Woman found dead under mysterious circumstances at Hunsagi in Yadgir, Case registered in AnkolaSuspicious Death: ಯಾದಗಿರಿಯ ಹುಣಸಗಿಯಲ್ಲಿ ಯುವತಿ ಅನುಮಾನಾಸ್ಪದ ಸಾವು; ಅಂಕೋಲಾದಲ್ಲಿ ಕೇಸ್ ದಾಖಲು - Vistara News

ಉತ್ತರ ಕನ್ನಡ

Suspicious Death: ಯಾದಗಿರಿಯ ಹುಣಸಗಿಯಲ್ಲಿ ಯುವತಿ ಅನುಮಾನಾಸ್ಪದ ಸಾವು; ಅಂಕೋಲಾದಲ್ಲಿ ಕೇಸ್ ದಾಖಲು

Suspicious Death: ಅಂಕೋಲಾ ಮೂಲದ ಯುವತಿ ಯಾದಗಿರಿ ಜಿಲ್ಲೆಯ ಹುಣಸಗಿಯಲ್ಲಿ ಮೃತಪಟ್ಟಿದ್ದಾಳೆ. ಈ ಸಂಬಂಧ ಪಾಲಕರ ದೂರಿನ ಮೇರೆಗೆ ಅಂಕೋಲಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

VISTARANEWS.COM


on

Woman found dead under mysterious circumstances at Hunsagi in Yadgir, Case registered in Ankola
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಅಂಕೋಲಾ: ಯಾದಗಿರಿ ಜಿಲ್ಲೆಯ ಹುಣಸಗಿಯ ಎಸ್. ಕೆ. ಕಾಲೇಜಿನಲ್ಲಿ ಜೀವಶಾಸ್ತ್ರ ವಿಭಾಗದಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡುತ್ತಿದ್ದ ತಾಲೂಕಿನ ಅಂಗಡಿಬೈಲ್‌ನ ಯುವತಿ ಮೃತಪಟ್ಟಿದ್ದು, ಸಾವಿನ ಕುರಿತಂತೆ ಸಂಶಯಗಳು (Suspicious Death) ವ್ಯಕ್ತವಾಗಿವೆ. ಹೀಗಾಗಿ ಯುವತಿಯ ಮನೆಯವರು ಮರಣೋತ್ತರ ಪರೀಕ್ಷೆ ನಡೆಸುವಂತೆ ಒತ್ತಾಯಿಸಿ ಅಂಕೋಲಾ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.

ಅಂಗಡಿಬೈಲ್ ನಾಕಮನೆ ನಿವಾಸಿ ನಿವೇದಿತಾ ನರಸಿಂಹ ಭಟ್ಟ (24) ಮೃತ ದುರ್ದೈವಿ. ಮೈಸೂರು ವಿಶ್ವವಿದ್ಯಾಲಯದಿಂದ ಎಂ.ಎಸ್.ಸಿ ಪದವಿ ಚಿನ್ನದ ಪದಕ ವಿಜೇತೆಯಾಗಿದ್ದ ಈಕೆ, ಕಳೆದ ಎರಡು ವರ್ಷಗಳಿಂದ ಹುಣಸಗಿಯಲ್ಲಿ ಜೀವಶಾಸ್ತ್ರ ವಿಭಾಗದ ಉಪನ್ಯಾಸಕಿಯಾಗಿ ಕೆಲಸ ಮಾಡುತ್ತಿದ್ದಳು. ಜೂನ್ ತಿಂಗಳಲ್ಲಿ ಐಎಎಸ್ ಬರೆಯಲು ತಯಾರಿ ನಡೆಸುತ್ತಿದ್ದ ಯುವತಿ ಮೃತ ಪಟ್ಟಿರುವುದಾಗಿ ಮೃತಳ ತಂದೆಗೆ ದೂರವಾಣಿ ಕರೆ ಮಾಡಿ ತಿಳಿಸಿದ್ದಾರೆ.

ನಂತರ ಸುಮಾರು ಹತ್ತಿಪ್ಪತ್ತು ಜನ ಸೇರಿ ವಾಹನದಲ್ಲಿ ಯುವತಿಯ ಮೃತ ದೇಹವನ್ನು ಅಂಗಡಿಬೈಲಿಗೆ ತಂದು ಮನೆಯವರಿಗೆ ಒಪ್ಪಿಸಲು ಬಂದಿದ್ದಾರೆ. ಈ ಸಂದರ್ಭದಲ್ಲಿ ಸಾವಿನ ಕುರಿತಂತೆ ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ಮಾತನಾಡಿದ್ದಾರೆ. ಇದರಿಂದ ಸಂಶಯಗೊಂಡು ಇದು ಅಸಹಜ ಸಾವಾಗಿದ್ದು, ತನಿಖೆ ನಡೆಸುವಂತೆ ಮೃತಳ ಕುಟುಂಬದವರು ಆಗ್ರಹಿಸಿದ್ದಾರೆ.

ಮೃತದೇಹವನ್ನು ಕಾರವಾರ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದ್ದು, ಈ ಕುರಿತು ಹೆಚ್ಚಿನ ವಿಚಾರಣೆ ನಡೆಯುವ ಸಾಧ್ಯತೆ ಇದೆ. ಈ ಸಂಬಂಧ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Heatwaves In Bengaluru: ಬೆಂಗಳೂರಲ್ಲಿ ಬಿಸಿಲ ಬೇಗೆ; ತತ್ತರಿಸಿರುವ ಪೌರಕಾರ್ಮಿಕರಿಗೆ ಅರ್ಧ ದಿನ ರಜೆಗೆ ಎಐಸಿಸಿಟಿಯು ಒತ್ತಾಯ

ಕಡಬದ ಬಿಳಿನೆಲೆಯಲ್ಲಿ ಆಲ್ಟೋ-ತೂಫಾನ್‌ ಮುಖಾಮುಖಿ ಡಿಕ್ಕಿ; ಮಗು ಸೇರಿ ನಾಲ್ವರು ಮೃತ್ಯು, ಹಲವರು ಗಂಭೀರ

ದಕ್ಷಿಣ ಕನ್ನಡ (ಕಡಬ): ಇಲ್ಲಿನ ಕಡಬದ ಬಿಳಿನೆಲೆ ಸಮೀಪ ತೂಫಾನ್ ಹಾಗೂ ಆಲ್ಟೋ ಕಾರಿನ ನಡುವೆ ಮುಖಾಮುಖಿ (Road Accident) ಡಿಕ್ಕಿಯಾಗಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿದ್ದು, ತೂಫಾನ್‌ ವಾಹನದಲ್ಲಿದ್ದವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಆಲ್ಟೋ ಕಾರಲ್ಲಿದ್ದ ಇಬ್ಬರು ಪುರುಷರು ಸೇರಿದಂತೆ ಮಹಿಳೆ ಮತ್ತು ಒಂದು ಮಗುವೊಂದು ಮೃತಪಟ್ಟಿದೆ ಎಂದು ತಿಳಿದು ಬಂದಿದೆ.

ಮೃತರು ಬೇಲೂರು ಮೂಲದವರು ಎಂದು ತಿಳಿದಿದ್ದು, ಕುಕ್ಕೆ ಸುಬ್ರಹ್ಮಣ್ಯ ಕಡೆಗೆ ಹೋಗುತ್ತಿದ್ದರು ಎಂದು ಹೇಳಲಾಗಿದೆ. ತೂಫಾನ್ ವಾಹನವು ಹಾಸನ ಕಡೆಯದ್ದು ಎನ್ನಲಾಗಿದೆ. ಗಾಯಾಳುಗಳ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

ಗಾಯಾಳುಗಳನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕಡಬ ಪೊಲೀಸರು ಆಗಮಿಸಿ ಮಾಹಿತಿ ಕಲೆ ಹಾಕುತ್ತಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಅಪಘಾತಕ್ಕೆ ಅತಿ ವೇಗದ ಚಾಲನೆ ಕಾರಣವೆಂದು ಹೇಳಲಾಗುತ್ತಿದೆ.

ಇದನ್ನೂ ಓದಿ | Assault Case: ಆಸ್ಪತ್ರೆಯಲ್ಲಿ ಯುವಕರ ದಾಂಧಲೆ; ತಮಗಿಂತ ಮೊದಲು ಹೋಗಿದ್ದಕ್ಕೆ ದಂಪತಿ ಮೇಲೆ ಹಲ್ಲೆ

ರಸ್ತೆ ಅಪಘಾತದಲ್ಲಿ ಸವಾರ ಮೃತ್ಯು

ಮೈಸೂರು-ನಂಜನಗೂಡು ಹೆದ್ದಾರಿಯಲ್ಲಿ ರಸ್ತೆ ಅಪಘಾತ ನಡೆದಿದ್ದು, ದ್ವಿಚಕ್ರ ವಾಹನ ಸವಾರ ಮೃತಪಟ್ಟಿದ್ದಾರೆ. ಮೈಸೂರು ತಾಲೂಕಿನ ಕಡಕೊಳ ಬಳಿ ಸವಾರರೊಬ್ಬರು ತಮ್ಮ ಸ್ಕೂಟರ್‌ ಬಳಿ ನಿಂತಿದ್ದರು. ಈ ವೇಳೆ ವೇಗವಾಗಿ ಬಂದ ಒಮಿನಿಯೊಂದು ಮೊದಲು ಬ್ಯಾರಿಕೇಡ್‌ಗೆ ಗುದ್ದಿ, ನಂತರ ಸ್ಕೂಟರ್, ಕಾರಿಗೆ ಡಿಕ್ಕಿ ಹೊಡೆದಿದೆ.

ಪರಿಣಾಮ ಸ್ಕೂಟರ್ ಸವಾರ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದು, ಗುರುತು ಪತ್ತೆ ಆಗಿಲ್ಲ. ಇತ್ತ ಒಮಿನಿ ಚಾಲಕ ಗಾಯಗೊಂಡಿದ್ದು, ಒಳಗೆ ಸಿಲುಕಿ ನರಳಾಡುತ್ತಿದ್ದವನನ್ನು ಸ್ಥಳೀಯರು ರಕ್ಷಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Karnataka Weather forecast : ಕರಾವಳಿ, ಉತ್ತರ ಒಳನಾಡಿನಲ್ಲಿ ಮಳೆಯು (Rain News) ಅಬ್ಬರಿಸುತ್ತಿದ್ದು, ಇನ್ನೊಂದು ವಾರ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು/ಕಾರವಾರ: ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ಶುಕ್ರವಾರ ಉತ್ತರಕನ್ನಡ ಜಿಲ್ಲೆಯಲ್ಲಿ ಮತ್ತೆ ವರುಣಾರ್ಭಟ ಮುಂದುವರಿದಿದೆ. ಕರಾವಳಿ ತಾಲೂಕುಗಳಲ್ಲಿ ಗಾಳಿ ಸಹಿತ ಭಾರಿ ಮಳೆಯಾಗಿದೆ. ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ಭಾಗಗಳಲ್ಲಿ ಭಾರೀ ಗಾಳಿ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿತ್ತು. ಒಂದು ತಾಸಿಗೂ ಬಿರುಗಾಳಿ ಸಹಿತ ಭಾರಿ ಮಳೆಗೆ ಹಲವೆಡೆ ಮರಗಳು ನೆಲಕ್ಕುರುಳಿತ್ತು.

ಮುಂಗಾರು ಮಳೆಗೆ ಪಪ್ಪಾಯಿ ಬೆಳೆ ಹಾನಿ

ಬಾಗಲಕೋಟೆಯಲ್ಲೂ ಮುಂಗಾರು ಮಳೆ ಅಬ್ಬರಕ್ಕೆ ತೋಟಗಾರಿಕಾ ಬೆಳೆ ಹಾನಿಯಾಗಿದ್ದು ರೈತರು ಆತಂಕದಲ್ಲಿದ್ದಾರೆ. ಬಾಗಲಕೋಟೆ ತಾಲೂಕಿನ ಹೊನ್ನಾಕಟ್ಟಿ ಗ್ರಾಮದಲ್ಲಿ ಫಸಲು ಕೈಗೆಟಕುವ ಮುನ್ನವೇ ಮಳೆಗೆ ಪಪ್ಪಾಯಿ ಆಹುತಿಯಾಗಿದೆ. ಅಧಿಕ ಮಳೆಯಿಂದಾಗಿ ತೇವಾಂಶದಿಂದ ಗಿಡದಿಂದ ಪಪ್ಪಾಯಿ ಉದುರುತ್ತಿದೆ.

ಪಪ್ಪಾಯಿ ಬೆಳೆದ ಹೊನ್ನಾಕಟ್ಟಿ ರೈತ ಯಲ್ಲಪ್ಪ ಜಿವೊಜಿ ಕಂಗಾಲಾಗಿದ್ದಾರೆ. 2 ಎಕರೆ ಜಮೀನಿನಲ್ಲಿ 2 ಲಕ್ಷ ರೂ. ಹೆಚ್ಚು ಖರ್ಚು ಮಾಡಿ ಪಪ್ಪಾಯಿ ಬೆಳೆಯಲಾಗಿತ್ತು. ಆದರೆ ಪಪ್ಪಾಯಿ ಫಸಲು ಚನ್ನಾಗಿ ಬಂದಿದ್ದರೂ, ಮಳೆಯಿಂದ ಪಪ್ಪಾಯಿಗೆ ಕೊಳೆ ರೋಗಕ್ಕೆ ಉದುರುತ್ತಿದೆ. 7- 8 ಲಕ್ಷ ರೂ ಲಾಭದ ನಿರೀಕ್ಷೆಯಲ್ಲಿದ್ದ ರೈತ ಯಲ್ಲಪ್ಪನಿಗೆ ಇದೀಗ ಸಾಲದ ಹೊರೆ ಹೆಚ್ಚಾಗಿದೆ. ನಿರಂತರ ಮಳೆಯಿಂದ ಪಪ್ಪಾಯಿ ಬೆಳೆ ಸಂಪೂರ್ಣ ಹಾನಿಯಾಗಿದೆ. ಸದ್ಯ ಸರ್ಕಾರದಿಂದ ಪರಿಹಾರದ ನಿರೀಕ್ಷೆಯಲ್ಲಿದ್ದಾರೆ.

ಭಾರಿ ಮಳೆಗೆ ಕೆರೆಯಂತಾದ ಕಾಲಕಾಲೇಶ್ವರ ಗ್ರಾಮ

ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಕಾಲಕಾಲೇಶ್ವರ ಗ್ರಾಮದ ಸುತ್ತಮುತ್ತ ಭಾರಿ‌ ಮಳೆಯಾಗುತ್ತಿದ್ದು, ಕಾಲಕಾಲೇಶ್ವರ ಗ್ರಾಮದ ರಸ್ತೆಗಳು ಕೆರೆಯಂತಾಗಿದೆ. ರಸ್ತೆ ತುಂಬ ನೀರು ನಿಂತು ಜನರು ಓಡಾಡಲು ಪರದಾಡುವಂತಾಗಿತ್ತು. ಇತ್ತ ಕಾಲಕಾಲೇಶ್ವರ ಗುಡ್ಡದಲ್ಲಿ ಕಿರು ಜಲಪಾತ ಸೃಷ್ಟಿಯಾಗಿದ್ದು, ಜನರು ವೀಕ್ಷಣೆಗಾಗಿ ಬರುತ್ತಿದ್ದ ದೃಶ್ಯ ಕಂಡು ಬಂತು.

ಮುಲ್ಲಾಮಾರಿ ಜಲಾಶಯದಿಂದ ನೀರು ಬಿಡುಗಡೆ; ಗ್ರಾಮಸ್ಥರಿಗೆ ಎಚ್ಚರಿಕೆ

ಕಲಬುರಗಿಯ ಚಿಂಚೊಳ್ಳಿ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ನಾಗರಾಳ‌ ಬಳಿ ಇರುವ ಮುಲ್ಲಾಮಾರಿ ಜಲಾಶಯದ ಒಳಹರಿವು 1,500 ಕ್ಯೂಸೆಕ್ ಹೆಚ್ಚಾಗಿದೆ. ಜಲಾಶಯದ ಗರಿಷ್ಠ ಮಟ್ಟ 491 ಮೀಟರ್ ಇದ್ದು, ಯಾವುದೇ ಕ್ಷಣದಲ್ಲಾದರೂ ಜಲಾಶಯದ ನೀರು ಬಿಡುಗಡೆ ಮಾಡಲಾಗುತ್ತದೆ. ಹೀಗಾಗಿ ಮುಲ್ಲಾಮಾರಿ ಕೆಡದಂಡೆ ಗ್ರಾಮಗಳಿಗೆ ಎಚ್ಚರಿಕೆಯಿಂದ ಇರಲು ಸೂಚನೆ ನೀಡಲಾಗಿದೆ. ಚಿಮ್ಮನಚೋಡ, ತಾಜಲಾಪುರ, ಗಾರಂಪಳ್ಳಿ ಸೇರಿ ಹಲವು ಗ್ರಾಮಗಳಿಗೆ ನದಿ ‌ದಡದಲ್ಲಿ ಹೋಗದಂತೆ ಎಇ‌ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

ಕಲಬುರಗಿಯಲ್ಲಿ ಮನೆಗಳಿಗೆ ನುಗ್ಗಿದ ನೀರು

ಕಲಬುರಗಿಯ ಶಹಾಬಾದ್, ಆಳಂದ, ಚಿಂಚೊಳ್ಳಿ ಸೇರಿ ಹಲವು ಭಾಗದಲ್ಲಿ ಭಾರಿ ಮಳೆಯಾಗಿದ್ದು, ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದೆ. ಚಿತ್ತಾಪೂರ ತಾಲೂಕಿನ ತರ್ಕಸ್ ಪೇಟೆಯಲ್ಲಿ ಮನೆಗಳಿಗೆ ನೀರು ನುಗ್ಗಿದ್ದರಿಂದ, ಶೇಖರಿಸಿಟ್ಟಿದ್ದ ದವಸ ಧಾನ್ಯಗಳು ನೀರುಪಾಲಾಗಿದ್ದವು. ಜತೆಗೆ ಚಂದಾಪುರ ಪಟೇಲ್ ಕಾಲೋನಿಯಲ್ಲಿ ಇಪ್ಪತ್ತಕ್ಕೂ ಅಧಿಕ ಮನೆಗಳಿಗೆ ನೀರು ನುಗ್ಗಿ ಅವಾಂತರವೇ ಸೃಷ್ಟಿಯಾಗಿತ್ತು. ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದ‌ ಕಾರಣ‌ ಮಳೆ‌ ನೀರು ಮನೆಗೆ ನುಗ್ಗಿತ್ತು. ಪುರಸಭೆ ಅಧಿಕಾರಿಗಳ ವಿರುದ್ಧ ಜನರು ಹಿಡಿಶಾಪ ಹಾಕಿದರು.

ಮಳೆಗೆ ಮರ ಬಿದ್ದು ಸಂಚಾರ ಅಸ್ತವ್ಯಸ್ತ

ಭಾರಿ ಮಳೆಗೆ ರಸ್ತೆಗೆ ಅಡ್ಡಲಾಗಿ ಮರ ಬಿದ್ದು ಸಂಚಾರ ಅಸ್ತವ್ಯಸ್ತವಾಗಿತ್ತು. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ರಸ್ತೆಗೆ ಅಡ್ಡಲಾಗಿ ಮರ ಬಿದ್ದಿತ್ತು. ಮರ ಬಿದ್ದ ಪರಿಣಾಮ ಕಿ.ಮೀ ಗಟ್ಟಲೆ ವಾಹನ ದಟ್ಟಣೆ ಉಂಟಾಗಿತ್ತು. ಅಡ್ಡಲಾಗಿ ಬಿದ್ದ ಮರದ ಕೆಳಗಡೆಯಿಂದ ಸವಾರರು ರಸ್ತೆ ದಾಟುತ್ತಿದ್ದರು. ಮರ ಬಿದ್ದು ಗಂಟೆಗಟ್ಟಲೆ ಸಮಯ ಕಳೆದರೂ ಸ್ಥಳಕ್ಕೆ ಅಧಿಕಾರಿಗಳು ಬಾರದ ಹಿನ್ನೆಲೆಯಲ್ಲಿ ಸ್ಥಳೀಯರಿಂದಲೇ ಮರ ತೆರವುಗೊಳಿಸಲಾಯಿತು.

ಗುಡುಗು ಸಹಿತ ಮಳೆ ಎಚ್ಚರಿಕೆ

ಜೂನ್‌ 15ರಂದು ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ಗುಡುಗು ಸಹಿತ ಹಗುರದೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗಾಳಿವೇಗವು ಒಂದು ಎರಡು ಕಡೆಗಳಲ್ಲಿ 40-50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ. ಬೆಂಗಳೂರು ಸುತ್ತಮುತ್ತ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಹಾಗೂ ಕನಿಷ್ಠ ತಾಪಮಾನವು ಕ್ರಮವಾಗಿ 30-21 ಡಿ.ಸೆ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಉತ್ತರ ಕನ್ನಡ

Self Harming : ಪಿಎಸ್‌ಐ ಕಿರುಕುಳ; ಕುಡಿದ ಅಮಲಿನಲ್ಲಿ ಠಾಣೆ ಎದುರೇ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿಕೊಂಡ

Self Harming : ಕುಡಿದ ಅಮಲಿನಲ್ಲಿ ಠಾಣೆಗೆ ಬಂದ ವ್ಯಕ್ತಿಯೊಬ್ಬ ಪಿಎಸ್‌ಐ ನನಗೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ, ಠಾಣೆ ಎದುರೇ ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

VISTARANEWS.COM


on

By

Self Harming
ಸಾಂದರ್ಭಿಕ ಚಿತ್ರ
Koo

ಕಾರವಾರ: ಪಿಎಸ್ಐ ಮಾನಸಿಕ ಕಿರುಕುಳ (Self Harming) ನೀಡುತ್ತಿದ್ದಾರೆ ಎಂದು ಆರೋಪಿಸಿ ವ್ಯಕ್ತಿಯೊಬ್ಬ ಠಾಣೆ ಎದುರೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಜೋಯಿಡಾದ ರಾಮನಗರ ಪೊಲೀಸ್ ಠಾಣೆ ಬಳಿ ಘಟನೆ ನಡೆದಿದೆ.

ರಾಮನಗರ ಹನುಮಾನ್ ಗಲ್ಲಿಯ ನಿವಾಸಿ ಭಾಸ್ಕರ್ ಬೋಂಡೆಲ್ಕರ್ ಆತ್ಮಹತ್ಯೆಗೆ ಯತ್ನಿಸಿದವರು. ಜೂಜಾಟ ಆರೋಪದಡಿ ಭಾಸ್ಕರ್‌ ವಿರುದ್ಧ ರಾಮನಗರ ಪಿಎಸ್ಐ ಬಸವರಾಜ್ ಮಗನೂರು ಪ್ರಕರಣ ದಾಖಲಿಸಿದ್ದರು. ನಿನ್ನೆ ಗುರುವಾರ ಜಮೀನು ವಿಚಾರಕ್ಕೆ ಭಾಸ್ಕರ್‌ ಮದ್ಯ ಸೇವಿಸಿ ಬೈಕ್‌ ಮೂಲಕ ಠಾಣೆಗೆ ತೆರಳಿದ್ದಾನೆ.

ಮದ್ಯ ಸೇವಿಸಿದ್ದರಿಂದ ಬೈಕ್ ಠಾಣೆಯಲ್ಲಿ ಬಿಟ್ಟು ಹೋಗುವಂತೆ ಪಿಎಸ್ಐ ಬಸವರಾಜ್‌ ಸೂಚಿಸಿದ್ದಾರೆ. ಇಷ್ಟಕ್ಕೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಮದ್ಯದ ಅಮಲಿನಲ್ಲಿ ಭಾಸ್ಕರ್‌ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸದ್ಯ ಗಂಭೀರವಾಗಿ ಗಾಯಗೊಂಡ ಭಾಸ್ಕರ್‌ನನ್ನು ಬೆಳಗಾವಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ರಾಮನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ: Udupi News : ತಂದೆ ಸಾವಿನಿಂದ ಖಿನ್ನತೆಗೆ ಜಾರಿದವಳು ಬಾವಿಗೆ ಹಾರಿ ಆತ್ಮಹತ್ಯೆ; ಮಕ್ಕಳಿಬ್ಬರು ಅನಾಥ

ಸಾಲದ ಶೂಲಕ್ಕೆ ಮನನೊಂದ ರೈತ; ಕೆರೆಗೆ ಹಾರಿ ಆತ್ಮಹತ್ಯೆ

ಮೈಸೂರು: ಬೆಳೆ ಸಾಲ ತೀರಿಸಲಾಗದೆ ಕೆರೆಗೆ ಹಾರಿ ರೈತರೊಬ್ಬರು (Farmer Death) ಆತ್ಮಹತ್ಯೆ (Self Harming) ಮಾಡಿಕೊಂಡು ಮೃತಪಟ್ಟಿದ್ದಾರೆ. ಮೈಸೂರು (Mysuru News) ಜಿಲ್ಲೆಯ ಹುಣಸೂರು ತಾಲೂಕಿನ ಮನುಗನಹಳ್ಳಿಯಲ್ಲಿ ಘಟನೆ ನಡೆದಿದೆ. ಅಣ್ಣೇಗೌಡ (57) ಮೃತ ದುರ್ದೈವಿ.

ಅಣ್ಣೇಗೌಡ ಮೂರು ಎಕರೆಯಲ್ಲಿ ತಂಬಾಕು ಮತ್ತಿತರೆ ಬೆಳೆ ಬೆಳೆಯುತ್ತಿದ್ದರು. ಕೃಷಿ ಚಟುವಟಿಕೆಗಾಗಿ ಪಂಚವಳ್ಳಿಯ ಐಒಬಿ ಬ್ಯಾಂಕ್‌ನಲ್ಲಿ 10 ಲಕ್ಷ ರೂ. ಸಾಲ ಪಡೆದಿದ್ದರು. ಖಾಸಗಿ ಬ್ಯಾಂಕ್‌ನಲ್ಲಿ 14 ಲಕ್ಷ ರೂ. ಹಾಗೂ 5 ಲಕ್ಷ ರೂ. ಕೈ ಸಾಲ ಮಾಡಿಕೊಂಡಿದ್ದರು. ಬೆಳೆ ಕೈ ಹತ್ತದ ಕಾರಣ ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೆರೆಯಿಂದ ರೈತನ ಮೃತದೇಹವನ್ನು ಮೇಲಕ್ಕೆತ್ತಿದ್ದು, ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಬೆಂಗಳೂರಲ್ಲಿ ಮುಂದುವರಿಯಲಿದೆ ಭರ್ಜರಿ ಮಳೆ; ಈ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Rain News : ರಾಜ್ಯಾದ್ಯಂತ ಮಳೆ ಪ್ರಮಾಣ ತಗ್ಗಿದ್ದರೂ, ಮಲೆನಾಡು ಹಾಗೂ ಒಳನಾಡಿನ ಹಲವೆಡೆ ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆಯಾಗುವ (Karnataka Weather Forecast) ನಿರೀಕ್ಷೆ ಇದೆ. ಶುಕ್ರವಾರವೂ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ (Yellow Alert) ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಉತ್ತರ ಒಳನಾಡು ಮತ್ತು ಕರಾವಳಿಯ ಪ್ರತ್ಯೇಕವಾಗಿ ಭಾರಿ ಮಳೆಯಾಗುವ (Heavy Rain) ಸಾಧ್ಯತೆ ಇದೆ. ದಕ್ಷಿಣ ಒಳನಾಡು, ಮಲೆನಾಡು ಭಾಗಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ತುಮಕೂರು ಮತ್ತು ಬೆಂಗಳೂರು ನಗರ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಭಾಗಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಹಲವೆಡೆ ಚದುರಿದಂತೆ ಮಧ್ಯಮ ಮಳೆಯಾಗಲಿದೆ. ಬಾಗಲಕೋಟೆಯಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನಲ್ಲಿ ವ್ಯಾಪಕವಾಗಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ಉತ್ತರ ಕನ್ನಡದಲ್ಲಿ ಹಲವೆಡೆ ಭಾರೀ ಮಳೆಯಾಗಲಿದೆ. ಬೆಂಗಳೂರಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಕರಾವಳಿ ಸೇರಿ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಗಾಳಿಯು 40-50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಮೀನುಗಾರರಿಗೆ ಎಚ್ಚರಿಕೆ

ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 35 ರಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: Double Decker Flyover : ಬೆಂಗಳೂರಿನ ಮೊದಲ ಡಬಲ್‌ ಡೆಕ್ಕರ್‌ ಫ್ಲೈಓವರ್‌ ಕೊನೆಗೂ ಸಿದ್ಧ; ಯಾವಾಗಿಂದ ಸಂಚಾರಕ್ಕೆ ಅವಕಾಶ

ರಾಯಚೂರಿನಲ್ಲಿ ಈಜುಕೊಳವಾದ ಶಾಲೆ ಆವರಣ

ಅಲ್ಪ ಮಳೆಗೆ ಸರಕಾರಿ‌ ಶಾಲೆ ಆವರಣವು ಈಜುಕೊಳವಾಗಿದೆ. ರಾಯಚೂರಿನ ದೇವದುರ್ಗ ತಾಲೂಕಿನ ಖಾನಾಪುರ ಗ್ರಾಮದಲ್ಲಿ ಸರಕಾರಿ ಶಾಲೆಯಲ್ಲಿ ಮಳೆಯು ಅವಾಂತರವನ್ನೇ ಸೃಷ್ಟಿಸಿದೆ. ಶಾಲೆ ಕಟ್ಟಡವು ಸಂಪೂರ್ಣ ಶಿಥಿಲಾವಸ್ಥೆಗೆ ತಲುಪಿದೆ. ಜೀವ ಭಯದಲ್ಲೇ ಮಕ್ಕಳು ಮತ್ತು ಶಿಕ್ಷಕರು ಪಾಠ ಪ್ರವಚನ ಮಾಡಬೇಕಾದ ಪರಿಸ್ಥಿತಿ ನಿರ್ಮಾನವಾಗಿದೆ. ಜಿಟಿ ಜಿಟಿ ಮಳೆಯಿಂದ ಕೊಠಡಿಗಳು ಸೋರುತ್ತಿದೆ. ಜೋರಾಗಿ ಮಳೆ ಬಂದರೆ ನೀರು ನುಗ್ಗುವ ಭೀತಿ ಇದೆ. ಇತ್ತ ಸೋರುತ್ತಿರುವ ಕೊಠಡಿಯಲ್ಲೆ ಮಧ್ಯಾಹ್ನ ಬಿಸಿ ಊಟದ ಆಹಾರ ಧಾನ್ಯಗಳ ಸಂಗ್ರಹ ಮಾಡಲಾಗಿದೆ. ಪಿಡಿಒ, ಬಿಇಓ ಅವರ ಗಮನಕ್ಕೆ ತಂದರು ಪ್ರಯೋಜನೆಯಾಗಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಹಳ್ಳದಲ್ಲಿ ಕೊಚ್ಚಿ ಹೋಗುತ್ತಿದ್ದ ಬೈಕ್‌ ಸವಾರ

ಗ್ರಾಮಸ್ಥರ ಸಮಯ ಪ್ರಜ್ಞೆಯಿಂದ ಬೈಕ್ ಸವಾರನ ಜೀವ ಉಳಿದಿದೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಚಂದ್ರಶೇಖರಪುರ ಗ್ರಾಮದಲ್ಲಿ ಘಟನೆ ನಡೆದಿದೆ. ನಿರಂತರ ಮಳೆಯಿಂದಾಗಿ ಹಳ್ಳ, ಕೊಳ್ಳಗಳಲ್ಲಿ ನೀರು ತುಂಬಿ ಹರಿಯುತ್ತಿದೆ. ರಭಸವಾಗಿ ಹರಿಯುತ್ತಿದ್ದ ನೀರಿನಲ್ಲೇ ಹಳ್ಳ ದಾಟಲು ಬೈಕ್‌ ಸವಾರ ಮುಂದಾಗಿದ್ದ. ಈ ವೇಳೆ ನೀರಿನ ರಭಸಕ್ಕೆ ಕೊಚ್ಚಿ ಹೋಗುತ್ತಿದ್ದ, ಇದನ್ನೂ ಗಮನಿಸಿದ ಸ್ಥಳೀಯರು ಕೂಡಲೇ ಸವಾರನನ್ನು ರಕ್ಷಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಭಾರಿ ಮಳೆಗೆ ಕುಸಿದು ಬಿದ್ದ ಮಣ್ಣಿನ ಮನೆ; ಮಲಗಿದ್ದಲ್ಲೇ ಪ್ರಾಣ ಬಿಟ್ಟ ವ್ಯಕ್ತಿ

Rain News : ಮಳೆಯು ಅನಾಹುತವನ್ನೇ (Rain Effect) ಸೃಷ್ಟಿಸುತ್ತಿದೆ. ನಿರಂತರ ಮಳೆಗೆ ಮಣ್ಣಿನ ಮನೆ ಕುಸಿದು ಬಿದ್ದಿದೆ. ಪರಿಣಾಮ ಮನೆಯೊಳಗಿದ್ದ ವ್ಯಕ್ತಿಯೊಬ್ಬರು ಉಸಿರು ಚೆಲ್ಲಿದ್ದಾರೆ. ಇನ್ನೊಂದು ವಾರವೂ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ (karnataka Weather Forecast) ನೀಡಿದೆ.

VISTARANEWS.COM


on

By

karnataka weather Forecast
Koo

ಬಾಗಲಕೋಟೆ/ಬೆಂಗಳೂರು: ಬೆಂಗಳೂರು ಸೇರಿದಂತೆ ಹಲವೆಡೆ ಮಳೆಯು (Karnataka Weather Forecast) ಅಬ್ಬರಿಸುತ್ತಿದೆ. ಬಾಗಲಕೋಟೆಯ ಜಮಖಂಡಿ ನಗರದ ಮೋಮಿನ ಗಲ್ಲಿಯಲ್ಲಿ ನಿರಂತರ ಮಳೆಗೆ (Rain News) ಮಣ್ಣಿನ ಮನೆ ಕುಸಿದಿದ್ದು, ಮನೆಯೊಳಗಿದ್ದ ವ್ಯಕ್ತಿ ದಾರುಣವಾಗಿ ಮೃತಪಟ್ಟಿದ್ದಾರೆ. ಮುಸ್ತಾಕ ಮಕಬುಲ್ ಸಾಬ್ ಆವಟಿ (43)‌ ಮೃತ ದುರ್ದೈವಿ‌.

ಜೋರಾಗಿ ಸುರಿದ ಮಳೆಗೆ ಮಣ್ಣಿನ ಮನೆಯು ಏಕಾಏಕಿ ಕುಸಿದಿದೆ. ಈ ವೇಳೆ ಮುಸ್ತಾಕ ಮಕಬುಲ್‌ ಅವರು ಮನೆಯೊಳಗೆ ಮಲಗಿದ್ದು, ಇವರ ಮೈಮೇಲೆ ಮಣ್ಣು ಕುಸಿದ ಪರಿಣಾಮ ಮಲಗಿದ್ದಲ್ಲಿಯೇ ಮೃತಪಟ್ಟಿದ್ದಾರೆ. ಮುಸ್ತಾಕ ಅವರ ಪತ್ನಿ- ಮಕ್ಕಳು ಪಕ್ಕದ ಇನ್ನೊಂದು ಮನೆಯಲ್ಲಿದ್ದಾಗ ಘಟನೆ ನಡೆದಿದೆ. ಇನ್ನೂ ಮಣ್ಣಿನ ಅವಶೇಷಗಳಡಿ ಸಿಲುಕಿದ‌ ಮೃತದೇಹವನ್ನು ಹೊರ ತೆಗೆಯಲಾಯಿತು.

ತಹಸೀಲ್ದಾರ್‌ ಸದಾಶಿವ ಮುಕ್ಕೋಜಿ ಹಾಗೂ ಶಹರ್ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜಮಖಂಡಿ ನಗರದ ಶಹರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಬೆಂಗಳೂರಿನಲ್ಲೂ ಮುಂದುವರಿದ ವರ್ಷಧಾರೆ

ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ ಮಳೆಯು ಮುಂದುವರಿದಿದೆ. ಕೆಆರ್‌ ಸರ್ಕಲ್‌, ವಿಧಾನಸೌಧ, ಶಿವಾಜಿನಗರ, ವಸಂತ ನಗರ, ಮೆಜೆಸ್ಟಿಕ್‌, ಕೆಂಗೇರಿ, ಜ್ಞಾನಭಾರತಿ, ನಾಗರಭಾವಿ ಸುತ್ತಮುತ್ತ ಮಳೆಯಾಗಿದೆ. ಬಿಟ್ಟು ಬಿಟ್ಟು ಜೋರಾಗಿ ಮಳೆ ಸುರಿಯುತ್ತಿದ್ದು, ಪಾದಚಾರಿಗಳು, ವಾಹನ ಸವಾರರು ತೊಂದರೆ ಅನುಭವಿಸಿದರು. ಶಾಲೆ ಬಿಡುವ ಸಂದರ್ಭದಲ್ಲಿ ಮಳೆ ಸುರಿದ ಹಿನ್ನೆಲೆಯಲ್ಲಿ ಹಲವೆಡೆ ಟ್ರಾಫಿಕ್ ಜಾಮ್‌ ಉಂಟಾಗಿತ್ತು.

ಇದನ್ನೂ ಓದಿ: Karnataka Rain : ಮಳೆ ಅವಾಂತರ: ತರಗತಿ ನಡೆಯುವಾಗಲೇ ಮಕ್ಕಳ ಮೇಲೆ ಕುಸಿದು ಬಿದ್ದ ಚಾವಣಿ

ಲಘು ಮಳೆ ಸಾಧ್ಯತೆ

ಜೂನ್‌ 14ರಂದು ಒಳನಾಡಿನ ಕೆಲವು ಸ್ಥಳಗಳಲ್ಲಿ ಮತ್ತು ಕರಾವಳಿ ಜಿಲ್ಲೆಯ ಬಹುತೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯೊಂದಿಗೆ ಗುಡುಗು ಇರಲಿದೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಗುಡುಗು ಸಹಿತ ಲಘು ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 21 ಡಿ.ಸೆ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Sunny Leone
ಸಿನಿಮಾ8 mins ago

Sunny Leone: ಸನ್ನಿ ಲಿಯೋನ್ ಬೇಕೇಬೇಕೆಂದು ವಿದ್ಯಾರ್ಥಿಗಳ ಪಟ್ಟು; ಕೇರಳ ವಿವಿಗೆ ಇಕ್ಕಟ್ಟು!

ಕರ್ನಾಟಕ10 mins ago

Course Fee Hike: ತಾಂತ್ರಿಕ ಶಿಕ್ಷಣ ಕೋರ್ಸ್‌ಗಳ ಪ್ರವೇಶ ಶುಲ್ಕ ಶೇ.10ರಷ್ಟು ಹೆಚ್ಚಳ

engineering students have invented a unique fire extinguisher drone at bengaluru
ಕರ್ನಾಟಕ19 mins ago

Bengaluru News: ಬೆಂಕಿ ನಂದಿಸುವ ‘ವಿಶಿಷ್ಟ ಡ್ರೋನ್‌’; ಎಂಜಿನಿಯರಿಂಗ್‌ ವಿದ್ಯಾರ್ಥಿಗಳ ಆವಿಷ್ಕಾರ!

RBI Penalty
ದೇಶ19 mins ago

RBI Penalty: ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾಗೆ 1.45 ಕೋಟಿ ರೂ. ದಂಡ ವಿಧಿಸಿದ ಆರ್‌ಬಿಐ; ಕಾರಣ ಏನು?

Government urdu school roof collapse in Shira
ತುಮಕೂರು25 mins ago

Shira News: ಸರ್ಕಾರಿ ಶಾಲಾ ಕೊಠಡಿ ಚಾವಣಿ ಕುಸಿತ; ಶಿಕ್ಷಕಿ ತಲೆಗೆ ಪೆಟ್ಟು, ವಿದ್ಯಾರ್ಥಿಗಳು ಪಾರು

Journalist Sunayana Suresh is now a director
ಕರ್ನಾಟಕ28 mins ago

Kannada Short Movie: ಪತ್ರಕರ್ತೆ ಸುನಯನಾ ಸುರೇಶ್ ಈಗ ನಿರ್ದೇಶಕಿ; ‘ಮೌನ ರಾಗ’ ಕಿರುಚಿತ್ರಕ್ಕೆ ನಿರ್ದೇಶನ

Road Accident
ಕರ್ನಾಟಕ1 hour ago

Road Accident: ಬೆಳಗಾವಿಯಲ್ಲಿ ಕಾಲೇಜು ಬಸ್‌ಗೆ ಟಿಪ್ಪರ್ ಡಿಕ್ಕಿ; 40ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

Narendra Modi
ದೇಶ1 hour ago

Narendra Modi: ಸ್ನೇಹಿತ ಮೋದಿಯನ್ನು ಕೈಮುಗಿದು ಆತ್ಮೀಯವಾಗಿ ಸ್ವಾಗತಿಸಿದ ಇಟಲಿ ಪ್ರಧಾನಿ ಮೆಲೋನಿ; Video ಇದೆ

Bagalkot News
ಕರ್ನಾಟಕ2 hours ago

Bagalkot News: ಬುರ್ಕಾ ಧರಿಸಿ ಓಡಾಡ್ತಿದ್ದ ವ್ಯಕ್ತಿಗೆ ಮಹಿಳೆಯರಿಂದ ಚಪ್ಪಲಿ ಏಟು!

Petrodollar Deal
ವಿದೇಶ2 hours ago

Petrodollar Explainer: ಅಮೆರಿಕ ಜೊತೆಗಿನ 50 ವರ್ಷಗಳ ಪೆಟ್ರೊಡಾಲರ್‌ ಒಪ್ಪಂದ ಕೊನೆಗೊಳಿಸಿದ ಸೌದಿ ಅರೇಬಿಯಾ; ಡಾಲರ್‌ ಗರ್ವ ಭಂಗ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ2 hours ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು4 hours ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು4 hours ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ5 hours ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ3 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ3 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ3 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ3 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

ಟ್ರೆಂಡಿಂಗ್‌