ಕುಡಿದು ಮಲಗಿದ ಮೇಲೆ ಸೆಕ್ಸ್​​ಗಾಗಿ ಜಗಳ; ಬೇಸರದಿಂದ ಬಾವಿಗೆ ಹಾರಿದ ಪತ್ನಿಯನ್ನು ರಕ್ಷಿಸಿ ಬಳಿಕ ಕೊಂದ ಪತಿ! - Vistara News

ಕ್ರೈಂ

ಕುಡಿದು ಮಲಗಿದ ಮೇಲೆ ಸೆಕ್ಸ್​​ಗಾಗಿ ಜಗಳ; ಬೇಸರದಿಂದ ಬಾವಿಗೆ ಹಾರಿದ ಪತ್ನಿಯನ್ನು ರಕ್ಷಿಸಿ ಬಳಿಕ ಕೊಂದ ಪತಿ!

ಗಂಡನ ಹೆಸರು ಶಂಕರ್​ ರಾಮ್​ ಮತ್ತು ಪತ್ನಿ ಆಶಾ ಬಾಯಿ. ಇವರಿಬ್ಬರೂ ಒಟ್ಟಾಗ ಸೋಮವಾರ ರಾತ್ರಿ ಕಂಠಪೂರ್ತಿ ಮದ್ಯಪಾನ ಮಾಡಿದ ಬಳಿಕ ಮಲಗಲು ಹೋಗಿದ್ದಾರೆ. ಆಗ ಶಂಕರ್​ ರಾಮ್​ ತನ್ನ ಪತ್ನಿಯನ್ನು ಸೆಕ್ಸ್​ಗಾಗಿ ಒತ್ತಾಯ ಮಾಡಿದ್ದಾನೆ. ಆದರೆ ಆಕೆ ಒಪ್ಪಲಿಲ್ಲ.

VISTARANEWS.COM


on

Fight Over Sex Man First Saves Wife from well and then killed Her
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಜಶ್​ಪುರ್​: ಗಂಡ-ಹೆಂಡತಿ ಜಗಳ ಉಂಡು ಮಲಗುವ ತನಕ ಎಂಬುದೊಂದು ಗಾದೆಯಿದೆ. ಆದರೆ ಈ ಕಾಲದಲ್ಲಿ ಉಂಡು ಮಲಗಿದ ಮೇಲಷ್ಟೇ ಅಲ್ಲ, ಮರುದಿನವೂ ಮುಂದುವರಿಯುವಂಥ ಜಗಳಗಳು ಆಗುವುದೇ ಹೆಚ್ಚು ಬಿಡಿ. ಅದಿರಲಿ, ಈಗ ಛತ್ತೀಸ್​​ಗಢ್​​ನಲ್ಲಿ (Chhattisgarh News ) ಗಂಡ-ಹೆಂಡತಿಯ ಜಗಳ ‘ಕುಡಿದು’ ಮಲಗಿದ ಮೇಲೆ ಶುರುವಾಗಿ, ಕೊಲೆಯಲ್ಲಿ ಅಂತ್ಯಕಂಡಿದೆ. ಛತ್ತೀಸ್​ಗಢ್​​ನ ಜಶ್​ಪುರ್​ ಜಿಲ್ಲೆಯಲ್ಲಿ ಪತಿ ತನ್ನ ಪತ್ನಿಯನ್ನು ಹತ್ಯೆಗೈದಿದ್ದಾನೆ. ಲೈಂಗಿಕ ಕ್ರಿಯೆಗೆ ಬರುವಂತೆ ಆಕೆಯನ್ನು ಕೇಳಿದ್ದಕ್ಕೆ, ಅವಳು ಒಪ್ಪಲಿಲ್ಲ ಎಂಬ ಕಾರಣಕ್ಕೆ ಕೊಂದಿದ್ದಾನೆ..

ಗಂಡನ ಹೆಸರು ಶಂಕರ್​ ರಾಮ್​ ಮತ್ತು ಪತ್ನಿ ಆಶಾ ಬಾಯಿ. ಇವರಿಬ್ಬರೂ ಒಟ್ಟಾಗಿ ಸೋಮವಾರ ರಾತ್ರಿ ಕಂಠಪೂರ್ತಿ ಮದ್ಯಪಾನ ಮಾಡಿದ ಬಳಿಕ ಮಲಗಲು ಹೋಗಿದ್ದಾರೆ. ಆಗ ಶಂಕರ್​ ರಾಮ್​ ತನ್ನ ಪತ್ನಿಯನ್ನು ಸೆಕ್ಸ್​ಗಾಗಿ ಒತ್ತಾಯ ಮಾಡಿದ್ದಾನೆ. ಆದರೆ ಆಶಾ ಬಾಯಿ ಒಪ್ಪಲಿಲ್ಲ. ಇದೇ ವಿಷಯ ತಾರಕಕ್ಕೇರಿ, ಗಂಡ-ಹೆಂಡತಿ ಜಗಳವೂ ದೊಡ್ಡದಾಯಿತು. ಕುಡಿದ ಅಮಲು, ಕೋಪ ಮತ್ತು ಬೇಸರದಲ್ಲಿದ್ದ ಆಶಾ ಬಾಯಿ ಹೋಗಿ ಬಾವಿಗೆ ಹಾರಿದ್ದಾಳೆ.

ಇದನ್ನೂ ಓದಿ: Triple Talaq: ಆನ್‌ಲೈನ್‌ನಲ್ಲಿ 1.5 ಲಕ್ಷ ರೂ. ಕಳೆದುಕೊಂಡ ಪತ್ನಿಗೆ ತ್ರಿವಳಿ ತಲಾಕ್‌ ನೀಡಿದ ಪತಿ

ಪತ್ನಿ ಆಶಾ ಬಾವಿಗೆ ಹಾರಿದ್ದನ್ನು ನೋಡಿದ ಶಂಕರ್ ರಾಮ್​ ಆಕೆಯನ್ನು ರಕ್ಷಿಸಲೆಂದು ತಾನೂ ಬಾವಿಗೆ ಹಾರಿದ್ದಾನೆ. ಆಶಾಳನ್ನು ರಕ್ಷಣೆ ಮಾಡಿದ್ದಾನೆ. ಹೀಗೆ ಅವಳನ್ನು ಬಾವಿಯಿಂದ ಮೇಲೆತ್ತಿ ಕರೆದುಕೊಂಡು ಬಂದ ಶಂಕರ್​ ರಾಮ್​ ಮತ್ತೆ ಸೆಕ್ಸ್​ಗಾಗಿ ಜಗಳ ತೆಗೆದಿದ್ದಾನೆ. ಆದರೆ ಆಶಾ ಸುತಾರಾಂ ಒಪ್ಪಲಿಲ್ಲ. ಇಲ್ಲ, ನನಗೆ ಸೆಕ್ಸ್​ ಮಾಡಲು ಇಷ್ಟವಿಲ್ಲ ಎಂದು ಹೇಳಿದ್ದಾಳೆ. ಕೋಪಗೊಂಡ ಶಂಕರ್​ ರಾಮ್ ಆಕೆಯ ಖಾಸಗಿ ಭಾಗದ ಮೇಲೆಯೇ ಹಲ್ಲೆ ಮಾಡಿ, ಕೊಂದಿದ್ದಾನೆ. ಹೆಣದೊಂದಿಗೆ ರಾತ್ರಿಪೂರ್ತಿ ಕುಳಿತು ಕಾಲಕಳೆದಿದ್ದಾನೆ.

ಮರುದಿನ ಬೆಳಗ್ಗೆ ಅಕ್ಕಪಕ್ಕದ ಮನೆಯವರು ಪೊಲೀಸರಿಗೆ ವಿಷಯ ತಿಳಿಸಿದ್ದರು. ಸ್ಥಳಕ್ಕೆ ಬಂದ ಪೊಲೀಸ್ ಸಿಬ್ಬಂದಿ ಶಂಕರ್​​ನನ್ನು ಅರೆಸ್ಟ್ ಮಾಡಿದ್ದಾರೆ. ಆಶಾ ಶವವನ್ನು ಪೋಸ್ಟ್​ಮಾರ್ಟಮ್​ಗೆ ಕಳಿಸಿದ್ದಾರೆ. ಪ್ರಕರಣದ ತನಿಖೆ ನಡೆಸುತ್ತಿರುವುದಾಗಿ ಠಾಣಾ ಉಸ್ತುವಾರಿ ಅಧಿಕಾರಿ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Actor Darshan: ಪ್ಲೀಸ್‌ ಪವಿತ್ರಾಳನ್ನು ಬಿಟ್ಟು ಬಿಡಿ ಎಂದು ಅಂಗಲಾಚುತ್ತಿರುವ ದರ್ಶನ್‌?

Actor Darshan: ಸ್ಥಳ ಮಹಜರು ವೇಳೆ ತನಿಖಾಧಿಕಾರಿಗೆ ದರ್ಶನ್‌ ಮನವಿ ಮಾಡಿದ್ದಲ್ಲದೇ ಪೊಲೀಸ್ ಠಾಣೆಯಲ್ಲೂ ಪವಿತ್ರಾ ಗೌಡಳನ್ನು ಕೇಸ್ ನಿಂದ ಕೈ ಬಿಡುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆಯ‌ (Renuka Swamy Murder) ನಂತರ ಆಸುಪಾಸಿನ ಸ್ಥಳಗಳಲ್ಲಿದ್ದ ಸಿಸಿ ಕ್ಯಾಮೆರಾದಲ್ಲಿ (CCTV recording) ದಾಖಲಾಗಿದ್ದ ಎಲ್ಲ ದೃಶ್ಯಗಳನ್ನು ಡಿಲೀಟ್‌ (Delete) ಮಾಡಲಾಗಿದೆ ಎಂಬ ಆಘಾತಕಾರಿ ಸಂಗತಿ ಬಯಲಾಗಿದೆ. 

VISTARANEWS.COM


on

Actor Darshan Please leave Pavitra Darshan request to police
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆಯ‌ (Renuka Swamy Murder) ನಂತರ ಆಸುಪಾಸಿನ ಸ್ಥಳಗಳಲ್ಲಿದ್ದ ಸಿಸಿ ಕ್ಯಾಮೆರಾದಲ್ಲಿ (CCTV recording) ದಾಖಲಾಗಿದ್ದ ಎಲ್ಲ ದೃಶ್ಯಗಳನ್ನು ಡಿಲೀಟ್‌ (Delete) ಮಾಡಲಾಗಿದೆ ಎಂಬ ಆಘಾತಕಾರಿ ಸಂಗತಿ ಬಯಲಾಗಿದೆ. ಇದರ ಜತೆಗೆ ದರ್ಶನ್‌ (Actor Darshan) ಅವರು ಸ್ಥಳ ಮಹಜರು ವೇಳೆ ತನಿಖಾಧಿಕಾರಿಗಳಿಗೆ ಪವಿತ್ರ ಗೌಡಳನ್ನು ಬಿಟ್ಟು ಬಿಡಿ ಎಂದು ಅಂಗಲಾಚುತ್ತಿದ್ದಾರೆ ಎನ್ನಲಾಗಿದೆ.

ಸ್ಥಳ ಮಹಜರು ವೇಳೆ ತನಿಖಾಧಿಕಾರಿಗೆ ದರ್ಶನ್‌ ಮನವಿ ಮಾಡಿದ್ದಲ್ಲದೇ ಪೊಲೀಸ್ ಠಾಣೆಯಲ್ಲೂ ಪವಿತ್ರಾ ಗೌಡಳನ್ನು ಕೇಸ್ ನಿಂದ ಕೈ ಬಿಡುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಪವಿತ್ರಾ ಗೌಡಳಿಗೂ ಈ ಕೊಲೆ ಕೇಸ್‌ಗೂ ಸಂಬಂಧವಿಲ್ಲವೆಂದು ದರ್ಶನ್ ಪದೇ ಪದೇ ಹೇಳುತ್ತಿದ್ದು, ಪವಿತ್ರ ಗೌಡಳನ್ನು ಬಿಟ್ಟು ಬಿಡಿ ಎಂದು ಅಂಗಲಾಚುತ್ತಿದ್ದಾರೆ ಎನ್ನಲಾಗಿದೆ. ಆದರೆ ದರ್ಶನ್‌ ಎಷ್ಟೇ ಮನವಿ ಮಾಡಿಕೊಂಡರೂ ಪೊಲೀಸರು ಮಾತ್ರ ಜಗ್ಗದೇ ಇನ್ನಷ್ಟು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಿಸಿಟಿವಿ ದಾಖಲೆ ಸಂಪೂರ್ಣ ನಾಶ ಮಾಡಿದ ಪಾತಕಿಗಳು

ಕೊಲೆಯ ಬಳಿಕ, ಸ್ಟೋನಿ ಬ್ರೂಕ್ ರೆಸ್ಟೋರೆಂಟ್‌ನ ಹಾಗೂ ಹಲ್ಲೆ ನಡೆದ ಪಟ್ಟಣಗೆರೆಯ ಶೆಡ್‌ನ ದೃಶ್ಯಗಳನ್ನು ಡಿಲೀಟ್‌ ಮಾಡಿಸಲಾಗಿದೆ. ಆರೋಪಿಗಳು ಕಳೆದ ಒಂದು ವರ್ಷದ ಸಿಸಿ ಟಿವಿ ದೃಶ್ಯಗಳನ್ನು ಡಿಲೀಟ್ ಮಾಡಿಸಿದ್ದಾರೆ. ಸಿಸಿ ಟಿವಿ ದೃಶ್ಯಗಳೇ ಕೊಲೆಯ ಪ್ರಮುಖ ಸಾಕ್ಷಿ ಆಗಲಿವೆ ಎಂಬ ಹಿನ್ನೆಲೆಯಲ್ಲಿ, ಇವುಗಳನ್ನು ಪೂರ್ತಿಯಾಗಿ ಡಿಲೀಟ್‌ ಮಾಡಲು ಆರೋಪಿಗಳು ಅಪರಾಧ ಪರಿಣಿತರ ಸಲಹೆ ಪಡೆದೇ ಈ ಕೃತ್ಯ ಎಸಗಿದ್ದಾರೆ ಎಂದು ತರ್ಕಿಸಲಾಗಿದೆ.

ಇದನ್ನೂ ಓದಿ: Actor Darshan: ಮನಸ್ಸಿಗೆ ಹತ್ತಿರವಾದವರು ಕಷ್ಟ ಅನುಭವಿಸುತ್ತಿದ್ದಾರೆ; ಬರ್ತ್‌ಡೇ ಕ್ಯಾನ್ಸಲ್ ಮಾಡಿದ ರಕ್ಷಕ್ ಬುಲೆಟ್!

ರೇಣುಕಾಸ್ವಾಮಿ ಕೊಲೆಯ ಮೊದಲಿನ ಹಾಗೂ ನಂತರದ ಎಲ್ಲಾ ಸಿಸಿ ಕ್ಯಾಮರಾ ದೃಶ್ಯಗಳನ್ನು ಡಿಲೀಟ್‌ ಮಾಡಿಸಿದ್ದಾರೆ. ತನಿಖೆಗೆ ಇವು ಅತ್ಯಂತ ಅಗತ್ಯವಾಗಿದ್ದು, ಶೆಡ್ ಹಾಗೂ ರೆಸ್ಟೋರೆಂಟ್‌ನ ಸಿಸಿ ಟಿವಿ‌ ರೆಕಾರ್ಡಿಂಗ್‌ ರಿಕವರಿ ಮಾಡಲು ಪೊಲೀಸರು ಹರಸಾಹಸಪಡುತ್ತಿದ್ದಾರೆ. ದರ್ಶನ್‌ ಸೇರಿದಂತೆ ಆರೋಪಿಗಳ ಬಂಧನ ಆದ ಬಳಿಕ ಈ ರೆಕಾರ್ಡಿಂಗ್‌ ಡಿಲೀಟ್‌ ಮಾಡಲಾಗಿದೆಯೇ ಅಥವಾ ಮೊದಲೇ ಮಾಡಲಾಗಿದೆಯೇ ಎಂದು ತಿಳಿದುಬರಬೇಕಿದೆ.

ಕೊಲೆಯ ಪ್ರಮುಖ ಸಾಕ್ಷಿಗಳನ್ನೇ ಖತರ್‌ನಾಕ್ ಆರೋಪಿಗಳು ಡಿಲೀಟ್ ಮಾಡಿದ್ದು, ಈ ಹಿನ್ನೆಲೆಯಲ್ಲಿ ಸಾಕ್ಷಿ ನಾಶಕ್ಕೆ ಪೊಲೀಸ್‌ ಇಲಾಖೆಯಲ್ಲಿರುವವರಿಂದಲೂ ಆರೋಪಿಗಳು ಸಲಹೆ ಪಡೆದಿದ್ದಾರೆಯೇ ಎಂಬುದು ಕೂಡ ತನಿಖಾಧಿಕಾರಿಗಳಿಗೆ ಕುತೂಹಲ ಮೂಡಿಸಿದೆ. ಈಗಾಗಲೇ ಪ್ರಶ್ನೆಗೆ ಒಳಗಾಗುತ್ತಿರುವವರ ಪಟ್ಟಿಯಲ್ಲಿ ಒಬ್ಬ ಪೊಲೀಸ್‌ ಅಧಿಕಾರಿ ಕೂಡ ಇದ್ದಾರೆ ಎಂಬುದನ್ನು ಇಲ್ಲಿ ಗಮನಿಸಬಹುದು.

ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಪಟ್ಟಣಗೆರೆಯ ಶೆಡ್‌ನಲ್ಲಿ ಕೂಡಿಹಾಕಿ ಥಳಿಸಿ ಸಾಯಿಸಲಾಗಿತ್ತು. ನಂತರ ಇದನ್ನು ಮುಚ್ಚಿಹಾಕುವುದು ಹೇಗೆ ಎಂಬ ಕುರಿತು ಸ್ಟೋನಿ ಬ್ರೂಕ್ ರೆಸ್ಟೋರೆಂಟ್‌ನಲ್ಲಿ ನಟ ಹಾಗೂ ಆರೋಪಿಗಳು ಕೂತು ಮಾತನಾಡಿದ್ದರು. ಇಲ್ಲೇ 30 ಲಕ್ಷ ರೂಪಾಯಿಯ ಡೀಲ್‌ ಕೂಡ ನಡೆದಿತ್ತು. ಇದೀಗ ಎರಡೂ ಕಡೆಗಳ ಸಿಸಿಟಿವಿ ಹಾರ್ಡ್ ಡ್ರೈವ್‌ಗಳು ಕೂಡ ನಾಶವಾಗಿವೆ ಎಂದು ಗೊತ್ತಾಗಿದೆ. ಈ ಹಿನ್ನೆಲೆಯಲ್ಲಿ ಸ್ಟೋನಿ ಬ್ರೂಕ್ ರೆಸ್ಟೋರೆಂಟ್‌ನ ಮಾಲಿಕ‌ ವಿನಯ್‌ನನ್ನು ಕೂಡ ಪ್ರಶ್ನಿಸಲಾಗುತ್ತಿದೆ. ‌

Continue Reading

ಕ್ರೈಂ

Renuka Swamy Murder: ಸಿಸಿಟಿವಿ ದಾಖಲೆ ಸಂಪೂರ್ಣ ನಾಶ ಮಾಡಿದ ಪಾತಕಿಗಳು! ಆ ಭಯಾನಕ ಶೆಡ್‌ನಲ್ಲಿದೆ ಇನ್ನಷ್ಟು ರಹಸ್ಯ!

Renuka Swamy Murder: ಕೊಲೆಯ ಬಳಿಕ, ಸ್ಟೋನಿ ಬ್ರೂಕ್ ರೆಸ್ಟೋರೆಂಟ್‌ನ ಹಾಗೂ ಹಲ್ಲೆ ನಡೆದ ಪಟ್ಟಣಗೆರೆಯ ಶೆಡ್‌ನ ದೃಶ್ಯಗಳನ್ನು ಡಿಲೀಟ್‌ ಮಾಡಿಸಲಾಗಿದೆ. ಆರೋಪಿಗಳು ಕಳೆದ ಒಂದು ವರ್ಷದ ಸಿಸಿ ಟಿವಿ ದೃಶ್ಯಗಳನ್ನು ಡಿಲೀಟ್ ಮಾಡಿಸಿದ್ದಾರೆ.

VISTARANEWS.COM


on

pattanagere shed darshan renuka swamy murder
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆಯ‌ (Renuka Swamy Murder) ನಂತರ ಆಸುಪಾಸಿನ ಸ್ಥಳಗಳಲ್ಲಿದ್ದ ಸಿಸಿ ಕ್ಯಾಮೆರಾದಲ್ಲಿ (CCTV recording) ದಾಖಲಾಗಿದ್ದ ಎಲ್ಲ ದೃಶ್ಯಗಳನ್ನು ಡಿಲೀಟ್‌ (Delete) ಮಾಡಲಾಗಿದೆ ಎಂಬ ಆಘಾತಕಾರಿ ಸಂಗತಿ ಬಯಲಾಗಿದೆ. ದರ್ಶನ್‌ (Actor Darshan) ನಡೆಸಿದ ಕರಾಳ ಕೃತ್ಯದ ನಂತರ ಕಳೆದ ಒಂದು ವರ್ಷದ ಸಿಸಿಟಿವಿ ದಾಖಲಾತಿಗಳನ್ನು ಡಿಲೀಟ್‌ ಮಾಡಲಾಗಿದೆ ಎಂಬ ಎಕ್ಸ್‌ಕ್ಲೂಸಿವ್‌ ಮಾಹಿತಿ ವಿಸ್ತಾರ ನ್ಯೂಸ್‌ಗೆ ದೊರೆತಿದೆ.

ಕೊಲೆಯ ಬಳಿಕ, ಸ್ಟೋನಿ ಬ್ರೂಕ್ ರೆಸ್ಟೋರೆಂಟ್‌ನ ಹಾಗೂ ಹಲ್ಲೆ ನಡೆದ ಪಟ್ಟಣಗೆರೆಯ ಶೆಡ್‌ನ ದೃಶ್ಯಗಳನ್ನು ಡಿಲೀಟ್‌ ಮಾಡಿಸಲಾಗಿದೆ. ಆರೋಪಿಗಳು ಕಳೆದ ಒಂದು ವರ್ಷದ ಸಿಸಿ ಟಿವಿ ದೃಶ್ಯಗಳನ್ನು ಡಿಲೀಟ್ ಮಾಡಿಸಿದ್ದಾರೆ. ಸಿಸಿ ಟಿವಿ ದೃಶ್ಯಗಳೇ ಕೊಲೆಯ ಪ್ರಮುಖ ಸಾಕ್ಷಿ ಆಗಲಿವೆ ಎಂಬ ಹಿನ್ನೆಲೆಯಲ್ಲಿ, ಇವುಗಳನ್ನು ಪೂರ್ತಿಯಾಗಿ ಡಿಲೀಟ್‌ ಮಾಡಲು ಆರೋಪಿಗಳು ಅಪರಾಧ ಪರಿಣಿತರ ಸಲಹೆ ಪಡೆದೇ ಈ ಕೃತ್ಯ ಎಸಗಿದ್ದಾರೆ ಎಂದು ತರ್ಕಿಸಲಾಗಿದೆ.

ರೇಣುಕಾಸ್ವಾಮಿ ಕೊಲೆಯ ಮೊದಲಿನ ಹಾಗೂ ನಂತರದ ಎಲ್ಲಾ ಸಿಸಿ ಕ್ಯಾಮರಾ ದೃಶ್ಯಗಳನ್ನು ಡಿಲೀಟ್‌ ಮಾಡಿಸಿದ್ದಾರೆ. ತನಿಖೆಗೆ ಇವು ಅತ್ಯಂತ ಅಗತ್ಯವಾಗಿದ್ದು, ಶೆಡ್ ಹಾಗೂ ರೆಸ್ಟೋರೆಂಟ್‌ನ ಸಿಸಿ ಟಿವಿ‌ ರೆಕಾರ್ಡಿಂಗ್‌ ರಿಕವರಿ ಮಾಡಲು ಪೊಲೀಸರು ಹರಸಾಹಸಪಡುತ್ತಿದ್ದಾರೆ. ದರ್ಶನ್‌ ಸೇರಿದಂತೆ ಆರೋಪಿಗಳ ಬಂಧನ ಆದ ಬಳಿಕ ಈ ರೆಕಾರ್ಡಿಂಗ್‌ ಡಿಲೀಟ್‌ ಮಾಡಲಾಗಿದೆಯೇ ಅಥವಾ ಮೊದಲೇ ಮಾಡಲಾಗಿದೆಯೇ ಎಂದು ತಿಳಿದುಬರಬೇಕಿದೆ.

ಕೊಲೆಯ ಪ್ರಮುಖ ಸಾಕ್ಷಿಗಳನ್ನೇ ಖತರ್‌ನಾಕ್ ಆರೋಪಿಗಳು ಡಿಲೀಟ್ ಮಾಡಿದ್ದು, ಈ ಹಿನ್ನೆಲೆಯಲ್ಲಿ ಸಾಕ್ಷಿ ನಾಶಕ್ಕೆ ಪೊಲೀಸ್‌ ಇಲಾಖೆಯಲ್ಲಿರುವವರಿಂದಲೂ ಆರೋಪಿಗಳು ಸಲಹೆ ಪಡೆದಿದ್ದಾರೆಯೇ ಎಂಬುದು ಕೂಡ ತನಿಖಾಧಿಕಾರಿಗಳಿಗೆ ಕುತೂಹಲ ಮೂಡಿಸಿದೆ. ಈಗಾಗಲೇ ಪ್ರಶ್ನೆಗೆ ಒಳಗಾಗುತ್ತಿರುವವರ ಪಟ್ಟಿಯಲ್ಲಿ ಒಬ್ಬ ಪೊಲೀಸ್‌ ಅಧಿಕಾರಿ ಕೂಡ ಇದ್ದಾರೆ ಎಂಬುದನ್ನು ಇಲ್ಲಿ ಗಮನಿಸಬಹುದು.

ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಪಟ್ಟಣಗೆರೆಯ ಶೆಡ್‌ನಲ್ಲಿ ಕೂಡಿಹಾಕಿ ಥಳಿಸಿ ಸಾಯಿಸಲಾಗಿತ್ತು. ನಂತರ ಇದನ್ನು ಮುಚ್ಚಿಹಾಕುವುದು ಹೇಗೆ ಎಂಬ ಕುರಿತು ಸ್ಟೋನಿ ಬ್ರೂಕ್ ರೆಸ್ಟೋರೆಂಟ್‌ನಲ್ಲಿ ನಟ ಹಾಗೂ ಆರೋಪಿಗಳು ಕೂತು ಮಾತನಾಡಿದ್ದರು. ಇಲ್ಲೇ 30 ಲಕ್ಷ ರೂಪಾಯಿಯ ಡೀಲ್‌ ಕೂಡ ನಡೆದಿತ್ತು. ಇದೀಗ ಎರಡೂ ಕಡೆಗಳ ಸಿಸಿಟಿವಿ ಹಾರ್ಡ್ ಡ್ರೈವ್‌ಗಳು ಕೂಡ ನಾಶವಾಗಿವೆ ಎಂದು ಗೊತ್ತಾಗಿದೆ. ಈ ಹಿನ್ನೆಲೆಯಲ್ಲಿ ಸ್ಟೋನಿ ಬ್ರೂಕ್ ರೆಸ್ಟೋರೆಂಟ್‌ನ ಮಾಲಿಕ‌ ವಿನಯ್‌ನನ್ನು ಕೂಡ ಪ್ರಶ್ನಿಸಲಾಗುತ್ತಿದೆ. ‌

ಆ ಭಯಾನಕ ಶೆಡ್!‌

ರೇಣುಕಾಸ್ವಾಮಿ ಕೊಲೆಯಾದ ಪಟ್ಟಣಗೆರೆಯ ಆ ಶೆಡ್ ಬಗ್ಗೆ ಇದೀಗ ಇನ್ನಿತರ ಕೆಲವು ಭಯಾನಕ ಸತ್ಯಗಳು ಹೊರಬೀಳುತ್ತಿವೆ. ಇಲ್ಲಿ ಅದೆಷ್ಟೋ ಕನ್ನಡ ಚಿತ್ರ ನಿರ್ಮಾಪಕರು ಕೂಡ ಗೂಸಾ ತಿಂದಿದ್ದಾರೆ ಎಂಬುದು ಬಯಲಾಗಿದೆ. ತನಗೆ ಆಗದವರು, ತನ್ನ ವಿರೋಧಿಗಳು ಹಾಗೂ ಪೇಮೆಂಟ್‌ ಮಾಡದ ನಿರ್ಮಾಪಕರನ್ನು ಅಟ್ಯಾಕ್ ಮಾಡಲು ದರ್ಶನ್‌ ಬಳಸುತ್ತಿದ್ದ ಜಾಗವೇ ಈ ಶೆಡ್ ಎನ್ನಲಾಗಿದೆ.

ನಟ ದರ್ಶನ್ ಎಷ್ಟೋ ಮಂದಿಗೆ ಇಲ್ಲೇ ಹಲ್ಲೆ ಮಾಡಿ, 2ರಿಂದ 3 ದಿನಗಳ ಕಾಲ ಇಲ್ಲೇ ಇರಿಸಿಕೊಳ್ಳುತ್ತಿದ್ದ. ಕಳಿಸಿಕೊಡುವಾಗ ಬ್ಯಾಂಡೇಜ್ ಹಾಕಿಸಿ ಕೈಗೆ ಹಣ ಕೊಟ್ಟು ಕಳುಹಿಸುತ್ತಿದ್ದ ಎಂದು ಕೆಲವರು ಇದೀಗ ಪೊಲೀಸರ ಮುಂದೆ ಹೇಳಿಕೊಂಡಿದ್ದಾರೆ. ದರ್ಶನ್‌ ಕಾರು ಇಲ್ಲಿಗೆ ಆಗಾಗ ಬಂದು ಹೋಗುತ್ತಿದ್ದುದನ್ನು ಕೆಲವು ಸ್ಥಳೀಯರು ಗಮನಿಸಿದ್ದಾರೆ. ದರ್ಶನ್‌ಗೆ ಇನ್ನೆಷ್ಟು ಕರಾಳ ಮುಖಗಳಿವೆ ಎಂದು ಪೊಲೀಸರೇ ಇದೀಗ ಬೆಚ್ಚಿ ಬೀಳುವಂತಾಗಿದೆ.

ಇದನ್ನೂ ಓದಿ: Actor Darshan: ಕೊಲೆಯನ್ನು ಆತುರದಲ್ಲಿ ಮಾಡಿರ್ತಾನೆ ಬಳಿಕ ಕೊರಗುತ್ತಾನೆ; ದರ್ಶನ್ ಹಳೆಯ ಸಂದರ್ಶನ ವೈರಲ್‌!

Continue Reading

ಬೆಳಗಾವಿ

Murder Case : ನಡುರಸ್ತೆಯಲ್ಲಿ ಚಿಮ್ಮಿದ ರಕ್ತ; ತಲೆ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯ ಕೊಲೆ

Murder Case : ದುಷ್ಕರ್ಮಿಗಳು ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಕೊಲೆಗೆ ನಿಖರ ಕಾರಣವೇನು ಎಂಬುದು ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ತನಿಖೆಯನ್ನು ಕೈಗೊಂಡಿದ್ದಾರೆ.

VISTARANEWS.COM


on

By

murder Case in chikkodi
Koo

ಚಿಕ್ಕೋಡಿ: ಭಾನುವಾರ ತಡರಾತ್ರಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯೊಬ್ಬನ ಬರ್ಬರವಾಗಿ ಕೊಲೆ (Murder Case) ಮಾಡಲಾಗಿದೆ. ಬೆಳಗಾವಿ ಜಿಲ್ಲೆಯ ‌ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಯಕ್ಸಂಬಾ ಪಟ್ಟಣದ ನಿವಾಸಿ ಮಹೇಶ ಕುರ್ಣಿ (48) ಕೊಲೆಯಾದವನು.

ಯಕ್ಸಂಬಾ ಪಟ್ಟಣದ ಬೀರೇಶ್ವರ ಕಾಲೋನಿಯಲ್ಲಿ ಈ ಕೃತ್ಯ ನಡೆದಿದೆ. ಮುಂಜಾನೆ ರಕ್ತಸಿಕ್ತವಾಗಿ ಬಿದ್ದಿದ್ದ ಮೃತದೇಹವನ್ನು ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಕೂಡಲೇ ಪೊಲೀಸರಿಗೆ ಈ ಕುರಿತು ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಸದಲಗಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಹಂತಕರು ಯಾರು ಎಂಬುದು ಇನ್ನೂ ತಿಳಿದುಬಂದಿಲ್ಲ. ಸದಲಗಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ. ಆರೋಪಿಗಳಿಗಾಗಿ ಹುಡುಕಾಟ ನಡೆಯುತ್ತಿದ್ದು, ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ: Train Accident: ಕಾಂಚನಜುಂಗಾ ಎಕ್ಸ್​ಪ್ರೆಸ್​ಗೆ ಗೂಡ್ಸ್​ ರೈಲು ಡಿಕ್ಕಿ; 5 ಮಂದಿ ಸಾವು

ತಾಯಿಗೆ ಚಿತ್ರಹಿಂಸೆ ನೀಡುತ್ತಿದ್ದ ಬಾಯ್‌ಫ್ರೆಂಡ್‌ನನ್ನು ಕೊಂದು ಮುಗಿಸಿದ ಮಗ

ಬೆಂಗಳೂರು ಗ್ರಾಮಾಂತರ: ನಿರ್ಮಾಣ ಹಂತದ ಕಟ್ಟಡದಲ್ಲಿ ದೊಣ್ಣೆಯಿಂದ ಹೊಡೆದು ವ್ಯಕ್ತಿಯ ಬರ್ಬರ ಹತ್ಯೆ (Murder Case) ನಡೆಸಲಾಗಿದೆ. ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯ ಕೂಡ್ಲು ಗ್ರಾಮದ ಸಾಯಿ ಮೆಡೋಸ್ ಲೇಔಟ್‌ನಲ್ಲಿ ಘಟನೆ ನಡೆದಿದೆ. ಕೃಷ್ಣೋಜಿ ರಾವ್ (37) ಕೊಲೆಯಾದವನು.

ಶಿವಕುಮಾರ್, ರಾಜೇಶ್ವರಿ ಕೊಲೆ ಮಾಡಿದ ಆರೋಪಿಗಳಾಗಿದ್ದಾರೆ. ಮದುವೆಯಾಗಿದ್ದ ರಾಜೇಶ್ವರಿ ಪತಿಯಿಂದ ದೂರಾಗಿದ್ದಳು. ಬಳಿಕ ಕೆಲ ವರ್ಷಗಳ ಹಿಂದೆ ಕೃಷ್ಣೋಜಿರಾವ್ ಜತೆ ರಾಜೇಶ್ವರಿ ಸಂಬಂಧ ಹೊಂದಿದ್ದಳು. ಇವರಿಬ್ಬರು ಗಂಡ-ಹೆಂಡತಿ ಎಂದು ಹೇಳಿಕೊಂಡು ಗಾರೆ ಕೆಲಸ ಮಾಡಿಕೊಂಡು ಒಟ್ಟಿಗೆ ವಾಸವಿದ್ದರು.

ಕೃಷ್ಣೋಜಿರಾವ್, ರಾಜೇಶ್ವರಿ ಮತ್ತು ಆಕೆಯ ಮಗ ಶಿವಕುಮಾರ್ ನಿರ್ಮಾಣ ಹಂತದ ಕಟ್ಟಡದಲ್ಲಿ ವಾಸವಿದ್ದರು. ಇತ್ತೀಚೆಗೆ ಕೃಷ್ಣೋಜಿರಾವ್ ದಿನನಿತ್ಯ ಕುಡಿದು ಬಂದು ರಾಜೇಶ್ವರಿಗೆ ಹಲ್ಲೆ ಮಾಡುತ್ತಿದ್ದ. ಇದರಿಂದಾಗಿ ರಾಜೇಶ್ವರಿ ಹಾಗೂ ಆಕೆಯ ಮಗ ಶಿವಕುಮಾರ್‌ ಬೇಸತ್ತು ಹೋಗಿದ್ದರು.

ನಿನ್ನೆ ಭಾನುವಾರ ಸಂಜೆ ಕಂಠ ಪೂರ್ತಿ ಕುಡಿದು ಬಂದಿದ್ದ ಕೃಷ್ಣೋಜಿರಾವ್, ರಾಜೇಶ್ವರಿ ಜತೆಗೆ ಗಲಾಟೆ ಮಾಡಿ ಹಲ್ಲೆ ಮಾಡುತ್ತಿದ್ದ. ಈ ವೇಳೆ ಅಲ್ಲಿಗೆ ಬಂದ ರಾಜೇಶ್ವರಿ ಮಗ ಶಿವಕುಮಾರ್‌ ದೊಣ್ಣೆಯಿಂದ ಕೃಷ್ಣೋಜಿರಾವ್ ತಲೆಗೆ ಹೊಡೆದಿದ್ದ.

ಆಗ ಶಿವಕುಮಾರನ ತಾಯಿ ರಾಜೇಶ್ವರಿ ಅವನನ್ನು ಬಿಡಬೇಡ ಮುಗಿಸಿಬಿಡು ಎಂದು ಹೇಳಿದ್ದಾಳೆ. ಆಗ ಮತ್ತೆ ದೊಣ್ಣೆಯಿಂದ ಮುಖ ಹಾಗೂ ತಲೆಗೆ ಹೊಡೆದು ಕೊಂದು ಹಾಕಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪರಪ್ಪನ ಅಗ್ರಹಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

BS Yediyurappa: ಇಂದು ಸಿಐಡಿ ಮುಂದೆ ಹಾಜರಾಗಲಿರುವ ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ

ಇಂದು ಬೆಂಗಳೂರಿನಲ್ಲಿರುವ ಸಿಐಡಿ ಮುಖ್ಯ ಕಚೇರಿಯಲ್ಲಿ ಬಿಎಸ್‌ವೈ (BS Yediyurappa) ತಮ್ಮ ವಕೀಲರ ಸಮೇತ ಹಾಜರಾಗಿ ವಿಚಾರಣೆ ಎದುರಿಸಲಿದ್ದಾರೆ ಎಂದು ಗೊತ್ತಾಗಿದೆ. ಬಿಎಸ್‌ವೈ ಅಪ್ರಾಪ್ತ ವಯಸ್ಸಿನ ಹುಡುಗಿ ಮೇಲೆ ಅತ್ಯಾಚಾರ ಮಾಡಿದ ಆರೋಪ ಎದುರಿಸುತ್ತಿದ್ದಾರೆ.

VISTARANEWS.COM


on

BS Yediyurappa pocso case
Koo

ಬೆಂಗಳೂರು: 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ (Physical abuse) ಎಸಗಿದ ಆರೋಪದಲ್ಲಿ ದಾಖಲಾದ ಪೋಕ್ಸೊ ಕೇಸ್‌ನಲ್ಲಿ (POCSO Case) ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ (BS Yediyurappa) ಇಂದು ಸಿಐಡಿ (CID) ಮುಂದೆ ಹಾಜರಾಗಿ ಹೇಳಿಕೆ ನೀಡಲಿದ್ದಾರೆ. ಅವರನ್ನು ಬಂಧಿಸದಂತೆ ಈಗಾಗಲೇ ಹೈಕೋರ್ಟ್ (High court) ಸೂಚನೆ ನೀಡಿರುವ ಹಿನ್ನೆಲೆಯಲ್ಲಿ, ಬಂಧನದ ಭಯವಿಲ್ಲದೇ ಸಿಐಡಿ ಮುಂದೆ ಬಿಎಸ್‌ವೈ ಹಾಜರಾಗಲಿದ್ದಾರೆ.

ಇಂದು ಬೆಂಗಳೂರಿನಲ್ಲಿರುವ ಸಿಐಡಿ ಮುಖ್ಯ ಕಚೇರಿಯಲ್ಲಿ ಬಿಎಸ್‌ವೈ ತಮ್ಮ ವಕೀಲರ ಸಮೇತ ಹಾಜರಾಗಿ ವಿಚಾರಣೆ ಎದುರಿಸಲಿದ್ದಾರೆ ಎಂದು ಗೊತ್ತಾಗಿದೆ. ಬಿಎಸ್‌ವೈ ಅಪ್ರಾಪ್ತ ವಯಸ್ಸಿನ ಹುಡುಗಿ ಮೇಲೆ ಅತ್ಯಾಚಾರ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಬಾಲಕಿಯ ತಾಯಿ ಈ ಆರೋಪ ಮಾಡಿದ್ದು, ಈಕೆ ಇತ್ತೀಚೆಗೆ ನಿಧನರಾಗಿದ್ದರು. ಪ್ರಕರಣ ನಡೆದ ಸಂದರ್ಭದಲ್ಲಿ ಯಾರೆಲ್ಲ ಬಂದಿದ್ದರು, ಅಂದು ಏನಾಯಿತು ಇತ್ಯಾದಿ ಪ್ರಕರಣದ ಮಾಹಿತಿಯನ್ನು ಬಿಎಸ್‌ವೈ ಅವರಿಂದ ಸಿಐಡಿ ಪಡೆಯಲಿದೆ. ಇದೊಂದು ಸಂಪೂರ್ಣವಾಗಿ ರಾಜಕೀಯ ಪ್ರೇರಿತ ಷಡ್ಯಂತ್ರ ಎಂದು ಬಿಎಸ್‌ವೈ ಈಗಾಗಲೇ ಹೇಳಿದ್ದಾರೆ.

ಬಿಎಸ್‌ವೈ ಇಂದೂ ಕೂಡ ಪ್ರತಿ ದಿನ ಏಳುವಂತೆ ಐದು ಗಂಟೆಗೆ ಎದ್ದು ಬೆಳಿಗ್ಗೆ ಮನೆಯ ಬಳಿ ವಾಕಿಂಗ್ ಮಾಡಿದ್ದು, ಬಳಿಕ ದಿನ ಪತ್ರಿಕೆ ಓದಿದ್ದಾರೆ. ಒಂಬತ್ತು ಗಂಟೆಗೆ ವಕೀಲ ಸಂದೀಪ್ ಪಾಟೀಲ್ ಅವರು ಬಿ.ವೈ ವಿಜಯೇಂದ್ರ ಅವರ ಡಾಲರ್ಸ್ ಕಾಲೋನಿ ನಿವಾಸಕ್ಕೆ ಆಗಮಿಸಿದ್ದು, ಬಳಿಕ ವಕೀಲರ ಜತೆ ಬಿಎಸ್‌ವೈ ಹಾಗೂ ಬಿವೈವಿ ಚರ್ಚೆ ನಡೆಸಿದರು. ಸುಮಾರು ಹನ್ನೊಂದು ಗಂಟೆಗೆ ವಕೀಲ ಸಂದೀಪ್ ಪಾಟೀಲ್ ಜೊತೆಗೆ ಯಡಿಯೂರಪ್ಪ ಸಿಐಡಿ ಕಚೇರಿಗೆ ತೆರಳಲಿದ್ದಾರೆ.

ಎದುರಿಸುತ್ತೇವೆ: ಬಿವೈ ವಿಜಯೇಂದ್ರ

ಪೋಕ್ಸೋ ಪ್ರಕರಣದ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿಕೆ ನೀಡಿದ್ದು , ಇಂದು ವಿಎಸ್‌ವೈ ಸಿಐಡಿ ಮುಂದೆ ಹಾಜರಾಗಲಿದ್ದಾರೆ ಎಂದಿದ್ದಾರೆ. “ಪೋಕ್ಸೋ ಪ್ರಕರಣ ಪಬ್ಲಿಕ್ ಡೊಮೈನ್‌ನಲ್ಲಿದೆ. ಯಾರು ಬೇಕಿದ್ದರೂ ವಿವರ ಪಡೆಯಬಹುದು. ಯಡಿಯೂರಪ್ಪ ಇದರಲ್ಲಿ ನಿರ್ದೋಷಿಯಾಗಿದ್ದಾರೆ. ಪ್ರಕರಣ ನ್ಯಾಯಾಲಯದಲ್ಲಿ ಇದೆ. ವಿಚಾರಣೆಗೆ ಹಾಜರಾಗುತ್ತಾರೆ. ಪ್ರಕರಣವನ್ನು ಎದುರಿಸ್ತೇವೆ” ಎಂದು ಹೇಳಿದ್ದಾರೆ.

ಹೈಕೋರ್ಟ್‌ ರಿಲೀಫ್‌

ಬಂಧನದ ಭೀತಿಯಲ್ಲಿದ್ದ ಬಿಎಸ್‌ವೈ ಅವರಿಗೆ ಕರ್ನಾಟಕ ಹೈಕೋರ್ಟ್‌ ಬಿಗ್‌ ರಿಲೀಫ್‌ ನೀಡಿತ್ತು. ಹೈಕೋರ್ಟ್‌ನ ಮುಂದಿನ ವಿಚಾರಣೆವರೆಗೆ ಬಿ.ಎಸ್.ಯಡಿಯೂರಪ್ಪ ಅವರನ್ನು ಬಂಧಿಸಬಾರದು ಎಂದು ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರ ಏಕಸದಸ್ಯ ಪೀಠವು ಆದೇಶ ಹೊರಡಿಸಿತ್ತು. ಇದರಿಂದಾಗಿ, ಸಿಐಡಿ ಅಧಿಕಾರಿಗಳಿಂದ ಬಂಧನದ ಭೀತಿಯಲ್ಲಿ ಯಡಿಯೂರಪ್ಪ ಅವರಿಗೆ ರಿಲೀಫ್‌ ಸಿಕ್ಕಿದೆ. ಆದರೆ, ಜೂನ್‌ 17ರಂದು ಸಿಐಡಿ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾಗಬೇಕು ಎಂದು ಯಡಿಯೂರಪ್ಪ ಅವರಿಗೆ ಕೋರ್ಟ್‌ ಸೂಚಿಸಿತ್ತು.

ಪ್ರಕರಣದಲ್ಲಿ ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯವು “ಬಿ.ಎಸ್.ಯಡಿಯೂರಪ್ಪ ಅವರು ಮಾಜಿ ಮುಖ್ಯಮಂತ್ರಿಯಾಗಿದ್ದಾರೆ. ಅವರು ಜೂನ್‌ 17ರಂದು ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದರೂ ಕೋರ್ಟ್‌ ಹೋಗಿ ಅರೆಸ್ಟ್‌ ವಾರಂಟ್‌ ತಂದಿದ್ದೀರಿ. ನಾಲ್ಕು ದಿನ ತಡವಾಗಿ ವಿಚಾರಣೆಗೆ ಹಾಜರಾಗಿದ್ದರೆ ಆಕಾಶವೇನೂ ಕಳಚಿ ಬೀಳುತ್ತಿರಲಿಲ್ಲ. ಹಾಗಾಗಿ, ಅರೆಸ್ಟ್‌ ವಾರಂಟ್‌ ಬಗ್ಗೆ ನಮಗೆ ಅನುಮಾನವಿದೆ. ಮುಂದಿನ ವಿಚಾರಣೆವರೆಗೂ ಯಡಿಯೂರಪ್ಪ ಅವರನ್ನು ಬಂಧಿಸಬಾರದು” ಎಂಬುದಾಗಿ ಏಕಸದಸ್ಯ ಪೀಠವು ಆದೇಶ ಹೊರಡಿಸಿತ್ತು.

ಏನಿದು ಪ್ರಕರಣ?

2024ರ ಫೆಬ್ರವರಿ 2ರಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮಾರ್ಚ್‌ 14ರಂದು ಪೋಕ್ಸೊ ಕಾಯ್ದೆ ಅಡಿಯಲ್ಲಿ ಸದಾಶಿವನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ಇದಾದ ಬಳಿಕ ಬಿ.ಎಸ್.ಯಡಿಯೂರಪ್ಪ ಅವರು ಸಿಐಡಿ ಅಧಿಕಾರಿಗಳ ವಿಚಾರಣೆಗೂ ಹಾಜರಾಗಿದ್ದರು. ಆದರೆ, ಎಫ್‌ಐಆರ್‌ ದಾಖಲಾದ ಮೂರು ತಿಂಗಳ ಬಳಿಕ ಪ್ರಕರಣವೀಗ ಮತ್ತೆ ಮುನ್ನೆಲೆಗೆ ಬಂದಿದೆ. ಜೂನ್‌ 12ರಂದೇ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಬೇಕು ಎಂಬುದಾಗಿ ಜೂನ್‌ 11ರಂದೇ ಸಿಐಡಿ ಅಧಿಕಾರಿಗಳು ನೋಟಿಸ್‌ ನೀಡಿದ್ದರು.

ಇದನ್ನೂ ಓದಿ: BS Yediyurappa: ಪೋಕ್ಸೊ ಕೇಸ್; ಯಡಿಯೂರಪ್ಪ ವಿರುದ್ಧ ಅರೆಸ್ಟ್‌ ವಾರಂಟ್

Continue Reading
Advertisement
Bakrid 2024
ಬೆಂಗಳೂರು4 mins ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Actor Darshan Please leave Pavitra Darshan request to police
ಸಿನಿಮಾ15 mins ago

Actor Darshan: ಪ್ಲೀಸ್‌ ಪವಿತ್ರಾಳನ್ನು ಬಿಟ್ಟು ಬಿಡಿ ಎಂದು ಅಂಗಲಾಚುತ್ತಿರುವ ದರ್ಶನ್‌?

Bakrid
Latest16 mins ago

Bakrid: ಬಕ್ರೀದ್ ಹಿನ್ನೆಲೆಯಲ್ಲಿ ಮಾರಾಟಕ್ಕಿಟ್ಟಿದ್ದ ಈ ಮೇಕೆಯ ಬೆಲೆ 69 ಲಕ್ಷ ರೂ!

Real Estate
ವಾಣಿಜ್ಯ22 mins ago

Real Estate: ಹಲವರಿಗೆ ಮನೆ ಇಲ್ಲ, ಇದ್ದವರು ಬಳಸುತ್ತಿಲ್ಲ! ದೇಶದಲ್ಲಿ 1 ಕೋಟಿಗೂ ಹೆಚ್ಚು ಫ್ಲ್ಯಾಟ್ ಗಳು ಖಾಲಿ ಬಿದ್ದಿವೆ!

Smriti Mandhana
ಕ್ರೀಡೆ23 mins ago

Smriti Mandhana: ಶತಕ ಬಾರಿಸಿ ವಿಶೇಷ ದಾಖಲೆ ಬರೆದ ಸ್ಮೃತಿ ಮಂಧಾನ

Actress Nayanathara
Latest33 mins ago

Actress Nayanathara: ‘ಬಾಹುಬಲಿ’ ಸಿನಿಮಾ ದೃಶ್ಯದ ಮರುಸೃಷ್ಟಿಯಲ್ಲಿ ವಿಘ್ನೇಶ್ ಶಿವನ್ ಪುತ್ರರು!

Actor Darshan Rakshak Bullet Not Celebrating His Birthday Due To Darshan Arrest
ಸ್ಯಾಂಡಲ್ ವುಡ್37 mins ago

Actor Darshan: ಮನಸ್ಸಿಗೆ ಹತ್ತಿರವಾದವರು ಕಷ್ಟ ಅನುಭವಿಸುತ್ತಿದ್ದಾರೆ; ಬರ್ತ್‌ಡೇ ಕ್ಯಾನ್ಸಲ್ ಮಾಡಿದ ರಕ್ಷಕ್ ಬುಲೆಟ್!

pattanagere shed darshan renuka swamy murder
ಕ್ರೈಂ44 mins ago

Renuka Swamy Murder: ಸಿಸಿಟಿವಿ ದಾಖಲೆ ಸಂಪೂರ್ಣ ನಾಶ ಮಾಡಿದ ಪಾತಕಿಗಳು! ಆ ಭಯಾನಕ ಶೆಡ್‌ನಲ್ಲಿದೆ ಇನ್ನಷ್ಟು ರಹಸ್ಯ!

murder Case in chikkodi
ಬೆಳಗಾವಿ55 mins ago

Murder Case : ನಡುರಸ್ತೆಯಲ್ಲಿ ಚಿಮ್ಮಿದ ರಕ್ತ; ತಲೆ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯ ಕೊಲೆ

Train Accident
ದೇಶ1 hour ago

Train Accident: ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಗೂಡ್ಸ್​ ರೈಲು ಡಿಕ್ಕಿ; 5 ಮಂದಿ ಸಾವು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Bakrid 2024
ಬೆಂಗಳೂರು4 mins ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ18 hours ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ19 hours ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 day ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ3 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ3 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

ಟ್ರೆಂಡಿಂಗ್‌