Optical Illusion: ಈ ಫೋಟೋ ನೋಡಿದಾಗ ನಿಮಗೆ ಮೊದಲೇನು ಕಂಡಿತು?; ವ್ಯಕ್ತಿತ್ವ ಹೇಳುವ ದೃಷ್ಟಿ ಭ್ರಮೆ ಚಿತ್ರ ಇದು - Vistara News

ವೈರಲ್ ನ್ಯೂಸ್

Optical Illusion: ಈ ಫೋಟೋ ನೋಡಿದಾಗ ನಿಮಗೆ ಮೊದಲೇನು ಕಂಡಿತು?; ವ್ಯಕ್ತಿತ್ವ ಹೇಳುವ ದೃಷ್ಟಿ ಭ್ರಮೆ ಚಿತ್ರ ಇದು

ಇದೊಂದು ಆಯಿಲ್​ ಪೇಂಟ್ (ತೈಲ ವರ್ಣಚಿತ್ರ) ಆಗಿದ್ದು, ಬಿಡಿಸಿದ್ದು ಉಕ್ರೇನ್​ನ ಕಲಾವಿದ ಒಲೆಗ್ ಶುಪ್ಲಿಯಾಕ್. ವಿಪರೀತ ಗಾಳಿ ಇರುವ ದಿನವನ್ನು ಕಟ್ಟಿಕೊಟ್ಟ, ಅತ್ಯಾಕರ್ಷಕವಾಗಿರುವ ಪೇಂಟಿಂಗ್ ಇದು!

VISTARANEWS.COM


on

This Optical Illusion Reveal Different Personality
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಆಪ್ಟಿಕಲ್​ ಇಲ್ಯೂಷನ್​ ಅಥವಾ ದೃಷ್ಟಿ ಭ್ರಮೆ (Optical Illusion) ಉಂಟು ಮಾಡುವ ಫೋಟೋಗಳು ಯಾರಿಗೆ ಇಷ್ಟವಾಗುವುದಿಲ್ಲ ಹೇಳಿ. ವ್ಯಕ್ತಿಯ ವ್ಯಕ್ತಿತ್ವ ಎಂಥದ್ದು ಎಂಬುದನ್ನು ಈ ಚಿತ್ರಗಳು ಹೇಳುತ್ತವೆ ಎಂಬ ನಂಬಿಕೆ ಇದೆ ಮತ್ತು ಇದೇ ಕಾರಣಕ್ಕೆ ಅನೇಕರು ಆಪ್ಟಿಕಲ್ ಇಲ್ಯೂಷನ್​ ಫೋಟೋಗಳನ್ನು ನೋಡಲು ಇಷ್ಟಪಡುತ್ತಾರೆ. ದೃಷ್ಟಿ ಭ್ರಮೆಯ ಚಿತ್ರಗಳು ಉಳಿದ ಚಿತ್ರಗಳಂತೆ ಸರಳವಾಗಿ ಇರುವುದಿಲ್ಲ. ನೋಡಿದ ತಕ್ಷಣ ಅಲ್ಲಿ ನಿಮಗೇನೋ ಕಾಣಿಸುತ್ತದೆ. ಆದರೆ ಅಲ್ಲಿ ಅಷ್ಟೇ ಇರುವುದಿಲ್ಲ. ಇನ್ನೂ ಹೆಚ್ಚಿನದು ಆ ಚಿತ್ರದಲ್ಲಿ ಅಡಗಿಕೊಂಡಿರುತ್ತದೆ. ಅಷ್ಟೇ ಅಲ್ಲ, ಆ ಒಟ್ಟಾರೆ ಫೋಟೋ ನಮಗೆ ಕಂಡ ರೀತಿಯಲ್ಲೇ ಇನ್ನೊಬ್ಬರಿಗೆ ಕಾಣಬೇಕು ಎಂದೇನೂ ಇಲ್ಲ. ಅಲ್ಲಿ ಅವರಿಗೆ ಇನ್ನೇನೋ ಕಾಣಿಸಬಹುದು.

ಅದೇನೆ ಇರಲಿ, ನಾವಿಲ್ಲಿ ಕೆಳಗೆ ಕೊಟ್ಟಿರುವ ಫೋಟೋವನ್ನು ನೋಡಿ. ಇದೂ ಒಂತರ ಆಪ್ಟಿಕಲ್ ಇಲ್ಯೂಷನ್​ ಫೋಟೋಗಳ ಸಾಲಿಗೇ ಸೇರುತ್ತದೆ. ಈ ಫೋಟೋದಲ್ಲಿ ನೀವು ಮೊದಲೇನು ನೋಡಿದಿರಿ? ಅದರ ಆಧಾರದ ಮೇಲೆ ನಿಮ್ಮ ವ್ಯಕ್ತಿತ್ವ ತಿಳಿಯಿರಿ. ಅಂದಹಾಗೇ, ಇದೊಂದು ಆಯಿಲ್​ ಪೇಂಟ್ (ತೈಲ ವರ್ಣಚಿತ್ರ) ಆಗಿದ್ದು, ಬಿಡಿಸಿದ್ದು ಉಕ್ರೇನ್​ನ ಕಲಾವಿದ ಒಲೆಗ್ ಶುಪ್ಲಿಯಾಕ್. ವಿಪರೀತ ಗಾಳಿ ಇರುವ ದಿನವನ್ನು ಕಟ್ಟಿಕೊಟ್ಟ, ಅತ್ಯಾಕರ್ಷಕವಾಗಿರುವ ಈ ಪೇಂಟಿಂಗ್​ ಒಮ್ಮೆ ನೋಡಿ ಮತ್ತು ಕೆಳಗೆ ನಾವು ಕೊಟ್ಟಿರುವ ವಿವರಣೆಗಳನ್ನು ಓದಿ, ನಿಮ್ಮ ವ್ಯಕ್ತಿತ್ವ ಎಂಥದ್ದು ಎಂಬುದನ್ನು ತಿಳಿಯಿರಿ..

ಇದನ್ನೂ ಓದಿ: Viral Photo | ಹೂವು ಮಾರುವವ ಹೀಟ್​ನಿಂದ ಪಾರಾಗಲು ಮಾಡಿದ ಅದ್ಭುತ ಉಪಾಯ ಇದು!

ಹಾಳಾಗಿರುವ ಛತ್ರಿಯನ್ನು ಹಿಡಿದ ಯುವತಿ
ಉಲ್ಟಾ ಆಗಿ, ಹಾಳಾಗಿರುವ ಛತ್ರಿಯನ್ನು ಹಿಡಿದಿರುವ ಯುವತಿಯನ್ನು ನೀವು ಮೊದಲು ನೋಡಿದರೆ, ‘ನೀವು ಅತ್ಯಂತ ಹಾಸ್ಯಪ್ರಜ್ಞೆ ಹೊಂದಿರುವವರಾಗಿದ್ದೀರಿ ಮತ್ತು ನಿಮ್ಮ ಹಾಸ್ಯಪ್ರವೃತ್ತಿಯಿಂದಾಗಿ ನೀವಿರುವ ಸ್ಥಳವನ್ನು ಸದಾ ಸಂತೋಷವಾಗಿ ಇಡುವವರು ಮತ್ತು ನೀವು ಯಾರೊಂದಿಗೆ ಇದ್ದೀರೋ ಅವರನ್ನು ಕ್ಷಣಮಾತ್ರದಲ್ಲಿ ನಗೆಗಡಲಲ್ಲಿ ತೇಲಿಸುತ್ತೀರಿ’ ಎಂಬ ಅರ್ಥವನ್ನು ಕೊಡುತ್ತದೆ.

ಯುವತಿಯೊಬ್ಬಳು ಛತ್ರಿಯನ್ನು ಸರಿಪಡಿಸುತ್ತಿರುವಂತಹ ಚಿತ್ರ
ಈ ತೈಲ ವರ್ಣಚಿತ್ರವನ್ನು ನೀವು ನೋಡಿದಾಗ ಮೊದಲು ಕಂಡಿದ್ದು ‘ಯುವತಿಯೊಬ್ಬಳು ಕೊಡೆಯನ್ನು ಏನೋ ದುರಸ್ತಿ ಮಾಡುತ್ತಿರುವ’ ಚಿತ್ರವಾದರೆ, ನೀವು ಅತ್ಯಂತ ಸಕಾರಾತ್ಮಕ ಮನೋಭಾವ ಹೊಂದಿರುವ, ಆಕರ್ಷಕ ವ್ಯಕ್ತಿತ್ವದ ವ್ಯಕ್ತಿ ಎಂದು ಭಾವಿಸಿ.

ವೃದ್ಧನ ಮುಖ ಕಾಣಿಸಿದರೆ
ಈ ಆಯಿಲ್ ಪೇಂಟಿಂಗ್​​ನಲ್ಲಿ ವೃದ್ಧನೊಬ್ಬನ ಮುಖ ಮೊದಲು ಕಂಡಿದ್ದೇ ಆದಲ್ಲಿ, ನಿಮ್ಮ ಗಮನಿಸುವಿಕೆ/ಗ್ರಹಿಸುವಿಕೆಯ ಮಟ್ಟ ಅದ್ಭುತವಾಗಿದೆ. ಕಂಡಿದ್ದಕ್ಕಿಂತಲೂ ಹೆಚ್ಚಿನದನ್ನು ಏನನ್ನೋ ನೀವು ಗ್ರಹಿಸುತ್ತೀರಿ ಎಂದು ಅರ್ಥ ಕೊಡುತ್ತದೆ. ಹಾಗೊಮ್ಮೆ ಇಲ್ಲಿ ನಿಮಗೆ ವೃದ್ಧನ ಮುಖ ಕಾಣದೆ ಇದ್ದರೆ, ಇನ್ನೊಮ್ಮೆ ಸೂಕ್ಷ್ಮವಾಗಿ ಗಮನಿಸಿ. ಮುರಿದ ಛತ್ರಿ ಹಿಡಿದ ಯುವತಿ ಮತ್ತು ಅಲ್ಲೇ ಮೇಲ್ಭಾಗದಲ್ಲಿರುವ ಮೋಡವನ್ನು ನೋಡಿ. ಯುವತಿಯ ಬಲಗೈ ವೃದ್ಧನ ಮೂಗಿನಂತೆ ಗೋಚರಿಸುತ್ತದೆ. ಆಕೆಯ ಬಿಳಿ ಅಂಗಿ ಗಡ್ಡದಂತೆ ಭಾಸವಾಗುತ್ತದೆ. ಅಲ್ಲೇ ನಿಮಗೆ ಮುಖದ ಆಕಾರ ಕಾಣಸಿಗುತ್ತದೆ.

ಹೂವುಗಳು
ತೈಲ ವರ್ಣಚಿತ್ರದಲ್ಲಿ ಹೂವುಗಳು ಮೊದಲು ಕಾಣಿಸಿದಲ್ಲಿ ನೀವು ಅತ್ಯಂತ ಸೂಕ್ಷ್ಮ ಮನಸಿನವರು ಮತ್ತು ಇನ್ನೊಬ್ಬರೊಂದಿಗೆ ಅತ್ಯಂತ ಭಾವನಾತ್ಮಕವಾಗಿ, ಆಳವಾಗಿ ಬೆಸೆದುಕೊಳ್ಳುತ್ತೀರಿ ಎಂಬ ಅರ್ಥ ಬರುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Viral Video: ಹಳೆಯ ವಿದ್ಯಾರ್ಥಿಗಳನ್ನು ಸಾಲಾಗಿ ಕರೆಸಿ ಬೆತ್ತದಿಂದ ಹೊಡೆದ ಪ್ರಾಂಶುಪಾಲರು! ಅಪರೂಪದ ವಿಡಿಯೊ

Viral Video: ಶಾಲಾ ವಿದ್ಯಾರ್ಥಿಗಳ ಪುನರ್ಮಿಲನವನ್ನು ತೋರಿಸುವ ಸಣ್ಣ ವಿಡಿಯೊವೊಂದು ಭಾರೀ ಶೇರ್‌ ಆಗುತ್ತಿದೆ. ಅಲ್ಲಿ ಪ್ರಾಂಶುಪಾಲರೆಂದು ಹೇಳಲಾದ ವ್ಯಕ್ತಿಯೊಬ್ಬರು ತಮ್ಮ ಮಾಜಿ ವಿದ್ಯಾರ್ಥಿಗಳನ್ನು ಬೆತ್ತದಿಂದ ಹೊಡೆಯುತ್ತಿದ್ದಾರೆ. ಈ ವಿಡಿಯೊ ಸಿಕ್ಕಾಪಟ್ಟೆ ವೈರಲ್ ಆಗಿದೆ. ಮಧ್ಯವಯಸ್ಸಿಗೆ ಬಂದಿರುವ ಆಗಿನ ವಿದ್ಯಾರ್ಥಿಗಳು ಏಟು ತಿಂದಿದ್ದಾರೆ. ಅವರಲ್ಲಿ ಕೆಲವರು ಪೊಲೀಸ್ ಅಧಿಕಾರಿಗಳು, ವೈದ್ಯರು, ವಕೀಲರು, ಶಿಕ್ಷಕರು ಮತ್ತು ಬ್ಯುಸಿನೆಸ್‌ಮ್ಯಾನ್‌ ಆಗಿದ್ದಾರೆ. ಆದರೆ ಈಗ ತಮ್ಮ ಪುನರ್ಮಿಲನದ ಸಮಯದಲ್ಲಿ, ಅವರೆಲ್ಲರೂ ಹಳೆಯ ದಿನಗಳನ್ನು ಮೆಲುಕು ಹಾಕುತ್ತಾ ತಮ್ಮ ಶಾಲಾ ಪ್ರಾಂಶುಪಾಲರ ಜೊತೆ ಕಳೆದ ಆ ವಿಶೇಷ ಕ್ಷಣವನ್ನು ಆನಂದಿಸಿದ್ದಾರೆ.

VISTARANEWS.COM


on

Viral Video
Koo


ನಮ್ಮ ಬಾಲ್ಯದ ಜೀವನ ಬಹಳ ಸುಂದರ. ನಾವು ಶಾಲೆಯ ಹೋಗುವಾಗ ಕಳೆದ ದಿನಗಳ ನೆನಪುಗಳು ಮರುಕಳಿಸಿದರೆ ಎಲ್ಲರ ಮುಖದಲ್ಲಿ ನಗುವು ಮೂಡುತ್ತದೆ. ಅದು ಮರೆಯಲಾಗದಂತಹ ಸವಿಸವಿ ನೆನಪು. ಆ ಜೀವನಕ್ಕೆ ಮತ್ತೆ ಹೋಗಲು ಸಾಧ್ಯವಾಗದಿದ್ದರೂ ಅಂದಿನ ದಿನಗಳ ಬಗ್ಗೆ ಇಂದು ಅನುಕರಣೆ ಮಾಡಬಹುದು. ಅದರಿಂದಲೂ ಕೆಲವರಿಗೆ ಖುಷಿ ಸಿಗುತ್ತದೆ. ಹಾಗಾಗಿ ಹಳೆಯ ನೆನಪುಗಳನ್ನು ಮೆಲುಕು ಹಾಕಲು, ಶಾಲೆಯ ಮಾಜಿ ವಿದ್ಯಾರ್ಥಿಗಳು ತಮ್ಮ ಪ್ರಾಂಶುಪಾಲರಿಂದ ಹೊಡೆಸಿಕೊಳ್ಳುವ ಮೂಲಕ ತಮ್ಮ ಪುನರ್ಮಿಲನವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಲು ನಿರ್ಧರಿಸಿದ್ದರು. ಹಾಗಾಗಿ ಎಕ್ಸ್ ಬಳಕೆದಾರರಾದ ಕೃಷ್ಣ ಎಂಬುವವರು ಶಾಲೆಯ ಪುನರ್ಮಿಲನವನ್ನು ತೋರಿಸುವ ಸಣ್ಣ ವಿಡಿಯೊವನ್ನು ಹಂಚಿಕೊಂಡಿದ್ದಾರೆ, ಅಲ್ಲಿ ಪ್ರಾಂಶುಪಾಲರೆಂದು ಹೇಳಲಾದ ವ್ಯಕ್ತಿಯೊಬ್ಬರು ತಮ್ಮ ಮಾಜಿ ವಿದ್ಯಾರ್ಥಿಗಳನ್ನು “ಬೆತ್ತದಿಂದ ಹೊಡೆಯುತ್ತಿದ್ದಾರೆ. ಈ ವಿಡಿಯೊ ಸಿಕ್ಕಾಪಟ್ಟೆ ವೈರಲ್ (Viral Video) ಆಗಿದೆ.

ಈ ವಿಡಿಯೊದಲ್ಲಿ ಇದ್ದವರು ಮಧ್ಯವಯಸ್ಸಿಗೆ ಬಂದಿರುವ ಆಗಿನ ವಿದ್ಯಾರ್ಥಿಗಳು. ಅವರಲ್ಲಿ ಕೆಲವರು ಪೊಲೀಸ್ ಅಧಿಕಾರಿಗಳು, ವೈದ್ಯರು, ವಕೀಲರು, ಶಿಕ್ಷಕರು ಮತ್ತು ಬ್ಯುಸಿನೆಸ್‍ಮ್ಯಾನ್ ಆಗಿದ್ದಾರೆ. ಆದರೆ ಈಗ ತಮ್ಮ ಪುನರ್ಮಿಲನದ ಸಮಯದಲ್ಲಿ, ಅವರೆಲ್ಲರೂ ಹಳೆಯ ದಿನಗಳನ್ನು ಮೆಲುಕು ಹಾಕುತ್ತಾ ತಮ್ಮ ಶಾಲಾ ಪ್ರಾಂಶುಪಾಲರ ಜೊತೆ ಕಳೆದ ಆ ವಿಶೇಷ ಕ್ಷಣವನ್ನು ಆನಂದಿಸಿದ್ದಾರೆ.

ವಿದ್ಯಾರ್ಥಿಗಳು ತಮ್ಮ ಶಾಲಾ ಸಮವಸ್ತ್ರವನ್ನು ನೆನಪಿಸುವಂತಹ ಬಿಳಿ ಶರ್ಟ್ ಮತ್ತು ಪ್ಯಾಂಟ್ ಧರಿಸಿದ್ದರು ಮತ್ತು ಒಬ್ಬೊಬ್ಬರಾಗಿ ಪ್ರಾಂಶುಪಾಲರ ಮುಂದೆ ಬಂದು ಪ್ರಾಂಶುಪಾಲರಿಂದ ಬೆತ್ತದಲ್ಲಿ ಹೊಡೆಸಿಕೊಳ್ಳುತ್ತಿದ್ದಾರೆ, ಆ ಮೂಲಕ ಅವರ ಶಾಲೆಯ ಹಳೆಯ ನೆನಪುಗಳನ್ನು ಮೆಲುಕುಹಾಕಿದ್ದಾರೆ. ಹಾಗೇ ಈ ರೀತಿ ಹೊಡೆಯುವುದು ಆ ವಿದ್ಯಾರ್ಥಿಗಳು ವ್ಯಕ್ತಪಡಿಸಿದ ವಿಶೇಷ ಬಯಕೆಯಾಗಿದ್ದು, ತಮ್ಮ ಯಶಸ್ಸಿಗೆ ತಮ್ಮ ಪ್ರಾಂಶುಪಾಲರ ಬೆತ್ತದ ಆಶೀರ್ವಾದವೇ ಕಾರಣ ಎಂದು ಆ ಮೂಲಕ ತಿಳಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ:ಶಿಕ್ಷಕಿ, ಸಹಪಾಠಿಗಳ ಕಿರುಕುಳ ತಾಳಲಾರದೆ ನೇಣಿಗೆ ಶರಣಾದ ಬಾಲಕ

“ಶಾಲೆಯ ಹಳೆಯ ವಿದ್ಯಾರ್ಥಿಗಳ ವಿಚಿತ್ರ ಪುನರ್ಮಿಲನ ಇಲ್ಲಿದೆ! ಇದರಲ್ಲಿ ಪೊಲೀಸ್ ಅಧಿಕಾರಿಗಳು, ವೈದ್ಯರು, ವಕೀಲರು, ಪ್ರಾಂಶುಪಾಲರು, ಶಿಕ್ಷಕರು, ಉದ್ಯಮಿಗಳು ಮತ್ತು ಶಾಲೆಗಳ ಮಾಲೀಕರು ಇದ್ದಾರೆ. ಅವರೆಲ್ಲರಿಗೂ ಒಂದು ಆಸೆ ಇತ್ತು. ಅವರ ವಿಶೇಷವಾದ ಶಾಲಾ ಜೀವನವನ್ನು ನೆನಪಿಸಿಕೊಳ್ಳಲು ಅವರ ಪ್ರಾಂಶುಪಾಲರು ತಮ್ಮ ಬೆತ್ತದಿಂದ ಅವರನ್ನು ಹೊಡೆಯಬೇಕು. ಏಕೆಂದರೆ ಪ್ರಾಂಶುಪಾಲರ ಕೈಯಲ್ಲಿ ತಿಂದ ಆ ‘ಬೆತ್ತದ ಆಶೀರ್ವಾದ’ದ ಪರಿಣಾಮವಾಗಿ ಅವರು ತಮ್ಮ ಜೀವನದಲ್ಲಿ ಹೆಚ್ಚಿನ ಎತ್ತರವನ್ನು ತಲುಪಿದ್ದಾರೆ ಎಂದು ಅವರು ನಂಬುತ್ತಾರೆ” ಎಂದು ಈ ಪೋಸ್ಟ್ ಗೆ ಶೀರ್ಷಿಕೆ ಬರೆಯಲಾಗಿದೆ. ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಅದನ್ನು ನೋಡಿದ ನಂತರ ಹಲವಾರು ಸೋಶಿಯಲ್ ಮೀಡಿಯಾದ ಬಳಕೆದಾರರು ತಮ್ಮ ಗತಕಾಲವನ್ನು ನೆನೆದು ಭಾವುಕರಾಗಿದ್ದಾರೆ ಎನ್ನಲಾಗಿದೆ.

Continue Reading

ಕ್ರೀಡೆ

Hardik Pandya: ಬ್ರಿಟಿಷ್​ ಸಿಂಗರ್​ ಜತೆ ಡೇಟಿಂಗ್​​ ಆರಂಭಿಸಿದರೇ ಹಾರ್ದಿಕ್​ ಪಾಂಡ್ಯ?; ಅನುಮಾನ ಮೂಡಿಸಿದ ಇನ್​ಸ್ಟಾಗ್ರಾಮ್​ ಹಸಿ ಬಿಸಿ ಪೋಸ್ಟ್​

Hardik Pandya: ಜಾಸ್ಮಿನ್ ವಾಲಿಯಾ ಶ್ರೀಲಂಕಾ ವಿರುದ್ಧದ ಟಿ20 ಸರಣಿಯ ವೇಳೆಯೂ ಕಾಣಿಸಿಕೊಂಡಿದ್ದರು. ಹೀಗಾಗಿ ಪಾಂಡ್ಯ ಮತ್ತು ಜಾಸ್ಮಿನ್ ಡೇಟಿಂಗ್​ ನಡೆಸುತ್ತಿರುವುದು ಖಚಿತ ಎಂದು ನೆಟ್ಟಿಗರು ಕಮೆಂಟ್​ ಮಾಡಲಾರಂಭಿಸಿದ್ದಾರೆ.

VISTARANEWS.COM


on

Hardik Pandya
Koo

ಮುಂಬಯಿ: ಹಾರ್ದಿಕ್​ ಪಾಂಡ್ಯ(Hardik Pandya) ಅವರು ನತಾಶಾ ಸ್ಟಾಂಕೋವಿಕ್(Natasa Stankovic) ಅವರಿಗೆ ವಿಚ್ಛೇದನ(Hardik-Natasa Divorce) ನೀಡಿದ ಬಳಿಕ ಇದೀಗ ಜಾಲಿ ಮೂಡ್​ನಲ್ಲಿದ್ದಾರೆ. ನತಾಶಗೆ ವಿಚ್ಛೇದನ ನೀಡಿ ಒಂದು ವಾರ ಕಳೆಯುವಷ್ಟರಲ್ಲಿ ಪಾಂಡ್ಯ ಬಾಲಿವುಡ್​ನ ಖ್ಯಾತ ನಟಿ ಅನನ್ಯ ಪಾಂಡೆ(Ananya Panday) ಜತೆ ಚಾಟಿಂಗ್​, ಡೇಟಿಂಗ್​ ಆರಂಭಿಸಿದ್ದಾರೆ ಎನ್ನಲಾಗಿತ್ತು. ಆದರೆ, ಪಾಂಡ್ಯ ಬ್ರಿಟಿಷ್​ ಗಾಯಕಿ ಮತ್ತು ನಟಿ ಜಾಸ್ಮಿನ್​ ವಾಲಿಯಾ(Jasmin Walia) ಜತೆ ಡೇಟಿಂಗ್​(Hardik Pandya And Jasmin Walia Dating) ಮಾಡುತ್ತಿದ್ದಾರೆ ಎಂಬ ಸುದ್ದಿಯೊಂದು ಹೊರಬಿದ್ದಿದೆ.

ಹೌದು, ನಟಿ ಜಾಸ್ಮಿನ್​ ವಾಲಿಯಾ(Hardik Pandya And Jasmin Walia) ಮತ್ತು ಹಾರ್ದಿಕ್​ ಪಾಂಡ್ಯ ಗ್ರೀಸ್​ನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಸುತ್ತಾಡಿದ ಫೋಟೊವನ್ನು ತಮ್ಮ ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಫೋಟೋಗಳಲ್ಲಿ ಇವರಿಬ್ಬರು ಜತೆಯಾಗಿ ಕಾಣಿಸಿಕೊಳ್ಳದಿದ್ದರೂ, ಒಂದೇ ಸಮಯದಲ್ಲಿ ಒಂದೇ ಸ್ಥಳದಲ್ಲಿರುವ ಫೋಟೋಗಳನ್ನು ಹಂಚಿಕೊಂಡಿರುವುದು ಅನುಮಾನಕ್ಕೆ ಕಾರಣವಾಗಿದೆ.

ಜಾಸ್ಮಿನ್ ವಾಲಿಯಾ ಶ್ರೀಲಂಕಾ ವಿರುದ್ಧದ ಟಿ20 ಸರಣಿಯ ವೇಳೆಯೂ ಕಾಣಿಸಿಕೊಂಡಿದ್ದರು. ಹೀಗಾಗಿ ಪಾಂಡ್ಯ ಮತ್ತು ಜಾಸ್ಮಿನ್ ಡೇಟಿಂಗ್​ ನಡೆಸುತ್ತಿರುವುದು ಖಚಿತ ಎಂದು ನೆಟ್ಟಿಗರು ಕಮೆಂಟ್​ ಮಾಡಲಾರಂಭಿಸಿದ್ದಾರೆ. ಹಾರ್ದಿಕ್ ಮತ್ತು ಜಾಸ್ಮಿನ್ ಪರಸ್ಪರ ಇನ್​ಸ್ಟಾಗ್ರಾಮ್​ನಲ್ಲಿ ಫೋಟೊಗಳಿಗೂ ಲೈಕ್​ ಮಾಡಿಕೊಂಡಿದ್ದಾರೆ. ಹೀಗಾಗಿ ಡೇಟಿಂಗ್​ ವದಂತಿ ಬಲವಾಗಿದೆ.

ಬ್ರಿಟಿಷ್ ಸಿಂಗರ್ ಹಾಗೂ ಟಿವಿ ನಟಿಯಾಗಿರುವ ಜಾಸ್ಮಿನ್ ವಾಲಿಯಾ ಅವರ ಪೋಷಕರು ಭಾರತೀಯ ಮೂಲದವರಾಗಿದ್ದಾರೆ ಎನ್ನಲಾಗಿದೆ. ಬ್ರಿಟಿಷ್ ರಿಯಾಲಿಟಿ ಟಿವಿ ಸಿರೀಸ್​ನಲ್ಲಿ ಕಾಣಿಸಿಕೊಂಡ ನಂತರ ಜಾಸ್ಮಿನ್ ಮೊದಲ ಬಾರಿಗೆ ಎಲ್ಲರ ಗಮನ ಸೆಳೆದರು.

ಇದನ್ನೂ ಓದಿ Hardik Pandya : ನನ್ನ ಅಪರಾಧದಲ್ಲಿ ನೀನು ಪಾಲುದಾರ; ಪುತ್ರನಿಗೆ ಈ ರೀತಿ ಬರ್ತ್​​ಡೇ ವಿಶ್ ಮಾಡಿದ ಪಾಂಡ್ಯ

2014ರಲ್ಲಿ ಜಾಸ್ಮಿನ್ ಯೂಟ್ಯೂಬ್ ಚಾನೆಲ್ ಆರಂಭಿಸಿ ಕೆಲ ಪಾಪ್ಯುಲರ್ ಹಾಡುಗಳನ್ನು ಹಾಡುವ ಮೂಲಕ ಗಮನಸೆಳೆದಿದ್ದರು. 2017ರಲ್ಲಿ ಬಾಂ ಡಿಗ್ಗಿ ಡಿಗ್ಗಿ ಹಾಡು ಇವರಿಗೆ ಖ್ಯಾತಿ ತಂದುಕೊಟ್ಟಿತ್ತು. ಇದಾದ ಬಳಿಕ ಜಾಸ್ಮಿನ್ ಬಿಗ್​ಬಾಸ್ 13ರ ಫೈನಲಿಸ್ಟ್ ಅಸಿಮ್ ರಿಯಾಸ್ ಜತೆ 2022ರ ಮ್ಯೂಸಿಕ್ ವಿಡಿಯೋ ನೈಟ್ಸ್ & ಫೈಟ್ಸ್​ನಲ್ಲಿಯೂ ಕೆಲಸ ಮಾಡಿದ್ದರು. ಸದ್ಯ ಪಾಂಡ್ಯ ಜತೆ ಡೇಟಿಂಗ್​ ಮಾಡುತ್ತಿದ್ದಾರೆ ಎನ್ನಲಾಗಿದೆ.

ಹಾರ್ದಿಕ್​ ಮತ್ತು ನತಾಶಾ ನಡುವಿನ ಬ್ರೇಕಪ್​ಗೆ ಸಂವಹನ ಕೊರತೆಯೇ ಮುಖ್ಯ ಕಾರಣ ಎಂದು ಆಪ್ತ ಮೂಲಗಳು ಮಾಹಿತಿ ನೀಡಿತ್ತು. ಇಬ್ಬರ ನಡುವಿನ ಮನಸ್ತಾಪ ಮತ್ತು ಜಗಳಕ್ಕೆ ಪರಿಹಾರ ಕಂಡುಕೊಳ್ಳುವ ತಾಳ್ಮೆ ಇಬ್ಬರಲ್ಲೂ ಇರಲಿಲ್ಲ. ಹೀಗಾಗಿ ಮನಸ್ತಾಪ ದೊಡ್ಡದಾಗಿ ಡಿವೋರ್ಸ್​ಗೆ ಕಾರಣವಾಯಿತು. ಇದನ್ನು ಬಿಟ್ಟು ಸಾಮಾಜಿಕ ಜಾಲತಾಣಗಳಲ್ಲಿ ಇವರಿಬ್ಬರ ಬಗ್ಗೆ ಯಾವುದೇ ತಪ್ಪು ಸುದ್ದಿ ಹಬ್ಬಿಸಬಾರದು ಎಂದು ಆಪ್ತ ಮೂಲಗಳು ಮನವಿ ಮಾಡಿತ್ತು.

ಕಳೆದ ವರ್ಷ ಫೆ.14 ರಂದು ರಾಜಸ್ಥಾನದ ಉದಯ್‌ಪುರದಲ್ಲಿ ಕ್ರಿಷ್ಚಿಯನ್‌ ಸಂಪ್ರದಾಯದಂತೆ ಹಾರ್ದಿಕ್‌ ಮತ್ತು ನತಾಶಾ ಮತ್ತೊಮ್ಮೆ ಅದ್ದೂರಿಯಾಗಿ ಪುನರ್‌ ವಿವಾಹವಾಗಿದ್ದರು. ಕುಟುಂಬಸ್ಥರು ಮತ್ತು ಗೆಳೆಯರ ಸಮ್ಮುಖದಲ್ಲಿ ಮತ್ತೊಮ್ಮೆ ವಿವಾಹವಾಗಿದ್ದರು. ಇದಕ್ಕೂ ಮುನ್ನ ಈ ಜೋಡಿ 2020ರಲ್ಲೇ ರಿಜಿಸ್ಟರ್‌ ರೀತಿಯಲ್ಲಿ ವಿವಾಹವಾಗಿದ್ದರು.

Continue Reading

Latest

Viral News: ರೈಲು ಬೋಗಿಯಲ್ಲಿ ನಮಾಜ್: ಮುಸ್ಲಿಂ ಪ್ರಯಾಣಿಕರನ್ನು ತರಾಟೆಗೆ ತೆಗೆದುಕೊಂಡ ಟಿಟಿಇ; ವಿಡಿಯೊ ಇಲ್ಲಿದೆ

Viral Video ರೈಲಿನಲ್ಲಿ ನಮಾಜ್ ವಿಚಾರಕ್ಕೆ ಪ್ರಯಾಣಿಕರಿಗೆ ನಡೆದಾಡಲು ಅಡ್ಡಿಯುಂಟಾದಾಗ ಕಾರಣ ಮುಸ್ಲಿಂ ಪ್ರಯಾಣಿಕರನ್ನು ಟಿಟಿಇ ತರಾಟೆ ತೆಗೆದುಕೊಂಡ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೊವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದ್ದು ಇದು ಸಖತ್ ವೈರಲ್ ಆಗಿದೆ. ರೈಲಿನಲ್ಲಿದ್ದ ಮುಸ್ಲಿಂ ಸಮುದಾಯದವರುರು ರೈಲು ಬೋಗಿಯ ಮಧ್ಯದಲ್ಲಿ ನಡೆದಾಡುವ ಸ್ಥಳದಲ್ಲಿ ನಮಾಜ್ ಮಾಡಲು ತಯಾರಿ ನಡೆಸುತ್ತಿದ್ದಾಗ ಈ ಸಮಯದಲ್ಲಿ ಅಲ್ಲಿಗೆ ಬಂದ ಟಿಟಿಇ ಕೋಪಗೊಂಡು ಅವರಿಗೆ ತಮ್ಮ ಕುಳಿತುಕೊಳ್ಳುವ ಸೀಟಿನಲ್ಲಿ ನಮಾಜ್ ಮಾಡುವಂತೆ ಮತ್ತು ದಾರಿಯಿಂದ ಎದ್ದೇಳುವಂತೆ ತಿಳಿಸಿದ್ದಾರೆ.

VISTARANEWS.COM


on

Viral News
Koo


ಮುಂಬೈ: ಮುಸ್ಲಿಂ ಸಮುದಾಯದವರು ತಮ್ಮ ನಮಾಜ್‌ನ ಸಮಯವಾದಾಗ ನಮಾಜ್ ಮಾಡಲು ಶುರು ಮಾಡುತ್ತಾರೆ. ಅವರಿಗೆ ಆ ಸಮಯದಲ್ಲಿ ನಮಾಜ್ ಮಾಡುವುದೊಂದೆ ಮುಖ್ಯವಾಗಿರುತ್ತದೆ. ಹಾಗಾಗಿ ರೈಲಿನಲ್ಲಿ ನಮಾಜ್ ಮಾಡಲು ಮುಂದಾಗಿದ್ದಾರೆ. ಈ ವೇಳೆ ಪ್ರಯಾಣಿಕರಿಗೆ ನಡೆದಾಡಲು ಅಡ್ಡಿಯುಂಟಾದ ಕಾರಣ ಮುಸ್ಲಿಂ ಪ್ರಯಾಣಿಕರನ್ನು ಟಿಟಿಇ ತರಾಟೆ ತೆಗೆದುಕೊಂಡ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೊವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದ್ದು ಇದು ಸಖತ್ ವೈರಲ್ (Viral News) ಆಗಿದೆ.

ಹಂಚಿಕೊಳ್ಳಲಾದ ಈ ವಿಡಿಯೊದಲ್ಲಿ, ರೈಲ್ವೆ ಟಿಟಿಇ ಬೋಗಿಯಲ್ಲಿ ನಡೆದಾಡುವ ಸ್ಥಳದಲ್ಲಿ ನಮಾಜ್ ಮಾಡಲು ಮುಂದಾದ ಮುಸ್ಲಿಂ ಪ್ರಯಾಣಿಕರನ್ನು ಬೈಯುತ್ತಿರುವುದನ್ನು ಗಮನಿಸಬಹುದು. ರೈಲಿನಲ್ಲಿದ್ದ ಮುಸ್ಲಿಂ ಸಮುದಾಯದವರು ಬೋಗಿಯ ಮಧ್ಯದಲ್ಲಿ ನಡೆದಾಡುವ ಸ್ಥಳದಲ್ಲಿ ನಮಾಜ್ ಮಾಡಲು ತಯಾರಿ ನಡೆಸುತ್ತಿದ್ದಾರೆ. ಅದಕ್ಕಾಗಿ ಕುಳಿತುಕೊಳ್ಳಲು ಅವರು ದಾರಿಯಲ್ಲಿ ಪ್ಲಾಸ್ಟಿಕ್ ಅನ್ನು ಹಾಸುತ್ತಿದ್ದರು. ಈ ಸಮಯದಲ್ಲಿ ಅಲ್ಲಿಗೆ ಬಂದ ಟಿಟಿಇ ಕೋಪಗೊಂಡು ಅವರಿಗೆ ತಮ್ಮ ಕುಳಿತುಕೊಳ್ಳುವ ಸೀಟಿನಲ್ಲಿ ನಮಾಜ್ ಮಾಡುವಂತೆ ಮತ್ತು ದಾರಿಯಿಂದ ಎದ್ದೇಳುವಂತೆ ತಿಳಿಸಿದ್ದಾರೆ. ಇದು ವಿಡಿಯೊದಲ್ಲಿ ಕಂಡು ಬಂದಿದೆ.

“ಈ ರೈಲಿನಲ್ಲಿ ತಮಾಷೆಯಾಗಿ ವರ್ತಿಸಬೇಡಿ. ಈ ಮಾರ್ಗ ಇರುವುದು ನಡೆದಾಡಲು. ನಿಮಗೆ ನಮಾಜ್ ಮಾಡಲು ಅಲ್ಲ. ಇದರಲ್ಲಿ ನಮಾಜ್ ಮಾಡುವ ನಿಮ್ಮ ಮನಸ್ಥಿತಿಗೆ ಏನಾಗಿದೆ? ನಿಮ್ಮ ಈ ಆಲೋಚನೆಯನ್ನು ಬಿಟ್ಟುಬಿಡಿ. ನನ್ನ ರೈಲಿನಲ್ಲಿ ಇದು ಸಂಭವಿಸಲು ನಾನು ಅನುಮತಿಸುವುದಿಲ್ಲʼʼ ಎಂದು ಹೇಳಿದ್ದಾರೆ. ಅಲ್ಲದೇ ತಮ್ಮ ಕಾರ್ಯಗಳಿಂದಾಗಿ ಇತರ ಪ್ರಯಾಣಿಕರಿಗೆ ಯಾವುದೇ ಅನಾನುಕೂಲತೆ ಉಂಟಾಗದಂತೆ ನೋಡಿಕೊಳ್ಳಬೇಕು ಎಂದು ಅವರು ಮುಸ್ಲಿಂ ಪ್ರಯಾಣಿಕರಿಗೆ ತಿಳಿಸಿದ್ದಾರೆ. ಪ್ರಯಾಣಿಸುವ ರೈಲುಗಳಲ್ಲಿ ನಮಾಜ್ ಮಾಡಲು ಅನುಮತಿ ಇಲ್ಲ. ಒಂದು ವೇಳೆ ಪ್ರಯಾಣಿಕರು ಅವರು ಹೇಳುವುದನ್ನು ಅನುಸರಿಸದಿದ್ದರೆ, ರೈಲ್ವೆ ಪೊಲೀಸರಿಗೆ ಕರೆ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಹಸ್ತಮೈಥುನ ಮಾಡಿಕೊಳ್ಳಲು 6 ವರ್ಷದ ಬಾಲಕಿ ಮೇಲೆ ದೌರ್ಜನ್ಯ; ಆಕೆ ತಪ್ಪಿಸಿಕೊಂಡಾಗ ಮೇಕೆ ಮೇಲೆ ಅತ್ಯಾಚಾರ!

ಹಾಗಾಗಿ ಮುಸ್ಲಿಂ ಪ್ರಯಾಣಿಕರು ತಮ್ಮ ಸೀಟಿನ ಬಳಿ ಹೋಗಿರುವುದು ವಿಡಿಯೊದ ಕೊನೆಯಲ್ಲಿ ಕಂಡು ಬಂದಿದೆ. ಕೆಲವರು ಟಿಟಿಇ ಧೈರ್ಯಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಎಲ್ಲರಿಗೂ ಕಾನೂನು ಒಂದೇ ಎಂದು ಇನ್ನು ಹಲವರು ತಿಳಿಸಿದ್ದಾರೆ. ಈ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದರೂ, ರೆಕಾರ್ಡ್ ಮಾಡಿದ ದಿನಾಂಕ ಮತ್ತು ರೈಲಿನ ನಿಖರವಾದ ವಿವರಗಳು ಸ್ಪಷ್ಟವಾಗಿಲ್ಲ. ಹಾಗಾಗಿ ಹಲವರು ಈ ವಿಡಿಯೊದ ಸತ್ಯಾತೆಗಳ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದಾರೆ.

Continue Reading

Latest

Viral Video: ರೀಲ್ಸ್ ಅವಾಂತರ; 6ನೇ ಮಹಡಿಯಿಂದ ಬಿದ್ದ ಬಾಲಕಿ; ಅಪ್ಪನನ್ನು ಕರೆ ಎಂದು ಅಮ್ಮನ ಬಳಿ ಅಂಗಲಾಚಿದ್ದು ಯಾಕೆ?

Viral Video ಗಾಜಿಯಾಬಾದ್‌ನಲ್ಲಿ ಇನ್ಸ್ಟಾಗ್ರಾಮ್ ರೀಲ್ ಮಾಡುವಾಗ ಬಾಲಕಿಯೊಬ್ಬಳು ಕಟ್ಟಡದ ಆರನೇ ಮಹಡಿಯಿಂದ ಬಿದ್ದಿದ್ದಾಳೆ. ಅವಳು ತನ್ನ ಮನೆಯ ಬಾಲ್ಕನಿಯಲ್ಲಿ ನಿಂತು ರೀಲ್ಸ್ ಮಾಡುವಾಗ ಅವಳ ಮೊಬೈಲ್ ಅವಳ ಕೈಯಿಂದ ಜಾರಿದೆ. ಫೋನ್ ಹಿಡಿಯಲು ಪ್ರಯತ್ನಿಸುವಾಗ ಅವಳು ಬಾಲ್ಕನಿಯಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾಳೆ. ಬಾಲಕಿ ನೋವಿನಿಂದ ಅಳುತ್ತಿರುವ ಮತ್ತು ಅವಳ ತಾಯಿ ಅವಳನ್ನು ಬೈಯುತ್ತಿರುವ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

VISTARANEWS.COM


on

Viral Video
Koo


ಲಖನೌ: ರೀಲ್‍ಗಳನ್ನು ಮಾಡುವ ಕ್ರೇಜ್ ಅನೇಕ ಯುವ ಜನರನ್ನು ಆವರಿಸಿದೆ. ಇವರು ಲೈಕ್‍ಗಳನ್ನು ಪಡೆಯಲು ಮತ್ತು ಸೋಷಿಯಲ್ ಮೀಡಿಯಾದಲ್ಲಿ ಫೇಮಸ್ ಆಗಲು ಯಾವುದೇ ಮಟ್ಟಕ್ಕೆ ಹೋಗಲು ಸಿದ್ಧರಿದ್ದಾರೆ. ಅದಕ್ಕಾಗಿ ತಮ್ಮ ಜೀವವನ್ನು ಪಣಕ್ಕಿಡುತ್ತಿದ್ದಾರೆ. ಇದೀಗ ಈ ರೀಲ್ಸ್ ಅವಾಂತರಕ್ಕೆ ಸಂಬಂಧಿಸಿದಂತಹ ಮತ್ತೊಂದು ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‍ನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್‌ ರೀಲ್ಸ್ ಮಾಡುವಾಗ ಬಾಲಕಿಯೊಬ್ಬಳು ಕಟ್ಟಡದ ಆರನೇ ಮಹಡಿಯಿಂದ ಬಿದ್ದಿದ್ದಾಳೆ. ಅವಳು ತನ್ನ ಮನೆಯ ಬಾಲ್ಕನಿಯಲ್ಲಿ ನಿಂತು ರೀಲ್ಸ್ ಮಾಡುವಾಗ ಮೊಬೈಲ್ ಕೈಯಿಂದ ಜಾರಿದೆ. ಫೋನ್ ಹಿಡಿಯಲು ಪ್ರಯತ್ನಿಸುವಾಗ ಅವಳು ಬಾಲ್ಕನಿಯಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾಳೆ. ಬಾಲಕಿ ನೋವಿನಿಂದ ಅಳುತ್ತಿರುವ ಮತ್ತು ಅವಳ ತಾಯಿ ಅವಳನ್ನು ಬೈಯುತ್ತಿರುವ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ (Viral Video)ಆಗಿದೆ.

ಆಘಾತಕ್ಕೊಳಗಾದ ಬಾಲಕಿಯನ್ನು ಗಾಜಿಯಾಬಾದ್‍ನ ಇಂದಿರಾಪುರಂ ಪ್ರದೇಶದಲ್ಲಿರುವ ಕ್ಲೌಡ್ -9 ಸೊಸೈಟಿಯಲ್ಲಿ ವಾಸಿಸುತ್ತಿದ್ದ ಮೋನಿಷಾ (16) ಎಂದು ಗುರುತಿಸಲಾಗಿದೆ. ಆರನೇ ಮಹಡಿಯಿಂದ ಬಿದ್ದ ನಂತರ ಆಕೆಯನ್ನು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ಸಾಗಿಸಲಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವಿಡಿಯೊದಲ್ಲಿ ಬಾಲಕಿ ನೆಲದ ಮೇಲೆ ಬಿದ್ದಿದ್ದಾಳೆ. ಜನರು ಅವಳ ಸುತ್ತ ಸುತ್ತುವರಿದು, ಅವಳನ್ನು ಆಸ್ಪತ್ರೆಗೆ ಕರೆದೊಯ್ಯುಲು ಗಾಬರಿಯಿಂದ ಓಡಾಡುತ್ತಿದ್ದಾರೆ. ಆ ವೇಳೆ ಅವರು ಅವಳನ್ನು ಎತ್ತುತ್ತಿದ್ದಂತೆ, ಅವಳು ನೋವಿನಿಂದ ಕೂಗಿದಳು, “ಅಮ್ಮಾ, ಪಾಪಾ ಕೋ ಬುಲಾ ದೋ”(ಅಮ್ಮಾ, ದಯವಿಟ್ಟು ಅಪ್ಪನನ್ನು ಕರೆಯಿರಿ) ಎಂದು ತನ್ನ ತಂದೆಯನ್ನು ಕರೆಯುವಂತೆ ತನ್ನ ತಾಯಿಯನ್ನು ಪದೇ ಪದೆ ಕೇಳಿಕೊಳ್ಳುತ್ತಿದ್ದಾಳೆ.

ವಿಡಿಯೊದಲ್ಲಿ, ಹುಡುಗಿಯ ತಾಯಿ ಮಗಳ ರೀಲ್ಸ್ ಮಾಡುವ ಹುಚ್ಚಿಗೆ ಹಿಗ್ಗಾಮುಗ್ಗಾ ಬೈದಿದ್ದಾಳೆ. ಸಮಯಕ್ಕೆ ಸರಿಯಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು ಮತ್ತು ಈಗ ಆಕೆ ಅಪಾಯದಿಂದ ಪಾರಾಗಿದ್ದಾಳೆ ಮತ್ತು ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂಬುದಾಗಿ ತಿಳಿದುಬಂದಿದೆ.

ಇದನ್ನೂ ಓದಿ: ಒಂದು ಹಾವು, ಮೂರು ಮುಂಗುಸಿ; ಏರ್‌ಪೋರ್ಟ್‌ ರನ್‌ವೇಯಲ್ಲೇ ಫೈಟ್‌! ಸೋತಿದ್ಯಾರು? ವಿಡಿಯೊ ನೋಡಿ

ಬಾಲಕಿಯ ಸ್ಥಿತಿಯನ್ನು ನೋಡಿ ಅಲ್ಲಿದ್ದವರು ಆಘಾತಕ್ಕೊಳಗಾಗಿದ್ದಾರೆ. ಕೆಲವರು ಅವಳ ಗಂಭೀರ ಸ್ಥಿತಿಯ ಬಗ್ಗೆ ಪ್ರತಿಕ್ರಿಯಿಸಿ, ಮೇಲಿಂದ ಬಿದ್ದಿದ್ದರಿಂದ ಅವಳ ಕಾಲು ಮುರಿದಂತೆ ಕಾಣುತ್ತದೆ ಎಂದಿದ್ದಾರೆ. ಈ ರೀತಿಯ ರೀಲ್ಸ್ ಅವಾಂತರದ ಹಲವಾರು ಘಟನೆಗಳು ಸಂಭವಿಸಿವೆ. ಜನರು ರೀಲ್ಸ್ ಮಾಡುವ ವೇಳೆ ಹಲವು ಬಾರಿ ಅಪಾಯಕ್ಕೆ ಸಿಲುಕಿದ್ದಾರೆ ಮತ್ತು ಕೆಲವರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಸೋಷಿಯಲ್ ಮೀಡಿಯಾಗಳಿಗಾಗಿ ರೀಲ್ಸ್ ವಿಡಿಯೊಗಳನ್ನು ಮಾಡುವಾಗ ಯುವಕರು ಜಾಗರೂಕರಾಗಿರಬೇಕು ಮತ್ತು ಕೇವಲ ಲೈಕ್‍ಗಳು ಮತ್ತು ಫಾಲೋವರ್ಸ್‍ಗಳಿಗಾಗಿ ತಮ್ಮ ಜೀವವನ್ನು ಅಪಾಯಕ್ಕೆ ತಳ್ಳಬಾರದು ಎಂದು ಅಧಿಕಾರಿಗಳು ಎಚ್ಚರಿಸಲುತ್ತಲೇ ಇದ್ದರೂ ಇಂತಹ ಪ್ರವೃತ್ತಿ ನಿಂತಿಲ್ಲ.

Continue Reading
Advertisement
Independence day 2024
ವಿದೇಶ3 mins ago

Independence Day 2024: ಒಂದೇ ದಿನ ಸ್ವಾತಂತ್ರ್ಯ ಪಡೆದಿದ್ದರೂ ಪಾಕಿಸ್ತಾನದಲ್ಲೇಕೆ ಭಾರತಕ್ಕಿಂತ ಮೊದಲು ಸ್ವಾತಂತ್ರ್ಯ ದಿನಾಚರಣೆ?

Sexual Abuse
Latest37 mins ago

Sexual Abuse: ಫೇಲ್ ಮಾಡುವುದಾಗಿ ಹೆದರಿಸಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಶಿಕ್ಷಕನಿಗೆ 11 ಸಾವಿರ ರೂ. ದಂಡ!

Actor Darshan
ಬೆಂಗಳೂರು49 mins ago

Actor Darshan: ನಟ ದರ್ಶನ್‌ಗೆ ಆ.28ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

Job Alert
ಉದ್ಯೋಗ50 mins ago

Job Alert: ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಅರ್ಜಿ ಸಲ್ಲಿಕೆಗೆ ಆ. 16 ಕೊನೆಯ ದಿನ

yogi adityanath
ದೇಶ53 mins ago

Yogi Adityanath: ಪಾಕ್‌ ಭಾರತದ ಜೊತೆ ವಿಲೀನವಾಗುತ್ತೆ…ಇಲ್ಲದಿದ್ದರೆ ಅಸ್ತಿತ್ವದಲ್ಲೇ ಇರಲ್ಲ- ಯೋಗಿ ಆದಿತ್ಯಾನಾಥ್‌

Sexual Abuse
Latest55 mins ago

Sexual Abuse: 3 ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿದ 9ನೇ ತರಗತಿ ವಿದ್ಯಾರ್ಥಿ!

Viral Video
Latest60 mins ago

Viral Video: ಹಳೆಯ ವಿದ್ಯಾರ್ಥಿಗಳನ್ನು ಸಾಲಾಗಿ ಕರೆಸಿ ಬೆತ್ತದಿಂದ ಹೊಡೆದ ಪ್ರಾಂಶುಪಾಲರು! ಅಪರೂಪದ ವಿಡಿಯೊ

ICC ODI Rankings
ಕ್ರೀಡೆ1 hour ago

ICC ODI Rankings: ದ್ವಿತೀಯ ಸ್ಥಾನಕ್ಕೆ ನೆಗೆದ ರೋಹಿತ್​ ಶರ್ಮ; ಕುಸಿತ ಕಂಡ ಗಿಲ್​

Album Song
ಬೆಂಗಳೂರು1 hour ago

Album Song: ಅನಿವಾಸಿ ಕನ್ನಡಿಗರ ‘ಹನಿ ಹನಿ’ ಆಲ್ಬಂ ಸಾಂಗ್ ರಿಲೀಸ್‌ ಮಾಡಿದ ಅಶ್ವಿನಿ ಪುನೀತ್ ರಾಜಕುಮಾರ್

Narendra Modi
ದೇಶ1 hour ago

Narendra Modi: ಭಾರತ ವಿಭಜನೆಯ ಕರಾಳ ದಿನ; ಬಾಧಿತರ ಧೈರ್ಯ, ತ್ಯಾಗವನ್ನು ದೇಶ ಎಂದಿಗೂ ಮರೆಯುವುದಿಲ್ಲ: ಮೋದಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ6 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ6 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ6 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 week ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 week ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 week ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌