Remove misleading ads High sugar controversy what is in the notice issued by the Child Rights Commission to BournevitaRemove misleading ads : ಅಧಿಕ ಸಕ್ಕರೆಯ ವಿವಾದ, ಬೋರ್ನ್‌ವಿಟಾಗೆ ಮಕ್ಕಳ ಹಕ್ಕುಗಳ ಆಯೋಗ ನೀಡಿದ ನೋಟಿಸ್‌ನಲ್ಲಿ ಏನಿದೆ? - Vistara News

ಪ್ರಮುಖ ಸುದ್ದಿ

Remove misleading ads : ಅಧಿಕ ಸಕ್ಕರೆಯ ವಿವಾದ, ಬೋರ್ನ್‌ವಿಟಾಗೆ ಮಕ್ಕಳ ಹಕ್ಕುಗಳ ಆಯೋಗ ನೀಡಿದ ನೋಟಿಸ್‌ನಲ್ಲಿ ಏನಿದೆ?

Remove misleading ads ಮಕ್ಕಳ ಹಕ್ಕುಗಳ ಆಯೋಗವು ಬೋರ್ನ್‌ ವಿಟಾ ಉತ್ಪಾದಕರಿಗೆ ನೀಡಿರುವ ನೋಟಿಸ್‌ನಲ್ಲಿ ದಿಕ್ಕು ತಪ್ಪಿಸುವ ಜಾಹೀರಾತು, ಲೇಬಲ್‌ಗಳನ್ನು ಹಿಂತೆಗೆದುಕೊಳ್ಳಬೇಕು ಎಂದು ತಿಳಿಸಿದೆ.

VISTARANEWS.COM


on

Remove misleading ads Controversy of excess sugar in Bournevita notice issued by Child Rights Commission
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಹೆಲ್ತ್‌ ಡ್ರಿಂಕ್‌ ತಯಾರಕ ಬೋರ್ನ್‌ವಿಟಾದಲ್ಲಿ ಸಕ್ಕರೆಯ ಮಟ್ಟ ಅಧಿಕವಾಗಿದೆ ಎಂಬ ವಿವಾದ ಉಂಟಾಗಿರುವ ಹಿನ್ನೆಲೆಯಲ್ಲಿ ಮಕ್ಕಳ ಹಕ್ಕುಗಳ ಆಯೋಗದಿಂದ (NCPCR) ಬೋರ್ನ್‌ವೀಟಾ ತಯಾರಕ ( Bournvita ) ಮೋಂಡೆಲ್ಜ್‌ ಇಂಡಿಯಾ ಇಂಟರ್‌ನ್ಯಾಶನಲ್‌ಗೆ (Mondelez India International) ನೋಟಿಸ್‌ ಜಾರಿಯಾಗಿದೆ. ಈ ಸಂಬಂಧ ಪರಾಮರ್ಶೆ ನಡೆಸಬೇಕು ಹಾಗೂ ದಿಕ್ಕು ತಪ್ಪಿಸುವ ಜಾಹೀರಾತು ಮತ್ತು ಪ್ಯಾಕೇಜಿಂಗ್‌ ಲೇಬಲ್‌ಗಳನ್ನು ಹಿಂತೆಗೆದುಕೊಳ್ಳುವಂತೆ (misleading advertisements) ಎನ್‌ಸಿಪಿಸಿಆರ್‌ ಸೂಚಿಸಿದೆ.

ಮಕ್ಕಳ ಹಕ್ಕುಗಳ ಆಯೋಗವು ಕಂಪನಿಗೆ ನೀಡಿರುವ ನೋಟಿಸ್‌ನಲ್ಲಿ, ನಿಮ್ಮ ಉತ್ಪನ್ನದಲ್ಲಿ ಅಧಿಕ ಸಕ್ಕರೆಯ ಅಂಶ ಇರುವುದು ಗಮನಕ್ಕೆ ಬಂದಿದೆ ಎಂದು ತಿಳಿಸಿದೆ. ಇದು ಮಕ್ಕಳ ಆರೋಗ್ಯಕ್ಕೆ ಹಾನಿಕಾರಕವಾಗಿದ್ದು, ಈ ಬಗ್ಗೆ ವಿವರಣೆ ನೀಡುವಂತೆ ತಿಳಿಸಿದೆ. ಕಂಪನಿಯ ಅಧ್ಯಕ್ಷ ದೀಪಕ್‌ ಅಯ್ಯರ್‌ಗೆ ನೋಟಿಸ್‌ ಜಾರಿಗೊಳಿಸಲಾಗಿದೆ.

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕುರಿತ ಸಂಸ್ಥೆಯು ಆಹಾರ ವಿಚಾರದಲ್ಲಿ ದಿಕ್ಕು ತಪ್ಪಿಸುವ ಜಾಹೀರಾತು ನೀಡುವ ಕಂಪನಿಗಳ ವಿರುದ್ಧ ಕ್ರಮ ಜರುಗಿಸಬೇಕು ಎಂದು ಎಫ್‌ಎಸ್‌ಎಸ್‌ಎಐಗೆ ಮಕ್ಕಳ ಹಕ್ಕುಗಳ ಆಯೋಗವು ಒತ್ತಾಯಿಸಿದೆ.

ವಿವಾದ ಸೃಷ್ಟಿಯಾಗಿದ್ದು ಹೇಗೆ?

ಸಾಮಾಜಿಕ ಜಾಲತಾಣಗಳಲ್ಲಿನ ಹೆಲ್ತ್‌ ಇನ್‌ಫ್ಲುಯೆನ್ಸರ್‌ ರೇವಂತ್‌ ಹಿಮಾತ್‌ ಸಿಂಗ್‌ ಎಂಬುವರ ವಿಡಿಯೊದಲ್ಲಿ ಬೋರ್ನ್‌ ವಿಟಾವನ್ನು ಟೀಕಿಸಲಾಗಿತ್ತು. ಅದರಲ್ಲಿ ಬೋರ್ನ್‌ವೀಟಾದಲ್ಲಿ ಅಧಿಕ ಸಕ್ಕರೆ, ಕೋಕಾ ಸಾಲಿಡ್‌ ಮತ್ತು ಕ್ಯಾನ್ಸರ್‌ಕಾರಕ ಬಣ್ಣದ ಅಂಶಗಳು ಇದ್ದು, ಆರೋಗ್ಯಕ್ಕೆ ಹಾನಿಕಾರಕ ಎಂದು ಹೇಳಲಾಗಿತ್ತು. ಕಂಪನಿಯು ಕಾನೂನು ನೋಟಿಸ್‌ ಜಾರಿಗೊಳಿಸಿದ ಬಳಿಕ ಹೆಲ್ತ್‌ ಇನ್‌ಫ್ಲುಯೆನ್ಸರ್‌ ವೀಡಿಯೊವನ್ನು ಹಿಂತೆಗೆದುಕೊಂಡಿದ್ದರು. ಹಾಲಿಗೆ ಬೋರ್ನ್‌ವಿಟಾ ಪುಡಿಯನ್ನು ಮಿಶ್ರಣ ಮಾಡಿ ಸೇವಿಸಲಾಗುತ್ತಿದೆ.

ಬೋರ್ನ್‌ವಿಟಾದ ವಕ್ತಾರರು ಈ ಹಿಂದೆ ನೀಡಿದ್ದ ಸ್ಪಷ್ಟೀಕರಣದಲ್ಲಿ, ಪೌಷ್ಟಿಕಾಹಾರ ತಜ್ಞರು ಮತ್ತು ಆಹಾರ ವಿಜ್ಞಾನಿಗಳ ತಂಡದ ಅನುಮೋದನೆಯ ಬಳಿಕವಷ್ಟೇ ಬೋರ್ನ್‌ ವೀಟಾವನ್ನು ಮಾರುಕಟ್ಟೆಗೆ ಬಿಡುಗಡೆಗೊಳಿಸಲಾಗುತ್ತಿದೆ. ವೈಜ್ಞಾನಿಕವಾಗಿ ಸಿದ್ಧಪಡಿಸಲಾಗುತ್ತದೆ ಎಂದು ಹೇಳಿದ್ದರು.

ಹೀಗಿದ್ದರೂ ಎನ್‌ ಸಿಪಿಸಿಆರ್‌, ಬೋರ್ನ್‌ವಿಟಾವು ಎಫ್‌ಎಸ್‌ಎಸ್‌ಎಐ ಮಾರ್ಗದರ್ಶಕ ನಿಯಮಗಳ ಅನ್ವಯ ಡಿಸ್‌ಪ್ಲೇಗಳನ್ನು ಸರಿಯಾಗಿ ಮಾಡಿಲ್ಲ ಎಂದು ಕಂಪನಿಗೆ ನೋಟಿಸ್‌ ನೀಡಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Prajwal Revanna Case: ಹೈಕೋರ್ಟ್‌ಗೆ ಮತ್ತೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ ಭವಾನಿ ರೇವಣ್ಣ

Prajwal Revanna Case: ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಲ್ಲಿ ಜಾಮೀನು ಅರ್ಜಿ ವಜಾಗೊಂಡ ಹಿನ್ನೆಲೆಯಲ್ಲಿ ಹೈಕೋರ್ಟ್‌ಗೆ ನಿರೀಕ್ಷಣಾ ಜಾಮೀನು ಕೋರಿ ಭವಾನಿ ರೇವಣ್ಣ ಅರ್ಜಿ ಸಲ್ಲಿಸಿದ್ದಾರೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಪ್ರಕರಣಕ್ಕೆ ಸಂಬಂಧಿಸಿ ಕೆ.ಆರ್.ನಗರ ಸಂತ್ರಸ್ತೆ ಕಿಡ್ನ್ಯಾಪ್ ಕೇಸ್‌ನಲ್ಲಿ ಬಂಧನ ಭೀತಿಯಲ್ಲಿರುವ ಭವಾನಿ ರೇವಣ್ಣ, ಮತ್ತೆ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಲ್ಲಿ ಜಾಮೀನು ಅರ್ಜಿ ವಜಾಗೊಂಡ ಹಿನ್ನೆಲೆಯಲ್ಲಿ ಹೈಕೋರ್ಟ್‌ಗೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.

ಹೈಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನಿಗಾಗಿ ಭವಾನಿ ರೇವಣ್ಣ ಪರ ವಕೀಲ ಗಿರೀಶ್ ಕುಮಾರ್ ಬಿ.ಎಂ. ಅರ್ಜ ಸಲ್ಲಿಸಿದ್ದಾರೆ. ಸದ್ಯ ಕೇಸ್ ಸ್ವೀಕರಿಸಿ ಕೋರ್ಟ್‌ ಎಫ್ಆರ್ ನಂಬರ್ ನೀಡಿದೆ. ಇನ್ನು ಕೇಸ್ ನಂಬರ್ ನೀಡಿದ ಬಳಿಕ ಪೀಠಕ್ಕೆ ಅರ್ಜಿ ರವಾನೆಯಾಗುತ್ತದೆ. ಸೋಮವಾರ ಬೆಳಗ್ಗೆ 11:30ಕ್ಕೆ ಭವಾನಿ ರೇವಣ್ಣ ಪರ ಅರ್ಜಿ ಸಲ್ಲಿಕೆ ಮಾಡಲಾಗಿದೆ.

ಇದನ್ನೂ ಓದಿ | Food Poisoning : ಮೈಸೂರಲ್ಲಿ ಗೃಹ ಪ್ರವೇಶದ ಊಟ ತಿಂದ ವೃದ್ಧೆ ಸಾವು; 20ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಭವಾನಿ ರೇವಣ್ಣ ಕಣ್ಣಾಮುಚ್ಚಾಲೆ ಆಟ

ಪ್ರಜ್ವಲ್ ರೇವಣ್ಣ (Prajwal Revanna) ಸೆಕ್ಸ್ ಸ್ಕ್ಯಾಂಡಲ್‌ಗೆ ಸಂಬಂಧಿಸಿ ಮಹಿಳೆಯೊಬ್ಬಳ ಅಪಹರಣಕ್ಕೆ ಕುಮ್ಮಕ್ಕು ನೀಡಿದ ಪ್ರಕರಣದಲ್ಲಿ ಭವಾನಿ ರೇವಣ್ಣ ಪೊಲೀಸರ ಕಣ್ಣಿಂದ ತಪ್ಪಿಸಿಕೊಂಡು ಓಡಾಡುತ್ತಿದ್ದಾರೆ. ಭವಾನಿಯನ್ನು (Bhavani Revanna) ವಶಕ್ಕೆ ಪಡೆಯಲು ಪೊಲೀಸರ ನಾಲ್ಕು ವಿಶೇಷ ತಂಡಗಳನ್ನು ರಚಿಸಲಾಗಿದೆ. ಅವರ ವಿರುದ್ಧ ಅರೆಸ್ಟ್ ವಾರಂಟ್ ಕೂಡ ಜಾರಿ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ಪ್ರಕರಣಕ್ಕೆ ಸಂಬಂಧಿಸಿ ನಿಯಮದ 41a ಅಡಿ ಭವಾನಿ ರೇವಣ್ಣಗೆ ಎಸ್ ಐ ಟಿ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ನೀಡಲಾಗಿತ್ತು. ಪ್ರಜ್ವಲ್‌ಗೂ 41a ಅಡಿ ನೊಟೀಸ್ ನೀಡಿದ್ದ ಎಸ್ಐಟಿ ಆ ಬಳಿಕ ಬಂಧಿಸಿತ್ತು. ಪ್ರಜ್ವಲ್ ರೇವಣ್ಣ ವಿಚಾರಣೆಗೆ ಹಾಜರಾಗದ ಹಿನ್ನೆಲೆ ಅರೆಸ್ಟ್ ವಾರೆಂಟ್ ಜಾರಿ ಮಾಡಲಾಗಿತ್ತು. ಈಗ ಭವಾನಿ ರೇವಣ್ಣಗೂ ಅರೆಸ್ಟ್ ವಾರೆಂಟ್ ಜಾರಿ ಮಾಡುವ ಸಾಧ್ಯತೆ ಇದೆ. ತಾವೇ ಎಸ್ ಐ ಟಿ ಕಚೇರಿಗೆ ಬರುವುದಾಗಿ ಹೇಳಿದ್ದ ಭವಾನಿ ರೇವಣ್ಣ ಆ ಬಳಿಕ ಬರದೇ ತಲೆತಪ್ಪಿಸಿಕೊಂಡು ಓಡಾಡುತ್ತಿದ್ದಾರೆ. ಭವಾನಿ ರೇವಣ್ಣ ವಿರುದ್ಧ ಜನಾಕ್ರೋಶವೂ ಹೆಚ್ಚುತ್ತಿದೆ. ಭವಾನಿ ರೇವಣ್ಣಗಾಗಿ ಪೊಲೀಸರು ಹುಡುಕಾಟ ಮುಂದುವರಿಸಿದ್ದಾರೆ.

ಮೂರು ಜಿಲ್ಲೆ, ನಾಲ್ಕು ತಂಡ, ಸತತ ಹುಡುಕಾಟ

ಪೊಲೀಸರ ನಾಲ್ಕು ವಿಶೇಷ ತಂಡಗಳಿಂದ ಭವಾನಿ ರೇವಣ್ಣಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಬೆಂಗಳೂರು, ಮೈಸೂರು, ಹಾಸನ ಈ ಮೂರು ಜಿಲ್ಲೆಗಳಲ್ಲಿ ಭವಾನಿ ರೇವಣ್ಣಗಾಗಿ ಮುಖ್ಯವಾಗಿ ಹುಡುಕಾಟ ನಡೆಸಲಾಗುತ್ತಿದೆ. ಈ ಮೂರು ಜಿಲ್ಲೆಗಳಲ್ಲಿ ಮೂರು ಪೊಲೀಸ್ ತಂಡಗಳು ಬೀಡುಬಿಟ್ಟಿವೆ. ನಾಲ್ಕನೇ ಟೆಕ್ನಿಕಲ್ ತಂಡದಿಂದಲೂ ಭವಾನಿ ರೇವಣ್ಣ ಬಗ್ಗೆ ಟ್ರ್ಯಾಕಿಂಗ್ ನಡೆಯುತ್ತಿದೆ. ಈ ತಾಂತ್ರಿಕ ತಂಡ ಭವಾನಿ ರೇವಣ್ಣ ಅವರ ಮೊಬೈಲ್ ಟ್ರ್ಯಾಕ್ ಮಾಡುತ್ತಿದೆ. ಟವರ್ ಡಂಪ್ ಲೊಕೇಷನ್, ಸಿಡಿಆರ್ ಪರಿಶೀಲನೆ ನಡೆಸುತ್ತಿದೆ.

ಎಲ್ಲವೂ ಗೊತ್ತಿದ್ದೂ ಕಣ್ಣಾ ಮುಚ್ಚಾಲೆ ಆಡ್ತಿದ್ದಾರಾ ಭವಾನಿ ರೇವಣ್ಣ?

ತನಿಖೆಗೆ ಸಹಕರಿಸ್ತೀವಿ, ನೊಟೀಸ್ ಕೊಟ್ರೆ ವಿಚಾರಣೆಗೆ ಹಾಜರಾಗ್ತೀವಿ ಎಂದಿದ್ದ ಮಾಜಿ ಸಚಿವ ಎಚ್ ಡಿ ರೇವಣ್ಣ ಪತ್ನಿ ಭವಾನಿ ಈಗ ಕೋರ್ಟ್ ನಲ್ಲಿ ಜಾಮೀನು ಅರ್ಜಿ ತಿರಸ್ಕಾರ ಆಗುತ್ತಿದ್ದಂತೆ ಎಸ್ಕೇಪ್ ಆಗಿದ್ದಾರೆ. ಅವರ ಮನೆಗೆ ಹೋಗಿ ಭವಾನಿ ರೇವಣ್ಣರನ್ನ ವಿಚಾರಣೆ ‌ನಡೆಸಲು ಎಸ್ ಐ ಟಿ ಮುಂದಾಗಿತ್ತು. ಆದರೆ ಮನೆಯಿಂದ ಹೊರಬಂದು ಅಜ್ಞಾತ ಸ್ಥಳದಲ್ಲಿ ಅಡಗಿಕೊಂಡಿದ್ದಾರೆ. ಎಸ್ ಐ ಟಿ ನೊಟೀಸ್ ಗೆ ಉತ್ತರವನ್ನೂ ಕೊಟ್ಟಿಲ್ಲ‌ ಸಂಬಂಧಿಕರೊಬ್ಬರ ಮನೆಯಲ್ಲಿ ತಲೆ ಮರೆಸಿಕೊಂಡಿರುವ ಸಾಧ್ಯತೆ ಇದೆ.

ಇದನ್ನೂ ಓದಿ | Prajwal Revanna Case: ಇಂದು ರಹಸ್ಯವಾಗಿ ಪುರುಷತ್ವ ಪರೀಕ್ಷೆ, ನಾಳೆ ಎಲೆಕ್ಷನ್‌ ರಿಸಲ್ಟ್:‌ ಪ್ರಜ್ವಲ್‌ಗೆ ಡಬಲ್ ಟೆ‌ನ್ಷನ್!‌

ಯಾವ ಕ್ಷಣದಲ್ಲಾದ್ರೂ ಭವಾನಿ ರೇವಣ್ಣ ವಶ

ಭವಾನಿ ರೇವಣ್ಣ ಎಲ್ಲಿದ್ದಾರೆ ಎಂಬ ಮಾಹಿತಿ ಕಲೆ‌ ಹಾಕುತ್ತಿರುವ ಎಸ್ ಐ ಟಿ ಯಾವುದೇ ಕ್ಷಣದಲ್ಲಿ ಅವರನ್ನು ಬಂಧಿಸುವ ಸಾಧ್ಯತೆ ಇದೆ. ಅವರನ್ನು ಬಂಧಿಸಲು ಇನ್ಸ್ಪೆಕ್ಟರ್ ಹೇಮಂತ್ ಕುಮಾರ್ ತಂಡ ಸಜ್ಜಾಗಿದೆ.

Continue Reading

ಪ್ರಮುಖ ಸುದ್ದಿ

Chitradurga Lok Sabha Constituency : ಚಿತ್ರದುರ್ಗ ಕ್ಷೇತ್ರವನ್ನು ಮರು ವಶಪಡಿಸಿಕೊಳ್ಳುವುದೇ ಕಾಂಗ್ರೆಸ್​?

Chitradurga Lok Sabha Constituency : ಬಿಜೆಪಿ ಈ ಬಾರಿ ಹಿರಿಯ ನಾಯಕ ಗೋವಿಂದ ಕಾರಜೋಳ ಅವರನ್ನು ಕಣಕ್ಕಿಳಿಸಿದೆ. ಕಾಂಗ್ರೆಸ್ ನಿಂದ ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಮೂರನೇ ಬಾರಿಗೆ ಕಣದಲ್ಲಿದ್ದಾರೆ. ಈ ಕ್ಷೇತ್ರದಲ್ಲಿ ಗಣನೀಯ ಸಂಖ್ಯೆಯ ಎಸ್ಸಿ ಮತ್ತು ಎಸ್ಟಿ ಮತದಾರರಿದ್ದಾರೆ. 2019ರಲ್ಲಿ ಇಲ್ಲಿ 17.61 ಲಕ್ಷ ಮತದಾರರು ಇದ್ದರೆ 2024ರಲ್ಲಿ 18. 49 ಲಕ್ಷ ಮತದಾರರು ಕಾಣಿಸಿಕೊಂಡಿದ್ದಾರೆ.

VISTARANEWS.COM


on

Chitradurga Lok Sabha Constituency
Koo

ಚಿತ್ರದುರ್ಗ ಲೋಕಸಭೆ ಕ್ಷೇತ್ರ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ಮೀಸಲಾಗಿದೆ. ಇದು ಇಡೀ ಚಿತ್ರದುರ್ಗ ಜಿಲ್ಲೆ ಮತ್ತು ತುಮಕೂರು ಜಿಲ್ಲೆಯ ಕೆಲವು ಭಾಗಗಳನ್ನು ಒಳಗೊಂಡಿದೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರವು ಮೊಳಕಾಲ್ಮೂರು (ಎಸ್ಟಿ), ಚಳ್ಳಕೆರೆ (ಎಸ್ಟಿ), ಚಿತ್ರದುರ್ಗ, ಹಿರಿಯೂರು, ಹೊಸದುರ್ಗ, ಹೊಳಲ್ಕೆರೆ (ಎಸ್ಸಿ), ಶಿರಾ ಮತ್ತು ಪಾವಗಡ (ಎಸ್ಸಿ) ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರವು ಆರಂಭದಲ್ಲಿ ಮೈಸೂರು ರಾಜ್ಯದ ಭಾಗವಾಗಿತ್ತು . 1977 ರಿಂದ ಈ ಸ್ಥಾನವು ಕರ್ನಾಟಕ ರಾಜ್ಯದ ಭಾಗವಾಯಿತು.

ಚಿತ್ರದುರ್ಗ ಕ್ಷೇತ್ರದಲ್ಲಿ ಒಟ್ಟು 16 ಲೋಕಸಭಾ ಚುನಾವಣೆಗಳು ನಡೆದಿದ್ದು, ಕಾಂಗ್ರೆಸ್ 11 ಬಾರಿ ಗೆದ್ದಿದೆ. ಇದಲ್ಲದೆ, ಪ್ರಜಾ ಸೋಷಿಯಲಿಸ್ಟ್ ಪಾರ್ಟಿ, ಸ್ವತಂತ್ರ ಅಭ್ಯರ್ಥಿ , ಜನತಾದಳ ಮತ್ತು ಜೆಡಿಯು ಅಭ್ಯರ್ಥಿಗಳು ಇಲ್ಲಿ ಗೆಲುವು ದಾಖಲಿಸಿದ್ದಾರೆ. 2009 ರಲ್ಲಿ ಮೊದಲ ಬಾರಿಗೆ ಬಿಜೆಪಿ ಈ ಸ್ಥಾನದಿಂದ ಗೆದ್ದಿತ್ತು. 2019 ರಲ್ಲಿ ಮತ್ತೆ ಸ್ಥಾನ ಕಸಿದುಕೊಂಡಿತು. ಕರ್ನಾಟಕದ ಚಿತ್ರದುರ್ಗ ಲೋಕಸಭಾ ಕ್ಷೇತ್ರವನ್ನು ಸಾಮಾನ್ಯವಾಗಿ ಕಾಂಗ್ರೆಸ್ ನ ಸಾಂಪ್ರದಾಯಿಕ ಕ್ಷೇತ್ರವೆಂದು ಪರಿಗಣಿಸಲಾಗುತ್ತದೆ.

ಬಿಜೆಪಿ ಈ ಬಾರಿ ಹಿರಿಯ ನಾಯಕ ಗೋವಿಂದ ಕಾರಜೋಳ ಅವರನ್ನು ಕಣಕ್ಕಿಳಿಸಿದೆ. ಕಾಂಗ್ರೆಸ್ ನಿಂದ ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಮೂರನೇ ಬಾರಿಗೆ ಕಣದಲ್ಲಿದ್ದಾರೆ. ಈ ಕ್ಷೇತ್ರದಲ್ಲಿ ಗಣನೀಯ ಸಂಖ್ಯೆಯ ಎಸ್ಸಿ ಮತ್ತು ಎಸ್ಟಿ ಮತದಾರರಿದ್ದಾರೆ. 2019ರಲ್ಲಿ ಇಲ್ಲಿ 17.61 ಲಕ್ಷ ಮತದಾರರು ಇದ್ದರೆ 2024ರಲ್ಲಿ 18. 49 ಲಕ್ಷ ಮತದಾರರು ಕಾಣಿಸಿಕೊಂಡಿದ್ದಾರೆ.

ಹಿಂದಿನ ಫಲಿತಾಂಶಗಳು ಇಲ್ಲಿವೆ

2019ರ ಸಾರ್ವತ್ರಿಕ ಚುನಾವಣೆಯಲ್ಲಿ ಎ .ನಾರಾಯಣಸ್ವಾಮಿ ಅವರು ಕಾಂಗ್ರೆಸ್​​ನ ಬಿ.ಎನ್.ಚಂದ್ರಪ್ಪ ಅವರನ್ನು 80,178 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. ಈ ಕ್ಷೇತ್ರದಲ್ಲಿ 2019 ರಲ್ಲಿ ಬಿಜೆಪಿ 50.24% ಮತಗಳನ್ನು ಹೊಂದಿತ್ತು.

ಇದನ್ನೂ ಓದಿ:Udupi-Chikmagalur Lok Sabha constituency: ಬದಲಾವಣೆ ನಡುವೆ ಯಾರಿಗೆ ಮಣೆ ಹಾಕಲಿದ್ದಾರೆ ಉಡುಪಿ ಕ್ಷೇತ್ರದ ಮತದಾರರು?

2014ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿ.ಎನ್.ಚಂದ್ರಪ್ಪ ಅವರು ಬಿಜೆಪಿಯ ಜನಾರ್ಧನ ಸ್ವಾಮಿ ಅವರನ್ನು 1,01,291 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. ಕಾಂಗ್ರೆಸ್ 42.64% ಮತಗಳನ್ನು ಗಳಿಸಿದೆ.

2009ರ ಸಾರ್ವತ್ರಿಕ ಚುನಾವಣೆಯಲ್ಲಿ ಜನಾರ್ದನ ಸ್ವಾಮಿ ಅವರು ಕಾಂಗ್ರೆಸ್​​ನ ಡಾ.ಬಿ.ತಿಪ್ಪೇಸ್ವಾಮಿ ಅವರನ್ನು 1,35,571 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. ಈ ಕ್ಷೇತ್ರದಲ್ಲಿ ಬಿಜೆಪಿ ಶೇ.44.35ರಷ್ಟು ಮತಗಳನ್ನು ಪಡೆದಿತ್ತು.

2011ರ ಜನಗಣತಿಯ ಅಂಕಿಅಂಶಗಳ ಪ್ರಕಾರ ಜಿಲ್ಲೆಯ ಜನಸಂಖ್ಯೆ 1659456. ಸರಾಸರಿ ಸಾಕ್ಷರತಾ ಪ್ರಮಾಣವು 73.71% – ಮಹಿಳೆಯರಲ್ಲಿ 65.88% ಮತ್ತು ಪುರುಷರಲ್ಲಿ 81.37% ಆಗಿತ್ತು. ಸಂಸತ್ತಿನಲ್ಲಿ ಎಸ್ಸಿ ಮತದಾರರು ಸುಮಾರು 23.7% ರಷ್ಟಿದ್ದರೆ, ಎಸ್ಟಿ ಮತದಾರರು 16.8% ರಷ್ಟಿದ್ದಾರೆ. ಗ್ರಾಮೀಣ ಮತದಾರರು ಮತದಾರರಲ್ಲಿ ಸುಮಾರು 80% ರಷ್ಟಿದ್ದಾರೆ. ಈ ಕ್ಷೇತ್ರದಲ್ಲಿ ಮತದಾರರ ಲಿಂಗ ಅನುಪಾತ (1000 ಪುರುಷ ಮತದಾರರಿಗೆ ಮಹಿಳಾ ಮತದಾರರ ಸಂಖ್ಯೆ) 2024 ರಲ್ಲಿ 1,006, 2019 ರಲ್ಲಿ ಇದು 979, 2014 ರಲ್ಲಿ 966 ಮತ್ತು 2009 ರಲ್ಲಿ 967 ಆಗಿತ್ತು.

Continue Reading

ಪ್ರಮುಖ ಸುದ್ದಿ

Prajwal Revanna Case: ಇಂದು ರಹಸ್ಯವಾಗಿ ಪುರುಷತ್ವ ಪರೀಕ್ಷೆ, ನಾಳೆ ಎಲೆಕ್ಷನ್‌ ರಿಸಲ್ಟ್:‌ ಪ್ರಜ್ವಲ್‌ಗೆ ಡಬಲ್ ಟೆ‌ನ್ಷನ್!‌

prajwal revanna case: ಪ್ರಜ್ವಲ್‌ ರೇವಣ್ಣ ಇಂದು ಪುರುಷತ್ವ ಪರೀಕ್ಷೆ ಹಾಗೂ ನಾಳೆ ಹಾಸನ ಸಂಸದ ಸ್ಥಾನದ ಚುನಾವಣೆ ಫಲಿತಾಂಶದ ಪರೀಕ್ಷೆ- ಎರಡೂ ಟೆನ್ಷನ್‌ ಅನ್ನು ಏಕಕಾಲಕ್ಕೆ ಎದುರಿಸಬೇಕಾಗಿದೆ. ಇಂದು ಅವರಿಗೆ ಮೆಡಿಕಲ್‌ ಟೆಸ್ಟ್‌ ರಹಸ್ಯವಾಗಿ ನಡೆಯುತ್ತಿದೆ.

VISTARANEWS.COM


on

Prajwal revanna case
Koo

ಬೆಂಗಳೂರು: ನಾಳೆ ಪ್ರಕಟವಾಗಲಿರುವ ಸಂಸದ ಸ್ಥಾನದ ಮತ ಎಣಿಕೆ (vote count) ಹಾಗೂ ಫಲಿತಾಂಶದ (Lok Sabha Election result) ಟೆನ್ಷನ್‌ ಒಂದು ಕಡೆ. ಅದರ ನಡುವೆಯೇ ಇಂದು ಹಾಸನ ಸಂಸದ ಪ್ರಜ್ವಲ್ ರೇವಣ್ಣ (Hassan MP Prajwal Revanna Case) ತಮ್ಮ ವಿರುದ್ಧದ ಲೈಂಗಿಕ ದೌರ್ಜನ್ಯ (Physical Abuse) ಪ್ರಕರಣದ ತನಿಖೆಯ ಅಂಗವಾಗಿ ಪುರುಷತ್ವ ಪರೀಕ್ಷೆ ಎದುರಿಸಿದರು. ಇದು ರಹಸ್ಯವಾಗಿ ನಡೆದಿದೆ.

ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ, ಆಂಬ್ಯುಲೆನ್ಸ್‌ನಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದಿತು. ಹೆಚ್ಚಿನ ಪೊಲೀಸ್‌ ರಕ್ಷಣೆ ಇಲ್ಲದೆ, ಮೀಡಿಯಾದವರ ಗಮನ ಸೆಳೆಯದಂತೆ ಆಂಬ್ಯುಲೆನ್ಸ್‌ನಲ್ಲಿ ರಹಸ್ಯವಾಗಿ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದೆ. ಅಟಲ್ ಬಿಹಾರಿ ವಾಜಪೇಯಿ ಆಸ್ಪತ್ರೆಯಲ್ಲಿ ಪ್ರಜ್ವಲ್‌ ಅವರ ವೈದ್ಯಕೀಯ ಪರೀಕ್ಷೆ ನಡೆಯುತ್ತಿದೆ. ಇದಾದ ಬಳಿಕ ಸ್ಥಳ ಮಹಜರು ಪ್ರಕ್ರಿಯೆಗೆ ಎಸ್ಐಟಿ ಟೀಂ ಪ್ರಜ್ವಲ್‌ ಅವರನ್ನು ಕರೆದೊಯ್ದಿತು.

ಇಂದು ಪುರುಷತ್ವಕ್ಕೆ ಸಂಬಂಧಿಸಿದ ಮೆಡಿಕಲ್‌ ಟೆಸ್ಟ್‌ಗಳನ್ನು ಪ್ರಜ್ವಲ್‌ ಮೇಲೆ ನಡೆಸಲಾಗುತ್ತಿದೆ. ನಾಳೆ ಚುನಾವಣೆ ಫಲಿತಾಂಶವೂ ಇದೆ. ಪ್ರಜ್ವಲ್‌ಗೆ ಎರಡೂ ಮಹತ್ವದ್ದಾಗಿದ್ದು, ಆತಂಕ ತಂದಿಟ್ಟಿವೆ.

ಹಾಗಿದ್ರೆ ಹೇಗೆ ನಡೆಯುತ್ತೆ ಪುರುಷತ್ವ ಪರೀಕ್ಷೆ?

ಇದು ಲೈಂಗಿಕ ಸಾಮರ್ಥ್ಯ ಸಾಬೀತು ಪಡಿಸುವ ಪರೀಕ್ಷೆ. ಲೈಂಗಿಕ ಕಿರುಕುಳ, ಅತ್ಯಾಚಾರ ಮುಂತಾದ ದೂರುಗಳು ಕೇಳಿ ಬಂದಾಗ ಆರೋಪಿ ಪುರುಷತ್ವ ಪರೀಕ್ಷೆ ನಡೆಸಲಾಗುತ್ತೆ. ಪ್ರಾಥಮಿಕ ಹಂತದಲ್ಲಿ ಮೂರು ರೀತಿ ಪರೀಕ್ಷೆ ನಡೆಸಲಾಗುತ್ತದೆ.

1) ಪುರುಷರ ಜನನಾಂಗ ನಿಮಿರುವಿಕೆ, ವೀರ್ಯ ವಿಶ್ಲೇಷಣೆ, ಶಿಶ್ನಕ್ಕೆ ಪೂರೈಕೆಯಾಗುವ ರಕ್ತನಾಳಗಳ ಪರೀಕ್ಷೆಯನ್ನು ಮುಖ್ಯವಾಗಿ ನಡೆಸಲಾಗುತ್ತದೆ. ಆಂಡ್ರೋಲಜಿಸ್ಟ್ ಸೇರಿದಂತೆ ನಾಲ್ವರು ತಜ್ಞ ವೈದ್ಯರ ತಂಡ ಈ ಪರೀಕ್ಷೆ ನಡೆಸುತ್ತಾರೆ.

2) ನಂತರ ವೀರ್ಯ ವಿಶ್ಲೇಷಣೆ (A Semen Analysis) ನಡೆಯುತ್ತದೆ. ಪುರುಷನ ವೀರ್ಯ ಮತ್ತು ವೀರ್ಯಾಣುಗಳ ಗುಣಲಕ್ಷಣಗಳ ಮೌಲ್ಯಮಾಪನ ನಡೆಸುವ ಪರೀಕ್ಷೆ ಇದು.

3) ಡಾಪ್ಲರ್ ಅಲ್ಟ್ರಾಸೌಂಡ್ ಪರೀಕ್ಷೆ (Penile Doppler Ultrasound) ನಡೆಯಲಿದೆ. ಆರೋಪಿಯ ಖಾಸಗಿ ಅಂಗಕ್ಕೆ ಸರಿಯಾಗಿ ರಕ್ತ ಪೂರೈಕೆಯಾಗುತ್ತಿದೆಯೆ? ಕ್ತದ ಪ್ರಮಾಣ ಎಷ್ಟಿದೆ? ಎಂಬುದು ತಿಳಿಯುವ ಟೆಸ್ಟ್. ವಯಾಗ್ರಾದಂಥ ಮೆಡಿಸಿನ್ ಸೇವಿಸಿದರೂ ಕೂಡ ಈ ಪರೀಕ್ಷೆಯಲ್ಲಿ ಗೊತ್ತಾಗುತ್ತೆ.

4) Nocturnal Penile Tumescence (NPT) Test. ಆಸ್ಪತ್ರೆಯ ನಿದ್ರಾ ಪ್ರಯೋಗಶಾಲೆಯಲ್ಲಿ ನಡೆಯುವ ಪರೀಕ್ಷೆ ಇದು. ಆರೋಪಿಯ ಖಾಸಗಿ ಅಂಗ ರಾತ್ರಿ ನಿದ್ರೆಯಲ್ಲಿ ಯಾವ ರೀತಿ ಪ್ರತಿಕ್ರಿಯಿಸುತ್ತೆ ಎಂದು ಎನ್‌ಪಿಟಿ ಪರೀಕ್ಷೆಯಲ್ಲಿ ಪರಿಶೀಲನೆ ನಡೆಸಲಾಗುತ್ತದೆ. ಈ ಪರೀಕ್ಷೆ ಸಾಮಾನ್ಯವಾಗಿ ಆಸ್ಪತ್ರೆಯ ನಿದ್ರಾ ಪ್ರಯೋಗಶಾಲೆಯಲ್ಲಿ ನಡೆಯುತ್ತದೆ. ಆರೋಪಿಯ ಅರಿವಿಗೆ ಬಾರದಂತೆ ನಡೆಯುವ ಪರೀಕ್ಷೆ ಇದು. ಈ ಮೂರು ಟೆಸ್ಟ್ ಮೂಲಕ ಆರೋಪಿಯ ಪುರುಷತ್ವ ಪರೀಕ್ಷೆ ನಡೆಯುತ್ತವೆ. ಈ ಟೆಸ್ಟ್‌ನ ರಿಪೋರ್ಟ್‌ಗಳು ಅತ್ಯಾಚಾರ ಪ್ರಕರಣದಲ್ಲಿ ಬಹಳ ಮುಖ್ಯವಾಗುತ್ತವೆ.

ಧ್ವನಿ ಹೋಲಿಕೆಗೆ ಮುಂದಾದ ಎಸ್‌ಐಟಿ

ಸೆರೆಸಿಕ್ಕ ನಂತರದ ಕ್ಷಣದಿಂದಲೇ ಎಸ್‌ಐಟಿ ಪ್ರಶ್ನೆಗಳಿಗೆ ಮುಖಾಮುಖಿಯಾಗಿರುವ ಪ್ರಜ್ವಲ್‌, 4ನೇ ದಿನವೂ ವಿಚಾರಣೆ ಎದುರಿಸಿದರು. ವಿಡಿಯೋಗಳ ಬಗ್ಗೆ ಪ್ರಜ್ವಲ್ ರೇವಣ್ಣ‌ ಹಾರಿಕೆ ಉತ್ತರ ನೀಡುತ್ತಿದ್ದಾರೆ ಎಂದು ಗೊತ್ತಾಗಿದೆ. ವಿಡಿಯೋ ರೆಕಾರ್ಡ್ ಮಾಡಿದ ಮೊಬೈಲ್ ಬಗ್ಗೆ ಪ್ರಜ್ವಲ್ ಯಾವುದೇ ಸುಳಿವು ನೀಡಿಲ್ಲ. “ಮೊಬೈಲ್ ನನ್ನ ಬಳಿ ಇಲ್ಲ. ಒಂದು ವರ್ಷದ ಹಿಂದೆಯೇ ಕಳೆದುಹೋಗಿದೆ. ಹೊಳೆನರಸೀಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ” ಎಂದು ಹೇಳುತ್ತಿದ್ದಾರೆ.

ಇದೇ ವೇಳೆ ಪ್ರಜ್ವಲ್ ರೇವಣ್ಣ‌ ಅವರ ಧ್ವನಿ ಸ್ಯಾಂಪಲ್ ಪಡೆದು ಎಫ್ಎಸ್ಎಲ್‌ಗೆ ರವಾನಿಸಲು ಎಸ್‌ಐಟಿ ಮುಂದಾಗಿದೆ. ವಿಡಿಯೋದಲ್ಲಿರುವ ಧ್ವನಿ ಹಾಗೂ ಪ್ರಜ್ವಲ್ ರೇವಣ್ಣ‌ ಧ್ವನಿ ಮ್ಯಾಚ್ ಆಗುತ್ತದಾ ಎಂದು ಪರೀಕ್ಷೆ ನಡೆಯಲಿದೆ. ಧ್ವನಿ ಹೋಲಿಕೆ ಕಂಡುಬಂದರೆ ಪ್ರಜ್ವಲ್‌ಗೆ ಕಷ್ಟ ಎದುರಾಗಲಿದೆ.

ಇದನ್ನೂ ಓದಿ: Hassan MP Prajwal Revanna case: ಮೊಂಡಾಟ ಬಿಡದ ಪ್ರಜ್ವಲ್‌; ಇಂದೇ ಸ್ಥಳ ಮಹಜರಿಗೆ SIT ಪ್ಲ್ಯಾನ್‌

Continue Reading

ಕರ್ನಾಟಕ

Physical Abuse: ಬಾಲಕಿಗೆ ದೆವ್ವ ಬಿಡಿಸುವುದಾಗಿ ಲೈಂಗಿಕ ದೌರ್ಜನ್ಯ: ಮೌಲ್ವಿ ಸೇರಿ ಇಬ್ಬರ ಬಂಧನ

Physical Abuse: ಬಾಲಕಿಗೆ ದೆವ್ವ ಮೆಟ್ಟಿದೆ, ದೈಹಿಕ ಸುಖ ಕೊಟ್ರೆ ದೂರವಾಗುತ್ತೆ ಎಂದು ನಂಬಿಸಿ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಮೌಲ್ವಿ ಹಾಗೂ ಆತನಿಗೆ ಸಹಕರಿಸಿದ ಬಾಲಕಿಯ ಸಹೋದರನನ್ನೂ ಪೊಲೀಸರು ಬಂಧಿಸಿದ್ದಾರೆ.

VISTARANEWS.COM


on

Koo

ಚಿತ್ರದುರ್ಗ: ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ‌ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಮೌಲ್ವಿ ಸೇರಿ ಇಬ್ಬರ ಬಂಧನವಾಗಿದೆ. ನಗರದಲ್ಲಿ ಮೇ 31 ರಂದು ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಕುರಾನ್ ಪಠಿಸಲು ಹೋಗುತ್ತಿದ್ದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರಿಂದ ಮೌಲ್ವಿ ಮತ್ತು ಬಾಲಕಿಯ ಸಹೋದರನನ್ನು ಬಂಧಿಸಲಾಗಿದೆ.

ಮೌಲ್ವಿ ಅಬ್ದುಲ್ ರೆಹಮಾನ್, ಬಾಲಕಿ ಅಣ್ಣ ಬಂಧಿತ ಆರೋಪಿಗಳು. ಕಳೆದ ಮೂರು ವರ್ಷಗಳಿಂದ ಕುರಾನ್ ಪಠಿಸಲು ಮಸೀದಿಗೆ ಬಾಲಕಿ ಹೋಗುತ್ತಿದ್ದಳು. ಮೊದಲು ಬಾಲಕಿಗೆ ಗಾಳಿ ಸೋಕಿದೆ ಪೂಜೆ ಮಾಡಬೇಕು ಎಂದು ಹಜರತ್ ಮೌಲ್ವಿ ಹೇಳಿದ್ದ. ನಂತರ ಮಸೀದಿಯಲ್ಲಿ ಪೂಜೆ ಬೇಡ ಅಂತ ಬಾಲಕಿಯ ಮನೆಯಲ್ಲೇ ಪೂಜೆ ನಡೆಸಲು ತಿಳಿಸಿದ್ದ. ಬಾಲಕಿಗೆ ದೆವ್ವ ಮೆಟ್ಟಿದೆ, ದೈಹಿಕ ಸುಖ ಕೊಟ್ರೆ ದೂರವಾಗುತ್ತೆ ಎಂದು ನಂಬಿಸಿ ಬಾಲಕಿ ಸಹೋದರನಿಗೂ ಲೈಂಗಿಕ ದೌರ್ಜನ್ಯ ಮಾಡುವಂತೆ ಮೌಲ್ವಿ ಪ್ರೇರಣೆ ನೀಡಿದ್ದಾನೆ. ಈ ಸಂಬಂಧ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಎಫ್‌ಐಆರ್‌ ದಾಖಲು

ಈ ಬಗ್ಗೆ ಚಿತ್ರದುರ್ಗ ಎಸ್‌ಪಿ ಧರ್ಮೇಂದರ್ ಕುಮಾರ್ ಮೀನಾ ಮಾತನಾಡಿ, ಬಾಲಕಿ ಮೇಲೆ‌ ಮೌಲ್ವಿಯಿಂದ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ. ಈ ಕುರಿತು ಆಸ್ಪತ್ರೆಯಿಂದ ಮಹಿಳಾ ಠಾಣೆಗೆ ಮಾಹಿತಿ ಸಿಕ್ಕಿದೆ. ಮಹಿಳಾ ಠಾಣೆ ಪೊಲೀಸರಿಂದ ಎಫ್ಐಆರ್ ದಾಖಲಾಗಿದೆ.

ಪಾಠ ಹೇಳಲು ಬರುತ್ತಿದ್ದ ಮೌಲ್ವಿ ಪೂಜೆ ನೆಪಪೊಡ್ಡಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಬಾಲಕಿಗೆ ಆರೋಗ್ಯ ಸಮಸ್ಯೆ ಇದೆ ಅಂತ ನೆಪ ಹೇಳಿ ಲೈಂಗಿಕ ಕಿರುಕುಳ ನೀಡಲಾಗಿದೆ. ಮೌಲ್ವಿಯಿಂದ ಬಾಲಕಿಯ ಸಹೋದರನ ಬ್ರೇನ್ ವಾಶ್ ಮಾಡಿದ್ದು, ಆತನಿಗೂ ಲೈಂಗಿಕ ದೌರ್ಜನ್ಯ ಎಸಗುವಂತೆ ಪ್ರೇರಣೆ ನೀಡಲಾಗಿದೆ.

ಇದನ್ನೂ ಓದಿ | Moral Policing: ಸಹೋದ್ಯೋಗಿಯನ್ನು ಬೈಕ್‌ನಲ್ಲಿ ಕೂರಿಸಿಕೊಂಡದ್ದಕ್ಕೆ ಹಿಂದೂ ಯುವಕನಿಗೆ ಹಲ್ಲೆ

ಬಾಲಕಿಯ ತಾಯಿ ಈ ಕುರಿತು ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದರಿಂದ ಮಹಿಳಾ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಆರೋಪಿ ಮೌಲ್ವಿ ಅಬ್ದುಲ್ ರೆಹಮಾನ್, ಬಾಲಕಿ ಸಹೋದರನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಎಸ್‌ಪಿ ಮಾಹಿತಿ ನೀಡಿದ್ದಾರೆ.

ಸಹೋದ್ಯೋಗಿಯನ್ನು ಬೈಕ್‌ನಲ್ಲಿ ಕೂರಿಸಿಕೊಂಡದ್ದಕ್ಕೆ ಹಿಂದೂ ಯುವಕನಿಗೆ ಹಲ್ಲೆ

moral policing shivamogga

ಶಿವಮೊಗ್ಗ: ಮುಸ್ಲಿಂ ಸಹೋದ್ಯೋಗಿಯನ್ನು (Muslim colleague) ಬೈಕ್‌ನಲ್ಲಿ ಕೂರಿಸಿಕೊಂಡು ಹೋಗಿದ್ದಕ್ಕೆ ಹಿಂದೂ ಯುವಕನ (Hindu youth) ಮೇಲೆ ಹಲ್ಲೆ (Assault Case) ಮಾಡಿದ ಘಟನೆ ಶಿವಮೊಗ್ಗ (Shivamogga news) ನಗರದ ಆರ್‌ಎಂಎಲ್ ನಗರದ ಸಮೀಪ ನಡೆದಿದೆ. ಪ್ರಕರಣ (moral policing) ತುಸು ತಡವಾಗಿ ಬೆಳಕಿಗೆ ಬಂದಿದೆ.

ಶಿವಮೊಗ್ಗ ನಗರದ ಸೀಗೆಹಟ್ಟಿಯ ನಿವಾಸಿ ನಂದನ್ ಎಂಬ ಯುವಕನ ಮೇಲೆ ಹಲ್ಲೆ ನಡೆದಿದೆ. ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ನಂದನ್, ಅನ್ಯ ಕೋಮಿನ ಸಹೋದ್ಯೋಗಿಯನ್ನು ಕೆಲಸದ ನಿಮಿತ್ತ ಬೈಕ್‌ನಲ್ಲಿ ಕರೆದುಕೊಂಡು ಹೋಗುತ್ತಿದ್ದ. ಈ ವೇಳೆ 20ಕ್ಕೂ ಹೆಚ್ಚು ಅನ್ಯ ಕೋಮಿನ ಯುವಕರು ನಂದನ್‌ನನ್ನು ತಡೆದು ಥಳಿಸಿದ್ದರು.

ನಮ್ಮ ಸಮುದಾಯದ ಹುಡುಗಿಯನ್ನು ಯಾಕೆ ಬೈಕ್‌ನಲ್ಲಿ ಕೂರಿಸಿಕೊಂಡು ಹೋಗುತ್ತಿದ್ದೀಯಾ ಎಂದು ಅಕ್ಷೇಪಿಸಿ ಯುವಕರ ಗುಂಪು ಥಳಿಸಿದೆ. ಹಲ್ಲೆಯಲ್ಲಿ ನಂದನ್‌ ಕಣ್ಣು, ಕಿವಿ ಮತ್ತು ಬಾಯಿಯ ಭಾಗಕ್ಕೆ ಗಂಭೀರ ಗಾಯಗಳಾಗಿವೆ. ಗಾಯಾಳುವನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಶಿವಮೊಗ್ಗ ಶಾಸಕ ಎಸ್.ಎನ್ ಚನ್ನಬಸಪ್ಪ ಆಸ್ಪತ್ರೆಗೆ ಭೇಟಿ ನೀಡಿ ನಂದನ್ ಆರೋಗ್ಯ ವಿಚಾರಿಸಿದರು. ನಂದನ್‌ಗೆ ಧೈರ್ಯ ಹೇಳಿ, ಸೂಕ್ತ ಕಾನೂನು ಕ್ರಮದ ಭರವಸೆ ನೀಡಿದರು.

ಇದನ್ನೂ ಓದಿ: Electric Shock: ಪಲ್ಲಕ್ಕಿ ಹೊತ್ತಿದ್ದ ಟ್ರ್ಯಾಕ್ಟರ್‌ಗೆ ಪ್ರವಹಿಸಿದ ವಿದ್ಯುತ್‌; ಕ್ಷಣಾರ್ಧದಲ್ಲೇ ಇಬ್ಬರು ಸುಟ್ಟು ಕರಕಲು

ಘಟನೆ ಬಗ್ಗೆ ಎಕ್ಸ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಕಾಂಗ್ರೆಸ್‌ ಆಡಳಿತವನ್ನು ಆಕ್ಷೇಪಿಸಿದ್ದಾರೆ. “ಕಾನೂನು ಸುವ್ಯವಸ್ಥೆಯನ್ನು ಮತೀಯ ಆಧಾರದ ಮೇಲೆ ನಿರ್ವಹಿಸುವ ಮೂಲಕ ಬಹುಸಂಖ್ಯಾತರನ್ನು ಕಾಂಗ್ರೆಸ್‌ ಅಭದ್ರತೆಯ ಸ್ಥಿತಿಗೆ ತಳ್ಳುತ್ತಿದೆ. ಸರ್ಕಾರದ ಆಡಳಿತ ತುಘಲಕ್ ನೀತಿಯನ್ನು ನೆನಪಿಸುತ್ತಿದೆ. ಅಮಾಯಕ ಹಿಂದೂ ಯುವಕನ ಮೇಲಿನ ಹಲ್ಲೆ ಘಟನೆಯು ಶಾಂತಿ ಸುವ್ಯವಸ್ಥೆ ಕದಡುವ ಸ್ಥಿತಿಗೆ ಕಾರಣವಾಗದಂತೆ ಪೋಲಿಸರು ಕಾರ್ಯೋನ್ಮುಖರಾಗಿ ನಂದನ್ ಮೇಲೆ ಹಲ್ಲೆ ನಡೆಸಿದವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಿ ಎಂದು ಒತ್ತಾಯಿಸುವೆ” ಎಂದು ಎಕ್ಸ್‌ನಲ್ಲಿ ಅವರು ಪೋಸ್ಟ್ ಮಾಡಿದ್ದಾರೆ.

Continue Reading
Advertisement
Prajwal Revanna Case
ಕರ್ನಾಟಕ6 mins ago

Prajwal Revanna Case: ಹೈಕೋರ್ಟ್‌ಗೆ ಮತ್ತೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ ಭವಾನಿ ರೇವಣ್ಣ

Road Accident
ಶಿವಮೊಗ್ಗ7 mins ago

Road Accident : ಎದುರಿಗೆ ಬಂದ ಬೈಕ್‌ ತಪ್ಪಿಸಲು ಹೋಗಿ ಮಹಿಳೆಗೆ ಗುದ್ದಿದ ಕಾರು; ಎಗರಿ ಬಿದ್ದವಳು ಸ್ಥಳದಲ್ಲೇ ಸಾವು

Anant-Radhika Bash legendary singer Andrea Bocelli performs
ಬಾಲಿವುಡ್8 mins ago

Anant-Radhika Bash: ಪ್ರಿ ವೆಡ್ಡಿಂಗ್‌ನಲ್ಲಿ ಮಿಂಚಿದ ರಾಧಿಕಾ ಮರ್ಚಂಟ್‌; ಸಂಗೀತ ಪ್ರದರ್ಶನಕ್ಕೆ ಮನಸೋತ ಅತಿಥಿಗಳು!

PM Narendra Modi
ರಾಜಕೀಯ13 mins ago

PM Narendra Modi: ವಿಕಸಿತ ಭಾರತಕ್ಕೆ ಭದ್ರ ಅಡಿಪಾಯ; ದೇಶದ ಜನತೆಗೆ ಮೋದಿ ಭಾವುಕ ಪತ್ರ

Election Commission of india
ದೇಶ16 mins ago

Election Commission of India: 64.2 ಕೋಟಿ ಜನರಿಂದ ಮತದಾನ, ವಿಶ್ವದಾಖಲೆ ಬರೆದ ಭಾರತ

Chitradurga Lok Sabha Constituency
ಪ್ರಮುಖ ಸುದ್ದಿ21 mins ago

Chitradurga Lok Sabha Constituency : ಚಿತ್ರದುರ್ಗ ಕ್ಷೇತ್ರವನ್ನು ಮರು ವಶಪಡಿಸಿಕೊಳ್ಳುವುದೇ ಕಾಂಗ್ರೆಸ್​?

Prajwal revanna case
ಪ್ರಮುಖ ಸುದ್ದಿ27 mins ago

Prajwal Revanna Case: ಇಂದು ರಹಸ್ಯವಾಗಿ ಪುರುಷತ್ವ ಪರೀಕ್ಷೆ, ನಾಳೆ ಎಲೆಕ್ಷನ್‌ ರಿಸಲ್ಟ್:‌ ಪ್ರಜ್ವಲ್‌ಗೆ ಡಬಲ್ ಟೆ‌ನ್ಷನ್!‌

Murder Case in shivamogga
ಶಿವಮೊಗ್ಗ37 mins ago

Murder Case : ಶಿವಮೊಗ್ಗದಲ್ಲಿ ವೃದ್ಧೆ ಬರ್ಬರ ಕೊಲೆ; ಅನ್ಯಕೋಮಿನ ಹುಡುಗನಿಂದ ಮಾರಣಾಂತಿಕ ಹಲ್ಲೆ

ಕರ್ನಾಟಕ38 mins ago

Physical Abuse: ಬಾಲಕಿಗೆ ದೆವ್ವ ಬಿಡಿಸುವುದಾಗಿ ಲೈಂಗಿಕ ದೌರ್ಜನ್ಯ: ಮೌಲ್ವಿ ಸೇರಿ ಇಬ್ಬರ ಬಂಧನ

Udupi-Chikmagalur Lok Sabha constituency
ದೇಶ57 mins ago

Udupi-Chikmagalur Lok Sabha constituency: ಬದಲಾವಣೆ ನಡುವೆ ಯಾರಿಗೆ ಮಣೆ ಹಾಕಲಿದ್ದಾರೆ ಉಡುಪಿ ಕ್ಷೇತ್ರದ ಮತದಾರರು?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 day ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು2 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ4 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ6 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು6 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ7 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 week ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ2 weeks ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

ಟ್ರೆಂಡಿಂಗ್‌