Viral News : 77 ವರ್ಷಗಳ ನಂತರ ಪಾಕ್‌ನಲ್ಲಿರುವ ಪೂರ್ವಜರ ಗ್ರಾಮಕ್ಕೆ ಭೇಟಿ ಕೊಟ್ಟ 98ರ ವೃದ್ಧ - Vistara News

ವೈರಲ್ ನ್ಯೂಸ್

Viral News : 77 ವರ್ಷಗಳ ನಂತರ ಪಾಕ್‌ನಲ್ಲಿರುವ ಪೂರ್ವಜರ ಗ್ರಾಮಕ್ಕೆ ಭೇಟಿ ಕೊಟ್ಟ 98ರ ವೃದ್ಧ

ಭಾರತದ 98 ವರ್ಷದ ವ್ಯಕ್ತಿ ಪಾಕಿಸ್ತಾನದಲ್ಲಿರುವ ತಮ್ಮ ಪೂರ್ವಜರ ಗ್ರಾಮಕ್ಕೆ 77 ವರ್ಷಗಳ ನಂತರ ಭೇಟಿ ನೀಡಿದ್ದಾರೆ. ಇದೊಂದು ಹೃದಯಸ್ಪರ್ಶಿ ಭೇಟಿ ಎಂದು ಅವರು ಹೇಳಿದ್ದಾರೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಭಾರತ ಮತ್ತು ಪಾಕಿಸ್ತಾನ ವಿಭಜನೆಯು ಹಲವಾರು ಕುಟುಂಬಗಳನ್ನು ಇಬ್ಭಾಗ ಮಾಡಿರುವುದು ನಮಗೆಲ್ಲರಿಗೂ ತಿಳಿದೇ ಇದೆ. ಇಂದಿಗೂ ಭಾರತದಲ್ಲಿರುವ ಅದೆಷ್ಟೋ ಕುಟುಂಬಗಳು ಪಾಕಿಸ್ತಾನದಲ್ಲಿರುವ ತಮ್ಮ ಪೂರ್ವಜರ ಮನೆಗೆ ಭೇಟಿ ನೀಡಲಾಗದ ಸ್ಥಿತಿಯಲ್ಲಿವೆ. ಹಾಗೆಯೇ ಪಾಕಿಸ್ತಾನ ಹಲವಾರು ಕುಟುಂಬಗಳು ಕೂಡ ಇದೇ ಪರಿಸ್ಥಿತಿಯಲ್ಲಿವೆ. ಹೀಗಿರುವಾಗ ಭಾರತದ 98 ವರ್ಷದ ವೃದ್ಧರೊಬ್ಬರು ಪಾಕಿಸ್ತಾನದಲ್ಲಿರುವ ತಮ್ಮ ಪೂರ್ವಜರ ಗ್ರಾಮಕ್ಕೆ 77 ವರ್ಷಗಳ ನಂತರ ಭೇಟಿ ಕೊಟ್ಟು ಬಂದಿದ್ದಾರೆ.

ಪಂಜಾಬ್‌ ಮೂಲದ ಬಾಬಾ ಪುರಾನ್‌ ಸಿಂಗ್‌ ಅವರು ಇತ್ತೀಚೆಗೆ ಪಾಕಿಸ್ತಾನಕ್ಕೆ ತೆರಳಿದ್ದರು. ಪಾಕ್‌ನ ಗುಜ್ರಾನ್‌ವಾಲಾ ಜಿಲ್ಲೆಯ ಕೋಟ್‌ ದೇಸ್ರಾಜ್‌ ಗ್ರಾಮದ ಬೀದಿಗೆ ತಲುಪುತ್ತಿದ್ದಂತೆ ಅಲ್ಲಿನ ಜನ ಪುರಾನ್‌ ಅವರಿಹ ಹೂವು ಚೆಲ್ಲಿ ಸ್ವಾಗತ ಕೋರಿದ್ದಾರೆ. ಪ್ರೀತಿಯಿಂದ ಹಾರ ಹಾಕಿ ಮೆರವಣಿಗೆ ಮೂಲಕ ಅವರನ್ನು ಅವರನ್ನು ಊರೊಳಗೆ ಕರೆದೊಯ್ಯಲಾಗಿದೆ.

ತನ್ನ ಬಾಲ್ಯವನ್ನು ಕಳೆದ ಊರನ್ನು ಕಂಡೊಡನೆ ಪುರಾನ್‌ ಅವರನ್ನು ಖುಷಿಯಿಂದ ಸಂಭ್ರಮಿಸಿದ್ದಾರೆ. ಬಾಲ್ಯದ ಕೆಲ ಸ್ನೇಹಿತರನ್ನು ಮಾತನಾಡಿಸಿ, ಅಪ್ಪಿಕೊಂಡಿದ್ದಾರೆ. ಸಂಭ್ರಮದಿಂದ ಮಾತನಾಡಿರುವ ಅವರು, “ನಾನು 21 ವರ್ಷದವನಿದ್ದಾಗ ಈ ಊರನ್ನು ಬಿಟ್ಟು ಹೋಗಬೇಕಾಯಿತು. ಆಗ ಇದ್ದ ಊರಿಗೂ ಈಗಿನ ಊರಿಗೂ ತುಂಬಾ ವ್ಯತ್ಯಾಸವಿದೆ. ಆಗ ನಮಗೆ ಬೇರೆ ಯಾವುದೇ ಊರಿಗೆ ಹೋಗಬೇಕೆಂದರೂ ರಸ್ತೆ ಇರಲಿಲ್ಲ. ನಡೆದುಕೊಂಡೇ ಊರೂರು ಸುತ್ತುತ್ತಿದ್ದೆವು. ಈಗ ಹೊಸ ಹೊಸ ರಸ್ತೆಗಳಾಗಿವೆ. ಗುರುತು ಸಿಗುವುದೇ ಕಷ್ಟ ಎನ್ನುವಷ್ಟು ಅಭಿವೃದ್ಧಿ ಇಲ್ಲಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: Pakistan: ಪಾಕಿಸ್ತಾನದಲ್ಲಿ ಪೆಟ್ರೋಲ್ 10 ರೂ. ದರ ಹೆಚ್ಚಳ, ಈಗ ಲೀಟರ್‌ಗೆ 282 ರೂಪಾಯಿ!
ಪುರಾನ್‌ ಅವರ ಜೀವನದ ಈ ವಿಶೇಷ ದಿನಕ್ಕೆಂದು ಡಿಜಿಟಲ್‌ ಕ್ರಿಯೇಟರ್‌ ಮತ್ತು ಬ್ಲಾಗರ್‌ ಆಗಿರುವವ ನಾಸಿರ್‌ ಧಿಲ್ಲೋನ್‌ ಅವರು ಊರವರೆಲ್ಲರನ್ನೂ ಸೇರಿಸಿ ವಿಶೇಷ ಸಭೆಯನ್ನೂ ಏರ್ಪಡಿಸಿದ್ದರು. ಈ ವಿಶೇಷ ದಿನದ ವಿಡಿಯೊವನ್ನು ಪಂಜಾಬಿ ಲೆಹರ್‌ ಟಿವಿ ಚಾನೆಲ್‌ನ ಯೂಟ್ಯೂಬ್‌ನಲ್ಲಿ ಪೋಸ್ಟ್‌ ಮಾಡಲಾಗಿದೆ.
ಪುರಾನ್‌ ಅವರು ತಮ್ಮ ಊರಿಗೆ ತೆರಳಿದ್ದ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದೆ. “ಇದು ಹೃದಯಸ್ಪರ್ಶಿ ವಿಚಾರ” ಎಂದು ಜನರು ಕಾಮೆಂಟ್‌ಗಳನ್ನು ಮಾಡಲಾರಂಭಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Reasi Terror Attack: ಪಾಕಿಸ್ತಾನದಲ್ಲಿ ರಿಯಾಸಿ ಭಯೋತ್ಪಾದಕ ದಾಳಿಯ ಮಾಸ್ಟರ್‌ ಮೈಂಡ್‌ನ ಹತ್ಯೆ; ವಿಡಿಯೊ ವೈರಲ್‌

Reasi Terror Attack: ಮಹತ್ವದ ಬೆಳವಣಿಗೆಯೊಂದರಲ್ಲಿ ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಭಯೋತ್ಪಾದಕ ದಾಳಿಯ ಹಿಂದಿನ ಮಾಸ್ಟರ್ ಮೈಂಡ್ ಅನ್ನು ಪಾಕಿಸ್ತಾನದಲ್ಲಿ ‘ಅಪರಿಚಿತ ವ್ಯಕ್ತಿಗಳು’ ಹತ್ಯೆ ಮಾಡಿದ್ದಾರೆ ಎಂದು ಪಾಕಿಸ್ತಾನದ ಮಾಧ್ಯಮಗಳು ಮತ್ತು ಯೂಟ್ಯೂಬರ್‌ಗಳು ಹೇಳಿದ್ದಾರೆ. ಜೂನ್ 9ರಂದು ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ನಡೆದ ಭೀಕರ ಭಯೋತ್ಪಾದಕರ ದಾಳಿಗೆ ಪುಟ್ಟ ಕಂದಮ್ಮನೂ ಸೇರಿ ಒಟ್ಟು 9 ಮಂದಿ ಮೃತಪಟ್ಟು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.

VISTARANEWS.COM


on

Reasi Terror Attack
Koo

ಶ್ರೀನಗರ: ಮಹತ್ವದ ಬೆಳವಣಿಗೆಯೊಂದರಲ್ಲಿ ಜಮ್ಮು ಮತ್ತು ಕಾಶ್ಮೀರದ (Jammu & Kashmir) ರಿಯಾಸಿ ಭಯೋತ್ಪಾದಕ ದಾಳಿ (Reasi Terror Attack)ಯ ಹಿಂದಿನ ಮಾಸ್ಟರ್ ಮೈಂಡ್ ಅನ್ನು ಪಾಕಿಸ್ತಾನದಲ್ಲಿ ‘ಅಪರಿಚಿತ ವ್ಯಕ್ತಿಗಳು’ ಹತ್ಯೆ ಮಾಡಿದ್ದಾರೆ ಎಂದು ಪಾಕಿಸ್ತಾನದ ಮಾಧ್ಯಮಗಳು ಮತ್ತು ಯೂಟ್ಯೂಬರ್‌ಗಳು ಹೇಳಿದ್ದಾರೆ. ಜೂನ್ 9ರಂದು ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ನಡೆದ ಭೀಕರ ಭಯೋತ್ಪಾದಕರ ದಾಳಿಗೆ ಪುಟ್ಟ ಕಂದಮ್ಮನೂ ಸೇರಿ ಒಟ್ಟು 9 ಮಂದಿ ಮೃತಪಟ್ಟು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಇದೀಗ ಈ ಕೃತ್ಯಕ್ಕೆ ಸಂಚು ರೂಪಿಸಿದವನ ವಿರುದ್ಧ ಪ್ರತಿಕಾರ ಕೈಗೊಳ್ಳಲಾಗಿದೆ ಎನ್ನಲಾಗಿದ್ದು, ಸದ್ಯ ಈ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ (Viral Video).

ಇಬ್ಬರು ವ್ಯಕ್ತಿಗಳು ಈ ಬಗ್ಗೆ ಮಾಹಿತಿ ನೀಡುತ್ತಿರುವುದು ವಿಡಿಯೊದಲ್ಲಿ ಕಂಡು ಬಂದಿದೆ. ಈ 16 ಸೆಕೆಂಡುಗಳ ಈ ಪುಟ್ಟ ವಿಡಿಯೊ ಇದೀಗ ಇಂಟರ್‌ನೆಟ್‌ನಲ್ಲಿ ಸಂಚಲನ ಸೃಷ್ಟಿಸಿದೆ. ಇಬ್ಬರು ಕ್ಯಾಮೆರಾ ಮುಂದೆ ನಿಂತು ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿಗಳ ಬಗ್ಗೆ ಚರ್ಚಿಸುತ್ತಾರೆ. ಬಳಿಕ ಪಾಕಿಸ್ತಾನದಲ್ಲಿ ಅಪರಿಚಿತ ವ್ಯಕ್ತಿಗಳು ಈ ಕೃತ್ಯದ ಮಾಸ್ಟರ್ ಮೈಂಡ್ ಅನ್ನು ಹತ್ಯೆ ಮಾಡಿದ್ದಾರೆ ಎಂದು ಹೇಳುತ್ತಾರೆ. ಸದ್ಯ ಈ ಬಗ್ಗೆ ಚರ್ಚೆ ನಡೆಯುತ್ತಿದೆ.

ಪಾಕಿಸ್ತಾನದಲ್ಲಿ ಹೆಚ್ಚುತ್ತಿದೆ ಉಗ್ರರ ಹತ್ಯೆ

ವಿಶೇಷ ಎಂದರೆ ಪಾಕಿಸ್ತಾನದಲ್ಲಿ ಉಗ್ರರ ಹತ್ಯೆ ಹೆಚ್ಚುತ್ತಿದೆ. ಅಪರಿಚಿತರ ಗುಂಡಿನ ದಾಳಿಗೆ ಉಗ್ರರು ಬಲಿಯಾಗುತ್ತಿದ್ದಾರೆ. ಇದಕ್ಕೆ ಇತ್ತೀಚಿನ ಉದಾಹರಣೆ ಎಂದರೆ ಬೇಹುಗಾರಿಕೆ ಆರೋಪ ಹೊತ್ತು ಪಾಕಿಸ್ತಾನದ ಜೈಲಿನಲ್ಲಿದ್ದ ಭಾರತೀಯ ಪ್ರಜೆ ಸರಬ್ಜಿತ್ ಸಿಂಗ್ ಅವರನ್ನು ಹತ್ಯೆ ಮಾಡಿದ್ದ ಅಮೀರ್ ಸರ್ಫರಾಜ್ ಅಲಿಯಾಸ್ ತಾಂಬಾ ಎಂಬಾತನನ್ನು ಏಪ್ರಿಲ್‌ 14ರಂದು ಪಾಕಿಸ್ತಾನದ ಲಾಹೋರ್‌ನಲ್ಲಿ ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಕೊಂದಿದ್ದರು.

ಬಂಧಿತರ ಸಂಖ್ಯೆ 50ಕ್ಕೆ ಏರಿಕೆ

ಈತನ್ಮಧ್ಯೆ ಜಮ್ಮು ಮತ್ತು ಕಾಶ್ಮೀರದ ರಿಯಾಸಿಯ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ಇದುವರೆಗೆ ಸುಮಾರು 50 ಜನರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜೂನ್ 9ರಂದು ಭಯೋತ್ಪಾದಕರು ಜಮ್ಮು ಮತ್ತು ಕಾಶ್ಮೀರದ ಶಿವ ಖೋರಿ ದೇವಸ್ಥಾನಕ್ಕೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಮೇಲೆ ದಾಳಿ ನಡೆಸಿದ್ದರು. ಇದರಿಂದ ಚಾಲಕನ ನಿಯಂತ್ರಣ ತಪ್ಪಿದ ಬಸ್‌ ಆಳವಾದ ಕಂದಕಕ್ಕೆ ಬಿದ್ದಿತ್ತು. ʼʼಈ ಘಟನೆ ಬಗ್ಗೆ ಕಾಂಡಾ ಪ್ರದೇಶ ಪೊಲೀಸ್ ಠಾಣೆಯ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತಿದ್ದು, ಈವರೆಗೆ 50 ಜನರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆʼʼ ಎಂದು ರಿಯಾಸಿಯ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಮೋಹಿತಾ ಶರ್ಮಾ ಹೇಳಿದ್ದಾರೆ.

ಮತ್ತೆ ಕಣಿವೆ ರಾಜ್ಯದಲ್ಲಿ ಗುಂಡಿನ ಮೊರೆತ

ಇದುವರೆಗೆ ಶಾಂತವಾಗಿದ್ದ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರ ಉಪಟಳ ಆರಂಭವಾಗಿದೆ. ರಿಯಾಸಿ ಜತೆಗೆ ಭಯೋತ್ಪಾದಕರು ಇತರ ಎರಡು ಕಡೆ ದಾಳಿ ನಡೆಸಿದ್ದಾರೆ. ಕಥುವಾ ಮತ್ತು ದೋಡಾದಲ್ಲಿ ಉಗ್ರರು ದಾಂಧಲೆ ಎಬ್ಬಿಸಿದ್ದಾರೆ. ಈ ಪೈಕಿ 3 ಉಗ್ರರನ್ನು ಹತ್ಯೆ ಮಾಡಲಾಗಿದೆ.

ಇದನ್ನೂ ಓದಿ: All Eyes on Raesi: ಹಿಂದೂ ಯಾತ್ರಿಕರ ಹತ್ಯೆ: ಆಲ್ ಐಸ್ ಆನ್ ರಿಯಾಸಿ; ರಫಾ ರಫಾ ಅನ್ನುತ್ತಿದ್ದ ಸೆಲೆಬ್ರಿಟಿಗಳು ಈಗೆಲ್ಲಿ?

Continue Reading

Latest

Bakrid: ಬಕ್ರೀದ್ ಹಿನ್ನೆಲೆಯಲ್ಲಿ ಮಾರಾಟಕ್ಕಿಟ್ಟಿದ್ದ ಈ ಮೇಕೆಯ ಬೆಲೆ 69 ಲಕ್ಷ ರೂ!

Bakrid ಬಕ್ರೀದ್ ಹಬ್ಬದಂದು ಬಲಿದಾನದ ಫಲ ಸಿಗಬೇಕೆಂದರೆ ಮೇಕೆಯನ್ನು ಮುಸ್ಲಿಂರು ಅವರ ಸ್ವಂತ ಹಣದಿಂದ ಖರೀದಿಸಬೇಕಂತೆ. ಈ ರೀತಿ ಮಾಡುವುದರಿಂದ ಅವರಿಗೆ ಬಲಿದಾನದ ಸಂಪೂರ್ಣ ಫಲ ಸಿಗುತ್ತದೆ ಎನ್ನುವುದು ಅವರ ನಂಬಿಕೆ. ಹಾಗಾಗಿ ಮುಸ್ಲಿಂರು ಮೇಕೆಗಳನ್ನು ಕಷ್ಟಪಟ್ಟು ದುಡಿದ ಹಣದಿಂದ ಖರೀದಿಸುತ್ತಾರಂತೆ. ಆದರೆ ಬಕ್ರೀದ್ ದಿನ ಮೇಕೆಗಳ ಬೆಲೆ ಮಾತ್ರ ಕೇಳಿದ್ರೆ ಎಲ್ಲರೂ ಶಾಕ್ ಆಗುತ್ತಾರೆ. ಇನ್ನು ಒಂದೊಂದು ಮೇಕೆಗೂ ಒಂದೊಂದು ಬೆಲೆ ಇರುತ್ತದೆ. ಆದರೆ ಈ ಮೇಕೆಗಳಲ್ಲಿ ಒಂದು ಬಹಳ ದುಬಾರಿ ಮೇಕೆ ಇದೆ.ಅದುವೇ ಬ್ರಾಡ್ ಹೆಸರಿನ ಮೇಕೆ.

VISTARANEWS.COM


on

Bakrid
Koo

ಬೆಂಗಳೂರು : ಬಕ್ರೀದ್‌ ಮುಸ್ಲಿಂ ಭಾಂದವರು ಆಚರಿಸುವ ಹಬ್ಬ. ಬಕ್ರೀದ್‌ (Bakrid) ಹಬ್ಬದಂದು ಮೇಕೆಗಳನ್ನು ಬಲಿಕೊಡುವುದು ಅವರ ಸಂಪ್ರದಾಯ. ಇನ್ನು ವಿಶೇಷವೆಂದರೆ ಈ ಬಕ್ರೀದ್‌ ಹಬ್ಬದಂದು ಬಲಿದಾನದ ಫಲ ಸಿಗಬೇಕೆಂದರೆ ಮೇಕೆಯನ್ನು ಅವರ ಸ್ವಂತ ಹಣದಿಂದ ಖರೀದಿಸಬೇಕಂತೆ. ಈ ರೀತಿ ಮಾಡುವುದರಿಂದ ಅವರಿಗೆ ಬಲಿದಾನದ ಸಂಪೂರ್ಣ ಫಲ ಸಿಗುತ್ತದೆ ಎನ್ನುವುದು ಅವರ ನಂಬಿಕೆ. ಹಾಗಾಗಿ ಮುಸ್ಲಿಂರು ಮೇಕೆಗಳನ್ನು ಕಷ್ಟಪಟ್ಟು ದುಡಿದ ಹಣದಿಂದ ಖರೀದಿಸುತ್ತಾರಂತೆ. ಆದರೆ ಬಕ್ರೀದ್ ದಿನ ಮೇಕೆಗಳ ಬೆಲೆ ಮಾತ್ರ ಗಗನಕ್ಕೇರಿರುತ್ತದೆ.

ಇನ್ನು ಈ ಸಂದರ್ಭದಲ್ಲಿ ಲಕ್ಷಾಂತರ ಬೆಲೆಗೆ ಮೇಕೆಗಳು ಮಾರಾಟವಾಗುತ್ತವೆ. ಒಂದೊಂದು ಮೇಕೆಗೂ ಒಂದೊಂದು ಬೆಲೆ ಇರುತ್ತದೆ. ಆದರೆ ಈ ಮೇಕೆಗಳಲ್ಲಿ ಒಂದು ಬಹಳ ದುಬಾರಿ ಮೇಕೆ ಇದೆ. ಅದರ ಬಗ್ಗೆ ತಿಳಿದುಕೊಳ್ಳಿ.
ಬ್ರಾಡ್ ಎಂಬ ಹೆಸರಿನ ಮೇಕೆ ವಿಶ್ವದಲ್ಲಿ ಅತ್ಯಂತ ದುಬಾರಿ ಬೆಲೆಗೆ ಮಾರಾಟವಾಗುತ್ತದೆ. ಹಾಗಾಗಿ ಅದರ ಹೆಸರು ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ನಲ್ಲಿ ದಾಖಲಾಗಿದೆ.. ವರ್ಲ್ಡ್ ರೆಕಾರ್ಡ್ಸ್ ನ ಪ್ರಕಾರ, ಈ ಮೇಕೆಯ ಬೆಲೆ 82,600 ಯುಎಸ್ ಡಿ ಆಗಿದೆ. ಅಂದರೆ ಭಾರತೀಯ ರೂಪಾಯಿಗಳಲ್ಲಿ ಹೇಳುವುದಾದರೆ ಇದರ ಬೆಲೆ ಅಂದಾಜು 69 ಲಕ್ಷ ರೂ.ಗಳಾಗಿವೆ. ಇಂತಹ ಅತ್ಯಂತ ದುಬಾರಿ ಬೆಲೆಯ ಮೇಲೆ ಬ್ರಿಟನ್ ನಲ್ಲಿ ಹೆಚ್ಚು ಮಾರಾಟವಾಗುತ್ತದೆಯಂತೆ. ಇದಕ್ಕೆ ಇತ್ತೀಚಿನ ದಿನಗಳಲ್ಲಿ ಈ ಬೆಲೆ ನಿಗದಿಯಾಗಿಲ್ಲ ಬಹಳ ಹಿಂದೆ ಅಂದರೆ 1985ರಲ್ಲಿಯೇ ಈ ಮೇಕೆಗೆ ದುಬಾರಿ ಬೆಲೆ ನೀಡಲಾಗುತ್ತಿತ್ತಂತೆ.

ಅಂಗೋರಾ ಮೇಕೆಯ ವಿಶೇಷತೆಗಳು:

ಬಿಳಿ ಬಣ್ಣದ ಕೂದಲನ್ನು ಹೊಂದಿರುವ ಈ ಅಂಗೋರಾ ಮೇಕೆಗಳು ವಿಶ್ವದ ಅತ್ಯುತ್ತಮ ಮೇಕೆ ತಳಿಗಳಲ್ಲಿ ಒಂದಾಗಿದೆ. ಈ ಮೇಕೆಗಳನ್ನು ಉಣ್ಣೆಗಳಿಗಾಗಿ ಹೆಚ್ಚಿನ ಜನರು ಸಾಕುತ್ತಾರೆ. ಇದರಿಂದ ದೊರೆಯುವ ಉಣ್ಣೆಗಳಿಗೆ ಮೊಹೇರ್ ಎಂದು ಕರೆಯುತ್ತಾರೆ. ಇದರ ಉಣ್ಣೆ ಉತ್ತಮ ಗುಣಮಟ್ಟದಾಗಿರುತ್ತದೆ. ಹಾಗಾಗಿ ಈ ಮೇಕೆಗಳನ್ನು ದುಬಾರಿ ಬೆಲೆಗೆ ಮಾರಾಟ ಮಾಡಲಾಗುತ್ತದೆ. ಬಕ್ರೀದ್ ಸಮಯದಲ್ಲಿ ಅನೇಕ ಜನರು ಹಣಕ್ಕಾಗಿ ಅವುಗಳನ್ನು ಮಾರಾಟ ಮಾಡುತ್ತಾರೆ.
ಮೇಕೆಗಳು ಅವುಗಳ ತಳಿಗಳ ಆಧಾರದ ಮೇಲೆ ವಿಶೇಷತೆಯನ್ನು ಹೊಂದಿರುತ್ತವೆ. ಮೇಕೆಗಳಲ್ಲಿ ಕೆಲವು ಕಪ್ಪು, ಬಿಳಿ ಬಣ್ಣದಲ್ಲಿದ್ದರೆ ಕೆಲವು ತಳಿಗಳ ಮೇಕೆಗಳ ಮೈಮೇಲೆ ವಿಶಿಷ್ಟವಾದ ಗುರುತುಗಳಿರುತ್ತದೆ. ಹಾಗಾಗಿ ಅವುಗಳನ್ನು ವಿಶೇಷವಾದವು ಎನ್ನಲಾಗುತ್ತದೆ.

ಇದನ್ನೂ ಓದಿ:ಸೇಬು ಹಣ್ಣುಗಳ ಮೇಲೆ ಸ್ಟಿಕ್ಕರ್; ಏನಿದರ ಹಿಂದಿರುವ ರಹಸ್ಯ?

ಇದೇ ರೀತಿ 2023ರಲ್ಲಿ ಮೈಮೇಲೆ ವಿಶಿಷ್ಟ ಗುರುತುಗಳನ್ನು ಹೊಂದಿರುವ ಮೇಕೆಯೊಂದು ಬಹಳ ಪ್ರಸಿದ್ಧವಾಗಿತ್ತು. ಅದು ಮೈಮೇಲೆ ವಿಶಿಷ್ಟ ಗುರುತುಗಳನ್ನು ಹೊಂದಿರುವ ಕಾರಣ ಅದರ ಮಾಲೀಕ 1 ಕೋಟಿ 12 ಲಕ್ಷದ 786 ರೂ. ಎಂಬುದಾಗಿ ತಿಳಿಸಿದ್ದ. ಈ ಮೇಕೆಯ ಹೆಸರು ಶೇರು. ಮಹಾರಾಷ್ಟ್ರದಲ್ಲಿ ವಾಸಿಸುತ್ತಿರುವ ಮೇಕೆ ಮಾಲೀಕನೊಬ್ಬನ ಬಳಿ ಇದು ಇತ್ತು. ಇದರ ದೇಹದ ಮೇಲೆ ಇದ್ದ ಗುರುತುಗಳನ್ನು ಹತ್ತಿರದಿಂದ ನೋಡಿದರೆ ಅದು “ ಅಲ್ಲಾ” ಮತ್ತು “ಮೊಹಮ್ಮದ್” ಎಂದು ಉರ್ದುವಿನಲ್ಲಿ ಬರೆದಿರುವುದನ್ನು ಕಾಣಬಹುದು. ಆದರೆ ಈ ಮೇಕೆ ಮಾರಾಟವಾಗುವ ಮುನ್ನವೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

Continue Reading

ಕ್ರೀಡೆ

BAN vs NEP: ಸ್ವಿಮ್ಮಿಂಗ್ ಪೂಲ್​ಗೆ ಜಿಗಿದು ಸಂಭ್ರಮಿಸಿದ ನೇಪಾಳ ಅಭಿಮಾನಿ; ವಿಡಿಯೊ ವೈರಲ್​

BAN vs NEP: ನೇಪಾಳ ತಂಡದ ಬೌಲಿಂಗ್​ ಇನಿಂಗ್ಸ್​ನ 5ನೇ ಓವರ್​ ನಾಯಕ ರೋಹಿತ್ ಪೌಡೆಲ್ ಎಸೆದರು. ಈ ಓವರ್​ನ 4ನೇ ಎಸೆತಕ್ಕೆ ಬಾಂಗ್ಲಾದೇಶದ ಬ್ಯಾಟರ್​ ತೌಹಿದ್ ಹೃದಯೋಯ್ ಸಿಕ್ಸರ್​ ಬಾರಿಸುವ ಯತ್ನದಲ್ಲಿ ಸಂದೀಪ್ ಲಮಿಚಾನೆಗೆ ಕ್ಯಾಚ್​ ನೀಡಿ ವಿಕೆಟ್​ ಕಳೆದುಕೊಂಡರು. ಈ ವೇಳೆ ಪ್ರೇಕ್ಷಕರ ಗ್ಯಾಲರಿಯಲ್ಲಿದ್ದ ನೇಪಾಳದ ಅಭಿಮಾನಿಯೊಬ್ಬ ಸಂತಸದಲ್ಲಿ ಸ್ಟೇಡಿಯಂನ ಮುಂದೆ ಇದ್ದ ಸ್ವಿಮ್ಮಿಂಗ್ ಪೂಲ್​ಗೆ ಜಿಗಿದ್ದಾನೆ.

VISTARANEWS.COM


on

BAN vs NEP
Koo

ಕಿಂಗ್‌ಸ್ಟನ್‌: ಸೋಮವಾರ ನಡೆದ ಟಿ20 ವಿಶ್ವಕಪ್​ನ(T20 World Cup 2024) ಲೀಗ್​ ಪಂದ್ಯದಲ್ಲಿ ನೇಪಾಳ(BAN vs NEP) ತಂಡ ಬಾಂಗ್ಲಾದೇಶ ವಿರುದ್ಧ ಸೋಲು ಕಂಡರೂ ಕೂಡ ಅಭಿಮಾನಿಯೊಬ್ಬ ನೇಪಾಳ ತಂಡಕ್ಕೆ ಬೆಂಬಲ ಸೂಚಿಸಿದ ರೀತಿ ಎಲ್ಲರ ಗಮನಸೆಳೆದಿದೆ. ಬಾಂಗ್ಲಾದೇಶದ ವಿಕೆಟ್​ ಪತನಗೊಂಡ ವೇಳೆ ಈ ಅಭಿಮಾನಿ ಸ್ಟೇಡಿಯಂನಲ್ಲಿದ್ದ ಸ್ವಿಮ್ಮಿಂಗ್ ಪೂಲ್​ಗೆ(Nepal Fan Jumps in Swimming Pool) ಜಿಗಿದು ಸಂಭ್ರಮಿಸಿದ್ದಾನೆ. ಈ ವಿಡಿಯೊವನ್ನು ಐಸಿಸಿ ತನ್ನ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಂಡಿದೆ. ವಿಡಿಯೊ ಎಲ್ಲೆಡೆ ವೈರಲ್​ ಆಗಿದೆ.

ನೇಪಾಳ ತಂಡದ ಬೌಲಿಂಗ್​ ಇನಿಂಗ್ಸ್​ನ 5ನೇ ಓವರ್​ ನಾಯಕ ರೋಹಿತ್ ಪೌಡೆಲ್ ಎಸೆದರು. ಈ ಓವರ್​ನ 4ನೇ ಎಸೆತಕ್ಕೆ ಬಾಂಗ್ಲಾದೇಶದ ಬ್ಯಾಟರ್​ ತೌಹಿದ್ ಹೃದಯೋಯ್ ಸಿಕ್ಸರ್​ ಬಾರಿಸುವ ಯತ್ನದಲ್ಲಿ ಸಂದೀಪ್ ಲಮಿಚಾನೆಗೆ ಕ್ಯಾಚ್​ ನೀಡಿ ವಿಕೆಟ್​ ಕಳೆದುಕೊಂಡರು. ಈ ವೇಳೆ ಪ್ರೇಕ್ಷಕರ ಗ್ಯಾಲರಿಯಲ್ಲಿದ್ದ ನೇಪಾಳದ ಅಭಿಮಾನಿಯೊಬ್ಬ ಸಂತಸದಲ್ಲಿ ಸ್ಟೇಡಿಯಂನ ಮುಂದೆ ಇದ್ದ ಸ್ವಿಮ್ಮಿಂಗ್ ಪೂಲ್​ಗೆ ಜಿಗಿದ್ದಾನೆ. ಈ ವಿಡಿಯೊವನ್ನು ಐಸಿಸಿ ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಳ್ಳುವುದರ ಜತೆಗೆ ಈ ದೃಶ್ಯಕ್ಕೆ ಉತ್ತಮ ಎಸೆತ, ಉತ್ತಮ ಕ್ಯಾಚ್, ಉತ್ತಮ ಪೂಲ್ ಆಚರಣೆ ಎಂದು ಇನ ಬರೆದುಕೊಂಡಿದೆ.


ಇಲ್ಲಿನ ಸೇಂಟ್ ವಿನ್ಸೆಂಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಬಾಂಗ್ಲಾದೇಶ 19.3 ಓವರ್​ಗಳಲ್ಲಿ ಕೇವಲ 106 ರನ್​ಗೆ ಕುಸಿತ ಕಂಡಿತು. ಈ ಮೊತ್ತವನ್ನು ನೋಡುವಾಗ ಬಾಂಗ್ಲಾ ಸೋಲು ಕಾಣಬಹುದೆಂದು ಊಹಿಸಲಾಯಿತು. ಆದರೆ, ಬಾಂಗ್ಲಾ ಬೌಲರ್​ಗಳು ಉತ್ಕೃಷ್ಟ ಮಟ್ಟದ ಬೌಲಿಂಗ್​ ದಾಳಿ ನಡೆಸಿ ನೇಪಾಳವನ್ನು 85 ರನ್​ಗೆ ಕಟ್ಟಿಹಾಕಿ ಅಮೋಘ ಗೆಲುವು ಸಾಧಿಸಿದರು. ಈ ಗೆಲುವಿನೊಂದಿಗೆ ಬಾಂಗ್ಲಾ ಸೂಪರ್​-8 ಹಂತಕ್ಕೂ ಪ್ರವೇಶ ಪಡೆಯಿತು. ಭಾರತ, ಆಸ್ಟ್ರೇಲಿಯಾ, ಅಫಘಾನಿಸ್ತಾನ ತಂಡದ ಜತೆ ‘ಎ’ ಗುಂಪಿನಲ್ಲಿ ಸ್ಥಾನ ಪಡೆದಿದೆ.

ಇದನ್ನೂ ಓದಿ T20 World Cup 2024: ಸೂಪರ್​-8 ಹಂತದ ವೇಳಾಪಟ್ಟಿ ಪ್ರಕಟ; 8 ತಂಡಗಳ ಮಾಹಿತಿ ಹೀಗಿದೆ

ಸಣ್ಣ ಮೊತ್ತವನ್ನು ಚೇಸಿಂಗ್​ ನಡೆಸಿದ ನೇಪಾಳ ಆರಂಭಿಕ ಆಘಾತ ಎದುರಿಸಿದರೂ ಕೂಡ ಮಧ್ಯಮ ಕ್ರಮಾಂಕದಲ್ಲಿ ಕುಶಾಲ್ ಮಲ್ಲ ಮತ್ತು ದೀಪೇಂದ್ರ ಸಿಂಗ್ ಐರಿ ಉತ್ತಮ ಜತೆಯಾಟವೊಂದನ್ನು ಸಂಘಟಿಸಿದ ಕಾರಣ ತಂಡ ಚೇತರಿಕೆಯ ಹಾದಿಗೆ ಮರಳಿ ಗೆಲುವು ಕಾಣುವ ಸ್ಥಿತಿಯಲ್ಲಿತ್ತು. ಆದರೆ, ಮುಸ್ತಫಿಜುರ್​ ರೆಹಮಾನ್​ ಅವರು ಉಭತ ಆಟಗಾರರ ವಿಕೆಟ್​ ಬೇಟೆಯಾಡಿ ಬಾಂಗ್ಲಾಗೆ ಯಶಸ್ಸು ತಂದುಕೊಟ್ಟರು. ಕುಶಾಲ್ ಮಲ್ಲ 27 ರನ್​ ಬಾರಿಸಿದರೆ, ದೀಪೇಂದ್ರ ಸಿಂಗ್ 25 ರನ್​ ಗಳಿಸಿದರು. ಇವರಿಬ್ಬರ ವಿಕೆಟ್​ ಪತನಗೊಳ್ಳುತ್ತಿದ್ದಂತೆ ನೆಪಾಳ ಸೋಲು ಕೂಡ ಖಚಿತಗೊಂಡಿತು.

ಬಾಂಗ್ಲಾದೇಶದ ಪರ ಘಾತಕ ಬೌಲಿಂಗ್​ ದಾಳಿ ನಡೆಸಿದ ತಂಜಿಮ್ ಹಸನ್ ಸಾಕಿಬ್ 4 ಓವರ್​ ಎಸೆದು 2 ಮೇಡನ್​ ಸಹಿತ ಕೇವಲ 7 ರನ್​ಗೆ 4 ವಿಕೆಟ್​ ಕಿತ್ತು. ಜೀವನಶ್ರೇಷ್ಠ ಬೌಲಿಂಗ್​ ಪ್ರದರ್ಶನ ತೋರಿದರು. ಮುಸ್ತಫಿಜುರ್ ರೆಹಮಾನ್ 7 ರನ್​ಗೆ 3 ವಿಕೆಟ್​ ಪಡೆದರು. ನಾಯಕ ಶಕೀಬ್​ 2 ವಿಕೆಟ್​ ಕಿತ್ತು ಮಿಂಚಿದರು. ಮುಂದಿನ ಪಂದ್ಯದಲ್ಲಿ ಶಕೀಬ್​ ಮೊದಲ ಎಸೆತದಲ್ಲೇ ವಿಕೆಟ್​ ಕಿತ್ತರೆ ಬ್ರೋಕನ್​ ಹ್ಯಾಟ್ರಿಕ್​ ವಿಕೆಟ್​ ಕಿತ್ತ ದಾಖಲೆ ಮಾಡಲಿದ್ದಾರೆ.

Continue Reading

ವಿದೇಶ

Goat With Plastic Teeth: ಬಕ್ರೀದ್‌ಗೆ ಪ್ಲಾಸ್ಟಿಕ್‌ ಹಲ್ಲಿರುವ ಮೇಕೆ ಮಾರಲು ಯತ್ನಿಸಿದ ಪಾಕಿಸ್ತಾನಿ!

Goat With Plastic Teeth: ನೆರೆಯ ಪಾಕಿಸ್ತಾನದಲ್ಲಿ ವಿಚಿತ್ರ ಘಟನೆಯೊಂದು ನಡೆದಿದ್ದು, ಬಲಿ ಕೊಡಲು ಪ್ಲಾಸ್ಟಿಕ್‌ ಹಲ್ಲು ಹೊಂದಿರುವ ಮೇಕೆಯನ್ನು ಮಾರಾಟ ಮಾಡಿದ ವ್ಯಾಪಾರಿಯನ್ನು ಬಂಧಿಸಲಾಗಿದೆ. ಪಾಕಿಸ್ತಾನದ ಗುಲ್ಬರ್ಗ್ ಚೌರಂಗಿ ಪ್ರದೇಶದಲ್ಲಿ ಈ ಘಟನೆ ವರದಿಯಾಗಿದೆ. ಗ್ರಾಹಕರೊಬ್ಬರು ಆಡುಗಳ ಪೈಕಿ ಒಂದರಿಂದ ಪ್ಲಾಸ್ಟಿಕ್ ಹಲ್ಲುಗಳನ್ನು ತೆಗೆದು ಹಾಕುತ್ತಿರುವ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡಿ ವೈರಲ್‌ ಆಗಿತ್ತು. ಇದನ್ನು ಗಮನಿಸಿದ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

VISTARANEWS.COM


on

Goat With Plastic Teeth
Koo

ಇಸ್ಲಾಮಾಬಾದ್‌: ನೆರೆಯ ಪಾಕಿಸ್ತಾನದಲ್ಲಿ ವಿಚಿತ್ರ ಘಟನೆಯೊಂದು ನಡೆದಿದ್ದು, ಪ್ಲಾಸ್ಟಿಕ್‌ ಹಲ್ಲು ಹೊಂದಿರುವ ಮೇಕೆಯನ್ನು (Goat With Plastic Teeth) ಮಾರಾಟ ಮಾಡಿದ ವ್ಯಾಪಾರಿಯನ್ನು ಬಂಧಿಸಲಾಗಿದೆ. ಬಕ್ರೀದ್‌ ಹಿನ್ನೆಲೆಯಲ್ಲಿ ದೇಶಾದ್ಯಂತ ಮೇಕೆಗಳಿಗೆ ಬೇಡಿಕೆ ಹೆಚ್ಚಾಗಿದೆ. ಮೇಕೆಯನ್ನು ಬಲಿ ಕೊಡಲು ಬಳಸಲಾಗುತ್ತದೆ. ಇದೇ ವೇಳೆ ಈ ವ್ಯಾಪಾರಿ ಬಲಿ ಕೊಡಲು ಪ್ಲಾಸ್ಟಿಕ್‌ ಹಲ್ಲು ಹೊಂದಿರುವ ಮೇಕೆಯನ್ನು ಮಾರಾಟ ಮಾಡಿ ಸಿಕ್ಕಿ ಬಿದ್ದಿದ್ದಾನೆ (Viral News).

ಪಾಕಿಸ್ತಾನದ ಗುಲ್ಬರ್ಗ್ ಚೌರಂಗಿ ಪ್ರದೇಶದಲ್ಲಿ ಈ ಘಟನೆ ವರದಿಯಾಗಿದೆ. ಗ್ರಾಹಕರೊಬ್ಬರು ಆಡುಗಳ ಪೈಕಿ ಒಂದರಿಂದ ಪ್ಲಾಸ್ಟಿಕ್ ಹಲ್ಲುಗಳನ್ನು ತೆಗೆದು ಹಾಕುತ್ತಿರುವ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡಿ ವೈರಲ್‌ ಆಗಿತ್ತು. ಇದನ್ನು ಗಮನಿಸಿದ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಂಧಿತ ವ್ಯಾಪಾರಿ ಹೈದರಾಬಾದ್ ಮತ್ತು ಕರಾಚಿ ಮೂಲದವನಾಗಿದ್ದು, ಪೊಲೀಸ್‌ ವಿಚಾರಣೆ ವೇಳೆ ಬಕ್ರೀದ್‌ಗೆ ಬಲಿ ಕೊಡಲಿರುವ ಮೇಕೆಗಳ ಮಾರಾಟದಲ್ಲಿ ಮೋಸ ಮಾಡಿರುವುದನ್ನು ಒಪ್ಪಿಕೊಂಡಿದ್ದಾನೆ. ತನಿಖೆಯ ಭಾಗವಾಗಿ ಪೊಲೀಸರು ಏಳು ಹೆಚ್ಚುವರಿ ಮೇಕೆಗಳನ್ನು ವಶಪಡಿಸಿಕೊಂಡಿದ್ದಾರೆ.

ಪೊಲೀಸರು ಹೇಳಿದ್ದೇನು?

”ಕೃತಕ ಹಲ್ಲುಗಳನ್ನು ಹೊಂದಿರುವ ಮೇಕೆಯ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡಿ ನಮ್ಮ ಗಮನಕ್ಕೆ ಬಂದಿತ್ತು. ವಿಚಾರಣೆ ನಡೆಸಿದಾಗ ಬಲಿ ಕೊಡುವ ಉದ್ದೇಶಕ್ಕಾಗಿ ಈ ಮೇಕೆಯನ್ನು ಮಾರಾಟ ಮಾಡಲಾಗಿದೆ ಎನ್ನುವ ಅಂಶ ತಿಳಿದು ಬಂತು. ಕೂಡಲೇ ಕ್ರಮ ಕೈಗೊಂಡ ಮೋಸ ಎಸಗಿದ ವ್ಯಾಪಾರಿಯನ್ನು ವಸಕ್ಕೆ ಪಡೆದಿದ್ದೇವೆʼʼ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ವಿಚಾರಣೆ ವೇಳೆ ಆತ ತಾನು ಹೈದರಾಬಾದ್‌ ಮೂಲದವನೆಂದೂ ಬಕ್ರೀದ್‌ ಸಂದರ್ಭದಲ್ಲಿ ತನ್ನಲ್ಲಿರುವ ಮೇಕೆಗಳನ್ನು ಮಾರಾಟ ಮಾಡಲು ಕರಾಚಿಗೆ ತೆರಳಿದ್ದಾಗಿ ಬಾಯ್ಬಿಟ್ಟಿದ್ದಾನೆ ಎಂದು ಪೊಲೀಸರು ವಿವರಿಸಿದ್ದಾರೆ. ಸದ್ಯ ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.

ಪಾಕಿಸ್ತಾನದಲ್ಲಿ ಜೂನ್‌ 17ರಂದು ಬಕ್ರೀದ್‌ ಆಚರಿಸಲಾಗುತ್ತಿದೆ. ಜೂನ್ 7 ರಂದು ಜಿಲ್ಲಾ ಹಜ್ ಚಂದ್ರನ ದರ್ಶನದ ನಂತರ ಜೂನ್ 17ರಂದು ನಿಗದಿಯಾಗಿರುವ ಬಕ್ರೀದ್‌ ಮುಸ್ಲಿಮರ ಮಹತ್ವದ ಧಾರ್ಮಿಕ ಹಬ್ಬವಾಗಿದ್ದು, ಪ್ರಾಣಿಗಳನ್ನು ಬಲಿ ನೀಡುವ ಮೂಲಕ ಪ್ರವಾದಿ ಇಬ್ರಾಹಿಂ ದೇವರನ್ನು ಸ್ಮರಿಸಲಾಗುತ್ತದೆ. ಬಳಿಕ ಬಲಿ ಕೊಟ್ಟ ಪ್ರಾಣಿಯ ಮಾಂಸವನ್ನು ಸಾಂಪ್ರದಾಯಿಕವಾಗಿ ಹಂಚಿಕೊಳ್ಳಲಾಗುತ್ತದೆ. ಹೀಗಾಗಿ ಬಲಿ ಕೊಡಲು ಮೇಕೆಗಳಿಗೆ ಬೇಡಿಕೆ ಹೆಚ್ಚಿದೆ. ಬಲಿ ಕೊಡಲು ಪರಿಶುದ್ಧ ಮೇಕೆಯನ್ನೇ ಆಯ್ಕೆ ಮಾಡಿಕೊಳ್ಳಬೇಕೆಂಬ ನಿಯಮವಿದ್ದು, ಈತ ಲಾಭ ಮಾಡುವ ಉದ್ದೇಶದಿಂದ ಪ್ಲಾಸ್ಟಿಕ್‌ ಹಲ್ಲು ಹೊಂದಿರುವ ಮೇಕೆಯನ್ನು ಮಾರಾಟ ಮಾಡಿದ್ದ.

ಇದನ್ನೂ ಓದಿ: Donkey Population In Pak: ಹೆಚ್ಚುಹೆಚ್ಚು ಕತ್ತೆಗಳನ್ನು ಸಾಕಿ, ಆರ್ಥಿಕ ಬಿಕ್ಕಟ್ಟಿನಿಂದ ಪಾರಾಗಿ; ಪಾಕ್‌ಗೆ ಚೀನಾ ಸಲಹೆ!

ಕತ್ತೆಗಳ ಸಂಖ್ಯೆ ಹೆಚ್ಚಳ

ತೀವ್ರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿರುವ ಪಾಕಿಸ್ತಾನದಲ್ಲಿ ಕಳೆದ ಒಂದು ವರ್ಷದಲ್ಲಿ ಕತ್ತೆಗಳ ಪ್ರಮಾಣ ಗಣನೀಯವಾಗಿ ಏರಿಕೆಯಾಗಿದ್ದು, ಇದು ದೇಶದ ಕೃಷಿ ಚಟುವಟಿಕೆಗಳಲ್ಲಿ ಆಶಾದಾಯಕ ಬೆಳವಣಿಗೆಯನ್ನು ತೋರಿಸಿದೆ. ಕತ್ತೆಗಳ ಸಂಖ್ಯೆಯು 2022-23ರ ಆರ್ಥಿಕ ವರ್ಷದಲ್ಲಿ 5.9 ಮಿಲಿಯನ್‌ ತಲುಪಿದ್ದು, ಹಿಂದಿನ ಅವಧಿಯಲ್ಲಿ 5.7 ಮಿಲಿಯನ್‌ ನಷ್ಟಿತ್ತು. ಒಂದು ವರ್ಷದಲ್ಲಿ ಕತ್ತೆಗಳ ಸಂಖ್ಯೆ ಸರಿಸುಮಾರು ಎರಡು ಲಕ್ಷ ಹೆಚ್ಚಳವಾಗಿದೆ.

Continue Reading
Advertisement
Reasi Terror Attack
ವೈರಲ್ ನ್ಯೂಸ್44 seconds ago

Reasi Terror Attack: ಪಾಕಿಸ್ತಾನದಲ್ಲಿ ರಿಯಾಸಿ ಭಯೋತ್ಪಾದಕ ದಾಳಿಯ ಮಾಸ್ಟರ್‌ ಮೈಂಡ್‌ನ ಹತ್ಯೆ; ವಿಡಿಯೊ ವೈರಲ್‌

Bakrid 2024
ಬೆಂಗಳೂರು14 mins ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Actor Darshan Please leave Pavitra Darshan request to police
ಸಿನಿಮಾ26 mins ago

Actor Darshan: ಪ್ಲೀಸ್‌ ಪವಿತ್ರಾಳನ್ನು ಬಿಟ್ಟು ಬಿಡಿ ಎಂದು ಅಂಗಲಾಚುತ್ತಿರುವ ದರ್ಶನ್‌?

Bakrid
Latest26 mins ago

Bakrid: ಬಕ್ರೀದ್ ಹಿನ್ನೆಲೆಯಲ್ಲಿ ಮಾರಾಟಕ್ಕಿಟ್ಟಿದ್ದ ಈ ಮೇಕೆಯ ಬೆಲೆ 69 ಲಕ್ಷ ರೂ!

Real Estate
ವಾಣಿಜ್ಯ32 mins ago

Real Estate: ಹಲವರಿಗೆ ಮನೆ ಇಲ್ಲ, ಇದ್ದವರು ಬಳಸುತ್ತಿಲ್ಲ! ದೇಶದಲ್ಲಿ 1 ಕೋಟಿಗೂ ಹೆಚ್ಚು ಫ್ಲ್ಯಾಟ್ ಗಳು ಖಾಲಿ ಬಿದ್ದಿವೆ!

Smriti Mandhana
ಕ್ರೀಡೆ33 mins ago

Smriti Mandhana: ಶತಕ ಬಾರಿಸಿ ವಿಶೇಷ ದಾಖಲೆ ಬರೆದ ಸ್ಮೃತಿ ಮಂಧಾನ

Actress Nayanathara
Latest43 mins ago

Actress Nayanathara: ‘ಬಾಹುಬಲಿ’ ಸಿನಿಮಾ ದೃಶ್ಯದ ಮರುಸೃಷ್ಟಿಯಲ್ಲಿ ವಿಘ್ನೇಶ್ ಶಿವನ್ ಪುತ್ರರು!

Actor Darshan Rakshak Bullet Not Celebrating His Birthday Due To Darshan Arrest
ಸ್ಯಾಂಡಲ್ ವುಡ್47 mins ago

Actor Darshan: ಮನಸ್ಸಿಗೆ ಹತ್ತಿರವಾದವರು ಕಷ್ಟ ಅನುಭವಿಸುತ್ತಿದ್ದಾರೆ; ಬರ್ತ್‌ಡೇ ಕ್ಯಾನ್ಸಲ್ ಮಾಡಿದ ರಕ್ಷಕ್ ಬುಲೆಟ್!

pattanagere shed darshan renuka swamy murder
ಕ್ರೈಂ55 mins ago

Renuka Swamy Murder: ಸಿಸಿಟಿವಿ ದಾಖಲೆ ಸಂಪೂರ್ಣ ನಾಶ ಮಾಡಿದ ಪಾತಕಿಗಳು! ಆ ಭಯಾನಕ ಶೆಡ್‌ನಲ್ಲಿದೆ ಇನ್ನಷ್ಟು ರಹಸ್ಯ!

murder Case in chikkodi
ಬೆಳಗಾವಿ1 hour ago

Murder Case : ನಡುರಸ್ತೆಯಲ್ಲಿ ಚಿಮ್ಮಿದ ರಕ್ತ; ತಲೆ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯ ಕೊಲೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Bakrid 2024
ಬೆಂಗಳೂರು14 mins ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ18 hours ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ19 hours ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 day ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ3 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ3 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

ಟ್ರೆಂಡಿಂಗ್‌