Asia Cup 2023: ಹೈಬ್ರಿಡ್ ಮಾಡೆಲ್​ನಲ್ಲಿ​ ಏಷ್ಯಾ ಕಪ್​; ಪಾಕ್​ ಕ್ರಿಕೆಟ್​ ಮಂಡಳಿ ಶಿಫಾರಸು - Vistara News

ಕ್ರಿಕೆಟ್

Asia Cup 2023: ಹೈಬ್ರಿಡ್ ಮಾಡೆಲ್​ನಲ್ಲಿ​ ಏಷ್ಯಾ ಕಪ್​; ಪಾಕ್​ ಕ್ರಿಕೆಟ್​ ಮಂಡಳಿ ಶಿಫಾರಸು

ಏಷ್ಯಾ ಕಪ್‌ ಕ್ರಿಕೆಟ್(Asia Cup 2023)​ ಟೂರ್ನಿಯನ್ನು ಹೈಬ್ರಿಡ್ ಮಾಡೆಲ್​ನಲ್ಲಿ ನಡೆಸುವ ಬಗ್ಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ(ಪಿಸಿಬಿ)ಯು ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ)ಗೆ ಶಿಫಾರಸು ಮಾಡಿದೆ.

VISTARANEWS.COM


on

Asia Cup 2023: Asia Cup in hybrid model; Recommended by Pakistan Cricket Board
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಾಹೋರ್: 2023ರ ಏಷ್ಯಾ ಕಪ್‌ ಕ್ರಿಕೆಟ್(Asia Cup 2023)​ ಟೂರ್ನಿಯನ್ನು ಹೈಬ್ರಿಡ್ ಮಾಡೆಲ್​ನಲ್ಲಿ ನಡೆಸುವ ಬಗ್ಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ(ಪಿಸಿಬಿ)ಯು ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ)ಗೆ ಶಿಫಾರಸು ಮಾಡಿದೆ. ಟೂರ್ನಿಯಲ್ಲಿ ಪಾಕಿಸ್ತಾನವು ತನ್ನ ಪಂದ್ಯಗಳನ್ನು ತವರಿನಲ್ಲಿ ಆಡಲಿದ್ದು, ಭಾರತವು ತಮ್ಮ ಪಂದ್ಯಗಳನ್ನು ತಟಸ್ಥ ಸ್ಥಳದಲ್ಲಿ ಆಡುತ್ತದೆ ಎಂದು ಪಿಸಿಬಿ ಅಧ್ಯಕ್ಷ ನಜಮ್ ಸೇಥಿ ಅವರು ಹೇಳಿದ್ದಾರೆ.

“2025 ರಲ್ಲಿ ಪಾಕಿಸ್ತಾನದಲ್ಲಿ ಚಾಂಪಿಯನ್ಸ್ ಟ್ರೋಫಿ ನಡೆಯುವಾಗ ಭಾರತ ಪಾಕಿಸ್ತಾನಕ್ಕೆ ಬರುವ ನಿರೀಕ್ಷೆ ಇದೆ. ಏಷ್ಯಾ ಕಪ್ ಟೂರ್ನಿಯನ್ನು ತಟಸ್ಥ ತಾಣದಲ್ಲಿ ಆಡಲು ನಮಗೆ ಸಲಹೆ ನೀಡಲಾಗಿದೆ. ಆದರೆ ನಾವು ಕೂಡ ಏಕದಿನ ವಿಶ್ವಕಪ್‌ಗಾಗಿ ಭಾರತಕ್ಕೆ ಹೋಗುವ ವೇಳೆ ಇದೇ ರೀತಿಯ ಬೇಡಿಕೆ ಇಡುತ್ತೇವೆ” ಎಂದು ಸೇಥಿ ಹೇಳಿದ್ದಾರೆ.

“ನಮ್ಮ ಸರ್ಕಾರವು ಭಾರತದ ವಿರುದ್ಧ ಆಡುವ ಬಗ್ಗೆ ಯಾವುದೇ ನಿರ್ಬಂಧಗಳನ್ನು ವಿಧಿಸಿಲ್ಲ. ಆದರೆ ಭಾರತ ಸರ್ಕಾರ ನಮ್ಮ ಜತೆ ಕ್ರಿಕೆಟ್​ ಆಡಲು ಟೀಮ್​ ಇಂಡಿಯಾಕ್ಕೆ ನಿರ್ಬಂಧ ಹೇರುತ್ತಿದೆ. ಇದು ಎಲ್ಲರಿಗೂ ತಿಳಿದ ವಿಚಾರ. ನನಗೆ ಇಲ್ಲಿ ಒಂದು ಅರ್ಧವಾಗುತ್ತಿಲ್ಲ. ಬೇರೆ ಕ್ರೀಡೆಗಳನ್ನು ಆಡುವಾಗ ಈ ನಿರ್ಬಂಧಗಳು ಕಾಣಿಸಿಕೊಳ್ಳುವುದಿಲ್ಲ. ಆದರೆ ಕ್ರಿಕೆಟ್​ ವಿಚಾರದಲ್ಲಿ ಮಾತ್ರ ಹೀಗೆ ಏಕೆ” ಎಂದು ಸೇಥಿ ಹೇಳಿದರು.

ಇದನ್ನೂ ಓದಿ Asia Cup 2023 : ಪಾಕ್​​ನಲ್ಲೇ ಏಷ್ಯಾ ಕಪ್​; ಭಾರತ, ಪಾಕಿಸ್ತಾನ ಪಂದ್ಯ ತಟಸ್ಥ ತಾಣದಲ್ಲಿ

“ನಾವು ನಿರ್ಗತಿಕರಲ್ಲ, ನಮ್ಮ ಆರ್ಥಿಕತೆಯೂ ಉತ್ತಮವಾಗಿದೆ. ನಾವು ಭಾರತದೊಂದಿಗೆ ಗೌರವಯುತವಾಗಿ ಕ್ರಿಕೆಟ್ ಆಡಲು ಬಯಸುತ್ತೇವೆ. ಇದೇ ವಿಚಾರವಾಗಿ ಎಸಿಸಿ ಜತೆ ಮಾತುಕತೆ ನಡೆಸುತ್ತಿದ್ದೇವೆ. ಒಂದೊಮ್ಮೆ ಏಷ್ಯಾ ಕಪ್‌ನಲ್ಲಿ ಭಾರತದ ಎಲ್ಲ ಪಂದ್ಯಗಳನ್ನು ತಟಸ್ಥ ಸ್ಥಳಕ್ಕೆ ಸ್ಥಳಾಂತರಿಸಲು ಪಾಕಿಸ್ತಾನ ನಿರ್ಧರಿಸಿದರೆ, ಭಾರತದ ಆತಿಥ್ಯದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್​ಗೆ​ ಭಾರತವು ಇದೇ ಹೈಬ್ರಿಡ್ ಪ್ರಯೋಗವನ್ನು ಬಳಸಬೇಕು” ಎಂದು ಸೇಥಿ ಒತ್ತಾಯಿಸಿದ್ದಾರೆ.

ಪಾಕಿಸ್ತಾನದಲ್ಲಿ ಈ ಹಿಂದೆ ಭದ್ರತಾ ಸಮಸ್ಯೆಗಳು ಇದ್ದವು, ಇದನ್ನು ನಾನು ಕೂಡ ಒಪ್ಪಿಕೊಳ್ಳುತ್ತೇನೆ. ಆದರೆ ಈಗ ಪರಿಸ್ಥಿತಿ ಬದಲಾಗಿದೆ. ಆದರೂ ಭಾರತ ಪಾಕಿಸ್ತಾನದಲ್ಲಿ ಭಾರತಕ್ಕೆ ಆಡಲು ಏನು ಸಮಸ್ಯೆ? ಎಂದು ತಿಳಿಯುತ್ತಿಲ್ಲ. ಈ ಟೂರ್ನಿಯಲ್ಲಿ ಪಾಲ್ಗೊಳ್ಳುವ ಶ್ರೀಲಂಕಾ, ಅಫಘಾನಿಸ್ತಾನ, ಬಾಂಗ್ಲಾದೇಶ ತಂಡಗಳಿಗೆ ಇಲ್ಲಿ ಆಡಲು ಯಾವುದೇ ಸಮಸಯೆ ಇಲ್ಲ. ಭಾರತಕ್ಕೆ ಮಾತ್ರ ಏಕೆ ಎಂದು ಸೇಥಿ ಪ್ರಶ್ನಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

IPL 2024 : ಕೆಕೆಆರ್ ತಂಡದ ಇನ್ನೊಬ್ಬ ಆಟಗಾರನಿಗೆ ದಂಡ ವಿಧಿಸಿದ ಬಿಸಿಸಿಐ

IPL 2024: 27 ವರ್ಷದ ಆಟಗಾರ ಅಪರಾಧ ಒಪ್ಪಿಕೊಂಡಿದ್ದಾರೆ. ಮ್ಯಾಚ್ ರೆಫರಿ ವಿಧಿಸಿದ ಶಿಕ್ಷೆಯನ್ನು ಸ್ವೀಕರಿಸಿದ್ದಾರೆ. ಐಪಿಎಲ್ ನೀತಿ ಸಂಹಿತೆಯ ಲೆವೆಲ್ 1 ಉಲ್ಲಂಘನೆಗಾಗಿ, ಮ್ಯಾಚ್ ರೆಫರಿ ತೆಗೆದುಕೊಂಡ ನಿರ್ಧಾರಗಳನ್ನು ಅಂತಿಮ ಎಂದು ಪರಿಗಣಿಸಲಾಗುತ್ತದೆ. ಆದ್ದರಿಂದ ಔಪಚಾರಿಕ ವಿಚಾರಣೆಯ ಅಗತ್ಯವಿಲ್ಲ.

VISTARANEWS.COM


on

IPL 2024
Koo

ಕೋಲ್ಕತಾ: ಇಲ್ಲಿನ ಈಡನ್ ಗಾರ್ಡನ್ಸ್​ನಲ್ಲಿ ಮೇ 11 ರಂದು ನಡೆದ ಐಪಿಎಲ್ 2024 ರ 60 ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ (ಎಂಐ) ವಿರುದ್ಧ 18 ರನ್​ಗಳ ಗೆಲುವು ಸಾಧಿಸಿದ ಸಂದರ್ಭದಲ್ಲಿ ಕೋಲ್ಕತಾ ನೈಟ್ ರೈಡರ್ಸ್ (ಕೆಕೆಆರ್) ಬ್ಯಾಟ್ಸ್ಮನ್ ರಮಣ್​ದೀಪ್​ ಸಿಂಗ್ ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಶಿಕ್ಷೆಗೆ ಗುರಿಯಾಗಿದ್ದಾರೆ. ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.20 ರ ಪ್ರಕಾರ ರಮಣ್​​ದೀಪ್​ ಲೆವೆಲ್ 1 ಅಪರಾಧವನ್ನು ಮಾಡಿದ್ದಾರೆ ಎಂದು ಸಾಬೀತಾಗಿದೆ. ಈ ಅಪರಾಧಕ್ಕಾಗಿ ಕೆಕೆಆರ್ ಬ್ಯಾಟರ್​ಗೆ ಪಂದ್ಯದ ಶುಲ್ಕದ ಶೇಕಡಾ 20 ರಷ್ಟು ದಂಡ ವಿಧಿಸಲಾಗಿದೆ ಎಂದು ಐಪಿಎಲ್ ಅಧಿಕೃತ ಹೇಳಿಕೆಯಲ್ಲಿ ದೃಢಪಡಿಸಿದೆ.

27 ವರ್ಷದ ಆಟಗಾರ ಅಪರಾಧ ಒಪ್ಪಿಕೊಂಡಿದ್ದಾರೆ. ಮ್ಯಾಚ್ ರೆಫರಿ ವಿಧಿಸಿದ ಶಿಕ್ಷೆಯನ್ನು ಸ್ವೀಕರಿಸಿದ್ದಾರೆ. ಐಪಿಎಲ್ ನೀತಿ ಸಂಹಿತೆಯ ಲೆವೆಲ್ 1 ಉಲ್ಲಂಘನೆಗಾಗಿ, ಮ್ಯಾಚ್ ರೆಫರಿ ತೆಗೆದುಕೊಂಡ ನಿರ್ಧಾರಗಳನ್ನು ಅಂತಿಮ ಎಂದು ಪರಿಗಣಿಸಲಾಗುತ್ತದೆ. ಆದ್ದರಿಂದ ಔಪಚಾರಿಕ ವಿಚಾರಣೆಯ ಅಗತ್ಯವಿಲ್ಲ.

ಎಷ್ಟು ದಂಡ


ಐಪಿಎಲ್​ನ ನೀತಿ ಸಂಹಿತೆಯ ಪ್ರಕಾರ, ಅನುಚ್ಛೇದ 2.20ರಲ್ಲಿ “ವಿಕೆಟ್​ಗಳಿಗೆ ಹೊಡೆಯುವುದು ಅಥವಾ ಒದೆಯುವುದು ಮತ್ತು ಉದ್ದೇಶಪೂರ್ವಕವಾಗಿ ಜಾಹೀರಾತು ಫಲಕಗಳು, ಬೌಂಡರಿ ಲೈನ್​, ಡ್ರೆಸ್ಸಿಂಗ್ ರೂಮ್ ಬಾಗಿಲುಗಳು, ಕನ್ನಡಿಗಳು, ಕಿಟಕಿಗಳಿಗೆ ಹಾನಿ ಉಂಟುಮಾಡುವ ಯಾವುದೇ ಕ್ರಮಗಳನ್ನು ಕೈಗೊಳ್ಳಬಹುದು. ಇತರ ಒಬ್ಬ ಆಟಗಾರನು ಹತಾಶೆಯಿಂದ ತನ್ನ ಬ್ಯಾಟ್ ಅನ್ನು ತೀವ್ರವಾಗಿ ತಿರುಗಿಸಿದಾಗ ಮತ್ತು ಜಾಹೀರಾತು ಫಲಕಗಳಿಗೆ ಹಾನಿಯನ್ನುಂಟುಮಾಡಿದಾಗ ಅದನ್ನು ಅಪರಾಧ ಎಂದು ಪರಿಗಣಿಸಲಾಗುತ್ತದೆ. ಅಂತೆಯೇ ರಮಣ್​ದೀಪ್​ ಬೌಂಡಿ ಲೈನ್​ಗಳ ಮೇಲೆ ಹೊಡೆದಿದ್ದರು.

ಇದನ್ನೂ ಓದಿ: IPL 2024: ರಾಜಸ್ಥಾನ ವಿರುದ್ಧ ಗೆದ್ದು ಬೀಗಿದ ಚೆನ್ನೈ; ಪ್ಲೇಆಫ್‌ ಆಸೆ ಜೀವಂತ, ಆರ್‌ಸಿಬಿಗೆ ಹೆಚ್ಚಿದ ಒತ್ತಡ

ಕೆಕೆಆರ್ ಶನಿವಾರ ಮುಂಬೈ ಇಂಡಿಯನ್ಸ್ (ಎಂಐ) ವಿರುದ್ಧ 18 ರನ್ಗಳಿಂದ ಗೆಲ್ಲುವ ಮೂಲಕ ಐಪಿಎಲ್ 2024 ಪ್ಲೇಆಫ್​ಗೆ ಅರ್ಹತೆ ಪಡೆದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು. ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ರಮಣ್ದೀಪ್ 8 ಎಸೆತಗಳಲ್ಲಿ ಅಜೇಯ 17 ರನ್ ಗಳಿಸಿ ಕೆಕೆಆರ್ ಗೆಲುವಿಗೆ ಕಾರಣರಾದರು.

ಐಪಿಎಲ್ 2024 ರಲ್ಲಿ ಕೆಕೆಆರ್ ಇದುವರೆಗೆ ಆಡಿದ 12 ಪಂದ್ಯಗಳಿಂದ 18 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ರಾಜಸ್ಥಾನ್ ರಾಯಲ್ಸ್ (ಆರ್ಆರ್) ಪ್ರಸ್ತುತ 16 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ ಮತ್ತು ಈ ಋತುವಿನಲ್ಲಿಯೂ ಪ್ಲೇಆಫ್ ತಲುಪುವುದು ಖಚಿತವಾಗಿದೆ.

ಶ್ರೇಯಸ್ ಅಯ್ಯರ್ ಏನಂದರು?

ಈ ಋತುವಿನಲ್ಲಿ ಅಗ್ರ ನಾಲ್ಕರಲ್ಲಿ ಸ್ಥಾನ ಪಡೆದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಕೆಕೆಆರ್ ಪಾತ್ರವಾದ ನಂತರ, ಅವರ ನಾಯಕ ಶ್ರೇಯಸ್ ಅಯ್ಯರ್ ಅವರು ಸಂಭ್ರಮ ವ್ಯಕ್ತಪಡಿಸಿದ್ದಾರೆ. ಪಂದ್ಯದ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಯ್ಯರ್, “ನಾನು ಇದನ್ನು ಪಂದ್ಯಕ್ಕೆ ಮೊದಲು ವ್ಯಕ್ತಪಡಿಸಿದ್ದೇನೆ ಎಂದು ಹೇಳಿದರು.

Continue Reading

ಐಪಿಎಲ್ 2024

IPL 2024: ರಾಜಸ್ಥಾನ ವಿರುದ್ಧ ಗೆದ್ದು ಬೀಗಿದ ಚೆನ್ನೈ; ಪ್ಲೇಆಫ್‌ ಆಸೆ ಜೀವಂತ, ಆರ್‌ಸಿಬಿಗೆ ಹೆಚ್ಚಿದ ಒತ್ತಡ

IPL 2024: ರಾಜಸ್ಥಾನ ರಾಯಲ್ಸ್ ಸಿಎಸ್‌ಕೆ ಗೆಲುವಿನೊಂದಿಗೆ ಆರ್‌ಸಿಬಿ (RCB) ಮತ್ತಷ್ಟು ಒತ್ತಡಕ್ಕೆ ಸಿಲುಕಿದ್ದು, ಭಾನುವಾರವೇ (ಮೇ 12) ನಡೆಯಲಿರುವ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ಗೆಲ್ಲುವ ಜತೆಗೆ ಕೊನೆಯ ಪಂದ್ಯವನ್ನು ಸಿಎಸ್‌ಕೆ ವಿರುದ್ಧ ಗೆಲ್ಲಲೇಬೇಕಿದೆ. ಇದರೊಂದಿಗೆ ಬೇರೆ ತಂಡಗಳ ಸೋಲು-ಗೆಲುವು, ರನ್‌ರೇಟ್‌ ಲೆಕ್ಕಾಚಾರವೂ ನಿರ್ಣಾಯಕವಾಗಲಿದೆ.

VISTARANEWS.COM


on

IPL 2024
Koo

ಚೆನ್ನೈ: ಪ್ರಸಕ್ತ ಐಪಿಎಲ್‌ ಟೂರ್ನಿಯ (IPL 2024) ಮಹತ್ವದ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್‌ (Rajasthan Royals) ವಿರುದ್ಧ ಚೆನ್ನೈ ಸೂಪರ್‌ ಕಿಂಗ್ಸ್‌ 5 ವಿಕೆಟ್‌ಗಳ ಅಂತರಿಂದ ಭರ್ಜರಿಯಾಗಿ ಗೆಲುವು ಸಾಧಿಸುವ ಮೂಲಕ ಪ್ಲೇಆಫ್‌ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ. ಸಿಎಸ್‌ಕೆ ಗೆಲುವಿನೊಂದಿಗೆ ಆರ್‌ಸಿಬಿ (RCB) ಮತ್ತಷ್ಟು ಒತ್ತಡಕ್ಕೆ ಸಿಲುಕಿದ್ದು, ಭಾನುವಾರವೇ (ಮೇ 12) ನಡೆಯಲಿರುವ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ಗೆಲ್ಲುವ ಜತೆಗೆ ಕೊನೆಯ ಪಂದ್ಯವನ್ನು ಸಿಎಸ್‌ಕೆ ವಿರುದ್ಧ ಗೆಲ್ಲಲೇಬೇಕಿದೆ. ಇದರೊಂದಿಗೆ ಬೇರೆ ತಂಡಗಳ ಸೋಲು-ಗೆಲುವು, ರನ್‌ರೇಟ್‌ ಲೆಕ್ಕಾಚಾರವೂ ನಿರ್ಣಾಯಕವಾಗಲಿದೆ.

ರಾಜಸ್ಥಾನ ಸಾಧಾರಣ ಮೊತ್ತ

ಟೂರ್ನಿಯುದ್ದಕ್ಕೂ ಅತ್ಯುತ್ತಮ ಆಟವಾಡಿರುವ ರಾಜಸ್ಥಾನ ರಾಯಲ್ಸ್‌ ತಂಡವು ಸಿಎಸ್‌ಕೆ ವಿರುದ್ಧ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡು ಸಾಧಾರಣ ಮೊತ್ತ ಪೇರಿಸಿತು. ನಿಗದಿತ 20 ಓವರ್‌ಗಳಲ್ಲಿ ಆರ್‌ಆರ್‌ 5 ವಿಕೆಟ್‌ ಕಳೆದುಕೊಂಡು ಕೇವಲ 141 ರನ್‌ ಗಳಿಸಲಷ್ಟೇ ಶಕ್ತವಾಯಿತು. ರಿಯಾನ್‌ ಪರಾಗ್‌ 47 ಹಾಗೂ ಧ್ರುವ್‌ ಜುರೆಲ್‌ 28 ಹೊರತುಪಡಿಸಿ ಯಾವೊಬ್ಬ ಆಟಗಾರನೂ ಸ್ಫೋಟಕ ಬ್ಯಾಟಿಂಗ್‌ ನಡೆಸದ ಕಾರಣ ಸಾಧಾರಣ ಮೊತ್ತ ದಾಖಲಾಯಿತು. ಈ ಗುರಿಯನ್ನು ಬೆನ್ನತ್ತಿದ ಸಿಎಸ್‌ಕೆ 16 ಓವರ್‌ಗಳಲ್ಲಿ 5 ವಿಕೆಟ್‌ ಕಳೆದುಕೊಂಡು ಗುರಿ ಮುಟ್ಟಿತು.

ಸಿಎಸ್‌ಕೆ ಪರ ಉತ್ತಮವಾಗಿ ಆಡಲು ರಚಿನ್‌ ರವೀಂದ್ರ ಮತ್ತೆ ವಿಫಲರಾದರು. ರಚಿನ್‌ ರವೀಂದ್ರ 27 ರನ್‌ ಗಳಿಸಿ ವಿಕೆಟ್‌ ಒಪ್ಪಿಸಿದರೆ, ಡೆರಿಲ್ ಮಿಚೆಲ್‌ 22, ಮೋಯಿನ್‌ ಅಲಿ 10, ಶಿವಂ ದುಬೆ 18 ರನ್‌ ಗಳಿಸಿದರು. ನಾಯಕನ ಆಟವಾಡಿದ ಋತುರಾಜ್‌ ಗಾಯಕ್ವಾಡ್‌ 42 ರನ್‌ ಬಾರಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು. ಇದರೊಂದಿಗೆ ಆಡಿದ 13 ಪಂದ್ಯಗಳಲ್ಲಿ 7 ಪಂದ್ಯ ಗೆದ್ದು 14 ಅಂಕ ಗಳಿಸಿದ ಸಿಎಸ್‌ಕೆ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರುವ ಜತೆಗೆ ಪ್ಲೇಆಫ್‌ ಕನಸಿಗೆ ಹತ್ತಿರವಾಯಿತು. ಮೇ 18ರಂದು ಸಿಎಸ್‌ಕೆ ಆರ್‌ಸಿಬಿ ವಿರುದ್ಧ ಆಡಲಿದ್ದು, ಗೆಲುವು ಸಾಧಿಸಿದರೆ ಪ್ಲೇಆಫ್‌ಗೆ ಹೋಗುವ ಸಾಧ್ಯತೆ ಹೆಚ್ಚಿದೆ. ಆರ್‌ಸಿಬಿ ವಿರುದ್ಧ ಸೋಲನುಭವಿಸಿದರೆ ರನ್‌ರೇಟ್‌ ಲೆಕ್ಕಾಚಾರ ಆಧಾರವಾಗಲಿದೆ.

ಸಂಕ್ಷಿಪ್ತ ಸ್ಕೋರ್‌

ರಾಜಸ್ಥಾನ ರಾಯಲ್ಸ್‌ 20 ಓವರ್‌ಗಳಲ್ಲಿ 141/5
(ರಿಯಾನ್‌ ಪರಾಗ್‌ 47, ಧ್ರುವ್‌ ಜುರೆಲ್‌ 28, ಸಮರ್‌ಜೀತ್‌ ಸಿಂಗ್‌ 26ಕ್ಕೆ 3)

ಸಿಎಸ್‌ಕೆ 18.2 ಓವರ್‌ಗಳಲ್ಲಿ 145/5
(ಋತುರಾಜ್‌ ಗಾಯಕ್ವಾಡ್‌ 42, ರಚಿನ್‌ ರವೀಂದ್ರ 27, ಆರ್.ಅಶ್ವಿನ್‌ 35/2)

ಇದನ್ನೂ ಓದಿ: IPL 2024 : ಮುಂಬೈ ವಿರುದ್ಧ 18 ರನ್ ಜಯ, ಪ್ಲೇಆಫ್​ ಪ್ರವೇಶಿಸಿದ ಕೆಕೆಆರ್​ ತಂಡ

Continue Reading

ಕ್ರಿಕೆಟ್

Queen’s Premier League: ಕಿರುತೆರೆ ,ಹಿರಿತೆರೆ ಹೆಣ್ಮಕ್ಕಳಿಗಾಗಿ ಶುರುವಾಯ್ತು ಕ್ವೀನ್ಸ್‌ ಪ್ರೀಮಿಯರ್ ಲೀಗ್!

Queen’s Premier League: ಈ‌ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕನ್ನಡ ಸಿನಿಮಾ, ಸೀರಿಯಲ್, ಆಂಕರ್ಸ್, ಮಾಡೆಲ್ ಭಾಗವಹಿಸಲು ವೇದಿಕೆ‌ ಕಲ್ಪಿಸಿಕೊಡಲಾಗಿದೆ. ಅದರ ಭಾಗವಾಗಿ QPLನ ಲೋಗೋ ಬಿಡುಗಡೆ ಕಾರ್ಯಕ್ರಮ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಕರವೇ ಅಧ್ಯಕ್ಷ ನಾರಾಯಣ ಗೌಡ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎಂಎನ್ ಸುರೇಶ್, ಉದ್ಯಮಿ ಪೂರ್ವಂಕರ್ ಸಿಇಒ ಮಲ್ಲಣ್ಣ, ಅಂತಾರಾಷ್ಟ್ರೀಯ ಕ್ರೀಡಾಪಟು ವೃಂದಾ ದಿನೇಶ್, ಮಹಿಳಾ ಕ್ರಿಕೆಟರ್ ಗಳಾದ ಪುಷ್ಪ ಕುಮಾರಿ, ಪ್ರತ್ಯುಷ್ಯ ಸೇರಿದಂತೆ ಇತರರು ಉಪಸ್ಥಿತರಿದ್ದರು.

VISTARANEWS.COM


on

Queen's Premier League start
Koo

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಹಲವಾರು ಕ್ರಿಕೆಟ್ ಪಂದ್ಯಾವಳಿಗಳಿವೆ. ಸಿಸಿಎಲ್, ಕೆಸಿಸಿ, ಟಿಪಿಎಲ್ ಸೇರಿದಂತೆ ಹತ್ತಕ್ಕೂ ಹೆಚ್ಚು ಕ್ರಿಕೆಟ್ ಟೂರ್ನಮೆಂಟ್ ಗಳಿವೆ. ಆದರೆ ಕಿರುತೆರೆ ಹಾಗೂ ಹಿರಿತೆರೆ ಮಹಿಳೆಯರಿಗಾಗಿ ಯಾವುದೇ ಕ್ರಿಕೆಟ್ ಪಂದ್ಯಾವಳಿಗಳಿಲ್ಲ. ಹೀಗಾಗಿ ಕ್ರಿಯೇಟಿವ್ ಫ್ರೆಂಡ್ಸ್ ಕಂಪನಿ ʻಕ್ವೀನ್ಸ್‌ ಪ್ರೀಮಿಯರ್ ಲೀಗ್ʼ (Queen’s Premier League) ಎಂಬ ಹೊಸ ಪರಿಕಲ್ಪನೆಯನ್ನು ಪರಿಚಯಿಸಿದೆ.

ಈ‌ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕನ್ನಡ ಸಿನಿಮಾ, ಸೀರಿಯಲ್, ಆಂಕರ್ಸ್, ಮಾಡೆಲ್ ಭಾಗವಹಿಸಲು ವೇದಿಕೆ‌ ಕಲ್ಪಿಸಿಕೊಡಲಾಗಿದೆ. ಅದರ ಭಾಗವಾಗಿ QPLನ ಲೋಗೋ ಬಿಡುಗಡೆ ಕಾರ್ಯಕ್ರಮ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಕರವೇ ಅಧ್ಯಕ್ಷ ನಾರಾಯಣ ಗೌಡ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎಂಎನ್ ಸುರೇಶ್, ಉದ್ಯಮಿ ಪೂರ್ವಂಕರ್ ಸಿಇಒ ಮಲ್ಲಣ್ಣ, ಅಂತಾರಾಷ್ಟ್ರೀಯ ಕ್ರೀಡಾಪಟು ವೃಂದಾ ದಿನೇಶ್, ಮಹಿಳಾ ಕ್ರಿಕೆಟರ್ ಗಳಾದ ಪುಷ್ಪ ಕುಮಾರಿ, ಪ್ರತ್ಯುಷ್ಯ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಲೋಗೊ ಬಿಡುಗಡೆ ಮಾಡಿದ ಪುಷ್ಪಕುಮಾರಿ, ʻʻಕ್ರಿಕೆಟ್ ಹುಡುಗರಿಗೆ ಮಾತ್ರ ಎನ್ನುವ ಕಾಲವಿತ್ತು. ಆದರೆ ನಾವು ಅಂದು ಛಲ ಬಿಡದೆ ಆಡಿದ್ದೇವೆ. ಮಹಿಳೆಯರಿಗಾಗಿ ಈ ರೀತಿ ಕ್ರಿಕೆಟ್ ಪಂದ್ಯಾವಳಿ ನಡೆಸುತ್ತಿರುವುದು ಖುಷಿʼʼ ಎಂದರು.

ಇದನ್ನೂ ಓದಿ: Dolly Dhananjay:  ಡಾಲಿ ಅಭಿನಯದ ʻಕೋಟಿʼ ಸಿನಿಮಾದ ಮೊದಲ ಹಾಡು ನಾಳೆ ಬಿಡುಗಡೆ

ನಟ ಹಾಗೂ QPL ಮೆಂಟರ್ ಆಗಿರುವ ಪ್ರಮೋದ್ ಶೆಟ್ಟಿ ಮಾತನಾಡಿ, ʻʻಜೂನ್ ತಿಂಗಳಲ್ಲಿ QPL ಪಂದ್ಯಾವಳಿ ನಡೆಸಲು ಯೋಜನೆ ಹಾಕಿಕೊಂಡಿದ್ದೇವೆ. ಕಲಾವಿದರ ಜತೆಗೆ ಆಂಕರ್ಸ್, ಮಾಡೆಲ್‌ಗೆ ಇಲ್ಲಿ ಕ್ರಿಕೆಟ್ ಆಡಲು ಅವಕಾಶವಿದೆ. ಇವರನ್ನು ನೋಡಿಕೊಂಡು ಹೊಸ ಜನರೇಷನ್ ಕ್ರಿಕೆಟ್ ಆಡಲು ಪ್ರೇರಣೆಯಾಗಲಿ. ಈ ಪಂದ್ಯಾವಳಿ ನಾವು ಮಾಡುತ್ತಿಲ್ಲ.‌ಇದರಿಂದ ಬಂದ ದುಡ್ಡನ್ನು ನನ್ನ ತಂಡ ರಂಗಸೌರಭಕ್ಕೆ‌ ಮೀಸಲು ಇಡಲಾಗುತ್ತದೆ. ಶಾಲಾ ಕಾಲೇಜು ಮಟ್ಟದಿಂದಲೇ ಹಲವು ಪ್ರತಿಭೆಗಳನ್ನು ರಂಗಭೂಮಿಗೆ ಕರೆತಂದು ನಟನೆಯನ್ನು ಕಲಿಸುವ ಕೆಲಸವನ್ನು ರಂಗಸೌರಭ ಮಾಡುತ್ತಿದೆ. ಹೀಗಾಗಿ QPL ನಿಂದ ಬಂದ ಲಾಭವನ್ನು ಇಲ್ಲಿಗೆ ನೀಡಲಾಗುತ್ತದೆ. ಈ ಪಂದ್ಯಾವಳಿ ಯಶಸ್ವಿಯಾಗಲು ಹೆಚ್ಚು ನಟಿಮಣಿರು ಹೆಚ್ಚಾಗಿ ಕೈ ಜೋಡಿಸಬೇಕುʼʼ ಎಂದರು.

ನಟಿ ಭವ್ಯಾ ಗೌಡ ಮಾತನಾಡಿ, ʻʻಈ ಕಾನ್ಸೆಪ್ಟ್ ನನ್ನ ಮೈಂಡ್ ನಲ್ಲಿ ತುಂಬಾ ತಿಂಗಳಿನಿಂದ ಇತ್ತು. ಆರ್ ಸಿಬಿ ಹುಡುಗಿರು ಯಾವಾಗ ಕಪ್ ಎತ್ತಿದರೋ ಆಗ ನಮ್ಮ ಜೋಶ್ ಜಾಸ್ತಿಯಾಯ್ತು. ಹೆಣ್ಮಕ್ಕಳು ಯಾವುದಕ್ಕೂ ಕಮ್ಮಿ ಇಲ್ಲ ಅನ್ನೋದನ್ನು ತೋರಿಸಲು ಶುರು ಮಾಡಿದ್ದೇವೆ. ಈ ಕ್ರಿಕೆಟ್ ಪಂದ್ಯಾವಳಿಯನ್ನೂ ಒಂದೊಳ್ಳೆ ಉದ್ದೇಶ ಇಟ್ಟಿಕೊಂಡು ಮಾಡುತ್ತಿದ್ದೇವೆ. ಹೆಣ್ಮಕ್ಕಳಿಗೆ ಬ್ಯಾಟು ಬಾಲ್ ಹಿಡಿದು ಫೀಲ್ಡ್ ಗೆ ಇಳಿಯುತ್ತಿದ್ದೇವೆ. ಗಂಡು ಮಕ್ಕಳು ಚಿಯರ್ ಅಪ್ ಮಾಡಲು ರೆಡಿಯಾಗಿʼʼ ಎಂದರು.

ಕನ್ನಡ ಸಿನಿಮಾ ಪ್ರೇಮಿಗಳನ್ನು ರಂಜಿಸುವ ಕ್ವೀನ್ಸ್ ಗಳ ಮನರಂಜನೆಗಾಗಿ ಹಾಗೂ ಒಂದೊಳ್ಳೆ ಉದ್ದೇಶ ಇಟ್ಟುಕೊಂಡು ಈ ಪಂದ್ಯಾವಳಿ ನಡೆಸಲಾಗುತ್ತಿದೆ. ರಂಗಪ್ರತಿಭೆಗಳನ್ನು ಸಜ್ಜುಗೊಳಿಸುವ ರಂಗಸೌರಭಕ್ಕೆ QPL ಲಾಭವನ್ನು ನೀಡಲಾಗುತ್ತದೆ.

ʻಕ್ವೀನ್ಸ್‌ ಪ್ರೀಮಿಯರ್ ಲೀಗ್ʼ ಆಯೋಜಕರ ಬಳಗದಲ್ಲಿ ಮಹೇಶ್ ಕುಮಾರ್, ಪ್ರಮೋದ್ ಶೆಟ್ಟಿ, ಭವ್ಯ ಗೌಡ, ಸಾತ್ವಿಕ್, ಸಂತೋಷ್, ಚೇತನ್, ಸಚಿನ್ ಹಾಗೂ ಪ್ರೇಮ್ ಇದ್ದಾರೆ. ಸದ್ಯ QPL ಲೋಗೋ ಲಾಂಚ್ ಕಾರ್ಯಕ್ರಮ ನಡೆದಿದ್ದು, ಮುಂದಿನ ದಿನಗಳಲ್ಲಿ auction, ಜೆರ್ಸಿ ಲಾಂಚ್, ಟ್ರೋಫಿ ಬಿಡುಗಡೆ ಮಾಡಲಾಗುತ್ತದೆ.

Continue Reading

ಕ್ರಿಕೆಟ್

IPL 2024: ಬೆಂಗಳೂರಲ್ಲಿಂದು ಆರ್‌ಸಿಬಿ, ಡೆಲ್ಲಿ ನಿರ್ಣಾಯಕ ಪಂದ್ಯ; ಮಳೆ ಅಡ್ಡಿ ಆಗತ್ತಾ ? ಇಲ್ಲಿದೆ ರಿಪೋರ್ಟ್

IPL 2024: ಆಡಿದ 12 ಪಂದ್ಯಗಳಲ್ಲಿ 5 ಪಂದ್ಯ ಗೆದ್ದು ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿರುವ ಆರ್‌ಸಿಬಿಯು ಪ್ಲೇಆಫ್‌ ತಲುಪಲು ಭಾನುವಾರ ನಡೆಯುವ ಪಂದ್ಯದಲ್ಲಿ ಗೆಲುವು ಸಾಧಿಸಲೇಬೇಕಿದೆ. ಗೆಲುವು ಸಾಧಿಸದಿದ್ದರೆ, ಟೂರ್ನಿಯಿಂದಲೇ ಆರ್‌ಸಿಬಿ ಹೊರಬೀಳಲಿದೆ. ಹಾಗಾಗಿ, ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧದ ಪಂದ್ಯವು ಆರ್‌ಸಿಬಿಗೆ ನಿರ್ಣಾಯಕ ಎನಿಸಿದೆ.

VISTARANEWS.COM


on

IPL 2024
Koo

ಬೆಂಗಳೂರು: ಪ್ರಸಕ್ತ ಆವೃತ್ತಿಯ ಐಪಿಎಲ್‌ ಟೂರ್ನಿಯು (IPL 2024) ದಿನೇದಿನೆ ಹೆಚ್ಚು ರೋಚಕವಾಗುತ್ತಿದೆ. ಪ್ಲೇ ಆಫ್‌, ರನ್‌ರೇಟ್‌, ಎದುರಾಳಿ ತಂಡದ ಸೋಲು-ಗೆಲುವಿನ ಲೆಕ್ಕಾಚಾರ ಜೋರಾಗಿದೆ. ಅದರಲ್ಲೂ, ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿರುವ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡವು ಪ್ಲೇಆಫ್‌ಗೇರಲು ಭಾನುವಾರ ಅಗ್ನಿಪರೀಕ್ಷೆ ಎದುರಿಸುತ್ತಿದೆ. ಇಂದು ಬೆಂಗಳೂರಿನ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್‌ಸಿಬಿ ಹಾಗೂ ಡೆಲ್ಲಿ ಕ್ಯಾಪಿಟಲ್ಸ್‌ (Delhi Capitals) ಮಧ್ಯೆ ನಿರ್ಣಾಯಕ ಪಂದ್ಯ ನಡೆಯಲಿದ್ದು, ಪ್ಲೇಆಫ್‌ಗೇರಲು ಉಭಯ ತಂಡಗಳಿಗೂ ಗೆಲುವು ಅನಿವಾರ್ಯವಾಗಿದೆ. ಇನ್ನು, ಆರ್‌ಸಿಬಿ, ಡೆಲ್ಲಿ ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆ ಇದೆ.

ವೆದರ್‌ ರಿಪೋರ್ಟ್‌ ಹೇಳುವುದೇನು?

ಅಕ್ಯುವೆದರ್‌ (Accuweather) ವರದಿ ಪ್ರಕಾರ, ಬೆಂಗಳೂರಿನಲ್ಲಿ ಭಾನುವಾರ ಸಂಜೆ ಮೋಡಿ ಕವಿದ ವಾತಾವರಣ ಇರಲಿದೆ ಎಂದು ತಿಳಿದುಬಂದಿದೆ. ಮಳೆ ಬರುವ ಸಾಧ್ಯತೆ ಕಡಿಮೆ ಇದೆ ಎಂದು ವರದಿ ತಿಳಿಸಿದೆ. ಮಳೆ ಬರುವ ಸಾಧ್ಯತೆ ಶೇ.50-60ರಷ್ಟು ಕಡಿಮೆ ಇದೆ. ಇನ್ನು, ತಾಪಮಾನ 30 ಡಿಗ್ರಿ ಸೆಲ್ಸಿಯಸ್‌ ಇರಲಿದ್ದು, ಗಂಟೆಗೆ 13 ಕಿಲೋಮೀಟರ್‌ ವೇಗದಲ್ಲಿ ಗಾಳಿ ಬೀಸಲಿದೆ ಎಂದು ತಿಳಿಸಿದೆ. ರಾಜ್ಯ ರಾಜಧಾನಿಯಲ್ಲಿ ಭಾನುವಾರ ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣ ಇದ್ದು, ಸಂಜೆ ಮಳೆ ಬಂದರೂ ಅಚ್ಚರಿ ಇಲ್ಲ ಎಂದು ಹೇಳಲಾಗುತ್ತಿದೆ.

ಹೇಗಿದೆ ಪಿಚ್?‌

ಚಿಕ್ಕದಾದ ಬೌಂಡರಿ ಲೈನ್, ಫ್ಲ್ಯಾಟ್‌ ಪಿಚ್‌ ಇರುವ ಕಾರಣ ಎಂ.ಚಿನ್ನಸ್ವಾಮಿ ಸ್ಟೇಡಿಯಂ ಬ್ಯಾಟರ್‌ಗಳ ಸ್ವರ್ಗ ಎಂದೇ ಹೇಳಲಾಗುತ್ತದೆ. ಹಾಗಾಗಿ, ಆರ್‌ಸಿಬಿ ಹಾಗೂ ಡೆಲ್ಲಿ ಪಂದ್ಯದಲ್ಲೂ ರನ್‌ ಮಳೆ ಸುರಿಯುವ ಸಾಧ್ಯತೆ ಇದೆ. ಪಿಚ್‌ ಸ್ಪಿನ್ನರ್‌ಗಳಿಗಿಂತ ಪೇಸರ್‌ಗಳಿಗೆ ಹೆಚ್ಚು ಅನುಕೂಲವಾಗಿದೆ. ಇನ್ನು ಕಳೆದ ಪಂದ್ಯದಲ್ಲಿ ಇದೇ ಮೈದಾನದಲ್ಲಿ ಆರ್‌ಸಿಬಿಯು ಗುಜರಾತ್‌ ಟೈಟನ್ಸ್‌ ವಿರುದ್ಧ ಭರ್ಜರಿ ಜಯ ಗಳಿಸಿರುವುದು ಆತ್ಮವಿಶ್ವಾಸ ಹೆಚ್ಚಿಸಿದೆ. ಅತ್ತ, ಆರ್‌ಸಿಬಿಯನ್ನು ತವರಿನಲ್ಲೇ ಮಣಿಸುವ ಮೂಲಕ ಪ್ಲೇಆಫ್‌ ಹಾದಿ ಸುಗಮ ಮಾಡಿಕೊಳ್ಳುವ ಯೋಜನೆಯನ್ನು ಡೆಲ್ಲಿ ಕ್ಯಾಪಿಟಲ್ಸ್‌ ಹಾಕಿಕೊಂಡಿದೆ. ಸಂಜೆ 7.30ಕ್ಕೆ ಪಂದ್ಯ ಆರಂಭವಾಗಲಿದೆ.

ಆರ್‌ಸಿಬಿಗೆ ಮಾಡು ಇಲ್ಲವೇ ಮಡಿ ಪಂದ್ಯ

ಆಡಿದ 12 ಪಂದ್ಯಗಳಲ್ಲಿ 5 ಪಂದ್ಯ ಗೆದ್ದು ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿರುವ ಆರ್‌ಸಿಬಿಯು ಪ್ಲೇಆಫ್‌ ತಲುಪಲು ಭಾನುವಾರ ನಡೆಯುವ ಪಂದ್ಯದಲ್ಲಿ ಗೆಲುವು ಸಾಧಿಸಲೇಬೇಕಿದೆ. ಗೆಲುವು ಸಾಧಿಸದಿದ್ದರೆ, ಟೂರ್ನಿಯಿಂದಲೇ ಆರ್‌ಸಿಬಿ ಹೊರಬೀಳಲಿದೆ. ಡೆಲ್ಲಿ ವಿರುದ್ಧ ಗೆದ್ದು, ಉಳಿದ ತಂಡಗಳ ಸೋಲು-ಗೆಲುವು, ರನ್‌ರೇಟ್‌ ಲೆಕ್ಕಾಚಾರದಲ್ಲಿರುವ ಆರ್‌ಸಿಬಿಯು ಕಳೆದ ನಾಲ್ಕು ಪಂದ್ಯಗಳಲ್ಲಿ ಸತತವಾಗಿ ಕಂಡಿರುವ ಗೆಲುವು, ತವರಿನ ಅಭಿಮಾನಿಗಳ ಬಲದೊಂದಿಗೆ ಕಣಕ್ಕಿಳಿಯುತ್ತಿದೆ. ಭಾನುವಾರ ಮಧ್ಯಾಹ್ನ ರಾಜಸ್ಥಾನ ರಾಯಲ್ಸ್‌ ಹಾಗೂ ಸಿಎಸ್‌ಕೆ ಪಂದ್ಯ ನಡೆಯಲಿದ್ದು, ಸಿಎಸ್‌ಕೆ ಸೋಲಿಗಾಗಿ ಆರ್‌ಸಿಬಿ ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.

ಇದನ್ನೂ ಓದಿ: IPL 2024 : ಮುಂಬೈ ವಿರುದ್ಧ 18 ರನ್ ಜಯ, ಪ್ಲೇಆಫ್​ ಪ್ರವೇಶಿಸಿದ ಕೆಕೆಆರ್​ ತಂಡ

Continue Reading
Advertisement
IPL 2024
ಕ್ರೀಡೆ5 mins ago

IPL 2024 : ಕೆಕೆಆರ್ ತಂಡದ ಇನ್ನೊಬ್ಬ ಆಟಗಾರನಿಗೆ ದಂಡ ವಿಧಿಸಿದ ಬಿಸಿಸಿಐ

Prajwal Revanna Case Basavaraj Bommai says DK Shivakumar should be questioned
ಕರ್ನಾಟಕ7 mins ago

Prajwal Revanna Case: ದಿಕ್ಕು ತಪ್ಪಿದೆ ಪ್ರಜ್ವಲ್ ರೇವಣ್ಣ ಕೇಸ್‌; ಡಿಕೆಶಿ ವಿಚಾರಣೆಯೂ ಆಗಲಿ ಎಂದ ಬಸವರಾಜ ಬೊಮ್ಮಾಯಿ

Bomb Threat
ದೇಶ25 mins ago

Bomb Threat:  ಏರ್​ಪೋರ್ಟ್​ ಸೇರಿ ದೆಹಲಿಯ ಹತ್ತಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ

BDA Complex
ಕರ್ನಾಟಕ36 mins ago

BDA Complex: ವಿರೋಧದ ನಡುವೆ ಖಾಸಗಿ ಕಂಪನಿ ತೆಕ್ಕೆಗೆ 7 ಬಿಡಿಎ ಕಾಂಪ್ಲೆಕ್ಸ್; ಆದಾಯದಲ್ಲಿ 70:30 ಪಾಲು

IPL 2024
ಐಪಿಎಲ್ 20241 hour ago

IPL 2024: ರಾಜಸ್ಥಾನ ವಿರುದ್ಧ ಗೆದ್ದು ಬೀಗಿದ ಚೆನ್ನೈ; ಪ್ಲೇಆಫ್‌ ಆಸೆ ಜೀವಂತ, ಆರ್‌ಸಿಬಿಗೆ ಹೆಚ್ಚಿದ ಒತ್ತಡ

French Yoga Teacher
ಮಹಿಳೆ2 hours ago

French Yoga Teacher: ಹಸಿರು ಸೀರೆ ಧರಿಸಿ ಪದ್ಮಶ್ರೀ ಸ್ವೀಕರಿಸಿದ 101 ವರ್ಷದ ವಿದೇಶಿ ಯೋಗ ಶಿಕ್ಷಕಿ!

Vande Bharat Express
ದೇಶ2 hours ago

Vande Bharat Express: ಎರ್ನಾಕುಲಂ-ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಶೀಘ್ರ ಪ್ರಾರಂಭ

ಕರ್ನಾಟಕ2 hours ago

Vijayapura News: ಮೀನುಗಳ ಮಾರಣ ಹೋಮ; ಬಿಸಿಲ ತಾಪಕ್ಕೆ 17 ಸಾವಿರ ಮತ್ಸ್ಯಗಳ ಸಾವು

Prajwal Revanna Case I was never kidnapped and son has made a false complaint Video of victim goes viral
ಕ್ರೈಂ2 hours ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

Adhir Ranjan
ದೇಶ2 hours ago

Adhir Ranjan: ಅಂಬಾನಿ ದುಡ್ಡು ಕೊಟ್ಟರೆ ನಾವೂ ಸುಮ್ಮನಾಗುತ್ತೇವೆ ಎಂದ ಕಾಂಗ್ರೆಸ್‌ ನಾಯಕ; ವಿಡಿಯೊ ವೈರಲ್

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case I was never kidnapped and son has made a false complaint Video of victim goes viral
ಕ್ರೈಂ2 hours ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

Karnataka Weather Forecast Heavy rain in chikkmagalur
ಮಳೆ2 hours ago

Karnataka Weather : ಚಿಕ್ಕಮಗಳೂರಲ್ಲಿ ಅಬ್ಬರಿಸುತ್ತಿರುವ ಮಳೆ; ಬೃಹತ್‌ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

Prajwal Revanna Case Naveen Gowda post against MLA A Manju
ರಾಜಕೀಯ3 hours ago

Prajwal Revanna Case: ಪ್ರಜ್ವಲ್‌ ಪೆನ್‌ಡ್ರೈವ್‌ ವಿಡಿಯೊ ವೈರಲ್‌ಗೆ ಟ್ವಿಸ್ಟ್‌; ಶಾಸಕ ಎ. ಮಂಜು ವಿರುದ್ಧ ನವೀನ್‌ ಗೌಡ ಪೋಸ್ಟ್‌!

Prajwal Revanna Case: Beware of making a statement Parameshwara warns to HD Kumaraswamy
ಕ್ರೈಂ6 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಕೇಸ್‌; ನಿಮ್ಮನ್ನೂ ವಿಚಾರಣೆಗೆ ಕರೆಯಬೇಕಾಗುತ್ತದೆ: ಎಚ್‌ಡಿಕೆಗೆ ಪರಮೇಶ್ವರ್‌ ವಾರ್ನಿಂಗ್‌!

Prajwal Revanna Case Two people of pen drive allottees arrested
ಕ್ರೈಂ8 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಕೇಸ್‌; ಇಬ್ಬರು ಪೆನ್‌ಡ್ರೈವ್‌ ಹಂಚಿಕೆದಾರರ ಅರೆಸ್ಟ್‌

Dina Bhavishya
ಭವಿಷ್ಯ15 hours ago

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

Bengaluru News
ಬೆಂಗಳೂರು1 day ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Dina Bhavishya
ಭವಿಷ್ಯ2 days ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ2 days ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ2 days ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

ಟ್ರೆಂಡಿಂಗ್‌