Save Nandini: ನಂದಿನಿ ಹಾಲು, ಹಾಲಿನ ಉತ್ಪನ್ನಗಳ ಪೂರೈಕೆಯಲ್ಲಿ ವ್ಯತ್ಯಯ ಇಲ್ಲ: ಕೆಎಂಎಫ್‌ ಸ್ಪಷ್ಟನೆ - Vistara News

ಕರ್ನಾಟಕ

Save Nandini: ನಂದಿನಿ ಹಾಲು, ಹಾಲಿನ ಉತ್ಪನ್ನಗಳ ಪೂರೈಕೆಯಲ್ಲಿ ವ್ಯತ್ಯಯ ಇಲ್ಲ: ಕೆಎಂಎಫ್‌ ಸ್ಪಷ್ಟನೆ

Save Nandini: ರಾಜ್ಯದಲ್ಲಿ ಮನೆಮನೆಗೆ ಹಾಲು, ಮೊಸರು ತಲುಪಿಸಲು ಗುಜರಾತ್‌ನ ಅಮುಲ್‌ ಡೇರಿ ಸಿದ್ಧತೆ ನಡೆಸುತ್ತಿದ್ದು, ಈ ನಡುವೆ ಮಾರುಕಟ್ಟೆಯಲ್ಲಿ ನಂದಿನಿ ಬ್ರ್ಯಾಂಡ್‌ ಹಾಲು ಹಾಗೂ ಹಾಲಿನ ಉತ್ಪನ್ನಗಳಿಗೆ ಕೃತಕ ಅಭಾವ ಸೃಷ್ಟಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿತ್ತು. ಇದಕ್ಕೆ ಕೆಎಂಎಫ್‌ ಸ್ಪಷ್ಟನೆ ನೀಡಿದೆ.

VISTARANEWS.COM


on

KMF says Nandini milk, milk products will be available in the market as usual, there will be no disruption in supply
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಂದಿನಿ ಬ್ರ್ಯಾಂಡ್‌ ಹಾಲು ಹಾಗೂ ಹಾಲಿನ ಉತ್ಪನ್ನಗಳು ಎಂದಿನಂತೆ ಮಾರುಕಟ್ಟೆಯಲ್ಲಿ ದೊರೆಯಲಿದೆ. ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಆಗಲ್ಲ. ಕೆಎಂಎಫ್‌ ಡೇರಿ ಉತ್ಪನ್ನಗಳನ್ನು 9Save Nandini) ಖರೀದಿಸುವ ಮೂಲಕ ಪ್ರೋತ್ಸಾಹ ನೀಡಬೇಕು ಎಂದು ಸಾರ್ವಜನಿಕರಲ್ಲಿ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳಿ (ಕೆಎಂಎಫ್‌) ಮನವಿ ಮಾಡಿದೆ.

ಸಾಮಾಜಿಕ ಜಾಲತಾಣಗಳಲ್ಲಿ ನಂದಿನಿ ಬ್ರ್ಯಾಂಡ್ ಹಾಲು ಮತ್ತು ಹಾಲಿನ ಉತ್ಪನ್ನಗಳ ಬಗ್ಗೆ ಹರಿದಾಡುತ್ತಿರುವ ಸುದ್ದಿಗಳ ಕುರಿತು ಸ್ಪಷ್ಟನೆ ನೀಡಿರುವ ಕೆಎಂಎಫ್‌, ಹೆಚ್ಚುವರಿಯಾಗಿ ಹಾಲು ಉತ್ಪಾದನೆ, ವ್ಯಾಪಾರ ವೃದ್ಧಿಗಾಗಿ ದೇಶದ ಯಾವುದೇ ಸಹಕಾರ ಸಂಸ್ಥೆ ಅಥವಾ ಹಾಲು ಉತ್ಪಾದನಾ ಮಹಾಮಂಡಳದೊಂದಿಗೆ (ಅಮುಲ್) ಒಡಂಬಡಿಕೆ ಮಾಡಿಕೊಂಡಿಲ್ಲ. ಮಾರುಕಟ್ಟೆಯಲ್ಲಿ ಮಂಡಳಿಯ ಉತ್ಪನ್ನಗಳಲ್ಲಿ ಯಾವುದೇ ರೀತಿಯ ಅಭಾವ ಸೃಷ್ಟಿಯಾಗಿಲ್ಲ ಎಂದು ಮಾಹಿತಿ ನೀಡಿದೆ.

ಗುಣಮಟ್ಟ ಮತ್ತು ಸ್ಪರ್ಧಾತ್ಮಕ ಬೆಲೆಯ ಮೂಲಕವೇ ಮನೆ ಮಾತಾಗಿರುವ ನಂದಿನಿ ಹಾಲು, ಇತರೆ ಹಾಲಿನ ಬ್ರ್ಯಾಂಡ್‌ಗಳಿಗೆ ಪೈಪೋಟಿ ನೀಡುತ್ತಾ ಮಾರುಕಟ್ಟೆಯನ್ನು ವಿಸ್ತರಿಸುತ್ತಿದ್ದು, ಇತ್ತೀಚಿನ ವರ್ಷಗಳಲ್ಲಿ ದೇಶದ ಅನೇಕ ನಗರಗಳಲ್ಲಿ ನಂದಿನಿ ಹಾಲು ಮತ್ತು ಹಾಲನ ಉತ್ಪನ್ನಗಳು ಲಭ್ಯವಾಗುತ್ತಿದೆ. ದೇಶದ 2ನೇ ಅತೀ ದೊಡ್ಡ ಸಹಕಾರ ಹಾಲು ಮಹಾಮಂಡಳಿಯಾದ ಕೆಎಂಎಫ್‌, 26 ಲಕ್ಷ ಗ್ರಾಮೀಣ ರೈತರಿಂದ ಪ್ರತಿನಿತ್ಯ ಸರಾಸರಿ 85 ಲಕ್ಷ ಲೀಟರ್ ಹಾಲನ್ನು ಸಂಗ್ರಹಿಸಿ, ಸುಮಾರು 150ಕ್ಕೂ ಹೆಚ್ಚು ವಿವಿಧ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ರಾಜ್ಯದ ಜನತೆಗೆ ಕಳೆದ 4 ದಶಕಗಳಂದ ಒದಗಿಸುತ್ತಿದೆ ಎಂದು ತಿಳಿಸಿದೆ.

ಇದನ್ನೂ ಓದಿ | Nandini vs Amul: ಶುರುವಾಗಿದೆ ಸೇವ್‌ ನಂದಿನಿ, ಬಾಯ್‌ಕಾಟ್‌ ಅಮುಲ್‌ ಅಭಿಯಾನ; ಕನ್ನಡಿಗರು ಗರಂ

ಮಹಾರಾಷ್ಟ್ರದ ಮುಂಬೈ, ಸೊಲ್ಲಾಪುರ, ದೇಶದ ಮಧ್ಯಭಾಗವಾದ ವಿಧರ್ಭ ಪ್ರಾಂತ್ಯ (ನಾಗು‌) ಹೈದರಾಬಾದ್, ಚೆನ್ನೈ, ಕೇರಳ ಮತ್ತು ಗೋವಾದಲ್ಲಿ ಪ್ರತಿ ನಿತ್ಯ 7 ಲಕ್ಷಕ್ಕೂ ಅಧಿಕ ಲೀಟರ್ ಹಾಲು ಮತ್ತು ಮೊಸರನ್ನು ಸ್ಥಳೀಯವಾಗಿ ಅಲ್ಲಿನ ಗ್ರಾಹಕರಿಗೆ ಮಾರಾಟ ಮಾಡಲಾಗುತ್ತಿದೆ. ನಂದಿನಿ ಬ್ರ್ಯಾಂಡ್‌ ಅನ್ನು ದೇಶ ವ್ಯಾಪ್ತಿಯಲ್ಲಿ ಮತ್ತಷ್ಟು ವಿಸ್ತರಿಸುವ ಉದ್ದೇಶದಿಂದ ಕೆಎಂಎಫ್ ಹಲವಾರು ಯೋಜನೆಯನ್ನು ಹಮ್ಮಿಕೊಂಡಿದೆ. 26 ಲಕ್ಷ ಹೈನುಗಾರ ರೈತರ ಶ್ರಮ, 2 ಲಕ್ಷಕ್ಕೂ ಅಧಿಕ ಕಾರ್ಮಿಕರ ದುಡಿಮೆ, 6 ಕೋಟಿಗೂ ಅಧಿಕ ಗ್ರಾಹಕರ ಹಾರೈಕೆಯಿಂದ ಸಂಸ್ಥೆಯು ದೇಶದಲ್ಲಿ ಅತೀ ವೇಗವಾಗಿ ಬೆಳೆಯುತ್ತಿರೋ ಹಾಲು ಉತ್ಪಾದನಾ ಸಂಸ್ಥೆಯಾಗಿ ಬೆಳೆದು ನಿಂತಿದೆ. ಇಂತಹ ಸಂಸ್ಥೆಯ ಬಗ್ಗೆ ಸದ್ಯ ಹರಿದಾಡುತ್ತಿರೋ ಸುದ್ದಿಗಳು ಸುಳ್ಳಾಗಿದ್ದು, ಗ್ರಾಹಕರು ಆತಂಕಪಡುವ ಅವಶ್ಯಕತೆ ಇಲ್ಲ ಎಂದು ತಿಳಿಸಿದೆ.

ಹಾಲಿನ ಶೇಖರಣೆಯನ್ನು ಮುಂದಿನ ದಿನಗಳಲ್ಲಿ ಪ್ರತಿನಿತ್ಯ 1 ಕೋಟಿಗೂ ಅಧಿಕ ಲೀಟರ್ ಸಂಗ್ರಹಿಸುವ ಗುರಿಯನ್ನು ಹೊಂದಲಾಗಿದೆ. ಕಳೆದ 5 ವರ್ಷಗಳ ಅವಧಿಯಲ್ಲಿ ಹಾಲಿನ ಸರಾಸರಿ ಶೇಖರಣೆಯಲ್ಲಿ ಶೇ.6 ರಿಂದ 7ರಷ್ಟು ಪ್ರಗತಿಯಿರುತ್ತದೆ. ಮಾರಾಟವು ಶೇ.25 ರಷ್ಟು ಪ್ರಗತಿ ಸಾಧಿಸಿದ್ದು, ಹೊರ ರಾಜ್ಯಗಳಲ್ಲೂ ಮಾರಾಟ ಜಾಲವನ್ನು ವಿಸ್ತರಿಸುತ್ತಾ ಗ್ರಾಹಕರ ಆಯ್ಕೆಯ ನೆಚ್ಚಿನ ಬ್ರ್ಯಾಂಡ್ ಆಗಿದೆ ಎಂದು ಹೇಳಿದೆ.

ಇದನ್ನೂ ಓದಿ | Save Nandini: ಮನೆಮನೆಗೆ ಹಾಲು ಪೂರೈಕೆಗೆ ಅಮುಲ್ ಪ್ಲಾನ್;​ ಕನ್ನಡಿಗರಿಂದ ನಂದಿನಿ ಉಳಿಸಿ ಅಭಿಯಾನ

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಕೆಎಂಎಫ್ ಬಗ್ಗೆ ಕೆಲವು ವದಂತಿಗಳು ಹರಿದಾಡುತ್ತಿದ್ದು, ಕೆಎಂಎಫ್‌ ಅನ್ನು ಮತ್ತೊಂದು ದೊಡ್ಡ ಸಹಕಾರಿ ಸಂಸ್ಥೆಯೊಂದಿಗೆ (ಅಮುಲ್) ವಿಲೀನ ಮಾಡಲಾಗುತ್ತದೆ. ನಂದಿನಿ ಬ್ರ್ಯಾಂಡ್ ಅನ್ನು ಮತ್ತೊಂದು ಸಹಕಾರಿ ಸಂಸ್ಥೆಗೆ ಮಾರಾಟ ಮಾಡಲಾಗುತ್ತಿದೆ. ಇನ್ನು ಮುಂದೆ ಮಾರುಕಟ್ಟೆಯಲ್ಲಿ ನಂದಿನಿ ಹಾಲು ಲಭ್ಯವಾಗುವುದಿಲ್ಲ ಎಂಬ ಬಗ್ಗೆ ಸಾಕಷ್ಟು ಸುಳ್ಳು ಸುದ್ದಿಗಳು ಹರಿದಾಡುತ್ತಿವೆ. ಇವೆಲ್ಲವೂ ಸತ್ಯಕ್ಕೆ ದೂರವಾಗಿದ್ದು ಮತ್ತು ಅಂತಹ ಯಾವುದೇ ಬೆಳವಣಿಗೆಗಳು ಕೆಎಂಎಫ್‌ನಲ್ಲಿ ನಡೆದಿರುವುದಿಲ್ಲವೆಂದು ಕೆಎಂಎಫ್‌ ಸ್ಪಷ್ಟನೆ ನೀಡಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
1 Comment

1 Comment

  1. Hariprasad M

    14 April 2023, 8:26 PM at 8:26 pm

    Nandini ghee is not available in any online shopping for the past 20 days.

Leave a Reply

Your email address will not be published. Required fields are marked *

ಕರ್ನಾಟಕ

Yuva Rajkumar: ‘ಅನೈತಿಕ ಸಂಬಂಧ’ ಎಂದು ಯುವ ಪರ ವಕೀಲ ಆರೋಪ; ತಿರುಗೇಟು ಕೊಟ್ಟ ಶ್ರೀದೇವಿ!

Yuva Rajkumar: ನಟ ಯುವ ರಾಜ್‌ಕುಮಾರ್‌ ಅವರು ಪತ್ನಿ ಶ್ರೀದೇವಿ ಭೈರಪ್ಪ ಅವರಿಗೆ ಡಿವೋರ್ಸ್‌ ನೋಟಿಸ್‌ ಕಳುಹಿಸಿದ್ದಾರೆ. ಇದಾದ ಬಳಿಕ ಶ್ರೀದೇವಿ ಭೈರಪ್ಪ ಅವರು ಪ್ರತಿಕ್ರಿಯಿಸಿದ್ದು, ನನಗೆ ನೋಟಿಸ್‌ ಸಿಕ್ಕಾಗ ಪ್ರತಿಕ್ರಿಯಿಸುವೆ ಎಂದಿದ್ದಾರೆ. ಇದರ ಮಧ್ಯೆಯೇ, ಯುವ ರಾಜ್‌ಕುಮಾರ್‌ ಅವರ ವಕೀಲರು ಸುದ್ದಿಗೋಷ್ಠಿ ನಡೆಸಿ ಹಲವು ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ. ಶ್ರೀದೇವಿ ಅವರು ಹೇಗೆ ಕಿರುಕುಳ ನೀಡುತ್ತಿದ್ದರು ಎಂಬುದನ್ನು ಅವರು ವಿವರಿಸಿದ್ದಾರೆ. ಇದಕ್ಕೆ ಈಗ ಶ್ರೀದೇವಿ ಭೈರಪ್ಪ ಅವರು ಪ್ರತ್ಯುತ್ತರ ನೀಡಿದ್ದಾರೆ.

VISTARANEWS.COM


on

Yuva Rajkumar
Koo

ಬೆಂಗಳೂರು/ವಾಷಿಂಗ್ಟನ್:‌ ಸ್ಯಾಂಡಲ್‌ವುಡ್‌ ನಟ ಯುವ ರಾಜ್‌ಕುಮಾರ್‌ (Yuva Rajkumar) ವಿಚ್ಛೇದನ ಪ್ರಕರಣವು ವಿವಿಧ ಆಯಾಮಗಳನ್ನು ಪಡೆಯುತ್ತಿದೆ. ಇದೊಂದು ವಿಚ್ಛೇದನ ಪ್ರಕರಣವಾಗದೆ ಯುವ ರಾಜ್‌ಕುಮಾರ್‌ ಹಾಗೂ ಅವರ ಪತ್ನಿ ಶ್ರೀದೇವಿ ಭೈರಪ್ಪ (Sridevi Byrappa) ಅವರ ನಡುವಿನ ಆರೋಪ-ಪ್ರತ್ಯಾರೋಪಗಳಿಗೆ ವೇದಿಕೆಯಾಗುತ್ತಿದೆ. “ಶ್ರೀದೇವಿ ಭೈರಪ್ಪ ಅವರು ಅನೈತಿಕ ಸಂಬಂಧ ಹೊಂದಿದ್ದಾರೆ” ಎಂಬುದಾಗಿ ಯುವ ರಾಜ್‌ಕುಮಾರ್‌ ಅವರ ಪರ ವಕೀಲ ಸಿರಿಲ್‌ ಪ್ರಸಾದ್‌ ಅವರು ಸುದ್ದಿಗೋಷ್ಠಿಯಲ್ಲಿ ಆರೋಪಿಸಿದ್ದು, ಇದಕ್ಕೆ ಶ್ರೀದೇವಿ ಭೈರಪ್ಪ ಪ್ರತಿಕ್ರಿಯಿಸಿದ್ದಾರೆ. “ಸತ್ಯ ಹಾಗೂ ನ್ಯಾಯಕ್ಕೆ ಗೆಲುವಿದೆ ಎಂಬುದಾಗಿ ನಾನು ನಂಬಿದ್ದೇನೆ” ಎಂಬುದಾಗಿ ಇನ್‌ಸ್ಟಾಗ್ರಾಂನಲ್ಲಿ ಶ್ರೀದೇವಿ ಭೈರಪ್ಪ ಪೋಸ್ಟ್‌ ಮಾಡಿದ್ದಾರೆ.

“ವೃತ್ತಿಪರ ಸೌಹಾರ್ದತೆಯನ್ನು ಕಾಯ್ದುಕೊಳ್ಳಬೇಕಾದ ವ್ಯಕ್ತಿಯೇ ಸಾರ್ವಜನಿಕವಾಗಿ ಒಬ್ಬ ಹೆಣ್ಣಿನ ಚಾರಿತ್ರ್ಯದ ಬಗ್ಗೆ ಕೀಳುಮಟ್ಟದ, ಸುಳ್ಳು ಆರೋಪಗಳನ್ನು ಮಾಡುತ್ತಿರುವುದು ಅತ್ಯಂತ ದುರದೃಷ್ಟಕರ ಹಾಗೂ ಬಹಳ ನೋವುಂಟು ಮಾಡಿದೆ. ಕಳೆದ ಕೆಲವು ತಿಂಗಳಿಂದ ಆದ ಅನೇಕ ನೋವುಗಳ ಹೊರತಾಗಿಯೂ ನಾನು ಕುಟುಂಬದ ಗೌರವ ಕಾಪಾಡಿಕೊಳ್ಳಲು ಮೌನವಾಗಿದ್ದೆ. ಆದರೆ, ನನ್ನ ಸಭ್ಯತೆ ಹಾಗೂ ಮಾನವೀಯತೆಯನ್ನು ಗೌರವಿಸದೆ, ಕೀಳುಮಟ್ಟದ ಆರೋಪಗಳನ್ನು ಮಾಡುತ್ತಿರುವುದು ದುರದೃಷ್ಟಕರ. ಸತ್ಯ ಹಾಗೂ ನ್ಯಾಯವು ಖಂಡಿತ ಮೇಲುಗೈ ಸಾಧಿಸುತ್ತೇವೆ ಎಂದು ನಾನು ನಂಬಿದ್ದೇನೆ” ಎಂಬುದಾಗಿ ಅವರು ಪೋಸ್ಟ್‌ ಮಾಡಿದ್ದಾರೆ.

ಯುವ ಪರ ವಕೀಲರು ಹೇಳಿದ್ದೇನು?

ಯುವ ರಾಜ್‌ಕುಮಾರ್‌ ಪರ ವಕೀಲ ಸಿರಿಲ್‌ ಪ್ರಸಾದ್‌ ಅವರು ಸುದ್ದಿಗೋಷ್ಠಿ ನಡೆಸಿದ್ದಾರೆ. “ಮಾನಸಿಕ ಹಾಗೂ ದೈಹಿಕ ದೌರ್ಜನ್ಯದ ಆಧಾರದ ಮೇಲೆ ನಾವು ಅರ್ಜಿ ಹಾಕಿದ್ದೇವೆ. ಒಟ್ಟು 54 ಪೇಜಿನ ಡಿವೋರ್ಸ್ ಪಿಟೀಷನ್ ಹಾಕಿದ್ದೇವೆ. ಅನೈತಿಕ ಸಂಬಂಧ ಹೊಂದಿದ್ದಾರೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಅದರಂತೆ, ಇವರು ನೋಟಿಸ್‌ ಜಾರಿಗೊಳಿಸಲಾಗಿದೆ. ಶ್ರೀದೇವಿ ಭೈರಪ್ಪ ಅವರಿಗೆ ರಾಧಯ್ಯ ಎಂಬ ವ್ಯಕ್ತಿ ಜತೆ ಅಕ್ರಮ ಸಂಬಂಧ ಇದೆ. ಇದರಿಂದಾಗಿ ಕಳೆದ ಎರಡು ವರ್ಷಗಳಿಂದ ಯುವ ಹಾಗೂ ಶ್ರೀದೇವಿ ನಡುವಿನ ಸಂಬಂಧ ಹಳಸಿತ್ತು” ಎಂಬುದಾಗಿ ಅವರು ಹೇಳಿದ್ದಾರೆ.

“ನಾನು ಅಮೆರಿಕದಲ್ಲಿ ಇರುತ್ತೇನೆ, ನೀನು ಬೆಂಗಳೂರಿನಲ್ಲಿಯೇ ಇರು ಎಂಬುದಾಗಿ ಕಿರುಕುಳ ಕೊಟ್ಟಿದ್ದಾರೆ. ಒಂದು ತಿಂಗಳ ಹಿಂದೆ ರಾಧಯ್ಯನಿಗೆ ಮದುವೆ ಆಗಿದೆ. ಆ ಸಮಯದಲ್ಲಿ ಆಕೆ ಬಹಳ ಖಿನ್ನತೆಗೆ ಜಾರಿದ್ದರು. ಇದಕ್ಕೆ ಈಗ ಯುವನ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ. ದೈಹಿಕವಾಗಿ ಸಂಪರ್ಕಿಸಲು ಹೋದಾಗ ಅವಮಾನ ಮಾಡುತ್ತಿದ್ದರು. ಹಲ್ಲುಜ್ಜಿಕೊಂಡು ಬಾ, ಸ್ನಾನ ಮಾಡು ಅಂತ ಹೇಳುತ್ತಿದ್ದರು. ನೀನು ದೈಹಿಕವಾಗಿ ಫಿಟ್‌ ಇಲ್ಲ, ರಾಧಯ್ಯ ಫಿಟ್‌ ಇದ್ದಾನೆ ಎಂದು ಅವಮಾನ ಮಾಡುತ್ತಿದ್ದರು. ರಾಧಯ್ಯನ ಹೆಂಡತಿ ಮನೆಯಲ್ಲಿ ಇದ್ದಿದ್ದಾಗ ಆತನ ಮನೆಗೆ ಹೋಗುತ್ತಾರೆ. ಈ ರೀತಿಯ ಸಂಬಂಧ ಇಟ್ಟುಕೊಂಡಿದ್ದಾರೆ” ಎಂಬುದಾಗಿ ತಿಳಿಸಿದರು.

“3 ಕೋಟಿ ರೂ.ಗಿಂತ ಅಧಿಕ ಹಣವನ್ನು ರಾಜ್ ಕುಮಾರ್ ಫಿಲ್ಮ್ ಅಕಾಡೆಮಿಯಿಂದ ಆಕೆಯ ಅಕೌಂಟ್‌ಗೆ ವರ್ಗಾವಣೆ ಮಾಡಿಕೊಳ್ಳಲಾಗಿದೆ. ಇದು ಯಾರಿಗೂ ಗೊತ್ತಿರಲಿಲ್ಲ. ರಾಜ್ ಕುಮಾರ್ ಕುಟುಂಬದ ಹೆಸರು ಕೆಡಿಸ್ತೀನಿ ಅಂತ ಬೆದರಿಕೆ ಹಾಕುತ್ತಿದ್ದರು. ಮೈಸೂರಲ್ಲಿ ಜಮೀನು ಖರೀದಿ ಮಾಡಿದ್ದಾರೆ. ಸುಳ್ಳು ಹೇಳಿ, ಅಮೆರಿಕಕ್ಕೆ ಹೋಗಿ ಅಲ್ಲಿ ಮಾಸ್ಟರ್ಸ್ ಮಾಡ್ತಿದ್ದಾರೆ. ಯುವ ಕುಟುಂಬದ ಹಣದಿಂದ ಬೆಂಗಳೂರಲ್ಲಿ ಸುಮಾರು 20ಕ್ಕೂ ಅಧಿಕ ಸೈಟ್ ಖರೀದಿ ಮಾಡಿದ್ದಾರೆ” ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: Yuva Rajkumar: ಹಲ್ಲು ಉಜ್ಜಲ್ಲ, ಸ್ನಾನ ಮಾಡಲ್ಲ, ಫಿಟ್ ಇಲ್ಲ ಎಂದು ಕಿರುಕುಳ ಕೊಡುತ್ತಿದ್ದ ಯುವ ಪತ್ನಿ!: ವಕೀಲರ ಆರೋಪ

Continue Reading

ಪ್ರಮುಖ ಸುದ್ದಿ

Yuva Rajkumar: ಹಲ್ಲು ಉಜ್ಜಲ್ಲ, ಸ್ನಾನ ಮಾಡಲ್ಲ, ಫಿಟ್ ಇಲ್ಲ ಎಂದು ಕಿರುಕುಳ ಕೊಡುತ್ತಿದ್ದ ಯುವ ಪತ್ನಿ!: ವಕೀಲರ ಆರೋಪ

Yuva Rajkumar: ನಟ ಯುವ ರಾಜ್‌ಕುಮಾರ್‌ ಅವರು ಪತ್ನಿ ಶ್ರೀದೇವಿ ಭೈರಪ್ಪ ಅವರಿಗೆ ಡಿವೋರ್ಸ್‌ ನೋಟಿಸ್‌ ಕಳುಹಿಸಿದ್ದಾರೆ. ಇದಾದ ಬಳಿಕ ಶ್ರೀದೇವಿ ಭೈರಪ್ಪ ಅವರು ಪ್ರತಿಕ್ರಿಯಿಸಿದ್ದು, ನನಗೆ ನೋಟಿಸ್‌ ಸಿಕ್ಕಾಗ ಪ್ರತಿಕ್ರಿಯಿಸುವೆ ಎಂದಿದ್ದಾರೆ. ಇದರ ಮಧ್ಯೆಯೇ, ಯುವ ರಾಜ್‌ಕುಮಾರ್‌ ಅವರ ವಕೀಲರು ಸುದ್ದಿಗೋಷ್ಠಿ ನಡೆಸಿ ಹಲವು ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ. ಶ್ರೀದೇವಿ ಅವರು ಹೇಗೆ ಕಿರುಕುಳ ನೀಡುತ್ತಿದ್ದರು ಎಂಬುದನ್ನು ಅವರು ವಿವರಿಸಿದ್ದಾರೆ.

VISTARANEWS.COM


on

Yuva Rajkumar
Koo

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ, ರಾಘವೇಂದ್ರ ರಾಜ್‌ಕುಮಾರ್‌ ಪುತ್ರ ಯುವ ರಾಜ್‌ಕುಮಾರ್‌ (Yuva Rajkumar) ಅವರು ಪತ್ನಿಗೆ ಡಿವೋರ್ಸ್‌ ನೋಟಿಸ್‌ ನೀಡಿರುವ ಪ್ರಕರಣಕ್ಕೆ ಹಲವು ಟ್ವಿಸ್ಟ್‌ಗಳು ಸಿಗುತ್ತಿವೆ. ಡಿವೋರ್ಸ್‌ ನೋಟಿಸ್‌ ಸಿಕ್ಕಾಗ ಪ್ರತಿಕ್ರಿಯಿಸುವೆ ಎಂಬುದಾಗಿ ಯುವ ಪತ್ನಿ ಶ್ರೀದೇವಿ ಭೈರಪ್ಪ (Sridevi Byrappa) ಪ್ರತಿಕ್ರಿಯಿಸಿದ ಬೆನ್ನಲ್ಲೇ, ಯುವ ರಾಜ್‌ಕುಮಾರ್‌ ಪರ ವಕೀಲ ಸಿರಿಲ್‌ ಪ್ರಸಾದ್‌ ಅವರು ಸುದ್ದಿಗೋಷ್ಠಿ ನಡೆಸಿದ್ದಾರೆ. “ಹಲ್ಲು ಉಜ್ಜಲ್ಲ, ಸ್ನಾನ ಮಾಡಲ್ಲ, ದೈಹಿಕವಾಗಿ ಫಿಟ್‌ ಇಲ್ಲ ಎಂಬುದಾಗಿ ಶ್ರೀದೇವಿ ಪ್ರಸಾದ್‌ ಅವರು ನಟನಿಗೆ ಕಿರುಕುಳ ನೀಡಿದ್ದಾರೆ” ಎಂಬುದಾಗಿ ಅವರು ಆರೋಪಿಸಿದ್ದಾರೆ.

“ನಾನು ಅಮೆರಿಕದಲ್ಲಿ ಇರುತ್ತೇನೆ, ನೀನು ಬೆಂಗಳೂರಿನಲ್ಲಿಯೇ ಇರು ಎಂಬುದಾಗಿ ಕಿರುಕುಳ ಕೊಟ್ಟಿದ್ದಾರೆ. ಒಂದು ತಿಂಗಳ ಹಿಂದೆ ರಾಧಯ್ಯನಿಗೆ ಮದುವೆ ಆಗಿದೆ. ಆ ಸಮಯದಲ್ಲಿ ಆಕೆ ಬಹಳ ಖಿನ್ನತೆಗೆ ಜಾರಿದ್ದರು. ಇದಕ್ಕೆ ಈಗ ಯುವನ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ. ದೈಹಿಕವಾಗಿ ಸಂಪರ್ಕಿಸಲು ಹೋದಾಗ ಅವಮಾನ ಮಾಡುತ್ತಿದ್ದರು. ಹಲ್ಲುಜ್ಜಿಕೊಂಡು ಬಾ, ಸ್ನಾನ ಮಾಡು ಅಂತ ಹೇಳುತ್ತಿದ್ದರು. ನೀನು ದೈಹಿಕವಾಗಿ ಫಿಟ್‌ ಇಲ್ಲ, ರಾಧಯ್ಯ ಫಿಟ್‌ ಇದ್ದಾನೆ ಎಂದು ಅವಮಾನ ಮಾಡುತ್ತಿದ್ದರು. ರಾಧಯ್ಯನ ಹೆಂಡತಿ ಮನೆಯಲ್ಲಿ ಇದ್ದಿದ್ದಾಗ ಆತನ ಮನೆಗೆ ಹೋಗುತ್ತಾರೆ. ಈ ರೀತಿಯ ಸಂಬಂಧ ಇಟ್ಟುಕೊಂಡಿದ್ದಾರೆ” ಎಂಬುದಾಗಿ ತಿಳಿಸಿದರು.

“ಮಾನಸಿಕ ಹಾಗೂ ದೈಹಿಕ ದೌರ್ಜನ್ಯದ ಆಧಾರದ ಮೇಲೆ ನಾವು ಅರ್ಜಿ ಹಾಕಿದ್ದೇವೆ. ಒಟ್ಟು 54 ಪೇಜಿನ ಡಿವೋರ್ಸ್ ಪಿಟೀಷನ್ ಹಾಕಿದ್ದೇವೆ. ಅನೈತಿಕ ಸಂಬಂಧ ಹೊಂದಿದ್ದಾರೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಅದರಂತೆ, ಇವರು ನೋಟಿಸ್‌ ಜಾರಿಗೊಳಿಸಲಾಗಿದೆ. ಶ್ರೀದೇವಿ ಭೈರಪ್ಪ ಅವರಿಗೆ ರಾಧಯ್ಯ ಎಂಬ ವ್ಯಕ್ತಿ ಜತೆ ಅಕ್ರಮ ಸಂಬಂಧ ಇದೆ. ಇದರಿಂದಾಗಿ ಕಳೆದ ಎರಡು ವರ್ಷಗಳಿಂದ ಯುವ ಹಾಗೂ ಶ್ರೀದೇವಿ ನಡುವಿನ ಸಂಬಂಧ ಹಳಸಿತ್ತು” ಎಂಬುದಾಗಿ ಅವರು ಹೇಳಿದ್ದಾರೆ.

“3 ಕೋಟಿ ರೂ.ಗಿಂತ ಅಧಿಕ ಹಣವನ್ನು ರಾಜ್ ಕುಮಾರ್ ಫಿಲ್ಮ್ ಅಕಾಡೆಮಿಯಿಂದ ಆಕೆಯ ಅಕೌಂಟ್‌ಗೆ ವರ್ಗಾವಣೆ ಮಾಡಿಕೊಳ್ಳಲಾಗಿದೆ. ಇದು ಯಾರಿಗೂ ಗೊತ್ತಿರಲಿಲ್ಲ. ರಾಜ್ ಕುಮಾರ್ ಕುಟುಂಬದ ಹೆಸರು ಕೆಡಿಸ್ತೀನಿ ಅಂತ ಬೆದರಿಕೆ ಹಾಕುತ್ತಿದ್ದರು. ಮೈಸೂರಲ್ಲಿ ಜಮೀನು ಖರೀದಿ ಮಾಡಿದ್ದಾರೆ. ಸುಳ್ಳು ಹೇಳಿ, ಅಮೆರಿಕಕ್ಕೆ ಹೋಗಿ ಅಲ್ಲಿ ಮಾಸ್ಟರ್ಸ್ ಮಾಡ್ತಿದ್ದಾರೆ. ಯುವ ಕುಟುಂಬದ ಹಣದಿಂದ ಬೆಂಗಳೂರಲ್ಲಿ ಸುಮಾರು 20ಕ್ಕೂ ಅಧಿಕ ಸೈಟ್ ಖರೀದಿ ಮಾಡಿದ್ದಾರೆ” ಎಂದು ಮಾಹಿತಿ ನೀಡಿದರು.

“ಯುವ ಪತ್ನಿಯು ಇಡೀ ಕುಟುಂಬದ ವ್ಯವಹಾರ ಹಾಗೂ ಎಲ್ಲದರ ಮೇಲೂ ಕಂಟ್ರೋಲ್ ಮಾಡಲು ಪ್ರಯತ್ನಿಸಿದ್ದಳು. ಯುವ ಫ್ಯಾಮಿಲಿಯಿಂದ ಬಹಳ ಹಣ ಖರ್ಚು ಮಾಡಿಸಿಕೊಂಡಿದ್ದಾರೆ. ಐಎಎಸ್ ಕಲಿಯಲು ದೆಹಲಿಗೆ ಹೋಗಿದ್ದರು. ಅವಳ ಬಾಯ್ ಫ್ರೆಂಡ್ ರಾಧಯ್ಯ ಎಂಬವರ ಜತೆ ಸಂಬಂಧ ಇಟ್ಟುಕೊಂಡಿದ್ದಾರೆ. ರಾತ್ರಿ ಅವನ ಮನೆಯಲ್ಲಿ ಉಳದುಕೊಳ್ತಿದ್ದರು. ಇಂಥ ಹಲವು ಕಾರಣಗಳನ್ನು ಅರ್ಜಿಯಲ್ಲಿ ನಮೂದಿಸಿ ಫೈಲ್ ಮಾಡಿದ್ದೇವೆ. ಆದರೆ ಯುವ ಪತ್ನಿಯು ಯುವನಿಗೆ ಬೇರೆ ಸಂಬಂಧ ಇದೆ ಎಂದು ಆರೋಪಿಸಿದ್ದಾರೆ. ಸ್ಯಾಂಡಲ್ ವುಡ್ ನಟಿಯೊಬ್ಬರ ಜತೆ ಯುವನಿಗೆ ಸಂಬಂಧ ಇತ್ತು ಎಂದು ಅವರು ರಿಪ್ಲೈ ಮಾಡಿದ್ದಾರೆ” ಎಂದು ತಿಳಿಸಿದರು.

ಲೀಗಲ್‌ ನೋಟಿಸ್‌ಗೆ ಶ್ರೀದೇವಿ ಪ್ರತಿಕ್ರಿಯೆ

ಯುವ ರಾಜ್‌ಕುಮಾರ್‌ ಅವರ ವಕೀಲರು ಕಳುಹಿಸಿದ ಲೀಗಲ್‌ ನೋಟಿಸ್‌ಗೆ ಶ್ರೀದೇವಿ ಭೈರಪ್ಪ ಅವರು ಅಮೆರಿಕದಿಂದಲೇ ವಕೀಲರ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. “ಯುವ ರಾಜ್‌ಕುಮಾರ್‌ ಅವರು ನನಗೆ ಕಿರುಕುಳ ನೀಡುತ್ತಿದ್ದರು. ನೀವು ನೀಡಿದ ನೋಟಿಸ್‌ನಲ್ಲಿ ಉಲ್ಲೇಖಿಸಿದ ಅಂಶಗಳು ಸತ್ಯಕ್ಕೆ ದೂರವಾಗಿವೆ. ನನಗೆ ನಿಮ್ಮ ಕುಟುಂಬವನ್ನು ಒಡೆಯಬೇಕು ಎಂದಿದ್ದರೆ ಅಮೆರಿಕಕ್ಕೆ ಬರುತ್ತಿರಲಿಲ್ಲ. ಅಷ್ಟಕ್ಕೂ, ಯುವ ರಾಜ್‌ಕುಮಾರ್‌ ಅವರು ನಟಿ ಸಪ್ತಮಿ ಗೌಡ ಅವರೊಂದಿಗೆ ಸಂಬಂಧ ಹೊಂದಿದ್ದಾರೆ. ನಿಮ್ಮ ಆರೋಪಗಳಿಗೆ ಕಾನೂನಾತ್ಮಕವಾಗಿಯೇ ಉತ್ತರ ಕೊಡುತ್ತೇನೆ” ಎಂಬುದಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ: Yuva Rajkumar: ಶ್ರೀದೇವಿ ಭೈರಪ್ಪಗೆ ಅಕ್ರಮ ಸಂಬಂಧ; ಯುವ ರಾಜ್‌ಕುಮಾರ್ ಪರ ವಕೀಲ ಸ್ಫೋಟಕ ಹೇಳಿಕೆ

Continue Reading

ದಕ್ಷಿಣ ಕನ್ನಡ

Mangalore News: ಸಿಡಿಲ ಅಪಾಯ ಇರುವ ಸ್ಥಳಗಳಲ್ಲಿ ಮಿಂಚು ಪ್ರತಿಬಂಧಕ ವ್ಯವಸ್ಥೆ; ಸರ್ಕಾರದ ನಿರ್ಧಾರ

Mangalore News: ಮಂಗಳೂರಿನ ಡಿಸಿ ಕಚೇರಿಯಲ್ಲಿ ಸೋಮವಾರ ಮಳೆಗಾಲದ ಸಂದರ್ಭ ಸಂಭವನೀಯ ಪ್ರಾಕೃತಿಕ ವಿಕೋಪದ ಸಿದ್ಧತೆ ಕುರಿತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಮಳೆಗಾಲದ ಅಪಾಯ ತಪ್ಪಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸಚಿವರು ಸೂಚಿಸಿದ್ದಾರೆ.

VISTARANEWS.COM


on

Minister Dinesh Gundurao instructed to prepare for the disaster management that may occur on the coast during rainy season.
Koo

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಿಡಿಲು, ಗುಡುಗಿನಿಂದ ಸಾವು ಪ್ರಕರಣ ಹೆಚ್ಚಾಗಿ ಸಂಭವಿಸುವ ಸುಬ್ರಹ್ಮಣ್ಯ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಿಂಚು ಪ್ರತಿಬಂಧಕ ವ್ಯವಸ್ಥೆಯನ್ನು ಅಳವಡಿಸಲು ಜಿಲ್ಲಾಡಳಿತ ಕ್ರಮ ಕೈಗೊಳ್ಳಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ (Mangalore News) ಹೇಳಿದ್ದಾರೆ.

ಮಂಗಳೂರಿನಲ್ಲಿ ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಳೆಗಾಲದ ಸಂದರ್ಭ ಸಂಭವನೀಯ ಪ್ರಾಕೃತಿಕ ವಿಕೋಪದ ಸಿದ್ಧತೆ ಕುರಿತಂತೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಆರಂಭಿಕ ಹಂತದಲ್ಲಿ ಸುಳ್ಯ, ಬೆಳ್ತಂಗಡಿ, ಸುಬ್ರಹ್ಮಣ್ಯದ ಕೆಲವೆಡೆ ನಾಲ್ಕೈದು ಕಡೆಗಳಲ್ಲಿ ಈ ಪ್ರತಿಬಂಧಕಗಳನ್ನು ಅಳವಡಿಸುವ ಬಗ್ಗೆ ಚರ್ಚೆ ನಡೆಸಿದರು.

ಇದನ್ನೂ ಓದಿ: Samsung: ಕ್ಯೂಎಲ್ಇಡಿ 4ಕೆ ಪ್ರೀಮಿಯಂ ಟಿವಿ ಸರಣಿ ಬಿಡುಗಡೆ ಮಾಡಿದ ಸ್ಯಾಮ್‌ಸಂಗ್

ಸಭೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಚಿವ ದಿನೇಶ್ ಗುಂಡೂರಾವ್, ಕಳೆದ ಸುಮಾರು 10 ವರ್ಷಗಳಲ್ಲಿ ಈ ಸುಬ್ರಹ್ಮಣ್ಯ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಿಂಚಿನಿಂದ ಸಾವು ಹಾಗೂ ಆಸ್ತಿಪಾಸ್ತಿ ನಷ್ಟವಾಗಿರುವ ಪ್ರಕರಣಗಳು ನಡೆಯುತ್ತಿದೆ. ಎತ್ತರದ ಪ್ರದೇಶವಾಗಿರುವ ಕಾರಣ ಮಿಂಚಿನಿಂದ ಹೆಚ್ಚಿನ ಅಪಾಯ ಈ ಭಾಗದಲ್ಲಿ ಸಂಭವಿಸುತ್ತಿರುವುದಾಗಿ ಅಂದಾಜಿಸಲಾಗಿದ್ದು, ಹಾಗಾಗಿ ಪ್ರಾಯೋಗಿಕವಾಗಿ ಈ ಪ್ರದೇಶಗಳಲ್ಲಿ ಈ ಮಿಂಚು ಪ್ರತಿಬಂಧಕ ಅಳವಡಿಸಲು ಕ್ರಮ ವಹಿಸಿದೆ ಎಂದರು.

ಮಳೆಗಾಲದಲ್ಲಿ ವಿಪತ್ತು ನಿರ್ವಹಣೆಗೆ ಸನ್ನದ್ಧರಾಗಿ

ಮಳೆಗಾಲದ ಸಂಭವಿಸಬಹುದಾದ ವಿಪತ್ತುಗಳನ್ನು ಎದುರಿಸಲು ಜಿಲ್ಲೆಯ ಎಲ್ಲಾ ಇಲಾಖೆಗಳು ಈಗಿನಿಂದಲೇ ಸನ್ನದ್ಧರಾಗಿರುವಂತೆ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪ್ರಾಕೃತಿಕ ವಿಕೋಪದ ಸಂದರ್ಭ ಉಪಯೋಗಿಸುವ ಯಂತ್ರೋಪಕರಣಗಳ ಕಾರ್ಯ ನಿರ್ವಹಣೆಯನ್ನು ಪರಿಶೀಲಿಸಿ. ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಭಾಗಗಳಲ್ಲಿ ಕೆಂಪು ಮಣ್ಣಿನ ಕಾನೂನುಬಾಹಿರ ಗಣಿಗಾರಿಕೆ ಹಾಗೂ ಸಾಗಾಟದ ಬಗ್ಗೆ ಆರೋಪಗಳು ಕೇಳಿ ಬಂದಿದ್ದು, ಅದನ್ನು ತಡೆಯಲು ಕಟ್ಟುನಿಟ್ಟಿನ ಕ್ರಮ ವಹಿಸಲು ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು, ಪೊಲೀಸ್ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಲು ಸಚಿವರು ಸೂಚನೆ ನೀಡಿದರು.

ಬೋಳಿಯಾರುವಿನಲ್ಲಿ ನಡೆದ ಘಟನೆಗೆ ಸಂಬಂಧಿಸಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಈಗಾಗಲೇ ಬಂಧಿಸಲಾಗಿದೆ. ಯಾರೇ ಕಾನೂನಿಗೆ ವಿರುದ್ಧ ಹೋದರೆ ಕಠಿಣ ಕ್ರಮ ವಹಿಸಲಾಗುತ್ತದೆ. ಅದರ ಬಗ್ಗೆ ಬಿಜೆಪಿಯವರು ಹೇಳುವ ಅಗತ್ಯವಿಲ್ಲ. ಯಾವುದೇ ಧರ್ಮ, ಜಾತಿ ಭೇದವಿಲ್ಲದೆ ಇಂತಹ ಘಟನೆಗಳ ಬಗ್ಗೆ ಕ್ರಮ ವಹಿಸುವಂತೆ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದರು.

ಇದನ್ನೂ ಓದಿ: Health Benefits of Mango Leaves: ಮಾವಿನೆಲೆಗಳು ತೋರಣ ಕಟ್ಟಲಷ್ಟೇ ಅಲ್ಲ, ಆರೋಗ್ಯಕ್ಕೂ ಒಳ್ಳೆಯದು!

ಸಿಆರ್‌ಝಡ್ ಮತ್ತು ಸಿಆರ್‌ಝಡ್ ಅಲ್ಲದ ಪ್ರದೇಶಗಳಿಂದ ಅಕ್ರಮವಾಗಿ ಮರಳು ತೆಗೆಯುತ್ತಿರುವುದನ್ನು ಪರಿಶೀಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಸಿಸಿಟಿವಿ ಕ್ಯಾಮೆರಾ ಅಳವಡಿಸಿದ್ದರೂ ಅಕ್ರಮ ಮರಳು ದಂಧೆ ಮುಂದುವರಿದಿದೆ. ಹೀಗಾಗಿ ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕಲು ಅಧಿಕಾರಿಗಳು ಕ್ರಮಕೈಗೊಳ್ಳಬೇಕು ಎಂದು ತಿಳಿಸಲಾಗಿದೆ. ಇತ್ತೀಚೆಗೆ ಬೆಂಗಳೂರಿನಲ್ಲಿ ಸಿಆರ್‌ಝಡ್‌ ವ್ಯಾಪ್ತಿಯಲ್ಲಿ ಮರಳು ತೆಗೆಯುವ ಕುರಿತು ಸಭೆ ನಡೆಯಿತು. ಸಿಆರ್‌ಝಡ್ ಪ್ರದೇಶಗಳಲ್ಲಿ ಮರಳು ತೆಗೆಯಲು ಇರುವ ಎಲ್ಲಾ ಕಾನೂನು ಅಡೆತಡೆಗಳನ್ನು ಪರಿಹರಿಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಇದೇ ವೇಳೆ ಸಚಿವರು ತಿಳಿಸಿದರು.

ಕಲ್ಲಡ್ಕ ರಾಷ್ಟ್ರೀಯ ಹೆದ್ದಾರಿ ದುರಸ್ತಿ 1 ವಾರದೊಳಗೆ ಪೂರ್ಣಗೊಳಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಾದು ಹೋಗಿರುವ ಎಲ್ಲಾ ರಾಷ್ಟ್ರೀಯ ಹೆದ್ಧಾರಿಗಳನ್ನು ಸಮರ್ಪಕ ದುರಸ್ತಿ ಮಾಡಿ, ಸುಗಮ ಸಂಚಾರಕ್ಕೆ ಅನುಕೂಲಕರವಾಗಿ ಮಾಡುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸಚಿವರು, ಬಿಸಿ.ರೋಡ್-ಕಲ್ಲಡ್ಕ-ಮಾಣಿ ರಾಷ್ಟ್ರೀಯ ಹೆದ್ಧಾರಿಯಲ್ಲಿ ದುರಸ್ತಿಯನ್ನು ಒಂದು ವಾರದೊಳಗೆ ಪೂರ್ಣಗೊಳಿಸಬೇಕು, ಮಳೆಯ ನೀರು ಹರಿದು ಹೋಗಲು ಸಮರ್ಪಕ ಚರಂಡಿ ವ್ಯವಸ್ಥೆ ಕಲ್ಪಿಸಬೇಕು. ವಾಹನಗಳು ಸುಗಮವಾಗಿ ಸಂಚರಿಸಲು ರಸ್ತೆಯನ್ನು ಅಭಿವೃದ್ಧಿಪಡಿಸಬೇಕು, ಮಳೆಯಿಂದ ಕಾಮಗಾರಿ ಮತ್ತೆ ಹಾನಿ ಆದರೆ ಮತ್ತೆ ದುರಸ್ತಿ ಮಾಡಬೇಕು. ಮಳೆಗಾಲ ಪೂರ್ಣಗೊಳ್ಳುವವರೆಗೂ ಈ ಹೆದ್ದಾರಿ ಮೇಲೆ ನಿಗಾ ವಹಿಸಬೇಕು ಎಂದು ಅವರು ಸೂಚಿಸಿದರು.

ಬಿ.ಸಿ. ರಸ್ತೆಯಿಂದ ಅಡ್ಡಹೊಳೆವರೆಗಿನ ರಾಷ್ಟ್ರೀಯ ಹೆದ್ದಾರಿ 75ರ ನಾಲ್ಕು ಪಥಗಳ ಕಾಮಗಾರಿ ನಿಧಾನಗತಿಯಲ್ಲಿ ಸಾಗಿದೆ. ಅವರು ಮಳೆನೀರು ಚರಂಡಿಗಳ ಕಾಮಗಾರಿಯನ್ನು ಇಷ್ಟೊತ್ತಿಗೆ ಪೂರ್ಣಗೊಳಿಸಿರಬೇಕು. ಪೂಂಜಾಲಕಟ್ಟೆಯಿಂದ ಚಾರ್ಮಾಡಿವರೆಗೆ ಮಳೆಗಾಲದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಪಿಡಬ್ಲ್ಯೂಡಿಯಿಂದ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಿಗೆ ಸೂಚಿಸಲಾಗಿದೆ. ವಿಸ್ತರಣೆ ಕಾಮಗಾರಿ ಪ್ರಗತಿಯಲ್ಲಿದೆ. ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳು ತಕ್ಷಣವೇ ವಿಸ್ತರಣೆಯನ್ನು ಪರಿಶೀಲಿಸುತ್ತಾರೆ. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮಳೆನೀರು, ಚರಂಡಿಗಳ ಹೂಳು ತೆಗೆಯುವಂತಹ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸಚಿವರು ತಿಳಿಸಿದರು.‌

ಕಡಬ, ಪುತ್ತೂರು ಭಾಗದಲ್ಲಿ ಆನೆಗಳ ಹಾವಳಿ ಕುರಿತಂತೆ ಪ್ರತಿಕ್ರಿಯಿಸಿದ ಸಚಿವ ದಿನೇಶ್ ಗುಂಡೂರಾವ್, ಕೇರಳದ ಹಿಂಡಿನ ಒಂದು ಆನೆ ದಾರಿ ತಪ್ಪಿ ಜಿಲ್ಲೆಗೆ ನುಗ್ಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಆನೆಯನ್ನು ಹಿಂಡಿಗೆ ಸೇರಿಸುವ ಪ್ರಯತ್ನ ನಡೆಸುತ್ತಿದ್ದಾರೆ. ಉಳ್ಳಾಲ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಮುದ್ರ ಕೊರೆತ ತಡೆಗೆ ತಾತ್ಕಾಲಿಕ ಕ್ರಮಕೈಗೊಳ್ಳಲಾಗುವುದು.

ಇದನ್ನೂ ಓದಿ: Banavasi News: ಬನವಾಸಿಯಲ್ಲಿ ವಿಶ್ವ ಪರಿಸರ ದಿನಾಚರಣೆ

ರಾಷ್ಟ್ರೀಯ ಸುಸ್ಥಿರ ಕರಾವಳಿ ನಿರ್ವಹಣಾ ಕೇಂದ್ರ (ಎನ್‌ಸಿಎಸ್‌ಸಿಎಂ), ಚೆನ್ನೈಗೆ ಸಮುದ್ರ ಕೊರೆತವನ್ನು ಪರಿಶೀಲಿಸಲು ಕರಾವಳಿ ಬೆಲ್ಟ್‌ನಲ್ಲಿ ತೆಗೆದುಕೊಳ್ಳಬೇಕಾದ ಶಾಶ್ವತ ಕ್ರಮಗಳ ವರದಿಯನ್ನು ಸಲ್ಲಿಸಲು ಕೇಳಲಾಗಿದೆ. ಏತನ್ಮಧ್ಯೆ, ಸಮುದ್ರ ಕೊರೆತದಿಂದ ಭೂಮಿಗೆ ಅಪಾಯವಿರುವ ಬಟ್ಪಾಡಿಯ ಮರವಂತೆ ಬೀಚ್ ಮಾದರಿಯಲ್ಲಿ ಶಾಶ್ವತ ಕ್ರಮಗಳನ್ನು ಕೈಗೊಳ್ಳಲು ಬಂದರು ಇಲಾಖೆಯು 80 ಕೋಟಿ ರೂ.ಗಳ ಪ್ರಸ್ತಾವನೆಯನ್ನು ಸಲ್ಲಿಸಿದೆ ಎಂದು ಹೇಳಿದರು.

Continue Reading

ಬೆಂಗಳೂರು

Bengaluru News: ಬೆಂಗಳೂರಿನಲ್ಲಿ ಪುಷ್ಪಮ್ ಆಯುರ್ವೇದ ವೆಲ್‌ನೆಸ್ ಸೆಂಟರ್‌ಗೆ ಚಾಲನೆ

Bengaluru News: ಬೆಂಗಳೂರಿನ ಜೆಪಿ ನಗರದಲ್ಲಿ ನೂತನ ಪುಷ್ಪಮ್ ಆಯುರ್ವೇದ ವೆಲ್‌ನೆಸ್ ಸೆಂಟರ್‌ನ ಉದ್ಘಾಟನಾ ಕಾರ್ಯಕ್ರಮ ಜರುಗಿತು. ಬೆಂಗಳೂರಿನ ಆಯುರಾಶ್ರಮದ ಶ್ರೀ ವಿಶ್ವ ಸಂತೋಷ ಭಾರತಿ ಸ್ವಾಮೀಜಿ ಹಾಗೂ ಮಾಜಿ ಕಾರ್ಪೊರೇಟರ್ ನಾಗರತ್ನ ರಾಮಮೂರ್ತಿ ಅವರು ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿದರು.

VISTARANEWS.COM


on

Inauguration of Pushpam Ayurveda Wellness Center in Bengaluru
Koo

ಬೆಂಗಳೂರು: ನಗರದ ಜೆಪಿ ನಗರದಲ್ಲಿ ನೂತನ ಪುಷ್ಪಮ್ ಆಯುರ್ವೇದ ವೆಲ್‌ನೆಸ್ ಸೆಂಟರ್‌ನ ಉದ್ಘಾಟನಾ ಕಾರ್ಯಕ್ರಮ ಜರುಗಿತು. ಬೆಂಗಳೂರಿನ ಆಯುರಾಶ್ರಮದ ಶ್ರೀ ವಿಶ್ವ ಸಂತೋಷ ಭಾರತಿ ಸ್ವಾಮೀಜಿ ಹಾಗೂ ಮಾಜಿ ಕಾರ್ಪೊರೇಟರ್ ನಾಗರತ್ನ ರಾಮಮೂರ್ತಿ ಅವರು ಜ್ಯೋತಿ ಬೆಳಗಿಸುವ ಮೂಲಕ ಚಾಲನೆ (Bengaluru News) ನೀಡಿದರು.

ಕಾರ್ಯಕ್ರಮದಲ್ಲಿ ರಾಜ್ಯ ಯೋಜನೆ ಮತ್ತು ಅಭಿವೃದ್ಧಿ ಅಧಿಕಾರಿ ಡಾ. ಮೊಹಮ್ಮದ್ ರಫಿ ಹಕೀಂ, ಬೆಂಗಳೂರು ಡಿಎಒ ಡಾ. ಶಹಾಬುದ್ದಿನ್, ಪ್ರಸಿದ್ಧ ಆಯುರ್ವೇದ ವೈದ್ಯರಾದ ಡಾ. ಬಲ್ಲಾಳ ಕೆ.ಸಿ., ಡಾ. ಗಿರಿಧರ್ ಕಜೆ ಮತ್ತು ಇತರ ವೈದ್ಯರು ಪಾಲ್ಗೊಂಡಿದ್ದರು.

ಇದನ್ನೂ ಓದಿ: Samsung: ಕ್ಯೂಎಲ್ಇಡಿ 4ಕೆ ಪ್ರೀಮಿಯಂ ಟಿವಿ ಸರಣಿ ಬಿಡುಗಡೆ ಮಾಡಿದ ಸ್ಯಾಮ್‌ಸಂಗ್

ಸ್ವಾಮಿ ಪುಷ್ಪಮ್ ಆಯುರ್ವೇದ ವೆಲ್‌ನೆಸ್ ಪ್ರೈವೇಟ್ ಲಿಮಿಟೆಡ್‌ನ ಘಟಕ ಇದಾಗಿದ್ದು, ಜೆಪಿ ನಗರದ 9ನೇ ಕ್ರಾಸ್ ರಸ್ತೆಯ ತಿರುಮಲಗಿರಿ ದೇವಸ್ಥಾನದ ಮುಂಭಾಗದಲ್ಲಿ ಪುಷ್ಪಮ್ ಆಯುರ್ವೇದ ವೆಲ್‌ನೆಸ್ ಸೆಂಟರ್ ಅನ್ನು ಆರಂಭಿಸಲಾಗಿದೆ.

ಭಾರತೀಯ ಪಾರಂಪರಿಕ ವಿಧಾನಗಳು ಮತ್ತು ಆಧುನಿಕ ತಂತ್ರಜ್ಞಾನಗಳನ್ನು ಬಳಸಿಕೊಂಡು ಅನೇಕ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ಡಾ. ರಾಜಶೇಖರ ಭೂಸನೂರಮಠ ಮತ್ತು ಡಾ. ಮಹತಿ ಸಾಹುಕರ್ ಅವರು, ಈ ಮಲ್ಟಿ ಸ್ಪೆಷಾಲಿಟಿ ಆಯುರ್ವೇದ ಆಸ್ಪತ್ರೆಯನ್ನು ಆರಂಭಿಸಿದ್ದಾರೆ.

ಇದನ್ನೂ ಓದಿ: Shira News: ಪರಿಸರ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ: ಶಾಸಕ ಟಿ.ಬಿ.ಜಯಚಂದ್ರ

ಈ ಆಯುರ್ವೇದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕರ್ನಾಟಕದಲ್ಲಿ ವಿಶೇಷವಾದ ಆಸ್ಪತ್ರೆಯಿದಾಗಿದ್ದು, ತ್ವಚೆ ಆರೈಕೆ, ಗಾಯದ ಚಿಕಿತ್ಸೆ, ಶಸ್ತ್ರಚಿಕಿತ್ಸೆ, ಸ್ತ್ರೀರೋಗ, ಡಿಟಾಕ್ಸ್, ಮಾನಸಿಕ, ವಿಶೇಷ ಚಿಕಿತ್ಸೆಗಳು ಮತ್ತು ಸಾಮಾನ್ಯ ಚಿಕಿತ್ಸೆಗಳನ್ನು ನಡೆಸುವ ವಿವಿಧ ವಿಭಾಗಗಳನ್ನು ಹೊಂದಿದೆ. ಜನರು ಆರೋಗ್ಯದ ಉತ್ತಮ ಲಾಭಗಳನ್ನು ಪಡೆಯಲು ಈ ಸೌಲಭ್ಯಗಳನ್ನು ಬಳಸಿಕೊಳ್ಳಬಹುದು ಎಂದು ಸಂಸ್ಥೆಯ ಮುಖ್ಯಸ್ಥ ಡಾ. ಭೂಸನೂರಮಠ ತಿಳಿಸಿದ್ದಾರೆ.

Continue Reading
Advertisement
Yuva Rajkumar
ಕರ್ನಾಟಕ1 hour ago

Yuva Rajkumar: ‘ಅನೈತಿಕ ಸಂಬಂಧ’ ಎಂದು ಯುವ ಪರ ವಕೀಲ ಆರೋಪ; ತಿರುಗೇಟು ಕೊಟ್ಟ ಶ್ರೀದೇವಿ!

Yuva Rajkumar
ಪ್ರಮುಖ ಸುದ್ದಿ2 hours ago

Yuva Rajkumar: ಹಲ್ಲು ಉಜ್ಜಲ್ಲ, ಸ್ನಾನ ಮಾಡಲ್ಲ, ಫಿಟ್ ಇಲ್ಲ ಎಂದು ಕಿರುಕುಳ ಕೊಡುತ್ತಿದ್ದ ಯುವ ಪತ್ನಿ!: ವಕೀಲರ ಆರೋಪ

Minister Dinesh Gundurao instructed to prepare for the disaster management that may occur on the coast during rainy season.
ದಕ್ಷಿಣ ಕನ್ನಡ2 hours ago

Mangalore News: ಸಿಡಿಲ ಅಪಾಯ ಇರುವ ಸ್ಥಳಗಳಲ್ಲಿ ಮಿಂಚು ಪ್ರತಿಬಂಧಕ ವ್ಯವಸ್ಥೆ; ಸರ್ಕಾರದ ನಿರ್ಧಾರ

Inauguration of Pushpam Ayurveda Wellness Center in Bengaluru
ಬೆಂಗಳೂರು3 hours ago

Bengaluru News: ಬೆಂಗಳೂರಿನಲ್ಲಿ ಪುಷ್ಪಮ್ ಆಯುರ್ವೇದ ವೆಲ್‌ನೆಸ್ ಸೆಂಟರ್‌ಗೆ ಚಾಲನೆ

Kalki 2898 AD Trailer Released on Vyjayanthi Movies YouTube Channel
ಕರ್ನಾಟಕ3 hours ago

Kalki 2898 AD: ಮೈನವಿರೇಳಿಸುವ ‘ಕಲ್ಕಿ 2898 AD’ ಚಿತ್ರದ ಟ್ರೇಲರ್‌ ರಿಲೀಸ್‌!

Mohan Bhagwat
ದೇಶ3 hours ago

Mohan Bhagwat: ಮಣಿಪುರ ಹಿಂಸೆ ನಿಲ್ಲಿಸಿ; ಅಧಿಕಾರ ಹಿಡಿದ ಮೋದಿಗೆ ಟಾಸ್ಕ್‌ ಕೊಟ್ಟ ಮೋಹನ್‌ ಭಾಗವತ್!

Stabbing Case
ಕರ್ನಾಟಕ4 hours ago

Stabbing Case: ಬಿಜೆಪಿ ಕಾರ್ಯಕರ್ತರಿಗೆ ಚೂರಿ ಇರಿತ ಪ್ರಕರಣ; ಐವರು ಆರೋಪಿಗಳ ಬಂಧನ

Yuva Rajkumar
ಕರ್ನಾಟಕ4 hours ago

Yuva Rajkumar: ಶ್ರೀದೇವಿ ಭೈರಪ್ಪಗೆ ಅಕ್ರಮ ಸಂಬಂಧ; ಯುವ ರಾಜ್‌ಕುಮಾರ್ ಪರ ವಕೀಲ ಸ್ಫೋಟಕ ಹೇಳಿಕೆ

Modi 3.0 Cabinet
ದೇಶ5 hours ago

Modi 3.0 Cabinet: ಮೋದಿಗೆ ಬಾಹ್ಯಾಕಾಶ, ಅಮಿತ್‌ ಶಾಗೆ ಗೃಹ ಖಾತೆ; ಇಲ್ಲಿದೆ 72 ಸಚಿವರು ಹಾಗೂ ಖಾತೆಗಳ ಪಟ್ಟಿ

ಕರ್ನಾಟಕ5 hours ago

Modi 3.0 Cabinet: ಜೋಶಿಗೆ ಆಹಾರ, ಎಚ್‌ಡಿಕೆಗೆ ಬೃಹತ್ ಕೈಗಾರಿಕೆ‌, ನಿರ್ಮಲಾಗೆ ವಿತ್ತ, ಸೋಮಣ್ಣಗೆ ಡಬಲ್‌ ಖುಷಿ, ಶೋಭಾಗೆ MSME

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ9 hours ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ3 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ3 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ7 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ1 week ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ1 week ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ2 weeks ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

ಟ್ರೆಂಡಿಂಗ್‌