ಒಬ್ಬಾತ ಡ್ರಗ್​ ಅಡಿಕ್ಟ್​, ಇನ್ನೊಬ್ಬ ಅನಾಥ, ಮತ್ತೊಬ್ಬನ ಮೈಮೇಲೆ 17ಕ್ರಿಮಿನಲ್ ಕೇಸ್​ಗಳು; ಅತೀಕ್ ಅಹ್ಮದ್​ ಹಂತಕರು ಮನೆ ಬಿಟ್ಟವರು - Vistara News

ದೇಶ

ಒಬ್ಬಾತ ಡ್ರಗ್​ ಅಡಿಕ್ಟ್​, ಇನ್ನೊಬ್ಬ ಅನಾಥ, ಮತ್ತೊಬ್ಬನ ಮೈಮೇಲೆ 17ಕ್ರಿಮಿನಲ್ ಕೇಸ್​ಗಳು; ಅತೀಕ್ ಅಹ್ಮದ್​ ಹಂತಕರು ಮನೆ ಬಿಟ್ಟವರು

ಶೂಟರ್​​ಗಳಲ್ಲಿ ಸನ್ನಿ ಸಿಂಗ್​ ಹಮೀರ್​ಪುರ್​ ಜಿಲ್ಲೆಯವನಾಗಿದ್ದು, ಲೋವ್ಲೇಶ್​ ತಿವಾರಿ ಬಾಂಡಾದ ಕೋಟ್ವಾಲಿಯವನು. ಹಾಗೆ, ಅರುಣ್​ ಮೌರ್ಯ, ಬಾಘೇಲಾ ಪುಖ್ತಾ ಎಂಬ ಹಳ್ಳಿಯವನಾಗಿದ್ದಾನೆ.

VISTARANEWS.COM


on

gangster turned politician Atiq Ahmad killers detail
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಖನೌ: ಗ್ಯಾಂಗ್​ಸ್ಟರ್​/ರಾಜಕಾರಣಿ ಅತೀಕ್ ಅಹ್ಮದ್​ ಮತ್ತು ಅವನ ತಮ್ಮ ಅಶ್ರಫ್ ಅಹ್ಮದ್​ನನ್ನು ಕೊಂದ ಶೂಟರ್​ಗಳಾದ ಲೋವ್ಲೇಶ್​​, ಸನ್ನಿ ಮತ್ತು ಅರುಣ್​ ಮೌರ್ಯನನ್ನು ಪೊಲೀಸರು ಬಂಧಿಸಿದ್ದಾರೆ. ಇವರಲ್ಲಿ ಲೋವ್ಲೇಶ್​ ತಿವಾರಿ ಮತ್ತು ಸನ್ನಿಯ ಕುಟುಂಬದವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಅವರೂ ಕೂಡ ಲೋವ್ಲೇಶ್ ಮತ್ತು ಸನ್ನಿ​ ಬಗ್ಗೆ ಒಳ್ಳೆಯ ಮಾತುಗಳನ್ನಾಡಲಿಲ್ಲ. ಲೋವ್ಲೇಶ್​ ಅಮ್ಮ ಆಶಾ ಅವರಂತೂ ಮಾಧ್ಯಮಗಳ ಎದುರು ಗೋಳೋ ಎಂದು ಅಳುತ್ತ ‘ಅವನ ಅದೃಷ್ಟವೇನಿದೆಯೋ, ಅದೇ ಆಗುತ್ತದೆ’ ಎಂದಿದ್ದಾರೆ. ‘ಅವನು ಧಾರ್ಮಿಕತೆಯಲ್ಲಿ ತುಂಬ ಆಸಕ್ತಿ ಹೊಂದಿದ್ದ. ಪ್ರತಿದಿನ ದೇವಸ್ಥಾನಕ್ಕೆ ಹೋಗುತ್ತಿದ್ದ. ಸರಿಯಾಗಿ ಮನೆಗೆ ಬರುತ್ತಿರಲಿಲ್ಲ. ಇತ್ತೀಚೆಗೆ ಅವನ ಮೊಬೈಲ್​ ಸ್ವಿಚ್​ ಆಫ್ ಆಗಿತ್ತು. ಮನೆಯಿಂದ ಹೋದಾಗಿನಿಂದ ನಾವು ಅವನ ಬಳಿ ಮಾತನಾಡಿರಲಿಲ್ಲ’ ಎಂದಿದ್ದಾರೆ.

ಇನ್ನು ಲೋವ್ಲೇಶ್​ ತಂದೆ ಯಾಗ್ಯಾ ತಿವಾರಿ ಪ್ರತಿಕ್ರಿಯೆ ನೀಡಿ ‘ಅವನು ನನ್ನ ಮಗ ಹೌದು. ನಾವು ಘಟನೆಯನ್ನು ಟಿವಿಯಲ್ಲೇ ನೋಡಿದ್ದೇವೆ. ಅವನಿಂದ ಇಂಥ ಕೃತ್ಯ ನಿರೀಕ್ಷೆ ಮಾಡಿರಲಿಲ್ಲ. ಅವನು ನಮ್ಮೊಂದಿಗೆ ಇರುತ್ತಿರಲಿಲ್ಲ. ಕುಟುಂಬದ ಯಾವ ಕಾರ್ಯಕ್ರಮಗಳಲ್ಲೂ ಪಾಲ್ಗೊಳ್ಳುತ್ತಿರಲಿಲ್ಲ. ಐದಾರು ದಿನಕ್ಕೊಮ್ಮೆ ಒಂದು ಸಲ ಮನೆಗೆ ಬಂದು ಹೋಗುತ್ತಿದ್ದ. ನಾನಂತೂ ಅವನ ಬಳಿ ಸರಿಯಾಗಿ ಮಾತನಾಡದೆ ವರ್ಷಗಳೇ ಕಳೆದು ಹೋದವು’ ಎಂದಿದ್ದಾರೆ.

ಅಷ್ಟಲ್ಲದೆ, ಲೋವ್ಲೇಶ್​ ಮೇಲೆ ಈಗಾಗಲೇ ಒಂದಷ್ಟು ಕೇಸ್​ಗಳು ದಾಖಲಾಗಿವೆ. ಅವನು ಹಿಂದೊಮ್ಮೆ ಜೈಲಿಗೆ ಕೂಡ ಹೋಗಿ ಬಂದಿದ್ದ. ಯಾವ ಕೆಲಸವನ್ನೂ ಮಾಡುತ್ತಿರಲಿಲ್ಲ. ಡ್ರಗ್​ ಅಡಿಕ್ಟ್​ ಕೂಡ ಹೌದು. ನಮಗೆ ನಾಲ್ವರು ಮಕ್ಕಳಿದ್ದಾರೆ. ಅದರಲ್ಲಿ ಲೋವ್ಲೇಶ್​ ನಮ್ಮಿಂದ ದೂರವೇ ಉಳಿದಿದ್ದ. ಅವನ ಬಗ್ಗೆ ಹೇಳಲು ಇನ್ನೇನೂ ಇಲ್ಲ’ ಎಂದಿದ್ದಾರೆ.
ಇನ್ನೊಬ್ಬ ಶೂಟರ್​ ಸನ್ನಿ ಸಿಂಗ್ ಸಹೋದರ ಪಿಂಟು ಸಿಂಗ್​ ಮಾಧ್ಯಮಗಳ ಬಳಿ ಮಾತನಾಡಿ, ‘ಸನ್ನಿ ಸದಾ ಹೊರಗೆಯೇ ಅಲೆದಾಡುತ್ತಿದ್ದ. ಮನೆಗೆ ಸರಿಯಾಗಿ ಬರುತ್ತಿರಲಿಲ್ಲ. ಏನೂ ಕೆಲಸ ಮಾಡುತ್ತಿರಲಿಲ್ಲ. ನಮ್ಮಿಂದ ಪ್ರತ್ಯೇಕವಾಗಿಯೇ ಇದ್ದ. ಅವನು ಕ್ರಿಮಿನಲ್​ ಆಗಿದ್ದು ನಮಗೆ ಗೊತ್ತಿರಲಿಲ್ಲ’ ಎಂದಿದ್ದಾರೆ.

ಇದನ್ನೂ ಓದಿ: Asad Ahmed: ಎನ್​ಕೌಂಟರ್​ನಲ್ಲಿ ಹತ್ಯೆಗೀಡಾದ ಅಸಾದ್ ಅಂತ್ಯಕ್ರಿಯೆ; ಪಾಲ್ಗೊಳ್ಳಲು ಅಪ್ಪ ಅತೀಕ್ ಅಹ್ಮದ್​​ಗೆ ಸಿಗಲೇ ಇಲ್ಲ ಅನುಮತಿ

ಶೂಟರ್​​ಗಳಲ್ಲಿ ಸನ್ನಿ ಸಿಂಗ್​ ಹಮೀರ್​ಪುರ್​ ಜಿಲ್ಲೆಯವನಾಗಿದ್ದು, ಲೋವ್ಲೇಶ್​ ತಿವಾರಿ ಬಾಂಡಾದ ಕೋಟ್ವಾಲಿಯವನು. ಹಾಗೆ, ಅರುಣ್​ ಮೌರ್ಯ, ಬಾಘೇಲಾ ಪುಖ್ತಾ ಎಂಬ ಹಳ್ಳಿಯವನಾಗಿದ್ದಾನೆ. ಇದರಲ್ಲಿ ಲೋವ್ಲೇಶ್​ ತಿವಾರಿ ತಾನು ಬಜರಂಗದಳ ನಾಯಕ ಮತ್ತು ಜಿಲ್ಲಾ ಸಹ ಪ್ರಮುಖ್​​ ಎಂದು ತನ್ನ ಫೇಸ್​ಬುಕ್​ ಪ್ರೊಫೈಲ್​​ನಲ್ಲಿ ಬರೆದುಕೊಂಡಿದ್ದಾನೆ. ಸನ್ನಿ ಸಿಂಗ್​​ ಬಿಎ ಪದವಿ ಪ್ರಥಮ ವರ್ಷ ಮಾತ್ರ ಮುಗಿಸಿ ನಂತರ ಕಾಲೇಜು ಬಿಟ್ಟವನು. ಅವನ ವಿರುದ್ಧ ಈಗಾಗಲೇ 17 ಕ್ರಿಮಿನಲ್ ಕೇಸ್​ಗಳಿವೆ. 3ವರ್ಷಗಳ ಹಿಂದೆ ಹುಡುಗಿಯೊಬ್ಬಳನ್ನು ಚುಡಾಯಿಸಿ, ಜೈಲು ಪಾಲಾಗಿದ್ದ. ಕುರಾರಾ ಪೊಲೀಸ್​ ಸ್ಟೇಶನ್​ನಲ್ಲಿ ಹಿಸ್ಟರಿ ಶೀಟರ್​ ಆಗಿದ್ದಾನೆ.

ಇನ್ನೊಬ್ಬಾತ ಅರುಣ್​ ಮೌರ್ಯ ಅನಾಥ. ಇವನ ಅಪ್ಪ-ಅಮ್ಮ ತೀರಿಕೊಂಡಿದ್ದಾರೆ. ಇವನ ಚಿಕ್ಕಮ್ಮ ಮತ್ತು ಚಿಕ್ಕಪ್ಪ ಇರುವುದು ಕಸ್​ಗಂಜ್​ ಜಿಲ್ಲೆಯ ಬಾಘೇಲ್​ ಪುಖ್ತಾ ಹಳ್ಳಿಯಲ್ಲಿ. ಈ ಹಳ್ಳಿಯನ್ನು ಅರುಣ್​ 11ವರ್ಷಗಳ ಹಿಂದೆಯೇ ತೊರೆದಿದ್ದಾನೆ. ಹಾಗಿದ್ದಾಗ್ಯೂ ಪೊಲೀಸರು ಇಲ್ಲಿಗೆ ಆಗಮಿಸಿ ಅರುಣ್​ ಬಗ್ಗೆ ವಿಚಾರಣೆ ನಡೆಸಿದ್ದಾರೆ. ಅವನ ಚಿಕ್ಕಮ್ಮ ಲಕ್ಷ್ಮೀಯನ್ನು ಪ್ರಶ್ನಿಸಿದಾಗ ಅವರು ‘ಆ ಹುಡುಗ ಅರುಣ್​ ಅಪ್ಪ-ಅಮ್ಮ ತೀರಿಕೊಂಡು 10-11ವರ್ಷವಾಯಿತು. ಪಾಲಕರು ಹೋದ ನಂತರ ಅವನೂ ಹಳ್ಳಿ ಬಿಟ್ಟು ಹೋಗಿದ್ದಾನೆ. ತಿರುಗಿ ಈ ಕಡೆ ಬರಲಿಲ್ಲ ಎಂದು ಪೊಲೀಸರಿಗೆ ಉತ್ತರಿಸಿದ್ದಾಗಿ ಮಾಹಿತಿ ಸಿಕ್ಕಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Ayodhya’s e-rickshaw : ಅಯೋಧ್ಯೆಯಲ್ಲಿ ಬಿಜೆಪಿಗೆ ಸೋಲು; ಪ್ರವಾಸಿಗರ ಸಂಖ್ಯೆ ಇಳಿಕೆ; ರಿಕ್ಷಾ ಚಾಲಕರಿಗೆ ಆದಾಯ ನಷ್ಟ!

Ayodhya’s e-rickshaw : ಸರ್ಕಾರದಿಂದ ಗಮನದ ಕೊರತೆಯಿಂದಾಗಿ ಸಮಸ್ಯೆಯಾಗಿದೆ. ರಸ್ತೆಗಳನ್ನು ಅಭಿವೃದ್ಧಿ ಮತ್ತು ಅಯೋಧ್ಯೆಯ ಅಭಿವೃದ್ಧಿಯಲ್ಲಿ ಕುಸಿತವೇ ಇದಕ್ಕೆ ಕಾರಣ. ಬಿಜೆಪಿ ಸೋತ ಕಾರಣ ಪರಿಸ್ಥಿತಿ ಇದೇ ರೀತಿ ಮುಂದುವರಿಯಲಿದೆ. ಹೀಗಾಗಿ ನಮ್ಮ ಸಮಸ್ಯೆಗಳು ಬಿಗಡಾಯಿಸಲಿದೆ ಎಂದು ರಿಕ್ಷಾ ಚಾಲಕರೊಬ್ಬರು ಹೇಳಿದ್ದಾರೆ.

VISTARANEWS.COM


on

Ayodhya's e-rickshaw
Koo

ಬೆಂಗಳೂರು: ರಾಮ ಜನ್ಮಭೂಮಿ ಅಯೋಧ್ಯೆಯಿರುವ ಫೈಜಾಬಾದ್​ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಸೋಲು ಕಂಡಿರುವುದು ದೇಶಕ್ಕೆ ದೇಶವೇ ಅಚ್ಚರಿ ಪಡುವ ಸಂಗತಿ. ಅಲ್ಲಿ ಸಮಾಜವಾದಿ ಪಕ್ಷದ ಅವದೇಶ ಪ್ರಸಾದ್ ಗೆಲುವು ಸಾಧಿಸಿದ್ದಾರೆ. ಇದು ಭಾರತದ ಕೋಟ್ಯಂತರ ಹಿಂದೂಗಳ ಪಾಲಿಗೆ ನೋವಿನ ಸಂಗತಿಯಾಗಿದೆ. ಇದರಿಂದಾಗಿ ಅಯೋಧ್ಯೆಗೆ ಭೇಟಿ ನೀಡುತ್ತಿರುವ ಪ್ರವಾಸಿಗರ ಸಂಖ್ಯೆ ಗಣನೀಯವಾಗಿ ಇಳಿಮುಖವಾಗಿದೆ. ಇದರ ಪರಿಣಾಮ ಅಲ್ಲಿನ ರಿಕ್ಷಾ ಚಾಲಕರಿಗೆ ತಟ್ಟಿದೆ. ದಿನಕ್ಕೆ 1000 ರೂಪಾಯಿ ದುಡಿಯುತ್ತಿದ್ದವರು 250 ರೂಪಾಯಿ ಮಾಡಲೂ ಪೇಚಾಡುತ್ತಿದ್ದಾರೆ. ರಾಮ ಮಂದಿರ ಉದ್ಘಾಟನೆಯಾದ ಕೇವಲ ನಾಲ್ಕು ತಿಂಗಳ ನಂತರ ತಮ್ಮ ವ್ಯವಹಾರಕ್ಕೆ ಹೊಡೆತ ಬಿದ್ದಿರುವುದಕ್ಕೆ ಅಯೋಧ್ಯೆಯ ಇ-ರಿಕ್ಷಾ ಚಾಲಕರು ಅಸಮಾಧಾನಗೊಂಡಿದ್ದಾರೆ. ರಾಮ ಮಂದಿರ ಉದ್ಘಾಟನೆಯ ಸಂಭ್ರಮದ ನಂತರವೂ ಬಿಜೆಪಿ ಫೈಜಾಬಾದ್ ಸ್ಥಾನವನ್ನು ಕಳೆದುಕೊಂಡಿದ್ದರ ಪರಿಣಾಮ ಅದು ಎಂಬುದು ಅವರಿಗೆ ಅರಿವಾಗಿದ್ದು ಈ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.

ಸರ್ಕಾರದಿಂದ ಗಮನದ ಕೊರತೆಯಿಂದಾಗಿ ಸಮಸ್ಯೆಯಾಗಿದೆ. ರಸ್ತೆಗಳನ್ನು ಅಭಿವೃದ್ಧಿ ಮತ್ತು ಅಯೋಧ್ಯೆಯ ಅಭಿವೃದ್ಧಿಯಲ್ಲಿ ಕುಸಿತವೇ ಇದಕ್ಕೆ ಕಾರಣ. ಬಿಜೆಪಿ ಸೋತ ಕಾರಣ ಪರಿಸ್ಥಿತಿ ಇದೇ ರೀತಿ ಮುಂದುವರಿಯಲಿದೆ. ಹೀಗಾಗಿ ನಮ್ಮ ಸಮಸ್ಯೆಗಳು ಬಿಗಡಾಯಿಸಲಿದೆ ಎಂದು ರಿಕ್ಷಾ ಚಾಲಕರೊಬ್ಬರು ಹೇಳಿದ್ದಾರೆ.

ನಾವು 10 ವರ್ಷಗಳಿಂದ ಇಲ್ಲಿ ರಿಕ್ಷಾಗಳನ್ನು ಓಡಿಸುತ್ತಿದ್ದೇವೆ. ಅಯೋಧ್ಯೆಯನ್ನು ಸುಂದರ ನಗರವಾಗಿ ನಿರ್ಮಿಸುವುದನ್ನು ಮತ್ತು ಅಭಿವೃದ್ಧಿಪಡಿಸುವುದನ್ನು ನಾವು ನೋಡಿದ್ದೇವೆ. ಆದಾಗ್ಯೂ, ನಾನು ನಿಮಗೆ ಹೇಳುತ್ತೇನೆ, ಬಿಜೆಪಿ ಸರ್ಕಾರವು ಈಗ ಕೆಲವು ತೊಂದರೆಗಳನ್ನು ಎದುರಿಸುತ್ತಿದೆ. ಇಲ್ಲಿ ಅಭಿವೃದ್ಧಿಯ ಕುಸಿತವಾಗಿದೆ. ಇಲ್ಲಿ ಬಿಜೆಪಿ ಅಭ್ಯರ್ಥಿ ಜವಾಬ್ದಾರರಾಗಿದ್ದಾರೆ ಏಕೆಂದರೆ ಅವರು ನಮ್ಮ ಸಮಸ್ಯೆಗಳನ್ನು ಪರಿಹರಿಸುವುದಿಲ್ಲ. ಅವರು ಯಾರನ್ನೂ ಭೇಟಿಯಾಗುವುದಿಲ್ಲ. ಮಂತ್ರಿಗಳು ಆಗಾಗ್ಗೆ ಇಲ್ಲಿಗೆ ಬರುತ್ತಾರೆ. ಆದರೆ ಅವರು ಸಾಮಾನ್ಯ ಜನರೊಂದಿಗೆ ಸಂವಹನ ನಡೆಸುವುದಿಲ್ಲ. ಅವರು ಬರುತ್ತಾರೆ, ರ್ಯಾಲಿಗಳನ್ನು ನಡೆಸುತ್ತಾರೆ ವಾಪಸ್ ಹೋಗುತ್ತಾರೆ ಎಂದು ರಿಕ್ಷಾ ಚಾಲಕರೊಬ್ಬರು ಹೇಳಿದ್ದಾರೆ.

ಪರಿಸ್ಥಿತಿ ವಿಕೋಪಕ್ಕೆ

ಇದೇ ಪರಿಸ್ಥಿತಿ ಮುಂದುವರಿದರೆ ಅಯೋಧ್ಯೆ ಮತ್ತು ಇತರ ಅನೇಕ ಸ್ಥಳಗಳಿಗೆ ಹಿನ್ನಡೆಯಾಗುತ್ತದೆ. ನಮ್ಮ ಆದಾಯವು ಗಮನಾರ್ಹವಾಗಿ ಕುಸಿಯುತ್ತಿದೆ. ನಾವು 500-1000 ರೂ.ಗಳನ್ನು ಗಳಿಸುತ್ತಿದ್ದೆವು, ಈಗ 4 ರಂದು ಚುನಾವಣಾ ಫಲಿತಾಂಶಗಳು ಪ್ರಕಟವಾದಾಗಿನಿಂದ 250 ರೂ.ಗಳನ್ನು ಗಳಿಸುವುದು ಸಹ ಕಷ್ಟಕರವಾಗಿದೆ. ಕೇವಲ ಎರಡು ದಿನಗಳಲ್ಲಿ ಪರಿಸ್ಥಿತಿ ಹದಗೆಟ್ಟಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Anupam Kher-Rajinikanth: ಮೋದಿ ಪ್ರಮಾಣವಚನ ವೇಳೆ ರಜನಿಕಾಂತ್‌ಗೆ ಅನುಪಮ್ ಖೇರ್ ಹೇಳಿದ್ದೇನು? ವಿಡಿಯೊ ನೋಡಿ!

ಲೋಕಸಭಾ ಚುನಾವಣಾ ಫಲಿತಾಂಶಗಳು ಒಂದು ಕಾಲದಲ್ಲಿ ಅಭಿವೃದ್ಧಿ ಹೊಂದುತ್ತಿದ್ದ ಅಯೋಧ್ಯೆಯ ವ್ಯವಹಾರದ ಮೇಲೆ ಪ್ರಭಾವ ಬೀರಿದೆ. ಅಯೋಧ್ಯೆ ಇರುವ ಫೈಜಾಬಾದ್​ನ ಬಿಜೆಪಿ ಅಭ್ಯರ್ಥಿಯ ಸೋಲಿನೊಂದಿಗೆ, ನಗರದ ವಾತಾವರಣವು ಬದಲಾಗಿದೆ.

ಯಾತ್ರಾರ್ಥಿಗಳು ಮತ್ತು ಪ್ರವಾಸಿಗರ ಸಂಖ್ಯೆ ಕ್ಷೀಣಿಸುತ್ತಿದೆ. “ಜನರು ರಾಮ ಮಂದಿರ ಮತ್ತು ಹನುಮಾನ್ ಗರ್ಹಿಯಂತಹ ಸ್ಥಳಗಳಲ್ಲಿ ಕುಳಿತಿದ್ದಾರೆ, ಆದರೆ ಇದೀಗ, ಇಲ್ಲಿ ಯಾವುದೇ ಯಾತ್ರಿಕರು ಇಲ್ಲ” ಎಂದು ಹೇಳಿದ್ದಾರೆ.

ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಹಿನ್ನಡೆ

ಉತ್ತರ ಪ್ರದೇಶದಲ್ಲಿ ಈ ಬಾರಿ ಬಿಜೆಪಿಗೆ ಭಾರೀ ಹಿನ್ನಡೆಯಾಗಿದೆ. ಬಿಜೆಪಿ 2019ರ 62 ಸ್ಥಾನಗಳಿಂದ 33 ಸ್ಥಾನಕ್ಕೆ ಇಳಿಕೆಯಾದೆರ ಸಮಾಜವಾದಿ ಪಾರ್ಟಿ 37 ಹಾಗೂ ಕಾಂಗ್ರೆಸ್​ 6 ಸ್ಥಾನಗಳನ್ನು ಗೆಲ್ಲುವ ಮೂಲಕ ಇಂಡಿಯಾ ಒಕ್ಕೂಟ ಒಟ್ಟು 43 ಸ್ಥಾನಗಳನ್ನು ಗಳಿಸಿಕೊಂಡಿದೆ. ಇದು ಕೇಂದ್ರಲ್ಲಿ ಸರಳ ಬಹುಮತದೊಂದಿಗೆ ಸರ್ಕಾರ ರಚಿಸುವ ಮೋದಿ ನೇತೃತ್ವದ ಎನ್​ಡಿಎ ಒಕ್ಕೂಟದ ಶಕ್ತಿಯೂ ಧಕ್ಕೆ ತಂದಿದೆ.

Continue Reading

ಪ್ರಮುಖ ಸುದ್ದಿ

Free Bus Problem: ನಮಗೆ ಫ್ರೀ ಬಸ್‌ ಬೇಡ, ವಿದ್ಯೆ ಬೇಕು! ಈ ವಿದ್ಯಾರ್ಥಿನಿ ಮಾತಿನ ವಿಡಿಯೊ ನೋಡಿ

Free Bus Problem: ಸರ್ಕಾರದ ಇಂತಹ ಫ್ರೀ ಬಸ್ ಅವ್ಯವಸ್ಥೆಯ ವಿರುದ್ಧ ಇದೀಗ ವಿದ್ಯಾರ್ಥಿಯೊಬ್ಬಳು ಕಿಡಿಕಾರಿದ್ದಾಳೆ. ವಿದ್ಯಾರ್ಥಿನಿಯೊಬ್ಬಳಿಗೆ ಬಸ್ಸು ಸರಿಯಾದ ಸಮಯಕ್ಕೆ ಸಿಗದ ಕಾರಣ ಸರ್ಕಾರಿ ಅಧಿಕಾರಿಗಳ ಕಚೇರಿಗೆ ತಮ್ಮ ಸಹಪಾಠಿಗಳ ಜೊತೆ ಹೋಗಿ ಸರ್ಕಾರದ ಆಡಳಿತ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾಳೆ.

VISTARANEWS.COM


on

Free Bus Problem
Koo

ಕುಂದಾಪುರ: ಮಳೆಗಾಲ ಬಂತೆಂದರೆ ಒಂದಲ್ಲ ಒಂದು ಸಮಸ್ಯೆ ಕಾಡುತ್ತಿರುತ್ತದೆ. ರಸ್ತೆಯ ಸಮಸ್ಯೆ, ಬಸ್ಸಿನ ಸಮಸ್ಯೆ, ಚರಂಡಿ ಸಮಸ್ಯೆ ಹೀಗೆ ಹಲವಾರು ಸಮಸ್ಯೆಗಳು ಎದುರಾಗುತ್ತದೆ. ಇನ್ನು ಮಳೆಗಾಲದಲ್ಲಿ ಶಾಲಾ-ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳ ಪಾಡಂತೂ ಹೇಳತೀರದು. ಪಟ್ಟಣಗಳಿಗೆ ಹೋಲಿಸಿದರೆ ಹಳ್ಳಿಯಲ್ಲಿರುವ ವಿದ್ಯಾರ್ಥಿಗಳಿಗೆ (Student) ಈ ಮಳೆಗಾಲವೆಂದರೆ ವನವಾಸದ ಹಾಗೇ. ಕೆಲವು ಕಡೆಗಳಲ್ಲಿ ಬಸ್ಸುಗಳು ಸರಿಯಾದ ಸಮಯಕ್ಕೆ ಬರುವುದಿಲ್ಲ. ಅಲ್ಲಲ್ಲಿ ರಸ್ತೆಗಳು ಕೆಟ್ಟಿರುವ ಕಾರಣ ಬಸ್ಸು ಬರುವುದು ತಡವಾಗುತ್ತದೆ. ಇನ್ನು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ ಮಹಿಳೆಯರಿಗಾಗಿ ಫ್ರಿ ಬಸ್ (Free Bus Problem )ವ್ಯವಸ್ಥೆ ಮಾಡಿದೆ. ಈ ಬಿಟ್ಟಿ ಭಾಗ್ಯದ  ಬಸ್ ನಿಂದ ಕೆಲವು ಭಾಗದ ವಿದ್ಯಾರ್ಥಿಗಳಿಗೆ ಸಂಕಷ್ಟ ಎದುರಾಗಿದೆ. ಈ ಅವ್ಯವಸ್ಥೆ ಕುರಿತು ವಿದ್ಯಾರ್ಥಿಗಳು ಆಕ್ರೋಶಗೊಂಡಿದ್ದಾರೆ.

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬಸ್ಸುಗಳು 5-10 ನಿಮಿಷಕ್ಕೂ ಬರುತ್ತದೆ. ಇದರಿಂದ ಯಾವುದೇ ಸಮಸ್ಯೆ ಇಲ್ಲ. ಆದರೆ ಕೆಲವು ಒಳರಸ್ತೆಯಲ್ಲಿ ಬಸ್ಸುಗಳು ಗಂಟೆಗೊಂದು ಬರುತ್ತದೆ. ಇದರಿಂದ ವಿದ್ಯಾರ್ಥಿಗಳು ಬಸ್ಸಿನ ಸಮಸ್ಯೆಯಿಂದ ಒದ್ದಾಡುತ್ತಿದ್ದಾರೆ. ಇತ್ತೀಚೆಗೆ ರಾಜ್ಯದ  ಆಡಳಿತವನ್ನು ಕೈಗೆ ತೆಗೆದುಕೊಂಡ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗಾಗಿ ಬಿಟ್ಟಿ ಭಾಗ್ಯಗಳನ್ನು ನೀಡಿದೆ. ಅದರಲ್ಲಿ ಫ್ರೀ ಬಸ್ ವ್ಯವಸ್ಥೆ ಕೂಡ ಒಂದು. ಈ ಫ್ರಿ ಬಸ್ ಭಾಗ್ಯದ ಯೋಜನೆ ಜಾರಿಗೆ ಬಂದ ಮೇಲಂತೂ ಸರ್ಕಾರ 10 ಬಸ್ಸು ಓಡಾಡುವ ಸ್ಥಳಗಳಲ್ಲಿ 3-4 ಬಸ್ಸುಗಳನ್ನು ಬಿಟ್ಟಿದ್ದಾರೆ. ಅಲ್ಲದೇ ಬಸ್ಸುಗಳಲ್ಲಿ ಸರಿಯಾದ ಸೀಟಿನ ವ್ಯವಸ್ಥೆ ಇಲ್ಲ, ಬಾಗಿಲು, ಕಿಟಕಿಗಳು ಸರಿಯಿಲ್ಲ. ಹಾಗೇ ಮಳೆಗಾಲದಲ್ಲಿ ಸೋರುವ ಬಸ್ಸುಗಳೇ ಹೆಚ್ಚು. ಬಸ್ಸಿನ ಸಮಸ್ಯೆಯಿಂದ ಸರಿಯಾದ ಸಮಯಕ್ಕೆ ಅವರಿಗೆ ಕಾಲೇಜಿಗೆ ತಲುಪಲು ಆಗುತ್ತಿಲ್ಲ. ಇದರಿಂದ ಅಂದಿನ ಕ್ಲಾಸ್ ಮಿಸ್ ಆಗಿ ಪರೀಕ್ಷೆಯಲ್ಲಿ ಓದಲು ಕಷ್ಟವಾಗುತ್ತದೆ ಎಂಬುದು ವಿದ್ಯಾರ್ಥಿಗಳ ಗೋಳು.

ಬಿಟ್ಟಿ ಭಾಗ್ಯ ಬೇಡವೇ ಬೇಡ!

ಸರ್ಕಾರದ ಇಂತಹ ಫ್ರೀ ಬಸ್ ಅವ್ಯವಸ್ಥೆಯ ವಿರುದ್ಧ ಇದೀಗ ವಿದ್ಯಾರ್ಥಿಯೊಬ್ಬಳು ಕಿಡಿಕಾರಿದ್ದಾಳೆ. ಎಳಬೇರು ಎಂಬ ಊರಿನಿಂದ ಬರುವ ವಿದ್ಯಾರ್ಥಿನಿಯೊಬ್ಬಳಿಗೆ ಬಸ್ಸು ಸರಿಯಾದ ಸಮಯಕ್ಕೆ ಸಿಗದ ಕಾರಣ ಸರ್ಕಾರಿ ಅಧಿಕಾರಿಗಳ ಕಚೇರಿಗೆ ತಮ್ಮ ಸಹಪಾಠಿಗಳ ಜೊತೆ ಹೋಗಿ ಸರ್ಕಾರದ ಆಡಳಿತ ವಿರುದ್ಧ ಕಿಡಿಕಾರಿದ್ದಾಳೆ. ಇಂತಹ ಅವ್ಯವಸ್ಥೆಯ ಫ್ರೀ ಬಸ್ ಯೋಜನೆ ನಮಗೆ ಬೇಡವೇ ಬೇಡ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾಳೆ. ಹಾಗೆಯೇ ಈ ಬಗ್ಗೆ ಅಧಿಕಾರಿಗಳು ಸರಿಯಾದ ಕ್ರಮ ತೆಗೆದುಕೊಳ್ಳಬೇಕೆಂದು ಕೇಳಿಕೊಂಡಿದ್ದಾಳೆ.

ಇದನ್ನೂ ಓದಿ:Smartphone Charging Tips: ನಿಮ್ಮ ಸ್ಮಾರ್ಟ್ ಪೋನ್ ಬ್ಯಾಟರಿ ಹೆಚ್ಚು ಬಾಳಿಕೆ ಬರಲು ಹೀಗೆ ಮಾಡಿ

ಫೇಸ್ ಬುಕ್‌ನಲ್ಲಿ ಈ ವಿಡಿಯೋ ಪೋಸ್ಟ್ ಆಗಿದ್ದು, ಇದಕ್ಕೆ ಹಲವರು ಕಾಮೆಂಟ್ ಮಾಡಿದ್ದಾರೆ. ಹಲವರು ಆ ವಿದ್ಯಾರ್ಥಿನಿಗೆ ಬೆಂಬಲ ನೀಡಿದ್ದಾರೆ ಮತ್ತು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

Continue Reading

ಉದ್ಯೋಗ

Job Alert: ಬಿಎಸ್ಎಫ್‌ನಲ್ಲಿದೆ ಬರೋಬ್ಬರಿ 1,526 ಹುದ್ದೆ; ದ್ವಿತೀಯ ಪಿಯು ಪಾಸಾದವರು ಇಂದೇ ಅರ್ಜಿ ಸಲ್ಲಿಸಿ

Job Alert: ಗಡಿ ಭದ್ರತಾ ಪಡೆಯಲ್ಲಿ ಉದ್ಯೋಗ ನಿರ್ವಹಿಸಬೇಕು ಎನ್ನುವ ನಿಮ್ಮ ಕನಸು ನನಸಾಗುವ ದಿನ ಹತ್ತಿರದಲ್ಲೇ ಇದೆ. ಯಾಕೆಂದರೆ ಬಿಎಸ್‌ಎಫ್‌ ಖಾಲಿ ಇರುವ ಬರೋಬ್ಬರಿ 1,526 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. 12ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆ ದಿನಾಂಕ ಜುಲೈ 8. ಅಸಿಸ್ಟೆಂಟ್‌ ಸಬ್‌ ಇನ್ಸ್‌ಪೆಕ್ಟರ್‌ ಮತ್ತು ವಾರೆಂಟ್‌ ಆಫೀಸರ್‌, ಹೆಡ್‌ ಕಾನ್ಸ್‌ಟೇಬಲ್‌ ಮತ್ತು ಹವಲ್ದಾರ್‌ ಹುದ್ದೆಗಳಿದ್ದು, ಪುರುಷರು ಮತ್ತು ಮಹಿಳೆಯರು ಅರ್ಜಿ ಸಲ್ಲಿಸಬಹುದು.

VISTARANEWS.COM


on

Job Alert
Koo

ನವದೆಹಲಿ: ಗಡಿ ಭದ್ರತಾ ಪಡೆ (Border Security Force-BSF)ಯಲ್ಲಿ ಉದ್ಯೋಗ ನಿರ್ವಹಿಸಬೇಕು ಎನ್ನುವುದು ಬಹುತೇಕ ಯುವ ಜನತೆಯ ಕನಸು. ಅಂತಹ ಕನಸು ಕಾಣುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌. ಬಿಎಸ್ಎಫ್‌ ತನ್ನಲ್ಲಿ ಖಾಲಿ ಇರುವ ಅಸಿಸ್ಟೆಂಟ್‌ ಸಬ್‌ ಇನ್ಸ್‌ಪೆಕ್ಟರ್‌, ಹೆಡ್‌ ಕಾನ್ಸ್‌ಟೇಬಲ್‌ ಸೇರಿ ಬರೋಬ್ಬರಿ 1,526 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (BSF Recruitment 2024). 12ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆ ದಿನಾಂಕ ಜುಲೈ 8 (Job Alert).

ಹುದ್ದೆಗಳ ವಿವರ

ಅಸಿಸ್ಟೆಂಟ್‌ ಸಬ್‌ ಇನ್ಸ್‌ಪೆಕ್ಟರ್‌ ಮತ್ತು ವಾರೆಂಟ್‌ ಆಫೀಸರ್‌ – 243 ಮತ್ತು ಹೆಡ್‌ ಕಾನ್ಸ್‌ಟೇಬಲ್‌ ಮತ್ತು ಹವಲ್ದಾರ್‌ (ಕ್ಲರ್ಕ್‌) – 1,283 ಹುದ್ದೆಗಳಿವೆ. ಪುರುಷರು ಮತ್ತು ಮಹಿಳೆಯರು ಅರ್ಜಿ ಸಲ್ಲಿಸಬಹುದು.

ವಿದ್ಯಾರ್ಹತೆ ಮತ್ತು ವಯೋಮಿತಿ

ಯಾವುದೇ ಅಂಗೀಕೃತ ಶಿಕ್ಷಣ ಮಂಡಳಿ ಅಥವಾ ವಿಶ್ವ ವಿದ್ಯಾನಿಲಯದಿಂದ 12ನೇ ತರಗತಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಲು ಅರ್ಹರು. ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 25 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ರಿಯಾಯಿತಿ ಲಭ್ಯ. ಎಸ್‌ಸಿ / ಎಸ್‌ಟಿ ವರ್ಗಕ್ಕೆ 5 ವರ್ಷ ಮತ್ತು ಮಾಜಿ ಯೋಧರು / ಒಬಿಸಿ ವರ್ಗಕ್ಕೆ 3 ವರ್ಷಗಳ ವಿನಾಯಿತಿ ಇದೆ.

ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ

ಅರ್ಜಿ ಸಲ್ಲಿಸುವ ಎಸ್‌ಸಿ / ಎಸ್‌ಟಿ / ಮಾಜಿ ಯೋಧರು / ಮಹಿಳೆಯರು ಶುಲ್ಕ ಪಾವತಿಸಬೇಕಾಗಿಲ್ಲ. ಇನ್ನು ಉಳಿದ ಎಲ್ಲ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 100 ರೂ. ಪಾವತಿಸಬೇಕು. ಇದಕ್ಕಾಗಿ ಆನ್‌ಲೈನ್‌ ವಿಧಾನವನ್ನು ಬಳಸಬಹುದು.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಲಿಖಿತ ಪರೀಕ್ಷೆ (Written Examination), ದೈಹಿಕ ಸಾಮರ್ಥ್ಯ ಪರೀಕ್ಷೆ (Physical Standards Test), ಸ್ಕಿಲ್‌ ಟೆಸ್ಟ್‌ (Skill Test), ದಾಖಲಾತಿ ಪರಿಶೀಲನೆ (Document Verification) ಮತ್ತು ವೈದ್ಯಕೀಯ ಪರೀಕ್ಷೆ (Medical Examination) ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದ ಅಸಿಸ್ಟೆಂಟ್‌ ಸಬ್‌ ಇನ್ಸ್‌ಪೆಕ್ಟರ್‌ & ವಾರೆಂಟ್‌ ಆಫೀಸರ್‌ ಹುದ್ದೆಗೆ 29,200 ರೂ. -92,300 ರೂ. ಮತ್ತು ಹೆಡ್‌ ಕಾನ್ಸ್‌ಸ್ಟೇಬಲ್‌ & ಹವಲ್ದಾರ್‌ ಹುದ್ದೆಗೆ 25,500 ರೂ. – 81,100 ರೂ. ಮಾಸಿಕ ವೇತನ ದೊರೆಯಲಿದೆ.

BSF Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ಹೆಸರು, ಮೊಬೈಲ್‌ ನಂಬರ್‌ ಮತ್ತು ಇಮೇಲ್‌ ಐಡಿ ನಮೂದಿಸಿ ನೋಂದಾಯಿಸಿ. ಒಟಿಪಿಯನ್ನು ನಮೂದಿಸಿ.
  • ಈಗ ತೆರೆದುಕೊಳ್ಳುವ ಅಪ್ಲಿಕೇಷನ್‌ ಫಾರಂ ಅನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
  • ಅಗತ್ಯ ದಾಖಲೆಗಳನ್ನು ಅಪ್‌ಲೋಡ್‌ ಮಾಡಿ.
  • ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದರೆ ಮಾತ್ರ).
  • ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಅಪ್ಲಿಕೇಷನ್‌ ನಂಬರ್‌ ಅಥವಾ ರಿಕ್ವೆಸ್ಟ್‌ ನಂಬರ್‌ ನೋಟ್‌ ಮಾಡಿಟ್ಟುಕೊಳ್ಳಿ.

ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್‌ ವಿಳಾಸ: rectt.bsf.gov.in ಇಲ್ಲಿಗೆ ಭೇಟಿ ನೀಡಿ.

ಇದನ್ನೂ ಓದಿ: Job Alert: ಇಂದಿರಾ ಗಾಂಧಿ ಸೆಂಟರ್ ಫಾರ್ ಅಟಾಮಿಕ್ ರಿಸರ್ಚ್‌ನಲ್ಲಿದೆ ಉದ್ಯೋಗಾವಕಾಶ; ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

Continue Reading

ಪ್ರಮುಖ ಸುದ್ದಿ

Anupam Kher-Rajinikanth: ಮೋದಿ ಪ್ರಮಾಣವಚನ ವೇಳೆ ರಜನಿಕಾಂತ್‌ಗೆ ಅನುಪಮ್ ಖೇರ್ ಹೇಳಿದ್ದೇನು? ವಿಡಿಯೊ ನೋಡಿ!

Anupam Kher-Rajinikanth ಪ್ರಧಾನಿ ನರೇಂದ್ರ ಮೋದಿಯವ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ನಟ ರಜನಿಕಾಂತ್ ಅವರನ್ನು ಭೇಟಿಯಾದ ನಟ ಅನುಪಮ್ ಖೇರ್ ರಜನಿಕಾಂತ್ ಅವರನ್ನು “ಮನುಕುಲಕ್ಕೆ ದೇವರು ನೀಡಿದ ಕೊಡುಗೆ” ಎಂದು ಹಾಡಿಹೊಗಳಿದ್ದಾರೆ. ಈ ವಿಡಿಯೋವನ್ನು ಅನುಪಮ್ ಖೇರ್ ಅವರು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೊವನ್ನು ನೀವೇ ನೋಡಿ.

VISTARANEWS.COM


on

Anupam Kher-Rajinikanth
Koo

ದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಭಾರತ ಕಂಡ ಮಹಾನ್ ನಾಯಕ. ಪ್ರಧಾನಿ ಮೋದಿಯವರ ನೇರ ನಡೆ, ದಕ್ಷ ಆಡಳಿತದಿಂದ ಅವರು ಭಾರತ ಮಾತ್ರವಲ್ಲ ವಿಶ್ವದ ನೆಚ್ಚಿನ ನಾಯಕರೆನಿಸಿಕೊಂಡಿದ್ದಾರೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಪಕ್ಷ ಬಹುಮತ ಪಡೆದಿತ್ತು. ಈ ಹಿನ್ನೆಲೆಯಲ್ಲಿ ಪಕ್ಷದ ಎಲ್ಲಾ ನಾಯಕರು ಸೇರಿ ನರೇಂದ್ರ ಮೋದಿಯವರನ್ನು ಮತ್ತೆ ಮೂರನೇ ಬಾರಿ ದೇಶದ ಪ್ರಧಾನಿಯಾಗಿ ಆಯ್ಕೆ ಮಾಡಿದ್ದಾರೆ. ಜೂನ್ 9ರಂದು ನಡೆದ ಪ್ರಧಾನಿ ನರೇಂದ್ರ ಮೋದಿಯವ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ದೇಶದ ಪ್ರಮುಖ ವ್ಯಕ್ತಿಗಳು, ಖ್ಯಾತ ಸಿನಿಮಾ ತಾರೆಯರ ದಂಡೇ ಆಗಮಿಸಿತ್ತು.ಈ ಕಾರ್ಯಕ್ರಮಕ್ಕೆ ನಟ ರಜನಿಕಾಂತ್ ಮತ್ತು ನಟ ಅನುಪಮ ಖೇರ್ (Anupam Kher-Rajinikanth)ಅವರು ಆಗಮಿಸಿದ್ದರು.

ರಜನಿಕಾಂತ್‌ ಅವರನ್ನು ನೋಡಿದಾಕ್ಷಣ ಅನುಪಮ್‌ ಖೇರ್‌ ಅವರು ಖುಷಿಯಿಂದ ಹಾಡಿ ಹೊಗಳಿದ್ದಾರೆ. ರಜನಿಕಾಂತ್ ಅವರನ್ನು “ಮನುಕುಲಕ್ಕೆ ದೇವರು ನೀಡಿದ ಕೊಡುಗೆ” ಎಂದು ಅನುಪಮ್‌ ಖೇರ್‌ ಹೊಗಳಿಕೆಯ ಸುರಿಮಳೆ ಸುರಿಸಿದ್ದಾರೆ. ಈ ವಿಡಿಯೋವನ್ನು ಅನುಪಮ್ ಖೇರ್ ಅವರು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಈ ವಿಡಿಯೋದಲ್ಲಿ ಅನುಪಮ್ ಖೇರ್ ಮತ್ತು ರಜನಿಕಾಂತ್ ಅವರು ಭದ್ರತೆಯೊಂದಿಗೆ ನಡೆದುಕೊಂಡು ಹೋಗುವುದು ಕಾಣುತ್ತಿದೆ. ಆ ವೇಳೆ ಕ್ಯಾಮೆರಾವನ್ನು ನೋಡುತ್ತಿದ್ದ ಅನುಪಮ್, “ಒಬ್ಬನೇ, ಮಿಸ್ಟರ್ ರಜನಿ-ದಿ-ಕಾಂತ್! ! ಮನುಕುಲಕ್ಕೆ ದೇವರ ಕೊಡುಗೆ! ವಾಹ್!” ಎಂದು ಹೇಳುತ್ತಾ ರಜನಿಕಾಂತ್ ಅವರನ್ನು ಹೊಗಳಿದ್ದಾರೆ. ಆಗ ರಜನಿಕಾಂತ್ ಅನುಪಮ್ ಖೇರ್ ತೋಳನ್ನು ಹಿಡಿದು ಮುಗುಳ್ನಕ್ಕಿದ್ದಾರೆ. ಈ ಇಬ್ಬರ ನಟರ ಖುಷಿಯನ್ನು ಜನರು ಕೂಡ ಕಣ್ತುಂಬಿಕೊಂಡಿದ್ದಾರೆ.

ಈ ವಿಡಿಯೋಗೆ ನಿರ್ಮಾಪಕ ಆನಂದ್ ಪಂಡಿತ್ ಅವರು, “ರಜನಿಕಾಂತ್‌ ಪ್ರತಿಭೆಯ ಜೊತೆಗೆ, ನಮ್ರತೆ, ದಯೆ ಮತ್ತು ಪ್ರೀತಿಯ ಮಹಾಪೂರವನ್ನು ತುಂಬಿರುವ ವ್ಯಕ್ತಿ ಎಂದು ಪ್ರತಿಕ್ರಿಯಿಸಿದ್ದಾರೆ. ಹಿರಿಯ ನಟ ರಾಕೇಶ್ ಬೇಡಿ ಅವರು,”ಅದರಲ್ಲಿ ಯಾವುದೇ ಸಂದೇಹವಿಲ್ಲ ಹಾಗೇ ತುಂಬಾ ಸರಳ ವ್ಯಕ್ತಿ” ಎಂದು ಕಾಮೆಂಟ್ ಮಾಡಿದ್ದಾರೆ.

ಭಾನುವಾರ ನಡೆದ ಪ್ರಧಾನಿ ಮೋದಿ ಪ್ರಮಾಣ ವಚನ ಸಮಾರಂಭಕ್ಕೆ ಆಗಮಿಸುವ ಮುನ್ನ ರಜನಿಕಾಂತ್ ವಿಮಾನ ನಿಲ್ದಾಣದ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿ, ಕಾರ್ಯಕ್ರಮದ ಐತಿಹಾಸಿಕ ಮಹತ್ವವನ್ನು ಶ್ಲಾಘಿಸಿದರು ಮತ್ತು ಮೋದಿ ಅವರು ಮೂರನೇ ಬಾರಿ ಪ್ರಧಾನಿಯಾಗುತ್ತಿರುವುದಕ್ಕೆ ಅಭಿನಂದಿಸಿದರು. ಪ್ರಬಲ ಪ್ರತಿಪಕ್ಷಗಳ ಉಪಸ್ಥಿತಿಯು ಪ್ರಜಾಪ್ರಭುತ್ವದ ಆರೋಗ್ಯಕರ ಸಂಕೇತವಾಗಿದೆ ಎಂದು ಅವರು ಹೇಳಿದರು.‌

ಇದನ್ನೂ ಓದಿ: Actor Darshan: ಕೊಲೆ ಕೇಸ್‌ನಲ್ಲಿ ದರ್ಶನ್‌ ಬಂಧನ; ನಟಿ ಸಂಜನಾಗೆ ಶಾಕ್‌, ರಕ್ಷಿತಾ ಹಾರ್ಟ್‌ಬ್ರೇಕ್, ದೇವರಲ್ಲಿ ಪ್ರಾರ್ಥನೆ!

ನಟ ರಜನೀಕಾಂತ್ ಅವರು ಕೊನೆಯದಾಗಿ ‘ಲಾಲ್ ಸಲಾಮ್ ‘ ಚಿತ್ರದಲ್ಲಿ ಕಾಣಿಸಿಕೊಂಡರು ಮತ್ತು ಹಾಗೇ ರಜನಿಕಾಂತ್ ಅವರ 170ನೇ ಸಿನಿಮಾ ಟಿಜೆ ಜ್ಞಾನವೇಲ್ ನಿರ್ದೇಶನದ ‘ವೆಟ್ಟೈಯನ್’ ಸದ್ಯದಲ್ಲಿಯೇ ಬಿಡುಗಡೆಯಾಗಲಿದೆ.

Continue Reading
Advertisement
Health Tips For Monsoon
ಆರೋಗ್ಯ18 mins ago

Health Tips For Monsoon: ಮಳೆಗಾಲಕ್ಕೆ ನಮ್ಮ ಆಹಾರ ಹೇಗಿರಬೇಕು?

Ayodhya's e-rickshaw
ಪ್ರಮುಖ ಸುದ್ದಿ20 mins ago

Ayodhya’s e-rickshaw : ಅಯೋಧ್ಯೆಯಲ್ಲಿ ಬಿಜೆಪಿಗೆ ಸೋಲು; ಪ್ರವಾಸಿಗರ ಸಂಖ್ಯೆ ಇಳಿಕೆ; ರಿಕ್ಷಾ ಚಾಲಕರಿಗೆ ಆದಾಯ ನಷ್ಟ!

CM Siddaramaiah
ಕರ್ನಾಟಕ26 mins ago

CM Siddaramaiah: ಅಬಕಾರಿ ಪರವಾನಗಿ ನವೀಕರಣಕ್ಕೆ ಕಿರುಕುಳ ನೀಡಬೇಡಿ: ಅಧಿಕಾರಿಗಳಿಗೆ ಸಿಎಂ ಖಡಕ್‌ ಸೂಚನೆ

karnataka weather Forecast
ಮಳೆ31 mins ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

Free Bus Problem
ಪ್ರಮುಖ ಸುದ್ದಿ33 mins ago

Free Bus Problem: ನಮಗೆ ಫ್ರೀ ಬಸ್‌ ಬೇಡ, ವಿದ್ಯೆ ಬೇಕು! ಈ ವಿದ್ಯಾರ್ಥಿನಿ ಮಾತಿನ ವಿಡಿಯೊ ನೋಡಿ

Actor Darshan Arrested
ಪ್ರಮುಖ ಸುದ್ದಿ43 mins ago

Actor Darshan Arrested : ಪತಿ ಅರೆಸ್ಟ್​ ಆದರೂ ಪ್ರತಿಕ್ರಿಯೆ ನೀಡದ ದರ್ಶನ್​ ಪತ್ನಿ ವಿಜಯಲಕ್ಷ್ಮಿ!

Mens Stripe Shirt Fashion
ಫ್ಯಾಷನ್48 mins ago

Mens Stripe Shirt Fashion: ಮೆನ್ಸ್ ಕ್ಯಾಶುವಲ್‌ ಲುಕ್‌ಗೆ ರೀ ಎಂಟ್ರಿ ನೀಡಿದ ಸ್ಟ್ರೈಪ್ಡ್ ಶರ್ಟ್ಸ್

MS Dhoni
ಕ್ರೀಡೆ55 mins ago

MS Dhoni Fan: ಪ್ಯಾರಿಸ್​ನಲ್ಲಿ ಧೋನಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಅಭಿಮಾನಿ

Job Alert
ಉದ್ಯೋಗ58 mins ago

Job Alert: ಬಿಎಸ್ಎಫ್‌ನಲ್ಲಿದೆ ಬರೋಬ್ಬರಿ 1,526 ಹುದ್ದೆ; ದ್ವಿತೀಯ ಪಿಯು ಪಾಸಾದವರು ಇಂದೇ ಅರ್ಜಿ ಸಲ್ಲಿಸಿ

Anupam Kher-Rajinikanth
ಪ್ರಮುಖ ಸುದ್ದಿ1 hour ago

Anupam Kher-Rajinikanth: ಮೋದಿ ಪ್ರಮಾಣವಚನ ವೇಳೆ ರಜನಿಕಾಂತ್‌ಗೆ ಅನುಪಮ್ ಖೇರ್ ಹೇಳಿದ್ದೇನು? ವಿಡಿಯೊ ನೋಡಿ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ31 mins ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ2 hours ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ3 hours ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ4 hours ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ7 hours ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ4 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ4 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌