Karnataka Elections : ಬಿಜೆಪಿಯಿಂದ ಲಿಂಗಾಯತ ನಾಯಕರಿಗೆ ಅಪಮಾನ; ಶೆಟ್ಟರ್‌ ಸೇರ್ಪಡೆ ವೇಳೆ ಸಿದ್ದರಾಮಯ್ಯ ವಾಗ್ಬಾಣ - Vistara News

ಕರ್ನಾಟಕ

Karnataka Elections : ಬಿಜೆಪಿಯಿಂದ ಲಿಂಗಾಯತ ನಾಯಕರಿಗೆ ಅಪಮಾನ; ಶೆಟ್ಟರ್‌ ಸೇರ್ಪಡೆ ವೇಳೆ ಸಿದ್ದರಾಮಯ್ಯ ವಾಗ್ಬಾಣ

Jagadish Shettar: ಜಗದೀಶ್‌ ಶೆಟ್ಟರ್‌ ಅವರ ಸೇರ್ಪಡೆಯನ್ನು ಕಾಂಗ್ರೆಸ್‌ ಬಿಜೆಪಿ ವಿರುದ್ಧ ಅಸ್ತ್ರವಾಗಿ ಬಳಸಲು ಮುಂದಾಗಿದೆ. ಬಿಜೆಪಿ ಲಿಂಗಾಯತರನ್ನು ಅಪಮಾನಿಸುತ್ತಿದೆ ಎನ್ನುವುದು ಅದು ಬಳಸುತ್ತಿರುವ ಟ್ರಂಪ್‌ ಕಾರ್ಡ್‌

VISTARANEWS.COM


on

siddaramaiah
ಸಿದ್ದರಾಮಯ್ಯ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಹಿರಿಯ ನಾಯಕರಾಗಿರುವ ಜಗದೀಶ್‌ ಶೆಟ್ಟರ್‌ ಅವರ ಅಗಮನದಿಂದ ಕಾಂಗ್ರೆಸ್‌ಗೆ ದೊಡ್ಡ ಬಲ ಬಂದಿದೆ. ಈಗಾಗಲೇ ಅಧಿಕಾರಕ್ಕೇರುವುದು ನಿಶ್ಚಿತ ಎಂಬ ಸ್ಥಿತಿಯಲ್ಲಿರುವ ಕಾಂಗ್ರೆಸ್‌ ಶೆಟ್ಟರ್‌ ಬಲದಿಂದ 150ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲಲಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹೇಳಿದರು. ಇದೇ ವೇಳೆ ಬಿಜೆಪಿ ಹಿರಿಯ ಲಿಂಗಾಯತ ನಾಯಕರಿಗೆ ಅಪಮಾನ ಮಾಡುತ್ತಿದೆ. ಅದನ್ನು ಪ್ರತಿಭಟಿಸಿ ಜಗದೀಶ್‌ ಶೆಟ್ಟರ್‌ ಪಕ್ಷ ಬಿಟ್ಟಿದ್ದಾರೆ ಎಂದರು.

ಕೆಪಿಸಿಸಿ ಕಚೇರಿಯಲ್ಲಿ ಬಿಜೆಪಿ ನಾಯಕರಾದ ಜಗದೀಶ್‌ ಶೆಟ್ಟರ್‌ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಕಾರ್ಯಕ್ರಮದಲ್ಲಿ ಭಾಗಹಿಸಿ ಮಾತನಾಡಿದ ಸಿದ್ದರಾಮಯ್ಯ ಅವರು, ಪಕ್ಷದಲ್ಲಿ ಜಗದೀಶ್‌ ಶೆಟ್ಟರ್‌ ಅವರನ್ನು ಗೌರವಯುತವಾಗಿ ನಡೆಸಿಕೊಳ್ಳಲಾಗುವುದು, ಸ್ವಾಭಿಮಾನಕ್ಕೆ ಧಕ್ಕೆ ಬರದಂತೆ ನೋಡಿಕೊಳ್ಳುವುದಾಗಿ ಭರವಸೆ ನೀಡಿದರು.

ಜಗದೀಶ್‌ ಶೆಟ್ಟರ್ ಅವರು ರಾಜ್ಯ ಕಂಡ ಸಜ್ಜನ ರಾಜಕಾರಣಿಯಾಗಿದ್ದಾರೆ. ಜನ ಸಂಘದ ಕಾಲದಿಂದಲೇ ರಾಜಕೀಯ ಆರಂಭಿಸಿದ ಅವರು ಬಿಜೆಪಿಯಲ್ಲಿದ್ದರೂ ಜಾತ್ಯತೀತ ನಾಯಕರಾಗಿ ಕೆಲಸ ಮಾಡಿದ್ದಾರೆ. ಬಹಳ ನಿಷ್ಠೆಯಿಂದ ಕೆಲಸ ಮಾಡಿದ ಅವರು, ಬಿಜೆಪಿಯ ನೀತಿಗಳ ವಿಚಾರದಲ್ಲಿ ರಾಜಿ ಮಾಡಿಕೊಳ್ಳುತ್ತಿರಲಿಲ್ಲ ಎಂದು ನೆನಪಿಸಿದರು.

ಲಿಂಗಾಯತ ನಾಯಕರ ಅವಗಣನೆ

ಜಗದೀಶ್‌ ಶೆಟ್ಟರ್‌ ಅವರು ಕೇವಲ ಉತ್ತರ ಕರ್ನಾಟಕದ ನಾಯಕರಷ್ಟೇ ಅಲ್ಲ, ಅವರು ಸಮಗ್ರ ರಾಜ್ಯದ ನಾಯಕರು. ಬಿ.ಎಸ್‌. ಯಡಿಯೂರಪ್ಪ ಅವರು ಲಿಂಗಾಯತ ಸಮುದಾಯದ ಪ್ರಮುಖ ನಾಯಕರಾಗಿದ್ದರು. ಎರಡನೇ ಸ್ಥಾನದಲ್ಲಿ ಇದ್ದಿದ್ದು ಜಗದೀಶ್ ಶೆಟ್ಟರ್. ಯಡಿಯೂರಪ್ಪ ಅವರಿಗೆ ಬಿಜೆಪಿ ಅಪಮಾನ ಮಾಡಿತು. ಅವರು ಕಣ್ಣೀರು ಹಾಕಿಕೊಂಡು ಸಿಎಂ ಹುದ್ದೆಯಿಂದ ಇಳಿದರು. ಇದೀಗ ಜಗದೀಶ್ ಶೆಟ್ಟರ್ ಅವರಿಗೂ ಅಪಮಾನ ಮಾಡಲಾಗಿದೆ. ಜಗದೀಶ್‌ ಶೆಟ್ಟರ್ ಅವರ ಪರಿಸ್ಥಿತಿ ಯಾವ ನಾಯಕನಿಗೂ ಬರಬಾರದು ಎಂದು ಸಿದ್ದರಾಮಯ್ಯ ಹೇಳಿದರು.

ʻʻಜಗದೀಶ್‌ ಶೆಟ್ಟರ್‌ ಅವರು ಯಾವುದೇ ಆರೋಪ ಇಲ್ಲದ ರಾಜಕಾರಣಿ. ಅವರು ಸ್ವಾಭಿಮಾನಿ ರಾಜಕಾರಣಿ. ಈಗ ಅವರ ಸ್ವಾಭಿಮಾನಕ್ಕೆ ಧಕ್ಕೆಯಾಗಿದೆ. ಸಮುದಾಯಕ್ಕೂ ಮತ್ತು ಬೆಂಬಲಿಗರಿಗೂ ಅಪಮಾನವಾಗಿದೆʼʼ ಎಂದು ಹೇಳಿದರು ಸಿದ್ದರಾಮಯ್ಯ.

ಜಗದೀಶ್‌ ಶೆಟ್ಟರ್‌ ಅವರಂಥ ಹಿರಿಯ ನಾಯಕರಿಗೆ ಯಾವುದೇ ಮುನ್ಸೂಚನೆ ಇಲ್ಲದೇ ಟಿಕೆಟ್ ತಪ್ಪಿಸುವುದು ಘೋರ ಅಪರಾಧ. ಬಿಜೆಪಿ ಅವರು ತೇಜೋವಧೆ ಮಾಡಿದ್ದರಿಂದ ಅವರು ನೊಂದು ಬಿಜೆಪಿಯಿಂದ ಹೊರ ಬಂದಿದ್ದಾರೆ. ಶೆಟ್ಟರ್ ಇಂತಹ ತೀರ್ಮಾನ ಮಾಡ್ತಾರೆ ಅಂತ ನಾವು ಅಂದುಕೊಂಡಿರಲಿಲ್ಲ. ಆದರೆ ಆಗಿರುವ ಅಪಮಾನ ಅವರು ಕಠಿಣ ತೀರ್ಮಾನ ಮಾಡುವಂತೆ ಮಾಡಿದೆ. ನಾವು ಶೆಟ್ಟರ್ ಅವರನ್ನು ಗೌರವಯುತವಾಗಿ ನಡೆಸಿಕೊಳ್ಳುತ್ತೇವೆ. ಅವರ ಸ್ವಾಭಿಮಾನಕ್ಕೆ ದಕ್ಕೆ ಆಗದ ರೀತಿ ನಡೆಸಿಕೊಳ್ಳುತ್ತೇವೆʼʼ ಎಂದರು.‌

ಸಿದ್ದರಾಮಯ್ಯ ಅವರು ಜಗದೀಶ್‌ ಶೆಟ್ಟರ್‌ ಅವರಿಗೆ ಬಿಜೆಪಿ ಮಾಡಿರುವ ಅವಮಾನವನ್ನು ಬಿಜೆಪಿ ಪ್ರಬಲ ಲಿಂಗಾಯತ ನಾಯಕನಿಗೆ ಮಾಡಿದ ಅಪಮಾನ ಎಂದು ಪ್ರಚಾರ ಮಾಡುವ ಮುನ್ಸೂಚನೆಯನ್ನು ಸಿದ್ದರಾಮಯ್ಯ ನೀಡಿದರು.

ಇದನ್ನೂ ಓದಿ : ನನ್ನನ್ನು ತುಳಿಯಲು ವ್ಯವಸ್ಥಿತ ಷಡ್ಯಂತ್ರ, ನಡೆಸಿಕೊಂಡ ರೀತಿಯಿಂದ ನೊಂದು ಬಿಜೆಪಿ ತೊರೆಯುತ್ತಿದ್ದೇನೆ: ಜಗದೀಶ ಶೆಟ್ಟರ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಬೆಂಗಳೂರು ಸೇರಿ ರಾಜ್ಯದಲ್ಲಿ ಇನ್ನೆಷ್ಟು ದಿನ ಮಳೆ ಅಬ್ಬರ?

Rain News : ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮಳೆಯು ಮುಂದುವರಿಯಲಿದೆ. ಜೂ.9 ರಿಂದ 14ರವೆರೆಗೆ‌ ವ್ಯಾಪಕ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ. ಹಾಗಾದರೆ ಯಾವ್ಯಾವ ಜಿಲ್ಲೆಗಳಿಗೆ ಮಳೆ ಅಲರ್ಟ್‌ ಇದೆ ಎಂಬುದರ ಮಾಹಿತಿ ಇಲ್ಲಿದೆ.

VISTARANEWS.COM


on

By

karnataka weather forecast
Koo

ಬೆಂಗಳೂರು: ರಾಜ್ಯದಲ್ಲಿ ಇನ್ನೊಂದು ವಾರ ಧಾರಾಕಾರ ಮಳೆ (Karnataka Weather Forecast) ಸುರಿಯಲಿದೆ. ಈ ಕುರಿತು ಹವಾಮಾನ ಇಲಾಖೆ ಎಚ್ಚರಿಕೆಯನ್ನು (Rain News) ನೀಡಿದೆ. ಕೆಲವೊಮ್ಮೆ ಗಾಳಿಯು ಗಂಟೆಗೆ 50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದ್ದು, ಗುಡುಗು, ಸಿಡಿಲಿನ ಆರ್ಭಟ ಇರಲಿದೆ.

ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಚದುರಿದಂತೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ದಕ್ಷಿಣ ಕನ್ನಡಕ್ಕೂ ಎಚ್ಚರಿಕೆ ನೀಡಲಾಗಿದೆ. ಕೆಲವೊಮ್ಮೆ ಭಾರೀ ಗಾಳಿಯೊಂದಿಗೆ (40-50 kmph) ಮಳೆಯಾಗುವ ಸಾಧ್ಯತೆ ಇದೆ.

ಬಾಗಲಕೋಟೆ, ಕೊಪ್ಪಳ, ಧಾರವಾಡ, ಹಾವೇರಿ, ಬೆಳಗಾವಿ, ಗದಗ ಜಿಲ್ಲೆಗಳಲ್ಲಿ ಭಾರೀ ಗಾಳಿಯೊಂದಿಗೆ (40-50 kmph) ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಶಿವಮೊಗ್ಗದ ಒಂದೆರಡು ಕಡೆಗಳಲ್ಲಿ ಮಳೆ ಸಂಭವಿಸುವ ಸಾಧ್ಯತೆಯಿದೆ. ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಲಘು ಮಳೆಯಾಗಬಹುದು.

ಬೆಂಗಳೂರಿನಲ್ಲಿ ಸಾಧಾರಣ ಮಳೆ ಸಾಧ್ಯತೆ

ರಾಜಧಾನಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗಬಹುದು. ಕೆಲವೊಮ್ಮೆ ಗುಡುಗು, ಮಿಂಚು ಸಹಿತ ಮಳೆಯಾಗುವ ಸಂಭವವಿದೆ. ಜತೆಗೆ ಮೇಲ್ಮೈ ಮಾರುತಗಳು ಕೆಲವೊಮ್ಮೆ ಬಲವಾದ ಮತ್ತು ಬಿರುಗಾಳಿಯ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 31 ಮತ್ತು 21 ಡಿ.ಸೆ ಇರಲಿದೆ.

ಇದನ್ನೂ ಓದಿ: Self Harming : ಮಗಳ ನಗ್ನ ಫೋಟೊ ತೋರಿಸಿ ಪ್ರಿಯಕರ ಬ್ಲ್ಯಾಕ್‌ಮೇಲ್‌; ಮರ್ಯಾದೆಗೆ ಅಂಜಿ ವಿಷ ಸೇವಿಸಿದ ಕುಟುಂಬಸ್ಥರು

ವಿಜಯಪುರದ ದೋಣಿ ನದಿ ಸೇತುವೆ ಜಲಾವೃತ

ವಿಜಯಪುರದ ಯಾಳವಾರ ಗ್ರಾಮದ ಸೇತುವೆ ಸಂಪೂರ್ಣ ಜಲಾವೃತಗೊಂಡಿದೆ. ಭಾರಿ ಮಳೆಗೆ ಸಂಪೂರ್ಣ ದೋಣಿ ನದಿ ಸೇತುವೆ ಜಲಾವೃತದಿಂದ ರಸ್ತೆ ಸಂಪರ್ಕ ಕಡಿತವಾಗಿದೆ. ಸೇತುವೆ ಜಲಾವೃತದಿಂದ ಹೊಲಗಳಿಗೆ ತೆರಳುವ ರೈತರಿಗೂ ಸಂಕಷ್ಟ ಎದುರಾಗಿದೆ. ಡೋಣಿ ನದಿಗೆ ಕಟ್ಟಿರುವ ಹಳೆಯ ನೆಲ ಸೇತುವೆ ಜಲಾವೃತಗೊಂಡಿದೆ. ಹೊಸ ಸೇತುವೆ ಕಳಪೆ‌ ಕಾಮಗಾರಿಯಿಂದ ಶಿಥಿಲಗೊಂಡಿದೆ. ಹೀಗಾಗಿ ಜಲಾವೃತವಾದ ಹಳೆಯ ಸೇತುವೆಯ‌ ಮೇಲೆಯೇ ವಾಹನಗಳು ಸಂಚಾರಿಸುತ್ತಿದೆ. ಹೊಸ ಸೇತುವೆ ಅಲ್ಲಲ್ಲಿ ಬಿರುಕು ಬಿಟ್ಟು ಬೀಳುವ ಹಂತ ತಲುಪಿದೆ. ಹೀಗಾಗಿ ಹೊಸ ಸೇತುವೆ ಮೇಲೆ ಕಳೆದ ಎರಡು ವರ್ಷಗಳಿಂದ ಸಂಚಾರ‌ ನಿಷೇಧಿಸಲಾಗಿದೆ. ಬ್ರಿಟಿಷರ ಕಾಲದಲ್ಲಿ ನಿರ್ಮಾಣವಾಗಿರುವ ನೆಲ ಮಟ್ಟದ ಸೇತುವೆ ಮೇಲೆ ಓಡಾಟ ನಡೆಸುತ್ತಿದ್ದಾರೆ.

ಗ್ರಾಮಕ್ಕೆ ನುಗ್ಗಿದ ಹಳ್ಳದ ನೀರು

ವಿಜಯನಗರ ಜಿಲ್ಲೆಯ ಗುಡೇಕೋಟೆ ಹೋಬಳಿಯ ಮಹದೇವಪುರ ಗ್ರಾಮದಲ್ಲಿ ಮಳೆಯಿಂದಾಗಿ ಭಾರಿ ಪ್ರಮಾಣದ ಹಳ್ಳದ ನೀರು ಗ್ರಾಮಕ್ಕೆ ನುಗ್ಗಿದೆ. ಗ್ರಾಮದ ಬೀದಿಗಳಲ್ಲಿ ರಭಸವಾಗಿ ಹರಿದು ಮನೆ ಒಳಗೆ ನುಗ್ಗಿದೆ. ಮಹದೇವಪುರ ಗ್ರಾಮದ ಮಾರಿಗುಡ್ಡ ಏರಿಯಾದಿಂದ ಗ್ರಾಮಕ್ಕೆ ನೀರು ನುಗ್ಗುತ್ತಿದೆ. ಮಹದೇವಪುರ ಗ್ರಾಮದಲ್ಲಿ ದಲಿತ ಕೇರಿ ತಗ್ಗು ಪ್ರದೇಶದಲ್ಲಿ ಇದೆ.

ಚಿಕ್ಕಮಗಳೂರು, ಉತ್ತರ ಕನ್ನಡದಲ್ಲಿ ಮಳೆಯ ಅಬ್ಬರ

ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆ ಮುಂದುವರಿದಿದೆ. ಕರಾವಳಿಯ ಉತ್ತರಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಜೋರಾಗಿದೆ. ಇನ್ನೂ ಚಿಕ್ಕಮಗಳೂರಿನ ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್, ಬಣಕಲ್, ಬಾಳೂರು ಸುತ್ತಮುತ್ತ ಭಾರೀ ಮಳೆಯಾಗಿದೆ. ಚಾರ್ಮಾಡಿ ಘಾಟಿಯಲ್ಲಿ ಭಾರೀ ಮಳೆಗೆ ವಾಹನ ಸವಾರರು ಪರದಾಡಿದರು. ಮಳೆ ರಭಸಕ್ಕೆ ರಸ್ತೆ ಕಾಣದೆ ಇರುವುದರಿಂದ ಸವಾರರು ಕೊಟ್ಟಿಗೆಹಾರದಲ್ಲೇ ವಾಹನ ನಿಲ್ಲಿಸಿಕೊಂಡಿರುವುದು ಕಂಡು ಬಂತು.

ಗದಗದಲ್ಲಿ ಕೊಚ್ಚಿ ಹೋದ ಕಿರುಸೇತುವೆ

ಸತತ ಮಳೆಯಿಂದಾಗಿ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಧರ್ಮಾಪುರ ಗ್ರಾಮದ ಗಣಪತಿ ಕೆರೆಯ ಕಿರುಸೇತುವೆ ಕೊಚ್ಚಿ ಹೋದೆ. ಜಮೀನುಗಳಿಗೆ ಸಂಪರ್ಕ ಕಲ್ಪಿಸಲು ನಿರ್ಮಾಣ ಮಾಡಿದ್ದ ಕಿರುಸೇತುವೆ ನೀರುಪಾಲಾಗಿದೆ. ಕಳೆದ ವರ್ಷವಷ್ಟೇ ರೈತರು ತಮ್ಮ ಜಮೀನುಗಳಿಗೆ ತೆರಳಲು ನಿರ್ಮಿಸಲಾಗಿತ್ತು. ನಿರಂತರ ಮಳೆಯಿಂದಾಗಿ ಕಿರುಸೇತುವೆ ರಸ್ತೆ ಕೊಚ್ಚಿ ಹೋಗಿದ್ದು, ರೈತರು ಪರದಾಡುತ್ತಿದ್ದಾರೆ. ರಸ್ತೆ ಇಲ್ಲದ ಹಿನ್ನೆಲೆ ಇದೀಗ ರೈತರು ಕೃಷಿ ಚಟುವಟಿಕೆ ನಡೆಸಲು ಸಮಸ್ಯೆಯಾಗಿದೆ.

ಬೆಳಗಾವಿಯಲ್ಲಿ ಕೆರೆಯಂತಾದ ರಸ್ತೆಗಳು

ಮಳೆರಾಯನ ಅರ್ಭಟಕ್ಕೆ ಬೆಳಗಾವಿ ಕ್ಯಾಂಪ್‌ ಪ್ರದೇಶದ ಹತ್ತಿರ ರಸ್ತೆಗಳು ಕೆರೆಯಂತೆ ಮಾರ್ಪಾಟ್ಟಿವೆ. ಬೆಳಗಾವಿಯ ವಿವಿಧೆಡೆ ರಸ್ತೆಗಳು ಸಂಪೂರ್ಣ ಜಲಾವೃತಗೊಂಡಿದೆ. ವಾಹನ ಸಂಚಾರಕ್ಕೆ ಅಡೆತಡೆ ಉಂಟಾಯಿತು. ಬೆಳಗಾವಿಯ ಖಾನಾಪುರ ರಸ್ತೆಯಲ್ಲಿ ಎರಡು ‌ಅಡಿ ನೀರು ನಿಂತು ಅವಾಂತರವೇ ಸೃಷ್ಟಿಯಾಗಿತ್ತು. ಬೆಳಗಾವಿಯ ಗ್ಲೋಬ್ ಥೀಯೇಟರ್‌ ಅಂಗಳಕ್ಕೆ ನೀರು ನುಗ್ಗಿತ್ತು. ಟಿಕೆಟ್ ಕೌಂಟರ್ ಸಂಪೂರ್ಣ ಜಲಾವೃತಗೊಂಡಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Davanagere News: ದಾವಣಗೆರೆಯಲ್ಲಿ ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್‌ಗಿರಿ; ನಾಲ್ವರ ಬಂಧನ

Davanagere News: ಹರಿಹರದ ಕಾಳಿದಾಸ ನಗರದಲ್ಲಿ ಘಟನೆ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಹಲ್ಲೆಯ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹಲ್ಲೆ ಮಾಡಿದವರು ಹಾಗೂ ಹಲ್ಲೆಗೊಳಗಾದ ಯುವಕ ಒಂದೇ ಕೋಮಿಗೆ ಸೇರಿದವರಾಗಿದ್ದಾರೆ. ಹಲ್ಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಆದರೆ, ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ.

VISTARANEWS.COM


on

Karnataka police
Koo

ದಾವಣಗೆರೆ: ಜಿಲ್ಲೆಯ ಹರಿಹರದಲ್ಲಿ ಮುಸ್ಲಿಂ ಯುವಕನ ಮೇಲೆಯೇ ಹಲವು ಮುಸ್ಲಿಂ ಯುವಕರು ನೈತಿಕ ಪೊಲೀಸ್‌ಗಿರಿ (Moral Policing) ನಡೆಸಿ, ಹಲ್ಲೆ ಮಾಡಿದ ಪ್ರಕರಣವನ್ನು (Davanagere News) ಪೊಲೀಸರು ಭೇದಿಸಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಮೇ 31ರಂದು ದಾವಣಗೆರೆ ಜಿಲ್ಲೆಯ ಹರಿಹರ ನಗರದ ಬೆಂಕಿ ನಗರದ ಮದರಸಾ ಬಳಿಯ ಖಾಲಿ‌ ಕೊಠಡಿಯಲ್ಲಿ ಹಲ್ಲೆ ನಡೆಸಲಾಗಿತ್ತು. ಈಗ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.

ಹರಿಹರದ ಕಾಳಿದಾಸ ನಗರದ ನಿವಾಸಿ ಮಹಮ್ಮದ್ ಅಲಿ (26) ಮೇಲೆ ಏಳು ಯುವಕರು ಹಲ್ಲೆ ನಡೆಸಿದ್ದರು. ಆಸೀಫ್, ಗೌಸ್, ತೌಫಿಕ್, ಸಯ್ಯದ್, ದಾದು, ಚೋಟು, ಫಿರೋಜ್‌ ಎಂಬುವರು ಹಲ್ಲೆ ನಡೆಸಿದ್ದರು. ಹಲ್ಲೆ ಮಾಡಿದ ಏಳು ಜನರಲ್ಲಿ ನಾಲ್ವರನ್ನು ಹರಿಹರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಉಳಿದವರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ ಎಂಬುದಾಗಿ ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ ಮಾಹಿತಿ ನೀಡಿದ್ದಾರೆ.

ಖಾಲಿ ಕೊಠಡಿಯಲ್ಲಿ ಯುವಕನ ಮೇಲೆ ಆರೋಪಿಗಳು ನಿರಂತರವಾಗಿ ಚಿತ್ರಹಿಂಸೆ ನೀಡಿದ್ದರು. ಸಾಮಾಜಿಕ‌ ಜಾಲತಾಣಗಳಲ್ಲಿ ಹಲ್ಲೆಯ ವಿಡಿಯೊ ವೈರಲ್‌ ಆಗಿತ್ತು. ಯುವಕನನ್ನು ಒಬ್ಬ ಹಿಡಿದುಕೊಂಡು, ಇನ್ನೊಬ್ಬ ಹಲ್ಲೆ ನಡೆಸಿದ್ದ. ದೊಣ್ಣೆಯಿಂದ ಯುವಕನ ಮೇಲೆ ಹಲ್ಲೆ ಮಾಡಲಾಗಿದ್ದು, ಈ ಬಗ್ಗೆ ‌ಪೊಲೀಸರಿಗೆ ಯಾವುದೇ ದೂರು ನೀಡಿಲ್ಲ. ಆದರೆ, ಹಲ್ಲೆಯ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದ ಕಾರಣ ಕ್ರಮ ತೆಗೆದುಕೊಳ್ಳುವಂತೆ ಜನ ಆಗ್ರಹಿಸಿದ್ದರು.

ಅಪರಿಚಿತ ವಾಹನ ಡಿಕ್ಕಿಯಾಗಿ ಪೊಲೀಸ್‌ ಪೇದೆಗೆ ಗಂಭೀರ ಗಾಯ

ಯಾದಗಿರಿ: ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಪೊಲೀಸ್‌ ಕಾನ್‌ಸ್ಟೇಬಲ್‌ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಹಾಪುರ-ಯಾದಗಿರಿ ಮಾರ್ಗ ಮಧ್ಯೆ ನಡೆದಿದೆ. ಯಾದಗಿರಿ ಸಂಚಾರ ಪೊಲೀಸ್ ಠಾಣೆಯ ಪೇದೆ ಹಜರತ್ ಅಲಿ ಗಾಯಾಳು. ದೋರನಹಳ್ಳಿ ಗ್ರಾಮದ ಹೊರವಲಯದಲ್ಲಿ ನಡೆದಿರುವ ಅಪಘಾತ ನಡೆದಿದ್ದು, ಗಂಭೀರ ಗಾಯಗೊಂಡಿರುವ ಪೇದೆಯನ್ನು ಕಲಬುರಗಿ ಯುನೈಟೆಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: Assault Case : ಅರೆ ಬೆತ್ತಲಾಗಿ ಯುವಕನಿಗೆ ನಡು ರಸ್ತೆಯಲ್ಲೆ ಹಿಗ್ಗಾಮುಗ್ಗಾ ಥಳಿತ; ಹಲ್ಲೆಕೋರರು ಅರೆಸ್ಟ್‌

Continue Reading

ಕರ್ನಾಟಕ

Govt Employees: ಪ್ರತಿ ಸೋಮವಾರ ಕೇಂದ್ರ ಕಚೇರಿಗಳಿಗೆ ಅಧಿಕಾರಿ, ನೌಕರರ ಹಾಜರು ಕಡ್ಡಾಯ: ರಾಜ್ಯ ಸರ್ಕಾರ ಆದೇಶ

Govt Employees: ರೈತರಿಗೆ ಅನುಕೂಲವಾಗಲು ರಾಜ್ಯ ಸರ್ಕಾರ ಈ ಆದೇಶ ಹೊರಡಿಸಿದೆ. ಅಧಿಕಾರಿ, ನೌಕರರು ಪ್ರತಿ ಸೋಮವಾರಗಳಂದು ತಮ್ಮ ತಮ್ಮ ಕೇಂದ್ರ ಸ್ಥಾನದ ಕಚೇರಿಗಳಲ್ಲಿ ಹಾಜರಿದ್ದು, ಕರ್ತವ್ಯ ನಿರ್ವಹಿಸಬೇಕು ಎಂದು ಸೂಚಿಸಲಾಗಿದೆ.

VISTARANEWS.COM


on

Govt Employees
Koo

ಬೆಂಗಳೂರು: ಪ್ರತಿಯೊಂದು ಇಲಾಖೆಯ ಅಧಿಕಾರಿ, ನೌಕರರು (Govt Employees) ಪ್ರತಿ ಸೋಮವಾರಗಳಂದು ತಮ್ಮ ತಮ್ಮ ಕೇಂದ್ರ ಸ್ಥಾನದ ಕಚೇರಿಗಳಲ್ಲಿ ಹಾಜರಿದ್ದು, ಕಚೇರಿಗಳಿಗೆ ಆಗಮಿಸುವ ಜನರಿಗೆ ಸರ್ಕಾರಿ ಸೇವೆಗಳನ್ನು ಒದಗಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಸೂಚನೆಯಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ವಿಮಲಾಕ್ಷಿ. ಬಿ ಅವರು ಎಲ್ಲಾ ಸರ್ಕಾರಿ ಇಲಾಖೆಗಳಿಗೆ ಆದೇಶ ಹೊರಡಿಸಿದ್ದಾರೆ.

ಕರ್ನಾಟಕವು ಕೃಷಿ ಪ್ರಧಾನವಾದ ರಾಜ್ಯವಾಗಿದ್ದು, ಸಾಮಾನ್ಯವಾಗಿ ಕೃಷಿಕರು ಸೋಮವಾರದ ದಿನದಂದು ತುಸುಮಟ್ಟಿಗೆ ಕೃಷಿ ಚಟುವಟಿಕೆಗಳಿಗೆ ಬಿಡುವು ನೀಡಿ, ಸಂತೆ, ಪೇಟೆ ಕೆಲಸಗಳು ಹಾಗೂ ಕಚೇರಿಗಳಿಗೆ ತಮ್ಮ ಕೆಲಸಗಳಿಗಾಗಿ ಹೋಗುವುದು ಹಿಂದಿನಿಂದ ನಡೆದುಕೊಂಡು ಬಂದ ವಾಡಿಕೆಯಾಗಿದೆ.

ಈ ಹಿಂದೆ, ಪ್ರತಿ ಸೋಮವಾರಗಳಂದು ತಾಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳಾದಿಯಾಗಿ ಎಲ್ಲರೂ ತಮ್ಮ ತಮ್ಮ ಕೇಂದ್ರಸ್ಥಾನದ ಕಚೇರಿಗಳಲ್ಲಿದ್ದು, ಜನರ ಕೆಲಸಗಳನ್ನು ಮಾಡುತ್ತಿದ್ದರು. ಆದರೆ, ಕೃಷಿಯೇತರ ಹಿನ್ನೆಲೆಯಿಂದ ಅಧಿಕಾರಿಗಳು, ನೌಕರರು ಸರ್ಕಾರಿ ಸೇವೆಗೆ ಬರುವ ಪ್ರಮಾಣ ಹೆಚ್ಚಿದ ಮೇಲೆ ಈ ಪದ್ಧತಿಯಲ್ಲಿ ಸ್ವಲ್ಪ ಮಟ್ಟಿಗೆ ಏರು ಪೇರಾಗಿದೆ. ಆದ್ದರಿಂದ, ಪ್ರತಿಯೊಂದು ಇಲಾಖೆಯ ಅಧಿಕಾರಿ, ನೌಕರರು ಪ್ರತಿ ಸೋಮವಾರಗಳಂದು ತಮ್ಮ ತಮ್ಮ ಕೇಂದ್ರಸ್ಥಾನದ ಕಚೇರಿಗಳಲ್ಲಿ ಹಾಜರಿದ್ದು, ಕರ್ತವ್ಯ ನಿರ್ವಹಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಎಂಎಲ್‌ಸಿ ಅಡಗೂರು ಎಚ್.ವಿಶ್ವನಾಥ್ ಮನವಿ ಕೋರಿದ್ದರು. ಈ ಬಗ್ಗೆ ಸಕಾರಾತ್ಮಕವಾಗಿ ಸಿಎಂ ಸಿದ್ದರಾಮಯ್ಯ ಸ್ಪಂದಿಸಿ, ಅಗತ್ಯ ಕ್ರಮವಹಿಸಲು ಸೂಚನೆ ನೀಡಿದ್ದಾರೆ.

ಸಾರಿಗೆ ನಿಗಮಕ್ಕೂ ಅನ್ವಯ

ಪ್ರತಿ ಸೋಮವಾರಗಳಂದು ಪ್ರತಿಯೊಂದು ಇಲಾಖೆಯ ಅಧಿಕಾರಿ, ನೌಕರರು ತಮ್ಮ ಕೇಂದ್ರ ಸ್ಥಾನದ ಕಚೇರಿಗಳಲ್ಲಿ ಹಾಜರಿದ್ದು, ಕರ್ತವ್ಯ ನಿರ್ವಹಿಸಬೇಕು ಎಂಬ ರಾಜ್ಯ ಸರ್ಕಾರ ಸೂಚನೆಯು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಕ್ಕೂ ಅನ್ವಯವಾಗಿದೆ. ನಿಗಮ ವ್ಯಾಪ್ತಿಯ ಎಲ್ಲಾ ಕಚೇರಿಗಳಲ್ಲಿ ತುರ್ತು ಕಾರ್ಯಗಳನ್ನು ಹೊರತುಪಡಿಸಿ. ಪ್ರತಿ ಸೋಮವಾರಗಳಂದು ತಮ್ಮ ಕೇಂದ್ರ ಸ್ಥಾನದ ಕಚೇರಿಗಳಲ್ಲಿ ಹಾಜರಿದ್ದು, ಸೇವೆ ಒದಗಿಸಬೇಕು ಎಂದು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ಸುತ್ತೋಲೆ ಹೊರಡಿಸಿದ್ದಾರೆ.

Continue Reading

ದಾವಣಗೆರೆ

Davanagere News: ತರಗನಹಳ್ಳಿಯ ಚನ್ನಮ್ಮ ವಸತಿ ಶಾಲೆಯಲ್ಲಿ ಪರಿಸರ ದಿನಾಚರಣೆ

Davanagere News: ಹೊನ್ನಾಳಿ ತಾಲೂಕಿನ ತರಗನಹಳ್ಳಿ ಸಮೀಪದ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ ಜರುಗಿತು.

VISTARANEWS.COM


on

World Environment Day Celebration at Kittur Rani Chennamma Residential School
Koo

ಹೊನ್ನಾಳಿ: ತಾಲೂಕಿನ ತರಗನಹಳ್ಳಿ ಸಮೀಪದ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮವನ್ನು (Davanagere News) ಹಮ್ಮಿಕೊಳ್ಳಲಾಗಿತ್ತು.

ಇದನ್ನೂ ಓದಿ: Karnataka Weather : ಉತ್ತರ ಒಳನಾಡು, ಕರಾವಳಿಯಲ್ಲಿ ವ್ಯಾಪಕ ಮಳೆ; ಶಾಲೆಗೆ ನುಗ್ಗಿದ ನೀರು, ಮಕ್ಕಳಿಗೆ ರಜೆ

ತರಗನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರಮೇಶ್ ಗೌಡ, ಗಿಡ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಪರಿಸರ ಸಂರಕ್ಷಣೆಯು ಪ್ರತಿಯೊಬ್ಬ ನಾಗರೀಕನ ಆದ್ಯ ಕರ್ತವ್ಯವಾಗಿದೆ. ಪರಿಸರವು ಸಕಲ ಜೀವರಾಶಿಗಳಿಗೂ ಆಶ್ರಯ ನೀಡಿದೆ. ಎಲ್ಲರೂ ಪರಿಸರ ಉಳಿಸಿ, ಬೆಳೆಸೋಣ ಎಂದು ಶಾಲೆಯ ವಿದ್ಯಾರ್ಥಿಗಳಿಗೆ ತಿಳಿಸಿದರು.

ಪರಿಸರದ ಬಗ್ಗೆ ಮಕ್ಕಳಿಗೆ ಬಾಲ್ಯದಲ್ಲಿಯೇ ಕಾಳಜಿ ಮೂಡಿಸಬೇಕು ಎಂದ ಅವರು, ಗಿಡಗಳನ್ನು ನೆಡುವುದರ ಜತೆಗೆ ಅದನ್ನು ಉಳಿಸಿ, ಬೆಳೆಸುವ ಕಾರ್ಯವನ್ನು ಮಾಡಬೇಕು ಎಂದು ತಿಳಿಸಿದರು. ಇದೇ ವೇಳೆ ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಂದ ಶಾಲಾ ಆವರಣದಲ್ಲಿ ಗಿಡಗಳನ್ನು ನೆಡಲಾಯಿತು.

ಇದನ್ನೂ ಓದಿ: Toyota Kirloskar Motor: ದೆಹಲಿಯಲ್ಲಿ ಟಿಕೆಎಂನ ʼಟೊಯೊಟಾ ಯೂಸ್ಡ್ ಕಾರ್ʼ ಮಳಿಗೆಗೆ ಚಾಲನೆ

ಈ ಸಂದರ್ಭದಲ್ಲಿ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ ಮುಖ್ಯ ಶಿಕ್ಷಕ ಶಿವಕುಮಾರ್ ಕೆ.ಆರ್. ಹಾಗೂ ವಸತಿ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Continue Reading
Advertisement
Modi 3.0 Cabinet
ಪ್ರಮುಖ ಸುದ್ದಿ19 mins ago

Modi 3.0 Cabinet: ಮೋದಿ 3ನೇ ಅವಧಿಯಲ್ಲಿ ಯಾರಿಗೆಲ್ಲ ಮಂತ್ರಿ ಭಾಗ್ಯ? ರೇಸ್‌ನಲ್ಲಿ ಯಾರಿದ್ದಾರೆ? ಇಲ್ಲಿದೆ ಪಟ್ಟಿ

Eating Style
ಲೈಫ್‌ಸ್ಟೈಲ್20 mins ago

Eating Style: ಉಣ್ಣುವ ರೀತಿ ನಾವು ಎಂಥವರು ಎನ್ನುವುದನ್ನು ಬಯಲು ಮಾಡುತ್ತದೆ! ಅದು ಹೇಗೆ?

Narendra Modi
ದೇಶ49 mins ago

Narendra Modi: ಮೋದಿ ಪ್ರಮಾಣವಚನ; ಇಂದಿನ ಕಾರ್ಯಕ್ರಮ ಏನೇನು? ಹೇಗಿದೆ ಭದ್ರತೆ, ಸಿದ್ಧತೆ?

karnataka weather forecast
ಮಳೆ50 mins ago

Karnataka Weather : ಬೆಂಗಳೂರು ಸೇರಿ ರಾಜ್ಯದಲ್ಲಿ ಇನ್ನೆಷ್ಟು ದಿನ ಮಳೆ ಅಬ್ಬರ?

Narendra Modi
ದೇಶ1 hour ago

Narendra Modi: 3ನೇ ಬಾರಿ ಪ್ರಧಾನಿಯಾಗಿ ಇಂದು ಸಂಜೆ ಮೋದಿ ಪ್ರಮಾಣ; ಇಲ್ಲಿದೆ ಬಾಲ್ಯದಿಂದ ವಿಶ್ವಗುರುತನಕದ ಜೀವನ ಚಿತ್ರಣ

5:2 Diet
ಆರೋಗ್ಯ1 hour ago

5:2 Diet: ಏನಿದು 5:2 ಮಧ್ಯಂತರ ಉಪವಾಸ? ಇದರ ಪ್ರಯೋಜನಗಳೇನು?

IND vs PAK
ಕ್ರೀಡೆ2 hours ago

IND vs PAK: ಇಂದು ಇಂಡೋ-ಪಾಕ್​ ರೋಚಕ ಟಿ20 ಕದನ; ವಿಜಯ ಪತಾಕೆ ಹಾರಿಸಲಿ ಭಾರತ

Dina Bhavishya
ಭವಿಷ್ಯ2 hours ago

Dina Bhavishya : ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಇರಲಿ ಎಚ್ಚರಿಕೆ

NED vs RSA
T20 ವಿಶ್ವಕಪ್8 hours ago

NED vs RSA: ಹೋರಾಡಿ ಸೋತ ನೆದರ್ಲೆಂಡ್ಸ್​; ಹರಿಣ ಪಡೆಗೆ ಪ್ರಯಾಸದ ಗೆಲುವು

Karnataka police
ಕರ್ನಾಟಕ9 hours ago

Davanagere News: ದಾವಣಗೆರೆಯಲ್ಲಿ ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್‌ಗಿರಿ; ನಾಲ್ವರ ಬಂಧನ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ2 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ2 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ5 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ6 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ6 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ7 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌