ಆಂಧ್ರ ಮುಖ್ಯಮಂತ್ರಿ ಜಗನ್​ ರೆಡ್ಡಿ ಪೋಸ್ಟರ್​ ಹರಿದ ನಾಯಿ ವಿರುದ್ಧ ಪೊಲೀಸರಿಗೆ ದೂರು ನೀಡಿದ ಪ್ರತಿಪಕ್ಷ ಟಿಡಿಪಿ ಕಾರ್ಯಕರ್ತೆ! - Vistara News

ದೇಶ

ಆಂಧ್ರ ಮುಖ್ಯಮಂತ್ರಿ ಜಗನ್​ ರೆಡ್ಡಿ ಪೋಸ್ಟರ್​ ಹರಿದ ನಾಯಿ ವಿರುದ್ಧ ಪೊಲೀಸರಿಗೆ ದೂರು ನೀಡಿದ ಪ್ರತಿಪಕ್ಷ ಟಿಡಿಪಿ ಕಾರ್ಯಕರ್ತೆ!

ಆಂಧ್ರದ ಒಂದು ನಗರದಲ್ಲಿರುವ ಮನೆಯ ಕಾಂಪೌಂಡ್​ ಗೋಡೆ ಮೇಲೆ ಅಂಟಿಸಲಾಗಿದ್ದ ಜಗನ್​ ರೆಡ್ಡಿ ಪೋಸ್ಟರ್​​ನ್ನು ಕಪ್ಪು ಬಣ್ಣದ ನಾಯಿಯೊಂದು ಕಿತ್ತು ಹರಿದಿದೆ. ಆ ವಿಡಿಯೊ ಸೋಷಿಯಲ್​ ಮೀಡಿಯಾದಲ್ಲಿ ತುಂಬ ವೈರಲ್ ಕೂಡ ಆಗುತ್ತಿದೆ.

VISTARANEWS.COM


on

Dog Tearing Down CM Jagan Reddy Poster TDP Worker lodge Police Complaint
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಿಶಾಖಪಟ್ಟಣ: ಕೆಲವು ನಾಯಿಗಳು ಇರುತ್ತವೆ. ಶಿಸ್ತಿರುವುದಿಲ್ಲ. ಚಪ್ಪಲಿ ಹರಿದು ಅಗೆಯುವುದು, ವೈಯರ್​​, ಬಟ್ಟೆ, ಪ್ಲಾಸ್ಟಿಕ್​ ಹೀಗೆ ಏನೇ ಸಿಕ್ಕರೂ ಎಳೆದುಕೊಂಡು ಹೋಗಿ ಕಚ್ಚಿಕಚ್ಚಿ ಚೂರು ಮಾಡುತ್ತಿರುತ್ತವೆ. ಇಲ್ನೋಡಿ, ಆಂಧ್ರಪ್ರದೇಶದಲ್ಲಿ ಈ ನಾಯಿ ಏನೂ ಕಾಣಿಸದೆ, ಅಲ್ಲಿನ ಮುಖ್ಯಮಂತ್ರಿ ವೈ.ಎಸ್.ಜಗನ್​ ಮೋಹನ್ ರೆಡ್ಡಿ (Andhra Pradesh Chief Minister Jagan Mohan Reddy)ಯವರ ಪೋಸ್ಟರ್​ ಹರಿದು ಸಂಕಷ್ಟಕ್ಕೆ ಸಿಲುಕಿದೆ!

ಆಂಧ್ರದ ಒಂದು ನಗರದಲ್ಲಿರುವ ಮನೆಯ ಕಾಂಪೌಂಡ್​ ಗೋಡೆ ಮೇಲೆ ಅಂಟಿಸಲಾಗಿದ್ದ ಜಗನ್​ ರೆಡ್ಡಿ ಪೋಸ್ಟರ್​​ನ್ನು ಕಪ್ಪು ಬಣ್ಣದ ನಾಯಿಯೊಂದು ಕಿತ್ತು ಹರಿದಿದೆ. ಆ ವಿಡಿಯೊ ಸೋಷಿಯಲ್​ ಮೀಡಿಯಾದಲ್ಲಿ ತುಂಬ ವೈರಲ್ ಕೂಡ ಆಗುತ್ತಿದೆ. ಹೀಗೆ ವಿಡಿಯೊ ವೈರಲ್ ಆದ ಬೆನ್ನಲ್ಲೇ ದಾಸರಿ ಉದಯಶ್ರೀ ಎಂಬುವರು ಇನ್ನೂ ಕೆಲವು ಮಹಿಳೆಯರ ಜತೆ ಹೋಗಿ ವಿಜಯವಾಡ ಪೊಲೀಸ್ ಠಾಣೆಯಲ್ಲಿ ನಾಯಿ ವಿರುದ್ಧವೇ ದೂರು ದಾಖಲು ಮಾಡಿದ್ದಾರೆ. ತಾನು ಆಂಧ್ರದ ವಿರೋಧ ಪಕ್ಷವಾದ ತೆಲುಗು ದೇಸಂ ಪಾರ್ಟಿಯ ಕಾರ್ಯಕರ್ತೆ ಎಂದು ದಾಸರಿ ಉದಯಶ್ರೀ ಹೇಳಿಕೊಂಡಿದ್ದಾರೆ. ‘ನಾವು ವಿರೋಧ ಪಕ್ಷದ ಕಾರ್ಯಕರ್ತರೇ ಮುಖ್ಯಮಂತ್ರಿ ಜಗನ್​ ರೆಡ್ಡಿಯವರಿಗೆ ಗೌರವ ನೀಡುತ್ತೇವೆ. ಅಂಥದ್ದರಲ್ಲಿ ಈ ನಾಯಿ ಅವರಿಗೆ ಅವಮಾನ ಮಾಡುತ್ತಿದೆ’ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಅಷ್ಟೇ ಅಲ್ಲ, ಈ ನಾಯಿ ಮತ್ತು ಅದರ ಕೃತ್ಯದ ಹಿಂದಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಆಂಧ್ರಪ್ರದೇಶದಲ್ಲಿ 3000 ದೇಗುಲ ನಿರ್ಮಾಣ ಮಾಡಲು ಮುಖ್ಯಮಂತ್ರಿ ಜಗನ್​ ಮೋಹನ್ ರೆಡ್ಡಿ ಸೂಚನೆ; ಕಾಮಗಾರಿ ಪ್ರಾರಂಭ

ಬಳಿಕ ಮಾಧ್ಯಮದವರ ಜತೆ ಮಾತನಾಡಿ, ‘ಮುಖ್ಯಮಂತ್ರಿ ಜಗನ್​ ರೆಡ್ಡಿಯವರ ಪೋಸ್ಟರ್​ ಹರಿಯಲು ಯಾರೋ ನಾಯಿಯನ್ನು ಬಿಟ್ಟಿದ್ದಾರೆ. ಹೀಗಾಗಿ ದೂರು ನೀಡಿದ್ದೇನೆ. ನಾವು ಪ್ರತಿಪಕ್ಷದ ಕಾರ್ಯಕರ್ತರಾದರೂ ನಮಗೆ ಮುಖ್ಯಮಂತ್ರಿ ಬಗ್ಗೆ ಅಪಾರ ಗೌರವ ಇದೆ. ಹೀಗೆ ಅವರ ಪೋಸ್ಟರ್​ ಹರಿದಿದ್ದು, ರಾಜ್ಯದ 6 ಕೋಟಿ ಜನರ ಭಾವನೆಗೆ ಧಕ್ಕೆ ತಂದಂತಾಗಿದೆ’ ಎಂದಿದ್ದಾರೆ. ಇನ್ನು ನಾಯಿ ಜಗನ್​ರೆಡ್ಡಿಯವರ ಪೋಸ್ಟರ್​ ಹರಿಯುತ್ತಿರುವ ವಿಡಿಯೊವನ್ನು ಪ್ರತಿಪಕ್ಷ ತೆಲುಗು ದೇಸಂ ಪಾರ್ಟಿ ಕಾರ್ಯಕರ್ತರೇ ಅನೇಕರು ಶೇರ್ ಮಾಡಿಕೊಂಡಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Narendra Modi: ವಾರಾಣಸಿಯಲ್ಲಿ ಹೊಸ ಅಲೆ ಸೃಷ್ಟಿಸಿದ ಮೋದಿ, ಶಕ್ತಿ ಪ್ರದರ್ಶನ; ರೋಡ್‌ ಶೋ Photos ಇಲ್ಲಿವೆ

Narendra Modi: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಲೋಕಸಭೆ ಕ್ಷೇತ್ರ ವಾರಾಣಸಿಯಲ್ಲಿ ಸೋಮವಾರ ಭರ್ಜರಿ ರೋಡ್‌ ಶೋ ಕೈಗೊಂಡರು. ಸಾಂಪ್ರದಾಯಿಕ ಸ್ವಾಗತ, ಜನಪದ ನೃತ್ಯ, ಜೈ ಶ್ರೀರಾಮ್‌ ಘೋಷಣೆಗಳು ರೋಡ್‌ ಶೋ ಉದ್ದಕ್ಕೂ ಜೈಶ್ರೀರಾಮ್‌ ಘೋಷಣೆಗಳು ಮೊಳಗಿದವು.

VISTARANEWS.COM


on

Narendra Modi
Koo

ವಾರಾಣಸಿ: ದೇಶಾದ್ಯಂತ ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಅಬ್ಬರದ ಪ್ರಚಾರದ ಮಧ್ಯೆಯೇ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ತಮ್ಮ ಲೋಕಸಭೆ ಕ್ಷೇತ್ರವಾದ ವಾರಾಣಸಿಯಲ್ಲಿ (Varanasi) ಬೃಹತ್‌ ರೋಡ್‌ ಶೋ ಮೂಲಕ ಕ್ಷೇತ್ರದಲ್ಲಿ ಹೊಸ ಅಲೆ ಸೃಷ್ಟಿಸಿದ್ದಾರೆ. ಸತತ ಮೂರನೇ ಬಾರಿಗೆ ವಾರಾಣಸಿ ಕ್ಷೇತ್ರದಿಂದ ಕಣಕ್ಕಿಳಿದಿರುವ ಮೋದಿ ಅವರು ಮಂಗಳವಾರ (ಏಪ್ರಿಲ್‌ 14) ನಾಮಪತ್ರ ಸಲ್ಲಿಸಿದ್ದು, ಇದಕ್ಕೂ ಮೊದಲು ರೋಡ್‌ ಶೋ ಮೂಲಕ ಶಕ್ತಿ ಪ್ರದರ್ಶನ ಮಾಡಿದರು. ಮೋದಿ ರೋಡ್‌ ಶೋ ಫೋಟೊಗಳು ಇಲ್ಲಿವೆ.

ವಾರಾಣಸಿಯ ಬನಾರಸ್‌ ವಿವಿ ಗೇಟ್‌ನಿಂದ ಕಾಶಿ ವಿಶ್ವನಾಥ ಧಾಮದ 4ನೇ ಗೇಟ್‌ವರೆಗೆ 6 ಕಿಲೋಮೀಟರ್‌ ರೋಡ್‌ ಶೋ ಕೈಗೊಂಡರು.
ಪ್ರಧಾನಿ ನರೇಂದ್ರ ಮೋದಿ ಅವರು ಅಬ್ಬರದ ರೋಡ್‌ ಶೋಗೆ ಸಿಎಂ ಯೋಗಿ ಆದಿತ್ಯನಾಥ್‌ ಸಾಥ್‌ ನೀಡಿದರು.
ಮರಾಠಿ, ಗುಜರಾತಿ, ಬೆಂಗಾಲಿ, ಮಾರ್ವಾಡಿ, ತಮಿಳು ಸೇರಿ ಹಲವು ಸಮುದಾಯಗಳು, ಸಾಂಸ್ಕೃತಿಕ ಹಿನ್ನೆಲೆಯವರು ರೋಡ್‌ ಶೋನಲ್ಲಿ ಪಾಲ್ಗೊಂಡಿದ್ದರು.
ಮೋದಿ ರೋಡ್‌ ಶೋ ಉದ್ದಕ್ಕೂ ಜೈ ಶ್ರೀರಾಮ್‌ ಎಂಬುದು ಸೇರಿ ಹಲವು ಘೋಷಣೆಗಳು ಮೊಳಗಿದವು.
ರೋಡ್‌ ಶೋ ಬಳಿಕ ಕಾಶಿ ವಿಶ್ವನಾಥ ದೇಗುಲದಲ್ಲಿ ಮೋದಿ ವಿಶೇಷ ಪ್ರಾರ್ಥನೆ.
ಕೇಸರಿ ದಿರಸು ಧರಿಸಿದ ಕಲಾವಿದರು ರೋಡ್‌ ಶೋಗೆ ಹೊಸ ಮೆರುಗು ತಂದರು.

ಇದನ್ನೂ ಓದಿ: PM Narendra Modi: “ಪಾಕ್‌ ಬಳೆ ತೊಡದಿದ್ದರೆ ನಾವು ತೊಡಿಸುತ್ತೇವೆ….” ಪಿಎಂ ಮೋದಿ ಗುಡುಗು

Continue Reading

ಪ್ರಮುಖ ಸುದ್ದಿ

Dust Storm : ಧೂಳು ಗಾಳಿಗೆ ಹೋರ್ಡಿಂಗ್ ಕುಸಿದು ಮೂವರ ಸಾವು, 59 ಮಂದಿಗೆ ಗಾಯ

Dust Storm: ಭಯಾನಕ ಘಟನೆಯಲ್ಲಿ, ವಡಾಲಾದಲ್ಲಿ ಅಟ್ಟಣಿಗೆಯೊಂದು ಕುಸಿದಿದೆ. ಸಂಜೆ 4:22 ಕ್ಕೆ, ಶ್ರೀ ಜಿ ಟವರ್ ಬಳಿಯ ಬರ್ಕತ್ ಅಲಿ ನಾಕಾದಲ್ಲಿ ಘಟನೆ ನಡೆದಿದೆ. ಹಲವಾರು ವಾಹನಗಳನ್ನು ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದು, ಒಬ್ಬರು ಕಾರಿನೊಳಗೆ ಸಿಲುಕಿಕೊಂಡಿದ್ದಾರೆ. ಮುಂಬೈ ಅಗ್ನಿಶಾಮಕ ದಳ ಪ್ರಸ್ತುತ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ.

VISTARANEWS.COM


on

Dust Storm
Koo

ಮುಂಬೈ: ಇಲ್ಲಿನ ಘಾಟ್​ಕೋಪರ್​ನಲ್ಲಿ ಧೂಳು ಬಿರುಗಾಳಿ ಮತ್ತು ಭಾರಿ ಮಳೆಯಿಂದಾಗಿ ಜಾಹೀರಾತು ಫಲಕ ಕುಸಿದು ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು 59 ಜನರು ಗಾಯಗೊಂಡಿದ್ದಾರೆ. ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆಯ (ಎನ್​​ಡಿಆರ್​) ಒಂದು ತಂಡ ಸ್ಥಳಕ್ಕೆ ತಲುಪಿ ಕಾರ್ಯಾಚರಣೆ ನಡೆಸುತ್ತಿದೆ. ಧೂಳು ಗಾಳಿಗೆ ಅನೇಕ ಕಡೆ ಅನಾಹುತಗಳು ಸಂಭವಿಸಿವೆ.

ಭಯಾನಕ ಘಟನೆಯಲ್ಲಿ, ವಡಾಲಾದಲ್ಲಿ ಅಟ್ಟಣಿಗೆಯೊಂದು ಕುಸಿದಿದೆ. ಸಂಜೆ 4:22 ಕ್ಕೆ, ಶ್ರೀ ಜಿ ಟವರ್ ಬಳಿಯ ಬರ್ಕತ್ ಅಲಿ ನಾಕಾದಲ್ಲಿ ಘಟನೆ ನಡೆದಿದೆ. ಹಲವಾರು ವಾಹನಗಳನ್ನು ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದು, ಒಬ್ಬರು ಕಾರಿನೊಳಗೆ ಸಿಲುಕಿಕೊಂಡಿದ್ದಾರೆ. ಮುಂಬೈ ಅಗ್ನಿಶಾಮಕ ದಳ ಪ್ರಸ್ತುತ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ.

ಭಾರತೀಯ ಹವಾಮಾನ ಇಲಾಖೆ (IMD) ಈ ಹಿಂದೆ ಮೇ 13 ರಂದು ನಗರದ ಕೆಲವು ಭಾಗಗಳಿಗೆ ಯೆಲ್ಲೊ ಅಲರ್ಟ್​ (Yellow Alret) ಎಚ್ಚರಿಕೆ ನೀಡಿತ್ತು. ವಿಶೇಷವಾಗಿ ಥಾಣೆ ಮತ್ತು ರಾಯಗಡ್ ಜಿಲ್ಲೆಗಳಲ್ಲಿ ಭಾರಿ ಮಳೆ, ಗುಡುಗು ಮತ್ತು ಶುಷ್ಕ, ವೇಗದ ಗಾಳಿಯ ಎಚ್ಚರಿಕೆ ನೀಡಿತ್ತು.

2024 ರ ಮೇ 16 ರಿಂದ ವಾಯುವ್ಯ ಭಾರತದಲ್ಲಿ ಹೊಸ ಶಾಖದ ಅಲೆ ಪ್ರಾರಂಭವಾಗುವ ಸಾಧ್ಯತೆಯಿದೆ. 2. 2024 ರ ಮೇ 17 ರವರೆಗೆ ದಕ್ಷಿಣ ಪರ್ಯಾಯ ದ್ವೀಪ ಭಾರತದಲ್ಲಿ ಗುಡುಗು, ಮಿಂಚು ಮತ್ತು ಗಾಳಿಯೊಂದಿಗೆ ಪ್ರತ್ಯೇಕ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ಎಕ್ಸ್ ನಲ್ಲಿ ಪೋಸ್ಟ್​ನಲ್ಲಿ ತಿಳಿಸಿತ್ತು.

ಇದನ್ನೂ ಓದಿ: Metro Penalty: ಮೆಟ್ರೊ ಸ್ಟೇಷನ್‌ನಲ್ಲಿ ಗರ್ಲ್‌ ಫ್ರೆಂಡ್‌ಗೆ ಕಾಯುತ್ತ ಕೂತರೆ ಬೀಳುತ್ತೆ 50 ರೂ. ದಂಡ!

ಹೋರ್ಡಿಂಗ್ ಬಿದ್ದ ಕಾರಣ ಪೂಜಾ ಜಂಕ್ಷನ್ (ವಡಾಲಾ) ನಾರ್ತ್ ಬೌಂಡ್ ಮತ್ತು ಫ್ರೀವೇ ಟನಲ್ ಟ್ರಾಂಬೆ ಸೌತ್ ನಲ್ಲಿ ವಾಹನ ಸಂಚಾರಕ್ಕೆ ತೊಂದರೆಯಾಗಿದೆ ಎಂದು ಮುಂಬೈ ಸಂಚಾರ ಪೊಲೀಸರು ತಿಳಿಸಿದ್ದಾರೆ. ಏತನ್ಮಧ್ಯೆ, ಮುಂಬೈ ಮೆಟ್ರೋದ ಸಂಚಾರಕ್ಕೂ ಸಮಸ್ಯೆಯಾಗಿದೆ. ಭಾರೀ ಗಾಳಿಯಿಂದಾಗಿ, ಏರ್ಪೋರ್ಟ್ ರಸ್ತೆ ಮೆಟ್ರೋ ನಿಲ್ದಾಣದ ಬಳಿಯ ಒಹೆಚ್ಇಯಲ್ಲಿ ಬಟ್ಟೆ ಸಿಲುಕಿಕೊಂಡಿತು/ ಇದರ ಪರಿಣಾಮವಾಗಿ ಮೆಟ್ರೋ ಸೇವೆಗೆ ಅಡ್ಡಿಯಾಯಿತು. ರೈಲುಗಳು ಈಗ ನಿಗದಿತ ಸಮಯಕ್ಕೆ ತಲುಪಲಿಲ್ಲ ಎಂದು ಹೇಳಿದ್ದರು.

Continue Reading

ದೇಶ

Chandrayaan 4: ಚಂದ್ರಯಾನ 4ಕ್ಕೆ ಇಸ್ರೋ ಸಜ್ಜು; ಚಂದ್ರನ ವಿಶೇಷ ಸ್ಥಳದಲ್ಲಿ ಬಾಹ್ಯಾಕಾಶ ನೌಕೆ ಲ್ಯಾಂಡಿಂಗ್!

Chandrayaan 4: ಚಂದ್ರಯಾನ 3ರ ಬಾಹ್ಯಾಕಾಶ ನೌಕೆ ಇಳಿದ ಪ್ರದೇಶವೀಗ ಅಧಿಕೃತವಾಗಿ ಶಿವಶಕ್ತಿ ಪಾಯಿಂಟ್‌ ಎನಿಸಿದೆ. ಚಂದ್ರಯಾನ 3 ಮಿಷನ್‌ನ ಯಶಸ್ಸು ಇಸ್ರೋ ಆತ್ಮವಿಶ್ವಾಸವನ್ನು ನೂರ್ಮಡಿಗೊಳಿಸುವ ಜತೆಗೆ ಜಾಗತಿಕ ಖ್ಯಾತಿಯನ್ನೂ ತಂದುಕೊಟ್ಟಿದೆ. ಇದರ ಬೆನ್ನಲ್ಲೇ, ಚಂದ್ರಯಾನ 4 ಕೈಗೊಳ್ಳಲು ಇಸ್ರೋ ಸಜ್ಜಾಗಿದೆ. ನೌಕೆ ಇಳಿಯುವ ಜಾಗವನ್ನೂ ಈಗ ಘೋಷಣೆ ಮಾಡಿದೆ.

VISTARANEWS.COM


on

Chandrayaan 4
Koo

ಬೆಂಗಳೂರು: ಚಂದ್ರಯಾನ 3 ಮಿಷನ್‌ (Chandrayaan 3) ಮೂಲಕ ಇತಿಹಾಸ ಸೃಷ್ಟಿಸಿರುವ ಇಸ್ರೋ (ISRO) ಈಗ ಬಾಹ್ಯಾಕಾಶದಲ್ಲಿ ಮತ್ತೊಂದು ಮೈಲುಗಲ್ಲು ಸ್ಥಾಪಿಸಲು ಮುಂದಾಗಿದೆ. ಚಂದ್ರಯಾನ 3 ಮಿಷನ್‌ ಕೈಗೊಂಡು ಜಗತ್ತಿನಲ್ಲೇ ದಕ್ಷಿಣ ಧ್ರುವಕ್ಕೆ ಬಾಹ್ಯಾಕಾಶ ನೌಕೆ ಕಳುಹಿಸಿದ ಮೊದಲ ದೇಶ ಎಂಬ ಖ್ಯಾತಿಗೆ ಭಾಜನವಾದ ಬಳಿಕ ಇಸ್ರೋ ಈಗ ಚಂದ್ರಯಾನ 4 ಮಿಷನ್‌ಗೆ ಸಜ್ಜಾಗಿದೆ. ಅಷ್ಟೇ ಅಲ್ಲ, ಚಂದ್ರಯಾನ 4 ಮಿಷನ್‌ನ (Chandrayaan 4) ಬಾಹ್ಯಾಕಾಶ ನೌಕೆಯು ಚಂದ್ರನ ಅಂಗಳದಲ್ಲಿ ಎಲ್ಲಿ ಇಳಿಯಬೇಕು ಎಂಬುದನ್ನೂ ಇಸ್ರೋ ಘೋಷಿಸಿದೆ.

ಚಂದ್ರಯಾನ 4 ಮಿಷನ್‌ ಕುರಿತು ಸ್ಪೇಸ್‌ ಅಪ್ಲಿಕೇಷನ್ಸ್‌ ಸೆಂಟರ್‌ನ (SAC) ನಿರ್ದೇಶಕ ನೀಲೇಶ್‌ ದೇಸಾಯಿ (Nilesh Desai) ಅವರು ಮಾಹಿತಿ ನೀಡಿದ್ದಾರೆ. “ಚಂದ್ರಯಾನ 4 ಮಿಷನ್‌ನ ಬಾಹ್ಯಾಕಾಶ ನೌಕೆಯು ಚಂದ್ರಯಾನ 3ರ ವಿಕ್ರಮ್‌ ಲ್ಯಾಂಡರ್‌ ಹಾಗೂ ಪ್ರಜ್ಞಾನ್‌ ರೋವರ್‌ ಸಾಫ್ಟ್‌ ಲ್ಯಾಂಡ್‌ ಆದ, ಶಿವಶಕ್ತಿ ಪಾಯಿಂಟ್‌ ಎಂದೇ ಖ್ಯಾತಿಯಾದ ಪ್ರದೇಶದ ಬಳಿಯೇ ಲ್ಯಾಂಡ್‌ ಆಗಲಿದೆ. ಚಂದ್ರಯಾನ 4ರಲ್ಲಿ ಚಂದ್ರನ ಅಂಗಳದಿಂದ ಕಲ್ಲು ಹಾಗೂ ಮಣ್ಣನ್ನು ಭಾರತಕ್ಕೆ ತರುವುದು ಪ್ರಮುಖ ಉದ್ದೇಶವಾಗಿದೆ” ಎಂದು ತಿಳಿಸಿದ್ದಾರೆ.

“ಚಂದ್ರನ ಅಂಗಳದಲ್ಲಿ ವೈಜ್ಞಾನಿಕವಾಗಿ ಸಂಶೋಧನೆ ಕೈಗೊಳ್ಳಲು ಸಾಧ್ಯವಿರುವ ಪ್ರದೇಶಗಳಿಂದ ಕಲ್ಲು ಹಾಗೂ ಮಣ್ಣಿನ ಮಾದರಿಗಳನ್ನು ತಂದು, ಅದರ ಕುರಿತು ಅಧ್ಯಯನ ಮಾಡಲಾಗುತ್ತದೆ. ಇದು ಚಂದ್ರನ ಅಂಗಳದ ಕಾಲಮಾನದ ಪ್ರಕಾರ ಒಂದು ದಿನ ಆದರೆ, ಭೂಮಿಯ 14 ದಿನ ಕಾರ್ಯಾಚರಣೆ ಕೈಗೊಳ್ಳಲಿದೆ. ಹಲವು ಸವಾಲುಗಳ ಮಧ್ಯೆ ಯಶಸ್ಸು ಸಾಧಿಸಲು ಇಸ್ರೋ ಹೊರಟಿದೆ” ಎಂದು ಮಾಹಿತಿ ನೀಡಿದರು.

2023ರ ಜುಲೈ 14ರಂದು ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ LVM3 ರಾಕೆಟ್‌ನ ಮೂಲಕ ಉಡಾವಣೆಗೊಂಡ ಚಂದ್ರಯಾನ-3, ಒಂದು ತಿಂಗಳ ಕಾಲ ಬಾಹ್ಯಾಕಾಶ ಹಾರಾಟದ ನಂತರ ಆಗಸ್ಟ್ 23ರಂದು ಚಂದ್ರನ ಮೇಲ್ಮೈಯಲ್ಲಿ ಯಶಸ್ವಿಯಾಗಿ ಇಳಿಯಿತು. ಆ ಮೂಲಕ ಚಂದ್ರನ ದಕ್ಷಿಣ ಧ್ರುವದಲ್ಲಿ ಸಾಫ್ಟ್‌ ಲ್ಯಾಂಡ್‌ ಆದ ಜಗತ್ತಿನ ಮೊದಲ ಮಿಷನ್‌ ಎಂಬ ಖ್ಯಾತಿಗೆ ಭಾಜನವಾಯಿತು. ಇದರೊಂದಿಗೆ ಇಸ್ರೋ ಮೈಲುಗಲ್ಲು ಸ್ಥಾಪಿಸಿತು.

ಅಷ್ಟೇ ಅಲ್ಲ, ಚಂದ್ರಯಾನ 3 ಮಿಷನ್‌ ಲ್ಯಾಂಡ್‌ ಆದ ಪ್ರದೇಶವನ್ನು ಶಿವಶಕ್ತಿ ಎಂಬುದಾಗಿ ಕರೆಯಲು ಅಂತಾರಾಷ್ಟ್ರೀಯ ಖಗೋಳ ಒಕ್ಕೂಟವು (International Astronomical Union) ಮಾರ್ಚ್‌ 19ರಂದು ಅನುಮತಿ ನೀಡಿದೆ. ಇದರೊಂದಿಗೆ ಬಾಹ್ಯಾಕಾಶ ನೌಕೆ ಇಳಿದ ಪ್ರದೇಶವೀಗ ಅಧಿಕೃತವಾಗಿ ಶಿವಶಕ್ತಿ ಪಾಯಿಂಟ್‌ ಎನಿಸಿದೆ. ಚಂದ್ರಯಾನ 3 ಮಿಷನ್‌ನ ಯಶಸ್ಸು ಇಸ್ರೋ ಆತ್ಮವಿಶ್ವಾಸವನ್ನು ನೂರ್ಮಡಿಗೊಳಿಸುವ ಜತೆಗೆ ಜಾಗತಿಕ ಖ್ಯಾತಿಯನ್ನೂ ತಂದುಕೊಟ್ಟಿದೆ. ಚಂದ್ರಯಾನ 4 ಮಿಷನ್‌ ಕೈಗೊಳ್ಳಲು ಇಷ್ಟೊಂದು ಆತ್ಮವಿಶ್ವಾಸ, ಉತ್ಸಾಹ ಬರಲು ಚಂದ್ರಯಾನ 3 ಮಿಷನ್‌ನ ಯಶಸ್ಸೇ ಕಾರಣವಾಗಿದೆ.

ಇದನ್ನೂ ಓದಿ: Chandrayaan 3: ಚಂದ್ರಯಾನ 3 ಆಗುತ್ತಿತ್ತು ಛಿದ್ರ; ಆ 4 ಸೆಕೆಂಡ್‌ಗಳಲ್ಲೇ ಮಿಷನ್‌ ಬಚಾವ್‌ ಆಗಿದ್ದು ಹೇಗೆ?

Continue Reading

Latest

Abdu Rozik: ತನಗಿಂತ ತುಂಬಾ ಎತ್ತರದ ಹುಡುಗಿ ಜತೆ ಬಿಗ್‌ ಬಾಸ್‌ ಸ್ಪರ್ಧಿಯ ಮದುವೆ!

ಅಮೀರಾ ಅವರೊಂದಿಗೆ ವಿವಾಹ ನಿಶ್ಚಿತಾರ್ಥ ಮಾಡಿಕೊಂಡ ಗಾಯಕ 115 ಸೆಂ.ಮೀ. ಎತ್ತರದ ಅಬ್ದು ರೋಝಿಕ್ (Abdu Rozik) ತಮ್ಮ ಎತ್ತರ ತಮ್ಮಿಬ್ಬರ ಸಂಬಂಧದ ನಡುವೆ ಎಂದಿಗೂ ಬರುವುದಿಲ್ಲ ಎಂದು ಹೇಳಿದ್ದಾರೆ.

VISTARANEWS.COM


on

By

Abdu Rozik
Koo

ಸಾಮಾಜಿಕ ಜಾಲತಾಣದಲ್ಲಿ (social media) ಸಕ್ರಿಯರಾಗಿರುವ ಮತ್ತು ಬಿಗ್ ಬಾಸ್ 16 (Bigg Boss 16) ಖ್ಯಾತಿಯ ಅಬ್ದು ರೋಝಿಕ್ (Abdu Rozik) ಇತ್ತೀಚೆಗಷ್ಟೇ ಅಮಿರಾ ಅವರೊಂದಿಗೆ ಮದುವೆ ನಿಶ್ಚಿತಾರ್ಥವನ್ನು (engagement) ಮಾಡಿಕೊಂಡಿದ್ದಾರೆ. ನಿಶ್ಚಿತಾರ್ಥದ ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಅವರು ಮುಂದಿನ ಜುಲೈನಲ್ಲಿ ವಿವಾಹ ಕಾರ್ಯಕ್ರಮ ನಡೆಯಲಿದ್ದು, ಬಾಲಿವುಡ್ ನಟ (Bollywood actor) ಸಲ್ಮಾನ್ ಖಾನ್ (Salman Khan) ಪಾಲ್ಗೊಳ್ಳಲಿದ್ದಾರೆ ಎಂದು ಅಬ್ದು ತಿಳಿಸಿದ್ದಾರೆ.

20 ವರ್ಷದ ಗಾಯಕ (singer) ಅಬ್ದು ರೋಝಿಕ್ ಅವರು ಅಮೀರಾ ಅವರನ್ನು ಆಹಾರ ಉತ್ಸವದಲ್ಲಿ ಭೇಟಿಯಾಗಿದ್ದರು. ಮೊದಲ ನೋಟದಲ್ಲೇ ಇಬ್ಬರಿಗೂ ಪ್ರೀತಿಯಾಗಿತ್ತು ಎಂದು ಅಬ್ದು ತಿಳಿಸಿದರು.

ಅಬ್ದು ಅವರ ನಿಶ್ಚಿತಾರ್ಥವು ಯಾವುದೇ ಪ್ರಚಾರವಲ್ಲ ಎಂದು ಅಬ್ದು ಸ್ಪಷ್ಟಪಡಿಸಿದ್ದು, ನನ್ನಂತಹ ಸಣ್ಣ ವ್ಯಕ್ತಿ ಪ್ರೀತಿಯನ್ನು ಕಂಡುಕೊಂಡಿದ್ದಾನೆ ಎಂದು ಜನರು ನಂಬಲು ಕಷ್ಟವಾಗಬಹುದು ಎಂದು ತಿಳಿಸಿದರು.
ಅಮೀರಾಗಿಂತ ಚಿಕ್ಕವನಾಗಿರುವ ತನ್ನ ಎತ್ತರದ ವ್ಯತ್ಯಾಸವು ನಮ್ಮ ಪ್ರೀತಿಯ ಮೇಲೆ ಯಾವುದೇ ಪರಿಣಾಮ ಬೀರಲಿಲ್ಲ ಎಂದು ಹೇಳಿದರು.


ಅಬ್ದು ಅವರು 115 ಸೆಂ ಮತ್ತು ಅಮೀರಾ 155 ಸೆಂ.ಮೀ. ಎತ್ತರವಿದ್ದಾರೆ. ಅವರಿಬ್ಬರೂ ಕಡಿಮೆ ಎತ್ತರದಿಂದಾಗಿ ತಮ್ಮ ಸಂಗಾತಿಯನ್ನು ಹುಡುಕುವ ಬಗ್ಗೆ ಚಿಂತಿತರಾಗಿದ್ದರು. ಆದರೆ ಅಮೀರಾ ಅವರನ್ನು ಭೇಟಿ ಮಾಡಿದ್ದಕ್ಕಾಗಿ ಕೃತಜ್ಞರಾಗಿರುತ್ತೇನೆ. ಅಮೀರಾ ತನಗಿಂತ ಎತ್ತರವಾಗಿದ್ದರೂ ಅದು ನಮ್ಮ ಸಂಬಂಧದ ನಡುವೆ ಎಂದಿಗೂ ಬಂದಿಲ್ಲ ಎಂದು ತಿಳಿಸಿದರು.


ಕೆಲವು ದಿನಗಳ ಹಿಂದೆ ಅಬ್ದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ನಿಶ್ಚಿತಾರ್ಥ ಸಮಾರಂಭದ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಅವರು ಅಮೀರಾ ಅವರ ಮುಖವನ್ನು ಬಹಿರಂಗಪಡಿಸಲಿಲ್ಲ, ಆದರೆ ಹೃದಯದ ಆಕಾರದ ವಜ್ರದ ಉಂಗುರದ ಫೋಟೋವನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Jyoti Rai: ವೈರಲ್ ವಿಡಿಯೊ ಬೆನ್ನಲ್ಲೇ ಜ್ಯೋತಿ ರೈ ಟೆಂಪಲ್‌ ರನ್‌!

ಸುದ್ದಿಯನ್ನು ಹಂಚಿಕೊಂಡ ಅವರು, “ಜುಲೈ 7 ರಂದು ದಾಂಪತ್ಯ ಜೀವನಕ್ಕೆ ಕಾಲಿರಿಸುವುದಾಗಿ ಹೇಳಿದ್ದು, ನನ್ನನ್ನು ಗೌರವಿಸುವ ಪ್ರೀತಿಯನ್ನು ಪಡೆಯುವ ಅದೃಷ್ಟಶಾಲಿ ಎಂದು ನಾನು ನನ್ನ ಜೀವನದಲ್ಲಿ ಎಂದಿಗೂ ಊಹಿಸಿರಲಿಲ್ಲ. ನಾನು ಎಷ್ಟು ಸಂತೋಷವಾಗಿದ್ದೇನೆ ಎಂದು ಪದಗಳಲ್ಲಿ ಹೇಳಲು ಸಾಧ್ಯವಿಲ್ಲ ಎಂದು ಹೇಳಿಕೊಂಡಿದ್ದಾರೆ.

Continue Reading
Advertisement
Award Ceremony
ಬೆಂಗಳೂರು2 mins ago

Award Ceremony: ಬೆಂಗಳೂರಿನಲ್ಲಿ ಮೇ 19ರಂದು ಕಾದಂಬರಿ ಸಾರ್ವಭೌಮ ಅ.ನ.ಕೃ. ಪ್ರಶಸ್ತಿ ಪ್ರದಾನ

Muhammad Waseem
ಕ್ರೀಡೆ10 mins ago

Muhammad Waseem : ಇತಿಹಾಸ ಸೃಷ್ಟಿಸಿದ ಯುಎಇ ಕ್ರಿಕೆಟ್​ ತಂಡದ ನಾಯಕ ವಸೀಮ್​

Narendra Modi
ದೇಶ43 mins ago

Narendra Modi: ವಾರಾಣಸಿಯಲ್ಲಿ ಹೊಸ ಅಲೆ ಸೃಷ್ಟಿಸಿದ ಮೋದಿ, ಶಕ್ತಿ ಪ್ರದರ್ಶನ; ರೋಡ್‌ ಶೋ Photos ಇಲ್ಲಿವೆ

Pratibha Puraskar
ಕರ್ನಾಟಕ1 hour ago

Pratibha Puraskar: ರಾಜ್ಯ ಸರ್ಕಾರಿ ನೌಕರರ ಮಕ್ಕಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ; ಮೇ 31 ಕೊನೆಯ ದಿನ

HD Revanna Bail Revanna will not leave the country condition imposed by the court
ಕ್ರೈಂ1 hour ago

HD Revanna Bail: ರೇವಣ್ಣಗೆ ಜಾಮೀನು; ನಾಳೆ 11 ದಿನದ ವನವಾಸದಿಂದ ಮುಕ್ತಿ; ಬೇಲ್‌ ಸಿಗಲು ಕಾರಣವೇನು?

Dust Storm
ಪ್ರಮುಖ ಸುದ್ದಿ2 hours ago

Dust Storm : ಧೂಳು ಗಾಳಿಗೆ ಹೋರ್ಡಿಂಗ್ ಕುಸಿದು ಮೂವರ ಸಾವು, 59 ಮಂದಿಗೆ ಗಾಯ

CopConnect cyber security caffe inauguration by Dr Nagalakshmi Chaudhary at bengaluru
ಬೆಂಗಳೂರು2 hours ago

Bengaluru News: ಮಹಿಳೆಯರು ಸೋಷಿಯಲ್‌ ಮೀಡಿಯಾ ಬಳಸುವಾಗ ಎಚ್ಚರ ವಹಿಸಬೇಕು ಎಂದ ಮಹಿಳಾ ಆಯೋಗದ ಅಧ್ಯಕ್ಷೆ

35 crore crop damage insurance deposit for farmers of Yallapur constituency says MLA Shivaram Hebbar
ಉತ್ತರ ಕನ್ನಡ2 hours ago

Uttara Kannada News: ಯಲ್ಲಾಪುರ ಕ್ಷೇತ್ರದ ರೈತರಿಗೆ 35 ಕೋಟಿ ರೂ. ಬೆಳೆ ಹಾನಿ ವಿಮೆ ಜಮಾ: ಶಿವರಾಮ ಹೆಬ್ಬಾರ್‌

Bilhara village farmer grew bumper mango on barren land
ಕರ್ನಾಟಕ2 hours ago

Yadgiri News: ಬರಡು ಭೂಮಿಯಲ್ಲಿ ಈ ರೈತ ಬಂಪರ್ ಮಾವು ಬೆಳೆದಿದ್ದು ಹೇಗೆ?

Metro Penalty
ಬೆಂಗಳೂರು2 hours ago

Metro Penalty: ಮೆಟ್ರೊ ಸ್ಟೇಷನ್‌ನಲ್ಲಿ ಗರ್ಲ್‌ ಫ್ರೆಂಡ್‌ಗೆ ಕಾಯುತ್ತ ಕೂತರೆ ಬೀಳುತ್ತೆ 50 ರೂ. ದಂಡ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

HD Revanna Bail Revanna will not leave the country condition imposed by the court
ಕ್ರೈಂ3 hours ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

Prajwal Revanna case HD Revanna finally gets bail What was the argument like
ಕ್ರೈಂ3 hours ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ3 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

Karnataka Weather Forecast
ಮಳೆ4 hours ago

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

Modi Roadshow Live
ದೇಶ4 hours ago

Modi Roadshow Live: ವಾರಾಣಸಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ11 hours ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

karnataka weather forecast karnataka rains
ಮಳೆ15 hours ago

Karnataka Weather : ವಾಯುಭಾರ ಕುಸಿತ; ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ17 hours ago

Dina Bhavishya : ಇಂದು ಹೂಡಿಕೆ ಮಾಡಿದರೆ ಗಳಿಸುವಿರಿ ಭಾರಿ ಲಾಭ; ಅನಿರೀಕ್ಷಿತ ಸುದ್ದಿಯಿಂದ ಸಂತಸ

Prajwal Revanna Case I was never kidnapped and son has made a false complaint Video of victim goes viral
ಕ್ರೈಂ1 day ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

Karnataka Weather Forecast Heavy rain in chikkmagalur
ಮಳೆ1 day ago

Karnataka Weather : ಚಿಕ್ಕಮಗಳೂರಲ್ಲಿ ಅಬ್ಬರಿಸುತ್ತಿರುವ ಮಳೆ; ಬೃಹತ್‌ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

ಟ್ರೆಂಡಿಂಗ್‌