Sanjay Dutt: ಕನ್ನಡದ 'ಕೆ.ಡಿ' ಸಿನಿಮಾ ಶೂಟಿಂಗ್‌ ವೇಳೆ ಸಂಜಯ್‌ ದತ್‌ಗೆ ಗಾಯ? ಸುದ್ದಿ ಅಲ್ಲಗಳೆದ ಅಧೀರ - Vistara News

ಕರ್ನಾಟಕ

Sanjay Dutt: ಕನ್ನಡದ ‘ಕೆ.ಡಿ’ ಸಿನಿಮಾ ಶೂಟಿಂಗ್‌ ವೇಳೆ ಸಂಜಯ್‌ ದತ್‌ಗೆ ಗಾಯ? ಸುದ್ದಿ ಅಲ್ಲಗಳೆದ ಅಧೀರ

Sanjay Dutt: ಬೆಂಗಳೂರಿನ ಮಾಗಡಿ ರಸ್ತೆಯ ಸೀಗೇನಹಳ್ಳಿಯಲ್ಲಿ ಶೂಟಿಂಗ್‌ ಮಾಡುವಾಗ ಸಂಜಯ್‌ ದತ್‌ ಅವರಿಗೆ ಗಾಯಗಳಾಗಿವೆ ಎಂದು ಹೇಳಲಾಗಿತ್ತು. ಆದರೆ, ಈ ವರದಿಗಳನ್ನು ಬಾಲಿವುಡ್‌ ನಟ ತಿರಸ್ಕರಿಸಿದ್ದಾರೆ.

VISTARANEWS.COM


on

Sanjay Dutt rubbishes baseless reports of getting injured on the sets of KD Kannada Movie
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕೆಜಿಎಫ್‌-ಚಾಪ್ಟರ್‌ 2 ಸಿನಿಮಾದ ಮೂಲಕ ಕರ್ನಾಟಕದ ಸಿನಿಪ್ರಿಯರ ಮನಗೆದ್ದಿರುವ ಬಾಲಿವುಡ್‌ ಖ್ಯಾತ ನಟ ಸಂಜಯ್‌ ದತ್‌ (Sanjay Dutt) ಅವರಿಗೆ ಧ್ರುವ ಸರ್ಜಾ ನಟನೆಯ ಕೆ.ಡಿ ಚಿತ್ರದ ಶೂಟಿಂಗ್‌ ವೇಳೆ ಗಾಯಗಳಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ. ಮಾಗಡಿ ರಸ್ತೆಯ ಸೀಗೇನಹಳ್ಳಿಯಲ್ಲಿ ಶೂಟಿಂಗ್‌ ಮಾಡುವಾಗ ಸಂಜಯ್‌ ದತ್‌ ಅವರಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ. ಆದರೆ, ಸಿನಿಮಾ ಶೂಟಿಂಗ್‌ ಬಳಿಕ ಸ್ಪಷ್ಟನೆ ನೀಡಿರುವ ಸಂಜಯ್‌ ದತ್, “ನನಗೆ ಗಾಯಗಳಾಗಿವೆ ಎಂಬ ವರದಿಯೇ ಸುಳ್ಳು” ಎಂದು ಟ್ವೀಟ್‌ ಮಾಡಿದ್ದಾರೆ.

“ನನಗೆ ಗಾಯಗಳಾಗಿವೆ ಎಂಬ ವರದಿ ಕೇಳಿಬಂದಿವೆ. ಆದರೆ, ಈ ವರದಿಗಳೆಲ್ಲ ಆಧಾರರಹಿತ ಎಂಬುದಾಗಿ ನಿಮಗೆಲ್ಲ ಸ್ಪಷ್ಟಪಡಿಸಲು ಇಚ್ಛಿಸುತ್ತೇನೆ. ದೇವರ ಆಶೀರ್ವಾದದಿಂದ ನಾನು ಆರೋಗ್ಯವಾಗಿದ್ದೇನೆ. ನಾನು ಕೆ.ಡಿ ಸಿನಿಮಾ ಶೂಟಿಂಗ್‌ನಲ್ಲಿ ನಿರತನಾಗಿದ್ದು, ಇಡೀ ತಂಡವು ಹೆಚ್ಚಿನ ಕಾಳಜಿ ವಹಿಸುತ್ತಿದೆ. ನಿಮ್ಮ ಕಾಳಜಿಗೆ ಧನ್ಯವಾದಗಳು” ಎಂದು ಸಂಜಯ್‌ ದತ್‌ ಅವರು ಟ್ವೀಟ್‌ ಮೂಲಕ ತಮ್ಮ ಆರೋಗ್ಯದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಕೆಜಿಎಫ್‌-ಚಾಪ್ಟರ್‌ 2 ಚಿತ್ರದಲ್ಲಿ ಅಧೀರನ ಪಾತ್ರದ ಮೂಲಕ ಸಂಜಯ್‌ ದತ್‌ ಅವರು ಕರ್ನಾಟಕದಲ್ಲಿ ಮತ್ತಷ್ಟು ಮನೆಮಾತಾಗಿದ್ದಾರೆ. ಹಾಗಾಗಿ, ಅವರು ದಕ್ಷಿಣ ಭಾರತದ ಸಿನಿಮಾಗಳಲ್ಲಿ ಹೆಚ್ಚು ನಟಿಸಲು ಉತ್ಸುಕರಾಗಿದ್ದಾರೆ. ಸದ್ಯ ಅವರು ಪ್ರೇಮ್‌ ನಿರ್ದೇಶನ, ಧ್ರುವ ಸರ್ಜಾ ನಟನೆಯ ಕೆ.ಡಿ: ದಿ ಡೆವಿಲ್‌ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ.

ಕೆ.ಡಿ ಸಿನಿಮಾ ಕುರಿತು ಮಾತನಾಡಿದ ಅವರು, “ನಾನು ಕೆಜೆಎಫ್‌ ಸಿನಿಮಾದಲ್ಲಿ ನಟಿಸಿದ್ದೇನೆ. ಈಗ ಪ್ರೇಮ್‌ ನಿರ್ದೇಶನದಲ್ಲಿ ಕೆ.ಡಿ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ. ನಾನು ಈ ಸಿನಿಮಾದಲ್ಲಿ ಇನ್ನಷ್ಟು ಉತ್ತಮವಾಗಿ ನಟಿಸಲು ಯತ್ನಿಸುತ್ತಿದ್ದೇನೆ ಹಾಗೂ ಇಡೀ ಚಿತ್ರತಂಡಕ್ಕೆ ಒಳ್ಳೆಯದಾಗಲಿ ಎಂದು ಬಯಸುತ್ತೇನೆ. ಹಾಗೆಯೇ, ನನಗೆ ದಕ್ಷಿಣ ಭಾರತದ ಮತ್ತಷ್ಟು ಸಿನಿಮಾಗಳಲ್ಲಿ ನಟಿಸುವ ಇಚ್ಛೆ ಇದೆ” ಎಂದು ಅವರು ಹೇಳಿದ್ದಾರೆ.

ಕೆಜಿಎಫ್‌ 2 ಬಳಿಕ ಬಾಲಿವುಡ್‌ನಲ್ಲೂ ಸಂಜಯ್‌ ದತ್‌ ಅವರು ತುಂಬ ಬ್ಯುಸಿಯಾಗಿದ್ದಾರೆ. ಅಕ್ಷಯ್‌ ಕುಮಾರ್‌, ಸುನೀಲ್‌ ಶೆಟ್ಟಿ, ಪರೇಶ್‌ ರಾವಲ್‌ ನಟನೆಯ ಹೇರಾ ಫೇರಿ 2 ಸಿನಿಮಾದಲ್ಲಿ ಅವರು ನಟಿಸುತ್ತಿದ್ದಾರೆ. ಇದರಲ್ಲಿ ಅವರು ಅಂಧ ಡಾನ್‌ ಆಗಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: Suniel Shetty: ಸುನೀಲ್‌ ಶೆಟ್ಟಿಗೆ ಅಮಿತಾಭ್‌ ಬಚ್ಚನ್‌, ಸಂಜಯ್‌ ದತ್ ʻಅಣ್ಣಾʼ ಅಂತ ಕರೆಯುವುದೇಕೆ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Government Employees: ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ; ಆ.17ರಂದು ವಿಶೇಷ ಸಾಂದರ್ಭಿಕ ರಜೆ

Government Employees: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ವೃಂದ ಸಂಘಗಳ ವತಿಯಿಂದ ಆ.17ರಂದು ನಗರದ ಅರಮನೆ ಆವರಣದಲ್ಲಿ ಅಭಿನಂದನಾ ಕಾರ್ಯಕ್ರಮ ಹಾಗೂ ಕಾರ್ಯಾಗಾರ ಆಯೋಜಿಸಲಾಗಿದೆ. ಹೀಗಾಗಿ ರಾಜ್ಯ ಸರ್ಕಾರಿ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಲಾಗಿದೆ.

VISTARANEWS.COM


on

Government Employees
Koo

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ (Government Employees) ಸರ್ಕಾರ ಸಿಹಿ ಸುದ್ದಿ ನೀಡಿದೆ. ರಾಜ್ಯ 7ನೇ ವೇತನ ಆಯೋಗದ ವರದಿ ಜಾರಿ ಮಾಡಿದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಕೃತಜ್ಞತೆ ಸಲ್ಲಿಸಲು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ವೃಂದ ಸಂಘಗಳ ವತಿಯಿಂದ ಆ.17ರಂದು ನಗರದ ಅರಮನೆ ಆವರಣದಲ್ಲಿ ಅಭಿನಂದನಾ ಕಾರ್ಯಕ್ರಮ ಹಾಗೂ ಕಾರ್ಯಾಗಾರ ಆಯೋಜಿಸಲಾಗಿದೆ. ಹೀಗಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಅನುಕೂಲವಾಗಲೆಂದು ಸರ್ಕಾರಿ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆಯನ್ನು (Special casual leave) ರಾಜ್ಯ ಸರ್ಕಾರ ಮಂಜೂರು ಮಾಡಿದೆ.

ಈ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ವಿಮಲಾಕ್ಷಿ. ಬಿ ಸುತ್ತೋಲೆ ಹೊರಡಿಸಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ವೃಂದ ಸಂಘಗಳ ವತಿಯಿಂದ ಆ.17ರಂದು ಬೆಂಗಳೂರು ನಗರದ ಅರಮನೆ ಆವರಣದಲ್ಲಿ ಅಭಿನಂದನೆ ಹಾಗೂ ಕಾರ್ಯಾಗಾರ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಛಿಸುವ ನೌಕರರು ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.

ಸಮ್ಮೇಳನದಲ್ಲಿ ಭಾಗವಹಿಸಿದ ಬಗ್ಗೆ ಅಧಿಕೃತ ಹಾಜರಾತಿ ಪತ್ರವನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ಅಥವಾ ಅವರಿಂದ ನಾಮನಿರ್ದೇಶನ ಹೊಂದಿದ ಅಧಿಕಾರಿಗಳಿಂದ ಪಡೆದು ಒದಗಿಸಬೇಕು. ಈ ಷರತ್ತಿಗೊಳಪಟ್ಟು ಬೆಂಗಳೂರು ನಗರ ಜಿಲ್ಲೆಯ ಹಾಗೂ ರಾಜ್ಯದ ಇತರೆ ಜಿಲ್ಲೆಗಳ ಅಧಿಕಾರಿ, ನೌಕರರಿಗೆ ಆ.17ರಂದು ಸಾರ್ವಜನಿಕ ಕೆಲಸ ಕಾರ್ಯಗಳಿಗೆ ತೊಂದರೆಯಾಗದಂತೆ ಒಂದು ದಿನದ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Government Employees Sports

ಇದನ್ನೂ ಓದಿ | Independence day 2024: ಆಗಸ್ಟ್ 15ರಂದು ಪ್ರಧಾನಿ ಮೋದಿ ಭಾಷಣವನ್ನು ಎಷ್ಟು ಹೊತ್ತಿಗೆ, ಎಲ್ಲಿ ವೀಕ್ಷಿಸಬಹುದು?

ಆ.17ರಿಂದ 19ರವರೆಗೆ ರಾಜ್ಯಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ

Government Employees Sports
Government Employees Sports

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಆ. 17ರಿಂದ 19ರವರೆಗೆ ಬೆಂಗಳೂರಿನಲ್ಲಿ 2023-24ನೇ ಸಾಲಿನ ರಾಜ್ಯಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ (Government Employees Sports) ಆಯೋಜಿಸಲು ತೀರ್ಮಾನಿಸಲಾಗಿದೆ. ಹೀಗಾಗಿ ಕ್ರೀಡಾಕೂಟ ಆಯೋಜನೆಗೆ ಸಿದ್ಧತೆ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸೂಚನೆ ನೀಡಿದೆ.

ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಜೂನ್ 3ರಂದು ನಡೆದ ಪೂರ್ವಭಾವಿ ಸಭೆಯಲ್ಲಿ ಶಿವಮೊಗ್ಗದಲ್ಲಿ ಕ್ರೀಡಾಕೂಟವನ್ನು ಆಯೋಜಿಸಲು ತೀರ್ಮಾನಿಸಲಾಗಿತ್ತು. ಆದರೆ ಇದೀಗ ಕ್ರೀಡಾಕೂಟವನ್ನು ಬೆಂಗಳೂರು ನಗರದಲ್ಲಿ ಆ.17ರಿಂದ 19ರವರೆಗೆ (ಮೂರು ದಿನ) ನಡೆಸಲು ಸಂಘವು ತೀರ್ಮಾನಿಸಿದೆ. ಅದರಂತೆ ಕ್ರೀಡಾಕೂಟವನ್ನು ಬೆಂಗಳೂರು ನಗರ ಜಿಲ್ಲೆಯಲ್ಲಿ ಆಯೋಜಿಸಲು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸುತ್ತೋಲೆಯನ್ನು ಹೊರಡಿಸಿದೆ.

ಕ್ರೀಡಾಕೂಟದಲ್ಲಿ ಭಾಗವಹಿಸಲು ನಿಯಮಾವಳಿ

  1. ಕ್ರೀಡಾಕೂಟದಲ್ಲಿ ರಾಜ್ಯ ಸರ್ಕಾರದ ಎಲ್ಲಾ ಕಾಯಂ ನೌಕರರು ಭಾಗವಹಿಸಲು ಅರ್ಹರಾಗಿರುತ್ತಾರೆ.
  2. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿನ ತರಬೇತುದಾರರು. ಶಿಕ್ಷಣ ಇಲಾಖೆಯ ದೈಹಿಕ ಶಿಕ್ಷಕರು, ದೈಹಿಕ ಶಿಕ್ಷಣ ನಿರ್ದೇಶಕರು ಹಾಗೂ ಕ್ರೀಡಾಕೋಟಾದಡಿ ನೇಮಕಗೊಂಡ ನೌಕರರು ಭಾಗವಹಿಸಲು ಅರ್ಹರಾಗಿರುವುದಿಲ್ಲ.
  3. ಎಲ್ಲಾ ಕ್ರೀಡಾಪಟುಗಳು ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಕ್ರೀಡೆಯಲ್ಲಿ ಭಾಗವಹಿಸಲು ನೀಡಿರುವ ಅಧಿಕೃತ ಗುರುತಿನ ಚೀಟಿ ಕಡ್ಡಾಯವಾಗಿ ಸಲ್ಲಿಸತಕ್ಕದ್ದು.
  4. ಸಂಗೀತ, ನೃತ್ಯ ಮತ್ತು ಕಲಾ ಶಿಕ್ಷಕರು, ಸಂಗೀತ, ನೃತ್ಯ ಮತ್ತು ಕರಕುಶಲ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹರಾಗಿರುವುದಿಲ್ಲ.
  5. ದಿನಗೂಲಿ ನೌಕರರು, ಅರೆಕಾಲಿಕ ನೌಕರರು, ಕ್ಷೇಮಾಭಿವೃದ್ಧಿ ನೌಕರರು, ಗುತ್ತಿಗೆ ನೌಕರರು, ನಿಗಮ/ಮಂಡಳಿ ನೌಕಕರು ಮತ್ತು ಇತರೇ ಕಾಯಂ ಅಲ್ಲದ ನೌಕರರು ಭಾಗವಹಿಸಲು ಅರ್ಹರಾಗಿರುವುದಿಲ್ಲ.
  6. ಪೊಲೀಸ್ ಇಲಾಖೆ, ಅರಣ್ಯ ಇಲಾಖೆಗಳಲ್ಲಿ ಸಮವಸ್ತ್ರ ವೃಂದಕ್ಕೆ ಪ್ರತ್ಯೇಕ ಕ್ರೀಡಾಕೂಟಗಳಿರುವುದರಿಂದ ಈ ಎರಡೂ ಇಲಾಖೆಗಳ ಕಛೇರಿ ಹಾಗೂ ಲಿಪಿಕ ನೌಕರರು/ಕಚೇರಿ ಸಿಬ್ಬಂದಿ ಮಾತ್ರ ಈ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶವಿದೆ.
  7. ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಅಬಕಾರಿ, ಅರಣ್ಯ, ಅಗ್ನಿಶಾಮಕ ಇಲಾಖೆಗಳ ಕ್ರೀಡಾ ಕೋಟಾದಡಿ ನೇಮಕವಾದ ನೌಕರರು ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶವಿರುವುದಿಲ್ಲ.
  8. 1 ಟ್ರಾಕ್ ಮತ್ತು 2 ಫೀಲ್ಡ್ ಅಥವಾ 2 ಟ್ರ್ಯಾಕ್ ಮತ್ತು 1 ಫೀಲ್ಡ್ ಸೇರಿ ಒಟ್ಟು ಮೂರು ಆಟಗಳಲ್ಲಿ ಮಾತ್ರ ಭಾಗವಹಿಸತಕ್ಕದ್ದು
  9. 45 ವರ್ಷ ಮೇಲ್ಪಟ್ಟ ಸ್ಪರ್ಧಿಗಳು 45 ವರ್ಷಕ್ಕೊಳಪಟ್ಟವರಿಗೆ ಇರುವ ಸ್ಪರ್ಧೆಗಳಲ್ಲಿ, ಸ್ವಂತ ಜವಾಬ್ದಾರಿ ಮೇಲೆ ಭಾಗವಹಿಸಬಹುದು. 45 ವರ್ಷಕ್ಕೊಳಪಟ್ಟವರು 45 ವರ್ಷ ಮೇಲ್ಪಟ್ಟವರ ಜೊತೆಯಲ್ಲಿ ಭಾಗವಹಿಸಲು ಅವಕಾಶವಿರುವುದಿಲ್ಲ.
  10. ತೀರ್ಪುಗಾರರ ತೀರ್ಮಾನವೇ ಅಂತಿಮ ತೀರ್ಮಾನ, ತಕರಾರಿಗೆ ಅವಕಾಶವಿರುವುದಿಲ್ಲ.
  11. ಏಕಕಾಲದಲ್ಲಿ ಸ್ಪರ್ಧೆಗಳನ್ನು ನಡೆಸಲಿದ್ದು, ಯಾವುದೇ ಕಾರಣಕ್ಕೂ ಸ್ಪರ್ಧಿಗಳನ್ನು ಕಾಯುವುದಿಲ್ಲ.
  12. ಕರಕುಶಲ ವಸ್ತು ಪ್ರದರ್ಶನದಲ್ಲಿ ಸಿದ್ಧವಿರುವ ವಸ್ತುಗಳ ಪ್ರದರ್ಶನಕ್ಕೆ ಅವಕಾಶವಿರುವುದಿಲ್ಲ. ಸ್ಥಳದಲ್ಲಿ ತಯಾರಾಗಿ (ಮೊದಲನೇ ದಿನ) ಇಡಬೇಕು. 2ನೇ ದಿನ ತೀರ್ಪುಗಾರರಿಂದ ಪರಿಶೀಲಿಸಲಾಗುವುದು.
  13. ಸ್ಪರ್ಧೆ ನಡೆಯದ ಕ್ರೀಡೆಗಳಲ್ಲಿ ಆಯ್ಕೆಯಾದ ಕ್ರೀಡಾಪಟುಗಳಿಗೆ ಕ್ರೀಡಾ ಪ್ರಶಸ್ತಿ ಪತ್ರ ಹಾಗೂ ಬಹುಮಾನವನ್ನು ನೀಡಲಾಗುವುದಿಲ್ಲ.
  14. ಸಂಘಟಕರೊಡನೆ ಅಥವಾ ತೀರ್ಪುಗಾರರೊಡನೆ ಅಸಭ್ಯವಾಗಿ ವರ್ತಿಸುವ ಕ್ರೀಡಾಪಟುಗಳನ್ನು ಕ್ರೀಡಾ ಸ್ಪರ್ಧೆಯಿಂದ ಹೊರಹಾಕುವುದಲ್ಲದೆ, ಸಂಬಂಧಿಸಿದ ಇಲಾಖೆಯ ಮುಖ್ಯಸ್ಥರ ಗಮನಕ್ಕೆ ತಂದು ತಪ್ಪಿತಸ್ಯ ಕ್ರೀಡಾಪಟುವಿನ ಮೇಲೆ ಸೇವಾ ನಿಯಮಗಳ ರೀತ್ಯಾ ಶಿಸ್ತಿನ ಕ್ರಮ ಜರುಗಿಸಲು ಶಿಫಾರಸು ಮಾಡಲಾಗುವುದು.
  15. ಕ್ರೀಡಾ ಸ್ಪರ್ಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳು ಸ್ಪರ್ಧೆ ಪ್ರಾರಂಭವಾಗುವ ನಿಗದಿತ ಸಮಯಕ್ಕೆ ಕನಿಷ್ಠ 1 ಗಂಟೆ ಮುಂಚಿತವಾಗಿ ಹಾಜರಿದ್ದು, ಕ್ರೀಡಾ ಸಂಘಟಕನಾಧಿಕಾರಿಗಳಲ್ಲಿ ವರದಿ ಮಾಡಿಕೊಳ್ಳತಕ್ಕದ್ದು.
  16. ಕ್ರೀಡಾ ಸ್ಪರ್ಧೆಗಳಲ್ಲಿ ಸಂಗೀತ, ನೃತ್ಯ ಹಾಗೂ ನಾಟಕಗಳಲ್ಲಿ ಭಾಗವಹಿಸುವ ಸ್ಪರ್ಧಿಗಳು ತಮ್ಮದೇ ಆದ ಸಲಕರಣೆಗಳನ್ನು ತರತಕ್ಕದ್ದು
  17. ಸಂಗೀತ ಮತ್ತು ನೃತ್ಯ ಸ್ಪರ್ಧೆಗಳಲ್ಲಿ ಚಲನಚಿತ್ರ ಗೀತೆಯ ತುಣುಕು ಇತ್ಯಾದಿಗಳಿಗೆ ಅವಕಾಶವಿಲ್ಲ
  18. ಸಂಗೀತ, ನೃತ್ಯ, ಚೆಸ್ ಮತ್ತು ನಾಟಕ ಸ್ಪರ್ಧೆಗಳಲ್ಲಿ ಪ್ರತ್ಯೇಕವಾಗಿ ಪುರುಷರಿಗೆ ಮತ್ತು ಮಹಿಳೆಯರಿಗೆ ಸ್ಪರ್ಧೆಗಳು ಇರುವುದಿಲ್ಲ.
  19. ಸ್ಪರ್ಧಿಗಳು ಉದ್ಘಾಟನಾ ಸಮಾರಂಭದ ಪಥ ಸಂಚಲನದಲ್ಲಿ ಆಯಾ ಜಿಲ್ಲೆಯ ಬಾವುಟದೊಂದಿಗೆ ಭಾಗವಹಿಸುವುದು ಕಡ್ಡಾಯವಾಗಿದೆ. ಉದ್ಘಾಟನಾ ಸಮಾರಂಭಕ್ಕೆ ಮೊದಲು ನೋಂದಾವಣೆ ಮಾಡಿಕೊಳ್ಳುವ ಕ್ರೀಡಾಪಟುಗಳಿಗೆ ಮಾತ್ರ ಹಾಜರಾತಿ ನೀಡಲಾಗುವುದು.
  20. ಸರ್ಕಾರಿ ಆದೇಶ ಸಂ:ಎಫ್‌ಡಿಎ/ಎಸ್‌ಆರ್‌ಎಸ್/2002, ಬೆಂಗಳೂರು, ದಿನಾಂಕ:27-11-2002ರಂ ರಾಜ್ಯ ಸರ್ಕಾರದ ವತಿಯಿಂದ ನಡೆಸುವ ರಾಜ್ಯಮಟ್ಟದ ಮತ್ತು ಜಿಲ್ಲಾಮಟ್ಟದ ಕ್ರೀಡೆಗಳಲ್ಲಿ ಭಾಗವಹಿಸುವ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆ ಮತ್ತು ಪ್ರಯಾಣ ಭತ್ಯೆ ಸೌಲಭ್ಯಗಳನ್ನು ಷರತ್ತಿಗೊಳಪಟ್ಟು ಮಂಜೂರಾತಿ ನೀಡಿದೆ.
  21. ಒಬ್ಬ ಸರ್ಕಾರಿ ನೌಕರನು ಹಲವು ಕ್ರೀಡೆಗಳಲ್ಲಿ ಭಾಗವಹಿಸಲು ನೋಂದಾಯಿಸಿದ್ದರು ಸಹ ಒಂದು ಜೊತೆ ಕ್ರೀಡಾ ಸಮವಸ್ತ್ರ/ಟ್ರ್ಯಾಕ್ ಸೂಟ್ ನೀಡಲು ಕ್ರಮವಹಿಸುವುದು.
  22. ಯಾವ ಸ್ಪರ್ಧೆಗಳಲ್ಲಿ ಕ್ರೀಡಾಪಟುಗಳು ಭಾಗವಹಿಸಿರುವುದಿಲ್ಲವೋ ಅಂತಹ ಸ್ಪರ್ಧೆಗಳಿಗೆ ಕ್ರೀಡಾಪಟುವಲ್ಲದ ನೌಕರರನ್ನು ಸೇರ್ಪಡೆಗೊಳಿಸುವ ಕ್ರಮವನ್ನು ಕೈಬಿಡುವುದು. ಒಂದು ವೇಳೆ ತಪ್ಪು ಮಾಹಿತಿ ನೀಡಿರುವುದು ಕಂಡುಬಂದಲ್ಲಿ ಅಂತಹ ಸಹಾಯಕ ನಿರ್ದೇಶಕರು ಹಾಗೂ ನೌಕರರ ವಿರುದ್ಧ ಶಿಸ್ತು ಕ್ರಮ ಅನಿವಾರ್ಯವಾಗಲಿದೆ ಎಂಬ ಅಂಶವನ್ನು ಸ್ಪಷ್ಟಪಡಿಸುವುದು.

ಇದನ್ನೂ ಓದಿ | Part Time Lecturers: ಅರೆಕಾಲಿಕ ಉಪನ್ಯಾಸಕರಿಗೆ ಗುಡ್ ನ್ಯೂಸ್; ಗೌರವಧನದಲ್ಲಿ ಭಾರಿ ಹೆಚ್ಚಳ

Continue Reading

ಕರ್ನಾಟಕ

Muda Scam: ಸಿಎಂ ವಿರುದ್ಧದ ಸ್ನೇಹಮಯಿ ಕೃಷ್ಣ ಅರ್ಜಿ ಆದೇಶ ಆ.20ಕ್ಕೆ ಕಾಯ್ದಿರಿಸಿದ ಕೋರ್ಟ್‌; ಅಬ್ರಹಾಂ ಅರ್ಜಿ ವಿಚಾರಣೆ ಮುಂದೂಡಿಕೆ

Muda Scam: ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ಟ ಅವರು, ಸಿಎಂ ಸಿದ್ದರಾಮಯ್ಯ ವಿರುದ್ಧ ದಾಖಲಾಗಿದ್ದ ಎರಡು ಖಾಸಗಿ ದೂರಿನ ಅರ್ಜಿಗಳ ವಿಚಾರಣೆ ನಡೆಸಿದ್ದಾರೆ. ಸ್ನೇಹಮಯಿ ಕೃಷ್ಣ ದಾಖಲಿಸಿದ್ದ ಅರ್ಜಿಯ ಆದೇಶ ಆ.20ಕ್ಕೆ ಕಾಯ್ದಿರಿಸಿದ್ದು, ಟಿ.ಜೆ. ಅಬ್ರಹಾಂ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಆ.21ಕ್ಕೆ ಮುಂದೂಡಿದ್ದಾರೆ.

VISTARANEWS.COM


on

Muda Scam
Koo

ಬೆಂಗಳೂರು: ಮುಡಾ ಹಗರಣಕ್ಕೆ (Muda Scam) ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ದಾಖಲಿಸಿದ್ದ ಖಾಸಗಿ ದೂರಿನ ಅರ್ಜಿ ಆದೇಶವನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಆ.20ಕ್ಕೆ ಕಾಯ್ದಿರಿಸಿದೆ. ಇನ್ನು ಇದೇ ಪ್ರಕರಣಕ್ಕೆ ಸಂಬಂಧಿಸಿ ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ಸಲ್ಲಿಸಿದ್ದ ಖಾಸಗಿ ಅರ್ಜಿ ವಿಚಾರಣೆಯನ್ನು ಆಗಸ್ಟ್ 21ಕ್ಕೆ ಮುಂದೂಡಿದೆ.

ಮುಡಾದಲ್ಲಿ ಕಾನೂನು ಬಾಹಿರವಾಗಿ ನಿವೇಶನ ಪಡೆದುಕೊಂಡಿದ್ದಾರೆ ಎಂದು ಆರೋಪಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶಿಸುವಂತೆ ಸಲ್ಲಿಕೆಯಾಗಿದ್ದ ಎರಡು ಖಾಸಗಿ ದೂರಿನ ಅರ್ಜಿಗಳನ್ನು ವಿಶೇಷ ನ್ಯಾಯಾಲಯ ವಿಚಾರಣೆ ನಡೆಸಿದೆ. ಮೊದಲಿಗೆ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಖಾಸಗಿ ದೂರಿನ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ಟ ಅವರು, ದೂರಿನ ಸಂಬಂಧ ಅಂತಿಮ ಆದೇಶವನ್ನು ಆ.20ಕ್ಕೆ ಕಾಯ್ದಿರಿಸಿದರು. ಅದೇ ರೀತಿ ಮಾಹಿತಿ ಆರ್‌ಟಿಐ ಟಿ.ಜೆ.ಅಬ್ರಹಾಂ ದಾಖಲಿಸಿದ್ದ ಅರ್ಜಿ ವಿಚಾರಣೆಯನ್ನು ಆ.21ಕ್ಕೆ ಮುಂದೂಡಿದರು.

ಟಿ.ಜೆ.ಅಬ್ರಹಾಂ ವಾದ ಮಂಡನೆ; ನಕಲಿ ದಾಖಲೆ ಸೃಷ್ಟಿಸಿ ಜಾಗ ಮಾರಾಟ ಆರೋಪ

ಪ್ರಕರಣದಲ್ಲಿ ದೂರುದಾರ ಅಬ್ರಹಾಂ ಅವರೇ ವಾದ ಮಂಡಿಸಿ, ಮೈಸೂರಿನ ಹೊರವಲಯದ ಕೆಸರೆ ಗ್ರಾಮ ಹಾಗೂ ದೇವನೂರು ಗ್ರಾಮಗಳಲ್ಲಿ ನಡೆದಿರುವ ಹಗರಣದ ಬಗ್ಗೆ ಮಾಹಿತಿ ನೀಡಿದರು. ಕೆಸರೆ ಗ್ರಾಮದಲ್ಲಿ ದೇವನೂರು ಬಡವಾಣೆ ನಿರ್ಮಾಣ ಮಾಡಲಾಗಿದೆ. ಆದರೆ, ಅಲ್ಲಿ ಜಮೀನೇ ಇಲ್ಲದಿದ್ದರೂ ದೇವರಾಜ್ ನಕಲಿ‌ ದಾಖಲೆ ಸೃಷ್ಟಿಸಿದ್ದಾನೆ. ನಕಲಿ ದಾಖಲೆಗಳ ಮೂಲಕ‌ ಸೃಷ್ಟಿಸಿದ ಜಾಗವನ್ನು ಮಲ್ಲಿಕಾರ್ಜುನಗೆ ಮಾರಾಟ ಮಾಡಿದ್ದ ಎಂದು ತಿಳಿಸಿದರು.

ಇದನ್ನೂ ಓದಿ | Lakshmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ಗೆ ಅಹವಾಲು ಸಲ್ಲಿಸಲು ಸಾಲುಸಾಲು ಜನ

ಸಿದ್ದರಾಮಯ್ಯ ಅಧಿಕಾರಾವಧಿಯಲ್ಲಿ ರೆವಿನ್ಯೂ ಲ್ಯಾಂಡ್ ಅನ್ನು ಕನ್ವರ್ಷನ್ ಮಾಡಲಾಗಿದೆ. ಬಳಿಕ 2010ರಲ್ಲಿ ಕಾನೂನು ಬಾಹಿರವಾಗಿ ಗಿಫ್ಟ್ ಡೀಡ್ ಮಾಡಲಾಗಿದೆ. ಅದರ ಫಲಾನುಭವಿ ಸಿದ್ದರಾಮಯ್ಯ ಅವರ ಪತ್ನಿಯಾಗಿದ್ದಾರೆ.
ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗ ಬೋಗಸ್ ಕನ್ವರ್ಷನ್ ಆಗಿದೆ. ಜಿಲ್ಲಾಧಿಕಾರಿ ಜಾಗವನ್ನು ಪರಿಶೀಲನೆ ಮಾಡಿ ಕನ್ವರ್ಷನ್ ಮಾಡ್ಡಿದ್ದೇವೆ ಎನ್ನುವುದು ಸುಳ್ಳು. 2010ರಲ್ಲಿ ಪಾರ್ವತಿಯವರಿಗೆ ಕಾನೂನು ಬಾಹಿರವಾಗಿ ದಾನ ನೀಡಲಾಗಿದೆ ಎಂದು ಟಿ‌.ಜೆ. ಅಬ್ರಹಾಂ ತಿಳಿಸಿದ್ದಾರೆ.

2013ರ ಚುನಾವಣೆಯಲ್ಲಿ ಈ ಜಾಗದ ಮಾಹಿತಿಯನ್ನು ಸಿದ್ದರಾಮಯ್ಯ ಮುಚ್ಚಿಟ್ಟಿದ್ದಾರೆ. 2011 ರಿಂದ 2014 ರವರೆಗೆ ಲೋಕಾಯುಕ್ತಕ್ಕೆ ಸಿದ್ದರಾಮಯ್ಯ ನೀಡಿದ್ದ ಮಾಹಿತಿಯಲ್ಲೂ‌ ಮುಚ್ಚಿಡಲಾಗಿದೆ. ಇವರು ಹೇಗೆ ದೇವನೂರು ಬಡಾವಣೆಯನ್ನು ಕೆಸರೆ ಗ್ರಾಮ ಮಾಡುತ್ತಾರೆ. ಹೇಗೆ ಬಡಾವಣೆಯನ್ನು ಕೃಷಿ ಭೂಮಿಯಲ್ಲಿ ಮಾಡುತ್ತಾರೆ? ಆದರೂ ಬಹಳ ಅಭಿವೃದ್ಧಿ ಹೊಂದಿದ ಅರ್ಜಿಯನ್ನು 55 ಕೋಟಿ 80 ಲಕ್ಷ ಬೆಲೆಯ ಸೈಟ್‌ಗಳ ನೀಡಿದ್ದಾರೆ. ಅದು ಕೂಡ ತುಂಬಾ ಡೆವಲಪ್ಮೆಂಟ್ ಆಗಿರುವ ಲೇಔಟ್ ನಲ್ಲಿ ನೀಡ್ತಾರೆ.

ಸಿದ್ದರಾಮಯ್ಯ ಪತ್ನಿಯ ಸ್ವಾಧೀನದಲ್ಲೇ ಇಲ್ಲದ ಜಾಗವನ್ನು ಹೇಗೆ ರಿಲೀಸ್ ಡೀಡ್ ನೀಡಲು ಹೇಗೆ ಸಾಧ್ಯ.? ಪಾರ್ವತಿ ಅವರು ಕ್ಲೈಂ ಮಾಡುವ ರೀತಿ ಕೃಷಿ ಭೂಮಿ ಇರಲೇ ಇಲ್ಲ. ಕೇವಲ ದಾಖಲೆಗಳನ್ನು ಮಾತ್ರ ಸೃಷ್ಟಿ ಮಾಡಿ ಪರಿಹಾರ ಪಡೆದಿದ್ದಾರೆ. ಈ ಸಂಬಂಧ ಮೈಸೂರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಲಾಗಿದೆ. ಲೋಕಾಯುಕ್ತ ಪೊಲೀಸರು ಯಾವುದೇ ಕ್ರಮ ಕೈಗೊಳ್ಳದ ಕಾರಣ ಖಾಸಗಿ ದೂರು ಸಲ್ಲಿಸಲಾಗಿದೆ. ಭ್ರಷ್ಟಾಚಾರ ಕಾಯಿದೆ 17A ಸಿದ್ದರಾಮಯ್ಯ ಅವರಿಗೆ ಅನ್ವಯ ಆಗಲ್ಲ. ಪಿ.ಸಿ.ಆ್ಯಕ್ಟ್ 19ರ ಅಡಿ ಕಾಗ್ನಿಜೆನ್ಸ್ ತೆಗೆದುಕೊಳ್ಳಲು ಕೋರ್ಟ್‌ಗೆ ಟಿ.ಜೆ.ಅಬ್ರಹಾಂ ಮನವಿ ಮಾಡಿದರು. ವಾದ-ಪ್ರತಿವಾದ ಆಲಿಸಿದ ಕೋರ್ಟ್‌, ವಿಚಾರಣೆಯನ್ನು ಆಗಸ್ಟ್ 21ಕ್ಕೆ ಮುಂದೂಡಿತು.

ಏನಿದು ಕೋರ್ಟ್​ ಪ್ರಕರಣ?

ಸಿಎಂ ಸಿದ್ದರಾಮಯ್ಯ ಅವರು ಅಧಿಕಾರ ದುರ್ಬಳಕೆ ಮಾಡಿ ಮೈಸೂರು ಅಭಿವೃದ್ಧಿ ಪ್ರಾಧಿಕಾರದ ನಿವೇಶನಗಳನ್ನು ತಮ್ಮ ಪತ್ನಿಯ ಹೆಸರಿಗೆ ಪಡೆದುಕೊಂಡಿರುವ ಆರೋಪ ಸಂಬಂಧ ಕ್ರಿಮಿನಲ್ ಪ್ರಕರಣ ದಾಖಲಿಸಿ ತನಿಖೆ ನಡೆಸುವುದಕ್ಕೆ ಸೂಚನೆ ನೀಡಬೇಕು ಎಂದು ಕೋರಿ ಬೆಂಗಳೂರಿನ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಮೈಸೂರಿನ ಮಾಹಿತಿ ಹಕ್ಕು ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಎಂಬುವರು ಖಾಸಗಿ ದೂರು ಸಲ್ಲಿಸಿದ್ದರು. ಅದರ ವಿಚಾರಣೆ ನಡೆಯುತ್ತಿರುವ ನಡುವೆಯೇ ಬೆಂಗಳೂರಿನ ಮಾಹಿತಿ ಹಕ್ಕು ಕಾರ್ಯಕರ್ತ ಟಿ.ಜೆ. ಅಬ್ರಾಹಂ ಮತ್ತೊಂದು ದೂರು ಸಲ್ಲಿಸಿದ್ದರು.

ಮೂಲ ಜಮೀನಿಗೆ ಮಾಲೀಕರೇ ಇಲ್ಲ. ಆ ಜಮೀನು ಸಿದ್ದರಾಮಯ್ಯ ಸಂಬಂಧಿಕರ ಹೆಸರಿಗೆ ಬಂದಿದೆ. ಅಲ್ಲಿಂದ ಸಿದ್ದರಾಮಯ್ಯ ಪತ್ನಿ ಹೆಸರಿಗೆ ಉಡುಗೊರೆಯಾಗಿ ಬಂದಿದ್ದು, ಅಂತಹ ಜಮೀನಿಗೆ ಬದಲಿ ನಿವೇಶನ ಪಡೆದುಕೊಳ್ಳಲಾಗಿದೆ. ಇಲ್ಲಿ ಅಧಿಕಾರ ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ದೂರಿನಲ್ಲಿ ವಿವರಿಸಲಾಗಿದೆ.

ಇದನ್ನೂ ಓದಿ | Muda Case : ಪಿಸಿಆರ್​ ಏನೆಂದು ಗೊತ್ತಿಲ್ಲದವರು ಸಿದ್ದರಾಮಯ್ಯ ಪರ ಅರ್ಜಿ ಸಲ್ಲಿಸಿದ್ದೀರಾ? ಸಿಎಂ ಪರ ಅರ್ಜಿ ಸಲ್ಲಿಸಿದವರಿಗೆ ಕೋರ್ಟ್ ತರಾಟೆ

ಮುಡಾದಲ್ಲಿ ಸಿದ್ದರಾಮಯ್ಯ ಪತ್ನಿ ಬಿ.ಎಂ. ಪಾರ್ವತಿ ಅಕ್ರಮವಾಗಿ 14 ನಿವೇಶನಗಳನ್ನು ಪಡೆದಿದ್ದಾರೆ ಎಂಬ ಆರೋಪ ಸಂಬಂಧ ಸಿದ್ದರಾಮಯ್ಯ ಸೇರಿ ಐವರು ಆರೋಪಿಗಳ ವಿರುದ್ಧ ವಿಶೇಷ ತನಿಖಾ ದಳ ಅಥವಾ ಬೇರಾವುದೇ ಸ್ವತಂತ್ರ ತನಿಖಾ ಸಂಸ್ಥೆಯಿಂದ ತನಿಖೆಗೆ ಆದೇಶಿಸಬೇಕು ಎಂದು ಕೋರಿ ಅರ್ಜಿ ಸಲ್ಲಿಸಿದ್ದರು.

Continue Reading

ಕರ್ನಾಟಕ

Lakshmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ಗೆ ಅಹವಾಲು ಸಲ್ಲಿಸಲು ಸಾಲುಸಾಲು ಜನ

Lakshmi Hebbalkar: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಅಹವಾಲು ಸಲ್ಲಿಸಲು ಮಂಗಳವಾರ ವಿವಿಧ ಭಾಗಗಳಿಂದ ಸಾರ್ವಜನಿಕರು ದೊಡ್ಡ ಸಂಖ್ಯೆಯಲ್ಲಿ ಸಚಿವರ ಮನೆಯ ಬಳಿ ಗೃಹ ಕಚೇರಿಗೆ ಆಗಮಿಸಿದ್ದರು. ಬೆಳಗ್ಗೆಯಿಂದ ಸಂಜೆ 4 ಗಂಟೆಯವರೆಗೂ ಊಟ, ತಿಂಡಿ ಬಿಟ್ಟು ಸಚಿವರು ಅಹವಾಲು ಸ್ವೀಕರಿಸಿದರು.

VISTARANEWS.COM


on

Lakshmi Hebbalkar
Koo

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Lakshmi Hebbalkar) ಅವರಿಗೆ ಅಹವಾಲು ಸಲ್ಲಿಸಲು ಮಂಗಳವಾರ ವಿವಿಧ ಭಾಗಗಳಿಂದ ಸಾರ್ವಜನಿಕರು ದೊಡ್ಡ ಸಂಖ್ಯೆಯಲ್ಲಿ ಆಗಮಿಸಿದ್ದರು. ಬೆಳಗ್ಗೆಯಿಂದ ಸಂಜೆ 4 ಗಂಟೆಯವರೆಗೂ ಊಟ, ತಿಂಡಿ ಬಿಟ್ಟು ಸಚಿವರು ಅಹವಾಲು ಸ್ವೀಕರಿಸಿದರು.

ಸಚಿವರು ಬೆಳಗಾವಿಯಲ್ಲಿದ್ದಾಗಲೆಲ್ಲ ವಿವಿಧ ಸಮಸ್ಯೆಗಳನ್ನು ಹೇಳಿಕೊಂಡು ಸಚಿವರ ಮನೆಯ ಬಳಿ ಗೃಹ ಕಚೇರಿಗೆ ನೂರಾರು ಜನರು ಆಗಮಿಸುತ್ತಾರೆ. ತಾಳ್ಮೆಯಿಂದ ಎಲ್ಲರ ಅಹವಾಲು ಆಲಿಸಿ, ಸಮಾಧಾನ ಪಡಿಸಿ ಕಳುಹಿಸುತ್ತಾರೆ. ಮಂಗಳವಾರವೂ ದೊಡ್ಡ ಸಂಖ್ಯೆಯಲ್ಲೇ ಜನರು ಆಗಮಿಸಿದ್ದರು.

ಇದನ್ನೂ ಓದಿ: Kannada New Movie: ರವೀಂದ್ರ ಸೊರಗಾವಿ ಕಂಠಸಿರಿಯಲ್ಲಿ ʼಸಮರ್ಥ ಸದ್ಗುರು ಶ್ರೀ ಸಂಗಮೇಶ್ವರ ಮಹಾರಾಜರುʼ ಚಿತ್ರದ ಹಾಡು

ಕಳದ 4 ದಿನಗಳಿಂದ ಲಕ್ಷ್ಮೀ ಹೆಬ್ಬಾಳಕರ್ ಅವರು, ಮೈಸೂರು, ಭದ್ರಾವತಿ, ಗದಗ ಪ್ರವಾಸದಲ್ಲಿದ್ದಾರೆ. ಸೋಮವಾರ ಗದಗ ಜಿಲ್ಲಾ ಪ್ರವಾಸ ಮಾಡಿ ಮಂಗಳವಾರ ಬೆಳಗಿನ ಜಾವ 2 ಗಂಟೆಗೆ ಬೆಳಗಾವಿ ತಲುಪಿದ್ದಾರೆ. ಮಂಗಳವಾರ ಸಂಜೆ ಬೆಂಗಳೂರಿಗೆ ತೆರಳಿ, ಬುಧವಾರ ಉಡುಪಿಗೆ ಹೋಗುವ ಕಾರ್ಯಕ್ರಮವಿದೆ. ಆದರೂ ಮಂಗಳವಾರ ಬಹು ಹೊತ್ತಿನವರೆಗೂ ಜನರ ಸಮಸ್ಯೆಗಳಿಗೆ ಕಿವಿಯಾದರು. ಬಂದ ಜನರು ಸಚಿವರ ಸ್ಪಂದನೆಗೆ ಧನ್ಯವಾದ ಸಲ್ಲಿಸಿ ಮರಳುತ್ತಿದ್ದರು.

Continue Reading

ಧಾರವಾಡ

Physical Abuse : ಅಪ್ರಾಪ್ತೆಯನ್ನು ಲಾಡ್ಜ್‌ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿ ವಿಡಿಯೊ ಹರಿಬಿಟ್ಟ ಯುವಕ!

Physical Abuse: ಧಾರವಾಡದಲ್ಲಿ ಅಪ್ರಾಪ್ತೆಯನ್ನು ಪುಸಲಾಯಿಸಿ ಲಾಡ್ಜ್‌ಗೆ ಕರೆದುಕೊಂಡ ಹೋದ ಯುವಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಜತೆಗೆ ಆಕೆಯೊಂದಿಗೆ ಇದ್ದ ವಿಡಿಯೊ ಮಾಡಿಕೊಂಡು ಎಲ್ಲೆಡೆ ಹರಿಬಿಟ್ಟಿದ್ದಾನೆ. ಇತ್ತ ಬೆಂಗಳೂರಿನಲ್ಲಿ ಅನುಮಾನಸ್ಪಾದ ರೀತಿಯಲ್ಲಿ ಗೃಹಿಣಿಯೊಬ್ಬಳು ಮೃತಪಟ್ಟಿದ್ದಾಳೆ.

VISTARANEWS.COM


on

By

Physical abuse
Koo

ಧಾರವಾಡ: ಅಪ್ರಾಪ್ತೆ ಮೇಲೆ ಯುವಕನೊಬ್ಬ ಲೈಂಗಿಕ ದೌರ್ಜನ್ಯ (Physical abuse) ಎಸಗಿರುವ ಘಟನೆ ಧಾರವಾಡ ನಗರದಲ್ಲಿ ನಡೆದಿದೆ. ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೇ ಅದನ್ನು ವಿಡಿಯೊ ಮಾಡಿಕೊಂಡಿದ್ದಾನೆ.

ಆಗಸ್ಟ್ 8 ರಂದು ಲಾಡ್ಜ್ ಒಂದಕ್ಕೆ ಕರೆದುಕೊಂಡು ಹೋಗಿ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಬಳಿಕ ಆ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ. ಹಲವು ವಾಟ್ಸ್‌ಆ್ಯಪ್ ಗ್ರೂಪ್‌ಗೂ ಹಾಕಿದ್ದು, ಹಲವರು ಬೇರೆ ಗ್ರೂಪ್‌ಗೆ ಶೇರ್‌ ಮಾಡಿದ್ದಾರೆ.

ಸದ್ಯ ಯುವಕನನ್ನು ಧಾರವಾಡ ವಿದ್ಯಾಗಿರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಜತೆಗೆ ಬೇರೆ ಬೇರೆ ಗ್ರೂಪ್‌ನಲ್ಲಿ ವಿಡಿಯೋ ಶೇರ್‌ ಮಾಡಿದ್ದ 9 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದ್ದಾರೆ. ಸದ್ಯ ದೌರ್ಜನ್ಯ ಎಸಗಿದ ಆರೋಪಿ ಮೇಲೆ ಪೋಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Murder Case : ಕಂಡವರ ಹೆಂಡ್ತಿ ಮೇಲೆ ವ್ಯಾಮೋಹ; ಸುಪಾರಿ ಕೊಟ್ಟು ಚಟ್ಟ ಕಟ್ಟಿದ ಕಿರಾತಕ

ಪ್ರೀತಿಸಿ ಮದುವೆಯಾದ ಯುವತಿ ಸಾವು

ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿ ಮೃತಪಟ್ಟಿದ್ದಾಲೇ. ಪ್ರೀತಿಸಿ ಮದುವೆಯಾದ ಪತಿಯಿಂದಲೆ ಪತ್ನಿಯ‌ ಕೊಲೆಯಾಗಿದೆ ಎಂದು ಯುವತಿ ಪೋಷಕರು ಆರೋಪಿಸಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಉತ್ತನಹಳ್ಳಿ ಬಳಿ ಘಟನೆ ನಡೆದಿದೆ. ವಿಜಯನಗರ ಜಿಲ್ಲೆಯ ಕೂಡ್ಲಿಗೆ ಮೂಲದ ದುರ್ಗಮ್ಮ ಮೃತ ದುರ್ದೈವಿ.

ಕಳೆದ ಎರಡು ವರ್ಷಗಳಿಂದ ದುರ್ಗಮ್ಮ ಮಾರುತಿ ಎಂಬಾತನನ್ನು ಪ್ರೀತಿಸಿ ಮದುವೆಯಾಗಿದ್ದಳು. ಪೋಷಕರ ವಿರೋಧದ ನಡುವೆ ಮದುವೆಯಾಗಿ ನಂತರ ಎರಡು ಕುಟುಂಬಗಳು ಒಂದಾಗಿದ್ದರು. ಮದುವೆ ನಂತರ ಕೂಡ್ಲಗಿಯಿಂದ ಬೆಂಗಳೂರಿಗೆ ಬಂದಿದ್ದ ದಂಪತಿ ಚಿಕ್ಕಜಾಲದ ಉತ್ತನಹಳ್ಳಿ ಬಳಿ ಗಾರೆ ಕೆಲಸ‌ ಮಾಡಿಕೊಂಡು ಜೀವನ ಮಾಡುತ್ತಿದ್ದರು.

ಆದರೆ ಇತ್ತೀಚಿಗೆ ಪತ್ನಿ ಮೇಲೆ ಅನುಮಾನ ಪಡುತ್ತಿದ್ದ ಮಾರುತಿ ಹೊಡೆದು ಕಿರುಕುಳ ನೀಡುತ್ತಿದ್ದ. ಕಳೆದ ಒಂದು ತಿಂಗಳ ಹಿಂದೆಯೂ ಗಲಾಟೆ‌ ಮಾಡಿಕೊಂಡು ದುರ್ಗಮ್ಮ ಊರಿಗೆ ಹೋಗಿದ್ದಳು. ಆದರೆ 15 ದಿ‌‌ನಗಳ ಹಿಂದೆ ಪತ್ನಿಯ ಮನವೊಲಿಸಿ ಮಾರುತಿ ಬೆಂಗಳೂರಿಗೆ ಕರೆತಂದಿದ್ದ. ಇದೀಗ ದುರ್ಗಮ್ಮ ಮೃತಪಟ್ಟಿದ್ದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Natasa Stankovic
ಕ್ರಿಕೆಟ್20 mins ago

Natasa Stankovic : ‘ಹೊಸ ಹೆಸರನ್ನು ಪಡೆಯುತ್ತಿದ್ದೇನೆ’; ಕುತೂಹಲ ಮೂಡಿಸಿದ ನತಾಶಾ ಸ್ಟಾಂಕೊವಿಕ್​ ಹೊಸ ಪೋಸ್ಟ್​​​

Government Employees
ಕರ್ನಾಟಕ23 mins ago

Government Employees: ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ; ಆ.17ರಂದು ವಿಶೇಷ ಸಾಂದರ್ಭಿಕ ರಜೆ

Physical Abuse
ಪ್ರಮುಖ ಸುದ್ದಿ1 hour ago

Physical Abuse : ತಪಾಸಣೆಗೆ ಬಂದ ರೋಗಿಗಳಿಬ್ಬರನ್ನು ಅತ್ಯಾಚಾರ ಮಾಡಿದ ಸರ್ಕಾರಿ ವೈದ್ಯ; ಜೂನಿಯರ್​ ವೈದ್ಯರ ಪೆಟ್ಟು ತಿಂದು ಐಸಿಯು ಸೇರಿದ ಆರೋಪಿ

Independence day 2024
ತಂತ್ರಜ್ಞಾನ1 hour ago

Independence Day 2024: ವಾಟ್ಸ್‌ಆಪ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆಯ ವಿಶೇಷ ಸ್ಟಿಕ್ಕರ್‌, ಮೆಸೆಜ್‌, ಇಮೇಜ್‌ ಪಡೆಯುವುದು ಹೇಗೆ?

Manu Bhaker
ಪ್ರಮುಖ ಸುದ್ದಿ2 hours ago

Manu Bhaker : ಶೂಟಿಂಗ್​​ನಿಂದ ಬ್ರೇಕ್ ತೆಗೆದುಕೊಂಡ ಮನು ಭಾಕರ್​​, ಡೆಲ್ಲಿಯಲ್ಲಿ ನಡೆಯುವ ವಿಶ್ವಕಪ್​ಗೆ ಅಲಭ್ಯ

Muda Scam
ಕರ್ನಾಟಕ2 hours ago

Muda Scam: ಸಿಎಂ ವಿರುದ್ಧದ ಸ್ನೇಹಮಯಿ ಕೃಷ್ಣ ಅರ್ಜಿ ಆದೇಶ ಆ.20ಕ್ಕೆ ಕಾಯ್ದಿರಿಸಿದ ಕೋರ್ಟ್‌; ಅಬ್ರಹಾಂ ಅರ್ಜಿ ವಿಚಾರಣೆ ಮುಂದೂಡಿಕೆ

Lakshmi Hebbalkar
ಕರ್ನಾಟಕ2 hours ago

Lakshmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ಗೆ ಅಹವಾಲು ಸಲ್ಲಿಸಲು ಸಾಲುಸಾಲು ಜನ

Independence day 2024
ದೇಶ2 hours ago

Independence day 2024: ಆಗಸ್ಟ್ 15ರಂದು ಪ್ರಧಾನಿ ಮೋದಿ ಭಾಷಣವನ್ನು ಎಷ್ಟು ಹೊತ್ತಿಗೆ, ಎಲ್ಲಿ ವೀಕ್ಷಿಸಬಹುದು?

Ian Bell
ಕ್ರಿಕೆಟ್2 hours ago

Ian Bell : ಲಂಕಾ ತಂಡದ ನೂತನ ಬ್ಯಾಟಿಂಗ್​ ಕೋಚ್​ ಆಗಿ ಇಯಾನ್ ಬೆಲ್​ ನೇಮಕ

Prime fashion week
ಫ್ಯಾಷನ್2 hours ago

Prime Fashion week: ಪ್ರೈಮ್‌ ಫ್ಯಾಷನ್‌ ವೀಕ್‌ನಲ್ಲಿ ಸಂಜಯ್‌ ಚೊಲಾರಿಯಾ ಡಿಸೈನರ್‌ ವೇರ್ಸ್ ಅನಾವರಣ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ5 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ5 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ5 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 week ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 week ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 week ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌