Akshaya Tritiya 2023 : ಹಾಲ್‌ ಮಾರ್ಕ್‌ ಇರುವ ಚಿನ್ನದ ನಾಣ್ಯ ಖರೀದಿ ಕಡ್ಡಾಯವೇ? - Vistara News

ಪ್ರಮುಖ ಸುದ್ದಿ

Akshaya Tritiya 2023 : ಹಾಲ್‌ ಮಾರ್ಕ್‌ ಇರುವ ಚಿನ್ನದ ನಾಣ್ಯ ಖರೀದಿ ಕಡ್ಡಾಯವೇ?

ಅಕ್ಷಯ ತೃತೀಯ ಇದೇ ವಾರಾಂತ್ಯ ಬರಲಿದೆ. (ಏ.22) ಹೀಗಾಗಿ ಹಾಲ್‌ ಮಾರ್ಕ್‌ ಕುರಿತ ನಿಯಮಗಳನ್ನು ತಿಳಿದುಕೊಳ್ಳುವುದು (Akshaya Tritiya 2023) ಅವಶ್ಯಕ. ವಿವರ ಇಲ್ಲಿದೆ.

VISTARANEWS.COM


on

gold bars
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಭಾರತದಲ್ಲಿ 2023ರ ಏಪ್ರಿಲ್‌ 1ರಿಂದ ಆಯ್ದ ಚಿನ್ನದ ವಸ್ತುಗಳಿಗೆ ಹಾಲ್‌ ಮಾರ್ಕ್‌ ಕಡ್ಡಾಯವಾಗಿದೆ. ಹೀಗಿದ್ದರೂ 999/995 ಶುದ್ಧತೆಯ ಬಂಗಾರದ ನಾಣ್ಯಕ್ಕೆ ಹಾಲ್‌ ಮಾರ್ಕಿಂಗ್‌ (Hallmarking) ಕಡ್ಡಾಯವಲ್ಲ. ಚಿನ್ನದ ಜ್ಯುವೆಲ್ಲರಿ ಮತ್ತು ಕರಕುಶಲ ವಸ್ತುಗಳಿಗೆ ಮಾತ್ರ ಹಾಲ್‌ ಮಾರ್ಕ್‌ ಕಡ್ಡಾಯವಾಗಿದೆ. (Akshaya Tritiya 2023) ವೈಟ್‌ ಗೋಲ್ಡ್‌ ವಸ್ತುವಿಗೂ ಹಾಲ್‌ ಮಾರ್ಕ್‌ ಅಗತ್ಯ. ಈ ಸಲ ಏಪ್ರಿಲ್‌ 22ರಂದು ಅಕ್ಷಯ ತೃತೀಯ ದಿನವಾಗಿದ್ದು, ಬಂಗಾರದ ಆಭರಣ, ನಾಣ್ಯ ಖರೀದಿ ಹೆಚ್ಚಳ ನಿರೀಕ್ಷಿಸಲಾಗಿದೆ.

ಬ್ಯೂರೊ ಸ್ಟ್ಯಾಂಡರ್ಡ್‌ ಆಫ್‌ ಇಂಡಿಯಾ ಪ್ರಕಾರ ಚಿನ್ನದ ಆಭರಣಗಳು ಮತ್ತು ಕಲಾಕೃತಿಗಳಿಗೆ ಮಾತ್ರ ಹಾಲ್‌ ಮಾರ್ಕ್‌ ಕಡ್ಡಾಯವಾಗಿ ಅಗತ್ಯ. 999/995 ಶುದ್ಧತೆಯ ಬಂಗಾರದ ನಾಣ್ಯಕ್ಕೆ ಬಿಐಎಸ್‌ ಅನುಮೋದಿತ ರಿಫೈನರಿಗಳಲ್ಲಿ ಹಾಲ್‌ ಮಾರ್ಕ್‌ ನೀಡಬಹುದು. ಬ್ಯೂರೊ ಸ್ಟ್ಯಾಂಡರ್ಡ್‌ ಆಫ್‌ ಇಂಡಿಯಾ ವೆಬ್‌ಸೈಟ್‌ನಲ್ಲಿ ಮಾನ್ಯತೆ ಪಡೆದಿರುವ ರಿಫೈನರಿ ವಿವರವನ್ನು ಪಡೆಯಬಹುದು. BIS website www.bis.gov.in

ಏನಿದು ಹಾಲ್‌ ಮಾರ್ಕ್?

ಎಚ್‌ಯುಐಡಿ ಸಂಖ್ಯೆ 6 ಅಂಕಿಗಳ ಕೋಡ್.‌ (Alphnumeric code) ಹಾಲ್‌ ಮಾರ್ಕ್‌ ಅನ್ನು ಮಾಡುವ ಸಂದರ್ಭ ಪ್ರತಿ ಆಭರಣಕ್ಕೂ ಇದನ್ನು ನೀಡಲಾಗುತ್ತದೆ. ಹಾಗೂ ಇದು ಪ್ರತಿಯೊಂದು ಆಭರಣಕ್ಕೂ ಭಿನ್ನವಾಗಿರುತ್ತದೆ. ಹಾಲ್‌ ಮಾರ್ಕಿಂಗ್‌ ಸೆಂಟರ್‌ನಲ್ಲಿ (Assaying & Hallmarking centre) ಹಾಲ್‌ ಮಾರ್ಕ್‌ ಗುರುತನ್ನು ಹಾಕಲಾಗುತ್ತದೆ. ಇಲಾಖೆಯ ಪ್ರಕಾರ ಹಾಲ್‌ ಮಾರ್ಕ್‌ ಗುರುತಿನಿಂದಾಗಿ ವೈಯಕ್ತಿಕ ಚಿನ್ನಾಭರಣವನ್ನು ಸುಲಭವಾಗಿ ಗುರುತಿಸಬಹುದು. ಪರಿಶುದ್ಧತೆಯನ್ನು ಅಳೆಯಲು ಇದುವೇ ಮಾನದಂಡ. ಗುಣಮಟ್ಟಕ್ಕೆ ಇದು ಖಾತರಿ ನೀಡುತ್ತದೆ.

HUID ಆಧರಿತ ಹಾಲ್‌ ಮಾರ್ಕ್‌ ಪದ್ಧತಿಯಲ್ಲಿ ತನ್ನಿಂತಾನೆ ಜ್ಯುವೆಲ್ಲರಿಗಳ ನೋಂದಣಿಯಾಗುತ್ತದೆ. ಚಿನ್ನದ ಮಾರಾಟದಲ್ಲಿ ಅಕ್ರಮ ನಡೆಯುವುದನ್ನು, ಗುಣಮಟ್ಟ ಮತ್ತು ಪಾರದರ್ಶಕತೆಯ ಕೊರತೆಯಾಗುವುದನ್ನು ಇದರಿಂದ ನಿವಾರಿಸಬಹುದು. ಹೀಗಾಗಿ ಇದು ಉದ್ದಿಮೆ ಮತ್ತು ಗ್ರಾಹಕ ಸ್ನೇಹಿ ನಿರ್ಧಾರ ಎಂದು ಸರ್ಕಾರ ತಿಳಿಸಿದೆ.

ಬ್ಯೂರೊ ಆಫ್‌ ಇಂಡಿಯನ್‌ ಸ್ಟ್ಯಾಂಡರ್ಸ್ಸ್‌ (Bureau of Indian Standards -BIS) ಮಾನ್ಯತೆ ಪಡೆದಿರುವ ಸಂಸ್ಥೆಯ ಮೂಲಕ ಹಾಲ್‌ ಮಾರ್ಕ್‌ ನೀಡುವುದರಿಂದ ಆಭರಣಗಳ ಗುಣಮಟ್ಟ ಮತ್ತು ಪರಿಶುದ್ಧತೆಯ ಖಾತರಿಗೆ ಸಹಾಯಕ. ಯಾವುದೇ ವಂಚನೆ ಆಗದಂತೆ ನೋಡಿಕೊಳ್ಳಲು ಹಾಲ್‌ ಮಾರ್ಕ್‌ ಅನ್ನು ಪರಿಶೀಲಿಸಿ ಆಭರಣಗಳನ್ನು ಖರೀದಿಸುವುದು ಸೂಕ್ತ.

ಹಾಲ್‌ ಮಾರ್ಕ್‌ನಲ್ಲಿ ಏನೇನಿದೆ?

ಬಿಐಎಸ್‌ ಹಾಲ್‌ ಮಾರ್ಕ್‌ನಲ್ಲಿ 3 ಸಂಕೇತಗಳು ಇರುತ್ತವೆ. BIS ಲೋಗೊ ಆಭರಣದ ಪರಿಶುದ್ಧತೆ ಗುಣಮಟ್ಟವನ್ನು ಖಾತರಿಪಡಿಸುತ್ತದೆ. ಯಾವುದೇ ಚಿನ್ನದ ಆಭರಣವು 100% ಬಂಗಾರದಲ್ಲಿ ತಯಾರಾಗುವುದಿಲ್ಲ. ಏಕೆಂದರೆ ಸ್ವತಃ ಚಿನ್ನ ಅತ್ಯಂತ ಮೆದು. ಆದ್ದರಿಂದ ಇತರ ಲೋಹಗಳನ್ನು ಸೇರಿಸಿ ಆಭರಣಗಳ ಆಕಾರವನ್ನು ನೀಡಬೇಕಾಗುತ್ತದೆ. ಹೆಚ್ಚು ಚಿನ್ನ ಇರುವ ಆಭರಣ ಹೆಚ್ಚು ದುಬಾರಿಯಾಗಿರುತ್ತದೆ.

ಹಾಲ್‌ ಮಾರ್ಕ್‌ ಆಭರಣಗಳಲ್ಲಿ ಮೂರು ವಿಧಗಳು ಇರುತ್ತವೆ. 22K916 ಎಂದರೆ 22 ಕ್ಯಾರಟ್‌ ಚಿನ್ನ ಮತ್ತು 91.6 ಪರ್ಸೆಂಟ್‌ ಬಂಗಾರ ಇರುತ್ತದೆ. 18K750 ಎಂದರೆ 18 ಕ್ಯಾರಟ್‌ ಚಿನ್ನ ಮತ್ತು 75 ಪರ್ಸೆಂಟ್‌ ಚಿನ್ನ ಇರುತ್ತದೆ. 14K585 ಎಂದರೆ 14 ಕ್ಯಾರಟ್‌ ಬಂಗಾರ ಮತ್ತು 58.5 ಪರ್ಸೆಂಟ್‌ ಬಂಗಾರ ಇರುತ್ತದೆ.

ಹಳೆಯ ಚಿನ್ನದ ಆಭರಣಗಳಿಗೆ ಹಾಲ್‌ ಮಾರ್ಕ್‌ ಪಡೆಯುವುದು ಹೇಗೆ?

ನಿಮ್ಮಲ್ಲಿ ಹಾಲ್‌ ಮಾರ್ಕ್‌ ಇಲ್ಲದಿರುವ ಹಳೆಯ ಆಭರಣಗಳು ಇವೆ ಎಂದಿಟ್ಟುಕೊಳ್ಳೋಣ. ಅವುಗಳಿಗೆ ಹಾಲ್‌ ಮಾರ್ಕ್‌ ಹೇಗೆ ಪಡೆಯಬಹುದು ಎನ್ನುತ್ತೀರಾ? ಅದಕ್ಕೂ ಅವಕಾಶ ಕಲ್ಪಿಸಲಾಗಿದೆ. ಬಿಐಎಸ್‌ ನೋಂದಾಯಿತ ಜ್ಯುವೆಲ್ಲರ್‌ ಅನ್ನು (BIS registered Jeweller) ನೀವು ಇದಕ್ಕಾಗಿ ಸಂಪರ್ಕಿಸಬಹುದು. ಅವರು ನಿಮ್ಮ ಆಭರಣಗಳನ್ನು ಬಿಐಎಸ್‌ ಮಾನ್ಯತೆ ಪಡೆದ A&H ಸೆಂಟರ್‌ನಲ್ಲಿ ಪರೀಕ್ಷಿಸಬಹುದು. ಅಲ್ಲಿ ಆಭರಣದ ಪರಿಶುದ್ಧತೆಯ ಅನುಸಾರ ಹಾಲ್‌ ಮಾರ್ಕ್‌ ಗುರುತನ್ನು ಪಡೆಯಬಹುದು. ಆದರೆ ಪರಿಶುದ್ಧತೆಯ ದರ್ಜೆಯನ್ನು ಆಭರಣ ಹೊಂದಿರಬೇಕು. ಚಿನ್ನದ ಶುದ್ಧತೆ ಪರಿಶೀಲನೆಗೆ 200 ರೂ. ಶುಲ್ಕವಾಗುತ್ತದೆ. ಗ್ರಾಹಕರು ನೇರವಾಗಿ Assaying and Hallmarking Centre ಅನ್ನು ಸಂಪರ್ಕಿಸಿ ಚಿನ್ನಕ್ಕೆ ಹಾಲ್‌ ಮಾರ್ಕ್‌ ಪಡೆಯಲು ಆಗುವುದಿಲ್ಲ. ಬಿಐಎಸ್‌ ನೋಂದಾಯಿತ ಜ್ಯುವೆಲ್ಲರ್‌ ಮೂಲಕ ಇದು ನಡೆಯಬೇಕಾಗುತ್ತದೆ.

ಹಾಲ್‌ ಮಾರ್ಕ್‌ನಿಂದ ಲಾಭವೇನು?

ಗ್ರಾಹಕರಿಗೆ ಚಿನ್ನದ ಗುಣಮಟ್ಟದ ಬಗ್ಗೆ ಯಾವುದೇ ಆತಂಕ ಇರುವುದಿಲ್ಲ. ಹಾಲ್‌ ಮಾರ್ಕ್‌ ಇರುವ ಚಿನ್ನದ ಮರು ಮಾರಾಟದ ವೇಳೆ ಆಗಿನ ದರ ಸಿಗುತ್ತದೆ. ಬ್ಯಾಂಕ್‌ಗಳು ಮತ್ತು ಹಣಕಾಸು ಸಂಸ್ಥೆಗಳು ಇದರ ಆಧಾರದಲ್ಲಿ ಸುಲಭವಾಗಿ ಸಾಲ ನೀಡುತ್ತವೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Rave party: ರೇವ್‌ ಪಾರ್ಟಿಯಲ್ಲಿ ಹೇಮಾ, ಆಶಿ ಸೇರಿ 86 ಮಂದಿಯಿಂದ ಮಾದಕ ವಸ್ತು ಸೇವನೆ; ಬ್ಲಡ್‌ ರಿಪೋರ್ಟ್‌ ಪಾಸಿಟಿವ್‌

Rave party: ಈಗಾಗಲೇ ಪಾರ್ಟಿ ಮಾಡಿದ ಐವರನ್ನು ಬಂಧಿಸಲಾಗಿದೆ. 73 ಮಂದಿ ಪುರುಷರಲ್ಲಿ 59 ಮಂದಿ ಬ್ಲಡ್ ರಿಪೋರ್ಟ್ ಪಾಸಿಟಿವ್ ಬಂದಿದ್ದರೆ, 30 ಮಂದಿ ಯುವತಿಯರ ಪೈಕಿ 27 ಮಂದಿಯ ಬ್ಲಡ್ ರಿಪೋರ್ಟ್ ಪಾಸಿಟಿವ್ ಬಂದಿದೆ. ಹೀಗಾಗಿ ಪಾರ್ಟಿಯಲ್ಲಿ ಸೇರಿದ್ದ ಬಹುತೇಕ ಮಂದಿ ಮಾದಕ ವಸ್ತು ಸೇವನೆ ಮಾಡಿದ್ದಾರೆ. ಟಿಯರಾದ ಹೇಮಾ ಹಾಗೂ ಆಶಿ ರಾಯ್‌ ಸಹ ಮಾದಕ ವಸ್ತುಗಳನ್ನು ಸೇವಿಸಿದ್ದಾರೆಂಬುದು ಸಾಬೀತಾಗಿವೆ ಎನ್ನಲಾಗಿದೆ.

VISTARANEWS.COM


on

Rave party 86 people including Hema and Ashi consumed drugs in the rave party Blood report positive
Koo

ಬೆಂಗಳೂರು: ಮೇ 19ರ ತಡರಾತ್ರಿ ಎಲೆಕ್ಟ್ರಾನಿಕ್‌ ಸಿಟಿಯ (electronic city) ಫಾರಂ ಹೌಸ್‌ನಲ್ಲಿ (Farm house) ನಡೆದಿದ್ದ ರೇವ್‌ ಪಾರ್ಟಿಯಲ್ಲಿ (Rave party) ತೆಲುಗು ನಟಿಯರಾದ ಹೇಮಾ (Telugu actress Hema) ಹಾಗೂ ಆಶಿ ರಾಯ್ (Aashi Roy) ಒಳಗೊಂಡಂತೆ 103 ಮಂದಿ ಭಾಗಿಯಾಗಿದ್ದರು. ಇಲ್ಲಿ ಮಾದಕ ವಸ್ತುಗಳನ್ನು ಸೇವನೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಹೀಗಾಗಿ ಅಷ್ಟೂ ಮಂದಿಯನ್ನು ತಪಾಸಣೆಗೊಳಪಡಿಸಲಾಗಿತ್ತು. ಈಗ ವೈದ್ಯಕೀಯ ವರದಿ ಬಂದಿದ್ದು, ಅವರಲ್ಲಿ 86 ಮಂದಿಯ ರಿಪೋರ್ಟ್ ಪಾಸಿಟಿವ್ ಬಂದಿದೆ. ನಟಿಯರಾದ ಹೇಮಾ ಹಾಗೂ ಆಶಿ ರಾಯ್‌ ಸಹ ಮಾದಕ ವಸ್ತುಗಳನ್ನು ಸೇವಿಸಿದ್ದಾರೆಂಬುದು ಸಾಬೀತಾಗಿವೆ ಎನ್ನಲಾಗಿದೆ.

ಈಗಾಗಲೇ ಪಾರ್ಟಿ ಮಾಡಿದ ಐವರನ್ನು ಬಂಧಿಸಲಾಗಿದೆ. 73 ಮಂದಿ ಪುರುಷರಲ್ಲಿ 59 ಮಂದಿ ಬ್ಲಡ್ ರಿಪೋರ್ಟ್ ಪಾಸಿಟಿವ್ ಬಂದಿದ್ದರೆ, 30 ಮಂದಿ ಯುವತಿಯರ ಪೈಕಿ 27 ಮಂದಿಯ ಬ್ಲಡ್ ರಿಪೋರ್ಟ್ ಪಾಸಿಟಿವ್ ಬಂದಿದೆ. ಹೀಗಾಗಿ ಪಾರ್ಟಿಯಲ್ಲಿ ಸೇರಿದ್ದ ಬಹುತೇಕ ಮಂದಿ ಮಾದಕ ವಸ್ತು ಸೇವನೆ ಮಾಡಿದ್ದಾರೆ.

ವಾಸು ಎಂಬಾತನ ಬರ್ತ್‌ ಡೇ ಪಾರ್ಟಿಗಾಗಿ ಏರ್ಪಡಿಸಲಾಗಿದ್ದ ಈ ರೇವ್ ಪಾರ್ಟಿಯಲ್ಲಿ ದೊಡ್ಡ ಮಟ್ಟದ ಮಾದಕ ವಸ್ತು ಬಳಕೆ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ದೊಡ್ಡ ಪ್ರಮಾಣದಲ್ಲಿ ಎಂಡಿಎಂಎ, ಕೊಕೇನ್, ಹೈಡ್ರೋ ಗಾಂಜಾ ಪತ್ತೆಯಾಗಿದ್ದವು.

Sunset To Sun Rise victory ಶೀರ್ಷಿಕೆಯಲ್ಲಿ ಈ ರೇವ್ ಪಾರ್ಟಿಯನ್ನು ಆಯೋಜನೆ ಮಾಡಲಾಗಿತ್ತು. ಪಾರ್ಟಿಯಲ್ಲಿ ಸುಮಾರು ನೂರೈವತ್ತು ಮಂದಿ ಸೇರಿದ್ದರು. ಪೊಲೀಸ್‌ ದಾಳಿ ವೇಳೆ ಕೆಲವರು ತಪ್ಪಿಸಿಕೊಂಡು ಓಡಿದ್ದರು. ಆದರೆ, ಬಹುತೇಕ ಮಂದಿ ಸಿಕ್ಕಿಬಿದ್ದಿದ್ದರು. ಈಗ ಸಿಕ್ಕಿಬಿದ್ದವರಲ್ಲಿ ಬಹುತೇಕರ ಬ್ಲಡ್ ರಿಪೋರ್ಟ್‌ನಲ್ಲಿ ಮಾದಕ ವಸ್ತು ಸೇವನೆ ಸಂಬಂಧ ಪಾಸಿಟಿವ್ ಅಂಶ ಪತ್ತೆಯಾಗಿದೆ. ಹೀಗಾಗಿ ಪಾಸಿಟಿವ್‌ ರಿಪೋರ್ಟ್‌ ಬಂದವರಿಗೆ ಸಿಸಿಬಿ ನೋಟಿಸ್ ನೀಡಲಿದ್ದು, ಅವರನ್ನು ಕರೆಸಿ ವಿಚಾರಣೆ ನಡೆಸಲಾಗುತ್ತದೆ.

ʼರೇವ್‌ ಪಾರ್ಟಿಯಲ್ಲಿ ನಾನಿಲ್ಲʼ ಎಂದು ವಿಡಿಯೋ ಮಾಡಿದ್ದ ಹೇಮಾ!

ಈ ರೇವ್‌ ಪಾರ್ಟಿಯಲ್ಲಿ ತೆಲುಗು ನಟಿ ಹೇಮಾ ಭಾಗಿಯಾಗಿದ್ದು, ಪೊಲೀಸ್‌ ವಶದಲ್ಲಿದ್ದಾರೆ ಎಂದು ಸುದ್ದಿಯಾಗಿದ್ದಂತೆ ವಿಡಿಯೊವೊಂದನ್ನು ಮಾಡಿ ಸೋಷಿಯಲ್‌ ಮೀಡಿಯಾದಲ್ಲಿ ಅಪ್ಲೋಡ್‌ ಮಾಡಿದ್ದ ಹೇಮಾ, ನಾನು ಆ ರೇವ್‌ ಪಾರ್ಟಿಯಲ್ಲಿ ಭಾಗಿಯಾಗಲೇ ಇಲ್ಲ. ಹೈದರಾಬಾದ್‌ನ ಫಾರ್ಮ್‌ ಹೌಸ್‌ನಲ್ಲಿದ್ದೇನೆ ಎಂದು ವಿಡಿಯೊ ಸಂದೇಶವನ್ನು ಹರಿಬಿಟ್ಟಿದ್ದರು. ಆದರೆ, ಮುಜುಗರ ತಪ್ಪಿಸಲು ಅವರು ಅದೇ ಫಾರಂ ಹೌಸ್‌ನ ಒಂದು ಕಡೆ ಬಂದು ವಿಡಿಯೊ ಮಾಡಿದ್ದಾರೆ ಎಂದು ಹಲವರು ಅಂದೇ ಹೇಳಿದ್ದರು. ಹೆಬ್ಬಗೋಡಿ ಫಾರ್ಮ್ ಹೌಸ್ ಒಳಗಡೆಯೇ ವಿಡಿಯೋ ಮಾಡಿ, ತಾನು ಹೈದರಾಬಾದ್‌ ಫಾರ್ಮ್ ಹೌಸ್‌ನಲ್ಲಿದ್ದೀನಿ ಎಂದು ಸುಳ್ಳು ಹೇಳುತ್ತಿದ್ದಾರೆ ಎಂದು ಹಲವರು ವಾದಿಸಿದ್ದರು. ಈಗ ಈ ಸಂಬಂಧ ಪೊಲೀಸರಿಗೆ ಬಂದಿರುವ ರಿಪೋರ್ಟ್‌ ವೈರಲ್‌ ಆಗಿದ್ದು, ಅವರು ಸಹ ಮಾದಕ ವಸ್ತು ಸೇವನೆ ಮಾಡಿರುವುದು ಸಾಬೀತಾಗಿದೆ ಎಂದು ತಿಳಿದುಬಂದಿದೆ.

ಕಮೋಡ್‌ನಲ್ಲಿ ಫ್ಲಶ್‌ ಮಾಡಿದರು!

ಸಿಸಿಬಿ ಪೊಲೀಸರು ದಾಳಿ ಮಾಡಿದ ಸಂದರ್ಭದಲ್ಲಿ ಪಾರ್ಟಿ ಆಯೋಜಕರು ಸ್ಥಳದ ಡೋರ್‌ಲಾಕ್ ಮಾಡಿಕೊಂಡಿದ್ದಲ್ಲದೆ, ಎಂಡಿಎಂಎ ಮತ್ತು ಇನ್ನಿತರೆ ಮಾದಕ ವಸ್ತುಗಳನ್ನು ಸಿಕ್ಕಸಿಕ್ಕಲ್ಲಿ ಎಸೆದಿದ್ದರು. ಪೊಲೀಸರು ಎಂದು ಗೊತ್ತಾಗುತ್ತಿದ್ದಂತೆ ಓಡಿಹೋಗಲು ಯತ್ನಿಸಿದ್ದರು. ಡ್ರಗ್ಸ್‌ ಅನ್ನು ಬಾತ್ ರೂಂನ ಕಮೋಡ್‌ನಲ್ಲಿ ಹಾಕಿ ಫ್ಲಶ್ ಮಾಡಿದ್ದರು.. ಪೊಲೀಸರು ಬಲವಂತವಾಗಿ ಡೋರ್ ತೆಗಿಸಿ ಒಳಹೋಗಿದ್ದು, ಫಾರ್ಮ್ ಹೌಸ್‌ನ ಇಂಚಿಂಚನ್ನೂ ಜಾಲಾಡಿದ್ದರು.

3 ಜನ ಡ್ರಗ್ ಪೆಡ್ಲರ್‌ಗಳು, ಆಯೋಜಕ ವಾಸು ಸೇರಿ ಐದು ಜನರನ್ನು ಅಂದೇ ಪೊಲೀಸರು ಬಂಧಿಸಿದ್ದರು. ಪಾರ್ಟಿಯಲ್ಲಿ ಡ್ರಗ್ ಪೆಡ್ಲರ್‌ಗಳೂ ಭಾಗಿಗಳಾಗಿದ್ದರು. ಇವರು ಯಥೇಚ್ಛವಾಗಿ ಮಾದಕ ವಸ್ತುಗಳನ್ನು ಪೂರೈಸುತ್ತಿದ್ದರು. ವಾಸು ಹುಟ್ಟಿದ ಹಬ್ಬಕ್ಕೆ ಪಾರ್ಟಿ ಆಯೋಜಿಸಿದ ಆರ್ಗನೈಸರ್ ಅರುಣ್, ಸಿದ್ಧಿಕಿ, ರಣಬೀರ್, ನಾಗಬಾಬುರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದರು. ಮಾದಕ ವಸ್ತು ಸಿಕ್ಕಿದಂತಹ ಐಷಾರಾಮಿ ಮರ್ಸಿಡಿಸ್‌ ಬೆಂಜ್‌, ರೇಂಜ್ ರೋವರ್, ಆಡಿ ಕಾರುಗಳನ್ನು ವಶಕ್ಕೆ ಪಡೆಯಲಾಗಿತ್ತು.

ಎಂಟ್ರಿಗೆ ಪಾಸ್‌ವರ್ಡ್‌ ನೀಡಿದ್ದ ವಾಸು

ಪಾರ್ಟಿ ಆಯೋಜಕ, ಆರೋಪಿ ವಾಸು ಪೊಲೀಸರಿಂದ ಬಚಾವಾಗಲು ʼನಾನು ಪಾರ್ಟಿಗೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಅನುಮತಿ ಪಡೆದಿದ್ದೇನೆಂದುʼ ಸುಳ್ಳು ಹೇಳಿಕೆ ನೀಡಿದ್ದ. ಆದರೆ, ಫಾರ್ಮ್ ಹೌಸ್ ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿದೆ. ಪಾರ್ಟಿಗೆ ಬಂದವರು ಫಾರ್ಮ್ ಹೌಸ್ ಒಳಗೆ ಹೋಗಬೇಕಾದರೆ ಸೆಕ್ಯೂರಿಟಿಗೆ ಪಾಸ್ ವರ್ಡ್ ಹೇಳಬೇಕಿತ್ತು. ವಾಸು ನೀಡಿದ ಪಾಸ್‌ವರ್ಡ್ ಹೇಳಿದರೆ ಮಾತ್ರ ಒಳಗೆ ಎಂಟ್ರಿಯಾಗಬಹುದಿತ್ತು. ಡ್ರಗ್ ಪಾರ್ಟಿ ಹಿನ್ನೆಲೆಯಲ್ಲಿ ಬೇರೆ ಯಾರೂ ಬಾರದಿರಲಿ ಎಂಬ ಕಾರಣಕ್ಕೆ ವಾಸು ಪಾಸ್‌ವರ್ಡ್ ನೀಡಿದ್ದ.

ಮಾದಕ ವಸ್ತುಗಳ ವಶಕ್ಕೆ

ಫಾರಂ ಹೌಸ್‌ನಲ್ಲಿ ಸದ್ಯ ಭಾರಿ ಪ್ರಮಾಣದಲ್ಲಿ ಎಂಡಿಎಂಎ, ಕ್ಯಾಪ್ಸೂಲ್, ಕೊಕೇನ್ ಇತ್ಯಾದಿ ಮಾದಕ ವಸ್ತುಗಳು ದೊರೆತಿದ್ದವು. 45 ಗ್ರಾಂನಷ್ಟು ಡ್ರಗ್ ವಶಕ್ಕೆ ಪಡೆಯಲಾಗಿತ್ತು. 1 ಗ್ರಾಂ ಕೊಕೇನ್‌ಗೆ 8ರಿಂದ 9 ಸಾವಿರ ರೂ. ದರವಿದೆ. ಇಂತಹ ಕೊಕೇನ್ ಭಾರಿ ಪ್ರಮಾಣದಲ್ಲಿ ಪಾರ್ಟಿಯಲ್ಲಿ ಪತ್ತೆಯಾಗಿದೆ. ಸದ್ಯ ಸಿಕ್ಕಿರುವ ಡ್ರಗ್ಸ್‌ನ ಮೌಲ್ಯ ಪರಿಶೀಲನೆಯನ್ನು ಸಿಸಿಬಿ ನಡೆಸುತ್ತಿದೆ.

ಇದನ್ನೂ ಓದಿ: Prajwal Revanna Case: ತಾಳ್ಮೆ ಪರೀಕ್ಷಿಸಬೇಡ, ಈಗಲೇ ಬಂದು ಶರಣಾಗು; ಪ್ರಜ್ವಲ್‌ಗೆ ದೇವೇಗೌಡರ ವಾರ್ನಿಂಗ್‌

ನಟಿ ಆಶಿ ರಾಯ್ ಹೇಳಿದ್ದೇನು?

ಈ ಪಾರ್ಟಿಯಲ್ಲಿ ಭಾಗಿಯಾಗಿದ್ದ ಆಶಿ ರಾಯ್‌ ಸಹ ವಿಡಿಯೊವೊಂದನ್ನು ಮಾಡಿ ಸ್ಪಷ್ಟನೆ ನೀಡಿದ್ದಾರೆ. ʻʻಅದೊಂದು ಬರ್ತ್‌ಡೇ ಪಾರ್ಟಿಯಾಗಿತ್ತು. ಒಳಗೆ ಏನು ನಡೀತಿತ್ತು ಎಂದು ಗೊತ್ತಿಲ್ಲ. ನಾನು ಯಾವುದೇ ತಪ್ಪು ಮಾಡಿಲ್ಲ. ದಯವಿಟ್ಟು ನೀವೆಲ್ಲ ನನ್ನ ಬೆಂಬಲಿಸಿ. ನಾನು ಕಷ್ಟಪಟ್ಟು ಉದ್ಯಮದಲ್ಲಿ ಬೆಳೆಯುತ್ತಿರುವ ಹುಡುಗಿ. ದಯವಿಟ್ಟು ನನಗೆ ಸಹಾಯ ಮಾಡಿʼʼ ಎಂದು ವಿಡಿಯೊವನ್ನು ಹಂಚಿಕೊಂಡಿದ್ದರು. ಆಶಿ ರಾಯ್‌ ಹಲವು ಸಂದರ್ಶನದಲ್ಲಿ ಪಾರ್ಟಿಯಲ್ಲಿ ಹೇಮಾ ಅವರನ್ನು ನೋಡಿಲ್ಲ ಎಂದಿದ್ದಾರೆ. ಆಶಿರಾಯ್‌ ಅವರು ಹಲವು ತೆಲುಗು ಸಿನಿಮಾಗಳಲ್ಲಿ ನಟಿಸಿದ್ದಾರೆ.

Continue Reading

ಪ್ರಮುಖ ಸುದ್ದಿ

Glenn Maxwell : ಮ್ಯಾಕ್ಸ್​​ವೆಲ್​ಗೆ ಕೊಟ್ಟ ಹಣ ವಾಪಸ್​ ಪಡೆಯಿರಿ; ಅಭಿಮಾನಿಗಳ ಒತ್ತಾಯ

Glenn Maxwell : ಮ್ಯಾಕ್ಸ್​ವೆಲ್​ ಗೋಲ್ಡನ್ ಡಕ್‌ ಆಗುವ ಮೂಲಕ ಮತ್ತೊಂದು ಬಾರಿ ಬೇಜವಾಬ್ದಾರಿ ಆಟವಾಡಿದರು. ಈ ವಿರುದ್ಧದ ವೈಫಲ್ಯವು ಐಪಿಎಲ್​ 2024ರಲ್ಲಿ ಗ್ಲೆನ್ ಮ್ಯಾಕ್ಸ್‌ವೆಲ್ ಅವರ ಮರೆಯಲಾಗದ ಅಭಿಯಾನನವಾಗಿದೆ. ಈ ಋತುವಿನ 10 ಪಂದ್ಯಗಳಲ್ಲಿ ಆಸ್ಟ್ರೇಲಿಯಾದ ಆಲ್‌ರೌಂಡರ್ 28 ರ ಗರಿಷ್ಠ ಸ್ಕೋರ್‌ನೊಂದಿಗೆ ಕೇವಲ 52 ರನ್ ಗಳಿಸಿದ್ದಾರೆ. ಅವರು ನಾಲ್ಕು ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ.

VISTARANEWS.COM


on

Glenn Maxwell
Koo

ಅಹಮದಾಬಾದ್‌: ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಬುಧವಾರ (ಮೇ 22) ನಡೆದ ಐಪಿಎಲ್​ 2024 (IPL 2024) ಎಲಿಮಿನೇಟರ್‌ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bangalore) ಸೋಲುಕಂಡಿತು. ಇದರೊಂದಿಗೆ ಆರ್​ಸಿಬಿಯ ಅಭಿಯಾನ ಕೊನೆಗೊಂಡಿತು. ಸೋಲಿನ ನಡುವೆಯೂ ಹೆಚ್ಚು ಚರ್ಚೆಗೆ ಒಳಗಾಗಿದ್ದು ಐಪಿಎಲ್ 2024 ರಲ್ಲಿ ಗ್ಲೆನ್ ಮ್ಯಾಕ್ಸ್‌ವೆಲ್ (Glenn Maxwell) ಅವರ ಕೆಟ್ಟ ಅಭಿಯಾನ.

ಆರ್​​ಸಿಬಿ ತನ್ನ ಹಿಂದಿನ ಲೀಗ್​ ಹಂತದ ಆರು ಪಂದ್ಯಗಳಲ್ಲಿ ಮೇಲುಗೈ ಸಾಧಿಸಿದ ನಂತರ ಎಲಿಮಿನೇಟರ್​ನಲ್ಲಿ ಗೆಲ್ಲುವ ನೆಚ್ಚಿನ ತಂಡವಾಗಿತ್ತು. ಮತ್ತೊಂದೆಡೆ, ರಾಜಸ್ಥಾನ್​ ತನ್ನ ಹಿಂದಿನ ನಾಲ್ಕು ಪಂದ್ಯಗಳನ್ನು ಕಳೆದುಕೊಂಡಿತ್ತು. ಮೇ ತಿಂಗಳಲ್ಲಿ ಒಂದೇ ಒಂದು ಪಂದ್ಯವನ್ನು ಗೆದ್ದಿರಲಿಲ್ಲ. ಹೀಗಾಗಿ ಆರ್​​ಸಿಬಿ ಫೇವರಿಟ್​ ಆಗಿತ್ತು. ಆದಾಗ್ಯೂ, ಸಂಜು ಸ್ಯಾಮ್ಸನ್ ನೇತೃತ್ವದ ಆರ್‌ಸಿಬಿಯನ್ನು ನಾಲ್ಕು ವಿಕೆಟ್‌ಗಳಿಂದ ಸೋಲಿಸಿ ಎರಡನೇ ಕ್ವಾಲಿಫೈಯರ್‌ನಲ್ಲಿ ತಮ್ಮ ಸ್ಥಾನ ಕಾಯ್ದಿರಿಸಿತು.

ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ 20 ಓವರ್‌ಗಳಲ್ಲಿ 8 ವಿಕೆಟ್‌ಗೆ 172 ರನ್ ಗಳಿಸಿತು. ಆರ್​ಸಿಬಿ ಬ್ಯಾಟರ್‌ಗಳು ಉತ್ತಮ ಆರಂಭ ಪಡೆದರೂ ಅವರಲ್ಲಿ ಯಾರೂ ದೊಡ್ಡ ಸ್ಕೋರ್ ಆಗಿ ಪರಿವರ್ತಿಸಲಿಲ್ಲ. ರಜತ್ ಪಾಟಿದಾರ್ 34 ರನ್ ಗಳಿಸಿದ್ದೇ ಗರಿಷ್ಠ. ಉತ್ತರವಾಗಿ, ಆರ್​ಆರ್​ 19 ಓವರ್‌ಗಳಲ್ಲಿ ಮೊತ್ತವನ್ನು ಬೆನ್ನಟ್ಟಿ ಎರಡನೇ ಕ್ವಾಲಿಫೈಯರ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್‌ನೊಂದಿಗಿನ ಹಣಾಹಣಿಯನ್ನು ನಿಕ್ಕಿ ಮಾಡಿಕೊಂಡಿತು.

ಆರ್​ಸಿಬಿ ತಂಡ ತಮ್ಮ ಅಭಿಯಾನವನ್ನು ಪರಿವರ್ತಿಸಿದ ರೀತಿ ಮತ್ತು ಎಲ್ಲಾ ಅಡೆತಡೆಗಳನ್ನು ಮೀರಿ ಪ್ಲೇಆಫ್‌ಗೆ ಅರ್ಹತೆ ಗಳಿಸಿದ್ದಕ್ಕಾಗಿ ಹಲವಾರು ಕಡೆಗಳಿಂದ ಪ್ರಶಂಸೆ ಪಡೆಯುತ್ತಿದ್ದರೆ, ಗ್ಲೆನ್ ಮ್ಯಾಕ್ಸ್‌ವೆಲ್ ಎಲ್ಲೆಡೆಯಿಂದ ತೀವ್ರ ಟೀಕೆ ಎದುರಿಸುತ್ತಿದ್ದಾರೆ. ಅವರಿಗೆ ಕೊಟ್ಟಿರುವ ಕೋಟ್ಯಂತರ ರೂಪಾಯಿ ವಾಪಸ್​ ಪಡೆಯಿರಿ ಎಂಬುದಾಗಿ ಒತ್ತಾಯ ಕೇಳಿ ಬಂದಿದೆ.

ಎಲಿಮಿನೇಟರ್‌ನಲ್ಲಿ ಆರ್​ಆರ್​ ವಿರುದ್ಧ ಉತ್ತಮ ಪ್ರದರ್ಶನ ನೀಡುವ ಮೂಲಕ ಆಸ್ಟ್ರೇಲಿಯನ್ ಆಟಗಾರನಿಗೆ ತನ್ನನ್ನು ಸಮರ್ಥಿಸಿಕೊಳ್ಳುವ ಅವಕಾಶ ಇತ್ತು. ಆದರೆ ಅವರು ಗೋಲ್ಡನ್ ಡಕ್‌ ಆಗುವ ಮೂಲಕ ಮತ್ತೊಂದು ಬಾರಿ ಬೇಜವಾಬ್ದಾರಿ ಆಟವಾಡಿದರು. ಈ ವಿರುದ್ಧದ ವೈಫಲ್ಯವು ಐಪಿಎಲ್​ 2024ರಲ್ಲಿ ಗ್ಲೆನ್ ಮ್ಯಾಕ್ಸ್‌ವೆಲ್ ಅವರ ಮರೆಯಲಾಗದ ಅಭಿಯಾನನವಾಗಿದೆ. ಈ ಋತುವಿನ 10 ಪಂದ್ಯಗಳಲ್ಲಿ ಆಸ್ಟ್ರೇಲಿಯಾದ ಆಲ್‌ರೌಂಡರ್ 28 ರ ಗರಿಷ್ಠ ಸ್ಕೋರ್‌ನೊಂದಿಗೆ ಕೇವಲ 52 ರನ್ ಗಳಿಸಿದ್ದಾರೆ. ಅವರು ನಾಲ್ಕು ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ.

ಮನೋಜ್ ತಿವಾರಿ ವಾಗ್ದಾಳಿ

ಗ್ಲೆನ್ ಮ್ಯಾಕ್ಸ್‌ವೆಲ್ ಆರ್‌ಆರ್ ವಿರುದ್ಧ ಭಾರತದ ಮಾಜಿ ಬ್ಯಾಟ್ಸ್‌ಮನ್ ಮನೋಜ್ ತಿವಾರಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಋತುವಿನಲ್ಲಿ ಮ್ಯಾಕ್ಸ್‌ವೆಲ್ ಅವರ ಪ್ರದರ್ಶನವನ್ನು ತಿವಾರಿ ತೀವ್ರವಾಗಿ ಟೀಕಿಸಿದ್ದಲ್ಲದೆ, ಫ್ರಾಂಚೈಸಿಗೆ ಅವರ ಬದ್ಧತೆ ಏನೆಂದು ಪ್ರಶ್ನಿಸಿದ್ದಾರೆ.

ಮ್ಯಾಕ್ಸ್‌ವೆಲ್ ಆಸ್ಟ್ರೇಲಿಯಾ ಪರ ಉತ್ತಮ ಪ್ರದರ್ಶನ ನೀಡುತ್ತಿದ್ದರೂ, ಆರ್‌ಸಿಬಿಗೆ ಅದೇ ಪ್ರದರ್ಶನವನ್ನು ಪುನರಾವರ್ತಿಸುವುದಿಲ್ಲ ಯಾಕೆ ಎಂದು ತಿವಾರಿ ಪ್ರಶ್ನಿಸಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ನಿಮಗೆ ತುಂಬಾ ಅನುಭವವಿದೆ. ನೀವು ಆಸ್ಟ್ರೇಲಿಯಾ ಪರ ಆಡಿದಾಗ ನೀವು ತುಂಬಾ ಉತ್ತಮ ಪ್ರದರ್ಶನ ನೀಡುತ್ತೀರಿ. ಆದರೆ ನೀವು ಐಪಿಎಲ್‌ಗೆ ಬಂದ ತಕ್ಷಣ ಏನಾಗುತ್ತೋ ಗೊತ್ತಿಲ್ಲ. ಅವರಿಗೆ ಆಸಕ್ತಿಯಿರುವುದಿಲ್ಲ ಎಂದು ತಿವಾರಿ ಹೇಳಿದ್ದಾರೆ.

ಮ್ಯಾಕ್ಸ್​​ವೆಲ್ ಆಡದಿದ್ದರೂ ಪರ್ವಾಗಿಲ್ಲ. ಅವರ ಬ್ಯಾಂಕ್ ಬ್ಯಾಲೆನ್ಸ್ ಚೆನ್ನಾಗಿದೆ. ಚೆಕ್ ಅವರಿಗೆ ತಲುಪುತ್ತದೆ. ಅವರು ರಾತ್ರಿಯಲ್ಲಿ ಗೆಟ್-ಟುಗೆದರ್ ಮಾಡುತ್ತಾರೆ. ನಗುತ್ತಾರೆ ಮತ್ತು ಫೋಟೋಗಳನ್ನು ಕ್ಲಿಕ್ ಮಾಡಿಸಿಕೊಳ್ಳುತ್ತಾರೆ ಎಂದು ತಿವಾರಿ ಕ್ರಿಕ್‌ಬಜ್‌ಗೆ ಮಾತನಾಡುತ್ತಾ ಆರೋಪಿಸಿದ್ದಾರೆ.

ಇದನ್ನೂ ಓದಿ: IPL 2024: ಮುಂದಿನ ಆವೃತ್ತಿಯಲ್ಲಿ ಕೊಹ್ಲಿ ಈ ಫ್ರಾಂಚೈಸಿ ಪರ ಆಡಿದರೆ ಉತ್ತಮ ಎಂದ ಆರ್​ಸಿಬಿ ಮಾಜಿ ನಾಯಕ

ಆರ್‌ಸಿಬಿ ಆರಂಭದಲ್ಲಿ ಉತ್ತಮವಾಗಿ ಪ್ರದರ್ಶನ ನೀಡದೇ ಹೋದಾಗ ನಾವು ಇಲ್ಲಿ ಕುಳಿತು ವಿಶ್ಲೇಷಿಸುತ್ತಿದ್ದೆವು. ಆದರೆ, ಕೊನೆಯಲ್ಲಿ, ಅವರು ಆರು ಗೆಲುವ ಕಂಡರು. ಅದಕ್ಕಾಗಿ ಅವರು ಸಂತೋಷಪಡಬಹುದು. ಆದರೂ ಅಂತಿಮ ಫಲಿತಾಂಶವು ಟ್ರೋಫಿಯಾಗಿರುತ್ತದೆ. ಹೀಗಾಗಿ ತಂಡದಲ್ಲಿ ಸಮಸ್ಯೆ ಇದೆ, ”ಎಂದು ತಿವಾರಿ ಹೇಳಿದ್ದಾರೆ.

ಮ್ಯಾಕ್ಸ್‌ವೆಲ್ ಮುಂಬರುವ ಟಿ20 ವಿಶ್ವಕಪ್ 2024ರಲ್ಲಿ ಆಸ್ಟ್ರೇಲಿಯಾ ತಂಡದ ಪರವಾಗಿ ಕಾಣಿಸಿಕೊಳ್ಳಲಿದ್ದಾರೆ. ಅಲ್ಲಿ ಅವರು ಹೇಗೆ ಪ್ರದರ್ಶನ ನೀಡುತ್ತಾರೆ ಎಂದು ಕಾದು ನೋಡಬೇಕು.

Continue Reading

ಸಿನಿಮಾ

‘ಸ್ಟಾರ್‌’ ಸಿನಿಮಾಗಳಿಲ್ಲದ ಕಾರಣ ಚಿತ್ರಮಂದಿರಗಳ ಬಂದ್‌ಗೆ ಚಿಂತನೆ;‌ ನಿರ್ಮಾಪಕರಿಂದ ಭಾರಿ ಆಕ್ರೋಶ!

ಐಪಿಎಲ್‌ ಅಬ್ಬರ, ಲೋಕಸಭೆ ಚುನಾವಣೆ ಭರಾಟೆ ಸೇರಿ ಹಲವು ಕಾರಣಗಳಿಂದ ಆಂಧ್ರಪ್ರದೇಶದಲ್ಲಿ ಕೆಲವು ದಿನಗಳ ಹಿಂದೆ ಚಿತ್ರಮಂದಿರಗಳನ್ನು ತಾತ್ಕಾಲಿಕವಾಗಿ ಬಂದ್‌ ಮಾಡಲಾಗಿತ್ತು. ಇದೇ ರೀತಿ ಕರ್ನಾಟಕದಲ್ಲೂ ತಾತ್ಕಾಲಿಕವಾಗಿ ಸಿಂಗ್‌ ಸ್ಕ್ರೀನ್‌ ಥಿಯೇಟರ್‌ಗಳನ್ನು ಬಂದ್ ಮಾಡಬೇಕು ಎಂಬ ಚಿಂತನೆ ನಡೆದಿತ್ತು. ಆದರೆ, ಇದಕ್ಕೆ ಸ್ಯಾಂಡಲ್‌ವುಡ್‌ ನಿರ್ಮಾಪಕರು ವಿರೋಧ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Theatre
Koo

ಬೆಂಗಳೂರು: ಐಪಿಎಲ್‌ (IPL), ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ತೆಲಂಗಾಣದಲ್ಲಿ ಒಂದು ತಿಂಗಳು ಚಿತ್ರಮಂದಿರಗಳನ್ನು ಮುಚ್ಚುವ ನಿರ್ಧಾರ ತೆಗೆದುಕೊಂಡಿತ್ತು. ಇದರಂತೆ, ಐಪಿಎಲ್‌, ಚುನಾವಣೆ ಜತೆಗೆ ಸ್ಟಾರ್‌ ನಟರ ಸಿನಿಮಾಗಳ ಬಿಡುಗಡೆ ಇಲ್ಲದ ಕಾರಣ ಕರ್ನಾಟಕದಲ್ಲೂ (Karnataka) ಒಂದು ತಿಂಗಳು ಚಿತ್ರಮಂದಿರಗಳನ್ನು ಮುಚ್ಚಬೇಕು ಎಂಬ ಚಿಂತನೆ ನಡೆದಿದೆ. ಇದರ ಬೆನ್ನಲ್ಲೇ, ಫಿಲಂ ಚೇಂಬರ್‌ನಲ್ಲಿ (Film Chamber) ನಿರ್ಮಾಪಕರ ಸಭೆ ನಡೆದಿದ್ದು, ಥಿಯೇಟರ್‌ಗಳನ್ನು (Theatres) ಮುಚ್ಚುವ ಚಿಂತನೆಗೆ ಭಾರಿ ಆಕ್ರೋಶ ವ್ಯಕ್ತವಾಗಿದೆ.

ಫಿಲಂ ಚೇಂಬರ್‌ ಅಧ್ಯಕ್ಷ ಎನ್‌.ಎಂ.ಸುರೇಶ್‌ ನೇತೃತ್ವದಲ್ಲಿ ಹೈವೋಲ್ಟೇಜ್ ಸಭೆ ನಡೆದಿದೆ. “ಕನ್ನಡ ಚಿತ್ರರಂಗದ ಕುರಿತು ಇಷ್ಟು ದಿನಗಳಲ್ಲಿ ಈಗ ಸಭೆಯಾಗುತ್ತಿರುವುದು ಒಳ್ಳೆಯ ವಿಚಾರ. ತೆಲಂಗಾಣದ ಪರಿಸ್ಥಿತಿ ನಮ್ಮ ಗಮನಕ್ಕಿದೆ. ಆದರೆ, ಕರ್ನಾಟಕದಲ್ಲಿ ಚಿತ್ರಮಂದಿರಗಳನ್ನು ಬಂದ್‌ ಮಾಡುವುದು ಸರಿಯಲ್ಲ. ತಾತ್ಕಾಲಿಕವಾಗಿ ಸಿಂಗ್‌ ಸ್ಕ್ರೀನ್‌ ಥಿಯೇಟರ್‌ಗಳನ್ನು ಬಂದ್‌ ಮಾಡಿದರೆ ಕನ್ನಡ ಚಿತ್ರರಂಗದ ಮೇಲೆ ಪರಿಣಾಮ ಬೀರುತ್ತದೆ. ಪ್ರದರ್ಶಕರು, ವಿತರಕರು ಹಾಗೂ ನಿರ್ಮಾಪಕರು ಸದ್ಯಕ್ಕೆ ಯಾವ ನಿರ್ಧಾರವನ್ನೂ ತೆಗೆದುಕೊಳ್ಳುವ ಪರಿಸ್ಥಿತಿಯಲ್ಲಿಲ್ಲ. ಸುಮಾರು 80ಕ್ಕೂ ಹೆಚ್ಚು ಸಿನಿಮಾಗಳಿಗೆ ರಿಲೀಸ್ ಪ್ಲಾನ್ ಮಾಡಲು ಆಗುತ್ತಿಲ್ಲ. ಸ್ಟಾರ್ ಚಿತ್ರಗಳು ಹೆಚ್ಚಾಗುವುದು ಮುಂದೆಯೂ ಅಸಾಧ್ಯ ಎಂಬಂತಿದೆ. ಥಿಯೇಟರ್‌ಗಳನ್ನು ಮುಚ್ಚಿದರೆ ಮುಂದಾಗುವ ಪರಿಣಾಮಗಳ ಬಗ್ಗೆಯೂ ಗಮನ ಇರಬೇಕು. ಹಾಗಾಗಿ, ಚಿತ್ರಮಂದಿರಗಳನ್ನು ಮುಚ್ಚಬಾರದು” ಎಂದು ನಿರ್ಮಾಪಕರು ಆಗ್ರಹಿಸಿದರು.

ಸ್ಟಾರ್‌ ನಟರ ಜತೆ ಚರ್ಚೆಗೆ ನಿರ್ಧಾರ

ಕರ್ನಾಟಕದಲ್ಲಿ ಸ್ಟಾರ್‌ ನಟರ ಸಿನಿಮಾಗಳ ಬಿಡುಗಡೆಯಾಗದಿರುವ ಕುರಿತು ಕೂಡ ಸಭೆಯಲ್ಲಿ ಚರ್ಚಿಸಲಾಯಿತು. ಇದರಿಂದ ಕನ್ನಡ ಚಿತ್ರರಂಗ ದಯನೀಯ ಸ್ಥಿತಿಗೆ ತಲುಪುವ ಕುರಿತು ಕೂಡ ಅಭಿಪ್ರಾಯ ವ್ಯಕ್ತವಾಯಿತು. ಸ್ಟಾರ್‌ ನಟರು ವರ್ಷಕ್ಕೆ ಎರಡು ಸಿನಿಮಾ ಮಾಡುವಂತೆ ಮನವಿ ಮಾಡಲು ಕೂಡ ನಿರ್ಧರಿಸಲಾಯಿತು. ಚಿತ್ರರಂಗದ ಉಳಿವು, ಮುಂದಿನ ದಿನಗಳಲ್ಲಿ ಮಾಡಬೇಕಾದ ಬದಲಾವಣೆಗಳು ಸೇರಿ ಹಲವು ವಿಷಯಗಳ ಕುರಿತು ಚರ್ಚಿಸಲಾಯಿತು.

ಬಂದ್‌ ನಿರ್ಧಾರ ನಿಲ್ಲ ಎಂದ ಎನ್.ಎಂ.ಸುರೇಶ್‌

ಸಭೆಯ ಬಳಿಕ ಮಾತನಾಡಿದ ಎನ್‌.ಎಂ.ಸುರೇಶ್‌, “ಕರ್ನಾಟಕದಲ್ಲಿ ಥಿಯೇಟರ್‌ಗಳನ್ನು ಮುಚ್ಚುವ ಕುರಿತು ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ. ಕನ್ನಡ ಚಿತ್ರರಂಗದ ಸಮಸ್ಯೆಗಳ ಕುರಿತು ಚರ್ಚಿಸಿದ್ದೇವೆ. ಕನ್ನಡ ಚಿತ್ರರಂಗದ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುತ್ತೇವೆ. ಟಿಕೆಟ್ ರೇಟ್ ಕಡಿಮೆ ಮಾಡುವುದು, ಯುಎಫ್ಒ, ಕ್ಯೂಬ್ ರೇಟ್ ಕಡಿಮೆ ಮಾಡುವ ಕುರಿತು ಸರ್ಕಾರಕ್ಕೆ ಕೋರಿಕೆ ಸಲ್ಲಿಸುತ್ತೇವೆ. ಕೇರಳದಲ್ಲಿ ಸರ್ಕಾರದ್ದೇ ಸ್ವಂತ ಒಟಿಟಿ ವ್ಯವಸ್ಥೆ ಇದೆ. ಇದು ಕರ್ನಾಟಕದಲ್ಲೂ ಜಾರಿಗೆ ಬರಬೇಕು. ಕಲಾವಿದರು ಕೂಡ ಸಹಕಾರ ನೀಡಬೇಕು. ಮೂರ್ನಾಲ್ಕು ದಿನದಲ್ಲಿ ಸ್ಟಾರ್‌ ನಟರ ಜತೆ ಸಭೆ ನಡೆಸಲಾಗುತ್ತದೆ” ಎಂದು ತಿಳಿಸಿದರು.

ಫಿಲಂ ಚೇಂಬರ್ ಅಧ್ಯಕ್ಷ ಎನ್. ಎಂ. ಸುರೇಶ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಟಗರು, UI ಚಿತ್ರಗಳ ಖ್ಯಾತಿಯ ನಿರ್ಮಾಪಕ ಕೆ.ಪಿ. ಶ್ರೀಕಾಂತ್, ಕಬ್ಜ ಖ್ಯಾತಿಯ ಆರ್. ಚಂದ್ರು, ಜಯಣ್ಣ, ತರುಣ್ ಶಿವಪ್ಪ, ಲಹರಿ ವೇಲು, ಹೊಂಬಾಳೆ ಫಿಲಮ್ಸ್‌ ಪ್ರತಿನಿಧಿ ಚಿದಾನಂದ್ ಸೇರಿ ಹಲವು ನಿರ್ಮಾಕರು ಭಾಗವಹಿಸಿದರು. ಐಪಿಎಲ್‌ ಅಬ್ಬರ, ಲೋಕಸಭೆ ಚುನಾವಣೆ ಭರಾಟೆ ಸೇರಿ ಹಲವು ಕಾರಣಗಳಿಂದ ಆಂಧ್ರಪ್ರದೇಶದಲ್ಲಿ ಕೆಲವು ದಿನಗಳ ಹಿಂದೆ ಚಿತ್ರಮಂದಿರಗಳನ್ನು ತಾತ್ಕಾಲಿಕವಾಗಿ ಬಂದ್‌ ಮಾಡಲಾಗಿತ್ತು. ಇದೇ ರೀತಿ ಕರ್ನಾಟಕದಲ್ಲೂ ತಾತ್ಕಾಲಿಕವಾಗಿ ಸಿಂಗ್‌ ಸ್ಕ್ರೀನ್‌ ಥಿಯೇಟರ್‌ಗಳನ್ನು ಬಂದ್ ಮಾಡಬೇಕು ಎಂಬ ಚಿಂತನೆ ನಡೆದಿತ್ತು.

ಇದನ್ನೂ ಓದಿ: Blink Movie: ಹಾಫ್ ಸೆಂಚುರಿ ಬಾರಿಸಿದ ʻಬ್ಲಿಂಕ್ ʼ ಸಿನಿಮಾ; ಒಟಿಟಿಯಲ್ಲಿಯೂ ʻಬಹುಪರಾಕ್ʼ!

Continue Reading

ಕ್ರೈಂ

Medical negligence: ಅವಳಿ ಮಕ್ಕಳಿಗೆ ಜನ್ಮ ನೀಡಿ ಸಾವು ಕೇಸ್‌; 30 ಲಕ್ಷ ರೂ. ಕಟ್ಟಿಸಿಕೊಳ್ಳದೆ ಮೃತದೇಹ ಹಸ್ತಾಂತರ

Medical negligence: ಬಾಣಂತಿ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಕ್ಲೌಡ್‌ನೈನ್‌ ಆಸ್ಪತ್ರೆಯ ವಿರುದ್ಧ ಆಕೆಯ ಪತಿ ಕೇಶವ್ ಮತ್ತು ಕುಟುಂಬಸ್ಥರು ಜಿಲ್ಲಾ ಆರೋಗ್ಯಾಧಿಕಾರಿಗೆ ದೂರು ನೀಡಿದ್ದಾರೆ.‌ ಕ್ಲೌಡ್‌ನೈನ್‌ ಆಸ್ಪತ್ರೆ ನಿರ್ಲಕ್ಷ್ಯದ ಬಗ್ಗೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಜನನಿ ಸಾವಿಗೆ ವೈದ್ಯರ ನಿರ್ಲಕ್ಷ್ಯ ಕಾರಣವೆಂದು ಆರೋಪಿಸಿದ್ದಾರೆ. ದೂರು ದಾಖಲಾದ ನಂತರ 2 ವೈದ್ಯರನ್ನೊಳಗೊಂಡ ತಜ್ಞರ ಸಮಿತಿಯನ್ನು ರಚನೆ ಮಾಡಲಾಗುವುದು. ಈ ಸಮಿತಿ ನೀಡುವ ವರದಿ ಆಧಾರದ ಮೇಲೆ ಆಸ್ಪತ್ರೆಯ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಆರೋಗ್ಯಾಧಿಕಾರಿ ತಿಳಿಸಿದ್ದಾರೆ.

VISTARANEWS.COM


on

Medical negligence death case due to doctor negligence Dead body handed over without paying 30 lakh rupees
Koo

ಬೆಂಗಳೂರು: ಅವಳಿ ಮಕ್ಕಳಿಗೆ ಜನ್ಮ ನೀಡಿದ ಬೆನ್ನಲ್ಲೇ ವೈದ್ಯರ ನಿರ್ಲಕ್ಷ್ಯದಿಂದ (Medical negligence) ತಾಯಿ (Mother Dies) ಮೃತಪಟ್ಟಿದ್ದಾರೆನ್ನಲಾದ ಕೇಸ್‌ಗೆ ಸಂಬಂಧಪಟ್ಟಂತೆ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಮಣಿಪಾಲ್‌ ಆಸ್ಪತ್ರೆಯಲ್ಲಿದ್ದ ಮೃತದೇಹವನ್ನು ಬಿಲ್‌ ಪಾವತಿ ಮಾಡದೆಯೇ ಕುಟುಂಬಸ್ಥರಿಗೆ ಒಪ್ಪಿಸಲಾಗಿದೆ. ಈ ಬಗ್ಗೆ ವಿಸ್ತಾರ ನ್ಯೂಸ್‌ ವರದಿಗೆ ಆಡಳಿತ ಮಂಡಳಿ ಸ್ಪಂದಿಸಿದೆ.

ಕ್ಲೌಡ್‌ನೈನ್‌ (CloudNine) ಆಸ್ಪತ್ರೆಯ ನಿರ್ಲಕ್ಷ್ಯದಿಂದ ಬಾಣಂತಿ ಮೃತಪಟ್ಟಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಜನನಿ (33) ಮೃತ ಬಾಣಂತಿಯಾಗಿದ್ದಾರೆ. ಇವರನ್ನು ನಗರದ ಕ್ಲೌಡ್‌ನೈನ್‌ ಆಸ್ಪತ್ರೆಯಲ್ಲಿ ಗರ್ಭಿಣಿಗೆ ಅವಧಿಪೂರ್ವ ಹೆರಿಗೆಯಾದ ಬಳಿಕ ಆರೋಗ್ಯ ಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಬಾಣಂತಿ ಮೃತಪಟ್ಟಿದ್ದಾರೆ. ಇದಕ್ಕೆ ಕ್ಲೌಡ್‌ನೈನ್‌ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಪ್ರತಿಭಟನೆ ನಡೆಸಿದ್ದರು.

ಕ್ಲೌಡ್‌ನೈನ್‌ (CloudNine) ಆಸ್ಪತ್ರೆಯಲ್ಲಿ ಐವಿಎಫ್‌ ಮೂಲಕ ಜನನಿ ಮತ್ತು ಕೇಶವ್ ದಂಪತಿ ಮಕ್ಕಳನ್ನು ಪಡೆದಿದ್ದರು. ಹೆರಿಗೆ ನೋವು ಕಾಣಿಸಿಕೊಂಡಿದ್ದರಿಂದ ಮೇ 2ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗಾಗಿ ದಂಪತಿ ಹೆರಿಗೆ ಪ್ಯಾಕೇಜ್ ಮಾಡಿಸಿದ್ದರು. ಜನನಿಗೆ ಅವಧಿ ಪೂರ್ವ (7.5 ತಿಂಗಳಿಗೆ) ಹೆರಿಗೆ ಆಗಿತ್ತು. ನಂತರ ಆಕೆಗೆ ಜಾಂಡೀಸ್ ಇದೆ, ಲಿವರ್ ಸಮಸ್ಯೆ ಇದೆ ಎಂದು ವೈದ್ಯರು ಹೇಳಿದ್ದರು, ಪರಿಸ್ಥಿತಿ ಗಂಭೀರವಾಗಿದ್ದರಿಂದ ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್‌ ಮಾಡಲಾಗಿತ್ತು. ಆದರೆ ಬುಧವಾರ ಬೆಳಗ್ಗೆ ಜನನಿ ಸಾವನ್ನಪ್ಪಿದ್ದರು. ಆದರೆ, ಈ ವೇಳೆ ಅವರ ಚಿಕಿತ್ಸೆಗಾಗಿ ಮಣಿಪಾಲ್‌ ಆಸ್ಪತ್ರೆಯಲ್ಲಿ 30 ಲಕ್ಷ ರೂಪಾಯಿ ಬಿಲ್‌ ಆಗಿದೆ ಎನ್ನಲಾಗಿದೆ.

ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ 30 ಲಕ್ಷ ಬಿಲ್‌ ಆಗಿದ್ದು, ಈ ಬಿಲ್ ಪಾವತಿಸಿ ಮೃತದೇಹ ತೆಗೆದುಕೊಂಡು ಹೋಗಿ ಎಂದು ಅಲ್ಲಿನ ಸಿಬ್ಬಂದಿ ಹೇಳಿದ್ದಾರೆ. ಆದರೆ, ಕ್ಲೌಡ್‌ನೈನ್‌ ಆಸ್ಪತ್ರೆಯವರ ನಿರ್ಲಕ್ಷ್ಯಕ್ಕೆ ಜನನಿ ಸಾವಾಗಿದೆ ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಬಿಲ್ ಅನ್ನು CloudNine ಆಸ್ಪತ್ರೆಯೇ ಪಾವತಿಸಬೇಕೆಂದು ಪಟ್ಟು ಹಿಡಿದಿದ್ದರು. ಈ ಬಗ್ಗೆ ಮಾಹಿತಿ ಪಡೆದು ಸ್ಥಳಕ್ಕೆ ಜೆ.ಬಿ.ನಗರ ಠಾಣೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದರು.

ಮೃತ ಜನನಿ ಪತಿ ಕೇಶವ್‌ ಪ್ರತಿಕ್ರಿಯಿಸಿ, ಕಳೆದ ತಿಂಗಳು ಪರೀಕ್ಷೆಗೆ ಬಂದಾಗ ವೈದ್ಯರು ಕೆಲವು ಮಾತ್ರೆಗಳನ್ನು ಕೊಟ್ಟಿದ್ದರು. ನಂತರ ನನ್ನ ಹೆಂಡತಿಗೆ ಕಾಲು ಊತ ಸೇರಿ ಆರೋಗ್ಯದಲ್ಲಿ ಕೆಲ ಸಮಸ್ಯೆ ಕಂಡುಬಂತು. ಮೇ 2ರಂದು ತಾರಿಖು ಬೆಳಗ್ಗೆ ಚಿಕಿತ್ಸೆಗೆ ಬಂದಿದ್ದೆವು, ಅಂದು ಎರಡು ಮಗು ಡೆಲಿವರಿ ಆಯ್ತು. ಆವತ್ತು ಬೆಳಗ್ಗೆ 11 ಗಂಟೆಗೆ ಹೆಂಡತಿಯನ್ನು ಮಾತನಾಡಿಸಿದಾಗ ಚೆನ್ನಾಗಿದ್ದಳು. ಇದ್ದಕ್ಕಿದ್ದಂತೆ ಸೀರಿಯಸ್ ಆಗಿದೆ ಎಂದರು. ನಂತರ ಮಣಿಪಾಲ್ ಆಸ್ಪತ್ರೆಗೆ ಕಳುಹಿಸಿದರು. ಈಗ ಪೇಮೆಂಟ್ ಮಾಡಿದರೆ ಮಾತ್ರ ನನ್ನ ಹೆಂಡತಿ ಮೃತದೇಹ ಸಿಗುತ್ತೆ ಎನ್ನುತ್ತಿದ್ದಾರೆ. 11 ಲಕ್ಷದ ಮೆಡಿಸಿನ್ ತಂದಿದ್ದೆ. 30 ಲಕ್ಷ ಬಿಲ್ ಆಗಿದೆ. ಇವರು ಮಾಡಿದ ತಪ್ಪಿನಿಂದ ನಮಗೆ ಸಮಸ್ಯೆ ಆಗಿದೆ ಎಂದು ಹೇಳಿದ್ದರು.

ಕ್ಲೌಡ್‌ನೈನ್‌ ಆಸ್ಪತ್ರೆಯಲ್ಲಿ ಹೆರಿಗೆಗೆ 1 ಲಕ್ಷ 30 ಸಾವಿರ ಪ್ಯಾಕೇಜ್ ಇತ್ತು. ಇಲ್ಲೂ 25 ಲಕ್ಷ ಬಿಲ್ ಆಗಿದೆ, ಮಣಿಪಾಲ್‌ ಆಸ್ಪತ್ರೆಯಲ್ಲೂ 30 ಲಕ್ಷ ಬಿಲ್ ಆಗಿದೆ. ಇವರ ಎಡವಟ್ಟಿನಿಂದ ಅಲ್ಲಿ ಹಣ ಕಟ್ಟಿ ಮೃತದೇಹ ತರಬೇಕಾದ ಪರಿಸ್ಥಿತಿ ಬಂದಿದೆ. ಈಗ ತಪ್ಪು ನೀವು ಮಾಡಿದ್ದು, ನೀವೇ ಪರಿಹಾರ ನೀಡಬೇಕು ಎಂದು ಕೇಳಿರುವುದಾಗಿ ತಿಳಿಸಿದ್ದರು. ಈ ಬಗ್ಗೆ ವಿಸ್ತಾರ ನ್ಯೂಸ್‌ ವಿಸ್ತೃತವಾಗಿ ವರದಿ ಮಾಡಿತ್ತು.

ಇದನ್ನೂ ಓದಿ | Assault Case: ಯುವತಿಯ ಪ್ರಿಯಕರನ ಕುತ್ತಿಗೆಗೆ ಚಾಕುವಿನಿಂದ ಇರಿದ ಮಾಜಿ ಪ್ರಿಯಕರ!

ವಿಸ್ತಾರ ನ್ಯೂಸ್ ಸುದ್ದಿಗೆ ಕಡೆಗೂ ಮಣಿಪಾಲ್‌ ಆಡಳಿತ ಮಂಡಳಿಯವರು ಮಣಿದಿದ್ದು, ಜನನಿ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಿದ್ದಾರೆ. ಬಿಲ್ ಪಾವತಿ ಬದಿಗಿಟ್ಟು ಮೃತದೇಹವನ್ನು ಹಸ್ತಾಂತರ ಮಾಡಿ ಮಾನವೀಯತೆ ಮರೆದಿದ್ದಾರೆ. ಆದರೆ, ಈ ಬಾಕಿ ಹಣವನ್ನು ನಂತರದಲ್ಲಿ ಪಾವತಿ ಮಾಡಬೇಕೇ? ಯಾರು ಮಾಡಬೇಕು ಎಂಬ ಬಗ್ಗೆ ಇನ್ನೂ ವಿವರಗಳು ತಿಳಿದು ಬಂದಿಲ್ಲ.

ಕ್ಲೌಡ್‌ನೈನ್‌ ಆಸ್ಪತ್ರೆ ವಿರುದ್ಧ ದೂರು

ಬಾಣಂತಿ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಕ್ಲೌಡ್‌ನೈನ್‌ ಆಸ್ಪತ್ರೆಯ ವಿರುದ್ಧ ಆಕೆಯ ಪತಿ ಕೇಶವ್ ಮತ್ತು ಕುಟುಂಬಸ್ಥರು ಜಿಲ್ಲಾ ಆರೋಗ್ಯಾಧಿಕಾರಿಗೆ ದೂರು ನೀಡಿದ್ದಾರೆ.‌ ಕ್ಲೌಡ್‌ನೈನ್‌ ಆಸ್ಪತ್ರೆ ನಿರ್ಲಕ್ಷ್ಯದ ಬಗ್ಗೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಜನನಿ ಸಾವಿಗೆ ವೈದ್ಯರ ನಿರ್ಲಕ್ಷ್ಯ ಕಾರಣವೆಂದು ಆರೋಪಿಸಿದ್ದಾರೆ.

ತನಿಖೆಗೆ ತಂಡ ರಚನೆ

ಈ ಪ್ರಕರಣ ಸಂಬಂಧ ತನಿಖೆಗೆ ಜಿಲ್ಲಾ ಆರೋಗ್ಯಾಧಿಕಾರಿ ತಂಡ ರಚನೆ ಮಾಡಿದ್ದಾರೆ. ವಿಭಾಗೀಯ ಜಂಟಿ ನಿರ್ದೇಶಕರ ಕಚೇರಿಯ ಜಂಟಿ ನಿರ್ದೇಶಕರು -1 ಡಾ. ಮಮತಾ, ಡಾ. ಸಿರಾಜುದ್ದಿನ್ ಮದಿನ್, ಆರ್ ಸಿ ಎಚ್ ನೇತೃತ್ವದ ತನಿಖಾ ತಂಡವನ್ನು ರಚನೆ ಮಾಡಿದ್ದಾರೆ. ಸಾವಿಗೆ ನಿಖರ ಕಾರಣವೇನೆಂದು ಪತ್ತೆ ಹಚ್ಚಲು ಸೂಚನೆ ನೀಡಲಾಗಿದೆ.

Continue Reading
Advertisement
Karnataka rain
ಮಳೆ30 mins ago

Karnataka Rain : ಮಳೆ ಅವಘಡಕ್ಕೆ ಜನರು ತತ್ತರ; ಧರೆಗುರುಳಿದ ಮರಗಳು, ಕುಸಿದು ಬಿದ್ದ ಮನೆಗಳು

Shivasharane Hemaraddi Mallamma Jayanti celebration in Srisailam
ಯಾದಗಿರಿ32 mins ago

Yadgiri News: ಶ್ರೀಶೈಲಂನಲ್ಲಿ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ

union minister Pralhad Joshi latest statement in bidar
ಕರ್ನಾಟಕ35 mins ago

Pralhad Joshi: ಅಮಾಯಕ ಹೆಣ್ಣುಮಕ್ಕಳ ಹತ್ಯೆಯಾದರೂ ಪೊಲೀಸರ ಮೌನ; ಪ್ರಲ್ಹಾದ ಜೋಶಿ ಆರೋಪ

Rave party 86 people including Hema and Ashi consumed drugs in the rave party Blood report positive
ಕ್ರೈಂ36 mins ago

Rave party: ರೇವ್‌ ಪಾರ್ಟಿಯಲ್ಲಿ ಹೇಮಾ, ಆಶಿ ಸೇರಿ 86 ಮಂದಿಯಿಂದ ಮಾದಕ ವಸ್ತು ಸೇವನೆ; ಬ್ಲಡ್‌ ರಿಪೋರ್ಟ್‌ ಪಾಸಿಟಿವ್‌

Remedies For SadeSati
ಧಾರ್ಮಿಕ40 mins ago

Remedies For SadeSati: ಶನಿಯ ವಕ್ರದೃಷ್ಟಿ ಕಡಿಮೆ ಮಾಡಲು ಇಲ್ಲಿದೆ ಸುಲಭ ಪರಿಹಾರ

Sharad Kelkar
ಸಿನಿಮಾ41 mins ago

Sharad Kelkar: ‘ಬಾಹುಬಲಿ’ಗೆ ಧ್ವನಿ ನೀಡಿದ್ದು ಮರೆಯಲಾಗದ ಅನುಭವ ಎಂದ ಶರದ್ ಕೇಳ್ಕರ್

Glenn Maxwell
ಪ್ರಮುಖ ಸುದ್ದಿ58 mins ago

Glenn Maxwell : ಮ್ಯಾಕ್ಸ್​​ವೆಲ್​ಗೆ ಕೊಟ್ಟ ಹಣ ವಾಪಸ್​ ಪಡೆಯಿರಿ; ಅಭಿಮಾನಿಗಳ ಒತ್ತಾಯ

Theatre
ಸಿನಿಮಾ1 hour ago

‘ಸ್ಟಾರ್‌’ ಸಿನಿಮಾಗಳಿಲ್ಲದ ಕಾರಣ ಚಿತ್ರಮಂದಿರಗಳ ಬಂದ್‌ಗೆ ಚಿಂತನೆ;‌ ನಿರ್ಮಾಪಕರಿಂದ ಭಾರಿ ಆಕ್ರೋಶ!

Dengue Fever
ಆರೋಗ್ಯ1 hour ago

Dengue Fever: ಮಳೆಗಾಲ ಬರುತ್ತಿದೆ! ಡೆಂಗ್ಯೂ ಬಗ್ಗೆ ಇರಲಿ ಎಚ್ಚರಿಕೆ!

Star Gown Fashion
ಫ್ಯಾಷನ್1 hour ago

Star Gown Fashion: ಕೇಪ್‌ ಗೌನ್‌ನಲ್ಲಿ ತ್ರಿಲೋಕ ಸುಂದರಿಯಂತೆ ಕಂಡ ನಟಿ ನಮ್ರತಾ ಗೌಡ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ14 hours ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ2 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು2 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು2 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ3 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ4 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ4 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ4 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ6 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌