IPL 2023 : ಹೈದರಾಬಾದ್​ ತಂಡಕ್ಕೆ 193 ರನ್​ಗಳ ಸ್ಪರ್ಧಾತ್ಮಕ ಸವಾಲೊಡ್ಡಿದ ಮುಂಬೈ ಇಂಡಿಯನ್ಸ್​ - Vistara News

ಕ್ರಿಕೆಟ್

IPL 2023 : ಹೈದರಾಬಾದ್​ ತಂಡಕ್ಕೆ 193 ರನ್​ಗಳ ಸ್ಪರ್ಧಾತ್ಮಕ ಸವಾಲೊಡ್ಡಿದ ಮುಂಬೈ ಇಂಡಿಯನ್ಸ್​

ರೋಹಿತ್​ ಶರ್ಮಾ ಹಾಗೂ ಸೂರ್ಯಕುಮಾರ್ ಯಾದವ್​ ಮತ್ತೆ ಬ್ಯಾಟಿಂಗ್​ನಲ್ಲಿ ವೈಫಲ್ಯ ಎದುರಿಸಿದರು.

VISTARANEWS.COM


on

IPL 2023Mumbai Indians gave a competitive challenge of 193 runs to the Hyderabad team
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೈದರಾಬಾದ್​: ಬ್ಯಾಟರ್​ಗಳ ಸಂಘಟಿತ ಹೋರಾಟದ ನೆರವು ಪಡೆದ ಮುಂಬಯಿ ಇಂಡಿಯನ್ಸ್​ ತಂಡ ಐಪಿಎಲ್​ 16ನೇ ಆವೃತ್ತಿಯ 25ನೇ ಪಂದ್ಯದಲ್ಲಿ ಸನ್ ರೈಸರ್ಸ್​ ಹೈದರಾಬಾದ್​ ತಂಡಕ್ಕೆ 193 ರನ್​ಗಳ ಸವಾಲೊಡ್ಡಿದೆ. ಕ್ಯಾಮೆರಾನ್​ ಗ್ರೀನ್ (64 ರನ್​, 40 ಎಸೆತ, 2 ಸಿಕ್ಸರ್​, 6 ಫೋರ್​​) ಅರ್ಧ ಶತಕ ಬಾರಿಸಿ ತಂಡಕ್ಕೆ ದೊಡ್ಡ ಮೊತ್ತ ಪೇರಿಸಲು ನೆರವಾದರು. ತಿಲಕ್​ ವರ್ಮಾ (37) ಹಾಗೂ ಇಶಾನ್​ ಕಿಶನ್​ (38) ತಮ್ಮ ಕೊಡುಗೆಗಳನ್ನು ಕೊಟ್ಟರು. ಹೈದರಾಬಾದ್ ತಂಡದ ಪರ ನಾಯಕ ಏಡೆನ್​ ಮಾರ್ಕ್ರಮ್​ ಮೂರು ಅಧ್ಬುತ ಕ್ಯಾಚ್​ಗಳನ್ನು ಹಿಡಿದು ಮಿಂಚಿದರು.

ಇಲ್ಲಿನ ರಾಜೀವ್​ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಹಣಾಹಣಿಯಲ್ಲಿ ಟಾಸ್​ ಗೆದ್ದ ಎಸ್​ಆರ್​​ಎಚ್​ ತಂಡ ಮೊದಲು ಫೀಲ್ಡಿಂಗ್​ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲ ಬ್ಯಾಟ್​ ಮಾಡಿದ ರೋಹಿತ್ ಶರ್ಮಾ ನೇತೃತ್ವದ ಮುಂಬಯಿ ಬಳಗ ನಿಗದಿತ 20 ಓವರ್​​ಗಳಲ್ಲಿ 5 ವಿಕೆಟ್​ ನಷ್ಟಕ್ಕೆ 195 ರನ್​ ಬಾರಿಸಿತು.

ಬ್ಯಾಟಿಂಗ್​ ಆರಂಭಿಸಿದ ಮುಂಬಯಿ ಇಂಡಿಯನ್ಸ್​ ತಂಡ ಉತ್ತಮ ಆರಂಭವನ್ನೇ ಪಡೆಯಿತು. ಆದರೆ, ರೋಹಿತ್​ ಶರ್ಮಾ 28 ರನ್​ಗಳಿಗೆ ಟಿ ನಟರಾಜನ್​ಗೆ ವಿಕೆಟ್​ ಒಪ್ಪಿಸಿದರು. ಹೀಗಾಗಿ 1 ವಿಕೆಟ್​ ಕಳೆದುಕೊಂಡು 41 ರನ್​ ಬಾರಿಸಿತು. ಮತ್ತೊಂದು ಬದಿಯಲ್ಲಿ ಇಶಾನ್​ ಕಿಶನ್​ ನಿಧಾನಗತಿಯಲ್ಲಿ ಆಡಿ 31 ಎಸೆತಗಳಿಗೆ 38 ರನ್ ಬಾರಿಸಿ ಔಟಾದರು. ನಾಲ್ಕನೇ ಕ್ರಮಾಂಕದಲ್ಲಿ ಆಡಲು ಬಂದ ಸೂರ್ಯಕುಮಾರ್​ ಯಾದವ್​ ಮತ್ತೆ ವೈಫಲ್ಯ ಕಂಡರಲ್ಲದೆ, 7 ರನ್​ ಬಾರಿಸಿ ಔಟಾದರು. ಎಸ್​ಆರ್​ಎಚ್​ ತಂಡದ ನಾಯಕ ಏಡೆನ್​ ಮಾರ್ಕ್ರಮ್​ ಹಿಡಿದ ಅದ್ಭುತ ಕ್ಯಾಚ್​ಗೆ ಅವರು ಬಲಿಯಾದರು. ಯುವ ಬ್ಯಾಟರ್ ತಿಲಕ್​ ವರ್ಮಾ ಈ ಪಂದ್ಯದಲ್ಲೂ ಉತ್ತಮ ಪ್ರದರ್ಶನ ನೀಡಿದರು. 17 ಎಸೆತಗಳಿಗೆ 2 ಫೋರ್​ 4 ಸಿ್ಕಸರ್​ಗಳ ಸಮೇತ 37 ರನ್​ ಬಾರಿಸಿ ಔಟಾದರು.

ಗ್ರಿನ್​ ಅಬ್ಬರ

ಮುಂಬೈ ತಂಡದ ಪರ ಮೂರನೇ ಕ್ರಮಾಂಕದಲ್ಲಿ ಆಡಲು ಬಂದ ಆಸ್ಟ್ರೇಲಿಯಾ ತಂಡದ ಆಲ್​ರೌಂಡರ್​ ಕ್ಯಾಮೆರಾನ್​ ಗ್ರೀನ್​ ಅಬ್ಬರದ ಪ್ರದರ್ಶನ ನೀಡಿದರು. ಎಸ್​​ಆರ್​ಎಚ್​ ಬೌಲರ್​ಗಳನ್ನು ಸತತವಾಗಿ ದಂಡಿಸಿದ ಅವರು …. ರನ್ ಗಳಿಸಿದರು. ಅವರು ಸ್ಫೋಟಕ ಬ್ಯಾಟಿಂಗ್​ನಿಂದಾಗಿ ಮುಂಬಯಿ ತಂಡಕ್ಕೆ ದೊಡ್ಡ ಮೊತ್ತ ಪೇರಿಸಲು ನೆರವಾಯಿತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

IND vs SA Final: ಇಂದು ಫೈನಲ್​ ಪಂದ್ಯ ನಡೆಯುವುದೇ ಅನುಮಾನ; ಕಾರಣವೇನು?

IND vs SA Final: ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಒಟ್ಟು 6 ಪಂದ್ಯಗಳಲ್ಲಿ ಆಡಿದ್ದು, ಭಾರತ 4 ಪಂದ್ಯ ಗೆದ್ದಿದೆ. 2 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಗೆಲುವು ಕಂಡಿದೆ. 2022ರಲ್ಲಿ ನಡೆದಿದ್ದ ವಿಶ್ವಕಪ್​ ಟೂರ್ನಿಯಲ್ಲಿ ರೋಹಿತ್​ ಪಡೆ ದಕ್ಷಿಣ ಆಫ್ರಿಕಾ ವಿರುದ್ಧ 5 ವಿಕೆಟ್​ ಅಂತರದ ಸೋಲು ಕಂಡಿತ್ತು.

VISTARANEWS.COM


on

IND vs SA Final
Koo

ಬಾರ್ಬಡೋಸ್​: ಹಾಲಿ ಆವೃತ್ತಿಯ ಟಿ20 ವಿಶ್ವಕಪ್​ ಟೂರ್ನಿಯ(IND vs SA Final) ಲೀಗ್​, ಸೂಪರ್-8 ಮತ್ತು ನಾಕೌಟ್​ ಪಂದ್ಯಗಳಿಗೆ ಮಳೆಯಿಂದ ಅಡಚಣೆ ಉಂಟಾಗಿತ್ತು. ಇದೀಗ ಇಂದು ನಡೆಯುವ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಣ ಫೈನಲ್​ ಪಂದ್ಯಕ್ಕೂ ಭಾರೀ ಮಳೆ ಭೀತಿ ಎದುರಾಗಿದೆ.

ಫೈನಲ್​ ಪಂದ್ಯಕ್ಕೂ ಹವಾಮಾನ ಇಲಾಖೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಶೇ.70ರಷ್ಟು ಮಳೆಯಾಗಲಿದೆ ಎಂದು ತನ್ನ ವರದಿಯಲ್ಲಿ ತಿಳಿಸಿದೆ. ಒಂದೊಮ್ಮೆ ನಿಗದಿತ ದಿನ ಪಂದ್ಯ ನಡೆಯದೇ ಇದ್ದರೆ, ಮೀಸಲು ದಿನಕ್ಕೆ ಮುಂದುವರಿಯಲಿದೆ. ಸೂಪರ್​ 8 ಹಂತದಲ್ಲಿ ಮತ್ತು ಸೆಮಿಫೈನಲ್​ ಪಂದ್ಯ ಮಳೆಯಿಂದ ಮೀಸಲು ದಿನವೂ ಫಲಿತಾಂಶ ಕಾಣದಿದ್ದರೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದ ಸ್ಥಾನ ಮುಂದಿನ ಹಂತಕ್ಕೇರುತ್ತದೆ. ಆದರೆ ಫೈನಲ್​ ಪಂದ್ಯಕ್ಕೆ ಈ ನಿಯಮ ಅನ್ವಯವಾಗುವುದಿಲ್ಲ.

ಮುಖಾಮುಖಿ


ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಇದುವರೆಗೆ 26 ಟಿ20 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ಪೈಕಿ ಭಾರತ 14 ಪಂದ್ಯ ಗೆದ್ದರೆ, ದಕ್ಷಿಣ ಆಫ್ರಿಕಾ 11 ಪಂದ್ಯಗಳನ್ನು ಗೆದ್ದಿದೆ. ಒಂದು ಪಂದ್ಯ ಫಲಿತಾಂಶ ಕಂಡಿಲ್ಲ. ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಒಟ್ಟು 6 ಪಂದ್ಯಗಳಲ್ಲಿ ಆಡಿದ್ದು, ಭಾರತ 4 ಪಂದ್ಯ ಗೆದ್ದಿದೆ. 2 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಗೆಲುವು ಕಂಡಿದೆ. 2022ರಲ್ಲಿ ನಡೆದಿದ್ದ ವಿಶ್ವಕಪ್​ ಟೂರ್ನಿಯಲ್ಲಿ ರೋಹಿತ್​ ಪಡೆ ದಕ್ಷಿಣ ಆಫ್ರಿಕಾ ವಿರುದ್ಧ 5 ವಿಕೆಟ್​ ಅಂತರದ ಸೋಲು ಕಂಡಿತ್ತು.

ಜಂಟಿ ವಿಜೇತರ ಘೋಷಣೆ


ಒಂದು ವೇಳೆ ಫೈನಲ್‌(T20 World Cup 2024) ಪಂದ್ಯ ಮೀಸಲು ದಿನದಲ್ಲಿಯೂ ನಡೆಯದೇ ಹೋದರೆ, ಆಗ ಎರಡೂ ತಂಡಗಳನ್ನು ಜಂಟಿ ವಿಜೇತರು ಎಂದು ಘೋಷಿಸಲಾಗುತ್ತದೆ. 2002ರಲ್ಲಿ ಶ್ರೀಲಂಕಾದಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯ ಮಳೆಯಿಂದ ಪೂರ್ಣಗೊಳಿಸಲು ಸಾಧ್ಯವಾಗದ ಕಾರಣ ಭಾರತ ಮತ್ತು ಆತಿಥೇಯ ಶ್ರೀಲಂಕಾ ಎರಡು ತಂಡಗಳನ್ನು ಜಂಟಿ ವಿಜೇತರನ್ನಾಗಿ ಘೋಷಣೆ ಮಾಡಲಾಗಿತ್ತು.

ಕೊಲಂಬೊದಲ್ಲಿ ನಡೆದಿದ್ದ ಆ ಫೈನಲ್‌ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಶ್ರೀಲಂಕಾ 5 ವಿಕೆಟ್​ಗೆ 244 ರನ್ ಗಳಿಸಿತು. ಭಾರತ ವಿಕೆಟ್ ನಷ್ಟವಿಲ್ಲದೆ 14 ರನ್ ಗಳಿದ ವೇಳೆ ಜೋರಾಗಿ ಮಳೆ ಸುರಿಯಿತು. ಮಳೆ ಬಿಡುವು ನೀಡದೆ ಪಂದ್ಯವನ್ನು ಅರ್ಧಕ್ಕೆ ನಿಲ್ಲಿಸಿ ಎರಡೂ ತಂಡಗಳನ್ನು ಜಂಟಿ ವಿಜೇತರು ಎಂದು ಘೋಷಿಸಲಾಯಿತು. ಇದೀಗ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಣ ಪಂದ್ಯ ಕೂಡ ಪೂರ್ಣ ಫಲಿತಾಂಶ ಕಾಣದಿದ್ದರೆ ಇತ್ತಂಡಗಳು ಕೂಡ ಜಂಟಿ ಚಾಂಪಿಯನ್​ ಎನಿಸಿಕೊಳ್ಳಲಿದೆ. ಭಾರತ 2ನೇ ಕಪ್​ ಗೆದ್ದರೆ, ದಕ್ಷಿಣ ಆಫ್ರಿಕಾ ಚೊಚ್ಚಲ ಬಾರಿಗೆ ಚಾಂಪಿಯನ್​ ಪಟ್ಟ ಅಲಂಕರಿಸಿದಂತಾಗುತ್ತದೆ.

Continue Reading

ಪ್ರಮುಖ ಸುದ್ದಿ

Muhammad Usman : ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಯುಎಇ ಕ್ರಿಕೆಟಿಗ ಉಸ್ಮಾನ್​

Muhammad Usman: ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಯುಎಇಯನ್ನು ಪ್ರತಿನಿಧಿಸುವ ಮೊದಲು, ಎಡಗೈ ಬ್ಯಾಟರ್​ ಜನವರಿ 2016 ರಲ್ಲಿ ನೆದರ್ಲ್ಯಾಂಡ್ಸ್ ವಿರುದ್ಧ ಪ್ರಥಮ ದರ್ಜೆ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ್ದರು. ಅವರು ಯುಎಇ ಪರ ಒಟ್ಟು 5 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದಾರೆ.

VISTARANEWS.COM


on

Muhammad Usman
Koo

ಬೆಂಗಳೂರು: ಯುಎಇ ಬ್ಯಾಟರ್​ ಮುಹಮ್ಮದ್ ಉಸ್ಮಾನ್ (Muhammad Usman) ಶುಕ್ರವಾರ (ಜೂನ್ 28) ಅಂತರರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಹೇಳಿದ್ದಾರೆ. ಆ ತಂಡದ ಮಧ್ಯಮ ಕ್ರಮಾಂಕದ ಬ್ಯಾಟರ್​ ಅಗಿದ್ದ ಅವರು ಒಟ್ಟು 85 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಪಾಲ್ಗೊಂಡಿದ್ದರು. ಪಾಕಿಸ್ತಾನದ ಲಾಹೋರ್​ನಲ್ಲಿ ಜನಿಸಿದ 38ರ ಹರೆಯದ ಉಸ್ಮಾನ್​ 2016ರಿಂದ 2022ರವರೆಗೆ ಯುಎಇ ಪರ 38 ಏಕದಿನ ಮತ್ತು 47 ಟಿ20 ಪಂದ್ಯಗಳನ್ನು ಆಡಿದ್ದಾರೆ. ಅವರು ಫೆಬ್ರವರಿ 2016 ರಲ್ಲಿ ನೆದರ್ಲ್ಯಾಂಡ್ಸ್ ವಿರುದ್ಧದ ಟಿ 20 ಐ ಮೂಲಕ ಯುಎಇ ಪರ ಪಾದಾರ್ಪಣೆ ಮಾಡಿದರು. ಅದೇ ವರ್ಷದ ಆಗಸ್ಟ್​​ನಲ್ಲಿ ಮುಹಮ್ಮದ್ ಉಸ್ಮಾನ್ ಎಡಿನ್​ಬರ್ಗ್​​ನಲ್ಲಿ ಸ್ಕಾಟ್ಲೆಂಡ್ ವಿರುದ್ಧದ ಪಂದ್ಯದ ಮೂಲಕ ಏಕದಿನ ಕ್ರಿಕೆಟ್​ಗೆ ಪದಾ ರ್ಪಣೆ ಮಾಡಿದರು.

ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಯುಎಇಯನ್ನು ಪ್ರತಿನಿಧಿಸುವ ಮೊದಲು, ಎಡಗೈ ಬ್ಯಾಟರ್​ ಜನವರಿ 2016 ರಲ್ಲಿ ನೆದರ್ಲ್ಯಾಂಡ್ಸ್ ವಿರುದ್ಧ ಪ್ರಥಮ ದರ್ಜೆ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ್ದರು. ಅವರು ಯುಎಇ ಪರ ಒಟ್ಟು 5 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದಾರೆ.

ಮೊಹಮ್ಮದ್ ಉಸ್ಮಾನ್ 38 ಏಕದಿನ ಪಂದ್ಯಗಳಲ್ಲಿ 31.50 ಸರಾಸರಿಯಲ್ಲಿ 1008 ರನ್ ಗಳಿಸಿದ್ದಾರೆ. ಅವರು 50 ಓವರ್​ಗಳ ಸ್ವರೂಪದಲ್ಲಿ ಒಂದು ಶತಕ ಮತ್ತು ಐದು ಅರ್ಧಶತಕಗಳನ್ನು ಗಳಿಸಿದ್ದಾರೆ. ಟಿ20ಐನಲ್ಲಿ ದಕ್ಷಿಣ ಆಫ್ರಿಕಾ 47 ಪಂದ್ಯಗಳಲ್ಲಿ ಮೂರು ಅರ್ಧಶತಕಗಳ ಸಹಾಯದಿಂದ 891 ರನ್ ಗಳಿಸಿದೆ.

ಅವರು 2016 ರ ಏಷ್ಯಾ ಕಪ್​ಗಾಗಿ ಯುಎಇ ತಂಡದ ಭಾಗವಾಗಿದ್ದರು. ಅವರು 7 ಪಂದ್ಯಗಳಲ್ಲಿ 176 ರನ್ ಗಳಿಸಿದ ನಂತರ ಯುಎಇಯ ಅತಿ ಹೆಚ್ಚು ರನ್ ಗಳಿಸಿದ ಮತ್ತು ಒಟ್ಟಾರೆ ಮೂರನೇ ಅತಿ ಹೆಚ್ಚು ರನ್ ಗಳಿಸಿದ ಆಟಗಾರನಾಗಿ ಪಂದ್ಯಾವಳಿಯನ್ನು ಮುಗಿಸಿದ್ದರು. 5 ಪ್ರಥಮ ದರ್ಜೆ ಪಂದ್ಯಗಳಲ್ಲಿ, ಅನುಭವಿ ಬ್ಯಾಟ್ಸ್ಮನ್ ಶತಕದ ಸಹಾಯದಿಂದ 217 ರನ್ ಗಳಿಸಿದ್ದಾರೆ. 2022ರ ಫೆಬ್ರವರಿಯಲ್ಲಿ ಒಮಾನ್ ಹಾಗೂ ನೇಪಾಳ ವಿರುದ್ಧ ಏಕದಿನ ಹಾಗೂ ಟಿ20ಐನಲ್ಲಿ ಕೊನೆಯ ಬಾರಿ ಆಡಿದ್ದರು.

ಇದು ನಂಬಲಾಗದ ಪ್ರಯಾಣ: ಮುಹಮ್ಮದ್ ಉಸ್ಮಾನ್

ಮುಹಮ್ಮದ್ ಉಸ್ಮಾನ್ ಅವರು ಅಂತರರಾಷ್ಟ್ರೀಯ ಕ್ರಿಕೆಟ್​​ನಲ್ಲಿ ತಮ್ಮ ಪ್ರಯಾಣವನ್ನು ನಂಬಲಾಗದ ಎಂದು ಕರೆದರು ಮತ್ತು ಅವರ ಕ್ರಿಕೆಟ್ ಪ್ರಯಾಣದಲ್ಲಿ ಪಾತ್ರವಹಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ಅವರು ತಮ್ಮ ಆಟದ ವೃತ್ತಿಜೀವನದ ಅಂತ್ಯದ ನಂತರವೂ ಆಟದೊಂದಿಗೆ ಸಂಬಂಧ ಹೊಂದುವ ಬಯಕೆಯನ್ನು ವ್ಯಕ್ತಪಡಿಸಿದರು.

ಇದನ್ನೂ ಓದಿ: Virat Kohli : ಫಾರ್ಮ್​ ಕಳೆದುಕೊಂಡಿರುವ ವಿರಾಟ್​ ಕೊಹ್ಲಿಯ ಬೆಂಬಲಕ್ಕೆ ನಿಂತ ಗಂಗೂಲಿ

ಯುಎಇ ಕ್ರಿಕೆಟ್ ತಂಡ ಮತ್ತು ಕ್ರಿಕೆಟ್ ಮಂಡಳಿಯೊಂದಿಗೆ ಇದು ನಂಬಲಾಗದ ಪ್ರಯಾಣವಾಗಿದೆ. ನನ್ನ ತಂಡದ ಸದಸ್ಯರು, ತರಬೇತುದಾರರು ಮತ್ತು ಇತರ ಸಹಾಯಕ ಸಿಬ್ಬಂದಿ ಸೇರಿದಂತೆ ನನ್ನ ಪ್ರಯಾಣದಲ್ಲಿ ಪಾತ್ರ ವಹಿಸಿದ ಎಲ್ಲರಿಗೂ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ. 85 ಅಂತಾರಾಷ್ಟ್ರೀಯ ಪಂದ್ಯಗಳಿಗೆ ಯುಎಇಯನ್ನು ಪ್ರತಿನಿಧಿಸುವ ಅವಕಾಶ ಸಿಕ್ಕಿದ್ದು ನನ್ನ ಅದೃಷ್ಟ ಮತ್ತು ಹೆಮ್ಮೆ ಎನಿಸುತ್ತದೆ ಎಂದುಹೇಳಿದರು.

ನಾನು ಕ್ರೀಡೆಯೊಂದಿಗೆ ಬೇರೆ ಸಂಬಂಧ ಹೊಂದಲು ಬಯಸುವುದರಿಂದ ನನ್ನ ಜೀವನದ ಮುಂದಿನ ಅಧ್ಯಾಯವನ್ನು ಎದುರು ನೋಡುತ್ತಿದ್ದೇನೆ. ಯುಎಇ ತಂಡ ಮತ್ತು ಆಟಗಾರರಿಗೆ ದೇಶದಲ್ಲಿ ಆಟಕ್ಕೆ ಬಹಳ ರೋಮಾಂಚನಕಾರಿ ಸಮಯದಲ್ಲಿ ನಾನು ಶುಭ ಹಾರೈಸಲು ಬಯಸುತ್ತೇನೆ ಎಂದು ಮುಹಮ್ಮದ್ ಉಸ್ಮಾನ್ ಹೇಳಿದರು.

Continue Reading

ಪ್ರಮುಖ ಸುದ್ದಿ

T20 World Cup 2024 : ಭಾರತ ತಂಡವನ್ನು ಟೀಕಿಸಿದ ಮೈಕೆಲ್​ ವಾನ್​ಗೆ ತಿರುಗೇಟು ಕೊಟ್ಟ ಗಂಗೂಲಿ

T20 World Cup 2024: ಭಾರತವು ಅದ್ಭುತ ಬ್ರಾಂಡ್ ಕ್ರಿಕೆಟ್ ಆಡುತ್ತಿರುವಾಗ, ಇಂಗ್ಲೆಂಡ್​ನ ಮಾಜಿ ಕ್ರಿಕೆಟಿಗ ಮೈಕಲ್ ವಾನ್ ದಿಟ್ಟ ಹೇಳಿಕೆ ನೀಡಿದ್ದಾರೆ. ಸ್ಪಿನ್ ಸ್ನೇಹಿ ಪಿಚ್​ಗಳನ್ನು ಇಡುವುದರ ಜತೆಗೆ ಭಾರತಕ್ಕೆ ನೆರವು ನೀಡಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

VISTARANEWS.COM


on

T20 World Cup 2024
Koo

ನವದೆಹಲಿ: 2024 ರ ಟಿ 20 ವಿಶ್ವಕಪ್​​ನಲ್ಲಿ ಐಸಿಸಿ ಭಾರತಕ್ಕೆ ಸಹಾಯ ಮಾಡುತ್ತಿದೆ ಎಂಬ ಮೈಕಲ್ ವಾನ್ ಅವರ ಹೇಳಿಕೆಯ ಬಗ್ಗೆ ಭಾರತದ ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ಬೇಸರ ವ್ಯಕ್ತಪಡಿಸಿದ್ದಾರೆ. ಭಾರತೀಯ ಕಾಲಮಾನ ರಾತ್ರಿ 8 ಗಂಟೆಗೆ ಪಂದ್ಯಗಳನ್ನು ಆಯೋಜಿಸುವುದರಿಂದ ಭಾರತಕ್ಕೆ ಅನುಕೂಲವಾಗುತ್ತಿದೆ ಎಂದು ಇಂಗ್ಲೆಂಡ್​ನ ಮಾಜಿ ಆಟಗಾರ ವಾನ್​ ಹೇಳಿಕೆ ನೀಡಿದ್ದರು. ಈ ಬಗ್ಗೆ ಬೇಸರ ವ್ಯಕ್ತಪಡಿಸಿದ ಗಂಗೂಲಿ ಅವರು ಇಂತಹ ಹೇಳಿಕೆಗಳನ್ನು ಹೇಗೆ ನೀಡಿದ್ದಾರೆಂದು ನನಗೆ ಅರ್ಥವಾಗುತ್ತಿಲ್ಲ ಎಂದು ಅವರು ಹೇಳಿದ್ದಾರೆ.

2024ರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಭರ್ಜರಿ ಪ್ರದರ್ಶನ ತೋರಿದೆ. ರೋಹಿತ್ ಶರ್ಮಾ ನೇತೃತ್ವದ ತಂಡವು ಪ್ರಸ್ತುತ ನಡೆಯುತ್ತಿರುವ ಪಂದ್ಯಾವಳಿಯಲ್ಲಿ ಅದ್ಭುತ ಬ್ರಾಂಡ್ ಕ್ರಿಕೆಟ್ ಆಡಿದೆ ಮತ್ತು ಪ್ರಸ್ತುತ ಈವೆಂಟ್​​ನಲ್ಲಿ ಅಜೇಯವಾಗಿದೆ ಮತ್ತು ಫೈನಲ್​​​ ಪ್ರವೇಶಿಸಿದೆ. ಪ್ರಸ್ತುತ ನಡೆಯುತ್ತಿರುವ ಪಂದ್ಯಾವಳಿಯಲ್ಲಿ ಭಾರತದ ತಂಡವು ಉತ್ತಮವಾಗಿ ಆಡಿದೆ. ಒಟ್ಟಾರೆಯಾಗಿ ಇದು ಅವರ ಸಾಮೂಹಿಕ ಪ್ರಯತ್ನವಾಗಿದೆ. ಏಕೆಂದರೆ ಬಹುತೇಕ ಪ್ರತಿಯೊಬ್ಬ ಆಟಗಾರನೂ ನೆರವು ಕೊಟ್ಟಿದ್ದಾರೆ.

ಭಾರತವು ಅದ್ಭುತ ಬ್ರಾಂಡ್ ಕ್ರಿಕೆಟ್ ಆಡುತ್ತಿರುವಾಗ, ಇಂಗ್ಲೆಂಡ್​ನ ಮಾಜಿ ಕ್ರಿಕೆಟಿಗ ಮೈಕಲ್ ವಾನ್ ದಿಟ್ಟ ಹೇಳಿಕೆ ನೀಡಿದ್ದಾರೆ. ಸ್ಪಿನ್ ಸ್ನೇಹಿ ಪಿಚ್​ಗಳನ್ನು ಇಡುವುದರ ಜತೆಗೆ ಭಾರತಕ್ಕೆ ನೆರವು ನೀಡಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಮೈಕಲ್ ವಾನ್ ಅವರ ಹೇಳಿಕೆಯ ಬಗ್ಗೆ ಸೌರವ್ ಗಂಗೂಲಿ ಬೇಸರದಿಂದ ಉತ್ತರಿಸಿದ್ದಾರೆ. ಇಂಗ್ಲೆಂಡ್​ನ ಮಾಜಿ ಕ್ರಿಕೆಟಿಗನನ್ನು ಆತ್ಮೀಯ ಸ್ನೇಹಿತ ಎಂದು ಕರೆಯುವ ಜತೆಗೆ ಅವರ ಮಾತಿನ ಅರ್ಥ ಗೊತ್ತಾಗುತ್ತಿಲ್ಲ ಎಂದು ಹೇಳಿದ್ದಾರೆ.

“ಮೈಕಲ್ ವಾನ್ ನನ್ನ ಆತ್ಮೀಯ ಸ್ನೇಹಿತ. ಭಾರತೀಯ ಕಾಲಮಾನ ರಾತ್ರಿ 8 ಗಂಟೆಗೆ ಪ್ರಸಾರ ಮಾಡುವ ಮೂಲಕ ಕ್ರಿಕೆಟ್ ಪಂದ್ಯಗಳನ್ನು ಗೆಲ್ಲಲು ಐಸಿಸಿ ಭಾರತಕ್ಕೆ ಹೇಗೆ ಸಹಾಯ ಮಾಡುತ್ತದೆ ಎಂದು ನನಗೆ ತಿಳಿದಿಲ್ಲ. ಪ್ರಸಾರದ ಸಮಯವು ಕ್ರಿಕೆಟ್ ಪಂದ್ಯಗಳನ್ನು ಗೆಲ್ಲಲು ಹೇಗೆ ಸಹಾಯ ಮಾಡುತ್ತದೆ ಎಂದು ತಿಳಿದಿಲ್ಲ ಎಂದು ಹೇಳಿದ್ದಾರೆ.

ಎರಡನೆಯದಾಗಿ, ಭಾರತ ತಂಡ ಎಲ್ಲೆಡೆ ಸುತ್ತಾಡಿ ಗೆದ್ದಿದೆ. ಎಲ್ಲ ಪಿಚ್​ಗಳಲ್ಲಿ ಆಡಿದೆ. ಹೀಗಿರುವಾಗ ಗಯಾನಾವನ್ನು ಗೆಲ್ಲುವ ಸ್ಥಳವೆಂದು ಏಕೆ ಭಾವಿಸಲಾಗಿದೆ ಎಂದು ನನಗೆ ತಿಳಿದಿಲ್ಲ ಎಂದು ಗಂಗೂಲಿ ಹೇಳಿದ್ದಾರೆ.

ವಿಶ್ವ ಕ್ರಿಕೆಟ್​​ನಲ್ಲಿ ಪ್ರಬಲ ಶಕ್ತಿಯಾಗಿದೆ – ಸೌರವ್ ಗಂಗೂಲಿ

ಮೈಕಲ್ ವಾನ್ ಹೇಳಿಕೆಗೆ ತಿರುಗೇಟು ನೀಡಿರುವ ಸೌರವ್ ಗಂಗೂಲಿ, ವಿಶ್ವ ಕ್ರಿಕೆಟ್​​ನಲ್ಲಿ ಭಾರತ ಎಲ್ಲ ರೀತಿಯಲ್ಲೂ ಪ್ರಬಲ ಶಕ್ತಿಯಾಗಿದೆ ಎಂದು ಹೇಳಿದ್ದಾರೆ. ಒಂದು ಕಂಪನಿಯ 80% ಪಾಲನ್ನು ನಿರ್ದಿಷ್ಟ ಪಕ್ಷವು ಹೊಂದಿದ್ದರೆ ಅವರು ಹೆಚ್ಚಿನ ಲಾಭಾಂಶ ನಿರೀಕ್ಷಿಸುತ್ತಾರೆ ಎಂಬುದಾಗಿಯೂ ಹೇಳಿದರು.

ಇದನ್ನೂ ಓದಿ: Virat Kohli : ಫಾರ್ಮ್​ ಕಳೆದುಕೊಂಡಿರುವ ವಿರಾಟ್​ ಕೊಹ್ಲಿಯ ಬೆಂಬಲಕ್ಕೆ ನಿಂತ ಗಂಗೂಲಿ

“ಹೌದು, ಭಾರತವು ತನ್ನ ಪ್ರದರ್ಶನದಿಂದ ಕ್ರಿಕೆಟ್​ ಪ್ರಸಾರದಿಂದ ಹೆಚ್ಚು ಹಣವನ್ನು ತರುತ್ತದೆ. ನೀವು ಒಂದು ಕಂಪನಿಯ 80 ಪ್ರತಿಶತದಷ್ಟು ಷೇರುಗಳನ್ನು ಹೊಂದಿದ್ದರೆ, ನೀವು ಇತರರಿಗಿಂತ ಹೆಚ್ಚಿನ ಲಾಭಾಂಶ ಮತ್ತು ಲಾಭವನ್ನು ಪಡೆಯಬೇಕಾಗುತ್ತದೆ. ಅದೇ ರೀತಿ ಭಾರತದ ಕ್ರಿಕೆಟ್ ಪ್ರಬಲ ಶಕ್ತಿಯಾಗಿರುವಾಗ ಲಾಭವೂ ಹೆಚ್ಚು ದೊರಕಬೇಕು ಎಂದು ಹೇಳಿದ್ದಾರೆ.

2024 ರ ಟಿ 20 ವಿಶ್ವಕಪ್ ಸೆಮಿಫೈನಲ್​​ನಲ್ಲಿ ಭಾರತವು ಇಂಗ್ಲೆಂಡ್ ತಂಡವನ್ನು 68 ರನ್​ಗಳಿಂದ ಸೋಲಿಸಿತ್ತು. ಮೊದಲು ಬ್ಯಾಟ್ ಮಾಡಿದ ನಾಯಕ ರೋಹಿತ್ ಶರ್ಮಾ 57 ರನ್ ಸಿಡಿಸಿದ್ದರು. ನಂತರ ಸ್ಪಿನ್ನರ್​ಗಳಾದ ಕುಲದೀಪ್ ಯಾದವ್ ಮತ್ತು ಅಕ್ಷರ್ ಪಟೇಲ್ ತಲಾ ಮೂರು ವಿಕೆಟ್​ಗಳನ್ನು ಪಡೆದಿದ್ದರು. ಹೀಗಾಗಿ ಇಂಗ್ಲೆಂಡ್ 103 ರನ್​ಗಳಿಗೆ ಆಲೌಟ್ ಆಯಿತು.

Continue Reading

ಪ್ರಮುಖ ಸುದ್ದಿ

Virat Kohli : ಫಾರ್ಮ್​ ಕಳೆದುಕೊಂಡಿರುವ ವಿರಾಟ್​ ಕೊಹ್ಲಿಯ ಬೆಂಬಲಕ್ಕೆ ನಿಂತ ಗಂಗೂಲಿ

Virat Kohli :ಗುರುವಾರ (ಜೂನ್ 27) ನಡೆದ ಸೆಮಿಫೈನಲ್​ನಲ್ಲಿ ಇಂಗ್ಲೆಂಡ್ ವಿರುದ್ಧ 9 ಎಸೆತಕ್ಕೆ ​ಗೆ 9 ರನ್​​ಗಳಿಗೆ ಔಟಾಗಿದ್ದರಿಂದ ಅವರು ಬ್ಯಾಟ್​​ನಲ್ಲಿ ಮತ್ತೊಂದು ವೈಫಲ್ಯ ಕಂಡರು. ಭಾರತದ ಮಾಜಿ ಆರಂಭಿಕ ಆಟಗಾರ ಔಟ್ ನಂತರ ಸಂಪೂರ್ಣವಾಗಿ ವಿಚಲಿತರಾದರು. ಏಕೆಂದರೆ ಅವರ ಸಹ ಆಟಗಾರರು ಮತ್ತು ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಡಗೌಟ್​​ನಲ್ಲಿ ಅವರನ್ನು ಸಮಾಧಾನಪಡಿಸುತ್ತಿರುವುದು ಕಂಡುಬಂದಿದೆ.

VISTARANEWS.COM


on

Virat Kohli
Koo

ನವದೆಹಲಿ: ಐಸಿಸಿ ಟಿ 20 ವಿಶ್ವಕಪ್ 2024 ರಲ್ಲಿ ವಿರಾಟ್ ಕೊಹ್ಲಿ ಬ್ಯಾಟಿಂಗ್​​ನಲ್ಲಿ ವಿಫಲರಾಗಿದ್ದಾರೆ. ಈ ಬಗ್ಗೆ ಭಾರತದ ಮಾಜಿ ನಾಯಕ ಸೌರವ್ ಗಂಗೂಲಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. ಐಪಿಎಲ್​ನಲ್ಲಿ ಕೊಹ್ಲಿ 741 ರನ್ ಗಳಿಸಿ ಮಿಂಚಿದ್ದರು. ಅಲ್ಲಿ ಅವರು ಆರಂಭಿಕ ಬ್ಯಾಟರ್ ಆಗಿದ್ದರು. ಹೀಗಾಗಿ ಟಿ20 ವಿಶ್ವ ಕಪ್​ನಲ್ಲಿ ಆರಂಭಿಕ ಆಟಗಾರನಾಗಿ ಬಡ್ತಿ ಪಡೆದರು. ಇಲ್ಲಿ ಅವರು ಸಂಪೂರ್ಣ ಫೇಲ್​. ಅವರಿಗೆ ಆರಂಭಿಕರಾಗಿ ಆಟಗಾರನಾಗಿ ಬಡ್ತಿ ನೀಡುವ ನಿರ್ಧಾರಕ್ಕೆ ಹಿನ್ನಡೆಯಾಗಿದೆ.

ಗುರುವಾರ (ಜೂನ್ 27) ನಡೆದ ಸೆಮಿಫೈನಲ್​ನಲ್ಲಿ ಇಂಗ್ಲೆಂಡ್ ವಿರುದ್ಧ 9 ಎಸೆತಕ್ಕೆ ​ಗೆ 9 ರನ್​​ಗಳಿಗೆ ಔಟಾಗಿದ್ದರಿಂದ ಅವರು ಬ್ಯಾಟ್​​ನಲ್ಲಿ ಮತ್ತೊಂದು ವೈಫಲ್ಯ ಕಂಡರು. ಭಾರತದ ಮಾಜಿ ಆರಂಭಿಕ ಆಟಗಾರ ಔಟ್ ನಂತರ ಸಂಪೂರ್ಣವಾಗಿ ವಿಚಲಿತರಾದರು. ಏಕೆಂದರೆ ಅವರ ಸಹ ಆಟಗಾರರು ಮತ್ತು ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಡಗೌಟ್​​ನಲ್ಲಿ ಅವರನ್ನು ಸಮಾಧಾನಪಡಿಸುತ್ತಿರುವುದು ಕಂಡುಬಂದಿದೆ.

ವಿರಾಟ್ ಕೊಹ್ಲಿ ಆಡಿರುವ 7 ಪಂದ್ಯಗಳಲ್ಲಿ ಕೇವಲ 75 ರನ್ ಗಳಿಸಿದ್ದಾರೆ. ಅವರು ಕೇವಲ ಎರಡು ಬಾರಿ ಮಾತ್ರ ಎರಡಂಕಿ ಮೊತ್ತ ತಲುಪಿದ್ದಾರೆ. ಅದರಲ್ಲಿ ಎರಡು ಬಾರಿ ಡಕ್ ಔಟ್ ಆಗಿದ್ದಾರೆ. ಸ್ಟಾರ್ ಬ್ಯಾಟರ್​​ ಆರಂಭಿಕ ಆಟಗಾರನಾಗಿ ಹೆಣಗಾಡುತ್ತಿದ್ದಾರೆ. ಹೀಗಾಗಿ ಅವರನ್ನು 3 ನೇ ಕ್ರಮಾಂಕಕ್ಕೆ ಕಳುಹಿಸಲು ಕರೆಗಳು ಬಂದಿವೆ.

ಈ ಬಗ್ಗೆ ಸೌರವ್ ಗಂಗೂಲಿ ವಿಭಿನ್ನ ಅಭಿಪ್ರಾಯವನ್ನು ಹೊಂದಿದ್ದಾರೆ. ಫೈನಲ್ ಪಂದ್ಯಕ್ಕೂ ಮುನ್ನ ವಿರಾಟ್ ಕೊಹ್ಲಿ ಅವರ ಬ್ಯಾಟಿಂಗ್ ಕ್ರಮಾಂಕವನ್ನು ಬದಲಾಯಿಸಬಾರದು ಎಂದು ಭಾರತದ ಮಾಜಿ ನಾಯಕ ಹೇಳಿದ್ದಾರೆ. ಫೈನಲ್​ನಲ್ಲಿ ಕೊಹ್ಲಿಯನ್ನು ಕೈಬಿಡಬಾರದು ಎಂಬುದಾಗಿಯೂ ಹೇಳಿದ್ದಾರೆ.

ವಿರಾಟ್ ಕೊಹ್ಲಿ ಓಪನಿಂಗ್ ಸ್ಲಾಟ್​ ಮುಂದುವರಿಯಬೇಕು. ಅವರು ಏಳು ತಿಂಗಳ ಹಿಂದೆ ವಿಶ್ವಕಪ್​ನಲ್ಲಿ 700 ರನ್ ಗಳಿಸಿದ್ದವರು. ಮನುಷ್ಯ. ಕೆಲವೊಮ್ಮೆ, ಸಹಜವಾಗಿ ವಿಫಲನಾಗುತ್ತಾನೆ. ನೀವು ಅದನ್ನು ಒಪ್ಪಿಕೊಳ್ಳಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ: IND vs SA: ದಕ್ಷಿಣ ಆಫ್ರಿಕಾದ ಬೌಲಿಂಗ್​ ಶಕ್ತಿ ಭಾರತದ ಬ್ಯಾಟಿಂಗ್​ಗೆ ಲೆಕ್ಕಕ್ಕೇ ಇಲ್ಲ; ಮಾಜಿ ಆಟಗಾರನ ಭವಿಷ್ಯ

ವಿರಾಟ್​ ಕೊಹ್ಲಿ, ಸಚಿನ್ ತೆಂಡೂಲ್ಕರ್, ರಾಹುಲ್ ದ್ರಾವಿಡ್ ಅವರಂತಹ ಜನರು ಭಾರತೀಯ ಕ್ರಿಕೆಟ್​​​ ಸಂಸ್ಥೆಗಳು. ಮೂರು-ನಾಲ್ಕು ಪಂದ್ಯಗಳು ಅವರನ್ನು ದುರ್ಬಲ ಆಟಗಾರರನ್ನಾಗಿ ಮಾಡುವುದಿಲ್ಲ. ನಾಳೆಯ ಫೈನಲ್​​ನಲ್ಲಿ ಅವರನ್ನು ಕೆಳಗಿಳಿಸಬೇಡಿ ಎಂದು ವೀಡಾಲ್​​ನ ಬ್ರಾಂಡ್ ಅಂಬಾಸಿಡರ್ ಆಗಿ ನೇಮಕಗೊಂಡ ನಂತರ ಸೌರವ್ ಗಂಗೂಲಿ ಪಿಟಿಐಗೆ ತಿಳಿಸಿದ್ದಾರೆ.

ವಿರಾಟ್ ಕೊಹ್ಲಿಯ ಅದ್ಭುತ ಸರಣಿ ಅಂತ್ಯ

ಸೆಮಿಫೈನಲ್​ನಲ್ಲಿ ಇಂಗ್ಲೆಂಡ್ ವಿರುದ್ಧ ದೊಡ್ಡ ಸ್ಕೋರ್ ಮಾಡಲು ವಿಫಲವಾದ ಕಾರಣ ಟಿ 20 ವಿಶ್ವಕಪ್​ನಲ್ಲಿ ವಿರಾಟ್ ಕೊಹ್ಲಿ ಅವರ ಅದ್ಭುತ ಸರಣಿ ಕೊನೆಗೊಳಿಸಿತು. ನಾಲ್ಕು ಸೆಮಿಫೈನಲ್​​ನಲ್ಲಿ ಇದೇ ಮೊದಲ ಬಾರಿಗೆ ಭಾರತದ ಮಾಜಿ ನಾಯಕ ಅರ್ಧಶತಕ ಗಳಿಸಲು ವಿಫಲರಾದರು. ಕೊಹ್ಲಿ ಈ ಸಮಯದಲ್ಲಿ ಹೆಣಗಾಡುತ್ತಿದ್ದರೂ ಈ ಹಿಂದೆ ಅವರು ಸ್ಪರ್ಧೆಯಲ್ಲಿ ಎಷ್ಟು ಸ್ಥಿರ ಎಂದು ಹೇಳಿದರು.

2014 ರ ಟಿ 20 ವಿಶ್ವಕಪ್​​ ಸೆಮಿಫೈನಲ್​​ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಅರ್ಧಶತಕ ಗಳಿಸಿದ ಅವರು 2016 ಮತ್ತು 2022 ರಲ್ಲಿ ಕ್ರಮವಾಗಿ ವೆಸ್ಟ್ ಇಂಡೀಸ್ ಮತ್ತು ಇಂಗ್ಲೆಂಡ್ ವಿರುದ್ಧ ಅರ್ಧಶತಕಗಳನ್ನು ಗಳಿಸಿದ್ದರು. ವಿರಾಟ್ ಕೊಹ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಫೈನಲ್​​ನಲ್ಲಿ ಬ್ಯಾಟ್​ನಿಂದ ಪ್ರಭಾವ ಬೀರುವ ಮೂಲಕ ಪಂದ್ಯಾವಳಿಯನ್ನು ಉತ್ತಮ ಟಿಪ್ಪಣಿಯೊಂದಿಗೆ ಕೊನೆಗೊಳಿಸಲು ನೋಡುತ್ತಿದ್ದಾರೆ.

Continue Reading
Advertisement
US Presidential Election
ವಿದೇಶ12 mins ago

US Presidential Election: ಬಹಿರಂಗ ಚರ್ಚೆ ಬಳಿಕ ಅಭ್ಯರ್ಥಿಯ ಬದಲಾವಣೆ? ಬೈಡೆನ್‌ ಬದಲಿಗೆ ಮಿಶೆಲ್‌ ಒಬಾಮಾ ಕಣಕ್ಕೆ?

IND vs SA Final
ಕ್ರೀಡೆ15 mins ago

IND vs SA Final: ಇಂದು ಫೈನಲ್​ ಪಂದ್ಯ ನಡೆಯುವುದೇ ಅನುಮಾನ; ಕಾರಣವೇನು?

Sadhguru Jaggi Vasudev
ಆರೋಗ್ಯ15 mins ago

Sadhguru Jaggi Vasudev: ಮಕ್ಕಳಲ್ಲಿ ಅಲರ್ಜಿ ಸಮಸ್ಯೆಗೆ ಏನು ಪರಿಹಾರ? ಸದ್ಗುರು ಸಲಹೆ ಇಲ್ಲಿದೆ ಕೇಳಿ

Kannada New Movie niveditha Shivarajkumar frefly cinema sudharani join
ಸಿನಿಮಾ26 mins ago

Kannada New Movie: ನಿವೇದಿತಾ ಶಿವರಾಜಕುಮಾರ್ ನಿರ್ಮಾಣದ ‘ಫೈರ್‌ಫ್ಲೈ’ ತಂಡ ಸೇರಿದ ಸುಧಾರಾಣಿ!

Actor Darshan
ಕರ್ನಾಟಕ45 mins ago

Actor Darshan: ಜೈಲಲ್ಲಿ ಮುದ್ದೆ-ಚಿಕನ್‌ ಸಾಂಬಾರ್‌ ಸವಿದ ದರ್ಶನ್;‌ ನಟನ ನೋಡಲು ಮುಗಿಬಿದ್ದ ಕೈದಿಗಳು!

Amarnath Yatra
ದೇಶ53 mins ago

Amarnath Yatra: ವ್ಯಾಪಕ ಬಿಗಿ ಭದ್ರತೆಯೊಂದಿಗೆ ಈ ಬಾರಿಯ ಅಮರನಾಥ ಯಾತ್ರೆ ಆರಂಭ; ಪವಿತ್ರ ಗುಹೆಯತ್ತ ಹೊರಟ ಮೊದಲ ತಂಡ

BBMP Scam
ಬೆಂಗಳೂರು1 hour ago

BBMP Scam: ನಕಲಿ ಸೊಸೈಟಿಗಳಿಗೆ ಬಿಬಿಎಂಪಿ 102 ಕೋಟಿ ರೂ. ವರ್ಗಾವಣೆ; ಬಯಲಾಯ್ತು ಮತ್ತೊಂದು ಹಗರಣ!

Assam Tour
ಪ್ರವಾಸ1 hour ago

Assam Tour: ಅಸ್ಸಾಂನ ಪೆಲ್ಲಿಂಗ್‌ನಲ್ಲಿ ಮೋಡಿ ಮಾಡುವ 8 ಆಕರ್ಷಕ ಸಂಗತಿಗಳಿವು

Ashada Month
ಧಾರ್ಮಿಕ2 hours ago

Ashada Month: ಆಷಾಢವನ್ನು ಅಶುಭ ತಿಂಗಳು ಅನ್ನುವುದೇಕೆ? ಇದಕ್ಕಿದೆ ವೈಜ್ಞಾನಿಕ ಕಾರಣ!

Mango Storage
ಆಹಾರ/ಅಡುಗೆ2 hours ago

Mango Storage: ಮಾವಿನ ಹಣ್ಣಿನ ಸೀಸನ್‌ ಮುಗಿದರೇನಂತೆ? ತಿಂಗಳ ಕಾಲ ಇದನ್ನು ಶೇಖರಿಸಿ ಇಡುವ ವಿಧಾನ ಇಲ್ಲಿದೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ14 hours ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ21 hours ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು2 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ2 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ5 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 week ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

ಟ್ರೆಂಡಿಂಗ್‌