ದಕ್ಷಿಣ ಕೊರಿಯಾದಲ್ಲಿ ಸೃಷ್ಟಿಯಾಗುತ್ತಿದೆ ಸ್ವಾವಲಂಬಿ ʼತೇಲುವ ನಗರʼ - Vistara News

ಲೈಫ್‌ಸ್ಟೈಲ್

ದಕ್ಷಿಣ ಕೊರಿಯಾದಲ್ಲಿ ಸೃಷ್ಟಿಯಾಗುತ್ತಿದೆ ಸ್ವಾವಲಂಬಿ ʼತೇಲುವ ನಗರʼ

ತನ್ನ ಅವಶ್ಯಕತೆಗಳನ್ನು ತಾನೇ ಪೂರೈಸಿಕೊಳ್ಳಬಲ್ಲ ʼತೇಲುವ ನಗರʼ ಒಂದನ್ನು ದಕ್ಷಿಣ ಕೊರಿಯಾ ನಿರ್ಮಿಸುತ್ತಿದೆ. ಮುಂದಿನ ವರ್ಷದಿಂದ ವಾಸಕ್ಕೆ ಸಿದ್ಧವಾಗಲಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಸುಮಾರು 12,000 ಜನ ವಾಸಿಸಬಲ್ಲ, ತನ್ನ ಬಹುತೇಕ ಅವಶ್ಯಕತೆಗಳನ್ನು ತಾನೇ ಪೂರೈಸಿಕೊಳ್ಳಬಲ್ಲ ಸುಸ್ಥಿರ “ತೇಲುವ ನಗರʼ ಒಂದನ್ನು ದಕ್ಷಿಣ ಕೊರಿಯಾ ಸಮುದ್ರದ ಮೇಲೆ ನಿರ್ಮಿಸುತ್ತಿದೆ. ನಿರೀಕ್ಷೆಯಂತೆ ನಿರ್ಮಾಣ ನಡೆದರೆ ಮುಂದಿನ ವರ್ಷವೇ ಸಿದ್ಧವಾಗಲಿದೆ.

ದಕ್ಷಿಣ ಕೊರಿಯಾದ ಎರಡನೇ ಅತಿ ದೊಡ್ಡ ನಗರ, ಅತಿದೊಡ್ಡ ಬಂದರು ನಗರ ಬುಸಾನ್‌ನಲ್ಲಿ ಸ್ಥಾಪನೆಯಾಗಲಿರುವ ಈ ನಗರದ ಹೆಸರು ಓಶಿಯಾನಿಕ್ಸ್‌ ಬುಸಾನ್.‌ ಇದರ ನಿರ್ಮಾಣಕ್ಕೆ ವಿಶ್ವಸಂಸ್ಥೆ ಕೂಡ ಕೈಜೋಡಿಸಲಿದೆ. ಸುಮಾರು 15.5 ಎಕರೆ ಜಾಗದಲ್ಲಿ ಇದು ಹರಡಿಕೊಳ್ಳಲಿದೆ.

ನಗರಗಳಲ್ಲಿ ಇರುವ ಎಲ್ಲವೂ ಇಲ್ಲಿರಲಿದೆ- ಅಪಾರ್ಟ್‌ಮೆಂಟ್‌ಗಳು, ಮಾರುಕಟ್ಟೆಗಳು, ಆಫೀಸ್‌ಗಳು, ಪಾರ್ಕ್‌ಗಳು, ಹಸಿರು ಇಂಧನ ಗ್ರಿಡ್‌ಗಳು ಇತ್ಯಾದಿ. ಈ ನಗರ ತನ್ನ ವಿದ್ಯುತ್‌ ಹಾಗೂ ನೀರಿನ ವ್ಯವಸ್ಥೆಯನ್ನು ತಾನೇ ನೋಡಿಕೊಳ್ಳಲಿದೆ.

ಡ್ಯಾನಿಶ್‌ ಆರ್ಕೆಟೆಕ್ಟ್‌ ಜೇರ್ಕ್‌ ಇಂಗೆಲ್ಸ್‌ ಎಂಬಾತ ಈ ಪರಿಕಲ್ಪನೆಯ ರೂವಾರಿ. 2019ರಲ್ಲಿ ಒಂದು ಟೆಡ್‌ ಟಾಕ್‌ನಲ್ಲಿ ತನ್ನ ಚಿಂತನೆಯನ್ನು ಈತ ಹಂಚಿಕೊಂಡಿದ್ದ. ಅವನ ಪ್ರಕಾರ, ಸಮುದ್ರದ ಅಲೆಗಳ ಶಕ್ತಿ, ಸಮುದ್ರದ ಒತ್ತಡ, ಶಾಖ ಹಾಗೂ ಸೌರ ಶಾಖ ಎಲ್ಲವನ್ನೂ ವಿದ್ಯುತ್‌ ಉತ್ಪಾದನೆಗೆ ಈ ನಗರ ಬಳಸಿಕೊಳ್ಳಲಿದೆ.

ಇಲ್ಲಿ ಬೀಳುವ ಮಳೆಯ ಒಂದು ಹನಿಯೂ ವ್ಯರ್ಥವಾಗದಂತೆ ಸಂಗ್ರಹಿಸಲಾಗುತ್ತದೆ. ಸಾಧ್ಯವಾದಷ್ಟು ತನ್ನ ಆಹಾರವನ್ನು ತಾನೇ ಬೆಳೆದುಕೊಳ್ಳಲಿದೆ. ಪ್ರತಿ ಮನೆಯ ಪ್ರತಿ ಕಸವೂ ರಿಸೈಕಲ್‌ಗೆ ಬಳಕೆಯಾಗುವಂತೆ ವ್ಯವಸ್ಥೆ. ಕಸ ಸೃಷ್ಟಿಯ ಪ್ರಮಾಣ ಹೊಂದಿಕೊಂಡು ಶುಲ್ಕ ವಿಧಿಸಲಾಗುತ್ತದೆ.

ಇನ್ನೂ ನೂರು ವರ್ಷಗಳ ಕಾಲ, ಸಮುದ್ರದ ಮಟ್ಟ ಏರಿದರೂ ಈ ನಗರಕ್ಕೆ ಏನೂ ಆಗಬಾರದು- ಪ್ಲಾನು ಹಾಗಿರಲಿದೆಯಂತೆ.

ನಗರವನ್ನು ಬಲವಾದ ಸ್ತಂಭಗಳ ಮೇಲೆ ನಿರ್ಮಿಸಲಾಗುತ್ತದೆ. ಆದರೆ ಕಟ್ಟಡಗಳನ್ನು ಹಗುರವಾದ ಮರ, ಬಿದಿರು, ಸುಣ್ಣದ ಕಲ್ಲಿನ ಬಯೋರಾಕ್‌ಗಳಿಂದ ನಿರ್ಮಿಸಲಾಗುತ್ತದಂತೆ. ಐದು ಮಹಡಿಗಿಂತ ಹೆಚ್ಚಿನ ಎತ್ತರದ ಕಟ್ಟಡಗಳಿಲ್ಲ. ಇಲ್ಲಿನ ಜನ ಕಾರು, ಬಸ್ಸು ಬಳಸುವುದಿಲ್ಲ, ಬದಲಾಗಿ ಬೈಸಿಕಲ್ಲುಗಳ ಮೇಲೆ ಓಡಾಡುತ್ತಾರೆ, ಅಥವಾ ವಾಕಿಂಗ್.‌
ಇಂಥದೇ ಹತ್ತಾರು ನಗರಗಳನ್ನು ಜಗತ್ತಿನ ವಿವಿಧ ಕಡೆ ನಿರ್ಮಿಸುವ ಚಿಂತನೆ ಇಂಗೆಲ್ಸ್‌ಗೆ ಇದೆ. ಸದ್ಯ ವಿಶ್ವಸಂಸ್ಥೆಯ ಯೋಜನೆಯಡಿ ನಿರಾಶ್ರಿತರ ವಸತಿ ಸೌಲಭ್ಯಕ್ಕಾಗಿ ಈ ನಗರ ಮೀಸಲಾಗಿರಲಿದೆ.

ಇದನ್ನೂ ಓದಿ: Explainer: ಹಿಂದಿ ರಾಷ್ಟ್ರಭಾಷೆ ಹೌದೋ, ಅಲ್ಲವೋ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಫ್ಯಾಷನ್

Star Cricket Theme Fashion: ಕ್ರಿಕೆಟ್‌ ಥೀಮ್‌ನಲ್ಲಿ ಬೆರಗುಗೊಳಿಸಿದ ನಟಿ ಜಾಹ್ನವಿ ಕಪೂರ್ ಫ್ಯಾಷನ್‌!

ಇತ್ತೀಚೆಗೆ ನಟಿ ಜಾಹ್ನವಿ ಕಪೂರ್ ಧರಿಸುತ್ತಿರುವ ಒಂದೊಂದು ಬಗೆಯ ಕ್ರಿಕೆಟ್‌ ಥೀಮ್‌ನ ಔಟ್‌ಫಿಟ್‌ಗಳಿಗೆ ಅಭಿಮಾನಿಗಳು ಫಿದಾ ಆಗತೊಡಗಿದ್ದಾರೆ. ಹಾಗಾದಲ್ಲಿ, ಅವರು ಧರಿಸಿರುವ ಔಟ್‌ಫಿಟ್‌ಗಳ್ಯಾವುವು? ಅವುಗಳಲ್ಲಿ ಹೇಗೆಲ್ಲಾ ಕಾಣಿಸಿಕೊಂಡರು? ಎಂಬುದರ ಕುರಿತಾಗಿ (Star Cricket Theme Fashion) ಇಲ್ಲಿದೆ ಡಿಟೇಲ್ಸ್.

VISTARANEWS.COM


on

Star Cricket Theam Fashion
ಚಿತ್ರಗಳು: ನಟಿ ಜಾಹ್ನವಿ ಕಪೂರ್, ಬಾಲಿವುಡ್‌ ನಟಿ
Koo

-ಶೀಲಾ ಸಿ. ಶೆಟ್ಟಿ, ಬೆಂಗಳೂರು
ಇತ್ತೀಚೆಗೆ ನಟಿ ಜಾಹ್ನವಿ ಕಪೂರ್ ಧರಿಸುತ್ತಿರುವ ಒಂದೊಂದು ಬಗೆಯ ಕ್ರಿಕೆಟ್‌ ಥೀಮ್‌ನ ಫ್ಯಾಷೆನಬಲ್‌ ಔಟ್‌ಫಿಟ್‌ಗಳಿಗೆ ಅಭಿಮಾನಿಗಳು ಫಿದಾ ಆಗತೊಡಗಿದ್ದಾರೆ. ಅಂದಹಾಗೆ, ಇದ್ಯಾಕೆ ಹೀಗೆ? ಎಂದುಕೊಳ್ಳುತ್ತಿದ್ದೀರಾ! ಅವರು ತಮ್ಮ ಮುಂಬರುವ ಕ್ರಿಕೆಟ್‌ ಆಧಾರಿತ ಸಿನಿಮಾ ಮಿಸ್ಟರ್ & ಮಿಸೆಸ್‌ ಮಾಹಿ ಪ್ರಮೋಷನ್‌ಗಾಗಿ ವಿಶೇಷವಾಗಿ ಕ್ರಿಕೆಟ್‌ ಥೀಮ್‌ ಫ್ಯಾಷನ್‌ವೇರ್‌ಗಳನ್ನು ಧರಿಸತೊಡಗಿದ್ದಾರೆ. ಇದು ಅವರ ಕ್ರಿಕೆಟ್‌ ಪ್ರೇಮದ ಜೊತೆಗೆ ಫ್ಯಾಷನ್‌ಗೂ ಸಾಥ್‌ ನೀಡಿದೆ (Star Cricket Theme Fashion) ಎನ್ನುತ್ತಿದ್ದಾರೆ ಫ್ಯಾಷನಿಸ್ಟ್‌ಗಳು.

Star Cricket Theam Fashion

ಕಟೌಟ್‌ ರೆಡ್‌ ಡ್ರೆಸ್‌ ಬ್ಯಾಕ್‌ ವಿನ್ಯಾಸದಲ್ಲಿ ಕ್ರಿಕೆಟ್‌ ಬಾಲ್‌ ಡಿಸೈನ್‌

ಜಾಹ್ನವಿಯ ವೆಸ್ಟರ್ನ್ ಶೈಲಿಯ ಕಟೌಟ್ ರೆಡ್‌ ಡ್ರೆಸ್‌ನ ಬ್ಯಾಕ್‌ ಡಿಸೈನ್‌ ಮಲ್ಟಿ ಕ್ರಿಕೆಟ್‌ ಬಾಲ್‌ಗಳನ್ನು ಜೋಡಿಸಿದಂತಹ ಸ್ಟ್ರಾಪ್‌ನಂತಹ ಡಿಸೈನ್‌ ಫ್ಯಾಷನ್‌ ಪ್ರೇಮಿಗಳನ್ನು ನಿಬ್ಬೆರಗಾಗಿಸಿತು.

Star Cricket Theam Fashion

ಸೀರೆಯಲ್ಲಿ ತ್ರಿಡಿ ಕ್ರಿಕೆಟ್‌ ಬಾಲ್‌ ಬಾರ್ಡರ್ ಚಿತ್ತಾರ

ಇನ್ನು, ಇವೆಂಟ್‌ನಲ್ಲಿ ಜಾಹ್ನವಿ ಧರಿಸಿದ್ದ ಎರಡು ಸೀರೆಗಳು ಕೂಡ ಕ್ರಿಕೆಟ್‌ ಕಾನ್ಸೆಪ್ಟ್ ಡಿಸೈನ್‌ ಹೊಂದಿದ್ದವು. ವಾರಾಣಾಸಿಯಲ್ಲಿ ಉಟ್ಟ ಸೀರೆ ಟ್ರೆಡಿಷನಲ್‌ ಆಗಿದ್ದರೂ, ಅದರ ಪಲ್ಲು ಕಂಪ್ಲೀಟ್‌ ಕ್ರಿಕೆಟ್‌ ಕ್ರೀಡಾಂಗಣದ ವರ್ಲಿ ಶೈಲಿಯ ಚಿತ್ತಾರವನ್ನು ಒಳಗೊಂಡಿತ್ತು. ಜಾಹ್ನವಿ ಧರಿಸಿದ್ದ, ಇನ್ನೊಂದು, ಜಾರ್ಜೆಟ್‌ ರೆಡ್‌ & ವೈಟ್‌ ಸ್ಟ್ರೈಪ್ಸ್ ಸೀರೆಯ ಬಾರ್ಡರ್‌, ಕ್ರಿಕೆಟ್‌ ಬಾಲ್‌ನ ತ್ರಿಡಿ ಚಿತ್ತಾರದಿಂದ ಸಿಂಗಾರಗೊಂಡಿತ್ತು. ಬಾಲ್‌ನ ಫ್ಯಾಬ್ರಿಕ್‌ನಂತೆ ಕಾಣಿಸುವ ಮೆಟೀರಿಯಲ್‌ನಿಂದ ಡಿಸೈನ್‌ ಮಾಡಲಾಗಿತ್ತು.

Star Cricket Theam Fashion

ಕ್ರಿಕೆಟ್‌ ಕ್ರಾಪ್ಡ್ ಜೆರ್ಸಿ ಟಾಪ್‌

ಜಾಹ್ನವಿ ಕ್ರೀಡಾಂಗಣಕ್ಕೆ ಭೇಟಿ ನೀಡಿದಾಗ, ಕ್ರಿಕೆಟಿಗರ ಜೆರ್ಸಿಯಂತೆ ಕಾಣುವ ಕ್ರಾಪ್‌ ಟಾಪ್‌ನಲ್ಲಿ ಕಾಣಿಸಿಕೊಂಡರು. ಎಲ್ಲದಕ್ಕಿಂತ ಹೆಚ್ಚಾಗಿ, ಅದರ ಮೇಲೆ ಬರ್ತ್ ಡೇ ನಂಬರ್‌ ಮೂಡಿಸಿದ್ದು, ಅವರ ಖುಷಿಗೆ ಕಾರಣವಾಗಿತ್ತು.

Star Cricket Theam Fashion

ಜೆನ್‌ ಜಿ ಸೆಳೆದ ಕ್ರಾಪ್ಡ್ ಟೀ ಶರ್ಟ್–ಸ್ಕರ್ಟ್

ಕಾಲೇಜ್‌ವೊಂದರ ಇವೆಂಟ್‌ನಲ್ಲಿ ವೈಟ್‌ ಹಾಗೂ ಬ್ಲ್ಯೂ ಮತ್ತು ರೆಡ್‌ ಸ್ಟ್ರೈಪ್ಸ್ ಇರುವ ಕಾಲರ್‌ ಕ್ರಾಪ್ಡ್ ಟೀ ಶರ್ಟ್ ಜೊತೆಗೆ ವೈಟ್‌ ಸ್ಕರ್ಟ್ ಮಿಕ್ಸ್ ಮಾಡಿರುವ ಕ್ರಿಕೆಟ್‌ ಥೀಮ್‌ ಡ್ರೆಸ್‌ ಅಲ್ಲಿನ ಯಂಗ್‌ಸ್ಟರ್ಸ್‌ಗಳನ್ನು ಸೆಳೆಯಿತು.

Star Cricket Theam Fashion

ಬಾಡಿಕಾನ್‌ ಡ್ರೆಸ್‌ ಮೇಲೆ ಬ್ಯಾಟಿಂಗ್‌ ಸಿಕ್ವೀನ್ಸ್

ಜಾಹ್ನವಿಯ ಹೈ ಫ್ಯಾಷನ್‌ ಸ್ಟೈಲಿಂಗ್‌ನ ಶಿಮ್ಮರ್‌ನ ಬಾಡಿಕಾನ್‌ ಡ್ರೆಸ್‌ ಮೇಲೆ ಇದ್ದ ಬ್ಯಾಟಿಂಗ್‌ ಸಿಕ್ವೀನ್ಸ್ ಪ್ರಿಂಟ್ಸ್ ಚಿತ್ತಾರ ಹೈ ಫ್ಯಾಷನ್‌ ಲುಕ್‌ಗೆ ಸಾಥ್‌ ನೀಡಿತ್ತು.

ಇದನ್ನೂ ಓದಿ: Wedding Fashion: ವೆಡ್ಡಿಂಗ್‌ ಫ್ಯಾಷನ್‌ನಲ್ಲಿ ಟ್ರೆಂಡಿಯಾಗಿವೆ ಈ ಮಿರಮಿರ ಮಿನುಗುವ ಲೆಹೆಂಗಾಗಳು!

ಜಾಹ್ನವಿ ಕ್ರಿಕೆಟ್‌ ಥೀಮ್‌ ಆಕ್ಸೆಸರೀಸ್‌

ಕ್ರಿಕೆಟ್‌ ಬಾಲ್‌ ಆಕಾರದ ಕ್ಲಚ್‌, ಹ್ಯಾಂಡ್‌ ಪರ್ಸ್ ಸೇರಿದಂತೆ ನಾನಾ ಆಕ್ಸೆಸರೀಸ್‌ ಅವರನ್ನು ಮತ್ತಷ್ಟು ಕ್ರಿಕೆಟ್‌ ಪ್ರೇಮಿಯನ್ನಾಗಿಸಿತ್ತು. ಹೀಗೆ ಜಾಹ್ನವಿಯ ನಾನಾ ಬಗೆಯ ಕ್ರಿಕೆಟ್‌ ಥೀಮ್‌ ಔಟ್‌ಫಿಟ್‌ ಹಾಗೂ ಆಕ್ಸೆಸರೀಸ್‌ಗಳು, ಕ್ರಿಕೆಟ್‌ ಪ್ರೇಮಿಗಳನ್ನು ಮಾತ್ರವಲ್ಲ, ಫ್ಯಾಷನ್‌ ಪ್ರಿಯರನ್ನು ಸೆಳೆದವು ಎಂದು ವಿಶ್ಲೇಷಿಸಿದ್ದಾರೆ ಫ್ಯಾಷನ್‌ ವಿಮರ್ಶಕರು.

Continue Reading

ಆರೋಗ್ಯ

Jackfruit Seed: ಹಲಸಿನ ಹಣ್ಣು ತಿಂದು ಬೀಜ ಎಸೆಯದಿರಿ; ಬೀಜದಿಂದಾಗುವ ಆರೋಗ್ಯ ಲಾಭಗಳು ಹಲವು!

ಈಗ ಎಲ್ಲೆಲ್ಲೂ ರಸ್ತೆ ಬದಿಗಳಲ್ಲೆಲ್ಲ ಹಲಸು ಮಾವಿನದೇ ಕಾರುಬಾರು. ಮಾವಿನ ಹಣ್ಣಿನಷ್ಟು ಹಲಸಿನಹಣ್ಣಿಗೆ ಮರ್ಯಾದೆ ಸಿಗದಿದ್ದರೂ ಹಲಸಿನ ಹಣ್ಣಿಗೂ ಅದರದ್ದೇ ಆದ ಸ್ಥಾನವಿದೆ. ಹೊಟ್ಟೆ ತುಂಬಿಸಬಲ್ಲ, ಸಾಕಷ್ಟು ಪೋಷಕಾಂಶಗಳಿಂದ ಸಮೃದ್ಧವಾಗಿರುವ, ಸಿಹಿಯಾಗಿ ರುಚಿಯಾಗಿರುವ ಹಲಸಿನ ಹಣ್ಣನ್ನು ತಂದು ತಿಂದು ಅದರ ಬೀಜವನ್ನು ಎಸೆಯುತ್ತೀರಾದರೆ, ಸ್ವಲ್ಪ ತಡೆಯಿರಿ. ಹಲಸಿನ ಹಣ್ಣಿನಲ್ಲಿರುವಂತೆಯೇ ಬೀಜದಲ್ಲೂ (Jackfruit seed) ಸಾಕಷ್ಟು ಪೋಷಕಾಂಶಗಳಿವೆ.

VISTARANEWS.COM


on

Jackfruit Seed: ಹಲಸಿನ ಹಣ್ಣು ತಿಂದು ಬೀಜ ಎಸೆಯದಿರಿ; ಬೀಜದಿಂದಾಗುವ ಆರೋಗ್ಯ ಲಾಭಗಳು ಹಲವು!
Koo

ಬೇಸಿಗೆ ಬಂದ ತಕ್ಷಣ ಸಂತಸ ತರುವ ವಿಚಾರಗಳ ಪೈಕಿ ಹಲಸು, ಮಾವುಗಳಿಗೂ ಕ್ರೆಡಿಟ್‌ ಸಲ್ಲಬೇಕು. ಯಾಕೆಂದರೆ, ಹಲಸಿನ ಹಣ್ಣಿಗೂ ಮಾವಿನ ಹಣ್ಣಿಗೂ ಕಾಯಬೇಕೆಂದರೆ ನಾವು ಬೇಸಿಗೆಗೆ ಕಾಯಲೇಬೇಕು. ಈಗ ಎಲ್ಲೆಲ್ಲೂ ರಸ್ತೆ ಬದಿಗಳಲ್ಲೆಲ್ಲ ಹಲಸು ಮಾವಿನದೇ ಕಾರುಬಾರು. ಮಾವಿನ ಹಣ್ಣಿನಷ್ಟು ಹಲಸಿನಹಣ್ಣಿಗೆ ಮರ್ಯಾದೆ ಸಿಗದಿದ್ದರೂ ಹಲಸಿನ ಹಣ್ಣಿಗೂ ಅದರದ್ದೇ ಆದ ಸ್ಥಾನವಿದೆ. ಹೊಟ್ಟೆ ತುಂಬಿಸಬಲ್ಲ, ಸಾಕಷ್ಟು ಪೋಷಕಾಂಶಗಳಿಂದ ಸಮೃದ್ಧವಾಗಿರುವ, ಸಿಹಿಯಾಗಿ ರುಚಿಯಾಗಿರುವ ಹಲಸಿನ ಹಣ್ಣನ್ನು ತಂದು ತಿಂದು ಅದರ ಬೀಜವನ್ನು ಎಸೆಯುತ್ತೀರಾದರೆ, ಸ್ವಲ್ಪ ತಡೆಯಿರಿ. ಹಲಸಿನ ಹಣ್ಣಿನಲ್ಲಿರುವಂತೆಯೇ ಬೀಜದಲ್ಲೂ ಸಾಕಷ್ಟು ಪೋಷಕಾಂಶಗಳಿವೆ. ಆರೋಗ್ಯದ ಲಾಭಗಳಿವೆ. ಹಲಸಿನ ಹಣ್ಣು ವಿಟಮಿನ್‌ ಬಿ ಹಾಗೂ ಪೊಟಾಶಿಯಂನಿಂದ ಸಮೃದ್ಧವಾಗಿದ್ದರೆ, ಅದರ ಬೀಜಗಳಲ್ಲಿ ಥೈಮೀನ್‌, ರೈಬೋಫ್ಲೇವಿನ್‌ ಕಣ್ಣು, ಚರ್ಮ ಹಾಗೂ ಕೂದಲ ಆರೋಗ್ಯಕ್ಕೆ ಬಹಳ ಉತ್ತಮ. ಬೀಜಗಳಲ್ಲಿ ಝಿಂಕ್‌, ಕಬ್ಬಿಣಾಂಶ, ಕ್ಯಾಲ್ಶಿಯಂ, ತಾಮ್ರ, ಪೊಟಾಶಿಯಂ ಹಾಗೂ ಮೆಗ್ನೀಶಿಯಂ ಮತ್ತಿತರ ಖನಿಜ ಲವಣಗಳಿಂದ ಸಮೃದ್ಧವಾಗಿದೆ. ಇವು ಬ್ಯಾಕ್ಟೀರಿಯಾಗಳಿಂದಾಗುವ ಸಮಸ್ಯೆಗಳಿಗೆ ಉತ್ತಮ ಆಹಾರವಾಗಿದ್ದು, ಇವುಗಳಿಂದಾಗುವ ಸಮಸ್ಯೆಗಳನ್ನು ಕಡಿಮೆ ಮಾಡುವ ತಾಕತ್ತನ್ನು ಹೊಂದಿದೆ. ಬನ್ನಿ, ಹಲಸಿನ ಹಣ್ಣಿನ ಬೀಜದಿಂದ ಯಾವೆಲ್ಲ ಆರೋಗ್ಯದ ಲಾಭಗಳಿವೆ (Jackfruit seed) ಎಂಬುದನ್ನು ನೋಡೋಣ.

Skin Care

ಚರ್ಮದ ಸುಕ್ಕಿಗೆ

ಚರ್ಮದಲ್ಲಿ ಸುಕ್ಕಿನ ಸಮಸ್ಯೆಯೇ. ಸಣ್ಣ ವಯಸ್ಸಿನಲ್ಲಿಯೇ ವಯಸ್ಸಿಗೆ ಮೀರಿದ ಈ ಸಮಸ್ಯೆ ನಿಮಗಿದೆ ಎಂದಾದಲ್ಲಿ ಈ ಬೀಜಕ್ಕೆ ಸ್ವಲ್ಪ ಹಾಲು ಸೇರಿಸಿ ನುಣುಪಾಗಿ ಅರೆದು ಅದರ ಪೇಸ್ಟನ್ನು ಮುಖದ ಚರ್ಮದ ಮೇಲೆ ಹಚ್ಚುವುದರಿಂದ ಚರ್ಮ ನುಣುಪಾಗುತ್ತದೆ. ಚರ್ಮಕ್ಕೆ ಹೊಸ ಕಾಂತಿ ಬರುತ್ತದೆ. ನಿರಿಗೆಗಳು ಕಡಿಮೆಯಾಗುತ್ತದೆ. ನಿತ್ಯವೂ ಹೀಗೆ ಮಾಡುವುದರಿಂದ ಒಳ್ಲೆಯ ಫಲಿತಾಂಶ ಕಾಣಬಹುದು.

Stress Reduction Tea Benefits

ಮಾನಸಿಕ ಒತ್ತಡಕ್ಕೆ

ಹಲಸಿನ ಹಣ್ಣಿನ ಬೀಜದಲ್ಲಿ ಸಾಕಷ್ಟು ಪ್ರೊಟೀನ್‌ ಹಾಗೂ ಮೈಕ್ರೋ ನ್ಯೂಟ್ರಿಯೆಂಟ್‌ಗಳು ಇರುವುದರಿಂದ ಇವು ಮಾನಸಿಕ ಒತ್ತಡ ಹಾಗೂ ಸಾಕಷ್ಟು ಚರ್ಮದ ಸಮಸ್ಯೆಗಳನ್ನು ವಾಸಿ ಮಾಡುವಲ್ಲಿ ನೆರವಾಗುತ್ತದೆ. ಹಲಸಿನ ಬೀಜಗಳನ್ನು ಬೇಯಿಸಿ ಅಥವಾ ಅಡುಗೆಯಲ್ಲಿ ಬಳಸಿ ಸೇವಿಸುವುದರಿಂದ ಈ ಉಪಯೋಗ ಪಡೆಯಬಹುದು.

Woman anemia image Coriander Benefits

ಅನೀಮಿಯಾಕ್ಕೆ

ಹಲಸಿನ ಹಣ್ಣಿನ ಬೀಜವನ್ನು ಸೇವಿಸುವುದರಿಂದ ದೇಹಕ್ಕೆ ಬೇಕಾದ ಕಬ್ಬಿಣಾಂಶ ದೊರೆತು, ಅನೀಮಿಯಾದಂತಹ ರಕ್ತಹೀನತೆಯ ಸಮಸ್ಯೆ ಕಡಿಮೆಯಾಗುತ್ತದೆ. ದೇಹದಲ್ಲಿ ರಕ್ತ ತುಂಬಿಕೊಳ್ಳುತ್ತದೆ. ಕಬ್ಬಿನಾಂಶವು ಹಿಮೋಗ್ಲೋಬಿನ್‌ ಹೆಚ್ಚಳಕ್ಕೆ ಬೇಕಾದ ಪ್ರಮುಖ ಪೋಷಕಾಂಶವಾಗಿರುವುದರಿಂದ ದೇಹಕ್ಕೆ ಶಕ್ತಿ ಸಾಮರ್ಥ್ಯವನ್ನು ನೀಡುವಲ್ಲಿ ಇದು ಮುಖ್ಯ ಪಾತ್ರ ವಹಿಸುತ್ತದೆ.

Close-up human eye, lens, cornea and brown iris.

ಕಣ್ಣಿನ ಆರೋಗ್ಯಕ್ಕೆ ಹಾಗೂ ಕೂದಲ ಪೋಷಣೆಗೆ

ಹಲಸಿನ ಬೀಜದಲ್ಲಿ ವಿಟಮಿನ್‌ ಎ ಸಮೃದ್ಧವಾಗಿರುವುದರಿಂದ ಕಣ್ಣಿನ ಆರೋಗ್ಯಕ್ಕೆ ಇದು ಅತ್ಯುತ್ತಮ ಆಹಾರ. ಅಷ್ಟೇ ಅಲ್ಲ, ಕೂದಲಿಗೂ ಇದು ಅತ್ಯುತ್ತಮ ಪೋಷಣೆ ನೀಡುತ್ತದೆ.

healthy internal organs of human digestive system

ಜೀರ್ಣಕ್ರಿಯೆ ಸಮಸ್ಯೆಗೆ

ತಿಂದದನ್ನು ಸರಿಯಾಗಿ ಜೀರ್ಣವಾಗದೆ ಸಮಸ್ಯೆಯಾಗುತ್ತಿದೆ ಎಂದಾದಲ್ಲಿ ಹಲಸಿನ ಹಣ್ಣಿನ ಬೀಜದ ಪುಡಿಯನ್ನು ಸೇವಿಸಿದರೆ ತಕ್ಷಣವೇ ಪರಿಹಾರ ಸಿಗುತ್ತದೆ. ಬೀಜಗಳನ್ನು ಒಣಗಿಸಿ ಪುಡಿ ಮಾಡಿ ಇಟ್ಟುಕೊಂಡರೆ ಇಂಥ ಸಂದರ್ಭಗಳಲ್ಲಿ ಬಳಸಬಹುದು. ಅಥವಾ ಮಲಬದ್ಧತೆಯ ಸಮಸ್ಯೆಯಿದ್ದರೆ, ಹಲಸಿನ ಬೀಜವನ್ನು ಬೇಯಿಸಿ ತಿನ್ನುವ ಮೂಲಕ ಸಮಸ್ಯೆಯಿಂದ ಪಾರಾಗಬಹುದು.

ಇದನ್ನೂ ಓದಿ: Drinks for Summer: ಬೇಸಿಗೆಯಲ್ಲಿ ತಂಪಾಗಿರಬೇಕೆ? ಈ ಪೇಯಗಳನ್ನು ತಪ್ಪದೇ ಕುಡಿಯಿರಿ

ಮಾಂಸಖಂಡಗಳ ಬಲವರ್ಧನೆಗೆ

ಹಲಸಿನ ಹಣ್ಣಿನ ಬೀಜದಲ್ಲಿ ಅಧಿಕ ಗುಣಮಟ್ಟದ ಪ್ರೊಟೀನ್‌ ಇರುವುದರಿಂದ ಇದು ಮಾಂಸಖಂಡಗಳ ಬಲವರ್ಧನೆಗೆ ಅತ್ಯಂತ ಒಳ್ಳೆಯದು. ಇದರಲ್ಲಿರುವ ಪ್ರೊಟೀನ್‌ ಕೊಲೆಸ್ಟೆರಾಲ್‌ ರಹಿತವಾಗಿರುವುದರಿಂದ ಜಿಮ್‌ಗೆ ಹೋಗಿ ದೇಹದಾರ್ಢ್ಯತೆ ಬೆಳೆಸುವ ಮಂದಿಗೂ, ಫಿಟ್‌ನೆಸ್‌ ಪ್ರಿಯರಿಗೂ ಇದು ಒಳ್ಳೆಯ ಆಹಾರ.

Continue Reading

Latest

Diabetes Management Tips: ಈ ಏಳು ಪಾನೀಯಗಳನ್ನು ಸೇವಿಸಿ, ಮಧುಮೇಹ ನಿಯಂತ್ರಿಸಿ

ನೈಸರ್ಗಿಕವಾಗಿ ದೇಹದಲ್ಲಿ ಇನ್ಸುಲಿನ್ ಉತ್ಪಾದನೆಯನ್ನು ಹೆಚ್ಚಿಸಲು ಆಯುರ್ವೇದ ಸೂಚಿಸುವ ಏಳು ಗಿಡಮೂಲಿಕೆ ಪಾನೀಯಗಳು ಇವೆ. ಇವುಗಳನ್ನು ನಿಯಮಿತವಾಗಿ ಸೇವಿಸುವುದರಿಂದ ಮಧುಮೇಹವನ್ನು (Diabetes Management Tips) ನಿಯಂತ್ರಿಸಬಹುದು.

VISTARANEWS.COM


on

By

Diabetes Management Tips
Koo

ಇತ್ತೀಚಿನ ದಿನಗಳಲ್ಲಿ ಬಹುತೇಕ ಜನರನ್ನು ಕಾಡುವ ಕಾಯಿಲೆ ರಕ್ತದೊತ್ತಡ (blood pressure) ಮತ್ತು ಮಧುಮೇಹ (diabetes). ರಕ್ತದೊತ್ತಡವಾದರೆ ಬಹುಬೇಗನೆ ತನ್ನ ಇರುವಿಕೆಯನ್ನು ಸೂಚಿಸುತ್ತದೆ. ಆದರೆ ಮಧುಮೇಹ ಹೆಚ್ಚಿನವರಿಗೆ ಗೊತ್ತೇ ಆಗುವುದಿಲ್ಲ. ಮಧುಮೇಹದಿಂದ ಬಳಲುತ್ತಿರುವವರು ನೀವಾಗಿದ್ದರೆ ನೈಸರ್ಗಿಕವಾಗಿ ದೇಹದಲ್ಲಿ ಇನ್ಸುಲಿನ್ (insulin) ಉತ್ಪಾದನೆಯನ್ನು ಹೆಚ್ಚಿಸುವ ಹಲವು ಆಯುರ್ವೇದ ಗಿಡಮೂಲಿಕೆಯ (Ayurvedic herbal) ಪಾನೀಯಗಳಿವೆ.

ಮಧುಮೇಹವು ಇಂದು ಜಗತ್ತಿನಾದ್ಯಂತ ಲಕ್ಷಾಂತರ ಜನರನ್ನು ಕಾಡುತ್ತಿರುವ ಸಾಮಾನ್ಯ ಆರೋಗ್ಯ ಸಮಸ್ಯೆಯಾಗಿದೆ. ಆರೋಗ್ಯಕರ ಜೀವನ ನಡೆಸಲು ಮಧುಮೇಹದ ಲಕ್ಷಣಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು ಅತ್ಯಗತ್ಯ. ಪುರಾತನ ಭಾರತೀಯ ವೈದ್ಯಕೀಯ ಪದ್ಧತಿಯಾದ ಆಯುರ್ವೇದವು ಇನ್ಸುಲಿನ್ ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸಮತೋಲನಗೊಳಿಸಲು ನೈಸರ್ಗಿಕ ಚಿಕಿತ್ಸೆಗಳನ್ನು ಶಿಫಾರಸು ಮಾಡುತ್ತದೆ. ಮಧುಮೇಹದ ರೋಗಲಕ್ಷಣಗಳನ್ನು ಪರಿಣಾಮಕಾರಿಯಾಗಿ ನಿಭಾಯಿಸಲು ಸಹಾಯ ಮಾಡುವ ಏಳು ಪ್ರಸಿದ್ಧ ಆಯುರ್ವೇದ ಪಾನೀಯಗಳಿವೆ.

ಆಯುರ್ವೇದವು ಒಟ್ಟಾರೆ ಆರೋಗ್ಯವನ್ನು ಹೆಚ್ಚಿಸಲು ನೈಸರ್ಗಿಕ ಪದಾರ್ಥಗಳ ಬಳಕೆಯನ್ನು ಪ್ರೋತ್ಸಾಹಿಸುತ್ತದೆ. ಆಯುರ್ವೇದದ ಪಾನೀಯಗಳು ಔಷಧೀಯ ಗಿಡಮೂಲಿಕೆಗಳು, ಮಸಾಲೆಗಳು ಮತ್ತು ಹಣ್ಣುಗಳನ್ನು ದೈನಂದಿನ ಜೀವನದಲ್ಲಿ ಸೇರಿಸಲು ನೆಚ್ಚಿನ ವಿಧಾನವಾಗಿದೆ. ಇದು ಕೇವಲ ರುಚಿಕರವಲ್ಲ ಆದರೆ ಸುಧಾರಿತ ಸೇರಿದಂತೆ ಆರೋಗ್ಯ ಪ್ರಯೋಜನಗಳಿಂದ ಕೂಡಿದೆ.


ದಾಲ್ಚಿನ್ನಿ ಮತ್ತು ಮೆಂತ್ಯ

ದಾಲ್ಚಿನ್ನಿ ಮತ್ತು ಮೆಂತ್ಯ ಮಧುಮೇಹ ವಿರೋಧಿ ಗುಣಲಕ್ಷಣಗಳನ್ನು ಹೊಂದಿದೆ. ದಾಲ್ಚಿನ್ನಿ ಮತ್ತು ಮೆಂತ್ಯಯೊಂದಿಗೆ ಒಂದು ಕಪ್ ಚಹಾ ಮಾಡಿ ಸೇವಿಸಿದರೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುತ್ತದೆ ಮತ್ತು ಇನ್ಸುಲಿನ್ ಹೆಚ್ಚಿಸುತ್ತದೆ. ಉತ್ಕರ್ಷಣ ನಿರೋಧಕಗಳಿಂದ ತುಂಬಿರುವ ಈ ಪದಾರ್ಥಗಳು ಮಧುಮೇಹ ರೋಗಲಕ್ಷಣಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಸಹಾಯ ಮಾಡುತ್ತದೆ.

ಹಾಗಲಕಾಯಿ

ಹಾಗಲಕಾಯಿಯನ್ನು ಆಯುರ್ವೇದದಲ್ಲಿ ರಕ್ತದಲ್ಲಿನ ಸಕ್ಕರೆಯನ್ನು ಕಡಿಮೆ ಮಾಡುವ ಪರಿಣಾಮಕ್ಕಾಗಿ ಪ್ರಶಂಸಿಸಲಾಗುತ್ತದೆ. ಇದರ ರಸವನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ರಕ್ತದಲ್ಲಿನ ಗ್ಲೂಕೋಸ್ ಮಟ್ಟವನ್ನು ಸಮತೋಲನಗೊಳಿಸಬಹುದು. ನೈಸರ್ಗಿಕವಾಗಿ ಇನ್ಸುಲಿನ್ ಉತ್ಪಾದನೆಯನ್ನು ಉತ್ತೇಜಿಸಬಹುದು.


ನೆಲ್ಲಿಕಾಯಿ

ಪೋಷಕಾಂಶಗಳು ಮತ್ತು ಉತ್ಕರ್ಷಣ ನಿರೋಧಕಗಳಿಂದ ತುಂಬಿರುತ್ತದೆ. ಆಮ್ಲಾ ಜ್ಯೂಸ್ ಮಧುಮೇಹವನ್ನು ನಿರ್ವಹಿಸಲು ಪ್ರಸಿದ್ಧವಾದ ಆಯುರ್ವೇದ ಟಾನಿಕ್ ಆಗಿದೆ. ವಿಟಮಿನ್ ಸಿ ಯಲ್ಲಿ ಸಮೃದ್ಧವಾಗಿರುವ ಆಮ್ಲಾವು ಮೇದೋಜ್ಜೀರಕ ಗ್ರಂಥಿಯ ಕಾರ್ಯಗಳನ್ನು ಮತ್ತು ಇನ್ಸುಲಿನ್ ಸ್ರವಿಸುವಿಕೆಯನ್ನು ಸುಧಾರಿಸುತ್ತದೆ. ನಿಯಮಿತ ಸೇವನೆಯು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಸಹಾಯ ಮಾಡುತ್ತದೆ.

ಅರಿಶಿನ

ಅರಿಶಿನವು ಹಲವಾರು ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಮಲಗುವ ಮುನ್ನ ಅರಿಶಿನ ಬೆರೆಸಿದ ಹಾಲನ್ನು ಕುಡಿಯುವುದು ಉರಿಯೂತವನ್ನು ಕಡಿಮೆ ಮಾಡುತ್ತದೆ, ಇನ್ಸುಲಿನ್ ಮಟ್ಟವನ್ನು ಹೆಚ್ಚಿಸುತ್ತದೆ ಮತ್ತು ಉತ್ತಮ ನಿದ್ರೆಗೆ ಕಾರಣವಾಗುತ್ತದೆ. ಅರಿಶಿನದಲ್ಲಿರುವ ಅಗತ್ಯ ಸಂಯುಕ್ತವಾದ ಕರ್ಕ್ಯುಮಿನ್ ಸ್ವಾಭಾವಿಕವಾಗಿ ಮಧುಮೇಹದ ಲಕ್ಷಣಗಳನ್ನು ನಿರ್ವಹಿಸಬಲ್ಲದು.

ಬೇವಿನ ಎಲೆ

ಔಷಧೀಯ ಗುಣಗಳು ಸಮೃದ್ಧವಾಗಿರುವ ಬೇವಿನ ಎಲೆಗಳು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸಮತೋಲನಗೊಳಿಸುತ್ತದೆ. ಸ್ವಲ್ಪ ಕಹಿಯಾಗಿದ್ದರೂ, ಬೇವಿನ ಎಲೆಯ ಚಹಾವು ಪರಿಣಾಮಕಾರಿ ಆಯುರ್ವೇದ ಪಾನೀಯವಾಗಿದ್ದು ಅದು ರಕ್ತದಲ್ಲಿನ ಗ್ಲೂಕೋಸ್ ಅನ್ನು ಕಡಿಮೆ ಮಾಡುತ್ತದೆ ಮತ್ತು ಇನ್ಸುಲಿನ್ ಸೂಕ್ಷ್ಮತೆಯನ್ನು ಹೆಚ್ಚಿಸುತ್ತದೆ.


ನಿಂಬೆ ಮತ್ತು ಶುಂಠಿ

ನಿಂಬೆ ಮತ್ತು ಶುಂಠಿ ಆರೋಗ್ಯದ ಪರಿಣಾಮಗಳಿಗೆ ಹೆಸರುವಾಸಿಯಾಗಿದೆ. ಶುಂಠಿ ಮತ್ತು ನಿಂಬೆಯ ಬೆಚ್ಚಗಿನ ಪಾನೀಯವು ದೇಹವನ್ನು ನಿರ್ವಿಷಗೊಳಿಸುತ್ತದೆ. ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸಮತೋಲನಗೊಳಿಸುತ್ತದೆ. ಇದು ನೈಸರ್ಗಿಕವಾಗಿ ಇನ್ಸುಲಿನ್ ಉತ್ಪಾದನೆ ಮಾಡುತ್ತದೆ.

ಇದನ್ನೂ ಓದಿ: FSSAI Warning: ನೀವು ತಿನ್ನುವ ಮಾವಿನ ಹಣ್ಣು ಸುರಕ್ಷಿತವಾಗಿದೆಯೇ?

ತ್ರಿಫಲ

ಆಯುರ್ವೇದ ಗಿಡಮೂಲಿಕೆಗಳ ಮಿಶ್ರಣವು ಮೂರು ಹಣ್ಣುಗಳನ್ನು ಒಳಗೊಂಡಿದೆ: ಆಮ್ಲಾ, ಬಿಭಿಟಕಿ ಮತ್ತು ಹರಿತಕಿ. ತ್ರಿಫಲಾ ಚಹಾವು ಒಟ್ಟಾರೆ ಆರೋಗ್ಯ ಮತ್ತು ಜೀರ್ಣಕಾರಿ ಯೋಗಕ್ಷೇಮವನ್ನು ಉತ್ತೇಜಿಸುತ್ತದೆ. ನಿಯಮಿತ ಸೇವನೆಯು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿರಿಸುತ್ತದೆ. ಇನ್ಸುಲಿನ್ ಸಂವೇದನೆಯನ್ನು ಹೆಚ್ಚಿಸುತ್ತದೆ ಮತ್ತು ಕರುಳಿನ ಆರೋಗ್ಯಕ್ಕೆ ಸಹಾಯ ಮಾಡುತ್ತದೆ.

Continue Reading

ಆರೋಗ್ಯ

Health Tips Kannada: ಸನ್‌ಸ್ಕ್ರೀನ್‌ ಕುರಿತು ನಿಮಗೆಷ್ಟು ಗೊತ್ತು?

ಬಿಸಿಲಿಗೆ ಹೊರಗೆ ಹೋಗುವಾಗ ಸನ್‌ಸ್ಕ್ರೀನ್‌ (Sunscreen) ಹಚ್ಚಿಕೊಳ್ಳುವ ಸಲಹೆ ಸಾಮಾನ್ಯವಾಗಿ ಎಲ್ಲರಿಂದ ಬರುತ್ತದೆ. ಆದರೆ ಸೌಂದರ್ಯ ತಜ್ಞರಿಂದ ಬರುವ ಸಲಹೆಗಳಲ್ಲಿ ಬಹಳಷ್ಟನ್ನು ಪಾಲಿಸಲು ಸಾಧ್ಯವಿಲ್ಲ ಎಂದೇ ಭಾವಿಸುತ್ತೇವೆ. ಆದರೆ ಬಿರುಬೇಸಿಗೆಯಲ್ಲಿ ನಿಯಮಿತವಾಗಿ ಸನ್‌ಸ್ಕ್ರೀನ್‌ ಬಳಕೆ ಮಾಡುವುದರಿಂದ ಚರ್ಮ ಸುಟ್ಟು ಕೆಂಪಾಗುವುದು, ಸುಕ್ಕಾಗುವುದು, ಕಪ್ಪು ಕಲೆಗಳು ಬರುವಂಥ ಬಹಳಷ್ಟು ತೊಂದರೆಗಳನ್ನು ತಪ್ಪಿಸಬಹುದು. ಆದರೆ ಈ ಬಗ್ಗೆ ಹಲವಾರು ತಪ್ಪು ತಿಳಿವಳಿಕೆಗಳು ಚಾಲ್ತಿಯಲ್ಲಿವೆ. ಇವು ಏನು ಎಂಬ ಮಾಹಿತಿ (Health Tips Kannada) ಇಲ್ಲಿದೆ.

VISTARANEWS.COM


on

Health Tips Kannada
Koo

ಸನ್‌ಸ್ಕ್ರೀನ್‌ (Sunscreen) ಕುರಿತಾಗಿ ಬಹಳಷ್ಟು ತಪ್ಪು ಕಲ್ಪನೆಗಳು ಚಾಲ್ತಿಯಲ್ಲಿವೆ. ಸೂರ್ಯನ ಬಿಸಿಲಲ್ಲಿರುವ ಅತಿನೇರಳೆ ಕಿರಣಗಳು ಚರ್ಮಕ್ಕೆ ಹಾನಿ ಮಾಡುವುದನ್ನು ತಡೆಗಟ್ಟುವ ಉದ್ದೇಶ ಇದನ್ನು ಬಳಸುವುದರ ಹಿಂದಿದೆ. ತೀವ್ರ ಬಿಸಿಲಿಗೆ ಹೋಗುವಾಗ ಸನ್‌ಬ್ಲಾಕ್‌ ಜೊತೆಗೆ ಉದ್ದ ತೋಳಿನ ವಸ್ತ್ರಗಳನ್ನು ಧರಿಸುವುದು ಇನ್ನೂ ಒಳ್ಳೆಯದು.
ಬಿಸಿಲಿಗೆ ಹೊರಗೆ ಹೋಗುವಾಗ ಸನ್‌ಸ್ಕ್ರೀನ್‌ ಹಚ್ಚಿಕೊಳ್ಳುವ ಸಲಹೆ ಸಾಮಾನ್ಯವಾಗಿ ಎಲ್ಲರಿಂದ ಬರುತ್ತದೆ. ಆದರೆ ಸೌಂದರ್ಯ ತಜ್ಞರಿಂದ ಬರುವ ಸಲಹೆಗಳಲ್ಲಿ ಬಹಳಷ್ಟನ್ನು ಪಾಲಿಸಲು ಸಾಧ್ಯವಿಲ್ಲ ಎಂದೇ ಭಾವಿಸುತ್ತೇವೆ. ಆದರೆ ಬಿರುಬೇಸಿಗೆಯಲ್ಲಿ ನಿಯಮಿತವಾಗಿ ಸನ್‌ಸ್ಕ್ರೀನ್‌ ಬಳಕೆ ಮಾಡುವುದರಿಂದ ಚರ್ಮ ಸುಟ್ಟು ಕೆಂಪಾಗುವುದು, ಸುಕ್ಕಾಗುವುದು, ಕಪ್ಪು ಕಲೆಗಳು ಬರುವಂಥ ಬಹಳಷ್ಟು ತೊಂದರೆಗಳನ್ನು ತಪ್ಪಿಸಬಹುದು. ಆದರೆ ಈ ಬಗ್ಗೆ ಹಲವಾರು ತಪ್ಪು ತಿಳುವಳಿಕೆಗಳು ಚಾಲ್ತಿಯಲ್ಲಿವೆ. ಏನವು ಎಂಬುದನ್ನು (Health Tips Kannada) ನೋಡೋಣ.

Woman hand apply sunscreen

ಮೋಡವಿರುವಾಗ ಸನ್‌ಸ್ಕ್ರೀನ್‌ ಬೇಡ

ಹಾಗೇನಿಲ್ಲ. ಮೋಡವಿರುವಾಗ ಸೂರ್ಯ ಕಾಣುವುದಿಲ್ಲ ಎನ್ನುವುದು ನಿಜವಾದರೂ, ಮೋಡದಡಿಗಿನ ಬಿಸಿಲು ಸಹ ಸಾಕಷ್ಟು ಸುಡುತ್ತದೆ. ತೀರ ಮಳೆ ಬರುವಾಗಿನ ಸಂದರ್ಭವನ್ನು ಹೊರತು ಪಡಿಸಿ, ಮೋಡ ಇರುವಾಗಲೂ ಚರ್ಮ ಸುಡಬಹುದು. ಹಾಗಾಗಿ ಸನ್‌ಸ್ಕ್ರೀನ್‌ ಕ್ರೀಮ್‌, ಸ್ಪ್ರೇ, ಸ್ಟಿಕ್‌ ಮುಂತಾದ ಯಾವುದನ್ನಾದರೂ ಬಳಸುವುದು ಒಳ್ಳೆಯದು.

Woman Putting Sunblock on Back

ಕಪ್ಪು ಬಣ್ಣದವರಿಗೆ ಸನ್‌ಸ್ಕ್ರೀನ್‌ ಬೇಡ

ಬಿಳಿ ಬಣ್ಣದವರ ಚರ್ಮ ಬಿಸಿಲಿಗೆ ಸುಟ್ಟು ಕೆಂಪಾಗುವುದು ಎದ್ದು ಕಾಣುತ್ತದೆ. ಆನಂತರ ಕಪ್ಪಾಗುವುದು ಸಹಜ. ಇದರರ್ಥ ಚರ್ಮದ ಬಣ್ಣ ಕಪ್ಪಾಗಿದ್ದರೆ ಬಿಸಿಲು ಸುಡುವುದಿಲ್ಲ ಎಂದಲ್ಲ, ಸುಟ್ಟಿದ್ದು ಕಾಣುವುದಿಲ್ಲ ಅಷ್ಟೆ. ಕಪ್ಪು ಚರ್ಮದಲ್ಲಿ ಮೆಲನಿನ್‌ ಇರುವುದು ಸ್ವಲ್ಪ ಹೆಚ್ಚು ಎನ್ನುವುದು ನಿಜ. ಆದರೆ ಅವರಿಗೂ ಸನ್‌ಬ್ಲಾಕ್‌ ಬೇಕು. ಯಾವುದೇ ಬಣ್ಣದವರಿಗಾದರೂ ಬಿಸಿಲಿಗೆ ಚರ್ಮ ಸುಡುವುದರಲ್ಲಿ ವ್ಯತ್ಯಾಸವಿಲ್ಲ.

ವಿಟಮಿನ್‌ ಡಿ ಕೊರತೆ

ಸದಾ ಕಾಲ ಸನ್‌ಸ್ಕ್ರೀನ್‌ ಹಚ್ಚಿಕೊಂಡೇ ಇದ್ದರೆ ವಿಟಮಿನ್‌ ಡಿ ಕೊರತೆಯಾಗಬಹುದು ಎಂಬುದು ಹಲವರ ವಾದ. ಆದರೆ ಹಾಗೇನಿಲ್ಲ. 365 ದಿನವೂ ಸನ್‌ಸ್ಕ್ರೀನ್‌ ಹಚ್ಚಿಕೊಂಡಿದ್ದರೆ, ವಿಟಮಿನ್‌ ಡಿ ಉತ್ಪಾದನೆಗೆ ಕೊಂಚ ಹಿನ್ನಡೆ ಆಗುವ ಸಾಧ್ಯತೆ ಇಲ್ಲದಿಲ್ಲ. ಆದರೆ ಸಾಧಾರಣವಾಗಿ ಯಾರೂ ಆ ಪ್ರಮಾಣದಲ್ಲಿ ಸನ್‌ಸ್ಕ್ರೀನ್‌ ಹಚ್ಚಿಕೊಳ್ಳುವುದಿಲ್ಲ.

ಮೇಕಪ್‌ನಲ್ಲಿ ಇರುವಷ್ಟು ಎಸ್‌ಪಿಎಫ್‌ ಸಾಕಾಗುತ್ತದೆ

ಇಲ್ಲ, ಸಾಕಾಗುವುದಿಲ್ಲ. ಬಹಳಷ್ಟು ಬಾರಿ ಮೇಕಪ್‌ಗಳಲ್ಲಿ 30 ಎಸ್‌ಪಿಎಫ್‌ ಸನ್‌ಬ್ಲಾಕ್‌ ಸೇರಿಕೊಂಡಿರುವುದು ಹೌದು. ಆದರೆ ಸನ್‌ಸ್ಕೀನ್‌ನಷ್ಟು ಧಾರಾಳವಾಗಿ ಮೇಕಪ್‌ ಬಳಕೆಯಾಗುವುದಿಲ್ಲ. ಹಾಗಾಗಿ ಇದರಲ್ಲಿರುವ ಸನ್‌ಬ್ಲಾಕ್‌ ನಂಬಿಕೊಳ್ಳುವ ಬದಲು, ಪ್ರತ್ಯೇಕ್ ಸನ್‌ಸ್ಕ್ರೀನ್‌ ಉಪಯೋಗಿಸುವುದು ಉತ್ತಮ.

Woman Applying Sunscreen on Face

ಹೆಚ್ಚು ಎಸ್‌ಪಿಎಫ್‌ ಎಂದರೆ ಹೆಚ್ಚು ರಕ್ಷಣೆ

ಹಾಗಲ್ಲ, ಹೆಚ್ಚಿನ ಎಸ್‌ಪಿಎಫ್‌ ಇದ್ದರೆ ರಕ್ಷಣೆಯ ಪ್ರಮಾಣ ಹೆಚ್ಚು ಎಂದೇನಿಲ್ಲ. ಬದಲಿಗೆ, ಸಮಯ ದೀರ್ಘ ಎಂದಾಗಬಹುದು. ಉದಾ, 30 ಎಸ್‌ಪಿಎಫ್‌ ಇದ್ದರೆ ಎಷ್ಟು ಅತಿನೇರಳೆ ಕಿರಣಗಳನ್ನು ತಡೆಯುತ್ತದೋ 60 ಎಸ್‌ಪಿಎಫ್‌ ಇದ್ದರೆ ಅದರ ದುಪ್ಪಟ್ಟು ಅತಿನೇರಳೆ ಕಿರಣಗಳನ್ನು ತಡೆಯುತ್ತದೆ ಎಂದು ಅರ್ಥವಲ್ಲ. ಇದು ಎಷ್ಟು ದೀರ್ಘ ಕಾಲ ಯುವಿ ಕಿರಣಗಳನ್ನು ತಡೆಯುತ್ತದೆ ಎಂಬುದನ್ನು ಸೂಚಿಸುತ್ತದೆ ಹೊರತು, ಎಷ್ಟು ಶೇಕಡಾ ತಡೆಯುತ್ತದೆ ಎಂದಲ್ಲ.

ವಾಟರ್‌ಪ್ರೂಫ್‌ ಇರುತ್ತದೆ

ಬಹಳಷ್ಟು ಕಂಪೆನಿಗಳು ಹಾಗೆಂದು ಹೇಳಿಕೊಳ್ಳುತ್ತವೆ. ಆದರೆ ವೃತ್ತಿಪರ ಈಜುಗಾರರು ಬಳಸುವಂಥ ಕೆಲವು ವಾಟರ್‌ ರೆಸಿಸ್ಟೆಂಟ್‌ ಸನ್‌ಬ್ಲಾಕ್‌ಗಳ ಹೊರತಾಗಿ, ಸಂಪೂರ್ಣ ವಾಟರ್‌ಪ್ರೂಫ್‌ ಇರುವುದು ಬಹಳ ಕಡಿಮೆ. ಹಾಗಾಗಿ ನೀರು, ಬೆವರು ಮುಂತಾದವುಗಳಿಂದ ಒದ್ದೆಯಾದಾಗ, ಒರೆಸಿದರೆ ಮತ್ತೆ ಸನ್‌ಸ್ಕ್ರೀನ್‌ ಬೇಕಾಗುತ್ತದೆ.

ಇದನ್ನೂ ಓದಿ: Hair Conditioner: ರಾಸಾಯನಿಕ ಹೇರ್‌ ಕಂಡೀಷನರ್‌ ಬಿಡಿ; ಈ 5 ನೈಸರ್ಗಿಕ ಹೇರ್ ಕಂಡೀಷನರ್ ಬಳಸಿ

ಎಲ್ಲರಿಗೂ ಒಂದೇ ಥರದ್ದು ಸಾಕು

ಇದೂ ತಪ್ಪು. ಒಂದೊಂದು ರೀತಿಯ ಚರ್ಮದವರಿಗೆ ಒಂದೊಂದು ರೀತಿಯ ಸನ್‌ ಬ್ಲಾಕ್‌ ಬೇಕಾಗಬಹುದು. ಎಣ್ಣೆ ಚರ್ಮದವರಿಗೆ ಜೆಲ್‌ ಸ್ವರೂಪದ ಸನ್‌ ಬ್ಲಾಕ್‌ಗಳು ಹೆಚ್ಚು ಉಪಯುಕ್ತ. ಇದರಿಂದ ಚರ್ಮದ ಸೂಕ್ಷ್ಮ ರಂಧ್ರಗಳು ಮುಚ್ಚಿಕೊಳ್ಳುವುದಿಲ್ಲ. ಒಣ ಚರ್ಮದವರಿಗೆ ಮಾಯಿಶ್ಚರೈಸರ್‌ ಜೊತೆಗಿರುವ ಸನ್‌ಸ್ಕ್ರೀನ್‌ ಅನುಕೂಲಕರ. ಸೂಕ್ಷ್ಮ ಚರ್ಮದವರು ಬೇಬಿ ಸನ್‌ಬ್ಲಾಕ್‌ ಉಪಯೋಗಿಸುವುದು ಕ್ಷೇಮ.

Continue Reading
Advertisement
Bomb Threat
ಪ್ರಮುಖ ಸುದ್ದಿ11 mins ago

Bomb Threat : ಗೃಹ ಸಚಿವಾಲಯಕ್ಕೆ ಬಾಂಬ್ ಬೆದರಿಕೆ; ದೆಹಲಿಯಲ್ಲಿ ಆತಂಕ

ಕರ್ನಾಟಕ18 mins ago

CM’s Bengaluru City Rounds: ರಾಜಕಾಲುವೆ ಒತ್ತುವರಿ ಯಾರೇ ಮಾಡಿದ್ರೂ ಮುಲಾಜಿಲ್ಲದೆ ತೆರವು: ಸಿಎಂ ಎಚ್ಚರಿಕೆ

IPL 2024
ಕ್ರಿಕೆಟ್33 mins ago

IPL 2024 : ಅಮ್ಮನನ್ನು ಆಸ್ಪತ್ರೆಯಲ್ಲಿ ಮಲಗಿಸಿ ಕೆಕೆಆರ್​ ಪರ ಕ್ವಾಲಿಫೈಯರ್ ಆಡಿದ ಆಫ್ಘನ್​ ಕ್ರಿಕೆಟಿಗ

Star Cricket Theam Fashion
ಫ್ಯಾಷನ್40 mins ago

Star Cricket Theme Fashion: ಕ್ರಿಕೆಟ್‌ ಥೀಮ್‌ನಲ್ಲಿ ಬೆರಗುಗೊಳಿಸಿದ ನಟಿ ಜಾಹ್ನವಿ ಕಪೂರ್ ಫ್ಯಾಷನ್‌!

Harish Poonja Govt responsible for disaster if MLA Harish Poonja is arrested says BY Vijayendra
ರಾಜಕೀಯ41 mins ago

Harish Poonja: ಶಾಸಕ ಹರೀಶ್‌ ಪೂಂಜಾರನ್ನು ಬಂಧಿಸಿದರೆ ಮುಂದಾಗುವ ಅನಾಹುತಕ್ಕೆ ಸರ್ಕಾರವೇ ಹೊಣೆ: ಗುಡುಗಿದ ವಿಜಯೇಂದ್ರ

Virat kohli
ಕ್ರೀಡೆ58 mins ago

IPL 2024 : ಕೊಹ್ಲಿಯನ್ನು ಹೊಗಳಿ ಆರ್​​ಸಿಬಿಗೆ ವಿದಾಯ ಹೇಳಿದ ವಿಜಯ್​ ಮಲ್ಯ

WhatsApp Update
ತಂತ್ರಜ್ಞಾನ1 hour ago

WhatsApp Update: ವಾಟ್ಸ್ ಆಪ್ ಬಳಕೆದಾರರಿಗೆ ಸಂತಸದ ಸುದ್ದಿ; ಮೆಸೆಜ್‌ಗೆ ಸಂಬಂಧಿಸಿ ಮಹತ್ವದ ಅಪ್‌ಡೇಟ್‌!

Jackfruit Seed: ಹಲಸಿನ ಹಣ್ಣು ತಿಂದು ಬೀಜ ಎಸೆಯದಿರಿ; ಬೀಜದಿಂದಾಗುವ ಆರೋಗ್ಯ ಲಾಭಗಳು ಹಲವು!
ಆರೋಗ್ಯ1 hour ago

Jackfruit Seed: ಹಲಸಿನ ಹಣ್ಣು ತಿಂದು ಬೀಜ ಎಸೆಯದಿರಿ; ಬೀಜದಿಂದಾಗುವ ಆರೋಗ್ಯ ಲಾಭಗಳು ಹಲವು!

Blink Movie in half centuru with good in OTT
ಸ್ಯಾಂಡಲ್ ವುಡ್1 hour ago

Blink Movie: ಹಾಫ್ ಸೆಂಚುರಿ ಬಾರಿಸಿದ ʻಬ್ಲಿಂಕ್ ʼ ಸಿನಿಮಾ; ಒಟಿಟಿಯಲ್ಲಿಯೂ ʻಬಹುಪರಾಕ್ʼ!

Money Guide
ಮನಿ-ಗೈಡ್1 hour ago

Money Guide: ಜನಪ್ರಿಯವಾಗುತ್ತಿದೆ ʼಈಗ ಖರೀದಿಸಿ, ನಂತರ ಪಾವತಿಸಿʼ ಆಯ್ಕೆ: ಏನಿದು ಬಿಎನ್‌ಪಿಎಲ್‌? ಬಳಕೆ ಹೇಗೆ? ಇಲ್ಲಿದೆ ವಿವರ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ12 hours ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 day ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು1 day ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ2 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ3 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ3 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ3 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ5 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ5 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

ಟ್ರೆಂಡಿಂಗ್‌