navavidha bhakti about Vandanam bhakti you should know in kannadaNavavidha Bhakti : ನಮಸ್ಕಾರ ಕೂಡ ಭಕ್ತಿಯ ಒಂದು ಪ್ರಕಾರ! Navavidha Bhakti : ನಮಸ್ಕಾರ ಕೂಡ ಭಕ್ತಿಯ ಒಂದು ಪ್ರಕಾರ! - Vistara News

ಧಾರ್ಮಿಕ

Navavidha Bhakti : ನಮಸ್ಕಾರ ಕೂಡ ಭಕ್ತಿಯ ಒಂದು ಪ್ರಕಾರ!

ಭಕ್ತಿಯ ಸ್ವರೂಪವನ್ನು ಒಂಬತ್ತು ರೀತಿಯಲ್ಲಿ ವಿಂಗಡಿಸಲಾಗಿದೆ. ಈ ಸ್ವರೂಪಗಳನ್ನು ಪರಿಚಯಿಸುವ ʻನವವಿಧ ಭಕ್ತಿʼ (Navavidha Bhakti) ಲೇಖನ ಮಾಲೆಯ ಎಂಟನೇ ಲೆಖನ ಇಲ್ಲಿದೆ. ಇಂದು ಭಕ್ತಿಯ ಮತ್ತೊಂದು ರೂಪವಾದ ವಂದನೆಯ ಕುರಿತು ವಿವರಿಸಲಾಗಿದೆ.

VISTARANEWS.COM


on

navavidha bhakti about Vandana bhakti you should know in kannada
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಡಾ. ಸಿ. ಆರ್. ರಾಮಸ್ವಾಮಿ
ನವವಿಧ ಭಕ್ತಿಯಲ್ಲಿ (Navavidha Bhakti ) ಒಂದಾದ ‘ವಂದನಂ’ ಎನ್ನುವುದಕ್ಕೆ ನಮನ, ಪ್ರಣಾಮ, ನಮಸ್ಕಾರ ಮುಂತಾದ ಬೇರೆ ಬೇರೆ ಪದಗಳುಂಟು. ಈಗ ನಮಸ್ಕಾರ ಎನ್ನುವುದು ಪ್ರಸಿದ್ಧವಾಗಿದೆ. ವಂದನದಲ್ಲಿ ಹಲವು ಪ್ರಭೇದಗಳಿವೆ. ಉದಾಹರಣೆಗೆ ಉತ್ತರಭಾರತದಲ್ಲಿ ಹಿರಿಯರನ್ನು ನೋಡಿದೊಡನೆಯೇ ಒಂದು ಕೈಯಲ್ಲಿ ಅವರ ಪಾದವನ್ನು ಮುಟ್ಟಿ ಕಣ್ಣಿಗೆ ಒತ್ತಿಕೊಳ್ಳುವ ರೂಢಿಯಿದೆ. ದಕ್ಷಿಣದಲ್ಲಿ ಸಾಷ್ಟಾಂಗನಮಸ್ಕಾರ, ಅರ್ಧನಮಸ್ಕಾರ, ಪಂಚಾಂಗನಮಸ್ಕಾರ ಮುಂತಾಗಿ ರೂಢಿಗಳಿವೆ.

ಅಷ್ಟೂ ಆಗದಿದ್ದಾಗ ನಿಂತಲ್ಲೇ ಎರಡು ಕೈಗಳನ್ನೂ ಹೃದಯದ ನೇರದಲ್ಲಿ ಜೋಡಿಸಿ ನಮಸ್ಕಾರ ಮಾಡುವುದುಂಟು. ಒಂದೇ ಕೈಯನ್ನು ಹೃದಯಕ್ಕೆ ಸೇರಿಸಿ ಮಾಡುವ ರೂಢಿಯೂ ಉಂಟು. ಈಗ ಕೈಕುಲುಕುವುದು, ತಬ್ಬಿಕೊಳ್ಳುವುದು ಮುಂತಾಗಿ ಅನೇಕ ರೀತಿಯ ಗೌರವ-ಸೂಚಕವಾದ ಕ್ರಿಯೆಗಳು ಕಾಣಿಸುತ್ತಿವೆ.

ನಮಸ್ಕಾರ ಎಂದರೇನು?

ನಮ್ಮ ಸಂಸ್ಕೃತಿಯಲ್ಲಿ ‘ನಮಸ್ಕಾರ’ದ ಲಕ್ಷಣ ಹೀಗಿದೆ: “ನಮಸ್ತ್ವೈಕ್ಯಂ ಪ್ರಚಕ್ಷತೇ.” ಯಾವ ಕ್ರಿಯೆಯಿಂದ ಭಗವಂತನಲ್ಲಿ ಐಕ್ಯಭಾವ (ಗಾಢವಾದ ಸೇರುವೆ) ಉಂಟಾಗುವುದೋ, ನಮ್ಮ ಮನಸ್ಸು ಏಕೀಭೂತವಾಗುವುದೋ ಆ ಕ್ರಿಯೆಯೇ ನಮಸ್ಕಾರ. ಆಗ ಏರ್ಪಡುವ ಮದ್ರೆಯೇ ‘ನಮಸ್ಕಾರಮುದ್ರೆ’ ಎನಿಸಿಕೊಳ್ಳುತ್ತದೆ.

ದೇವರಿಗಾಗಲಿ, ಗುರುಹಿರಿಯರಿಗಾಗಲಿ ಸಾಷ್ಟಾಂಗನಮಸ್ಕಾರ (ಎಂಟು ಅಂಗಗಳಿಂದ ಕೂಡಿದ ನಮಸ್ಕಾರ)ವನ್ನು ಮಾಡಬೇಕು. ದೋರ್ಭ್ಯಾಂ ಪದ್ಭ್ಯಾಂ ಚ ಜಾನುಭ್ಯಾಂ ಉರಸಾ ಶಿರಸಾ ದೃಶಾ ಮನಸಾ ವಚಸಾ ಚೇತಿ ಪ್ರಣಾಮೋ ಅಷ್ಟಾಂಗ ಈರಿತಃ. ಅಂದರೆ ತೋಳುಗಳು, ಕಾಲುಗಳು, ಮೊಣಕಾಲುಗಳು, ಎದೆ, ಶಿರಸ್ಸು, ಕಣ್ಣು ಇಷ್ಟೂ ನಮಸ್ಕಾರದ ಕ್ರಿಯೆಯಲ್ಲಿ ಭೂಮಿಗೆ ಸ್ಪರ್ಶವಾಗಿರಬೇಕು. ಮನಸ್ಸು-ವಾಕ್ ಗಳು ಸೇರಿರಬೇಕು. ಇಲ್ಲಿ, ಭಗವಂತನಲ್ಲಿ ಏಕೀಭಾವ ವನ್ನು ಹೊಂದಬೇಕು ಎಂದಾಗ ಮೊದಲು ಈ ಜೀವವು ಭಗವಂತನಲ್ಲಿ ಹೋಗಿ ಸೇರಬೇಕೆನ್ನುವ ಮನಸ್ಸಾಗದಿದ್ದರೆ ಸಾಧ್ಯವಿಲ್ಲ. ಆದ್ದರಿಂದ ಮನಸ್ಸು ಅತಿಮುಖ್ಯವಾದದ್ದು. ಮನಸ್ಸಿನಲ್ಲಿ ಉಂಟಾಗುವುದು ಮುಂದೆ ಹರಿದು ಮಾತಿಗೆ ಬರಬೇಕು. ನಂತರ ಅದು ದೇಹದಲ್ಲಿ ಹರಿದುಬರಬೇಕು. ಇದಿಷ್ಟೂ ಆದಾಗ ಸಾಷ್ಟಾಂಗನಮಸ್ಕಾರದಲ್ಲಿ ಸಂಪೂರ್ಣವಾದ ಐಕ್ಯಭಾವವು ಉಂಟಾಗುವುದು ಸಾಧ್ಯವಾಗುತ್ತದೆ.

navavidha bhakti about Vandana bhakti you should know in kannada

ಸಿದ್ಧಪುರುಷರ ಮನಸ್ಸು ಭಗವಂತನಲ್ಲಿ ಐಕ್ಯಭಾವವನ್ನು ಹೊಂದಿದಾಗ ಅದು ವಿಕಾಸವಾಗುತ್ತ ಅವರ ಅರಿವಿಲ್ಲದೆಯೇ ನಮಸ್ಕಾರಮುದ್ರೆಯು ಏರ್ಪಡಬಹುದು. ಮನಸ್ಸು-ವಾಕ್ಕುಗಳು ಸೇರದೆ ಅಡ್ಡಬೀಳುವ ಕ್ರಿಯೆ ಕೇವಲ ಚೇಷ್ಟೆಯಾಗುತ್ತದೆ. ಇದಲ್ಲದೇ, ಪಂಚಾಂಗ ನಮಸ್ಕಾರ, ಪ್ರದಕ್ಷಿಣ ನಮಸ್ಕಾರಗಳನ್ನೂ ಸಂಪ್ರದಾಯದಲ್ಲಿ ಕಾಣುತ್ತೇವೆ.

ಕೈಜೋಡಿಸುವುದರ ತಾತ್ತ್ವಿಕ ನೋಟ

ಸಾಮಾನ್ಯವಾಗಿ ನಮಸ್ಕಾರವೆಂದರೆ ಕೈಜೋಡಿಸುವುದು ಎಂದಷ್ಟೇ ಅರ್ಥೈಸುತ್ತೇವೆ. ಕೈಜೋಡಿಸುವುದಾದರೂ ಏಕೆ? ಇಲ್ಲಿ ಎರಡು ಕೈಗಳು ಒಟ್ಟಿಗೆ ಸೇರಿಕೊಳ್ಳುವುದು ಎರಡು ತತ್ತ್ವಗಳು ಒಟ್ಟಿಗೆ ಸೇರುವುದನ್ನು ಸೂಚಿಸುತ್ತದೆ. ಒಂದು ಕೈ ಪ್ರಕೃತಿಯನ್ನು ಸೂಚಿಸಿದರೆ, ಮತ್ತೊಂದು ಪರಮಪುರುಷನನ್ನು ಸೂಚಿಸುವುದು. ನಮ್ಮಲ್ಲಿ ಪಂಚಭೂತಗಳೆಲ್ಲವೂ ಕೆಳಮುಖವಾಗಿ, ಪ್ರಕೃತಿಯ ಕಡೆ ಕೆಲಸ ಮಾಡುತ್ತಿವೆ. ಅದನ್ನು ಬಿಟ್ಟು ನಾವು ಪರಮಪುರುಷನ ಕಡೆಗೆ ಹೋಗಬೇಕಾದರೆ ಪ್ರಕೃತಿಯನ್ನು ಪರಮಪುರುಷನಲ್ಲಿ ಸೇರಿಸಿಕೊಂಡು, ಪ್ರಕೃತಿ-ಪುರುಷರ ಪ್ರತಿನಿಧಿಗಳಾದ ಕೈಗಳನ್ನು ಒಟ್ಟಿಗೆ ಸೇರಿಸಿಕೊಂಡು ಕೈಯನ್ನು ಮೇಲ್ಮುಖವಾಗಿ ಇಟ್ಟುಕೊಳ್ಳಬೇಕು. ಹೀಗೆ ಜೀವವು ಪರಮಾತ್ಮನಲ್ಲಿ ಒಂದಾಗಿ ಕಲೆತುಬಿಡುವುದಕ್ಕೆ ಯಾವ ಮುದ್ರೆ ಪೋಷಕವಾಗಿದೆಯೋ ಆ ಮುದ್ರೆಗೆ ನಮಸ್ಕಾರ-ಅಂಜಲಿಮುದ್ರೆಯೆಂಬ ಹೆಸರು.

ನಮಸ್ಕಾರ ಮುದ್ರೆ

ಮುದ್ರೆಯೆನ್ನುವುದು ಸಹಜವಾಗಿ ತಾನೇ ತಾನಾಗಿ ಉಂಟಾಗುವಂತಹ ಶರೀರದ-ಅಂಗಾಂಗಗಳ ಒಂದು ವಿನ್ಯಾಸ. ಅಂತಹ ಒಂದು ವಿನ್ಯಾಸವನ್ನು ನೋಡುವುದೇ ಸಂತೋಷವನ್ನು ಉಂಟು ಮಾಡುತ್ತದೆ. ವಾಸ್ತವವಾಗಿ ಜ್ಞಾನಿಯಾದವನಿಗೆ ಅಥವಾ ಭಕ್ತನಾದವನಿಗೆ ಆ ಭಾವವು ಉಂಟಾದಾಗ ತಾನಾಗಿಯೇ ಈ ಮುದ್ರೆಯು ಏರ್ಪಡುತ್ತದೆ.

ಲೌಕಿಕವಾದ ಉದಾಹರಣೆಯ ಮೂಲಕ ವಿವರಿಸುವುದಾದರೆ, ಉತ್ಕಟವಾದ ಕೋಪ ಬಂದಾಗ ಕಣ್ಣುಗಳು ಕೆಂಪಾಗುವುದು, ತುಟಿ ಅದುರುವುದು, ಹಲ್ಲು ಕಚ್ಚಿಕೊಳ್ಳುವುದು ಇವೆಲ್ಲವೂ ಮುಖದಲ್ಲಿ ಸಹಜವಾಗಿ ಮೂಡಿಬರುವುವು. ಆದರೆ ಯಾರನ್ನಾದರೂ “ಈಗ ಕೋಪ ಮಾಡಿಕೊಳ್ಳಿ ನೋಡೋಣ” ಎಂದು ಹೇಳಿದಾಗ ಆ ಲಕ್ಷಣಗಳನ್ನು ತಂದುಕೊಂಡರೆ ಅಲ್ಲಿ ಸಹಜತೆಯು ಇರುವುದಿಲ್ಲವಾದ್ದರಿಂದ ಅದನ್ನು ಕೃತಕವೆಂಬುದಾಗಿ ಗುರುತಿಸಿಬಿಡಬಹುದು. ಅಂತೆಯೇ ಸಾಧಕನಲ್ಲಿ, ಸಮಾಧಿಸ್ಥಿತಿಯಲ್ಲಿ ಐಕ್ಯ-ಭಾವವು ಏರ್ಪಟ್ಟಾಗ ನಮಸ್ಕಾರ ಮುದ್ರೆಯು ಸಹಜವಾಗಿ ಕಾಣಿಸಿಕೊಳ್ಳುತ್ತದೆ.

navavidha bhakti about Vandana bhakti you should know in kannada

ಸಮಾಧಿಸ್ಥಿತಿಗೆ ಹೋಗಬೇಕೆನ್ನುವ ಅಭಿಲಾಷೆಯುಳ್ಳವರಿಗೆ ಇಂತಹ ಮುದ್ರೆಯನ್ನು ಅಭ್ಯಾಸ ಮಾಡಿಸಿದಾಗ ಆ ಸ್ಥಿತಿಗೆ ನಯನಮಾಡುತ್ತದೆ ಎಂಬುದು ಜ್ಞಾನಿಗಳ ಮತ. ಅಭ್ಯಾಸವೇ ಕಾಲಕ್ರಮದಲ್ಲಿ ಭಕ್ತಿಭಾವವನ್ನು ಉಕ್ಕಿಸಿ ನಮಸ್ಕಾರ ಭಾವವು ಮೂಡಿಬರುವ ಅವಕಾಶವಿದೆ. ಹಾಗೆ ಮುದ್ರೆಯನ್ನು ಅಭ್ಯಾಸ ಮಾಡಿಸಿ ಮುದ್ರಾಸ್ಥಿತಿಗೆ ಕರೆದೊಯ್ಯುವ ಒಂದು ವಿಜ್ಞಾನ ಇಲ್ಲಿದೆ. ಇಂತಹ ವಂದನವೂ ಭಕ್ತಿಯ ಒಂದು ಪ್ರಕಾರವೇ ಆಗುತ್ತದೆ.

ನಮಸ್ಕಾರಮುದ್ರೆಯು ಸೃಷ್ಟಿಸಹಜವಾದದ್ದು ಎಂಬುದನ್ನು ಜ್ಞಾನ-ವಿಜ್ಞಾನ ತೃಪ್ತಾತ್ಮರಾದ ಶ್ರೀರಂಗಮಹಾಗುರುಗಳು ವಿವರಿಸುತ್ತಿದ್ದರು. ಗರ್ಭಸ್ಥ ಶಿಶುವು ಎಂಟನೆಯ ತಿಂಗಳಲ್ಲಿ ಭಗವಂತನ ದರ್ಶನ ಮಾಡುವುದಾಗಿ ಗರ್ಭೋಪನಿಷತ್ತು ತಿಳಿಸುತ್ತದೆ. ಆ ಸನ್ನಿವೇಶದ ಚಿತ್ರದಲ್ಲಿ ನಮಸ್ಕಾರಮುದ್ರೆಯ ವಿನ್ಯಾಸವನ್ನು ತೋರಿಸಿ ಅವರು ವಿವರಿಸುತ್ತಿದ್ದುದು ಇಲ್ಲಿ ಸ್ಮರಣೀಯ.

ಉಪಚಾರ

ನಮಸ್ಕಾರವು ಭಗವಂತನ ಪೂಜೆಯಲ್ಲಿ ಮಾಡುವ ಉಪಚಾರಗಳಲ್ಲಿ ಮುಖ್ಯವಾದದ್ದಾಗಿ ಪರಿಗಣಿಸಲ್ಪಟ್ಟಿದೆ. ಶ್ರೀರಂಗಮಹಾಗುರುಗಳ ವಿವರಣೆಯಂತೆ ಪೂಜೆಯಲ್ಲಿ ಉಪಚಾರವೆಂದರೆ ಪೂಜ್ಯನಾದ ಭಗವಂತನನ್ನು ಪೂಜಕನ (ಉಪ)ಸಮೀಪಕ್ಕೆ ಬರುವಂತೆ ಮಾಡಿಕೊಳ್ಳುವ ಕ್ರಿಯೆಯಾಗುತ್ತದೆ. ಪೂಜಕನ ಮನಸ್ಸು ಪ್ರಾರಂಭದಲ್ಲಿ ಭಗವಂತನ ಕಡೆ ಒಲಿದು-ಬಾಗಿ-ಸಮೀಪಿಸಿ ಕೊನೆಯಲ್ಲಿ ಐಕ್ಯವಾಗುವ ಪರಿಯೇ ನಮಸ್ಕಾರವಾಗುತ್ತದೆ.

ಧಾರ್ಮಿಕ ಮತ್ತು ಆಧ್ಯಾತ್ಮಿಕ ಲೇಖನ, ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ.

’ಅಕ್ರೂರಸ್ತು ಅಭಿವಂದನೇ’

ನಮಸ್ಕಾರಭಕ್ತಿಗೆ ಅಕ್ರೂರನನ್ನೇ ಉದಾಹರಣೆಯಾಗಿ ಕೊಡುತ್ತಾರೆ. ಇವನು ಪರಮ ಭಾಗವತೋತ್ತಮ. ಕೃಷ್ಣ ಬಲರಾಮರನ್ನು ಮಥುರೆಗೆ ಕರೆತರಲು ದುಷ್ಟನಾದ ಕಂಸನಿಂದ ಈತನೇ ಆಜ್ಞಪ್ತನಾದವನು. ನಂದಗೋಕುಲಕ್ಕೆ ಶೀಘ್ರಗತಿಯ ರಥದಲ್ಲಿ ಅಕ್ರೂರನು ಪ್ರಯಾಣ ಮಾಡುತ್ತಾನೆ. ದಾರಿಯುದ್ದಕ್ಕೂ, ಜಗತ್ಪತಿಯಾದ ಕೃಷ್ಣನ ಸ್ಮರಣೆಯಲ್ಲಿಯೇ ಕಳೆಯುತ್ತಾನೆ. ಗೋಕುಲದ ಸಮೀಪದಲ್ಲಿ ದಾರಿಯಲ್ಲೇ ಶ್ರೀಕೃಷ್ಣನ ಶಂಖ-ಚಕ್ರ-ಪದ್ಮ ಮುಂತಾದ ಗುರುತುಗಳಿಂದ ಕೂಡಿದ ಪಾದಚಿಹ್ನೆಗಳನ್ನು ನೋಡುತ್ತಾನೆ. ಈ ಚಿಹ್ನೆಗಳೆಲ್ಲವೂ ಮಹಾಪುರುಷನಲ್ಲಿ ಇರುವಂತಹ ಲಕ್ಷಣಗಳು. ನೋಡಿದೊಡನೆಯೇ ಆನಂದಪುಳಕಿತನಾಗಿ ನಮಿಸುತ್ತಾನೆ, ಸ್ತೋತ್ರಮಾಡುತ್ತಾನೆ, ಅದರಮೇಲೆ ಬಿದ್ದು ಹೊರಳಾಡುತ್ತಾನೆ, ನಮಸ್ಕರಿಸಿ ಸಂತೋಷಪಡುತ್ತಾನೆ. ಹೊರ ಚಿಹ್ನೆಗಳಿಗಷ್ಟೇ ಅಲ್ಲದೇ ಬಾಹ್ಯವಾಗಿಯೂ ಕೃಷ್ಣ ಬಲರಾಮರ ಪಾದಸ್ಪರ್ಶದ ಸೌಖ್ಯವನ್ನು ಅನುಭವಿಸಿದ ಮಹಾಪುರುಷ ಈತನು.
(ಮುಂದುವರಿಯುವುದು)

– ಲೇಖಕರು ಕಾರ್ಯದರ್ಶಿ,
ಅಷ್ಟಾಂಗಯೋಗ ವಿಜ್ಞಾನಮಂದಿರಂ
, ಬೆಂಗಳೂರು

ಇದನ್ನೂ ಓದಿ: Navavidha Bhakti : ಭಕ್ತಿಗೊಂದು ಸಾಧನ – ಅರ್ಚನೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಶಿವಮೊಗ್ಗ

Shivamogga News: ವಿಜೃಂಭಣೆಯ ರಿಪ್ಪನ್‌ಪೇಟೆ ಶ್ರೀ ಸಿದ್ಧಿವಿನಾಯಕ ಸ್ವಾಮಿಯ ರಥೋತ್ಸವ

Shivamogga News: ರಿಪ್ಪನ್‌ಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಸಿದ್ಧಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವವು ಗುರುವಾರ ಅಪಾರ ಭಕ್ತರ ಮಧ್ಯೆ ವಿಜೃಂಭಣೆಯಿಂದ ಜರುಗಿತು.

VISTARANEWS.COM


on

Sri Siddhivinayaka Swami SrimanMaharathotsava in Ripponpet
Koo

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ಧ ಶ್ರೀ ಸಿದ್ಧಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವವು ಗುರುವಾರ ಅಪಾರ ಭಕ್ತರ ಮಧ್ಯೆ ವಿಜೃಂಭಣೆಯಿಂದ ಜರುಗಿತು. ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಶ್ರೀ ಆಭಿನವ ಚನ್ನಬಸವ ಸ್ವಾಮೀಜಿ ರಥೋತ್ಸವಕ್ಕೆ ಚಾಲನೆ ನೀಡಿ, ಈ ವರ್ಷ ನಾಡಿಗೆ ಸಮೃದ್ಧ ಮಳೆ-ಬೆಳೆಯಾಗಿ ರೈತರ ಬದುಕು ಹಸನಾಗಲೆಂದು ಮತ್ತು ಜಗತ್ತಿನಲ್ಲೆಡೆ ಶಾಂತಿ, ನೆಮ್ಮದಿಯನ್ನು ಕರುಣಿಸುವಂತಾಗಲಿ ಎಂದು ಸಿದ್ಧಿವಿನಾಯಕ ದೇವರಲ್ಲಿ ಶ್ರೀಗಳು ಪ್ರಾರ್ಥಿಸಿದರು.

ಇದನ್ನೂ ಓದಿ: IPL 2024 : ಐಪಿಎಲ್​ ಮಧ್ಯದಲ್ಲಿಯೇ ಕೆಕೆಆರ್​ ತಂಡ ತೊರೆದ ಆರಂಭಿಕ ಆಟಗಾರ

ಮನ್ಮಹಾರಥೋತ್ಸವದ ಅಂಗವಾಗಿ ದೇವಸ್ಥಾನದಲ್ಲಿ ಶಿವಮೊಗ್ಗದ ವಸಂತ ಭಟ್ ಮತ್ತು ಚಂದ್ರಶೇಖರ ಭಟ್ ಹಾಗೂ ಗುರುರಾಜ ಭಟ್ ಅವರ ನೇತೃತ್ವದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು. ಭಕ್ತಾಧಿಗಳು ಶ್ರದ್ಧಾ ಭಕ್ತಿಯಿಂದ ರಥವನ್ನು ಎಳೆದು ಇಷ್ಠಾರ್ಥ ಸಿದ್ಧಿಗಾಗಿ ಪ್ರಾರ್ಥಿಸಿದರು. ಭಕ್ತರಿಗೆ ಉಚಿತವಾಗಿ ಕಬ್ಬಿನ ಹಾಲು ಮತ್ತು ಐಸ್‌ಕ್ರೀಮ್, ಕುಡಿಯುವ ನೀರಿನ ವ್ಯವಸ್ಥೆಯನ್ನು ವಿವಿಧ ಸಂಘಟನೆಗಳಿಂದ ಆಯೋಜಿಸಲಾಗಿತ್ತು.

ಇದನ್ನೂ ಓದಿ: Karnataka Weather : ರಾಜ್ಯದಲ್ಲಿ ಮುಂದುವರಿಯಲಿದೆ ಶಾಖದ ಹೊಡೆತ; ಕೋಲಾರದಲ್ಲಿ ಮೊದಲ ಮಳೆಯ ಸಿಂಚನ

ಈ ಸಂದರ್ಭದಲ್ಲಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಈಶ್ವರಶಟ್ಟಿ, ಎನ್. ಸತೀಶ್, ಗಣೇಶ್ ಎನ್. ಕಾಮತ್, ಎಂ.ಡಿ. ಇಂದ್ರಮ್ಮ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸುಧೀಂದ್ರ ಪೂಜಾರಿ, ತುಳೋಜಿರಾವ್, ಸ್ವಾಮಿ ದೊಡ್ಡಿನಕೊಪ್ಪ, ವೈ.ಜೆ. ಕೃಷ್ಣ, ಉಮೇಶ್ ಆರ್., ಮಂಜನಾಯ್ಕ್, ಎಂ.ಬಿ. ಮಂಜುನಾಥ, ಎಂ. ಸುರೇಶ್‌ ಸಿಂಗ್, ಸುಧೀರ್ ಪಿ., ರವೀಂದ್ರ ಕೆರೆಹಳ್ಳಿ, ನಾಗರತ್ನ ದೇವರಾಜ್, ಎಸ್.ಎನ್. ಬಾಲಚಂದ್ರ, ಕುಸುಮಾ ಬಾಲಚಂದ್ರ, ಪದ್ಮಾ ಸುರೇಶ್, ನಿವೃತ್ತ ಶಿಕ್ಷಕ ರಾಧಾಕೃಷ್ಣ, ಜಯಲಕ್ಷ್ಮಿ ಮೋಹನ್ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಪಾಲ್ಗೊಂಡಿದ್ದರು.

Continue Reading

ಧಾರ್ಮಿಕ

Ballari News: ಬಾಯಿಯೊಳಗೆ ತ್ರಿಶೂಲ; ಬೆನ್ನಿಗೆ ಕೊಕ್ಕೆ ಕಟ್ಟಿಕೊಂಡು ಕಾರು, ರಿಕ್ಷಾ ಎಳೆದ ಭಕ್ತರು!

Ballari News: ಕಂಪ್ಲಿ ಕೋಟೆಯ ಮೀನುಗಾರರ ಕಾಲೋನಿಯಲ್ಲಿ ಮೀನುಗಾರ ಸಮುದಾಯದ ಆರಾಧ್ಯ ದೈವ ಶ್ರೀ ಕಾಳಮ್ಮ ದೇವಿಯ ಪೂಜಾ ಮಹೋತ್ಸವವು ಮಂಗಳವಾರ ಅದ್ಧೂರಿಯಾಗಿ ಜರುಗಿತು. ಹರಕೆ ತೀರಿಸುವ ಭಕ್ತರ ಆಚರಣೆಗಳು ಗಮನ ಸೆಳೆದವು.

VISTARANEWS.COM


on

Kalamma Devi Pooja Mahotsava in Kampli
Koo

ಕಂಪ್ಲಿ: ಕಂಪ್ಲಿ ಕೋಟೆಯ ಮೀನುಗಾರರ ಕಾಲೋನಿಯಲ್ಲಿ ಮೀನುಗಾರ ಸಮುದಾಯದ ಆರಾಧ್ಯ ದೈವ ಶ್ರೀ ಕಾಳಮ್ಮ ದೇವಿಯ ಪೂಜಾ ಮಹೋತ್ಸವವು ಮಂಗಳವಾರ ಅದ್ಧೂರಿಯಾಗಿ (Ballari News) ಜರುಗಿತು.

ಸೋಮವಾರ ಸಂಜೆ ಗಂಗೆಸ್ಥಳ ಮತ್ತು ಅಗ್ನಿ ಕುಂಭೋತ್ಸವ ಸೇರಿದಂತೆ ವಿವಿಧ ರೀತಿಯ ಧಾರ್ಮಿಕ ಕಾರ್ಯಕ್ರಮಗಳು ಶ್ರದ್ಧಾಭಕ್ತಿಯಿಂದ ಜರುಗಿದವು. ಮೆರವಣಿಗೆಯಲ್ಲಿ ಮೂವರು ಭಕ್ತಾದಿಗಳು ಬಾಯಿಗೆ 12 ಅಡಿ ಉದ್ದದ ತ್ರಿಶೂಲ ಅಸ್ತ್ರವನ್ನು ಹಾಕಿಸಿಕೊಂಡು ಕಲ್ಲುಗುಂಡು, ಇಬ್ಬರು ಭಕ್ತಾದಿಗಳು ಆಟೋರಿಕ್ಷಾ, ಇಬ್ಬರು ಭಕ್ತರು ಕಾರುಗಳನ್ನು ತಮ್ಮ ಬೆನ್ನುಗಳಿಗೆ ಹಾಕಿದ್ದ ಕಬ್ಬಿಣದ ಕೊಕ್ಕೆಗಳಿಂದ ಎಳೆದು ತಮ್ಮ ಹರಕೆ ತೀರಿಸಿದರು. ಟ್ರ್ಯಾಕ್ಟರ್‌ಗೆ ಹಾಕಲಾಗಿದ್ದ ಬೊಂಬುಗಳಿಗೆ ತಮ್ಮ ಬೆನ್ನಿಗೆ ಹಾಕಲಾಗಿದ್ದ ಕೊಕ್ಕೆಯಿಂದ ಜೋತು ಬೀಳುವ ಮೂಲಕ ಭಕ್ತಿ ಸಮರ್ಪಿಸಿದರು.

ಇದನ್ನೂ ಓದಿ: Job Alert: ನೈವೇಲಿ ಲಿಗ್ನೈಟ್ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಪದವಿ ಪಡೆದವರು ಅರ್ಜಿ ಸಲ್ಲಿಸಿ

ಮೆರವಣಿಗೆಯು ಶ್ರೀ ಕಾಳಮ್ಮ ದೇವಸ್ಥಾನದಿಂದ ಶ್ರೀ ಸುಂಕಲಮ್ಮ ದೇವಸ್ಥಾನದ ವರೆಗೂ ಜರುಗಿತು. ಭಕ್ತಾದಿಗಳು ರಸ್ತೆಯುದ್ದಕ್ಕೂ ತಮ್ಮ ಬೆನ್ನಿಗೆ ಹಾಕಲಾಗಿದ್ದ ಕೊಕ್ಕೆಯಿಂದ ತಮ್ಮ ಹರಕೆಯಂತೆ ಸುಡು ಬಿಸಿಲ ಮಧ್ಯೆಯು ಗುಂಡು, ಆಟೋ, ಕಾರುಗಳನ್ನು ಎಳೆದೊಯ್ದು ಭಕ್ತಿ ಸಮರ್ಪಿಸಿದರು.

ಪಟ್ಟಣದ ಸೇರಿದಂತೆ ತಾಲೂಕಿನ ವಿವಿಧೆಡೆಗಳಿಂದ ಆಗಮಿಸಿದ್ದಂತಹ ಭಕ್ತರು ವಿಶೇಷ ಆಚರಣೆಯನ್ನು ನೋಡಿ ಕಣ್ ತುಂಬಿಕೊಳ್ಳುವ ಮೂಲಕ ಆಶ್ಚರ್ಯ ಚಕಿತರಾದರು. ಕಾರ್ಯಕ್ರಮದ ಪೌರೋಹಿತ್ಯವನ್ನು ಮಾರೆಪ್ಪ ಪೂಜಾರಿ ವಹಿಸಿದ್ದರು.

ಇದನ್ನೂ ಓದಿ: Koppala News: ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಸಿಗುವಂತೆ ಕ್ರಮ ಕೈಗೊಳ್ಳಲು ಜಿ.ಪಂ ಸಿಇಒ ಸೂಚನೆ

ಈ ಸಂದರ್ಭದಲ್ಲಿ ಮೀನುಗಾರ ಸಹಕಾರ ಸಂಘದ ಅಧ್ಯಕ್ಷ ಚೆನ್ನರಾಜು, ಉಪಾಧ್ಯಕ್ಷ ಷಣ್ಮುಖಪ್ಪ, ಮುಖಂಡರಾದ ಮಾರೆಪ್ಪ ಪೂಜಾರಿ, ಸ್ವಾಮಿ ದೊರೆ, ಎ. ಗಣೇಶ್, ಎಸ್.ಜಿ.ಪೂಜಾರಿ, ಗುರುಮೂರ್ತಿ, ಪಣಿಯಪ್ಪ, ಆರ್. ಕೃಷ್ಣ ಪೂಜಾರಿ, ಎಸ್.ಆರ್. ಸುರೇಶ್ ಸೇರಿದಂತೆ ಸರ್ವ ಸಮುದಾಯಗಳ ಸದ್ಭಕ್ತರು ಪಾಲ್ಗೊಂಡಿದ್ದರು.

Continue Reading

ಬೆಂಗಳೂರು

Sadhguru Jaggi Vasudev: ಮೆದುಳಿನ ಶಸ್ತ್ರಚಿಕಿತ್ಸೆಯ ತಿಂಗಳ ಬಳಿಕ ಕಾಂಬೋಡಿಯಾಗೆ ಸದ್ಗುರು ಪ್ರವಾಸ

Sadhguru Jaggi Vasudev: ಕಾಂಬೋಡಿಯಾದ ಸಾಂಸ್ಕೃತಿಕ ಮತ್ತು ಅಧ್ಯಾತ್ಮಿಕತೆಯ ಅನ್ವೇಷಣೆಗಾಗಿ ಸದ್ಗುರು ಜಗ್ಗಿ ವಾಸುದೇವ್‌ ಅವರು ತೆರಳಿದ್ದಾರೆ. ಇದು ಶಸ್ತ್ರಚಿಕಿತ್ಸೆಯ ಒಂದು ತಿಂಗಳ ನಂತರ ಸದ್ಗುರುಗಳ ಮೊದಲ ಪ್ರಯಾಣವಾಗಿದೆ.

VISTARANEWS.COM


on

Sadhguru Jaggi Vasudev
Koo

ಸೀಮ್‌ ರೀಪ್‌(ಕಾಂಬೋಡಿಯಾ): ಮೆದುಳಿನ ಶಸ್ತ್ರಚಿಕಿತ್ಸೆಯ ಒಂದು ತಿಂಗಳ ನಂತರ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕತೆಯ ಆಳದ ಅನ್ವೇಷಣೆಗಾಗಿ ಆಧ್ಯಾತ್ಮಿಕ ಗುರು ಹಾಗೂ ಈಶ ಫೌಂಡೇಶನ್‌ ಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್‌ (Sadhguru Jaggi Vasudev) ಅವರು ಕಾಂಬೋಡಿಯಾಗೆ ತೆರಳಿದ್ದಾರೆ. ಕಾಂಬೋಡಿಯಾ ಪ್ರವಾಸೋದ್ಯಮ ಸಚಿವ ಎಚ್.ಇ. ಎಸ್ಒಕೆ ಸೋಕೆನ್ ಅವರು ಸೀಮ್ ರೀಪ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸದ್ಗುರುಗಳನ್ನು ಆತ್ಮೀಯತೆಯಿಂದ ಸ್ವಾಗತಿಸಿದರು.

ಗಮನಾರ್ಹ ಆತಿಥ್ಯದ ಜತೆಗೆ ಸಚಿವರು, ಕಾಂಬೋಡಿಯಾದ ಪ್ರಧಾನ ಮಂತ್ರಿಯವರ ವೈಯಕ್ತಿಕ ಪತ್ರವನ್ನು ಸದ್ಗುರುಗಳಿಗೆ ಪ್ರಸ್ತುತಪಡಿಸಿದರು. ಸಚಿವರೊಂದಿಗೆ ಅವರ ಪತ್ನಿ, ಕಾಂಬೋಡಿಯಾದ ಪ್ರವಾಸೋದ್ಯಮ ಸಚಿವಾಲಯದ ಅಧಿಕಾರಿಗಳು ಮತ್ತು ಭಾರತದ ಕಾನ್ಸುಲೇಟ್ ಜನರಲ್ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಇದು ಶಸ್ತ್ರಚಿಕಿತ್ಸೆಯ ಒಂದು ತಿಂಗಳ ನಂತರ ತಮ್ಮ ಚಟುವಟಿಕೆಗಳಿಗೆ ಮರಳಿರುವ ಸದ್ಗುರುಗಳ ಮೊದಲ ಪ್ರಯಾಣ. ಅಲ್ಲಿ ಅವರು ಸ್ಥಳೀಯ ಸಂಸ್ಕೃತಿ ಮತ್ತು ದೇವಾಲಯಗಳ ಹಿಂದಿನ ವಿಜ್ಞಾನವನ್ನು ಅನ್ವೇಷಿಸಲಿದ್ದಾರೆ. ಅವರ ಕಾರ್ಯಕ್ರಮವು ಏಪ್ರಿಲ್ 30 ರವರೆಗೆ ಜರುಗಲಿದ್ದು, ಈ ಸಮಯದಲ್ಲಿ ಅಲ್ಲಿನ ಸ್ಥಳೀಯ ಸಂಸ್ಕೃತಿಯಲ್ಲಿ ಮಿಂದೇಳುವುದರ ಜತೆಗೆ, ಕಾಂಬೋಡಿಯಾದ ಸೀಮ್ ರೀಪ್‌ನಲ್ಲಿರುವ ಬೇಯಾನ್ ಮತ್ತು ಅಂಕೋರ್ ವಾಟ್ ದೇವಾಲಯಗಳಿಗೆ ಭೇಟಿ ನೀಡಲಿದ್ದಾರೆ.

ಯಾವುದೇ ಬೋಧನೆ, ತತ್ವಶಾಸ್ತ್ರ, ಮತಧರ್ಮ ಅಥವಾ ನಂಬಿಕೆಯ ವ್ಯವಸ್ಥೆಗಳಿಗೆ ಒಳಗಾಗದ ಸದ್ಗುರುಗಳು, ತಮ್ಮ ಆಧ್ಯಾತ್ಮಿಕ ಮತ್ತು ಸಾಮಾಜಿಕ ಪ್ರಯತ್ನಗಳು, ಪರಿಸರ ಕಾರ್ಯಗಳು, ಗ್ರಾಮೀಣ ಶಿಕ್ಷಣ ಮತ್ತು ಇನ್ನೂ ಹೆಚ್ಚಿನವುಗಳ ಮೂಲಕ ವಿಶ್ವದಾದ್ಯಂತ ಲಕ್ಷಾಂತರ ಜನರನ್ನು ತಲುಪಿದ್ದಾರೆ. ಪ್ರಪಂಚದಾದ್ಯಂತ ಮೂವತ್ತು ಲಕ್ಷ ಜನರು ಅವರ ಪ್ರಮುಖ ಕಾರ್ಯಕ್ರಮವಾದ ಇನ್ನರ್ ಎಂಜಿನಿಯರಿಂಗ್ ಕಾರ್ಯಕ್ರಮದ ಪ್ರಯೋಜನ ಪಡೆದಿದ್ದಾರೆ. ಆ ಮೂಲಕ ಜನರು ತಮ್ಮ ಜೀವನದ ಗ್ರಹಿಕೆಯಲ್ಲಿ ಹೆಚ್ಚಿನ ಸಮತೋಲನ ಮತ್ತು ಗಮನಾರ್ಹ ಸ್ಪಷ್ಟತೆಯನ್ನು ಪಡೆದುಕೊಂಡಿದ್ದಾರೆ.

ಇದನ್ನೂ ಓದಿ | Prerane : ಗೆಲುವಿಗೆ ಸೂತ್ರಗಳಿವೆಯೇ? ಸದ್ಗುರು ಹೀಗೆನ್ನುತ್ತಾರೆ!

2023 ರಲ್ಲಿ ಸದ್ಗುರುಗಳ ಸಾಮಾಜಿಕ ಮಾಧ್ಯಮವು 4.37 ಶತಕೋಟಿಗೂ ಹೆಚ್ಚು ವೀಕ್ಷಣೆಗಳನ್ನು ಪಡೆದಿತ್ತು. ಈ ಹಿನ್ನೆಲೆಯಲ್ಲಿ ಕಾಂಬೋಡಿಯಾದ ಅವರ ಅನ್ವೇಷಣೆಯು, ಆ ದೇಶದ ಬಗೆಗಿನ ಅವರ ಒಳನೋಟಗಳಿಂದ ಪ್ರಯೋಜನ ಪಡೆಯಲು ಜಗತ್ತಿಗೆ ಒಂದು ವಿಶಿಷ್ಟ ಅವಕಾಶವನ್ನು ಒದಗಿಸಲಿದೆ.

Continue Reading

ಬೆಂಗಳೂರು

Bengaluru Karaga: ವೈಭವದ ಕರಗ ಮಹೋತ್ಸವ ಸಂಪನ್ನ; ಲಕ್ಷಾಂತರ ಭಕ್ತರ ನಡುವೆ ಮಸ್ತಾನ್ ಸಾಬ್ ದರ್ಗಾಗೆ ಭೇಟಿ

Bengaluru Karaga: ಸಂಪ್ರದಾಯದಂತೆ ಹಜರತ್ ತವಕಲ್ ಮಸ್ತಾನ್ ಷಾ ದರ್ಗಕ್ಕೆ ಕರಗ ಭೇಟಿ ನೀಡಿತು. ಹಜರತ್ ತವಕಲ್‌ ಮಸ್ತಾನ್ ಷಾನಲ್ಲಿ ಕರಗದ ಆಗಮನಕ್ಕಾಗಿ ಸಕಲ‌ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ವಿದ್ಯುತ್ ದೀಪಗಳಿಂದ ಕಂಗೊಳಿಸಿತು. ದರ್ಗದಲ್ಲಿ ಕರಗಕ್ಕೆ ‌ಪೂಜೆ ಸಲ್ಲಿಸಲಾಗಿದ್ದು, ನಂತರ ದರ್ಗಾವನ್ನು ಪ್ರದಕ್ಷಿಣೆ ಮಾಡಿ ಅಣ್ಣಮ್ಮ ದೇವಸ್ಥಾನದತ್ತ ತೆರಳಿತು.

VISTARANEWS.COM


on

bengaluru karaga in darga
Koo

ಬೆಂಗಳೂರು: ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವ (Bengaluru karaga Festival) ಮಂಗಳವಾರ ರಾತ್ರಿ ಅದ್ಧೂರಿಯಾಗಿ ನೆರವೇರಿತು. ನಗರ್ತಪೇಟೆಯಲ್ಲಿ ಧರ್ಮರಾಯಸ್ವಾಮಿ (Dharmaraya swamy) ರಥೋತ್ಸವ ಬಳಿಕ ರಾತ್ರಿ 2 ಗಂಟೆಗೆ ಕರಗ ಶಕ್ತ್ಸೋತ್ಸವಕ್ಕೆ (Bangalore Karaga) ಚಾಲನೆ ನೀಡಲಾಯಿತು. ಮುಂಜಾನೆ ಹಾಜಿ ಮಸ್ತಾನ್‌ ಸಾಬ್‌ ದರ್ಗಾಗೂ (Haji Mastan Saab Darga) ಭೇಟಿ ಕೊಟ್ಟು 5.45ರ ವೇಳೆಗೆ ಧರ್ಮರಾಯ ಸ್ವಾಮಿ ದೇವಸ್ಥಾನದೊಳಗೆ ಕರಗ ಸೇರಿಕೊಂಡಿತು. ವೈಭವದ ಕರಗ ಕಣ್ತುಂಬಿಕೊಳ್ಳಲು ವಿವಿಧೆಡೆಯಿಂದ ಲಕ್ಷಾಂತರ ಜನರು ಆಗಮಿಸಿದ್ದರು.

ನಿನ್ನೆ ರಾತ್ರಿ ಧರ್ಮರಾಯ ಸ್ವಾಮಿ ದೇವಾಲಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಂಸದ ತೇಜಸ್ವಿ ಸೂರ್ಯ, ಶಾಸಕ ಹ್ಯಾರಿಸ್‌, ಕಾಂಗ್ರೆಸ್‌ ಅಭ್ಯರ್ಥಿ ಸೌಮ್ಯ ರೆಡ್ಡಿ ಮುಂತಾದವರು ಭೇಟಿ ನೀಡಿದರು. ಬೆಳಗ್ಗೆಯಿಂದಲೇ ತಾಯಿಗೆ ಬಳೆ ಶಾಸ್ತ್ರ, ತಾಳಿ ಶಾಸ್ತ್ರ, ಹೂ ಶಾಸ್ತ್ರ ವಿಶೇಷ ಪೂಜೆ ಸಲ್ಲಿಸಲಾಯಿತು. ಮಂಗಳವಾರ ರಾತ್ರಿ 10.30ಕ್ಕೆ ಕಲ್ಯಾಣಿಗೆ ಹೋಗಿ ಪೂಜೆ ಸಲ್ಲಿಸಲಾಯಿತು. ಅಲ್ಲಿಂದ ವಾಪಸ್ ಬಂದು ಧರ್ಮರಾಯ ದೇವಸ್ಥಾನದಲ್ಲಿ ಪೂಜೆ ಮಾಡಲಾಯಿತು. ರಥೋತ್ಸವದ ಬಳಿಕ ಭಕ್ತರ ಗೋವಿಂದ… ಗೋವಿಂದ… ಎಂಬ ಘೋಷಣೆಗಳ ನಡುವೆ ಅರ್ಚಕ ಜ್ಞಾನೇಂದ್ರ ಅವರು ಕರಗ ಹೊತ್ತು ಸಾಗಿದರು.

ಮುಖ್ಯ ರಥ ಧರ್ಮರಾಯಸ್ವಾಮಿ ರಥದಲ್ಲಿ ಅರ್ಜುನ‌ ಮತ್ತು ದ್ರೌಪದಿ ದೇವಿ ವಿರಾಜಮಾನರಾಗಿದ್ದರು. ಚಿಕ್ಕ ರಥದಲ್ಲಿ ಗ್ರಾಮದೇವಿ ಮುತ್ಯಾಲಮ್ಮ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿತ್ತು. ಪಾಂಡವರ ಮೂರ್ತಿಗಳು ಸೇರಿ ಒಟ್ಟು ಒಂಬತ್ತು ಮೂರ್ತಿಗಳಿಗೆ ವೀರಕುಮಾರರಿಂದ ಪೂಜೆ ಸಲ್ಲಿಸಿದ ಬಳಿಕ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ರಥಗಳು ಮುಂದೆ ಸಾಗುತ್ತಿದ್ದಂತೆ ದೇಗುಲದಿಂದ ದ್ರೌಪದಿ ದೇವಿ ಕರಗ ಹೊರಬಂದಿತು.

ಕರಗ ಸಾಗುವ ರಾಜಬೀದಿಗಳೆಲ್ಲಾ ಬಣ್ಣ ಬಣ್ಣದ ಲೈಟಿಂಗ್‌ ಹಾಗೂ ಜನರಿಂದ ಕಂಗೊಳಿಸಿದವು. ಸಾಂಪ್ರದಾಯಿಕವಾಗಿ ಎ. ಜ್ಞಾನೇಂದ್ರ 14ನೇ ಬಾರಿ ಕರಗ ಹೊತ್ತರು. ಒಂದು ರಥದಲ್ಲಿ ಮುತ್ಯಾಲಮ್ಮ ಮೂರ್ತಿ ಪ್ರತಿಷ್ಠಾಪನೆಯಾಗಿದ್ದು, ಪಾಂಡವರ ಮೂರ್ತಿಗಳು ಸೇರಿದಂತೆ ಒಟ್ಟು ಒಂಬತ್ತು ಮೂರ್ತಿಗಳಿಗೆ ವೀರಕುಮಾರರಿಂದ ಪೂಜೆ ಸಂದಿತು. ಪೂಜೆ ನಂತರ ಮತ್ತೊಂದು ರಥದಲ್ಲಿ ದ್ರೌಪದಿ ಮತ್ತು ಅರ್ಜುನ ಮೂರ್ತಿ ಪ್ರತಿಷ್ಠಾಪನೆಯಾಯಿತು. ನಂತರ ರಥಗಳ ಮೆರವಣಿಗೆ ಆರಂಭವಾಯಿತು. ಖಡ್ಗಗಳನ್ನು ಹಿಡಿದು ನೂರಾರು ವೀರಕುಮಾರರು ಮೆರವಣಿಗೆಯಲ್ಲಿ ತೆರಳಿದರು. ರಥಗಳು ಮುಂದೆ ಸಾಗುತ್ತಿದ್ದಂತೆ ದ್ರೌಪದಿ ದೇವಿ ಕರಗ ದೇಗುಲದಿಂದ ಹೊರ ಬಂದಿದ್ದು, ಅದನ್ನು ಕಂಡು ಭಕ್ತರು ಹರ್ಷೋದ್ಗಾರ ಮಾಡಿದರು.

ಸಂಪ್ರದಾಯದಂತೆ ಹಜರತ್ ತವಕಲ್ ಮಸ್ತಾನ್ ಷಾ ದರ್ಗಕ್ಕೆ ಕರಗ ಭೇಟಿ ನೀಡಿತು. ಹಜರತ್ ತವಕಲ್‌ ಮಸ್ತಾನ್ ಷಾನಲ್ಲಿ ಕರಗದ ಆಗಮನಕ್ಕಾಗಿ ಸಕಲ‌ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ವಿದ್ಯುತ್ ದೀಪಗಳಿಂದ ಕಂಗೊಳಿಸಿತು. ದರ್ಗದಲ್ಲಿ ಕರಗಕ್ಕೆ ‌ಪೂಜೆ ಸಲ್ಲಿಸಲಾಗಿದ್ದು, ನಂತರ ದರ್ಗಾವನ್ನು ಪ್ರದಕ್ಷಿಣೆ ಮಾಡಿ ಅಣ್ಣಮ್ಮ ದೇವಸ್ಥಾನದತ್ತ ತೆರಳಿತು. ಒಟ್ಟು 11-12 ಕಿಲೋಮೀಟರ್ ಕರಗದ ಮೆರವಣಿಗೆ ಸಾಗಿದೆ.

ಕರಗ ಮೆರವಣಿಗೆ ಮಾರ್ಗ

ರಥೋತ್ಸವದ ನಂತರ ಮಧ್ಯರಾತ್ರಿ 1 ಗಂಟೆಯಿಂದ ಕರಗ ಮಹೋತ್ಸವದ ಮೆರವಣಿಗೆ ಸಾಗಿತು. ನಗರ್ತಪೇಟೆಯ ಧರ್ಮರಾಯಸ್ವಾಮಿ ದೇವಸ್ಥಾನದಿಂದ ಕರಗ ಮೆರವಣಿಗೆ ಆರಂಭವಾಗಿ ಕಬ್ಬನ್​ಪೇಟೆ, ಗಾಣಿಗರಪೇಟೆ, ಅವೆನ್ಯೂ ರಸ್ತೆ ಮೂಲಕ ಸಾಗಿ ನಂತರ ಕೆ.ಆರ್. ರಸ್ತೆಯಲ್ಲಿರುವ ಕೋಟೆ ಆಂಜನೇಯ ದೇಗುಲಕ್ಕೆ ತೆರಳಿತು. ಬಳಿಕ ಸಿಟಿ ಮಾರ್ಕೆಟ್ ಪೊಲೀಸ್ ಠಾಣೆ ರಸ್ತೆಯ ರಾಣಾಸಿಂಗ್​ಪೇಟೆ, ಅಕ್ಕಿಪೇಟೆ, ಅರಳಿಪೇಟೆ, ಒಟಿಸಿ ರಸ್ತೆ, ಮಸ್ತಾನ್ ಸಾಹೇಬ್ ದರ್ಗಾ, ಬಳೆಪೇಟೆ ಮುಖ್ಯ ರಸ್ತೆ, ಕೆ.ಜಿ.ರಸ್ತೆ, ಎಸ್​ಪಿ ರಸ್ತೆ ಮೂಲಕ ಸಾಗಿ ಅಣ್ಣಮ್ಮ ದೇಗುಲಕ್ಕೆ ಬಂದು ಅದೇ ಮಾರ್ಗದಲ್ಲಿ ವಾಪಸಾಯಿತು. ಬೆಳಗ್ಗೆ 5.45 ಗಂಟೆಗೆ ಧರ್ಮರಾಯಸ್ವಾಮಿ ದೇವಾಲಯ ಸೇರಿತು. ಬೆಳಗ್ಗೆ 8 ಗಂಟೆಗೆ ತಾಯಿಗೆ ವಿಶೇಷ ಪೂಜೆ ಸಲ್ಲಿಸುವುದರೊಂದಿಗೆ ಕರಗಕ್ಕೆ ತೆರೆ ಬೀಳಲಿದೆ.

ಇದನ್ನೂ ಓದಿ | Bengaluru Karaga 2024: ಬೆಂಗಳೂರು ಕರಗ ಶಕ್ತ್ಸೋತ್ಸವಕ್ಕೆ ಕೌಂಟ್‌ ಡೌನ್‌; 8 ಲಕ್ಷ ಜನ ಭಾಗಿ!

Continue Reading
Advertisement
Physical abuse
ಮೈಸೂರು14 mins ago

Physical Abuse : ಮೊಬೈಲ್ ಕೊಡಿಸುವುದಾಗಿ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಪರಾರಿಯಾದ ಸೋದರ ಮಾವ

Lok Sabha Election
ಪ್ರಮುಖ ಸುದ್ದಿ14 mins ago

Lok Sabha Election : ಚುನಾವಣೆ ಖರ್ಚಿಗೆ ಹಣ ಕೊಡದ್ದಕ್ಕೆ ಟಿಕೆಟ್​ ವಾಪಸ್​ ಕೊಟ್ಟ ಕಾಂಗ್ರೆಸ್​ ಅಭ್ಯರ್ಥಿ!

Summer Tour
ಪ್ರವಾಸ22 mins ago

Summer Tour: ಬೇಸಿಗೆಯಲ್ಲಿ ಈ 8 ತಂಪು ಹಳ್ಳಿಗಳಿಗೆ ಪ್ರವಾಸ ಹೋಗಿ ಕೂಲ್ ಆಗಿ!

Prajwal Revanna Case
ಕರ್ನಾಟಕ25 mins ago

Prajwal Revanna Case: ಹೊಳೆನರಸೀಪುರ ರೇವಣ್ಣ ನಿವಾಸದಲ್ಲಿ ಎಸ್‌ಐಟಿ ಸ್ಥಳ ಮಹಜರು; ಸಂತ್ರಸ್ತೆ ಹೇಳಿಕೆ ದಾಖಲು

Lok Sabha Election
ಪ್ರಮುಖ ಸುದ್ದಿ34 mins ago

Lok Sabha Election : ರಾಹುಲ್ ಪ್ರಧಾನಿಯಾಗುವುದು ಪಾಕಿಸ್ತಾನದ ಆಸೆ ಎಂದ ಮೋದಿ, ತಿರುಗೇಟು ಕೊಟ್ಟ ಪ್ರಿಯಾಂಕಾ

Prajwal Revanna Case
ಕರ್ನಾಟಕ56 mins ago

Prajwal Revanna Case: ಪ್ರಜ್ವಲ್‌ ಕೇಸ್‌ಗೆ ಬಿಗ್‌ ಟ್ವಿಸ್ಟ್;‌ ರೇವಣ್ಣ ಪಿಎ ಮನೆಯಲ್ಲಿ ಸಂತ್ರಸ್ತೆಯ ರಕ್ಷಣೆ!

Hardik Pandya
ಕ್ರಿಕೆಟ್58 mins ago

IPL 2024 : ಹಾರ್ದಿಕ್​ ಪಾಂಡ್ಯ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ ಇರ್ಫಾನ್ ಪಠಾಣ್​​

karnataka weather Forecast
ಮಳೆ1 hour ago

Karnataka Weather: ಮೈಸೂರಲ್ಲಿ ಬಿರುಗಾಳಿಗೆ ಸಿಲುಕಿ ವೃದ್ಧೆ ಸಾವು; ಮತ್ತೆ ಗುಡುಗು ಸಹಿತ ಗಾಳಿ ಮಳೆಯ ಎಚ್ಚರಿಕೆ

Zameer Ahmed Khan
ಕರ್ನಾಟಕ1 hour ago

Zameer Ahmed Khan: 3ನೇ ಬಾರಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಅಲ್ಪ ಸಂಖ್ಯಾತರನ್ನು ಮುಗಿಸ್ತಾರೆ ಎಂದ ಜಮೀರ್‌ ಅಹ್ಮದ್

Mobile Side Effect
ಆರೋಗ್ಯ1 hour ago

Mobile Side Effect: ಅತಿಯಾದ ಮೊಬೈಲ್ ಬಳಕೆ; ಮಕ್ಕಳು ಕಿವುಡರಾಗುತ್ತಿದ್ದಾರೆ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ13 hours ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ1 day ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ2 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ2 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ3 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ5 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20245 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20245 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ6 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20246 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

ಟ್ರೆಂಡಿಂಗ್‌