Amit Shah: ಜೆಡಿಎಸ್‌-ಕಾಂಗ್ರೆಸ್‌ ಭದ್ರಕೋಟೆಯಲ್ಲಿಂದು ಅಮಿತ್‌ ಶಾ ಪ್ರವಾಸ: ಮೈಸೂರು-ಹಾಸನದಲ್ಲಿ ಭರ್ಜರಿ ಪ್ರಚಾರ - Vistara News

ಕರ್ನಾಟಕ

Amit Shah: ಜೆಡಿಎಸ್‌-ಕಾಂಗ್ರೆಸ್‌ ಭದ್ರಕೋಟೆಯಲ್ಲಿಂದು ಅಮಿತ್‌ ಶಾ ಪ್ರವಾಸ: ಮೈಸೂರು-ಹಾಸನದಲ್ಲಿ ಭರ್ಜರಿ ಪ್ರಚಾರ

ಭಾನುವಾರ ರಾತ್ರಿಯೇ ಬೆಂಗಳೂರಿಗೆ ಆಗಮಿಸಿ ವಾಸ್ತವ್ಯ ಹೂಡಿದ್ದ ಅಮಿತ್‌ ಶಾ (Amit Shah) ಸೋಮವಾರ ಬೆಳಗ್ಗೆ‌ ಹೊರಟು ಮೈಸೂರು ತಲುಪಿದ್ದಾರೆ.

VISTARANEWS.COM


on

Amit shah
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕೇಂದ್ರ ಗೃಹಸಚಿವ ಹಾಗೂ ಚುನಾವಣಾ ಚಾಣಕ್ಯ ಅಮಿತ್‌ ಶಾ (Amit Shah) ಜೆಡಿಎಸ್‌ ಭದ್ರಕೋಟೆಯಲ್ಲಿ ಸೋಮವಾರ ಪ್ರವಾಸ ನಡೆಸಲಿದ್ದಾರೆ. ಹಳೆ ಮೈಸೂರು ಭಾಗದ ಮೇಲೆ ಹೆಚ್ಚಿನ ಗಮನ ನೀಡುತ್ತಿರುವ ಅಮಿತ್‌ ಶಾ, ಮೈಸೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ರೋಡ್‌ ಶೋ ನಡೆಸಲಿದ್ದಾರೆ.

ಭಾನುವಾರ ರಾತ್ರಿಯೇ ಬೆಂಗಳೂರಿಗೆ ಆಗಮಿಸಿ ವಾಸ್ತವ್ಯ ಹೂಡಿದ್ದ ಅಮಿತ್‌ ಶಾ (Amit Shah) ಸೋಮವಾರ ಬೆಳಗ್ಗೆ‌ ಹೊರಟು ಮೈಸೂರು ತಲುಪಿದ್ದಾರೆ. ವಿಶೇಷ ವಿಮಾನದ ಮೂಲಕ ಮೈಸೂರಿಗೆ ಆಗಮಿಸಿದ ಶಾ ಅವರನ್ನು ಸಂಸದ ಪ್ರತಾಪ್ ಸಿಂಹ, ಮೇಯರ್ ಶಿವಕುಮಾರ್, ಉಪ‌ಮೇಯರ್ ರೂಪಾ, ಶಾಸಕ ಎಸ್‌.ಎ. ರಾಮದಾಸ್, ಚುನಾವಣಾ ಉಸ್ತುವಾರಿ ವಿ. ರವಿಶಂಕರ್, ಕೆ.ಆರ್ .ಕ್ಷೇತ್ರದ ಚುನಾವಣಾ ಉಸ್ತುವಾರಿ ರಾಜೀವ್ ಬಬ್ಬರ್ ಸೇರಿ 14 ಜನರ ತಂಡದಿಂದ ಸ್ವಾಗತ ಕೋರಲಾಯಿತು.

ಅಮಿತ್ ಶಾ ಕಾರ್ಯಕ್ರಮಗಳು

11.00ಕ್ಕೆ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮನ
11.20ಕ್ಕೆ ರಸ್ತೆ ಮೂಲಕ ಚಾಮಂಡಿ ಬೆಟ್ಟಕ್ಕೆ ಆಗಮನ
11.20 ರಿಂದ 11.50ರ ವರೆಗೆ ಚಾಮುಂಡೇಶ್ವರಿಗೆ ಪೂಜೆ
11.55ಕ್ಕೆ ಚಾಮುಂಡೇಶ್ವರಿ ದೇವಸ್ಥಾನದಿಂದ ಪ್ರಯಾಣ
12.10ಕ್ಕೆ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮನ
12.15ಕ್ಕೆ ಮೈಸೂರು ವಿಮಾನ ನಿಲ್ದಾಣದಿಂದ ಪ್ರಯಾಣ.
12.45ಕ್ಕೆ ಗುಂಡ್ಲುಪೇಟೆ ಹೆಲಿಪ್ಯಾಡ್ ಗೆ ಆಗಮನ
12.50ರಿಂದ 1.50ರ ವರೆಗೆ ರೋಡ್ ಶೋನಲ್ಲಿ ಭಾಗಿ
1.55ಕ್ಕೆ ಕಾರಿನ ಮೂಲಕ ಗುಂಡ್ಲುಪೇಟೆ ಹೆಲಿಪ್ಯಾಡ್ ಗೆ ಪ್ರಯಾಣ
ಮಧ್ಯಾಹ್ನ 2.00ಗಂಟೆಗೆ ಗುಂಡ್ಲುಪೇಟೆಯಿಂದ ಹೆಲಿಕಾಪ್ಟರ್ ನಲಿ ಪ್ರಯಾಣ
3 ಗಂಟೆಗೆ ಸಕಲೇಶಪುರದ ಆಲೂರು ಹೆಲಿಪ್ಯಾಡ್ ಗೆ ಆಗಮನ
3.5ಕ್ಕೆ ರಸ್ತೆ ಮೂಲಕ ಆಲೂರಿಗರ ಆಗಮನ
3.10 ರಿಂದ 4ಗಂಟೆ ವರೆಗೆ ಆಲೂರಿನ ರೋಡ್ ಶೋನಲ್ಲಿ ಭಾಗಿ
4.5ಕ್ಕೆ ಅಲ್ಲಿಂದ ರಸ್ತೆ ಮೂಲಕ ಆಲೂರಿನ ಹೆಲಿಪ್ಯಾಡ್ ಗೆ ಆಗಮನ
4.15ಕ್ಕೆ ಆಲೂರಿಂದ ಹೆಲಿಕಾಪ್ಟರ್ ನಿಂದ ಪ್ರಯಾಣ
5 .00 ಗಂಟೆಗೆ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮನ
5.5ಕ್ಕೆ ಅಲ್ಲಿಂದ ವಿಮಾನದಲ್ಲಿ ಪ್ರಯಾಣ
6.30ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮನ
6.35ಕ್ಕೆ ಹುಬ್ಬಳ್ಳಿಯ ಖಾಸಗಿ ಹೋಟೆಲ್ ಗೆ ಆಗಮನ
7 ಗಂಟೆಯಿಂದ 8ಗಂಟೆ ವರೆಗೆ ಚುನಾವಣಾ ನಿರ್ವಹಣಾ ಸಮಿತಿ ಜೊತೆ ಶಾ ಸಭೆ
ರಾತ್ರಿ 8.5ಕ್ಕೆ ಊಟ ಮಾಡಿ ಅಲ್ಲೇ ವಿಶ್ರಾಂತಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಕರಾವಳಿಯಲ್ಲಿ ಬಿರುಗಾಳಿ ಮಳೆ; ಕಡಲಿಗಿಳಿಯದಂತೆ ಮೀನುಗಾರರಿಗೆ ಅಲರ್ಟ್!‌

karnataka Weather Forecast : ಒಳನಾಡು ಹಾಗೂ ಮಲೆನಾಡು, ಕರಾವಳಿಯಲ್ಲಿ ಮಳೆ (Rain News) ಅಬ್ಬರ ಜೋರಾಗಿ ಇರಲಿದ್ದು, ಮೀನುಗಾರರಿಗೆ ಕಡಲಿಗಿಳಿಯದಂತೆ ಎಚ್ಚರಿಕೆ (Fisher Waring) ನೀಡಲಾಗಿದೆ. ಬಿರುಗಾಳಿಯು 55 ಕಿ.ಮೀ ವೇಗದಲ್ಲಿ ಬೀಸಲಿದ್ದು, ಈ ವೇಳೆ ಸಮುದ್ರಕ್ಕೆ ಇಳಿಯಬಾರೆಂದು ಸೂಚಿಸಲಾಗಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ರಾಜ್ಯಾದ್ಯಂತ ವರುಣಾರ್ಭಟ ಮುಂದುವರಿದಿದ್ದು, ಗುಡುಗು, ಮಿಂಚು ಸಹಿತ (Rain News) ಬಿರುಗಾಳಿಯೊಂದಿಗೆ ಮಳೆಯಾಗಲಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ ಜಿಲ್ಲೆಯ ಹೆಚ್ಚಿನ ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗಾಳಿ ವೇಗವು ಗಂಟೆಗೆ 40-50 ಕಿ.ಮೀ ವ್ಯಾಪ್ತಿಯಲ್ಲಿ (Karnataka Weather Forecast) ಬೀಸಲಿದೆ.

ಇನ್ನೂ ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ರಾಮನಗರ ಮತ್ತು ಶಿವಮೊಗ್ಗದಲ್ಲೂ ವ್ಯಾಪಕ ಮಳೆಯಾಗಲಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (40-50 ಕಿಮೀ) ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬಳ್ಳಾರಿ, ಚಿತ್ರದುರ್ಗ, ಚಿಕ್ಕಬಳ್ಳಾಪುರದ ಹಲವು ಕಡೆಗಳಲ್ಲಿ ಗಾಳಿಯು ರಭಸವಾಗಿ ಬೀಸಲಿದ್ದು, ಗುಡುಗು ಸಹಿತ ಮಳೆ ಲಘು ಮಳೆಯಾಗಲಿದೆ. ತುಮಕೂರು ಮತ್ತು ವಿಜಯನಗರ ಸೇರಿದಂತೆ ಬೀದರ್, ಕೊಪ್ಪಳ, ರಾಯಚೂರು ಮತ್ತು ಯಾದಗಿರಿಯಲ್ಲೂ ಗಾಳಿ ಸಹಿತ ಭಾರಿ ಮಳೆಯಾಗಲಿದೆ.

Karnataka Weather Forecast

ಇದನ್ನೂ ಓದಿ: SSLC Toper: ಓದೋಕೂ ಬರದವ ಎಸ್‌ಎಸ್‌ಎಲ್‌ಸಿ ಟಾಪರ್‌ ಆಗಿ ಜವಾನನಾದ! ಜಡ್ಜ್‌ ದೂರಿನಿಂದ ಹೊರ ಬಿತ್ತು ಅಸಲಿಯತ್ತು!

ಯೆಲ್ಲೋ ಅಲರ್ಟ್‌

ಗುಡುಗು ಸಹಿತ ಭಾರೀ ಮಳೆಯೊಂದಿಗೆ 40-50 ಕಿ.ಮೀ ವ್ಯಾಪ್ತಿಯಲ್ಲಿ ಬಿರುಗಾಳಿ ಬೀಸಲಿದ್ದು, ಹಳದಿ ಎಚ್ಚರಿಕೆ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಮೀನುಗಾರರಿಗೆ ಅಲರ್ಟ್‌

ಮೇ 24ರಂದು ಕರ್ನಾಟಕ ಕರಾವಳಿ ಭಾಗದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಗಾಳಿಯ ವೇಗವು ಗಂಟೆಗೆ 45 ಕಿ.ಮೀ ನಿಂದ 55 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಹಾಗಾಗಿ ಮೀನುಗಾರರು ಸಮುದ್ರ ಪ್ರದೇಶಗಳಿಗೆ ತೆರಳದಂತೆ ಸೂಚಿಸಲಾಗಿದೆ. ಪ್ರವಾಸಿಗರು ಕಡಲ ತೀರಕ್ಕೆ ಹೋಗದಂತೆ ಎಚ್ಚರಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

COMEDK UGET 2024 : ಇಂದು ಮಧ್ಯಾಹ್ನ ಕಾಮೆಡ್‌ – ಕೆ ಫಲಿತಾಂಶ; ರಿಸಲ್ಟ್​ ನೋಡೋದು, ಡೌನ್‌ಲೋಡ್‌ ಮಾಡಿಕೊಳ್ಳೋದು ಹೇಗೆ?

COMEDK UGET 2024: ಕಾಮೆಡ್‌ – ಕೆ ಪರೀಕ್ಷೆಯನ್ನು ದೇಶಾದ್ಯಂತ 200ಕ್ಕೂ ಹೆಚ್ಚು ಕೇಂದ್ರಗಳಲ್ಲಿ ನಡೆದಿತ್ತು. ಪ್ರತಿ ವರ್ಷ ಮೇ ತಿಂಗಳಲ್ಲಿ ನಡೆಸಲಾಗುವ ಈ ಪ್ರವೇಶ ಪರೀಕ್ಷೆ ಪದವಿ ಪೂರ್ವ ಮೆಡಿಕಲ್, ಎಂಜಿನಿಯರಿಂಗ್, ಡೆಂಟಲ್‌ ಕೋರ್ಸ್‌ಗಳ ಪ್ರವೇಶಕ್ಕೆ ಹೆದ್ದಾರಿಯಾಗಿದೆ. ಶುಕ್ರವಾರ (ಮೇ 24) ಮಧ್ಯಾಹ್ನ 2 ಗಂಟೆಗೆ ಪ್ರಕಟಿಸಲಾಗುತ್ತದೆ. COMEDK UGET 2024ರ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪರಿಶೀಲಿಸಿಕೊಳ್ಳಬಹುದಾಗಿದೆ.

VISTARANEWS.COM


on

COMEDK UGET 2024
Koo

ಬೆಂಗಳೂರು: ಕರ್ನಾಟಕದ ವೈದ್ಯಕೀಯ, ಎಂಜಿನಿಯರಿಂಗ್ ಮತ್ತು ದಂತ ವೈದ್ಯಕೀಯ ಕಾಲೇಜುಗಳ ಒಕ್ಕೂಟ (COMEDK) ನಡೆಸಿರುವ 2024ರ ವರ್ಷದ ಪ್ರವೇಶ ಪರೀಕ್ಷೆಯ (UGET) ಫಲಿತಾಂಶವನ್ನು ಶುಕ್ರವಾರ (ಮೇ 24) ಮಧ್ಯಾಹ್ನ 2 ಗಂಟೆಗೆ ಪ್ರಕಟಗೊಳ್ಳಲಿದೆ . COMEDK UGET 2024ರ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್​​ನಲ್ಲಿ ಪರಿಶೀಲಿಸಿಕೊಳ್ಳಬಹುದಾಗಿದ್ದು, ಡೌನ್‌ಲೋಡ್ ಮಾಡಿಕೊಳ್ಳುವ ಅವಕಾಶವನ್ನೂ ಕಲ್ಪಿಸಲಾಗಿದೆ.

ಕರ್ನಾಟಕದ 150 ಪ್ರೈವೇಟ್‌ ಎಂಜಿನಿಯರಿಂಗ್ ಕಾಲೇಜು, ದೇಶದ ಕೆಲವು ಕಡೆ ಇರುವ 40 ಖಾಸಗಿ ವಿವಿಗಳಲ್ಲಿನ ಸುಮಾರು 22 ಸಾವಿರ ಎಂಜಿನಿಯರಿಂಗ್ ಸೀಟುಗಳ ಪ್ರವೇಶಾತಿಗಾಗಿ ಈ ಅರ್ಹತಾ ಪರೀಕ್ಷೆಯನ್ನು ನಡೆಸಲಾಗಿತ್ತು. ದೇಶದ 1,03,799 (ಶೇಕಡಾ 87.96) ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದು, ಶುಕ್ರವಾರ ಅವರ ಭವಿಷ್ಯ ನಿರ್ಧಾರ ಆಗಲಿದೆ. ವಿದ್ಯಾರ್ಥಿಗಳು ತಮ್ಮ ಶ್ರೇಯಾಂಕದ ಪಟ್ಟಿಯನ್ನು ಪರಿಶೀಲಿಸಿಕೊಂಡು ಸ್ಕೋರ್‌ ಕಾರ್ಡ್‌ ಅನ್ನು ಡೌನ್‌ಲೋಡ್‌ ಮಾಡಿಕೊಳ್ಳಬಹುದು.

COMEDK UGET ಫಲಿತಾಂಶ 2024 ಪರಿಶೀಲನೆ ಹೇಗೆ?

  • ಹಂತ 1: ಕಾಮೆಡ್‌ಕೆ ಪರೀಕ್ಷಾ ಪೋರ್ಟಲ್‌ಗೆ ಭೇಟಿ ನೀಡಿ.
  • ಹಂತ 2: COMEDK UGET 2024 ಫಲಿತಾಂಶದ ಲಾಗಿನ್ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ಹಂತ 3: ನಿಮ್ಮ ಲಾಗಿನ್ ರುಜುವಾತುಗಳನ್ನು ನಮೂದಿಸಿ – ಅಪ್ಲಿಕೇಶನ್ ಸಂಖ್ಯೆ ಅಥವಾ ಬಳಕೆದಾರ ID ಮತ್ತು ಪಾಸ್‌ವರ್ಡ್ ಮತ್ತು ನಂತರ ಸಲ್ಲಿಸು ಮೇಲೆ ಕ್ಲಿಕ್ ಮಾಡಿ.
  • ಹಂತ 4: COMEDK UGET ಫಲಿತಾಂಶ 2024 ಪರದೆಯ ಮೇಲೆ ಕಾಣಿಸುತ್ತದೆ.
  • ಹಂತ 5: ಕೀ ಉತ್ತರವನ್ನು ಪರಿಶೀಲಿಸಿ ಮತ್ತು ಡೌನ್‌ಲೋಡ್ ಮಾಡಿ.

ವಾರದಲ್ಲಿ ಕೌನ್ಸೆಲಿಂಗ್‌ ನೋಂದಣಿ ಆರಂಭ

ಮೇ 24ರಂದು ಕಾಮೆಡ್‌ಕೆ ರಿಸಲ್ಟ್‌ ಪ್ರಕಟವಾಗಿ ವಾರದಲ್ಲಿ ಕೌನ್ಸೆಲಿಂಗ್‌ ನೋಂದಣಿ ಆರಂಭವಾಗಲಿದೆ. ಕರ್ನಾಟಕದಲ್ಲಿರುವ 150 ಖಾಸಗಿ ಎಂಜಿನಿಯರಿಂಗ್ ಕಾಲೇಜು ಮತ್ತು ದೇಶದ ವಿವಿಧ ಕಡೆ ಇರುವ 40 ಖಾಸಗಿ ವಿಶ್ವವಿದ್ಯಾಲಯಗಳಲ್ಲಿ ಯಾವ ಕಡೆಯಲ್ಲಾದರೂ ಪ್ರವೇಶ ಪಡೆಯಬೇಕೆಂದರೆ ಇಲ್ಲಿ ನೋಂದಣಿಯನ್ನು ಮಾಡಿಕೊಂಡಿರಬೇಕು.

ಇದನ್ನೂ ಓದಿ: Share Market: ಸೆನ್ಸೆಕ್ಸ್‌ ನೆಗೆತ, ನಿಫ್ಟಿ ಜಿಗಿತ; ಮೋದಿ ಭವಿಷ್ಯ ನಿಜವಾಗುತ್ತಾ? ಇಂದಿನ ಏರಿಕೆಗೆ ಕಾರಣಗಳು ಗೊತ್ತಾ?

ಪ್ರತಿ ವರ್ಷ ಮೇ ತಿಂಗಳಲ್ಲಿ ಕಾಮೆಡ್‌-ಕೆ ಪರೀಕ್ಷೆ

ಕಾಮೆಡ್‌ – ಕೆ ಪರೀಕ್ಷೆಯನ್ನು ದೇಶಾದ್ಯಂತ ನಡೆಸಲಾಗಿದ್ದು, 200ಕ್ಕೂ ಹೆಚ್ಚು ಕೇಂದ್ರಗಳಲ್ಲಿ ವ್ಯವಸ್ಥೆ ಮಾಡಲಾಗಿತ್ತು. ಪ್ರತಿ ವರ್ಷ ಮೇ ತಿಂಗಳಲ್ಲಿ ನಡೆಯುವ ಈ ಪ್ರವೇಶ ಪರೀಕ್ಷೆಯು ಪದವಿ ಪೂರ್ವ ಮೆಡಿಕಲ್, ಎಂಜಿನಿಯರಿಂಗ್, ಡೆಂಟಲ್‌ ಕೋರ್ಸ್‌ಗಳ ಪ್ರವೇಶಕ್ಕೆ ಬುನಾದಿಯಾಗಲಿದೆ.

Continue Reading

ಸಂಪಾದಕೀಯ

ವಿಸ್ತಾರ ಸಂಪಾದಕೀಯ: ಮುಂಗಾರಿಗೆ ಮುನ್ನವೇ ರಾಜಕಾಲುವೆ ಒತ್ತುವರಿ ತೆರವಾಗಲಿ

ಮೂಲಸೌಕರ್ಯ ಸರಿಯಿಲ್ಲ ಎಂದು ಇತರ ನಗರಗಳು ಬೆಂಗಳೂರಿನ ಅವಕಾಶವನ್ನು ಕಸಿಯುತ್ತವೆ. ನಾಲ್ಕಾರು ಕಂಪನಿಗಳು ಬೆಂಗಳೂರಿನ ಮೂಲಸೌಕರ್ಯ ಕಳಪೆ ಎಂದು ಒಂದು ಮಾತು ಹೇಳಿದರೂ ಅದು ವಾಣಿಜ್ಯಾತ್ಮಕವಾಗಿ ಕಪ್ಪು ಚುಕ್ಕೆ. ಆದ್ದರಿಂದ, ಮುಂಗಾರಿಗೆ ಮುನ್ನವೇ ಈ ಮುನ್ನೆಚ್ಚರಿಕೆ ವ್ಯವಸ್ಥೆಗಳನ್ನು ರೂಪಿಸಿಕೊಂಡು ಸನ್ನದ್ಧರಾಗಬೇಕಿದೆ.

VISTARANEWS.COM


on

Rajakaluve
Koo

ರಾಜಕಾಲುವೆ ಒತ್ತುವರಿಯಾಗಿದ್ದರೆ ಎಷ್ಟೇ ಪ್ರಭಾವಿಗಳಾಗಿದ್ದರೂ ತೆರವುಗೊಳಿಸಲು ಸೂಚಿಸಲಾಗಿದೆ. ಯಾವ ಪ್ರಬಲ ರಾಜಕಾರಣಿಯೇ ಇರಲಿ, ಬೇರೆ ಯಾರೇ ಇರಲಿ ಮುಲಾಜಿಲ್ಲದೆ ತೆರವುಗೊಳಿಸಲಾಗುವುದು. ಬೆಂಗಳೂರಿನಲ್ಲಿ 400 ಕೆರೆಗಳಿದ್ದವು. ಅನೇಕ ಕೆರೆಗಳು ಹೂಳಿನಿಂದ ತುಂಬಿವೆ ಹಾಗೂ ಒತ್ತುವರಿಯಾಗಿವೆ. ಒತ್ತುವರಿ ತೆರವು ಮಾಡಿ ನೀರು ಹರಿಯಲು ಕಾಲುವೆ ನಿರ್ಮಾಣ ಮಾಡಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. ಇಂದು ಮುಖ್ಯಮಂತ್ರಿಗಳು ನಗರದ ವಿವಿಧೆಡೆ ಭೇಟಿ ನೀಡಿ, ಅಭಿವೃದ್ಧಿ ಕಾಮಗಾರಿ ಮತ್ತು ಮಳೆಯಿಂದ ಸಮಸ್ಯೆಗಳಿಗೆ ಒಳಗಾದ ಪ್ರದೇಶಗಳನ್ನು ಪರಿಶೀಲನೆ ನಡೆಸಿ ಬಳಿಕ ಇದನ್ನು ಹೇಳಿದ್ದಾರೆ.

ಜೂನ್ ತಿಂಗಳಿನಿಂದ ಮುಂಗಾರು ಪ್ರಾರಂಭವಾಗಲಿದೆ. ವಾಡಿಕೆ ಮಳೆಗಿಂತ ಹೆಚ್ಚು ಮಳೆಯಾಗಿ ಪ್ರವಾಹ ಉಂಟಾಗಲಿದೆ ಎಂದು ವರದಿಯಾಗಿರುವ ಹಿನ್ನೆಲೆಯಲ್ಲಿ ಸಿಟಿ ರೌಂಡ್ಸ್ ನಡೆಸಲಾಗಿದೆ. ಇತ್ತೀಚೆಗೆ ಸುರಿದ ಮಳೆಗೆ ಯಲಹಂಕದಲ್ಲಿ 20 ಮನೆಗಳಿಗೆ ನೀರು ನುಗ್ಗಿದೆ. ಮುಯಮಂತ್ರಿಗಳು ತಿಳಿಸುವ ಪ್ರಕಾರ, ಬೆಂಗಳೂರು ನಗರದಲ್ಲಿ 860 ಕಿಮೀ ರಾಜಕಾಲುವೆ ಇದೆ. ಸಿದ್ದರಾಮಯ್ಯನವರ ಹಿಂದಿನ ಅವಧಿಯಲ್ಲಿ 491 ಕಿಮೀ ರಾಜಕಾಲುವೆಯನ್ನು ತೆರವು ಮಾಡಲಾಗಿತ್ತು. ಹಿಂದಿನ ಸರ್ಕಾರ 193 ಕಿಮೀ ತೆರವು ಮಾಡಿದೆ. ಸದ್ಯ ರಾಜಕಾಲುವೆ ತೆರವಿಗೆ 1800 ಕೋಟಿ ರೂ. ವೆಚ್ಚವಾಗುತ್ತಿದೆ. 174 ಕಿಮೀ ಉಳಿದಿದೆ. ವಿಶ್ವ ಬ್ಯಾಂಕ್ ಸುಮಾರು 2000 ಕೋಟಿ ರೂಪಾಯಿ ನೀಡಲಿದೆ. 12.15 ಕಿಮೀ ದೂರದ ಕಾಲುವೆ ಪ್ರಕರಣ ಸಿವಿಲ್ ನ್ಯಾಯಾಲಯದಲ್ಲಿವೆ.

ಜೂನ್‌ ಇನ್ನೇನು ಒಂದು ವಾರದಲ್ಲಿ ಬರಲಿದೆ. ಮುಂಗಾರು ಆರಂಭವಾಗಲಿದೆ. ಮಲೆನಾಡು ಹಾಗೂ ಬಯಲುಸೀಮೆಯ ಕೃಷಿಕ ಜನತೆಗೆ ಇರುವ ಮುಂಗಾರಿನ ಸಿದ್ಧತೆಯ ಜ್ಞಾನ ನಗರದ ಮಹಾಜನತೆಗೆ ಇಲ್ಲ. ಹೀಗಾಗಿ ಮುಂಗಾರಿನ ಆರಂಭದಲ್ಲಿ ಅಪ್ಪಳಿಸುವ ಮಳೆಗೆ, ಮಹಾನಗರ ಸಿದ್ಧವಾಗಿರುವುದಿಲ್ಲ. ಹೀಗಾಗಿಯೇ ರಾಜಕಾಲುವೆಗಳು ಕಸ ತುಂಬಿ ಕಟ್ಟಿಕೊಳ್ಳುವುದು, ರಸ್ತೆಗಳಲ್ಲಿ ನೀರು ನಿಲ್ಲುವುದು ಹಳೆಯ ಹಾಗೂ ದುರ್ಬಲ ಮರಗಳು ಬೀಳುವುದು, ಶಿಥಿಲ ಟ್ರಾನ್ಸ್‌ಫಾರ್ಮರ್‌ಗಳು ಹಾಗೂ ವಿದ್ಯುತ್‌ ಕಂಬಗಳು, ತೆರೆದ ಮ್ಯಾನ್‌ಹೋಲ್‌ಗಳು ಸಾವಿನರಮನೆಗಳಾಗುವುದನ್ನು ಕಾಣುತ್ತೇವೆ. ವಿಳಂಬವಾಗಿರುವ ರಾಜಕಾಲುವೆ ತೆರವು ಹಾಗೂ ಸ್ವಚ್ಛತೆ ಕಾಮಗಾರಿಗಳನ್ನು ತ್ವರಿತಗೊಳಿಸಬೇಕು, ಹೂಳೆತ್ತಬೇಕು. ರಾಜಕಾಲುವೆಗೆ ಕಸ ಹಾಕುವುದನ್ನು ತಡೆಗಟ್ಟಲು ಕಠಿಣ ಕ್ರಮ ಕೈಗೊಳ್ಳಬೇಕು. ಬೆಂಗಳೂರು ನಗರದಲ್ಲಿ ವಾರ್ಡ್ ರಸ್ತೆಗಳಲ್ಲಿ 5500 ಗುಂಡಿಗಳು ಬಿದ್ದಿವೆ ಎಂಬ ಲೆಕ್ಕ ಇವೆ. ನಾಲ್ಕು ಮಳೆಗೆ ರಸ್ತೆಗುಂಡಿಗಳು ಮರಣಕೂಪಗಳಾಗುತ್ತವೆ. ಇವುಗಳನ್ನು ಮುಚ್ಚಿಸಬೇಕು.

ರಾಜಕಾಲುವೆಗಳ ನಿರ್ವಹಣೆಗೆ ಶಾಶ್ವತವಾದ ಒಂದು ವ್ಯವಸ್ಥೆಯನ್ನೇ ರೂಪಿಸಬೇಕಿದೆ. ರಾಜಕಾಲುವೆ ಹಾಗೂ ಒಳಚರಂಡಿ ವ್ಯವಸ್ಥೆಗಳು ಪ್ರತ್ಯೇಕವಾಗಿರಬೇಕು. ಆದರೆ ನಗರದ ಎಷ್ಟೋ ಕಡೆ ಅವು ಒಟ್ಟಾಗಿವೆ. ಇದು ತಪ್ಪಬೇಕು. ಇನ್ನು ರಾಜಕಾಲುವೆಯ ಒತ್ತುವರಿ ಪ್ರಭಾವಿಗಳಿಂದಲೇ ಆಗಿರುವುದು ಹೆಚ್ಚು. ಕಾನೂನಾತ್ಮಕ ಅಡ್ಡಿಆತಂಕಗಳನ್ನು ಸೃಷ್ಟಿಸುವವರೂ ಇವರೇ. ಇವರನ್ನು ಎದುರಿಸಲು ಸರ್ಕಾರ ಇನ್ನಷ್ಟು ಸನ್ನದ್ಧವಾಗಬೇಕು. ಮನೆಗಳಲ್ಲಿ ಮಳೆ ನೀರು ಕೊಯ್ಲಿಗೆ ವ್ಯವಸ್ಥೆಯಾದರೂ ಇರಬೇಕು. ಇಲ್ಲವಾದರೆ ರಾಜಕಾಲುವೆಗಳಿಗಾದರೂ ಅದು ಸೇರಬೇಕು. ಎರಡೂ ಇಲ್ಲದೆ ಹೋದರೆ ಕೃತಕ ಪ್ರವಾಹ ಸೃಷ್ಟಿಯಾಗುತ್ತದೆ. ಈ ಕೃತಕ ಪ್ರವಾಹಗಳಿಂದ ಜನಜೀವನ ಅಸ್ತವ್ಯಸ್ಥಗೊಂಡು, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ವಲಯದಲ್ಲಿಯೂ ರಾಜಧಾನಿಗೆ ಕೆಟ್ಟ ಹೆಸರು ಬರುತ್ತದೆ. ಮೂಲಸೌಕರ್ಯ ಸರಿಯಿಲ್ಲ ಎಂದು ಇತರ ನಗರಗಳು ನಮ್ಮ ಅವಕಾಶವನ್ನು ಕಸಿಯುತ್ತವೆ. ನಾಲ್ಕಾರು ಕಂಪನಿಗಳು ಬೆಂಗಳೂರಿನ ಇನ್‌ಫ್ರಾಸ್ಟ್ರಕ್ಚರ್‌ ಕಳಪೆ ಎಂದು ಒಂದು ಮಾತು ಹೇಳಿದರೂ ಅದು ವಾಣಿಜ್ಯಾತ್ಮಕವಾಗಿ ಕಪ್ಪು ಚುಕ್ಕೆ. ಆದ್ದರಿಂದ, ಮುಂಗಾರಿಗೆ ಮುನ್ನವೇ ಈ ಮುನ್ನೆಚ್ಚರಿಕೆ ವ್ಯವಸ್ಥೆಗಳನ್ನು ರೂಪಿಸಿಕೊಂಡು ಸನ್ನದ್ಧರಾಗಬೇಕಿದೆ.

ಇದನ್ನೂ ಓದಿ: PM Narendra Modi: ಅಡಿಕೆ, ಸಿರಿಧಾನ್ಯ, ಮೀನುಗಾರಿಕೆ ಪ್ರಸ್ತಾಪಿಸಿ ಕೃಷಿಕರ ಮನ ಗೆದ್ದ ಮೋದಿ

Continue Reading

ಕರ್ನಾಟಕ

Bengaluru News: ಬೆಂಗಳೂರು ಸೇರಿದಂತೆ ಎಲ್ಲೆಡೆ ಕುಡಿಯುವ ನೀರಿನ ಪರೀಕ್ಷೆಗೆ ಸೂಚನೆ ನೀಡಿದ ಡಿ.ಕೆ.ಶಿವಕುಮಾರ್

Bengaluru News: ಕುಡಿಯುವ ನೀರಿಗೆ ಕಲುಷಿತ ನೀರು ಬೆರೆಯುತ್ತಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ಎಲ್ಲೆಡೆ ಕುಡಿಯುವ ನೀರನ್ನು ಪರೀಕ್ಷೆ ಒಳಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

VISTARANEWS.COM


on

DCM D K Shivakumar instructed to test drinking water everywhere including Bengaluru
Koo

ಬೆಂಗಳೂರು: ಕುಡಿಯುವ ನೀರಿಗೆ ಕಲುಷಿತ ನೀರು ಬೆರೆಯುತ್ತಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಬೆಂಗಳೂರು (Bengaluru News) ಸೇರಿದಂತೆ ಎಲ್ಲೆಡೆ ಕುಡಿಯುವ ನೀರನ್ನು ಪರೀಕ್ಷೆ ಒಳಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ವೈಯಾಲಿಕಾವಲ್‌ನ ಐಪಿಪಿ ಕಚೇರಿಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಅಧಿಕಾರಿಗಳ ಸಭೆಗೂ ಮುನ್ನ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

ಮುಖ್ಯಮಂತ್ರಿಗಳು ನಿನ್ನೆ ನಗರ ಪ್ರದಕ್ಷಿಣೆ ಮಾಡಿ ವಿವಿಧ ಕ್ರಮಗಳ ಬಗ್ಗೆ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದ್ದಾರೆ. ಶೀಘ್ರದಲ್ಲೇ ಕಾರ್ಯಪಡೆ ರಚನೆಗೆ ಸೂಚನೆ ನೀಡಿದ್ದು, ಎಲ್ಲೆಲ್ಲಿ ಯಾವ ಕಾರ್ಯಗಳು ಸಾಗಬೇಕು ಎಂದು ತಿಳಿಸಿದ್ದಾರೆ. ರಾಜ್ಯದಲ್ಲಿ ಕೆಲವು ಕಡೆ ಕುಡಿಯುವ ನೀರು ಕಲುಷಿತವಾಗಿ ಕಾಲರ ಸಂಭವಿಸಿರುವ ಪ್ರಕರಣಗಳು ಗಮನಕ್ಕೆ ಬಂದಿವೆ. ಹೀಗಾಗಿ ಬೆಂಗಳೂರಿನ ಎಲ್ಲೆಡೆ ಕುಡಿಯುವ ನೀರಿನ ಪರಿಶೀಲನೆ ನಡೆಸಲು ವ್ಯವಸ್ಥೆ ಮಾಡಬೇಕಾಗಿದೆ. ಈ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚೆ ಮಾಡಲಾಗಿದೆ ಎಂದರು.

ಇದನ್ನೂ ಓದಿ: Koppala News: ವಿಜಯನಗರ ಅರಸರ ಕಾಲದಲ್ಲಿ ನಿರ್ಮಿಸಿದ್ದ ಹುಲಗಿ ಕಟ್ಟೆಯ ಶಾಸನ ಪತ್ತೆ

ಬೆಂಗಳೂರು ಹಾಗೂ ಬೇರೆ ಭಾಗಗಳಲ್ಲಿ ಜನರಿಗೆ ಕುಡಿಯಲು ಗುಣಮಟ್ಟದ ನೀರು ನೀಡಬೇಕು ಎಂದು ಅಧಿಕಾರಿಗಳಿಗೆ ಮುಂಜಾಗ್ರತೆಯಿಂದ ಎಚ್ಚರಿಕೆ ನೀಡಿದ್ದೇವೆ. ಇನ್ನು ಬೆಂಗಳೂರಿನಲ್ಲಿರುವ ಎಲ್ಲಾ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ರಿಪೇರಿ ಮಾಡಲು ಮಾರ್ಗದರ್ಶನ ನೀಡಲಾಗಿದೆ. ಇನ್ನು ಮಳೆ ಆರಂಭಕ್ಕೂ ಮುನ್ನ ಮುಂಜಾಗ್ರತಾ ಕ್ರಮಗಳನ್ನು ಮಾಡುತ್ತೇವೆ ಎಂದು ತಿಳಿಸಿದರು.

ಒತ್ತುವರಿ ತೆರವು ವಿಚಾರವಾಗಿ ಬಿಎಂಟಿಎಫ್‌ ಅವರ ಸಹಾಯ ಪಡೆಯುತ್ತೀರಾ ಎಂದು ಕೇಳಿದಾಗ, “ಬಿಎಂಟಿಎಫ್‌ ಜತೆ ಚರ್ಚೆ ನಡೆಸಲಾಗಿದ್ದು. ಎಲ್ಲೆಲ್ಲಿ ಬಾಕಿ ಇದೆ ಅವುಗಳನ್ನು ತೆರವುಗೊಳಿಸಲು ಸಿಎಂ ಸೂಚಿಸಿದ್ದಾರೆ”ಎಂದರು.

ರಾಜಕಾಲುವೆ, ಕೆರೆ ಒತ್ತುವರಿದಾರರು ತಡೆಯಾಜ್ಞೆ ತರುತ್ತಿರುವ ವಿಚಾರವಾಗಿ ಕೇಳಿದಾಗ, “ಕೆರೆ, ಸರ್ಕಾರಿ ಉದ್ಯಾನವನ ಜಾಗ ಸೇರಿದಂತೆ ಅನೇಕ ಕಡೆಗಳಲ್ಲಿ ಒತ್ತುವರಿ ಮಾಡಿಕೊಂಡು ಮನೆ ಕಟ್ಟಿಕೊಂಡಿದ್ದಾರೆ. ಇದು ನಮ್ಮ ಗಮನದಲ್ಲಿದ್ದು. ಈ ವಿಚಾರದಲ್ಲಿ ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡಬೇಕು. ಅದಕ್ಕೆ ಕಾನೂನು ಅವಕಾಶಗಳನ್ನು ಕಂಡುಕೊಳ್ಳುತ್ತೇವೆ ಎಂದು ತಿಳಿಸಿದರು.

ಬೆಂಗಳೂರಿನ ಮೂಲಸೌಕರ್ಯ ಸಮಸ್ಯೆಗಳ ನಿವಾರಣೆಗೆ 5 ಅಂಶಗಳ ಕಾರ್ಯಕ್ರಮ

ಶುದ್ಧ ಕುಡಿಯುವ ನೀರು, ರಸ್ತೆಗುಂಡಿ ಸಮಸ್ಯೆ ಸೇರಿದಂತೆ ಬೆಂಗಳೂರಿನ ಪ್ರಮುಖ ಮೂಲಸೌಕರ್ಯ ಸಮಸ್ಯೆಗಳ ನಿವಾರಣೆಗೆ ಐದು ಅಂಶಗಳ ಕಾರ್ಯಕ್ರಮ ರೂಪಿಸಲಾಗಿದೆ” ಎಂದು ತಿಳಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್, ಬಿಬಿಎಂಪಿ ಆಸ್ತಿಗಳ ಗುರುತಿಸುವಿಕೆ ಹಾಗೂ ಸಂರಕ್ಷಣೆ, ಆಸ್ತಿ ತೆರಿಗೆ, ರಾಜಕಾಲುವೆ, ಕೆರೆ ಒತ್ತುವರಿ ತೆರವು ಕಾರ್ಯಾಚರಣೆ ಈ ಐದು ಅಂಶಗಳ ಕಾರ್ಯಕ್ರಮದಲ್ಲಿ ಸೇರಿವೆ ಎಂದರು.

ಇದನ್ನೂ ಓದಿ: Shivamogga News: ಚಂದ್ರಗುತ್ತಿಯ ಶ್ರೀ ರೇಣುಕಾಂಬ ದೇವಿಯ ದರ್ಶನ ಪಡೆದ ಸಾವಿರಾರು ಭಕ್ತರು

ಮುಖ್ಯಮಂತ್ರಿಗಳ ಜತೆಗೂಡಿ ಬುಧವಾರ ಬೆಂಗಳೂರು ನಗರದ ಒಂದಷ್ಟು ಭಾಗಗಳಲ್ಲಿ ಪರಿಶೀಲನೆ ನಡೆಸಲಾಯಿತು. ಈ ವೇಳೆ ಅನೇಕ ಸಮಸ್ಯೆಗಳು ಕಂಡು ಬಂದ ಕಾರಣ ಬಿಬಿಎಂಪಿ ವಲಯ ಅಧಿಕಾರಿಗಳು ಸೇರಿದಂತೆ ಬೆಂಗಳೂರಿಗೆ ಸಂಬಂಧಿಸಿದ ಎಲ್ಲಾ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿ ಸಮಸ್ಯೆ ಪರಿಹಾರಕ್ಕೆ ಚರ್ಚೆ ನಡೆಸಲಾಯಿತು ಎಂದರು.

ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ತಿ ಹಾಗೂ ನಗರದ ಎಲ್ಲಾ ಭಾಗಗಳಲ್ಲಿ ಸರಬರಾಜಾಗುವ ನೀರಿನ ಗುಣಮಟ್ಟದ ಪರೀಕ್ಷೆಯನ್ನು ಬಿಬಿಎಂಪಿ ನಡೆಸಬೇಕು ಹಾಗೂ ಗುಣಮಟ್ಟದ ಫಲಿತಾಂಶವನ್ನು ಬಿಡ್ಬ್ಲೂಎಸ್‌ಎಸ್‌ಬಿಗೆ ನೀಡಬೇಕು ಎಂದು ಸೂಚಿಸಲಾಗಿದೆ ಎಂದರು.

ರಾಜಕಾಲುವೆ ಒತ್ತುವರಿ ತೆರವಿಗೆ ನ್ಯಾಯಾಲಯ ಈ ಹಿಂದೆ ನಿರ್ದೇಶನ ನೀಡಿತ್ತು. ಅದರಂತೆ 2016-17 ರಲ್ಲಿ 2,626 ಒತ್ತುವರಿಗಳನ್ನು ಗುರುತಿಸಲಾಗಿತ್ತು. 2022- 23 ಹೊತ್ತಿಗೆ 556 ಒತ್ತುವರಿ ತೆರವು ಮಾಡಲಾಗಿತ್ತು. ಈಗ 1136 ಹೊಸದಾಗಿ ಒತ್ತುವರಿಗಳನ್ನು ಗುರುತಿಸಲಾಗಿದ್ದು, ಒಟ್ಟು 4,316 ಒತ್ತುವರಿಗಳನ್ನು ಗುರುತಿಸಲಾಗಿದೆ. ಸ್ಯಾಟ್‌ಲೈಟ್, ಗೂಗಲ್ ಇಮೇಜ್ ಮತ್ತು ಸರ್ವೇ ಇಲಾಖೆ ಈ ಒತ್ತುವರಿ ಮಾಹಿತಿ ಸಂಗ್ರಹಿಸಿದೆ. ಒತ್ತುವರಿ ತೆರವುಗೊಳಿಸಲು ಬಿಎಂಟಿಎಫ್‌ಗೆ ಕಾನೂನಾತ್ಮಕವಾಗಿ ಮತ್ತು ಎಲ್ಲಾ ರೀತಿಯ ಬೆಂಬಲ ನೀಡಬೇಕು ಎಂದು ಮಾರ್ಗದರ್ಶನ ನೀಡಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: Golden Star Ganesh: ಮೈಸೂರಿನಲ್ಲಿ ಮೇ 25ರಂದು ʼಕೃಷ್ಣಂ ಪ್ರಣಯ ಸಖಿʼ ಚಿತ್ರದ ಫಸ್ಟ್‌ ಸಾಂಗ್‌ ರಿಲೀಸ್‌

ಬಾಗಿಲಿಗೆ ಬಂತು ಸರ್ಕಾರ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಒತ್ತುವರಿ ವಿಚಾರವಾಗಿ ಬಂದಿರುವ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಬೇಕು ಎಂದು ಸೂಚನೆ ನೀಡಿದ್ದೇನೆ ಎಂದ ಅವರು, 182 ಕೆರೆಗಳಲ್ಲಿ 116 ಕೆರೆಗಳ ಒತ್ತುವರಿ ಬಗ್ಗೆ ಸರ್ವೇ ನಡೆಸಬೇಕಾಗಿದೆ. ಬಾಕಿ ಉಳಿದ ಕೆರೆಗಳನ್ನು ಸರ್ವೇ ನಡೆಸಬೇಕು. ಹಾಗೂ ಬಿಬಿಎಂಪಿ ಆಸ್ತಿಗಳನ್ನು ಗುರುತು ಮಾಡಬೇಕು. ಪಾಲಿಕೆ ಆಸ್ತಿ ಸಂರಕ್ಷಣೆ ಸೇರಿದಂತೆ ಒತ್ತುವರಿ ತೆರವಿಗೆ ಶೀಘ್ರ ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಲಾಗಿದೆ. ಸಂಸ್ಕರಿಸಿದ ನೀರನ್ನು ಕೆರೆಗಳಿಗೆ ತುಂಬಿಸುವ ಜವಾಬ್ದಾರಿಯನ್ನು ಬಿಡ್ಬ್ಲೂಎಸ್‌ಎಸ್‌ಬಿ ಗೆ ವಹಿಸಲಾಗಿದೆ. ಕೆರೆಗಳಲ್ಲಿ ನೀರಿದ್ದರೆ ಒತ್ತುವರಿ ತಪ್ಪುತ್ತದೆ, ಅಂತರ್ಜಲ ಹೆಚ್ಚುತ್ತದೆ. ಆದ ಕಾರಣ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ: COMEDK UGET 2024: ನಾಳೆ ಮಧ್ಯಾಹ್ನ ಕಾಮೆಡ್‌ – ಕೆ ಫಲಿತಾಂಶ ಪ್ರಕಟ; ವೀಕ್ಷಣೆ, ಡೌನ್‌ಲೋಡ್‌ ಮಾಡಿಕೊಳ್ಳೋದು ಹೇಗೆ?

ನಗರದಲ್ಲಿ ಸುಮಾರು 5 ಸಾವಿರಕ್ಕೂ ಹೆಚ್ಚು ರಸ್ತೆ ಗುಂಡಿಗಳು ಇವೆ ಎಂದು ಸಿಎಂ ಮಾಹಿತಿ ನೀಡಿದ್ದರು. ಲೋಕಸಭಾ ಚುನಾವಣಾ ಫಲಿತಾಂಶ ಬಂದ ನಂತರ ಸಾರ್ವಜನಿಕರೇ ರಸ್ತೆಗುಂಡಿಗಳ ಫೋಟೋ ತೆಗೆದು ಮಾಹಿತಿ ನೀಡುವ ಆ್ಯಪ್ ಬಿಡುಗಡೆ ಮಾಡಲಾಗುವುದು. ಮುಂದಿನ 15 ದಿನಗಳಲ್ಲಿ ಎಲ್ಲಾ ರಸ್ತೆಗುಂಡಿಗಳನ್ನು ಮುಚ್ಚಬೇಕು ಎಂದು ತಿಳಿಸಲಾಗಿದೆ ಎಂದರು.

Continue Reading
Advertisement
karnataka weather Forecast
ಮಳೆ42 mins ago

Karnataka Weather : ಕರಾವಳಿಯಲ್ಲಿ ಬಿರುಗಾಳಿ ಮಳೆ; ಕಡಲಿಗಿಳಿಯದಂತೆ ಮೀನುಗಾರರಿಗೆ ಅಲರ್ಟ್!‌

COMEDK UGET 2024
ಪ್ರಮುಖ ಸುದ್ದಿ2 hours ago

COMEDK UGET 2024 : ಇಂದು ಮಧ್ಯಾಹ್ನ ಕಾಮೆಡ್‌ – ಕೆ ಫಲಿತಾಂಶ; ರಿಸಲ್ಟ್​ ನೋಡೋದು, ಡೌನ್‌ಲೋಡ್‌ ಮಾಡಿಕೊಳ್ಳೋದು ಹೇಗೆ?

Tips On Tea
ಆರೋಗ್ಯ2 hours ago

Tips On Tea: ಚಹಾ ಅತಿಯಾಗಿ ಕುದಿಸುವುದು ಒಳ್ಳೆಯದಲ್ಲ! ಏಕೆ ಗೊತ್ತಾ?

Dina Bhavishya
ಭವಿಷ್ಯ2 hours ago

Dina Bhavishya : ಆತುರದಲ್ಲಿ ಈ ರಾಶಿಯವರು ಯಾವುದೇ ತೀರ್ಮಾನ ತೆಗೆದುಕೊಳ್ಳಬೇಡಿ

Narendra Modi
ದೇಶ7 hours ago

PM Modi: 400 ಸೀಟು, 400 ಸೀಟು ಎಂದು ಪ್ರತಿಪಕ್ಷಗಳನ್ನು ಮಂಗ್ಯಾ ಮಾಡಿದ ಮೋದಿ; ಅವರ ಮಾತಲ್ಲೇ ಕೇಳಿ!

Rajakaluve
ಸಂಪಾದಕೀಯ8 hours ago

ವಿಸ್ತಾರ ಸಂಪಾದಕೀಯ: ಮುಂಗಾರಿಗೆ ಮುನ್ನವೇ ರಾಜಕಾಲುವೆ ಒತ್ತುವರಿ ತೆರವಾಗಲಿ

IPL 2024
ಪ್ರಮುಖ ಸುದ್ದಿ8 hours ago

IPL 2024 : ಅಭಿಮಾನಿಗಳ ದುರಂಹಕಾರವೇ ಆರ್​​ಸಿಬಿ ಸೋಲಿಗೆ ಕಾರಣ ಎಂದ ಮಾಜಿ ಕ್ರಿಕೆಟಿಗ

DCM D K Shivakumar instructed to test drinking water everywhere including Bengaluru
ಕರ್ನಾಟಕ8 hours ago

Bengaluru News: ಬೆಂಗಳೂರು ಸೇರಿದಂತೆ ಎಲ್ಲೆಡೆ ಕುಡಿಯುವ ನೀರಿನ ಪರೀಕ್ಷೆಗೆ ಸೂಚನೆ ನೀಡಿದ ಡಿ.ಕೆ.ಶಿವಕುಮಾರ್

Naxals
ದೇಶ8 hours ago

Naxals: ಛತ್ತೀಸ್‌ಗಢದಲ್ಲಿ ಭದ್ರತಾ ಸಿಬ್ಬಂದಿ ಭರ್ಜರಿ ಬೇಟೆ; 7 ನಕ್ಸಲರ ಎನ್‌ಕೌಂಟರ್

IPL 2024
ಪ್ರಮುಖ ಸುದ್ದಿ9 hours ago

IPL 2024 : ಐಪಿಎಲ್​ನಲ್ಲಿ ಕಳಪೆ ದಾಖಲೆಯೊಂದನ್ನು ಸೃಷ್ಟಿಸಿ ನಿರ್ಗಮಿಸಿದ ಆರ್​ಸಿಬಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ1 day ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ2 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು3 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು3 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ4 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ5 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ5 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ5 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ6 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌