Nikhil Kamath : ಅಮೆರಿಕದಲ್ಲಿ ಓದಿದ ಸ್ನೇಹಿತರನ್ನು ಜೆರೋಧಾ ಸಂಸ್ಥಾಪಕ ನಿಖಿಲ್‌ ಕಾಮತ್ ಭಾರತಕ್ಕೆ ಆಹ್ವಾನಿಸಿದ್ದೇಕೆ? - Vistara News

ವಾಣಿಜ್ಯ

Nikhil Kamath : ಅಮೆರಿಕದಲ್ಲಿ ಓದಿದ ಸ್ನೇಹಿತರನ್ನು ಜೆರೋಧಾ ಸಂಸ್ಥಾಪಕ ನಿಖಿಲ್‌ ಕಾಮತ್ ಭಾರತಕ್ಕೆ ಆಹ್ವಾನಿಸಿದ್ದೇಕೆ?

ಭಾರತ 2023ರಲ್ಲಿ ಆರ್ಥಿಕ ಹಿಂಜರಿತಕ್ಕೆ ಸಿಲುಕುವ ಸಾಧ್ಯತೆ ಇಲ್ಲ. ಜತೆಗೆ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಎಕಾನಮಿ ಆಗಿರುವುದರಿಂದ ಅಮೆರಿಕದಲ್ಲಿ ಓದು ಮುಗಿಸಿದ ಸ್ನೇಹಿತರು ಸ್ವದೇಶಕ್ಕೆ ಮರಳಿ ಏನಾದರೂ ಸ್ಟಾರ್ಟಪ್‌ ಮಾಡಬೇಕು ಎಂದು ಜೆರೋಧಾದ ಸಂಸ್ಥಾಪಕ ನಿಖಿಲ್‌ ಕಾಮತ್‌ (Nikhil Kamath) ಆಹ್ವಾನಿಸಿದ್ದಾರೆ.

VISTARANEWS.COM


on

nilhil kamant
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಅಮೆರಿಕದಲ್ಲಿ ಪದವಿ ಓದಿರುವ ತಮ್ಮ ಸ್ನೇಹಿತರನ್ನು ಜೆರೋಧಾ ಸಂಸ್ಥಾಪಕ ನಿಖಿಲ್‌ ಕಾಮತ್‌ ಅವರು ಭಾರತಕ್ಕೆ ಮರಳಿ ಏನಾದರೂ ಸ್ಟಾರ್ಟಪ್‌ ಶುರು ಮಾಡುವಂತೆ ಆಹ್ವಾನಿಸಿದ್ದಾರೆ. ಭಾರತದ ಆರ್ಥಿಕತೆ ಬೆಳವಣಿಗೆ ದಾಖಲಿಸುತ್ತಿರುವುದು ಹಾಗೂ ಮುಂದಿನ ದಶಕದಲ್ಲಿ ಪ್ರಗತಿಯ ಉಜ್ವಲ ಭವಿಷ್ಯ ಇರುವುದರಿಂದ ಭಾರತಕ್ಕೆ ಮರಳಬೇಕು ಎಂದು ಮನವಿ ಮಾಡಿದ್ದಾರೆ. (Nikhil Kamath) ಈ ನಿಟ್ಟಿನಲ್ಲಿ ಬ್ಲೂಮ್‌ ಬರ್ಗ್‌ನ ವರದಿಯೊಂದನ್ನೂ ಟ್ವೀಟ್‌ ಮಾಡಿದ್ದಾರೆ. ಹಾಗಾದರೆ ಅದರಲ್ಲೇನಿದೆ?

ನಿಖಿಲ್‌ ಕಾಮತ್‌ ಅವರು ಬ್ಲೂಮ್‌ ಬರ್ಗ್‌ನ 2023ರಲ್ಲಿ ಆರ್ಥಿಕ ಹಿಂಜರಿತ ಸಾಧ್ಯತೆ (Recession probabilities worldwide 2023) ಹಾಗೂ ಐಎಂಎಫ್‌ನ ವಿಶ್ವ ಉತ್ಪಾದನೆ 2023 (world output projection 2023) ಗ್ರಾಫ್‌ಗಳನ್ನು ಟ್ವೀಟ್‌ ಮಾಡಿದ್ದಾರೆ.

ತಜ್ಞರ ಪ್ರಕಾರ 2023ರಲ್ಲಿ ಭಾರತದಲ್ಲಿ ಆರ್ಥಿಕ ಹಿಂಜರಿತ ಸಾಧ್ಯತೆ ಇಲ್ಲ. (೦%) ಆದರೆ ಬ್ರಿಟನ್‌ ಮತ್ತು ಅಮೆರಿಕದಲ್ಲಿ ಅನುಕ್ರಮವಾಗಿ 75% ಮತ್ತು 65% ಸಾಧ್ಯತೆ ಇದೆ. ಕೆನಡಾ ಮತ್ತು ಜರ್ಮನಿಯಲ್ಲಿ 60% ಸಾಧ್ಯತೆ ಇದೆ. ಮತ್ತೊಂದು ಕಡೆ ಭಾರತದ ಜಿಡಿಪಿ 2023ರಲ್ಲಿ 5.9% ಬೆಳೆಯುವ ಅಂದಾಜಿದೆ. ಇದು ಜಗತ್ತಿನಲ್ಲೇ ಹೆಚ್ಚು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮನಿ-ಗೈಡ್

Money Guide: ಎಫ್‌ಡಿ V/S ಆರ್‌ಡಿ; ಯಾವುದು ಉತ್ತಮ? ಯಾವುದರಲ್ಲಿ ಹೂಡಿಕೆ ಮಾಡಬೇಕು?

Money Guide: ಉಳಿತಾಯವು ಅನಿರೀಕ್ಷಿತ ಆಘಾತ, ಆರ್ಥಿಕ ಸಮಸ್ಯೆಗಳಿಂದ ನಿಮ್ಮನ್ನು ಕುಗ್ಗದಂತೆ ಕಾಪಾಡುತ್ತದೆ. ಹೀಗಾಗಿ ನೀವು ಭವಿಷ್ಯದ ದೃಷ್ಟಿಯಿಂದ ವಿವಿಧ ಯೋಜನೆಗಳಲ್ಲಿ ನಿಮ್ಮ ಉಳಿತಾಯದ ಹಣವನ್ನು ಹೂಡಿಕೆ ಮಾಡುವತ್ತ ಗಮನ ಹರಿಸಬೇಕು. ಈ ಪೈಕಿ ನಿಶ್ಚಿತ ಠೇವಣಿ ಮತ್ತು ರಿಕರಿಂಗ್‌ ಠೇವಣಿ ಪ್ರಮುಖವಾದುದು. ಹಾಗಾದರೆ ಈ ಎರಡು ಯೋಜನೆಗಳ ವೈಶಿಷ್ಟ್ಯಗಳೇನು ಎನ್ನುವುದನ್ನು ನೋಡೋಣ. ಎಫ್‌ಡಿ ಮತ್ತು ಆರ್‌ಡಿ ಇವೆರಡೂ ಭಾರತದಲ್ಲಿನ ಅತ್ಯಂತ ಜನಪ್ರಿಯ ಹೂಡಿಕೆ ಯೋಜನೆಗಳು ಎನಿಸಿಕೊಂಡಿವೆ. ವಿಶೇಷವಾಗಿ ಯಾವುದೇ ರಿಸ್ಕ್‌ಗಳನ್ನು ತೆಗೆದುಕೊಳ್ಳದೆ ಇರುವ ಹೂಡಿಕೆದಾರರಿಗೆ ಇವು ಉತ್ತಮ ಆಯ್ಕೆ.

VISTARANEWS.COM


on

Money Guide
Koo

ಬೆಂಗಳೂರು: ಇಂದಿನ ಉಳಿತಾಯವೇ ನಾಳೆಯ ಆದಾಯ ಎನ್ನುವ ಮಾತಿದೆ. ಅಂದರೆ ನಾವು ಎಷ್ಟು ಉಳಿತಾಯ ಮಾಡುತ್ತೇವೆಯೋ ಭವಿಷ್ಯದಲ್ಲಿ ಅಷ್ಟು ನೆಮ್ಮದಿ ಇರುತ್ತದೆ ಎನ್ನುವುದು ಇದಕ್ಕೆ ಕಾರಣ. ಇದಕ್ಕಾಗಿಯೇ ಆರ್ಥಿಕ ತಜ್ಞರು ಉಳಿತಾಯದತ್ತ ಗಮನ ಹರಿಸುವಂತೆ ಸಲಹೆ ನೀಡುತ್ತಾರೆ. ಉಳಿತಾಯವು ಅನಿರೀಕ್ಷಿತ ಆಘಾತ, ಆರ್ಥಿಕ ಸಮಸ್ಯೆಗಳಿಂದ ನಿಮ್ಮನ್ನು ಕುಗ್ಗದಂತೆ ಕಾಪಾಡುತ್ತದೆ. ಹೀಗಾಗಿ ನೀವು ಭವಿಷ್ಯದ ದೃಷ್ಟಿಯಿಂದ ವಿವಿಧ ಯೋಜನೆಗಳಲ್ಲಿ ನಿಮ್ಮ ಉಳಿತಾಯದ ಹಣವನ್ನು ಹೂಡಿಕೆ ಮಾಡುವತ್ತ ಗಮನ ಹರಿಸಬೇಕು. ಈ ಪೈಕಿ ನಿಶ್ಚಿತ ಠೇವಣಿ (Fixed Deposits) ಮತ್ತು ರಿಕರಿಂಗ್‌ ಠೇವಣಿ (Recurring Deposits) ಪ್ರಮುಖವಾದುದು. ಹಾಗಾದರೆ ಈ ಎರಡು ಯೋಜನೆಗಳ ವೈಶಿಷ್ಟ್ಯಗಳೇನು ಎನ್ನುವುದನ್ನು ನೋಡೋಣ (Money Guide).

ಎಫ್‌ಡಿ ಮತ್ತು ಆರ್‌ಡಿ ಇವೆರಡೂ ಭಾರತದಲ್ಲಿನ ಅತ್ಯಂತ ಜನಪ್ರಿಯ ಹೂಡಿಕೆ ಯೋಜನೆಗಳು ಎನಿಸಿಕೊಂಡಿವೆ. ವಿಶೇಷವಾಗಿ ಯಾವುದೇ ರಿಸ್ಕ್‌ಗಳನ್ನು ತೆಗೆದುಕೊಳ್ಳದೆ ಇರುವ ಹೂಡಿಕೆದಾರರಿಗೆ ಇವು ಉತ್ತಮ ಆಯ್ಕೆ. ಇದರಿಂದ ಯಾವುದೇ ಅಪಾಯವಿಲ್ಲದೆ ಸ್ಥಿರ ಆದಾಯವನ್ನು ಗಳಿಸಬಹುದು ಎನ್ನುವ ಕಾರಣಕ್ಕೆ ಇದನ್ನು ಬಹುತೇಕರು ನೆಚ್ಚಿಕೊಂಡಿದ್ದಾರೆ.

ನಿಶ್ಚಿತ ಠೇವಣಿಯಲ್ಲಿ ಹೂಡಿಕೆಯ ಅವಧಿ ಮತ್ತು ಬಡ್ಡಿದರವನ್ನು ಮೊದಲೇ ನಿಗದಿಪಡಿಸಲಾಗಿರುತ್ತದೆ. ಸಾಮಾನ್ಯವಾಗಿ 7 ದಿನಗಳಿಂದ 10 ವರ್ಷಗಳವರೆಗಿನ ಅವಧಿಯಲ್ಲಿ ನೀವು ಒಂದು ಬಾರಿ ಹೂಡಿಕೆ ಮಾಡಬಹುದು. ಇದರ ಮೇಲಿನ ಬಡ್ಡಿಯನ್ನು ನಿಯಮಿತ ಮಧ್ಯಂತರಗಳಲ್ಲಿ ಪಡೆಯಬಹುದು ಅಥವಾ ನೀವು ಮುಕ್ತಾಯದ ಸಮಯದಲ್ಲಿ ಅದನ್ನು ಸ್ವೀಕರಿಸುವ ಆಯ್ಕೆಯನ್ನು ಆಯ್ದುಕೊಳ್ಳಬಹುದು. 

ರಿಕರಿಂಗ್ ಡೆಪಾಸಿಟ್ ಯೋಜನೆಯಲ್ಲಿ ನೀವು ನಿರ್ದಿಷ್ಟ ಮೊತ್ತಗಳನ್ನು ಠೇವಣಿ ಇಡಬಹುದು. ಇದು 6 ತಿಂಗಳಿಂದ 10 ವರ್ಷಗಳು ಅಥವಾ ಅದಕ್ಕಿಂತ ಹೆಚ್ಚಿನ ಶ್ರೇಣಿಯಲ್ಲಿರಬಹುದು. ರಿಕರಿಂಗ್ ಡೆಪಾಸಿಟ್‌ನಲ್ಲಿ ನೀವು ಹೂಡಿಕೆ ಮಾಡಬಹುದಾದ ಕನಿಷ್ಠ ಮೊತ್ತವು ಸಾಮಾನ್ಯವಾಗಿ ಕೇವಲ ರೂ. 100 ಅಥವಾ ಅದಕ್ಕೂ ಕಡಿಮೆ ಇರುತ್ತದೆ. ಮೆಚ್ಯೂರಿಟಿ ಸಮಯದಲ್ಲಿ ಬಡ್ಡಿಯೊಂದಿಗೆ ಅಸಲನ್ನು ಪಡೆಯಬಹುದು.

ಎಫ್‌ಡಿಯ ವೈಶಿಷ್ಟ್ಯ

  • ಒಟ್ಟು ಮೊತ್ತದ ಹೂಡಿಕೆ: ಎಫ್‌ಡಿಗಳಿಗೆ ಒಂದು ಬಾರಿಯ ದೊಡ್ಡ ಮೊತ್ತದ ಠೇವಣಿ ಅಗತ್ಯ.
  • ಸ್ಥಿರ ಬಡ್ಡಿದರ: ಬಡ್ಡಿದರವನ್ನು ಹೂಡಿಕೆಯ ಸಮಯದಲ್ಲಿ ನಿಗದಿಪಡಿಸಲಾಗುತ್ತದೆ ಮತ್ತು ಅವಧಿಯುದ್ದಕ್ಕೂ ಸ್ಥಿರವಾಗಿರುತ್ತದೆ.
  • ಬಡ್ಡಿ ಪಾವತಿ ಆಯ್ಕೆಗಳು: ನಿಮ್ಮ ಆದ್ಯತೆಯನ್ನು ಅವಲಂಬಿಸಿ ಬಡ್ಡಿಯನ್ನು ಸಂಯೋಜಿಸಬಹುದು ಮತ್ತು ಮರುಹೂಡಿಕೆ ಮಾಡಬಹುದು.
  • ಕಡಿಮೆ ದ್ರವ್ಯತೆ: ಗಮನಿಸಿ ಅವಧಿ ಮುಕ್ತಾಯಗೊಳ್ಳುವ ಮೊದಲು ಎಫ್‌ಡಿಯನ್ನು ಹಿಂಪಡೆಯುವುದು ದಂಡಕ್ಕೆ ಮತ್ತು ಬಡ್ಡಿ ನಷ್ಟಕ್ಕೆ ಕಾರಣವಾಗಬಹುದು.

ಆರ್‌ಡಿಯ ವೈಶಿಷ್ಟ್ಯ

  • ನಿಯಮಿತ ಉಳಿತಾಯ: ಆರ್‌ಡಿ ನಿಮಗೆ ನಿಯಮಿತವಾಗಿ ಸಾಮಾನ್ಯವಾಗಿ ಮಾಸಿಕವಾಗಿ ನಿಗದಿತ ಮೊತ್ತವನ್ನು ಉಳಿಸಲು ಅನುವು ಮಾಡಿಕೊಡುತ್ತದೆ.
  • ಫ್ಲೆಕ್ಸಿಬಲ್ ಡೆಪಾಸಿಟ್ ಮೊತ್ತ: ನೀವು ಪ್ರತಿ ತಿಂಗಳು ಠೇವಣಿ ಮಾಡಬೇಕಾದ ಮೊತ್ತವನ್ನು ಆಯ್ಕೆ ಮಾಡಬಹುದು.
  • ಸ್ಥಿರ ಬಡ್ಡಿದರ: ಎಫ್‌ಡಿಯಂತೆಯೇ ಆರ್‌ಡಿ ಕೂಡ ಇಡೀ ಅವಧಿಗೆ ಸ್ಥಿರ ಬಡ್ಡಿದರವನ್ನು ನೀಡುತ್ತದೆ.
  • ನಿಗದಿತ ಅವಧಿ: ಆರ್‌ಡಿ ನಿಗದಿತ ಅವಧಿಯನ್ನು ಹೊಂದಿರುತ್ತದೆ. ಮೆಚ್ಯೂರಿಟಿ ಮೊತ್ತವನ್ನು ಮೊದಲೇ ನಿರ್ಧರಿಸಲಾಗುತ್ತದೆ.
  • ಹೆಚ್ಚಿನ ದ್ರವ್ಯತೆ: ಎಫ್‌ಡಿಗೆ ಹೋಲಿಸಿದರೆ ಆರ್‌ಡಿ ಉತ್ತಮ ದ್ರವ್ಯತೆಯನ್ನು ನೀಡುತ್ತವೆ. ನೀವು ಸಂಗ್ರಹಿಸಿಟ್ಟ ಮೊತ್ತವನ್ನು ಯಾವಾಗ ಬೇಕಾದರೂ ಹಿಂಪಡೆಯಬಹುದು ಅಥವಾ ತುರ್ತು ಸಂದರ್ಭಗಳಲ್ಲಿ ಅದರ ಮೇಲೆ ಸಾಲವನ್ನು ತೆಗೆದುಕೊಳ್ಳಬಹುದು.

ಯಾವುದು ಉತ್ತಮ?

ಮೊದಲೇ ಹೇಳಿದಂತೆ ಎಫ್‌ಡಿ ಮತ್ತು ಆರ್‌ಡಿ ಎರಡೂ ಉತ್ತಮ ಉಳಿತಾಯ ಯೋಜನೆ ಎನಿಸಿಕೊಂಡಿದೆ. ಎಫ್‌ಡಿಯಲ್ಲಿ ಹೂಡಿಕೆ ಮಾಡಲು ದೊಡ್ಡ ಮೊತ್ತವನ್ನು ಹೊಂದಿರಬೇಕಾಗುತ್ತದೆ. ಆದರೆ ಮಾಸಿಕ ಆದಾಯದಿಂದ ಸಣ್ಣ ಭಾಗವನ್ನು ಹೂಡಿಕೆ ಮಾಡುವವರಿಗೆ ಆರ್‌ಡಿ ಉತ್ತಮ. ಆರ್‌ಡಿ ಮತ್ತು ಎಫ್‌ಡಿ ಎರಡೂ ಕಡಿಮೆ ತೆರಿಗೆ ಸ್ಲ್ಯಾಬ್‌ನಲ್ಲಿರುವ ರಿಸ್ಕ್‌ಗಳನ್ನು ತೆಗೆದುಕೊಳ್ಳದ ಹೂಡಿಕೆದಾರರಿಗೆ ಹೆಚ್ಚು ಸೂಕ್ತವಾಗಿವೆ. ನಿಮಗೆ ಯಾವುದು ಉತ್ತಮ ಎಂಬುದು ನಿಮ್ಮ ಆರ್ಥಿಕ ಗುರಿಗಳು ಮತ್ತು ಆದ್ಯತೆಗಳನ್ನು ಅವಲಂಬಿಸಿರುತ್ತದೆ. ನೀವು ಹೂಡಿಕೆ ಮಾಡಲು ದೊಡ್ಡ ಮೊತ್ತವನ್ನು ಹೊಂದಿದ್ದರೆ ಮತ್ತು ದ್ರವ್ಯತೆ ಅಗತ್ಯವಿಲ್ಲದಿದ್ದರೆ ಎಫ್‌ಡಿ ಸೂಕ್ತವಾಗಬಹುದು. ಮತ್ತೊಂದೆಡೆ ನೀವು ನಿಯಮಿತವಾಗಿ ಉಳಿತಾಯ ಮಾಡಲು ಮತ್ತು ದ್ರವ್ಯತೆಗೆ ಆದ್ಯತೆ ನೀಡಲು ಬಯಸಿದರೆ ಆರ್‌ಡಿ ಉತ್ತಮ ಆಯ್ಕೆಯಾಗಿದೆ. ನಿರ್ಧಾರ ತೆಗೆದುಕೊಳ್ಳುವ ಮೊದಲು ನಿಮ್ಮ ಆರ್ಥಿಕ ಪರಿಸ್ಥಿತಿಯನ್ನು ನಿರ್ಣಯಿಸುವುದು ಮತ್ತು ಹಣಕಾಸು ಸಲಹೆಗಾರರೊಂದಿಗೆ ಸಮಾಲೋಚನೆ ನಡೆಸಿ.

ಇದನ್ನೂ ಓದಿ: Money Guide: ನಿಮ್ಮ ಎನ್‌ಪಿಎಸ್‌ ಖಾತೆ ಸ್ಥಗಿತಗೊಂಡಿದ್ದರೆ ಚಿಂತಿಸಬೇಡಿ; ಮನೆಯಲ್ಲೇ ಕೂತು ಸಕ್ರಿಯಗೊಳಿಸುವ ವಿಧಾನ ಇಲ್ಲಿದೆ

Continue Reading

ಚಿನ್ನದ ದರ

Gold Rate Today: ಭಾರಿ ಏರಿಕೆ ಬಳಿಕ ಇಂದು ಚಿನ್ನದ ಬೆಲೆ ಯಥಾಸ್ಥಿತಿ; ಇಷ್ಟಿದೆ ದರ

Gold Rate Today: ಚಿನ್ನದ ಬೆಲೆಯು ಯಥಾಸ್ಥಿತಿಯಾಗಿರುವ ಕಾರಣ ವಾರಾಂತ್ಯದಲ್ಲಿ ಬಂಗಾರ ಖರೀದಿಸುವವರ ಸಂಖ್ಯೆ ಜಾಸ್ತಿಯಾಗಿದೆ. ಬೆಂಗಳೂರಿನಲ್ಲಿ ಭಾನುವಾರ 22 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆ 6,725 ರೂ. ಇದ್ದರೆ, 24 ಕ್ಯಾರಟ್‌ನ ಒಂದು ಗ್ರಾಂ ಬೆಲೆಯು 7,336 ರೂ. ಇದೆ.

VISTARANEWS.COM


on

Mamitha Baiju
Koo

ಬೆಂಗಳೂರು: ಅಕ್ಷಯ ತೃತೀಯ ಹಿನ್ನೆಲೆಯಲ್ಲಿ ಬೆಂಗಳೂರು (Bengaluru) ಸೇರಿ ಕರ್ನಾಟಕದಾದ್ಯಂತ (Karnataka) ಭಾರಿ ಏರಿಕೆ ಕಂಡು, ಬಳಿಕ ಇಳಿಕೆಯಾಗಿದ್ದ ಚಿನ್ನದ ಬೆಲೆಯಲ್ಲಿ (Gold Rate Today) ಭಾನುವಾರ (ಮೇ 11) ಯಾವುದೇ ಬದಲಾವಣೆಯಾಗಿಲ್ಲ. ಚಿನ್ನದ ಬೆಲೆಯು ಯಥಾಸ್ಥಿತಿಯಾಗಿರುವ ಕಾರಣ ವಾರಾಂತ್ಯದಲ್ಲಿ ಬಂಗಾರ ಖರೀದಿಸುವವರ ಸಂಖ್ಯೆ ಜಾಸ್ತಿಯಾಗಿದೆ. ಬೆಂಗಳೂರಿನಲ್ಲಿ ಭಾನುವಾರ 22 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆ 6,725 ರೂ. ಇದ್ದರೆ, 24 ಕ್ಯಾರಟ್‌ನ ಒಂದು ಗ್ರಾಂ ಬೆಲೆಯು 7,336 ರೂ. ಇದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ (Silver rate today) 87.10 ರೂ., ಎಂಟು ಗ್ರಾಂ 696.80 ರೂ. ಮತ್ತು 10 ಗ್ರಾಂ 871 ರೂ. ಇದೆ. 100 ಗ್ರಾಂಗೆ ಗ್ರಾಹಕರು 8,710 ರೂ. ಮತ್ತು 1 ಕಿಲೋಗ್ರಾಂಗೆ 87,100 ರೂ. ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ನಗರ22 ಕ್ಯಾರಟ್24 ಕ್ಯಾರಟ್
ದಿಲ್ಲಿ67,40073,510
ಮುಂಬಯಿ67,25073,360
ಬೆಂಗಳೂರು67,25073,360
ಚೆನ್ನೈ67,50072,640

ಚಿನ್ನದ ದರದ ಮೇಲೆ ಪರಿಣಾಮ ಬೀರುವ ಅಂಶಗಳು

ಬೇಡಿಕೆ ಮತ್ತು ಪೂರೈಕೆ: ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಮತ್ತು ಪೂರೈಕೆಯಿಂದ ಚಿನ್ನದ ದರವನ್ನು ಹೆಚ್ಚಾಗಿ ನಿರ್ಧರಿಸಲಾಗುತ್ತದೆ. ಚಿನ್ನಕ್ಕೆ ಬೇಡಿಕೆ ಹೆಚ್ಚಾದರೆ ದರವೂ ಹೆಚ್ಚಾಗಲಿದೆ. ವ್ಯತಿರಿಕ್ತವಾಗಿ, ಚಿನ್ನದ ಪೂರೈಕೆ ಹೆಚ್ಚಾದರೆ, ದರ ಕಡಿಮೆಯಾಗುತ್ತದೆ.

ಜಾಗತಿಕ ಆರ್ಥಿಕ ಪರಿಸ್ಥಿತಿಗಳು: ಚಿನ್ನದ ದರದ ಮೇಲೆ ಜಾಗತಿಕ ಆರ್ಥಿಕ ಪರಿಸ್ಥಿತಿಗಳು ಕೂಡ ಪರಿಣಾಮ ಬೀರುತ್ತದೆ. ಉದಾಹರಣೆಗೆ, ಜಾಗತಿಕ ಆರ್ಥಿಕತೆಯು ಕಳಪೆಯಾಗಿ ಕಾರ್ಯನಿರ್ವಹಿಸುತ್ತಿದ್ದರೆ, ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆಯಾಗಿ ಕಾಣಬಹುದು. ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

Akshaya Tritiya 2024

ರಾಜಕೀಯ ಅಸ್ಥಿರತೆ: ರಾಜಕೀಯ ಅಸ್ಥಿರತೆ ಚಿನ್ನದ ದರದ ಮೇಲೂ ಪರಿಣಾಮ ಬೀರಬಹುದು. ಉದಾಹರಣೆಗೆ, ಒಂದು ದೊಡ್ಡ ದೇಶದಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾದರೆ, ಹೂಡಿಕೆದಾರರು ಅನಿಶ್ಚಿತತೆಯ ವಿರುದ್ಧ ಸುರಕ್ಷಿತರಾಗಲು ಚಿನ್ನವನ್ನು ಖರೀದಿಸಬಹುದು, ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ಇದಲ್ಲದೆ, ಭಾರತದಲ್ಲಿನ ಚಿಲ್ಲರೆ ಚಿನ್ನದ ಬೆಲೆಯು ಭಾರತದಲ್ಲಿ ಗ್ರಾಹಕರಿಗೆ ಚಿನ್ನವನ್ನು ಮಾರಾಟ ಮಾಡುವ ಬೆಲೆಯಾಗಿದೆ. ಜಾಗತಿಕ ಚಿನ್ನದ ಬೆಲೆ, ಭಾರತೀಯ ರೂಪಾಯಿ, ಮತ್ತು ಚಿನ್ನದ ಆಭರಣಗಳ ತಯಾರಿಕೆಯಲ್ಲಿ ತೊಡಗಿರುವ ಕಾರ್ಮಿಕ ಮತ್ತು ಸಾಮಗ್ರಿಗಳ ವೆಚ್ಚ ಸೇರಿದಂತೆ ಹಲವಾರು ಅಂಶಗಳಿಂದ ಇದನ್ನು ನಿರ್ಧರಿಸಲಾಗುತ್ತದೆ. ಭಾರತದಲ್ಲಿ ಚಿಲ್ಲರೆ ಚಿನ್ನದ ಬೆಲೆಯು ಸಾಮಾನ್ಯವಾಗಿ ಜಾಗತಿಕ ಚಿನ್ನದ ಬೆಲೆಗಿಂತ ಹೆಚ್ಚಾಗಿರುತ್ತದೆ, ಏಕೆಂದರೆ ಇದು ಆಭರಣ ಮತ್ತು ಇತರ ವೆಚ್ಚ ಒಳಗೊಂಡಿರುತ್ತದೆ.

ಇದನ್ನೂ ಓದಿ: Akshaya Tritiya 2024: ಅಕ್ಷಯ ತೃತೀಯ ಅಂದರೆ ಚಿನ್ನ ಖರೀದಿಯೊಂದೇ ಅಲ್ಲ! ಹೀಗೆ ಮಾಡಿಯೂ ಸಮೃದ್ಧಿ ಹೊಂದಬಹುದು!

Continue Reading

ಕರ್ನಾಟಕ

Selco India: ಸೌರವಿದ್ಯುತ್ ಪ್ರವರ್ತಕ ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

Selco India: ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ವಾರ್ಷಿಕ ಪ್ರಶಸ್ತಿಗೆ ಸೌರವಿದ್ಯುತ್ ಪ್ರವರ್ತಕ ರಿಚರ್ಡ್‌ ಹ್ಯಾನ್ಸೆನ್‌ ಭಾಜನರಾಗಿದ್ದಾರೆ. ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ ಮೂಲಕ ಬೆಸೆದು ಪ್ರಸರಿಸುವಲ್ಲಿ ಮಹತ್ವದ ಪಾತ್ರ ವಹಿಸಿರುವ ಅಮೆರಿಕಾದ ರಿಚರ್ಡ್ ಹ್ಯಾನ್ಸೆನ್ ಅವರಿಗೆ ಸೆಲ್ಕೋ ಸಂಸ್ಥೆಯು 2023ನೇ ಸಾಲಿನ ಪ್ರತಿಷ್ಠಿತ ಸೂರ್ಯಮಿತ್ರ ವಾರ್ಷಿಕ ಪ್ರಶಸ್ತಿಯನ್ನು ಘೋಷಿಸಿದೆ. ಬೆಂಗಳೂರಿನ ವೈಯಾಲಿ ಕಾವಲ್‌ನಲ್ಲಿರುವ ಚೌಡಯ್ಯ ಸ್ಮಾರಕ ಭವನದಲ್ಲಿ ಇದೇ ಮೇ 27ರಂದು ಸೂರ್ಯಮಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

VISTARANEWS.COM


on

Richard Hansen
Koo

ಬೆಂಗಳೂರು: ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ ಮೂಲಕ ಬೆಸೆದು ಪ್ರಸರಿಸುವಲ್ಲಿ ಮಹತ್ವದ ಪಾತ್ರ ವಹಿಸಿರುವ ಅಮೆರಿಕಾದ ರಿಚರ್ಡ್ ಹ್ಯಾನ್ಸೆನ್ ಅವರಿಗೆ ಸೆಲ್ಕೋ ಸಂಸ್ಥೆಯು (Selco India) 2023ನೇ ಸಾಲಿನ ಪ್ರತಿಷ್ಠಿತ ಸೂರ್ಯಮಿತ್ರ ವಾರ್ಷಿಕ ಪ್ರಶಸ್ತಿಯನ್ನು ಘೋಷಿಸಿದೆ.

ಬೆಂಗಳೂರಿನ ವೈಯಾಲಿ ಕಾವಲ್‌ನಲ್ಲಿರುವ ಚೌಡಯ್ಯ ಸ್ಮಾರಕ ಭವನದಲ್ಲಿ ಇದೇ ಮೇ 27ರಂದು ಸೂರ್ಯಮಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ನಡೆಯಲಿದೆ ಎಂದು ಸೆಲ್ಕೋ ಇಂಡಿಯಾದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೋಹನ ಭಾಸ್ಕರ ಹೆಗಡೆ ತಿಳಿಸಿದ್ದಾರೆ.

ರಿಚರ್ಡ್ ಹ್ಯಾನ್ಸೆನ್ ಅವರು 1984ರಿಂದ ಮೊದಲ ಬಾರಿಗೆ ಉತ್ತರ ಅಮೇರಿಕಾದ ಡೊಮಿನಿಕನ್ ರಿಪಬ್ಲಿಕ್‌ನಲ್ಲಿ ಮೈಕ್ರೋಫೈನಾನ್ಸ್ ಪರಿಹಾರಗಳೊಂದಿಗೆ ಪಿವಿ ತಂತ್ರಜ್ಞಾನವನ್ನು ಪರಿಚಯಿಸಲು ಲಾಭರಹಿತ ಕಾರ್ಯಕ್ರಮವನ್ನು ಮುನ್ನೆಡೆಸಿದರು. ನಂತರ ಅವರು 1989 ರಲ್ಲಿ ಇದೇ ಮಾದರಿಯನ್ನು ಹೊಂಡುರಾಸ್‌ನಲ್ಲಿ ಅಮೆರಿಕದ ಇಂಧನ ಇಲಾಖೆ ಜತೆಗೆ ಒಪ್ಪಂದ ಮಾಡಿಕೊಂಡು ಪುನರಾವರ್ತಿಸಿದರು. ಈ ಕಾರ್ಯವು ಜಾಗತಿಕವಾಗಿ ಗಮನಾರ್ಹ ಪುನರಾವರ್ತನೆಗೆ ಕಾರಣವಾಯಿತು.

ಇದನ್ನೂ ಓದಿ: Artificial Intelligence: 98 ವಿವಿಧ ಭಾಷೆಗಳಲ್ಲಿ ಹನುಮಾನ್‌ AI ತಂತ್ರಜ್ಞಾನ; ಏನಿದರ ವಿಶೇಷ?

ಪ್ರಸ್ತುತ ಎನರ್ಜಿ ಅಕ್ಸೆಸ್‌ ಫೌಂಡೇಷನ್ (www.energyaccessfoundation.org) ನ ಕಾರ್ಯನಿರ್ವಾಹಕ ನಿರ್ದೇಶಕರಾಗಿರುವ ರಿಚರ್ಡ್ ಹ್ಯಾನ್ಸೆನ್, ಜಾಗತಿಕವಾಗಿ ಸುಸ್ಥಿರ ಶಕ್ತಿಯೆಡೆಗಿನ ಪರಿವರ್ತನೆಗೆ ಸಹಾಯ ಮಾಡುವ ಉದ್ದೇಶದಿಂದ 1993 ರಲ್ಲಿ ರಿಚರ್ಡ್ ಸೋಲುಜ್ ಇಂಕ್ (Soluz Inc.,) ಎಂಬ ಸಾಮಾಜಿಕ ಉದ್ಯಮವನ್ನು ಸ್ಥಾಪಿಸಿದರು. ಇದು ಪಿವಿ ಉತ್ಪನ್ನಗಳು ಮತ್ತು ಸಂಬಂಧಿತ ಮೈಕ್ರೋಫೈನಾನ್ಸ್ ಪರಿಹಾರಗಳನ್ನು ಪೂರೈಸುವ ಒಂದು ಅಂಗಸಂಸ್ಥೆಯಾಗಿ ಕೆಲಸ ಮಾಡುತ್ತಿದೆ.

ರಿಚರ್ಡ್ ಹ್ಯಾನ್ಸೆನ್, ಅಮೆರಿಕದ ಯುನೈಟೆಡ್ ಸ್ಟೇಟ್ಸ್ ಏಜೆನ್ಸಿ ಫಾರ್ ಇಂಟರ್‌ ನ್ಯಾಷನಲ್ ಡೆವಲಪ್ಮೆಂಟ್ (ಯುಎಸ್‌ಎಐಡಿ), ವಿಶ್ವ ಬ್ಯಾಂಕ್ ಮತ್ತು ಇಂಟರ್-ಅಮೆರಿಕನ್ ಅಭಿವೃದ್ಧಿ ಬ್ಯಾಂಕ್ ಸೇರಿದಂತೆ ಬಾಂಗ್ಲಾದೇಶ, ಬೊಲಿವಿಯಾ, ಡೊಮಿನಿಕನ್ ರಿಪಬ್ಲಿಕ್, ಇಥಿಯೋಪಿಯಾ, ಹೈಟಿ, ಭಾರತ, ನೇಪಾಳ, ನಿಕರಾಗುವಾ, ಫಿಲಿಪೈನ್ಸ್ ದೇಶಗಳು ಮತ್ತು ಪ್ರಮುಖ ಸಂಸ್ಥೆಗಳಿಗೆ ಸಲಹಾ ಸೇವೆಗಳನ್ನು ಒದಗಿಸಿದ್ದಾರೆ ಎಂದು ಸೆಲ್ಕೋ ಇಂಡಿಯಾದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೋಹನ ಭಾಸ್ಕರ ಹೆಗಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ನಿಗದಿಗಿಂತ ಹೆಚ್ಚಿನ ಫೀಸ್ ತೆಗೆದುಕೊಂಡರೆ ಕ್ರಮ; ಖಾಸಗಿ ಶಾಲೆಗಳಿಗೆ ಮಧು ಬಂಗಾರಪ್ಪ ಖಡಕ್‌ ಎಚ್ಚರಿಕೆ

ಸೂರ್ಯಮಿತ್ರ ಪ್ರಶಸ್ತಿ

ಪ್ರತಿಷ್ಠಿತ ರಾಮೋನ್‌ ಮ್ಯಾಗ್ಸೆಸೆ ಪ್ರಶಸ್ತಿ ಪುರಸ್ಕೃತರಾಗಿರುವ ಡಾ. ಎಚ್. ಹರೀಶ್ ಹಂದೆ ಅವರು ಸ್ಥಾಪಿಸಿ ಮುನ್ನಡೆಸುತ್ತಿರುವ ಸೆಲ್ಕೋ ಸಂಸ್ಥೆಯು ಪ್ರತಿಷ್ಠಿತ ಸೂರ್ಯಮಿತ್ರ ವಾರ್ಷಿಕ ಪ್ರಶಸ್ತಿಯನ್ನು 2012ರಿಂದ ಕೊಡಮಾಡುತ್ತಾ ಬಂದಿದೆ. ಈ ಪ್ರಶಸ್ತಿಯನ್ನು, ಸುಸ್ಥಿರ ಅಭಿವೃದ್ಧಿಗೆ ಗಮನಾರ್ಹ ಕೊಡುಗೆ ನೀಡುವ ಹರಿಕಾರರು ಮತ್ತು ಗ್ರಾಮೀಣ ಜನತೆಯ ಜೀವನದಲ್ಲಿ ಸಕಾರಾತ್ಮಕ ಬದಲಾವಣೆಗಳನ್ನು ತಂದ ಅಸಾಧಾರಣ ವ್ಯಕ್ತಿಗಳು ಅಥವಾ ಸಂಸ್ಥೆಗಳಿಗೆ ನೀಡಲಾಗುತ್ತದೆ.

ಸೆಲ್ಕೋ ಇಂಡಿಯಾ ಸಂಸ್ಥೆ

1995ರಲ್ಲಿ ಸ್ಥಾಪಿತವಾದ ಸೆಲ್ಕೋ ಇಂಡಿಯಾ ಸಂಸ್ಥೆಯು, ಮಾನ್ಯತೆ ಪಡೆದ ಸಾಮಾಜಿಕ ಉದ್ಯಮವಾಗಿದ್ದು, ಸಮುದಾಯಗಳ ಸಮಗ್ರ ಅಭಿವೃದ್ಧಿಗಾಗಿ ನವೀಕರಿಸಬಹುದಾದ ಇಂಧನ ಆಧಾರಿತ ಪರಿಹಾರಗಳನ್ನು ಒದಗಿಸುವ ಮೂಲಕ ಬಡತನ ನಿರ್ಮೂಲನೆಯಲ್ಲಿ ವಿಶಿಷ್ಟ ಮಾದರಿಯ ಕೆಲಸ ಮಾಡುತ್ತಿದೆ. ಕರ್ನಾಟಕದ ಬೆಂಗಳೂರಿನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಸೆಲ್ಕೋ ಇಂಡಿಯಾ, ದೇಶಾದ್ಯಂತ ಏಳು ರಾಜ್ಯಗಳಲ್ಲಿ ಸೌರ ಇಂಧನದ ಮೂಲಕ ಶಿಕ್ಷಣ, ಆರೋಗ್ಯ ರಕ್ಷಣೆ, ಜೀವನೋಪಾಯ ಮತ್ತು ಗ್ರಾಮೀಣಾಭಿವೃದ್ಧಿಗೆ ಪೂರಕವಾದ ಮೂಲಭೂತ ಸೌಲಭ್ಯಗಳ ಅಭಿವೃದ್ಧಿಯಲ್ಲಿ ತೊಡಗಿಸಿಕೊಂಡಿದೆ.

ಇದನ್ನೂ ಓದಿ: Book Release: ಬೆಂಗಳೂರಿನಲ್ಲಿ ಮೇ 12ರಂದು ಡಾ.ಗಣಪತಿ ಭಟ್‌ ಅವರ ʼಕನ್ನಡದಲ್ಲಿ ಶ್ರೀ ಶಂಕರʼ ಪುಸ್ತಕ ಲೋಕಾರ್ಪಣೆ

ಈ ವಲಯಗಳ ಸುಸ್ಥಿರ ಅಭಿವೃದ್ಧಿಗೆ ಬೇಕಾದ ಹಣಕಾಸು, ಕೌಶಲ್ಯಾಭಿವೃದ್ಧಿ, ಪೂರೈಕೆ ಸರಪಳಿ ಮತ್ತು ನೀತಿ-ನಿರೂಪಗಳ ಚೌಕಟ್ಟನ್ನು ಬಲಪಡಿಸುವ ಕೆಲಸಗಳ ಮೂಲಕ ಎಲ್ಲರೂ ಬಳಸಲು ಸಾಧ್ಯವಾಗುವಂತೆ ವಿಕೇಂದ್ರೀಕೃತ ಇಂಧನ ಪರಿಸರ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುತ್ತಿದೆ. ಭಾರತವು ಹೊಂದಿರುವ, ಹವಾಮಾನ ಬದಲಾವಣೆ ತಗ್ಗಿಸುವಿಕೆ ಮತ್ತು ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ತಲುಪುವ ಬದ್ಧತೆಯ ಸಂದರ್ಭದಲ್ಲಿ ಸೆಲ್ಕೋದ ಈ ಕಾರ್ಯವು ಹೆಚ್ಚು ಪ್ರಸ್ತುತವಾಗಿದೆ. ಸೆಲ್ಕೋದ ಈ ಎಲ್ಲ ಸಮಾಜಮುಖಿ ಕೆಲಸಗಳಿಗಾಗಿ ಆಶ್ಡೆನ್ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳು ಸಂದಿವೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Continue Reading

ಮನಿ-ಗೈಡ್

Money Guide: ಮಹಿಳಾ ಸಮ್ಮಾನ್‌ ಸರ್ಟಿಫಿಕೆಟ್‌: ಈ ಅಮ್ಮಂದಿರ ದಿನ ನೀವು ನೀಡಬಹುದಾದ ಅತ್ಯುತ್ತಮ ಉಡುಗೊರೆ

Money Guide: ಈ ಅಮ್ಮಂದಿರ ದಿನ ನಿಮ್ಮ ತಾಯಿಗೆ ಉಡುಗೊರೆ ಕೊಡಬೇಕೆಂಬ ಯೋಜನೆಯಲ್ಲಿದ್ದೀರಾ? ಹಾಗಾದರೆ ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣ ಪತ್ರದಲ್ಲಿ ಹೂಡಿಕೆ ಮಾಡುವುದು ಅತ್ಯುತ್ತಮ ಮಾರ್ಗ. ಮಹಿಳೆಯರನ್ನು ಸಾಮಾಜಿಕವಾಗಿ, ಆರ್ಥಿಕವಾಗಿ ಸದೃಢರನ್ನಾಗಿ ಮಾಡಲು ಮತ್ತು ಲಿಂಗ ಸಮಾನತೆಯನ್ನು ಉತ್ತೇಜಿಸಲು ಕೇಂದ್ರ ಸರ್ಕಾರವು ಹೆಣ್ಣು ಮಕ್ಕಳು ಮತ್ತು ಮಹಿಳೆಯರಿಗಾಗಿ ಜಾರಿಗೆ ತಂದ ವಿಶೇಷ ಉಳಿತಾಯ ಯೋಜನೆಯೇ ಈ ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣ ಪತ್ರ. ಈ ಯೋಜನೆಯ ವಿವರ ಇಲ್ಲಿದೆ.

VISTARANEWS.COM


on

Money Guide
Koo

ಬೆಂಗಳೂರು: ನಾಳೆ (ಮೇ 12) ವಿಶ್ವ ಅಮ್ಮಂದಿರ ದಿನ (Mother’s Day 2024). ಜೀವನಪೂರ್ತಿ ನಮಗಾಗಿ ನಿಸ್ವಾರ್ಥವಾಗಿ ಮಿಡಿಯುವ ಜೀವಕ್ಕೆ ಚಿಕ್ಕದೊಂದು ಧನ್ಯವಾದ ಹೇಳುವ ದಿನ ಇದು. ಅಮ್ಮಂದಿರ ಋಣವನ್ನು ತೀರಿಸಲು ಸಾಧ್ಯವಿಲ್ಲವಾದರೂ ಒಂದು ಚಿಕ್ಕ ಉಡುಗೊರೆ ಕೊಡುವ ಮೂಲಕ ಅವರ ಮೊಗದಲ್ಲಿ ನಗು ಅರಳಿಸಬಹುದು. ಈ ಅಮ್ಮಂದಿರ ದಿನದಲ್ಲಿ ನಿಮ್ಮ ಅಮ್ಮನಿಗೆ ನೀಡಬಹುದಾದ ಅತ್ಯುತ್ತಮ ಉಡುಗೊರೆಯ ಪೈಕಿ ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣ ಪತ್ರ (Mahila Samman Saving Certificate Scheme)ವೂ ಒಂದು. ಏನಿದು ಯೋಜನೆ? ಈ ಯೋಜನೆ ಮಹಿಳೆಯರಿಗೆ ಹೇಗೆ ಪ್ರಯೋಜಕಾರಿ? ಮುಂತಾದ ನಿಮ್ಮ ಸಂದೇಹಕ್ಕೆ ಇಲ್ಲಿದೆ ಉತ್ತರ (Money Guide).

ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣ ಪತ್ರ ಎಂದರೇನು?

ಮಹಿಳೆಯರನ್ನು ಸಾಮಾಜಿಕವಾಗಿ, ಆರ್ಥಿಕವಾಗಿ ಸದೃಢರನ್ನಾಗಿ ಮಾಡಲು ಮತ್ತು ಲಿಂಗ ಸಮಾನತೆಯನ್ನು ಉತ್ತೇಜಿಸಲು ಕೇಂದ್ರ ಸರ್ಕಾರವು ಹೆಣ್ಣು ಮಕ್ಕಳು ಮತ್ತು ಮಹಿಳೆಯರಿಗಾಗಿ ಜಾರಿಗೆ ತಂದ ವಿಶೇಷ ಉಳಿತಾಯ ಯೋಜನೆಯೇ ಈ ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣ ಪತ್ರ. ಈ ವಿಶೇಷ ಉಳಿತಾಯ ಯೋಜನೆ ಮಹಿಳೆಯರನ್ನು ಆರ್ಥಿಕವಾಗಿ ಮುಖ್ಯವಾಹಿನಿಗೆ ತರುವ ಗುರಿಯನ್ನು ಹೊಂದಿದ್ದು, ಅವರ ಭವಿಷ್ಯಕ್ಕಾಗಿ ಉಳಿತಾಯವನ್ನು ಮಾಡಲು ಪ್ರೋತ್ಸಾಹಿಸುತ್ತದೆ.

ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣ ಪತ್ರ ಯೋಜನೆಯನ್ನು ಕೇಂದ್ರ ಬಜೆಟ್ ತನ್ನ 2023ರ ಬಜೆಟ್‌ನಲ್ಲಿ ಘೋಷಿಸಿದೆ. ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣ ಪತ್ರವು ಮಾರ್ಚ್ 2025ರವರೆಗೆ ಲಭ್ಯವಿದೆ. ಇದು 2 ವರ್ಷಗಳ ಅವಧಿಗೆ ಮಹಿಳೆಯರು ಅಥವಾ ಹುಡುಗಿಯರ ಹೆಸರಿನಲ್ಲಿ 2 ಲಕ್ಷ ರೂ.ವರೆಗೆ ಠೇವಣಿ ಇಡುವ ಸೌಲಭ್ಯವನ್ನು ಒದಗಿಸುತ್ತದೆ. ಈ ಯೋಜನೆಯ ಅಡಿಯಲ್ಲಿ ಕೇವಲ ಮಹಿಳೆಯರು ಹಾಗೂ ಯುವತಿಯರು ಮಾತ್ರ ಹೂಡಿಕೆ ಮಾಡಬಹುದಾಗಿದೆ. ಮಹಿಳೆಯರು ಸ್ವತಃ ತಾವೇ ಹಾಗೂ ಅಪ್ರಾಪ್ತ ಬಾಲಕಿಯರ ಪರವಾಗಿ ಅವರ ಪೋಷಕರು ಈ ಖಾತೆಯನ್ನು ನಿರ್ವಹಿಸಬಹುದಾಗಿದೆ. ಹೀಗಾಗಿ ಈ ಬಾರಿ ನೀವು ತಾಯಿಗೆ ಈ ಯೋಜನೆಯಲ್ಲಿ ಹೂಡಿಕೆ ಮಾಡುವಂತೆ ಉತ್ತೇಜನ ನೀಡಿ.

ಅರ್ಹತೆ

  • ಯಾವುದೇ ಭಾರತೀಯ ಮಹಿಳೆ ಈ ಯೋಜನೆಯಲ್ಲಿ ಹೂಡಿಕೆ ಮಾಡಬಹುದು. ಇದಕ್ಕೆ ವಯಸ್ಸಿನ ನಿರ್ಬಂಧವಿಲ್ಲ.
  • ಅಪ್ರಾಪ್ತ ವಯಸ್ಸಿನ ಬಾಲಕಿಯ ಸ್ವಾಭಾವಿಕ ಅಥವಾ ಕಾನೂನುಬದ್ಧ ಪೋಷಕರು ಖಾತೆ ತೆರೆಯಬಹುದು.
  • ಗಮನಿಸಿ ವೈಯಕ್ತಿಕ ಖಾತೆಗಳಿಗೆ ಮಾತ್ರ ಅನುಮತಿ ನೀಡಲಾಗುತ್ತದೆ.
  • ಹೂಡಿಕೆಯ ಕನಿಷ್ಠ ಮೊತ್ತ 1,000 ರೂ. ಮತ್ತು ಗರಿಷ್ಠ ಮೊತ್ತ 2,00,000.

ಬಡ್ಡಿ ದರ

ಈ ಖಾತೆಯನ್ನು ಹೊಂದಿರುವವರಿಗೆ ವಾರ್ಷಿಕ 7.5 ಪ್ರತಿಶತ ನಿಶ್ಚಿತ ಬಡ್ಡಿ ದರವನ್ನು ನೀಡಲಾಗುತ್ತದೆ. ಬ್ಯಾಂಕ್‌ನ ಸ್ಥಿರ ಠೇವಣಿ ಹಾಗೂ ಇತರ ಸಣ್ಣ ಉಳಿತಾಯ ಯೋಜನೆಗಳಿಗೆ ಹೋಲಿಕೆ ಮಾಡಿದರೆ ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣ ಪತ್ರದ ಅಡಿಯಲ್ಲಿ ಮಹಿಳೆಯರಿಗೆ ಹೆಚ್ಚಿನ ಬಡ್ಡಿದರ ಸಿಗಲಿದೆ.

ಅವಧಿ

ಈ ಯೋಜನೆಯ ಮೆಚ್ಯೂರಿಟಿ ಅವಧಿ 2 ವರ್ಷ. ಈ ಅವಧಿಯನ್ನು ಪೂರ್ಣಗೊಳಿಸಿದ ಬಳಿಕ ಖಾತೆದಾರರಿಗೆ ಮೆಚ್ಯೂರಿಟಿ ಮೊತ್ತ ಪಾವತಿಯಾಗುತ್ತದೆ. ಒಂದು ವೇಳೆ ಅವಧಿ ಮೀರುವ ಮುನ್ನ ಹಿಂಪಡೆಯಬೇಕೆಂದರೆ ಖಾತೆಯಲ್ಲಿರುವ ಒಟ್ಟು ಮೊತ್ತದ ಶೇ. 40ರಷ್ಟು ಹಿಂಪಡೆಯಬಹುದು. ಆದರೆ ಖಾತೆಯನ್ನು ತೆರೆದು ಒಂದು ವರ್ಷ ಆಗಿರಬೇಕು. ಜತೆಗೆ ಆಯ್ದ ಸಂದರ್ಭಗಳಲ್ಲಿ ಖಾತೆಗಳನ್ನು ಅಕಾಲಿಕವಾಗಿ ಬಂದ್ ಮಾಡಬಹುದು.

ಖಾತೆ ತೆರೆಯುವುದು ಹೇಗೆ?

ಈ ಖಾತೆಯನ್ನು ಅಂಚೆ ಕಚೇರಿ ಅಥವಾ ಆಯ್ದ ಬ್ಯಾಂಕ್‌ಗಳಲ್ಲಿ ತೆರೆಯಬಹುದು. ನಿರ್ದಿಷ್ಟ ಅರ್ಜಿಯನ್ನು ಭರ್ತಿ ಮಾಡಿ, ಕೆವೈಸಿ ದಾಖಲೆಗಳನ್ನು ಒದಗಿಸಿ ಆರಂಭಿಕ ಠೇವಣಿ ಮೊತ್ತವನ್ನು ಇಡುವ ಮೂಲಕ ಖಾತೆಯನ್ನು ತೆರೆಯಬಹುದಾಗಿದೆ. ಇದಕ್ಕಾಗಿ ನೀವು ಆಧಾರ್ ಕಾರ್ಡ್, ವೋಟರ್ ಐಡಿ, ಡ್ರೈವಿಂಗ್ ಲೈಸೆನ್ಸ್, ಪ್ಯಾನ್ ಕಾರ್ಡ್ ನೀಡಬೇಕಾಗುತ್ತದೆ.

ಇದನ್ನೂ ಓದಿ: Money Guide: ನಿಮ್ಮ ಎನ್‌ಪಿಎಸ್‌ ಖಾತೆ ಸ್ಥಗಿತಗೊಂಡಿದ್ದರೆ ಚಿಂತಿಸಬೇಡಿ; ಮನೆಯಲ್ಲೇ ಕೂತು ಸಕ್ರಿಯಗೊಳಿಸುವ ವಿಧಾನ ಇಲ್ಲಿದೆ

Continue Reading
Advertisement
Hoarding
ಸಂಪಾದಕೀಯ5 mins ago

ವಿಸ್ತಾರ ಸಂಪಾದಕೀಯ: ಹೋರ್ಡಿಂಗ್ ಕುಸಿತ ಬೆಂಗಳೂರಿಗರಿಗೂ ಎಚ್ಚರಿಕೆಯ ಗಂಟೆ

Sushil Kumar Modi
ಪ್ರಮುಖ ಸುದ್ದಿ5 mins ago

Sushil Kumar Modi : ಬಿಹಾರದ ಮಾಜಿ ಡಿಸಿಎಂ ಸುಶೀಲ್ ಕುಮಾರ್ ಮೋದಿ ನಿಧನ

Tejasvi Surya
ದೇಶ15 mins ago

Tejasvi Surya: ಈ ದಲಿತ ನಾಯಕನ ಜತೆ ಚರ್ಚೆಗೆ ಬನ್ನಿ ರಾಹುಲ್‌ ಗಾಂಧಿ; ತೇಜಸ್ವಿ ಸೂರ್ಯ ಪಂಥಾಹ್ವಾನ!

IPL 2024
ಪ್ರಮುಖ ಸುದ್ದಿ22 mins ago

IPL 2024 : ಮಳೆಯಿಂದಾಗಿ ಪಂದ್ಯ ರದ್ದು, ಕೆಕೆಆರ್​ಗೆ ಮೊದಲೆರಡಲ್ಲೊಂದು ಸ್ಥಾನ ಫಿಕ್ಸ್​

Vidyarthi Vidyarthiniyare Movie
ಕರ್ನಾಟಕ28 mins ago

Vidyarthi Vidyarthiniyare Movie: ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರದ ಟ್ರೈಲರ್ ಔಟ್; ಧುಮ್ಮಿಕ್ಕಿದ ಹರೆಯದ ತೊರೆ!

Road Accident Head on collision between bikes One person died on the spot
ಉತ್ತರ ಕನ್ನಡ30 mins ago

Road Accident: ಬೈಕ್‌ಗಳ ನಡುವೆ ಡಿಕ್ಕಿ; ಒಬ್ಬ ಸ್ಥಳದಲ್ಲೇ ಸಾವು, ಇಬ್ಬರಿಗೆ ಗಂಭೀರ ಗಾಯ

Lok Sabha Election
ದೇಶ2 hours ago

Lok Sabha Election: 28 ವರ್ಷಗಳಲ್ಲೇ ಶ್ರೀನಗರದಲ್ಲಿ ಅಧಿಕ ಮತದಾನ; 370ನೇ ವಿಧಿ ರದ್ದು ಎಫೆಕ್ಟ್?

Award Ceremony
ಬೆಂಗಳೂರು2 hours ago

Award Ceremony: ಬೆಂಗಳೂರಿನಲ್ಲಿ ಮೇ 19ರಂದು ಕಾದಂಬರಿ ಸಾರ್ವಭೌಮ ಅ.ನ.ಕೃ. ಪ್ರಶಸ್ತಿ ಪ್ರದಾನ

Muhammad Waseem
ಕ್ರೀಡೆ2 hours ago

Muhammad Waseem : ಇತಿಹಾಸ ಸೃಷ್ಟಿಸಿದ ಯುಎಇ ಕ್ರಿಕೆಟ್​ ತಂಡದ ನಾಯಕ ವಸೀಮ್​

Narendra Modi
ದೇಶ2 hours ago

Narendra Modi: ವಾರಾಣಸಿಯಲ್ಲಿ ಹೊಸ ಅಲೆ ಸೃಷ್ಟಿಸಿದ ಮೋದಿ, ಶಕ್ತಿ ಪ್ರದರ್ಶನ; ರೋಡ್‌ ಶೋ Photos ಇಲ್ಲಿವೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

HD Revanna Bail Revanna will not leave the country condition imposed by the court
ಕ್ರೈಂ5 hours ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

Prajwal Revanna case HD Revanna finally gets bail What was the argument like
ಕ್ರೈಂ5 hours ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ5 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

Karnataka Weather Forecast
ಮಳೆ6 hours ago

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

Modi Roadshow Live
ದೇಶ6 hours ago

Modi Roadshow Live: ವಾರಾಣಸಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ12 hours ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

karnataka weather forecast karnataka rains
ಮಳೆ17 hours ago

Karnataka Weather : ವಾಯುಭಾರ ಕುಸಿತ; ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ19 hours ago

Dina Bhavishya : ಇಂದು ಹೂಡಿಕೆ ಮಾಡಿದರೆ ಗಳಿಸುವಿರಿ ಭಾರಿ ಲಾಭ; ಅನಿರೀಕ್ಷಿತ ಸುದ್ದಿಯಿಂದ ಸಂತಸ

Prajwal Revanna Case I was never kidnapped and son has made a false complaint Video of victim goes viral
ಕ್ರೈಂ1 day ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

Karnataka Weather Forecast Heavy rain in chikkmagalur
ಮಳೆ1 day ago

Karnataka Weather : ಚಿಕ್ಕಮಗಳೂರಲ್ಲಿ ಅಬ್ಬರಿಸುತ್ತಿರುವ ಮಳೆ; ಬೃಹತ್‌ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

ಟ್ರೆಂಡಿಂಗ್‌