Food Tips: ಬಜ್ಜಿ, ಬೋಂಡಾ ಕರಿಯುವಾಗ ನೀವು ಮಾಡುವ 5 ತಪ್ಪುಗಳು! - Vistara News

ಆಹಾರ/ಅಡುಗೆ

Food Tips: ಬಜ್ಜಿ, ಬೋಂಡಾ ಕರಿಯುವಾಗ ನೀವು ಮಾಡುವ 5 ತಪ್ಪುಗಳು!

ಕಡಿಮೆ ಎಣ್ಣೆ ಕುಡಿವಂತೆ ರುಚಿಕರ ಕುರುಕಲು, ಬಜ್ಜಿ ಬೋಂಡಾಗಳನ್ನು ಮಾಡುವುದು ಹೇಗೆ? ಎಣ್ಣೆ ತಿಂಡಿ ಕರಿವಾಗ ಮಾಡುವ ಐದು ತಪ್ಪುಗಳಾದರೂ ಯಾವುವು ಎಂಬುದನ್ನು ನೋಡೋಣ.

VISTARANEWS.COM


on

bajji bonda
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬಜ್ಜಿ, ಬೋಂಡಾ, ಪಕೋಡಾಗಳು ಯಾರಿಗಿಷ್ಟವಿಲ್ಲ ಹೇಳಿ! ಎಣ್ಣೆಯಲ್ಲಿ ಮುಳುಗೆದ್ದು ಬರುವ ಇಂಥ ಕುರುಕಲು ತಿನಿಸುಗಳು ತಿನ್ನಲು ಬಲು ರುಚಿ. ಆದರೆ, ಇದು ಕುಡಿದು ಬರುವ ಎಣ್ಣೆ ನಮ್ಮ ಹೊಟ್ಟೆಗಿಳಿವಾಗ ಅಯ್ಯೋ ಎನಿಸುತ್ತದೆ. ಕಷ್ಟಪಟ್ಟು ತೂಕ ಇಳಿಸಲು ಹೆಣಗುವ ಎಲ್ಲ ಜೀವಗಳೂ, ಇಂಥ ಎಣ್ಣೆ ತಿಂಡಿ ಕಾಣುವಾಗ ಬಾಯಿ ಕಟ್ಟಿ ಕೂರುತ್ತವೆ. ಬಹಳಷ್ಟು ಸಾರಿ ಅಪರೂಪಕ್ಕೆ ಎಣ್ಣೆ ತಿಂಡಿ ಮನೆಯಲ್ಲಿ ಮಾಡಿದರೂ, ಯಾಕೆ ಇವು ಇಷ್ಟು ಎಣ್ಣೆ ಕುಡಿಯುತ್ತವೆ ಎಂದೂ ಹಲವರಿಗೆ ಅನಿಸದೇ ಇರದು. ನಾನು ಮಾಡುವ ಪಕೋಡಾ, ಬಜ್ಜಿಗಳು ಬೇರೆಯವರಿಗಿಂತ ಹೆಚ್ಚು ಎಣ್ಣೆಕುಡಿಯುತ್ತಿದೆಯಲ್ಲ ಎಂಬುದು ಮಿಲಿಯನ್‌ ಡಾಲರ್‌ ಪ್ರಶ್ನೆಯಾಗಿ ಕಾಡಬಹುದು. ಮಾಡಿದ ಬಜ್ಜಿಯನ್ನು ಹಿಂಡಿದರೆ, ನೆನೆಸಿದ ಬಟ್ಟೆಯಿಂದ ನೀರಿಳಿವ ಹಾಗೆ ಎಣ್ಣೆ ಇಳಿವಾಗ, ತಿನ್ನುವುದೇ ಬೇಡ ಎಂದು ಮಾಡಿದ ತಿಂಡಿಯ ಮೇಲೆ ಜಿಗುಪ್ಸೆಯೂ ಬರಬಹುದು. ಹಾಗಾದರೆ, ಕಡಿಮೆ ಎಣ್ಣೆ ಕುಡಿವಂತೆ ರುಚಿಕರ ಕುರುಕಲು, ಬಜ್ಜಿ ಬೋಂಡಾಗಳನ್ನು ಮಾಡುವುದು ಹೇಗೆ? ಎಣ್ಣೆ ತಿಂಡಿ ಕರಿವಾಗ ಮಾಡುವ ಐದು ತಪ್ಪುಗಳಾದರೂ ಯಾವುವು ಎಂಬುದನ್ನು ನೋಡೋಣ.

ತಪ್ಪು 1: ಬಾಣಲೆಯಲ್ಲಿ ಕರಿಯಲು ತೆಗೆದುಕೊಳ್ಳುವ ಎಣ್ಣೆ ಪ್ರಮಾಣಕ್ಕೂ ಇದಕ್ಕೂ ಸಂಬಂಧವಿದೆ ಎಂದರೆ ಒಪ್ಪುತ್ತೀರಾ? ಇಲ್ಲದಿದ್ದರೆ ಇಲ್ಲಿ ಕೇಳಿ. ಬಾಣಲೆಯಲ್ಲಿ ಕಡಿಮೆ ಎಣ್ಣೆ ತೆಗೆದುಕೊಂಡಷ್ಟೂ ಎಣ್ಣೆ ಕುಡಿಯುವುದು ಹೆಚ್ಚಾಗುತ್ತದೆ! ಗರಿಗರಿಯಾದ ಜಿಡ್ಡು ರಹಿತ ಎಣ್ಣೆ ತಿಂಡಿ ಮಾಡಬೇಕಿದ್ದರೆ ಬಾಣಲೆಯಲ್ಲಿ ಎಣ್ಣೆಯೂ ಇರಬೇಕು. ಕಡಿಮೆ ಎಣ್ಣೆ ಕುಡಿಯಲಿ ಎಂದು ಅಷ್ಟೂ ಪಕೋಡಗಳನ್ನು ಕಡಿಮೆ ಎಣ್ಣೆಗೆ ಸುರುವಿಕೊಳ್ಳುವ ಬದಲು, ಒಂದೊಂದಾಗಿ ಕರಿಯಿರಿ. ಅಥವಾ ಮುಳುಗುವಷ್ಟು ಜಾಗ ಇಟ್ಟುಕೊಂಡು ಕರಿಯಿರಿ. ಶ್ಯಾಲೋ ಫ್ರೈ ಮಾಡಬೇಕಿದ್ದರೆ ಬಾಣಲೆಯಲ್ಲೇ ಮಾಡಬೇಡಿ. ಆಗ ತವಾದ ಆಯ್ಕೆ ಒಳ್ಳೆಯದು.

ತಪ್ಪು 2: ಬಾಣಲೆಯಲ್ಲಿ ಎಣ್ಣೆ ಸರಿಯಾಗಿ ಬಿಸಿಯಾಗದೇ ಇರಬಹುದು! ಹೌದು. ಎಣ್ಣೆ ಇಟ್ಟ ಕೂಡಲೇ ಹಿಟ್ಟು ಹಾಕಬೇಡಿ. ಕೊಂಚ ಬಿಸಿಯಾದ ಕೂಡಲೇ ಕೂಡಾ ಹಾಕಬೇಡಿ. ಎಣ್ಣೆ ಕರಿಯಲು ತಯಾರಾಗಿದೆಯೇ ಎಂಬುದನ್ನು ಪರೀಕ್ಷಿಸಿಕೊಳ್ಳಿ. ಕಡಿಮೆ ಕಾದ ಎಣ್ಣೆಗೆ ಹಾಕಿದರೆ ಅದು ಹೆಚ್ಚು ಎಣ್ಣೆ ಹೀರಿಕೊಳ್ಳುತ್ತದೆ. ಹಾಗಂತ ಎಣ್ಣೆ ಅಗತ್ಯಕ್ಕಿಂತ ಹೆಚ್ಚು ಬಿಸಿಯಾಗಲೂಬಾರದು. ಎಣ್ಣೆಯ ಬಿಸಿಯ ಹದ ನಿಮಗೆ ಅರಿವಿರಬೇಕು. ಯಾವಾಗಲೂ ಉರಿಯನ್ನು ಆಗಾಗ ಬದಲಾಯಿಸಬಾರದು. ಹದ ಉರಿ ಒಳ್ಳೆಯದು.

ತಪ್ಪು 3: ನಿಮ್ಮ ಹಿಟ್ಟಿನ ಬಗ್ಗೆ ಅರಿವಿರಲಿ. ಹಿಟ್ಟು ಅತಿಯಾಗಿ ದಪ್ಪವಿರಬಾರದು. ಬಜ್ಜಿ ಬೋಂಡಾಗಳ ಹಿಟ್ಟು ಮಾಡುವುದೂ ಒಂದು ಕಲೆ. ಗಂಟುಗಳಾಗದಂತೆ ಹಿಟ್ಟು ಕಲಸಿ. ಚೆನ್ನಾಗಿ ಮಿಕ್ಸ್‌ ಮಾಡಿ. ಸ್ವಲ್ಪ ಬೇಕಿಂಗ್‌ ಸೋಡಾ ಬೇಕಾದರೆ ಹಾಕಬಹುದು.

ಇದನ್ನೂ ಓದಿ: Food Tips: ನೆನಪಿಡಿ, ತಾಮ್ರದ ಪಾತ್ರೆಯಲ್ಲಿ ಈ ಎಲ್ಲ ಅಡುಗೆಗಳನ್ನು ಮಾಡಬೇಡಿ!

ತಪ್ಪು 4: ಅತಿಯಾಗಿ ನೀರು ಹಾಕಿ ಹಿಟ್ಟನ್ನು ಕೆಡಿಸಬೇಡಿ. ಇದರಿಂದ ಬಜ್ಜಿ ಬೋಂಡಾ ಹಾಳಾಗುತ್ತದೆ. ಹಿಟ್ಟು ಹರಿವ ನದಿಯಂತಾಗಿ ಹೆಚ್ಚು ಎಣ್ಣೆ ಹೀರಿಕೊಳ್ಳುತ್ತದೆ. ಹಾಗಾಗಿ, ಅಕಸ್ಮಾತಾಗಿ ಹಿಟ್ಟು ನೀರಾದರೆ ಹೆಚ್ಚು ಕಡ್ಲೆಹಿಟ್ಟು ಹಾಕಿ ಹಿಟ್ಟನ್ನು ಸರಿದಾರಿಗೆ ತನ್ನಿ. ಕರಿಯುವಾಗ ಹೆಚ್ಚು ಎಣ್ಣೆ ಹೀರಿಕೊಳ್ಳದಂತೆ ಮಾಡಲು ಒಂದೆರಡು ಹನಿ ಎಣ್ಣೆಯನ್ನೂ ಮೊದಲೇ ಕಲಸಿಕೊಳ್ಳುವಾಗಲೇ ಹಿಟ್ಟಿಗೆ ಹಾಕಬಹುದು. ಕರಿವ ಎಣ್ಣೆಗೆ ಚಿಟಿಕೆ ಉಪ್ಪನ್ನೂ ಸೇರಿಸಬಹುದು.

ತಪ್ಪು 5: ಕರಿಯುವ ಬಾಣಲೆಯ ಪಾತ್ರವೂ ಇಲ್ಲಿ ಮುಖ್ಯ ಎಂದರೆ ನಂಬುತ್ತೀರಾ? ಹೌದು. ಎಂತಹ ಬಾಣಲೆಯಲ್ಲಿ ಬೋಂಡಾ ಕರಿಯುತ್ತೀರಿ ಎಂಬುದೂ ಕೂಡಾ ಮುಖ್ಯ. ದಪ್ಪ ತಳದ ಬಾಣಲೆ ಕರಿಯಲು ಸೂಕ್ತ. ಹಾಗಾಗಿ ಯಾವಾಗಲೂ ಗುಂಡಗಿನ, ಆಳವಿರುವ ದಪ್ಪ ತಳದ ಬಾಣಲೆಯನ್ನೇ ಕರಿಯಲು ಆಯ್ಕೆ ಮಾಡಿಕೊಳ್ಳಿ. ಇದು ಉಷ್ಣತೆಯನ್ನು ಸರಿಯಾದ ಹದದಲ್ಲಿಡುತ್ತದೆ.

ಇದನ್ನೂ ಓದಿ: Food Tips: ಹಾಲು ಸೀದರೆ ತಲೆ ಕೆಡಿಸಿಕೊಳ್ಳಬೇಡಿ, ಹೀಗೆ ಮಾಡಿಯೂ ಬಳಸಬಹುದು!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆರೋಗ್ಯ

Morning Nutrition: ಆರೋಗ್ಯಕರ ಆಗಿರಬೇಕಿದ್ದರೆ ನಮ್ಮ ಬೆಳಗಿನ ತಿಂಡಿ ಹೇಗಿರಬೇಕು?

ರಾತ್ರಿಯಿಡೀ ದೇಹಕ್ಕೆ ಅಗತ್ಯವಾದ ವಿಶ್ರಾಂತಿಯನ್ನು ನೀಡಿದ್ದಾಗಿದೆ. ಇನ್ನೀಗ ಮುಂಜಾನೆ (Morning Nutrition) ಎದ್ದು ದಿನವನ್ನು ಪ್ರಾರಂಭಿಸಬೇಕು ಎನ್ನುವಾಗ, ದೇಹಕ್ಕೆ ನೀಡುವಂಥ ಗ್ರಾಸ ಹೇಗಿರಬೇಕು? ಒಂದು ಆಮ್ಲೇಟ್‌ ಸಾಕೇ? ಜೊತೆಗೆರಡು ಬ್ರೆಡ್‌…? ಅಥವಾ ಎರಡು ದೋಸೆ? ಹೀಗೆ ಗೊಂದಲಗಳು ಬಹಳಷ್ಟು ಇರಬಹುದು. ಅದಕ್ಕೆ ಉತ್ತರ ಇಲ್ಲಿದೆ.

VISTARANEWS.COM


on

Morning Nutrition
Koo

ಹೆಚ್ಚಿನ ಜನಕ್ಕೆ ಬೆಳಗಿನ ತಿಂಡಿಯ ಮಹತ್ವವೇ ತಿಳಿದಿರುವುದಿಲ್ಲ. ಈ ಮಾತನ್ನು ಹೇಳುವುದಕ್ಕೂ ಕಾರಣವಿದೆ. ಬೆಳಗ್ಗೆ (Morning Nutrition) ತಿಂಡಿಯನ್ನು ಎದ್ದ ನಾಲ್ಕು ತಾಸುಗಳ ನಂತರ ತಿನ್ನುವುದು, ಕೆಲವೊಮ್ಮೆ ತಿಂಡಿಯನ್ನೇ ತಿನ್ನದಿರುವುದು, ದಿನದ ಪ್ರಾರಂಭಕ್ಕೆ ಸೂಕ್ತ ಅಲ್ಲದ್ದನ್ನು ತಿನ್ನುವುದು, ಕೇವಲ ಕಾಫಿ/ಟೀ ಕುಡಿದು ಮಧ್ಯಾಹ್ನ ಊಟ ಮಾಡುವುದು- ಇಂಥ ಉದಾಹರಣೆಗಳು ಕಡಿಮೆಯೇನಿಲ್ಲ. ಆದರೆ ಬೆಳಗಿನ ತಿಂಡಿಯನ್ನು ದಿನದ ಅತ್ಯಂತ ಆರೋಗ್ಯಕರ ಊಟವನ್ನಾಗಿ ಮಾಡುವುದು ಮಹತ್ವದ್ದು ಎನ್ನುತ್ತಾರೆ ಪೌಷ್ಟಿಕಾಂಶ ತಜ್ಞರು. ರಾತ್ರಿಡೀ ದೇಹಕ್ಕೆ ಅಗತ್ಯವಾದ ವಿಶ್ರಾಂತಿಯನ್ನು ನೀಡಿದ್ದಾಗಿದೆ. ಇನ್ನೀಗ ಮುಂಜಾನೆದ್ದು ದಿನವನ್ನು ಪ್ರಾರಂಭಿಸಬೇಕು ಎನ್ನುವಾಗ, ದೇಹಕ್ಕೆ ನೀಡುವಂಥ ಗ್ರಾಸ ಹೇಗಿರಬೇಕು? ಅಧಿಕ ಸತ್ವಗಳನ್ನು ಹೊಂದಿದ ಆಹಾರವನ್ನೇ ತಿನ್ನಬೇಕು ಎಂದಾದರೆ, ಏಕೆ ಹಾಗೆ? ಬೆಳಗ್ಗೆ ತಿಂಡಿ ತಿನ್ನದಿದ್ದರೆ ತೂಕ ಇಳಿಸುವುದು ಸಾಧ್ಯವಿಲ್ಲವೇ? ಇಂತಹ ಹಲವಾರು ಪ್ರಶ್ನೆಗಳು ಮನದಲ್ಲಿದ್ದರೆ, ಅವಕ್ಕೆಲ್ಲ ಉತ್ತರ ಹುಡುಕುವ ಪ್ರಯತ್ನ ಇಲ್ಲಿದೆ. ಬೆಳಗಿನ ತಿಂಡಿಗೆ ಆರೋಗ್ಯಕರ ಕೊಬ್ಬುಗಳು, ಸಂಕೀರ್ಣ ಪಿಷ್ಟ ಮತ್ತು ಪ್ರೊಟೀನ್‌ ಇರುವಂಥ ಆಹಾರ ಅಗತ್ಯ. ಈ ಸತ್ವಗಳ ಮಿಶ್ರಣವು ದೇಹವು ದೀರ್ಘಕಾಲದವರೆಗೆ ಬಳಲದಂತೆ ನೋಡಿಕೊಳ್ಳುತ್ತದೆ. ದಿನವಿಡೀ ಅಗತ್ಯವಾದ ಚೈತನ್ಯವನ್ನು ದೇಹಕ್ಕೆ ನೀಡುತ್ತದೆ ಮತ್ತು ಆಹಾರ ತಿಂದ ತೃಪ್ತಿಯನ್ನು ಒದಗಿಸುತ್ತದೆ. ಜೊತೆಗೆ, ಬೇಗ ಹಸಿವಾಗುವುದನ್ನು ತಡೆಯುತ್ತದೆ. ಇಂಥ ಆಹಾರವು ದೇಹಕ್ಕೆ ಮಾತ್ರವಲ್ಲ, ಮನಸ್ಸಿಗೂ ಬೇಕಾದ ಗ್ರಾಸವನ್ನು ಒದಗಿಸಿಕೊಡುತ್ತದೆ. ಈ ಬಗ್ಗೆ ವಿವರಣೆ ಇಲ್ಲಿದೆ.

South Indian breakfast

ಸಂಕೀರ್ಣ ಪಿಷ್ಟಗಳು

ನಮ್ಮೆಲ್ಲ ಚಟುವಟಿಕೆಗಳನ್ನು ಮಾಡುವುದಕ್ಕೆ ನಮಗೆ ಪಿಷ್ಟ ಅಥವಾ ಕಾರ್ಬೊಹೈಡ್ರೇಟ್‌ಗಳು ಬೇಕು. ಆದರೆ ಮೈದಾ ಅಥವಾ ಸಂಸ್ಕರಿತ ತಿನಿಸುಗಳಿಂದ ಬರುವಂಥ ಸರಳ ಪಿಷ್ಟವಲ್ಲ, ದೀರ್ಘ ಕಾಲದವರೆಗೆ ಶಕ್ತಿಯನ್ನು ಉಣಿಸುವಂಥ ಸಂಕೀರ್ಣವಾದ ಪಿಷ್ಟಗಳು ಬೇಕು. ಇದನ್ನು ಇಡೀ ಧಾನ್ಯಗಳು, ಓಟ್ಸ್‌, ಸಿರಿ ಧಾನ್ಯಗಳು, ಕಿನೊವಾ, ರಾಗಿ ಮುಂತಾದ ನಾರುಭರಿತ ಅಂದರೆ ತೌಡು ಸಹಿತವಾದ ಧಾನ್ಯಗಳಿಂದ ಪಡೆಯಬಹುದು. ಈ ಧಾನ್ಯಗಳಿಂದ ಉಪ್ಪಿಟ್ಟು, ಅವಲಕ್ಕಿ, ದೋಸೆ, ಇಡ್ಲಿ, ಚಿತ್ರಾನ್ನ… ನಿಮಗೆ ಇಷ್ಟವಾದ ಯಾವುದನ್ನಾದರೂ ಮಾಡಿ.

ಪ್ರೊಟೀನ್‌

ಬೆಳಗಿನ ತಿಂಡಿಗೆ ಹೆಚ್ಚಿನ ಪ್ರಮಾಣದ ಪ್ರೊಟೀನ್‌ ಅಗತ್ಯ. ಇದರಿಂದ ದೇಹದ ರಿಪೇರಿ ಕೆಲಸ, ಹಾರ್ಮೋನುಗಳ ಕ್ಷಮತೆ, ಕಿಣ್ವಗಳ ಉತ್ಪಾದನೆ ಮುಂತಾದ ಮಹತ್ವದ ಕೆಲಸಗಳೆಲ್ಲವೂ ಮಟ್ಟಸವಾಗಿ ಇರುತ್ತದೆ. ಇದಕ್ಕಾಗಿ ಹಾಲು, ಮೊಸರು, ಗ್ರೀಕ್‌ ಯೋಗರ್ಟ್‌, ಪನೀರ್‌, ತೋಫು, ಮೊಟ್ಟೆ, ಕಾಳುಗಳು, ಸೋಯಾ, ಕಾಯಿ ಮತ್ತು ಬೀಜಗಳು ಬೆಳಗಿನ ಆಹಾರದಲ್ಲಿ ಇರಬೇಕು. ಆಮ್ಲೆಟ್‌ ಜೊತೆಗೆ ಇಡೀಧಾನ್ಯದ ಬ್ರೆಡ್‌ ಅಥವಾ ಚಪಾತಿಯಂಥವು ಬೇಕು ಎನ್ನುವುದು ಸ್ಪಷ್ಟವಾಗಿದೆಯಲ್ಲವೇ?

ಇದನ್ನೂ ಓದಿ: World Blood Donor Day: ರಕ್ತದಾನ ಯಾರು ಮಾಡಬಹುದು? ಯಾರು ಮಾಡಬಾರದು?

ಆರೋಗ್ಯಕರ ಕೊಬ್ಬು

ಇದು ಸಹ ಅತಿ ಮುಖ್ಯವಾದ ಸತ್ವ. ದೇಹದ ತೂಕವನ್ನು ನಿಯಂತ್ರಿಸಲು, ಹೆಚ್ಚಿನ ಕೊಬ್ಬು ದೇಹದಲ್ಲಿ ಜಮೆಯಾಗದಂತೆ ಕಾಯ್ದುಕೊಳ್ಳಲು ಇದು ಅಗತ್ಯ. ದೇಹದ ಅಂಗಾಂಗಗಳೆಲ್ಲ ಸರಿಯಾಗಿ ಕೆಲಸ ಮಾಡಲು ಈ ಕೊಬ್ಬು ಬೇಕೇಬೇಕು. ಇದಕ್ಕಾಗಿ ಅವಕಾಡೊ, ಕಾಯಿ-ಬೀಜಗಳು, ತುಪ್ಪ, ಕೊಬ್ಬರಿ ಎಣ್ಣೆಯಂಥ ಆರೋಗ್ಯಕರ ತೈಲಗಳು, ಪೀನಟ್‌ಬಟರ್‌ ಅಥವಾ ಇನ್ನಾವುದಾದರೂ ಬೀಜಗಳ ತುಪ್ಪ- ಇವೆಲ್ಲ ಶರೀರಕ್ಕೆ ಬೇಕು. ಮೆದುಳಿನ ಆರೋಗ್ಯ ರಕ್ಷಣೆಗಂತೂ ಇವು ತೀರಾ ಅಗತ್ಯವಾದವು. ಇವುಗಳಲ್ಲಿರುವ ಒಮೇಗಾ ೩ ಕೊಬ್ಬಿನಾಮ್ಲವು ಇಡೀ ದೇಹದ ಸ್ವಾಸ್ಥ್ಯಕ್ಕೆ ಅಗತ್ಯವಾಗಿದ್ದು.

drinking water

ನೀರು

ಇದಿಷ್ಟರ ಜೊತೆಗೆ ದಿನಕ್ಕೆ ಮೂರು ಲೀ. ನೀರು ಕುಡಿಯುವುದು ಬಹುಮುಖ್ಯ. ರಾತ್ರಿಡೀ ನೀರಿಲ್ಲದೆ ಇರುವಂಥ ದೇಹಕ್ಕೆ ಬೆಳಗಿನ ಹೊತ್ತು ಒಂದೆರಡು ಗ್ಲಾಸ್‌ ನೀರು ಕುಡಿಸಿ. ಬರೀ ನೀರು ಕುಡಿಯುವುದು ಕಷ್ಟ ಎನಿಸಿದರೆ, ಸಕ್ಕರೆ ರಹಿತವಾದ ಯಾವುದೇ ರಸಗಳನ್ನು ಸೇರಿಸಿಕೊಳ್ಳಬಹುದು. ಜೊತೆಗೆ, ದಿನವಿಡೀ ಹರ್ಬಲ್‌ ಚಹಾಗಳು, ಎಳನೀರು, ರಸಭರಿತ ಹಣ್ಣು-ತರಕಾರಿಗಳು, ಮಜ್ಜಿಗೆ- ಇಂಥವೆಲ್ಲ ದಿನದ ಮೂರು ಲೀ. ನೀರು ಕುಡಿಯುವ ಗುರಿಯನ್ನು ಪೂರ್ಣಗೊಳಿಸಲು ನೆರವಾಗುತ್ತವೆ.

Continue Reading

ದೇಶ

Indian Chutneys: ವಿಶ್ವದ ಟಾಪ್ 50 ಅಚ್ಚುಮೆಚ್ಚಿನ ತಿನಿಸುಗಳಲ್ಲಿ ಭಾರತದ ಈ ಎರಡು ಚಟ್ನಿಗಳು!

Indian Chutneys: ಅಡುಗೆ ಎಂಬ ಶಬ್ದ ಕಿವಿಯ ಮೇಲೆ ಇದ್ದರೆ ಹೊಟ್ಟೆ ಜಾಗೃತವಾಗುತ್ತದೆ. ರುಚಿಯಾದ ಅಡುಗೆಯನ್ನು ಚಪ್ಪರಿಸಿ ತಿನ್ನುವುದೇ ಒಂದು ಭಾಗ್ಯ. ಇನ್ನು ಮಸಾಲೆ ಸಾಮಗ್ರಿಗಳನ್ನು ಬಳಸಿ ಮಾಡುವ ಭಾರತದ ಅಡುಗೆಗಳು ಸಾಕಷ್ಟು ಪ್ರಸಿದ್ಧಿಯನ್ನು ಪಡೆದಿವೆ. ಭಾರತದ ಅಡುಗೆಗೆ ಈಗ ಇನ್ನೊಂದು ಗರಿ ಮೂಡಿದೆ. ಅದೇನೆಂದರೆ ಊಟದ ಎಲೆಯ ತುದಿಯ ಮೇಲೆ ಬೀಳುವ ಚಟ್ನಿ  ಈಗ ವಿಶ್ವದ 50 ಡಿಪ್‌ ಗಳಲ್ಲಿ ಸ್ಥಾನ ಪಡೆದಿದೆಯೆಂತೆ.  

VISTARANEWS.COM


on

Indian Chutneys
Koo

ಬೆಂಗಳೂರು: ಚಟ್ನಿ ಎಂದಾಗ ಬಾಯಲ್ಲಿ ನೀರು ಬರುವುದು ಸಹಜ. ದೋಸೆ, ಇಡ್ಲಿ ಮಾಡಿದಾಗ ಸಾಂಬಾರಿನ ಹಂಗಿಲ್ಲದೇ ಚಟ್ನಿ ಜೊತೆ ಇವುಗಳನ್ನು ಸವಿಯಬಹುದು. ಇನ್ನು ಬಿಸಿ ಬಿಸಿ ಅನ್ನದ (Rice) ಜೊತೆಗೆ ಈ ಚಟ್ನಿಯ ಕಾಂಬಿನೇಷನ್‌ ಸೂಪರ್‌ ಆಗಿರುತ್ತದೆ. ಹೆಚ್ಚಾಗಿ  ನಾವು ಕೊತ್ತಂಬರಿಸೊಪ್ಪಿನ ಚಟ್ನಿ, ಮಾವಿನಕಾಯಿ ಚಟ್ನಿ (Mango Chutney), ಟೊಮೆಟೊ ಚಟ್ನಿ, ಶೇಂಗಾ ಚಟ್ನಿ ಮಾಡುತ್ತೇವೆ. ಇನ್ನು ಹಲವು ಬಗೆಯ ತರಕಾರಿಗಳನ್ನು ಬಳಸಿ ರುಚಿ ರುಚಿಯಾದ ಚಟ್ನಿಗಳನ್ನು ಮಾಡಬಹುದು. ಚಟ್ನಿಯ ಕುರಿತು ಯಾಕಿಷ್ಟು ಪೀಠಿಕೆಯೆಂದರೆ, ಇದೀಗ ಭಾರತದ ಚಟ್ನಿಗಳಲ್ಲಿ (Indian Chutneys)ಎರಡು ಚಟ್ನಿಗಳು ವಿಶ್ವದ 50 ಡಿಪ್ ಗಳಲ್ಲಿ ಸ್ಥಾನ ಪಡೆದಿವೆಯಂತೆ!

ಟೇಸ್ಟ್ ಅಟ್ಲಾಸ್ ಇತ್ತೀಚೆಗೆ ಜೂನ್ 2024ರ  ಶ್ರೇಯಾಂಕದ ಪ್ರಕಾರ ವಿಶ್ವದ 50 ಅತ್ಯುತ್ತಮ ಡಿಪ್ ಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಅದರಲ್ಲಿ ಭಾರತೀಯ ಮಿಕ್ಸ್ ಚಟ್ನಿ  42ನೇ ಸ್ಥಾನ ಪಡೆದುಕೊಂಡಿದೆ. ಈ ಚಟ್ನಿಯನ್ನು ಬೇಯಿಸಿದ ಹಣ್ಣು ಮತ್ತು ತರಕಾರಿಗಳಿಂದ ತಯಾರಿಸಲಾಗುತ್ತದೆ. ಹಣ್ಣು ಹಾಗೂ ತರಕಾರಿಗಳನ್ನು ಸಣ್ಣ ತುಂಡುಗಳಾಗಿ ಕತ್ತರಿಸಿ ಅದಕ್ಕೆ ಜೀರಿಗೆ, ಏಲಕ್ಕಿ, ಹುಣಸೆಹಣ್ಣು, ಶುಂಠಿ ಮತ್ತು ಅರಿಶಿನದಂತಹ ವಿವಿಧ ಮಸಾಲೆಗಳನ್ನು ಬೆರೆಸಿ ತಯಾರಿಸಲಾಗುತ್ತದೆಯಂತೆ. ಇದನ್ನು “ಭಾರತದ ರಾಷ್ಟ್ರೀಯ ಕಾಂಡಿಮೆಂಟ್ಸ್”ಎಂದು ಕರೆಯಲಾಗಿದೆ. ಹಾಗೇ ಟೇಸ್ಟ್ ಅಟ್ಲಾಸ್ ನ ಪಟ್ಟಿಯಲ್ಲಿ 47 ನೇ ಸ್ಥಾನದಲ್ಲಿ ನಮಗೆ ಪ್ರಿಯವಾದಂತಹ ಕೊತ್ತಂಬರಿ ಚಟ್ನಿ (ಧನಿಯಾ ಚಟ್ನಿ) ಹಾಗೂ ಕೊನೆಯ ಅಂದರೆ 50 ನೇ ಸ್ಥಾನದಲ್ಲಿ ಮಾವಿನ ಚಟ್ನಿ ಇದೆ. ಇದನ್ನು ಮಾವಿನ ಹಣ್ಣಿನಿಂದ ತಯಾರಿಸಲಾಗುತ್ತದೆ. ಈ ಮಾವಿನ ಚಟ್ನಿ ಹುಳಿ, ಸಿಹಿ ಮತ್ತು ಮಸಾಲೆಯ ಸುವಾಸನೆಯಿಂದ ಕೂಡಿತ್ತು ಎನ್ನಲಾಗಿದೆ.

ಅಲ್ಲದೇ ಈ ಪಟ್ಟಿಯಲ್ಲಿ ಲೆಬನಾನ್ ನಿಂದ ಟೌಮ್ ಮೊದಲ ಸ್ಥಾನದಲ್ಲಿದ್ದರೆ , ಮೆಕ್ಸಿಕನ್ ನ ಜನಪ್ರಿಯ ಡಿಲೈಟ್ ಗ್ವಾಕಮೋಲ್ 4ನೇ ಸ್ಥಾನದಲ್ಲಿದೆ. ಹಮ್ಮಸ್ 10 ನೇ ಸ್ಥಾನವನ್ನು ಪಡೆದುಕೊಂಡಿದೆ.

ಇದಕ್ಕೂ ಮೊದಲು ಹಲವಾರು ಭಾರತೀಯ ಭಕ್ಷ್ಯಗಳು ಟೇಸ್ಟ್ ಅಟ್ಲಾಸ್ ನ ಟಾಪ್ 50 ಪಟ್ಟಿಗಳಲ್ಲಿ ಸ್ಥಾನ ಪಡೆದಿತ್ತು. ವಡಾ ಪಾವ್, ಮಹಾರಾಷ್ಟ್ರದ ಪ್ರಸಿದ್ಧ ಬೀದಿ ಶೈಲಿಯ ತಿಂಡಿ ವಿಶ್ವದ ಅತ್ಯುತ್ತಮ ಸ್ಯಾಂಡ್ ವಿಚ್ ಗಳಲ್ಲಿ ಹೆಸರು ಪಡೆದಿವೆ.  ಅಷ್ಟೇ ಅಲ್ಲದೇ ಮೂರು ಭಾರತೀಯ ಸಿಹಿತಿಂಡಿಗಳು ವಿಶ್ವದ 10 ಅತ್ಯುತ್ತಮ ರೈಸ್ ಪುಡಿಂಗ್ ಗಳಲ್ಲಿ ಸ್ಥಾನ ಪಡೆದಿವೆ.

ಇದೇ ರೀತಿ ಭಾರತೀಯ ಎಲ್ಲಾ ಭಕ್ಷ್ಯಗಳು ವಿಶ್ವದ ಎಲ್ಲಾ ಕಡೆ ಮೆಚ್ಚುಗೆಯನ್ನು ಗಳಿಸುವಂತಾಗಲಿ. ಎಲ್ಲರ ನಾಲಿಗೆಯ ರುಚಿಯನ್ನು ಹೆಚ್ಚಿಸುವಂತಾಗಲಿ.

Continue Reading

ಆಹಾರ/ಅಡುಗೆ

Dry Fruits: ಈ ಒಣಹಣ್ಣುಗಳನ್ನು ಬೆಳಗ್ಗೆ ಎದ್ದ ಕೂಡಲೇ ತಿನ್ನುವುದು ಒಳ್ಳೆಯದಲ್ಲ!

ಬೆಳಗ್ಗೆ ಎದ್ದ ಕೂಡಲೇ ಕೆಲವು ಬಗೆಯ ಬೀಜಗಳು ಹಾಗೂ ಒಣ ಹಣ್ಣುಗಳು ತಿನ್ನಲು ಯೋಗ್ಯವಲ್ಲ ಎಂಬ ವಿಚಾರ ನಿಮಗೆ ಗೊತ್ತೇ? ಹೌದು. ಎಲ್ಲ ಒಣ ಹಣ್ಣುಗಳೂ (dry fruits) ಕೂಡಾ ಬೆಳಗ್ಗೆ ಎದ್ದ ಕೂಡಲೇ ಖಾಲಿ ಹೊಟ್ಟೆಯಲ್ಲಿ ತಿನ್ನುವುದು ಯೋಗ್ಯವಲ್ಲ. ಒಣಹಣ್ಣುಗಳಲ್ಲಿ ಸಕ್ಕರೆಯ ಅಂಶ ಅತ್ಯಂತ ಹೆಚ್ಚಿನ ಪ್ರಮಾಣದಲ್ಲಿ ಇರುವುದರಿಂದ ಬೆಳಗ್ಗೆ ಎದ್ದ ಕೂಡಲೇ ಅವನ್ನು ತಿನ್ನುವುದರಿಂದ ಇವು ನಮ್ಮ ಜೀರ್ಣಕ್ರಿಯೆಯ ಮೇಲೆ ಅಡ್ಡ ಪರಿಣಾಮ ಬೀರಬಹುದಂತೆ. ಅಷ್ಟೇ ಅಲ್ಲ, ರಕ್ತದಲ್ಲಿರುವ ಸಕ್ಕರೆಯ ಪ್ರಮಾಣ ಒಡನೆಯೇ ಏರುತ್ತದೆ. ಯಾವೆಲ್ಲ ಒಣಹಣ್ಣುಗಳನ್ನು ನೀವು ಬೆಳಗ್ಗಿನ ಹೊತ್ತಿನಲ್ಲಿ ಎದ್ದ ಕೂಡಲೇ ತಿನ್ನಬಾರದು ಎಂಬುದರ ಮಾಹಿತಿ ಇಲ್ಲಿದೆ.

VISTARANEWS.COM


on

dry fruits
Koo

ಒಣ ಹಣ್ಣುಗಳು ಹಾಗೂ ಬೀಜಗಳು (dry fruits) ಬೆಳಗ್ಗೆ ಎದ್ದ ಕೂಡಲೇ ತಿಂದರೆ ಒಳ್ಳೆಯದು ಎಂಬುದು ಈಗ ಬಹುತೇಕ ಎಲ್ಲರಿಗೂ ತಿಳಿದ ವಿಚಾರವೇ ಆಗಿದೆ. ಹೀಗಾಗಿ ರಾತ್ರಿ ಮಲಗುವ ಸಂದರ್ಭವೇ ಇವನ್ನೆಲ್ಲ ನೆನೆ ಹಾಕಿ ಇಟ್ಟುಕೊಂಡು ಬೆಳಗ್ಗೆ ಎದ್ದ ಕೂಡಲೇ ತಿನ್ನುತ್ತೇವೆ. ನಮ್ಮ ಆರೋಗ್ಯಕ್ಕೆ ಒಳ್ಳೆಯದನ್ನೇ ನಾವು ಮಾಡುತ್ತಿದ್ದೇವೆ ಎಂದು ನಾವು ಅಂದುಕೊಳ್ಳುತ್ತೇವೆ. ಆದರೆ, ಬೆಳಗ್ಗೆ ಎದ್ದ ಕೂಡಲೇ ಕೆಲವು ಬಗೆಯ ಬೀಜಗಳು ಹಾಗೂ ಒಣ ಹಣ್ಣುಗಳು ತಿನ್ನಲು ಯೋಗ್ಯವಲ್ಲ ಎಂಬ ವಿಚಾರ ನಿಮಗೆ ಗೊತ್ತೇ? ಹೌದು. ಎಲ್ಲ ಒಣ ಹಣ್ಣುಗಳೂ ಕೂಡಾ ಬೆಳಗ್ಗೆ ಎದ್ದ ಕೂಡಲೇ ಖಾಲಿ ಹೊಟ್ಟೆಯಲ್ಲಿ ತಿನ್ನುವುದು ಯೋಗ್ಯವಲ್ಲ. ಒಣಹಣ್ಣುಗಳಲ್ಲಿ ಸಕ್ಕರೆಯ ಅಂಶ ಅತ್ಯಂತ ಹೆಚ್ಚಿನ ಪ್ರಮಾಣದಲ್ಲಿ ಇರುವುದರಿಂದ ಬೆಳಗ್ಗೆ ಎದ್ದ ಕೂಡಲೇ ಅವನ್ನು ತಿನ್ನುವುದರಿಂದ ಇವು ನಮ್ಮ ಜೀರ್ಣಕ್ರಿಯೆಯ ಮೇಲೆ ಅಡ್ಡ ಪರಿಣಾಮ ಬೀರಬಹುದಂತೆ. ಅಷ್ಟೇ ಅಲ್ಲ, ರಕ್ತದಲ್ಲಿರುವ ಸಕ್ಕರೆಯ ಪ್ರಮಾಣ ಒಡನೆಯೇ ಏರುತ್ತದೆ. ಹೀಗಾಗಿ, ಇವನ್ನು ಬೇರೆ ಹೊತ್ತಿನಲ್ಲಿ ಸೇವಿಸುವುದು ಉಚಿತ. ಬನ್ನಿ, ಯಾವೆಲ್ಲ ಒಣಹಣ್ಣುಗಳನ್ನು ನೀವು ಬೆಳಗ್ಗಿನ ಹೊತ್ತಿನಲ್ಲಿ ಎದ್ದ ಕೂಡಲೇ ತಿನ್ನಬಾರದು ಎಂಬುದನ್ನು ನೋಡೋಣ.

Raisins Weight Loss Dry Fruits

ಒಣದ್ರಾಕ್ಷಿ

ಒಣದ್ರಾಕ್ಷಿ ಅತ್ಯಂತ ಸಿಹಿಯಾದ ಒಣಹಣ್ಣು. ಇದರಲ್ಲಿ ಸಕ್ಕರೆಯ ಪ್ರಮಾಣ ಅಧಿಕವಾಗಿರುತ್ತದೆ. ಇದರ ಸೇವನೆಯಿಂದ ಅನೇಕ ಆರೋಗ್ಯಕರ ಲಾಭಗಳಿರುವುದು ನಿಜವಾದರೂ, ಇದನ್ನು ಖಾಲಿ ಹೊಟ್ಟೆಯಲ್ಲಿ ಎದ್ದ ಕೂಡಲೇ ತಿನ್ನುವುದರಿಂದ ರಕ್ತದಲ್ಲಿ ಸಕ್ಕರೆಯ ಮಟ್ಟ ದಿಢೀರ್‌ ಏರಿಕೆಯಾಗುವ ಸಾಧ್ಯತೆ ಹೆಚ್ಚು. ಕೆಲವು ಬೀಜಗಳ ಜೊತೆಗೆ ಇದನ್ನು ಸೇರಿಸಿ ತಿನ್ನಬಹುದಾದರೂ, ಬೆಳಗಿನ ಸೇವನೆ ಅಷ್ಟು ಒಳ್ಳೆಯದಲ್ಲ.

Figs Dry Fruits For Hair Fall

ಒಣ ಅಂಜೂರ

ನಾರಿನಂಶ ಅತ್ಯಂತ ಅಧಿಕವಾಗಿರುವ ಒಣ ಅಂಜೂರದ ಹಣ್ಣು ಆರೋಗ್ಯಕ್ಕೆ ಅತ್ಯಂತ ಒಳ್ಳೆಯದು. ಮಲಬದ್ಧತೆ ಸಮಸ್ಯೆ ಇರುವ ಮಂದಿಗೆ, ಪೋಷಕಾಂಶಗಳ ಕೊರತೆ ಇರುವ ಮಂದಿಗೆ ಇದು ಒಳ್ಳೆಯ ಆಹಾರ. ವಿಟಮಿನ್‌ಗಳು, ಖನಿಜಾಂಶಗಳು ಇದರಲ್ಲಿ ಹೇರಳವಾಗಿ ಇರುವುದರಿಂದ ಇದೊಂದು ಸಂಪೂರ್ಣ ಆಹಾರ ಕೂಡಾ. ಆದರೆ ಸಕ್ಕರೆಯ ಅಂಶ ಇದರಲ್ಲಿ ಹೆಚ್ಚಿರುವುದರಿಂದ ಇದನ್ನು ತಿನ್ನುವುದರಿಂದ ರಕ್ತದಲ್ಲಿ ದಿಢೀರ್‌ ಸಕ್ಕರೆಯ ಮಟ್ಟ ಏರಿಕೆಯಾಗುವ ಸಂಭವವೂ ಇದೆ. ಜೊತೆಗೆ ಗ್ಯಾಸ್‌, ಹೊಟ್ಟೆಯುಬ್ಬರದಂತಹ ಸಮಸ್ಯೆಯನ್ನೂ ತಂದೊಡ್ಡಬಹುದು. ಇದಕ್ಕಾಗಿ, ಒಣ ಅಂಜೂರವನ್ನು ಬೇರೆ ಒಣಬೀಜಗಳ ಜೊತೆಗೆ ಸೇರಿಸಿ ತಿನ್ನಬಹುದು. ಆದರೂ ಎದ್ದ ಕೂಡಲೇ ತಿನ್ನುವ ಅಭ್ಯಾಸದಿಂದ ದೂರವಿಡುವುದು ಒಳ್ಳೆಯದು.

Fresh Medjool Dates

ಖರ್ಜೂರ

ಕಬ್ಬಿಣಾಂಶ ಸೇರಿದಂತೆ ಸಾಕಷ್ಟು ಪೋಷಕಾಂಶಗಳನ್ನು ಹೊಂದಿರುವ ಖರ್ಜೂರ ಕೂಡಾ ಬೆಳಗ್ಗೆ ಎದ್ದ ಕೂಡಲೇ ತಿನ್ನಬಹುದಾದ ಒಣ ಹಣ್ಣಲ್ಲ. ಸಾಕಷ್ಟು ಸಿಹಿಯಾಗಿರುವ ಖರ್ಜೂರವನ್ನು ತಿಂದ ತಕ್ಷಣ ರಕ್ತದಲ್ಲಿ ಸಕ್ಕರೆಯ ಅಂಶ ಏರುವ ಸಾಧ್ಯತೆಗಳೇ ಹೆಚ್ಚು. ಖರ್ಜೂರವನ್ನು ಬೇರೆ ಬೀಜಗಳ ಜೊತೆ ಸೇರಿಸಿ ತಿನ್ನಬಹುದಾದರೂ, ಬೇರೆ ಹೊತ್ತಿನಲ್ಲಿ ತಿನ್ನುವುದು ಉತ್ತಮ.

Dried apricots Weight Loss Dry Fruits

ಒಣ ಆಪ್ರಿಕಾಟ್‌

ಒಣ ಆಪ್ರಿಕಾಟ್‌ ಹಣ್ಣಿನಲ್ಲಿ ಸಾಕಷ್ಟು ಪೋಷಕಾಂಶಗಳೂ, ಖನಿಜಾಂಶಗಳೂ ಇರುವುದರ ಜೊತೆಗೆ ಸಕ್ಕರೆಯ ಅಂಶವೂ ಸಾಕಷ್ಟಿದೆ. ಬೆಳಗ್ಗೆಯೇ ಹೆಚ್ಚಿನ ಪ್ರಮಾಣದಲ್ಲಿ ತಿಂದರೆ ಇದರ ಸಕ್ಕರೆಯ ಅಂಶ ನೇರವಾಗಿ ರಕ್ತಕ್ಕೆ ಸೇರಿ ಸಕ್ಕರೆಯ ಅಂಶ ದಿಢೀರ್‌ ಏರಬಹುದು. ಅಷ್ಟೇ ಅಲ್ಲ, ಜೀರ್ಣದ ಸಮಸ್ಯೆಗಳೂ ಬರಬಹುದು. ಬೇರೆ ಬೀಜಗಳು ಹಾಗೂ ಧಾನ್ಯಗಳ ಜೊತೆಯಲ್ಲಿ ಬೇರೆ ಹೊತ್ತಿನಲ್ಲಿ ತೆಗೆದುಕೊಳ್ಳುವುದು ಒಳ್ಳೆಯದು.

Prunes Dry Fruits for Womens Health

ಪ್ರೂನ್‌

ಈ ಒಣಹಣ್ಣಿನಲ್ಲಿ ಸಾಕಷ್ಟು ಪ್ರಮಾಣದಲ್ಲಿ ನಾರಿನಂಶವಿದೆ. ಖನಿಜಾಂಶ, ಪೋಷಕಾಂಶಗಳೂ ಇವೆ. ನಾರಿನಂಶವಿರುವುದರಿಂದ ಬೆಳಗಿನ ಹೊತ್ತು ತಿನ್ನುವುದು ಒಳ್ಳೆಯದೇ ಆದರೂ, ಸಕ್ಕರೆ ಹೆಚ್ಚಿರುವುದರಿಂದ ದಿಢೀರ್‌ ಸಕ್ಕರೆಯ ಮಟ್ಟ ಏರುವ ಅಪಾಯವೂ ಇದೆ. ಹಾಗಾಗಿ, ಬೆಳಗಿನ ಹೊತ್ತು ಇದರಿಂದ ದೂರವಿಡಬಹುದು. ಅಥವಾ ಬೇರೆ ಒಣಬೀಜಗಳ ಜೊತೆಗೆ ಸೇರಿಸಿ ಬೇರೆ ಹೊತ್ತಿನಲ್ಲಿ ತಿನ್ನಬಹುದು.

Continue Reading

ಆರೋಗ್ಯ

Super Food For Kids: ನಿಮ್ಮ ಮಕ್ಕಳು ಜಾಣರಾಗಿ ಹೆಚ್ಚು ಅಂಕ ಗಳಿಸಬೇಕೆ? ಈ ಆಹಾರಗಳನ್ನು ಕೊಡಿ

ಮಕ್ಕಳಿಗೆ ಹೆಚ್ಚಿನ ಪೋಷಕಾಂಶಗಳ ಅಗತ್ಯವಿರುತ್ತದೆ. ಹೀಗಾಗಿ ಅವರ ನಿತ್ಯದ ಆಹಾರದಲ್ಲಿ ಕೆಲವೊಂದು ಪದಾರ್ಥಗಳು ಇರಲೇಬೇಕು. ಇದು ಅವರ ದೇಹಾರೋಗ್ಯ ಮಾತ್ರವಲ್ಲ ಮೆದುಳಿನ ಆರೋಗ್ಯಕ್ಕೂ ಬಹಳ ಒಳ್ಳೆಯದು. ಅಂತಹ ಆಹಾರ ಪದಾರ್ಥಗಳು (Super Food For Kids) ಯಾವುದು ಗೊತ್ತೇ? ಇಲ್ಲಿದೆ ಪೋಷಕರಿಗೆ ಉಪಯುಕ್ತ ಮಾಹಿತಿ.

VISTARANEWS.COM


on

By

Super Food For Kids
Koo

ನೆನಪಿನ ಶಕ್ತಿ (memory), ಏಕಾಗ್ರತೆ (concentration) ಮತ್ತು ಮೆದುಳಿನ ಕಾರ್ಯವನ್ನು (brain function) ಸುಧಾರಿಸುವ ಪ್ರಮುಖ ಅಂಶಗಳಲ್ಲಿ ಒಂದಾಗಿರುವುದರಿಂದ ಮಕ್ಕಳಿಗೆ (childrens) ಸರಿಯಾದ ಆಹಾರವನ್ನು (Super Food For Kids) ಆಯ್ಕೆ ಮಾಡುವುದು ಬಹಳ ಮುಖ್ಯ. ಮಕ್ಕಳು ಮೆದುಳು ಉತ್ತೇಜಕವಾಗಿ ಕಾರ್ಯನಿರ್ವಹಿಸುವ ಪೌಷ್ಟಿಕ ಆಹಾರಗಳನ್ನು (nutritious foods) ಸೇವಿಸಬೇಕು. ಮಗುವಿನ ಮೆದುಳನ್ನು ಶಕ್ತಿಯುತವಾಗಿ ಮತ್ತು ಚುರುಕಾಗಿಸಬಲ್ಲ ಕೆಲವು ಆಹಾರ ಪದಾರ್ಥಗಳು ಹೀಗಿವೆ.


ಹಾಲು

ಹೆಚ್ಚಿನ ಮಕ್ಕಳು ಹಾಲನ್ನು ಕುಡಿಯಲು ಇಷ್ಟಪಡುವುದಿಲ್ಲ. ಆದರೆ ಇದು ಮಗುವಿನ ಮೆದುಳನ್ನು ಚುರುಕುಗೊಳಿಸುವ ಅತ್ಯಂತ ಪ್ರಮುಖ ಆಹಾರ ಪದಾರ್ಥವಾಗಿದೆ. ಹಾಲಿನಲ್ಲಿ ಹೆಚ್ಚಿನ ಪ್ರಮಾಣದ ಕ್ಯಾಲ್ಸಿಯಂ, ವಿಟಮಿನ್ ಡಿ ಮತ್ತು ಪ್ರೊಟೀನ್ ಇದ್ದು ಇದು ಮಗುವಿನ ಮೆದುಳಿನ ಕಾರ್ಯವನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.


ಮೊಟ್ಟೆ

ಮೊಟ್ಟೆಗಳಲ್ಲಿ ಹೆಚ್ಚಿನ ಪ್ರಮಾಣದ ವಿಟಮಿನ್ ಡಿ ಮತ್ತು ಪ್ರೊಟೀನ್ ಇದೆ. ಇದು ನಮ್ಮ ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿಯಾಗಿದೆ. ಮಗುವಿನ ಮೆದುಳನ್ನು ಆರೋಗ್ಯಕರವಾಗಿ ಮತ್ತು ತೀಕ್ಷ್ಣವಾಗಿಡುವಲ್ಲಿ ಮೊಟ್ಟೆಗಳು ತುಂಬಾ ಪರಿಣಾಮಕಾರಿಯಾಗಿರುವುದರಿಂದ ದೈನಂದಿನ ಆಹಾರದಲ್ಲಿ ಮೊಟ್ಟೆಗಳನ್ನು ಅಳವಡಿಸಿಕೊಳ್ಳಬೇಕು. ಮೊಟ್ಟೆಗಳಲ್ಲಿ ಇರುವ ಕೋಲೀನ್ ಮಕ್ಕಳ ಜ್ಞಾಪಕಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.


ಗೋಡಂಬಿ

ಹೆಚ್ಚಿನ ಪ್ರಮಾಣದಲ್ಲಿ ಪ್ರೋಟೀನ್, ವಿಟಮಿನ್‌ ಮತ್ತು ಖನಿಜಗಳನ್ನು ಒಳಗೊಂಡಿರುವ ಕಾರಣ ವಯಸ್ಸಿನ ಹೊರತಾಗಿಯೂ ಗೋಡಂಬಿ ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿಯಾಗಿದೆ. ಮಗುವಿನ ಮೆದುಳನ್ನು ಆರೋಗ್ಯವಾಗಿಡಲು ಅವರ ದೈನಂದಿನ ಆಹಾರದಲ್ಲಿ ಗೋಡಂಬಿಯನ್ನು ಸೇರಿಸಲು ಪ್ರಯತ್ನಿಸಿ.


ಧಾನ್ಯಗಳು

ಧಾನ್ಯಗಳು ಮಕ್ಕಳಿಗೆ ಪ್ರೋಟೀನ್, ವಿಟಮಿನ್ ಮತ್ತು ಖನಿಜಗಳ ಉತ್ತಮ ಮೂಲವಾಗಿದೆ. ಕಿಡ್ನಿ ಮತ್ತು ಪಿಂಟೋ ಧಾನ್ಯಗಳು ಯಾವುದೇ ರೀತಿಯ ಧಾನ್ಯಗಳು ಹೆಚ್ಚು ಒಮೆಗಾ 3 ಅನ್ನು ಹೊಂದಿರುತ್ತದೆ. ಧಾನ್ಯಗಳು ಅನ್ನು ಸಲಾಡ್‌ನೊಂದಿಗೆ ಬೆರೆಸಿ ಅಥವಾ ಕರಿ ಮಾಡುವ ಮೂಲಕ ಬಡಿಸಬಹುದು. ಧಾನ್ಯಗಳು ಜ್ಞಾಪಕ ಶಕ್ತಿ ಹೆಚ್ಚಿಸಲು ಮತ್ತು ಮೆದುಳನ್ನು ಆರೋಗ್ಯವಾಗಿಡಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: Benefits Of Cherries: ಚೆರ್ರಿ ಹಣ್ಣು ರುಚಿಗಷ್ಟೇ ಅಲ್ಲ, ಉತ್ತಮ ಆರೋಗ್ಯಕ್ಕೂ ಹಿತಕರ!


ಮೀನು

ಮಕ್ಕಳಿಗೆ ಪ್ರತಿದಿನ ಮೀನನ್ನು ಬಡಿಸಲು ಪ್ರಯತ್ನಿಸಿ. ಯಾಕೆಂದರೆ ಇದು ಆರೋಗ್ಯದ ಒಟ್ಟಾರೆ ಬೆಳವಣಿಗೆಗೆ ಹೆಚ್ಚು ಪ್ರಯೋಜನಕಾರಿಯಾಗಿದೆ. ಮೀನಿನಲ್ಲಿ ಹೆಚ್ಚಿನ ಪ್ರಮಾಣದ ಒಮೆಗಾ 3 ಇದ್ದು ಇದು ಜೀವಕೋಶಗಳ ನಿರ್ಮಾಣಕ್ಕೆ ಸಹಾಯ ಮಾಡುತ್ತದೆ.


ತರಕಾರಿಗಳು

ತರಕಾರಿಗಳು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿವೆ. ಮೆದುಳಿನ ಕೋಶಗಳನ್ನು ಆರೋಗ್ಯಕರವಾಗಿಡಲು ತರಕಾರಿಗಳು ಸಹಾಯ ಮಾಡುತ್ತದೆ. ಟೊಮ್ಯಾಟೊ, ಸಿಹಿ ಆಲೂಗಡ್ಡೆ, ಕುಂಬಳಕಾಯಿ, ಕ್ಯಾರೆಟ್ ಮತ್ತು ಪಾಲಕ್ ಮೊದಲಾದ ತರಕಾರಿಗಳನ್ನು ಮಗುವಿನ ನಿಯಮಿತ ಆಹಾರದಲ್ಲಿ ಸೇರಿಸಬೇಕು.

Continue Reading
Advertisement
Model Fashion pratibha nataraj
ಫ್ಯಾಷನ್1 min ago

Model Fashion: ಸೀಸನ್‌ ಗೆ ತಕ್ಕಂತೆ ಫ್ಯಾಷನ್‌ ಬದಲಿಸುವ ಮಿಸೆಸ್‌ ಬೆಂಗಳೂರು ಟೈಟಲ್‌ ವಿಜೇತೆ ಪ್ರತಿಭಾ ನಟರಾಜ್‌

Amy Jackson shares a glimpse of her Paris bachelorette
ಸಿನಿಮಾ13 mins ago

Amy Jackson: ಮದುವೆಗೂ ಮುನ್ನ ತಾಯಿಯಾಗಿದ್ದ ಆ್ಯಮಿ ಜಾಕ್ಸನ್‌ ಮತ್ತೆ ಸಪ್ತಪದಿ ತುಳಿಯಲು ರೆಡಿ!

PGCET 2024
ಶಿಕ್ಷಣ17 mins ago

PGCET 2024: ಪಿಜಿಸಿಇಟಿಗೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ; ಶುಲ್ಕ ಪಾವತಿಗೂ ಅವಕಾಶ

Euro 2024
ಕ್ರೀಡೆ21 mins ago

Euro 2024: ಇಂದು ರೊಮೇನಿಯಾ-ಉಕ್ರೇನ್ ನಡುವೆ ಕಾಲ್ಚೆಂಡಿನ ಕಾದಾಟ; ಯಾರಿಗೆ ಒಲಿಯಲಿದೆ ಗೆಲುವಿನ ಲಕ್​?

death news bhanuprakash petrol diesel price hike
ಪ್ರಮುಖ ಸುದ್ದಿ29 mins ago

Death News: “ಕಾಂಗ್ರೆಸ್‌ ಶವಯಾತ್ರೆ….” ಭಾಷಣ ಮುಗಿಸಿ ಬಿಜೆಪಿ ನಾಯಕ ಭಾನುಪ್ರಕಾಶ್ ಸ್ಥಳದಲ್ಲೇ ನಿಧನ

Petrol Diesel Price Hike
ಕರ್ನಾಟಕ38 mins ago

Petrol Diesel Price Hike: ಬಡವರ ಮೇಲೆ ತೆರಿಗೆ ಹಾಕಿ ಬೇರೆ ರಾಜ್ಯಗಳಿಗೆ ಹೋಲಿಸುವುದು ದ್ರೋಹ: ಬೊಮ್ಮಾಯಿ ಆಕ್ರೋಶ

Hunters Arrest
ಕ್ರೈಂ1 hour ago

Hunters Arrest : ಶಿವಮೊಗ್ಗದಲ್ಲಿ ಕಾಡುಕೋಣಗಳು ಬಲಿ; ಚಿಕ್ಕಬಳ್ಳಾಪುರ, ಬಾಗಲಕೋಟೆಯಲ್ಲಿ ಬೇಟೆಗಾರರು ಸೆರೆ

Petrol Diesel Price Hike
ಕರ್ನಾಟಕ1 hour ago

Petrol Diesel Price Hike: ಬಿಜೆಪಿಯವರು ಪ್ರತಿಭಟನೆ ಮಾಡಬೇಕಿರೋದು ಕೇಂದ್ರದ ವಿರುದ್ಧ: ಸಿಎಂ ತಿರುಗೇಟು

Kisan Samman Nidhi
ದೇಶ2 hours ago

Kisan Samman Nidhi: ರೈತರಿಗೆ ಗುಡ್‌ನ್ಯೂಸ್‌; ಕಿಸಾನ್‌ ಸಮ್ಮಾನ್‌ ನಿಧಿಯ 17ನೇ ಕಂತು ನಾಳೆ ನಿಮ್ಮ ಅಕೌಂಟ್‌ಗೆ; ಹೀಗೆ ಪರಿಶೀಲಿಸಿ

petrol diesel price hike bjp protest
ಪ್ರಮುಖ ಸುದ್ದಿ2 hours ago

Petrol Diesel Price Hike: ಪೆಟ್ರೋಲ್‌ ಬೆಲೆ ಏರಿಕೆ ಖಂಡಿಸಿ ಬಿಜೆಪಿ ವ್ಯಾಪಕ ಪ್ರತಿಭಟನೆ; ಎತ್ತಿನಗಾಡಿ, ಹೆಣ ಮೆರವಣಿಗೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Bakrid 2024
ಬೆಂಗಳೂರು3 hours ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ21 hours ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ22 hours ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 day ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ3 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ3 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

ಟ್ರೆಂಡಿಂಗ್‌