Karnataka Election: Viral video Shows BJP MLA preetam gowda quoting hasana people as not so intelligentKarnataka Election : ಹಾಸನದ ಜನರಿಗೆ ಬುದ್ಧಿ ಇಲ್ಲ ಅಂದ್ರಾ ಪ್ರೀತಂ ಗೌಡ; ಜೆಡಿಎಸ್‌ ವೈರಲ್‌ ಮಾಡಿದ ವಿಡಿಯೊದಲ್ಲೇನಿದೆ? - Vistara News

ಕರ್ನಾಟಕ

Karnataka Election : ಹಾಸನದ ಜನರಿಗೆ ಬುದ್ಧಿ ಇಲ್ಲ ಅಂದ್ರಾ ಪ್ರೀತಂ ಗೌಡ; ಜೆಡಿಎಸ್‌ ವೈರಲ್‌ ಮಾಡಿದ ವಿಡಿಯೊದಲ್ಲೇನಿದೆ?

J Preetam Gowda video : ಚುನಾವಣೆಯ (Karnataka Election) ಹೊಸ್ತಿಲಲ್ಲಿ ಬಿಜೆಪಿ ಹಾಸನದ ಬಿಜೆಪಿ ಶಾಸಕ ಪ್ರೀತಮ್‌ ಗೌಡರ ಒಂದು ವಿಡಿಯೊ ಬಿಡುಗಡೆ ಮಾಡಿದೆ. ಪ್ರೀತಂ ಅವರು ಹಾಸನದ ಜನರನ್ನು ಅಪಮಾನಿಸಿದ್ದಾರೆ ಎನ್ನುವುದು ಅದರಲ್ಲಿರುವ ಆರೋಪ.

VISTARANEWS.COM


on

BJP MLA Preetham Gowda video goes viral.
ಹಾಸನದ ಬಿಜೆಪಿ ಶಾಸಕ ಪ್ರೀತಮ್‌ ಗೌಡ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹಾಸನ: ಹಾಸನದ ಬಿಜೆಪಿ ಶಾಸಕರಾಗಿರುವ ಜೆ. ಪ್ರೀತಂ ಗೌಡ (J Preetam Gowda) ಅವರು ʻʻಹಾಸನದ ಜನರಿಗೆ ಬುದ್ಧಿ ಇಲ್ಲʼ ಎಂದು ಹೇಳಿದ್ದಾರೆನ್ನಲಾದ ಒಂದು ವಿಡಿಯೊವನ್ನು ಜೆಡಿಎಸ್‌ ವೈರಲ್‌ ಮಾಡಿದ್ದು ಎಲ್ಲೆಡೆ ಸದ್ದು ಮಾಡುತ್ತಿದೆ. ವಿಧಾನಸಭಾ ಚುನಾವಣೆಗೆ (Karnataka Election) ಮುನ್ನ ಈ ವಿಡಿಯೊ ಬಿಡುಗಡೆ ಮಾಡುವ ಮೂಲಕ ಶಾಸಕರಿಗೆ ಮುಜುಗರ ಉಂಟು ಮಾಡಲು ಪ್ರಯತ್ನಿಸಲಾಗಿದೆ.

ಹಾಸನದಲ್ಲಿ ನಡೆದಿದ್ದ ಕರಾವಳಿ ಮಿತ್ರ ಮಂಡಳಿ ಸಭೆಯಲ್ಲಿ ಶಾಸಕರು ಮಾತನಾಡಿದ್ದಾರೆನ್ನಲಾದ ವಿಡಿಯೊ ಇದು. ಜೆಡಿಎಸ್ ಹಾಸನ ಎಂಬ ಫೇಸ್ ಬುಕ್ ಪೇಜ್‌ನಲ್ಲಿ ವಿಡಿಯೊ ಅಪ್ಲೋಡ್ ಮಾಡಲಾಗಿದೆ. ʻʻಹಾಸನದಲ್ಲಿ ನಿಂತು ಕರಾವಳಿ ಜನರೆದುರು ಹಾಸನದವರಿಗೆ ಬುದ್ದಿ ಕಮ್ಮಿ ಎನ್ನೋ ನಿಮ್ಮ ನಾಲಗೆ.. ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ. ಜನ್ಮತಾಳಿದ ಊರನ್ನೇ ಶಾಸಕರು ಅವಮಾನಿಸಿದ್ದಾರೆಂದು ಟೀಕಿಸಲಾಗಿದೆ.

ಏನಿದೆ ವಿಡಿಯೊದಲ್ಲಿ? ಪ್ರೀತಮ್‌ ಗೌಡರು ಹೇಳಿದ್ದೇನು?

ʻʻನಮ್ಮ‌ ತಂದೆ, ತಾಯಿ ಶಿಕ್ಷಕರು ಹೇಳೋರು ಹಾಸನದ ಜನ ಒಡ್ಡ ಜನಗಳು, ಸ್ವಲ್ಪ ಬುದ್ಧಿ ಕಮ್ಮಿ ಎನ್ನೋರು. ಕಂಪ್ಯಾರಿಸನ್‌ ಮಾಡಬೇಕು ಅಂದ್ರೆ ಮಂಗಳೂರಿನವರನ್ನು ನೋಡಿ ಬುದ್ಧಿ ಕಲೀರಿ ಅನ್ನೋರುʼʼ ಎಂದು ಕರಾವಳಿ ಮಿತ್ರ ಮಂಡಳಿ ಸಭೆಯಲ್ಲಿ ಹೇಳಿದ್ದಾರೆ ಪ್ರೀತಂ ಗೌಡ.

ʻʻಕರಾವಳಿ ಜನರಲ್ಲಿ ಕೇಳಿಕೊಳ್ತೇನೆ, ನೀವು ಹಾಸನದವರ ಜೊತೆ ಸೇರಿ ಹಾಸನದವರ ರೀತಿ ಆಗಬೇಡಿ. ಹಾಸನದವರನ್ನು ಮಂಗಳೂರು ಜನರ ರೀತಿ ಮಾಡಿʼʼ ಎಂದು ಭಾಷಣ ಮಾಡಿದ್ದರು ಶಾಸಕರು.

ʻʻಕಾಂತಾರ ಮೂವಿ ಬಂದಮೇಲೆ ಕರಾವಳಿ ಇಡೀ ದೇಶದಲ್ಲಿ ಖ್ಯಾತಿ ಆಗಿದೆ. ಕರಾವಳಿ ಕೀರ್ತಿ ಉತ್ತುಂಗಕ್ಕೆ ಹೋಗಿದೆ. ಕರಾವಳಿಯ ಅಭಿವೃದ್ಧಿಯನ್ನು ನನ್ನ ಆತ್ಮೀಯ ಗೆಳೆಯ ರಿಷಬ್ ಪರಿಚಯಿಸಿದ್ದಾರೆ. ಅವರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆʼʼ ಎಂದಿರುವ ಅವರು, ʻʻಒಂದು ವಿಚಾರವನ್ನು ಜನರಿಗೆ ತಲುಪಲು ಸಾಕಷ್ಟು ಸಮಯ ಸಂದರ್ಭ ಇರುತ್ತೆ. ಬೇರೆ ಬೇರೆ ಕಾರಣಗಳಿಂದ ಕರಾವಳಿ ತನ್ನ ಅಸ್ತಿತ್ವವನ್ಮು ಜಗತ್ತಿಗೆ ತೋರಿಸಿದೆʼʼ ಎಂದಿದ್ದಾರೆ.

ʻʻಇತ್ತೀಚಿನ ದಿನಗಳ ಮಕ್ಕಳಿಗೆ ಈ ಜನರೇಷನ್ ಜನರಿಗೆ ಕರಾವಳಿ ಸಂಸ್ಕೃತಿ ಸಂಸ್ಕಾರ ತಿಳಿಸೋ ಉತ್ತಮ ಪ್ರಯತ್ನ ಕಾಂತಾರʼʼ ಎಂದು ಕೊಂಡಾಡಿದ್ದಾರೆ ಹಾಸನ ಬಿಜೆಪಿ ಶಾಸಕ ಪ್ರೀತಂ ಗೌಡ.

ಹಾಸನದ ಜನರು ದಡ್ಡರು ಎಂದು ಪ್ರೀತಂ ಗೌಡ ಅವರು ಹೇಳಿದ್ದನ್ನೇ ಪ್ರಧಾನವಾಗಿಟ್ಟುಕೊಂಡು ಚುನಾವಣೆಯ ಸಮಯದಲ್ಲಿ ಜೆಡಿಎಸ್‌ ವಾಗ್ಬಾಣ ಬಿಟ್ಟಿದೆ. ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ಅಪ್ಲೋಡ್ ಮಾಡಿ ಆಕ್ರೋಶ ವ್ಯಕ್ತಪಡಿಸಿದೆ. ಇದು ಯಾವ ರೀತಿ ಪರಿಣಾಮ ಬೀರಲಿದೆ ಎಂದು ಕಾದು ನೋಡಬೇಕಾಗಿದೆ.

ಹಾಸನ ವಿಧಾನಭಾ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ನಡುವೆ ಪ್ರಬಲ ಪೈಪೋಟಿ ಇದ್ದು, ಸಣ್ಣ ಸಣ್ಣ ವಿಚಾರಗಳೂ ಕೂಡಾ ಪ್ರಮುಖವಾಗುತ್ತವೆ. ಇಲ್ಲಿ ಹಾಲಿ ಶಾಸಕ ಪ್ರೀತಂ ಗೌಡ ಅವರಿಗೆ ಜೆಡಿಎಸ್‌ನಿಂದ ಎಚ್‌.ಪಿ. ಸ್ವರೂಪ್‌ ಪ್ರಬಲ ಸ್ಪರ್ಧೆ ಒಡ್ಡಿದ್ದಾರೆ.

ಇದನ್ನೂ ಓದಿ : Karnataka Election : ಮೋದಿ, ಶಾ, ಪ್ರಿಯಾಂಕಾ ಗಾಂಧಿ ಆಟ ಇಲ್ಲಿ ನಡೆಯಲ್ಲ; ಕುಮಾರಸ್ವಾಮಿ

karnataka-election: Viral video Shows BJP MLA preetam gowda quoting hasana people as not so intelligent

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

DV Sadananda Gowda: ಬಿಜೆಪಿ ರಾಜ್ಯ ನಾಯಕರ ಮೇಲೆ ಸಿಡಿದೆದ್ದ ಸದಾನಂದ ಗೌಡ; ಪಕ್ಷವಿರೋಧಿಗಳಿಗೆ ಮಣೆ ಹಾಕಿದ್ದಕ್ಕೆ ಕಿಡಿ

DV Sadananda Gowda: ವಿಪಕ್ಷ ನಾಯಕನಾಗಿ ಇರುವವರು ಅಧ್ಯಯನ ಮಾಡಬೇಕು. ಜನರ ವಿಶ್ವಾಸ ಗಳಿಸಬೇಕು. ನಾನೂ ಪರಿಷತ್ ವಿಪಕ್ಷ ನಾಯಕ‌ನಾಗಿದ್ದೆ. ನನ್ನ ಇಡೀ ಅವಧಿಯಲ್ಲಿ ಸಮರ್ಥ ವಿಪಕ್ಷ ನಾಯಕನಾಗಿದ್ದಾಗ, ಸಿದ್ದರಾಮಯ್ಯ ಅವರೇ ಕ್ಷಮೆ‌ ಕೇಳಿದ್ದರು. ವಿಪಕ್ಷ ನಾಯಕನಾದವನಿಗೆ ತಾಳ್ಮೆ ಇರಬೇಕು ಎಂದಿದ್ದಾರೆ ಸದಾನಂದ ಗೌಡ.

VISTARANEWS.COM


on

Lok sabha Election 2024 DV Sadananda Gowda
Koo

ಬೆಂಗಳೂರು: ಮಾಜಿ ಕೇಂದ್ರ ಸಚಿವ, ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ (BJP Leader) ಸದಾನಂದ ಗೌಡ (DV Sadananda Gowda) ಸಿಡಿದೆದ್ದಿದ್ದಾರೆ. ಪಕ್ಷವಿರೋಧಿಗಳ ಮೇಲೆ ಕ್ರಮ ಕೈಗೊಳ್ಳದಿದ್ದುದಕ್ಕೆ ಪಕ್ಷದ ರಾಜ್ಯ ನಾಯಕತ್ವವನ್ನು ಟೀಕಿಸಿದ್ದಾರೆ. ‌ʼಆರ್.ಅಶೋಕ್‌ (R Ashok) ಅವರಿಗೆ ಆಡಳಿತ ಪಕ್ಷದಲ್ಲಿದ್ದು ಗೊತ್ತೇ ಹೊರತು ವಿಪಕ್ಷ ನಾಯಕನಾಗಿ (Opposition Leader) ಅನುಭವವಿಲ್ಲʼ ಎಂದಿದ್ದಾರೆ.

“ನಮ್ಮ ಪಕ್ಷ ಇಷ್ಟು ಇಷ್ಟು ಹಾಳಾಗಲು ಕಾರಣ ಪಕ್ಷ ವಿರೋಧಿ ಚಟುವಟಿಕೆ ಮಾಡಿದವರ ಮೇಲೆ ಕ್ರಮ ತೆಗೆದುಕೊಳ್ಳದಿರುವುದು. ಮಾತಾಡುವವರಿಗೆ ಮಣೆ ಹಾಕ್ತಾರೆ. ಹಾಗೆ ಮಾತಾಡುವವರನ್ನು ಹಾಗೆ ಮಾಡಬೇಡ ಅಂತ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಇಲ್ಲವೇ ಅವರನ್ನು ಪಕ್ಷದಿಂದ ದೂರ ಇಡಬೇಕು. ನಾನು ಪಕ್ಷದ ಅಧ್ಯಕ್ಷ ಆಗಿದ್ದಾಗ ಜನಾರ್ದನ ರೆಡ್ಡಿ, ರೇಣುಕಾಚಾರ್ಯ, ಯತ್ನಾಳ್ ಅವರನ್ನ ಸಸ್ಪೆಂಡ್ ಮಾಡಿದ್ದೇನೆ. ಎಷ್ಟೇ ದೊಡ್ಡವರಾಗಿದ್ರೂ ಪಕ್ಷ ವಿರೋಧಿ ಆದವರನ್ನು ಬಿಡುತ್ತಿರಲಿಲ್ಲ” ಎಂದು ಸದಾನಂದ ಗೌಡ ಹೇಳಿದ್ದಾರೆ.

“ನಾನು ಮೊನ್ನೆ ರಾಜ್ಯಾಧ್ಯಕ್ಷ ವಿಜಯೇಂದ್ರ (BY Vijayendra) ಅವರ ಜೊತೆ ಇದೇ ವಿಚಾರ ಚರ್ಚೆ ಮಾಡಿದ್ದೇನೆ. ತಪ್ಪು ಮಾಡಿದವರ ವಿರುದ್ಧ ಕ್ರಮ ತೆಗೆದುಕೊಳ್ಳುವುದರಿಂದ ಪಕ್ಷದ ಸಂಘಟನೆಗೆ ಆಕ್ಸಿಲರೇಟರ್ ಕೊಟ್ಟಂತೆ ಆಗ್ತಿತ್ತು. ನಾನು ಅಧ್ಯಕ್ಷ ಆಗಿದ್ದಾಗ ಯಡಿಯೂರಪ್ಪ ಅವರದ್ದು ಒಂದು ಗುಂಪು, ಅನಂತ್ ಕುಮಾರ್ ಅವರದ್ದು ಒಂದು ಗುಂಪು ಇತ್ತು. ನಾನು ಯಾವ ಗುಂಪನ್ನೂ ಸೇರದೆ ಕೆಲಸ ಮಾಡಿದೆ. ಇದರಿಂದಾಗಿ ನನ್ನನ್ನು ದೂರ ಮಾಡಿದರು. ಮೊನ್ನೆ ಕಾಂಗ್ರೆಸ್ ಪಕ್ಷದ ನಾಯಕ ನನ್ನನ್ನು ಅವರ ಪಕ್ಷಕ್ಕೆ ಆಹ್ವಾನಿಸಿದರು. ನಾಲ್ಕು ಶರ್ಟು, ಪ್ಯಾಂಟ್ ತನ್ನಿ ಅಂತ ಅಂದರು. ನಾನು ಮತ್ತೊಬ್ಬ ಜಗದೀಶ್ ಶೆಟ್ಟರ್ ಆಗಲು ಇಷ್ಟ ಇಲ್ಲ ಎಂದೆ” ಎಂದು ಗೌಡ ಹೇಳಿದರು.

“ನನ್ನನ್ನು ಭ್ರಷ್ಟಾಚಾರ ಹೆಸರಲ್ಲಿ ಮುಖ್ಯಮಂತ್ರಿ ಮಾಡಲಾಯಿತು. ಆದರೆ ನಾನು ಭ್ರಷ್ಟಾಚಾರ ರಹಿತ ಆಡಳಿತ ಮಾಡಿದೆ. ಸಕಾಲವನ್ನು ಜಾರಿಗೆ ತಂದು ಕೆಲಸ ಮಾಡಿದೆ. ಜನರಿಗೆ ಸಕಾಲದಲ್ಲಿ ಸೇವೆ ಸಿಗುವ ಕೆಲಸ ಮಾಡಿದೆ. ಆದರೆ ನಂತರ ಬಂದ ಬಿಜೆಪಿಯವರು, ಕಾಂಗ್ರೆಸ್ ಅವರು ಅದನ್ನು ಮಾಡಿದ್ರಾ? ಇವರೇ ಭ್ರಷ್ಟಾಚಾರ ಆಡಳಿತ ಶುರು ಮಾಡಿದರು” ಎಂದು ಅವರು ಕಿಡಿ ಕಾರಿದರು.

ವಿಪಕ್ಷ ನಾಯಕ ಆರ್. ಅಶೋಕ್ ಬಗ್ಗೆ ಕಾಂಗ್ರೆಸ್ ನಾಯಕರ ಹೇಳಿಕೆ ವಿಚಾರದಲ್ಲಿ ಕೇಳಲಾದ ಪ್ರಶ್ನೆಗೆ, “ಸಂಘಟನೆಯಲ್ಲಿ ಬಲಿಷ್ಠತೆ ಇಲ್ಲದಾಗ ಆರೋಪ ಬರುತ್ತದೆ. ಸಂಘಟನೆ ಬಲಿಷ್ಠ ಆಗಬೇಕು. ಆಡಳಿತ ಪಕ್ಷದವರ ಮನಸ್ಸಿಗೂ ಇವರ ಸಂಘಟನೆ ಬಲಿಷ್ಠ ಇಲ್ಲ ಎನಿಸಿರಬೇಕು. ಹಾಗಾಗಿ ಅವರು ಅಶೋಕ್ ಬಗ್ಗೆ ಹೇಳಿರಬಹುದು. ಅಶೋಕ್ ಅವರು ಹಿಂದಿನಿಂದಲೂ ಪ್ರತೀ ಬಾರಿ ಆಡಳಿತ ಪಕ್ಷದಲ್ಲಿ ಇದ್ದರು. ಹಾಗಾಗಿ ಆಡಳಿತದ ಕಡೆ ಅವರ ಮನಸ್ಸಿದೆ. ವಿಪಕ್ಷ ನಾಯಕನಾಗಿ ಇರುವವರು ಅಧ್ಯಯನ ಮಾಡಬೇಕು. ಜನರ ವಿಶ್ವಾಸ ಗಳಿಸಬೇಕು. ನಾನೂ ಪರಿಷತ್ ವಿಪಕ್ಷ ನಾಯಕ‌ನಾಗಿದ್ದೆ. ನನ್ನ ಇಡೀ ಅವಧಿಯಲ್ಲಿ ಸಮರ್ಥ ವಿಪಕ್ಷ ನಾಯಕನಾಗಿದ್ದಾಗ, ಸಿದ್ದರಾಮಯ್ಯ ಅವರೇ ಕ್ಷಮೆ‌ ಕೇಳಿದ್ದರು. ವಿಪಕ್ಷ ನಾಯಕನಾದವನಿಗೆ ತಾಳ್ಮೆ ಇರಬೇಕು” ಎಂದು ಉತ್ತರಿಸಿದರು.

“ಪಕ್ಷ ಸಂಘಟನೆ ತಳಮಟ್ಟದಿಂದ ಆಗಬೇಕು. ಕೇವಲ ಸ್ಥಾನದಲ್ಲಿ ಕೂರಿಸಿದ್ರೆ ಆಗಲ್ಲ. ತಳಮಟ್ಟದಲ್ಲಿ ಕೆಲಸ ಮಾಡುವ ಟೀಮ್ ಕೊರತೆ ಇದೆ. ರಾಜ್ಯಾಧ್ಯಕ್ಷ ವಿಜಯೇಂದ್ರ ಮೇಲೆ ನಾನು ಆರೋಪ ಮಾಡಲ್ಲ. ಅವರು ಈಗಷ್ಟೇ ಬಂದಿದ್ದಾರೆ, ಬಂದ ತಕ್ಷಣ ಚುನಾವಣೆ ಬಂದಿದೆ. ಕರ್ನಾಟಕದಲ್ಲಿ ಬಿಜೆಪಿ ಕೇಡರ್ ಬೇಸ್ ಪಾರ್ಟಿ. ಕಾರ್ಯಕರ್ತರನ್ನು ಕಳೆದುಕೊಳ್ತಿದ್ದೇವೆ‌. ಇದು ನಮಗೆ ಎಚ್ಚರಿಕೆಯ ಗಂಟೆ. ನಮಲ್ಲಿ ಶಕ್ತಿ ಇದೆ, ಕಮಿಟೆಡ್ ಕಾರ್ಯಕರ್ತರಿದ್ದಾರೆ. ಆದರೆ ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಲ್ಲಿ ಫೇಲ್ಯೂರ್ ಆಗಿದ್ದಾರೆ” ಎಂದು ನುಡಿದರು.

“ಚುನಾವಣೆಯಲ್ಲಿ ನಮ್ಮ ನಿರೀಕ್ಷೆಯ ಫಲಿತಾಂಶ ಸಿಕ್ಕಲಿಲ್ಲ. ವಿಧಾನಸಭೆ ಚುನಾವಣೆ ಬಳಿಕ ರಾಜ್ಯದಲ್ಲಿ ಗಂಭೀರವಾಗಿ ತೆಗೆದುಕೊಳ್ಳಲಿಲ್ಲ. ಕಾಂಗ್ರೆಸ್ ಅಭೂತಪೂರ್ವ ಗೆಲುವಿನ ಬಳಿಕ, ಪಕ್ಷದಲ್ಲಿ ವಿಶ್ವಾಸಕ್ಕೆ ತೆಗೆದುಕೊಳ್ಳಲಿಲ್ಲ. ಮೋದಿ ಇಮೇಜ್ ಮೇಲೆ ಚುನಾವಣೆ ನಡೆದುಬಿಡುತ್ತೆ ಅಂತ ಓವರ್ ಕಾನ್ಪಿಡೆನ್ಸ್‌ನಿಂದಾಗಿ ನಮ್ಮ 9 ಸ್ಥಾನ ಕಳೆದುಕೊಳ್ಳಬೇಕಾಯ್ತು. ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಿತ್ತು” ಎಂದು ಗೌಡ ವಿಶ್ಲೇಷಿಸಿದರು.

“ಕಾಂಗ್ರೆಸ್ ಇದ್ದಾಗಲೂ ಅನೇಕ ಬಾರಿ ಬಿಜೆಪಿ ಗೆದ್ದಿದೆ. ಆದರೆ ಈ ಬಾರಿ ಸಾಕಷ್ಟು ವಿಫಲವಾಗಿದೆ. ಇದಕ್ಕೆ ನನ್ನನ್ನೂ ಸೇರಿದಂತೆ ಎಲ್ಲರ ತಪ್ಪಿದೆ. ಕೋಹ್ಲಿ 76 ರನ್ ಹೊಡೆದ್ರೂ, ಕಪ್ ತಗೊಂಡಿದ್ದು ರೋಹಿತ್ ಶರ್ಮ. ಹಾಗೆ ಎಲ್ಲರ ತಪ್ಪು ಪಕ್ಷಕ್ಕೆ ಹಿನ್ನಡೆಯಾಗಿದೆ. ನಮಗೆ ಹಳೆ ಮೈಸೂರಿನಲ್ಲಿ ಜೆಡಿಎಸ್‌ ಇತ್ತು. ಅವರ ಜೊತೆ ಸೇರಿದ್ದಕ್ಕೆ ಬಿಜೆಪಿ ಗೆದ್ದಿತು ಅಂತ ಜನ ಮಾತಾಡ್ತಿದ್ದಾರೆ. ತುಮಕೂರು, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ ಎಲ್ಲೆಡೆ ಕಷ್ಟ ಆಗಿತ್ತು. ಜೆಡಿಎಸ್‌ ಜೊತೆ ಸೇರಿದ್ರೂ ಕೂಡ ನಮ್ಮ ಗೆಲುವಿನ ಮಾರ್ಜಿನ್ ಕಡಿಮೆ ಆಗಿದೆ. 4ರಂದು ರಾಜ್ಯ ಕಾರ್ಯಕಾರಿಣಿ ಸಭೆ ಇದೆ. ಎಲ್ಲಾ ಮಾಹಿತಿ ಪಡೆದು ಚರ್ಚೆ ಮಾಡಬೇಕಿದೆ” ಎಂದು ಗೌಡ ತಿಳಿಸಿದರು.

ಇದನ್ನೂ ಓದಿ: DV Sadananda Gowda : ಕಾಂಗ್ರೆಸ್‌ ಸೇರಲ್ಲ ಎಂದ ಡಿ.ವಿ ಸದಾನಂದ ಗೌಡ; ಇನ್ನು ಬಿಜೆಪಿ ಶುದ್ಧೀಕರಣ ಮಾಡ್ತಾರಂತೆ!

Continue Reading

ಪ್ರಮುಖ ಸುದ್ದಿ

Karave Protest: ಕನ್ನಡಿಗರಿಗೆ ಉದ್ಯೋಗ ನೀಡಿ, ಇಲ್ಲವೇ ರಾಜ್ಯ ಬಿಟ್ಟು ತೊಲಗಿ: ಕರವೇ ಕಾರ್ಯಕರ್ತರ ಆಕ್ರೋಶ

Karave Protest: ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದ್ದು, ಕರವೇ ಅಧ್ಯಕ್ಷ ಟಿ.ಎ. ನಾರಾಯಣ ಗೌಡ ನೇತೃತ್ವದಲ್ಲಿ ಸಾವಿರಾರು ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಅಲ್ಲದೇ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲೂ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

VISTARANEWS.COM


on

Karave Protest
Koo

ಬೆಂಗಳೂರು: ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡಲು (Jobs For Kannadigas) ಸರೋಜಿನಿ ಮಹಿಷಿ ವರದಿ ಜಾರಿಗೆ ಒತ್ತಾಯಿಸಿ ಬೆಂಗಳೂರು ಸೇರಿ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ವೇದಿಕೆಯಿಂದ (Karave Protest) ಸೋಮವಾರ ಬೆಳಗ್ಗೆ ಪ್ರತಿಭಟನೆಗಳು ಆರಂಭವಾಗಿವೆ. ನಗರದ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದ್ದು, ಕರವೇ ಅಧ್ಯಕ್ಷ ಟಿ.ಎ. ನಾರಾಯಣ ಗೌಡ ನೇತೃತ್ವದಲ್ಲಿ ಸಾವಿರಾರು ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.

ಬೆಳಗ್ಗೆ 11 ಗಂಟೆಗೆ ಫ್ರೀಡಂ ಪಾರ್ಕ್‌ ಬಳಿ ಕುವೆಂಪು ಪುತ್ಥಳಿಗೆ ಟಿ.ಎ. ನಾರಾಯಣ ಗೌಡರು ಮಾಲಾರ್ಪಣೆ ಮಾಡುವ ಮೂಲಕ ಹೋರಾಟಕ್ಕೆ ಚಾಲನೆ ನೀಡಿದರು. ಗಾಂಧಿನಗರದ ಕರವೇ ಕೇಂದ್ರ ಕಚೇರಿಯಿಂದ ಸಾವಿರಾರು ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ಮೂಲಕ ಫ್ರೀಡಂ ಪಾರ್ಕ್‌ ಸೇರಿದರು. ನಂತರ ಅಲ್ಲಿ ಹೋರಾಟ ಆರಂಭಿಸಿದರು. ಪ್ರತಿಭಟನೆ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯಬಾರದು ಎಂದು ಪೊಲೀಸ್ ಬಿಗಿ ಭದ್ರತೆ ಏರ್ಪಡಿಸಲಾಗಿದ್ದು, ಮೆಟ್ರೋ ಸ್ಟೇಷನ್‌, ಬಸ್‌ ನಿಲ್ದಾಣ, ಮಾಲ್‌ಗಳ ಬಳಿ ಕೂಡ ಬಂದೋಬಸ್ತ್‌ ಮಾಡಲಾಗಿದೆ.

ಪೋಲಿಸರು ಪ್ರತಿಭಟನೆ ಹತ್ತಿಕ್ಕುವ ಕೆಲಸ ಮಾಡಿದರೆ ಪ್ರತಿಭಟನೆ ಉಗ್ರ ಸ್ವರೂಪ ಪಡೆಯುವ ಸಾಧ್ಯತೆ ಇದೆ. ಈಗಾಗಲೇ ಈ ಬಗ್ಗೆ ಕರವೇ ರಾಜ್ಯಾಧ್ಯಕ್ಷ ನಾರಾಯಣ ಗೌಡ ಅವರು ಎಚ್ಚರಿಕೆ ಕೊಟ್ಟಿದ್ದಾರೆ. ನಾವು ಫ್ರೀಡಂ ಪಾರ್ಕಿನಲ್ಲಿ ಧರಣಿ ಬಿಟ್ಟು ಬೇರೆ ಯೋಜನೆ ಮಾಡಿಲ್ಲ. ಹೋರಾಟಗಳಲ್ಲಿ ಎರಡು ವಿಧ, ಒಂದು ಶಾಂತಿ, ಮತ್ತೊಂದು ಕ್ರಾಂತಿ. ಇಂದು ನಾವು ಶಾಂತಿಯುತವಾಗಿ ಹೋರಾಟ ಮಾಡಲು ಕರೆ ಕೊಟ್ಟಿದ್ದೇವೆ. ಒಂದು ತಿಂಗಳೊಳಗೆ ಸರೋಜಿನಿ ಮಹಿಷಿ ವರದಿ ಅನುಷ್ಠಾನ ಮಾಡಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಯಲಿದೆ. ಈ ಸಂಬಂಧ ಸಿಎಂ ಭೇಟಿಗೆ ಮನವಿ ಮಾಡಿದ್ದೇವೆ. ರ‍್ಯಾಲಿ, ಮೆರವಣಿಗೆ ಮಾಡಬಾರದು ಎಂತಲೂ ಕಾರ್ಯಕರ್ತರಿಗೆ ಹೇಳಿದ್ದೇನೆ ಎಂದು ತಿಳಿಸಿದ್ದಾರೆ.

ಇನ್ನು ಕರವೇ ಪ್ರತಿಭಟನೆಗೆ ಸ್ಯಾಂಡಲ್‌ವುಡ್ ಸಾಥ್ ನೀಡಿದೆ. ಸ್ಯಾಂಡಲ್‌ವುಡ್ ನಟ ಪ್ರೇಮ್, ನಟಿ ಪೂಜಾಗಾಂಧಿ ಮತ್ತಿತರರು ಬೆಂಬಲ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಹಲವು ಸಂಘಟನೆಗಳು ಬೆಂಬಲ ಸೂಚಿಸಿವೆ.

ಎಲ್ಲ ಖಾಸಗಿ ಸಂಸ್ಥೆಗಳಲ್ಲಿ ಸಿ ಮತ್ತು ಡಿ ದರ್ಜೆಯ ಶೇ.100 ರಷ್ಟು ಹುದ್ದೆಗಳು ಕನ್ನಡಿಗರಿಗೆ ಮೀಸಲಿಡಬೇಕು. ಇತರ ಹುದ್ದೆಗಳಲ್ಲಿ ಶೇ. 80ರಷ್ಟು ಹುದ್ದೆಗಳನ್ನು ಕನ್ನಡಿಗರಿಗೆ ಮೀಸಲಿಡಬೇಕು. ಹಾಗೆಯೇ ರಾಜ್ಯ ಸರ್ಕಾರಿ ಸಂಸ್ಥೆಗಳು ಮತ್ತು ಸಾರ್ವಜನಿಕ ವಲಯದ ಘಟಕಗಳಲ್ಲಿ ಕನ್ನಡಿಗರಿಗೆ 100 ಪ್ರತಿಶತ ಮೀಸಲಾತಿ ನೀಡಬೇಕು ಎಂದು ಕಾರ್ಯಕರ್ತರು ಆಗ್ರಹಿಸಿದ್ದಾರೆ.

ಇದನ್ನೂ ಓದಿ | Dengue Fever: ರಾಜಧಾನಿಯಲ್ಲಿ ಡೆಂಗ್ಯು ಜ್ವರಕ್ಕೆ ಒಂದು ಬಲಿ, ರಾಜ್ಯದಲ್ಲಿ ಸಾವಿನ ಸಂಖ್ಯೆ 6ಕ್ಕೆ ಏರಿಕೆ

ಬೆಳಗಾವಿಯಲ್ಲಿ ಸರ್ಕಾರದ ವಿರುದ್ಧ ಕರವೇ ರಣಕಹಳೆ

ಬೆಳಗಾವಿ: ಬೆಳಗಾವಿಯಲ್ಲೂ ಸರ್ಕಾರದ ವಿರುದ್ಧ ಕರವೇ ರಣಕಹಳೆ ಮೊಳಗಿದೆ. ಚನ್ನಮ್ಮ ವೃತ್ತದಿಂದ ಡಿಸಿ ಕಚೇರಿಯವರೆಗೆ ಕರವೇ ನಾರಾಯಣಗೌಡ ಬಣದ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ಮೂಲ ತೆರಳಿ ಹೋರಾಟ ನಡೆಸಿದರು.

ಡಾ, ಸರೋಜನಿ ಮಹಿಷಿ ವರದಿ ಜಾರಿ ಮಾಡುವಂತೆ ಸರ್ಕಾರವನ್ನು ಆಗ್ರಹಿಸಿದ ಕಾರ್ಯಕರ್ತರು, ಡಿಸಿ ಮುಖೇನ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಬೆಳಗಾವಿ ಜಿಲ್ಲಾಧ್ಯಕ್ಷ ದೀಪಕ್ ಗುಡಗನಟ್ಟಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಪರರಾಜ್ಯದವರ ಹಾವಳಿ ತಡೆಯುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಕನ್ನಡಿಗರಿಗೆ ಮಾತ್ರ ಶೇ.100 ಉದ್ಯೋಗ ನೀಡುವಂತೆ ಒತ್ತಾಯಿಸಲಾಗಿದೆ.

ಕೋಟೆ ನಾಡಿನಲ್ಲಿ ಸಿಡಿದೆದ್ದ ಕರವೇ

ಚಿತ್ರದುರ್ಗ: ಸರ್ಕಾರದ ವಿರುದ್ಧ ಕೋಟೆ ನಾಡಿನಲ್ಲಿ ಕರವೇ ಕಾರ್ಯಕರ್ತರು ಸಿಡಿದೆದ್ದಿದ್ದಾರೆ. ನಗರದ ಡಿಸಿ ವೃತ್ತದಲ್ಲಿ ನಾರಾಯಣಗೌಡ ಬಣದ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಕಾರ್ಪೊರೇಟ್ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗಕ್ಕೆ ಆಗ್ರಹಿಸಿದರು. ರಾಜ್ಯದ ನಿರುದ್ಯೋಗಿ ಯುವಕರಿಗೆ ಕಂಪನಿಗಳಲ್ಲಿ ಉದ್ಯೋಗ ನೀಡಬೇಕು, ನಮಗೆ ಉದ್ಯೋಗಿ ಕೊಡಿ, ಇಲ್ಲವೇ ರಾಜ್ಯ ಬಿಟ್ಟು ತೊಲಗಿ ಎಂದು ಘೋಷಣೆ ಕೂಗಿದರು.

ಹಾವೇರಿಯಲ್ಲಿ ಕರವೇ ಪ್ರತಿಭಟನೆ

ಹಾವೇರಿ: ಹಾವೇರಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಕರವೇಯಿಂದ ಪ್ರತಿಭಟನೆ ನಡೆಯಿತು. ಕನ್ನಡಿಗರಿಗೆ ಉದ್ಯೋಗ ನೀಡುವಂತೆ ಆಗ್ರಹಿಸಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕನ್ನಡಿಗರಿಗೆ ಉದ್ಯೋಗ ನೀಡುವ ಕಾಯ್ದೆ ರೂಪಿಸಲು ಒತ್ತಾಯಿಸಿ, ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದರು.

ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸಿ

ಯಾದಗಿರಿ: ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸುವಂತೆ ಆಗ್ರಹಿಸಿ ಕರವೇಯಿಂದ ಯಾದಗಿರಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಯಿತು.

ಕರವೇ ಜಿಲ್ಲಾಧ್ಯಕ್ಷ ಟಿ.ಎನ್.ಭೀಮುನಾಯಕ ನೇತೃತ್ವದಲ್ಲಿ ಕರವೇ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು. ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸಲು ಡಾ.ಸರೋಜಿನಿ ಮಹಿಷಿ ವರದಿ ಜಾರಿ ಮಾಡಬೇಕು ಎಂದು ಪ್ರತಿಭಟನಾನಿರತರು ಒತ್ತಾಯಿಸಿದರು.

ಇದನ್ನೂ ಓದಿ : Dengue Fever: ರಾಜಧಾನಿಯಲ್ಲಿ ಡೆಂಗ್ಯು ಜ್ವರಕ್ಕೆ ಒಂದು ಬಲಿ, ರಾಜ್ಯದಲ್ಲಿ ಸಾವಿನ ಸಂಖ್ಯೆ 6ಕ್ಕೆ ಏರಿಕೆ

ಕನ್ನಡಿಗರಿಗೆ ಉದ್ಯೋಗದಲ್ಲಿ ಮೊದಲ ಆದ್ಯತೆ

ಧಾರವಾಡ: ಕನ್ನಡಿಗರಿಗೆ ಉದ್ಯೋಗದಲ್ಲಿ ಮೊದಲ ಆದ್ಯತೆ ನೀಡಬೇಕು ಎಂದು ಆಗ್ರಹಿಸಿ ಧಾರವಾಡದ ಡಿಸಿ ಕಚೇರಿ ಎದುರು ಕರವೇ ಬಣದಿಂದ ಪ್ರತಿಭಟನೆ ನಡೆಸಲಾಯಿತು. ರಾಜ್ಯ ಸರ್ಕಾರ ಈ ಕೂಡಲೇ ಕನ್ನಡಿಗರಿಗೆ ಉದ್ಯೋಗದಲ್ಲಿ ಮೊದಲ ಆದ್ಯತೆ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

Continue Reading

ಚಿಕ್ಕಬಳ್ಳಾಪುರ

Dead Body Found : ಮರದಲ್ಲಿ ನೇತಾಡುತ್ತಿತ್ತು ಅಪರಿಚಿತನ ಶವ; ಸತ್ತವನ ಕೈ ಮೇಲಿತ್ತು ಲಕ್ಷ್ಮಿ ಹೆಸರಿನ ಹಚ್ಚೆ

Dead Body Found : ಗ್ರಾಮದ ಹೊರವಲಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತನ ಮೃತದೇಹ ಪತ್ತೆಯಾಗಿದೆ. ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬುದರ ಕುರಿತು ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.

VISTARANEWS.COM


on

By

Koo

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದ ಗೌರಿಬಿದನೂರು ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದ ಹೊರವಲಯದಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ (Dead Body Found) ಪತ್ತೆಯಾಗಿದೆ. ಮೃತನ ಕೈ ಮೇಲೆ ಲಕ್ಷ್ಮಿ ಎಂಬ ಹಚ್ಚೆ ಗುರುತು ಪತ್ತೆಯಾಗಿದೆ.

ಪ್ರೀತಿ-ಪ್ರೇಮ ಹಿನ್ನೆಲೆಯಲ್ಲಿ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ದುಷ್ಕರ್ಮಿಗಳು ಕೊಲೆ ಮಾಡಿ ಮರಕ್ಕೆ ನೇತು ಹಾಕಿ ಹೋಗಿರುವ ಅನುಮಾನವಿದೆ. ಮರದಲ್ಲಿ ನೇತಾಡುತ್ತಿದ್ದ ಮೃತದೇಹವನ್ನು ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಗೌರಿಬಿದನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರದಲ್ಲಿದ್ದ ಮೃತದೇಹವನ್ನು ಕೆಳಗಿಸಿ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಮೃತನ ಗುರುತು ಪತ್ತೆಯಾಗಿಲ್ಲ. ಸದ್ಯ ಪೊಲೀಸರು ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದರ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Murder Case : ರೌಡಿಯಾಗಲು ಹೊರಟವನನ್ನು ಕೊಂದು ಹಾಕಿದ್ರು ಪುಂಡರು

ನೀರಿನಲ್ಲಿ ಕಣ್ಮರೆಯಾಗಿದ್ದ ಯುವಕನ ಮೃತದೇಹ ಪತ್ತೆ

ಈಜಲು ತೆರಳಿದ್ದ ಯುವಕ ನೀರು ಪಾಲಾಗಿದ್ದ. ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಸುಂಟಿಕೊಪ್ಪ ಸಮೀಪದ ಹೇರೂರು ಗ್ರಾಮದ ಹಾರಂಗಿ ಹಿನ್ನೀರಿನಲ್ಲಿ ನಿನ್ನೆ ಭಾನುವಾರ ಅವಘಡ ನಡೆದಿತ್ತು. ನೀರಿನಲ್ಲಿ ಕಣ್ಮರೆಯಾಗಿದ್ದ ಯುವಕನ ಮೃತದೇಹ ಸೋಮವಾರ ಪತ್ತೆಯಾಗಿದೆ. ಮೈಸೂರು ಮೂಲದ ಶಶಿ (30) ಮೃತ ದುರ್ದೈವಿ. ಶಶಿ ತನ್ನ 15 ಮಂದಿ ಸ್ನೇಹಿತರೊಟ್ಟಿಗೆ ಮೈಸೂರಿನಿಂದ ಕೊಡಗಿಗೆ ಪ್ರವಾಸಕ್ಕೆ ಬಂದಿದ್ದರು. ಈ ವೇಳೆ ಶಶಿ ಈಜಲು ಹೋಗಿ ನೀರುಪಾಲಾಗಿದ್ದ, ಇದೀಗ ಆತನ ಮೃತದೇಹವ ಸಿಕ್ಕಿದ್ದು, ಕುಶಾಲನಗರ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗುತ್ತದೆ. ಸ್ಥಳಕ್ಕೆ ಸುಂಟಿಕೊಪ್ಪ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನೀರಲ್ಲಿ ಕೊಚ್ಚಿ ಹೋದವರಿಗಾಗಿ ಹುಡುಕಾಟ

ಇತ್ತ ನಿನ್ನೆ ಭಾನುವಾರ ಮಹಾರಾಷ್ಟ್ರದ ಲೋನಾವಲಾ ಬಳಿ ದಿಢೀರ್ ಪ್ರವಾಹಕ್ಕೆ ನೋಡನೋಡುತ್ತಿದ್ದಂತೆ ಐವರು ಕೊಚ್ಚಿ ಹೋಗಿದ್ದರು. ಪುಣೆಯ ಅನ್ಸಾರಿ ಕುಟುಂಬದ ನಾಲ್ವರು ಮಕ್ಕಳು ಸೇರಿ ಓರ್ವ ‌ಮಹಿಳೆ‌ ನೀರುಪಾಲಾಗಿದ್ದರು. ನಿರಂತರ ಕಾರ್ಯಾಚರಣೆ ನಡೆಸಿದ ಎನ್‌ಆರ್‌ಎಫ್‌ ತಂಡ ಮೂವರ ಶವ ಹೊರ ತೆಗೆದಿತ್ತು. ನೀರಲ್ಲಿ ಕಣ್ಮರೆಯಾಗಿರುವ ಇನ್ನಿಬ್ಬರಿಗಾಗಿ ನಿರಂತರ ಶೋಧ ಕಾರ್ಯ ನಡೆಯುತ್ತಿದೆ. ಸ್ಥಳದಲ್ಲಿಯೇ ಪೊಲೀಸರು ಹಾಗೂ ಅಗ್ನಿಶಾಮಕ ದಳ ಬೀಡು ಬಿಟ್ಟಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Murder Case: ಎಸ್‌ಪಿ ಕಚೇರಿ ಆವರಣದಲ್ಲೇ ಪತ್ನಿಯನ್ನು ಇರಿದು ಕೊಂದ ಪೊಲೀಸ್ ಕಾನ್‌ಸ್ಟೇಬಲ್

Murder Case: ಕಳೆದ ನಾಲ್ಕೈದು ದಿನಗಳಿಂದ ಗಂಡ-ಹೆಂಡತಿ ನಡುವೆ ಜಗಳ ನಡೆದಿತ್ತು. ಇಂದು ಪತಿ ವಿರುದ್ಧ ದೂರು ನೀಡಲು ಹಾಸನದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಆವರಣಕ್ಕೆ ಪತ್ನಿ ಬಂದಿದ್ದರು. ಇದರಿಂದ ಕ್ರುದ್ಧನಾದ ಕಾನ್‌ಸ್ಟೇಬಲ್ ಲೋಕನಾಥ್, ಪತ್ನಿಗೆ ಎಲ್ಲರ ಮುಂದೆಯೇ ಚಾಕುವಿನಿಂದ ಇರಿದು ಎಸ್ಕೇಪ್ ಆಗಿದ್ದಾನೆ.

VISTARANEWS.COM


on

hassan murder case
Koo

ಹಾಸನ: ಪೊಲೀಸ್‌ ಕಾನ್‌ಸ್ಟೇಬಲ್‌ (Police Constable) ಒಬ್ಬ ತನ್ನ ಪತ್ನಿಯನ್ನು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ (SP) ಕಚೇರಿ ಆವರಣದಲ್ಲೇ ಇರಿದು (Stabbed) ಕೊಂದುಹಾಕಿದ (Murder Case) ಘಟನೆ ಹಾಸನದಲ್ಲಿ ನಡೆದಿದೆ.

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಈ ಕಾನ್‌ಸ್ಟೇಬಲ್‌, ಪತ್ನಿಗೆ ಚಾಕುವಿನಿಂದ ಇರಿದಿದ್ದಾನೆ. ಹಾಸನ ನಗರ ಪೊಲೀಸ್ ಠಾಣೆಯ ಕಾನ್‌ಸ್ಟೇಬಲ್ ಲೋಕನಾಥ್ ಪತ್ನಿಗೆ ಚಾಕುವಿನಿಂದ ಇರಿದ ಆರೋಪಿ. ಪತ್ನಿ ಮಮತಾ ಹತ್ಯೆಯಾದವರು. ಲೋಕನಾಥ್ ಹಾಗು ಮಮತಾಗೆ 17 ವರ್ಷಗಳ ಹಿಂದೆ ವಿವಾಹ ಆಗಿತ್ತು. ಇಬ್ಬರು ಮಕ್ಕಳೂ ಇದ್ದರು. ಕೌಟುಂಬಿಕ ಕಲಹ ಇವರ ಬಾಳ್ವೆಯ ಹದಗೆಡಿಸಿತ್ತು. ಲೋಕನಾಥ್ ಶಾಂತಿಗ್ರಾಮ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ.

ಕಳೆದ ನಾಲ್ಕೈದು ದಿನಗಳಿಂದ ಗಂಡ-ಹೆಂಡತಿ ನಡುವೆ ಜಗಳ ನಡೆದಿತ್ತು. ಇಂದು ಪತಿ ವಿರುದ್ಧ ದೂರು ನೀಡಲು ಹಾಸನದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಆವರಣಕ್ಕೆ ಪತ್ನಿ ಬಂದಿದ್ದರು. ಇದರಿಂದ ಕ್ರುದ್ಧನಾದ ಕಾನ್‌ಸ್ಟೇಬಲ್ ಲೋಕನಾಥ್, ಪತ್ನಿಗೆ ಎಲ್ಲರ ಮುಂದೆಯೇ ಚಾಕುವಿನಿಂದ ಇರಿದು ಎಸ್ಕೇಪ್ ಆಗಿದ್ದಾನೆ.

ಕೂಡಲೇ ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮಮತಾ ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಹಾಸನ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಆರೋಪಿಗಾಗಿ ಹುಡುಕಾಟ ನಡೆದಿದೆ.

ರೌಡಿಯಾಗಲು ಹವಾ ಸೃಷ್ಟಿಸಿದ್ದವನನ್ನು ಇರಿದು ಕೊಂದರು!

ಬೆಂಗಳೂರು: ಬೆಂಗಳೂರಿನ ಪುಲಿಕೇಶಿನಗರದ ಅಪ್ಪು ಕೊಲೆ ಪ್ರಕರಣದಲ್ಲಿ (Murder caseನಾಲ್ವರು ಆರೋಪಿಗಳ ಬಂಧನವಾಗಿದೆ. ರೌಡಿಯಾಗಬೇಕೆಂದು ಹೊರಟಿದ್ದ ಅಪ್ಪು ಎಂಬಾತನನ್ನು ಅದೇ ಏರಿಯಾದ ಹುಡುಗರ ಗ್ಯಾಂಗ್‌ ಕೊಂದು ಹಾಕಿತ್ತು.

ಮಹಾಲಕ್ಷ್ಮಿಲೇಔಟ್ ನಿವಾಸಿಯಾಗಿರುವ ಅಪ್ಪು ಹುಡುಗರ ಮೇಲೆ ದರ್ಪ ಮೆರೆದು ಹಲ್ಲೆ ನಡೆಸಿ ಕೊಲೆಗೆ ಸ್ಕೆಚ್ ಹಾಕಿದ್ದ. ಏರಿಯಾದಲ್ಲಿ ಹವಾ ತೋರಿಸಲು ಸಿಕ್ಕ ಸಿಕ್ಕವರಿಗೆ ಹೊಡಿತ್ತಿದ್ದ. ಅಪ್ಪುವಿನ ವರ್ತನೆಗೆ ಬೇಸತ್ತಿದ್ದ ಏರಿಯಾ ಹುಡುಗರು, ಮಾತನಾಡುವ ನೆಪದಲ್ಲಿ ಕರೆಸಿಕೊಂಡಿದ್ದರು.

ಜೀವನಹಳ್ಳಿ ರೈಲ್ವೆ ಟ್ರಾಕ್ ಬಳಿ ಬಂದಿದ್ದ ಅಪ್ಪು ಮೇಲೆ ಏಕಾಏಕಿ ನಾಲ್ಕೈದು ಮಂದಿ ದಾಳಿ ಮಾಡಿದ್ದರು. ಇವರಿಂದ ತಪ್ಪಿಸಿಕೊಳ್ಳಲು ಹೋದಾಗ ಅಪ್ಪುನನ್ನು ಅಟ್ಟಾಡಿಸಿಕೊಂಡು ಹೋಗಿ ಚಾಕುವಿನಿಂದ ಇರಿದು ಬಳಿಕ ತಲೆ ಮೇಲೆ ಕಲ್ಲುಎತ್ತಿ ಹಾಕಿ ಕೊಂದು ಹಾಕಿದ್ದರು.

ಕೃತ್ಯದ ಬಳಿಕ ಎಲ್ಲರೂ ತಲೆಮರೆಸಿಕೊಂಡಿದ್ದರು. ಇದೀಗ ಕೊಲೆಯಾದ ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸದ್ಯ ನಾಲ್ವರು ಆರೋಪಿಗಳನ್ನು ಬಂಧಿಸಿರುವ ಪುಲಿಕೇಶಿನಗರ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ: Renuka swamy Murder : ರೇಣುಕಾಸ್ವಾಮಿ ಕೊಲೆ ಕೇಸ್‌ನ 17ನೇ ಆರೋಪಿಯಿಂದ ಜಾಮೀನು ಅರ್ಜಿ ಸಲ್ಲಿಕೆ

Continue Reading
Advertisement
Doctor's Day
ದೇಶ11 mins ago

Doctor’s Day: ಆರೋಗ್ಯ ಕ್ಷೇತ್ರದ ಮೂಲ ಸೌಕರ್ಯ ವೃದ್ಧಿಗೆ ಕ್ರಮ; ಪ್ರಧಾನಿ ಮೋದಿ ಭರವಸೆ

Munawar Faruqui shares first pic with new wife
ಬಾಲಿವುಡ್22 mins ago

Munawar Faruqui: ಮೊದಲ ಬಾರಿಗೆ ಪತ್ನಿ ಜತೆ ಇರುವ ಫೋಟೊ ಹಂಚಿಕೊಂಡ  ʻಬಿಗ್ ಬಾಸ್ 17ʼರ ವಿಜೇತ  ಮುನಾವರ್ ಫಾರೂಕಿ!

Lok sabha Election 2024 DV Sadananda Gowda
ಪ್ರಮುಖ ಸುದ್ದಿ25 mins ago

DV Sadananda Gowda: ಬಿಜೆಪಿ ರಾಜ್ಯ ನಾಯಕರ ಮೇಲೆ ಸಿಡಿದೆದ್ದ ಸದಾನಂದ ಗೌಡ; ಪಕ್ಷವಿರೋಧಿಗಳಿಗೆ ಮಣೆ ಹಾಕಿದ್ದಕ್ಕೆ ಕಿಡಿ

Karave Protest
ಪ್ರಮುಖ ಸುದ್ದಿ39 mins ago

Karave Protest: ಕನ್ನಡಿಗರಿಗೆ ಉದ್ಯೋಗ ನೀಡಿ, ಇಲ್ಲವೇ ರಾಜ್ಯ ಬಿಟ್ಟು ತೊಲಗಿ: ಕರವೇ ಕಾರ್ಯಕರ್ತರ ಆಕ್ರೋಶ

Actor Darshan grandmother came running distant town to see and not punish him
ಸ್ಯಾಂಡಲ್ ವುಡ್59 mins ago

Actor Darshan: ದರ್ಶನ್‌ ತಪ್ಪು ಮಾಡಿದ್ದಾನೆ ಆದರೆ ಶಿಕ್ಷೆ ಕೊಡಬೇಡಿ ಎಂದು ದೂರದ ಊರಿಂದ ಓಡೋಡಿ ಬಂದ ಅಜ್ಜಿ!

ಚಿಕ್ಕಬಳ್ಳಾಪುರ1 hour ago

Dead Body Found : ಮರದಲ್ಲಿ ನೇತಾಡುತ್ತಿತ್ತು ಅಪರಿಚಿತನ ಶವ; ಸತ್ತವನ ಕೈ ಮೇಲಿತ್ತು ಲಕ್ಷ್ಮಿ ಹೆಸರಿನ ಹಚ್ಚೆ

Hurricane Beryl
ಪ್ರಮುಖ ಸುದ್ದಿ1 hour ago

Hurricane Beryl : ವೆಸ್ಟ್​ ಇಂಡೀಸ್​ನಲ್ಲಿ ಚಂಡಮಾರುತ, ಸಂಕಷ್ಟದಲ್ಲಿ ಸಿಲುಕಿದ ಚಾಂಪಿಯನ್ ಭಾರತ ತಂಡ

NEET UG 2024 Re-Test Result
ದೇಶ1 hour ago

NEET UG 2024 Re-Test Result: ನೀಟ್‌ ಮರುಪರೀಕ್ಷೆಯ ಫಲಿತಾಂಶ ಪ್ರಕಟ; ಹೀಗೆ ಚೆಕ್‌ ಮಾಡಿ

National Doctor’s Day
ಆರೋಗ್ಯ1 hour ago

National Doctor’s Day: ಇಂದು ರಾಷ್ಟ್ರೀಯ ವೈದ್ಯರ ದಿನ; ಕಾಳಜಿಯ ಕೈಗಳಿಗೆ ಕೃತಜ್ಞತೆ ಹೇಳುವ ದಿನ

hassan murder case
ಕ್ರೈಂ1 hour ago

Murder Case: ಎಸ್‌ಪಿ ಕಚೇರಿ ಆವರಣದಲ್ಲೇ ಪತ್ನಿಯನ್ನು ಇರಿದು ಕೊಂದ ಪೊಲೀಸ್ ಕಾನ್‌ಸ್ಟೇಬಲ್

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ19 hours ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು1 day ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ2 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ2 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ3 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು4 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ4 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

ಟ್ರೆಂಡಿಂಗ್‌