ವಿಸ್ತಾರ TOP 10 News | ಮೋದಿ ಹವಾದಿಂದ ಕ್ರಿಕೆಟ್‌ ದಾಖಲೆವರೆಗೆ ದಿನದ ಪ್ರಮುಖ ಸುದ್ದಿಗಳು - Vistara News

ಕರ್ನಾಟಕ

ವಿಸ್ತಾರ TOP 10 News | ಮೋದಿ ಹವಾದಿಂದ ಕ್ರಿಕೆಟ್‌ ದಾಖಲೆವರೆಗೆ ದಿನದ ಪ್ರಮುಖ ಸುದ್ದಿಗಳು

ದಿನಪೂರ್ತಿ ದೇಶ, ವಿದೇಶ ಹಾಗೂ ಸ್ಥಳೀಯವಾಗಿ ನಡೆಯುವ ಅನೇಕ ಘಟನೆಗಳಲ್ಲಿ ಆಯ್ದ, ಪ್ರಮುಖ ಹತ್ತು ಸುದ್ದಿಗಳು ವಿಸ್ತಾರ TOP 10 News

VISTARANEWS.COM


on

Top 10 monday 20062022
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕರ್ನಾಟಕದಲ್ಲಿ ದಿನಪೂರ್ತಿ ಮೋದಿ ಹವಾ. ದೇಶದಲ್ಲಿ ಅಗ್ನಿಪಥ ಪ್ರತಿಭಟನೆ ಮುಂದುವರಿದಿದೆಯಾದರೂ ಕಳೆದ ಕೆಲ ದಿನಗಳ ಹೋಲಿಕೆಯಲ್ಲಿ ತಣ್ಣಗಾಗಿದೆ. ಮಂಗಳವಾರ ಅಂತಾರಾಷ್ಟ್ರೀಯ ಯೋಗದಿನಕ್ಕೆ ಇಡೀ ದೇಶ, ವಿಶೇಷವಾಗಿ ಮೈಸೂರು ಸಜ್ಜಾಗುತ್ತಿವುದುದು, ಮುಸ್ಲಿಂ ಹೆಣ್ಣು ಮಕ್ಕಳ ವಿವಾಹ ಕುರಿತು ನ್ಯಾಯಾಲಯದ ಆದೇಶ, ಭಾರತ ಕ್ರಿಕೆಟ್‌ ತಂಡದ ವಿಶೇಷ ದಾಖಲೆ, ರಾಷ್ಟ್ರಪತಿ ಚುನಾವಣೆ ಸೇರಿ ದಿನಪೂರ್ತಿ ನಡೆದ ಘಟನಾವಳಿಗಳ ಪ್ರಮುಖ ಹತ್ತು ಸುದ್ದಿಗಳ ಗುಚ್ಛ ವಿಸ್ತಾರ TOP 10 News.

1. Modi In Karnataka | 40 ವರ್ಷದಲ್ಲಿ ಆಗದ ಕೆಲಸವನ್ನು 40 ತಿಂಗಳಲ್ಲಿ ಮಾಡುವೆ ಎಂದ ಮೋದಿ
ಕರ್ನಾಟಕದಲ್ಲಿ ಡಬಲ್‌ ಎಂಜಿನ್‌ ಸರ್ಕಾರವಿದ್ದು, ಇದರಿಂದಾಗಿ ಅಭಿವೃದ್ಧಿಯ ವೇಗ ಹೆಚ್ಚಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟಿದ್ದಾರೆ. ಕಳೆದ ೪೦ ವರ್ಷಗಳಿಂದ ಬೆಂಗಳೂರು ಸಬ್‌ಅರ್ಬನ್‌ ಯೋಜನೆ ನನೆಗುದಿಗೆ ಬೀಳಲು ಕಾರಣವಾದ ಹಿಂದಿನ ಸರ್ಕಾರಗಳನ್ನು ಮೋದಿ ಟೀಕಿಸಿದರು. ಬೆಂಗಳೂರಿನ ಕೊಮ್ಮಘಟ್ಟದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬೆಂಗಳೂರು ಸಬ್ ಅರ್ಬನ್ ಸೇರಿ ವಿವಿಧ ಯೋಜನೆಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಯಲ್ಲಿ ಮಾತನಾಡಿದರು. ಬೆಂಗಳೂರಿನ ಐಐಎಸ್‌ಸಿಯಲ್ಲಿ, ನಂತರ ಜ್ಞಾನಭಾರತಿಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಮೋದಿ ಭಾಗಿಯಾದರು. (ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ)

೨. yoga day 2022 | ಸಾಂಸ್ಕೃತಿಕ ನಗರಿ ಮೈಸೂರು ಯೋಗ ನಗರಿಯಾಗಿದ್ದು ಹೇಗೆ?
ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಧಾನ ಕಾರ್ಯಾಕ್ರಮ ಈ ಬಾರಿ ನಮ್ಮ ಸಾಂಸ್ಕೃತಿಕ ನಗರಿ, ಯೋಗ ನಗರಿ ಮೈಸೂರಿನಲ್ಲಿ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದರಿಂದ ಇಡೀ ಜಗತ್ತು ಮೈಸೂರಿನತ್ತ ನೋಡುತ್ತಿದೆ. ಮೈಸೂರಿಗೂ ಯೋಗಕ್ಕೂ ಇರುವ ಸಂಬಂಧವೇನು?, ಸಾಂಸ್ಕೃತಿಕ ನಗರಿ ಯೋಗ ನಗರಿಯಾಗಿದ್ದು ಹೇಗೆ? ಇಲ್ಲಿದೆ ಕುತೂಹಲಕರ ಮಾಹಿತಿ.(ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ)
ಪ್ರಧಾನಿ ನರೇಂದ್ರ ಮೋದಿ ಭಾಗವಹಿಸುವ ಕಾರ್ಯಕ್ರಮಕ್ಕೆ ಮಳೆ ಅಡ್ಡಿ ಉಂಟುಮಾಡುತ್ತದೆಯೇ ಎಂಬುದೂ ಕುತೂಹಲದ ವಿಚಾರವಾಗಿದೆ. (ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ)

೩. ರಾಹುಲ್‌ಗೆ ಇಂದೂ ಇ.ಡಿ ಅಗ್ನಿ ಪರೀಕ್ಷೆ: ನಾಲ್ಕನೇ ಬಾರಿ ವಿಚಾರಣೆಯ ಬಿಸಿ
ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ನಾಲ್ಕನೇ ಬಾರಿಗೆ ಜಾರಿ ನಿರ್ದೇಶನಾಲಯಕ್ಕೆ ಸೋಮವಾರ ಹಾಜರಾಗಿದ್ದಾರೆ. ನ್ಯಾಷನಲ್‌ ಹೆರಾಲ್ಡ್‌ಗೆ ಸಂಬಂಧಿಸಿ ನಡೆದಿದೆ ಎನ್ನಲಾಗಿರುವ ಅಕ್ರಮ ಹಣಕಾಸು ವರ್ಗಾವಣೆ ಹಗರಣ ಕುರಿತು ರಾಹುಲ್‌ ಗಾಂಧಿ ಇಡಿ ವಿಚಾರಣೆಯನ್ನು ಎದುರಿಸುತ್ತಿದ್ದಾರೆ. ಕಾಂಗ್ರೆಸ್‌ ಇದರ ವಿರುದ್ಧ ಪ್ರತಿಭಟನೆ ನಡೆಸುತ್ತಿದೆ.(ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ)

೪. Agnipath | ಅಗ್ನಿಪಥ್‌ ಯೋಜನೆ ವಿರೋಧಿಸಿ ಭಾರತ ಬಂದ್‌ ಕರೆ, ಹಲವು ರಾಜ್ಯಗಳಲ್ಲಿ ಹೈ ಅಲರ್ಟ್
ಹತ್ತಕ್ಕೂ ಹೆಚ್ಚು ರಾಜ್ಯಗಳಲ್ಲಿ ನೂತನ ಸೇನಾ ನೇಮಕಾತಿ ಅಗ್ನಿಪಥ್‌ ಯೋಜನೆ ವಿರೋಧಿಸಿ ಪ್ರತಿಭಟನೆ ಮುಂದುವರಿದಿದ್ದು, ಸೋಮವಾರ ಕೆಲ ಗುಂಪುಗಳು ಭಾರತ ಬಂದ್‌ಗೆ ಕರೆ ನೀಡಿದ್ದವು. ಅಗ್ನಿಪಥ್‌ ಯೋಜನೆಯನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ ಎಂದು ಸೇನಾ ಮುಖ್ಯಸ್ಥರು ಭಾನುವಾರ ಹೇಳಿಕೆ ನೀಡಿದ ಬೆನ್ನಲ್ಲೇ ಪ್ರತಿಭಟನಾಕಾರರು ಭಾರತ ಬಂದ್‌ ನಡೆಸಲು ನಿರ್ಧರಿಸಿದ್ದರು.‌ ಆದರೆ ಪ್ರತಿಭಟನೆಯ ಬಿಸಿ ತಣ್ಣಗಾಗುವ ಲಕ್ಷಣ ಗೋಚರಿಸಿದೆ. (ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ)
ಒಂದೆಡೆ ಪ್ರತಿಭಟನೆಗಳು ನಡೆಯುತ್ತಿರುವಂತೆಯೇ ಮತ್ತೊಂದೆಡೆ ಅಗ್ನಿಪಥ್‌ ಮೂಲಕ ಮೊದಲ ಬಾರಿಗೆ ನೌಕಾಪಡೆಗೆ ಮಹಿಳಾ ನಾವಿಕರ ನೇಮಕಕ್ಕೆ ಚಾಲನೆ ದೊರೆತಿದೆ. (ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ)

೫. ಮುಸ್ಲಿಂ ಹುಡುಗಿಯರು 16ನೇ ವರ್ಷಕ್ಕೆ ಮದುವೆಯಾಗಬಹುದು ಎಂದ ಕೋರ್ಟ್‌
ದೇಶದಲ್ಲಿ ಹೆಣ್ಮಕ್ಕಳಿಗೆ ಮದುವೆ ಮಾಡಬೇಕಾದರೆ ೧೮ ವರ್ಷ ತುಂಬಿರಬೇಕು. ಮುಂದಿನ ದಿನಗಳಲ್ಲಿ ಇದನ್ನು ೨೧ ವರ್ಷಕ್ಕೆ ಏರಿಸುವ ಪ್ರಸ್ತಾಪವನ್ನು ಕೇಂದ್ರ ಸರಕಾರ ಹೊಂದಿದೆ. ಅದರ ನಡುವೆಯೇ ಹುಡುಗಿಯೊಬ್ಬಳಿಗೆ ೧೬ ವರ್ಷಕ್ಕೇ ಮದುವೆ ಮಾಡಬಹುದು ಎಂದು ಪಂಜಾಬ್‌ ಮತ್ತು ಹರಿಯಾಣ ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ. (ಸಂಪೂರ್ಣಸುದ್ದಿಗಾಗಿ ಇಲ್ಲಿ ಓದಿ)

೬. ಸೋಲೇ ಇಲ್ಲ: ತವರಿನಲ್ಲಿ 9 ಸೋಲು ರಹಿತ ಸರಣಿ ಸಾಧನೆ ಮಾಡಿ ಆಸ್ಟ್ರೇಲಿಯಾ ದಾಖಲೆ ಮುರಿದ ಭಾರತ
ತವರಿನ ನೆಲದಲ್ಲಿ ಸೋಲು ರಹಿತ 9 ಟಿ೨೦ ಸರಣಿಯಲ್ಲಿ (ಗೆಲುವು ಮತ್ತು ಡ್ರಾ ಸೇರಿಕೊಂಡು) ಪಾಲ್ಗೊಂಡ ಶ್ರೇಯಸ್ಸಿಗೆ ಭಾರತ ಕ್ರಿಕೆಟ್‌ ತಂಡ ಪಾತ್ರವಾಗಿದೆ. ಈ ಮೂಲಕ 12 ವರ್ಷಗಳ ಹಿಂದೆ ಆಸ್ಟ್ರೇಲಿಯಾ ತಂಡ 8 ಸರಣಿಯಲ್ಲಿ ಸೋಲು ಕಾಣದೇ ನಿರ್ಮಿಸಿದ್ದ ದಾಖಲೆ ಮುರಿದಿದೆ. (ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ)

೭. ವಿಸ್ತಾರ Explainer: ಅಮೆರಿಕಕ್ಕೆ ರಿಸೆಷನ್ ಭೀತಿ, ಭಾರತಕ್ಕೂ ಫಜೀತಿ?
ಆರ್ಥಿಕ ಹಿಂಜರಿತದ ಕಡೆಗೆ ಅಮೆರಿಕ ಜಾರಿದೆಯೇ ಎಂಬ ಪ್ರಶ್ನೆ ಎದ್ದಿದೆ. ಬಿಲಿಯನೇರ್‌ ಹೂಡಿಕೆದಾರ ಲಿಯೋನ್‌ ಕೂಪರ್‌ಮ್ಯಾನ್‌ ಹೇಳುವ ಪ್ರಕಾರ, ಮುಂದಿನ ವರ್ಷ ಅಮೆರಿಕದ ಆರ್ಥಿಕತೆ ಹಿಂಜರಿತಕ್ಕೀಡಾಗಲಿದೆ. ಇದಕ್ಕೆ ಕಾರಣ ಒಟ್ಟಾರೆ ಎಕಾನಮಿಯ ಮಂದಗತಿ. ಅಮೆರಿಕದ ಕಂಪನಿಗಳ ಆದಾಯ ಇಳಿಕೆಯಾಗಲಿದ್ದು, ಪರಿಣಾಮವಾಗಿ ಷೇರು ಸೂಚ್ಯಂಕ ಎಸ್‌ ಆಂಡ್‌ಪಿ 40% ಕುಸಿಯಲಿದೆ. ಸದ್ಯದ ಭವಿಷ್ಯದಲ್ಲಿ ಷೇರು ಪೇಟೆಯಲ್ಲಿ ಗೂಳಿಯ ಅಬ್ಬರ ಕಾಣಲು ಸಿಗಲಿಕ್ಕಿಲ್ಲ. ಅಮೆರಿಕದಲ್ಲಿ ಆರ್ಥಿಕ ಹಿಂಜರಿತ ಸಂಭವಿಸಿದರೆ ಏನಾದೀತು? ಭಾರತದ ಮೇಲೆ ಇದರ ಪರಿಣಾಮ ಏನು? ಇಲ್ಲಿದೆ ವಿಸ್ತೃತ ಮಾಹಿತಿ. (ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ)

೮. ವಿಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿಯಾಗಲು ಒಪ್ಪದ ಗಾಂಧಿ ಮೊಮ್ಮಗ; ದೇಶ ಒಪ್ಪುವವರನ್ನು ಆರಿಸಲು ಸಲಹೆ
ರಾಷ್ಟ್ರಪತಿ ಚುನಾವಣೆಯಲ್ಲಿ (President Election) ಎಲ್ಲರೂ ಒಟ್ಟಾಗಿ ಅಭ್ಯರ್ಥಿಯನ್ನೊಬ್ಬರನ್ನು ಕಣಕ್ಕೆ ಇಳಿಸುವ ಪ್ರಯತ್ನದಲ್ಲಿ ಪ್ರತಿಪಕ್ಷಗಳೆಲ್ಲ ತೊಡಗಿವೆ. ಅಭ್ಯರ್ಥಿ ಯಾರು? ಎಂದು ಪ್ರಶ್ನೆ ಬಂದಾಗ ಮೊದಲಿಗೆ ಕೇಳಿಬಂದಿದ್ದು ಶರದ್‌ ಪವಾರ್‌. ಆದರೆ ಶರದ್‌ ಪವಾರ್‌ ತಾವು ರಾಷ್ಟ್ರಪತಿ ಹುದ್ದೆ ರೇಸ್‌ನಲ್ಲಿ ಇರಲು ಇಷ್ಟಪಡುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ ಮೇಲೆ, ಪ್ರತಿಪಕ್ಷಗಳ ಪ್ರಮುಖರೆಲ್ಲ ಸೇರಿ, ಮಹಾತ್ಮ ಗಾಂಧಿ ಮೊಮ್ಮಗ, ಪಶ್ಚಿಮ ಬಂಗಾಳ ಮಾಜಿ ರಾಜ್ಯಪಾಲ ಗೋಪಾಲಕೃಷ್ಣ ಗಾಂಧಿಯವರ ಬಳಿ ಪ್ರಸ್ತಾಪ ಇಟ್ಟಿದ್ದರು. ಅಂದರೆ ರಾಷ್ಟ್ರಪತಿ ಹುದ್ದೆಗೆ ಪ್ರತಿಪಕ್ಷಗಳ ಜಂಟಿ ಅಭ್ಯರ್ಥಿಯಾಗುವಂತೆ ಮನವಿ ಮಾಡಿದ್ದರು. ಆದರೆ ಅವರೀಗ ಈ ಆಫರ್‌ನ್ನು ಒಪ್ಪಿಕೊಳ್ಳಲಿಲ್ಲ. ಪ್ರೆಸಿಡೆಂಟ್‌ ಎಲೆಕ್ಷನ್‌ಗೆ ನಿಲ್ಲುವುದಿಲ್ಲ ಎಂದು ಪ್ರಕಟಣೆಯನ್ನು ಹೊರಡಿಸಿದ್ದಾರೆ. (ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ)

೯. ಏರ್‌ ಇಂಡಿಯಾದಿಂದ ಮುಂದಿನ 5 ವರ್ಷಗಳಲ್ಲಿ 200 ಹೊಸ ವಿಮಾನಗಳ ಖರೀದಿಗೆ ಸಿದ್ಧತೆ
ಏರ್‌ ಇಂಡಿಯಾದ ತೆಕ್ಕೆಗೆ ಮುಂದಿನ 5 ವರ್ಷಗಳಲ್ಲಿ 200 ವಿಮಾನಗಳು ಸೇರ್ಪಡೆಯಾಗಲಿದೆ. “ಇನ್ನು ಹೆಚ್ಚು ಸಮಯವಿಲ್ಲ, ಏರ್‌ ಇಂಡಿಯಾ ಅತ್ಯಂತ ತ್ವರಿತವಾಗಿ ವಿಸ್ತರಿಸಲಿದೆ. ಈ ನಿಟ್ಟಿನಲ್ಲಿ ಮುಂದಿನ ಐದು ವರ್ಷಗಳಲ್ಲಿ ಇನ್ನೂರಕ್ಕೂ ಹೆಚ್ಚು ವಿಮಾನಗಳು ಸೇರ್ಪಡೆಯಾಗಲಿದೆʼʼ ಎಂದು ಏರ್‌ ಇಂಡಿಯಾದ ಮೂಲಗಳು ತಿಳಿಸಿವೆ. (ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ)

೧೦. ಚಾಮರಾಜಪೇಟೆ ಮೈದಾನದಲ್ಲಿ ಯೋಗಕ್ಕೆ ಬ್ರೇಕ್‌: ಸಂಘಟನೆಗಳಿಗೆ ನಿರಾಸೆ
ಚಾಮರಾಜಪೇಟೆ ಮೈದಾನದಲ್ಲಿ ಯೋಗ ದಿನಾಚರಣೆ ವಿವಾದಕ್ಕೆ ಸಂಬಂಧಪಟ್ಟಂತೆ ಸದ್ಯದ ಪರಿಸ್ಥಿತಿಯಲ್ಲಿ ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಬಿಬಿಎಂಪಿ ತಿಳಿಸಿದೆ. ಮಂಗಳವಾರ (ಜೂನ್‌ 21) ದೇಶಾದ್ಯಂತ ಯೋಗ ದಿನಾಚರಣೆ ಅಂಗವಾಗಿ ಹಲವು ಸಂಘಟನೆಗಳು ಯೋಗ ದಿನಾಚರಣೆಗೆ ಅನುಮತಿ ಕೋರಿದ್ದವು. ಆದರೆ ಇದೀಗ ಬಿಬಿಎಂಪಿ ಅನುಮತಿ ನಿರಾಕರಿಸಿರುವುದು ಸಂಘಟನೆಗಳಿಗೆ ಬೇಸರ ಮೂಡಿಸಿದೆ. ನ್ಯಾಯಾಲಯದ ಕದ ತಟ್ಟುವುದಾಗಿ ತಿಳಿಸಿವೆ. (ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ)

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Prajwal Revanna Case: ಪೆನ್​​ಡ್ರೈವ್ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ; ದೇವರಾಜೇಗೌಡ ತಪ್ಪು ಮಾಹಿತಿ ನೀಡಿದ್ದಾರೆ: ಶಿವರಾಮೇಗೌಡ

Prajwal Revanna Case: ʼʼಹಾಸನ ಸಂಸದ ಪ್ರಜ್ವಲ್​ ರೇವಣ್ಣ (Prajwal Revanna) ಅವರದ್ದು ಎನ್ನಲಾಗಿರುವ ಪೆನ್​​ಡ್ರೈವ್ ವಿಚಾರಕ್ಕೂ ನನಗೂ ಸಂಬಂಧವಿಲ್ಲ. ಯಾವುದೋ ವಿಚಾರದಲ್ಲಿ ನನ್ನನ್ನು ದೇವರಾಜೇಗೌಡ ಸಿಕ್ಕಿಸಿದ್ದಾನೆʼʼ ಎಂದು ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಹೇಳಿದ್ದಾರೆ. ʼʼಪೆನ್​​ಡ್ರೈವ್​​​ ಹೊರಗೆ ಬಿಟ್ಟಿದ್ದು ದೇವರಾಜೇಗೌಡ ಮತ್ತು ಕಾರ್ತಿಕ್. ಹೀಗಾಗಿ ಈ ಇಬ್ಬರನ್ನೂ ​ವಿಚಾರಣೆ ನಡೆಸಬೇಕು. ಈ ಪ್ರಕರಣಕ್ಕೂ ಡಿ.ಕೆ.ಶಿವಕುಮಾರ್​ ಅವರಿಗಾಗಲಿ ಮತ್ತು ನನಗಾಗಲಿ ಯಾವುದೆ ಸಂಬಂಧವಿಲ್ಲʼʼ ಎಂದು ಸ್ಪಷ್ಟಪಡಿಸಿದ್ದಾರೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ʼʼಹಾಸನ ಸಂಸದ ಪ್ರಜ್ವಲ್​ ರೇವಣ್ಣ (Prajwal Revanna) ಅವರದ್ದು ಎನ್ನಲಾಗಿರುವ ಪೆನ್​​ಡ್ರೈವ್ ವಿಚಾರಕ್ಕೂ ನನಗೂ ಸಂಬಂಧವಿಲ್ಲ. ಯಾವುದೋ ವಿಚಾರದಲ್ಲಿ ನನ್ನನ್ನು ದೇವರಾಜೇಗೌಡ ಸಿಕ್ಕಿಸಿದ್ದಾನೆʼʼ ಎಂದು ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಹೇಳಿದ್ದಾರೆ. ʼʼಪೆನ್​​ಡ್ರೈವ್​​​ ಹೊರಗೆ ಬಿಟ್ಟಿದ್ದು ದೇವರಾಜೇಗೌಡ ಮತ್ತು ಕಾರ್ತಿಕ್. ಹೀಗಾಗಿ ಈ ಇಬ್ಬರನ್ನೂ ​ವಿಚಾರಣೆ ನಡೆಸಬೇಕು. ಈ ಪ್ರಕರಣಕ್ಕೂ ಡಿ.ಕೆ.ಶಿವಕುಮಾರ್​ ಅವರಿಗಾಗಲಿ ಮತ್ತು ನನಗಾಗಲಿ ಯಾವುದೆ ಸಂಬಂಧವಿಲ್ಲʼʼ ಎಂದು ಸ್ಪಷ್ಟಪಡಿಸಿದ್ದಾರೆ.

ʼʼದೇವರಾಜೇಗೌಡ ನನಗೆ ಫೋನ್ ಮಾಡಿ, ಡಿ.ಕೆ.ಶಿವಕುಮಾರ್​ ಅವರನ್ನು ಭೇಟಿ ಮಾಡಿಸುವಂತೆ ಹೇಳಿದ್ದ. ನಾನು ಆಗಲಿ ಎಂದು ಫೋನ್​ನಲ್ಲಿ ಹೇಳಿದ್ದೆ. ಬಳಿಕ ಡಿಕೆಶಿ ಅವರಿಗೆ ಕರೆ ಮಾಡಿ ಹಲೋ ದೇವರಾಜೇಗೌಡ ಎಂದಿದ್ದು ಬಿಟ್ಟು ಬೇರೇನೂ ಕೇಳಿಲ್ಲ. ಇದನ್ನೇ ಮುಂದಿಟ್ಟುಕೊಂಡು ದೇವರಾಜೇಗೌಡ ಸುಳ್ಳು ಮಾಹಿತಿ ನೀಡಿದ್ದಾನೆ. ದೇವರಾಜೇಗೌಡ ಏ. 29ರಂದು ಬೆಂಗಳೂರಿನ ಎಂ.ಜಿ.ರಸ್ತೆಯ ಬೌರಿಂಗ್​ ಕ್ಲಬ್​ನಲ್ಲಿ ನಮ್ಮನ್ನು ಭೇಟಿ ಮಾಡಿದ್ದೆ ಎಂದು ತಿಳಿಸಿದ್ದಾನೆ. ಮೋಸ್ಟ್ ಕ್ರಿಮಿನಲ್ ಮ್ಯಾನ್ ಇವನು. ಇವನ ಜತೆ ಯಾರೇ ವ್ಯವಹರಿಸುತ್ತಿದ್ದರೂ ಎಚ್ಚರಿಕೆಯಿಂದ ಇರಬೇಕು. ಬರೀ ಒಂದು ಫೋನ್‌ ಮಾತಾಡಿದ್ದಕ್ಕೆ ಸೀನ್ ಕ್ರಿಯೇಟ್ ಮಾಡಿದ್ದಾನೆʼʼ ಎಂದು ಶಿವರಾಮೇಗೌಡ ಹೇಳಿದ್ದಾರೆ.

ʼʼಅವನು (ದೇವರಾಜೇಗೌಡ) ಒಳಗೆ ಹೋದ ಮೇಲೆ ಹುಚ್ಚು ನಾಯಿ ಒಳಗೆ ಹೋಯಿತಲ್ಲ ಎಂದು ಪ್ರಾರ್ಥನೆ ಮಾಡಿದ್ದೇನೆ. ಪ್ರಜ್ವಲ್​ ರೇವಣ್ಣ ಅವರದ್ದು ಎನ್ನಲಾಗಿರುವ ಪೆನ್​​ಡ್ರೈವ್ ಅನ್ನು ಮಾರಾಟಕ್ಕೆ ಇಟ್ಟಿದ್ದೇ ದೇವರಾಜೇಗೌಡ. ಪೊಲೀಸ್ ಬಾಷೆಯಲ್ಲಿ ವಿಚಾರಿಸಬೇಕು. ಆಗ ಸತ್ಯ ಬಾಯಿ ಬಿಡುತ್ತಾನೆʼʼ ಎಂದು ಶಿವರಾಮೇಗೌಡ ವಾಗ್ದಾಳಿ ನಡೆಸಿದ್ದಾರೆ.

ಇನ್ನು ದೇವರಾಜೇಗೌಡ ಭೇಟಿಯ ಕುರಿತು ಸ್ಪಷ್ಟನೆ ನೀಡಿದ ಶಿವರಾಮೇಗೌಡ ಅವರು, ʼʼನಾನು ದೇವರಾಜೇಗೌಡ ಜತೆ ಮೊದಲು ಮಾತನಾಡಿದ್ದೆ ಏಪ್ರಿಲ್ 29ರಂದು. ಅಂದು ಪೆನ್‌ಡ್ರೈವ್‌ ಕೇಸ್‌ ಅನ್ನು ಸಿಎಂ, ಡಿಸಿಎಂ ಎಲ್ಲ ಸೇರಿ ಮುಚ್ಚಿ ಹಾಕ್ತಾರೆ ಕಣಣ್ಣ ಎಂದು ದೇವರಾಜೆಗೌಡ ಹೇಳಿದ್ದ. ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರು ಬಿಟ್ಟು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೆಸರನ್ನು ಮಾತ್ರ ಹೇಳುತ್ತಿದ್ದಾನೆ. ವಿಚಾರಣೆಯ ದಿಕ್ಕು ತಪ್ಪಿಸಲು ಕಾಣದ ಕೈಗಳು ಕೆಲಸ ಮಾಡುತ್ತಿವೆʼʼ ಎಂದು ಆರೋಪಿಸಿದ್ದಾರೆ.

ಮಾನನಷ್ಟ ಮೊಕದ್ದಮೆ ಹಾಕುತ್ತೇನೆ

ʼʼಕೇಸ್‌ನಲ್ಲಿ ಪದೇ ಪದೆ ನನ್ನ ಹೆಸರು ಪ್ರಸ್ತಾವಿಸುವ ಕಾರಣ ದೇವರಾಜೇಗೌಡ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ. ಈ ಬಗ್ಗೆ ಈಗಾಗಲೇ ವಕೀಲರ ಜತೆ ಮಾತನಾಡಿದ್ದೇನೆ. ಶ್ರೀಘ್ರದಲ್ಲಿಯೇ ಲೀಗಲ್ ನೋಟಿಸ್‌ ಕೊಡಲಿದ್ದೇವೆ. ಅವನು ನನ್ನ ಬಗ್ಗೆ ಹೇಳಿರುವ ವಿಡಿಯೊವನ್ನು ಈಗಾಗಲೇ ವಕೀಲರಿಗೆ ಕೊಟ್ಟಿದ್ದೇನೆ. ದೇವೇಗೌಡರಿಗೆ ಈ ವಯಸ್ಸಿನಲ್ಲಿ ನೋವು ತಂದ್ರಲ್ಲ ಎಂಬ ನೋವು ನನಗೆ ಕಾಡುತ್ತಿದೆʼʼ ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್‌ ಸೇರ್ಪಡೆ?

ʼʼನಾನು ಈಗ ಬಿಜೆಪಿಗೆ ರಾಜೀನಾಮೆ ಕೊಟ್ಟಿದ್ದೇನೆ. ಮುಂದೆ ಯಾವ ಪಕ್ಷಕ್ಕೆ ಸೇರುತ್ತೇನೆ ಅಂತ ಹೇಳುತ್ತೇನೆ. ಈಗಾಗಲೇ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ರಾಜೀನಾಮೆ ಪತ್ರ ಕಳಿಸಿದ್ದೇನೆ. ಅವರು ಇನ್ನೂ ಏನು ಹೇಳಿಲ್ಲʼʼ ಎಂದು ಶಿವರಾಮೇಗೌಡ ತಿಳಿಸಿದ್ದಾರೆ. ʼʼಈ ಹಿಂದೆ ಅಧಿಕಾರ ಕೊಡುತ್ತಾರೆ ಅಂತ ಜೆಡಿಎಸ್​ಗೆ ಸೇರಿದೆ. ಆಮೇಲೆ ರುಬ್ಬಿ ಹೊರಗಡೆಯೂ ಕಳುಹಿಸಿದ್ದಾರೆ. ನಾನು ಮೂಲತಃ ಕಾಂಗ್ರೆಸ್ ವ್ಯಕ್ತಿ. ಯೂತ್‌ ಕಾಂಗ್ರೆಸ್​ನಲ್ಲೂ ಇದ್ದೆʼʼ ಎಂದು ಹೇಳಿದ್ದಾರೆ.

ಇದನ್ನೂ ಓದಿ: Prajwal Revanna Case: ಅಶ್ಲೀಲ ವಿಡಿಯೊ ವೈರಲ್ ಕೇಸ್‌; ವಕೀಲ ದೇವರಾಜೇಗೌಡ ಎಸ್‌ಐಟಿ ಕಸ್ಟಡಿ ಅವಧಿ 2 ವಿಸ್ತರಣೆ

Continue Reading

ಕರ್ನಾಟಕ

Cholera: ಸಿದ್ದರಾಮಯ್ಯ ತವರು ಕ್ಷೇತ್ರದಲ್ಲಿ ಕಾಲರಾ ಅಟ್ಟಹಾಸ; ಕಲುಷಿತ ನೀರು ಕುಡಿದು 114 ಜನಕ್ಕೆ ಕಾಯಿಲೆ!

Cholera: ಗ್ರಾಮದಲ್ಲಿ 12 ಕೈ ಪಂಪ್‌ಗಳಿದ್ದು, ನಾಲ್ಕು ಕೈಪಂಪ್‌ಗಳ ನೀರು ಕುಡಿಯಲು ಯೋಗ್ಯವಿಲ್ಲ. ಆತಂಕಕಾರಿ ವರದಿ ಇದ್ದರೂ ತಗಡೂರು ಗ್ರಾಮ ಪಂಚಾಯಿತಿ ಅಧಿಕಾರಿಗಳು ಎಚ್ಚೆತ್ತುಕೊಂಡು, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಿಲ್ಲ. ಹಾಗಾಗಿ, ಕಲುಷಿತ ನೀರು ಸೇವಿಸಿ ನೂರಾರು ಜನ ಅಸ್ವಸ್ಥರಾಗಿದ್ದಾರೆ. ಇದರಿಂದಾಗಿ ಗ್ರಾಮಸ್ಥರು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ಕಿಡಿ ಕಾರಿದ್ದಾರೆ.

VISTARANEWS.COM


on

Cholera
Koo

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ವಿಧಾನಸಭೆ ಕ್ಷೇತ್ರವಾದ ವರುಣದಲ್ಲಿ (Varuna) ಶುದ್ಧ ಕುಡಿಯುವ ನೀರಿನ ಸಮಸ್ಯೆ ತಾಂಡವವಾಡುತ್ತಿದ್ದು, ತಗಡೂರು ಗ್ರಾಮದಲ್ಲಿ ಇದರಿಂದ ಜನ ಕಾಲರಾಗೆ ತುತ್ತಾಗುತ್ತಿದ್ದಾರೆ. ತಗಡೂರು ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೆ, ಕಲುಷಿತ ನೀರು ಸೇವಿಸಿದ ಕಾರಣ 25 ಗ್ರಾಮಸ್ಥರು ಸೇರಿ 114 ಮಂದಿ ಕಾಲರಾ (Cholera) ಕಾಯಿಲೆಯಿಂದ ಬಳಲುತ್ತಿದ್ದಾರೆ. ವಾಂತಿ-ಭೇದಿಯಿಂದ ಜನ ತತ್ತರಿಸಿ ಹೋಗಿದ್ದು, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ಜನಾಕ್ರೋಶ ವ್ಯಕ್ತವಾಗಿದೆ.

ತಗಡೂರು ಗ್ರಾಮವು ನಂಜನಗೂಡು ತಾಲೂಕಿಗೆ ಸೇರಿದರೂ ವರುಣ ವಿಧಾನಸಭೆ ಕ್ಷೇತ್ರದ ವ್ಯಾಪ್ತಿಗೆ ಬರುತ್ತದೆ. ತಗಡೂರು ಗ್ರಾಮ ಪಂಚಾಯಿತಿಯ 1, 2 ಹಾಗೂ 3ನೇ ವಾಸಿಸುತ್ತಿರುವ ಜನರು ಕಾಲರಾಗೆ ತುತ್ತಾಗಿದ್ದಾರೆ. 114 ರೋಗಿಗಳಲ್ಲಿ ಐವರ ಸ್ಥಿತಿ ಗಂಭೀರವಾದ ಕಾರಣ ಅವರನ್ನು ಮೈಸೂರು ಆಸ್ಪತ್ರೆಗೆ ರವಾನಿಸಲಾಗಿದೆ. ಉಳಿದವರಿಗೆ ತಗಡೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದರ ಮಧ್ಯೆಯೇ, ಕಾಲರಾ ಹರಡಲು ಅಧಿಕಾರಿಗಳ ನಿರ್ಲಕ್ಷ್ಯವೇ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

12 ಕೈ ಪಂಪ್‌ಗಳಿದ್ದರೂ ಪ್ರಯೋಜನ ಇಲ್ಲ

ಗ್ರಾಮದಲ್ಲಿ 12 ಕೈ ಪಂಪ್‌ಗಳಿದ್ದು, ನಾಲ್ಕು ಕೈಪಂಪ್‌ಗಳ ನೀರು ಕುಡಿಯಲು ಯೋಗ್ಯವಿಲ್ಲ. ಆತಂಕಕಾರಿ ವರದಿ ಇದ್ದರೂ ತಗಡೂರು ಗ್ರಾಮ ಪಂಚಾಯಿತಿ ಅಧಿಕಾರಿಗಳು ಎಚ್ಚೆತ್ತುಕೊಂಡು, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಿಲ್ಲ. ಹಾಗಾಗಿ, ಕಲುಷಿತ ನೀರು ಸೇವಿಸಿ ನೂರಾರು ಜನ ಅಸ್ವಸ್ಥರಾಗಿದ್ದಾರೆ. ಇದರಿಂದಾಗಿ ಗ್ರಾಮಸ್ಥರು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ಕಿಡಿ ಕಾರುತ್ತಿದ್ದಾರೆ.

ಜನಾಕ್ರೋಶದ ಬಳಿಕ ಗ್ರಾಮಕ್ಕೆ ಭೇಟಿ ನೀಡಿದ ಅಧಿಕಾರಿಗಳು.

ದಿಢೀರ್‌ ಕ್ರಮಕ್ಕೆ ಮುಂದಾದ ಅಧಿಕಾರಿಗಳು

ಗ್ರಾಮದಲ್ಲಿ ನೂರಾರು ಜನ ಕಾಲರಾಗೆ ತುತ್ತಾಗಿರುವ ಸುದ್ದಿ ತಿಳಿಯುತ್ತಲೇ ಅಧಿಕಾರಿಗಳ ದಂಡೇ ಗ್ರಾಮಕ್ಕೆ ತೆರಳಿದೆ. ಗ್ರಾಮಕ್ಕೆ ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಕುಮಾರಸ್ವಾಮಿ, ನಂಜನಗೂಡು ತಹಸೀಲ್ದಾರ್ ಶಿವಕುಮಾರ್ ಕಾಸ್ನೂರು, ಜಿಲ್ಲಾ ಕಾಲರಾ ವೈದ್ಯಾಧಿಕಾರಿ ಡಾ. ಪುಟ್ಟತಾಯಮ್ಮ, ತಾಲೂಕು ವೈದ್ಯಾಧಿಕಾರಿ ಡಾ. ಈಶ್ವರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ, ಗ್ರಾಮದಲ್ಲಿರುವ ಸಾರ್ವಜನಿಕರಿಗೆ ಕೂಡ ಪ್ರತಿರೋಧಕ ಚುಚ್ಚುಮದ್ದು ನೀಡಲಾಗುತ್ತಿದೆ. ಪ್ರತಿ ಮನೆ ಮನೆಗೆ ಒಆರ್‌ಎಸ್ ಪೌಡರ್ ವಿತರಣೆ ಮಾಡಲಾಗಿದೆ. ಮನೆಯಲ್ಲಿ ಬಿಸಿ ನೀರು ಸೇವನೆ ಮಾಡಲು ಪ್ರತ್ಯೇಕವಾಗಿ ಕುಡಿಯುವ ನೀರಿನ ಟ್ಯಾಂಕ್ ವ್ಯವಸ್ಥೆ ಮಾಡಲಾಗಿದೆ.

ಗ್ರಾಮದಲ್ಲಿ ಅಧಿಕಾರಿಗಳು ಬೀಡು ಬಿಟ್ಟಿದ್ದು, ದಿನಕ್ಕೆ ಮೂರು ಬಾರಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಜತೆಗೂಡಿ ವೈದ್ಯಾಧಿಕಾರಿಗಳು ಮನೆ ಮನೆಗೆ ಭೇಟಿ ನೀಡುತ್ತಿದ್ದಾರೆ. ಇಷ್ಟಾದರೂ ಪಿಡಿಒ ದಿವಾಕರ್, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಪೂರ್ಣಿಮಾ ನಾಪತ್ತೆಯಾಗಿದ್ದು, ಸಂಬಂಧಪಟ್ಟ ಜಿಲ್ಲಾ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಶಿಸ್ತು ಕ್ರಮ ಕೈಗೊಳ್ಳಬೇಕಿದೆ ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: SSLC Grace Marks: ಯಾರನ್ನು ಕೇಳಿ ಶೇ. 20 ಗ್ರೇಸ್‌ ಮಾರ್ಕ್ಸ್‌ ಕೊಟ್ಟಿರಿ? ಶಿಕ್ಷಣ ಇಲಾಖೆ ವಿರುದ್ಧ ಹರಿಹಾಯ್ದ ಸಿದ್ದರಾಮಯ್ಯ!

Continue Reading

ಮಳೆ

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain : ಭಾನುವಾರದ ವೀಕೆಂಡ್‌ ಮೂಡ್‌ನಲ್ಲಿದ್ದವರಿಗೆ ಮಳೆಯು ಮನೆಯಲ್ಲೇ ಕೂರುವಂತೆ ಮಾಡಿದೆ. ಬೆಂಗಳೂರು, ಆನೇಕಲ್‌ ಸೇರಿದಂತೆ ವಿವಿಧೆಡೆ ಮಳೆಯಾಗುತ್ತಿದ್ದು, ವಿಜಯನಗರದಲ್ಲಿ ಸಿಡಿಲು ಬಡಿದು ಎರಡು ಜಾನುವಾರು ಮೃತಪಟ್ಟಿವೆ. ದಾವಣಗೆರೆಯಲ್ಲಿ ಮಳೆಗೆ ಬೆಳೆಯು ಕೊಚ್ಚಿ ಹೋಗಿದೆ.

VISTARANEWS.COM


on

By

Karnataka rain
Koo

ವಿಜಯನಗರ/ಬೆಂಗಳೂರು: ರಾಜ್ಯಾದ್ಯಂತ ಭಾನುವಾರ ಹಲವೆಡೆ ಗುಡುಗು ಸಹಿತ ಮಳೆ (Karnataka Rain) ಅಬ್ಬರಿಸಿದೆ. ವಿಜಯನಗರ ಜಿಲ್ಲೆಯಲ್ಲಿ ಅರ್ಧ ಗಂಟೆಗೂ ಅಧಿಕ ಸಮಯ ಗುಡುಗು, ಸಿಡಿಲು ಸಹಿತ ಮಳೆ ಸುರಿದಿದೆ. ಹೊಸಪೇಟೆ ತಾಲೂಕಿನ ಗಾದಿಗನೂರು ಗ್ರಾಮದಲ್ಲಿ ಸಿಡಿಲು ಬಡಿದು ಎರಡು ಜಾನುವಾರುಗಳು ಮೃತಪಟ್ಟಿವೆ. ಕೋರಿ ಮಲಿಯಪ್ಪ ಎಂಬ ರೈತರಿಗೆ ಸೇರಿದ ಎತ್ತುಗಳನ್ನು ಹೊಲದಲ್ಲಿ ಮರದಡಿ ಕಟ್ಟಿ ಹಾಕಿದ್ದರು. ಈ ವೇಳೆ ಸಿಡಿಲು ಬಡಿದು ಎರಡು ಎತ್ತುಗಳು ಮೃತಪಟ್ಟಿವೆ. ಅಂದಾಜು ಒಂದು ಲಕ್ಷಕ್ಕೂ ಅಧಿಕ ಮೌಲ್ಯದ ಎತ್ತುಗಳು ಸಾವನ್ನಪ್ಪಿದ್ದರಿಂದ ರೈತ ಕೋರಿ ಮಲಿಯಪ್ಪ ಕಂಗಲಾಗಿದ್ದಾರೆ.

ಬೆಂಗಳೂರು, ಆನೇಕಲ್‌ನಲ್ಲಿ ಗುಡುಗು ಸಹಿತ ಮಳೆ

ರಾಜಧಾನಿ ಬೆಂಗಳೂರಿನಲ್ಲಿ ಮಳೆ ಮುಂದುವರಿದಿದೆ. ಸಂಜೆಗೆ ಆವರಿಸುತ್ತಿದ್ದ ಮಳೆ ಭಾನುವಾರ ಬೆಳಗಿನಿಂದಲೇ ಅಬ್ಬರಿಸುತ್ತಿದೆ. ಎಂಎಸ್ ಬಿಲ್ಡಿಂಗ್ , ವಿಧಾನಸೌಧ , ಶಿವಾನಂದ ಸರ್ಕಲ್, ಶಿವಾಜಿನಗರ ಸೇರಿದಂತೆ ಮೆಜೆಸ್ಟಿಕ್‌ ಸುತ್ತಮುತ್ತ ಮಧ್ಯಾಹ್ನ ಶುರುವಾದ ಮಳೆಯು ಸುಮಾರು 1 ಗಂಟೆಗೂ ಹೆಚ್ಚು ಸಮಯ ಆವರಿಸಿತ್ತು. ಆಗಾಗ ಬರುತ್ತಿದ್ದ ಗುಡುಗು ಜನರನ್ನು ಬೆಚ್ಚಿ ಬೀಳಿಸುತ್ತಿತ್ತು. ಕೆ.ಆರ್ ಸರ್ಕಲ್, ಕಬ್ಬನ್ ಪಾರ್ಕ್ ರಸ್ತೆ, ಲಾಲ್ ಬಾಗ್ ರಸ್ತೆ, ರಾಜಾಜಿನಗರ, ರಾಜಕುಮಾರ್ ರಸ್ತೆಯಲ್ಲಿಯೂ ಮಳೆಯಾಗಿದೆ. ಯಲಹಂಕ, ನ್ಯೂ ಟೌನ್, ದೊಡ್ಡಬಳ್ಳಾಪುರ ಮುಖ್ಯರಸ್ತೆ, ಪುಟ್ಟೇನಹಳ್ಳಿ, ಏರ್‌ಪೋರ್ಟ್‌ ರೋಡ್‌ನಲ್ಲಿ ಮಳೆಯಾಗಿದೆ.

ಇತ್ತ ಆನೇಕಲ್ ಭಾಗದಲ್ಲೂ ಧಾರಾಕಾರ ಮಳೆಯಾಗಿತ್ತು. ಭಾನುವಾರ ಬೆಳಗ್ಗೆಯಿಂದ ಮೋಡ ಕವಿದ ವಾತಾವರಣವಿತ್ತು. ಮಧ್ಯಾಹ್ನದ ವೇಳೆಗೆ ಆಗಮಿಸಿದ ಮಳೆಯು ಆನೇಕಲ್, ಅತ್ತಿಬೆಲೆ, ಸರ್ಜಾಪುರ ಭಾಗದಲ್ಲಿ ಅಬ್ಬರಿಸಿತ್ತು. ಕಳೆದೊಂದು ವಾರದಿಂದ ನಿರಂತರ ಮಳೆಯಿಂದಾಗಿ ಕೃಷಿ ಚಟುವಟಿಕೆ ಚುರುಕುಗೊಂಡಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

ಧಾರವಾಡದಲ್ಲೂ ಮಳೆ

ಪೇಡಾನಗರಿ ಧಾರವಾಡದಲ್ಲೂ ವರುಣನ ಅಬ್ಬರ ಮುಂದುವರಿದಿದೆ. ಮಧ್ಯಾಹ್ನದ ವೇಳೆ ಶುರುವಾದ ಮಳೆಯಿಂದಾಗಿ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು. ಮಳೆಯಿಂದಾಗಿ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

ವಿಜಯನಗರದಲ್ಲಿ ಮರಕ್ಕೆ ಬಡಿದ ಸಿಡಿಲು

ವಿಜಯನಗರದಲ್ಲಿ ಗುಡುಗು ಸಿಡಿಲು ಸಮೇತ ಮಳೆಯಾಗುತ್ತಿದ್ದು, ತೆಂಗಿನ ಮರಕ್ಕೆ ಸಿಡಿಲು ಬಡಿದಿದೆ. ಹೊಸಪೇಟೆ ತಾಲೂಕಿನ ಕೆರೆ ತಾಂಡಾ ಗ್ರಾಮದಲ್ಲಿ ಮರಕ್ಕೆ ಸಿಡಿಲು ಬಡಿದಿದೆ. ವಿಜಯನಗರ ಜಿಲ್ಲೆಯ ಹೊಸಪೇಟೆ, ಕಮಲಾಪುರ, ಹಂಪಿ ಭಾಗದಲ್ಲಿ ಉತ್ತಮ ಮಳೆಯಾಗಿದೆ. ಇತ್ತ ಹೊಸಪೇಟೆ ಹೃದಯ ಭಾಗದಲ್ಲಿ ರಸ್ತೆ ಮೇಲೆ ನೀರು ನಿಂತು ಅವಾಂತರವೇ ಸೃಷ್ಟಿಯಾಗಿತ್ತು. ನೂರು ಹಾಸಿಗೆ ಆಸ್ಪತ್ರೆ, VNC ಕಾಲೇಜಿಗೆ ಹೋಗುವ ರಸ್ತೆ ಮೇಲೆ ನೀರು ನಿಂತಿತ್ತು. ಕೆಲ ಸಮಯ ವಾಹನಗಳ ಸಂಚಾರ ಅಡಚಣೆ ಉಂಟಾಯಿತು

ಇದನ್ನೂ ಓದಿ: Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

ದಾವಣಗೆರೆಯಲ್ಲಿ ನೆಲ ಕಚ್ಚಿದ ಬೆಳೆ

ಶನಿವಾರ ಸುರಿದ ಮಳೆಯಿಂದ ಭತ್ತದ ಬೆಳೆ‌ಯು ನೆಲ ಕಚ್ಚಿದೆ. ದಾವಣಗೆರೆಯ ದೊಡ್ಡಬಾತಿ ಗ್ರಾಮದ ಸುತ್ತಮುತ್ತಲಿನ 20ಕ್ಕೂ ಹೆಚ್ಚು ಎಕರೆ ಭತ್ತದ ಬೆಳೆ ನಾಶವಾಗಿದೆ. ಉಮೇಶ್ ಎಂಬ ಯುವ ರೈತ ಬೆಳೆದಿದ್ದ ಎರಡು ಎಕರೆ ಭತ್ತ ಸಂಪೂರ್ಣ ನಾಶವಾಗಿತ್ತು. ಬರಗಾಲದ ಸಂದರ್ಭದಲ್ಲಿ ಬೋರ್ ವೆಲ್ ನೀರಿನಲ್ಲಿ ಭತ್ತ ಬೆಳೆ ಬೆಳೆದಿದ್ದರು. ಎಕರೆಗೆ 25 ರಿಂದ 30 ಸಾವಿರ ಖರ್ಚು ಮಾಡಿ ಬೆಳೆದಿದ್ದ ಬೆಳೆಯು ರಾತ್ರಿ ಸುರಿದ ಮಳೆಗೆ ಸಂಪೂರ್ಣ ನಾಶವಾಗಿದೆ. ಮಳೆ ಬಾರದೇ ಕಷ್ಟ ಅನುಭವಿಸಿದ ರೈತರಿಗೆ ಈಗ ಮಳೆ ಬಂದು ಗಾಯದ ಮೇಲೆ ಬರೆ ಎಳೆದಂತಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Karnataka Rain : ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ರಾತ್ರಿಯಿಡಿ ಸುರಿದ ಮಳೆಯು ಅವಾಂತರವನ್ನೇ ಸೃಷ್ಟಿ ಮಾಡಿದೆ. ಚಿಕ್ಕಮಗಳೂರಿನಲ್ಲಿ ಮಳೆಗೆ (Rain News) ಕಾಂಪೌಂಡ್‌ ಕುಸಿದು ನಾಲ್ಕು ಬೈಕ್‌ಗಳು ಜಖಂಗೊಂಡಿದೆ. ಇತ್ತ ಶಿವಮೊಗ್ಗದಲ್ಲಿ ಮದುವೆ ಮಂಟಪಕ್ಕೆ ನೀರು ನುಗ್ಗಿ ಅಸ್ತವ್ಯಸ್ತವಾಗಿದೆ.

VISTARANEWS.COM


on

By

Karnataka Rain
Koo

ಚಿಕ್ಕಮಗಳೂರು/ ಶಿವಮೊಗ್ಗ: ಚಿಕ್ಕಮಗಳೂರಲ್ಲಿ ಮಳೆಯು (Karnataka Rain) ಅಬ್ಬರಿಸುತ್ತಿದ್ದು, ಜನರು ತತ್ತರಿಸಿ ಹೋಗಿದ್ದಾರೆ. ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡ್ ‌ಬಡಾವಣೆಯಲ್ಲಿ ರಾತ್ರಿ ಇಡಿ ಸುರಿದ ಮಳೆಗೆ (Rain News) ಕಾಂಪೌಂಡ್ ಶಿಥಿಲಾವಸ್ಥೆಗೊಂಡು ಕುಸಿದು ಬಿದ್ದಿದೆ. ಕಾಂಪೌಂಡ್‌ ಪಕ್ಕದಲ್ಲಿ ನಿಲ್ಲಿಸಿದ್ದ ನಾಲ್ಕು ಬೈಕ್‌ಗಳು ನಜ್ಜುಗುಜ್ಜಾಗಿತ್ತು. ಸ್ಥಳೀಯರು ಹಳೆ ಕಾಂಪೌಂಡ್ ತೆರೆವಿಗಾಗಿ ಆಗ್ರಹಿಸಿ, ನಗರಸಭೆ ವಿರುದ್ಧ ಆಕ್ರೋಶ ಹೊರಹಾಕಿದರು.

ಚಿಕ್ಕಮಗಳೂರು ನಗರದ ಉದ್ದೇಬೋರನಹಳ್ಳಿಯಲ್ಲಿ ರಾತ್ರಿಯಿಡೀ ಸುರಿದ ಮಳೆಯಿಂದಾಗಿ ಗೊಬ್ಬರದ ಅಂಗಡಿಗೆ ಮೋರಿ ನೀರು ನುಗ್ಗಿತ್ತು. ಲಕ್ಷಾಂತರ ರೂಪಾಯಿ ರಾಸಾಯನಿಕ ಗೊಬ್ಬರ, ಸಿಮೆಂಟ್ ನಾಶವಾಗಿತ್ತು. ರಾಷ್ಟ್ರೀಯ ಹೆದ್ದಾರಿ ಪಕ್ಕದ ನೀರು ನುಗ್ಗಿ ಗೊಬ್ಬರ ನೀರು ಪಾಲಾಗಿತ್ತು. ಮೋರಿ ಕಾಮಗಾರಿ ಮಾಡದೆ ಅರ್ಧಕ್ಕೆ ಬಿಟ್ಟಿರುವ ಹೆದ್ದಾರಿ ಪ್ರಾಧಿಕಾರ ವಿರುದ್ಧ ಸ್ಥಳೀಯರು ಕಿಡಿಕಾರಿದರು.

ಚಿಕ್ಕಮಗಳೂರು ತಾಲೂಕಿನ ಆಲ್ದೂರು, ಕಂಡರ ಕಸ್ಕೆ ಗ್ರಾಮದಲ್ಲಿ ಭಾರಿ ಮಳೆಗೆ ಮನೆಯ ಮೇಲೆ ಮರ ಬಿದ್ದಿತ್ತು. ಕೂದಲೆಳೆ ಅಂತದಲ್ಲಿ ಮನೆಯಲ್ಲಿದ್ದವರು ಪಾರಾಗಿದ್ದರು. ಮರ ಬಿದ್ದ ಪರಿಣಾಮ ಮನೆಯಲ್ಲಿದ್ದ ಪೀಠೋಪಕರಣಗಳು, ಆಹಾರ ಪದಾರ್ಥ ನಾಶವಾಗಿತ್ತು. ಕಳೆದ ರಾತ್ರಿ ಮಲೆನಾಡು-ಬಯಲು ಸೀಮೆಯಲ್ಲಿ ಭಾರೀ ಮಳೆಯಿಂದಾಗಿ ಗುಡಿಸಲಿಗೆ ಚರಂಡಿ ನೀರು ನುಗ್ಗಿತ್ತು.

ಚಿಕ್ಕಮಗಳೂರು ತಾಲೂಕಿನ ಉದ್ದೇಬೋರನಹಳ್ಳಿಯಲ್ಲಿ ಘಟನೆ ನಡೆದಿದೆ. ಚಿಕ್ಕಮಗಳೂರಿನ ಕಳಸ, ಬಾಳೆಹೊನ್ನೂರು, ಮಾಗುಂಡಿ, ಎನ್‌ಆರ್ ಪುರ, ಕೊಪ್ಪ ಶನಿವಾರ ರಾತ್ರಿಯಿಡೀ ಮಳೆ ಸುರಿದಿದೆ. ಕಳಸ-ಬಾಳೆಹೊನ್ನೂರು ರಸ್ತೆಯಲ್ಲಿ ಮಳೆ ನೀರು ನದಿಯಂತೆ ಹರಿದಿದೆ. ಭಾರಿ ಮಳೆ ಹಿನ್ನೆಲೆ ಹಲವು ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಸ್ಥಗಿತವಾಗಿತ್ತು.

ಇದನ್ನೂ ಓದಿ: Electric shock : ಮಳೆಗೆ ತುಂಡಾಗಿ ಬಿದ್ದ ವಿದ್ಯುತ್ ತಂತಿ; ಶಾಕ್‌ನಿಂದ ವ್ಯಕ್ತಿ ಸ್ಪಾಟ್‌ ಡೆತ್

Karnataka Rain

ಮದುವೆ ಊಟ ಮಾಡುವಾಗಲೇ ನುಗ್ಗಿದ ನೀರು

ಶಿವಮೊಗ್ಗದಲ್ಲೂ ಮಳೆಯು ಅವಾಂತರ ಸೃಷ್ಟಿಸಿತ್ತು. ಕಳೆದ ರಾತ್ರಿ ಸುರಿದ ಮಳೆಯಿಂದ ಮದುವೆ ನಡೆಯುತ್ತಿದ್ದ ಹಾಲ್‌ಗೆ ನೀರು ನುಗ್ಗಿದೆ. ಶಿವಮೊಗ್ಗ ನಗರದ ಗುಡ್ಡೆಕಲ್‌ ದೇವಸ್ಥಾನಕ್ಕೆ ಸೇರಿದ ಸಮುದಾಯ ಭವನದಲ್ಲಿ ಮದುವೆ ಸಮಾರಂಭ ನಡೆಯುತ್ತಿತ್ತು. ಮದುವೆಗೆ ಬಂದ ಬಂಧು-ಮಿತ್ರರು ಊಟ ಮಾಡುವಾಗಲೇ ಊಟದ ಹಾಲ್‌ಗೆ ನೀರು ನುಗ್ಗಿತ್ತು. ಮಳೆಯ ನೀರಿನ ನಡುವೆಯೂ ಬೆಳಗಿನ ಉಪಹಾರ ಸೇವನೆ ಮಾಡಿದರು.

ಚಿತ್ರದುರ್ಗದಲ್ಲೂ ಎಡಬಿಡದೆ ಸುರಿದ ಮಳೆ

ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಹಲವೆಡೆ ವರುಣನ ಆರ್ಭಟ ಜೋರಾಗಿದೆ. ತಡರಾತ್ರಿ ಎಡಬಿಡದೆ ಸುರಿದ ಮಳೆಗೆ ಹಳ್ಳ-ಕೊಳ್ಳಗಳು ತುಂಬಿ ಹರಿದಿತ್ತು. ಒಂದೇ ಮಳೆಗೆ ಚೆಕ್ ಡ್ಯಾಂ, ಕೆರೆ ಕಟ್ಟೆಗಳು ತುಂಬಿದ್ದವು. ಹೊಸದುರ್ಗದ ಕೆಲ್ಲೋಡು ಬಳಿ ವೇದಾವತಿ ನದಿ ತುಂಬಿ ಹರಿದಿದೆ. ಕಡದಿನಕೆರೆ ಗ್ರಾಮದಲ್ಲಿ ಮಳೆಗೆ ರಸ್ತೆಯು ಕೊಚ್ಚಿಹೋಗಿತ್ತು. ಇದರಿಂದಾಗಿ ಕೊರಟಿಕೆರೆ, ಬಾಗಶೆಟ್ಟಿ, ಚೌಳ ಹಿರಿಯೂರು ಸಂಪರ್ಕ ಬಂದ್ ಆಗಿತ್ತು. ಇನ್ನೂ ಮೊಳಕಾಲ್ಮೂರು ತಾಲೂಕಿನ ಮೇಗಳ ಕಣಿವೆಲ್ಲಿ ಜಲಪಾತ ಸೃಷ್ಟಿಯಾಗಿತ್ತು. ಧುಮ್ಮಿಕ್ಕಿ ಹರಿಯುತ್ತಿರುವ ಮಳೆ ನೀರು ಕಂಡು ಜನರು ಸಂತಸಗೊಂಡಿದ್ದರು. ಇತ್ತ ಜಿಲ್ಲೆಯಲ್ಲಿ ಟ್ಯಾಂಕರ್ ನೀರು ಹೊಡೆಯುತ್ತಿದ್ದ ರೈತರ ಪಜೀತಿಯನ್ನು ಮಳೆಯು ತಪ್ಪಿಸಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Prajwal Revanna Case
ಕರ್ನಾಟಕ7 mins ago

Prajwal Revanna Case: ಪೆನ್​​ಡ್ರೈವ್ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ; ದೇವರಾಜೇಗೌಡ ತಪ್ಪು ಮಾಹಿತಿ ನೀಡಿದ್ದಾರೆ: ಶಿವರಾಮೇಗೌಡ

Cholera
ಕರ್ನಾಟಕ14 mins ago

Cholera: ಸಿದ್ದರಾಮಯ್ಯ ತವರು ಕ್ಷೇತ್ರದಲ್ಲಿ ಕಾಲರಾ ಅಟ್ಟಹಾಸ; ಕಲುಷಿತ ನೀರು ಕುಡಿದು 114 ಜನಕ್ಕೆ ಕಾಯಿಲೆ!

RCB vs CSK
ಕ್ರೀಡೆ17 mins ago

RCB vs CSK: ಚೆನ್ನೈ ಸೋಲಿಗೆ ಧೋನಿ ಬಾರಿಸಿದ ಔಟ್​ ಆಫ್​ದಿ ಸ್ಟೇಡಿಯಂ ಸಿಕ್ಸರ್​ ಕಾರಣ

Ninagagi Kannada Serial Ritvvikk Mathad Playing Lead In Divya Uruduga
ಕಿರುತೆರೆ19 mins ago

Ninagagi Kannada Serial: ʻನಿನಗಾಗಿʼ ಸೀರಿಯಲ್‌ನಲ್ಲಿ ದಿವ್ಯಾ ಉರುಡುಗ ಜತೆ ‘ಗಿಣಿರಾಮ’ ಧಾರಾವಾಹಿಯ ನಟ ನಟನೆ

British Journalist
ದೇಶ25 mins ago

British Journalist: “ವವ ಭಾರತದ ಬಗ್ಗೆ ಪ್ರಪಂಚಕ್ಕೆ ತಿಳಿಸಬೇಕು”- ಇಂಡಿಯಾಗೆ ಮನಸೋತ ಬ್ರಿಟಿಷ್‌ ಪತ್ರಕರ್ತ

Karnataka rain
ಮಳೆ26 mins ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

RCB
ಕ್ರಿಕೆಟ್49 mins ago

RCB: ಆರ್​ಸಿಬಿಯ ನಂಟು ಬಿಡದ ವಿಜಯ್​ ಮಲ್ಯ; ಟ್ವೀಟ್​ ಮೂಲಕ ಅಭಿನಂದನೆ

Pavithra Jayaram Trinayani Serial Son Prajwal Reaction
ಸಿನಿಮಾ1 hour ago

Pavithra Jayaram: ಅಮ್ಮ ಮತ್ತು ಚಂದ್ರಕಾಂತ್‌ ಒಡನಾಟ ಹೇಗಿತ್ತು ಅಂತ ನಮಗೆ ಗೊತ್ತು ಎಂದ ಪವಿತ್ರ ಜಯರಾಮ್ ಮಗ!

Karnataka Rain
ಮಳೆ2 hours ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Viral News
ವೈರಲ್ ನ್ಯೂಸ್2 hours ago

Viral News: ಬಾಯ್‌ಫ್ರೆಂಡ್‌ನ ಗುಪ್ತಾಂಗವನ್ನೇ ಕಟ್‌ ಮಾಡಿ ಕಸದ ಬುಟ್ಟಿಗೆ ಎಸೆದ ಮಹಿಳೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka rain
ಮಳೆ26 mins ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 hours ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ2 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ2 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ3 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು3 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ4 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ4 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

ಟ್ರೆಂಡಿಂಗ್‌