ಮೇ 27, 28ರಂದು ವಿಸ್ತಾರ ಸಾಹಿತ್ಯ ಸಂಭ್ರಮ: ಸಾಹಿತಿಗಳ ಬೆಂಬಲ - Vistara News

ಕಲೆ/ಸಾಹಿತ್ಯ

ಮೇ 27, 28ರಂದು ವಿಸ್ತಾರ ಸಾಹಿತ್ಯ ಸಂಭ್ರಮ: ಸಾಹಿತಿಗಳ ಬೆಂಬಲ

ವಿಸ್ತಾರ ನ್ಯೂಸ್‌ ವಾಹಿನಿಯು ಮೇ 27 ಹಾಗೂ 28ರಂದು ಬೆಂಗಳೂರಿನಲ್ಲಿ ಆಯೋಜಿಸಿರುವ ʼವಿಸ್ತಾರ ಸಾಹಿತ್ಯ ಸಂಭ್ರಮʼದ ಹಿನ್ನೆಲೆಯಲ್ಲಿ ಸಾಹಿತಿಗಳ ಜತೆ ಸಮಾಲೋಚನಾ ಸಭೆ ಇಂದು ವಿಸ್ತಾರ ನ್ಯೂಸ್‌ ಕಚೇರಿಯಲ್ಲಿ ನಡೆಯಿತು.

VISTARANEWS.COM


on

writers meet
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವಿಸ್ತಾರ ನ್ಯೂಸ್‌ ವಾಹಿನಿಯು ಮೇ 27 ಹಾಗೂ 28ರಂದು ಬೆಂಗಳೂರಿನಲ್ಲಿ ಆಯೋಜಿಸಿರುವ ʼವಿಸ್ತಾರ ಸಾಹಿತ್ಯ ಸಂಭ್ರಮʼದ ಹಿನ್ನೆಲೆಯಲ್ಲಿ ಸಾಹಿತಿಗಳ ಜತೆ ಸಮಾಲೋಚನಾ ಸಭೆ ಇಂದು ವಿಸ್ತಾರ ನ್ಯೂಸ್‌ ಕಚೇರಿಯಲ್ಲಿ ನಡೆಯಿತು.

ವಿಸ್ತಾರ ನ್ಯೂಸ್ ಪ್ರಧಾನ ಸಂಪಾದಕ ಮತ್ತು ಸಿಇಒ ಹರಿಪ್ರಕಾಶ್ ಕೋಣೆಮನೆ ಅವರು ಸಾಹಿತ್ಯ ಸಂಭ್ರಮದ ರೂಪುರೇಷೆಗಳನ್ನು ವಿವರಿಸಿದರು. ವಿಸ್ತಾರ ವಾಹಿನಿಯು ಕನ್ನಡ ನಾಡು-ನುಡಿ, ಸಂಸ್ಕೃತಿಗಳನ್ನು ಬಿಂಬಿಸುವ, ಈ ಮೂಲಕ ಕಲಾಸಕ್ತರನ್ನು ಬೆಸೆಯುವ ʼಸಾಹಿತ್ಯ ಸಂಭ್ರಮ’ ಆಯೋಜಿಸುತ್ತಿದೆ. ವಿಸ್ತಾರ ವಾಹಿನಿ ಈಗಾಗಲೇ ʼಬುಕ್‌ ಟಾಕ್‌ʼ ಮೂಲಕ ಪುಸ್ತಕ ಪರಿಚಾರಿಕೆ ಮಾಡುತ್ತಿದೆ. ಟಿವಿ ವಾಹಿನಿಯೊಂದು ಸಾಹಿತ್ಯೋತ್ಸವ ಆಯೋಜಿಸುತ್ತಿರುವುದು ಇದೇ ಮೊದಲು. ಸಮಕಾಲೀನ ಆಶಯಗಳನ್ನು ಹೊಂದಿರುವ ಗಂಭೀರ ಸಂವಾದ ಹಾಗೂ ಜನಪ್ರಿಯ ಅಂಶಗಳು ಬೆರೆತ ಮಹತ್ವದ ಸಾಹಿತ್ಯೋತ್ಸವ ಆಯೋಜಿಸುವುದು ವಿಸ್ತಾರದ ಆಶಯ ಎಂದವರು ತಿಳಿಸಿದರು.

ವಿಸ್ತಾರದ ಈ ಉತ್ಸವದಲ್ಲಿ ನಾಡಿನ ಖ್ಯಾತ ಸಾಹಿತಿಗಳು, ಸಿನೆಮಾ, ರಾಜಕೀಯ, ಕ್ರೀಡೆ ಮುಂತಾದ ಹಲವಾರು ಸಾಂಸ್ಕೃತಿಕ ಕ್ಷೇತ್ರಗಳ ಪ್ರಮುಖರು ಭಾಗವಹಿಸಲಿದ್ದಾರೆ. ರಾಜ್ಯದ ಪ್ರತಿ ತಾಲೂಕಿನಿಂದ ಮತ್ತು ದೇಶ- ವಿದೇಶಗಳಿಂದ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಮಕ್ಕಳ ಆಟ, ಪರಿಸರ ಪಾಠ, ಆಹಾರ ವೈವಿಧ್ಯ, ಪುಸ್ತಕ ಮೇಳ ಮುಂತಾದ ಅನೇಕ ಆಕರ್ಷಣೆಗಳಿರುತ್ತವೆ. ಮಕ್ಕಳಿಂದ ವಯೋವೃದ್ಧರವರೆಗೆ ಎಲ್ಲರೂ ಖುಷಿಯಿಂದ ಭಾಗವಹಿಸಬಹುದಾದ ಪರಿಸರ ನಿರ್ಮಾಣವಾಗಲಿದೆ ಎಂದು ವಿವರಿಸಿದರು.

ವಿದ್ವಾಂಸ, ಸಾಹಿತಿ ಮಲ್ಲೇಪುರಂ ಜಿ. ವೆಂಕಟೇಶ್ ಮಾತನಾಡಿ, ಕರ್ನಾಟಕದ ನೆಲ- ಜಲದ ಆಶಯಗಳನ್ನು ಬಿಂಬಿಸುವ ಸಾಹಿತ್ಯ ಹಬ್ಬ ನಡೆಸುವುದು ಮಹತ್ವದ್ದಾಗಬೇಕಿದೆ. ವಾಹಿನಿಯೊಂದು ಇಂಥ ಸಾಹಸಕ್ಕೆ ಮುಂದಾಗಿರುವುದು ಶ್ಲಾಘನೀಯ ಎಂದರು.

ಸಾಹಿತ್ಯ ಸಂಭ್ರಮದಲ್ಲಿ ಪ್ರಸ್ತುತ ಕನ್ನಡ ಕಾವ್ಯದ ನೆಲೆ ಬೆಲೆಗಳು ಚರ್ಚೆಯಾಗಬೇಕು. ಮುಂದಿನ ತಲೆಮಾರಿನ ಓದುಗರು ಯಾವುದನ್ನು ಓದುತ್ತಾರೆ ಎಂಬುದನ್ನು ನಾವೆಲ್ಲರೂ ತಿಳಿದುಕೊಳ್ಳಬೇಕಿದೆ. ಆಗ ಮಾತ್ರ ನಮ್ಮ ಸಾಹಿತ್ಯ ಕೃಷಿ ಅರ್ಥಪೂರ್ಣವಾಗುತ್ತದೆ ಎಂದು ಹಿರಿಯ ಕವಿ ಬಿ.ಆರ್‌ ಲಕ್ಷ್ಮಣರಾವ್‌ ನುಡಿದರು.

ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಆಗುವಂತೆ ಸಾಹಿತ್ಯ ಸಂಭ್ರಮವು ಪುಸ್ತಕಗಳ ಮಾರಾಟಕ್ಕೆ ಹಾಗೂ ಹೊಸ ತಲೆಮಾರಿನ ಸಾಹಿತಿಗಳ ಕೃಷಿಗೆ ಪೂರಕವಾದ ರೀತಿಯಲ್ಲಿ ಸಂಯೋಜಿಸಲ್ಪಡಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್‌ ಮಾಜಿ ಅಧ್ಯಕ್ಷ ಮನು ಬಳಿಗಾರ್‌ ಕಿವಿಮಾತು ಹೇಳಿದರು.

ಆಧುನಿಕ ಕನ್ನಡ ಸಾಹಿತ್ಯದಲ್ಲಿ ಹೆಚ್ಚಿನ ಚರ್ಚೆಯಾಗುತ್ತಿರುವ ಮಹಿಳಾ, ಲಿಂಗತ್ವ, ಮಕ್ಕಳ, ಜನಪ್ರಿಯ ಮತ್ತಿತರ ಬಹುತ್ವದ ನೆಲೆಗಳಲ್ಲಿ ಕಾರ್ಯಕ್ರಮಗಳು ಸಂಯೋಜನೆಯಾದರೆ ಎಲ್ಲರನ್ನೂ ತಲುಪುವಂತಾಗುತ್ತದೆ ಎಂದು ಕತೆಗಾರ ದಾದಾಪೀರ್‌ ಜೈಮನ್‌ ನುಡಿದರು.

ಸಾಹಿತಿಗಳಾದ ಡುಂಡಿರಾಜ್‌, ಸಹನಾ ಹೆಗಡೆ, ಅರುಣ ಜಿ.ವಿ., ಮಧುಸೂದನ ವೈ.ಎನ್, ಆಶಾ ರಘು, ಶಿವಕುಮಾರ ಮಾವಲಿ, ಶರತ್‌ ಭಟ್‌ ಸೇರಾಜೆ, ಲಕ್ಷ್ಮಣ ವಿ.ಎ., ಶಶಾಂಕ್‌ ಪರಾಶರ್‌, ವಿನಾಯಕ ಅರಳಸುರುಳಿ, ಮಂಜುನಾಥ ಕುಣಿಗಲ್‌, ನೌಶಾದ್‌ ಜನ್ನತ್‌, ಶಮಾ ನಂದಿಬೆಟ್ಟ, ಪೂರ್ಣಿಮಾ ಸಣ್ಣಕೇರಿ, ಗಾಯತ್ರಿ ರಾಜ್‌ ಭಾಗವಹಿಸಿ ಸಲಹೆ ಸೂಚನೆಗಳನ್ನು ನೀಡಿದರು.

ವಿಸ್ತಾರ ನ್ಯೂಸ್‌ನ ನಿರ್ದೇಶಕ (ಬ್ಯುಸಿನೆಸ್‌) ವಿನಯ್‌ ಶೇಷಗಿರಿ, ಸಿಒಒ ಪರಶುರಾಮ್‌, ವಿಸ್ತಾರ ಮನರಂಜನಾ ವಾಹಿನಿ ಕಂಟೆಂಟ್‌ ಹೆಡ್‌ ಕುಸುಮಾ ಆಯರಹಳ್ಳಿ ಜತೆಗಿದ್ದರು.

ಇದನ್ನೂ ಓದಿ: ಮೇ 27, 28ರಂದು ವಿಸ್ತಾರ ಸಾಹಿತ್ಯ ಸಂಭ್ರಮ, ಪ್ರಕಾಶಕರ ಬೆಂಬಲ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಬೆಂಗಳೂರು

Siddheshwar Temple : ಸೊಲ್ಲಾಪುರದ ಸಿದ್ದೇಶ್ವರ ದೇಗುಲದ ಆವರಣದಲ್ಲಿ ವಚನಕಾರ ಸಿದ್ದರಾಮನ ವಚನಗಳ ಅಳವಡಿಕೆಗೆ ಕಸಾಪ ಆಗ್ರಹ

ಸೊಲ್ಲಾಪುರದ ಸಿದ್ದೇಶ್ವರ ದೇವಾಲಯದ ಆವರಣದಲ್ಲಿ ವಚನಕಾರ ಸಿದ್ದರಾಮನ ವಚನಗಳನ್ನು ಅಳವಡಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಆಗ್ರಹಿಸಿದ್ದಾರೆ.

VISTARANEWS.COM


on

By

Siddeshwara Temple
Koo

ಬೆಂಗಳೂರು: ಪ್ರಸಿದ್ಧ ವಚನಕಾರನಾದ ಸೊನ್ನಲಿಗೆಯ ಸಿದ್ದರಾಮ, ಸೊಲ್ಲಾಪುರದಲ್ಲಿ ಸ್ಥಾಪಿಸಿದ ಸಿದ್ದೇಶ್ವರ ಗುಡಿಯಲ್ಲಿ (Siddheshwar Temple) ಸಿದ್ದರಾಮನ ಆಯ್ದ ವಚನಗಳನ್ನು ಕನ್ನಡ ಮತ್ತು ಮರಾಠಿ ಭಾಷೆಯ ಫಲಕಗಳಲ್ಲಿ ಮುದ್ರಿಸಿ, ದೇವಸ್ಥಾನದ ಆವರಣದಲ್ಲಿ ತೂಗುಹಾಕಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ದೇವಳದ ಆಡಳಿತ ಮಂಡಳಿಯನ್ನು ಆಗ್ರಹಿಸಿದ್ದಾರೆ.

ಈ ಕುರಿತಂತೆ ಆಡಳಿತ ಮಂಡಳಿಯ ಮುಖ್ಯಸ್ಥರಿಗೆ ಪತ್ರ ಬರೆದು ಮಾತನಾಡಿದ ಡಾ. ಬಿಳಿಮಲೆ ಪ್ರಸಿದ್ಧ ವಚನಕಾರನಾದ ಸೊನ್ನಲಿಗೆಯ ಸಿದ್ದರಾಮ ಕಲ್ಯಾಣ ಕ್ರಾಂತಿಯ ಕೇಂದ್ರ ಬಿಂದುವಾಗಿದ್ದ ಶೂನ್ಯ ಸಿಂಹಾಸನವನ್ನೇರಿದ ಮೂರನೆಯ ಅನುಭಾವಿ ಆಗಿದ್ದ. ತನ್ನ ಕಾಯಕ ತತ್ವದಿಂದಲೇ ಪ್ರಸಿದ್ಧನಾಗಿದ್ದ ಆತ, ಶರೀರವನ್ನು ವ್ಯರ್ಥವಾಗಿ ಕಳೆಯಬಾರದೆಂಬ ನಿಲುವನ್ನು ಹೊಂದಿದ್ದ. ಸಿದ್ದರಾಮ ಕಟ್ಟಿಸಿದ ಕೆರೆಗಳು ಮತ್ತು ಅರವಟ್ಟಿಗೆಗಳು ಇಂದಿಗೂ ಬದುಕುಳಿದಿದ್ದು, ಅವರ ಸಾಮಾಜಿಕ ಬದ್ಧತೆ ಅನನ್ಯವಾದುದು ಎಂದಿದ್ದಾರೆ.

ಕರ್ನಾಟಕ ಏಕೀಕರಣದ ನಂತರ ಸಿದ್ದರಾಮನ ಹುಟ್ಟೂರಾದ ಸೊನ್ನಲಿಗೆಯು ಮಹಾರಾಷ್ಟ್ರಕ್ಕೆ ಸೇರಿ, ಆ ಪ್ರದೇಶವು ಮರಾಠಿಮಯವಾಗುತ್ತಲೇ ಹೋಯಿತು. ಇವತ್ತು ಅಲ್ಲಿ ಕನ್ನಡ ಕಾಣೆಯಾಗಿದ್ದು, ಜನರಿಗೂ ಸಿದ್ದರಾಮನ ಮಹತ್ವ ತಿಳಿಯದ ಸ್ಥಿತಿ ನಿರ್ಮಾಣವಾಗಿದೆ. ಕಪಿಲ ಸಿದ್ಧಮಲ್ಲಿಕಾರ್ಜುನನ ಅಂಕಿತದಲ್ಲಿ ೧೯೦೦ಕ್ಕೂ ಹೆಚ್ಚು ವಚನಗಳನ್ನು ಬರೆದ ಸಿದ್ದರಾಮನ ಹೆಸರು ಹೀಗೆ ಮರೆಯಾಗುತ್ತಿರುವುದು ದುರದೃಷ್ಟಕರ ಎಂದಿದ್ದಾರೆ.

ಕನ್ನಡ ಮತ್ತು ಮರಾಠಿಯಲ್ಲಿ ಸಿದ್ದರಾಮನ ವಚನಗಳ ಸಂದೇಶವು ದೇವಸ್ಥಾನದ ಆವರಣದಲ್ಲಿಯೇ ದೊರೆತಲ್ಲಿ, ಅದು ಭಾಷಾ ಸೌಹಾರ್ದತೆಯ ಸಂಕೇತವಾಗುತ್ತದೆಯಷ್ಟೇ ಅಲ್ಲ, ನಾಗರಿಕ ಸಮಾಜಕ್ಕೆ ದೊರೆಯಬಹುದಾದ ಅತ್ಯುತ್ತಮ ಸಂದೇಶವೂ ಆಗುತ್ತದೆ ಎಂದಿದ್ದಾರೆ. ತಮ್ಮ ಕೋರಿಕೆಯನ್ನು ಸಕಾರಾತ್ಮಕವಾಗಿ ಪರಿಗಣಿಸಿರುವ ಆಡಳಿತ ಮಂಡಳಿಯು ಇಷ್ಟರಲ್ಲಿಯೇ ಕ್ರಮವಹಿಸಲಿದೆ ಎಂದು ಸಹ ಡಾ. ಬಿಳಿಮಲೆ ಹೇಳಿದ್ದಾರೆ.

Continue Reading

ಅಂಕಣ

ಧವಳ ಧಾರಿಣಿ ಅಂಕಣ: ಸುಗ್ರೀವನ ಭೇಟಿಗೆ ಹನುಮಂತನ ಸೇತುಬಂಧ ಹೇಗಿತ್ತು?

ಧವಳ ಧಾರಿಣಿ ಅಂಕಣ: ಸುಗ್ರೀವನ ಭೇಟಿಗೆ ಹನುಮಂತನ ಸೇತುಬಂಧದ ಅಪರೂಪದ ಸನ್ನಿವೇಶ ಇಲ್ಲಿದೆ. ವಾನರೇಂದ್ರನ ಮಂತ್ರಿ ಕೋಸಲೇಂದ್ರನ ದಾಸನಾದ ಪ್ರಸಂಗವಿದು.

VISTARANEWS.COM


on

By

dhavala dharini column Hanuman's setubandha to meet Sugriva in ramayana by narayana yaji
Koo

ಸುಗ್ರೀವನ ಭೇಟಿಗೆ ಹನುಮಂತನ ಸೇತುಬಂಧದ ಅಪರೂಪದ ಸನ್ನಿವೇಶ

dhavala dharini by Narayana yaji

ಧವಳ ಧಾರಿಣಿ ಅಂಕಣ: ಭವತಾ ಸಖ್ಯಕಾಮೌ ತೌ ಭ್ರಾತರೌ ರಾಮಲಕ್ಷ್ಮಣೌ.
ಪ್ರತಿಗೃಹ್ಯಾರ್ಚಯಸ್ವೈತೌ ಪೂಜನೀಯತಮಾವುಭೌ৷৷ ಕಿ.5.7৷৷

ಸಹೋದರರಾದ ರಾಮಲಕ್ಷ್ಮಣರು ನಿನ್ನೊಡನೆ ಗೆಳೆತನವನ್ನು ಬೆಳೆಸುವ ಆಶಯವನ್ನು ಹೊಂದಿದ್ದಾರೆ. ಪೂಜನೀಯರಾದ ಇವರಿಬ್ಬರನ್ನೂ ನೀನು ಯಥೋಚಿತವಾಗಿ ಪ್ರತಿಗ್ರಹಿಸಿ ಪೂಜಿಸಬೇಕು

ರಾಮಾಯಣದ ಕಿಷ್ಕಿಂಧಾಕಾಂಡದಿಂದ ತೊಡಗಿ ಯುದ್ಧ ಕಾಂಡದಕೊನೆಯ ತನಕ ಸುಗ್ರೀವ ಪ್ರಮುಖವಾದ ಪಾತ್ರವನ್ನು ವಹಿಸುತ್ತಾನೆ. ಅನೇಕ ಸಲ ಆತನ ವ್ಯಕ್ತಿತ್ವ ಮರ್ಕಟ ಸ್ವಭಾವಕ್ಕೆ ಅನುಗುಣವಾಗಿದೆ. ವಾಲಿಯನ್ನು ಸಂಹರಿಸಿದ ನಂತರದಲ್ಲಿ ಸೀತಾನ್ವೇಷಣೆಗೆ ಪ್ರಾರಂಭಿಸಿದನೋ, ಅಲ್ಲಿಂದ ಆತ ತುಂಬಾ ಪ್ರೌಢತ್ವದಿಂದಲೇ ವ್ಯವಹರಿಸುತ್ತಾನೆ. ಸುಗ್ರೀವನ ಜೊತೆ ರಾಮನ ಸಖ್ಯದಲ್ಲಿ ಆತನ ವ್ಯವಹಾರ ಮೇಲ್ನೋಟಕ್ಕೆ ಚಂಚಲತೆಯಿಂದ ಕೂಡಿತ್ತು ಎಂದು ತೋರಿದರೂ ವಾಸ್ತವವಾಗಿ ಆತ ಸೂಕ್ಷ್ಮವಾಗಿ ಎದುರಾದವರನ್ನು ಅಭ್ಯಸಿಸುತ್ತಿದ್ದ. ವಾಲಿ ಆತನನ್ನು ರಾಜ್ಯದಿಂದ ಹೊರಗಟ್ಟಿ ಆತನನ್ನು ಕೊಲ್ಲಬೇಕೆಂದು ಇಡೀ ಪ್ರಪಂಚವನ್ನೆಲ್ಲಾ ಓಡಾಡಿಸಿದ ವಿಷಯವನ್ನು ಸವಿಸ್ತಾರವಾಗಿ ಹಿಂದಿನ ಸಂಚಿಕೆಯಲ್ಲಿ ಗಮನಿಸಿದ್ದೇವೆ. ಮತಂಗ ಋಷಿಯ ಶಾಪದ ಕಾರಣಕ್ಕೆ ವಾಲಿಗೆ ಮತಂಗಾಶ್ರಮವಿರುವ ಋಷ್ಯಮೂಕ ಪರ್ವತವನ್ನು ತನ್ನ ಅಡಗುದಾಣವನ್ನಾಗಿಸಿಕೊಂಡ. ಋಷ್ಯಮೂಕ ಪರ್ವತಕ್ಕೆ ಆ ಹೆಸರು ಬಂದಿರುವುದಕ್ಕೆ ಕಾರಣ ಅದು ತಪಸ್ವಿಗಳ ಜ್ಞಾನಾರ್ಜನಗೆ ಹೇಳಿ ಮಾಡಿಸಿದ ಸ್ಥಳವಾಗಿತ್ತು ಎನ್ನುವ ಕಾರಣಕ್ಕಾಗಿ. ಋಷೀಣಾಂ ತತ್ರ ಪ್ರಾಪ್ವಾನಾಂ ಅಮೂಕಃ- ಅಲ್ಲಿಗೆ ಹೋದ ಋಷಿಗಳ ಅಜ್ಞಾನವು ಹೋಗಿಬಿಡುತ್ತಿತ್ತು ಹಾಗಾಗಿ ಆ ಪರ್ವತಕ್ಕೆ ಋಷ್ಯಮೂಕವೆನ್ನುವ ಹೆಸರು ಬಂತು. ಮೌನಿಗಳಾದ ಋಷಿಗಳ ಪರ್ವತ ಎನ್ನುವ ಇನ್ನೊಂದು ಅರ್ತವೂ ಋಷ್ಯಮೂಕಕ್ಕೆ ಇದೆ. ಅಲ್ಲಿ ಮತಂಗ ಮುನಿಗಳು ಮೌನವಾಗಿಯೇ ತಪಸ್ಸಿಗೆ ಕುಳಿತಿರುತ್ತಿದ್ದರು.

ದುಂದುಭಿಯಂತಹ ರಾಕ್ಷಸನನ್ನು ಕೊಂದು ವಾಲಿ ಲೋಕಕ್ಕೆ ಉಪಕಾರವನ್ನು ಮಾಡಿದರೂ ಆತನಿಗೆ ಶಾಪ ಏತಕ್ಕೆ ಬಂತು ಎಂದು ಅನುಕಂಪ ಬರುವುದು ಸಹಜ. ವಾಲಿ ಮತ್ತು ದುಂದುಭಿಯ ಜಗಳದ ಹಿನ್ನೆಲೆಯನ್ನು ಗಮನಿಸಬೇಕು. ದುಂದುಭಿ ಕೋಣನ ಆಕಾರವನ್ನು ಹೊಂದಿದ್ದ ರಾಕ್ಷಸ. ಆತನಿಗೆ ಸಾವಿರ ಆನೆಯ ಬಲವಿತ್ತು. ತನ್ನ ಪರಾಕ್ರಮವನ್ನು ತೋರುವ ಹುಚ್ಚು. ಆ ಕಾರಣಕ್ಕಾಗಿ ಆತ “ಮಹ್ಯಂ ಯುದ್ಧ ಪ್ರಯಚ್ಛ- ನನಗೆ ಯುದ್ಧದ ಆತಿಥ್ಯವನ್ನು ನೀಡಿ” ಎಂದು ಎಲ್ಲಾ ಬಲಶಾಲಿಗಳ ಹತ್ತಿರ ಹೋಗಿ ಕೇಳಿದ್ದ. ಮೊದಲು ಆತ ಹೋಗಿದ್ದು ಸಮುದ್ರ ರಾಜನಲ್ಲಿಗೆ.

ಮುದ್ರದೊಡಯನಿಗೆ ಆತನೊಡನೆ ಯುದ್ಧ ಮಾಡುವ ಸಾಮರ್ಥ್ಯವಿಲ್ಲವೆಂದು ಅರ್ಥವಲ್ಲ; ಇದು ವೃಥಾ ಜಗಳ, ಅದರಿಂದ ತನ್ನೊಡಲಲ್ಲಿದ್ದ ಜಲಚರಗಳಿಗೆ ತೊಂದರೆಯಾಗುತ್ತದೆ ಎಂದು ಆತ ಪರ್ವತಗಳ ರಾಜನಾದ ಹಿಮವಂತನನ್ನು ತೋರಿಸಿದ. ಆತ ದುಂದುಭಿಯ ಆಹ್ವಾನವನ್ನು ನಿರಾಕರಿಸುವ ಕಾರಣ ತನ್ನಲ್ಲಿ ಸತ್ವಗುಣಶೀಲರಾದ ತಪಸ್ವಿಗಳು ತಪಸ್ಸನ್ನು ಮಾಡುತ್ತಿದ್ದಾರೆ. ಅವರ ತಪಸ್ಸಿಗೆ ಭಂಗಬಾರದೆನ್ನುವಕಾರಣಕ್ಕಾಗಿ ಜಗಳಕ್ಕೆ ಬರಲು ಒಪ್ಪುವುದಿಲ್ಲ. ಜಗಳವೆನ್ನುವುದು ಇನ್ನೊಬ್ಬರ ಶಾಂತತೆಗೆ ಭಂಗತರುವಂತಹುದಾಗಬಾರದು ಎನ್ನುವ ವಿವೇಕ ಇರಬೇಕು. ಸಮುದ್ರರಾಜನಾಗಲಿ, ಹಿಮವಂತನಾಗಲೀ ದುಂದುಭಿಯ ಯುದ್ಧಾಹ್ವಾನವನ್ನು ತಿರಸ್ಕರಿಸಿದರು ಎಂದ ಕಾರಣಕ್ಕೆ ಅವರು ಸಣ್ಣವರೇನೂ ಆಗಲಿಲ್ಲ. ವಾಲಿ ಜಗಳಕ್ಕೆ ಒಪ್ಪಿದ್ದೂ ಅಲ್ಲದೇ ಯುದ್ಧಮಾಡಿ ಆ ರಾಕ್ಷಸನನ್ನು ಕೊಂದಮೇಲೆ ಆತನ ದೇಹವನ್ನು ಒಂದು ಯೋಜನದಷ್ಟು ದೂರ ಎಸೆದನು. ಆಗ ಸಿಡಿದ ರಕ್ತದ ಹನಿಗಳೂ ಮತಂಗ ಆಶ್ರಮದಲ್ಲಿ ಬಿದ್ದು ಆಶ್ರಮ ಮಲಿನವಾಯಿತು. ಸತ್ತಮೇಲೆ ವೈರವಿರಕೂಡದು ಎನ್ನುತ್ತದೆ ಧರ್ಮಶಾಸ್ತ್ರ. ವಾಲಿ ಸತ್ತಮೇಲೆಯಾಗಲೀ, ರಾವಣ ಸತ್ತಮೇಲೆಯಾಗಲಿ ಅವರ ಕಳೇಬರಕ್ಕೆ ರಾಮ ಗೌರವಯುತವಾಗಿ ಅಂತ್ಯಸಂಸ್ಕಾರವನ್ನು ಮಾಡಿಸುತ್ತಾನೆ. ವಿಭೀಷಣ ರಾವಣನ ಸಂಸ್ಕಾರಕ್ಕೆ ಒಪ್ಪದಿದ್ದರೆ ತಾನೇ ರಾವಣನ ಅಂತ್ಯಸಂಸ್ಕಾರವನ್ನು ಮಾಡುತ್ತೇನೆ ಎನ್ನುತ್ತಾನೆ. ಮತಂಗರು ಶಾಪವನ್ನು ಕೊಡುವಾಗ ಹೇಳುವ ಮಾತು

ಯೇನಾಹಂ ಸಹಸಾ ಸ್ಪೃಷ್ಟಶ್ಶೋಣಿತೇನ ದುರಾತ್ಮನಾ.

ಕೋಯಂ ದುರಾತ್ಮಾ ದುರ್ಭುದ್ಘಿರಕೃತಾತ್ಮಾ ಚ ಬಾಲಿಶಃ II ಕಿ.11.50৷৷

ನನ್ನನ್ನು ಅಪವಿತ್ರವಾದ ರಕ್ತದ ಮೂಲಕ ಮುಟ್ಟಿದ ದುರಾತ್ಮನು ಯಾವನು. ಮೂಢನಾದ, ದುರಾತ್ಮನಾದ, ದುರ್ಬುದ್ಧಿಯುಳ್ಳ, ಜಿತೇಂದ್ರಿಯನಲ್ಲದ (ಅಕೃತಾತ್ಮಾ) ಆ ಮೂರ್ಖನು ಯಾರಾಗಿಬಹುದು”

ಇದನ್ನೂ ಓದಿ: ಧವಳ ಧಾರಿಣಿ ಅಂಕಣ: ಕಿಷ್ಕಿಂಧಾ ಕಾಂಡದಲ್ಲಿನ ರಾಜನೀತಿಯ ವಿಲಕ್ಷಣ ಘಟನೆ

ಇಲ್ಲಿ ಜಿತೇಂದ್ರಿಯ ಎನ್ನುವ ಶಬ್ಧವನ್ನು ಬಳಸಿದ್ದಾರೆ. ಮೈತೀಟೆಯನ್ನು ತೀರಿಸಿಕೊಳ್ಳುವುದಕ್ಕೆ ಯುದ್ಧವಲ್ಲ. ಲೋಕ ಹಿತಕ್ಕಾಗಿ ಯುದ್ಧ ಅಪರಾಧವಲ್ಲ. ಇಲ್ಲಿ ವಾಲಿ ಕೇವಲ ರಕ್ತದಿಂದ ಆಶ್ರಮವನ್ನು ಮಲಿನಮಾಡಿದ್ದಲ್ಲ. ಪರ್ವತಮಯವಾದ ದುಂದುಭಿಯ ದೇಹವನ್ನು ಬಿಸುಟು ಆಶ್ರಮದ ವೃಕ್ಷಗಳೆಲ್ಲವನ್ನೂ ಧ್ವಂಸಮಾಡಿದ್ದಾನೆ. ಅವರಿಗೆ ಈ ಕೃತ್ಯವನ್ನು ನಡೆಸಿದವ ವಾಲಿ ಎನ್ನುವುದು ತಿಳಿಯಿತು. “ಯಾವಾತ ಈ ಕೃತ್ಯವನ್ನು ಎಸಗಿದವೋ ಆತನೇನಾದರೂ ಇನ್ನುಮುಂದೆ ಈ ಆಶ್ರಮದ ಪ್ರದೇಶಕ್ಕೆ ಬಂದರೆ ಇಲ್ಲಿಯೇ ಮರಣ ಹೊಂದುವನು. ಪುತ್ರನಂತೆ ಅಕ್ಕರೆಯಿಂದ ಬೆಳೆಸಿದ ಅವರ ಆಶ್ರಮದ ಗಡ್ಡೆಗೆಣಸುಗಳ ವಿನಾಶಾರ್ಥವಾಗಿ ಆತನ ಮಂತ್ರಿಗಳೇನಾದರೂ ಆತನ ಆಶ್ರಮದ ಪರಿಸರದಲ್ಲಿದ್ದರೆ ಅವರು ಒಂದು ದಿನಗಳೊಳಗಾಗಿ ಆ ಪ್ರದೇಶದಿಂದ ಹೊರಟುಬಿಡಬೇಕು. ಹೋಗದೇ ಉಳಿದರೆ ಅಂತವರು ಹಲವಾರು ಸಾವಿರ ವರುಷಗಳ ಕಾಲ ಕಲ್ಲಾಗಿಬಿಡುವರು” ಎನ್ನುವ ಶಾಪ ಕೊಟ್ಟರು. ವಿಷಯ ಅರಿತ ವಾಲಿ ಓಡೋಡಿ ಬಂದು ಮತಂಗ ಮುನಿಗಳಿಗೆ ತನ್ನನ್ನು ಕ್ಷಮಿಸಿ ಎಂದರೂ ಅವರು ಕ್ಷಮಿಸದೇ ಆಶ್ರಮವನ್ನೇ ಬಿಟ್ಟು ಹೊರಟುಹೋದರು. ಆ ನಂತರದಲ್ಲಿ ವಾಲಿಯಾಗಲೀ ಆತನ ಕಡೆಯವರಾಗಲೀ, ಶಾಪದ ಭಯದಿಂದ ಮತಂಗಾಶ್ರಮದ ಪರಿಸರಕ್ಕೆ ಬರುತ್ತಿರಲಿಲ್ಲ. ವಾಲಿ ಸುಗ್ರೀವ ಎಲ್ಲಿಯೇ ಅಡಗಿದ್ದರೂ ಆತನನ್ನು ಹುಡುಕಿ ಕೊಲ್ಲಲು ಬರುತ್ತಿದ್ದ ಎಂದು ಅನಿಸುತ್ತದೆ. ತನ್ನ ಜೀವ ಉಳಿಸಿಕೊಳ್ಳಲು ಸುಗ್ರೀವ ಪ್ರಪಂಚದ ಎಲ್ಲಾ ಕಡೆ ನಿರಂತರವಾಗಿ ಎಲ್ಲಿಯೂ ನಿಲ್ಲದೇ ಹಾರುತ್ತಿದ್ದ. ಶಾಪದ ಘಟನೆ ಹನುಮಂತನಿಗೆ ಅದುಹೇಗೋ ತಿಳಿಯಿತು. ಆತ ಈ ವಿಷಯವನ್ನು ಸುಗ್ರೀವನಿಗೆ ಹೇಳಿದ. ಮತಂಗಮುನಿಗಳ ಶಾಪದ ಕಾರಣದಿಂದ ಋಷ್ಯಮೂಕ ಪರ್ವತ ಸುಗ್ರೀವನಿಗೆ ಸುರಕ್ಷಿತ ತಾಣವಾಗಿ ಉಳಿಯಿತು. ಸುಗ್ರೀವ ತನ್ನ ಹತ್ತಿರವೇ ಬಂದು ಉಳಿದದ್ದು ನೋಡಿದ ವಾಲಿಗೆ ಮೈ ಪರಚಿಕೊಳ್ಳುವಂತಾಗಿದ್ದಂತೂ ಸತ್ಯ.

ಲಕ್ಷ್ಮಣನಿಂದ ಸಮಾಧಾನಿಸಲ್ಪಟ್ಟ ರಾಮ ಋಷ್ಯಮೂಕ ಪರಿಸರದಲ್ಲಿ ತಿರುಗಾಡುತ್ತಿರುವುದನ್ನು ದೂರದಲ್ಲಿಯೇ ನೋಡಿದ ಸುಗ್ರೀವನಿಗೆ ನಡುಕ ಉಂಟಾಯಿತು. ಅವರ ತೇಜಸ್ಸು ಆತನನ್ನು ಭಯಪಡಿಸಿತು. ವಾಲಿಯೇನಾದರೂ ತನ್ನನ್ನು ಕೊಲ್ಲಲು ಬೇರೆಯವರನ್ನು ಕಳುಹಿಸಿರಬಹುದೆನ್ನುವ ಸಂಶಯದಿಂದ ಆತನ ಚಲನವಲನಗಳೇ ನಿಂತು ಹೋಯಿತು. ಆತ ಹೆದರಿಕೆಯಿಂದ ಏನು ಮಾಡುವುದು ಎಂದು ತಿಳಿಯದೇ ಒಂದು ಪರ್ವತದಿಂದ ಇನ್ನೊಂದು ಪರ್ವತಕ್ಕೆ ಹಾರತೊಡಗಿದ. ಆಗ ಹನುಮಂತ ಸುಗ್ರೀವನಿಗೆ ಸಮಾಧಾನವನ್ನು ಹೇಳಿ “ನೀನು ರಾಜನಾದವನು, ಹೀಗೆ ಹೆದರಕೂಡದು. ಚನ್ನಾಗಿ ಆಲೋಚಿಸಿ ಅವರ ಹಾವ ಭಾವವನ್ನು ತಿಳಿದು ಶತ್ರುವೋ ಅಲ್ಲವೋ ಎನ್ನುವುದನ್ನು ತಿಳಿಯಬೇಕೆನ್ನುತ್ತಾನೆ. ಸುಗ್ರೀವ ಹನುಮಂತನಿಗೆ ಬಂದವರು ಯಾರು ಎಂದು ತಿಳಿದುಕೊಂಡು ಬರಲು ಕಳಿಸುತ್ತಾನೆ.

ನಮ್ಮ ರಾಜ್ಯದ ಆನೆಗೊಂದಿಯಲ್ಲಿ ಹನುಮಂತ ಮೊದಲು ರಾಮ ಲಕ್ಷ್ಮಣರನ್ನು ಭೆಟ್ಟಿಮಾಡಿರುವುದು. ಇಲ್ಲಿಯತನಕ ಸುಗ್ರೀವನ ಸಚಿವನಾಗಿದ್ದ ಹನುಮಂತ ಇಲ್ಲಿಂದ ಮುಂದೆ “ದಾಸೋಹಂ ಕೋಸಲೇಂದ್ರಸ್ಯ ರಾಮಸ್ಯಾಕ್ಲಿಷ್ಟಕರ್ಮಣಃ” ಎಂದು ಪ್ರಸಿದ್ದನಾಗುವುದಕ್ಕೆ ಪೀಠಿಕೆ ಇದು. ಕಪಿಯ ರೂಪದಲ್ಲಿದ್ದರೆ ಯಾರಿಗೂ ನಂಬಿಕೆ ಹುಟ್ಟಲು ಸಾಧ್ಯವಿಲ್ಲವೆಂದು ಹನುಮಂತ ಬಿಕ್ಷುವಿನ ರೂಪದಲ್ಲಿ ರಾಮನ ಪರಿಚಯವನ್ನು ಕೇಳುತ್ತಾನೆ. ಕಿಷ್ಕಿಂಧಾ ಕಾಂಡದ 3 ನೆಯ ಸರ್ಗದಲ್ಲಿ ಹನುಮಂತ ರಾಮನ್ನು ಮಾತಾಡಿಸುವಾಗ ಉಪಯೋಗಿಸುವ ಭಾಷೆ, ದೇಹದ ಭಂಗಿ, ವಿನೀತ ಭಾವ, ತನ್ನ ಒಡೆಯನ ಕುರಿತು ಗೌರವ ಇವೆಲ್ಲವೂ ಸಮ್ಮಿಳಿತವಾಗಿದ್ದವು. ದೀರ್ಘವಾಗಿ ಮಾತಾಡಿದ್ದರಲ್ಲಿ ಒಂದೇ ಒಂದು ಅಪಶಬ್ಧವೂ ಇಲ್ಲವಾಗಿತ್ತು. ದೇಹದ ಯಾವ ಅವಯವಗಳಲ್ಲಿಯೂ ಯಾವುದೇ ದೋಷವಿರಲಿಲ್ಲ. ವಿಷಯನಿರೂಪಣೆಯಲ್ಲಿ ವಿಸ್ತಾರವಿರಲಿಲ್ಲ. ಸಮಯಕ್ಕೆ ಎಷ್ಟು ಬೇಕೋ ಅಷ್ಟು ಮಾತ್ರ ಮಾತಾಡಿದ್ದನು. ಸಂಶಯಕ್ಕೆಡೆಮಾಡುವಂತಹ ಯಾವ ಮಾತನ್ನೂ ಆತ ಆಡಲಿಲ್ಲ. ಮದ್ಯಸ್ವರದಲ್ಲಿ ವ್ಯಾಕರಣದಿಂದ ಸಂಸ್ಕೃತವಾದ ಶಬ್ದಗಳನ್ನು ಬಳಸಿ ಯಾವ ಯಾವ ವಾಕ್ಯಗಳನ್ನು ಎಲ್ಲೆಲ್ಲಿ ಆಡಬೇಕೋ ಅದನ್ನು ಮಾತ್ರವೇ ಆಡಿದ್ದ. ಎಲ್ಲಕ್ಕಿಂತ ಹೆಚ್ಚಾಗಿ ಕೇಳುವವರ ಮನಸ್ಸಿಗೆ ಹರ್ಷವನ್ನುಂಟುಮಾಡುವ ಶುಭಕರವಾದ ಮಾತುಗಳನ್ನೇ ಆಡಿದ್ದ. ಇಲ್ಲಿ ಒಂದು ಸಂಶಯ ಬರುತ್ತದೆ. ಅಷ್ಟೊಂದು ಸುಂದರವಾಗಿ ಮಾತನಾಡಿದ್ದ ಹನುಮಂತ ತನ್ನ ವೇಷವನ್ನು ಮರೆಮಾಚಿ ಬಿಕ್ಶುವಿನ ವೇಷವನ್ನು ಧರಿಸಿರುವುದು ವಂಚನೆಯಲ್ಲವೇ. ಅದಕ್ಕೆ ವಾಲ್ಮೀಕಿ ಪ್ರಾರಂಬದಲ್ಲಿಯೇ ಹೇಳಿದ್ದಾನೆ. ನೇರವಾಗಿ ಆತ ಕಪಿಯ ರೂಪದಲ್ಲಿಯೇ ಹೋದರೆ ಆತ ಆಡುವ ಮಾತಿನ ಶೈಲಿಗೂ ಆತನ ಬಹಿರಂಗ ರೂಪಕ್ಕೂ ಅಂತರ ಕಂಡು ಇದು ಯಾವುದೋ ಮಾಯೆ ಎನ್ನುವ ಭಾವಕ್ಕೆ ರಾಮ ಲಕ್ಷ್ಮಣರು ಬರುವ ಸಾಧ್ಯತೆಯಿದೆ. ಬಿಕ್ಷುವಿನ ವೇಷವಾದರೆ ಆಡುವ ಮಾತಿಗೆ ಸಾಮ್ಯತೆ ಬರುತ್ತದೆ. ಅದೂ ಅಲ್ಲದೇ ರಾಮ ಲಕ್ಷ್ಮಣರೂ ಸಹ ತಾಪಸಿಗಳಂತೆ ಇದ್ದರು. ಆದರೆ ಅವರ ಕೈಯಲ್ಲಿ ಬಿಲ್ಲು ಬಾಣಗಳಿದ್ದವು. ಬತ್ತಳಿಕೆ ಬಿಗಿದ್ದರು. ಹೀಗಿರುವಾಗ ಅವರನ್ನು ಮೊದಲು ನೋಡಲು ಸರ್ವಮಾನ್ಯವಾದ ಬಿಕ್ಷುವಿನ ರೂಪ ಧರಿಸಿದರೆ ಅವರು ತನ್ನ ಕಡೆಗೆ ಗಮನವನ್ನು ಹರಿಸುತ್ತಾರೆ ಎನ್ನುವುದಾಗಿದೆ. ರಾಮ ಲಕ್ಷ್ಮಣರನ್ನು ಹತ್ತಿರದಿಂದ ಕಂಡಾಗ ಅವರಲ್ಲಿ ದಿವ್ಯ ಪ್ರಭೆ ದೇದೀಪ್ಯಮಾನವಾಗಿ ಬೆಳಗುತ್ತಿತ್ತು. ಆ ಪ್ರಭೆಯ ಎದುರು ಹನುಮಂತನಿಗೆ ತಾನು ವೇಷವನ್ನು ಮರೆಮಾಚಿರುವ ವಿಷಯವನ್ನು ಮುಚ್ಚಿಟ್ಟುಕೊಳ್ಳಲಾವದಾಗಲಿಲ್ಲ. ಆತ ತಾನು ಬಿಕ್ಷುವಿನ ವೇಷವನ್ನು ಧರಿಸಿ ಬಂದವ. ಕಾಮರೂಪಿಯಾದ ತಾನು ಇಚ್ಛೆಬಂದ ಕಡೆ ಹೋಗಬಲ್ಲೆ, ಇಚ್ಛೆಬಂದ ರೂಪವನ್ನು ಧರಿಸಬಲ್ಲೆ ಎಂದು ಪ್ರಾರಂಭದಲ್ಲಿಯೇ ಹೇಳಿಬಿಡುತ್ತಾನೆ. ಸುಗ್ರೀವನ ಸಚಿವ ತಾನು, ಆತನಿಗೆ ಪ್ರಿಯವನ್ನುಂಟುಮಾಡಬೇಕೆಂಬ ಆಶಯದಿಂದ ಈ ವೇಷದಲ್ಲಿ ಬಂದಿರುವೆ ಎನ್ನುತ್ತಾನೆ. ಆತನ ಮಾತಿನಲ್ಲಿ ಎಲ್ಲಿಯೂ ಕಪಟತೆ ತಿಲಮಾತ್ರವೂ ಇರಲಿಲ್ಲ. ಧ್ವನಿ ಹೃದಯ ಕಂಠ ಮತ್ತು ಮುಖಗಳ ಮೂಲಕವಾಗಿ ಹೊರಬರುತ್ತಿತ್ತು. ತನ್ನೊಡೆಯನ ಕ್ಷೇಮಕ್ಕಾಗಿ ವೇಷಧರಿಸುವುದು ಅಗತ್ಯವಿತ್ತು. ಆದರೆ ಅವರನ್ನು ನೋಡಿದಾಗ ಅದರ ಅವಶ್ಯಕತೆ ಉಳಿದಿಲ್ಲ ಎನ್ನುವುದು ಆತನ ಮಾತಿನ ಸಾರಾಂಶವಾಗಿತ್ತು. ರಾಮನಿಗೆ ಆತನ ಸರಳ ಮತ್ತು ಸುಂದರವಾದ ಭಾಷೆಯನ್ನು ಕೇಳಿ ಆನಂದವಾಯಿತು. ಅದಕ್ಕಿಂತಲೂ ಆತ ಸುಗ್ರೀವನ ಸಚಿವನೆನ್ನುವುದನ್ನು ಕೇಳಿ ಇಮ್ಮಡಿ ಆನಂದವಾಯಿತು. ಯಾರನ್ನು ತಾವು ಹುಡುಕಲು ಬಂದ್ದೇವೆಯೋ ಆತನ ಸಚಿವನೇ ತನ್ನನ್ನು ಎದುರುಗೊಳ್ಳಲು ಬಂದಿದ್ದಾನೆ. ಇದರಿಂದ ಅಯೋಧ್ಯೆಯ ಚಕ್ರವರ್ತಿ ಮನೆತನದವರು ಅಪರಿಚಿತರಂತೆ ಬೇರೊಬ್ಬರ ಭೇಟಿಗೆ ಹೋಗಿರುವುದಲ್ಲ, ರಾಜಪರಂಪರೆಯ ನಡಾವಳಿಯಂತೆ (Protocol) ಸಚಿವನೋರ್ವ ಎದುರುಗೊಳ್ಳಲು ಬಂದಿದ್ದಾನೆ. ರಾಜರುಗಳನ್ನು ಎದುರುಗೊಳ್ಳಲು ಯಾರು ಯಾರು ಹೋಗಬೇಕೆನ್ನುವ ನಡಾವಳಿಕೆಗಳು ಪ್ರಾಚೀನ ಕಾಲದಲ್ಲಿಯೂ ಇತ್ತು. ರಾಮನಿಗೆ ಆತನ ವ್ಯಕ್ತಿತ್ವ ಮೊದಲ ಭೇಟಿಯಲ್ಲಿಯೇ ಇಷ್ಟವಾಯಿತು. ಲಕ್ಷ್ಮಣನಿಗೆ ಆತ ಹೇಳುವ ಮಾತು

ನಾನೃಗ್ವೇದವಿನೀತಸ್ಯ ನಾಯಜುರ್ವೇದಧಾರಿಣಃ.
ನಾಸಾಮವೇದವಿದುಷಶ್ಶಕ್ಯಮೇವಂ ವಿಭಾಷಿತುಮ್ ৷৷ಕಿ.3.27৷৷

ಋಗ್ವೇದ, ಯಜುರ್ವೇದ ಮತ್ತು ಸಾಮವೇದಗಳನ್ನು ಅಧ್ಯಯನಮಾಡಿ ಶಿಕ್ಷಣ ಪಡೆಯದವನಿಗೆ ಹೀಗೆ ಮಾತಾಡಲು ಸಾಧ್ಯವಿಲ್ಲ. ಎನ್ನುತ್ತಾನೆ. ಇಲ್ಲಿ ಪ್ರತಿಯೊಂದು ವೇದದ ವಿಶೇಷವನ್ನುಹೇಳುವಾಗ “ವಿನೀತ”, “ಧಾರಿ” ಮತ್ತು “ವಿತ್” ಶಬ್ಧಗಳನ್ನು ವಿಶೇಷಣಗಳನ್ನಾಗಿ ಬಳಸಿದ್ದಾರೆ.

ಇದನ್ನೂ ಓದಿ: ಧವಳ ಧಾರಿಣಿ ಅಂಕಣ: ಕಿಷ್ಕಿಂಧಾ ಕಾಂಡ ಭಾಗ 2: ದೀಪದ ಬುಡದಲ್ಲಿ ಕತ್ತಲೆ

ಸಂಭಾಷಣೆಯಲ್ಲಿ ಸಂವಹನ ಕ್ರಿಯೆ ತುಂಬಾ ಮುಖ್ಯ. ಇದೊಂದು ಮಾತಿನಲ್ಲಿ ಹನುಮಂತನ ವಾಕ್ ಪಟುತ್ವವನ್ನು ರಾಮ ಶ್ಲಾಘಿಸುತ್ತಾನೆ. ಋಗ್ವೇದದ ಪ್ರತಿವರ್ಣವೂ ಸ್ವರಪೂರ್ಣವಾಗಿರುತ್ತದೆ. ಅದನ್ನು ಉಚ್ಛರಿಸಬೇಕಾದರೆ ಸಾವಧಾನವಾಗಿ, ವಿನಿಯೋಗಿಸಬೇಕಾದ ಛಂದಸ್ಸು, ವ್ಯಾಕರಣ ಶುದ್ಧತೆ ಮತ್ತು ಗಂಭೀರ ಸ್ವರಬೇಕಾಗುತ್ತದೆ. ಅದನ್ನು ಸರಿಯಾಗಿ ಅಧ್ಯಯನ ಮಾಡಿದವನಿಂದಲೇ ಹೀಗೆ ಮಾತಾಡಲು ಸಾಧ್ಯ. ಹಾಗಾಗಿ ವಿನೀತ ಎನ್ನುವ ಶಬ್ದವನ್ನು ಬಳಸಿದ್ದಾನೆ. ವಿನೀತ ಎಂದರೆ ಆಚಾರ್ಯಮುಖೇನ ಶಾಸ್ತ್ರಬದ್ಧವಾಗಿ ಕಲಿತವ ಎಂದು ಅರ್ಥ. ಯಜುರ್ವೇದದಲ್ಲಿ ಪ್ರತಿಯೊಂದು ಅನುವಾಕನ್ನೂ ಇತರ ಅನುವಾಕಗಳೊಡನೆ ಸಂಕರ ಆಗದ ರೀತಿಯಲ್ಲಿ ಉಚ್ಛರಿಸಬೇಕು. ಅದಕೆ ಅಸಾಧಾರಣ ಧಾರಣಶಕ್ತಿಯ ಅವಶ್ಯಕತೆ ಇದೆ. ಸಾಮವೇದವು ಊಹರಹಸ್ಯಗಳಿಂದ ಗಾನರೂಪವಾಗಿದೆ. ಹನುಮಂತ ಆಡುವ ಮಾತಿನಲ್ಲಿ ಪದ್ಯದ ಗೇಯತೆಯೂ ಇತ್ತು. ಕಿವಿಗೆ ಇಂಪಾಗಿ ಆದರೆ ಅರ್ಥಗರ್ಭಿತವಾಗಿ ಇತ್ತು ಎನ್ನುವುದನ್ನು ಮೂರು ಶಬ್ದಗಳಾದ ವಿನೀತ, ಧಾರಿ ಮತ್ತು ವಿತ್ ಶಬ್ದಗಳ ಮೂಲಕ ರಾಮ ತಿಳಿಸುತ್ತಾನೆ. ರಾಮನೂ ಮೂರೂ ವೇದಗಳಲ್ಲಿ ಪಾರಂಗತನಾಗಿರುವುದರಿಂದಲೇ ಹನುಮಂತನ ಮಾತನ್ನು ಗ್ರಹಿಸಲು ಸಾಧ್ಯವಾಯಿತು ಎಂದೂ ಇಲ್ಲಿ ಅರ್ಥೈಸಬಹುದಾಗಿದೆ. ಮಂತ್ರಿ ಎದುರಾದಾಗ ರಾಜನಾದವ ಮಾತನ್ನಾಡುವುದಲ್ಲ. ಆತನ ಪರವಾಗಿ ಮಂತ್ರಿಯೋ ಅಥವಾ ಸಮರ್ಥ ದೂತನೋ ಮಾತನ್ನಾಡಬೇಕು. ಹಾಗಾಗಿ ಇಲ್ಲಿ ಹನುಮಂತನೊಡನೆ ಮುಂದಿನ ವಿಷಯವನ್ನು ಲಕ್ಷ್ಮಣ ಮಾತಾಡಲಿ ಎಂದು ರಾಮ ಇಂಗಿತವನ್ನು ವ್ಯಕ್ತಪಡಿಸುತ್ತಾನೆ. ಹಾಗಾಗಿ ಮುಂದೆ ಲಕ್ಷ್ಮಣ ಹನುಮಂತನಲ್ಲಿ ತಮ್ಮ ಅರಣ್ಯವಾಸದ ವಿಷಯವನ್ನು, ಸೀತಾಪಹರಣದ ವಿಷಯವನ್ನೂ ಸಹ ಸಮಗ್ರವಾಗಿ ತಿಳಿಸಿ ತಮ್ಮ ಭೇಟಿಯ ಉದ್ಧೇಶ ಸೀತೆ ಎಲ್ಲಿರುತ್ತಾಳೆಂದು ಕಂಡುಹಿಡಿಯಲು ಕಬಂಧನ ಸೂಚನೆಯ ಮೇರೆಗೆ ಸುಗ್ರೀವನೊಡನೆ ಆಶ್ರಯಕೋರಲು ಬಂದಿದ್ದೇವೆ ಎನುತ್ತಾ ಮೊದಲು ಹೇಳಿದ ಸುಗ್ರೀವಂ ಶರಣಂ ಗತಃ ಎನ್ನುವ ಆರು ಬಗೆಯ ಉಲ್ಲೇಖವನ್ನು ಮಾಡುತ್ತಾನೆ.

ಹನುಮಂತನು ಸೂರ್ಯನ ಹತ್ತಿರ ಸೂತ್ರ, ವೃತ್ತಿ, ವಾರ್ತಿಕ, ಮಹಾಭಾಷ್ಯ, ಶಾಸ್ತ್ರ, ಛಂದಃಶಾಸ್ತ್ರಗಳನ್ನೂ, ನವವ್ಯಾಕರಣಗಳನ್ನೂ ಕಲಿತವ. ಅಗಸ್ತ್ಯರು ಹನುಮಂತನ ಕುರಿತು ಆತ ಶಾಸ್ತ್ರವಿಷಯದಲ್ಲಿ ಬ್ರಹಸ್ಪತಿಯೊಡನೆ ಹೋಲಿಸಬಹುದು ಎನ್ನುತ್ತಾರೆ. ಆತನಿಗೆ ಲಕ್ಷ್ಮಣ ಸುಗ್ರೀವನೊಡನೆ ಶರಣಾಗತಿಗಾಗಿ ಬಂದಿದ್ದಾರೆ ಎಂದು ಹೇಳಿರುವುದು ಮನಸ್ಸಿಗೆ ಸರಿಕಾಣಲಿಲ್ಲ. ಅತನಿಗೆ ಸೂರ್ಯವಂಶದ ವಿಷಗಳೆಲ್ಲವೂ ತಿಳಿದಿದೆ. ಅವರ ಶ್ರೇಷ್ಠತೆಯ ಮತ್ತು ಮಹಾತ್ಮತೆಯ ಕುರಿತು ಗೌರವವಿದೆ. ಆದರೆ ಈ ವಾಕ್ ದೋಷವನ್ನು ಟೀಕಿಸಲೂ ಹೋಗುವುದಿಲ್ಲ. ರಾಮಲಕ್ಷ್ಮಣರನ್ನು ತನ್ನ ಭುಜದಮೇಲೆ ಹೊತ್ತು ಅವರನ್ನು ಋಷ್ಯಮೂಕ ಪರ್ವತಕ್ಕೆ ಕರೆತರುತ್ತಾನೆ. ಸುಗ್ರೀವ ಆಗ ಆಗಂತುಕರ ವಿಷಯದಲ್ಲಿ ಭಯಪಟ್ಟು ಅಲ್ಲೇ ಪಕದಲ್ಲಿದ್ದ ಮಲಯ ಪರ್ವತದಲ್ಲಿ ಇದ್ದ. ಆತನಲ್ಲಿ ರಾಮ ಲಕ್ಷ್ಮಣರ ಮತ್ತು ದಶರಥನ ಸಹಿತವಾಗಿ ಸೂರ್ಯವಂಶದ ದೊರೆಗಳ ಮಹಿಮೆಯನ್ನು ಹೇಳುತ್ತಾನೆ. ಅಂತಹ ಮಹಿಮಾನ್ವಿತರು ಸೀತಾನ್ವೇಷಣೆಯ ಸಲುವಾಗಿ ನಿನ್ನ ಸಹಾಯವನ್ನು ಬಯಸಿ ಬಂದಿದ್ದಾರೆ ಎನ್ನುತ್ತಾನೆ. ಇಲ್ಲಿ ಹನುಮಂತನ ಜಾಣ್ಮೆಯನ್ನು ಗಮನಿಸಬೇಕು. “ಸುಗ್ರೀವನಲ್ಲಿ ಶರಣಾಗತಿಯನ್ನು ಹೊಂದಲು ಬಂದಿದ್ದಾರೆ ಎನ್ನುವ ಮಾತಿನ ದೋಷವನ್ನು ಹನುಮಂತ ಪ್ರಾರಂಭದಲ್ಲಿ ಹೇಳಿದ ಶ್ಲೋಕದಂತೆ “ಸಹೋದರರಾದ ರಾಮಲಕ್ಷ್ಮಣರು ನಿನ್ನೊಡನೆ ಗೆಳೆತನವನ್ನು ಬೆಳೆಸುವ ಆಶಯವನ್ನು ಹೊಂದಿದ್ದಾರೆ. ಪೂಜನೀಯರಾದ ಇವರಿಬ್ಬರನ್ನೂ ನೀನು ಯಥೋಚಿತವಾಗಿ ಪ್ರತಿಗ್ರಹಿಸಿ ಪೂಜಿಸಬೇಕು” ಎಂದು ಬದಲಾಯಿಸಿ ಹೇಳುತ್ತಾನೆ.

“ನವವ್ಯಾಕರಣವೇತ್ತಾ -ಒಂಬತ್ತು ವ್ಯಾಕರಣ ಸಿದ್ಧಾಂತವನ್ನು ತಿಳಿದವ ಹನುಮಂತ ಎಂದು ಅಗಸ್ತ್ಯರು ಈತನನ್ನು ಹೊಗಳಿದ್ದು ಆತನ ಜಾಣ್ಮೆ ಮತ್ತು ಶಾಸ್ತ್ರಕೌಶಲ್ಯದ ಪರಿಣಿತಿಗಾಗಿ. ರಾಮನ ಅನುಗ್ರಹದಿಂದ ಹನುಮಂತ ಬ್ರಹ್ಮನೇ ಆಗುವನು- “ಬ್ರಹ್ಮಾ ಭವಿಷ್ಯತ್ಯಪಿ ತೇ ಪ್ರಸಾದಾತ್” ಎನ್ನುವ ಮಾತನ್ನೂ ಆಡುತ್ತಾರೆ. ಸುಂದರನೆನ್ನುವುದು ಆತನ ಇನ್ನೊಂದು ಹೆಸರು. ಅದು ಬಾಹ್ಯರೂಪದಿಂದ ಅಲ್ಲ, ಆತನ ವಿದ್ಯೆ ಮತ್ತು ವಿನಯಗಳ ಶೋಭೆಯಿಂದಾಗಿ. ಸುಗ್ರೀವನ ಸಚಿವ ರಾಮನೆಡೆಗೆ ಆಕರ್ಷಿತನಾಗುವುದು ಆತನ ಮೊದಲ ನೋಟದಲ್ಲಿಯೇ. ರಾಮನನ್ನು ನೋಡಿದ ತಕ್ಷಣ ಆತನ ಶಾಪ ವಿಮೋಚನೆಯಾಯಿತು ಎನ್ನುವ ಕಥೆ ಮೂಲ ರಾಮಾಯಣದಲ್ಲಿಲ್ಲ.

ಸುಗ್ರೀವನ ಚಂಚಲತೆಯ ವಿಷಯಗಳನ್ನು ಮುಂದಿನ ಸಂಚಿಕೆಯಲ್ಲಿ ಗಮನಿಸೋಣ.

Continue Reading

ಅಂಕಣ

ಧವಳ ಧಾರಿಣಿ ಅಂಕಣ: ರಾಮವಿಲಾಪಕ್ಕೆ ಲಕ್ಷ್ಮಣೋಪಶಮನ

ಧವಳ ಧಾರಿಣಿ ಅಂಕಣ: ಹಲವು ವಿಧಗಳಲ್ಲಿ ಸೀತೆಗಾಗಿ ವಿಲಪಿಸುತ್ತಾನೆ. ರಾಮನ ದುಃಖವನ್ನು ಶಮನ ಮಾಡುವ ಲಕ್ಷ್ಮಣನ ಸಂಯಮ ಅದ್ಭುತವಾದದ್ದು. ಲಕ್ಷ್ಮಣ ರಾಮನಿಗೆ ತನ್ನ ಕರ್ತವ್ಯವನ್ನು ನಿಭಾಯಿಸುವಂತೆ ಆತನನ್ನು ಎಚ್ಚರಿಸುವ ಅಪೂರ್ವ ಮಾತುಗಳು ಕಿಷ್ಕಿಂಧಾಕಾಂಡದ ಮೊದಲನೆಯ ಸರ್ಗದಲ್ಲಿ ಬರುತ್ತದೆ.

VISTARANEWS.COM


on

rama laxmana ಧವಳ ಧಾರಿಣಿ ಅಂಕಣ
Koo

ವಿಯೋಗದಿಂದ ಕದಡಿದ ಮನಸ್ಸಿಗೆ ಪೂರ್ವಸ್ಮೃತಿಯನ್ನು ತಂದುಕೊಡುವ ಸನ್ನಿವೇಶ

dhavala dharini by Narayana yaji

:: ನಾರಾಯಣ ಯಾಜಿ

ತ್ಯಜತ್ವಾಂ ಕಾಮವೃತ್ತತ್ತ್ವಂ ಶೋಕಂ ಸಂನ್ಯಸ್ಯ ಪೃಷತಃ I
ಮಹಾತ್ಮನಂ ಕೃತಾತ್ಮಾನಮಾತ್ಮಾನಂ ನಾವಬಿಧ್ಯಸೇ II ಕಿ. 1.123 II

ಸೀತಾವಿಯೋಗದಿಂದುಂಟಾಗಿರುವ ಶೋಕವನ್ನು ಬಿಡು. ಮನ್ಮಥವಿಕಾರವನ್ನು ತ್ಯಜಸು! ನೀನು ಮಹಾತ್ಮನೆಂಬುದನ್ನೂ , ಕೃತಾತ್ಮನೆನ್ನುವುದನ್ನೂ ಮರೆತುಬಿಟ್ಟಿರುವೆ.

ರಾಮಾಯಣದಲ್ಲಿ ಕಿಷ್ಕಿಂಧಾ ಕಾಂಡದ ಬಹುಮುಖ್ಯವಾದ ಘಟನೆಯೇ ಪತ್ನಿಯ ವಿರಹದಿಂದ ಅಪಾರ ದುಃಖಕ್ಕೆ ಒಳಗಾದ ರಾಮನನ್ನು ಲಕ್ಷ್ಮಣ ಸಮಾಧಾನಪಡಿಸುವುದು. ಕಿಷ್ಕಿಂಧಾ ಕಾಂಡದ ನಾಲ್ಕನೆಯ ಸರ್ಗದಲ್ಲಿ ಲಕ್ಷ್ಮಣ ಎಂಟು ಶ್ಲೋಕದಲ್ಲಿ ರಾಮನು ಸುಗ್ರೀವನಲ್ಲಿಗೆ ಶರಣು ಹೊಂದಲು ಬಂದಿದ್ದಾನೆ ಎನ್ನುವ ಮಾತುಗಳನ್ನು ಹೇಳಿದ್ದಾನೆ ಎನ್ನುವುದನ್ನು ನೋಡಿದ್ದೇವೆ. ಆರು ಬಗೆಯಲ್ಲಿ ಎಂಟು ಶ್ಲೋಕಗಳಲ್ಲಿ (ರಾಮಶ್ಚ ಸುಗ್ರೀವಂ ಶರಣಂ ಗತೌ ಮುಂತಾಗಿ) ಲಕ್ಷ್ಮಣನು ಹನುಮಂತನ ಹತ್ತಿರ ಕೇಳಿಕೊಳ್ಳುವ ಭಾಗ ರಾಮನ ವ್ಯಕ್ತಿತ್ವಕ್ಕೆ ಒಂದು ಕಪ್ಪುಚುಕ್ಕೆ ಎಂದು ಕೆಲ ಟೀಕಾಕಾರರು ಹೇಳಿರುವುದನ್ನು ಇಲ್ಲಿ ನೆನಪಿಸಿಕೊಳ್ಳಬಹುದು. ಲಕ್ಷ್ಮಣ ಹಾಗೆ ಹೇಳಲಿಕ್ಕೆ ಕಾರಣವಾಗಿರುವ ಸಂಗತಿಯನ್ನು ಕಿಷ್ಕಿಂಧಾ ಕಾಂಡದ ಮೊದಲ ಭಾಗದಲ್ಲಿ ವಿವರವಾಗಿ ವಿವೇಚಿಸಲಾಗಿದೆ. ಸಮಗ್ರ ಭೂಮಂಡಲದ ಚಕ್ರವರ್ತಿಗಳಾದ ರಘುವಂಶೀಯ ರಾಮ ತನ್ನ ಸಿಂಹಾಸನದ ಘನತೆ ಗೌರವವನ್ನೆಲ್ಲಾ ಬಿಟ್ಟು ಸುಗ್ರೀವನಲ್ಲಿ ಆಶ್ರಯ ಕೋರಿ ಬಂದಿದ್ದಾನೆ. ಸೀತೆಯನ್ನು ಕಳೆದುಕೊಂಡ ರಾಮನಿಗೆ ಬುದ್ಧಿ ವಿಸ್ಮೃತಿಯಾಗಿತ್ತು. ವಿರಹದಿಂದಲಾಗಿ ರಾಮ ಗೋದಾವರಿ ನದಿಯನ್ನು ಬತ್ತಿಸಿಬಿಡುವೆ, ವಿಂದ್ಯಪರ್ವತವನ್ನೇ ಕೆಡಹಿಬಿಡುವೆ ಎಂದು ಕೂಗಾಡುವುದು ನಂತರ ಪಂಪಾಸರೋವರದಲ್ಲಿದ್ದ ಕಮಲವನ್ನೇ ತಿಂಗಳ ಬೆಳಕಿನಲ್ಲಿ ಕಮಲಮುಖಿ ಸೀತೆ ಎಂದು ಭ್ರಮಿಸಿ ಸರೋವರಕ್ಕೆ ಧುಮುಕಲು ಹೋಗುವುದು, ಹೀಗೆ ಹಲವು ವಿಧಗಳಲ್ಲಿ ಸೀತೆಗಾಗಿ ವಿಲಪಿಸುತ್ತಾನೆ. ರಾಮನ ದುಃಖವನ್ನು ಶಮನ ಮಾಡುವ ಲಕ್ಷ್ಮಣನ ಸಂಯಮ ಅದ್ಭುತವಾದದ್ದು. ಲಕ್ಷ್ಮಣ ರಾಮನಿಗೆ ತನ್ನ ಕರ್ತವ್ಯವನ್ನು ನಿಭಾಯಿಸುವಂತೆ ಆತನನ್ನು ಎಚ್ಚರಿಸುವ ಅಪೂರ್ವ ಮಾತುಗಳು ಕಿಷ್ಕಿಂಧಾಕಾಂಡದ ಮೊದಲನೆಯ ಸರ್ಗದಲ್ಲಿ ಬರುತ್ತದೆ. ರಾಮ ತನ್ನ ತಂದೆ ತಾಯಿಯರಿಗೆ, ಸುಮಂತ್ರನಿಗೆ, ಗುಹನಿಗೆ ವಶಿಷ್ಠರು, ಜಾಬಾಲಿ ಮತ್ತು ಭರತನಿಗೆ ತನ್ನ ವನವಾಸ ದೀಕ್ಷೆಯ ಕುರಿತು ತಿಳಿಹೇಳುವ ಮಾತುಗಳು ಬಲು ಪ್ರಸಿದ್ಧ. ಪ್ರಸ್ತುತ ಸಂದರ್ಭದಲ್ಲಿ ಸೀತಾಪಹರಣವೆನ್ನುವುದು ಆತನ ಬುದ್ಧಿಯನ್ನು ವಿಭ್ರಣೆಗೊಳಿಸಿಬಿಟ್ಟಿದೆ. ಆತನಿಗೆ ಆ ದಟ್ಟ ಅರಣ್ಯದಲ್ಲಿ ಬುದ್ಧಿ ಹೇಳುವವರು ಯಾರೂ ಇಲ್ಲ. ಆ ಕೆಲಸವನ್ನು ಇಲ್ಲಿ ಲಕ್ಷ್ಮಣ ಮಾಡಬೇಕಾದ ಅನಿವಾರ್ಯತೆ ಬರುತ್ತದೆ. ಹಾಗೇ ವಿವೇಕವನ್ನು ಹೇಳುವಾಗ ಲಕ್ಷ್ಮಣನಿಗೆ ತನ್ನ ಮಿತಿಯ ಅರಿವಿದೆ. ಆಜ್ಞಾಪೂರ್ವಕವಾಗಿ ಹೇಳುವಂತಿಲ್ಲ. ಉಪದೇಶವೂ ಆಗಕೂಡದು, ಹೇಳುವ ವಿಧಾನದಲ್ಲಿ ಹಿರಿಯನ ಗೌರವವಕ್ಕೆ ಚ್ಯುತಿಬರಬಾರದು.

ವಾಲ್ಮೀಕಿ ಇಲ್ಲಿ ಲಕ್ಷ್ಮಣನಿಂದ ಅಣ್ಣನಿಗೆ ವಿವೇಕವನ್ನು ಹೇಳುವ ವಿವರ ಬಲು ಆಸಕ್ತಿದಾಯಕವಾಗಿದೆ. ಮಹಾಕಾವ್ಯವನ್ನು ಬರೆಯಲು ವಾಲ್ಮೀಕಿಯಲ್ಲಿ ಅದೆಷ್ಟು ಲೋಕಾನುಭವ ಮತ್ತು ಶಾಸ್ತ್ರದ ಅಧ್ಯಯನ ಇರಬಹುದೆನ್ನುವುದಕ್ಕೆ ಇದೊಂದು ನಿದರ್ಶನ. ಆತ ರಾಮನಿಗೆ ಹೀಗೆ ಮಾಡಿ ಎಂದು ಹೇಳುವುದಿಲ್ಲ. ಚಿಕ್ಕವ ಹಿರಿಯರ ಹತ್ತಿರ ತನಗೆ ತಿಳಿಯದ ವಿಷಯವನ್ನು ಕಲಿಸಿಕೊಡು ಎನ್ನುವ ರೀತಿಯಲ್ಲಿ ಇದೇಕೆ ಹೀಗೆ ಎನ್ನುವ ಅನೇಕ ಪ್ರಶ್ನೆಗಳ ಮೂಲಕ ರಾಮನಲ್ಲಿ ಪ್ರಶ್ನೆ ಮಾಡುತ್ತಾನೆ. ರಾವಣನು ಪಾತಾಳಕ್ಕೆ ಹೊಕ್ಕರೂ. ಅಲ್ಲಿಂದ ಮುಂದೆ ಇನ್ನೋ ಗಹನವಾದ ಸ್ಥಳ ಹೊಕ್ಕರೂ ಆತ ಉಳಿಯಲಾರನು. ದಿತಿಯ ಗರ್ಭವನ್ನು ಹೊಕ್ಕರೂ ಮೈಥಿಲಿಯನ್ನು ತಂದೊಪ್ಪಿಸದಿದ್ದಲ್ಲಿ ಗರ್ಭವನ್ನು ಪ್ರವೇಶಿಸಿಯಾದರೂ ನಾನು ಅವನನ್ನು ಸಂಹರಿಸುತ್ತೇನೆ. ನೀನು ಉತ್ಸಾಹವನ್ನು ಕಳೆದುಕೊಂಡು ಹೀಗೆ ಯಾಕೆ ಇರುವೆ ಎನ್ನುವ ಮಾತುಗಳಲ್ಲಿ ನೀನು ಭ್ರಮಿತನಾಗಿದ್ದೀಯಾ ಎಂದು ನೇರವಾಗಿ ಹೇಳುವುದಿಲ್ಲ; ನೀನು ಉತ್ಸಾಹವನ್ನು ಕಳೆದುಕೊಳ್ಳಬೇಡ, ನೀನು ಹೀಗೆಲ್ಲಾ ಇರುವವಂತವನಲ್ಲ ವ್ಯಕ್ತಿಯಲ್ಲ ಎನ್ನುವ ಭಾವ ಪ್ರತೀ ಮಾತಿನಲ್ಲಿಯೂ ವ್ಯಕ್ತವಾಗುತ್ತದೆ.

ಪ್ರಾರಂಭದಲ್ಲಿ ಹೇಳಿದ ತ್ಯಜತ್ವಾಂ… ಎನ್ನುವ ಶ್ಲೋಕವನ್ನು ಗಮನಿಸಿ. ಅದರಲ್ಲಿ ಎರಡನೆಯ ಸಾಲಿನಲ್ಲಿ ಬರುವ “ಮಹಾತ್ಮನಂ ಕೃತಾತ್ಮಾನಮಾತ್ಮಾನಂ ನಾವಬಿಧ್ಯಸೇ” ಎನ್ನುವದರಲ್ಲಿ ಪ್ರಯೋಗಿಸಿದ “ಮಹಾತ್ಮ ಮತ್ತು ಕೃತಾತ್ಮಾ” ಎನ್ನುವುದು ರಾಮನ ಪೂರ್ವದ ಮೂಲಸ್ವರೂಪವಾದ ಮಹಾವಿಷ್ಣುವನ್ನು ಹೇಳುತ್ತದೆ. ಮಹಾತ್ಮಾ ಎಂದರೆ ಶ್ರೇಷ್ಠ, ಯಾರ ಶರೀರವು ಇತರರಿಗೆ ಶ್ರೇಷ್ಠವಾಗಿ ಕಾಣುವುದೋ; ಯಾವಾತನಿಗೆ ರಜಸ್ತಮಗಳೆನ್ನುವ ಮಲಿನತೆ ಇರುವುದಿಲ್ಲವೋ ಆತ ಮಹಾತ್ಮನು, ಸತ್ತ್ವಸ್ವರೂಪನು ಎಂದು ಆರ್ಥವಾಗುತ್ತದೆ. ಮತ್ತೊಂದು ಕೃತಾತ್ಮಾ-ಶುದ್ಧವಾದ ಆತ್ಮವುಳ್ಳವನು. ಶಾಶ್ತ್ರಗಳಿಂದ ಪರಿಶುದ್ಧವಾದ ಹೃದಯವುಳ್ಳವನು. ಶ್ರುತಿ ಸ್ಮೃತಿಗಳಲ್ಲಿ ಸ್ಮರಿಸಲ್ಪಟ್ಟವ ಎಂದಾಗುತ್ತದೆ. ಈ ಕಾರಣದಿಂದ ನೀನು “ತ್ಯಜತಾಂ ಕಾಮವೃತ್ತತ್ತ್ವಂ- ಕಾಮವಿಕಾರವೆನ್ನುವುದು ನಿನಗಲ್ಲ ಎನ್ನುತ್ತಾನೆ. ರಾಮನ ಮೂಲ ಯಾವುದು ಎನ್ನುವುದನ್ನು ಇಲ್ಲಿ ಲಕ್ಷ್ಮಣ ಈ ರೀತಿಯಲ್ಲಿ ಸೂಚಿಸುತ್ತಾನೆ. ಆತನ ಅವತಾರದ ಉದ್ಧೇಶವು ರಾವಣನನ್ನು ಸಂಹರಿಸುವ ಸಲುವಾಗಿಯೇ ಆಗಿದೆ. ಎಲ್ಲ ಕಡೆಯೂ ಮಾನವರಂತೆ ವ್ಯವಹರಿಸುವ ರಾಮ ಜಟಾಯುವಿನ ಪ್ರಕರಣದಲ್ಲಿ ಪರೋಕ್ಷವಾಗಿ, ಶಬರಿಯ ವಿಷಯದಲ್ಲಿ ಸ್ವ-ಸ್ವರೂಪದ ಪ್ರಜ್ಞೆಯಲ್ಲಿಯೇ ಅವರವರಿಗೆ ಮೋಕ್ಷವನ್ನು ಅನುಗ್ರಹಿಸಿದ್ದಾನೆ. ರಾಮಾಯಣದಲ್ಲಿ ರಾಮ ತನ್ನ ಮೂಲ ಸ್ವರೂಪವನ್ನು ಪ್ರಕಟಮಾಡುವ ಅಪರೂಪದ ಸಂದರ್ಭಗಳು ಇವು.

ಅಣ್ಣನಿಗೆ “ನೀನು ಪುರುಷೋತ್ತಮ” ಎನ್ನುತ್ತಾ ರಾಮನೆನ್ನುವ ದಶರಥನ ಮಗ ಯತಾರ್ಥದಲ್ಲಿ ವಿರಜಾಸ್ವರೂಪನಾದವ (ಪರತತ್ತ್ವ ಸ್ವರೂಪನಾದವ) ಇದೀಗ ಕಾರ್ಯಕಾರಣ ಸಂಬಂಧದಿಂದಾಗಿ ಸಂಸಾರಿಮಂಡಲಕ್ಕೆ ಅಭಿಮುಖನಾಗಿದ್ದಾನೆ. ಅದಕ್ಕೆ ಕಾರಣವಾದ ಅಂಶವನ್ನು ಸ್ಮರಣೆಗೆ ತಂದುಕೊಳ್ಳಬೇಕು. ರಾಮನ ಈ ದುಃಖವೆಲ್ಲವೂ ಅಭಿನಯವೇ ಹೊರತು ಅನುಭವಿಸಿ ಅದರಲ್ಲಿಯೇ ಮುಳುಗಿಹೋಗುವುದಲ್ಲ ಎನ್ನುವ ಅನೇಕ ಅರ್ಥವನ್ನು ಇಲ್ಲಿ ಕೊಡುತ್ತದೆ. ಕಿರಿಯರು ಹಿರಿಯರಿಗೆ ವಿವೇಕವನ್ನು ಹೇಳುವುದಲ್ಲ; ಅದರ ಕುರಿತಾದ ಅರಿವನ್ನು ಅವರ ಸ್ಮರಣೆಗೆ ತಂದುಕೊಡುವುದು ಎನ್ನುವುದು ಇಲ್ಲಿ ಲಕ್ಷ್ಮಣನ ವಿನಂತಿಯಲ್ಲಿ ಸ್ಪಷ್ಟವಾಗುತ್ತದೆ. ಹಿರಿಯರು ಉಪದೇಶವನ್ನು ನೀಡುತ್ತಾರೆ, ಸಮವಯಸ್ಕರು ಸಲಹೆಯನ್ನು ನೀಡುತ್ತಾರೆ (ಮಿತ್ರವಾಕ್ಯ), ಕಿರಿಯರು ತಮಗೆ ಗೊತ್ತಿದೆ ಎಂದು ಹಿರಿಯರನ್ನು ಯಾವ ಸಂದರ್ಭದಲ್ಲಿಯೂ ಅತಿಕ್ರಮಿಸಬಾರದು. ಇದೇಕೆ ಹೀಗೆ ಎನ್ನುತ್ತಲೇ ಹೇಳಬೇಕಾದುದನ್ನು ಹೇಳಬೇಕೆನ್ನುವುದಕ್ಕೆ ಇಲ್ಲಿ ಲಕ್ಷ್ಮಣನ ಮಾತುಗಳು ಸಾಕ್ಷಿ. ಈ ಭಾಗದಲ್ಲಿ ಲಕ್ಷ್ಮಣನನ್ನು ಮದಿಸಿದ ಮದ್ದಾನೆಗೆ ಕವಿ ಹೋಲಿಸಿದ್ದಾನೆ.

ತಂ ಮತ್ತಮಾತಙ್ಗವಿಲಾಸಗಾಮೀ ಗಚ್ಛನ್ತಮವ್ಯಗ್ರಮನಾ ಮಹಾತ್ಮಾ.
ಸ ಲಕ್ಷ್ಮಣೋ ರಾಘವಮಪ್ರಮತ್ತೋ ರರಕ್ಷ ಧರ್ಮೇಣ ಬಲೇನ ಚೈವ৷৷ಕಿ.1.127৷৷

ಮದಿಸಿದ ಆನೆಯಂತೆ ಒಯ್ಯಾರದಿಂದ ಹೆಜ್ಜೆಯಿಡುತ್ತಿದ್ದ ಅಣ್ಣನ ಸೇವೆಯಲ್ಲಿಯೇ ಏಕಾಗ್ರವಾದ ಮನಸ್ಸಿನಿಂದ ಕೂಡಿದ ಮಹಾತ್ಮನಾದ ಲಕ್ಷ್ಮಣನಾದರೋ, “ರರಕ್ಷ ಧರ್ಮೇಣ ಬಲೇನ ಚೈವ- ಧರ್ಮದಿಂದಲೂ ಬಲದಿಂದಲೂ ರಾಘವನ ದುಃಖವು ಕಡಿಮೆಯಾಗುವಂತೆ ಮಾಡಿದನು”. ರರಕ್ಷ- ಎನ್ನುವುದಕ್ಕೆ ದುಃಖರಹಿತನನ್ನಾಗಿ ಮಾಡಿದನು ಎನ್ನುವ ಅರ್ಥಬರುತ್ತದೆ(ನಿರ್ಧುಃಖಮಕರೋತ್). ರಾಮನಿಗೆ ಆತನ ಪೂರ್ವಸ್ಮರಣೆಯನ್ನು ತಂದುಕೊಡುವ ಸನ್ನಿವೇಶ ಇದು. ರಾಮನಿಗೆ ಅವನ ಮೂಲವನ್ನು ನೆನಪಿಸಿ ಆತ ಪರಂಧಾಮಕ್ಕೆ ಮರಳುವಂತೆ ಮಾಡುವವನು ಕಾಲಪುರುಷ. ಅದೂ ರಾಮಾಯಣದ ಅವತಾರದ ಉದ್ಧೇಶವಎಲ್ಲವೂ ಸಫಲವಾದ ಮೇಲೆ. ಇಲ್ಲಿ ಲಕ್ಷ್ಮಣನಿಗೆ ರಾಮನಿಗುಂಟಾದ ಬುದ್ಧಿವಿಸ್ಮೃತಿಯಿಂದ ಹೊರತರಬೇಕಾಗಿದೆ. ಇಲ್ಲಿ ಬರುವ “ಧರ್ಮೇಣ” ಅಂದರೆ ಸದಾಕಾಲವೂ ರಾಮನಿಗೆ ವಿಧೇಯನಾಗಿರುವ ಆತ ಆತನಿಗೆ ವಿವೇಕವನ್ನು ಹೇಳುವ ಸಂಧರ್ಭದಲ್ಲಿಯೂ ರಾಮಸೇವಕರೂಪದ ತನ್ನ ಸ್ವಭಾವಕ್ಕೆ ಕಿಂಚಿತ್ ಭಂಗ ಬಾರದಿರುವ ರೀತಿಯಲ್ಲಿ ವಿಷಯವನ್ನು ತಿಳಿಸುತ್ತಿದ್ದಾನೆ. ಇನ್ನು “ಬಲೇನಚೈವ” ಎನ್ನುವುದಕ್ಕೆ ಲಕ್ಷ್ಮಣ ಸೀತೆಯನ್ನು ರಾವಣ ಕದ್ದೊಯ್ದಿದ್ದಾನೆ ಎನ್ನುವುದು ಅವರಿಗೆ ತಿಳಿದಿದೆ. ಆದರೆ ರಾವಣ ಎಲ್ಲಿರಬಹುದು ಎನ್ನುವುದರ ಸುಳಿವು ಸಿಕ್ಕಿಲ್ಲ. ಇಲ್ಲಿ ದುಃಖಿಸುತ್ತಾ ಕುಳಿತರೆ ಕಾರ್ಯಸಾಧಿಸುವುದಿಲ್ಲ. ರಾವಣ ಎಲ್ಲಿದ್ದಾನೆ ಎನ್ನುವುದನ್ನು ಮೊದಲು ತಿಳಿಯಬೇಕು. ಆತ ಪಾತಾಳದಲ್ಲಿ ಇದ್ದರೂ, ಅಲ್ಲಿಂದ ಮುಂದೆ ಇನೂ ಗಹನವಾದ ಸ್ಥಳವನ್ನು ಹೊಕ್ಕರೂ ಪಾಪಿಷ್ಟನಾದ ಆತನನ್ನು ಹುಡುಕೋಣ ಎಂದು ಸಮಾಧಾನ ಹೇಳುತ್ತಾನೆ.

dhavala dharini king dasharatha
rama laxmana ಧವಳ ಧಾರಿಣಿ ಅಂಕಣ

ಅಯೋಧ್ಯಾ ಕಾಂಡದಲ್ಲಿ ಮುಂಗೋಪಿಯಾಗಿ ಲಕ್ಷ್ಮಣ ಕಾಣಿಸಿಕೊಳ್ಳುತ್ತಾನೆ. ತಂದೆಯಾದ ದಶರಥನನ್ನು ಬಂಧಿಸಿ ಸೆರೆಯಲ್ಲಿಟ್ಟು ರಾಜ್ಯವನ್ನು ಗೆದ್ದು ಅಣ್ಣನಾದ ರಾಮನಿಗೆ ಕೊಡುವೆ ಎಂದು ಅಬ್ಬರಿಸುತ್ತಾನೆ. ರಾಮನ ವಿವೇಕದ ಮಾತಿಗೆ ಅನಿವಾರ್ಯತೆಯಿಂದ ಸುಮ್ಮನಾಗುತ್ತಾನೆ. ಮುಂದೆ ಭರತ ರಾಮನನ್ನು ಕರೆತರಲು ಚಿತ್ರಕೂಟಕ್ಕೆ ಬರುವಾಗ ಆತನನ್ನು ನೋಡಿ, ತಮ್ಮಮೇಲೆ ಆಕ್ರಮಣಮಾಡಲು ಬಂದಿರಬಹುದೆನ್ನುವ ಸಂಶಯದಿಂದ ಭರತನನ್ನು ಎದುರಿಸುವೆ ಎನ್ನುವ ವೀರಾವೇಶದ ಮಾತುಗಳನ್ನು ಆಡುತ್ತಿದ್ದ ಲಕ್ಷ್ಮಣನ ಮೂಲ ಸ್ವಭಾವ ದುಡುಕಿನದ್ದಲ್ಲ. ರಾಮ ಗುಹನ ಆತಿಥ್ಯದಲ್ಲಿ ಗಂಗಾ ನದಿಯ ದಡದ ಮೇಲೆ ಮಲಗಿರುವಾಗ ಆತನ ಸ್ಥಿತಿಯನ್ನು ನೋಡಿ ಗುಹನ ಹತ್ತಿರ ಲಕ್ಷ್ಮಣ ಮರುಗುವುದು ಕರಳು ಚುರುಕ್ಕೆನ್ನುತ್ತದೆ. ಸದಾ ಹಂಸತೂಲಿಕಾತಲ್ಪದಲ್ಲಿ ಮಲಗುವ ತನ್ನ ಅಣ್ಣ ಇಂದು ಹೀಗೆ ಕೈಯನ್ನೇ ತಲೆದಿಂಬನ್ನಾಗಿಸಿಕೊಂಡು ಮಲಗಿರುವುದನ್ನು ನೋಡಲು ಆತನಿಗೆ ಸಾಧ್ಯವಾಗುವುದಿಲ್ಲ. ಲಕ್ಷ್ಮಣನದ್ದು ಹೆಂಗರಳು. ರಾಮನ ವಿಷಯದಲ್ಲಿ ಮಾತ್ರ ಕರುಣೆ ತೋರುವುದಲ್ಲ.

ಜನಸ್ಥಾನದಲ್ಲಿ ಅವರು ವಾಸಮಾಡುವಾಗ ನಡೆದ ಘಟನೆ. ವನವಾಸದ ಹದಿಮೂರನೆಯ ವರ್ಷದಲ್ಲಿ ಅವರು ಇದ್ದಾರೆ. ಆ ವರ್ಷದ ಹೇಮಂತ ಋತುವಿನಲ್ಲಿ ಅಸಾಧ್ಯವಾದ ಚಳಿಯಿದೆ. ಕಾಡಾನೆಗಳ ಹಿಂಡು ಬಾಯಾರಿಕೆಯಿಂದ ನೀರುಕುಡಿಯಲು ನದಿಗೆ ಬರುತ್ತಿದ್ದವಂತೆ ಆದರೆ ಹೇಮಂತದ ಚಳಿಯನ್ನು ತಾಳಲಾರದೇ ಸೊಂಡಿಲನ್ನು ನೀರಿಗೆ ಚಾಚಿ ನೀರು ಕುಡಿಯಲು ಯತ್ನಿಸಿದರೆ ಅವುಗಳಿಗೆ ತಣ್ಣನೆಯ ನೀರಿನ ಛಳಿಯನ್ನು ತಾಳಿಕೊಳ್ಳಲಾಗುವುದಿಲ್ಲ, ಮೈಕೊರೆವ ಚಳಿಗೆ ಅಂಜಿ ನೀರನ್ನು ಕುಡಿಯದೇ ಬಾಯಾರಿಕೆಯನ್ನು ಸಹಿಸಿಕೊಂಡು ಕಾಡಿಗೆ ಮರಳುತ್ತಿದ್ದವು. ಸದಾ ನೀರಿನಲ್ಲಿಯೇ ಇರುವ ಹಂಸಪಕ್ಷಿಗಳು ಸಹ ಚಳಿಗೆ ಹೆದರಿ ನೀರಿಗಿಳಿಯದೇ ದಡದಲ್ಲಿಯೇ ಸಾಲಾಗಿ ಕುಳಿತುಕೊಂಡಿದ್ದವು. ಅದನ್ನು ನೋಡಿದ ಲಕ್ಷ್ಮಣನಿಗೆ ನಂದಿಗ್ರಾಮದಲ್ಲಿ ಭರತನೂ ತಮ್ಮಂತೆ ವೃತಧಾರಿಯಾಗಿ ಗಡ್ಡೆ ಗಣಸು ತಿನ್ನುತ್ತಾ, ಜಟಾಧಾರಿಯಾಗಿ ನೆಲದಮೇಲೆ ಮಲಗುತ್ತಿದ್ದಾನೆ ಎನ್ನುವುದು ನೆನಪಾಯಿತು. ಸ್ವತಃ ತಾವು ಅಂತಹ ಚಳಿಯಲ್ಲಿ ನಡುಗುತ್ತಿದ್ದರೂ ಲಕ್ಷ್ಮಣನ ಮನಸ್ಸು ಇಲ್ಲಿ ಭರತನಿಗಾಗಿ ಮರುಗುತ್ತದೆ.

ಅತ್ಯನ್ತಸುಖಸಂವೃದ್ಧಸ್ಸುಕುಮಾರಸ್ಸುಖೋಚಿತಃ.
ಕಥಂ ನ್ವಪರರಾತ್ರೇಷು ಸರಯೂಮವಗಾಹತೇ৷৷ಅ.16.30৷৷

ಸುಖದಲ್ಲಿ ಬೆಳೆದ ಭರತ ಚಳಿಯಿಂದ ಕೂಡಿದ ಈ ಅಪರಾತ್ರಿಯಲ್ಲಿ ಸರಯೂ ನದಿಯಲ್ಲಿ ಹೇಗೆ ಸ್ನಾನ ಮಾಡಿಯಾನು ಎಂದು ಭರತನ ಕುರಿತು ಕಳವಳವನ್ನು ವ್ಯಕ್ತಪಡುತ್ತಾನೆ. ಅಪರಾತ್ರಿಯೆಂದರೆ ಮುಂಜಾನೆ ಬ್ರಾಹ್ಮೀ ಮುಹೂರ್ತಕ್ಕೆ ಮುನ್ನವೇ ಎದ್ದು ಸ್ನಾನಗಳನ್ನು ಪೂರೈಸಿ ನಿತ್ಯಕರ್ಮಾನುಷ್ಠಾನಗಳನ್ನು ಮಾಡಿ ಪ್ರಜೆಗಳ ಯೋಗಕ್ಷೇಮಗಳನ್ನು ನೋಡಲು ಪ್ರಾತಃಕಾಲದಲ್ಲಿ ಸಿದ್ಧನಾಗುತ್ತಿದ್ದ. ತಮಗಾದರೋ ವನವಾಸದ ದೀಕ್ಷೆಯಿದೆ. ಆದರೆ ಭರತ ಸುಖವಾಗಿ ಇರಬಹುದಾಗಿದ್ದರೂ ತಮ್ಮಂತೆ ವನವಾಸೀ ದೀಕ್ಷೆಯನ್ನು ಕೈಗೊಂಡು ರಾಜ್ಯವನ್ನು ನಡೆಸುತ್ತಿದ್ದಾನೆ. ರಾಜ್ಯವನ್ನು ರಾಮನ ಪ್ರತಿನಿಧಿಯಾಗಿ ನಿರ್ವಹಿಸುವ ಆತ ಅದಕ್ಕೆ ಚ್ಯುತಿಬಾರದ ರೀತಿಯಲ್ಲಿ ಚಳಿಗಾಲವನ್ನು ಲೆಕ್ಕಿಸದೇ ಕರ್ತವ್ಯಪರಾಯಣನಾಗಿದ್ದಾನೆ. ಚಳಿಗಾಲದ ವರ್ಣನೆ ಮತ್ತು ಭರತನ ಕುರಿತು ಲಕ್ಷ್ಮಣನ ಕಾಳಜಿ ಎರಡನ್ನೂ ಅನೇಕ ಉಪಮೆಗಳೊಂದಿಗೆ ವಾಲ್ಮೀಕಿ ಕಟ್ಟಿಕೊಟ್ಟಿದ್ದಾರೆ. ಧರ್ಮದ ಮೂಲಕವಾಗಿ ರಾಮನನ್ನು ಸಮಾಧಾನ ಮಾಡಿದ ಜೊತೆಗೆ ಬಲದ ಪ್ರದರ್ಶನದ ಮೂಲಕವೂ ರಾಮನನ್ನು ಸಮಾಧಾನಿಸಿದ ಎನ್ನುವುದಕ್ಕೆ ಲಕ್ಷ್ಮಣ ರಾಮನಲ್ಲಿ ”ಮೊದಲು ರಾವಣನನ್ನು ಹುಡುಕೋಣ. ಆತನಲ್ಲಿ ತಮ್ಮ ಪರಾಕ್ರಮವೆಷ್ಟು ಎನ್ನುವುದನ್ನು ತೋರಿಸಿ ಆತ ಸೀತೆಯನ್ನು ಬಿಟ್ಟುಕೊಡುವಂತೆ ಎಚ್ಚರಿಸೋಣ. ಅದಕ್ಕೂ ಆತ ಬಗ್ಗದಿದ್ದರೆ ಆತ ದಿತಿಯ ಗರ್ಭದಲ್ಲಿದ್ದರೂ ಆತನನ್ನು ಸಂಹರಿಸುವೆ” ಎನ್ನುವ ಮೂಲಕ ಬಲದಿಂದಲೂ ರಾಮನನ್ನು ಸಮಾಧಾನಿಸುತ್ತಾನೆ.

rama laxmana ಧವಳ ಧಾರಿಣಿ ಅಂಕಣ
rama laxmana ಧವಳ ಧಾರಿಣಿ ಅಂಕಣ

ಕಾವ್ಯದಲ್ಲಿ ನಾಟಕೀಯತೆಯ ಸನ್ನಿವೇಶ ಹೇಗೆ ಬರಬೇಕೆನ್ನುವುದಕ್ಕೆ ಇಲ್ಲಿನ ವರ್ಣನೆ ಸಾಕ್ಷಿ. ಲಕ್ಷ್ಮಣ ಪರಾಕ್ರಮದಲ್ಲಿ ಯಾರಿಗೂ ಕಡಿಮೆ ಇಲ್ಲದವನು. ಆನೆಯಷ್ಟು ಬಲ ಆತನಲ್ಲಿದೆ. ಮದಿಸಿದ ಆನೆ ತನ್ನ ಮಾವುತನ ಮೇಲೆ ಅಪಾರಪ್ರೀತಿಯನ್ನು ತೋರುತ್ತದೆ. ತನ್ನ ಮಾವುತ ವ್ಯಾಕುಲತೆಯಿಂದ ಕುಳಿತರೆ ಆತನನ್ನು ರಮಿಸಿ ತನ್ನೊಂದಿಗೆ ಕರೆದೊಯ್ಯುವ ಸ್ವಭಾವ ಅದಕ್ಕಿರುತ್ತದೆ ಇಂತಹ ದೃಶ್ಯವನ್ನು ಅನೇಕ ಕಡೆ ನೋಡಬಹುದಾಗಿದೆ. ಸುಮಾರು 70ರ ಉತ್ತರಾರ್ಧದಶಕದಲ್ಲಿ ರಾಜೇಶ ಖನ್ನಾ ಅಭಿನಯಿಸಿದ “ಹಾಥಿ ಮೇರಾ ಸಾಥಿ” ಸಿನೇಮಾವನ್ನು ನೋಡಿದ್ದರೆ ಅದು ಅರ್ಥವಾದೀತು. ರಾಮನೆನ್ನುವ ಸೋದರತ್ವದ ಒಲವಿನಲ್ಲಿ ಬಂಧಿತನಾದ ಲಕ್ಷ್ಮಣ ಅಥವಾ ತನ್ನ ತಾಯಿಯಾದ ಸುಮಿತ್ರೆಯ ಹತ್ತಿರ ಲಕ್ಷ್ಮಣ ಕಾಡಿಗೆ ಅಣ್ಣನನ್ನು ಅನುಸರಿಸಿಕೊಂಡು ಹೋಗುತ್ತೇನೆ ಎಂದು ಆಶೀರ್ವಾದವನ್ನು ಕೇಳಿದಾಗ ಆಕೆ ಮಗನಿಗೆ “ರಾಮಂ ದಶರಥಂ ವಿದ್ಧಿ ಮಾಂ ವಿದ್ಧಿ ಜನಕಾತ್ಮಜಾಮ್..” ರಾಮನನ್ನು ದಶರಥನೆಂದೆ ತಿಳಿದು ಗೌರವಿಸು, ನನ್ನನ್ನು ಹೇಗೆ ಗೌರವಿಸುತ್ತೀಯೋ ಅದೇ ರೀತಿ ಸೀತೆಗೆ ಗೌರವವನ್ನು ನೀಡು , ಅಡವಿಯನ್ನೇ ಅಯೋಧ್ಯೆಯೆಂದು ಭಾವಿಸು” ಎಂದು ಹರಸಿಕಳುಹಿಸಿದ್ದಳು. ಸಹಜವಾಗಿಯೂ ರಾಮನಲ್ಲಿ ಭಯಭಕ್ತಿಯುಳ್ಳ ಮತ್ತು ಅತನೇ ತನ್ನ ರಾಜನೆಂದು ತಿಳಿದು ತ್ರಿಕರಣಪೂರ್ವಕವಾಗಿ ಅನುಸರಿಸಿಕೊಂಡು ಬಂದವ ಲಕ್ಷ್ಮಣ. ಹಾಗಾಗಿ ಇಲ್ಲಿ ರಾಮನೆನ್ನುವ ಮಾವುತನನ್ನು ಮದಿಸಿದ ಆನೆಯಂತಿರುವ ಲಕ್ಷ್ಮಣ ಒಯ್ಯಾರದಿಂದ ಕರೆದುಕೊಂಡು ಬಂದ ಎನ್ನುವ ಉಪಮೆ ಸುಂದರವಾಗಿ ಮೂಡಿಬಂದಿದೆ.

ರಾಮನಿಗೆ ಸೀತೆಯನ್ನು ಕಳೆದುಕೊಂಡ ದುಃಖ ತಡೆಯಲಾರದೇ ವಿಸ್ಮೃತಿಗೊಳಗಾದ ವಿಷಯವನ್ನು ವಾಲ್ಮೀಕಿ ರಾಮಾಯಣದಲ್ಲಿ ವಿವರವಾಗಿ ಬಂದರೂ ಸ್ಕಾಂದಪುರಾಣದಲ್ಲಿ ಇನ್ನಷ್ಟು ವಿವರವಾಗಿ ವರ್ಣಿಸಲಾಗಿದೆ. ರಾಮನಿಗೆ ಅರಣ್ಯದಲ್ಲಿ ಸೀತೆಯ ವಿರಹದಿಂದ ಕಾಮೋದ್ದೀಪಕವಾಯಿತು. ಕಾಡಿನಲ್ಲಿರುವ ಭ್ರಮರವೇ ಮೊದಲಾದವುಗಳು ಸ್ವಂಚ್ಛಂದದಿಂದ ಹಾರಾಡುತ್ತಾ ಸಂಪಿಗೆಯ ಹೂವಿನ ಮಕರಂದವನ್ನು ಹೀರುತ್ತಿದ್ದವು. ಮಂದಮಾರುತ ಬೀಸುತ್ತಿತ್ತು. ಚಕ್ರವಾಕ ಪಕ್ಷಿಜೋಡಿಗಳು ಹಗಲಿನಲ್ಲಿ ಪರಸ್ಪರ ಮುದ್ದಾಡುತ್ತಿದ್ದವು. ವಿರಹಿಯಾದ ರಾಮ ಅದನ್ನು ನೋಡಿ ಕೋಪಗೊಂಡನಂತೆ. ತನ್ನ ವಿರಹದುಃಖವನ್ನು ನೋಡಿಯೂ ಕರುಣೆತೋರದೇ ಸಂತಸದಿಂದ ಇರುವ ಅವುಗಳನ್ನು ನೋಡಿ

ವೈಮುಖ್ಯಂ ಗಂಧಫಲ್ಯಾಸ್ತು ಭ್ರಮರಾಶಪತ್ಪ್ರಭುಃ I
ಕೋಕಾನ್ನಿಶಿಧೇ ವಿಶ್ಲೇಷಂ ಪಿಕಮನ್ಯವಿವರ್ಧನಮ್I
ಚಂದನಂ ಸರ್ಪ ನಿಲಯಂ ವಾಯುಂ ಸರ್ಪಾಶನಂ ತಥಾ I
ಜ್ಯೋತ್ಸ್ನಾಂ ಕಳಂಕಸಛನ್ನಾಂ ಶಶಾಪ ರಘುನಂದನಃ II II

ಸಂಪಗೆಯನ್ನು ಮುಟ್ಟದಂತೆ ಭ್ರಮರಗಳಿಗೂ, ರಾತ್ರಿಯಲ್ಲಿ ವಿಯೋಗವನ್ನು ಹೊಂದುವಂತೆ ಚಕ್ರವಾಕ ಜೋಡಿಗಳಿಗೂ, ಇತರಪಕ್ಷಿಗಳ ಪೋಷಣೆಗೊಳಗಾಗುವಂತೆ ಕೋಗಿಲೆಗಳಿಗೂ (ಪರಪುಟ್ಟ), ಕ್ರೂರಸರ್ಪಗಳಿಗೆ ಆಶ್ರಯತಾಣವಾಗುವಂತೆ ಚಂದನವೃಕ್ಷಕ್ಕೂ, ಹಾವುಗಳಿಗೆ ಆಹಾರವಾಗುವಂತೆ ಗಾಳಿಗೂ, ಕಳಂಕವಿಶಿಷ್ಟ (ಕಲೆಗಳಿಂದ ಕೂಡಿರುವಂತೆ) ಚಂದ್ರಕಾಂತಿಗೂ ಶಾಪಕೊಟ್ಟ ಎನ್ನುವ ವರ್ಣನೆ ಬರುತ್ತದೆ.

ಸೀತೆಯ ವಿಯೋಗ ರಾಮನಿಗೆ ಎರಡು ರೀತಿಯಿಂದ ಕಾಡುತ್ತಿತ್ತು. ಮೊದಲನೆಯದು ತನ್ನ ಪ್ರಿಯ ಮಡದಿಯನ್ನು ಕಳೆದುಕೊಂಡಿರುವುದು. ಎರಡನೆಯದು ರಾವಣ ಸೀತೆಯನ್ನು ಕದ್ದೊಯ್ಯುವ ಮೂಲಕ ರಾಮನ ಪುರುಷತ್ವಕ್ಕೆ ಸವಾಲನ್ನು ಎಸೆದಿದ್ದ. ಇದು ಸ್ಕಂಧಪುರಾಣದ ಮೇಲಿನ ಶ್ಲೋಕದಿಂದ ಸ್ಪಷ್ಟವಾಗುತ್ತದೆ. ಈ ಕಾರಣದಿಂದ ನೊಂದಿದ್ದ ರಾಮನನ್ನು ಲಕ್ಷ್ಮಣ ಸಮಾಧಾನ ಪಡಿಸಿ ಆತನ ಸ್ಮೃತಿಯನ್ನು ವಾಸ್ತವಕ್ಕೆ ಕರೆತರುತ್ತಾನೆ. ಆತನ ದುಃಖವನ್ನು ಶಮನಮಡುತ್ತಾನೆ. ಈಗ ಆತನಿಗೆ ಸೀತೆಯನ್ನು ಹುಡುಕುವ ಸಲುವಾಗಿ ಕಬಂಧ ಹೇಳಿದಂತೆ ಸುಗ್ರೀವನ ಸಖ್ಯ ಅನಿವಾರ್ಯವೆನ್ನುವುದು ನೆನಪಾಗುತ್ತದೆ. ಆ ಕಾರಣದಿಂದ ಹನುಮಂತನ ಹತ್ತಿರ ಲಕ್ಷ್ಮಣ ರಘುಕುಲದ ಶ್ರೇಷ್ಠನಾದ ರಾಮನೇ ಸುಗ್ರೀವನಲ್ಲಿ ಆಶ್ರಯವನ್ನು ಕೋರಿ ಬಂದಿದ್ದಾನೆ. ಆತನಲ್ಲಿ ಶರಣಾಗಲು ಬಂದಿದ್ದಾನೆ. ಎನ್ನುವ ಮಾತುಗಳನ್ನು ಲಕ್ಷ್ಮಣ ಆಡುವುದು.

ಸುಗ್ರೀವನ ಸ್ಥಿತಿ ಮತ್ತು ಇನ್ನಷ್ಟು ರೋಚಕ ವಿಚಾರಗಳನ್ನು ಮುಂದಿನ ಸಂಚಿಕೆಯಲ್ಲಿ ಗಮನಿಸೋಣ.

ಇದನ್ನೂ ಓದಿ: ಧವಳ ಧಾರಿಣಿ ಅಂಕಣ: ಕಿಷ್ಕಿಂಧಾ ಕಾಂಡ ಭಾಗ 2: ದೀಪದ ಬುಡದಲ್ಲಿ ಕತ್ತಲೆ

Continue Reading

ಬೆಂಗಳೂರು

Yakshagana Dance : ಯಕ್ಷಗಾನ ಕಲೆ ಪುರುಷರಿಗಷ್ಟೇ ಸೀಮಿತವಲ್ಲ: ಡಾ. ಧರಣೀದೇವಿ ಮಾಲಗತ್ತಿ

Yakshagana Dance : ಸ್ವತಃ “ಶರಸೇತು ಬಂಧ” ಎಂಬ ಮಹಿಳಾ ಯಕ್ಷಗಾನ ತಾಳಮದ್ದಲೆ ಕಾರ್ಯಕ್ರಮದಲ್ಲಿ ಆಂಜನೇಯನ ಪಾತ್ರವಹಿಸಿ ಅರ್ಥಗಾರಿಕೆ ಮಾಡಿದ ಧರಣೀದೇವಿ ಅವರು, ಭಾಗವತಿಕೆಯಲ್ಲಿ, ಚೆಂಡೆ ವಾದನದಲ್ಲಿ, ಮುಮ್ಮೇಳ ಕಲಾವಿದರಾಗಿ ಬಹಳ ಹಿಂದಿನಿಂದಲೂ ಮಹಿಳೆಯರು ಅವರದೇ ಛಾಪು ಮೂಡಿಸಿದ್ದಾರೆ. ಬಣ್ಣದ ವೇಷದಲ್ಲೂ ತೊಡಗಿಸಿಕೊಂಡು, ಆಯಾ ಪಾತ್ರಕ್ಕೆ ಅನುಗುಣವಾದ ಧ್ವನಿಯನ್ನೂ ನೀಡಿ ಪಾತ್ರಕ್ಕೆ ನ್ಯಾಯ ಒದಗಿಸಿದ ನಿದರ್ಶನಗಳು ಇವೆ ಎಂದು ಹೇಳಿದರು.

VISTARANEWS.COM


on

Yakshagana Dance
Koo

ಬೆಂಗಳೂರು: ಯಕ್ಷಗಾನ (Yakshagana Dance) ಕೇವಲ ಪುರುಷರಿಗಷ್ಟೇ ಸೀಮಿತವಾಗಿಲ್ಲ. ಈ ರಂಗದಲ್ಲಿ ಹಿಮ್ಮೇಳ ಮತ್ತು ಮುಮ್ಮೇಳದಲ್ಲಿ ಮಹಿಳೆಯರೂ ಹಂತಹಂತವಾಗಿ ಪಾಲ್ಗೊಂಡು ಪುರುಷರಂತೆಯೇ ಸಾಧನೆ ಮಾಡಿದ್ದಾರೆ ಹಾಗೂ ಮಾಡುತ್ತಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರಾಗಿರುವ ಹಿರಿಯ ಐಪಿಎಸ್‌ ಅಧಿಕಾರಿ ಡಾ. ಧರಣೀದೇವಿ ಮಾಲಗತ್ತಿ (Dharanidevi Malagatti) ಅಭಿಪ್ರಾಯಪಟ್ಟಿದ್ದಾರೆ.

ಅವರು ಕರ್ನಾಟಕ ಮಹಿಳಾ ಯಕ್ಷಗಾನ ಸಂಸ್ಥೆ ಶನಿವಾರ ಬೆಂಗಳೂರಿನ ನಯನ ಸಭಾಂಗಣದಲ್ಲಿ ಏರ್ಪಡಿಸಿದ್ದ ಯಕ್ಷಗಾನ ಉತ್ಸವ-೨೦೨೪ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಸ್ವತಃ “ಶರಸೇತು ಬಂಧ” ಎಂಬ ಮಹಿಳಾ ಯಕ್ಷಗಾನ ತಾಳಮದ್ದಲೆ ಕಾರ್ಯಕ್ರಮದಲ್ಲಿ ಆಂಜನೇಯನ ಪಾತ್ರವಹಿಸಿ ಅರ್ಥಗಾರಿಕೆ ಮಾಡಿದ ಧರಣೀದೇವಿ ಅವರು, ಭಾಗವತಿಕೆಯಲ್ಲಿ, ಚೆಂಡೆ ವಾದನದಲ್ಲಿ, ಮುಮ್ಮೇಳ ಕಲಾವಿದರಾಗಿ ಬಹಳ ಹಿಂದಿನಿಂದಲೂ ಮಹಿಳೆಯರು ಅವರದೇ ಛಾಪು ಮೂಡಿಸಿದ್ದಾರೆ. ಬಣ್ಣದ ವೇಷದಲ್ಲೂ ತೊಡಗಿಸಿಕೊಂಡು, ಆಯಾ ಪಾತ್ರಕ್ಕೆ ಅನುಗುಣವಾದ ಧ್ವನಿಯನ್ನೂ ನೀಡಿ ಪಾತ್ರಕ್ಕೆ ನ್ಯಾಯ ಒದಗಿಸಿದ ನಿದರ್ಶನಗಳು ಇವೆ ಎಂದು ಹೇಳಿದರು.

ಯಕ್ಷಗಾನದ ಬೇರು ಆಳವಾಗಿದೆ ಹಾಗೂ ಎಂದಿಗೂ ಅದು ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳಲಿದೆ. ಹಾಗಾಗಿ ಯಕ್ಷಗಾನವನ್ನು ಉಳಿಸಿಕೊಳ್ಳಬೇಕು, ಯಕ್ಷಗಾನ ಅವನತಿಯತ್ತ ಸಾಗುತ್ತಿದೆ ಎಂಬಂತಹ ಮಾತುಗಳಿಗೆ ಆಸ್ಪದವಿಲ್ಲ. ಯಕ್ಷಗಾನ ವಿಶ್ವದೆಲ್ಲೆಡೆ ಪಸರಿಸಿದ್ದು, ಈ ಕಲೆ ಯಾವ ಕಾಲಕ್ಕೂ ಪ್ರಸ್ತುತ ಎಂದು ಧರಣೀದೇವಿ ವಿಶ್ಲೇಷಿಸಿದರು.
ಶರಸೇತು ಬಂಧ ತಾಳಮದ್ದಲೆಯಲ್ಲಿ ಭಾಗವಹಿಸಿದ ಅವರು, ಹನುಮಂತನ ತನ್ನ ಪಾತ್ರ ಪರಿಚಯ ಮಾಡುತ್ತಾ, ವಾಯುಪುತ್ರ, ರಾಮಭಕ್ತ ಎಂಬ ಹೆಸರುಗಳಿವೆ. ಆದರೆ ತಾನು ತನ್ನ ತಾಯಿಯ ಹೆಸರಿನಿಂದಲೂ ಗುರುತಿಸಿಕೊಂಡು ಅಂಜನಾ ಸುತ ಅಥವಾ ಆಂಜನೇಯ ಎಂದೂ ಹೆಸರಿದೆ ಎಂದು ಹೇಳುವ ಮೂಲಕ ತನ್ನ ಕರಾವಳಿಯ ತಾಯಿಯ ಕುಟುಂಬದ ಆಧಾರಿತ ಅಳಿಯಕಟ್ಟು ಸಂಪ್ರದಾಯವನ್ನು ಪರೋಕ್ಷವಾಗಿ ನೆನಪಿಸಿದರು.

ಇದನ್ನೂ ಓದಿ: Actor Darshan: ಹೋಮ-ಹವನ ಮಾಡ್ತಿರೋದು ದರ್ಶನ್‌ ಬಿಡುಗಡೆಗಾಗಿ ಅಲ್ಲ: ರಾಕ್‌ಲೈನ್ ವೆಂಕಟೇಶ್

ಕರ್ನಾಟಕ ಮಹಿಳಾ ಯಕ್ಷಗಾನ ಸಂಸ್ಥೆಯ ನಿರ್ದೇಶಕಿ ಗೌರಿ ಕೆ. ಅವರು ಮಾತನಾಡಿ, ಸಂಸ್ಥೆ 26 ವರ್ಷಗಳಿಂದ ಮಹಿಳೆಯರಿಗೆ, ವಿದ್ಯಾರ್ಥಿನಿಯರಿಗೆ ಉಚಿತವಾಗಿ ತರಬೇತಿ ನೀಡುತ್ತಾ ಬೆಳೆಯುತ್ತಿದೆ. ಈಗ ವಿದ್ಯಾರ್ಥಿವೇತನ ಮೂಲಕ ೧೨ ಮಹಿಳೆಯರಿಗೆ ಯಕ್ಷಗಾನ ತರಬೇತಿ ನೀಡುವ ಪ್ರಮುಖ ನಿರ್ಧಾರ ತೆಗೆದುಕೊಂಡಿದೆ ಎಂದು ಹೇಳಿದರು.

ಯಕ್ಷಗಾನ ಉತ್ಸವ 2024

ಕರ್ನಾಟಕ ಮಹಿಳಾ ಯಕ್ಷಗಾನ (ರಿ) ಬೆಂಗಳೂರು ಸಂಸ್ಥೆಯ ವತಿಯಿಂದ ‘ಯಕ್ಷಗಾನ ಉತ್ಸವ-2024’ ಗುರುಗಳಾದ ಶ್ರೀನಿವಾಸ ಸಾಸ್ತಾನ ಮತ್ತು ಕೆ. ಗೌರಿ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಈ ಸಂದರ್ಭದಲ್ಲಿ ನಡೆದ ಯಕ್ಷಗಾನ ವೇಷಭೂಷಣ ಹಾಗೂ ಮುಖವರ್ಣಿಕೆ ಕಮ್ಮಟ ಕಾರ್ಯಕ್ರಮವನ್ನು ತುಳುವರೆಂಕುಲು ಕಾರ್ಯದರ್ಶಿಗಳು, ಮಟ್ಟಿ ರಾಮಚಂದ್ರ ರಾವ್ ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದರು. ಅತಿಥಿಗಳಾಗಿ ಖ್ಯಾತ ಯಕ್ಷಗಾನ ಕಲಾವಿದೆ ಅಶ್ವಿನಿ ಕೊಂಡದಕುಳಿ, ಸಂಪನ್ಮೂಲ ವ್ಯಕ್ತಿಗಳಾಗಿ ರಾಜೇಶ್ ಆಚಾರ್, ಶಂಕರ್ ಹೊಸೂರು, ಉಮೇಶ್ ರಾಜ್, ಸಂಸ್ಥೆಯ ಯಕ್ಷಗಾನ ಗುರು ಮತ್ತು ನಿರ್ದೇಶಕರು ಕೆ. ಗೌರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ನಂತರ ಸಂಸ್ಥೆಯ ಕಲಾವಿದೆಯರಿಂದ ಯಕ್ಷಗಾನದ ಕಥಾಭಾಗದ ಮೊದಲು ನಡೆಯುವ ರಂಗಕ್ರಿಯೆಯಾದ ಯಕ್ಷಗಾನ ಪೂರ್ವರಂಗ ಪ್ರದರ್ಶನ, ಕುಶಲವ ಕಾಳಗ, ಜಾಂಬವತಿ ಕಲ್ಯಾಣ ಯಕ್ಷಗಾನ ಪ್ರಸಂಗ ಕಾರ್ಯಕ್ರಮ ನಡೆಯಿತು. ಹಿಮ್ಮೇಳದಲ್ಲಿ ಭಾಗವತರಾಗಿ ಸುಬ್ರಹ್ಮಣ್ಯ ನಾವುಡ, ವಿಶ್ವನಾಥ ಶೆಟ್ಟಿ, ವಿನಯ್ ರಾಜೀವ್ ಶೆಟ್ಟಿ, ನರಸಿಂಹ ಆಚಾರ್, ಸಂಪತ್ ಆಚಾರ್ಯ, ಸುಬ್ರಹ್ಮಣ್ಯ ಗಾಣಿಗ ಐರೋಡಿ, ಕಾರ್ತಿಕ್ ಧಾರೇಶ್ವರ್. ಮುಮ್ಮೇಳದಲ್ಲಿ ಕಲಾವಿದೆಯರಾಗಿ ಕೆ ಗೌರಿ, ಆಶಾ ರಾಘವೇಂದ್ರ, ಅನ್ನಪೂರ್ಣೇಶ್ವರಿ ಕಟೀಲು, ಶ್ವೇತಾ ನವೀನ್, ಲಕ್ಷ್ಮೀ ರಾವ್, ಶಶಿಕಲಾ, ಸುಮಾ ಅನಿಲ್ ಕುಮಾರ್, ಮನಸ್ವಿ, ಚೈತ್ರ ಕೋಟ, ಚೈತ್ರ ಭಟ್, ದೀಕ್ಷಾ ಭಟ್, ಸೌಜನ್ಯ ನಾವುಡ, ರಕ್ಷಾ ಅನಂತ್, ಸಹನಾ ಅನಿಲ್ ಕುಮಾರ್, ಧೃತಿ ಅಮ್ಮೆಂಬಳ, ಸಹನ್ಯ ಚಿನ್ಮಯಿ, ಕೃತಿ ಅಮ್ಮೆಂಬಳ, ಗಗನ ಅನಿಲ್ ಕುಮಾರ್, ಯಾದ್ವಿಯುತಿ, ಸಾನ್ವಿ, ಸಹನಾ, ಶ್ರೀನಿಧಿ, ಮಹಾಲಕ್ಷ್ಮಿ ವಿವಿಧ ಪಾತ್ರಗಳಲ್ಲಿ ಮಿಂಚಿದರು.

ಕನ್ನಡ ಸಂಸ್ಕೃತಿ ಇಲಾಖೆಯ ನಿರ್ದೇಶಕರಾದ ಧರಣೀ ದೇವಿ ಮಾಲಗಿತ್ತಿ, ಅಶ್ವಿನಿ ಆಚಾರ್, ಸಾವಿತ್ರಿ ಶಾಸ್ತ್ರಿ ಇವರ ಅರ್ಥಗಾರಿಕೆಯಲ್ಲಿ ಯಕ್ಷಗಾನ ತಾಳಮದ್ದಳೆ- ಶರಸೇತು ಬಂಧ ನಡೆಯಿತು. ತಾಳಮದ್ದಳೆಯಲ್ಲಿ ಹಿಮ್ಮೇಳ ಕಲಾವಿದರಾಗಿ ಕುಮಾರಿ ಅನರ್ಘ್ಯ ಟಿ.ಪಿ, ಪೃಥ್ವಿ ಬಡೆಕ್ಕಿಲ, ಶಿಖಿನ್ ಶರ್ಮ ಭಾಗವಹಿಸಿದರು.

Continue Reading
Advertisement
Actor darshan
ಪ್ರಮುಖ ಸುದ್ದಿ34 ನಿಮಿಷಗಳು ago

Actor Darshan : ನಟ ದರ್ಶನ್ ಬಿಡುಗಡೆಗೆ ಮುಹೂರ್ತ ಫಿಕ್ಸ್; ಜನ್ಮ ಜಾತಕದ ಪ್ರಕಾರ ಶುಭ ಸಮಯ ಶುರು

KEA UGCET 2024
ಬೆಂಗಳೂರು1 ಗಂಟೆ ago

UGCET 2024 : ದ್ವಿತೀಯ ಪಿಯುಸಿ 3ನೇ ಪರೀಕ್ಷೆಯಲ್ಲಿ ಅರ್ಹರಾದವರಿಗೆ ಆಪ್ಷನ್‌ ದಾಖಲಿಸಲು ಲಿಂಕ್‌ ಓಪನ್‌

ಚಿಕ್ಕೋಡಿ2 ಗಂಟೆಗಳು ago

Physical Abuse: ಬಾಲಕಿಯನ್ನು ಕಬ್ಬಿನ ಗದ್ದೆಗೆ ಕರೆದೊಯ್ದು ಅತ್ಯಾಚಾರವೆಸಗಿ ಕೊಂದಿದ್ದ ನೀಚನಿಗೆ ಗಲ್ಲುಶಿಕ್ಷೆ ವಿಧಿಸಿದ ಕೋರ್ಟ್‌

BBMP plans to make arrangements for food in areas where stray dogs do not get food
ಬೆಂಗಳೂರು2 ಗಂಟೆಗಳು ago

Street Dogs : ಬೀದಿನಾಯಿಗಳ ಹಸಿವು ನೀಗಿಸಲು ಮುಂದಾದ ಬಿಬಿಎಂಪಿ; ಸಾರ್ವಜನಿಕರು ಕೈ ಜೋಡಿಸುವಂತೆ ಮನವಿ

Cm Siddaramaiah
ಬೆಂಗಳೂರು3 ಗಂಟೆಗಳು ago

CM Siddaramaiah : ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಪ್ರಶ್ನಿಸಿ ದ್ವಿಸದಸ್ಯ ಪೀಠಕ್ಕೆ ಅಪೀಲು ಅರ್ಜಿ ಸಲ್ಲಿಕೆಗೆ ಸಿಎಂ ಸಿದ್ದರಾಮಯ್ಯ ತೀರ್ಮಾನ

Mahalaya Amavasya on Gandhi Jayanti Poultry Association demands withdrawal of ban on sale of meat
ಬೆಂಗಳೂರು4 ಗಂಟೆಗಳು ago

Mahalaya Amavasya 2024: ಗಾಂಧಿ ಜಯಂತಿಯಂದೇ ಮಹಾಲಯ ಅಮಾವಾಸ್ಯೆ; ಮಾಂಸ ಮಾರಾಟ ನಿಷೇಧ ಹಿಂಪಡೆಯುವಂತೆ ಒತ್ತಾಯ

Road Accident
ಬೆಂಗಳೂರು5 ಗಂಟೆಗಳು ago

Road Accident : ಆಟೋಗೆ ಲೋಡ್‌ ತುಂಬಿದ್ದ ಲಾರಿ ಡಿಕ್ಕಿ; ಚಾಲಕನ ನಿದ್ರೆ ಮಂಪರಿಗೆ ಜೀವ ಬಿಟ್ಟಳು ಯುವತಿ

Techie robbery plans to delete her photo video from lovers mobile phone
ಬೆಂಗಳೂರು6 ಗಂಟೆಗಳು ago

Robbery case : ಲವ್ವರ್ ಮೊಬೈಲ್‌ನಲ್ಲಿದ್ದ ತನ್ನ ಫೋಟೊ, ವಿಡಿಯೊ ಡಿಲೀಟ್‌ ಮಾಡಿಸಲು ಟೆಕ್ಕಿಯ ಖರ್ತನಾಕ್‌ ರಾಬರಿ ಪ್ಲ್ಯಾನ್‌

Hopcoms store loses charm in Bengaluru
ಬೆಂಗಳೂರು7 ಗಂಟೆಗಳು ago

HOPCOMS Outlets : ಬೆಂಗಳೂರಿನಲ್ಲಿ ಚಾರ್ಮ್‌ ಕಳೆದುಕೊಂಡ ಹಾಪ್‌ಕಾಮ್ಸ್‌ ಮಳಿಗೆ

fire accident
ಬೆಂಗಳೂರು ಗ್ರಾಮಾಂತರ7 ಗಂಟೆಗಳು ago

Fire Accident : ಹೊಸೂರು ಸಮೀಪದ ಟಾಟಾ ಕಂಪೆನಿಯಲ್ಲಿ ಭಾರಿ ಅಗ್ನಿ ಅವಘಡ; ಪ್ರಾಣ ಉಳಿಸಿಕೊಳ್ಳಲು ಓಡಿ ಬಂದ ಕಾರ್ಮಿಕರು ‌

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ12 ತಿಂಗಳುಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

galipata neetu
ಕಿರುತೆರೆ10 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ12 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ11 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ10 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್4 ವಾರಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್1 ತಿಂಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ1 ತಿಂಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 ತಿಂಗಳುಗಳು ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌