da hike for state government employees after end of election code of conduct Govt Employees News : ರಾಜ್ಯ ಸರ್ಕಾರಿ ನೌಕರರಿಗೆ ಚುನಾವಣಾ ನೀತಿ ಸಂಹಿತೆ ಅಂತ್ಯಗೊಂಡ ನಂತರ ತುಟ್ಟಿಭತ್ಯೆ ಹೆಚ್ಚಳ - Vistara News

ನೌಕರರ ಕಾರ್ನರ್

Govt Employees News : ರಾಜ್ಯ ಸರ್ಕಾರಿ ನೌಕರರಿಗೆ ಚುನಾವಣಾ ನೀತಿ ಸಂಹಿತೆ ಅಂತ್ಯಗೊಂಡ ನಂತರ ತುಟ್ಟಿಭತ್ಯೆ ಹೆಚ್ಚಳ

ರಾಜ್ಯ ಸರ್ಕಾರಿ ನೌಕರರಿಗೆ ಶೇ.4 ರಷ್ಟು ತುಟ್ಟಿ ಭತ್ಯೆ ಹೆಚ್ಚಳಕ್ಕೆ ಚುನಾವಣಾ ಆಯೋಗ ಈಗ ಅನುಮತಿ ನೀಡಿಲ್ಲ (Govt Employees News). ಹೀಗಾಗಿ ಚುನಾವಣಾ ನೀತಿ ಸಂಹಿತೆ ಅಂತ್ಯಗೊಂಡ ನಂತರ ರಾಜ್ಯ ಸರ್ಕಾರ ಈ ಸಂಬಂಧ ಆದೇಶ ಹೊರಡಿಸಲಿದೆ.

VISTARANEWS.COM


on

DA Hike News karnataka state govt employees
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕೇಂದ್ರ ಸರ್ಕಾರದಂತೆ ರಾಜ್ಯ ಸರ್ಕಾರವೂ ಶೇ.4 ರಷ್ಟು (da hike news) ತುಟ್ಟಿಭತ್ಯೆ (Dearness Allowance) ಹೆಚ್ಚಳ ಮಾಡಲಿದೆ ಎಂದು ನಿರೀಕ್ಷಿಸುತ್ತಿದ್ದ ರಾಜ್ಯ ಸರ್ಕಾರಿ ನೌಕರರಿಗೆ ಸದ್ಯ (Govt Employees News) ನಿರಾಸೆಯಾಗಿದೆ. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ತುಟ್ಟಿಭತ್ಯೆ ಹೆಚ್ಚಳಕ್ಕೆ ಚುನಾವಣಾ ಪ್ರಕ್ರಿಯೆ ಮುಗಿಯುವವರೆಗೂ ಸರ್ಕಾರಿ ನೌಕರರು ಕಾಯಬೇಕಾಗಿದೆ.

ಕೇಂದ್ರ ಸರ್ಕಾರಿ ನೌಕರರಿಗೆ ಶೇ.4 ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಿ ಕೇಂದ್ರ ಸರ್ಕಾರವು ಏ. 3 ರಂದು ಆದೇಶ ಹೊರಡಿಸಿತ್ತು. ಕೇಂದ್ರ ಸರ್ಕಾರ ಹೆಚ್ಚಳ ಮಾಡುತ್ತಿದ್ದಂತೆಯೇ ರಾಜ್ಯ ಸರ್ಕಾರ ಕೂಡ ಹೆಚ್ಚಳ ಮಾಡುವುದು ವಾಡಿಕೆಯಾಗಿದೆ. ಹೀಗಾಗಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ರಾಜ್ಯ ಸರ್ಕಾರಿ ನೌಕರರಿಗೂ ತುಟ್ಟಿಭತ್ಯೆಯನ್ನು (Dearness Allowance) ಹೆಚ್ಚಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಿತ್ತು.

ಈ ಹಿಂದಿನಿಂದಲೂ ಕೇಂದ್ರ ಸರ್ಕಾರದಂತೆಯೇ ರಾಜ್ಯ ಸರ್ಕಾರವೂ ತುಟ್ಟಿಭತ್ಯೆಯನ್ನು ಹೆಚ್ಚಳ ಮಾಡಿಕೊಂಡು ಬಂದಿದೆ. ಅದರಂತೆ ಈಗಲೂ ರಾಜ್ಯ ಸರ್ಕಾರಿ ನೌಕರರಿಗೂ ಸಹ ಜನವರಿ 1 ರಿಂದ ಪೂರ್ವಾನ್ವಯವಾಗಿ ಜಾರಿಗೆ ಬರುವಂತೆ ಶೇ. 4ರಷ್ಟು ತುಟ್ಟಿಭತ್ಯೆಯನ್ನು ಮಂಜೂರು ಮಾಡಿ ಆದೇಶ ಹೊರಡಿಸಬೇಕೆಂದು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ. ಎಸ್‌. ಷಡಾಕ್ಷರಿ ಕೋರಿದ್ದರು.

ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಇದಕ್ಕೆ ಚುನಾವಣಾ ಆಯೋಗದ ಅನುಮತಿ ಅಗತ್ಯವಾಗಿದ್ದು, ಸರ್ಕಾರ ಈ ಬಗ್ಗೆ ಆಯೋಗದ ಅನುಮತಿ ಕೇಳಿತ್ತು. ಆದರೆ ಕೇಂದ್ರ ಚುನಾವಣಾ ಆಯೋಗ ಚುನಾವಣಾ ನೀತಿ ಸಂಹಿತೆ ಅಂತ್ಯಗೊಂಡ ನಂತರ ತುಟ್ಟಿಭತ್ಯೆ ಹೆಚ್ಚಳ ಮಾಡುವಂತೆ ಸರ್ಕಾರಕ್ಕೆ ಸೂಚಿಸಿದೆ. ಹೀಗಾಗಿ ಸದ್ಯ ತುಟ್ಟಿ ಭತ್ಯೆ ಹೆಚ್ಚಳವಾಗುತ್ತಿಲ್ಲ.

ಎಂದು ಹೊರಡಲಿದೆ ಆದೇಶ?

ಸಿ.ಎಸ್‌. ಷಡಕ್ಷರಿ

ಚುನಾವಣಾ ನೀತಿ ಸಂಹಿತೆಯು ಮೇ.13 ರಂದು ಅಂತ್ಯಗೊಳ್ಳಲಿದೆ. ಆ ಕೂಡಲೇ ರಾಜ್ಯ ಸರ್ಕಾರ ಶೇ. 4 ಬಾಕಿ ತುಟ್ಟಿಭತ್ಯೆ ಆದೇಶವನ್ನು ದಿನಾಂಕ 01-01-2023 ರಿಂದ ಜಾರಿಗೆ ಬರುವಂತೆ ಆರ್ಥಿಕ ಇಲಾಖೆಯು ಆದೇಶ ಹೊರಡಿಸಲಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್‌. ಷಡಕ್ಷರಿ ತಿಳಿಸಿದ್ದಾರೆ.

7ನೇ ವೇತನ ಆಯೋಗದ (7th Pay commission) ಮಧ್ಯಂತರ ಪರಹಾರವಾಗಿ ಶೇ.17 ವೇತನ ಹೆಚ್ಚಳ ಮಾಡಿ ಸರ್ಕಾರ ಈಗಾಗಲೇ ಆದೇಶ ಹೊರಡಿಸಿದೆ. ಈ ಹೆಚ್ಚಳವನ್ನು ಏಪ್ರಿಲ್‌ ತಿಂಗಳ ವೇತನದಲ್ಲಿಯೇ ಜಾರಿಗೆ ತರಲಾಗುತ್ತದೆ. ಇದಕ್ಕೆ ಎಚ್‌ಆರ್‌ಎಂಎಸ್‌ ತಂತ್ರಾಂಶದಲ್ಲಿ ಅವಕಾಶ ಕಲ್ಪಿಸಲಾಗಿದ್ದು, ಎಲ್ಲ ನೌಕರರೂ ಈ ವೇತನ ಹೆಚ್ಚಳವನ್ನು ಪಡೆಯಲಿದ್ದಾರೆ ಎಂದು ಅವರು ʻವಿಸ್ತಾರ ನ್ಯೂಸ್‌ʼ ಗೆ ತಿಳಿಸಿದ್ದಾರೆ.

ರಾಜ್ಯ ಸರ್ಕಾರವು ಕಳೆದ ಅಕ್ಟೋಬರ್‌ನಲ್ಲಿ ಶೇ. 3.75ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಿತ್ತು. ಇದು 2022ರ ಜುಲೈ1 ರಿಂದ ಜಾರಿಗೆ ಬಂದಿತ್ತು. ಇದಕ್ಕಾಗಿ ಸರ್ಕಾರ ಹೆಚ್ಚುವರಿಯಾಗಿ ರೂ 1,282.72 ಕೋಟಿ ರೂ. ಭರಿಸಿತ್ತು. ಅದಕ್ಕೂ ಮೊದಲು ಏಪ್ರಿಲ್‌ನಲ್ಲಿ ಶೇ. 2.75 ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಲಾಗಿತ್ತು. ಇದು ಜನವರಿ 1 ರಿಂದ ಜಾರಿಗೆ ಬಂದಿತ್ತು. ಇದಕ್ಕಾಗಿ ಸರ್ಕಾರ 1,447 ಕೋಟಿ ರೂ. ವಾರ್ಷಿಕ ವೆಚ್ಚ ಭರಿಸಿತ್ತು.

ಸರ್ಕಾರಿ ನೌಕರರಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ (Click Here) ಕ್ಲಿಕ್‌ ಮಾಡಿ

ಕೇಂದ್ರ ಸರ್ಕಾರಿ ನೌಕರರಿಗೆ ಈಗಾಗಲೇ ಜಾರಿ

ಏಳನೇ ವೇತನ ಆಯೋಗದ ಶಿಫಾರಸಿನಂತೆ (7th Pay commission) ತುಟ್ಟಿ ಭತ್ಯೆಯನ್ನು ಶೇ. 4 ರಷ್ಟು ಹೆಚ್ಚಿಸಿ ಏ. 3ರಂದು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಇದರಿಂದ ಒಟ್ಟಾರೆ ತುಟ್ಟಿಭತ್ಯೆಯು ಶೇ. 38 ರಿಂದ 42ಕ್ಕೆ ಏರಿದಂತಾಗಿದೆ. ಈ ಭತ್ಯೆ ಹೆಚ್ಚಳಕ್ಕಾಗಿ ಕೇಂದ್ರ ಸರ್ಕಾರವು 12,815 ಕೋಟಿ ತೆಗೆದಿರಿಸಿದೆ.

ಈ ಹೆಚ್ಚಳವು ಜನವರಿ 1 ರಿಂದಲೇ ಜಾರಿಗೆ ಬಂದಿದೆ. ಸಾಮಾನ್ಯವಾಗಿ ಕೇಂದ್ರ ಸರ್ಕಾರ ಡಿಎ ಮತ್ತು ಡಿಆರ್‌ ಅನ್ನು ವರ್ಷಕ್ಕೆ ಎರಡು ಸಲ ಏರಿಸುತ್ತದೆ. ಜನವರಿ ಹಾಗೂ ಜುಲೈನಲ್ಲಿ ಇದು ನಡೆಯುತ್ತದೆ. 47.58 ಲಕ್ಷ ಕೇಂದ್ರ ಸರ್ಕಾರಿ ನೌಕರರು ಮತ್ತು 69.76 ಪಿಂಚಣಿದಾರರು ಈ ಹೆಚ್ಚಳದ ಸೌಲಭ್ಯ ಪಡೆಯಲಿದ್ದಾರೆ.

ಇತ್ತೀಚಿನ ಗ್ರಾಹಕ ದರ ಸೂಚ್ಯಂಕ (consumer price index) ಆಧರಿಸಿ ತುಟ್ಟಿಭತ್ಯೆಯ ಪ್ರಮಾಣವನ್ನು ಸರ್ಕಾರ ನಿರ್ಧರಿಸುತ್ತದೆ. ಡಿಎ ಏರಿಕೆ 2023ರ ಜನವರಿಯಿಂದ ಅನ್ವಯವಾಗಲಿದೆ. ಈ ಹಿಂದೆ 2022ರ ಸೆಪ್ಟೆಂಬರ್‌ 28ರಂದು ತುಟ್ಟಿಭತ್ಯೆಯ ಪರಿಷ್ಕರಣೆ ನಡೆದಿತ್ತು. ಅದು 2022ರ ಜುಲೈ 1 ರಿಂದ ಜಾರಿಯಾಗಿತ್ತು.

ಇದನ್ನೂ ಓದಿ : Govt Employees News : ಸರ್ಕಾರಿ ನೌಕರರಿಗೆ ಶೇ.17 ವೇತನ ಹೆಚ್ಚಳಕ್ಕೆ ಅನುದಾನ; ಆರ್ಥಿಕ ಇಲಾಖೆ ಸೂಚನೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Labour Day : ಮೇ 1ರಂದೇ ಕಾರ್ಮಿಕ ದಿನ ಆಚರಿಸುವುದು ಯಾಕೆ? ರಜೆ ಕೊಡಲು ಶುರು ಮಾಡಿದ್ದು ಯಾವಾಗ?

Labour Day: ಸಮಾಜಕ್ಕೆ ಕಾರ್ಮಿಕರ ಅಗತ್ಯತೆ ದೊಡ್ಡದು. ಹೀಗಾಗಿ ಅವರ ಹಕ್ಕುಗಳ ಬಗ್ಗೆಯೂ ಗಮನ ಹರಿಸಬೇಕು. ಹೀಗಾಗಿ ಅವರ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಲು ಪ್ರತಿವರ್ಷ ಮೇ 1 ರಂದು ಅಂತರರಾಷ್ಟ್ರೀಯ ಕಾರ್ಮಿಕ ದಿನವನ್ನು ಆಚರಿಸಲಾಗುತ್ತದೆ. ಈ ದಿನದಂದು, ಪ್ರಪಂಚದಾದ್ಯಂತದ ಕಾರ್ಮಿಕರು ತಮ್ಮ ಸಾಧನೆಗಳು ಮತ್ತು ಸಮಾಜಕ್ಕೆ ನೀಡಿದ ಕೊಡುಗೆಗಳನ್ನು ಸ್ಮರಿಸಲಾಗುತ್ತದೆ.

VISTARANEWS.COM


on

labour Day
Koo

ಬೆಂಗಳೂರು: ಕಾರ್ಮಿಕರು ಯಾವುದೇ ಸಮಾಜ ಅಥವಾ ದೇಶದ ಶಕ್ತಿ. ಅವರಿಂದಲೇ ದೇಶ ಅಭಿವೃದ್ಧಿಯ ಪಥದಲ್ಲಿ ಸಾಗುತ್ತದೆ. ಕಾರ್ಮಿಕರು ರಾಷ್ಟ್ರೀಯ ಸಂಪತ್ತು. ಹೀಗೆ ಹಲವು ರೀತಿಯಲ್ಲಿ ಸಮಾಜದ ಅಭಿವೃದ್ಧಿಗೆ ನೆರವಾ ಗುವ ಕಾರ್ಮಿಕರಿಗಾಗಿಯೇ ಒಂದು ದಿನವಿದೆ. ಅದುವೇ ಕಾರ್ಮಿಕರ ದಿನ. ಅಂದರೆ ಮೇ1. ಜಗತ್ತಿನ ಹಲವಾರು ದೇಶಗಳಲ್ಲಿ ಕಾರ್ಮಿಕ ದಿನವನ್ನು (Labour Day ) ರಾಷ್ಟ್ರೀಯ ರಜಾದಿನವಾಗಿ ಆಚರಿಸಲಾಗುತ್ತದೆ. ಈ ಸಂದರ್ಭವನ್ನು ‘ಮೇ ದಿನ’ ಅಥವಾ ಕಾರ್ಮಿಕರ ದಿನ ಎಂದೂ ಕರೆಯಲಾಗುತ್ತದೆ. ಈ ದಿನವನ್ನು ಕೆಲಸ ಮಾಡುವವರಿಗೆ ವಿಶ್ರಾಂತಿ ದಿನವಾಗಿ ಆಚರಿಸಲಾಗುತ್ತದೆ

ಸಮಾಜಕ್ಕೆ ಕಾರ್ಮಿಕರ ಅಗತ್ಯತೆ ದೊಡ್ಡದು. ಹೀಗಾಗಿ ಅವರ ಹಕ್ಕುಗಳ ಬಗ್ಗೆಯೂ ಗಮನ ಹರಿಸಬೇಕು. ಹೀಗಾಗಿ ಅವರ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಲು ಪ್ರತಿವರ್ಷ ಮೇ 1 ರಂದು ಅಂತರರಾಷ್ಟ್ರೀಯ ಕಾರ್ಮಿಕ ದಿನವನ್ನು ಆಚರಿಸಲಾಗುತ್ತದೆ. ಈ ದಿನದಂದು, ಪ್ರಪಂಚದಾದ್ಯಂತದ ಕಾರ್ಮಿಕರು ತಮ್ಮ ಸಾಧನೆಗಳು ಮತ್ತು ಸಮಾಜಕ್ಕೆ ನೀಡಿದ ಕೊಡುಗೆಗಳನ್ನು ಸ್ಮರಿಸಲಾಗುತ್ತದೆ. ಕಾರ್ಮಿಕ ದಿನವನ್ನು ವಿಶ್ವದಾದ್ಯಂತ ಹಲವಾರು ದೇಶಗಳಲ್ಲಿ ರಾಷ್ಟ್ರೀಯ ರಜಾದಿನವಾಗಿ ಆಚರಿಸಲಾಗುತ್ತದೆ. ಈ ವಿಶೇಷ ಸಂದರ್ಭದ ಇತಿಹಾಸ, ಮಹತ್ವ ಅರಿಯೋಣ.

ಅಂತಾರಾಷ್ಟ್ರೀಯ ಕಾರ್ಮಿಕ ದಿನ 2024 ಇತಿಹಾಸ

ಅಂತಾರರಾಷ್ಟ್ರೀಯ ಕಾರ್ಮಿಕ ದಿನದ ಇತಿಹಾಸವು 1889 ರಲ್ಲಿ ಯುರೋಪ್, ಪ್ಯಾರಿಸ್​​ನಲ್ಲಿ ನಡೆದ ಸೋಶಿಯಲಿಸ್ಟ್​ ಪಾರ್ಟಿಗಳ ಮೊದಲ ಸಭೆ (ಇಂಟರ್​ನ್ಯಾಷನಲ್​ ಕಾಂಗ್ರೆಸ್​​) ಮೇ 1 ರಂದು ನಡೆಯಿತು. ಅದನ್ನು ಕಾರ್ಮಿಕರಿಗೆ ಸಮರ್ಪಿಸಲು ಮತ್ತು ಅದನ್ನು ಅಂತರರಾಷ್ಟ್ರೀಯ ಕಾರ್ಮಿಕ ದಿನ ಎಂದು ಘೋಷಣೆ ಮಾಡಲಾಯಿತು. 1886 ರಲ್ಲಿ, ಅಮೆರಿಕದ ಕೆಲವು ಭಾಗಗಳಲ್ಲಿ ಕಾರ್ಮಿಕರು ಗರಿಷ್ಠ ಎಂಟು ಗಂಟೆಗಳ ಕೆಲಸದ ದಿನಕ್ಕೆ ಒತ್ತಾಯಿಸಿ ಮುಷ್ಕರ ನಡೆಸಿದ್ದರು. ಮುಷ್ಕರದ ಮೂರನೇ ದಿನ ಚಿಕಾಗೋದಲ್ಲಿ ಹಿಂಸಾಚಾರ ಉಂಟಾಯಿತು. ಈ ಘಟನೆಯನ್ನು ‘ದಿ ಹೇಮಾರ್ಕೆಟ್ ಅಫೇರ್’ ಎಂದು ಕರೆಯಲಾಯಿತು. ಇದು ಅಂತರರಾಷ್ಟ್ರೀಯ ಕಾರ್ಮಿಕ ದಿನದ ಸ್ಥಾಪನೆಗೆ ಕಾರಣವಾಯಿತು.

ಅಂತಾರಾಷ್ಟ್ರೀಯ ಕಾರ್ಮಿಕ ದಿನ 2024 ಮಹತ್ವ

ಕಾರ್ಮಿಕರ ಹೋರಾಟ ಮತ್ತು ಕಠಿಣ ಪರಿಶ್ರಮವನ್ನು ಗುರುತಿಸುವುದು, ಅವರ ಹಕ್ಕುಗಳ ಬಗ್ಗೆ ಅವರಿಗೆ ಅರಿವು ಮೂಡಿಸುವುದು ಅವರನ್ನು ಶೋಷಣೆಗೆ ಒಳಗಾಗದಂತೆ ತಡೆಯುವುದು ಕಾರ್ಮಿಕ ದಿನಾಚರಣೆಯ ಉದ್ದೇಶ. ಈ ಸಂದರ್ಭದಲ್ಲಿ, ಕಾರ್ಮಿಕರು ನ್ಯಾಯಯುತ ವೇತನ ಮತ್ತು ಉತ್ತಮ ಕೆಲಸದ ಪರಿಸ್ಥಿತಿಗಳಿಗೆ ಒತ್ತಾಯಿಸಿ ಬೀದಿಗಳಲ್ಲಿ ಜಾಥಾ ನಡೆಸುತ್ತಾರೆ. ಮೇ ದಿನದಿಂದ ಕಾರ್ಮಿಕರು ಮತ್ತು ಕಾರ್ಮಿಕ ಚಳುವಳಿಯು ಮಾಡಿದ ಐತಿಹಾಸಿಕ ಹೋರಾಟಗಳು ಮತ್ತು ಲಾಭಗಳನ್ನು ಸ್ಮರಿಸಲಾಗುತ್ತದೆ.

ಇದನ್ನೂ ಓದಿ: Labour Day 2024: ಕಾರ್ಮಿಕರಿಗಾಗಿ ಕೇಂದ್ರ ಸರ್ಕಾರ ರೂಪಿಸಿರುವ ಪ್ರಮುಖ ಯೋಜನೆಗಳಿವು

ಅಂತಾರಾಷ್ಟ್ರೀಯ ಕಾರ್ಮಿಕ ದಿನ 2024 ಧ್ಯೇಯ

ಪ್ರತಿ ವರ್ಷ, ಅಂತಾರಾಷ್ಟ್ರೀಯ ಕಾರ್ಮಿಕ ದಿನಾಚರಣೆಯ ಆಚರಣೆಗಾಗಿ ಹೊಸ ಥೀಮ್ ಅನ್ನು ಘೋಷಿಸಲಾಗುತ್ತದೆ. ಬದಲಾಗುತ್ತಿರುವ ಹವಾಮಾನದಲ್ಲಿ ಕೆಲಸದಲ್ಲಿ ಸುರಕ್ಷತೆ ಮತ್ತು ಆರೋಗ್ಯವನ್ನು ಖಚಿತಪಡಿಸಿಕೊಳ್ಳುವುದು ಈ ವರ್ಷದ ಧ್ಯೇಯ.

ಕಾರ್ಮಿಕರ ದಿನದ ಬಗ್ಗೆ ವಾಸ್ತವಾಂಶಗಳು

ಮೊದಲ ಬಾರಿಗೆ ಯುಎಸ್ ಕಾರ್ಮಿಕ ದಿನವನ್ನು ಸೆಪ್ಟೆಂಬರ್ 5, 1882ರ ಮಂಗಳವಾರ ನ್ಯೂಯಾರ್ಕ್ ನಗರದಲ್ಲಿ ಕೇಂದ್ರ ಕಾರ್ಮಿಕ ಒಕ್ಕೂಟವು ಯೋಜಿಸಿತು. ಕಾರ್ಮಿಕ ಚಳುವಳಿಯನ್ನು ಗೌರವಿಸುವ ದಿನವನ್ನು ಆಯೋಜಿಸುವ ಕಲ್ಪನೆ ಕೆನಡಾದಲ್ಲಿ ಹುಟ್ಟಿತು. 1872 ರಲ್ಲಿ ಮುಷ್ಕರ ನಿರತ ಕಾರ್ಮಿಕರಿಗೆ ಬೆಂಬಲವನ್ನು ತೋರಿಸಲು ಅವರು ‘ಒಂಬತ್ತು ಗಂಟೆಗಳ ಚಳುವಳಿ’ ನಡೆಸಿದರು.

ಒರೆಗಾನ್ 1887 ರಲ್ಲಿ ಕಾರ್ಮಿಕ ದಿನವನ್ನು ಕಾನೂನುಬದ್ಧ ರಜಾದಿನವಾಗಿ ಆಚರಿಸಿದ ಮೊದಲ ದೇಶ . 19ನೇ ಶತಮಾನದಲ್ಲಿ ಅಮೆರಿಕನ್ನರು ವಾರದಲ್ಲಿ ಏಳು ದಿನ 12 ಗಂಟೆಗಳ ಕಾಲ ಕೆಲಸ ಮಾಡುತ್ತಿದ್ದರು. ನ್ಯೂಯಾರ್ಕ್ ನಗರದಲ್ಲಿ ಮೊದಲ ಬಾರಿ ಮೆರವಣಿಗೆ ನಡೆಸಿದ ಜಾಗದಲ್ಲಿ ಇನ್ನೂ ಕಾರ್ಮಿಕ ದಿನದ ಮೆರವಣಿಗೆ ಮಾಡಲಾಗುತ್ತದೆ. 1882 ರ ಕಾರ್ಮಿಕ ಮೆರವಣಿಗೆಯ ಉತ್ತರದ 20 ಬ್ಲಾಕ್​​ಗಳಲ್ಲಿನಡೆಯುತ್ತದೆ.

Continue Reading

ಪ್ರಮುಖ ಸುದ್ದಿ

UPSC Results 2023: ಕನ್ನಡದಲ್ಲೇ ಯುಪಿಎಸ್‌ಸಿ ಪರೀಕ್ಷೆ ಬರೆದು ಪಾಸ್‌ ಆದ ಪೊಲೀಸ್‌ ಅಧಿಕಾರಿ!

UPSC Results 2023: ಪಿಯುಸಿಯಲ್ಲಿ ಫೇಲ್‌ ಆಗಿದ್ದರೂ ಛಲ ಬಿಡದೇ ನಿರಂತರ ಅಧ್ಯಯನದೊಂದಿಗೆ ಪಿಎಸ್‌ಐ ಆಗಿ ನೇಮಕವಾಗಿದ್ದ ಬಳ್ಳಾರಿಯ ಶಾಂತಪ್ಪ ಕುರುಬರ್ ಅವರು, ಇದೀಗ ಯುಪಿಎಸ್‌ಸಿ ಫಲಿತಾಂಶದಲ್ಲಿ 644 ರ‍್ಯಾಂಕ್‌ ಪಡೆದಿದ್ದಾರೆ. ಸದ್ಯ ಇವರು ವಿಧಾನಸೌಧ ಭದ್ರತಾ ವಿಭಾಗದಲ್ಲಿ ಪಿಎಸ್‌ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

VISTARANEWS.COM


on

UPSC Results 2023
Koo

ಬೆಂಗಳೂರು: ಕೇಂದ್ರ ಲೋಕಸೇವಾ ಆಯೋಗವು (ಯುಪಿಎಸ್‌ಸಿ) ನಾಗರಿಕ ಸೇವೆಗಳ ಅಂತಿಮ ಪರೀಕ್ಷೆ 2023ರ ಫಲಿತಾಂಶ ಪ್ರಕಟಿಸಿದ್ದು, ಒಟ್ಟು 1,016 ಅಭ್ಯರ್ಥಿಗಳ ನೇಮಕಾತಿಗೆ ಶಿಫಾರಸು ಮಾಡಲಾಗಿದೆ. ಈ ಪೈಕಿ ಕರ್ನಾಟಕ ಪೊಲೀಸ್‌ ಇಲಾಖೆಯಲ್ಲಿ ಸಬ್‌ ಇನ್‌ಸ್ಪೆಕ್ಟರ್‌ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಬಳ್ಳಾರಿಯ ಶಾಂತಪ್ಪ ಕುರುಬರ್ (ಶಾಂತಪ್ಪ ಜಡೆಮ್ಮನವರ್‌) ಅವರು ನಾಗರಿಕ ಸೇವೆಗೆ (UPSC Results 2023) ಆಯ್ಕೆಯಾಗಿದ್ದು, ಇವರು ಕನ್ನಡದಲ್ಲೇ ಪರೀಕ್ಷೆ ಬರೆದು ಸಾಧನೆ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.

ಶಾಂತಪ್ಪ ಕುರುಬರ್ ಬಳ್ಳಾರಿಯಿಂದ ಬೆಂಗಳೂರಿಗೆ ವಲಸೆ ಬಂದು ವಿದ್ಯಾಭ್ಯಾಸ ಮಾಡಿದ್ದಾರೆ. ತಾಯಿ ಕೂಲಿ ಕೆಲಸ ಮಾಡುತ್ತಿದ್ದು, ಇವರು ಪಿಯುಸಿಯಲ್ಲಿ ಫೇಲ್‌ ಆಗಿದ್ದರೂ ಛಲ ಬಿಡದೇ ನಿರಂತರ ಅಧ್ಯಯನದೊಂದಿಗೆ ಪಿಎಸ್‌ಐ ಆಗಿ ನೇಮಕವಾಗಿದ್ದರು. ಇದೀಗ ಯುಪಿಎಸ್‌ಸಿಯಲ್ಲಿ 644 ರ‍್ಯಾಂಕ್‌ ಪಡೆದಿದ್ದಾರೆ.

ಕರ್ತವ್ಯದ ಜತೆಗೆ ಸಮಾಜಮುಖಿ ಕಾರ್ಯ

ಶಾಂತಪ್ಪ ಕುರುಬರ್ ಅವರು ಪೊಲೀಸ್‌ ಆಗಿ ಕೆಲಸ ನಿರ್ವಹಿಸುತ್ತಲೇ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿದ್ದಾರೆ. ಬೆಂಗಳೂರಿನ ತುಮಕೂರು ರಸ್ತೆಯ ಗೊರಗುಂಟೆಪಾಳ್ಯದಲ್ಲಿ ಸಾರ್ವಜನಿಕರಿಗಾಗಿ 10 ಮೊಬೈಲ್‌ ಟಾಯ್ಲೆಟ್‌ ವ್ಯವಸ್ಥೆ ಮಾಡಿದ್ದಾರೆ. ಇವರು ಮೊಬೈಲ್‌ ಟಾಯ್ಲೆಟ್‌ ವ್ಯವಸ್ಥೆ ಮಾಡಲು ಕಾರಣ ಅವರ ತಾಯಿ. ಈ ಮಾರ್ಗದಲ್ಲಿ ಬಸ್‌ಗಾಗಿ ಕಾಯುತ್ತಿದ್ದಾಗ ತಾಯಿ ಶೌಚಾಲಯಕ್ಕೆ ಹೋಗಬೇಕು ಎಂದಿದ್ದರು. ಆಗ ಹತ್ತಿರದಲ್ಲಿ ಯಾವುದೇ ಸಾರ್ವಜನಿಕ ಶೌಚಾಲಯ ಇಲ್ಲದ ಕಾರಣ ಶೌಚಕ್ಕೆ ಹೋಗಲು ತೊಂದರೆಯಾಗಿತ್ತು. ಇದರಿಂದ ತಮ್ಮ ತಾಯಿಗಾದ ಕಷ್ಟ ಯಾರಿಗೂ ಆಗಬಾರದು ಎಂದು ಸಾರ್ವಜನಿಕರಿಗೆ ನೆರವಾಗಲು ಮೊಬೈಲ್‌ ಟಾಯ್ಲೆಟ್‌ಗಳ ವ್ಯವಸ್ಥೆ ಮಾಡಿದ್ದಾರೆ.

ಇದನ್ನೂ ಓದಿ | UPSC Results 2023: ಎಂಎನ್‌ಸಿ ಕೆಲಸ ಬಿಟ್ಟ ಆದಿತ್ಯಗೆ ಯುಪಿಎಸ್‌ಸಿ ಫಸ್ಟ್‌ ರ‍್ಯಾಂಕ್;‌ ಯಾರಿವರು?

ಪಿಯುಸಿ ಅನುತ್ತೀರ್ಣವಾಗಿದ್ದ ಶಾಂತಪ್ಪ ಕುರುಬರ್

ಯುಪಿಎಸ್‌ಸಿ ಫಲಿತಾಂಶದ ಬಗ್ಗೆ ಪಿಎಸ್‌ಐ ಶಾಂತಪ್ಪ ಕುರುಬರ್ ಪ್ರತಿಕ್ರಿಯಿಸಿ, ಕನ್ನಡದಲ್ಲಿ ಪರೀಕ್ಷೆ ಬರೆಯುವುದು ಎಂದರೆ ತುಂಬಾ ಕಷ್ಟ. ಪಿಯುಸಿ ಅನುತ್ತೀರ್ಣವಾಗಿದ್ದೆ, ಆಗ ಊರಿನಲ್ಲಿ ಜನ ಅಡಿಕೊಂಡಿದ್ದರು. ಅಗ ತೀರ್ಮಾನ ಮಾಡಿ ಓದಲು ಮುಂದೆ ಬಂದೆ. ನಂತರ ಸಬ್ ಇನ್ ಸ್ಪೆಕ್ಟರ್ ಆದೆ. ಕೆಲಸ ಮಾಡಿಕೊಂಡು ವಿದ್ಯಾಭ್ಯಾಸ ಮಾಡಿದೆ. ಈಗ ವಿಧಾನಸೌಧ ಭದ್ರತಾ ವಿಭಾಗದಲ್ಲಿ ಪಿಎಸ್‌ಐ ಆಗಿ ಕಾರ್ಯ ನಿರ್ವಹಿಸುತ್ತಿದ್ದೇನೆ ಎಂದು ಹೇಳಿದರು.

ಬೆಂಗಳೂರಿನ ಅಚಾರ್ಯ ಐಎಎಸ್ ಕೋಚಿಂಗ್ ಸೆಂಟರ್‌ನ 3 ವಿದ್ಯಾರ್ಥಿಗಳು ಪಾಸ್‌

ಶಾಂತಪ್ಪ ಕುರುಬರ್, ಭರತ್ ಸಿ ಯಾರಮ್ ಹಾಗೂ ಭಾನು ಪ್ರಕಾಶ್

ಯೂಪಿಎಸ್‌ಸಿ ಪರೀಕ್ಷೆಯಲ್ಲಿ ಬೆಂಗಳೂರಿನ ಅಚಾರ್ಯ ಐಎಎಸ್ ಕೋಚಿಂಗ್ ಸೆಂಟರ್‌ನ ಮೂವರು ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಬಳ್ಳಾರಿಯ ಶಾಂತಪ್ಪ ಕುರುಬರ್ (644 ರ‍್ಯಾಂಕ್‌), ಮೈಸೂರಿನ ಭಾನು ಪ್ರಕಾಶ್ (600 ರ‍್ಯಾಂಕ್‌), ಶಿವಮೊಗ್ಗ ಭರತ್ ಸಿ ಯಾರಮ್ (667 ರ‍್ಯಾಂಕ್‌) ಉತ್ತೀರ್ಣರಾದವರು.

ಶಾಂತಪ್ಪ ಕುರುಬರ್ ಬಳ್ಳಾರಿಯಿಂದ ಬೆಂಗಳೂರಿಗೆ ವಲಸೆ ಬಂದು ವಿದ್ಯಾಭ್ಯಾಸ ಮಾಡಿದ್ದಾರೆ. ತಾಯಿ ಕೂಲಿ ಕೆಲಸ ಮಾಡುತ್ತಿದ್ದು, ಇವರು ಪಿಯುಸಿಯಲ್ಲಿ ಫೇಲ್‌ ಆಗಿದ್ದರೂ ಛಲ ಬಿಡದೇ ನಿರಂತರ ಅಧ್ಯಯನದೊಂದಿಗೆ ಪಿಎಸ್‌ಐ ಆಗಿ ನೇಮಕವಾಗಿದ್ದರು. ಇದೀಗ ಯುಪಿಎಸ್‌ಸಿಯಲ್ಲಿ 644 ರ‍್ಯಾಂಕ್‌ ಪಡೆದಿದ್ದಾರೆ.

ಭಾನು ಪ್ರಕಾಶ್ ಅವರು ಮೂಲತಃ ಮೈಸೂರಿನವರಾಗಿದ್ದು, ಕಳೆದ ಬಾರಿ ಐಪಿಎಸ್ ಪರೀಕ್ಷೆಯಲ್ಲಿ ಪಾಸ್ ಆಗಿದ್ದರು.
ಮತ್ತೆ ಐಎಎಸ್ ಮಾಡುವ ಕನಸಿನೊಂದಿಗೆ ಯುಪಿಎಸ್‌ಸಿ ಪರೀಕ್ಷೆ ಬರೆದು ಈ ಬಾರಿ 600ನೇ ರ‍್ಯಾಂಕ್‌ ಪಡೆದಿದ್ದಾರೆ.

ಭರತ್ ಸಿ ಯಾರಮ್ ಅವರು ಶಿವಮೊಗ್ಗ ಮೂಲದವರಾಗಿದ್ದು, ನಾಲ್ಕನೇ ಬಾರಿ ಪರೀಕ್ಷೆ ಬರೆದು ಉತ್ತೀರ್ಣರಾಗಿದ್ದು, ಇವರು 667 ರ‍್ಯಾಂಕ್‌ ಪಡೆದಿದ್ದಾರೆ.

2023ರ ಸೆಪ್ಟೆಂಬರ್ 15, 16, 17, 23 ಮತ್ತು 24ರಂದು ನಡೆದ ಪರೀಕ್ಷೆಗಳಲ್ಲಿ ನಾಗರಿಕ ಸೇವೆಗಳ ಮುಖ್ಯ ಸಂದರ್ಶನ ಪರೀಕ್ಷೆಗೆ ಅರ್ಹತೆ ಪಡೆದ ಅಭ್ಯರ್ಥಿಗಳನ್ನು ಸೇವಾ ಆಯೋಗವು 2024ರ ಮೊದಲ ಎರಡು ತಿಂಗಳುಗಳಲ್ಲಿ ಸಂದರ್ಶಿಸಿತು.

ಇದನ್ನೂ ಓದಿ | UPSC Results 2023: ಕೋಚಿಂಗ್‌ ಇಲ್ಲದೆ ಓದಿದ ಅನನ್ಯಾ ರೆಡ್ಡಿಗೆ ಯುಪಿಎಸ್‌ಸಿಯಲ್ಲಿ 3ನೇ ರ‍್ಯಾಂಕ್!

2023ರ ಸೆಪ್ಟೆಂಬರ್‌ನಲ್ಲಿ ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ನಡೆಸಿದ ನಾಗರಿಕ ಸೇವೆಗಳ ಲಿಖಿತ ಪರೀಕ್ಷೆಯ ಫಲಿತಾಂಶ ಮತ್ತು 2024ರ ಜನವರಿ- ಏಪ್ರಿಲ್‌ಲ್ಲಿ ನಡೆದ ವ್ಯಕ್ತಿತ್ವ ಪರೀಕ್ಷೆಯ ಸಂದರ್ಶನಗಳ ಆಧಾರದ ಮೇಲೆ ಒಟ್ಟು 1,016 ಅಭ್ಯರ್ಥಿಗಳನ್ನು ನೇಮಕಾತಿಗೆ ಶಿಫಾರಸು ಮಾಡಲಾಗಿದೆ. ಭಾರತೀಯ ಆಡಳಿತ ಸೇವೆ, ಭಾರತೀಯ ವಿದೇಶಾಂಗ ಸೇವೆ, ಭಾರತೀಯ ಪೊಲೀಸ್ ಸೇವೆ ಮತ್ತು ಕೇಂದ್ರ ಸೇವೆಗಳಲ್ಲಿ ಗುಂಪು ʼಎʼ ಮತ್ತು ಗುಂಪು ʼಬಿʼ ಹುದ್ದೆಗಳಿಗೆ ಇವರು ನಿಯುಕ್ತರಾಗುತ್ತಾರೆ.

Continue Reading

ಪ್ರಮುಖ ಸುದ್ದಿ

UPSC Result 2024: ಯುಪಿಎಸ್‌ಸಿ ಫಲಿತಾಂಶ ಪ್ರಕಟ; ಆದಿತ್ಯ ಶ್ರೀವಾಸ್ತವ ಪ್ರಥಮ ರ್‍ಯಾಂಕ್

UPSC Result 2024: ಅಗ್ರಸ್ಥಾನ ಗಳಿಸಿದವರ ಟಾಪ್‌ 10 ಪಟ್ಟಿಯಲ್ಲಿ ಅನಿಮೇಶ್ ಪ್ರಧಾನ್, ಡೋಣೂರು ಅನನ್ಯಾ ರೆಡ್ಡಿ, ಪಿಕೆ ಸಿದ್ಧಾರ್ಥ್ ರಾಮ್‌ಕುಮಾರ್ ಮತ್ತು ರುಹಾನಿ ಅವರು ಪಟ್ಟಿಯಲ್ಲಿ ಅಗ್ರ ಐದು ಅಭ್ಯರ್ಥಿಗಳಾಗಿದ್ದರೆ, ಸೃಷ್ಟಿ ದಾಬಾಸ್, ಅನ್ಮೋಲ್ ರಾಥೋಡ್, ಆಶಿಶ್ ಕುಮಾರ್, ನೌಶೀನ್ ಮತ್ತು ಆಸಿಹ್ವರಾಯಮ್ ಪ್ರಜಾಪತಿ ನಂತರದ ಸ್ಥಾನಗಳಲ್ಲಿದ್ದಾರೆ.

VISTARANEWS.COM


on

UPSC Result 2024:
Koo

ಹೊಸದಿಲ್ಲಿ: ಕೇಂದ್ರ ಸಾರ್ವಜನಿಕ ಸೇವಾ ಆಯೋಗ (Union Public Service Commission – UPSC) ನಡೆಸಿದ ಈ ವರ್ಷದ ಪರೀಕ್ಷೆಯ ಫಲಿತಾಂಶಗಳನ್ನು (UPSC Result 2024) ಪ್ರಕಟಿಸಿದೆ. ಆದಿತ್ಯ ಶ್ರೀವಾಸ್ತವ (Aditya Srivastava) ಅವರು ಈ ಪ್ರತಿಷ್ಠಿತ ಪರೀಕ್ಷೆಯಲ್ಲಿ ಅಗ್ರಸ್ಥಾನ (UPSC Result 2024 topper) ಗಳಿಸಿದ್ದಾರೆ.

ಅಗ್ರಸ್ಥಾನ ಗಳಿಸಿದವರ ಟಾಪ್‌ 10 ಪಟ್ಟಿಯಲ್ಲಿ ಅನಿಮೇಶ್ ಪ್ರಧಾನ್, ಡೋಣೂರು ಅನನ್ಯಾ ರೆಡ್ಡಿ, ಪಿಕೆ ಸಿದ್ಧಾರ್ಥ್ ರಾಮ್‌ಕುಮಾರ್ ಮತ್ತು ರುಹಾನಿ ಅವರು ಪಟ್ಟಿಯಲ್ಲಿ ಅಗ್ರ ಐದು ಅಭ್ಯರ್ಥಿಗಳಾಗಿದ್ದರೆ, ಸೃಷ್ಟಿ ದಾಬಾಸ್, ಅನ್ಮೋಲ್ ರಾಥೋಡ್, ಆಶಿಶ್ ಕುಮಾರ್, ನೌಶೀನ್ ಮತ್ತು ಆಸಿಹ್ವರಾಯಮ್ ಪ್ರಜಾಪತಿ ನಂತರದ ಸ್ಥಾನಗಳಲ್ಲಿದ್ದಾರೆ.

2023ರ ಸೆಪ್ಟೆಂಬರ್ 15, 16, 17, 23 ಮತ್ತು 24ರಂದು ನಡೆದ ಪರೀಕ್ಷೆಗಳಲ್ಲಿ ನಾಗರಿಕ ಸೇವೆಗಳ ಮುಖ್ಯ ಸಂದರ್ಶನ ಪರೀಕ್ಷೆಗೆ ಅರ್ಹತೆ ಪಡೆದ ಅಭ್ಯರ್ಥಿಗಳನ್ನು ಸೇವಾ ಆಯೋಗವು 2024ರ ಮೊದಲ ಎರಡು ತಿಂಗಳುಗಳಲ್ಲಿ ಸಂದರ್ಶಿಸಿತು.

2023ರ ಸೆಪ್ಟೆಂಬರ್‌ನಲ್ಲಿ ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ನಡೆಸಿದ ನಾಗರಿಕ ಸೇವೆಗಳ ಲಿಖಿತ ಪರೀಕ್ಷೆಯ ಫಲಿತಾಂಶ ಮತ್ತು 2024ರ ಜನವರಿ- ಏಪ್ರಿಲ್‌ಲ್ಲಿ ನಡೆದ ವ್ಯಕ್ತಿತ್ವ ಪರೀಕ್ಷೆಯ ಸಂದರ್ಶನಗಳ ಆಧಾರದ ಮೇಲೆ ಒಟ್ಟು 1,016 ಅಭ್ಯರ್ಥಿಗಳನ್ನು ನೇಮಕಾತಿಗೆ ಶಿಫಾರಸು ಮಾಡಲಾಗಿದೆ. ಭಾರತೀಯ ಆಡಳಿತ ಸೇವೆ, ಭಾರತೀಯ ವಿದೇಶಾಂಗ ಸೇವೆ, ಭಾರತೀಯ ಪೊಲೀಸ್ ಸೇವೆ ಮತ್ತು ಕೇಂದ್ರ ಸೇವೆಗಳಲ್ಲಿ ಗುಂಪು ʼಎʼ ಮತ್ತು ಗುಂಪು ʼಬಿʼ ಹುದ್ದೆಗಳಿಗೆ ಇವರು ನಿಯುಕ್ತರಾಗುತ್ತಾರೆ.

ಶಿಫಾರಸು ಮಾಡಿದ 355 ಅಭ್ಯರ್ಥಿಗಳ ಉಮೇದುವಾರಿಕೆಯನ್ನು ತಾತ್ಕಾಲಿಕವಾಗಿ ಇಟ್ಟುಕೊಳ್ಳಲಾಗಿದೆ. UPSC ತನ್ನ ಕ್ಯಾಂಪಸ್‌ನಲ್ಲಿರುವ ಪರೀಕ್ಷಾ ಹಾಲ್‌ನ ಬಳಿ “ಸಂಪರ್ಕ ಕೌಂಟರ್” ಅನ್ನು ತೆರೆದಿದೆ. ಅಭ್ಯರ್ಥಿಗಳು ತಮ್ಮ ಪರೀಕ್ಷೆಗಳು/ನೇಮಕಾತಿಗಳ ಕುರಿತು ಯಾವುದೇ ಮಾಹಿತಿ/ಸ್ಪಷ್ಟೀಕರಣವನ್ನು ಕೆಲಸದ ದಿನಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ 23385271/23381125/23098543 ಮೂಲಕ ಪಡೆಯಬಹುದು.

ಫಲಿತಾಂಶ ಪ್ರಕಟವಾದ ದಿನಾಂಕದಿಂದ 15 ದಿನಗಳ ಒಳಗೆ ಯುಪಿಎಸ್‌ಸಿ ವೆಬ್‌ಸೈಟ್‌ನಲ್ಲಿ ವಿದ್ಯಾರ್ಥಿಗಳ ಅಂಕಗಳನ್ನು ಪ್ರಕಟಿಸಲಾಗುತ್ತದೆ. ವ್ಯಕ್ತಿತ್ವ ಪರೀಕ್ಷೆಯಲ್ಲಿ ಕಾಣಿಸಿಕೊಂಡ ಅಭ್ಯರ್ಥಿಗಳು ತಮ್ಮ ಫಲಿತಾಂಶಗಳನ್ನು UPSC ಅಧಿಕೃತ ವೆಬ್‌ಸೈಟ್ upsc.gov.in ನಲ್ಲಿ ಪರಿಶೀಲಿಸಬಹುದು.

ಫಲಿತಾಂಶವನ್ನು ಪರಿಶೀಲಿಸಲು ಹೀಗೆ ಮಾಡಿ:

1) ನಿಮ್ಮ ಬ್ರೌಸರ್‌ನಲ್ಲಿ upsc.gov.in ತೆರೆಯಿರಿ

2) What’s New ಸೆಕ್ಷನ್‌ನ ಅಡಿಯಲ್ಲಿ ‘UPSC Civil Services Examination 2023 Final Results’ ಎಂಬುದರ ಮೇಲೆ ಕ್ಲಿಕ್ ಮಾಡಿ.

3) ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳ ಹೆಸರನ್ನು ಪಿಡಿಎಫ್ ಮೂಲಕ ನೀಡಲಾಗಿರುವುದು ತೆರೆಯುತ್ತದೆ.

ಇದನ್ನೂ ಓದಿ: UPSC CSE 2024: ಯುಪಿಎಸ್‌ಸಿ ಪರೀಕ್ಷೆಗೆ ಅರ್ಜಿ ಸಲ್ಲಿಸುವ ನಿಯಮದಲ್ಲಿದೆ ಕೆಲವು ಬದಲಾವಣೆ; ಇಲ್ಲಿದೆ ಮಾಹಿತಿ

Continue Reading

ಉದ್ಯೋಗ

Old Pension Scheme: ಹಳೆಯ ಪಿಂಚಣಿ ಬೇಕಿದ್ದರೆ ಯೋಚಿಸಿ ನಿರ್ಧಾರ ಮಾಡಿ! ಏನಿದು ರಾಜ್ಯ ಸರ್ಕಾರದ ಆದೇಶ?

Old Pension Scheme: ಹಳೇ ಪಿಂಚಣಿ ವ್ಯವಸ್ಥೆಗೆ ಒಳಪಡಿಸುವ ಸಂಬಂಧ 2006 ಏಪ್ರಿಲ್‌ 1ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಹಳೆಯ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಿಸಲು ಸಂಬಂಧಪಟ್ಟ ಸರ್ಕಾರಿ ನೌಕರರಿಂದ ಅಭಿಮತ ಪಡೆದು ಕ್ರಮ ಕೈಗೊಳ್ಳುವ ಸಂಬಂಧಪಟ್ಟಂತೆ ಕೆಲವು ಷರತ್ತುಗಳನ್ನು ವಿಧಿಸಲಾಗಿದೆ.

VISTARANEWS.COM


on

Old Pension Scheme new order from Karnataka state government
Koo

ಬೆಂಗಳೂರು: ರಾಷ್ಟ್ರೀಯ ಪಿಂಚಣಿ ಯೋಜನೆಗೆ (National Pension Scheme) ಸಂಬಂಧಪಟ್ಟಂತೆ ಹಳೇ ಪಿಂಚಣಿ (Old Pension Scheme) ಜಾರಿಗೆ ಒತ್ತಾಯಿಸಿ ಈಗಾಗಲೇ ಸಾಕಷ್ಟು ಹೋರಾಟಗಳು ನಡೆದಿವೆ. ಈಗ ರಾಜ್ಯ ಸರ್ಕಾರವೂ ಜಾರಿಗೆ ಒಪ್ಪಿಗೆ ನೀಡಿದ್ದಲ್ಲದೆ ಆದೇಶವನ್ನು ಸಹ ನೀಡಿದೆ. ಈ ಏಪ್ರಿಲ್‌ 1ರಂದು ರಾಜ್ಯ ಸರ್ಕಾರದಿಂದ ಮತ್ತೊಂದು ಆದೇಶ ಜಾರಿಯಾಗಿದ್ದು, ಕೆಲವು ಷರತ್ತುಗಳನ್ನು ವಿಧಿಸಲಾಗಿದೆ. 01.04.2006ರ ಪೂರ್ವದಲ್ಲಿ ನೇಮಕಾತಿಯಾಗಿ ನಂತರ ಅನುದಾನಕ್ಕೆ ಒಳಪಟ್ಟ ನೌಕರರಿಗೆ ಹಳೆಯ ನಿಶ್ಚಿತ ಪಿಂಚಣಿ ಯೋಜನಾ ವ್ಯಾಪ್ತಿಗೆ ಒಳಪಡಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶವನ್ನು ನೀಡಿದೆ. ಹಳೇ ಪಿಂಚಣಿ ವ್ಯವಸ್ಥೆಯನ್ನು ತೆಗೆದುಕೊಳ್ಳುವವರು ಸರಿಯಾಗಿ ನಿರ್ಧಾರ ಮಾಡಿ ಆಯ್ಕೆ ಮಾಡಿಕೊಳ್ಳಬೇಕು. ಒಮ್ಮೆ ಆಯ್ಕೆ ಮಾಡಿಕೊಂಡ ಬಳಿಕ ಪುನಃ ಬದಲಾವಣೆ ಮಾಡಲು ಅವಕಾಶ ಇಲ್ಲ ಎಂದು ಹೇಳಿದೆ.

ಹಳೇ ಪಿಂಚಣಿ ವ್ಯವಸ್ಥೆಗೆ ಒಳಪಡಿಸುವ ಸಂಬಂಧ 2006 ಏಪ್ರಿಲ್‌ 1ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಹಳೆಯ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಿಸಲು ಸಂಬಂಧಪಟ್ಟ ಸರ್ಕಾರಿ ನೌಕರರಿಂದ ಅಭಿಮತ ಪಡೆದು ಕ್ರಮ ಕೈಗೊಳ್ಳುವ ಸಂಬಂಧಪಟ್ಟಂತೆ ಕೆಲವು ಷರತ್ತುಗಳನ್ನು ವಿಧಿಸಲಾಗಿದೆ.

ರಾಜ್ಯ ಸರ್ಕಾರ ವಿಧಿಸಿದ ಷರತ್ತುಗಳು ಏನು?

  • ದಿನಾಂಕ: 01.04.2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ತದ ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ಸರ್ಕಾರಿ ನೌಕರರು ಹಿಂದಿನ ಡಿಫೈನ್ಡ್‌ ಪಿಂಚಣಿ ಯೋಜನೆಗೆ ಒಳಪಡಲು ಇಚ್ಛಿಸಿದಲ್ಲಿ ತಮ್ಮ ಅಭಿಮತವನ್ನು ನಿಗದಿತ ನಮೂನೆಯಲ್ಲಿ ದಿನಾಂಕ:30.06.2024ರೊಳಗೆ ಸಕ್ಷಮ ನೇಮಕಾತಿ ಪ್ರಾಧಿಕಾರಕ್ಕೆ ನೇರವಾಗಿ ಸಲ್ಲಿಸತಕ್ಕದ್ದು. ಈ ಆಯ್ಕೆಯನ್ನು ಒಂದು ಬಾರಿಗೆ ಮಾತ್ರ ಚಲಾಯಿಸಲು ಅವಕಾಶವಿರುತ್ತದೆ.
  • ಒಂದು ಬಾರಿ ಮಾಡಿಕೊಂಡ ಆಯ್ಕೆಯನ್ನು ಬದಲಾಯಿಸಲು ಅವಕಾಶವಿಲ್ಲ.
Old Pension Scheme new order from Karnataka state government
  • ಒಂದು ವೇಳೆ ಅರ್ಹ ಸರ್ಕಾರಿ ನೌಕರರು ನಿಗದಿತ ದಿನಾಂಕದೊಳಗೆ ಮೇಲೆ ಹೇಳಲಾದ ಆಯ್ಕೆಯನ್ನು ಮಾಡಿಕೊಳ್ಳದೆ ಇದ್ದಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆಯಲ್ಲಿ ಮುಂದುವರಿಯುತ್ತಾರೆ.
  • ದಿನಾಂಕ 01.04.2006ರ ಪೂರ್ವದಲ್ಲಿನ ರಾಜ್ಯ ಸಿವಿಲ್ ಸೇವೆಯಲ್ಲಿನ ಖಾಲಿ ಹುದ್ದೆಗಳಿಗೆ ಹೊರಡಿಸಲಾದ ನೇಮಕಾತಿ ಅಧಿಸೂಚನೆಯನ್ವಯ ಆಯ್ಕೆಯಾಗಿ ಕರ್ತವ್ಯಕ್ಕೆ ವರದಿ ಮಾಡಿಕೊಂಡು ತದನಂತರ ಸಮುಚಿತ ಮಾರ್ಗದಲ್ಲಿ ಅರ್ಜಿಯನ್ನು ಸಲ್ಲಿಸಿ ಸರ್ಕಾರದ ಅನ್ಯ ಇಲಾಖೆಯಲ್ಲಿನ ಹುದ್ದೆಗೆ ನೇಮಕಾತಿ ಹೊಂದಿದ ಅರ್ಹ ಸರ್ಕಾರಿ ನೌಕರರು ಹಿಂದಿನ ಡಿಫೈನ್ಡ್‌ ಪಿಂಚಣಿ ಯೋಜನೆ ಸೌಲಭ್ಯ ಪಡೆದುಕೊಳ್ಳಲು ಇಚ್ಛಿಸಿದಲ್ಲಿ ಮನವಿಯನ್ನು ಹಿಂದಿನ ನೇಮಕಾತಿ ಪ್ರಾಧಿಕಾರಕ್ಕೆ ದಿನಾಂಕ: 30.06.2024ರೊಳಗಾಗಿ ಸಲ್ಲಿಸತಕ್ಕದ್ದು. ನೇಮಕಾತಿ ಪ್ರಾಧಿಕಾರವು ಅಂತಹ ಸರ್ಕಾರಿ ನೌಕರನು ಸಮುಚಿತ ಮಾರ್ಗದಲ್ಲಿ ಅರ್ಜಿ ಸಲ್ಲಿಸಿ ಅನ್ಯ ಇಲಾಖೆಗೆ ಆಯ್ಕೆಯಾದ ಹುದ್ದೆಗೆ ವರದಿ ಮಾಡಿಕೊಳ್ಳುವ ಸಲುವಾಗಿ ಬಿಡುಗಡೆ ಹೊಂದಿರುವುದನ್ನು ಹಾಗೂ ಹಿಂದಿನ ಡಿಫೈನ್ಡ್‌ ಪಿಂಚಣಿ ಯೋಜನೆಗೆ ಅರ್ಹತೆ ಹೊಂದಿರುವುದನ್ನು ಖಚಿತಪಡಿಸಿಕೊಂಡು ಮುಂದಿನ ಕ್ರಮವಹಿಸತಕ್ಕದ್ದು ಎಂದು ತಿಳಿಸಲಾಗಿದೆ.

ಇದನ್ನೂ ಓದಿ: Job Alert: ಬಿಎಂಟಿಸಿ 2,500 ಕಂಡಕ್ಟರ್ ಹುದ್ದೆಯ ಪರಿಷ್ಕೃತ ಅಧಿಸೂಚನೆ ಪ್ರಕಟ; ಇಲ್ಲಿ ಪರಿಶೀಲಿಸಿ

ಹೀಗಾಗಿ ಇಚ್ಛೆಯುಳ್ಳ ಎಲ್ಲ ಅರ್ಹ ನೌಕರರು ಅಂತಿಮ ದಿನಾಂಕದವರೆಗೂ ಕಾಯದೆ ಅನುಬಂಧದ ನಮೂನೆಯಲ್ಲಿ ಸೂಕ್ತ ದಾಖಲಾತಿಗಳೊಂದಿಗೆ ತಮ್ಮ ಪ್ರಸ್ತಾವನೆಯನ್ನು ಸಲ್ಲಿಸಬೇಕು ಎಂದು ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಪ್ರಧಾನ ನಿರ್ದೇಶಕರು ಆದೇಶದಲ್ಲಿ ಸೂಚಿಸಿದ್ದಾರೆ.

    Continue Reading
    Advertisement
    Terrorist attack
    ದೇಶ18 mins ago

    Terrorist Attack: “ಉಗ್ರರ ದಾಳಿ ಬಿಜೆಪಿ ಚುನಾವಣಾ ಪೂರ್ವ ಸ್ಟಂಟ್‌”; ನಾಲಿಗೆ ಹರಿಬಿಟ್ಟ ಪ್ರತಿಪಕ್ಷದ ಇಬ್ಬರು ನಾಯಕರು

    Prajwal Revanna Case
    ಕರ್ನಾಟಕ24 mins ago

    Prajwal Revanna Case: ಪ್ರಜ್ವಲ್‌ ಕೇಸ್‌ನ ಸಂತ್ರಸ್ತೆಯರಿಗಾಗಿ ಆರಂಭಿಸಿದ ಹೆಲ್ಪ್‌ಲೈನ್‌ಗೆ ಬರ್ತಿವೆ ಹಲವು ಕರೆಗಳು

    Cooking Oils
    ಆರೋಗ್ಯ1 hour ago

    Cooking Oils: ಈ 5 ಅಡುಗೆ ಎಣ್ಣೆಗಳು ನಮ್ಮ ಆರೋಗ್ಯಕ್ಕೆ ಅಪಾಯಕಾರಿ!

    karnataka Weather Forecast
    ಮಳೆ2 hours ago

    Karnataka Weather : ಇಂದು ಮಳೆ ಬರುತ್ತಾ? ಯಾವ ಜಿಲ್ಲೆಗಳಲ್ಲಿದೆ ಹೀಟ್‌ ವೇವ್‌?

    Pain relievers
    ಆರೋಗ್ಯ2 hours ago

    Pain Relievers: ಸೈಡ್‌ ಎಫೆಕ್ಟ್‌ ಇಲ್ಲದ ಪ್ರಕೃತಿದತ್ತ ನೋವು ನಿವಾರಕಗಳಿವು

    Dina bhavishya
    ಭವಿಷ್ಯ3 hours ago

    Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

    Ramanagara News
    ಕರ್ನಾಟಕ8 hours ago

    Channapatna News: ಮದುವೆಯಲ್ಲಿ ಐಸ್ ಕ್ರೀಂ ತಿಂದು 50ಕ್ಕೂ ಹೆಚ್ಚು ಮಂದಿ ಅಸ್ವಸ್ಥ

    Narendra Modi
    ದೇಶ8 hours ago

    Narendra Modi: ರಾಮಲಲ್ಲಾನಿಗೆ ಮೋದಿ ಸಾಷ್ಟಾಂಗ ನಮಸ್ಕಾರ; ಇಲ್ಲಿವೆ ಅಯೋಧ್ಯೆ ಭೇಟಿ Photos

    IPL 2024
    ಪ್ರಮುಖ ಸುದ್ದಿ8 hours ago

    IPL 2024 : ಇವರೇ ನೋಡಿ ಐಪಿಎಲ್​ 2024ರ ಮೊದಲ ಕನ್​ಕಷನ್​ ಬದಲಿ ಆಟಗಾರ

    Prajwal Revanna Case
    ಪ್ರಮುಖ ಸುದ್ದಿ8 hours ago

    Prajwal Revanna Case: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೊ ಶೇರ್‌ ಮಾಡಿದ್ರೆ ಕೇಸ್‌ ಗ್ಯಾರಂಟಿ; ಎಸ್‌ಐಟಿ ಎಚ್ಚರಿಕೆ

    Sharmitha Gowda in bikini
    ಕಿರುತೆರೆ7 months ago

    Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

    Kannada Serials
    ಕಿರುತೆರೆ7 months ago

    Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

    Bigg Boss- Saregamapa 20 average TRP
    ಕಿರುತೆರೆ7 months ago

    Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

    galipata neetu
    ಕಿರುತೆರೆ5 months ago

    Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

    Kannada Serials
    ಕಿರುತೆರೆ7 months ago

    Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

    Kannada Serials
    ಕಿರುತೆರೆ7 months ago

    Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

    Bigg Boss' dominates TRP; Sita Rama fell to the sixth position
    ಕಿರುತೆರೆ6 months ago

    Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

    geetha serial Dhanush gowda engagement
    ಕಿರುತೆರೆ5 months ago

    Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

    varun
    ಕಿರುತೆರೆ6 months ago

    Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

    Kannada Serials
    ಕಿರುತೆರೆ8 months ago

    Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

    Dina bhavishya
    ಭವಿಷ್ಯ3 hours ago

    Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

    Prajwal Revanna Case HD Revanna sent to judicial custody Shift to Parappana Agrahara
    ಕ್ರೈಂ12 hours ago

    Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

    Prajwal Revanna Case No evidence against me its a conspiracy says HD Revanna
    ಕರ್ನಾಟಕ14 hours ago

    Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

    Narendra Modi
    ದೇಶ14 hours ago

    Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

    Dina Bhavishya
    ಭವಿಷ್ಯ1 day ago

    Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

    Dina Bhavishya
    ಭವಿಷ್ಯ2 days ago

    Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

    Bengaluru Rains
    ಮಳೆ3 days ago

    Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

    Dina Bhavishya
    ಭವಿಷ್ಯ3 days ago

    Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

    Prajwal Revanna Case Another victim gives statement before judge Will Revanna get anticipatory bail
    ಕ್ರೈಂ4 days ago

    Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

    Dina Bhavishya
    ಭವಿಷ್ಯ4 days ago

    Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

    ಟ್ರೆಂಡಿಂಗ್‌