Karnataka Elections : ಲಕ್ಷ್ಮಣ ಸವದಿ ಬಳಿಕ ಮತ್ತೊಬ್ಬ ಬೆಳಗಾವಿ ಬಿಜೆಪಿ ನಾಯಕನಿಗೆ ಕಾಂಗ್ರೆಸ್‌ ಗಾಳ; ಕೈಪಾಲಾಗ್ತಾರಾ ಅನಿಲ್‌ ಬೆನಕೆ? - Vistara News

ಕರ್ನಾಟಕ

Karnataka Elections : ಲಕ್ಷ್ಮಣ ಸವದಿ ಬಳಿಕ ಮತ್ತೊಬ್ಬ ಬೆಳಗಾವಿ ಬಿಜೆಪಿ ನಾಯಕನಿಗೆ ಕಾಂಗ್ರೆಸ್‌ ಗಾಳ; ಕೈಪಾಲಾಗ್ತಾರಾ ಅನಿಲ್‌ ಬೆನಕೆ?

MLA Anil Benake : ಬೆಳಗಾವಿಯಲ್ಲಿ ಟಿಕೆಟ್‌ ವಂಚಿತರಾದ ಬಿಜೆಪಿ ನಾಯಕರಿಗೆ ಕಾಂಗ್ರೆಸ್‌ ಗಾಳ ಹಾಕುತ್ತಿದೆ. ಲಕ್ಷ್ಮಣ ಸವದಿ ಬಳಿಕ ಈಗ ಅನಿಲ್‌ ಬೆನಕೆ ಅವರನ್ನು ಸೆಳೆಯಲು ಯತ್ನಿಸುತ್ತಿದೆ.

VISTARANEWS.COM


on

Anil benake Laxman savadi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಳಗಾವಿ: ರಾಜ್ಯ ವಿಧಾನಸಭಾ ಚುನಾವಣೆಯ (Karnataka Elections) ಟಿಕೆಟ್‌ ಹಂಚಿಕೆ ವಿಚಾರದಲ್ಲಿ ಬಿಜೆಪಿಯಲ್ಲಿ ಭುಗಿಲೆದ್ದಿರುವ ಬಂಡಾಯದ ಬೆಂಕಿಯಲ್ಲಿ ಚಳಿ ಕಾಯಿಸಿಕೊಳ್ಳಲು ಕಾಂಗ್ರೆಸ್‌ ಮುಂದಾಗಿದೆ. ಅಥಣಿ ಟಿಕೆಟ್‌ಗೆ ಪಟ್ಟು ಹಿಡಿದು ಸೋತಿರುವ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರನ್ನು ಆಗಲೇ ತೆಕ್ಕೆಗೆ ಎಳೆದುಕೊಳ್ಳಲು ಎಲ್ಲ ರೀತಿಯಲ್ಲೂ ಸಜ್ಜಾಗಿರುವ ಕಾಂಗ್ರೆಸ್‌ ಈಗ ಇನ್ನೊಬ್ಬ ಬಂಡುಕೋರನಿಗೆ ಬಲೆ ಬೀಸಿದೆ. ಅವರೇ ಅನಿಲ್‌ ಬೆನಕೆ.

ಬೆಳಗಾವಿ ಉತ್ತರ ಕ್ಷೇತ್ರದ ಬಿಜೆಪಿ ಶಾಸಕರಾಗಿರುವ ಅನಿಲ್‌ ಬೆನಕಗೆ ಕಮಲ ಪಕ್ಷ ಟಿಕೆಟ್‌ ನಿರಾಕರಿಸಿದೆ. ಅವರನ್ನು ಕಾಂಗ್ರೆಸ್‌ಗೆ ಸೆಳೆಯಲು ಎಲ್ಲ ದಿಕ್ಕುಗಳಿಂದ ಪ್ರಯತ್ನ ನಡೆಸಲಾಗುತ್ತಿದೆ. ಕಾಂಗ್ರೆಸ್ ಸೇರುವಂತೆ ಅನಿಲ್ ಬೆನಕೆಗೆ ಹಲವು ನಾಯಕರು ಕರೆ ಮಾಡುತ್ತಿರುವುದು ಬೆಳಕಿಗೆ ಬಂದಿದೆ.

ಅನಿಲ್‌ ಬೆನಕೆ ಅವರು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಅದರ ಜತೆಗೆ ಬೆಳಗಾವಿ ಗ್ರಾಮಾಂತರ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌ ಕೂಡಾ ಬೆನಕೆ ಅವರಿಗೆ ಆತ್ಮೀಯರಾಗಿದ್ದಾರೆ. ಈಗ ಈ ಇಬ್ಬರೂ ನಾಯಕರು ಬೆನಕೆಗೆ ಕರೆ ಮಾಡಿ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

ಅನಿಲ್‌ ಬೆನಕೆ ಅವರು ಮರಾಠಾ ಸಮುದಾಯಕ್ಕೆ ಸೇರಿದವರಾಗಿದ್ದು, ಅವರನ್ನು ಸೆಳೆದು ಸೆಳೆದು ಮರಾಠಾ ಸಮುದಾಯ ಓಲೈಕೆಗೆ ಕಾಂಗ್ರೆಸ್ ಪ್ಲ್ಯಾನ್ ಹಾಕಿದೆ. ಬೆಳಗಾವಿ ಜಿಲ್ಲೆಯ 18 ಕ್ಷೇತ್ರಗಳ ಪೈಕಿ 10 ಕ್ಷೇತ್ರಗಳಲ್ಲಿ‌ ಮರಾಠಾ ಸಮುದಾಯದ ಪ್ರಾಬಲ್ಯವಿರುವುದನ್ನು ಪರಿಗಣಿಸಿ ಕಾಂಗ್ರೆಸ್‌ ಬೆನಕೆ ಅವರ ಮೇಲೆ ನಿರೀಕ್ಷೆ ಇಟ್ಟಿದೆ.

ಒಂದೇ ಏಟಿಗೆ ಎರಡು ಹಕ್ಕಿ ಹೊಡೆಯಲು ಕಾಂಗ್ರೆಸ್‌ ಮುಂದಾಗಿದೆ ಎನ್ನಲಾಗಿದೆ. ಶಾಸಕ ಅನಿಲ್ ಬೆನಕೆ ಸೆಳೆದು ಬಿಜೆಪಿ ಜೊತೆ ಎಂಇಎಸ್‌ಗೆ ಟಕ್ಕರ್ ಕೊಡಲು ‘ಕೈ’ ತಂತ್ರಗಾರಿಕೆ ಮಾಡಿದೆ.

ಬೆಳಗಾವಿ ಉತ್ತರ ಕ್ಷೇತ್ರದಿಂದ ಬಿಜೆಪಿ ಈ ಬಾರಿ ಲಿಂಗಾಯತ ಸಮುದಾಯದ ಡಾ.ರವಿ ಪಾಟೀಲ್‌ಗೆ ಟಿಕೆಟ್ ನೀಡಿದೆ. ಅನಿಲ್ ಬೆನಕೆಗೆ ಟಿಕೆಟ್ ನೀಡದ್ದಕ್ಕೆ ಮರಾಠಿಗರಲ್ಲಿ ಬೇಸರ ಮೂಡಿಸಿದೆ. ‘ಬಿಜೆಪಿ ಅಭ್ಯರ್ಥಿಗೆ ಮತದಾರರಿಂದ ಬಹಿಷ್ಕಾರ’ ಎಂದು ಮರಾಠಿಯಲ್ಲಿ ಬರಹವೊಂದು ಅಲ್ಲಲ್ಲಿ ಕಾಣಿಸಿಕೊಂಡಿದೆ. ಬೆಳಗಾವಿಯ ವಿವಿಧ ಬಡಾವಣೆಗಳ ಸೂಚನಾ ಫಲಕದಲ್ಲಿ ಮರಾಠಿ ಭಾಷೆಯಲ್ಲಿ ಬರಹ ಹಾಕಲಾಗಿದೆ.

ಹೀಗಾಗಿ ಮರಾಠಾ ಸಮುದಾಯಕ್ಕೆ ಟಿಕೆಟ್ ನೀಡಿ ಮರಾಠಿಗರ ಮನವೊಲಿಕೆಗೆ ಕಾಂಗ್ರೆಸ್ ಪ್ಲ್ಯಾನ್ ಮಾಡಿದೆ. ಇದೆಲ್ಲವನ್ನೂ ಗಮನದಲ್ಲಿಟ್ಟುಕೊಂಡಿರುವ ಅನಿಲ್‌ ಬೆನಕೆ ಅವರು ಶುಕ್ರವಾರ ತಮ್ಮ ಮುಂದಿನ ರಾಜಕೀಯ ನಡೆಯನ್ನು ಪ್ರಕಟಿಸುವ ನಿರೀಕ್ಷೆ ಇದೆ.

ಒಂದು ವೇಳೆ ಲಕ್ಷ್ಮಣ ಸವದಿ ಅವರ ಜತೆ ಅನಿಲ್‌ ಬೆನಕೆ ಕೂಡಾ ಕಾಂಗ್ರೆಸ್‌ ಸೇರಿದರೆ ಕೈ ಪಾಳಯಕ್ಕೆ ಬಲ ಬರುವ ಸಾಧ್ಯತೆ ಹೆಚ್ಚಾಗಿದೆ. ಅದನ್ನು ಬಳಸಿಕೊಳ್ಳಲು ಕಾಂಗ್ರೆಸ್‌ ಮುಂದಾಗಿದ್ದು, ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು ಕೂಡಾ ಉತ್ಸುಕತೆ ವಹಿಸಿದ್ದಾರೆ.

ಇದನ್ನೂ ಓದಿ : Karnataka Election 2023: ಕಾಂಗ್ರೆಸ್‌ ಸೇರ್ಪಡೆ ಚರ್ಚೆಗೆ ಸವದಿ ಸಭೆ; ಕೈ ಎತ್ತಿ ಬೆಂಬಲ ಸೂಚಿಸಿದ ಕಾರ್ಯಕರ್ತರು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕೊಪ್ಪಳ

Koppala News: ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್ ನಿರ್ಮಾಣದಲ್ಲೂ ಕಮಿಷನ್ ರಾಜಕೀಯ; ಕಾಂಗ್ರೆಸ್ ಮುಖಂಡನಿಂದಲೇ ಆರೋಪ

Koppala News: ತುಂಗಭದ್ರಾ ಜಲಾಶಯದ ಕ್ರಸ್ಟ್‌ಗೇಟ್ ನಂಬರ್-19 ನೀರಿನಲ್ಲಿ ಕೊಚ್ಚಿ ಹೋಗಿ ಅಪಾರ ಪ್ರಮಾಣದ ನೀರು ನದಿ ಪಾಲಾಗಿ ರೈತರು ಕಂಗಾಲಾಗುತ್ತಿದ್ದರೆ, ಇತ್ತ ಗೇಟ್ ನಿರ್ಮಾಣ ಕಾಮಗಾರಿಯಲ್ಲಿ ಕಮಿಷನ್ ದಂಧೆ ಜೋರಾಗಿ ನಡೆಯುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಮುಕುಂದರಾವ್ ಭವಾನಿಮಠ ಆರೋಪಿಸಿದ್ದಾರೆ.

VISTARANEWS.COM


on

Koppala News
Koo

ಗಂಗಾವತಿ: ತುಂಗಭದ್ರಾ ಜಲಾಶಯದ ಕ್ರಸ್ಟ್‌ಗೇಟ್ ನಂಬರ್-19 ನೀರಿನಲ್ಲಿ ಕೊಚ್ಚಿ ಹೋಗಿ ಅಪಾರ ಪ್ರಮಾಣದ ನೀರು (Koppala News) ನದಿ ಪಾಲಾಗಿ ರೈತರು ಕಂಗಾಲಾಗುತ್ತಿದ್ದರೆ, ಇತ್ತ ಗೇಟ್ ನಿರ್ಮಾಣ ಕಾಮಗಾರಿಯಲ್ಲಿ ಕಮಿಷನ್ ದಂಧೆ ಜೋರಾಗಿ ನಡೆಯುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಮುಕುಂದರಾವ್ ಭವಾನಿಮಠ ಆರೋಪಿಸಿದ್ದಾರೆ.

ಕಾಂಗ್ರೆಸ್ ಮುಖಂಡ ಮುಕುಂದರಾವ್ ಭವಾನಿಮಠ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, 22 ಅಡಿ ಅಗಲದ 60ಕ್ಕೂ ಹೆಚ್ಚು ಅಡಿ ಎತ್ತರದ ಬೃಹತ್ ಕಬ್ಬಿಣದ ಗೇಟ್ ನಿರ್ಮಾಣ ಕಾರ್ಯಕ್ಕೆ ನಾಡಿನ ಹೆಸರಾಂತ ಸಂಸ್ಥೆ ಹಾಗೂ ವಿಜಯನಗರ-ಬಳ್ಳಾರಿ ಜಿಲ್ಲೆಯಲ್ಲಿಯೇ ಇರುವ ಜಿಂದಾಲ್ ಸಂಸ್ಥೆ ಮುಂದೆ ಬಂದಿತ್ತು. ಆದರೆ ಆ ಸಂಸ್ಥೆ ಕಾಮಗಾರಿಗೆ ಕಮಿಷನ್ ನೀಡದು ಎಂಬ ಕಾರಣಕ್ಕೆ ಗೇಟ್ ನಿರ್ಮಾಣ ಕಾಮಗಾರಿಯಿಂದ ಕೊಕ್ ನೀಡಲಾಗಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: Tungabhadra Dam: ಜಲಾಶಯ ನಿರ್ವಹಣೆ ಕುರಿತ ಕೇಂದ್ರ ಸಮಿತಿ ಸಲಹೆಯನ್ನು ರಾಜ್ಯ ಸರ್ಕಾರ ಧಿಕ್ಕರಿಸಿದೆ; ಪ್ರಲ್ಹಾದ್‌ ಜೋಶಿ ಆರೋಪ

ಅನುಭವ, ಗುಣಮಟ್ಟದ ಖಾತರಿ ಮತ್ತು ಕಾಮಗಾರಿ ನಿರ್ವಹಿಸಿದ ಯಾವುದೇ ಪ್ರಮಾಣಪತ್ರ ಇಲ್ಲದ ಸ್ಥಳೀಯ ಅಮೀರ್ ಮತ್ತು ನಾರಾಯಣ ಎಂಜಿನಿಯರಿಂಗ್ ಎಂಬ ಎರಡು ಸಂಸ್ಥೆಗಳಿಗೆ ಗೇಟ್ ನಿರ್ಮಾಣದ ಜವಾಬ್ದಾರಿ ವಹಿಸಿರುವುದು ಅನುಮಾನಾಸ್ಪದವಾಗಿದೆ. ಯಾವ ಮಾನದಂಡದ ಮೇಲೆ ಅವರಿಗೆ ಗುತ್ತಿಗೆ ನೀಡಲಾಗಿದೆ ಎಂದು ಭವಾನಿಮಠ ಪ್ರಶ್ನಿಸಿದ್ದಾರೆ.

ತುರ್ತು, ವಿಕೋಪದಂತಹ ಸಂದರ್ಭದಲ್ಲಿ ಮಾಡಲಾಗುವ ಕಾಮಗಾರಿಗಳಿಗೆ ಕರ್ನಾಟಕ ಟೆಂಡರ್ ಪಾರದರ್ಶಕ ನಿಯಮ(ಕೆಟಿಟಿಪಿ)ಗಳ ಪ್ರಕಾರ ಟೆಂಡರ್ ಕರೆಯದೇ ಕಾಮಗಾರಿ ಮಾಡಲು ಅವಕಾಶ ಇರುವುದನ್ನೇ ಬಂಡವಾಳ ಮಾಡಿಕೊಂಡಿರುವ ಅಧಿಕಾರಿಗಳು ಮತ್ತು ರಾಜಕಾರಣಿಗಳು, ಗೇಟ್ ನಿರ್ಮಾಣ ಕಾಮಗಾರಿಯಲ್ಲೂ ಅಕ್ರಮಕ್ಕೆ ಮುಂದಾಗಿದ್ದಾರೆ.

ಸ್ಥಳೀಯ ಸಂಸ್ಥೆಗಳ ಬಗ್ಗೆ ಪೂರ್ವಪರ ಯಾವ ಮಾಹಿತಿ ನೀಡದೇ ಏಕಾಏಕಿ ಕಾಮಗಾರಿ ನೀಡಿರುವುದು ಏಕೆ ಎಂಬ ಅನುಮಾನ ವ್ಯಕ್ತವಾಗುತ್ತಿದೆ. ಜಿಂದಾಲ್‌ನವರು ಯಾವುದೇ ಪರ್ಸಂಟೇಜ್ ನೀಡುವುದಿಲ್ಲ ಎಂಬ ಏಕೈಕ ಕಾರಣಕ್ಕೆ ಆ ಸಂಸ್ಥೆಗೆ ಗೇಟ್ ನಿರ್ಮಾಣ ಕಾಮಗಾರಿಯ ಟೆಂಡರ್ ನಿರಾಕರಿಸಲಾಗಿದೆ ಎಂದು ಮುಕುಂದರಾವ್ ಆರೋಪಿಸಿದ್ದಾರೆ.

ರೈತರಲ್ಲಿ ನಿರಾಸಕ್ತಿ ಏಕೆ?

ತುಂಗಭದ್ರಾ ಜಲಾಶಯದಿಂದ 60ಕ್ಕೂ ಹೆಚ್ಚು ಟಿಎಂಸಿಯಷ್ಟು ಅಪಾರ ಪ್ರಮಾಣದ ನೀರು ಪೋಲಾಗಿ ನಾಟಿ ಮಾಡಿರುವ ಭತ್ತದ ಬೆಳೆಗೆ ನೀರು ಸಿಗದ ಸ್ಥಿತಿ ನಿರ್ಮಾಣವಾಗಿದೆ. ಆದರೂ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯ ರೈತರಲ್ಲಿ ಯಾವುದೇ ಆತಂಕ, ಪ್ರತಿಭಟನೆ ಮಾಡುವ ಮನೋಭಾವ ಕ್ಷೀಣವಾಗಿರುವುದು ಬೇಸರದ ಸಂಗತಿ ಎಂದು ಭವಾನಿಮಠ ಬೇಸರ ವ್ಯಕ್ತಪಡಿಸಿದ್ದಾರೆ.

ರಾಯಚೂರು-ಕೊಪ್ಪಳ, ಬಳ್ಳಾರಿ ಜಿಲ್ಲೆಗಳ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯಕ್ಕೆ ಒದಗಿ ಬಂದಿರುವ ಆತಂಕ, ಅಪಾಯದ ಬಗ್ಗೆ ರೈತರು, ಈ ಭಾಗದ ಸಂಘಟನೆಗಳು, ಜನರು ಧ್ವನಿ ಎತ್ತದಿದ್ದರೆ ಮುಂದೆ ಭಾರೀ ಪ್ರಮಾಣದ ಗಂಡಾಂತರ ಕಾದಿದೆ. ಜಲಾಶಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸ್ವತಃ ಡಿಸಿಎಂ ಡಿ.ಕೆ. ಶಿವಕುಮಾರ್‌, ಸಚಿವ ಶಿವರಾಜ ತಂಗಡಗಿ ಸೇರಿದಂತೆ ಹಲವರು ಜಲಾಶಯಕ್ಕೆ ಅಪಾಯ ಒದಗಿ ಬಂದಿರುವ ಬಗ್ಗೆ ಮಾತನಾಡಿದ್ದಾರೆ. ಮೊದಲು ಜಲಾಶಯ ಉಳಿಸಿಕೊಳ್ಳಬೇಕಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Indian Bank Recruitment 2024: 300 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಇಂಡಿಯನ್‌ ಬ್ಯಾಂಕ್‌; ಕರ್ನಾಟಕದಲ್ಲಿಯೂ ಇದೆ ನೇಮಕಾತಿ

ತುಂಗಭದ್ರಾ ಜಲಾಶಯ ವ್ಯಾಪ್ತಿಯ ಜನ ಸಂಘಟಿತರಾಗಿ ಹೋರಾಟ ಮಾಡಿ ಸರ್ಕಾರದ ಗಮನ ಸೆಳೆಯದೇ ಹೋದಲ್ಲಿ ನಿಜಕ್ಕೂ ಜಲಾಶಯಕ್ಕೆ ದೊಡ್ಡ ಗಂಡಾಂತರ ಎದುರಾಗಲಿದೆ. ಆಪತ್ಕಾಲ ಎದುರಾದಾಗ ಸರ್ಕಾರ ಕೈ ಎತ್ತುವ ಸಾಧ್ಯತೆ ಇದೆ. ಈ ಬಗ್ಗೆ ಸಮಾನ ಮನಸ್ಕರು ಸೇರಿ ಜಲಾಶಯದ ಉಳಿವಿಗೆ ಹೋರಾಟ ರೂಪಿಸಬೇಕಾದ ಅನಿವಾರ್ಯತೆ ಇದೆ ಎಂದು ಅವರು ಕರೆ ನೀಡಿದ್ದಾರೆ.

Continue Reading

ಕರ್ನಾಟಕ

Koppala News: ಮಕ್ಕಳ ತಟ್ಟೆಯಲ್ಲಿನ ಮೊಟ್ಟೆ ಕಸಿದುಕೊಂಡ ಅಂಗನವಾಡಿಗೆ ನ್ಯಾಯಾಧೀಶರ ದಿಢೀರ್ ಭೇಟಿ!

Koppala News: ಮಕ್ಕಳಿಗೆ ಮೊಟ್ಟೆ ಕೊಟ್ಟು ವೀಡಿಯೋ ಮಾಡಿ ವಾಪಸ್ ಕಸಿದುಕೊಂಡು ರಾಜ್ಯಾದ್ಯಂತ ಸುದ್ದಿಯಾಗಿದ್ದ ಕಾರಟಗಿ ತಾಲೂಕಿನ ಗುಂಡೂರು ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಮಂಗಳವಾರ ಕೊಪ್ಪಳ ಜಿಲ್ಲಾ ಸಿವಿಲ್ ನ್ಯಾಯಾಧೀಶ ಮಹಾಂತೇಶ್ ಎಸ್. ದರಗದ, ಗಂಗಾವತಿಯ ಹಿರಿಯ ಶ್ರೇಣಿ ನ್ಯಾಯಾಧೀಶ ರಮೇಶ್ ಎಸ್. ಗಾಣಿಗೇರ ಅವರು ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

VISTARANEWS.COM


on

Koppala News
Koo

ಗಂಗಾವತಿ: ಮಕ್ಕಳಿಗೆ ಮೊಟ್ಟೆ ಕೊಟ್ಟು ವೀಡಿಯೋ ಮಾಡಿ ವಾಪಸ್ ಕಸಿದುಕೊಂಡು ರಾಜ್ಯಾದ್ಯಂತ ಸುದ್ದಿಯಾಗಿದ್ದ ಕಾರಟಗಿ ತಾಲೂಕಿನ ಗುಂಡೂರು ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಮಂಗಳವಾರ ನ್ಯಾಯಾಧೀಶರುಗಳು ದಿಢೀರ್ ಭೇಟಿ ನೀಡಿ, ಪರಿಶೀಲನೆ (Koppala News) ನಡೆಸಿದರು.

ಕೊಪ್ಪಳ ಜಿಲ್ಲಾ ಸಿವಿಲ್ ನ್ಯಾಯಾಧೀಶ ಮಹಾಂತೇಶ್ ಎಸ್. ದರಗದ, ಗಂಗಾವತಿಯ ಹಿರಿಯ ಶ್ರೇಣಿ ನ್ಯಾಯಾಧೀಶ ರಮೇಶ್ ಎಸ್. ಗಾಣಿಗೇರ ಅವರು ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಇದನ್ನೂ ಓದಿ: Government Employees: ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ; ಆ.17ರಂದು ವಿಶೇಷ ಸಾಂದರ್ಭಿಕ ರಜೆ

ಮೊಟ್ಟೆ ಪ್ರಕರಣ ಪೂರ್ಣ ಮಾಹಿತಿ ಪಡೆದುಕೊಂಡ ನ್ಯಾಯಾಧೀಶರು, ಕೇಂದ್ರದಲ್ಲಿ ಮಕ್ಕಳಿಗೆ ಇರುವ ಸೌಲಭ್ಯಗಳನ್ನು ಪರಿಶೀಲಿಸಿದರು. ಶೌಚಾಲಯ, ಕುಡಿಯುವ ನೀರು, ದಾಸ್ತಾನು ಮಾಡಲಾಗಿರುವ ಆಹಾರ, ಮಕ್ಕಳಿಗೆ ನೀಡುವ ಔಷಧಿಗಳನ್ನು ಪರಿಶೀಲಿಸಿದರು.

ಅಂಗನವಾಡಿ ಕೇಂದ್ರದ ಸುತ್ತಲೂ ಇರುವ ಕಸಕಡ್ಡಿ, ತಿಪ್ಪೆಗುಂಡಿ ತೆರವಿಗೆ ಮಹಿಳಾ‌ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದನ್ನೂ ಓದಿ: Kannada New Movie: ಸಮರ್ಜಿತ್ ಲಂಕೇಶ್ ಅಭಿನಯದ ʼಗೌರಿʼ ಚಿತ್ರಕ್ಕೆ ನಟ ಉಪೇಂದ್ರ ಸಾಥ್‌; ಆ.15ಕ್ಕೆ ಸಿನಿಮಾ ರಿಲೀಸ್‌

ಕೇಂದ್ರದಲ್ಲಿ ನೀರಿನ ನಳ ಇಲ್ಲದಿರುವುದು, ಮಕ್ಕಳಿಗೆ ನಿತ್ಯ ನೀಡುವ ಆಹಾರದ ಮೆನು ಹಾಕದಿರುವುದು, ಶೌಚಾಲಯಕ್ಕೆ ನೀರಿನ ವ್ಯವಸ್ಥೆ ಇಲ್ಲದಿರುವುದು, ಶೌಚಾಲಯದ ಕಟ್ಟಡ ಬಿರುಕು ಉಂಟಾಗಿರುವುದನ್ನು ನ್ಯಾಯಾಧೀಶರುಗಳು ಗಮನಿಸಿ, ಸೂಕ್ತ ಕ್ರಮ‌ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

Continue Reading

ಬೆಂಗಳೂರು

Kannada New Movie: ತೆರೆಗೆ ಬರಲು ಸಿದ್ಧವಾಗಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ʼಸ್ವಪ್ನ ಮಂಟಪʼ ಚಿತ್ರ

Kannada New Movie: `ಸ್ವಪ್ನ ಮಂಟಪ’ ಚಿತ್ರವನ್ನು ಬರಗೂರು ರಾಮಚಂದ್ರಪ್ಪನವರು ತಮ್ಮದೇ ಕಾದಂಬರಿಯನ್ನು ಆಧರಿಸಿ ಚಿತ್ರಕತೆ, ಸಂಭಾಷಣೆ, ಗೀತೆ ರಚನೆ ಮಾಡುವುದರ ಜತೆಗೆ ನಿರ್ದೇಶನ ಮಾಡಿದ್ದು, ಈ ಸಿನಿಮಾವು ಜುಲೈ 31ರಂದು ಸೆನ್ಸಾರ್‌ ಆಗಿದೆ. ಸೆನ್ಸಾರ್‌ ಮಂಡಳಿಯು ಈ ಚಿತ್ರದ ಆಶಯ ಮತ್ತು ಅಭಿವ್ಯಕ್ತಿ ವಿಧಾನವನ್ನು ಮೆಚ್ಚಿ ʼಯುʼ ಪ್ರಮಾಣಪತ್ರ ನೀಡಿದೆ.

VISTARANEWS.COM


on

Kannada New Movie
Koo

ಬೆಂಗಳೂರು: ಬಾಬು ನಾಯ್ಕ್ ಅವರು ತಮ್ಮ ಮಲೈ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಾಣ ಮಾಡಿರುವ ʼಸ್ವಪ್ನ ಮಂಟಪʼ ಚಿತ್ರವು (Kannada New Movie) ಜುಲೈ 31ರಂದು ಸೆನ್ಸಾರ್‌ ಆಗಿದೆ. ಸೆನ್ಸಾರ್‌ ಮಂಡಳಿಯು ಈ ಚಿತ್ರದ ಆಶಯ ಮತ್ತು ಅಭಿವ್ಯಕ್ತಿ ವಿಧಾನವನ್ನು ಮೆಚ್ಚಿ ʼಯುʼ ಪ್ರಮಾಣ ಪತ್ರ ನೀಡಿದೆ.

ಇದನ್ನೂ ಓದಿ: Indian Bank Recruitment 2024: 300 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಇಂಡಿಯನ್‌ ಬ್ಯಾಂಕ್‌; ಕರ್ನಾಟಕದಲ್ಲಿಯೂ ಇದೆ ನೇಮಕಾತಿ

`ಸ್ವಪ್ನ ಮಂಟಪ’ ಚಿತ್ರವನ್ನು ಬರಗೂರು ರಾಮಚಂದ್ರಪ್ಪನವರು ತಮ್ಮದೇ ಕಾದಂಬರಿಯನ್ನು ಆಧರಿಸಿ ಚಿತ್ರಕತೆ, ಸಂಭಾಷಣೆ, ಗೀತೆ ರಚನೆ ಮಾಡುವುದರ ಜತೆಗೆ ನಿರ್ದೇಶನ ಮಾಡಿದ್ದಾರೆ.

`ಸ್ವಪ್ನ ಮಂಟಪ’ ಚಿತ್ರವು ಪಾರಂಪರಿಕ ಸ್ಥಳಗಳ ಮಹತ್ವ ಮತ್ತು ಸಂರಕ್ಷಣೆಯ ಅಗತ್ಯವನ್ನು ಪ್ರತಿಪಾದಿಸುವ ಕಥಾ ವಸ್ತುವನ್ನು ಒಳಗೊಂಡಿದೆ. ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ ಸ್ವಪ್ನ ಮಂಟಪವನ್ನು ಕೆಡವಿ ಹಾಕುವ ಪ್ರಯತ್ನವನ್ನು ಕೆಲವರು ಮಾಡಿದಾಗ ಕಥಾ ನಾಯಕ ಮತ್ತು ನಾಯಕಿ ಒಂದಾಗಿ ಜನರನ್ನು ಸಂಘಟಿಸಿ ಪಾರಂಪರಿಕ ಚಾರಿತ್ರಿಕ ಮಂಟಪವನ್ನು ಉಳಿಸುತ್ತಾರೆ. ಸಾಂಕೇತಿಕವಾದ ಈ ಕಥಾವಸ್ತುವು ಪಾರಂಪರಿಕ ಸ್ಥಳಗಳ ರಕ್ಷಣೆ ವಿಷಯದಲ್ಲಿ ಪ್ರಾತಿನಿಧಿಕವೂ ಆಗುತ್ತದೆ.

ಕಥಾ ನಾಯಕರಾಗಿ ವಿಜಯ ರಾಘವೇಂದ್ರ ಮತ್ತು ನಾಯಕಿಯಾಗಿ ರಂಜಿನಿ ರಾಘವನ್ ಅಭಿನಯಿಸಿದ್ದಾರೆ. ಇಬ್ಬರೂ ದ್ವಿಪಾತ್ರದಲ್ಲಿ ಕಾಣಿಸಿಕೊಂಡಿರುವುದು ಒಂದು ವಿಶೇಷ, ಉಳಿದ ತಾರಾಗಣದಲ್ಲಿ ಸುಂದರರಾಜ್, ಶೋಭಾ ರಾಘವೇಂದ್ರ, ರಜಿನಿ, ಸುಂದರರಾಜ ಅರಸು, ಅಂಬರೀಶ್ ಸಾರಂಗಿ, ರಾಜಪ್ಪ ದಳವಾಯಿ, ವೆಂಕಟರಾಜು, ಮೈಸೂರು ಮಂಜುಳ, ಉಮ್ಮತ್ತೂರು ಬಸವರಾಜು, ಶಿವಲಿಂಗ ಪ್ರಸಾದ್, ಭಾರತಿ ರಮೇಶ್, ಗುಂಡಿ ರಮೇಶ್ ಮುಂತಾದವರು ಇದ್ದಾರೆ.

ಇದನ್ನೂ ಓದಿ: Tungabhadra Dam: ಜಲಾಶಯ ನಿರ್ವಹಣೆ ಕುರಿತ ಕೇಂದ್ರ ಸಮಿತಿ ಸಲಹೆಯನ್ನು ರಾಜ್ಯ ಸರ್ಕಾರ ಧಿಕ್ಕರಿಸಿದೆ; ಪ್ರಲ್ಹಾದ್‌ ಜೋಶಿ ಆರೋಪ

ಈ ಚಿತ್ರವು ಸುರೇಶ್ ಅರಸು ಸಂಕಲನ, ನಾಗರಾಜ್ ಆದವಾನಿ ಛಾಯಾಗ್ರಹಣ, ಶಮಿತಾ ಮಲ್ನಾಡ್ ಸಂಗೀತ ನಿರ್ದೇಶನ, ತ್ರಿಭುವನ್ ನೃತ್ಯ ಸಂಯೋಜನೆಯನ್ನು ಒಳಗೊಂಡಿದೆ. ನಟರಾಜ್ ಶಿವು ಮತ್ತು ಪ್ರವೀಣ್, ಸಹ ನಿರ್ದೇಶಕರಾಗಿ, ಗೋಪಾಲಕೃಷ್ಣ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ.

Continue Reading

ಕರ್ನಾಟಕ

Cauvery Water Dispute: ಕಾವೇರಿ ನೀರು ನಿಗದಿಗಿಂತ ಹೆಚ್ಚು ಹರಿಸಿದರೂ ತಮಿಳುನಾಡು ಆಕ್ಷೇಪ!

Cauvery Water Dispute: ಕಾವೇರಿ ನೀರು ನಿಯಂತ್ರಣ ಸಮಿತಿಯು ಆ.11ರಂದು ನಿಗದಿಪಡಿಸಿದ ನೀರಿನ ಹರಿವಾದ 56.73 ಟಿಎಂಸಿಗೆ ಬದಲಾಗಿ153.802 ಟಿಎಂಸಿ ನೀರು ಕರ್ನಾಟಕದಿಂದ ತಮಿಳುನಾಡಿಗೆ ಹರಿದಿದೆ. ಹೆಚ್ಚುವರಿ ನೀರು ಹರಿದರೂ ಕೂಡ ತಮಿಳುನಾಡು ಆಕ್ಷೇಪ ವ್ಯಕ್ತಪಡಿಸಿದೆ.

VISTARANEWS.COM


on

Cauvery Water Dispute
Koo

ಬೆಂಗಳೂರು: ನಿಗದಿಗಿಂತ ಹೆಚ್ಚು ಕಾವೇರಿ ನೀರು (Cauvery Water Dispute) ಹರಿಸಿದರೂ ತಮಿಳುನಾಡು ಆಕ್ಷೇಪ ವ್ಯಕ್ತಪಡಿಸಿರುವುದು ಕಂಡುಬಂದಿದೆ. ನವ ದೆಹಲಿಯಲ್ಲಿ ಮಂಗಳವಾರ ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿಯ (CWRC) 101ನೇ ಸಭೆಯಲ್ಲಿ ಕರ್ನಾಟಕದ ವಿರುದ್ಧ ತಮಿಳುನಾಡು ಅಧಿಕಾರಿಗಳು ಅಸಮಾಧಾನ ಹೊರಹಾಕಿದ್ದಾರೆ. ಈ ಬಾರಿಯೂ ಕರ್ನಾಟಕವು ತನ್ನ ಜಲಾಶಯಗಳು ತುಂಬಿದ ನಂತರವಷ್ಟೇ ನೀರನ್ನು ಹರಿಸಿದೆ ಎಂದು ತಿಳಿಸಿದೆ.

ಆ.11ರಂದು ನಿಗದಿಪಡಿಸಿದ ನೀರಿನ ಹರಿವಾದ 56.73 ಟಿಎಂಸಿಗೆ ಬದಲಾಗಿ ಬಿಳಿಗುಂಡ್ಲುವಿನಲ್ಲಿ 153.802 ಟಿಎಂಸಿ ನೀರು ಹರಿದಿದೆ. ಬಿಳಿಗುಂಡ್ಲುವಿನಲ್ಲಿ ಹರಿದ ಹೆಚ್ಚುವರಿ ನೀರಿನ ಪ್ರಮಾಣವನ್ನು ಮುಂಬರುವ ತಿಂಗಳುಗಳಲ್ಲಿ ಕರ್ನಾಟಕ ರಾಜ್ಯವು ಹರಿಸಬೇಕಾದ ನೀರಿನ ಮೊತ್ತಕ್ಕೆ ಜಮೆ ಮಾಡಿಕೊಳ್ಳಬೇಕು. ಮುಂದಿನ ಮಾನ್ಸೂನ್ ತಿಂಗಳುಗಳಲ್ಲಿಯೂ ಒಳ್ಳೆಯ ಮಳೆಯ ನಿರೀಕ್ಷೆ ಇದ್ದು, ಎರಡೂ ರಾಜ್ಯದ ರೈತರು ಸಹ ಲಾಭ ಪಡೆದುಕೊಳ್ಳಬಹುದೆಂದು ಆಶಿಸುತ್ತೇವೆ ಎಂದು ಸಭೆಯಲ್ಲಿ ಕರ್ನಾಟಕ ತಿಳಿಸಿದೆ.

ಇದಕ್ಕೆ ತಮಿಳುನಾಡು ಅಧಿಕಾರಿಗಳು ಆಕ್ಷೇಪ ವ್ಯಕ್ತಪಡಿಸಿದ್ದು, ಬಿಳಿಗುಂಡ್ಲುವಿನಲ್ಲಿ ಹರಿದ ನೀರಿನ ಪ್ರಮಾಣವು ಕರ್ನಾಟಕದ ಜಲಾಶಯಗಳಲ್ಲಿನ ಹೆಚ್ಚುವರಿ ನೀರಿನ ಪ್ರಮಾಣವಾಗಿರುತ್ತದೆ. ಈ ಬಾರಿಯೂ ಕರ್ನಾಟಕ ರಾಜ್ಯವು ತನ್ನ ಜಲಾಶಯಗಳು ತುಂಬಿದ ನಂತರವಷ್ಟೇ ನೀರನ್ನು ಹರಿಸಿದೆ ಎಂದು ತಿಳಿಸಿದ್ದಾರೆ.

    1992ರ ಏ.3ರ ಕಾವೇರಿ ನ್ಯಾಯಾಧಿಕರಣದ ಆದೇಶದಂತೆ ಒಂದು ವಾರದಲ್ಲಿ ಹರಿಸಬೇಕಾದ ನೀರಿನ ಪ್ರಮಾಣದಲ್ಲಿ ಕೊರತೆ ಉಂಟಾದಲ್ಲಿ, ಅದನ್ನು ಮುಂಬರುವ ವಾರಗಳಲ್ಲಿ ಹರಿಸಬೇಕು. ಆದ್ದರಿಂದ, ಕರ್ನಾಟಕ ರಾಜ್ಯವು ತನ್ನ ಜಲಾಶಯಗಳು ಭರ್ತಿ ಆಗುವವರೆಗೆ ನಿರೀಕ್ಷಿಸಿ ಹೆಚ್ಚುವರಿ ನೀರನ್ನು ಹರಿಸಲು ಕಾಯುವ ಹಾಗಿಲ್ಲ ಎಂದು ತಮಿಳುನಾಡು ಅಧಿಕಾರಿಗಳು ಹೇಳಿದ್ದಾರೆ.

    ಕರ್ನಾಟಕವು ಹೆಚ್ಚುವರಿ ನೀರು ಹರಿಸಿರುವುದರಿಂದ ಕಾವೇರಿ ಜಲ ನಿಯಂತ್ರಣ ಸಮಿತಿಯಲ್ಲಿ (CWRC) ಕರ್ನಾಟಕ ರಾಜ್ಯಕ್ಕೆ ಸಂಬಂಧಿಸಿದಂತೆ ಅಂತಿಮವಾಗಿ ಯಾವುದೇ ರೀತಿಯ ನಿರ್ಣಯ, ಆದೇಶ ಮಾಡದೆ ಸಭೆಯು ಮುಕ್ತಾಯಗೊಂಡಿದೆ.

    ಇದನ್ನೂ ಓದಿ | Government Employees: ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ; ಆ.17ರಂದು ವಿಶೇಷ ಸಾಂದರ್ಭಿಕ ರಜೆ

    ಗೇಟ್‌ ರಿಪೇರಿಗಾಗಿ 60 ಟಿಎಂಸಿ ನೀರು ಖಾಲಿ, 8 ಜಿಲ್ಲೆಗಳ ರೈತರಿಗೆ ನೀರಿಲ್ಲ!

    ವಿಜಯನಗರ: ಹೊಸಪೇಟೆಯ ತುಂಗಭದ್ರಾ ಜಲಾಶಯದ (Tungabhadra Dam) 19ನೇ ಕ್ರೆಸ್ಟ್‌ ಗೇಟ್ ಮುರಿದಿರುವುದು (Crest Gate Crash) ಮಳೆಗಾಲ ಮುಗಿಯುವ ಮುನ್ನವೇ ಕಲ್ಯಾಣ ಕರ್ನಾಟಕ (Kalyana Karntaka) ಭಾಗದ ಅನ್ನದಾತರಿಗೆ (Farmers) ಶಾಕ್ ನೀಡಿದೆ. ಕ್ರೆಸ್ಟ್‌ ಗೇಟ್‌ ಮುರಿದುದರಿಂದ ಸುಮಾರು 15 ಟಿಎಂಸಿಯಷ್ಟು (TMC) ನೀರು ಹರಿದುಹೋಗಿದ್ದು, ಭರ್ತಿಯಾಗಿದ್ದ ಜಲಾಶಯ ಅಷ್ಟರ ಮಟ್ಟಿಗೆ ಈಗ ಖಾಲಿಯಾಗಿದೆ. ಇದರ ಪರಿಣಾಮ ಮೂರು ರಾಜ್ಯಗಳ 8 ಜಿಲ್ಲೆಗಳ ಲಕ್ಷಾಂತರ ರೈತರು ತಮ್ಮ ಎರಡು ಬೆಳೆಗಳನ್ನು ಕಳೆದುಕೊಳ್ಳುವ ಅನುಮಾನ ಮೂಡಿದೆ.

    ಹೊಸಪೇಟೆಯ ತುಂಗಭದ್ರಾ ಜಲಾಶಯದಿಂದ ಒಟ್ಟು ಹನ್ನೆರಡು ಲಕ್ಷ ಎಕರೆ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಲಾಗಿದೆ. ಮೂರು ರಾಜ್ಯದ 8 ಜಿಲ್ಲೆಗಳಿಗೆ ಆಸರೆ ಆಗಿರುವ ತುಂಗಭದ್ರಾ ಜಲಾಶಯ ಕಲ್ಯಾಣ ಕರ್ನಾಟಕದ ಬಳ್ಳಾರಿ, ವಿಜಯನಗರ, ಕೊಪ್ಪಳ‌, ರಾಯಚೂರು, ಆಂಧ್ರ ಪ್ರದೇಶದ ಕರ್ನೂಲ್, ಅನಂತಪುರ, ಕಡಪ, ತೆಲಂಗಾಣದ ಮೆಹಬೂಬ್‌ನಗರ ಜಿಲ್ಲೆಗಳಿಗೆ ಜೀವನಾಡಿ.

    ಈ ಬಾರಿ ಬಳ್ಳಾರಿ, ವಿಜಯನಗರ ಜಿಲ್ಲೆಯಲ್ಲಿ ಅಷ್ಟಾಗಿ ಮಳೆ ಆಗಿಲ್ಲ. ಆದರೆ ಡ್ಯಾಂ ತುಂಬಿದ್ದರಿಂದ ಕಾಲುವೆ ನೀರು ನಂಬಿಕೊಂಡು ರೈತು ಬಿತ್ತನೆ ಮಾಡಿದ್ದಾರೆ. ಬಳ್ಳಾರಿಯಲ್ಲಿ 70 ಸಾವಿರಕ್ಕೂ ಅಧಿಕ ಹೆಕ್ಟೇರ್ ಪ್ರದೇಶದಲ್ಲಿ ಮೆಣಸಿನಕಾಯಿ ಬೆಳೆ ಬಿತ್ತನೆ ಮಾಡಲಾಗಿದೆ. 80 ಸಾವಿರಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬಿತ್ತನೆ ಮಾಡಲಾಗಿದೆ.

    ಆದರೆ ಗೇಟ್ ರಿಪೇರಿಗಾಗಿ 60 TMC ನೀರನ್ನು ಅಣೆಕಟ್ಟಿನಿಂದ ಖಾಲಿ ಮಾಡುವ ಅನಿವಾರ್ಯತೆ ಇದೆ. 105 TMC ಸಾಮರ್ಥ್ಯದ TB ಡ್ಯಾಂನಲ್ಲಿ 20 ಅಡಿ ನೀರು ಕುಗ್ಗಿಸಿ 60 TMCಯಷ್ಟು ನೀರನ್ನು‌ ಅಧಿಕಾರಿಗಳು ಖಾಲಿ ಮಾಡುತ್ತಿದ್ದಾರೆ. ಸೆಪ್ಟೆಂಬರ್ ತಿಂಗಳಿಂದ ಮಳೆ ಪ್ರಮಾಣ ಕುಗ್ಗಬಹುದು. ಹೀಗಾಗಿ ಖಾಲಿಯಾದ 60 ಟಿಎಂಸಿ ನೀರನ್ನು ಮತ್ತೆ ತುಂಬಿಸುವುದು ಕಷ್ಟಸಾಧ್ಯ. ಬೇಸಿಗೆಯಲ್ಲಿ ನಿರ್ವಹಣೆಗಾಗಿ ಡ್ಯಾಂ ತುಂಬಿಸುವುದು ಅಧಿಕಾರಿಗಳಿಗೆ ಸವಾಲು ಆಗುತ್ತದೆ. ಸೆಪ್ಟೆಂಬರ್ ಬಳಿಕ ಕಾಲುವೆ ನೀರು ಕೈಕೊಟ್ಟರೆ ಬೆಳೆಗಳು ಬಾಡುತ್ತವೆ. ಹೀಗಾಗಿ ಈ ಬಾರಿ ಬೆಳೆಗಳಿಗೆ‌ ಡ್ಯಾಂ ನೀರು ಸಿಗುವುದೇ ಅನುಮಾನ ಎಂಬಂತಾಗಿದೆ.

    ಎರಡನೇ ಬೆಳೆಗಿಂತ ಮೊದಲ ಬೆಳೆಗಾದರೂ ಸರಿಯಾಗಿ ನೀರು ಸಿಗುವುದೇ ಎಂಬ ಆತಂಕವೂ ರೈತರನ್ನು ಕಾಡುತ್ತಿದೆ. 60 ಟಿಎಂಸಿ ನೀರು ಖಾಲಿಯಾದ್ರೆ ಡ್ಯಾಂನಲ್ಲಿ ಉಳಿಯುವುದು ಕೇವಲ 45 ಟಿಎಂಸಿ ನೀರು ಮಾತ್ರ. ಇದರಲ್ಲಿ ಆಂಧ್ರಪ್ರದೇಶದ ಕೋಟಾ ಕೂಡಾ ಇದೆ. ಹೀಗಾಗಿ ಕರ್ನಾಟಕ ಕೋಟಾ ಉಳಿಯುವುದು ಕೇವಲ ಇಪ್ಪತ್ತೈದು ಟಿಎಂಸಿ ನೀರು. ಇದರಲ್ಲಿಯೇ ಕುಡಿಯುವ ನೀರಿಗೆ ಹೆಚ್ಚಿನ ನೀರು ಇಟ್ಟುಕೊಳ್ಳುವುದರಿಂದ ರೈತರಿಗೆ ಇದೀಗ ಬೆಳೆಗೆ ನೀರು ಸಿಗುತ್ತಾ ಇಲ್ಲವೋ ಅನ್ನೋ ಆತಂಕ ಎದುರಾಗಿದೆ.

    ಇದನ್ನೂ ಓದಿ | Lakshmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ಗೆ ಅಹವಾಲು ಸಲ್ಲಿಸಲು ಸಾಲುಸಾಲು ಜನ

    ತುಂಗಭದ್ರಾ ಜಲಾಶಯದ ನೀರಿನ ಮೇಲೆಯೇ ನಾಲ್ಕು ಜಿಲ್ಲೆಗಳ ಅನೇಕ ಪಟ್ಟಣ ಮತ್ತು ಗ್ರಾಮಗಳಿಗೆ ಕುಡಿಯುವ ನೀರನ್ನು ಪೂರೈಕೆ ಮಾಡಲಾಗುತ್ತದೆ. ಡ್ಯಾಂನಲ್ಲಿರೋ ನೀರು ಖಾಲಿಯಾದ್ರೆ ಕುಡಿಯುವ ನೀರಿಗೆ ಕೂಡಾ ತತ್ವಾರವಾಗುತ್ತದೆ. ಕಳೆದ ಬೇಸಿಗೆಯಲ್ಲಿ ಅನೇಕ ಕಡೆ ಕುಡಿಯಲು ಕೂಡಾ ನೀರು ಬಿಡದ ಸ್ಥಿತಿ ನಿರ್ಮಾಣವಾಗಿತ್ತು. ಇದೀಗ ಮತ್ತೆ ಡ್ಯಾಂ ಖಾಲಿಯಾಗುತ್ತಿರುವುದರಿಂದ ಬೇಸಿಗೆಯಲ್ಲಿ ಈ ಬಾರಿ ಕೂಡಾ ತತ್ವಾರವಾಗೋ ಸಾಧ್ಯತೆ ಹೆಚ್ಚಾಗಿದೆ.

      Continue Reading
      Advertisement
      Ashwini Ponnappa
      ಪ್ರಮುಖ ಸುದ್ದಿ4 hours ago

      Ashwini Ponnappa : ಷಟ್ಲರ್​ಗಳನ್ನೇ ಗುರಿಯಾಗಿಸಿದ ಕ್ರೀಡಾ ಇಲಾಖೆ ವಿರುದ್ಧವೇ ತಿರುಗಿ ಬಿದ್ದ ಅಶ್ವಿನಿ ಪೊನ್ನಪ್ಪ

      Sowmya Reddy
      ರಾಜಕೀಯ4 hours ago

      Sowmya Reddy: ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಸೌಮ್ಯಾ ರೆಡ್ಡಿ ನೇಮಕ

      Cricket News
      ಪ್ರಮುಖ ಸುದ್ದಿ4 hours ago

      Cricket News : ಬಾಂಗ್ಲಾದೇಶ ವಿರುದ್ಧದ ಸರಣಿಯ ವೇಳಾಪಟ್ಟಿ ಬದಲಾಯಿಸಿದ ಬಿಸಿಸಿಐ

      Koppala News
      ಕೊಪ್ಪಳ4 hours ago

      Koppala News: ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್ ನಿರ್ಮಾಣದಲ್ಲೂ ಕಮಿಷನ್ ರಾಜಕೀಯ; ಕಾಂಗ್ರೆಸ್ ಮುಖಂಡನಿಂದಲೇ ಆರೋಪ

      Koppala News
      ಕರ್ನಾಟಕ5 hours ago

      Koppala News: ಮಕ್ಕಳ ತಟ್ಟೆಯಲ್ಲಿನ ಮೊಟ್ಟೆ ಕಸಿದುಕೊಂಡ ಅಂಗನವಾಡಿಗೆ ನ್ಯಾಯಾಧೀಶರ ದಿಢೀರ್ ಭೇಟಿ!

      Kannada New Movie
      ಬೆಂಗಳೂರು5 hours ago

      Kannada New Movie: ತೆರೆಗೆ ಬರಲು ಸಿದ್ಧವಾಗಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ʼಸ್ವಪ್ನ ಮಂಟಪʼ ಚಿತ್ರ

      Independence Day 2024
      ದೇಶ5 hours ago

      Independence Day 2024: ಬ್ರಿಟಿಷ್‌ ಕಾಲದ ಚಿನ್ನದ ನಾಣ್ಯದಿಂದ ಹಿಡಿದು ಸ್ವತಂತ್ರ ಭಾರತದ ರೂಪಾಯಿವರೆಗಿನ ಇತಿಹಾಸ ಕುತೂಹಲಕರ!

      Vinesh Phogat
      ಪ್ರಮುಖ ಸುದ್ದಿ5 hours ago

      Vinesh Phogat : ವಿನೇಶ್​ ಪೋಗಟ್​ ಅನರ್ಹತೆ ತೀರ್ಪು ಆಗಸ್ಟ್​​​ 16ಕ್ಕೆ ಮುಂದೂಡಿಕೆ

      Cauvery Water Dispute
      ಕರ್ನಾಟಕ5 hours ago

      Cauvery Water Dispute: ಕಾವೇರಿ ನೀರು ನಿಗದಿಗಿಂತ ಹೆಚ್ಚು ಹರಿಸಿದರೂ ತಮಿಳುನಾಡು ಆಕ್ಷೇಪ!

      Sheikh Hasina
      ಪ್ರಮುಖ ಸುದ್ದಿ5 hours ago

      Sheikh Hasina : ಬಾಂಗ್ಲಾದಿಂದ ಪಲಾಯನ ಮಾಡಿದ ಬಳಿಕ ಮೊದಲ ಬಾರಿ ಹೇಳಿಕೆ ನೀಡಿದ ಶೇಖ್​ ಹಸೀನಾ

      Sharmitha Gowda in bikini
      ಕಿರುತೆರೆ10 months ago

      Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

      Kannada Serials
      ಕಿರುತೆರೆ10 months ago

      Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

      Bigg Boss- Saregamapa 20 average TRP
      ಕಿರುತೆರೆ10 months ago

      Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

      Kannada Serials
      ಕಿರುತೆರೆ11 months ago

      Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

      galipata neetu
      ಕಿರುತೆರೆ9 months ago

      Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

      Kannada Serials
      ಕಿರುತೆರೆ10 months ago

      Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

      Bigg Boss' dominates TRP; Sita Rama fell to the sixth position
      ಕಿರುತೆರೆ10 months ago

      Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

      geetha serial Dhanush gowda engagement
      ಕಿರುತೆರೆ8 months ago

      Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

      Kannada Serials
      ಕಿರುತೆರೆ11 months ago

      Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

      varun
      ಕಿರುತೆರೆ9 months ago

      Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

      karnataka Weather Forecast
      ಮಳೆ5 days ago

      Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

      Bellary news
      ಬಳ್ಳಾರಿ5 days ago

      Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

      Maravoor bridge in danger Vehicular traffic suspended
      ದಕ್ಷಿಣ ಕನ್ನಡ6 days ago

      Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

      Wild Animals Attack
      ಚಿಕ್ಕಮಗಳೂರು1 week ago

      Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

      Karnataka Weather Forecast
      ಮಳೆ1 week ago

      Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

      assault case
      ಬೆಳಗಾವಿ1 week ago

      Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

      karnataka rain
      ಮಳೆ2 weeks ago

      Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

      karnataka Rain
      ಮಳೆ2 weeks ago

      Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

      Karnataka Rain
      ಮಳೆ2 weeks ago

      Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

      karnataka Rain
      ಮಳೆ2 weeks ago

      Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

      ಟ್ರೆಂಡಿಂಗ್‌