಿಯ ಬಗ್ಗೆ ಮಾತನಾಡಲಿದ್ದಾರೆ ಎಂದು ನನಗೆ ಖಾತ್ರಿಯಿದೆ. ಧನ್ಯವಾದಗಳು ಆಟಗಾರರೆ ಕಾಳಜಿ ವಹಿಸಿ. ನಾವು ಫೈನಲ್ ಆಡಿದ್ದೇವೆ, ಇದು ದೊಡ್ಡ ಪಂದ್ಯವೇ . ನನ್ನ ಪ್ರಕಾರ ಇತರ ಎಲ್ಲಾ ತಂಡಗಳು ಇಂದು ರಾತ್ರಿ ನಮ್ಮನ್ನು ನೋಡಿವೆ. ಧನ್ಯವಾದಗಳು, ನಾನು ಶೀಘ್ರದಲ್ಲೇ ನಿಮಗೆ ಸಿಗುತ್ತೇನೆ ಎಂದು ಕಾವ್ಯಾ ಹೇಳಿದ್ದಾರೆ.

ಎಸ್​ಆರ್​ಎಚ್​ಗೆ ದುಸ್ವಪ್ನ


ಕಾವ್ಯಾ ಅವರು ಭುಜಗಳನ್ನು ಕುಲುಕಿ ಹೊರಟು ನಿಂತಾಗ ತಂಡದ ಪ್ರತಿಯೊಬ್ಬರ ಮುಖದಲ್ಲಿ ನಗುವಿದೆ ಎಂದು ಖಚಿತಪಡಿಸಿಕೊಂಡರು. ಫೈನಲ್​ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ಸೋತಾಗ ತಂಡದ ಮಾಲೀಕರು ಕಣ್ಣೀರಿಟ್ಟಿದ್ದರು. ಯಾವಾಗಲೂ ಬೆಂಬಲಿಸುವ ಫ್ರ್ಯಾಂಚೈಸಿ ಮಾಲೀಕರಾಗಿ, ಕಾವ್ಯಾ ಕ್ರೀಡಾಂಗಣಗಳಾದ್ಯಂತ ಪ್ರತಿಯೊಂದು ಪಂದ್ಯದಲ್ಲೂ ತನ್ನ ತಂಡವನ್ನು ಬೆಂಬಲಿಸಿದ್ದರು.

Continue Reading
Advertisement
kalaburagi cyber crime news fraud
ಕ್ರೈಂ10 mins ago

Cyber Crime: ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ವೈದ್ಯರಿಗೆ ವಂಚನೆ; 76 ಲಕ್ಷ ರೂ. ಸುಲಿಗೆ!

Rishabh Pant Video Calls
ಕ್ರೀಡೆ13 mins ago

Rishabh Pant Video Calls: ನ್ಯೂಯಾರ್ಕ್​ನಿಂದ ವಿಡಿಯೊ ಕಾಲ್​ ಮಾಡಿ ರಿಂಕು ಸಿಂಗ್​ಗೆ ಅಭಿನಂದಿಸಿದ ಪಂತ್​

Bomb Threat
ದೇಶ17 mins ago

Bomb Threat: ಸಾಲು ಸಾಲು ಬಾಂಬ್‌ ಥ್ರೆಟ್‌ ಪ್ರಕರಣ; ತಾಜ್‌ ಹೊಟೇಲ್‌ ಬೆನ್ನಲ್ಲೇ ಇಂಡಿಗೋ ವಿಮಾನಕ್ಕೂ ಬೆದರಿಕೆ

India Head Coach
ಕ್ರೀಡೆ44 mins ago

India Head Coach: ಗಂಭೀರ್‌ ಕೋಚ್​ ಆಗುವುದು ಬಹುತೇಕ ಖಚಿತ; ಕುತೂಹಲ ಮೂಡಿಸಿದ ಜಯ್‌ ಶಾ ಭೇಟಿ

hindalaga jail assault case
ಕ್ರೈಂ1 hour ago

Assault Case: ಹಿಂಡಲಗಾ ಜೈಲಿನಲ್ಲಿ ಕೈದಿಯಿಂದಲೇ ಮಾರಣಾಂತಿಕ ಹಲ್ಲೆ; ಭಯದಲ್ಲಿ ಬದುಕುತ್ತಿರುವ ಸಿಬ್ಬಂದಿ!

Viral Video
ವೈರಲ್ ನ್ಯೂಸ್1 hour ago

Viral Video: ನಡು ರಸ್ತೆಯಲ್ಲಿ ಪಿಸ್ತೂಲ್‌ ತೋರಿಸಿ ವ್ಯಕ್ತಿ ಮೇಲೆ ಹಲ್ಲೆ; ಅಂತಾರಾಷ್ಟ್ರೀಯ ಮಟ್ಟದ ಶೂಟರ್‌ನಿಂದ ದಾಂಧಲೆ

swagat babu no more
ಸಿನಿಮಾ2 hours ago

Swagat Babu: ಕನ್ನಡ ಚಲನಚಿತ್ರ ನಿರ್ಮಾಪಕ ಸ್ವಾಗತ್ ಬಾಬು ಇನ್ನಿಲ್ಲ

Porsche car accident ವಿಸ್ತಾರ ಸಂಪಾದಕೀಯ
ಪ್ರಮುಖ ಸುದ್ದಿ2 hours ago

ವಿಸ್ತಾರ ಸಂಪಾದಕೀಯ: ಕುಡುಕ ಬಾಲಕನಿಂದ ಅಪಘಾತ ಪ್ರಕರಣ; ಪುಣೆ ಪೊಲೀಸರ ದಿಟ್ಟ ಕ್ರಮ ಶ್ಲಾಘನೀಯ

Cooking In An Iron Pot
ಆರೋಗ್ಯ3 hours ago

Cooking In An Iron Pot: ಕಬ್ಬಿಣದ ಪಾತ್ರೆಯಲ್ಲಿ ಅಡುಗೆ ಮಾಡುವುದು ಒಳ್ಳೆಯದು! ಯಾಕೆ ಗೊತ್ತೇ?

karnataka weather Forecast
ಮಳೆ3 hours ago

Karnataka Weather : ಕರಾವಳಿ, ಮಲೆನಾಡಲ್ಲಿ ಗುಡುಗು, ಮಿಂಚು; ಒಳನಾಡಿನಲ್ಲಿ ಸಾಧಾರಣ ಮಳೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ16 hours ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ2 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು2 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ5 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ6 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ7 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು7 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು7 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ1 week ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಟ್ರೆಂಡಿಂಗ್‌