wild animals attack Bear spotted again in tumkur farmWild Animals Attack: ರೈತನನ್ನು ಬಲಿ ಪಡೆದಿದ್ದ ಕರಡಿ ಮತ್ತೆ ಪ್ರತ್ಯಕ್ಷ; ತುಮಕೂರು ಜನರಲ್ಲಿ ಮತ್ತೆ ಹೆಚ್ಚಿದ ಆತಂಕ - Vistara News

ಕರ್ನಾಟಕ

Wild Animals Attack: ರೈತನನ್ನು ಬಲಿ ಪಡೆದಿದ್ದ ಕರಡಿ ಮತ್ತೆ ಪ್ರತ್ಯಕ್ಷ; ತುಮಕೂರು ಜನರಲ್ಲಿ ಮತ್ತೆ ಹೆಚ್ಚಿದ ಆತಂಕ

ತುಮಕೂರಲ್ಲಿ ಮತ್ತೆ ಕರಡಿ (wild animals attack) ಹಾವಳಿ ಮುಂದುವರಿದಿದ್ದು, ಕಾಡಂಚಿನ ಗ್ರಾಮಗಳ ಜಮೀನಿನಲ್ಲಿ ಕರಡಿ ಪ್ರತ್ಯಕ್ಷಗೊಂಡಿದೆ. ಈ ಹಿಂದೆ ಎಲೆಕಡಕಲು ಗ್ರಾಮದಲ್ಲಿ ಜಮೀನಿನಲ್ಲಿ ಕೆಲಸ ಮಾಡುವ ವೇಳೆ ರೈತನ ಮೇಲೆ ಕರಡಿ ದಾಳಿ (Bear Attacked) ನಡೆಸಿತ್ತು. ಇದೀಗ ಮತ್ತೆ ಜಮೀನಿನಲ್ಲಿ ಕರಡಿ ಪ್ರತ್ಯಕ್ಷಗೊಂಡಿದೆ.

VISTARANEWS.COM


on

ಕರಡಿ ಪ್ರತ್ಯಕ್ಷ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ತುಮಕೂರು: ಇಲ್ಲಿನ ಮಧುಗಿರಿ ತಾಲೂಕಿನ ಮಿಡಿಗೇಶಿ ಸಮೀಪದ ಈರಣ್ಣನ ಬೆಟ್ಟದಲ್ಲಿ ಕರಡಿಗಳ (wild animals attack) ಹಿಂಡು ಪ್ರತ್ಯಕ್ಷವಾಗಿತ್ತು. ಬೆಟ್ಟದ ತಪ್ಪಲಿನಲ್ಲಿರುವ ಜಮೀನುಗಳಿಗೆ ತೆರಳಲು ರೈತರು ಹೆದರುವಂತಾಗಿತ್ತು. ಇದೀಗ ಮತ್ತೆ ಜಮೀನಿನಲ್ಲಿ ಕರಡಿ ಪ್ರತ್ಯಕ್ಷವಾಗಿದ್ದು ಗ್ರಾಮಸ್ಥರದಲ್ಲಿ ಆತಂಕ ಹೆಚ್ಚಿಸಿದೆ.

Wild Animals Attack
ಆಹಾರ ಅರಸಿ ನಾಡಿಗೆ ಬರುತ್ತಿರುವ ಕರಡಿ

ಮಧುಗಿರಿ ತಾಲೂಕಿನ ಬೇಡತ್ತೂರು ಗ್ರಾಮದ ಹೊರವಲಯದ ಜಮೀನಿನಲ್ಲಿ ಕರಡಿ ಓಡಾಟದ ದೃಶ್ಯವನ್ನು ಗ್ರಾಮಸ್ಥರು ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಮಂಗಳವಾರ ಬೆಳಗ್ಗೆ ಜಮೀನಿನಲ್ಲಿ ಕರಡಿ ಓಡಾಡಿದ್ದು, ಬಳಿಕ ಗದ್ದಲ ಮಾಡಿ ಕರಡಿಯನ್ನು ಮತ್ತೆ ಬೆಟ್ಟದ ಕಡೆ ಓಡಿಸಿದ್ದಾರೆ.

Wild Animals Attack
ರಸ್ತೆ ಸಮೀಪದ ಜಮೀನಿನಲ್ಲಿ ಕರಡಿ ಪ್ರತ್ಯಕ್ಷ

ಹಗಲು ರಾತ್ರಿಯನ್ನದೇ ಕರಡಿಗಳು ಕಾಡಿನಿಂದ ನಾಡಿಗೆ ಬರುತ್ತಿರುವುದರಿಂದ ಗ್ರಾಮಸ್ಥರು ಭೀತಿಗೊಂಡಿದ್ದಾರೆ. ಶಾಲಾ ಕಾಲೇಜುಗಳಿಗೆ ತೆರಳುವ ಮಕ್ಕಳು ಭಯಪಡುವಂತಾಗಿದೆ. ಕರಡಿಗಳನ್ನು ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಗ್ರಾಮಸ್ಥರು ಮನವಿ ಮಾಡಿದ್ದಾರೆ.

Wild Animals Attack
ಜಮೀನಿನಲ್ಲಿ ಓಡಾಡುತ್ತಿರುವ ಕರಡಿ

ಈ ಹಿಂದೆಯೂ ಆಹಾರಕ್ಕಾಗಿ ಬಂದ ಕರಡಿಯೊಂದು ಮರದಲ್ಲಿ ತಂತಿಗೆ ಸಿಲುಕಿಕೊಂಡು (Bear Stuck In Tree) ಪರದಾಡಿದ ಘಟನೆ ಕುಣಿಗಲ್ ತಾಲೂಕಿನ ಕಾಡಬೋರನಹಳ್ಳಿ ಗ್ರಾಮದಲ್ಲಿ ನಡೆದಿತ್ತು. ಬಳಿಕ ಅರಣ್ಯ ಸಿಬ್ಬಂದಿ ಕರಡಿಯನ್ನು ರಕ್ಷಣೆ ಮಾಡಿದ್ದರು.

ಇದಾದ ಬಳಿಕ ಎಲೆಕಡಕಲು ಗ್ರಾಮದಲ್ಲಿ ಕರಡಿ ದಾಳಿಗೆ (Bear Attacked) ರಾಜು (33) ಎಂಬ ರೈತ ಬಲಿಯಾಗಿದ್ದರು. ಜಮೀನಿನಲ್ಲಿ ಕೆಲಸ ಮಾಡುವ ವೇಳೆ ರಾಜು ಮೇಲೆ ಕರಡಿ ದಾಳಿ ನಡೆಸಿತ್ತು. ಕರಡಿ ದಾಳಿಯಿಂದ ತಪ್ಪಿಸಿಕೊಳ್ಳಲು ಆಗದೆ ಸ್ಥಳದಲ್ಲೇ ಜೀವ ಬಿಟ್ಟಿದ್ದರು.

ರಾಮನಗರದಲ್ಲಿ ಬೋನಿಗೆ ಬಿದ್ದಿದ್ದ ಕರಡಿ

ರಾಮನಗರದ ಮಾಗಡಿ ತಾಲೂಕಿನ ಜೋಡಗಟ್ಟೆ ಗ್ರಾಮದಲ್ಲಿ ಅರಣ್ಯ ಇಲಾಖೆ (forest department) ಇರಿಸಿದ್ದ ಬೋನಿಗೆ ಕರಡಿಯೊಂದು (bear) ಏ.10ರ ಸೋಮವಾರ ಬಿದ್ದಿತ್ತು. ಹಲವು ದಿನಗಳಿಂದ ಕಾಡಂಚಿನ (Wild Animals Attack) ಗ್ರಾಮಸ್ಥರಿಗೆ ಕರಡಿಯು ಉಪಟಳ ನೀಡುತ್ತಿತ್ತು.

ಇದನ್ನೂ ಓದಿ: Murder Case: ಮನೆ ಮುಂದೆ ನಾಯಿ ವಿಸರ್ಜನೆ ಮಾಡಿಸಬೇಡಿ ಎಂದು ಆಕ್ಷೇಪಿಸಿದ್ದಕ್ಕೆ ಕೊಲೆ!

ಹೀಗಾಗಿ ಗ್ರಾಮಸ್ಥರು ಕರಡಿ ಸೆರೆ ಹಿಡಿಯುವಂತೆ ಮನವಿ ಮಾಡಿದ್ದರು.ಗ್ರಾಮಸ್ಥರ ಮನವಿ ಮೇರೆಗೆ ಕರಡಿ ಓಡಾಡುವ ಜಾಗದಲ್ಲಿ ಬೋನು ಇರಿಸಲಾಗಿತ್ತು. ನಿನ್ನೆ ಸೋಮವಾರ ಸುಮಾರು 6 ವರ್ಷ ವಯಸ್ಸಿನ ಹೆಣ್ಣು ಕರಡಿ ಸೆರೆಯಾಗಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಚಾಮರಾಜನಗರ

Self Harming : ಮಗಳ ನಗ್ನ ಫೋಟೊ ತೋರಿಸಿ ಪ್ರಿಯಕರ ಬ್ಲ್ಯಾಕ್‌ಮೇಲ್‌; ಮರ್ಯಾದೆಗೆ ಅಂಜಿ ವಿಷ ಸೇವಿಸಿದ ಕುಟುಂಬಸ್ಥರು

Self Harming : ದುಷ್ಟನೊಬ್ಬ ಮಗಳ ನಗ್ನ ಫೋಟೋ ತೋರಿಸಿ ಬೆದರಿಸುತ್ತಿದ್ದ ಎಂದು ಹೆದರಿ ಮರ್ಯಾದೆಗೆ ಅಂಜಿದ ಕುಟುಂಬವೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಘಟನೆಯಲ್ಲಿ ಕುಟುಂಬದ ಯಜಮಾನ ಮೃತಪಟ್ಟರೆ, ಉಳಿದ ಮೂವರು ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ.

VISTARANEWS.COM


on

By

Self Harming
Koo

ಚಾಮರಾಜನಗರ: ಮಲೆಮಹದೇಶ್ವರ ಬೆಟ್ಟದಲ್ಲಿ (MM Hills) ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ (Self Harming) ಯತ್ನಿಸಿದ ಪ್ರಕರಣಕ್ಕೆ ಟ್ವಿಸ್ಟ್‌ ಸಿಕ್ಕಿದೆ. ಚಂದಗಾಲು ಗ್ರಾಮದ ಮಹದೇವನಾಯಕ (65) ಅವರ ಪುತ್ರಿ ರಿಷಿಕಾ ಅನ್ಯಕೋಮಿನ ಯುವಕನನ್ನು ಪ್ರೀತಿಸುತ್ತಿದ್ದಳು. ಆದರೆ ಇತ್ತೀಚೆಗೆ ಆತನಿಂದ ಅಂತರ ಕಾಯ್ದುಕೊಂಡಾಗ ರಿಷಿಕಾಳ ಜತೆಗಿದ್ದ ನಗ್ನ ವಿಡಿಯೊ ಹಾಗೂ ಫೋಟೋ ಇಟ್ಟುಕೊಂಡು ಬೆದರಿಕೆ (Black mail Case) ಹಾಕುತ್ತಿದ್ದ ಎನ್ನಲಾಗಿದೆ.

ಈ ವಿಚಾರವಾಗಿ ಅನೇಕ ಬಾರಿ ಯುವಕನ ಹಾಗು ರಿಷಿಕಾ ಕುಟುಂಬದ ಜತೆ ಗಲಾಟೆ ಸಹ ಆಗಿದೆ. ಈತನ ಕಾಟಕ್ಕೆ ಬೇಸತ್ತ ಕುಟುಂಬ, ಮರ್ಯಾದೆಗೆ ಅಂಜಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ವಿಷ ಸೇವಿಸಿ ಅಸ್ವಸ್ಥಳಾಗಿದ್ದ ರಿಷಿಕಾಳನ್ನು ಹನೂರು ತಾಲೂಕಿನ ಹೋಲಿ ಕ್ರಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾಳೆ. ತಾಯಿ ಗೌರಮ್ಮ ಹಾಗೂ ಲೀಲಾವತಿಗೆ ಹೆಚ್ಚಿನ ಚಿಕಿತ್ಸೆಗೆಂದು ಕೊಳ್ಳೇಗಾಲದಿಂದ ಚಾಮರಾಜನಗರ ಸಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನೆಯಲ್ಲಿ ರಿಷಿಕಾ ತಂದೆ ಮಹದೇವನಾಯಕ ಅವರು ಮೃತಪಟ್ಟಿದ್ದಾರೆ.

ಇದನ್ನೂ ಓದಿ: Love‌ Torture : ಪ್ರೀತ್ಸೆ ಅಂತ ಪ್ರಾಣ ತಿಂದ; ಒಪ್ಪದೇ ಇದ್ದಾಗ ಯುವತಿಯ ಖಾಸಗಿ ಫೋಟೋ ಹರಿಬಿಟ್ಟ ಪಾಗಲ್‌ ಪ್ರೇಮಿ

MM Hills

ಮಾದಪ್ಪನ ದರ್ಶನ ಮಾಡಿ ವಿಷ ಸೇವಿಸಿದ ಕುಟುಂಬ

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ (Self Harming) ಯತ್ನಿಸಿದ್ದಾರೆ. ನಾಲ್ವರು ವಿಷ ಸೇವಿಸಿದ್ದು, ವ್ಯಕ್ತಿಯೊಬ್ಬರು ಮೃತಪಟ್ಟರೆ, ಮೂವರು ತೀವ್ರ ಅಸ್ವಸ್ಥಗೊಂಡಿದ್ದಾರೆ. ಮಲೆಮಹದೇಶ್ವರ ಬೆಟ್ಟ (MM Hills) ವ್ಯಾಪ್ತಿಯ ತಾಳಬೆಟ್ಟದಲ್ಲಿ ಘಟನೆ ನಡೆದಿತ್ತು.

ಚಂದಗಾಲು ಗ್ರಾಮದ ಮಹದೇವನಾಯಕ (65) ಮೃತ ದುರ್ದೈವಿ. ಅಸ್ವಸ್ಥಗೊಂಡ ಮಹದೇವನಾಯಕನ ಪತ್ನಿ ಗೌರಮ್ಮ(60), ರಿಷಿತಾ (21), ಲೀಲಾವತಿ (45) ಎಂಬುವವರು ತೀವ್ರ ಅಸ್ವಸ್ಥಗೊಂಡಿದ್ದಾರೆ. ಮೈಸೂರಿನ ಕೆಆರ್‌ನಗರ ತಾಲೂಕಿನ ಚಂದಗಾಲು ಗ್ರಾಮಸ್ಥರು ಎಂದು ತಿಳಿದು ಬಂದಿದೆ.

ಮಹದೇಶ್ವರ ಬೆಟ್ಟಕ್ಕೆ ಬಂದು ದೇವರ ದರ್ಶನ ಪಡೆದು ವಾಪಸ್ ಬರುವಾಗ ತಾಳ ಬೆಟ್ಟದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮಹದೇವನಾಯಕ ವಿಷ ಸೇವಿಸಿದ ಕೂಡಲೇ ಒದ್ದಾಡಿ ಮೃತಪಟ್ಟಿದ್ದಾರೆ. ಇತ್ತ ಗೌರಮ್ಮ, ಲೀಲಾವತಿ, ರಿಷಿತಾ ವಿಷ ಸೇವನೆ ಮಾಡಿದ್ದಾರೆ. ಆದರೆ ದೇಹದಲ್ಲಿ ಉರಿ ಕಾಣಿಸಿಕೊಂಡು ಜೋರಾಗಿ ಕೂಗಿಕೊಂಡು ನರಳಾಡಿದ್ದಾರೆ.

ಈ ವೇಳೆ ತಾಳ ಬೆಟ್ಟದಲ್ಲಿದ್ದ ಸ್ಥಳೀಯರು ಪರಿಶೀಲನೆ ನಡೆಸಿದಾಗ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವುದು ಕಂಡು ಬಂದಿದೆ. ಕೂಡಲೇ ಅಲ್ಲಿದ್ದವರು ನಾಲ್ವರನ್ನು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ ಮಹದೇವನಾಯಕರಿಗೆ ವಿಷ ದೇಹದೊಳಗೆ ಸೇರಿದ್ದರಿಂದ ಅದಾಗಲೇ ಉಸಿರು ಚೆಲ್ಲಿದ್ದರು. ಸದ್ಯ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Prajwal Revanna Case: ಪರಾರಿಯಾಗಲು ಸಹಾಯ; ಪ್ರಜ್ವಲ್ ರೇವಣ್ಣ ಗರ್ಲ್ ಫ್ರೆಂಡ್‌ಗೆ ಎಸ್‌ಐಟಿ ನೊಟೀಸ್!

Prajwal Revanna Case: ವಿದೇಶಕ್ಕೆ ಪರಾರಿಯಾದ ಪ್ರಜ್ವಲ್‌ಗೆ ಹಣ ಸಹಾಯ ಮಾಡಿರುವುದು, ಆಶ್ರಯ ಕಲ್ಪಿಸಿರುವ ಬಗ್ಗೆ ಮಹತ್ವದ ಸಾಕ್ಷ್ಯ ಲಭ್ಯವಾಗಿದ್ದರಿಂದ ಗರ್ಲ್ ಫ್ರೆಂಡ್‌ಗೆ ಎಸ್‌ಐಟಿ ನೋಟಿಸ್‌ ನೀಡಿದೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಅತ್ಯಾಚಾರ, ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿದೇಶದಲ್ಲಿ ತಲೆ ಮರೆಸಿಕೊಳ್ಳಲು ಹಣ ಸಹಾಯ ಮಾಡಿದ ಆರೋಪದಡಿ ಪ್ರಜ್ವಲ್‌ ಗರ್ಲ್ ಫ್ರೆಂಡ್‌ಗೆ ಎಸ್‌ಐಟಿ ನೊಟೀಸ್ ನೀಡಿದೆ. ಸಹಾಯ ಮಾಡುವ ಜತೆಗೆ ಇಲ್ಲಿನ ವಿದ್ಯಾಮಾನಗಳನ್ನು ಗರ್ಲ್ ಫ್ರೆಂಡ್ ಅಪ್ ಡೇಟ್ ಮಾಡುತ್ತಿದ್ದಳು ಎನ್ನಲಾಗಿದೆ. ಹೀಗಾಗಿ ವಿಚಾರಣೆಗೆ ಹಾಜರಾಗುವಂತೆ ಪ್ರಜ್ವಲ್‌ ಗರ್ಲ್ ಫ್ರೆಂಡ್‌ಗೆ ನೋಟಿಸ್‌ ಜಾರಿ ಮಾಡಲಾಗಿದೆ.

ಹಲವು ಬಾರಿ ನೋಟಿಸ್ ನೀಡಿದ್ದರೂ ಪ್ರಜ್ವಲ್‌ ರೇವಣ್ಣ ವಿಚಾರಣೆಗೆ ಬಂದಿರಲಿಲ್ಲ. ಆರ್ಥಿಕವಾಗಿ ಕಟ್ಟಿ ಹಾಕಲು ಅವರ ಬ್ಯಾಂಕ್ ಅಕೌಂಟ್‌ಗಳನ್ನು ಸೀಜ್‌ ಮಾಡಲು ಎಸ್ಐಟಿ ಮುಂದಾಗಿತ್ತು. ತನಿಖೆ ವೇಳೆ ಪ್ರಜ್ವಲ್‌ಗೆ ಹಣ ವರ್ಗಾವಣೆ ಮಾಡಿದ ಅಕೌಂಟ್‌ಗಳ ಮೇಲೆಯೂ ನಿಗಾ ಇಡಲಾಗಿತ್ತು. ಆದರೆ ಪ್ರಜ್ವಲ್‌ಗೆ ಗರ್ಲ್ ಫ್ರೆಂಡ್ ಹಣ ಸಹಾಯ ಮಾಡಿರುವುದು, ಆಶ್ರಯ ಕಲ್ಪಿಸಿರುವ ಬಗ್ಗೆ ಮಹತ್ವದ ಸಾಕ್ಷ್ಯ ಲಭ್ಯವಾಗಿದ್ದರಿಂದ ನೋಟಿಸ್‌ ನೀಡಲಾಗಿದೆ.

ಇದನ್ನೂ ಓದಿ | Bhavani Revanna: ಎಸ್‌ಐಟಿ ಮುಂದೆ ವಿಚಾರಣೆಗೆ ಹಾಜರಾದ ಭವಾನಿ ರೇವಣ್ಣ ಹೇಳಿದ್ದೇನು?

ಹೊಳೆನರಸೀಪುರದ ನಿವಾಸದಲ್ಲಿ ಸ್ಥಳ ಮಹಜರು

ಹಾಸನ: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸ್ಥಳ ಮಹಜರು ನಡೆಸಲು ಪ್ರಜ್ವಲ್‌ ರೇವಣ್ಣ ಅವರನ್ನು ಹೊಳೆನರಸೀಪುರದ ಚೆನ್ನಾಂಬಿಕಾ ನಿವಾಸಕ್ಕೆ ಎಸ್‌ಐಟಿ ಅಧಿಕಾರಿಗಳು ಕರೆದೊಯ್ದಿದ್ದಾರೆ. ಇದಕ್ಕಾಗಿ ಮನೆ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಕ್ಯಾಮೆರಾಗಳಿಗೂ ಕಾಣದಂತೆ ಪ್ರಜ್ವಲ್‌ ರೇವಣ್ಣ ಅವರನ್ನು ಕರೆದೊಯ್ಯಲಾಗಿದೆ.

ನಾನು ಯಾರನ್ನೂ ಕರೆದುಕೊಂಡು ಬರಲು ಹೇಳಿಲ್ಲ: ಭವಾನಿ

ಕೆ.ಆರ್‌.ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ. ನಾನು ಸಂತ್ರಸ್ತೆಯನ್ನು ಕರೆದುಕೊಂಡು ಬರಲು ಹೇಳಿಲ್ಲ ಎಂದು ಭವಾನಿ ರೇವಣ್ಣ ಹೇಳಿದ್ದಾರೆ. ಶುಕ್ರವಾರ ನಾಲ್ಕು ಗಂಟೆಗಳ ಕಾಲ ಭವಾನಿ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ವಿಚಾರಣೆ ನಡೆಸಿದ್ದು, ಪುನಃ ವಿಚಾರಣೆಗೆ ಕರೆದಾಗ ಬರುವಂತೆ ಸೂಚಿಸಲಾಗಿದೆ. ಇಂದು ಮತ್ತೆ ಭವಾನಿ ರೇವಣ್ಣ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ.

ಮಗನ ರಕ್ಷಣೆಗೆ ಯತ್ನಿಸಿ ಇಕ್ಕಟ್ಟಿಗೆ ಸಿಲುಕಿದ ತಾಯಿ

ಮಗ ಪ್ರಜ್ವಲ್‌ ರೇವಣ್ಣ ರಕ್ಷಣೆಗೆ ಯತ್ನಿಸಿ ತಾಯಿ ಭವಾನಿ ರೇವಣ್ಣ ಇಕ್ಕಟ್ಟಿಗೆ ಸಿಲುಕಿದ್ದಾರೆ. ಸಿಐಡಿಯ ಎಸ್ಐಟಿ ಕಚೇರಿಯಲ್ಲಿ ತಾಯಿ-ಮಗನ ವಿಚಾರಣೆ ತೀವ್ರಗೊಂಡಿದೆ. ಎಷ್ಟೇ ವಿಚಾರಣೆ ನಡೆಸಿದರೂ ಇಬ್ಬರೂ ಸೂಕ್ತ ಉತ್ತರ ನೀಡುತ್ತಿಲ್ಲ. ಒಂದೇ ಕಡೆ ಇದ್ದರೂ ತಾಯಿ-ಮಗನ ಭೇಟಿ ಅವಕಾಶ ನೀಡಿಲ್ಲ.

ಇದನ್ನೂ ಓದಿ | Prajwal Revanna Case: ರೇವಣ್ಣ ಎಫ್ಐಆರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಜೂನ್‌ 14ಕ್ಕೆ ಮುಂದೂಡಿಕೆ

ಇಬ್ಬರನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸಿ ಎಸ್ಐಟಿ ಅಧಿಕಾರಿಗಳು ಹೇಳಿಕೆ ದಾಖಲಿಸಿದ್ದಾರೆ. ಒಂದೂವರೆ ತಿಂಗಳಿನಿಂದ ಮಗನ ಮುಖ ತಾಯಿ ನೋಡಿಲ್ಲ. ನೆನ್ನೆ ಎಸ್ಐಟಿ ಕಚೇರಿಗೆ ಬಂದರೂ ಮಗನ ಮುಖ ನೋಡಲಾಗದ ಪರಿಸ್ಥಿತಿ ಇತ್ತು. ಹೀಗಾಗಿ ವಿಚಾರಣೆ ಮುಗಿಸಿ ಭವಾನಿ ರೇವಣ್ಣ‌ ವಾಪಸ್ ಆಗಿದ್ದರು.

Continue Reading

ಕರ್ನಾಟಕ

Election Results 2024: ಡಿ.ಕೆ. ಸುರೇಶ್ ಸೋಲಿಗೆ ಸಿದ್ದರಾಮಯ್ಯ ಆ್ಯಂಡ್ ಟೀಮ್ ಕಾರಣ: ಶಾಸಕ ಸುರೇಶ್ ಗೌಡ ಸ್ಫೋಟಕ ಹೇಳಿಕೆ

Election Results 2024: ಕರ್ನಾಟಕದಲ್ಲಿ ಸಿದ್ದರಾಮಯ್ಯನವರೇ ಸಿಎಂ ಆಗಿ ಮುಂದುವರಿಯಬೇಕು ಎಂದು ಒಂದು ಅಹಿಂದ ಟೀಮ್ ಯಾವಾಗಲೂ ಕೆಲಸ ಮಾಡುತ್ತದೆ. ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಬಾರದು ಎಂದು ಅವರ ಸಹೋದರರನನ್ನು ಸೋಲಿಸಲಾಗಿದೆ ಎಂದು ತುಮಕೂರು ಗ್ರಾಮಾಂತರ ಬಿಜೆಪಿ ಶಾಸಕ ಬಿ.ಸುರೇಶ್‌ ಗೌಡ ಆರೋಪಿಸಿದ್ಧಾರೆ.

VISTARANEWS.COM


on

Election Results 2024
Koo

ತುಮಕೂರು: ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಲೋಕಸಭಾ ಚುನಾವಣೆಯಲ್ಲಿ (Election Results 2024) ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ. ಸುರೇಶ್ (DK Suresh) ಸೋಲಿಗೆ ಸಿದ್ದರಾಮಯ್ಯ ಆ್ಯಂಡ್ ಟೀಮ್ ಕಾರಣ. ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಬಾರದು ಎಂದು ಈ ರೀತಿ ಮಾಡಿದ್ದಾರೆ ಎಂದು ಬಿಜೆಪಿ ಶಾಸಕ ಬಿ. ಸುರೇಶ್ ಗೌಡ (B Suresh Gowda) ಸ್ಫೋಟಕ ಹೇಳಿಕೆ ನೀಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಕರ್ನಾಟಕದಲ್ಲಿ ಸಿದ್ದರಾಮಯ್ಯನವರೇ ಸಿಎಂ ಆಗಿ ಮುಂದುವರಿಯಬೇಕು ಎಂದು ಒಂದು ಅಹಿಂದ ಟೀಮ್ ಯಾವಾಗಲೂ ಕೆಲಸ ಮಾಡುತ್ತದೆ. ಆ ಅಹಿಂದ ಟೀಮ್ ಮತ್ತು ಸಿದ್ದರಾಮಯ್ಯ ಸೇರಿ ಡಿ.ಕೆ. ಸುರೇಶ್ ಅವರನ್ನು ಸೋಲಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ನಾನು ಈ ಹಿಂದೆಯೇ ಹೇಳಿದ್ದೆ. ಸತೀಶ್ ಜಾರಕಿಹೊಳಿ, ಪರಮೇಶ್ವರ್, ರಾಜಣ್ಣ, ಸಿದ್ದರಾಮಯ್ಯ ಇಷ್ಟೂ ಜನ ಸೇರಿ ಡಿ.ಕೆ. ಸುರೇಶ್ ಅವರನ್ನು ಸೋಲಿಸುತ್ತಾರೆ ಎಂದು ಚುನಾವಣೆಯ ಮೊದಲೇ ಹೇಳಿದ್ದೆ. ನಾನು ಹೇಳಿದಂತೆಯೇ ನಡೆದಿದೆ. ಎರಡು ಲಕ್ಷ ಮತಗಳ ಅಂತರದಿಂದ (Lok Sabha Election 2024) ಸೋಲಿಸುತ್ತಾರೆ ಅಂತ ಹೇಳಿದ್ದೆ. ಅದಕ್ಕಿಂತ ಹೆಚ್ಚಿನ ಮತಗಳ ಅಂತರದಿಂದ ಡಿ.ಕೆ. ಸುರೇಶ್‌ ಅವರನ್ನು ಸೋಲಿಸಿದ್ದಾರೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | Kumar Bangarappa: ಗೀತಾ ಸೋತ ಹಿನ್ನೆಲೆಯಲ್ಲಿ ಗೇಲಿ ಮಾಡಿದ್ದ ಕುಮಾರ್ ಬಂಗಾರಪ್ಪ ಮನೆಗೆ ಶಿವಣ್ಣ ​ಅಭಿಮಾನಿಗಳ ಮುತ್ತಿಗೆ

ಕಾಂಗ್ರೆಸ್‌ನಲ್ಲಿ ಒಳಜಗಳ ಶುರುವಾಗುತ್ತೆ

ಇದು ಸಿದ್ದರಾಮಯ್ಯ ಸಂಚಿನ ಒಂದು ಭಾಗ. ಡಿ.ಕೆ. ಶಿವಕುಮಾರ್ ಅವರು ಮುಂದೆ ಮುಖ್ಯಮಂತ್ರಿ ಆಗಬಾರದು, ಅವರ ನೈತಿಕತೆ ಕುಸಿಯಬೇಕು ಅಂತ ಹೀಗೆ ಮಾಡಿದ್ದಾರೆ. ಇದರಿಂದ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಲ್ಲ, ಈ ಸರ್ಕಾರ ಉಳಿಯಲ್ಲ ಎಂಬುವುದು ಗೊತ್ತಾಗುತ್ತದೆ. ಇಲ್ಲಿಂದ ರಾಜಕೀಯ ಧ್ರುವೀಕರಣ ಪ್ರಾರಂಭ ಆಗುತ್ತದೆ, ಕಾಂಗ್ರೆಸ್‌ನಲ್ಲಿ ಒಳಜಗಳ ಶುರುವಾಗುತ್ತೆ. ಈಗಾಗಲೇ ಬೆಳಗಾವಿಯಲ್ಲಿ ಕಿತ್ತಾಟ ಶುರುವಾಗಿದೆ. ಬೆಂಗಳೂರು ಗ್ರಾಮಾಂತರದ ಸೋಲಿನಿಂದ ಇಲ್ಲಿಯೂ ಕೂಡ ಜಗಳ ಶುರುವಾಗಿದೆ, ಸರ್ಕಾರ ಪತನವಾಗುತ್ತೆ ಎಂದು ಹೇಳಿದ್ದಾರೆ.

Continue Reading

ದೇಶ

Toyota Kirloskar Motor: ದೆಹಲಿಯಲ್ಲಿ ಟಿಕೆಎಂನ ʼಟೊಯೊಟಾ ಯೂಸ್ಡ್ ಕಾರ್ʼ ಮಳಿಗೆಗೆ ಚಾಲನೆ

Toyota Kirloskar Motor: ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) ಇಂದು ನವದೆಹಲಿಯಲ್ಲಿ ತನ್ನ ಮೊದಲ ಕಂಪನಿಯ ಒಡೆತನದ ಟೊಯೊಟಾ ಯೂಸ್ಡ್ ಕಾರ್ ಮಳಿಗೆಯನ್ನು (ಟಿಯುಸಿಒ) ಉದ್ಘಾಟಿಸಿದೆ. “ಟೊಯೊಟಾ ಯು-ಟ್ರಸ್ಟ್” ಬ್ರಾಂಡ್ ಹೆಸರಿನಲ್ಲಿ, ಗ್ರಾಹಕರಿಗೆ ಉತ್ತಮ ಗುಣಮಟ್ಟದ ಮತ್ತು ಸುರಕ್ಷಿತವಾಗಿ ಬಳಸಿದ ಕಾರುಗಳನ್ನು ನೀಡುವ ಗುರಿಯನ್ನು ಹೊಂದಿರುವ ಟೊಯೊಟಾ ಯು-ಟ್ರಸ್ಟ್ ಕಾರುಗಳ ಖರೀದಿ ಮತ್ತು ಮಾರಾಟದ ಪ್ರಕ್ರಿಯೆಯಲ್ಲಿ ಅನುಕೂಲತೆ, ಪಾರದರ್ಶಕತೆ ಮತ್ತು ಪೀಸ್ ಆಫ್ ಮೈಂಡ್ ಅನ್ನು ನೀಡುತ್ತದೆ.

VISTARANEWS.COM


on

Toyota Kirloskar Motor Inauguration of Toyota Used Car Store by TKM in New Delhi
Koo

ಬೆಂಗಳೂರು: ಗ್ರಾಹಕ ಮೊದಲು ಎಂಬ ತತ್ವಕ್ಕೆ ತನ್ನ ಬದ್ಧತೆಯನ್ನು ಪ್ರದರ್ಶಿಸುವ ‘ಟೊಯೊಟಾ ಕಿರ್ಲೋಸ್ಕರ್ ಮೋಟಾರ್’ (Toyota Kirloskar Motor) ಇಂದು ನವದೆಹಲಿಯಲ್ಲಿ ತನ್ನ ಮೊದಲ ಕಂಪನಿಯ ಒಡೆತನದ ಟೊಯೊಟಾ ಯೂಸ್ಡ್ ಕಾರ್ ಮಳಿಗೆಯನ್ನು (ಟಿಯುಸಿಒ) ಉದ್ಘಾಟಿಸಿದೆ. “ಟೊಯೊಟಾ ಯು-ಟ್ರಸ್ಟ್” ಬ್ರಾಂಡ್ ಹೆಸರಿನಲ್ಲಿ, ಗ್ರಾಹಕರಿಗೆ ಉತ್ತಮ ಗುಣಮಟ್ಟದ ಮತ್ತು ಸುರಕ್ಷಿತವಾಗಿ ಬಳಸಿದ ಕಾರುಗಳನ್ನು ನೀಡುವ ಗುರಿಯನ್ನು ಹೊಂದಿರುವ ಟೊಯೊಟಾ ಯು-ಟ್ರಸ್ಟ್ ಕಾರುಗಳ ಖರೀದಿ ಮತ್ತು ಮಾರಾಟದ ಪ್ರಕ್ರಿಯೆಯಲ್ಲಿ ಅನುಕೂಲತೆ, ಪಾರದರ್ಶಕತೆ ಮತ್ತು ಪೀಸ್ ಆಫ್ ಮೈಂಡ್ ಅನ್ನು ನೀಡುತ್ತದೆ.

ಈ ಹೊಸ ಸೌಲಭ್ಯವು 15,000 ಚದರ ಅಡಿಗಳಷ್ಟು ವಿಸ್ತಾರವಾಗಿದ್ದು, 20ಕ್ಕೂ ಹೆಚ್ಚು ಟೊಯೊಟಾ ಪ್ರಮಾಣೀಕೃತ ವಾಹನಗಳ ಡಿಸ್‌ಪ್ಲೆ ಸಾಮರ್ಥ್ಯವನ್ನು ಹೊಂದಿದೆ. ಟೊಯೊಟಾ ವಾಹನಗಳ ಖರೀದಿ ಮತ್ತು ಮಾರಾಟ ಎರಡಕ್ಕೂ ಉದ್ದೇಶಿಸಲಾದ ರಿಟೇಲ್ ಟಚ್ ಪಾಯಿಂಟ್ ಆಗಿ ಟಿಯುಸಿಒದಲ್ಲಿನ ಎಲ್ಲಾ ಕಾರುಗಳು ಜಾಗತಿಕ ಟೊಯೊಟಾ ಮಾನದಂಡಗಳ ಆಧಾರದ ಮೇಲೆ ಸಮಗ್ರ 203-ಪಾಯಿಂಟ್‌ಗಳ ತಪಾಸಣೆಗೆ ಒಳಗಾಗುತ್ತವೆ. ತಪಾಸಣೆಗಳು ಕಠಿಣ ಸುರಕ್ಷತೆ, ರಚನಾತ್ಮಕ ಕಠಿಣತೆ ಮತ್ತು ಕಾರ್ಯಕ್ಷಮತೆಯ ಪರಿಶೀಲನೆಯನ್ನು ಸಹ ಒಳಗೊಂಡಿವೆ.

ಇದನ್ನೂ ಓದಿ: Gold Rate Today: ಆಭರಣ ಖರೀದಿಗೆ ಇದು ಸಕಾಲ; ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ

ಟೊಯೊಟಾಗೆ ಪ್ರತ್ಯೇಕವಾದ “ಹೈ ಕ್ವಾಲಿಟಿ ಪ್ರಿಶಿಯಸ್ ಕ್ಲೀನಿಂಗ್” ‘ಮಾರು ಮಾರು’ ಸಿಗ್ನೇಚರ್‌ನೊಂದಿಗೆ ಟಿಯುಸಿಒ ವಹಿವಾಟು ಭಾರತದಾದ್ಯಂತ ಟೊಯೊಟಾ ಗ್ರಾಹಕರಿಗೆ ಪಾರದರ್ಶಕ ಮತ್ತು ವಿಶ್ವಾಸಾರ್ಹ ಬಳಸಿದ ಕಾರು ಮಾರುಕಟ್ಟೆಯನ್ನು ಬೆಳೆಸುವ ಟಿಕೆಎಂನ ಬದ್ಧತೆಯನ್ನು ಬಲಪಡಿಸುತ್ತದೆ. ಇದಲ್ಲದೆ ಟೊಯೊಟಾ ಯು-ಟ್ರಸ್ಟ್ ಮಳಿಗೆಗಳು ಹೊಚ್ಚ ಹೊಸ ವಾಹನವನ್ನು ಖರೀದಿಸುವ ಸಮಾನಾರ್ಥಕ ವಾತಾವರಣ ಮತ್ತು ಗ್ರಾಹಕರ ಅನುಭವವನ್ನು ಪುನರಾವರ್ತಿಸಲು ಪ್ರಯತ್ನಿಸುತ್ತದೆ.

ಖರೀದಿದಾರರು ಸಂಪೂರ್ಣ ಪಾರದರ್ಶಕತೆ, ಕಿರಿಕಿರಿ ಇಲ್ಲದ ಡಾಕ್ಯುಮೆಂಟೇಶನ್ ಮತ್ತು ನ್ಯಾಯೋಚಿತ ಸ್ಪರ್ಧಾತ್ಮಕ ಬೆಲೆಯ ಭರವಸೆಯೊಂದಿಗೆ ವಿವಿಧ ರೀತಿಯ ಉತ್ತಮ-ಗುಣಮಟ್ಟದ ಟೊಯೊಟಾ ಮಾದರಿಗಳಿಂದ ಆಯ್ಕೆ ಮಾಡಬಹುದು. ಡಿಜಿಟಲ್ ಸಂಯೋಜಿತ ಶೋರೂಂ ಸಮಗ್ರ ವಾಹನ ಇತಿಹಾಸ ಮತ್ತು ಮೌಲ್ಯಮಾಪನವನ್ನು ಒದಗಿಸುವ ಮೂಲಕ ಗ್ರಾಹಕರ ಅನುಭವವನ್ನು ಹೆಚ್ಚಿಸುತ್ತದೆ. ಹೆಚ್ಚುವರಿಯಾಗಿ, ಗ್ರಾಹಕರು “ ವ್ಯಾಲ್ಯುಯೇಟ್ ಯುವರ್ ಕಾರ್” ಆಯ್ಕೆಯ ಮೂಲಕ ಟೊಯೊಟಾ ಯು-ಟ್ರಸ್ಟ್ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ತಮ್ಮ ವಾಹನಗಳನ್ನು ಮೌಲ್ಯಮಾಪನ ಮಾಡಬಹುದು.

ಹೆಚ್ಚುವರಿಯಾಗಿ ಮಾರಾಟದ ನಂತರದ ಸೇವೆಯ ಕಡೆಗೆ ನಿಜವಾದ ಟೊಯೊಟಾ ಗ್ರಾಹಕ ಕೇಂದ್ರಿತ ವಿಧಾನವನ್ನು ಪ್ರದರ್ಶಿಸುತ್ತದೆ. ಟಿಯುಸಿಒ ಪ್ರಮಾಣೀಕರಿಸಿದ ಬಳಸಿದ ಕಾರುಗಳಿಗೆ ದೇಶಾದ್ಯಂತ ಯಾವುದೇ ಟೊಯೊಟಾ ಸೇವಾ ಕೇಂದ್ರಗಳಲ್ಲಿ 30,000 ಕಿ.ಮೀ, ಅಥವಾ 2 ವರ್ಷಗಳು ಮತ್ತು 3 ಉಚಿತ ಸೇವೆಗಳ ವಾರಂಟಿಯನ್ನು ನೀಡಲಾಗುತ್ತದೆ. ಮಾರಾಟಗಾರರಿಗೆ, ಶಾಂತಿಯುತ ಮತ್ತು ಕಿರಿಕಿರಿ ಇಲ್ಲದ ಮಾರಾಟ ಪ್ರಕ್ರಿಯೆ ಜತೆಗೆ ಟುಕೊ ಮಾರುಕಟ್ಟೆಯಲ್ಲಿ ಉತ್ತಮ ಬೆಲೆಯನ್ನು ನೀಡುತ್ತದೆ.

ಇದನ್ನೂ ಓದಿ: Kannada New Movie: ʻರಮೇಶ್ ಸುರೇಶ್‌ʼ ಸಿನಿಮಾದಲ್ಲಿ ಇಬ್ಬರು ನಿರ್ದೇಶಕರು, ಇಬ್ಬರು ನಾಯಕರು ; ಜೂನ್ 21ರಂದು ತೆರೆಗೆ!

ಈ ಕುರಿತು ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ಉಪಾಧ್ಯಕ್ಷ ತಕಾಶಿ ತಕಾಮಿಯಾ ಮಾತನಾಡಿ, ಯೂಸ್ಡ್ ಕಾರ್ ಬ್ಯುಸಿನೆಸ್ ಭಾರತದಲ್ಲಿ ಟೊಯೊಟಾದ ಒಟ್ಟಾರೆ ವ್ಯವಹಾರ ಮತ್ತು ಬೆಳವಣಿಗೆಯ ಕಾರ್ಯತಂತ್ರದ ಪ್ರಮುಖ ಆಧಾರಸ್ತಂಭವಾಗಿದೆ. ಇದು ‘ಮೊಬಿಲಿಟಿ ಫಾರ್ ಆಲ್ ‘ ಎಂಬ ನಮ್ಮ ದೃಷ್ಟಿಕೋನದೊಂದಿಗೆ ನಿಕಟವಾಗಿ ಹೊಂದಿಕೆಯಾಗಿದೆ. ಆದ್ದರಿಂದ ನವದೆಹಲಿಯಲ್ಲಿ ನಮ್ಮ ಮೊದಲ ಯೂಸ್ಡ್ ಕಾರ್ ಔಟ್ಲೆಟ್ ಉದ್ಘಾಟನೆಯೊಂದಿಗೆ ಟಿಯುಸಿಒದ ವಿಸ್ತರಣೆಯು ಗುಣಮಟ್ಟ, ವಿಶ್ವಾಸಾರ್ಹತೆ ಮತ್ತು ಗ್ರಾಹಕರ ತೃಪ್ತಿಗೆ ನಮ್ಮ ಸಮರ್ಪಣೆಗೆ ಉದಾಹರಣೆಯಾಗಿದೆ. ಎಲ್ಲಕ್ಕಿಂತ ಹೆಚ್ಚಾಗಿ ಈ ಹೊಸ ಮಳಿಗೆಯು ಟೊಯೊಟಾ ಉತ್ಪನ್ನಗಳಿಗೆ ಸಮಾನಾರ್ಥಕವಾದ ಮಾನದಂಡಗಳನ್ನು ಮತ್ತು ನಮ್ಮ ಬೆಂಚ್ ಮಾರ್ಕ್ ಸೇವಾ ಅನುಭವವನ್ನು ಎತ್ತಿಹಿಡಿಯುತ್ತದೆ.

ಭಾರತೀಯ ಬಳಸಿದ ಕಾರು ಮಾರುಕಟ್ಟೆಯು ಶೇ.8% ಸಿಎಜಿಆರ್‌ ನಷ್ಟು ಬೆಳೆಯುತ್ತಿದೆ ಎಂದು ಅಂದಾಜಿಸಲಾಗಿದೆ. ಪ್ರಸ್ತುತ ಹೊಸ ಕಾರು ಮಾರುಕಟ್ಟೆಯ ಗಾತ್ರಕ್ಕಿಂತ 1.3 ಪಟ್ಟು ದೊಡ್ಡದಾಗಿದೆ. ಈ ವಲಯವು ಗಮನಾರ್ಹ ಬೆಳವಣಿಗೆಯ ಸಾಮರ್ಥ್ಯವನ್ನು ಹೊಂದಿದೆ. ದೆಹಲಿಯಲ್ಲಿ ಟೊಯೊಟಾ ಕಂಪನಿಯ ಒಡೆತನದ ಮಳಿಗೆಯ ನಮ್ಮ ಇತ್ತೀಚಿನ ವಿಸ್ತರಣೆ ಮತ್ತು ಪ್ರಮುಖ ಸ್ಥಳಗಳಲ್ಲಿ ಹೆಚ್ಚಿನ ಮಳಿಗೆಗಳನ್ನು ನಿರ್ಮಿಸಲು ಚಿಂತಿಸಿದೆ.

ನಮ್ಮ ಗ್ರಾಹಕರಿಗೆ ತಡೆರಹಿತ, ಪಾರದರ್ಶಕ ಮತ್ತು ವಿಶ್ವಾಸಾರ್ಹ ಬಳಸಿದ ಕಾರು ಮಾರುಕಟ್ಟೆಯನ್ನು ರಚಿಸುವ ಟಿಕೆಎಂನ ಕಾರ್ಯತಂತ್ರವನ್ನು ನಗರಗಳು ಒತ್ತಿಹೇಳುತ್ತವೆ. ಗುಣಮಟ್ಟ ಮತ್ತು ಸುರಕ್ಷತೆ-ಕೇಂದ್ರಿತ ನವೀಕರಣಕ್ಕೆ ಒತ್ತು ನೀಡುತ್ತವೆ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಟೊಯೊಟಾ ಕಿರ್ಲೋಸ್ಕರ್ ಮೋಟಾರ್‌ನ ಯೋಜನಾ ಉಪಾಧ್ಯಕ್ಷ ಅತುಲ್ ಸೂದ್ ಮಾತನಾಡಿ, ನವದೆಹಲಿ ಟಿಯುಸಿಒ ಸೌಲಭ್ಯವನ್ನು ತೆರೆಯುವುದು ಟೊಯೊಟಾ ಕಿರ್ಲೋಸ್ಕರ್ ಮೋಟಾರ್‌ಗೆ ಮಹತ್ವದ ಮೈಲಿಗಲ್ಲಾಗಿದೆ. ಯೂಸ್ಡ್ ಕಾರ್ ಮಾರುಕಟ್ಟೆಯಲ್ಲಿ ನಮ್ಮ ಹೆಜ್ಜೆ ಗುರುತನ್ನು ವಿಸ್ತರಿಸಲು ನಾವು ರೋಮಾಂಚನ ಗೊಂಡಿದ್ದೇವೆ, ಗ್ರಾಹಕರಿಗೆ ತಮ್ಮ ಟೊಯೊಟಾ ಕಾರುಗಳನ್ನು ಖರೀದಿಸಲು ಮತ್ತು ಮಾರಾಟ ಮಾಡಲು ವಿಶ್ವಾಸಾರ್ಹ ಮತ್ತು ಪಾರದರ್ಶಕ ಅನುಭವವನ್ನು ಒದಗಿಸುತ್ತದೆ, ಎಲ್ಲಾ ಮೌಲ್ಯವರ್ಧಿತ ಸೇವೆಗಳಿಗೆ ಒಂದೇ ಸೂರಿನಡಿ ಪರಿಹಾರವನ್ನು ನೀಡುತ್ತದೆ.

ಪ್ರತಿ ಪೂರ್ವ ಮಾಲಿಕತ್ವದ (ಯೂಸ್ಡ್ ಕಾರ್) ವಾಹನವು ನಮ್ಮ ವಿಶೇಷ ಕೇಂದ್ರಗಳಲ್ಲಿ ಟೊಯೊಟಾ ಜೆನ್ಯೂನ್ ಪಾರ್ಟ್ಸ್‌ಗಳನ್ನು ಬಳಸಿಕೊಂಡು ನಮ್ಮ ತಂತ್ರಜ್ಞರಿಂದ ನವೀಕರಣಕ್ಕೆ ಒಳಗಾಗುತ್ತದೆ. ಜಾಗತಿಕ ಟೊಯೊಟಾ ಮಾನದಂಡಗಳಿಗೆ ಅನುಗುಣವಾಗಿ ಸಮಗ್ರ 203-ಅಂಶಗಳ ತಪಾಸಣೆಯನ್ನು ನಡೆಸಲಾಗುತ್ತದೆ, ಇದು ಉತ್ತಮ ಗುಣಮಟ್ಟ ಮತ್ತು ವಿಶ್ವಾಸಾರ್ಹತೆಯನ್ನು ಖಚಿತಪಡಿಸುತ್ತದೆ. ಈ ಬದ್ಧತೆಯನ್ನು ಟೊಯೊಟಾದ ತೊಂದರೆ ಮುಕ್ತ ಮಾರಾಟದ ನಂತರದ ಸೇವಾ ಬೆಂಬಲದ ಖಾತರಿಯಿಂದ ಮತ್ತಷ್ಟು ಬಲಪಡಿಸಲಾಗಿದೆ, ಇದು ತಡೆರಹಿತ ಮತ್ತು ಸಂತೋಷದಾಯಕ ಮಾಲೀಕತ್ವದ ಅನುಭವವನ್ನು ಖಚಿತಪಡಿಸುತ್ತದೆ.

ಇದನ್ನೂ ಓದಿ: Raja Rani Show: ಇಂದಿನಿಂದ ʻರಾಜ ರಾಣಿ ರೀಲೋಡೆಡ್ʼ ರಿಯಾಲಿಟಿ ಶೋ ಶುರು!

ಟೊಯೊಟಾ ಕಿರ್ಲೋಸ್ಕರ್ ಮೋಟಾರ್ 2022 ರಲ್ಲಿ ಬೆಂಗಳೂರಿನಲ್ಲಿ ತನ್ನ ಮೊದಲ ಮಳಿಗೆಯನ್ನು ಉದ್ಘಾಟಿಸುವ ಮೂಲಕ 2022 ರಲ್ಲಿ ಬಳಸಿದ ಯೂಸ್ಡ್ ಕಾರ್ ಮಾರುಕಟ್ಟೆಗೆ ಕಾಲಿಟ್ಟಿತು. ಇದು ಟಿಕೆಎಂ ಅನ್ನು ಗ್ರಾಹಕರಿಗೆ ಸಂಪೂರ್ಣ ಒಇಎಂ (ಮೂಲ ಉಪಕರಣ ತಯಾರಕ) ನವೀಕರಿಸಿದ ಬಳಸಿದ ಕಾರುಗಳನ್ನು ನೀಡುವ ಭಾರತದ ಮೊದಲ ವಾಹನ ತಯಾರಕ ಕಂಪನಿಯನ್ನಾಗಿ ಮಾಡಿದೆ.

Continue Reading
Advertisement
Narendra Modi
ದೇಶ4 mins ago

Elon Musk: ಹ್ಯಾಟ್ರಿಕ್‌ ಸರದಾರ ನರೇಂದ್ರ ಮೋದಿಗೆ ಎಲಾನ್‌ ಮಸ್ಕ್ ಅಭಿನಂದನೆ

Nikhil Kumaraswamy will stay on Kannada Film industry
ಸ್ಯಾಂಡಲ್ ವುಡ್5 mins ago

Nikhil Kumaraswamy: ಚಿತ್ರರಂಗದಿಂದ ಸ್ವಲ್ಪ ವಿರಾಮ ತೆಗೆದುಕೊಂಡಿದ್ದೇನೆ ಅಷ್ಟೇ ಎಂದ ನಿಖಿಲ್ ಕುಮಾರಸ್ವಾಮಿ

Nitish Kumar
Lok Sabha Election 202413 mins ago

Nitish Kumar: ಇಂಡಿ ಒಕ್ಕೂಟದ ಸಂಚಾಲಕ ಹುದ್ದೆ ನೀಡಲು ನಿರಾಕರಿಸಿದ್ದ ನಿತೀಶ್ ಕುಮಾರ್‌ಗೆ ಈಗ ಪ್ರಧಾನಿಯ ಆಫರ್!

NEET 2024
ಪ್ರಮುಖ ಸುದ್ದಿ15 mins ago

NEET 2024: ನೀಟ್‌ ಅಕ್ರಮ; 1,500 ವಿದ್ಯಾರ್ಥಿಗಳ ಪತ್ರಿಕೆ ಮರು ಮೌಲ್ಯಮಾಪನಕ್ಕೆ ಸಮಿತಿ ರಚಿಸಿದ ಕೇಂದ್ರ!

IND vs PAK
ಕ್ರೀಡೆ19 mins ago

IND vs PAK: ಇಂಡೋ-ಪಾಕ್ ಟಿ20 ವಿಶ್ವಕಪ್​ ಕೌತುಕ; ಹೇಗಿದೆ ಇತ್ತಂಡಗಳ ದಾಖಲೆ? 

Self Harming
ಚಾಮರಾಜನಗರ28 mins ago

Self Harming : ಮಗಳ ನಗ್ನ ಫೋಟೊ ತೋರಿಸಿ ಪ್ರಿಯಕರ ಬ್ಲ್ಯಾಕ್‌ಮೇಲ್‌; ಮರ್ಯಾದೆಗೆ ಅಂಜಿ ವಿಷ ಸೇವಿಸಿದ ಕುಟುಂಬಸ್ಥರು

Narendra Modi
ದೇಶ36 mins ago

Narendra Modi: ಮೋದಿ ಪ್ರಮಾಣವಚನಕ್ಕೆ 7 ವಿದೇಶಿ ನಾಯಕರು; 8000 ಅತಿಥಿಗಳು

Prajwal Revanna Case
ಪ್ರಮುಖ ಸುದ್ದಿ37 mins ago

Prajwal Revanna Case: ಪರಾರಿಯಾಗಲು ಸಹಾಯ; ಪ್ರಜ್ವಲ್ ರೇವಣ್ಣ ಗರ್ಲ್ ಫ್ರೆಂಡ್‌ಗೆ ಎಸ್‌ಐಟಿ ನೊಟೀಸ್!

AFG vs NZ
ಕ್ರಿಕೆಟ್60 mins ago

AFG vs NZ: ಅಫಘಾನಿಸ್ತಾನ ವಿರುದ್ಧ ಹೀನಾಯ ಸೋಲು ಕಂಡ ನ್ಯೂಜಿಲ್ಯಾಂಡ್​

Election Results 2024
ಕರ್ನಾಟಕ1 hour ago

Election Results 2024: ಡಿ.ಕೆ. ಸುರೇಶ್ ಸೋಲಿಗೆ ಸಿದ್ದರಾಮಯ್ಯ ಆ್ಯಂಡ್ ಟೀಮ್ ಕಾರಣ: ಶಾಸಕ ಸುರೇಶ್ ಗೌಡ ಸ್ಫೋಟಕ ಹೇಳಿಕೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ21 hours ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ22 hours ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ4 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ5 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ5 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ6 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು7 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌