Congress Releases List Of 209 Candidates caste wise calculation is here Karnataka Election 2023 : ಕಾಂಗ್ರೆಸ್‌ನಿಂದ ಒಟ್ಟು 209 ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ; ಯಾವ ಜಾತಿಗೆ ಎಷ್ಟು ಟಿಕೆಟ್‌? - Vistara News

ಕರ್ನಾಟಕ ಎಲೆಕ್ಷನ್

Karnataka Election 2023 : ಕಾಂಗ್ರೆಸ್‌ನಿಂದ ಒಟ್ಟು 209 ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ; ಯಾವ ಜಾತಿಗೆ ಎಷ್ಟು ಟಿಕೆಟ್‌?

ವಿಧಾನಸಭಾ ಚುನಾವಣೆಯಲ್ಲಿ (Karnataka Election 2023) ಸ್ಪರ್ಧಿಸಲಿರುವ 209 ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್‌ ಪಕ್ಷ ಬಿಡುಗಡೆ ಮಾಡಿದೆ. ಅಧಿಕಾರ ಹಿಡಿಯಲು ಪಕ್ಷ ಹಾಕಿರುವ ಜಾತಿ ಲೆಕ್ಕಾಚಾರಗಳಾದರೂ ಏನು ಎಂಬ ಮಾಹಿತಿ ಇಲ್ಲಿದೆ.

VISTARANEWS.COM


on

Congress releases fourth list of 10 candidates for Karnataka Assembly polls
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ (Karnataka Election 2023) ಸ್ಪರ್ಧಿಸಲಿರುವ ಕಾಂಗ್ರೆಸ್‌ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟವಾಗಿದೆ. 43 ಅಭ್ಯರ್ಥಿಗಳ ಹೆಸರು ಈ ಪಟ್ಟಿಯಲ್ಲಿದ್ದು, ಒಟ್ಟಾರೆ ಪಕ್ಷವು 209 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದಂತಾಗಿದೆ. ಇನ್ನು ಕೇವಲ 15 ಕ್ಷೇತ್ರಗಳ ಅಭ್ಯರ್ಥಿಗಳನ್ನಷ್ಟೇ ಅಂತಿಮಗೊಳಿಸಬೇಕಾಗಿದೆ.

ಮೂರನೇ ಪಟ್ಟಿಯಲ್ಲಿನ ಒಟ್ಟು 16 ಅಭ್ಯರ್ಥಿಗಳು ಇದೇ ಮೊದಲ ಬಾರಿಗೆ ಚುನಾವಣೆ ಎದುರಿಸುತ್ತಿದ್ದಾರೆ. ಇದುವರೆಗೆ ಕಾಂಗ್ರೆಸ್‌ ಪ್ರಕಟಿಸಿದ ಅಭ್ಯರ್ಥಿಗಳಲ್ಲಿ ಲಿಂಗಾಯಿತರು ಪ್ರಾಬಲ್ಯ ಮೆರೆದಿದ್ದಾರೆ. ಒಟ್ಟಾರೆ 47 ಅಭ್ಯರ್ಥಿಗಳು ಈ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ನಂತರದ ಸ್ಥಾನವನ್ನು ಒಕ್ಕಲಿಗರು ಪಡೆದುಕೊಂಡಿದ್ದಾರೆ. 43 ಒಕ್ಕಲಿಗ ಅಭ್ಯರ್ಥಿಗಳು ಕಣಕ್ಕಿಳಿಯುತ್ತಿದ್ದಾರೆ. ಪರಿಶಿಷ್ಟ ಜಾತಿಯ (ಎಡಬಲ ಸೇರಿ) 31 ಅಭ್ಯರ್ಥಿಗಳನ್ನು ಕಾಂಗ್ರೆಸ್‌ ಕಣಕ್ಕಿಳಿಸಿದೆ.
ಉಳಿದಂತೆ 16 ಅಭ್ಯರ್ಥಿಗಳು ವಾಲ್ಮೀಕಿ ಸಮುದಾಯಕ್ಕೆ ಸೇರಿದವರಾಗಿದ್ದಾರೆ. 12 ಅಭ್ಯರ್ಥಿಗಳು ಕುರುಬರು, 12 ಅಭ್ಯರ್ಥಿಗಳು ಮುಸ್ಲೀಮರು, 7 ಬ್ರಾಹ್ಮಣರು, 3 ಕ್ರಿಶ್ಚಿಯನ್‌ ಧರ್ಮಕ್ಕೆ ಸೇರಿದವರಾಗಿದ್ದಾರೆ.

ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತಿದ್ದ ಸಂದರ್ಭದಲ್ಲಿ ಎಲ್ಲದಕ್ಕಿಂತ ಜಾತಿ ಲೆಕ್ಕಾಚಾರ ಮತ್ತು ಲಾಬಿಯೇ ಮುಂಚೂಣಿಗೆ ಬಂದಿತ್ತು. ಪಕ್ಷದ ನಾಯಕರು ತಮ್ಮ ವೈಯಕ್ತಿಕ ವರ್ಚಸ್ಸಿನ ಜತೆಗೆ ಜಾತಿಯನ್ನೂ ಮುಂದಿಟ್ಟುಕೊಂಡು ಟಿಕೆಟ್‌ಗೆ ಲಾಬಿ ನಡೆಸಿದ್ದರು. ಇನ್ನು ಅಭ್ಯರ್ಥಿಗಳ ಜತೆಗೆ ಸಮುದಾಯದ ನಾಯಕರು ತಮ್ಮ ಸಮುದಾಯಕ್ಕೆ ಹೆಚ್ಚೆಚ್ಚು ಟಿಕೆಟ್‌ ಕೊಡಬೇಕು ಎಂದು ಒತ್ತಡ ಹೇರುತ್ತಲೇ ಬಂದಿದ್ದರು.

ಕಾಂಗ್ರೆಸ್‌ ಪಕ್ಷದ ಮೂಲಗಳ ಪ್ರಕಾರವೇ, ಪಂಚಮಸಾಲಿ ಹಾಗೂ ಲಿಂಗಾಯತ ಸಮುದಾಯವರು 65, ಪರಿಶಿಷ್ಟ ಜಾತಿ ಎಡ ಪಂಗಡದವರು 15, ಪರಿಶಿಷ್ಟ ಜಾತಿ ಬಲ ಪಂಗಡದವರು15, ಪರಿಶಿಷ್ಟ ಪಂಗಡದವರು 20, ಒಕ್ಕಲಿಗ ಸಮುದಾಯದವರು 48, ಒಬಿಸಿಯವರು 52 ಮುಸ್ಲಿಂ ಸಮುದಾಯವದುರ 24 ಟಿಕೆಟ್‌ಗೆ ಬೇಡಿಕೆ ಮುಂದಿಟ್ಟಿದ್ದರು. ಆದರೆ ಗೆಲ್ಲುವ ಅಭ್ಯರ್ಥಿ ಮತ್ತು ಕ್ಷೇತ್ರದಲ್ಲಿನ ಜಾತಿ ಎರಡನ್ನೂ ಲೆಕ್ಕಹಾಕಿ ಕಾಂಗ್ರೆಸ್‌ ಅಭ್ಯರ್ಥಿಗಳ ಆಯ್ಕೆಯನ್ನು ಅಂತಿಮಗೊಳಿಸಿದೆ.

2018ರ ವಿಧಾನಸಭಾ ಚುನಾವಣೆಯಲ್ಲಿಯೂ ಕಾಂಗ್ರೆಸ್‌ ಪಕ್ಷವು 47 ಲಿಂಗಾಯತ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. ಅದರಲ್ಲಿ 17 ಅಭ್ಯರ್ಥಿಗಳು ಜಯಗಳಿಸಿದ್ದರು. ಕಣಕ್ಕಿಳಿಸಿದ್ದ 46 ಒಕ್ಕಲಿಗ ಅಭ್ಯರ್ಥಿಗಳ ಪೈಕಿ 15 ಮಂದಿ ಗೆದ್ದಿದ್ದರು. ಒಟ್ಟು 50 ಒಬಿಸಿ ಅಭ್ಯರ್ಥಿಗಳಿಗೆ ಟಿಕೆಟ್‌ ನೀಡಲಾಗಿತ್ತು. ಇವರಲ್ಲಿ 15 ಅಭ್ಯರ್ಥಿಗಳು ಮಾತ್ರ ಗೆದ್ದಿದ್ದರು.
ಕಳೆದ ಚುನಾವಣೆಯಲ್ಲಿ ಈ ಬಾರಿಗಿಂತ ಹೆಚ್ಚು ಅಂದರೆ 17 ಮುಸ್ಲಿಂ ಅಭ್ಯರ್ಥಿಗಳಿಗೆ ಟಿಕೆಟ್‌ ನೀಡಲಾಗಿತ್ತು. ಇದರಲ್ಲಿ ಏಳು ಮಂದಿ ಮಾತ್ರ ಗೆದ್ದಿದ್ದರು. ಪರಿಶಿಷ್ಟ ಜಾತಿಯ 17 ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿತ್ತು, ಇವರಲ್ಲಿ 9 ಮಂದಿ ಗೆದ್ದಿದ್ದರು. ಟಿಕೆಟ್‌ ಪಡೆದಿದ್ದ ಆರು ಬ್ರಾಹ್ಮಣರಲ್ಲಿ ನಾಲ್ವರು ಗೆದ್ದಿದ್ದರು.

ಹೆಚ್ಚು ಕಡಿಮೆ ಕಳೆದ ಬಾರಿಯಂತೆಯೇ ಕಾಂಗ್ರೆಸ್‌ ಜಾತಿ ನೋಡಿ ಮಣೆ ಹಾಕಿದೆ. ಇನ್ನೂ ಹದಿನೈದು ಕ್ಷೇತ್ರಗಳ ಅಭ್ಯರ್ಥಿಯನ್ನು ಅಂತಿಮಗೊಳಿಸಬೇಕಾಗಿದ್ದು, ಆ ನಂತರವಷ್ಟೇ ಯಾವ ಜಾತಿಯ ಅಭ್ಯರ್ಥಿಗಳು ಎಷ್ಟು ಮಂದಿ ಕಣಕ್ಕಿಳಿದಿದ್ದಾರೆ ಎಂಬುದು ಸ್ಪಷ್ಟವಾಗಲಿದೆ. ಕಾಂಗ್ರೆಸ್‌ ಇನ್ನೂ ಅಭ್ಯರ್ಥಿಗಳನ್ನು ಘೋಷಿಸದೇ ಇರುವ ಕ್ಷೇತ್ರಗಳೆಂದರೆ; ಪುಲಕೇಶಿ ನಗರ, ಸಿವಿ ರಾಮನ್ ನಗರ, ಮುಳಬಾಗಿಲು, ರಾಯಚೂರು ಸಿಟಿ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪರ್ಧಿಸುತ್ತಿರುವ ಶಿಗ್ಗಾವಿ, ಶ್ರವಣಬೆಳಗೊಳ, ಅರಕಲಗೂಡು, ಲಿಂಗಸೂರು, ಹುಬ್ಬಳ್ಳಿ ಧಾರವಾಡ ಸೆಂಟ್ರಲ್, ಹುಬ್ಬಳ್ಳಿ ಧಾರವಾಡ ವೆಸ್ಟ್, ಮಂಗಳೂರು ‌ಉತ್ತರ, ಶಿಡ್ಲಘಟ್ಟ, ಚಿಕ್ಕಮಗಳೂರು, ಕೆ.ಆರ್ ಪುರಂ ಮತ್ತು ಹರಿಹರ.

ಇದನ್ನೂ ಓದಿ : Karnataka Elections 2023 : ಜೆಡಿಎಸ್‌ನಿಂದ ಇನ್ನೂ 6 ಕ್ಷೇತ್ರಗಳ ಪಟ್ಟಿ ರಿಲೀಸ್‌; ಮಾಲಕ ರೆಡ್ಡಿ, ರಘು ಆಚಾರ್‌ಗೆ ಟಿಕೆಟ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Election Results 2024: ರಾಜ್ಯದ 474 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ನಿರ್ಧಾರಕ್ಕೆ ಕೌಂಡ್ ಡೌನ್

Election Results 2024: ರಾಜ್ಯದ 28 ಕ್ಷೇತ್ರಗಳ ಮತ ಎಣಿಕಾ ಕೇಂದ್ರಗಳಲ್ಲಿ ಮೂರು ಹಂತದ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಬೆಳಗ್ಗೆ 8ಗಂಟೆಗೆ ಮತ ಎಣಿಕೆ ಆರಂಭವಾಗಿದೆ.

VISTARANEWS.COM


on

Lok Sabha Election Results 2024
Koo

ಬೆಂಗಳೂರು: ರಾಜ್ಯದಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ (Election Results 2024) ಸ್ಪರ್ಧಿಸಿದ್ದ ಒಟ್ಟು 474 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ನಿರ್ಧಾರಕ್ಕೆ ಕೌಂಡ್ ಡೌನ್ ಶುರುವಾಗಿದೆ. ಮತ ಎಣಿಕೆ ಹಿನ್ನೆಲೆಯಲ್ಲಿ ರಾಜ್ಯದ 28 ಕ್ಷೇತ್ರಗಳ ಮತ ಎಣಿಕಾ ಕೇಂದ್ರಗಳಲ್ಲಿ ಮೂರು ಹಂತದ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಬೆಳಗ್ಗೆ 8ಗಂಟೆಗೆ ಮತ ಎಣಿಕೆ ಆರಂಭವಾಗಿದೆ. ಮಧ್ಯಾಹ್ನ 12 ರೊಳಗೆ ಬಹುತೇಕ ಯಾರು ಗೆಲ್ಲಲಿದ್ದಾರೆ ಎಂಬ ಚಿತ್ರಣ ಸಿಗಲಿದ್ದು, ಸಂಜೆ ಅಂತಿಮ ಫಲಿತಾಂಶ ಹೊರಬೀಳಲಿದೆ.

ಬೆಳಗ್ಗೆ 7:45 ರ ಸುಮಾರಿಗೆ ಚುನಾವಣಾಧಿಕಾರಿಗಳ ಸಮ್ಮುಖದಲ್ಲಿ ಸ್ಟ್ರಾಂಗ್ ರೂಂ ಓಪನ್ ಮಾಡಲಾಗಿದ್ದು, ನಂತರ ಮತ ಎಣಿಕೆ ಕೊಠಡಿಗೆ ಇವಿಎಂಗಳನ್ನು ಅಧಿಕಾರಿಗಳು ಕೊಂಡೊಯ್ದರು. ಒಂದು ಕೊಠಡಿಯಲ್ಲಿ 14 ಟೇಬಲ್‌ಗಳ ವ್ಯವಸ್ಥೆ ಮಾಡಲಾಗಿದ್ದು, ಕೊಠಡಿ ದೊಡ್ಡದಿದ್ದರೆ ಹೆಚ್ಚುವರಿ ಟೇಬಲ್ ಹಾಕಲು ಅವಕಾಶ ಮಾಡಿಕೊಡಲಾಗಿದೆ. 20-25 ಸುತ್ತಿನವರೆಗೆ ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ.

ಇದನ್ನೂ ಓದಿ | Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ರಾಜ್ಯದಲ್ಲಿ ಏಪ್ರಿಲ್ 26 ರಂದು ನಡೆದ ಮೊದಲ ಹಂತದಲ್ಲಿ 247 ಅಭ್ಯರ್ಥಿಗಳು ಹಾಗೂ ಮೇ 7 ರಂದು ನಡೆದ ಎರಡನೇ ಹಂತದಲ್ಲಿ 227 ಅಭ್ಯರ್ಥಿಗಳು ಅಖಾಡದಲ್ಲಿದ್ದಾರೆ. ಒಟ್ಟು 474 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ಇಂದು ಬಹಿರಂಗವಾಗಲಿದೆ.

Continue Reading

ರಾಜಕೀಯ

Surapura Assembly constituency: ಸುರಪುರ ಉಪ ಚುನಾವಣೆಗೆ ರಾಜುಗೌಡ ಬಿಜೆಪಿ ಅಭ್ಯರ್ಥಿ; ಹೇಗಿದೆ ಕ್ಷೇತ್ರ ಚಿತ್ರಣ?

Surapura Assembly constituency: ಬಿ.ಎಸ್.‌ ಯಡಿಯೂರಪ್ಪ ಅವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ರಾಜುಗೌಡ ಕ್ಷೇತ್ರದಲ್ಲಿ ಜನರನ್ನು ಹಾಗೂ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡಿದ್ದರು. ಆದರೆ, ಕಾಂಗ್ರೆಸ್‌ ಅಭ್ಯರ್ಥಿಗೆ ಇರುವ ಅನುಕಂಪದ ಅಲೆಯನ್ನು ದಾಟಿ ಇವರು ಜಯಗಳಿಸಬೇಕೆಂದರೆ ಹೆಚ್ಚಿನ ಶ್ರಮವನ್ನು ಹಾಕಲೇಬೇಕಿದೆ.

VISTARANEWS.COM


on

Raju Gowda Shorapur or Surapura Assembly constituency BJP Candidate
Koo

ಬೆಂಗಳೂರು: ದೇಶದೆಲ್ಲೆಡೆ ಲೋಕಸಭಾ ಚುನಾವಣೆಯ (Lok Sabha Election 2024) ಫೀವರ್‌ ಹೆಚ್ಚಾಗಿದೆ. ಈ ನಡುವೆ ಮುಖ್ಯ ಚುನಾವಣಾ ಆಯೋಗವು ಹಲವು ರಾಜ್ಯಗಳ ಉಪ ಚುನಾವಣೆಯನ್ನೂ ಸಹ ಘೋಷಣೆ ಮಾಡಿದೆ. ಇದಕ್ಕೆ ಈಗ ರಾಜ್ಯದಲ್ಲಿ ಶಾಸಕ ರಾಜಾ ವೆಂಕಟಪ್ಪ ನಾಯಕ (Raja Venkatappa Nayaka) ಅವರ ನಿಧನದಿಂದ ತೆರವಾಗಿದ್ದ ಸುರಪುರ ವಿಧಾನಸಭಾ ಕ್ಷೇತ್ರಕ್ಕೆ (Surapura Assembly constituency) ಬಿಜೆಪಿ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗಿದೆ. ರಸಿಂಹ ನಾಯಕ (ರಾಜೂಗೌಡ) (Raju Gowda) ಅವರಿಗೆ ಮತ್ತೆ ಟಿಕೆಟ್ ನೀಡಲಾಗಿದೆ.

ರಾಜುಗೌಡ ಅವರು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ರಾಜಾ ವೆಂಕಟಪ್ಪ ನಾಯಕ ವಿರುದ್ಧ ಸೋಲು ಕಂಡಿದ್ದರು. ಆದರೆ, ಅವರಿಗೆ ಈ ಬಾರಿ ಬಿಜೆಪಿ ಟಿಕೆಟ್ ನೀಡಿದೆ. 2023ರಲ್ಲಿ ನಡೆದ ಚುನಾವಣೆಯಲ್ಲಿ ರಾಜೂಗೌಡ ಅವರು 25223 ಮತಗಳ ಅಂತರದಿಂದ ಸೋಲನ್ನು ಅನುಭವಿಸಿದ್ದರು. ಆದರೆ, ಕಳೆದ 2018ರ ಚುನಾವಣೆಯಲ್ಲಿ ರಾಜುಗೌಡ ಅವರು ಗೆದ್ದಿದ್ದರು. ಅಲ್ಲದೆ, ಬಿ.ಎಸ್.‌ ಯಡಿಯೂರಪ್ಪ (BS Yediyurappa) ಅವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ಇವರು ಕ್ಷೇತ್ರದಲ್ಲಿ ಜನರನ್ನು ಹಾಗೂ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡಿದ್ದರು. ಆದರೆ, ಕಾಂಗ್ರೆಸ್‌ ಅಭ್ಯರ್ಥಿಗೆ ಇರುವ ಅನುಕಂಪದ ಅಲೆಯನ್ನು ದಾಟಿ ಇವರು ಜಯಗಳಿಸಬೇಕೆಂದರೆ ಹೆಚ್ಚಿನ ಶ್ರಮವನ್ನು ಹಾಕಲೇಬೇಕಿದೆ.

ಕಾಂಗ್ರೆಸ್‌ನಿಂದ ರಾಜಾ ವೇಣುಗೋಪಾಲ ನಾಯಕ ಸ್ಪರ್ಧೆ

ಕಾಂಗ್ರೆಸ್‌ನಿಂದ ಈಗಾಗಲೇ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗಿದೆ. ರಾಜಾ ವೆಂಕಟಪ್ಪ ನಾಯಕ ಅವರ ಪುತ್ರ ರಾಜಾ ವೇಣುಗೋಪಾಲ ನಾಯಕ (Raja Venugopala Nayaka) ಸ್ಪರ್ಧೆ ಮಾಡುತ್ತಿದ್ದಾರೆ. ತಂದೆ ನಿಧನವಾಗಿದ್ದರಿಂದ ಅನುಕಂಪದ ಅಲೆ ಹಾಗೂ ಕಾಂಗ್ರೆಸ್‌ ಆಡಳಿತದಲ್ಲಿರುವುದು ಅವರಿಗೆ ಪ್ಲಸ್‌ ಆಗಲಿದೆ. ಜತೆಗೆ ವೇಣುಗೋಪಾಲ ನಾಯಕ್‌ಗೆ ಚುನಾವಣೆ ಹೊಸದೇನಲ್ಲ. ಅವರದ್ದು ರಾಜಕೀಯ ಹಿನ್ನೆಲೆಯ ಕುಟುಂಬವಾಗಿದೆ. ಇವರ ಅಜ್ಜ ರಾಜಾ ಕುಮಾರ ನಾಯಕ ಅವರು ಎರಡು ಬಾರಿ, ತಂದೆ ರಾಜಾ ವೆಂಕಟಪ್ಪ ನಾಯಕ 4 ಬಾರಿ, ಚಿಕ್ಕಪ್ಪ ಒಂದು ಬಾರಿ ಸುರಪುರ ಕ್ಷೇತ್ರದಿಂದ ಶಾಸಕರಾಗಿದ್ದರು. ಅಲ್ಲದೆ, ತಂದೆಯ ಜತೆಗೆ ಚುನಾವಣೆ ಸಂದರ್ಭದಲ್ಲಿ ಕ್ಯಾಂಪೇನ್‌ ಮಾಡುವುದು, ತಂತ್ರಗಾರಿಕೆಯನ್ನು ರೂಪಿಸುವ ಕೆಲಸವನ್ನು ವೇಣುಗೋಪಾಲ ನಾಯಕ ಮಾಡುತ್ತಿದ್ದರು. ಹೀಗಾಗಿ ಅವರಿಗೆ ಈ ಚುನಾವಣೆ ಹೊಸದಲ್ಲ.

ಎಲ್ಲ ಪಕ್ಷದವರೂ ಇಲ್ಲಿ ಗೆದ್ದಿದ್ದಾರೆ

2008ರ ಕ್ಷೇತ್ರ ಮರು ವಿಂಗಡಣೆವರೆಗೂ ಸುರಪುರ ವಿಧಾನಸಭಾ ಕ್ಷೇತ್ರದಲ್ಲಿ ಸಾಮಾನ್ಯ ವರ್ಗದವರು ಸ್ಪರ್ಧೆ ಮಾಡಬಹುದಾಗಿತ್ತು. ಇದರ ಬಳಿಕ ಎಸ್‌ಟಿ ಮೀಸಲು ಕ್ಷೇತ್ರವಾಯಿತು. 1957ರಿಂದ ಇಲ್ಲಿಯವರೆಗೆ ಒಟ್ಟು 16 ಬಾರಿ ಚುನಾವಣೆಗಳು ನಡೆದಿವೆ. ಇದರಲ್ಲಿ ಕಾಂಗ್ರೆಸ್‌ 8, ಬಿಜೆಪಿ 2 ಹಾಗೂ ಸ್ವತಂತ್ರ ಪಕ್ಷ, ಕರ್ನಾಟಕ ಕಾಂಗ್ರೆಸ್‌ ಪಕ್ಷ (ಕೆಸಿಪಿ), ಕನ್ನಡ ನಾಡು ಪಕ್ಷ (ಕೆಎನ್‌ಡಿಪಿ) ಮತ್ತು ಸ್ವತಂತ್ರ್ಯ ಅಭ್ಯರ್ಥಿಗಳು ತಲಾ ಒಮ್ಮೆ ವಿಜಯ ಸಾಧಿಸಿದ್ದಾರೆ.

ಪಕ್ಷಾಂತರ ಮಾಡಿದ್ದ ರಾಜುಗೌಡ

2013ರ ಚುನಾವಣೆಯಲ್ಲಿ ಬಿಜೆಪಿ ತೊರೆದು ಜೆಡಿಎಸ್‌ ಸೇರಿದ್ದ ರಾಜು ಗೌಡ ಸೋಲು ಕಂಡಿದ್ದರು. ಆಗ ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದ ರಾಜಾ ವೆಂಕಟಪ್ಪ ನಾಯಕ 65,033 ಮತಗಳನ್ನು ಪಡೆದು ಗೆದ್ದಿದ್ದರು. ರಾಜುಗೌಡ 60,958 ಮತಗಳನ್ನು ಪಡೆದಿದ್ದರು. ಕೇವಲ 4,075 ಮತಗಳ ಅಂತರದಿಂದ ಸೋಲು ಕಂಡಿದ್ದರು.

2018ರ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಸೇರಿದ ರಾಜು ಗೌಡ 1,04,426 ಮತಗಳನ್ನು ಪಡೆದು ಮೂರನೇ ಬಾರಿಗೆ ಜಯ ಸಾಧಿಸಿದರು. ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ರಾಜಾ ವೆಂಕಟಪ್ಪ ನಾಯಕ 81,851 ಮತಗಳನ್ನು ಪಡೆದುಕೊಂಡಿದ್ದರು. ಹೀಗಾಗಿ 22,568 ಮತಗಳ ಅಂತರದಲ್ಲಿ ರಾಜುಗೌಡ ಗೆದ್ದಿದ್ದರು.

ಸಮುದಾಯವಾರು ಮತಗಳು ಎಷ್ಟಿವೆ?

ಸದ್ಯದ ಮಾಹಿತಿ ಪ್ರಕಾರ ಸುರಪುರ ಕ್ಷೇತ್ರದಲ್ಲಿ 1,41, 618 ಪುರುಷರು, 1,39,729 ಮಹಿಳಾ, 28 ಲಿಂಗತ್ವ ಅಲ್ಪಸಂಖ್ಯಾತ ಮತದಾರರು ಸೇರಿ ಒಟ್ಟು 2,81,375 ಮತದಾರರಿದ್ದಾರೆ. ಎಸ್‌ಟಿ ಮೀಸಲು ಕ್ಷೇತ್ರವಾಗಿರುವ ಸುರಪುರ ವಿಧಾನಸಭಾ ಕ್ಷೇತ್ರದಲ್ಲಿ ಪರಿಶಿಷ್ಟ ಪಂಗಡದ ಜನರೇ ನಿರ್ಣಾಯಕರು.

  • ಪರಿಶಿಷ್ಟ ಪಂಗಡ: 1 ಲಕ್ಷಕ್ಕೂ ಅಧಿಕ ಮತದಾರರು
  • ದಲಿತ: 80 ಸಾವಿರಕ್ಕೂ ಅಧಿಕ ಮತದಾರರು
  • ಮುಸ್ಲಿಂ: 45 ಸಾವಿರಕ್ಕೂ ಅಧಿಕ ಮತದಾರರಿದ್ದಾರೆ.

ಇದನ್ನೂ ಓದಿ: Lok Sabha Election 2024: ಮಂಡ್ಯನಾ? ರಾಮನಗರವಾ? ಧರ್ಮ ಸಂಕಟದಲ್ಲಿ ಮಾಜಿ ಸಿಎಂ ಎಚ್‌ಡಿಕೆ!

ಉಪ ಚುನಾವಣೆಯ ಫಲಿತಾಂಶ ಜೂ. 4ಕ್ಕೆ ಇದ್ದು, ಯಾರು ವಿಜಯಶಾಲಿಯಾಗಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ. ಆದರೆ, ಸುರಪುರ ಕ್ಷೇತ್ರದಲ್ಲಿ ಬಿಜೆಪಿ-ಕಾಂಗ್ರೆಸ್‌ ಮಧ್ಯೆ ನೇರ ಸ್ಪರ್ಧೆ ಏರ್ಪಟ್ಟಿದೆ.

Continue Reading

ದೇಶ

Kota Srinivas Poojary : ಫೋಟೊಗ್ರಾಫರ್‌ನಿಂದ ಸಂಸತ್‌ ಟಿಕೆಟ್‌ವರೆಗೆ; ಸಿಂಪಲ್​ ಮ್ಯಾನ್​ ಕೋಟ ಶ್ರೀನಿವಾಸ ಪೂಜಾರಿ ಜರ್ನಿ

kota srinivas poojary : ಗ್ರಾಮ ಪಂಚಾಯಿತಿ ಚುನಾವಣೆ ಮೂಲಕ ರಾಜಕೀಯ ಆರಂಭಿಸಿದ್ದ ಕೋಟ ಶ್ರೀನಿವಾಸ ಪೂಜಾರಿ ಅವರು ಇದೀಗ ಪಾರ್ಲಿಮೆಂಟ್​ ಮೆಟ್ಟಿಲೇರಲು ಸಜ್ಜಾಗಿದ್ದಾರೆ.

VISTARANEWS.COM


on

Lok sabha Election 2024 Kota Srinivas Poojary12
Koo

ಬೆಂಗಳೂರು: ಮುಂಬರುವ ಲೋಕಸಭಾ ಕ್ಷೇತ್ರ ಚುನಾವಣೆಗೆ (Lok Sabha Election) ಬಿಜೆಪಿ ತನ್ನ ಎರಡನೇ ಪಟ್ಟಿಯನ್ನು ಬುಧವಾರ (ಮಾರ್ಚ್​ 13ರಂದು) ಬಿಡುಗಡೆ ಮಾಡಿದೆ. ಒಟ್ಟು 72 ಅಭ್ಯರ್ಥಿಗಳಲ್ಲಿ ಕರ್ನಾಟಕದ 20 ಅಭ್ಯರ್ಥಿಗಳಿದ್ದಾರೆ. ಈ ಪಟ್ಟಿಯಲ್ಲಿ ವಿಶೇಷವಾಗಿ ಗಮನ ಸೆಳೆದಿರುವುದು ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ (Kota srinivas poojary). ಜನರ ನಡುವಿನ ನಾಯಕ ಹಾಗೂ ಅತ್ಯಂತ ಸರಳ ವ್ಯಕ್ತಿತ್ವದ ಶ್ರೀನಿವಾಸ ಪೂಜಾರಿ ಚುನಾವಣೆಯಲ್ಲಿ ಗೆದ್ದರೆ ಪಾರ್ಲಿಮೆಂಟ್ ಮೆಟ್ಟಿಲೇರುವುದು ನಿಶ್ಚಿತ. ಸಜ್ಜನ ಜನಪ್ರತಿನಿಧಿ ಎನಿಸಿಕೊಂಡಿರುವ ಅವರಿಗೆ ಬಿಜೆಪಿ ವರಿಷ್ಠರು ಟಿಕೆಟ್​ ನೀಡಿರುವುದು ಅವರ ಕ್ಷೇತ್ರದ ಬಿಜೆಪಿ ಅಭಿಮಾನಿಗಳ ಪಾಲಿಗೆ ಅತ್ಯಂತ ಹೆಮ್ಮೆಯ ಸಂಗತಿಯಾಗಿದೆ.

Lok-sabha-Election-2024-Kota-Srinivas-Poojary1

ಕರ್ನಾಟಕ ಸರ್ಕಾರದಲ್ಲಿ ಮೂರು ಬಾರಿ ಸಚಿವರಾಗಿದ್ದ ಅವರೀಗ ವಿಧಾನ ಪರಿಷತ್​ನಲ್ಲಿ ವಿರೋಧ ಪಕ್ಷದ ನಾಯಕ. ಅವರನ್ನು ಮುಂದಿನ ಲೋಕಸಭಾ ಚುನಾವಣೆಗೆ ಬಿಜೆಪಿ ಕಣಕ್ಕೆ ಇಳಿಸಿದೆ. ಕೋಟಾ ಶ್ರೀನಿವಾಸ ಪೂಜಾರಿ ಅವರು ಅತ್ಯಂತ ಸರಳ ವ್ಯಕ್ತಿತ್ವದವರು ಎಂಬುದು ಅವರನ್ನು ಬಲ್ಲವರು ಹೇಳುವ ಮೊದಲ ಮಾತು. ಅವರನ್ನು ಜನರು ಪಕ್ಷವನ್ನು ನೋಡದೇ ಪ್ರೀತಿಸುತ್ತಾರೆ ಎಂಬುದು ಕೂಡ ವಿಶೇಷ. ಅಭಿಮಾನಿಗಳ ದಂಡನ್ನು ಬಿಟ್ಟು ಸಾಮಾನ್ಯ ಜನರಂತೆ ಸುತ್ತಾಡುವ ಅವರು ಊಟ, ತಿಂಡಿಗೂ ಸಣ್ಣ ಪುಟ್ಟ ಹೋಟೆಲ್​ಗೆ ಹೋಗುತ್ತಾರೆ ಎಂಬುದು ವಿಶೇಷ.

ಸರಳ ರಾಜಕಾರಣಿ

ಸಾಮಾನ್ಯ ಛಾಯಾಗ್ರಾಹಕನಾಗಿ ವೃತ್ತಿ ಆರಂಭಿಸಿದ್ದ ಶ್ರೀನಿವಾಸ ಪೂಜಾರಿ ಅವರು ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಹಾಗೂ ವಿಧಾನ ಪರಿಷತ್‌ಗೆ ಆಯ್ಕೆಯಾಗಿ ಹಲವು ಇಲಾಖೆಗಳಲ್ಲಿ ಸಚಿವರಾಗಿದ್ದಾರೆ . ಅವರೀಗ ಲೋಕ ಸಭಾ ಟಿಕೆಟ್​ ಪಡೆದು ತಮ್ಮ ವ್ಯಾಪ್ತಿಯನ್ನು ರಾಷ್ಟ್ರೀಯ ರಾಜಕಾರಣದ ಮಟ್ಟಿಗೆ ವಿಸ್ತರಿಸಿಕೊಂಡಿದ್ದಾರೆ. ನೇರ ಮಾತು, ಒಲವು ನಿಲುವುಗಳಿಂದಲೇ ಸಾಧನೆಯ ಉತ್ತುಂಗಕ್ಕೇರಿ, ಬಿಜೆಪಿ ಪಕ್ಷದಲ್ಲಿಯೂ ಪ್ರಭಾವಿ ನಾಯಕನಾಗಿ ಬೆಳೆದಿದ್ದಾರೆ ಅವರು. ಆದರೆ, ಅವರ ಸರಳ ವ್ಯಕ್ತಿತ್ವ ಇಂದಿಗೂ ಬದಲಾಗಿಲ್ಲ.

Kota Srinivas Poojary

ಕೋಟ ಶ್ರೀನಿವಾಸ ಪೂಜಾರಿ, 1993ರಲ್ಲಿ ಗ್ರಾಮ ಪಂಚಾಯತ್ ಸದಸ್ಯರಾಗುವುದರೊಂದಿಗೆ ರಾಜಕೀಯ ಜೀವನ ಆರಂಭಿಸಿದ್ದರು. 1996ರಲ್ಲಿ ತಾಲೂಕು ಪಂಚಾಯತ್ ಸದಸ್ಯರಾಗಿ ಆಯ್ಕೆಗೊಂಡಿದ್ದರು. 2006ರಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾಗಿ ಆರಿಸಿ ಬಂದರು. ಅವರು ಕರ್ನಾಟಕ ರಾಜಕೀಯದಲ್ಲಿ ಹಲವಾರು ನಿರ್ಣಾಯಕ ಹುದ್ದೆಗಳನ್ನು ನಿರ್ವಹಿಸಿದ್ದಾರೆ. ಅವರು ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರವನ್ನು ಪ್ರತಿನಿಧಿಸಿ 6 ಜನವರಿ 2010 ರಿಂದ 4 ಜನವರಿ 2016 ರವರೆಗೆ ಕರ್ನಾಟಕ ವಿಧಾನ ಪರಿಷತ್ತಿಗೆ ಮೊದಲ ಬಾರಿಗೆ ಆಯ್ಕೆಯಾದರು ಮತ್ತು 6 ಜನವರಿ 2016 ರಿಂದ 5 ಜನವರಿ 2022 ರವರೆಗೆ ಅವಧಿಗೆ ಮರು ಆಯ್ಕೆಯಾದರು. 2022ರಲ್ಲಿ ಮತ್ತೆ ಆಯ್ಕೆಯಾಗಿದ್ದಾರೆ. ಫೆಬ್ರವರಿ 7, 2018 ರಿಂದ ಜುಲೈ 26, 2019 ರವರೆಗೆ ಕರ್ನಾಟಕ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾಗಿ ಸೇವೆ ಸಲ್ಲಿಸಿದ್ದು, ಮತ್ತದೇ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ. ಅಕ್ಟೋಬರ್ 7, 2021ರಂದು ಅವರನ್ನು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯರನ್ನಾಗಿ ನೇಮಿಸಲಾಗಿತ್ತು.

ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನ ಸೇರಿದಂತೆ ವಿವಿಧ ಹುದ್ದೆಗಳನ್ನಲಂಕರಿಸಿ ಅವುಗಳನ್ನು ಯಶಸ್ವಿಯಾಗಿ ನಿಭಾಯಿಸಿದ ಬಳಿಕ ಸದ್ಯ ಹಿಂದುಳಿದ ಮೋರ್ಚಾದ ರಾಜ್ಯಾಧ್ಯಕ್ಷರಾಗಿ ಗುರುತಿಸಿಕೊಂಡಿದ್ದಾರೆ. ಅವರಿಗೆ ಪಂಚಾಯತ್ ರಾಜ್ ವ್ಯವಸ್ಥೆಯ ಕುರಿತು ಆಳವಾದ ಅರಿವು, ಅಧ್ಯಯನಗಳಿವೆ.

ಫೋಟೋಗ್ರಫಿಯಿಂದ ಲೋಕಸಭಾ ಟಿಕೆಟ್​ ವರೆಗೆ

ಶ್ರೀನಿವಾಸ ಪೂಜಾರರು ಒಬ್ಬ ಸೃಜನಶೀಲ ರಾಜಕಾರಣಿ . ಆರಂಭದಲ್ಲಿ ಫೋಟೋಗ್ರಫಿಯನ್ನು ವೃತ್ತಿಯನ್ನಾಗಿಸಿಕೊಂಡ ಅವರು ಬರವಣಿಗೆಯಲ್ಲಿಯೂ ಸಿದ್ಧಹಸ್ತರು. ಅನೇಕ ದಿನಪತ್ರಿಕೆಗಳಲ್ಲಿ ಅಂಕಣಕಾರರಾಗಿದ್ದರು. ನಮ್ಮ ಕಮಲ ಎಂಬ ಪಂಚಾಯತ್ ರಾಜ್ ವ್ಯವಸ್ಥೆಯ ಬಗೆಗೆ ಮಾಸ ಪತ್ರಿಕೆಯೊಂದನ್ನು ಆರಂಭಿಸಿ ಅದರ ಸಂಪಾದಕರಾಗಿದ್ದರು. ಆಕರ್ಷಕ ಮಾತಿನ ವರಸೆ ಪೂಜಾರಿಯವರಿಗೆ ಸಲೀಸು. ಡಾ. ಶಿವರಾಮ ಕಾರಂತರ ಅಭಿಮಾನಿಯಾಗಿ ತನ್ನ ಹುಟ್ಟೂರಿನಲ್ಲಿ ಕಾರಂತ ಭವನ ನಿರ್ಮಾಣ, ಕಾರಂತ ಹುಟ್ಟೂರ ಪ್ರಶಸ್ತಿ ಸೇರಿದಂತೆ ಅವರ ನೆನಪನ್ನು ಕೋಟದಲ್ಲಿ ಚಿರಸ್ಥಾಯಿಯಾಗಿಸಿದ ಕೀರ್ತಿಯಲ್ಲಿ ಇವರದ್ದು ದೊಡ್ಡ ಪಾಲಿದೆ.

Continue Reading

Lok Sabha Election 2024

Lok Sabha Election 2024: ಮಂಡ್ಯ ಕ್ಷೇತ್ರದ ಮೈತ್ರಿ ಟಿಕೆಟ್ 100% ನನಗೇ ಸಿಗ್ತದೆ ಎಂದ ಸುಮಲತಾ

Lok Sabha Election 2024: ಅಭ್ಯರ್ಥಿಗಳ ಘೋಷಣೆಗೂ ಮೊದಲು ದೆಹಲಿಗೆ ಹೋಗುವ ಅಗತ್ಯವಿಲ್ಲ. ಒಂದು ವೇಳೆ ಬರಲು ಹೇಳಿದರೆ ಹೋಗುತ್ತೇನೆ ಎಂದು ಸಂಸದೆ ಸುಮಲತಾ ಅಂಬರೀಶ್‌ ತಿಳಿಸಿದ್ದಾರೆ.

VISTARANEWS.COM


on

Sumalatha
Koo

ಮಂಡ್ಯ: ಯಾವುದೇ ಅನುಭವ ಇಲ್ಲದೇ ಕಳೆದ ಬಾರಿ ನಾನು ಪಕ್ಷೇತರ ಅಭ್ಯರ್ಥಿಯಾಗಿ ನಿಂತಿದ್ದೆ. ನನಗೆ ಬೇಕಾದವರು ನಿಮ್ಮ ಜೊತೆ ಇರುತ್ತೇವೆ ಎಂದು ಗಟ್ಟಿಯಾಗಿ ನಿಂತಿದ್ದರು. ಈಗಿನ ಸಂದರ್ಭ ಬೇರೆಯೇ ಇದೆ. ಈ ಬಾರಿ ಮಂಡ್ಯ ಬಿಜೆಪಿ-ಜೆಡಿಎಸ್ ಮೈತ್ರಿ ಟಿಕೆಟ್ 100% ನನಗೆ ಸಿಗಲಿದೆ ಎಂದು ಸಂಸದೆ ಸುಮಲತಾ ಅಂಬರೀಶ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಬಗ್ಗೆ ಆದಿ ಚುಂಚನಗಿರಿ ಮಠಕ್ಕೆ ಭೇಟಿ ನೀಡಿದ ವೇಳೆ ಮಾತನಾಡಿದ ಅವರು, ನೆನ್ನೆಯ ಲಿಸ್ಟ್ ನೋಡಿದರೆ ರಾಜ್ಯವಾರು ಪಟ್ಟಿ ಬಿಡುಗಡೆ ಮಾಡಿದ್ದಾರೆ. ಹಾಗೆ ಕರ್ನಾಟಕದ್ದು ಬಂದಾಗ ನಮ್ಮ ಎಲ್ಲರ ಹೆಸರು ಬರಬಹುದು. ಅಭ್ಯರ್ಥಿಗಳ ಘೋಷಣೆಗೂ ಮೊದಲು ದೆಹಲಿಗೆ ಹೋಗುವ ಅಗತ್ಯವಿಲ್ಲ. ಒಂದು ವೇಳೆ ನನ್ನು ಬರಲು ಹೇಳಿದರೆ ಹೋಗುತ್ತೇನೆ ಎಂದು ಹೇಳಿದರು.

ಈ ಬಾರಿಯ ಚುನಾವಣೆಯ ಪ್ರಚಾರ, ಹೋರಾಟ ಡಿಫೆರೆಂಟ್ ಆಗಿ ಇರುತ್ತೆ. ಯಶ್, ದರ್ಶನ್ ಬಂದ್ರೆ ಬಲ ಇರುತ್ತೆ, ಎಲ್ಲರ ಸಪೋರ್ಟ್ ಇದೆ. ಅವರು ನನಗೋಸ್ಕರ ಬರಿ ಸಪೋರ್ಟ್ ಅಲ್ಲ. ತ್ಯಾಗ ಮಾಡಿದ್ದಾರೆ. ಇಬ್ಬರೂ 25 ದಿನ ಸ್ವಾರ್ಥವಿಲ್ಲದೆ ನನ್ನ ಪರ ನಿಂತಿದ್ದರು. ಪದೇ ಪದೇ ಎಲ್ಲಾ ಬಿಟ್ಟು ಬನ್ನಿ ಎಂದು ಕರೆಯಲು ನನ್ನ ಮನಸ್ಸು ಒಪ್ಪಲ್ಲ.
ಯಶ್, ದರ್ಶನ್ ಸಿನಿಮಾಗಳಲ್ಲಿ ಬ್ಯುಸಿ ಇರುತ್ತಾರೆ. ಅವರು ಬಂದರೆ ಖಂಡಿತವಾಗಿ ಸ್ವಾಗತಿಸುವೆ ಎಂದು ತಿಳಿಸಿದರು.

ಇದನ್ನೂ ಓದಿ | BJP Candidates List: ಬಿಜೆಪಿ ಮೊದಲ ಪಟ್ಟಿಯಲ್ಲಿ 33 ಹಾಲಿ ಸಂಸದರಿಗೆ ಟಿಕೆಟ್‌ ನಕಾರ!

ಯಶ್ ಚುನಾವಣೆ ಪ್ರಚಾರದಲ್ಲಿ ಭಾಗವಹಿಸಲ್ಲ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿ, ಅವರು ಪ್ಯಾನ್ ಇಂಡಿಯಾ ಸ್ಟಾರ್‌ ಆಗಿದ್ದಾರೆ, ಅವರಿಂದ ಹೆಚ್ಚು ನಿರೀಕ್ಷೆ ಮಾಡುವುದು ಸರಿಯಲ್ಲ. ಅವರು ಬಂದರೆ ಸಂತೋಷಪಡುತ್ತೇನೆ. ಕಳೆದ ಚುನಾವಣೆಯಲ್ಲಿ ನನ್ನ ಮನೆಯ ಮಕ್ಕಳು ತರ ಓಡಾಡಿದ್ದಾರೆ. ಆವತ್ತಿನ ಸ್ಥಿತಿಯಲ್ಲಿ ನನ್ನ ಜೊತೆ ನಿಂತಿದ್ದರು. ಈ ಬಾರಿ ಅವರು ಬರದಿದ್ದರೂ ನಾನು ಬೇಜಾರು ಮಾಡಿಕೊಳ್ಳಲ್ಲ ಎಂದು ತಿಳಿಸಿದರು.

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿ, ಇದು ಅತ್ಯಂತ ಭಯಾನಕ‌ ವಿಚಾರ. ಇದನ್ನು ಎಲ್ಲರೂ ಖಂಡಿಸಬೇಕು. ತಪ್ಪಿತಸ್ಥರಿಗೆ ಕಠಿಣಾತಿ ಕಠಿಣ ಶಿಕ್ಷೆ ವಿಧಿಸಬೇಕು. ಈ ಪ್ರಕರಣದಲ್ಲಿ ಬೇರೆ ಬೇರೆ ಹೇಳಿಕೆ ಕೊಡೋದು ಮಹಾಪರಾಧ. ಪೊಲೀಸರು ತನಿಖೆ ನಡೆಸುತ್ತಿದ್ದು, ಆರೋಪಿಗಳನ್ನು ಬೇಗ ಬಂಧಿಸಲಿದ್ದಾರೆ ಎಂದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬುದಕ್ಕಿಂತ ಹೆಚ್ಚಾಗಿ ಉಗ್ರವಾದಿ ಅಥವಾ ಆತಂಕವಾದಿಗಳು ಈ ರೀತಿಯ ಕೃತ್ಯಗಳನ್ನು ಮಾಡಬಹುದು ಎಂಬಂತೆ ಪ್ರೋತ್ಸಾಹವಂತೂ ಇದೆ. ಯಾರೇ ಆದರೂ ಇದನ್ನು ಉತ್ತೇಜನ ನೀಡುವಂತಹ ಹೇಳಿಕೆ‌ ಕೊಡಬಾರದು ಎಂದು ಹೇಳಿದರು.

ವಿಧಾನಸೌಧದಲ್ಲಿ ಪಾಕಿಸ್ತಾನ‌ ಪರ ‌ಘೋಷಣೆ ವಿಚಾರಕ್ಕೆ ಸ್ಪಂದಿಸಿ, ಎಫ್‌ಎಸ್‌ಎಲ್ ವರದಿಯಲ್ಲೂ ಅದು ಫೇಕ್ ಅಲ್ಲ ಎಂಬಂತೆ ಬಂದಿದೆ. ಪಕ್ಷಗಳು ಒಂದು ಸಮುದಾಯವನ್ನು ಯಾವುದೇ ತಪ್ಪು ಮಾಡಿದರೂ ಖಂಡಿಸದೇ, ರಕ್ಷಣೆ ಮಾಡಿಕೊಂಡು ಬರಬರಬಾರದು. ಎಲ್ಲಾ‌‌ ಚಾನೆಲ್‌ಗಳೂ ಆ ವಿಚಾರವನ್ನ ಪ್ರಚಾರ ಮಾಡಿವೆ. ಒಂದೆರಡು ಚಾನೆಲ್ ಆದ್ರೆ ತಪ್ಪು ಮಾಡಬಹುದು. ಎಲ್ಲಾ ಚಾನೆಲ್‌ಗಳು ತಪ್ಪು ಮಾಡುತ್ತವೆಯೇ ಎಂದು ಪ್ರಶ್ನಿಸಿದರು.

ಮಂಡ್ಯದಲ್ಲಿ ಮನೆ ಕಟ್ಟುವ ಬಗ್ಗೆ ಪ್ರತಿಕ್ರಿಯಿಸಿ, ಮಂಡ್ಯದಲ್ಲಿ ನನ್ನ ಮನೆ ಇದೆ, ಅದು ಬಾಡಿಗೆ ಮನೆ. ಅಂಬರೀಶ್ ಇದ್ದ ಕಾಲದಿಂದಲೂ ಈ ಮನೆಯಲ್ಲಿ ಬಾಡಿಗೆಗೆ ಇದ್ದೇವೆ. ಹನಕೆರೆ ಬಳಿ ಲ್ಯಾಂಡ್ ತೆಗೆದುಕೊಂಡು ಮನೆಕಟ್ಟುವ ಆಸೆ ಇತ್ತು.
ಆದ್ರೆ ಅದರಲ್ಲಿ ರಾಜಕಾರಣ ನಡೆಯಿತು. ಮನೆ ಕಟ್ಟುವಾಗ ಅಡಚಣೆಗಳು ಉಂಟಾದವು. ದೇವರು ಆಶೀರ್ವಾದ ಮಾಡಿದ್ರೆ ಮುಂದೆ ಮನೆ ಕಟ್ಟೋಣ., ನನಗಿಂತ ಅಭಿಗೆ ಮಂಡ್ಯದಲ್ಲಿ ಮನೆ ಕಟ್ಟಲು ತುಂಬಾ ಆಸೆ ಇದೆ‌ ಎಂದು ತಿಳಿಸಿದರು.

ಇದನ್ನೂ ಓದಿ | R Ashok : ಸರ್ಕಾರಕ್ಕೆ ಬುದ್ಧಿ ಬರಲು ಇನ್ನೆಷ್ಟು ಬಾಂಬ್‌ ಬ್ಲಾಸ್ಟ್‌ ಆಗಬೇಕು; ಆರ್‌ ಅಶೋಕ್‌ ಪ್ರಶ್ನೆ

ಮಂಡ್ಯದಲ್ಲಿ ಹೊಸ ಸಕ್ಕರೆ‌ ಕಾರ್ಖಾನೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಮೈಷುಗರ್ ಕಾರ್ಖಾನೆಯನ್ನು ಯಾರು ಟಚ್ ಮಾಡಬಾರದು, ಈ ಹಿಂದೆ ಭ್ರಷ್ಟಾಚಾರ ಆಗಿರುವುದು ಗೊತ್ತಿದೆ. ಇದರಿಂದ ನೂರಾರು ಕೋಟಿ ನಷ್ಟವಾಗಿದೆ. ಈ ಹಿಂದೆ ಯಡಿಯೂರಪ್ಪ ಮಾತು ಕೊಟ್ಟು, ಬೊಮ್ಮಾಯಿ ಅವರು 50 ಕೋಟಿ ಕೊಟ್ಟು ಕಾರ್ಖಾನೆ ಶುರು ಮಾಡಿಸಿದ್ದರು. ಈಗಿನ ಸರ್ಕಾರ 100 ಕೋಟಿ ಕೊಟ್ಟಿದೆ. ಇನ್ನೂ ಕೂಡ ಕಬ್ಬು ಅರೆಯುತ್ತಿಲ್ಲ, ಮತ್ತೆ 500 ಕೋಟಿಯ ಹೊಸ ಕಾರ್ಖಾನೆ ಅಂದ್ರೆ ಅರ್ಥ ಏನು? ಒಂದಲ್ಲ 5 ಕಾರ್ಖಾನೆ ಮಾಡಿ. ಮೈಷುಗರ್ ಕಾರ್ಖಾನೆ ಮಂಡ್ಯಕ್ಕೆ ಪ್ರತಿಷ್ಠೆಯಾಗಿದೆ. ಹಳೆಯ ಕಾರ್ಖಾನೆ ಏನು ಮಾಡ್ತೀರಾ? ಮತ್ತೆ ಕ್ಲೋಸ್ ಮಾಡ್ತೀರಾ? ಐತಿಹಾಸಿಕ ಕಾರ್ಖಾನೆ ಎಂದು ನಾವು ಕಾಪಾಡಲು ಹೋರಾಟ ಮಾಡಿದ್ದು ವ್ಯರ್ಥನಾ? ಇದು ನಾಲ್ವಡಿ ಕೃಷ್ಣರಾಜ ಒಡೆಯರ್ ಕೊಡುಗೆಯಾಗಿದ್ದು, ಭಾವನಾತ್ಮಕ ಸಂಬಂಧ ಇದೆ. 500 ಕೋಟಿಯನ್ನು ಈ ಕಾರ್ಖಾನೆಗೆ ಹಾಕಿ ಸರಿಪಡಿಸಬೇಕು. ಮೈಷುಗರ್ ಕಾರ್ಖಾನೆ ಉಳಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಹೇಳಿದರು.

Continue Reading
Advertisement
World Anti Child Labor Day celebration in Hosapete
ವಿಜಯನಗರ14 mins ago

Vijayanagara News: ಹೊಸಪೇಟೆಯಲ್ಲಿ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ

Kangana Ranaut
Latest17 mins ago

Kangana Ranaut: ಸಂಸದೆಯಾಗಿರುವ ನಟಿ ಕಂಗನಾ ರಣಾವತ್‌ಗೆ ಸಿಗುವ ಸಂಬಳ, ಇತರ ಸವಲತ್ತುಗಳು ಏನೇನು?

JP Nadda
Latest29 mins ago

JP Nadda: ವೇದಿಕೆ ಮೇಲೆ ಗುಟ್ಕಾ ತಿಂದ ಕೇಂದ್ರ ಆರೋಗ್ಯ ಸಚಿವ ನಡ್ಡಾ? ವಿಡಿಯೊ ನೋಡಿ

Actor darshan Arrested
ಪ್ರಮುಖ ಸುದ್ದಿ36 mins ago

Actor darshan Arrested : ದರ್ಶನ್‌ಗೆ ಎಣ್ಣೆ ಹೊಡೆಯಲು, ಸಿಗರೇಟ್​ ಸೇದಲು ಠಾಣೆಗೇ ಶಾಮಿಯಾನ ಹಾಕಿದರೆ ಪೊಲೀಸರು?

Hamare Baarah Release Supreme Court has imposed a stay
ಬಾಲಿವುಡ್41 mins ago

Hamare Baarah: ಮುಸ್ಲಿಂ ಮಹಿಳೆಯರ ಕುರಿತ ʻಹಮಾರೆ ಬಾರಾʼ ಸಿನಿಮಾ ಬಿಡುಗಡೆಗೆ ಸುಪ್ರೀಂ ಕೋರ್ಟ್ ತಡೆ

Stock Market
ವಾಣಿಜ್ಯ43 mins ago

Stock Market: ಷೇರುಪೇಟೆಯಲ್ಲಿ ಗೂಳಿ ಗುಟುರು; ಸೆನ್ಸೆಕ್ಸ್‌, ನಿಫ್ಟಿ ಏರಿಕೆ

Actor Darshan
ಬೆಂಗಳೂರು43 mins ago

Actor Darshan : ರೇಣುಕಾಸ್ವಾಮಿಯನ್ನು ಕೊಂದು ನಟ ದರ್ಶನ್‌ ಆ್ಯಂಡ್‌ ಗ್ಯಾಂಗ್‌ ಫೋನ್‌ ಮಾಡಿದ್ದು ಯಾರಿಗೆ?

Darshan Old Case Coming Out darshan gang
ಕ್ರೈಂ47 mins ago

Actor Darshan: ಬಡಪಾಯಿ ಕಾರ್ಮಿಕರ ಮೇಲೆ ನಾಯಿ ಛೂ ಬಿಟ್ಟು ಹಿಂಸಿಸಿದ್ದ ದರ್ಶನ್‌ & ಗ್ಯಾಂಗ್‌!

IND vs USA
ಕ್ರೀಡೆ1 hour ago

IND vs USA: ಬೆಸ್ಟ್​ ಫೀಲ್ಡಿಂಗ್​ಗೆ 2ನೇ ಚಿನ್ನದ ಪದಕ ಗೆದ್ದ ಮೊಹಮ್ಮದ್ ಸಿರಾಜ್

Actor Darshan case ram gopal varma Reaction
ಸ್ಯಾಂಡಲ್ ವುಡ್1 hour ago

Actor Darshan: ಆರಾಧನೆ ಅತಿರೇಕವಾದರೆ ದುರಂತ ಖಚಿತ; ದರ್ಶನ್​ ಬಗ್ಗೆ ರಾಮ್​ಗೋಪಾಲ್ ವರ್ಮಾ ಹೇಳಿದ್ದು ಹೀಗೆ…

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ2 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ2 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ2 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ2 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ6 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ6 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌