ಉಮೇಶ್​ ಪಾಲ್​ ಹತ್ಯೆ ಸಂಚು ನನ್ನದೇ, ನನಗೆ ಉಗ್ರರೊಂದಿಗೆ ಸಂಪರ್ಕವಿದೆ; ಸತ್ಯ ಬಾಯ್ಬಿಟ್ಟ ಅತೀಕ್ ಅಹ್ಮದ್​​ - Vistara News

ದೇಶ

ಉಮೇಶ್​ ಪಾಲ್​ ಹತ್ಯೆ ಸಂಚು ನನ್ನದೇ, ನನಗೆ ಉಗ್ರರೊಂದಿಗೆ ಸಂಪರ್ಕವಿದೆ; ಸತ್ಯ ಬಾಯ್ಬಿಟ್ಟ ಅತೀಕ್ ಅಹ್ಮದ್​​

ತನಗೆ ಪಾಕಿಸ್ತಾನದ ಗುಪ್ತಚರ ಇಲಾಖೆ ಐಎಸ್​ಐ ಮತ್ತು ಉಗ್ರ ಸಂಘಟನೆ ಲಷ್ಕರೆ ತೊಯ್ಬಾ ಜತೆಗೂ ಸಂಪರ್ಕವಿದೆ ಎಂಬುದನ್ನು ಕೂಡ ಅತೀಕ್ ಅಹ್ಮದ್​ ಪೊಲೀಸರಿಗೆ ನೀಡಿದ ರಿಮ್ಯಾಂಡ್​ ಪ್ರತಿಯಲ್ಲಿ ತಿಳಿಸಿದ್ದಾನೆ.

VISTARANEWS.COM


on

Gangster politician Atiq Ahmed confessed about planning Umesh Pal murder
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಜೈಲಿನಲ್ಲಿರುವ ಉತ್ತರ ಪ್ರದೇಶದ ಗ್ಯಾಂಗ್​ಸ್ಟರ್​/ರಾಜಕಾರಣಿ ಅತೀಕ್ ಅಹ್ಮದ್ (Atiq Ahmed) ಪೊಲೀಸರಿಗೆ ರಿಮ್ಯಾಂಡ್​ ಪ್ರತಿ (ವಿಚಾರಣೆಗೆ ಲಿಖಿತ ಉತ್ತರ)ಯನ್ನು ನೀಡಿದ್ದು, ವಕೀಲ ಉಮೇಶ್​ ಪಾಲ್​ ಹತ್ಯೆಗೆ ತಾನು ಜೈಲಿನಲ್ಲಿ ಇದ್ದುಕೊಂಡೇ ಸಂಚು ರೂಪಿಸಿದ್ದಾಗಿ ಒಪ್ಪಿಕೊಂಡಿದ್ದಾನೆ. ಅಷ್ಟೇ ಅಲ್ಲ, ಉಮೇಶ್​ ಪಾಲ್​ ಜತೆಗೆ ಇಬ್ಬರು ಗನ್​ಮೆನ್​ಗಳಿದ್ದಾರೆ ಎಂಬ ವಿಷಯವನ್ನು ನನ್ನ ಪತ್ನಿ ನನಗೆ ತಿಳಿಸಿದ್ದಳು. ಅವರನ್ನೂ ಹತ್ಯೆ ಮಾಡಲೂ ನಾವು ಯೋಜನೆ ರೂಪಿಸಿದ್ದೆವು’ ಎಂದು ಹೇಳಿದ್ದಾನೆ. ಈ ಮೂಲಕ ಉಮೇಶ್​ ಪಾಲ್​ ಹತ್ಯೆಯ ಮುಖ್ಯ ಸಂಚುಕೋರ ತಾನು ಮತ್ತು ತನ್ನ ಪತ್ನಿ, ಮಕ್ಕಳೆಲ್ಲ ನನಗೆ ಸಹಾಯ ಮಾಡಿದ್ದರು ಎಂದು ತಿಳಿಸಿದ್ದಾನೆ. ಆತ ಈ ರಿಮ್ಯಾಂಡ್​ ಪ್ರತಿಯನ್ನು ಏಪ್ರಿಲ್​ 12ರಂದು ಪೊಲೀಸರಿಗೆ ನೀಡಿದ್ದ, ಅದರ ಮರುದಿನ ಅಂದರೆ ಏಪ್ರಿಲ್​ 13ರಂದು ಅವನ ಪುತ್ರ ಅಸಾದ್ ಅಹ್ಮದ್​ ಎನ್​ಕೌಂಟರ್ ಆಗಿದೆ.

ಬರೀ ಇಷ್ಟೇ ಅಲ್ಲ, ‘ನನಗೆ ಪಾಕಿಸ್ತಾನದ ಗುಪ್ತಚರ ಇಲಾಖೆ ಐಎಸ್​ಐ ಜತೆ ಮತ್ತು ಉಗ್ರಸಂಘಟನೆ ಲಷ್ಕರೆ ತೊಯ್ಬಾದ ಜತೆ ಸಂಪರ್ಕವಿದೆ. ಹೀಗಾಗಿ ನನಗೆ ಯಾವತ್ತೂ ಶಸ್ತ್ರಾಸ್ತ್ರಗಳ ಕೊರತೆ ಆಗಿಯೇ ಇರಲಿಲ್ಲ. ಪಾಕಿಸ್ತಾನದಿಂದ ಡ್ರೋನ್​ಗಳ ಮೂಲಕ ಶಸ್ತ್ರಾಸ್ತ್ರಗಳನ್ನು ಪಂಜಾಬ್​ ಗಡಿಗೆ ಕಳಿಸಲಾಗುತ್ತಿತ್ತು. ಆ ಡ್ರೋನ್ ಅಲ್ಲಿ ಕೆಡವಿ ಹೋಗುತ್ತಿತ್ತು. ಸ್ಥಳೀಯವಾಗಿ ಇರುವ ನಮ್ಮ ಗ್ಯಾಂಗ್​​ನವರು ಅದನ್ನು ಸಂಗ್ರಹ ಮಾಡಿ ಇಟ್ಟುಕೊಂಡು, ನಮಗೆ ಒದಗಿಸುತ್ತಿದ್ದರು. ಹಾಗೇ, ಜಮ್ಮು -ಕಾಶ್ಮೀರದ ಉಗ್ರರಿಗೂ ಹೀಗೇ ಶಸ್ತ್ರಾಸ್ತ್ರ ಪೂರೈಕೆ ಆಗುತ್ತದೆ ಎಂದೂ ತಿಳಿಸಿದ್ದಾನೆ.

‘ನನ್ನ ಪತ್ನಿ ಶೈಷ್ಟಾ ಪರ್ವೀನ್​ಗೆ ಹೇಳಿ ಜೈಲಿನಲ್ಲಿದ್ದ ನನಗೆ ಒಂದು ಸೆಲ್​ಫೋನ್​ ಮತ್ತು ಸಿಮ್​ ಕಾರ್ಡ್​​ನ್ನು ತರಿಸಿಕೊಂಡಿದ್ದೆ. ಇದಕ್ಕೆ ಅಲ್ಲಿಯೇ ಇದ್ದ ಒಬ್ಬ ಅಧಿಕಾರಿ ಸಹಾಯ ತೆಗೆದುಕೊಳ್ಳಲಾಗಿತ್ತು. ಹಾಗೇ ನನ್ನ ತಮ್ಮ ಅಶ್ರಾಫ್​ಗೂ ಒಂದು ಮೊಬೈಲ್​ ತಂದುಕೊಡಲಾಗಿತ್ತು. ಈ ಮೊಬೈಲ್ ಮೂಲಕವೇ ಸಂದೇಶ ಪಡೆಯುತ್ತಿದ್ದೆ ಮತ್ತು ಸಂದೇಶ ರವಾನೆ ಮಾಡುತ್ತಿದ್ದೆ. ಉಮೇಶ್​ ಪಾಲ್​ ಜತೆಗೆ ಇದ್ದ ಗನ್​ಮೆನ್​ಗಳನ್ನು ಕೊಲ್ಲುವುದೂ ಪೂರ್ವಯೋಜಿತವೇ ಆಗಿತ್ತು ಎಂಬಿತ್ಯಾದಿ ವಿಷಯಗಳನ್ನು ಹೇಳಿದ್ದಾರೆ. ಸದ್ಯ ಆತನ ಪತ್ನಿ ಶೈಷ್ಟಾ ತಲೆಮರೆಸಿಕೊಂಡಿದ್ದಾಳೆ.

2005ರಲ್ಲಿ ಬಹುಜನ ಸಮಾಜ ಪಾರ್ಟಿ ಶಾಸಕ ರಾಜು ಪಾಲ್ ಹತ್ಯೆಯಾಗಿತ್ತು. ಆ ಹತ್ಯೆಯ ಪ್ರಮುಖ ಆರೋಪಿ ಅತೀಕ್​ ಅಹ್ಮದ್​ ಜೈಲಲ್ಲಿ ಇದ್ದ. ಇನ್ನು ರಾಜು ಪಾಲ್​ ಹತ್ಯೆಯ ಪ್ರಮುಖ ಸಾಕ್ಷಿಯಾಗಿದ್ದ ಉಮೇಶ್ ಪಾಲ್​​ರನ್ನು 2006ರಲ್ಲಿ ಅಪಹರಣ ಮಾಡಿ, ಸಾಕ್ಷಿ ಹೇಳದಂತೆ ಬೆದರಿಸಲಾಗಿತ್ತು. ಆ ಕೇಸ್​ನಲ್ಲೂ ಅತೀಕ್ ಅಹ್ಮದ್​ ಪ್ರಮುಖ ಆರೋಪಿ ಎಂಬುದು ಇತ್ತೀಚೆಗಷ್ಟೇ ಕೋರ್ಟ್ ನೀಡಿರುವ ತೀರ್ಪು. ಇನ್ನು ಉಮೇಶ್ ಪಾಲ್​ ಇದೇ ವರ್ಷ ಫೆಬ್ರವರಿಯಲ್ಲಿ ಹತ್ಯೆಗೀಡಾಗಿದ್ದರು. ಅವರ ಹತ್ಯೆಯಲ್ಲಿ ಪಾಲ್ಗೊಂಡಿದ್ದ ಶೂಟರ್​ಗಳನ್ನೆಲ್ಲ ಪೊಲೀಸರು ಎನ್​ಕೌಂಟರ್ ಮಾಡಿದ್ದಾರೆ. ಉಮೇಶ್ ಪಾಲ್ ಹತ್ಯೆಯ ದಿನ ಕಾರಿನಲ್ಲಿದ್ದ ಅತೀಕ್ ಅಹ್ಮದ್ ಪುತ್ರ ಅಸಾದ್ ಅಹ್ಮದ್ ಕೂಡ ಎನ್​ಕೌಂಟರ್​ನಲ್ಲಿ ಸತ್ತಿದ್ದಾನೆ. ಇನ್ನು ಉಮೇಶ್​ ಪಾಲ್ ಹತ್ಯೆಗೆ ಸಂಚು ರೂಪಿಸಿದ್ದು ತಾನೇ ಎಂದು ಅತೀಕ್ ಅಹ್ಮದ್ ಈಗ ಒಪ್ಪಿಕೊಂಡಿದ್ದಾನೆ.

ಇದನ್ನೂ ಓದಿ: Asad Encounter: ಮಗ ಎನ್​ಕೌಂಟರ್​ ಆದ ಸುದ್ದಿ ಕೇಳಿ ಕೋರ್ಟ್​​ನಲ್ಲಿಯೇ ದೊಡ್ಡದಾಗಿ ಅಳಲು ಶುರುಮಾಡಿದ ಅತೀಕ್ ಅಹ್ಮದ್​

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ದೇಶ

Karan Bhushan Singh: ಬಿಜೆಪಿ ಅಭ್ಯರ್ಥಿಯ ಬೆಂಗಾವಲು ವಾಹನ ಡಿಕ್ಕಿಯಾಗಿ ಇಬ್ಬರ ಸಾವು

Karan Bhushan Singh: ಉತ್ತರ ಪ್ರದೇಶದ ಗೊಂಡಾದಲ್ಲಿ ಕೈಸರ್ಗಂಜ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಸಂಸದ ಮತ್ತು ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ)ನ ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಪುತ್ರ ಕರಣ್ ಭೂಷಣ್ ಸಿಂಗ್ ಅವರ ಬೆಂಗಾವಲು ಪಡೆಗೆ ಸೇರಿದ ಟೊಯೊಟಾ ಫಾರ್ಚೂನರ್ ಎಸ್‌ಯುವಿ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ 17 ವರ್ಷದ ಯುವಕ ಸೇರಿದಂತೆ ಇಬ್ಬರು ಮೃತಪಟ್ಟಿದ್ದಾರೆ.

VISTARANEWS.COM


on

Karan Bhushan Singh
Koo

ಲಕ್ನೋ: ಪುಣೆಯಲ್ಲಿ 17 ವರ್ಷದ ಅಪ್ರಾಪ್ತ ಬಾಲಕನೊಬ್ಬ ಕುಡಿದು ಐಷಾರಾಮಿ ಪೋರ್ಷೆ ಕಾರನ್ನು ಚಲಾಯಿಸಿ ಇಬ್ಬರ ಸಾವಿಗೆ ಕಾರಣವಾದ ಘಟನೆ ಹಸಿಯಾಗಿರುವಾಗಲೇ ಅಂತಹದ್ದೇ ಮತ್ತೊಂದು ಘಟನೆ ಉತ್ತರ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಗೊಂಡಾದಲ್ಲಿ ಕೈಸರ್ಗಂಜ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಸಂಸದ ಮತ್ತು ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ)ನ ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Sharan Singh) ಅವರ ಪುತ್ರ ಕರಣ್ ಭೂಷಣ್ ಸಿಂಗ್ (Karan Bhushan Singh) ಅವರ ಬೆಂಗಾವಲು ಪಡೆಗೆ ಸೇರಿದ ಟೊಯೊಟಾ ಫಾರ್ಚೂನರ್ ಎಸ್‌ಯುವಿ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ 17 ವರ್ಷದ ಯುವಕ ಸೇರಿದಂತೆ ಇಬ್ಬರು ಮೃತಪಟ್ಟಿದ್ದಾರೆ.

ಗೊಂಡಾದ ಕರ್ನಲ್‌ಗಂಜ್-ಹುಜೂರ್‌ಪುರ ರಸ್ತೆಯ ಬೈಕುಂತ್ ಪದವಿ ಕಾಲೇಜು ಬಳಿ ಅಪಘಾತ ಸಂಭವಿಸಿದ್ದು, ಮೃತರನ್ನು 17 ವರ್ಷದ ರೆಹಾನ್ ಮತ್ತು ಆತನ ಸಂಬಂಧಿ 24 ವರ್ಷದ ಶಹಜಾದ್ ಎಂದು ಗುರುತಿಸಲಾಗಿದೆ. ಇನ್ನೋರ್ವ ವ್ಯಕ್ತಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಘಟನೆಯ ವಿವರ

ಈ ಬಗ್ಗೆ ಎಫ್ಐಆರ್ ದಾಖಲಿಸಿರುವ ಚಂದಾ ಬೇಗಂ ಮಾತನಾಡಿ, ʼʼಇಂದು (ಮೇ 29) ಬೆಳಿಗ್ಗೆ 9 ಗಂಟೆ ಸುಮಾರಿಗೆ ತನ್ನ ಮಗ ರೆಹಾನ್ ಮತ್ತು ಸೋದರಳಿಯ ಶಹಜಾದ್ ಔಷಧ ಖರೀದಿಸಲು ಬೈಕ್‌ನಲ್ಲಿ ಹೋಗುತ್ತಿದ್ದಾಗ ಎದುರಿನಿಂದ ವೇಗವಾಗಿ ಬಂದ ಟೊಯೊಟಾ ಫಾರ್ಚೂನರ್ ಎಸ್‌ಯುವಿ ಡಿಕ್ಕಿ ಹೊಡೆದಿದೆ. ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೋರ್ವ ವ್ಯಕ್ತಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆʼʼ ಎಂದು ಹೇಳಿದ್ದಾರೆ.

ಕೂಡಲೇ ಸ್ಥಳಕ್ಕೆ ಆಗಮಿಸಿದ ಸ್ಥಳೀಯರು ಮತ್ತು ಮೃತರ ಕುಟುಂಬದವರು ನ್ಯಾಯಕ್ಕಾಗಿ ಪ್ರತಿಭಟನೆ ನಡೆಸಿದರು. ಕ್ರಮ ಕೈಗೊಂಡ ಪೊಲೀಸರು ಅಪಘಾತ ನಡೆದ ನಂತರ ಪರಾರಿಯಾಗಿದ್ದ ಟೊಯೊಟಾ ಫಾರ್ಚೂನರ್‌ನ ಚಾಲಕನ್ನು ಬಂಧಿಸಿದ್ದಾರೆ. ಅಪಘಾತ ನಡೆದ ಸಮಯದಲ್ಲಿ ಕರಣ್ ಭೂಷಣ್ ಸಿಂಗ್ ಅವರು ವಾಹನದಲ್ಲಿ ಇದ್ದರಾ ಎನ್ನುವ ಬಗ್ಗೆ ಇದುವರೆಗೆ ಮಾಹಿತಿ ಲಭಿಸಿಲ್ಲ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ಕೈಗೆತ್ತಿಕೊಂಡಿದ್ದಾರೆ.

ಕೈಸರ್‌ಗಂಜ್‌ ಲೋಕಸಭೆ ಕ್ಷೇತ್ರದಿಂದ ಕಳೆದ ಮೂರು ಚುನಾವಣೆಗಳಲ್ಲಿ ಸ್ಪರ್ಧಿಸಿದ್ದ ಬ್ರಿಜ್‌ ಭೂಷಣ್‌ ಸಿಂಗ್‌ ಅವರ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಬಂದಿರುವ ಕಾರಣ ಈ ಬಾರಿ ಬಿಜೆಪಿ ಅವರಿಗೆ ಟಿಕೆಟ್‌ ನೀಡಿರಲಿಲ್ಲ. ಅವರ ಬದಲಾಗಿ ಪುತ್ರ ಕರಣ್ ಭೂಷಣ್ ಸಿಂಗ್ ಅವರಿಗೆ ಮಣೆ ಹಾಕಲಾಗಿತ್ತು. ಬ್ರಿಜ್​ ಭೂಷಣ್​ ಶರಣ್​ ಸಿಂಗ್​ ಈ ಹಿಂದೆ ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷರಾಗಿದ್ದರು. ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದ ಮೇಲೆ ಅವರನ್ನು ಬಂಧಿಸುವಂತೆ ಒತ್ತಾಯಿಸಿ ನೂರಾರು ಮಹಿಳಾ ಕುಸ್ತಿಪಟುಗಳು ಪ್ರತಿಭಟನೆ ನಡೆಸಿದ್ದರು. ಇದಾದ ಬಳಿಕ ಅವರನ್ನು ಕುಸ್ತಿ ಫೆಡರೇಷನ್ ಅಧ್ಯಕ್ಷ ಸ್ಥಾನದಿಂದ ಕೈಬಿಡಲಾಗಿತ್ತು.

ಇದನ್ನೂ ಓದಿ: Brij Bhushan: ಮಗನ ನಾಮನಿರ್ದೇಶನದ ವೇಳೆ 10 ಸಾವಿರಕ್ಕೂ ಅಧಿಕ ಬೆಂಬಲಿಗರೊಂದಿಗೆ ಶಕ್ತಿ ಪ್ರದರ್ಶಿಸಿದ ಬ್ರಿಜ್ ಭೂಷಣ್

ಕರಣ್ ಭೂಷಣ್ ಸಿಂಗ್ ಹಿನ್ನೆಲೆ

2019ರ ಲೋಕಸಭಾ ಚುನಾವಣೆಯಲ್ಲಿ, ಬ್ರಿಜ್ ಭೂಷಣ್ ಅವರು ಕೈಸರ್‌ಗಂಜ್‌ನಿಂದ ಚುನಾವಣೆಯಲ್ಲಿ ಎರಡು ಲಕ್ಷ ಮತಗಳಿಂದ ಗೆದ್ದಿದ್ದರು. ಕರಣ್ ಭೂಷಣ್ ಸಿಂಗ್ ಉತ್ತರ ಪ್ರದೇಶದ ಕುಸ್ತಿ ಸಂಘದ ಅಧ್ಯಕ್ಷರಾಗಿದ್ದಾರೆ. ಗೊಂಡಾದ ನವಾಬ್‌ಗಂಜ್‌ನಲ್ಲಿರುವ ಸಹಕಾರಿ ಗ್ರಾಮಾಭಿವೃದ್ಧಿ ಬ್ಯಾಂಕ್‌ನ ಅಧ್ಯಕ್ಷರಾಗಿಯೂ ಜನ ಸಂಪರ್ಕ ಹೊಂದಿದ್ದಾರೆ.

Continue Reading

ಪ್ರಮುಖ ಸುದ್ದಿ

ಅಧಿಕಾರಕ್ಕೆ ಬಂದ್ರೆ ನಿಮ್ಮ ಖಾತೆಗೆ ಟಕಾಟಕ್ 1 ಲಕ್ಷ ಎಂದಿದ್ದ ರಾಹುಲ್ ಗಾಂಧಿ! ಪೋಸ್ಟ್ ಆಫೀಸ್ ಮುಂದೆ ಮುಸ್ಲಿಂ ಮಹಿಳೆಯರ ನೂಕುನುಗ್ಗಲು!!

ಲೋಕಸಭೆ ಚುನಾವಣೆ (Lok Sabha Election 2024) ಪ್ರಚಾರದಲ್ಲಿ ರಾಹುಲ್‌ ಗಾಂಧಿ, ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದ ಕೂಡಲೇ ನಿಮ್ಮ ಖಾತೆಗೆ ಹಣ ಜಮಾವಣೆ ಮಾಡುವುದಾಗಿ ಘೋಷಣೆ ಮಾಡಿದ್ದರು. ಈ ಘೋಷಣೆಯ ಬೆನ್ನಲ್ಲೇ ಇಂಡಿಯನ್ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಡಿಜಿಟಲ್ ಖಾತೆ (post payments Bank digital account) ತೆರೆಯಲು ಮಹಿಳೆಯರು ಮುಗಿಬಿದ್ದಿದ್ದಾರೆ.

VISTARANEWS.COM


on

ರಾಹುಲ್‌ ಗಾಂಧಿ rahul gandhi ippb account 2
Koo

ವಿಶೇಷ ವರದಿ: ಅಭಿಷೇಕ್ ಬಿ.ವಿ, ವಿಸ್ತಾರ ನ್ಯೂಸ್

ಬೆಂಗಳೂರು: ಇಂಡಿಯಾ ಮೈತ್ರಿಕೂಟ (INDIA bloc) ಅಧಿಕಾರಕ್ಕೆ ಬಂದ ನಂತರದ ದಿನವೇ ಮಹಿಳೆಯರ (women) ಖಾತೆಗೆ ʼಟಕಾ ಟಕ್ ಹಣʼ ಜಮಾವಣೆ ಮಾಡಲಾಗುವುದು ಎಂಬ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಘೋಷಣೆ ಪರಿಣಾಮ, ಪೋಸ್ಟ್‌ ಆಫೀಸ್‌ಗಳಲ್ಲಿ (Post Office) ಖಾತೆ ತೆರೆಯಲು ಮಹಿಳೆಯರು ಮುಗಿಬಿದ್ದಿದ್ದಾರೆ. ಇವರಲ್ಲಿ ಹೆಚ್ಚಾಗಿ ಮುಸ್ಲಿಂ ಮಹಿಳೆಯರೇ ಕಂಡು ಬರುತ್ತಿದ್ದಾರೆ.

ಲೋಕಸಭೆ ಚುನಾವಣೆ (Lok Sabha Election 2024) ಪ್ರಚಾರದಲ್ಲಿ ಇಂಡಿಯಾ ಒಕ್ಕೂಟ, ಅಧಿಕಾರ ಬಂದ ಕೂಡಲೇ ಸರ್ಕಾರ ನಿಮ್ಮ ಖಾತೆಗೆ ಹಣ ಜಮಾವಣೆ ಮಾಡುವುದಾಗಿ ಘೋಷಣೆ ಮಾಡಿತ್ತು. ಈ ಘೋಷಣೆಯ ಬೆನ್ನಲ್ಲೇ ಇಂಡಿಯನ್ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಡಿಜಿಟಲ್ ಖಾತೆ (post payments Bank digital account) ತೆರೆಯಲು ಮಹಿಳೆಯರು ಮುಗಿಬಿದ್ದಿದ್ದಾರೆ. ಪ್ರತಿ ತಿಂಗಳು 8500 ರೂ. ಹಣ ಬರಲಿದೆ ಎಂಬ ನಿರೀಕ್ಷೆಯಲ್ಲಿ ಪೋಸ್ಟ್ ಆಫೀಸ್ ಮುಂದೆ ಕ್ಯೂ ನಿಲ್ಲುತ್ತಿದ್ದಾರೆ.

ಕಳೆದ 15 ದಿನದಿಂದ ನಿತ್ಯ ಸಾವಿರಾರು ಸಂಖ್ಯೆಯಲ್ಲಿ ಖಾತೆ ತೆರೆಯಲು ಮಹಿಳೆಯರು ಮುಗಿಬೀಳುತ್ತಿರುವುದು ಕಂಡುಬಂದಿದೆ. ಮಹಿಳೆಯರ ನಿಯಂತ್ರಣ ಮಾಡಲಾರದೆ ಬೆಂಗಳೂರಿನ ಅಂಚೆ ಕೇಂದ್ರ ಕಚೇರಿಯ ಸಿಬ್ಬಂದಿ ಹೈರಾಣಾಗುತ್ತಿದ್ದಾರೆ. ನಿತ್ಯ ಬೆಳಗ್ಗೆ 4 ಗಂಟೆಯಿಂದಲೇ ಕಚೇರಿ ಮುಂದೆ ಮುಗಿಬೀಳುತ್ತಿರುವ ಸುತ್ತಮುತ್ತಲಿನ ಶಿವಾಜಿನಗರ, ವಸಂತನಗರ ಮುಂತಾದೆಡೆಗಳ ಮಹಿಳೆಯರು, ಅವರ ಜೊತೆಗೆ ಬರುತ್ತಿರುವ ಪುರುಷರು ಅಂಚೆ ಕಚೇರಿ ಆವರಣವನ್ನು ಅಕ್ಷರಶಃ ಸಂತೆಯಾಗಿಸಿದ್ದಾರೆ.

ಮಹಿಳೆಯರ ನಿಯಂತ್ರಣ ಸಾಧ್ಯವಾಗದೆ ಅಂಚೆ ಸಿಬ್ಬಂದಿ ಟೋಕ‌ನ್ ವಿತರಿಸಲು ಆರಂಭಿಸಿದ್ದಾರೆ. ಬೆಳಗ್ಗೆ 4 ಗಂಟೆಗೆ ಟೋಕನ್ ವಿತರಣೆ ಆರಂಭವಾಗುತ್ತಿದೆ. ಸಾವಿರಾರು ಸಂಖ್ಯೆಯಲ್ಲಿ ಕ್ಯೂ ನಿಂತು ಮಹಿಳೆಯರು ಟೋಕನ್ ಪಡೆಯುತ್ತಿದ್ದಾರೆ.

ಖಾತೆ ತೆರೆಯುತ್ತಿರುವ ಮಹಿಳೆಯರಿಗೂ ಹಣ ಬರುವ ಬಗ್ಗೆ ಖಚಿತ ಮಾಹಿತಿ ಇಲ್ಲ! “ಅಕೌಂಟ್‌ಗೆ ಹಣ ಬರುತ್ತೆ ಅಂತ ಅಕ್ಕಪಕ್ಕದವರು ಹೇಳಿದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಒಂದು ಲಕ್ಷ ಹಣ ನೀಡುತ್ತಾರಂತೆ. ಮೋದಿ ಬಂದ್ರೆ 2 ಸಾವಿರ ನೀಡುತ್ತಾರಂತೆ. ಯಾರು ಬಂದ್ರೇನು ನಮಗೆ ಹಣ ಬರುತ್ತೆ ಅಂತ ಹೇಳಿದ್ರು. ಅದಕ್ಕೆ ಬಂದಿದ್ದೇವೆ. ಬೆಳಗ್ಗೆ 5 ಗಂಟೆಗೆ ಬಂದಿದ್ದೇವೆ. ಯಾವ ಅಧಿಕಾರಿಗಳೂ ಹೇಳಿಲ್ಲ, ನೆರೆಮನೆಯವರು, ಸ್ಥಳೀಯರು ಹೇಳಿದರು” ಎಂಬುದು ಖಾತೆಗಾಗಿ ಕ್ಯೂ ನಿಂತ ಮಹಿಳೆಯರ ಹೇಳಿಕೆ.

ಹೆಡ್‌ ಪೋಸ್ಟ್‌ ಮಾಸ್ಟರ್‌ ಹೇಳೋದೇನು?

“ನಮ್ಮಲ್ಲಿ ಮೊದಲಿನಿಂದಲೂ IPPB ಖಾತೆ ಮಾಡುತ್ತಿದ್ದೇವೆ. ಆದರೆ ಕೆಲ ದಿನಗಳಿಂದ ಜನರ ಸಂಖ್ಯೆ ಸಿಕ್ಕಾಪಟ್ಟೆ ಹೆಚ್ಚಾಗಿದೆ. ಅಕೌಂಟ್‌ಗೆ ಹಣ ಹಾಕ್ತಾರೆ ಅಂತ ಜನ ಬರುತ್ತಿದ್ದಾರೆ. ಹಣ ಬರುವ ಬಗ್ಗೆ ನಮಗೆ ಯಾವುದೇ ಸೂಚನೆ ಇಲ್ಲ. ಆದರೆ ವದಂತಿ ಹರಡಿ ಜನರು ಜಾಸ್ತಿ ಜಾಸ್ತಿ ಬರ್ತಿದ್ದಾರೆ” ಎಂದು ಹೆಡ್ ಪೋಸ್ಟ್ ಮಾಸ್ಟರ್ ಮಂಜೇಶ್ ಹೇಳಿದ್ದಾರೆ.

“ಈ ಖಾತೆಯಿಂದ ಬೇರೆ ಬೇರೆ ಪ್ರಾಧಿಕಾರಗಳಿಗೆ ಹಣ ಕಟ್ಟಬಹುದು. 200 ರೂ. ಮಾತ್ರ ಜಮಾ ಮಾಡಿಸಿ ಖಾತೆ ತೆರೆಯುತ್ತಿದ್ದೇವೆ. ಜನರು ಹೆಚ್ಚಾಗಿದ್ದರಿಂದ ಈಗ ಹೆಚ್ಚಿನ ಸಿಬ್ಬಂದಿ ನೇಮಿಸಿದ್ದೇವೆ. ನಿತ್ಯ 1 ಸಾವಿರ ಅಕೌಂಟ್ ಮಾಡಿ ಕೊಡ್ತಿದ್ದೇವೆ. ಜನರಿಗೆ ಮಾಹಿತಿ ಕೊರತೆ ಇರೋದರಿಂದ ಮುಗಿಬೀಳ್ತಿದ್ದಾರೆ. ಇದಕ್ಕೆ ಯಾವುದೇ ಕೊನೆ ದಿನಾಂಕ ಇಲ್ಲ. ಯಾವ ಅಂಚೆ ಕಚೇರಿಯಲ್ಲಾದರೂ ಅಕೌಂಟ್ ಮಾಡಿಸಬಹುದು” ಎಂದು ಹೆಡ್ ಪೋಸ್ಟ್ ಮಾಸ್ಟರ್ ಮಂಜೇಶ್ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: Rahul Gandhi: ನೋಡ ನೋಡ್ತಿದ್ದಂತೆ ತಲೆ ಮೇಲೆ ನೀರು ಸುರಿದುಕೊಂಡ ರಾಹುಲ್‌ ಗಾಂಧಿ! ವಿಡಿಯೋ ಇದೆ

Continue Reading

ವಿದೇಶ

All Eyes on Rafah: ಪ್ಯಾಲೆಸ್ತೀನ್‌ಗೆ ಬೆಂಬಲಿಸಿ ರೋಹಿತ್‌ ಪತ್ನಿ ಪೋಸ್ಟ್‌; ಫುಲ್‌ ಟ್ರೋಲ್‌- ಏನಿದು ʼಆಲ್‌ ಐಸ್‌ ಆನ್‌ ರಫಾʼ?

All Eyes on Rafah:ಕ್ರಿಕೆಟಿಗ ರೋಹಿತ್‌ ಶರ್ಮಾ(Rohit Sharma) ಪತ್ನಿ ರಿತಿಕಾ ಸಜ್ದೇಹ್‌ ಕೂಡ ಸಾಮಾಜಿಕ ಜಾಲತಾಣದಲ್ಲಿ ಆಲ್ ಐಸ್‌ ಆನ್‌ ರಫಾ ಫೋಟೋ ಶೇರ್‌ ಮಾಡಿ ಪ್ಯಾಲೆಸ್ತೀನ್‌ಗೆ ಬೆಂಬಲ ಸೂಚಿಸಿದ್ದರು. ಇದರ ಬೆನ್ನಲ್ಲೇ ಅವರು ಭಾರೀ ಟೀಕೆಗೆ ಗುರಿಯಾಗಿದ್ದು, ಆಕೆಗೆ ರಫಾ ಬಗ್ಗೆ ಕನಿಷ್ಠ ಜ್ಞಾನವೂ ಇಲ್ಲ ಎಂದು ನೆಟ್ಟಿಗರು ಜರಿದಿದ್ದಾರೆ.

VISTARANEWS.COM


on

All Eyes on Rafah
Koo

ನವದೆಹಲಿ: ಇಸ್ರೇಲ್-ಪ್ಯಾಲೆಸ್ಟೈನ್ ಯುದ್ಧ(Israel-Palestine War) ಮುಂದುವರೆದಿರುವಂತೆಯೇ, ಇನ್ಸ್ಟಾಗ್ರಾಮ್, ಫೇಸ್ಬುಕ್ ಮತ್ತು ಎಕ್ಸ್ ಸೇರಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ “ಎಲ್ಲರ ಕಣ್ಣುಗಳು ರಫಾ ಮೇಲೆ ”(All Eyes on Rafah) ಎನ್ನುವ ಫೋಟೋ ವು ವೈರಲ್ ಆಗಿದೆ. ಇದರ ಬೆನ್ನಲ್ಲೇ ಈ ಫೋಟೋಗಳನ್ನು ಹಂಚಿಕೊಂಡು ಸಿನಿಮಾ ತಾರೆಯರು, ಸೆಲೆಬ್ರಿಟಿಗಳು ಪ್ಯಾಲೆಸ್ತೀನ್‌ ಪರವಾಗಿ ಧ್ವನಿ ಎತ್ತಿದ್ದಾರೆ. ಅದೇ ರೀತಿ ಕ್ರಿಕೆಟಿಗ ರೋಹಿತ್‌ ಶರ್ಮಾ(Rohit Sharma) ಪತ್ನಿ ರಿತಿಕಾ ಸಜ್ದೇಹ್‌ ಕೂಡ ಸಾಮಾಜಿಕ ಜಾಲತಾಣದಲ್ಲಿ ಆಲ್ ಐಸ್‌ ಆನ್‌ ರಫಾ ಫೋಟೋ ಶೇರ್‌ ಮಾಡಿ ಪ್ಯಾಲೆಸ್ತೀನ್‌ಗೆ ಬೆಂಬಲ ಸೂಚಿಸಿದ್ದರು. ಇದರ ಬೆನ್ನಲ್ಲೇ ಅವರು ಭಾರೀ ಟೀಕೆಗೆ ಗುರಿಯಾಗಿದ್ದು, ಆಕೆಗೆ ರಫಾ ಬಗ್ಗೆ ಕನಿಷ್ಠ ಜ್ಞಾನವೂ ಇಲ್ಲ ಎಂದು ನೆಟ್ಟಿಗರು ಜರಿದಿದ್ದಾರೆ.

ರಫಾ ಎಲ್ಲಿದೆ ಅನ್ನೋದಾದರೂ ಗೊತ್ತಿದೆಯೇ? ಕಾಶ್ಮೀರಿ ಪಂಡಿತರ ನರಮೇಧ, ಹಿಂದೂಗಳ ಮೇಲಿನ ದೌರ್ಜನ್ಯ, ಹಿಂಸಾಚಾರ, ಪಾಕಿಸ್ತಾನ, ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂದೂಗಳ ನರಮೇಧ ಇವುಗಳ ಬಗ್ಗೆ ಮೌನವಹಿಸಿದ್ದಿರಿ. ಈಗ ಹೇಗೆ ಪ್ಯಾಲೆಸ್ತೀನ್‌ ಪರವಾಗಿ ಧ್ವನಿ ಎತ್ತಲು ಸಾಧ್ಯವಾಯ್ತು ಎಂದು ಪ್ರಶ್ನಿಸಿದ್ದಾರೆ. ಇನ್ನು ಟ್ರೋಲ್‌ ಆಗುತ್ತಿದ್ದಂತೆ ರಿತಿಕಾ ಪೋಸ್ಟ್‌ ಡಿಲೀಟ್‌ ಮಾಡಿದ್ದಾರೆ.

ಏನಿದು ಆಲ್ ಐಸ್ ಆನ್ ರಫಾ ಫೋಟೋ?

ಆಲ್ ಐಸ್ ಆನ್ ರಫಾ ಚಿತ್ರವು ಗಾಝಾದ ದಕ್ಷಿಣದಲ್ಲಿರುವ ರಾಫಾ ನಗರದ ನಿರಾಶ್ರಿತರ ಶಿಬಿರದಲ್ಲಿ ಡೇರೆಗಳನ್ನು ತೋರಿಸುತ್ತದೆ, ಅಲ್ಲಿ ಇಸ್ರೇಲ್ನಿಂದ ನಡೆಯುತ್ತಿರುವ ದಾಳಿಯ ನಂತರ ಅನೇಕ ಫೆಲೆಸ್ತೀನೀಯರು ಸ್ಥಳಾಂತರಗೊಂಡಿದ್ದಾರೆ. ಸ್ಥಳೀಯ ಅಧಿಕಾರಿಗಳ ಪ್ರಕಾರ, ಭಾನುವಾರ ಇಸ್ರೇಲ್ ನಡೆಸಿದ ದಾಳಿಯಲ್ಲಿ ಕನಿಷ್ಠ 45 ನಾಗರಿಕರು ಸಾವನ್ನಪ್ಪಿದ್ದಾರೆ. ಇದರ ನಂತರ ಈ ಫೋಟೋ ಸೋಶಿಯಲ್‌ ಮೀಡಿಯಾದಲ್ಲಿ ಭಾರೀ ಸದ್ದು ಮಾಡಿತ್ತು.

ರಫಾ ಮೇಲೆ ಎಲ್ಲರ ಕಣ್ಣು ಅರ್ಥ

‘ರಫಾ ಮೇಲೆ ಎಲ್ಲರ ಕಣ್ಣುಗಳು’ ಚಿತ್ರವು ನಡೆಯುತ್ತಿರುವ ಯುದ್ಧದ ಬಗ್ಗೆ ಜಾಗೃತಿ ಮೂಡಿಸಲು ಕರೆ ನೀಡುತ್ತದೆ. ವಿಶ್ವ ಆರೋಗ್ಯ ಸಂಸ್ಥೆಯ ಆಕ್ರಮಿತ ಫೆಲೆಸ್ತೀನ್ ಪ್ರದೇಶಗಳ ಕಚೇರಿಯ ನಿರ್ದೇಶಕ ರಿಕ್ ಪೀಪರ್ಕಾರ್ನ್ ಅವರ ಹೇಳಿಕೆಯಿಂದ ಈ ಘೋಷಣೆ ಹುಟ್ಟಿಕೊಂಡಿದೆ ಎಂದು ತೋರುತ್ತದೆ. ಫೆಬ್ರವರಿಯಲ್ಲಿ, “ಎಲ್ಲರ ಕಣ್ಣುಗಳು ರಫಾ ಮೇಲೆ ಇವೆ” ಎಂದು ಅವರು ಹೇಳಿದರು. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ನಗರವನ್ನು ಸ್ಥಳಾಂತರಿಸುವ ಯೋಜನೆಗೆ ಆದೇಶಿಸಿದ ಸ್ವಲ್ಪ ಸಮಯದ ನಂತರ ಈ ಬೆಳವಣಿಗೆ ನಡೆದಿದೆ.

ರಫಾವನ್ನು ಹಮಾಸ್‌ ಉಗ್ರರ ಕಟ್ಟ ಕಡೇಯ ಭದ್ರಕೋಟೆ ಎಂದಿರುವ ನೆತನ್ಯಾಹು, ಅದನ್ನು ನಿರ್ಮೂಲನೆ ಮಾಡುವ ಗುರಿಯನ್ನು ಹೊಂದಿರುವುದಾಗಿ ತಿಳಿಸಿದ್ದರು. ಈ ಪ್ರದೇಶದಲ್ಲಿ ಸುಮಾರು 14 ದಶಲಕ್ಷಕ್ಕೂ ಹೆಚ್ಚು ಫೆಲೆಸ್ತೀನೀಯರು ಆಶ್ರಯ ಪಡೆದಿದ್ದು, ಇಸ್ರೇಲ್‌ ನಡೆಸಿದ ದಾಳಿಯಲ್ಲಿ 45ಕ್ಕೂ ಹೆಚ್ಚು ಜನ ಮೃತಪಟ್ಟಿದ್ದರು. ಪ್ಯಾಲೆಸ್ಟೈನ್ ಮೇಲಿನ ಇಸ್ರೇಲ್‌ನ ಇತ್ತೀಚಿನ ದಾಳಿಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ವ್ಯಾಪಕವಾಗಿ ಖಂಡಿಸಲಾಗುತ್ತಿದೆ. ಈ ಸಾಲಿನಲ್ಲಿ ಹಲವು ಭಾರತೀಯ ಸೆಲೆಬ್ರಿಟಿಗಳು ಸಹ ಸೇರಿದ್ದಾರೆ.

ಇದನ್ನೂ ಓದಿ:Aditi Prabhudeva: ತಾಯಿಯಾದ ಬಳಿಕ ಮತ್ತೆ ಕಿರುತೆರೆಗೆ ಎಂಟ್ರಿ ಕೊಟ್ಟ ಅದಿತಿ ಪ್ರಭುದೇವ!

ರಫಾ ಮೇಲಿನ ಇತ್ತೀಚಿನ ಇಸ್ರೇಲ್​​ ದಾಳಿಯು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಅನೇಕರು ಗಾಜಾದಲ್ಲಿ ಶೀಘ್ರ ಕದನ ವಿರಾಮಕ್ಕೆ ಕರೆ ನೀಡಿದ್ದಾರೆ. ಪ್ಯಾಲೆಸ್ಟೈನ್ ಜನರನ್ನು ಬೆಂಬಲಿಸಿ ಮಾತನಾಡಿದವರಲ್ಲಿಸೌತ್ ಸ್ಟಾರ್ ನಟಿ ಸಮಂತಾ ರುತ್ ಪ್ರಭು ಕೂಡ ಒಬ್ಬರು. ಇಸ್ರೇಲ್‌ನ ಕ್ರಮಗಳನ್ನು ಖಂಡಿಸುವ ಬರಹವನ್ನು ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿ ಸೆಕ್ಷನ್​ನಲ್ಲಿ ಶೇರ್ ಮಾಡಿದ್ದಾರೆ.

Continue Reading

ವೈರಲ್ ನ್ಯೂಸ್

Viral News: ರೈಲಿನಲ್ಲಿ ಅಶ್ಲೀಲವಾಗಿ ಮೈ ಕುಣಿಸಿದ ಮಹಿಳೆ; ರೀಲ್ಸ್ ಮಾಡುವವರ ಕಾಟವಿಲ್ಲದ ಪ್ರಯಾಣ ಅಸಾಧ್ಯ ಎಂದ ನೆಟ್ಟಿಗರು

Viral News: ಮುಂಬೈಯ ಲೋಕಲ್‌ ರೈಲಿನಲ್ಲಿ ಮಹಿಳೆಯೊಬ್ಬಳು ಪ್ರಯಾಣಿಕರ ಮಧ್ಯೆ ಅಶ್ಲೀಲವಾಗಿ ಹೆಜ್ಜೆ ಹಾಕಿ ನೆಟ್ಟಿಗರ ಆಕ್ರೋಶಕ್ಕೆ ತುತ್ತಾಗಿದ್ದಾಳೆ. ಸದ್ಯ ಈ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು, ನೆಟ್ಟಿಗರು ಆಕೆಗೆ ಛೀಮಾರಿ ಹಾಕುತ್ತಿದ್ದಾರೆ. ʼʼಕಾನೂನಿನ ಭಯವಿಲ್ಲದಿದ್ದರೆ ಹೀಗೆಲ್ಲ ಸಂಭವಿಸುತ್ತದೆ. ಸಾರ್ವಜನಿಕ ಸ್ಥಳಗಳಲ್ಲಿ ಅಶ್ಲೀಲವಾಗಿ ನೃತ್ಯ ಪ್ರದರ್ಶಿಸುವುದು ತಪ್ಪು. ರೈಲ್ವೆ ಅಧಿಕಾರಿಗಳು ಈ ಬಗ್ಗೆ ಕಾನೂನು ಕ್ರಮ ಕೈಗೊಳ್ಳಬೇಕುʼʼ ಎಂದು ಬಹುತೇಕರು ಆಗ್ರಹಿಸಿದ್ದಾರೆ.

VISTARANEWS.COM


on

Viral News
Koo

ಮುಂಬೈ: ಇತ್ತೀಚೆಗೆ ಯುವ ಜನತೆಯಲ್ಲಿ ರೀಲ್ಸ್‌ ಮಾಡುವ ಟ್ರೆಂಡ್‌ ಹೆಚ್ಚಾಗುತ್ತಿದೆ. ಇದು ಯಾವ ಮಟ್ಟಿಗೆ ಅತಿರೇಕಕ್ಕೆ ಹೋಗಿದೆ ಎಂದರೆ ಸಾರ್ವಜನಿಕ ಸ್ಥಳಗಳಲ್ಲಿಯೂ ವಿಡಿಯೊ ಮಾಡಲು ಮುಂದಾಗುತ್ತಿದ್ದಾರೆ. ಇತರರಿಗೆ ತೊಂದರೆಯಾಗುತ್ತದೆ, ಕಿರಿಕಿರಿ ಅನುಭವಿಸುತ್ತಾರೆ ಎನ್ನುವ ಕನಿಷ್ಠ ಸೌಜನ್ಯವೂ ಇಲ್ಲದೆ ರೀಲ್ಸ್‌ಗೆ ಹೆಜ್ಜೆ ಹಾಕುತ್ತಿರುವ ಪ್ರವೃತ್ತಿಗೆ ಬ್ರೇಕ್‌ ಬೀಳುತ್ತಿಲ್ಲ. ರೈಲು, ಮೆಟ್ರೋ, ವಿಮಾನ ಹೀಗೆ ಎಲ್ಲೆಂದರಲ್ಲಿ ಮೈ ಕುಣಿಸಿ ಜನಪ್ರಿಯತೆ ಪಡೆದುಕೊಳ್ಳಲು ಮುಂದಾಗುವವರು ಅಧಿಕ ಸಂಖ್ಯೆಯಲ್ಲಿ ಕಾಣ ಸಿಗುತ್ತಾರೆ. ಮೈ ಚಳಿ ಬಿಟ್ಟು ಅಶ್ಲೀಲವಾಗಿ ಕುಣಿಯುವವರ ಸಂಖ್ಯೆಯೂ ಕಡಿಮೆ ಏನಿಲ್ಲ. ಇದೀಗ ಅಂತಹದ್ದೇ ಘಟನೆ ವರದಿಯಾಗಿದ್ದು, ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಮುಂಬೈಯ ಲೋಕಲ್‌ ರೈಲಿನಲ್ಲಿ ಮಹಿಳೆಯೊಬ್ಬಳು ಪ್ರಯಾಣಿಕರ ಮಧ್ಯೆ ಅಶ್ಲೀಲವಾಗಿ ಹೆಜ್ಜೆ ಹಾಕಿ ನೆಟ್ಟಿಗರ ಆಕ್ರೋಶಕ್ಕೆ ತುತ್ತಾಗಿದ್ದಾಳೆ (Viral News).

ಅಧಿಕಾರಿಗಳು ಎಷ್ಟೇ ಎಚ್ಚರಿಸಿದರೂ, ಕ್ರಮ ಕೈಗೊಂಡರೂ ಚಲಿಸುತ್ತಿರುವ ರೈಲು, ಫ್ಲಾಟ್‌ಫಾರ್ಮ್‌ನಲ್ಲಿ ಡ್ಯಾನ್ಸ್‌ ಮಾಡುವುದನ್ನು ತಪ್ಪಿಸಲು ಸಾಧ್ಯವಾಗುತ್ತಿಲ್ಲ. ಈ ವಿಡಿಯೊದಲ್ಲಿ ಚಲಿಸುತ್ತಿರುವ ಮುಂಬೈ ಲೋಕಲ್‌ ರೈಲು ಮತ್ತು ಛತ್ರಪತಿ ಶಿವಾಜಿ ಮಹಾರಾಜ್‌ ಟರ್ಮಿನಸ್‌ (CSMT)ನಲ್ಲಿ ಮಹಿಳೆಯೊಬ್ಬಳು ತುಂಡು ಬಟ್ಟೆ ತೊಟ್ಟು ಭೋಜ್‌ಪುರಿ ಹಾಡಿಗೆ ಅಶ್ಲೀಲವಾಗಿ ನರ್ತಿಸುತ್ತಿರುವುದು ಕಂಡು ಬಂದಿದೆ. ನೆಟ್ಟಿಗರು ಈ ವಿಡಿಯೊ ನೋಡಿ ಮಹಿಳೆಗೆ ಛೀಮಾರಿ ಹಾಕುತ್ತಿದ್ದಾರೆ.

ಮಹಿಳೆ ರೈಲಿನ ಬೋಗಿಯ ಒಳಗೆ ಮತ್ತು ಪ್ಲಾಟ್‌ಫಾರ್ಮ್‌ನಲ್ಲಿ ಪ್ರಚೋದನಕಾರಿಯಾಗಿ ನೃತ್ಯ ಮಾಡಿ ಪ್ರಯಾಣಿಕರಿಗೆ ಮುಜುಗರ ಉಂಟು ಮಾಡುತ್ತಿರುವುದು ವಿಡಿಯೊದಲ್ಲಿ ಸ್ಪಷ್ಟವಾಗಿ ಕಂಡು ಬಂದಿದೆ. ʼ’ಮುಂಬೈ ರೈಲಿನಲ್ಲಿ ಭಿಕ್ಷುಕರು ಮತ್ತು ರೀಲ್ಸ್ ಮಾಡುವವರ ಕಾಟವಿಲ್ಲದೆ ಶಾಂತಿಯುತವಾಗಿ ಪ್ರಯಾಣಿಸಲು ಸಾಧ್ಯವಿಲ್ಲʼʼ ಎಂದು ಕ್ಯಾಪ್ಶನ್‌ ನೀಡಿ ವಿಡಿಯೊವನ್ನು ಹಂಚಿಕೊಳ್ಳಲಾಗಿದೆ. ಜತೆಗೆ ಮುಂಬೈ ಪೊಲೀಸರು ಮತ್ತು ರೈಲ್ವೆ ಅಧಿಕಾರಿಗಳನ್ನು ಟ್ಯಾಗ್‌ ಮಾಡಿ ಸೂಕ್ತ ಕ್ರಮಕ್ಕಾಗಿ ಆಗ್ರಹಿಸಲಾಗಿದೆ.

ನೆಟ್ಟಿಗರು ಏನಂದ್ರು?

ʼʼಈ ಮಹಿಳೆ ಎಲ್ಲ ಕಡೆ ಡ್ಯಾನ್ಸ್‌ ಮಾಡಿ ಕಿರಿಕಿರಿ ಉಂಟು ಮಾಡುತ್ತಿದ್ದಾಳೆ. ಆಕೆಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಆಕೆಯನ್ನು ಬಂಧಿಸಿ ಮುಂಬೈಯಿಂದ ಗಡಿಪಾರು ಮಾಡಬೇಕುʼʼ ಎಂದು ಒಬ್ಬರು ಆಗ್ರಹಿಸಿದ್ದಾರೆ. ʼʼಇಂತಹ ಪ್ರವೃತ್ತಿಗೆ ಕೂಡಲೇ ಕಡಿವಾಣ ಹಾಕಬೇಕುʼʼ ಎಂದು ಇನ್ನೊಬ್ಬರು ಹೇಳಿದ್ದಾರೆ. ʼʼಕಾನೂನಿನ ಭಯವಿಲ್ಲದಿದ್ದರೆ ಹೀಗೆಲ್ಲ ಸಂಭವಿಸುತ್ತದೆ. ಸಾರ್ವಜನಿಕ ಸ್ಥಳಗಳಲ್ಲಿ ಅಶ್ಲೀಲವಾಗಿ ನೃತ್ಯ ಪ್ರದರ್ಶಿಸುವುದು ತಪ್ಪು. ರೈಲ್ವೆ ಅಧಿಕಾರಿಗಳು ಈ ಬಗ್ಗೆ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಪ್ರಯಾಣಿಕರು ಜವಾಬ್ದಾರಿಯುತ ನಾಗರಿಕರಾಗಿ ಈ ವಿಷಯದಲ್ಲಿ ಮಧ್ಯಪ್ರವೇಶಿಸಬೇಕು’ʼ ಎಂದು ಮಗದೊಬ್ಬರು ಅಭಿಪ್ರಾಯಪಟ್ಟಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಇಂತಹ ಕಿರಿಕಿರಿ ಉಂಟು ಮಾಡುವವರನ್ನು ಬಂಧಿಸಬೇಕು ಎಂದು ಬಹುತೇಕರು ಅಧಿಕಾರಿಗಳನ್ನು ಟ್ಯಾಗ್‌ ಮಾಡಿ ಒತ್ತಾಯಿಸಿದ್ದಾರೆ.

ಅಧಿಕಾರಿಗಳು ಹೇಳಿದ್ದೇನು?

ಸದ್ಯ ಪೋಸ್ಟ್‌ಗೆ ಪ್ರತಿಕ್ರಿಯಿಸಿದ ಮುಂಬೈ ಸೆಂಟ್ರಲ್ ಡಿಆರ್‌ಎಂನ ಅಧಿಕೃತ ಎಕ್ಸ್ ಹ್ಯಾಂಡಲ್, ಘಟನೆಯ ತನಿಖೆ ನಡೆಸಲು ಮತ್ತು ಅಗತ್ಯ ಕ್ರಮ ಕೈಗೊಳ್ಳಲು ಮುಂಬೈ ವಿಭಾಗದ ಭದ್ರತಾ ಇಲಾಖೆಗೆ ಆದೇಶಿಸಲಾಗಿದೆ ಎಂದು ತಿಳಿಸಿದೆ. ʼʼಮಾಹಿತಿಗಾಗಿ ಧನ್ಯವಾದಗಳು. ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ’ʼ ಎಂದು ಹೇಳಿದೆ.

ಇದನ್ನೂ ಓದಿ: Viral Video: ಅರೆಬರೆ ಬಟ್ಟೆಯಲ್ಲೇ ರೈಲಿನಲ್ಲಿ ಡ್ಯಾನ್ಸ್‌ ಮಾಡಿದ ಯುವತಿ; ಛೀಮಾರಿ ಹಾಕಿದ ಜನ

Continue Reading
Advertisement
Karan Bhushan Singh
ದೇಶ7 mins ago

Karan Bhushan Singh: ಬಿಜೆಪಿ ಅಭ್ಯರ್ಥಿಯ ಬೆಂಗಾವಲು ವಾಹನ ಡಿಕ್ಕಿಯಾಗಿ ಇಬ್ಬರ ಸಾವು

mlc election
ರಾಜಕೀಯ10 mins ago

MLC Election: ಒಂದಾದ ಸಿಎಂ- ಡಿಸಿಎಂ, ಪರಂ ಗರಂ; ಅಖಾಡಕ್ಕಿಳಿದ ರಮೇಶ್‌ ಕುಮಾರ್‌

Viral Run Out Video
ಕ್ರೀಡೆ16 mins ago

Viral Run Out Video: 11 ಆಟಗಾರರಿಂದ ರನೌಟ್​ ಪ್ರಯತ್ನ; ಕೊನೆಗೂ ನಾಟೌಟ್​ ಆದ ಬ್ಯಾಟರ್​

Ambareesh Birthday during Sumalatha Ambareesh Talks About Abhishek Ambareesh And Aviva
ಸ್ಯಾಂಡಲ್ ವುಡ್23 mins ago

Ambareesh Birthday: ಸಿಹಿ ಸುದ್ದಿ ಕೊಡಲಿದ್ದಾರಾ ಅಭಿಷೇಕ್‌-ಅವಿವಾ? ಸುಮಲತಾ ಹೇಳಿದ್ದೇನು?

All Eyes on Rafah
ರಾಜಕೀಯ27 mins ago

All Eyes on Rafah: 30 ಮಿಲಿಯನ್ ಜನರನ್ನು ತಲುಪಿದ ‘ಆಲ್ ಐಸ್ ಆನ್ ರಫಾ’ ಪೋಸ್ಟ್‌!

Bomb Threat
ಪ್ರಮುಖ ಸುದ್ದಿ30 mins ago

Bomb Threat: ಕೆಂಪೇಗೌಡ ಏರ್‌ಪೋರ್ಟ್‌ಗೆ ಬಾಂಬ್ ಬೆದರಿಕೆ ಸಂದೇಶ; ಆತಂಕ ಸೃಷ್ಟಿ

Hardik Pandya
ಕ್ರೀಡೆ59 mins ago

Hardik Pandya: ಕೌಟುಂಬಿಕ ಸಮಸ್ಯೆ ಬದಿಗೊತ್ತಿ ಭಾರತ ತಂಡದ ಯಶಸ್ಸಿಗಾಗಿ ಕ್ರಿಕೆಟ್​ ಅಭ್ಯಾಸ ಆರಂಭಿಸಿದ ಹಾರ್ದಿಕ್​ ಪಾಂಡ್ಯ

Viral Video
ವೈರಲ್ ನ್ಯೂಸ್2 hours ago

Viral Video: ಇವನೇ ನಿಜವಾದ ಹೀರೋ! ಇವರ ಧೈರ್ಯ, ಶೌರ್ಯಕ್ಕೆ ಸರಿಸಾಟಿಯೇ ಇಲ್ಲ; ವೈರಲಾಯ್ತು ವಿಡಿಯೋ

TOP 5 Movies big budget Movie in OTT
ಒಟಿಟಿ2 hours ago

TOP 5 Movies: ಒಟಿಟಿಯಲ್ಲಿ ನೋಡಲೇಬೇಕಾದ ಟಾಪ್‌ 5 ಬಿಗ್‌ ಬಜೆಟ್‌ ಸಿನಿಮಾಗಳು!

panjurli daiva sharat shetty murder
ದಕ್ಷಿಣ ಕನ್ನಡ2 hours ago

Panjurli Daiva: ಶರತ್‌ ಶೆಟ್ಟಿ ಕೊಲೆ ಆರೋಪಿ ಶರಣಾಗತಿ; ಎಳೆತಂದು ನಿಲ್ಲಿಸಿತೇ ಪಂಜುರ್ಲಿ ದೈವ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ20 hours ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 day ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ2 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ3 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು3 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ6 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌