Atiq Ahmed Letter: ಅತೀಕ್‌ಗಿತ್ತು ಸಾವಿನ ಭೀತಿ; ಹತ್ಯೆಗೂ ಮೊದಲು ಸುಪ್ರೀಂ ಕೋರ್ಟ್‌ಗೆ ಬರೆದ ಪತ್ರದಲ್ಲೇನಿದೆ? - Vistara News

ದೇಶ

Atiq Ahmed Letter: ಅತೀಕ್‌ಗಿತ್ತು ಸಾವಿನ ಭೀತಿ; ಹತ್ಯೆಗೂ ಮೊದಲು ಸುಪ್ರೀಂ ಕೋರ್ಟ್‌ಗೆ ಬರೆದ ಪತ್ರದಲ್ಲೇನಿದೆ?

Atiq Ahmed Letter: ಉಮೇಶ್‌ ಪಾಲ್‌ ಹತ್ಯೆ ಪ್ರಕರಣದ ಆರೋಪಿಗಳನ್ನು ಪೊಲೀಸರು ಎನ್‌ಕೌಂಟರ್‌ ಮಾಡಿದಾಗಲೇ ಅತೀಕ್‌ ಅಹ್ಮದ್‌ಗೆ ಸಾವಿನ ಭೀತಿ ಇತ್ತು. ಹಾಗಾಗಿಯೇ ಆತ ಹತ್ಯೆಗೂ ಮೊದಲು ಸುಪ್ರೀಂ ಕೋರ್ಟ್‌ಗೆ ಪತ್ರ ಬರೆದಿದ್ದ ಎಂದು ತಿಳಿದುಬಂದಿದೆ.

VISTARANEWS.COM


on

Atiq Ahmed Murder Case: Lawyer presents secret letter to SC written weeks before killing
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಖನೌ/ನವದೆಹಲಿ: ಉತ್ತರ ಪ್ರದೇಶದ ರಾಜಕಾರಣಿ, ಗ್ಯಾಂಗ್‌ಸ್ಟರ್‌ ಅತೀಕ್‌ ಅಹ್ಮದ್‌ ಹಾಗೂ ಆತನ ಸಹೋದರ ಅಶ್ರಫ್‌ ಅಹ್ಮದ್‌ನನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಹತ್ಯೆಯ ಆರೋಪಿಗಳನ್ನು ಪ್ರತಾಪ್‌ಗಢ ಜೈಲಿಗೆ ಶಿಫ್ಟ್‌ ಮಾಡಲಾಗಿದ್ದು, ಪ್ರಕರಣದ ಸಮಗ್ರ ತನಿಖೆಗೆ ಆಗ್ರಹ ಕೇಳಿಬರುತ್ತಿದೆ. ಇದರ ಬೆನ್ನಲ್ಲೇ, ಸಾವಿಗೂ 15 ದಿನ ಮೊದಲು ಅತೀಕ್‌ ಅಹ್ಮದ್‌ ಸುಪ್ರೀಂ ಕೋರ್ಟ್‌ಗೆ ರಹಸ್ಯ ಪತ್ರ (Atiq Ahmed Letter) ಬರೆದಿರುವುದು ಬೆಳಕಿಗೆ ಬಂದಿದೆ. ಅತೀಕ್‌ ಅಹ್ಮದ್‌ ಬರೆದ ಪತ್ರವನ್ನು ಆತನ ವಕೀಲರು ಸೋಮವಾರ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದಾರೆ.

ರಾಜು ಪಾಲ್‌ ಹತ್ಯೆಯ ಪ್ರಮುಖ ಸಾಕ್ಷಿಯಾಗಿದ್ದ ಉಮೇಶ್‌ ಪಾಲ್‌ ಅವರ ಹತ್ಯೆಯ ಆರೋಪಿಗಳನ್ನು ಉತ್ತರ ಪ್ರದೇಶ ಪೊಲೀಸರು ಎನ್‌ಕೌಂಟರ್‌ ಮಾಡಿದ ಕಾರಣ ಅತೀಕ್‌ ಅಹ್ಮದ್‌ಗೆ ಸಾವಿನ ಭೀತಿ ಇತ್ತು. ಹಾಗಾಗಿಯೇ ಆತ 15 ದಿನಗಳ ಮೊದಲೇ ಸುಪ್ರೀಂ ಕೋರ್ಟ್‌ಗೆ ರಹಸ್ಯ ಬರೆದಿದ್ದ. ನಾನೊಂದು ವೇಳೆ ಸಾವಿಗೀಡಾದರೆ, ಈ ಪತ್ರವನ್ನು ಸುಪ್ರೀಂ ಕೋರ್ಟ್‌ಗೆ ಸಲ್ಲಿಸುವಂತೆ ವಕೀಲರಿಗೆ ಅತೀಕ್‌ ಮನವಿ ಮಾಡಿದ್ದ ಎಂದು ತಿಳಿದುಬಂದಿದೆ.

“ಜೈಲಿನಲ್ಲಿ ಪೊಲೀಸ್‌ ಅಧಿಕಾರಿಗಳು ಬೆದರಿಕೆ ಹಾಕುತ್ತಿದ್ದಾರೆ. ನನ್ನನ್ನು ಕೊಲ್ಲುತ್ತೇವೆ ಎಂಬುದಾಗಿ ಹೆದರಿಸುತ್ತಿದ್ದಾರೆ. ಉಳಿದ ಎಲ್ಲ ಮಾಹಿತಿ ಈ ಪತ್ರದಲ್ಲಿದೆ ಎಂಬುದಾಗಿ ಅತೀಕ್‌ ಅಹ್ಮದ್‌ ತಿಳಿಸಿದ್ದ” ಎಂದು ಅತೀಕ್‌ ಪರ ವಕೀಲರು ತಿಳಿಸಿದ್ದಾರೆ. ಹಾಗೆಯೇ, ಅತೀಕ್‌ ಅಹ್ಮದ್‌ ಕೋರಿಕೆಯಂತೆ ಆತ ಬರೆದ ಪತ್ರವನ್ನು ಸರ್ವೋಚ್ಚ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಆದರೆ, ಅತೀಕ್‌ ಅಹ್ಮದ್‌ ಬರೆದ ಪತ್ರದಲ್ಲಿ ಯಾವ ಮಾಹಿತಿ ಇದೆ ಎಂಬುದು ನಿಖರವಾಗಿ ತಿಳಿದುಬಂದಿಲ್ಲ. ಆದಾಗ್ಯೂ, “ಪೊಲೀಸರು ನನ್ನನ್ನು ಎನ್‌ಕೌಂಟರ್‌ ಮಾಡುತ್ತಾರೆ” ಎಂದೇ ಅತೀಕ್‌ ಹೇಳುತ್ತಿದ್ದ. ಆದರೆ, ಗ್ಯಾಂಗ್‌ಸ್ಟರ್‌ಗಳು ಆತನನ್ನು ಪ್ರಯಾಗ್‌ರಾಜ್‌ನಲ್ಲಿ ಹತ್ಯೆ ಮಾಡಿದ್ದಾರೆ.

ತನಿಖೆಗಾಗಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

ಪೊಲೀಸರ ಸುಪರ್ದಿಯಲ್ಲಿದ್ದಾಗಲೇ ಅತೀಕ್‌ ಅಹ್ಮದ್‌ ಹಾಗೂ ಅಶ್ರಫ್‌ ಅಹ್ಮದ್‌ನ ಹತ್ಯೆ ನಡೆದಿರುವ ಕುರಿತು ಸುಪ್ರೀಂ ಕೋರ್ಟ್‌ ಸುಪರ್ದಿಯಲ್ಲಿಯೇ ತನಿಖೆಯಾಗಬೇಕು ಎಂದು ಕೋರಿ ಸರ್ವೋಚ್ಚ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿದೆ. “ಪ್ರಕರಣದ ತನಿಖೆ ಕುರಿತು ಸುಪ್ರೀಂ ಕೋರ್ಟ್‌ ಸಮಿತಿ ರಚಿಸಬೇಕು. ನಿವೃತ್ತ ನ್ಯಾಯಮೂರ್ತಿ ನೇತೃತ್ವದ ಸಮಿತಿಯು ತನಿಖೆ ನಡೆಸಬೇಕು” ಎಂದು ವಕೀಲ ವಿಶಾಲ್‌ ತಿವಾರಿ ಅವರು ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಹಾಗೆಯೇ, ಉತ್ತರ ಪ್ರದೇಶದಲ್ಲಿ ಪೊಲೀಸರು 2017ರ ಬಳಿಕ ಎನ್‌ಕೌಂಟರ್‌ನಲ್ಲಿ 183 ಜನರನ್ನು ಹತ್ಯೆ ಮಾಡಿದ್ದು, ಇದರ ಕುರಿತು ಕೂಡ ತನಿಖೆ ನಡೆಯಬೇಕು ಎಂದು ಮನವಿಯಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: Atiq Ahmed: 400ಕ್ಕೂ ಅಧಿಕ ಕೇಸ್‌, ಸುಂದರ್‌ ಭಾಟಿ ಗ್ಯಾಂಗ್‌ ಜತೆ ಲಿಂಕ್‌; ಅತೀಕ್‌ಗೆ ಗುಂಡಿಟ್ಟ ಮೂವರು ಯಾರು? ಹಿನ್ನೆಲೆ ಏನು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Shyam Rangeela: ವಾರಾಣಸಿಯಲ್ಲಿ ಮೋದಿ ವಿರುದ್ಧ ಕಣಕ್ಕಿಳಿದ ಕಲಾವಿದನ ನಾಮಪತ್ರ ತಿರಸ್ಕಾರ!

Shyam Rangeela: ಪ್ರಧಾನಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಂತೆ ತನ್ನದೇ ಶೈಲಿಯಲ್ಲಿ ಮಿಮಿಕ್ರಿ ಮಾಡುತ್ತಿದ್ದ ಹಾಸ್ಯ ಕಲಾವಿದ ಶ್ಯಾಮ್‌ ರಂಗೀಲಾ ಅವರು ಉತ್ತರ ಪ್ರದೇಶದ ವಾರಾಣಸಿಯಲ್ಲಿ ಸ್ಪರ್ಧಿಸಲು ತೀರ್ಮಾನಿಸಿದ್ದರು. ಹಾಗಾಗಿ ಅವರು ನಾಮಪತ್ರ ಸಲ್ಲಿಸಿದ್ದರು. ಈಗ ಚುನಾವಣೆ ಆಯೋಗವು ನಾಮಪತ್ರವನ್ನು ತಿರಸ್ಕರಿಸಿದೆ.

VISTARANEWS.COM


on

Shyam Rangeela
Koo

ವಾರಾಣಸಿ: ಉತ್ತರ ಪ್ರದೇಶದ ವಾರಾಣಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ವಿರುದ್ಧ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದ ಹಾಸ್ಯ ಕಲಾವಿದ ಶ್ಯಾಮ್‌ ರಂಗೀಲಾ (Shyam Rangeela) ಸಲ್ಲಿಸಿದ್ದ ನಾಮಪತ್ರವನ್ನು ಚುನಾವಣೆ ಆಯೋಗವು ತಿರಸ್ಕರಿಸಿದೆ. ನಾಮಪತ್ರ ಸಲ್ಲಿಕೆ ವೇಳೆ ಪ್ರತಿಜ್ಞಾ ವಿಧಿ ಸ್ವೀಕರಿಸದಿರುವುದು ಸೇರಿ ಹಲವು ಶಿಷ್ಟಾಚಾರಗಳನ್ನು ಪಾಲಿಸದ ಹಿನ್ನೆಲೆಯಲ್ಲಿ ಚುನಾವಣೆ ಆಯೋಗವು (Election Commission) ನಾಮಪತ್ರವನ್ನು ತಿರಸ್ಕರಿಸಿದೆ ಎಂದು ತಿಳಿದುಬಂದಿದೆ.

ನಾಮಪತ್ರ ತಿರಸ್ಕಾರಗೊಂಡ ಬಳಿಕ ಶ್ಯಾಮ್‌ ರಂಗೀಲಾ ಅವರು ಅಸಮಾಧಾನ ವ್ಯಕ್ತಪಡಿಸಿದೆ. “ವಾರಾಣಸಿಯಲ್ಲಿ ಚುನಾವಣೆ ಆಯೋಗವು ಪ್ರಜಾಪ್ರಭುತ್ವವನ್ನು ನಿರ್ನಾಮ ಮಾಡಲು ಹೊರಟಿದೆ. ನಾನೇನೂ ಇಲ್ಲಿಗೆ ಮೋದಿ ಅವರನ್ನು ಸೋಲಿಸಲು ಬಂದಿರಲಿಲ್ಲ. ಸ್ಪರ್ಧೆಯಷ್ಟೇ ನನ್ನ ಉದ್ದೇಶವಾಗಿತ್ತು. ಆದರೆ, ವಾರಾಣಸಿಯ ಜನ ನನಗೆ ಬೆಂಬಲ ನೀಡಿದರು. ನನಗಾಗಿ ಹಣ ನೀಡಲು ಬಂದರು. ನಾನು ಸೋತರೂ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ ಎಂದು ಭಾವಿಸಿದ್ದೆ. ಆದರೆ, ನನ್ನನ್ನು ಈಗ ಸ್ಪರ್ಧೆಯಿಂದಲೇ ತಡೆಯಲಾಗಿದೆ. ಇದು ಪ್ರಜಾತಂತ್ರಕ್ಕೆ ಮಾಡಿದ ಅಪಮಾನ” ಎಂದು ಶ್ಯಾಮ್‌ ರಂಗೀಲಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಜಸ್ಥಾನದವರಾದ 29 ವರ್ಷದ ಶ್ಯಾಮ್‌ ರಂಗೀಲಾ ಅವರು ನರೇಂದ್ರ ಮೋದಿ ಹಾಗೂ ರಾಹುಲ್‌ ಗಾಂಧಿ ಅವರನ್ನು ಮಿಮಿಕ್ರಿ ಮಾಡುತ್ತ ಖ್ಯಾತಿ ಗಳಿಸಿದ್ದಾರೆ. ಇವರ ಹಾಸ್ಯಪ್ರಜ್ಞೆಯನ್ನೂ ಜನ ಮೆಚ್ಚಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಜನರಿಗೆ ಪರಿಚಿತರಾಗಿದ್ದಾರೆ. “ದೇಶದಲ್ಲಿ ಪ್ರಜಾಪ್ರಭುತ್ವ ಅಸ್ತಿತ್ವದಲ್ಲಿದೆ ಎಂಬುದನ್ನು ಸಾಬೀತುಪಡಿಸಲು ನಾನು ವಾರಾಣಸಿ ಲೋಕಸಭೆ ಕ್ಷೇತ್ರದಲ್ಲಿ ಸ್ಪರ್ಧಿಸಲು ತೀರ್ಮಾನಿಸಿದ್ದೇನೆ” ಎಂದು ಹೇಳಿದ್ದ ಅವರು ಮೇ 14ರಂದು ನಾಮಪತ್ರ ಸಲ್ಲಿಸಿದ್ದರು.

ಮೋದಿ ವಿರುದ್ಧ ಕಣಕ್ಕಿಳಿದ ನಾಯಕರಿವರು

ನರೇಂದ್ರ ಮೋದಿ ಅವರು 2014ರಿಂದಲೂ ವಾರಾಣಸಿ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಇವರ ವಿರುದ್ಧ ಈ ಬಾರಿ ಕಾಂಗ್ರೆಸ್‌ ಅಜಯ್‌ ರಾಯ್‌ ಅವರನ್ನು ಕಣಕ್ಕಿಳಿಸಿದೆ. ಅಖಿಲ ಭಾರತ ಹಿಂದು ಮಹಾಸಭಾ (ABHM) ಪಕ್ಷದಿಂದ ಮಂಗಳಮುಖಿಯಾಗಿರುವ ಕಿನ್ನಾರ್‌ ಮಹಾಮಂಡಲೇಶ್ವರ್‌ ಹೇಮಾಂಗಿ ಸಖಿ ಅವರು ಕೂಡ ಸ್ಪರ್ಧಿಸುತ್ತಿದ್ದಾರೆ. ಬಿಎಸ್‌ಪಿಯು ಅಥರ್‌ ಜಮಾಲ್‌ ಲರಿ ಅವರಿಗೆ ಟಿಕೆಟ್‌ ನೀಡಿದೆ. ಕ್ಷೇತ್ರದಲ್ಲಿ ಜೂನ್‌ 1ರಂದು ಮತದಾನ ನಡೆಯಲಿದೆ. ವಾರಾಣಸಿ ಲೋಕಸಭೆ ಕ್ಷೇತ್ರದಲ್ಲಿ 19.62 ಲಕ್ಷ ಮತದಾರರಿದ್ದಾರೆ. ಇವರಲ್ಲಿ 10.65 ಲಕ್ಷ ಪುರುಷರಿದ್ದರೆ, 8.97 ಲಕ್ಷ ಮಹಿಳೆಯರಿದ್ದಾರೆ. 135 ಮಂಗಳಮುಖಿಯರೂ ಮತದಾನ ಮಾಡಲಿದ್ದಾರೆ.

ಗ್ಯಾಂಗ್‌ಸ್ಟರ್‌ ಪತ್ನಿಗೆ ಟಿಕೆಟ್‌

ಉತ್ತರ ಪ್ರದೇಶದ ಜೌನ್‌ಪುರ ಲೋಕಸಭೆ ಕ್ಷೇತ್ರದಲ್ಲಿ ಬಿಎಸ್‌ಪಿಯು ಗ್ಯಾಂಗ್‌ಸ್ಟರ್‌ ಧನಂಜಯ್‌ ಸಿಂಗ್‌ ಪತ್ನಿ ಶ್ರೀಕಲಾ ಸಿಂಗ್‌ ಅವರಿಗೆ ಟಿಕೆಟ್‌ ನೀಡಿದೆ. ಇದು ಈಗ ಭಾರಿ ಚರ್ಚೆಗೂ ಗ್ರಾಸವಾಗಿದೆ. ಇನ್ನು, ಮೈನ್‌ಪುರಿಯಲ್ಲಿ ಅಭ್ಯರ್ಥಿಯನ್ನು ಬದಲಾಯಿಸಿರುವ ಬಿಎಸ್‌ಪಿಯು, ಶಿವಪ್ರಸಾದ್‌ ಯಾದವ್‌ ಅವರಿಗೆ ಮಣೆ ಹಾಕಿದೆ. ಬರೇಲಿಯಲ್ಲಿ ಛೋಟಾಲಾಲ್‌ ಗಂಗ್ವಾರ್‌, ಬಂಡಾದಲ್ಲಿ ಮಯಾಂಕ್‌ ದ್ವಿವೇದಿ, ಘಾಜಿಪುರದಲ್ಲಿ ಉಮೇಶ್‌ ಕುಮಾರ್‌ ಸಿಂಗ್‌ ಸೇರಿ 11 ಕ್ಷೇತ್ರಗಳಲ್ಲಿ ಬಿಎಸ್‌ಪಿಯು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.

ಇದನ್ನೂ ಓದಿ: ಮೋದಿ ಬಲಿಷ್ಠ ನಾಯಕ, ಮತ್ತೆ ಪ್ರಧಾನಿಯಾಗೋದು ನಿಶ್ಚಿತ ಎಂದ ಪಾಕ್‌ ಮೂಲದ ಉದ್ಯಮಿ

Continue Reading

ದೇಶ

Monsoon 2024: ರೈತರಿಗೆ ಗುಡ್‌ ನ್ಯೂಸ್;‌ ಮುಂಗಾರು ಮಳೆ ಆಗಮನಕ್ಕೆ ಫಿಕ್ಸ್‌ ಆಯ್ತು ದಿನಾಂಕ!

Monsoon 2024: ಮೇ 27ರಿಂದ ಜೂನ್‌ 4ರ ಅವಧಿಯಲ್ಲಿ ಯಾವಾಗ ಬೇಕಾದರೂ ನೈಋತ್ಯ ಮುಂಗಾರು ಪ್ರವೇಶಿಸಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ. ಪ್ರತಿ ವರ್ಷ ಜೂನ್‌ 1ರಂದು ಮುಂಗಾರು ಮಳೆಯು ಕೇರಳವನ್ನು ಪ್ರವೇಶಿಸಿ, ದೇಶಾದ್ಯಂತ ವ್ಯಾಪಿಸುವುದು ವಾಡಿಕೆಯಾಗಿದೆ. ಆದರೆ, ಹವಾಮಾನ ಇಲಾಖೆಯು ಈ ಬಾರಿ ಒಂದು ದಿನ ಮೊದಲೇ ಪ್ರವೇಶಿಸಲಿದೆ ಎಂದು ತಿಳಿಸಿದೆ.

VISTARANEWS.COM


on

Monsoon 2024
Koo

ನವದೆಹಲಿ: ದೇಶಾದ್ಯಂತ ಬಹುತೇಕ ಭಾಗಗಳಲ್ಲಿ ಮಳೆಯಾಗುತ್ತಿದೆ. ಕರ್ನಾಟಕದಲ್ಲೂ (Karnataka) ವರುಣ ಕೃಪೆ ತೋರಿದ ಕಾರಣ (Rain News) ಬಿಸಿಲಿನಿಂದ ಕಂಗೆಟ್ಟಿದ್ದ ಜನ ನಿಟ್ಟುಸಿರು ಬಿಡುವಂತಾಗಿದೆ. ಜನ-ಜಾನುವಾರುಗಳಿಗೆ ನೀರು ಸಿಗುವಂತಾಗಿದೆ. ಬಿತ್ತನೆ ಮಾಡಲು ರೈತರು ಜಮೀನನ್ನು ಹದಗೊಳಿಸುತ್ತಿದ್ದಾರೆ. ಇದರ ಬೆನ್ನಲ್ಲೇ, ರೈತರಿಗೆ ಹವಾಮಾನ ಇಲಾಖೆಯು (Met Department) ಸಿಹಿ ಸುದ್ದಿ ನೀಡಿದೆ. ಮೇ 31ರಂದು ಪ್ರಸಕ್ತ ಸಾಲಿನ ಮುಂಗಾರು ಮಳೆಯು (Monsoon 2024) ಕೇರಳವನ್ನು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮುಂಗಾರು ಮಳೆಯು ದೇಶದ ಕೃಷಿಯ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ, ಈ ಬಾರಿ ವಾಡಿಕೆಗಿಂತ ಒಂದು ದಿನ ಮೊದಲೇ ಅಂದರೆ, ಮೇ 31 ದೇಶವನ್ನು ಮುಂಗಾರು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿರುವುದು ರೈತರ ಪಾಲಿಗೆ ಸಿಹಿ ಸುದ್ದಿಯೇ ಆಗಿದೆ. ಮೇ 27ರಿಂದ ಜೂನ್‌ 4ರ ಅವಧಿಯಲ್ಲಿ ಯಾವಾಗ ಬೇಕಾದರೂ ನೈಋತ್ಯ ಮುಂಗಾರು ಪ್ರವೇಶಿಸಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ. ಪ್ರತಿ ವರ್ಷ ಜೂನ್‌ 1ರಂದು ಮುಂಗಾರು ಮಳೆಯು ಕೇರಳವನ್ನು ಪ್ರವೇಶಿಸಿ, ದೇಶಾದ್ಯಂತ ವ್ಯಾಪಿಸುವುದು ವಾಡಿಕೆಯಾಗಿದೆ. ಆದರೆ, ಹವಾಮಾನ ಇಲಾಖೆಯು ಈ ಬಾರಿ ಒಂದು ದಿನ ಮೊದಲೇ ಪ್ರವೇಶಿಸಲಿದೆ ಎಂದು ತಿಳಿಸಿದೆ. ಸೆಪ್ಟೆಂಬರ್‌ನಲ್ಲಿ ಮುಂಗಾರು ಮಳೆ ಅಂತ್ಯವಾಗಲಿದೆ.

monsoon rain

ರಾಜ್ಯದಲ್ಲಿ ನಾಳೆಯೂ ಭರ್ಜರಿ ಮಳೆ

ಮೇ 16ರಂದು ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಗುಡುಗು, ಮಿಂಚು, ಜೋರಾದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಈ ಭಾಗದಲ್ಲಿ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ 50-60 ಕಿ.ಮೀ ವೇಗದ ಬಿರುಗಾಳಿಯೊಂದಿಗೆ 64.5ರಿಂದ 115.5 ಮಿ.ಮೀ ಮಳೆ (Rain News) ಸುರಿಯುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.

ಮೇ 16ರಂದು ಕಲಬುರಗಿ, ವಿಜಯಪುರ, ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಭಾರೀ ಗಾಳಿಯೊಂದಿಗೆ (50-60 kmph) ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕೊಡಗು, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಜೋರಾದ ಗಾಳಿಯೊಂದಿಗೆ (40-50 kmph) ಭಾರೀ ಮಳೆಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಭಾರೀ ಮಳೆಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಬಾಗಲಕೋಟೆ, ಬೀದ‌ರ್, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (50-60 kmph) ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗುಡುಗು ಸಹಿತ ಗಾಳಿ (40-50 kmph) ಬೀಸುವ ಸಂಭವವಿದೆ. ಮೇ 22ರವರೆಗೆ ರಾಜ್ಯದ ಹಲವೆಡೆ ಮಳೆ ಮುಂದುವರಿಯಲಿದ್ದು, ಮುಂದಿನ 5 ದಿನಗಳಲ್ಲಿ ರಾಜ್ಯದ ಮೇಲೆ 2-4 ಡಿಗ್ರಿ ಸೆ. ಇಳಿಕೆ ಕಾಣುವ ಸಾಧ್ಯತೆ ಇಲ್ಲ.

ಇದನ್ನೂ ಓದಿ: Karnataka Weather : ಮೇ 18ರವರೆಗೆ ಮಳೆ ಅಬ್ಬರ; 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Continue Reading

ಕ್ರೈಂ

Driving Tips: ವಾಹನ ಚಾಲನೆ ಮಾಡುತ್ತಿರುವಾಗ ಪ್ರಾಣಿಗಳಿಂದಾಗುವ ಅಪಘಾತ ತಪ್ಪಿಸಿಕೊಳ್ಳುವುದು ಹೇಗೆ?

ಪ್ರಾಣಿಗಳಿಂದಾಗಿ ರಸ್ತೆ ಅಪಘಾತಗಳು ಭಾರತದಲ್ಲಿ ಸಾಕಷ್ಟು ಹೆಚ್ಚಾಗುತ್ತಿದೆ. ಪ್ರಾಣಿಗಳು ಓಡಾಡುವ ಸಾಧ್ಯತೆಗಳಿರುವ ರಸ್ತೆಗಳಲ್ಲಿ ನಾವು ಬಹಳ ಎಚ್ಚರಿಕೆಯಿಂದ ವಾಹನ ಚಲಾಯಿಸಬೇಕಿದೆ. ಇದಕ್ಕಾಗಿ ಕೆಲವು ಸಲಹೆಗಳು (Driving Tips) ಇಲ್ಲಿವೆ.

VISTARANEWS.COM


on

By

Driving Tips
Koo

ತಮಿಳುನಾಡಿನಲ್ಲಿ (tamilnadu) ಇತ್ತೀಚೆಗೆ ನಡೆದ ಭೀಕರ ರಸ್ತೆ (Driving Tips) ಅಪಘಾತದಲ್ಲಿ (Road Accident) ಐದು ಮಂದಿ (five death) ಸಾವನ್ನಪ್ಪಿದ್ದರು. ರಸ್ತೆಯಲ್ಲಿದ್ದ ಜಾನುವಾರುಗಳಿಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಕಾರು (car) ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿತ್ತು. ಕಾರಿನಲ್ಲಿದ್ದ ಐವರು ಪುದುಚೇರಿಯಿಂದ ಹಿಂತಿರುಗುತ್ತಿದ್ದಾಗ ಕಲಾಪಕ್ಕಂನಲ್ಲಿ ಈ ಅಪಘಾತ ಸಂಭವಿಸಿತ್ತು. ಗೋವಾದಲ್ಲಿ (goa) ನಡೆದ ಮತ್ತೊಂದು ಘಟನೆಯಲ್ಲಿ ಮುಖ್ಯರಸ್ತೆಯಲ್ಲಿ ಹಸು ಹಠಾತ್ ಕಾಣಿಸಿಕೊಂಡಿದ್ದರಿಂದ ಕಾರಿಗೆ ಭಾರಿ ಹಾನಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಪ್ರಾಣಿಗಳಿಂದಾಗಿ ರಸ್ತೆ ಅಪಘಾತಗಳು ಭಾರತದಲ್ಲಿ ಸಾಕಷ್ಟು ಹೆಚ್ಚಾಗುತ್ತಿದೆ. ಪ್ರಾಣಿಗಳು ಓಡಾಡುವ ಸಾಧ್ಯತೆಗಳಿರುವ ರಸ್ತೆಗಳಲ್ಲಿ ನಾವು ಬಹಳ ಎಚ್ಚರಿಕೆಯಿಂದ ವಾಹನ ಚಲಾಯಿಸಬೇಕಿದೆ. ನೀವು ಕಾರನ್ನು ಓಡಿಸುತ್ತಿದ್ದರೆ ಮತ್ತು ಇದ್ದಕ್ಕಿದ್ದಂತೆ ಪ್ರಾಣಿಯು ನಿಮ್ಮ ಮುಂದೆ ಬಂದರೆ ನೀವು ಈ ಕೆಳಗಿನ ಸಲಹೆಗಳನ್ನು ಅನುಸರಿಸಬಹುದು.


1. ವೇಗದ ಮಿತಿಯಲ್ಲಿ ಚಾಲನೆ

ಅತಿ ವೇಗವಾಗಿ ವಾಹನ ಓಡಿಸುವುದು ಸರಿಯಲ್ಲ. ಇದರಿಂದ ಅಪಘಾತ ಸಂಭವಿಸುವ ಅಪಾಯ ಹೆಚ್ಚಾಗಿರುತ್ತದೆ. ಹೀಗಾಗಿ ವೇಗದ ವಾಹನ ಚಾಲನೆಗೆ ನಿಯಂತ್ರಣ ಹೇರಿ. ವಿಶೇಷವಾಗಿ ರಸ್ತೆಗಳಲ್ಲಿ ಪ್ರಾಣಿಗಳ ಸಾಧ್ಯತೆಗಳಿರುವ ಪ್ರದೇಶಗಳಲ್ಲಿ ನಿಧಾನವಾಗಿ ವಾಹನ ಚಲಾಯಿಸಿ.

2. ಶಾಂತವಾಗಿರಿ

ಭಯಭೀತರಾಗಬೇಡಿ ಅಥವಾ ಹಠಾತ್ ಚಲನೆಯನ್ನು ಮಾಡಬೇಡಿ. ಅದು ಪ್ರಾಣಿಗಳನ್ನು ಗಾಬರಿಗೊಳಿಸಬಹುದು ಅಥವಾ ನಿಮ್ಮ ಕಾರಿನ ನಿಯಂತ್ರಣವನ್ನು ಕಳೆದುಕೊಳ್ಳುವಂತೆ ಮಾಡಬಹುದು.

3. ನಿಧಾನಗೊಳಿಸಿ

ಪ್ರಾಣಿಗಳು ಹಠಾತ್ ಎದುರು ಬಂದಾಗ ವೇಗವನ್ನು ತಕ್ಷಣವೇ ಆದರೆ ಕ್ರಮೇಣ ಕಡಿಮೆ ಮಾಡಿ. ಬ್ರೇಕ್‌ಗಳ ಮೇಲೆ ಸ್ಲ್ಯಾಮ್ ಮಾಡುವುದನ್ನು ತಪ್ಪಿಸಿ, ಇದು ನಿಮ್ಮ ಕಾರನ್ನು ಸ್ಕಿಡ್ ಮಾಡಲು ಕಾರಣವಾಗಬಹುದು.

4. ಹಾರ್ನ್ ಬಳಸಿ

ಪ್ರಾಣಿಗಳು ಮತ್ತು ನಿಮ್ಮ ವಾಹನ ಬರುತ್ತಿರುವುದನ್ನು ಇತರ ಚಾಲಕರು ಗಮನ ಹರಿಸುವಂತೆ ಎಚ್ಚರಿಸಲು ವಾಹನದಲ್ಲಿರುವ ಹಾರ್ನ್ ಅನ್ನು ಸದ್ದು ಮಾಡುತ್ತ ಚಲಾಯಿಸಿ.

5. ಏಕಾಏಕಿ ತಿರುಗಿಸಬೇಡಿ

ರಸ್ತೆಯಲ್ಲಿ ವಾಹನವನ್ನು ನೇರವಾಗಿ ಚಲಿಸಲು ಪ್ರಯತ್ನಿಸಿ ಮತ್ತು ಹಠಾತ್ ವಾಹನ ತಿರುಗಿಸಬೇಡಿ. ವಿಶೇಷವಾಗಿ ಹತ್ತಿರದಲ್ಲಿ ಇತರ ವಾಹನಗಳು ಇದ್ದಲ್ಲಿ ಸ್ಟೇರಿಂಗ್ ನಿಯಂತ್ರಣ ಕಷ್ಟವಾದಾಗ ಇತರ ವಸ್ತು ಅಥವಾ ವಾಹನಕ್ಕೆ ಡಿಕ್ಕಿಯಾಗಬಹುದು.

6. ವಾಹನದ ಲೈಟ್‌ಗಳನ್ನು ಫ್ಲ್ಯಾಶ್ ಮಾಡಿ

ಕತ್ತಲೆಯಾಗಿದ್ದರೆ ಅಥವಾ ಗೋಚರತೆ ಕಡಿಮೆಯಿದ್ದರೆ ಪ್ರಾಣಿಗಳು ಮತ್ತು ಇತರ ಚಾಲಕರಿಗೆ ನೀವು ಹೆಚ್ಚು ಗೋಚರಿಸುವಂತೆ ಮಾಡಲು ನಿಮ್ಮ ಕಾರಿನ ಹೆಡ್‌ಲೈಟ್‌ಗಳು ಮತ್ತು ಅಪಾಯದ ದೀಪಗಳನ್ನು ಬೆಳಗಿಸಿ.

ಇದನ್ನೂ ಓದಿ: Road Accident: ಸ್ಕೂಟರ್‌ಗೆ ಟ್ರಕ್‌, ಲಾರಿಗೆ ಬಸ್‌, ಡಿವೈಡರ್‌ಗೆ ಕಾರು ಡಿಕ್ಕಿ; ಅಪಾಯದಿಂದ ಜಸ್ಟ್‌ ಮಿಸ್‌

7. ಪ್ರಾಣಿಗಳು ಹೋಗಲು ಜಾಗ ಬಿಡಿ

ಸಾಧ್ಯವಾದರೆ ಪ್ರಾಣಿಗೆ ರಸ್ತೆಯಿಂದ ದೂರ ಸರಿಯಲು ಸಾಕಷ್ಟು ಜಾಗವನ್ನು ನೀಡಿ. ಅದನ್ನು ಬಲವಂತವಾಗಿ ಅಥವಾ ಹತ್ತಿರ ಹೋಗಲು ಪ್ರಯತ್ನಿಸಬೇಡಿ.

8. ಸಿದ್ಧರಾಗಿರಿ

ಪ್ರಯಾಣ ಮಾಡುವಾಗ ಯಾವಾಗಲೂ ಸುತ್ತಮುತ್ತಲಿನ ಬಗ್ಗೆ ತಿಳಿದುಕೊಂಡಿರಿ. ವಿಶೇಷವಾಗಿ ಪ್ರಾಣಿಗಳು ಮುಕ್ತವಾಗಿ ತಿರುಗಾಡಲು ತಿಳಿದಿರುವ ಪ್ರದೇಶಗಳಲ್ಲಿ ಚಾಲನೆ ಮಾಡುವಾಗ ಜಾನುವಾರುಗಳ ಉಪಸ್ಥಿತಿಯನ್ನು ಸೂಚಿಸುವ ಎಚ್ಚರಿಕೆ ಚಿಹ್ನೆಗಳು ಅಥವಾ ಸಂಕೇತಗಳನ್ನು ಗಮನಿಸಿ.

Continue Reading

ದೇಶ

Alamgir Alam: ಮನೆಗೆಲಸದವನ ಮನೆಯಲ್ಲಿ 35 ಕೋಟಿ ರೂ. ಪತ್ತೆ; ಜಾರ್ಖಂಡ್‌ ಸಚಿವ ಆಲಂ ಬಂಧನ

Alamgir Alam: ಅಕ್ರಮವಾಗಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಆಲಂಗೀರ್‌ ಆಲಂ ಅವರನ್ನು ಕರೆಯಲಾಗಿತ್ತು. ಸತತ ವಿಚಾರಣೆ ನಡೆಸಿದ ಬಳಿಕ ಇ.ಡಿ ಅಧಿಕಾರಿಗಳು ಅವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಅಕ್ರಮವಾಗಿ ಹಣ ವರ್ಗಾವಣೆ ಪ್ರಕರಣದಲ್ಲಿಯೇ ಜಾರ್ಖಂಡ್‌ ಮಾಜಿ ಸಿಎಂ ಹೇಮಂತ್‌ ಸೊರೇನ್‌ ಅವರು ಜೈಲುಪಾಲಾಗಿದ್ದಾರೆ.

VISTARANEWS.COM


on

Alamgir Alam
Koo

ರಾಂಚಿ: ಜಾರ್ಖಂಡ್‌ ಗ್ರಾಮೀಣ ಅಭಿವೃದ್ಧಿ ಸಚಿವ, ಕಾಂಗ್ರೆಸ್‌ ನಾಯಕ ಆಲಂಗೀರ್ ಆಲಂ (Alamgir Alam) ಅವರ ಆಪ್ತ ಕಾರ್ಯದರ್ಶಿ ಸಂಜೀವ್ ಲಾಲ್ (Sanjiv Lal) ಮನೆಗೆಲಸದವನ ಮನೆಯಲ್ಲಿ ಸುಮಾರು 35 ಕೋಟಿ ರೂ. ಪತ್ತೆಯಾದ ಬೆನ್ನಲ್ಲೇ ಇ.ಡಿ (ED) ಅಧಿಕಾರಿಗಳು ಆಲಂಗೀರ್‌ ಆಲಂ ಅವರನ್ನು ಬಂಧಿಸಿದ್ದಾರೆ. ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ ಪ್ರಕರಣದಲ್ಲಿ ಸುಮಾರು 10 ಗಂಟೆ ವಿಚಾರಣೆ ನಡೆಸಿದ ಇ.ಡಿ ಅಧಿಕಾರಿಗಳು ಬಳಿಕ ಅವರನ್ನು ಬಂಧಿಸಿದರು.

ರಾಜ್ಯದ ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಕೋಟ್ಯಂತರ ರೂ. ಅವ್ಯವಹಾರ, ಅಕ್ರಮವಾಗಿ ಹಣ ವರ್ಗಾವಣೆ ಸೇರಿ ಹಲವು ಆರೋಪಗಳು ಕೇಳಿಬಂದಿದ್ದು, ಇ.ಡಿ ತನಿಖೆ ನಡೆಸುತ್ತಿದೆ. ಆಲಂಗೀರ್‌ ಆಲಂ ಆಪ್ತ ಕಾರ್ಯದರ್ಶಿ ಸಂಜೀವ್‌ ಲಾಲ್‌ ಹಾಗೂ ಆತನ ಮನೆಯಲ್ಲಿ ಕೆಲಸ ಮಾಡುವ ಜಹಾಂಗೀರ್‌ ಆಲಂ ಅವರನ್ನು ಈಗಾಗಲೇ ಇ.ಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಮನೆಗೆಲಸದವನಾದ ಜಹಾಂಗೀರ್‌ ಆಲಂ ಮನೆಯಲ್ಲಿ ಇ.ಡಿ ಅಧಿಕಾರಿಗಳು ದಾಳಿ ನಡೆಸಿದಾಗ ಸುಮಾರು 35.23 ಕೋಟಿ ರೂ. ಸಿಕ್ಕಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ರಾಂಚಿಯ ಹಲವೆಡೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದರು. ಜಹಾಂಗೀರ್‌ ಆಲಂ ಮನೆಗೆ ದಾಳಿ ಮಾಡಿದಾಗಂತೂ ನೋಟುಗಳ ರಾಶಿಯೇ ಕಂಡುಬಂದಿತ್ತು. 12ಕ್ಕೂ ಅಧಿಕ ಗಂಟೆಗಳವರೆಗೆ ಅಧಿಕಾರಿಗಳು ನೋಟುಗಳ ರಾಶಿಗಳನ್ನು ಮಷೀನ್‌ ಮೂಲಕ ಎಣಿಸಿದ್ದರು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಆಲಂಗೀರ್‌ ಆಲಂ ಅವರನ್ನು ಕರೆಯಲಾಗಿತ್ತು. ಸತತ ವಿಚಾರಣೆ ನಡೆಸಿದ ಬಳಿಕ ಇ.ಡಿ ಅಧಿಕಾರಿಗಳು ಅವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಅಕ್ರಮವಾಗಿ ಹಣ ವರ್ಗಾವಣೆ ಪ್ರಕರಣದಲ್ಲಿಯೇ ಜಾರ್ಖಂಡ್‌ ಮಾಜಿ ಸಿಎಂ ಹೇಮಂತ್‌ ಸೊರೇನ್‌ ಅವರು ಜೈಲುಪಾಲಾಗಿದ್ದಾರೆ.

2023ರಲ್ಲಿ ಕೆಲವು ಯೋಜನೆಗಳ ಅನುಷ್ಠಾನಕ್ಕಾಗಿ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ್ದಾರೆ ಎಂಬ ಆರೋಪದಲ್ಲಿ ಇ.ಡಿಯು ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಇಲಾಖೆಯ ಮುಖ್ಯ ಎಂಜಿನಿಯರ್ ವೀರೇಂದ್ರ ರಾಮ್ ಎಂಬವರನ್ನು ಬಂಧಿಸಿತ್ತು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಸಚಿವ ಅಲಂಗೀರ್ ಆಲಂ ಅವರ ಆಪ್ತ ಕಾರ್ಯದರ್ಶಿಯ ಮನೆಯ ಮೇಲೆಯೂ ದಾಳಿ ಮಾಡಿದೆ. ಸದ್ಯ ನೋಟಿನ ಕಂತೆ ನೋಡಿ ಅಧಿಕಾರಿಗಳೇ ಬೆಚ್ಚಿ ಬಿದ್ದಿದ್ದಾರೆ. ದಾಳಿ ವೇಳೆ ನಕಲಿ ಪ್ಯಾನ್ ಕಾರ್ಡ್‌ಗಳ ಮೂಲಕ ನಕಲಿ ಕಂಪನಿಗಳನ್ನು ರಚಿಸುವುದರಿಂದ ಹಿಡಿದು ಚರ ಮತ್ತು ಸ್ಥಿರಾಸ್ತಿಗಳ ಖರೀದಿಗಾಗಿ ಕೋಟಿ ರೂ.ಗಳ ನಗದು ವಿನಿಮಯ ನಡೆಸಿದ ಮಾಹಿತಿಯೂ ಸಿಕ್ಕಿದೆ ಎಂದು ಇಡಿ ಮೂಲಗಳು ತಿಳಿಸಿವೆ.

ಇದನ್ನೂ ಓದಿ: Bank Loan Fraud : 34,000 ಕೋಟಿ ರೂ. ಬ್ಯಾಂಕ್​​ ವಂಚನೆ, ಡಿಎಚ್​​ಎಫ್ಎಲ್​​​ ಮಾಜಿ ನಿರ್ದೇಶಕನ ಬಂಧನ

Continue Reading
Advertisement
Shyam Rangeela
ದೇಶ2 mins ago

Shyam Rangeela: ವಾರಾಣಸಿಯಲ್ಲಿ ಮೋದಿ ವಿರುದ್ಧ ಕಣಕ್ಕಿಳಿದ ಕಲಾವಿದನ ನಾಮಪತ್ರ ತಿರಸ್ಕಾರ!

Terrorist Arrested
ಕರ್ನಾಟಕ46 mins ago

Terrorist Arrested: ಬೆಂಗಳೂರಿನ ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು ರೂಪಿಸಿದ್ದ ಶಂಕಿತ ಉಗ್ರನ ಬಂಧನ

Monsoon 2024
ದೇಶ53 mins ago

Monsoon 2024: ರೈತರಿಗೆ ಗುಡ್‌ ನ್ಯೂಸ್;‌ ಮುಂಗಾರು ಮಳೆ ಆಗಮನಕ್ಕೆ ಫಿಕ್ಸ್‌ ಆಯ್ತು ದಿನಾಂಕ!

DP Manu
ಕ್ರೀಡೆ59 mins ago

DP Manu: ಫೆಡರೇಷನ್ ಕಪ್‌ನಲ್ಲಿ ನೀರಜ್​ ಚೋಪ್ರಾಗೆ ಬೆವರಿಳಿಯುವಂತೆ ಮಾಡಿದ ಕನ್ನಡಿಗ ಮನು; ಇವರ ಹಿನ್ನೆಲೆ, ಸಾಧನೆ ಏನೇನು?

Davanagere News
ಕರ್ನಾಟಕ2 hours ago

Davanagere News: ದಾವಣಗೆರೆ ಸಮೀಪದ ಕೆರೆಯಲ್ಲಿ ಲಕ್ಷಕ್ಕೂ ಅಧಿಕ ಮೀನುಗಳ ಮಾರಣಹೋಮ; ವಿಷಪ್ರಾಶನ ಶಂಕೆ

Robert Fico
ವಿದೇಶ2 hours ago

Robert Fico: ಸ್ಲೊವಾಕಿಯಾ ಪ್ರಧಾನಿ ರಾಬರ್ಟ್‌ ಫಿಕೊ ಮೇಲೆ ಗುಂಡಿನ ದಾಳಿ; ಭೀಕರ ವಿಡಿಯೊ ಇಲ್ಲಿದೆ

Federation Cup 2024
ಕ್ರೀಡೆ2 hours ago

Federation Cup 2024: ಕನ್ನಡಿಗ ಮನು ಎದುರು ತೀವ್ರ ಪೈಪೋಟಿ ಎದುರಿಸಿ ಚಿನ್ನ ಗೆದ್ದ ನೀರಜ್ ಚೋಪ್ರಾ

Tips For Healthy Skin
ಆರೋಗ್ಯ2 hours ago

Tips For Healthy Skin: ಈ ಐದು ಸಲಹೆಗಳನ್ನು ಪಾಲಿಸಿ, ಮೊಡವೆಗಳಿಂದ ಪಾರಾಗಿ!

Driving Tips
ಕ್ರೈಂ2 hours ago

Driving Tips: ವಾಹನ ಚಾಲನೆ ಮಾಡುತ್ತಿರುವಾಗ ಪ್ರಾಣಿಗಳಿಂದಾಗುವ ಅಪಘಾತ ತಪ್ಪಿಸಿಕೊಳ್ಳುವುದು ಹೇಗೆ?

Online scams
Latest2 hours ago

Online scams: ಹೆರಿಗೆ ರಜೆಯಲ್ಲಿದ್ದಾಗ ದುಡ್ಡು ಸಂಪಾದಿಸಲು ಹೋಗಿ 54 ಲಕ್ಷ ರೂ. ಕಳೆದುಕೊಂಡಳು!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ15 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ17 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ1 day ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20241 day ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20241 day ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ1 day ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು1 day ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ2 days ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ2 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ2 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌