horoscope today read your daily horoscope predictions for april 15, 2023Horoscope Today : ಧನಸ್ಸು ರಾಶಿಯವರಿಗೆ ಕೌಟುಂಬಿಕವಾಗಿ ಶುಭ ಫಲ; ನಿಮ್ಮ ಭವಿಷ್ಯ ಹೀಗಿದೆ... - Vistara News

ಪ್ರಮುಖ ಸುದ್ದಿ

Horoscope Today : ಧನಸ್ಸು ರಾಶಿಯವರಿಗೆ ಕೌಟುಂಬಿಕವಾಗಿ ಶುಭ ಫಲ; ನಿಮ್ಮ ಭವಿಷ್ಯ ಹೀಗಿದೆ…

ಶ್ರೀ ಶಕೇ 1945, ಶೋಭಕೃತ್ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷದ ದಶಮಿಯ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ (Horoscope Today ) ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

Horoscope Today daily horoscope
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇಂದಿನ ಪಂಚಾಂಗ (15-04-2023)

ಶ್ರೀ ಶಕೇ 1945, ಶೋಭಕೃತ್ ನಾಮ ಸಂವತ್ಸರ, ಉತ್ತರಾಯಣ,
ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷ.

ತಿಥಿ: ದಶಮಿ 20:44 ವಾರ: ಶನಿವಾರ
ನಕ್ಷತ್ರ: ಶ್ರವಣ 07:34/ ಧನಿಷ್ಠ 29:50 ಯೋಗ: ಸಾಧ್ಯ 06:30 / ಶುಭ 27:21
ಕರಣ: ವಣಿಜ 09:59 ಇಂದಿನ ವಿಶೇಷ: ವಿಶ್ವ ಕಲಾ ದಿನ
ಅಮೃತಕಾಲ: ರಾತ್ರಿ 08 ಗಂಟೆ 13 ನಿಮಿಷದಿಂದ 09 ಗಂಟೆ 42 ನಿಮಿಷದವರೆಗೆ.

ಸೂರ್ಯೋದಯ : 06:07 ಸೂರ್ಯಾಸ್ತ : 06:32

ರಾಹುಕಾಲ : ಬೆಳಗ್ಗೆ 9.00 ರಿಂದ 10.30
ಗುಳಿಕಕಾಲ: ಬೆಳಗ್ಗೆ 6.00 ರಿಂದ 7.30
ಯಮಗಂಡಕಾಲ: ಮಧ್ಯಾಹ್ನ 1.30 ರಿಂದ 3.00

ದ್ವಾದಶ ರಾಶಿ ಭವಿಷ್ಯ (Horoscope Today)

Horoscope Today

ಮೇಷ: ಇಂದು ಮಾನಸಿಕವಾಗಿ ನೆಮ್ಮದಿ. ಅಗತ್ಯ ವಸ್ತುಗಳ ಖರೀದಿಗಾಗಿ ಖರ್ಚು. ಆರ್ಥಿಕ ಪ್ರಗತಿ ಸಾಧಾರಣ. ಕಾರ್ಯಸ್ಥಳದಲ್ಲಿ ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ. ದಿನದ ಕೊನೆಯಲ್ಲಿ ಸಂಗಾತಿಯೊಂದಿಗೆ ಮನಸ್ತಾಪ. ಹಿರಿಯರಿಂದ ಮಾರ್ಗದರ್ಶನ. ಆರೋಗ್ಯ ಮಧ್ಯಮ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 3

Horoscope Today

ವೃಷಭ: ಆರೋಗ್ಯದ ಕುರಿತಾಗಿ ಹೆಚ್ಚು ಕಾಳಜಿ ವಹಿಸುವುದು ಸೂಕ್ತ. ನಿಮ್ಮ ನಡವಳಿಕೆಯಿಂದಾಗಿ ಕುಟುಂಬದ ಸದಸ್ಯರಲ್ಲಿ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ. ಕುಟುಂಬದ ಆಪ್ತರೊಂದಿಗೆ ಮಾತುಕತೆ. ಆರೋಗ್ಯ ಮಧ್ಯಮ. ಉದ್ಯೋಗಿಗಳಿಗೆ ಶುಭ ಫಲ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ಆರ್ಥಿಕವಾಗಿ ಪ್ರಗತಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಮಿಥುನ: ಹೂಡಿಕೆ ವ್ಯವಹಾರದಲ್ಲಿ ತೊಡಗುವ ಸಾಧ್ಯತೆ. ಬಿಡುವಿರದ ಕೆಲಸದ ಮಧ್ಯೆಯೂ ಆರೋಗ್ಯ ಪರಿಪೂರ್ಣ. ಆಪ್ತರೊಂದಿಗೆ ಮಾತುಕತೆ. ಆರ್ಥಿಕ ಪ್ರಗತಿ ಉತ್ತಮ. ಉದ್ಯೋಗಿಗಳಿಗೆ ಶುಭ ಫಲ. ವಿವಾಹಪೇಕ್ಷಿತರಿಗೆ ಶುಭ ಸುದ್ದಿ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಕಟಕ: ಇಂದು ನೀವು ಪ್ರಯಾಣ ಬೆಳೆಸುವ ಸಾಧ್ಯತೆ, ಇದರಿಂದ ನೀವು ದೈಹಿಕವಾಗಿ ಬಳಲಲಿದ್ದೀರಿ. ಹೂಡಿಕೆ ವ್ಯವಹಾರಗಳಲ್ಲಿ ಪ್ರಗತಿ. ಈ ಹಿಂದೆ ನೀಡಿದ ಹಣ ಮರಳುವ ಸಾಧ್ಯತೆ. ಸಾಮಾಜಿಕ ಕಾರ್ಯಗಳಲ್ಲಿ ಭಾಗವಹಿಸಿ ಮಾರ್ಗದರ್ಶನ ಮಾಡುವ ಸಾಧ್ಯತೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಸಿಂಹ: ದೈಹಿಕ ಅನಾರೋಗ್ಯದಿಂದ ಚೇತರಿಸಿಕೊಳ್ಳುವ ಸಾಧ್ಯತೆ. ಅನಾವಶ್ಯಕವಾಗಿ ಖರ್ಚು. ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯುವಿರಿ. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಉತ್ಸಾಹದ ದಿನ. ವ್ಯಾಪಾರ ವ್ಯವಹಾರದಲ್ಲಿ ಸಾಧಾರಣ ಪ್ರಗತಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಕನ್ಯಾ: ಇಂದು ಆರೋಗ್ಯ ಪರಿಪೂರ್ಣ. ಅನಗತ್ಯ ಖರ್ಚುಗಳ ಮೇಲೆ ನಿಯಂತ್ರಣ ಸಾಧಿಸುವಿರಿ. ಜೀವನದ ಅನೇಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಸಾಧ್ಯತೆ. ಉದ್ಯೋಗಿಗಳಿಗೆ ಹೆಚ್ಚಿದ ಒತ್ತಡ, ಕಿರಿಕಿರಿ ಸಾಧ್ಯತೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಉದ್ಯೋಗದ ಸ್ಥಳದಲ್ಲಿ ಹಿರಿಯ ಅಧಿಕಾರಿಗಳಿಂದ ಹೆಚ್ಚಿನ ಒತ್ತಡ, ಮನೆಯಲ್ಲಿನ ಭಿನ್ನಾಭಿಪ್ರಾಯಗಳು ನಿಮ್ಮ ಏಕಾಗ್ರತೆಗೆ ದಕ್ಕೆ ತರುವ ಸಾಧ್ಯತೆ, ಆದಷ್ಟು ಮಾತಿನಲ್ಲಿ ಹಿಡಿತವಿರಲಿ. ಹಿರಿಯರಿಂದ ಮಾರ್ಗದರ್ಶನ. ದೈಹಿಕ ಆರೋಗ್ಯ ಉತ್ತಮ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 3

Horoscope Today

ವೃಶ್ಚಿಕ: ಆತುರದಲ್ಲಿ ಯಾವುದೇ ತೀರ್ಮಾನಗಳನ್ನು ಕೈಗೊಳ್ಳುವುದು ಬೇಡ. ದಿನದ ಮಟ್ಟಿಗೆ ಯಾವುದೇ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕೆಲವು ರಹಸ್ಯ ಸುದ್ದಿಗಳಿಂದ ನಿಮಗೆ ಅಚ್ಚರಿ. ನಿಮ್ಮ ಅಚ್ಚು ಕಟ್ಟು ಕೆಲಸದಿಂದ ಉದ್ಯೋಗದ ಸ್ಥಳದಲ್ಲಿ ಪ್ರಶಂಸೆ ಸಿಗಲಿದೆ. ಆರ್ಥಿಕ ಪ್ರಗತಿ ಉತ್ತಮ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಧನಸ್ಸು: ಆರ್ಥಿಕ ಪ್ರಗತಿ ಸಾಧಾರಣವಾಗಿರುವುದರಿಂದ ಹೆಚ್ಚಿದ ಒತ್ತಡ. ಪ್ರಮುಖ ಕೆಲಸ ಕಾರ್ಯಗಳು ನಿಧಾನವಾಗಿ ಸಾಗುವವು. ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ. ಭೂ ವ್ಯವಹಾರಕ್ಕೆ ಸಂಬಂಧಿಸಿದಂತೆ ಮಾತುಕತೆ. ಉದ್ಯೋಗಿಗಳಿಗೆ ಶುಭ ಫಲ. ದೈಹಿಕ ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಮಕರ: ಅನೇಕ ಕಾರಣಗಳಿಂದ ಒತ್ತಡಕ್ಕೆ ಒಳಗಾಗುವ ಸಾಧ್ಯತೆ. ಆರ್ಥಿಕವಾಗಿ ಪ್ರಗತಿ ಕಂಡರೂ ನಿಮ್ಮ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ತೊಂದರೆ ಉಂಟಾಗುವ ಸಾಧ್ಯತೆ. ಆಪ್ತರೊಂದಿಗೆ ಮಾತುಕತೆ. ವ್ಯಾಪಾರದ ಉದ್ದೇಶದಿಂದಾಗಿ ಕೈಕೊಂಡ ಪ್ರವಾಸದಲ್ಲಿ ಯಶಸ್ಸು. ಆರೋಗ್ಯ ಕೊಂಚಮಟ್ಟಿಗೆ ಹದಗೆಡುವ ಸಾಧ್ಯತೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಕುಂಭ: ಮನರಂಜನೆಗಾಗಿ ಸಮಯವನ್ನು ವಿನಿಯೋಗಿಸುವಿರಿ. ಸೃಜನಶೀಲ ಕಾರ್ಯಗಳಿಂದಾಗಿ ವ್ಯಕ್ತಿತ್ವ ಪ್ರಕಾಶಿಸುವ ಸಾಧ್ಯತೆ. ನಿಮ್ಮ ಅನುಭವಗಳನ್ನು ಇತರರೊಂದಿಗೆ ಹಂಚಿಕೊಳ್ಳುವಿರಿ. ಆಧ್ಯಾತ್ಮಿಕ ಗುರುಗಳ ಮಾರ್ಗದರ್ಶನ ಪಡೆಯುವ ಸಾಧ್ಯತೆ. ಆರ್ಥಿಕ ಪ್ರಗತಿ ಉತ್ತಮ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಮೀನ: ಆಹಾರದ ವ್ಯತ್ಯಾಸದ ಕ್ರಮದಿಂದಾಗಿ ಆರೋಗ್ಯದಲ್ಲಿ ಕೊಂಚ ಏರುಪೇರು, ಕಾಳಜಿ ವಹಿಸುವುದು ಸೂಕ್ತ. ಹೂಡಿಕೆ ಕುರಿತಾಗಿ ಆಲೋಚನೆ. ಅನಿವಾರ್ಯ ಕಾರಣಗಳಿಂದ ಖರ್ಚು. ಆಪ್ತರೊಂದಿಗೆ ಮಾತುಕತೆ. ಉದ್ಯೋಗಿಗಳಿಗೆ ಸಾಧಾರಣ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಇದನ್ನೂ ಓದಿ : Vastu Tips : ಮನೆಯ ಈ ದಿಕ್ಕಿಗೆ ಕಿಟಕಿ ಇದ್ದರೆ ಆರ್ಥಿಕ ಲಾಭ, ಸಮೃದ್ಧಿ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Reasi Terror Attack : ಉಗ್ರರ ಮುಂದೆ ಸತ್ತಂತೆ ನಟಿಸಿ ಬದುಕುಳಿದ ಹಿಂದೂ ಯಾತ್ರಿಗಳು…

Reasi Terror Attack : ತಂಡದಲ್ಲಿ 6ರಿಂದ 7 ಭಯೋತ್ಪಾದಕರು ಇದ್ದರು. ಅವರು ಮಾಸ್ಕ್​ನಿಂದ ಮುಖ ಮುಚ್ಚಿದ್ದರು. ಆರಂಭದಲ್ಲಿ, ಅವರು ಬಸ್ ಹಿಂದೆ – ಮುಂದೆ ಚಲಿಸದಂತೆ ರಸ್ತೆಯ ಎಲ್ಲಾ ಬದಿಗಳಿಂದ ಮುಚ್ಚಿದರು. ಬಳಿಕ ಗುಂಡು ಹಾರಿಸಲು ಆರಂಭಿಸಿದರು. ಬಸ್ ಕಮರಿಗೆ ಹತ್ತಿರ ಬಂದು ಎಲ್ಲರೂ ಸಾಯುವಂತೆ ನಿರಂತ ಗುಂಡು ಹಾರಿಸುತ್ತಲೇ ಇದ್ದರು ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.

VISTARANEWS.COM


on

Reasi Terror Attack
Koo

ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಹಿಂದೂ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಮೇಲೆ ನಡೆದ ಭಯೋತ್ಪಾದಕರ ದಾಳಿಯಲ್ಲಿ (Reasi Terror Attack) ಬದುಕುಳಿದವರು ಆ ಭಯಾನಕ ಕ್ಷಣವನ್ನು ವಿವರಿಸಿದ್ದಾರೆ. ಎಲ್ಲರನ್ನೂ ಸಾಯಿಸಬೇಕು ಎಂಬ ಉದ್ದೇಶದಿಂದ ಭಯೋತ್ಪಾದಕರು ಬಸ್​ ಕಮರಿಗೆ ಬಿದ್ದಿದ್ದರೂ ಗುಂಡು ಹಾರಿಸುತ್ತಲೇ ಇದ್ದರು ಎಂದು ಅವರು ಹೇಳಿದ್ದಾರೆ. ನಾವೆಲ್ಲರೂ ಗುಂಡು ಬಿದ್ದು ಸತ್ತಂತೆ ನಟಿಸಿ ಬದುಕಿಕೊಂಡೆವು ಎಂದು ಅವರು ಭಯಭೀತ ಘಟನೆಯನ್ನು ವಿವರಿಸಿದ್ದಾರೆ.

ತಂಡದಲ್ಲಿ 6ರಿಂದ 7 ಭಯೋತ್ಪಾದಕರು ಇದ್ದರು. ಅವರು ಮಾಸ್ಕ್​ನಿಂದ ಮುಖ ಮುಚ್ಚಿದ್ದರು. ಆರಂಭದಲ್ಲಿ, ಅವರು ಬಸ್ ಹಿಂದೆ – ಮುಂದೆ ಚಲಿಸದಂತೆ ರಸ್ತೆಯ ಎಲ್ಲಾ ಬದಿಗಳಿಂದ ಮುಚ್ಚಿದರು. ಬಳಿಕ ಗುಂಡು ಹಾರಿಸಲು ಆರಂಭಿಸಿದರು. ಬಸ್ ಕಮರಿಗೆ ಹತ್ತಿರ ಬಂದು ಎಲ್ಲರೂ ಸಾಯುವಂತೆ ಕೂಗುತ್ತಾ ನಿರಂತರ ಗುಂಡು ಹಾರಿಸುತ್ತಲೇ ಇದ್ದರು ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.

ನಾವೆಲ್ಲರೂ ಸತ್ತಿದ್ದೇವೆ ಎಂದು ಅವರನ್ನು ನಂಬಿಸಲು ನಾವು ಮೌನವಾಗಿಯೇ ಇದ್ದೆವು. ಸಂಜೆ 6 ಗಂಟೆಗೆ ಶಿವಖೋರ್ಹಿಯಿಂದ (ರಿಯಾಸಿ) ವೈಷ್ಣೋದೇವಿಗೆ ಬಸ್ ಮೂಲಕ ಬರುವಾಗ 30 ನಿಮಿಷಗಳ ದಾರಿಯ ನಡುವೆ ಘಟನೆ ನಡೆದಿದೆ. ನಾವು ಭಯಭೀತರಾಗಿದ್ದೆವು. ಬಸ್ಸಿನಲ್ಲಿ ಮಕ್ಕಳು ಮತ್ತು ಮಹಿಳೆಯರು ಸಹ ಇದ್ದರು. ಎಲ್ಲರೂ ಗಾಯಗೊಂಡಿದ್ದಾರೆ. ದಾಳಿ ನಡೆದ 10 ರಿಂದ 15 ನಿಮಿಷಗಳ ನಂತರ ಪೊಲೀಸರು ಮತ್ತು ಸ್ಥಳೀಯರು ನಮ್ಮನ್ನು ರಕ್ಷಿಸಲು ಬಂದರು ಎಂದು ಯಾತ್ರಿಯೊಬ್ಬರು ಹೇಳಿದರು.

20 ನಿಮಿಷ ಗುಂಡು ಹಾರಿಸಿದ್ದರು

ಭಯಾನಕ ದಾಳಿಯನ್ನು ವಿವರಿಸಿದ ಸಂತ್ರಸ್ತರೊಬ್ಬರು “ಭಯೋತ್ಪಾದಕರಲ್ಲಿ ಒಬ್ಬ ಬಸ್ ಮೇಲೆ ಗುಂಡು ಹಾರಿಸುವುದನ್ನು ನಾನು ನೋಡಿದ್ದೇನೆ. ಬಸ್ ಕಮರಿಗೆ ಬಿದ್ದ ನಂತರವೂ ಅವರು 20 ನಿಮಿಷಗಳ ಕಾಲ ಗುಂಡು ಹಾರಿಸುತ್ತಲೇ ಇದ್ದರು. ಬಸ್ ಚಾಲಕನಿಗೆ ಗುಂಡು ತಗುಲಿದ ಕಾರಣ ನಿಯಂತ್ರಣ ಕಳೆದುಕೊಂಡು ವಾಹನವು ಕಮರಿಗೆ ಬಿದ್ದಿದೆ.

ಮಕ್ಕಳೂ ಎಂದೂ ನೋಡದೆ ಕೊಂಡಿದ್ದರು

ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ದೇವಾಲಯದಿಂದ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ ಪರಿಣಾಮ 10 ಜನರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 33 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: Narendra Modi 3.0 : ಅಧಿಕಾರ ಸ್ವೀಕರಿಸಿದ ಮರುದಿನವೇ ಮೊದಲ ಫೈಲ್​ಗೆ ಸಹಿ ಹಾಕಿದ ಪ್ರಧಾನಿ ಮೋದಿ; ಯಾವ ಕಡತ ಅದು?

ರಿಯಾಸಿ ಬಸ್ ದಾಳಿಯಲ್ಲಿ ಎರಡರಿಂದ ಮೂರು ಭಯೋತ್ಪಾದಕರು ಭಾಗಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕಳೆದ ತಿಂಗಳು ರಾಜೌರಿ ಮತ್ತು ಪೂಂಛ್​​ನಲ್ಲಿ ದಾಳಿಗಳನ್ನು ನಡೆಸಿದ ಲಷ್ಕರ್ ಉಗ್ರರ ಗುಂಪು ಟಿಆರ್​ಎಫ್​ ಭಯೋತ್ಪಾದಕರು ದಾಳಿ ನಡೆಸಿದ್ದಾರೆ.

ಭಯೋತ್ಪಾದಕರನ್ನು ಪತ್ತೆಹಚ್ಚಲು ಬೃಹತ್ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ. ದಾಳಿಯ ತನಿಖೆಗಾಗಿ ರಾಷ್ಟ್ರೀಯ ತನಿಖಾ ಸಂಸ್ಥೆಯನ್ನು (ಎನ್ಐಎ) ನಿಯೋಜಿಸಲಾಗಿದೆ ಎಂದು ಗೃಹ ಸಚಿವಾಲಯದ ಮೂಲಗಳು ತಿಳಿಸಿವೆ.

Continue Reading

ಪ್ರಮುಖ ಸುದ್ದಿ

PM Narendra Modi: ಮೋದಿ ಪ್ರಮಾಣ ವಚನ ಸಮಾರಂಭದಲ್ಲಿ ಕಾಣಿಸಿಕೊಂಡ ನಿಗೂಢ ಪ್ರಾಣಿ! ವಿಡಿಯೋ ಇದೆ ನೋಡಿ

PM Narendra Modi: ಜೂನ್ 9ರಂದು ರಾಷ್ಟ್ರಪತಿ ಭವನದ ಮುಂಭಾಗದಲ್ಲಿ ನಡೆದ ಈ ಪ್ರಮುಖ ರಾಜಕೀಯ ಘಟನೆಗೆ ವಿವಿಧ ಕ್ಷೇತ್ರಗಳ ಹಲವಾರು ಪ್ರಮುಖರು ಸಾಕ್ಷಿಯಾಗಿರುವಂತೆಯೇ, ನಾಲ್ಕು ಕಾಲಿನ ಒಂದು ಅನಿರೀಕ್ಷಿತ ಅತಿಥಿಯೂ ಕಂಡುಬಂದಿರುವುದು ಅಚ್ಚರಿಗೊಳಿಸಿದೆ.

VISTARANEWS.COM


on

pm narendra modi leopord
Koo

ಹೊಸದಿಲ್ಲಿ: ನರೇಂದ್ರ ಮೋದಿ (PM Narendra Modi) ಅವರು ಮೂರನೇ ಅವಧಿಗೆ ಪ್ರಧಾನ ಮಂತ್ರಿಯಾಗಿ (Prime minister) ಪ್ರಮಾಣ ವಚನ (Oath taking) ಸ್ವೀಕಾರ ಕಾರ್ಯಕ್ರಮ ನಡೆಯುತ್ತಿದ್ದಾಗ ಹಿನ್ನೆಲೆಯಲ್ಲಿ ಚಿರತೆಯಂಥ (leopord) ಪ್ರಾಣಿಯೊಂದು ವೇದಿಕೆಯ ಹಿಂಭಾಗದಲ್ಲೇ ಓಡಾಡಿರುವುದು ಇದೀಗ ಕಂಡುಬಂದಿದೆ. ಸಮಾರಂಭದ ವಿಡಿಯೋದಲ್ಲಿ ಇದು ಕಂಡುಬಂದಿದ್ದು, ಇದೀಗ ಎಲ್ಲರ ಆಶ್ಚರ್ಯ, ಆತಂಕಗಳಿಗೆ ಕಾರಣವಾಗಿದೆ. ವಿಡಿಯೋ ವೈರಲ್‌ (viral video) ಆಗುತ್ತಿದೆ.

ಜೂನ್ 9ರಂದು ರಾಷ್ಟ್ರಪತಿ ಭವನದ ಮುಂಭಾಗದಲ್ಲಿ ನಡೆದ ಈ ಪ್ರಮುಖ ರಾಜಕೀಯ ಘಟನೆಗೆ ವಿವಿಧ ಕ್ಷೇತ್ರಗಳ ಹಲವಾರು ಪ್ರಮುಖರು ಸಾಕ್ಷಿಯಾಗಿರುವಂತೆಯೇ, ನಾಲ್ಕು ಕಾಲಿನ ಒಂದು ಅನಿರೀಕ್ಷಿತ ಅತಿಥಿಯೂ ಕಂಡುಬಂದಿರುವುದು ಅಚ್ಚರಿಗೊಳಿಸಿದೆ. ಭಾರತದ ಪ್ರಧಾನ ಮಂತ್ರಿಯ ಪ್ರಮಾಣ ವಚನ ಸ್ವೀಕಾರ ಸಮಾರಂಭ ಸಹಜವಾಗಿ ಬಿಗಿ ಭದ್ರತೆಯ ಕಾರ್ಯಕ್ರಮವಾಗಿದ್ದು, ರಾಷ್ಟ್ರದ ಮುಖಂಡರು, ರಾಜಕೀಯ ನಾಯಕರು, ಉದ್ಯಮಿಗಳು, ಪ್ರಮುಖ ಚಲನಚಿತ್ರ ನಟರು ಸಾಕ್ಷಿಗಳಾಗಿದ್ದರು. ಇದೇ ಸಂದರ್ಭದಲ್ಲಿ ಚಿರತೆ ಕಂಡುಬಂದಿದೆ.

ಬಿಜೆಪಿಯ ದುರ್ಗಾ ದಾಸ್ ಉಯಿಕೆ ಅವರು ಕೇಂದ್ರ ಸಚಿವರಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪ್ರಮಾಣ ವಚನ ಸ್ವೀಕರಿಸುವ ಸಮಯದಲ್ಲಿ, ವೇದಿಕೆಯ ಹಿನ್ನೆಲೆಯಲ್ಲಿ ಬೆಕ್ಕಿನ ಸ್ವರೂಪದ ಪ್ರಾಣಿಯೊಂದು ಓಡಾಡಿದ್ದನ್ನು ಹೆಚ್ಚಿನವರು ಗುರುತಿಸಲಿಲ್ಲ. ಆದರೆ ವೇದಿಕೆಯ ಹಿಂದೆಯೇ ಅದರ ಮಿಂಚಿನ ಓಡಾಟವನ್ನು ಅನೇಕರು ಗಮನಿಸಿದರು. ದೂರದರ್ಶನದಲ್ಲಿ ಪ್ರಮಾಣವಚನ ಸಮಾರಂಭ ನೇರ ಪ್ರಸಾರವಾಗಿದ್ದು, ಇದೀಗ ಆ ಕ್ಷಣದ ವಿಡಿಯೋಗಳು ಮರುಪ್ರಸಾರವಾಗುತ್ತಿವೆ.

ಈ ವರ್ಷದ ಅತಿದೊಡ್ಡ ರಾಜಕೀಯ ಇವೆಂಟ್‌ ಆಗಿರುವ ಈ ಕಾರ್ಯಕ್ರಮದಲ್ಲಿ ಈ ಅನಪೇಕ್ಷಿತ, ಅನಿರೀಕ್ಷಿತ ಅತಿಥಿಯ ಆಗಮನ ಇದೀಗ ಇಂಟರ್ನೆಟ್‌ನಲ್ಲಿ ಬಿರುಗಾಳಿಯಂತೆ ಗಮನ ಸೆಳೆಯುತ್ತಿದೆ. ಅನೇಕ X ಬಳಕೆದಾರರು ತಮ್ಮ ಅಪನಂಬಿಕೆ ವ್ಯಕ್ತಪಡಿಸಿದ್ದಾರೆ. ಹಲವರು ಅಚ್ಚರಿ ಹಾಗೂ ಆತಂಕ ಹೊರಸೂಸಿದ್ದಾರೆ.

ಆದರೂ ವಿಸ್ತಾರವಾದ ರಾಜಪಥ ಹಾಗೂ ರಾಷ್ಟ್ರಪತಿ ಭವನದ ಆವರಣದಲ್ಲಿ ಚಿರತೆ ಬಂದು ಹುದುಗಿಕೊಂಡಿರುವ ಸಾಧ್ಯತೆಯನ್ನು ಅಲ್ಲಗಳೆಯಾಲಗುವುದಿಲ್ಲ. ʼಅಮೃತ್ ಉದ್ಯಾನ್ʼ ಎಂದು ಕರೆಯಲಾಗುವ ಉದ್ಯಾನ 15 ಎಕರೆಗಳಷ್ಟು ಹರಡಿದ್ದು, ಹಲವು ಕಡೆ ದಟ್ಟವಾದ ಕಾಡು ಇದೆ. ಈಸ್ಟ್ ಲಾನ್, ಸೆಂಟ್ರಲ್ ಲಾನ್, ಲಾಂಗ್ ಗಾರ್ಡನ್ ಮತ್ತು ಸರ್ಕ್ಯುಲರ್ ಗಾರ್ಡನ್ ಇದರ ಮೂಲ ಆಕರ್ಷಣೆಗಳಾಗಿವೆ. ಹರ್ಬಲ್ ಗಾರ್ಡನ್, ಟ್ಯಾಕ್ಟೈಲ್ ಗಾರ್ಡನ್, ಬೋನ್ಸಾಯ್ ಗಾರ್ಡನ್ ಮತ್ತು ಆರೋಗ್ಯ ವನಂಗಳು ಇಲ್ಲಿವೆ.

ಅಮೃತ್ ಉದ್ಯಾನ್‌ನ ಸಸ್ಯವರ್ಗದ ಜೊತೆಗೆ ರಾಷ್ಟ್ರಪತಿ ಭವನವು ಚಿಟ್ಟೆ ಪಾರ್ಕ್‌, ನವಿಲು ಪಾರ್ಕ್‌, ಕೊಳ ಇತ್ಯಾದಿ ಒಳಗೊಂಡಿದೆ. ವೈವಿಧ್ಯಮಯ ಪ್ರಾಣಿಗಳಿಗೂ ನೆಲೆಯಾಗಿದೆ. ಭವನದ ಆವರಣದ ಉದ್ಯಾನವು 111 ಜಾತಿಯ ಪಕ್ಷಿಗಳನ್ನೂ ಹೊಂದಿದೆ. ಸೋಮವಾರ ಮತ್ತು ನಿರ್ದಿಷ್ಟ ರಜಾದಿನಗಳನ್ನು ಹೊರತುಪಡಿಸಿ, ಅಮೃತ್‌ ಉದ್ಯಾನವು ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ಸಾರ್ವಜನಿಕರಿಗೆ ತೆರೆದಿದೆ.

ಇದೀಗ ಈ ಚಿರತೆ ಎಲ್ಲಿಂದ ಬಂದಿರಬಹುದು, ಪ್ರಧಾನಿ ಹಾಗೂ ರಾಷ್ಟ್ರಪತಿಗಳ ಸೆಕ್ಯುರಿಟಿ ಅದನ್ನು ಸಮಾರಂಭ ನಡೆಯುವ ಜಾಗದವರೆಗೂ ಹೇಗೆ ಬರಲು ಬಿಟ್ಟರು, ನಿಜಕ್ಕೂ ಈ ವಿಡಿಯೋದಲ್ಲಿ ಕಾಣಿಸಿರುವುದು ನಿಜವೇ ಎಂಬಿತ್ಯಾದಿ ಚರ್ಚೆಗಳು ಆರಂಭವಾಗಿವೆ. ಒಂದು ವೇಳೆ ಇಲ್ಲಿ ಚಿರತೆ ಇರುವುದು ನಿಜವೇ ಆಗಿದ್ದರೆ, ಅದು ದೇಶವಿದೇಶದ ಗಮನ ಸೆಳೆಯುವ ದೊಡ್ಡ ಸುದ್ದಿಯೇ ಆಗಲಿದೆ.

ಇದನ್ನೂ ಓದಿ: Narendra Modi 3.0 : ಅಧಿಕಾರ ಸ್ವೀಕರಿಸಿದ ಮರುದಿನವೇ ಮೊದಲ ಫೈಲ್​ಗೆ ಸಹಿ ಹಾಕಿದ ಪ್ರಧಾನಿ ಮೋದಿ; ಯಾವ ಕಡತ ಅದು?

Continue Reading

ಕರ್ನಾಟಕ

Congress Guarantee: ಗ್ಯಾರಂಟಿ ನಿಲ್ಲಿಸುವ ಮಾತು ಬೇಡ: ಕೈ ನಾಯಕರಿಗೆ ಎಚ್.ಎಂ ರೇವಣ್ಣ ಎಚ್ಚರಿಕೆ

Congress Guarantee: ಲೋಕಸಭಾ ಚುನಾವಣೆಯಲ್ಲಿ ನಿರೀಕ್ಷಿತ ಸ್ಥಾನಗಳು ಬರದ ಹಿನ್ನೆಲೆಯಲ್ಲಿ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದೇ ಒಳಿತು ಎಂದು ಕೆಲ ಕೈ ನಾಯಕರು ಅಭಿಪ್ರಾಯ ಹೊರಹಾಕುತ್ತಿದ್ದಾರೆ. ಹೀಗಾಗಿ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ ರೇವಣ್ಣ ಪ್ರತಿಕ್ರಿಯಿಸಿದ್ದಾರೆ.

VISTARANEWS.COM


on

Congress Guaratee
Koo

ಬೆಂಗಳೂರು: ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು (Congress Guarantee) ನಿಲ್ಲಿಸಬೇಕೆಂಬ ಚರ್ಚೆ ಹಿನ್ನೆಲೆ ಮುನ್ನೆಲೆಗೆ ಬಂದ ಹಿನ್ನೆಲೆಯಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ ರೇವಣ್ಣ (HM Revanna) ಪ್ರತಿಕ್ರಿಯಿಸಿದ್ದಾರೆ. ಗ್ಯಾರಂಟಿಗಳು ನಿಲ್ಲಿಸಿ ಎಂದು ಹೇಳಬೇಡಿ. ಎಷ್ಟೇ ದೊಡ್ಡ ನಾಯಕರು ಆದರೂ ನಿಲ್ಲಿಸುವ ಬಗ್ಗೆ ಮಾತನಾಡಬೇಡಿ. ನಾವು ಗ್ಯಾರಂಟಿಗಳನ್ನ ನಿಲ್ಲಿಸುವುದಿಲ್ಲ‌. ಸಣ್ಣ ಪುಟ್ಟ ತಪ್ಪುಗಳು ಇದ್ದರೆ ಸರಿಪಡಿಸುತ್ತೇವೆ ಎಂದು ಕೈ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಗ್ಯಾರಂಟಿಗಳಿಗಾಗಿ 36 ಸಾವಿರ ಕೋಟಿ ಖರ್ಚು ಆಗುತ್ತಿತ್ತು, ಅದು‌ 46 ಸಾವಿರ ಕೋಟಿಗೆ ಏರಿಕೆ ಆಗಿದೆ. ಆದರೂ ಅದು ನಮ್ಮ ಬದ್ಧತೆ. ನಾವು ಬದುಕಿಗಾಗಿ ಇದ್ದೇವೆ, ಬಿಜೆಪಿಯವರು ಭಾವನೆಗಳಿಗಾಗಿ ಇದ್ದಾರೆ ಎಂದು ತಿಳಿಸಿದ್ದಾರೆ.

ಎಲ್ಲ ಕಡೆಗಳಿಂದ ದೂರು ಬಂದಿವೆ. ಒಂದೇ ಮನೆಯಲ್ಲಿ ಇಬ್ಬರು ಫಲಾನುಭವಿಗಳ ಇರುವ ಬಗ್ಗೆ ದೂರು ಬಂದಿವೆ. ಅವುಗಳನ್ನು ಪರಿಶೀಲನೆ ಮಾಡುತ್ತೇವೆ ಎಂದು ಹೇಳಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ನಿರೀಕ್ಷಿತ ಸ್ಥಾನಗಳು ಬರದ ಹಿನ್ನೆಲೆಯಲ್ಲಿ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದೇ ಒಳಿತು ಎಂದು ಕೆಲ ಕೈ ನಾಯಕರು ಅಭಿಪ್ರಾಯ ಹೊರಹಾಕುತ್ತಿದ್ದಾರೆ. ಇತ್ತೀಚೆಗೆ ಮೈಸೂರು-ಕೊಡಗು ಕ್ಷೇತ್ರದ ಪರಾಜಿತ ಕೈ ಅಭ್ಯರ್ಥಿ ಎಂ.ಲಕ್ಷ್ಮಣ್‌ ಅವರು ಮತದಾರರ ವಿರುದ್ಧ ಅಸಮಾಧಾನ ಹೊರಹಾಕುತ್ತಾ, ಜನರಿಗೆ ಗ್ಯಾರಂಟಿಗಳು ಬೇಕಿಲ್ಲ, ಇದರ ಬಗ್ಗೆ ಸಿಂ ಸಿದ್ದರಾಮಯ್ಯ ಅವರು ಮರು ಪರಿಶೀಲನೆ ನಡೆಸಬೇಕು ಎಂದು ಹೇಳಿದ್ದರು. ಹೀಗಾಗಿ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ ರೇವಣ್ಣ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ | Election Commission : ಜುಲೈ 10ರಂದು 7 ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ

“ಒಕ್ಕೂಟ ವ್ಯವಸ್ಥೆಯ ಆಶಯ…” ಪ್ರಧಾನಿ ಮೋದಿಗೆ ಶುಭ ಕೋರಿದ ಸಿಎಂ ಸಿದ್ದರಾಮಯ್ಯ

Budget Session Siddaramaiah Narendra Modi

ಬೆಂಗಳೂರು: ಪ್ರಧಾನ ಮಂತ್ರಿಯಾಗಿ (Prime minister) ಮೂರನೇ ಬಾರಿಗೆ ಪ್ರಮಾಣ ವಚನ (Oath) ಸ್ವೀಕರಿಸಿದ ನರೇಂದ್ರ ಮೋದಿ (Narendra Modi) ಅವರಿಗೆ ಕರ್ನಾಟಕ (Karnataka) ಸಿಎಂ ಸಿದ್ದರಾಮಯ್ಯ (CM Siddaramaiah) ಸಾಮಾಜಿಕ ಜಾಲತಾಣ X ಖಾತೆ ಮೂಲಕ ಶುಭ ಕೋರಿದ್ದಾರೆ.

“3ನೇ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರಧಾನಿ @narendramodi ಅವರಿಗೆ ಅಭಿನಂದನೆಗಳು. ಕರುನಾಡಿನ ಅಭಿವೃದ್ಧಿಯ ನಮ್ಮ ಸಂಕಲ್ಪಕ್ಕೆ ನಿಮ್ಮ ಸಹಕಾರ ಇರಲಿದೆ, ಒಕ್ಕೂಟ ವ್ಯವಸ್ಥೆಯ ಆಶಯಗಳನ್ನು ಎತ್ತಿಹಿಡಿಯುತ್ತಾ ರಾಜ್ಯಗಳ ಹಿತಾಸಕ್ತಿಯನ್ನು ನೀವು ಗೌರವಿಸುತ್ತೀರೆಂದು ಭಾವಿಸಿದ್ದೇನೆ. ಸಂಪದ್ಭರಿತ ಕರ್ನಾಟಕದ ಮೂಲಕ ಸದೃಢ ಭಾರತ ನಿರ್ಮಾಣಕ್ಕಾಗಿ ನಿಮ್ಮ ಜೊತೆಯಾಗಿ ಶ್ರಮಿಸುವ ದಿನಗಳನ್ನು ಎದುರು ನೋಡುತ್ತಿದ್ದೇನೆ” ಎಂದು ಸಿದ್ದರಾಮಯ್ಯ ಹಾರೈಸಿದ್ದಾರೆ.

Continue Reading

ಪ್ರಮುಖ ಸುದ್ದಿ

Election Commission : ಜುಲೈ 10ರಂದು 7 ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ

Election Commission :ಜುಲೈ 10 ರಂದು ಉಪಚುನಾವಣೆ ನಡೆಯಲಿದ್ದು, ಜುಲೈ 13 ರಂದು ಮತ ಎಣಿಕೆ ನಡೆಯಲಿದೆ. ಜುಲೈ 15 ರೊಳಗೆ ಉಪಚುನಾವಣೆಗಳನ್ನು ಪೂರ್ಣಗೊಳಿಸಬೇಕು ಎಂದು ಚುನಾವಣಾ ಆಯೋಗ ಹೇಳಿದೆ. ಹಾಲಿ ಸದಸ್ಯರ ಮರಣ ಅಥವಾ ರಾಜೀನಾಮೆಯಿಂದ ಉಂಟಾಗಿರುವ ಖಾಲಿ ಸ್ಥಾನಗಳಿಗೆ ಉಪಚುನಾವಣೆ ನಡೆಯಲಿದೆ.

VISTARANEWS.COM


on

Election Commission
Koo

ಬೆಂಗಳೂರು: ಜುಲೈ 10, 2024 ರಂದು ಏಳು ರಾಜ್ಯಗಳ 13 ವಿಧಾನಸಭಾ ಸ್ಥಾನಗಳಿಗೆ ಉಪಚುನಾವಣೆ ನಡೆಯಲಿದೆ ಎಂದು ಭಾರತದ ಚುನಾವಣಾ ಆಯೋಗ (Election Commission ) ಘೋಷಿಸಿದೆ. ಬಿಹಾರ, ತಮಿಳುನಾಡು ಮತ್ತು ಮಧ್ಯಪ್ರದೇಶದ ತಲಾ ಒಂದು, ಪಶ್ಚಿಮ ಬಂಗಾಳದ ನಾಲ್ಕು ಮತ್ತು ಉತ್ತರಾಖಂಡ, ಪಂಜಾಬ್ ಮತ್ತು ಹಿಮಾಚಲ ಪ್ರದೇಶದ ತಲಾ ಎರಡು ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ.

ಜುಲೈ 10 ರಂದು ಉಪಚುನಾವಣೆ ನಡೆಯಲಿದ್ದು, ಜುಲೈ 13 ರಂದು ಮತ ಎಣಿಕೆ ನಡೆಯಲಿದೆ. ಜುಲೈ 15 ರೊಳಗೆ ಉಪಚುನಾವಣೆಗಳನ್ನು ಪೂರ್ಣಗೊಳಿಸಬೇಕು ಎಂದು ಚುನಾವಣಾ ಆಯೋಗ ಹೇಳಿದೆ. ಹಾಲಿ ಸದಸ್ಯರ ಮರಣ ಅಥವಾ ರಾಜೀನಾಮೆಯಿಂದ ಉಂಟಾಗಿರುವ ಖಾಲಿ ಸ್ಥಾನಗಳಿಗೆ ಉಪಚುನಾವಣೆ ನಡೆಯಲಿದೆ.

ಉಪಚುನಾವಣೆಯ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ

  • ಅಧಿಸೂಚನೆ ಪ್ರಕಟಣೆ: ಜೂನ್ 14
  • ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕ: ಜೂನ್ 21
  • ನಾಮಪತ್ರ ಪರಿಶೀಲನೆ: ಜೂನ್ 24
  • ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕ: ಜೂನ್ 26
  • ಮತದಾನದ ದಿನಾಂಕ: ಜುಲೈ 10
  • ಫಲಿತಾಂಶ: ಜುಲೈ 13

ಇದನ್ನೂ ಓದಿ: Narendra Modi 3.0 : ಅಧಿಕಾರ ಸ್ವೀಕರಿಸಿದ ಮರುದಿನವೇ ಮೊದಲ ಫೈಲ್​ಗೆ ಸಹಿ ಹಾಕಿದ ಪ್ರಧಾನಿ ಮೋದಿ; ಯಾವ ಕಡತ ಅದು?

ಜುಲೈ 10 ರಂದು ಉಪಚುನಾವಣೆ ನಡೆಯಲಿರುವ ಕ್ಷೇತ್ರಗಳ ಪಟ್ಟಿ

ಬಿಹಾರ: ಬಿಮಾ ಭಾರತಿ ರಾಜೀನಾಮೆಯಿಂದ ತೆರವಾಧ ರುಪೌಲಿ ಕ್ಷೇತ್ರ
ಪಶ್ಚಿಮ ಬಂಗಾಳ: ಶ್ರೀ ಕೃಷ್ಣ ಕಲ್ಯಾಣಿ ರಾಜೀನಾಮೆಯಿಂದ ತೆರವಾದ ರಾಯ್​ಗಂಜ್ ಸ್ಥಾನ
ಪಶ್ಚಿಮ ಬಂಗಾಳ: ಮುಕುಟ್​​ ಮಣಿ ಅಧಿಕಾರಿ ರಾಜೀನಾಮೆಯಿಂದ ತೆರವಾದ ರಣಘಾಟ್ ದಕ್ಷಿಣ ಕ್ಷೇತ್ರ
ಪಶ್ಚಿಮ ಬಂಗಾಳ: ಬಿಸ್ವಜಿತ್ ದಾಸ್ ರಾಜೀನಾಮೆಯಿಂದ ಬಾಗ್ಡಾ ಸ್ಥಾನ
ಪಶ್ಚಿಮ ಬಂಗಾಳ: ಸಾಧನ್ ಪಾಂಡೆ ನಿಧನದಿಂದ ತೆರವಾದ ಮಣಿಕ್​ತಾಲ್​ ಕ್ಷೇತ್ರ
ತಮಿಳುನಾಡು: ತಿರು ಎನ್​ ಪುಗಳೆಂದಿ ನಿಧನದಿಂದ ತೆರವಾದ ವಿಕ್ರಾವಂಡಿ ಕ್ಷೇತ್ರ
ಮಧ್ಯಪ್ರದೇಶ: ಕಮಲೇಶ್ ಪ್ರತಾಪ್ ಶಾ ರಾಜೀನಾಮೆಯಿಂದಾಗಿ ಅಮರವಾರಾ ಸ್ಥಾನ
ಉತ್ತರಾಖಂಡ: ರಾಜೇಂದ್ರ ಸಿಂಗ್ ಭಂಡಾರಿ ರಾಜೀನಾಮೆಯಿಂದಾಗಿ ಬದರೀನಾಥ್ ಸ್ಥಾನ
ಉತ್ತರಾಖಂಡ: ಸರ್ವತ್ ಕರೀಂ ಅನ್ಸಾರಿ ಅವರ ನಿಧನದಿಂದಾಗಿ ಮಂಗಳೌರ್ ಕ್ಷೇತ್ರ
ಪಂಜಾಬ್​: ಶೀತಲ್ ಅಂಗುರಾ ಅವರ ರಾಜೀನಾಮೆಯಿಂದ ತೆರವಾದ ಪಂಜಾಬ್ ಜಲಂಧರ್ ಪಶ್ಚಿಮ ಸ್ಥಾನ
ಹಿಮಾಚಲ ಪ್ರದೇಶ: ಹೋಶ್ಯಾರ್ ಸಿಂಗ್ ಅವರ ರಾಜೀನಾಮೆಯಿಂದಾಗಿ ಡೆಹ್ರಾಡೂನ್ ಕ್ಷೇತ್ರ
ಹಿಮಾಚಲ ಪ್ರದೇಶ: ಆಶಿಶ್ ಶರ್ಮಾ ಅವರ ರಾಜೀನಾಮೆಯಿಂದಾಗಿ ತೆರವಾದ ಹಮೀರ್ಪುರ ಸ್ಥಾನ
ಹಿಮಾಚಲ ಪ್ರದೇಶ: ಕೆ.ಎಲ್.ಠಾಕೂರ್ ಅವರ ರಾಜೀನಾಮೆಯಿಂದಾಗಿ ತೆರವಾದ ನಲಘರ್ ಸ್ಥಾನ

ಚುನಾವಣೆಗೆ ನಡೆಯುವ ವಿಧಾನಸಭಾ ಕ್ಷೇತ್ರದ ಸಂಪೂರ್ಣ ಅಥವಾ ಯಾವುದೇ ಭಾಗವನ್ನು ಒಳಗೊಂಡಿರುವ ಜಿಲ್ಲೆಗಳಲ್ಲಿ ಮಾದರಿ ನೀತಿ ಸಂಹಿತೆ (ಎಂಸಿಸಿ) ತಕ್ಷಣದಿಂದ ಜಾರಿಗೆ ಬರಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.ಜುಲೈ 15 ರೊಳಗೆ ಉಪಚುನಾವಣೆಗಳನ್ನು ಪೂರ್ಣಗೊಳಿಸಬೇಕು ಎಂದು ಅದು ಹೇಳಿದೆ.

Continue Reading
Advertisement
Reasi Terror Attack
ಪ್ರಮುಖ ಸುದ್ದಿ3 mins ago

Reasi Terror Attack : ಉಗ್ರರ ಮುಂದೆ ಸತ್ತಂತೆ ನಟಿಸಿ ಬದುಕುಳಿದ ಹಿಂದೂ ಯಾತ್ರಿಗಳು…

murder case
ಮೈಸೂರು20 mins ago

Murder Case : ಮೈಸೂರಿನಲ್ಲಿ ಅನ್ನದಾನೇಶ್ವರ ಮಠದ ಹಿರಿಯ ಸ್ವಾಮೀಜಿಯ ಬರ್ಬರ ಕೊಲೆ

pm narendra modi leopord
ಪ್ರಮುಖ ಸುದ್ದಿ20 mins ago

PM Narendra Modi: ಮೋದಿ ಪ್ರಮಾಣ ವಚನ ಸಮಾರಂಭದಲ್ಲಿ ಕಾಣಿಸಿಕೊಂಡ ನಿಗೂಢ ಪ್ರಾಣಿ! ವಿಡಿಯೋ ಇದೆ ನೋಡಿ

Yuva Rajkumar son of raghavendra Rajkumar yuva divorce
ಸ್ಯಾಂಡಲ್ ವುಡ್26 mins ago

Yuva Rajkumar: ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಯುವ ರಾಜ್​ಕುಮಾರ್​ ; ಅಣ್ಣಾವ್ರ ಕುಟುಂಬದಲ್ಲಿ ಇದೇ ಮೊದಲ ಪ್ರಕರಣ!

Congress Guaratee
ಕರ್ನಾಟಕ35 mins ago

Congress Guarantee: ಗ್ಯಾರಂಟಿ ನಿಲ್ಲಿಸುವ ಮಾತು ಬೇಡ: ಕೈ ನಾಯಕರಿಗೆ ಎಚ್.ಎಂ ರೇವಣ್ಣ ಎಚ್ಚರಿಕೆ

Suresh Gopi
ದೇಶ36 mins ago

Suresh Gopi : ಪ್ರಮಾಣವಚನ ಸ್ವೀಕರಿಸಿದ ಒಂದೇ ಗಂಟೆಯೊಳಗೆ ಸಚಿವ ಸ್ಥಾನ ಬೇಡ ಎಂದ ಸುರೇಶ್​ ಗೋಪಿ!

Physical Abuse
ಮೈಸೂರು55 mins ago

Physical Abuse : ಪಿಕ್‌ ಅಪ್, ಡ್ರಾಪ್ ನೆಪದಲ್ಲಿ ಸಲುಗೆ; ಅಂಕಲ್ ಗಾಳಕ್ಕೆ ಸಿಲುಕಿದ ಬಾಲಕಿಯ ನರಳಾಟ

Election Commission
ಪ್ರಮುಖ ಸುದ್ದಿ60 mins ago

Election Commission : ಜುಲೈ 10ರಂದು 7 ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ

bhavani revanna prajwal revanna case
ಪ್ರಮುಖ ಸುದ್ದಿ1 hour ago

Prajwal Revanna Case: ಎಸ್‌ಐಟಿಯಿಂದ ಪ್ರಜ್ವಲ್‌ ರೇವಣ್ಣ ಕೋಣೆ ತಲಾಶ್‌, ಭವಾನಿ ತುಳಸಿ ಪೂಜೆ! ಅಲ್ಲೇ ಇದ್ದರೂ ಮುಖಾಮುಖಿಯಾಗದ ಅಮ್ಮ- ಮಗ

Niveditha Gowda Chandan Shetty Joint Pressmeet For The First Time
ಕಿರುತೆರೆ1 hour ago

Niveditha Gowda : ಡಿವೋರ್ಸ್‌ ಬಳಿಕ ಒಟ್ಟಾಗಿ ಸುದ್ದಿಗೋಷ್ಠಿ ಕರೆದ ಚಂದನ್-ನಿವೇದಿತಾ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ3 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ3 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ6 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ7 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ7 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ2 weeks ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌