Salman Khan fan for trying to shake his hand Salman Khan: ಸಲ್ಮಾನ್ ಖಾನ್‌ಗೆ ಶೇಕ್‌ಹ್ಯಾಂಡ್‌ ಮಾಡಲು ಬಂದ ಅಭಿಮಾನಿಯನ್ನು ತಳ್ಳಿದ ಬಾಡಿಗಾರ್ಡ್ - Vistara News

South Cinema

Salman Khan: ಸಲ್ಮಾನ್ ಖಾನ್‌ಗೆ ಶೇಕ್‌ಹ್ಯಾಂಡ್‌ ಮಾಡಲು ಬಂದ ಅಭಿಮಾನಿಯನ್ನು ತಳ್ಳಿದ ಬಾಡಿಗಾರ್ಡ್

ವಿಡಿಯೊದಲ್ಲಿ (Salman Khan) ನೋಡಿದಾಗ ಸಲ್ಲು ಸುತ್ತಮುತ್ತ ಭದ್ರತಾ ಸಿಬ್ಬಂದಿ ಅವರನ್ನು ಸುತ್ತುವರಿದಿದ್ದರು. ಸಲ್ಮಾನ್‌ ಬರುತ್ತಿದ್ದಂತೆ ಅಭಿಮಾನಿ ಶೇಕ್‌ಹ್ಯಾಂಡ್‌ ಮಾಡಲು ಕೈ ಚಾಚುತ್ತಿರುವುದು ಕಾಣಬಹುದು.

VISTARANEWS.COM


on

Salman Khan fan for trying to shake his hand
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸಲ್ಮಾನ್ ಖಾನ್ (Salman Khan) ಅವರಿಗೆ ಅವರ ಅಭಿಮಾನಿಯೊಬ್ಬ ಶೇಕ್‌ಹ್ಯಾಂಡ್‌ ಮಾಡಲು ಹೋಗಿ ನಟ ಅಭಿಮಾನಿಯ ಮೇಲೆ ಸಿಟ್ಟಾದ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ. ಏಪ್ರಿಲ್‌ 26ರಂದು ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಲ್ಮಾನ್ ತನ್ನ ಅಭಿಮಾನಿಗಳೊಂದಿಗೆ ಈದ್ ಆಚರಿಸಲು ದುಬೈಗೆ ಭೇಟಿ ನೀಡಿದ ನಂತರ ಕೊಲ್ಲಿಗೆ ಹಿಂತಿರುಗುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ವಿಡಿಯೊದಲ್ಲಿ ನೋಡಿದಾಗ ಸಲ್ಲು ಸುತ್ತಮುತ್ತ ಭದ್ರತಾ ಸಿಬ್ಬಂದಿ ಅವರನ್ನು ಸುತ್ತುವರಿದಿದ್ದರು. ಸಲ್ಮಾನ್‌ ಬರುತ್ತಿದ್ದಂತೆ ಅಭಿಮಾನಿ ಶೇಕ್‌ಹ್ಯಾಂಡ್‌ ಮಾಡಲು ಕೈ ಚಾಚುತ್ತಿರುವುದು ಕಾಣಬಹುದು. ಹಿಂದಕ್ಕೆ ಹೋಗುವಂತೆ ಸಲ್ಮಾನ್ ಖಾನ್ ಸೂಚಿಸಿದರೂ ಅಭಿಮಾನಿ ಪ್ರಯತ್ನ ನಿಲ್ಲಿಸಿಲ್ಲ. ಬಳಿಕ ಬಾಡಿ ಗಾರ್ಡ್ ಅಭಿಮಾನಿಯನ್ನು ಹಿಂದಕ್ಕೆ ತಳ್ಳಿದ್ದಾರೆ. ಈ ವಿಡಿಯೊ ವೈರಲ್‌ ಆಗಿದ್ದು, ಸಲ್ಮಾನ್‌ ಖಾನ್‌ ವಿರುದ್ಧ ನೆಟ್ಟಿಗರು ಅಸಾಮಾಧಾನ ಹೊರಹಾಕಿದ್ದಾರೆ. ಒಬ್ಬರು ʻʻಜನರು ಯಾಕೆ ಇಷ್ಟು ನಟರಿಗೆ ಪ್ರಾಮುಖ್ಯತೆ ನೀಡುತ್ತಾರೆʼʼಎಂದು ಕಾಮೆಂಟ್‌ ಮಾಡಿದರೆ, ಇನ್ನೊಬ್ಬರು ʻʻಅವರ ಪ್ರಾಣಕ್ಕೆ ಹೆಚ್ಚು ಕುತ್ತಿದೆ ಅದಕ್ಕಾಗಿ ಹೀಗೆ ಮಾಡಿದ್ದಾರೆʼʼಎಂದು ಬರೆದಿದ್ದಾರೆ. ಇನ್ನೊಬ್ಬರು ನಟನನ್ನು ಸಮರ್ಥಸಿಕೊಂಡಿದ್ದಾರೆ.

ಸಲ್ಮಾನ್‌ಗೆ ಕೊಲೆ ಬೆದರಿಕೆ ಕರೆಗಳು ಮತ್ತು ಇಮೇಲ್‌ಗಳು ಬರಲಾರಂಭಿಸಿದ ನಂತರ ಅವರ ಭದ್ರತಾ ತಂಡವು ಹೆಚ್ಚಿನ ಎಚ್ಚರಿಕೆಯನ್ನು ನೀಡಿದೆ. ತನ್ನ ಸುರಕ್ಷತೆಗಾಗಿ ಬುಲೆಟ್ ಪ್ರೂಫ್ ವಾಹನದಲ್ಲಿಯೇ ತಿರುಗಾಡುತ್ತಿದ್ದಾರೆ ಸಲ್ಮಾನ್‌.

ಇದನ್ನೂ ಓದಿ: Salman Khan: ಈದ್ ಸಂಭ್ರಮದಲ್ಲಿ ಸಲ್ಮಾನ್‌ ಖಾನ್‌ ಕುಟುಂಬ!

ಸಲ್ಮಾನ್‌ ಖಾನ್‌ ವೈರಲ್‌ ವಿಡಿಯೊ

ʻಕಿಸಿ ಕಾ ಭಾಯ್‌ ಕಿಸಿ ಕಿ ಜಾನ್ʼ ಏಪ್ರಿಲ್ 21ರಂದು ಬಿಡುಗಡೆಯಾಯಿತು. ಈ ಚಿತ್ರದಲ್ಲಿ ಪೂಜಾ ಹೆಗ್ಡೆ, ಶೆಹನಾಜ್ ಗಿಲ್, ಪಾಲಕ್ ತಿವಾರಿ, ವೆಂಕಟೇಶ್, ಜಗಪತಿ ಬಾಬು, ರಹಗಬ್ ಜುಯಲ್, ಸಿದ್ಧಾರ್ಥ್ ನಿಗಮ್ ಮತ್ತು ಇತರರು ನಟಿಸಿದ್ದಾರೆ. ವಿಶ್ವದಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ ಈಗಾಗಲೇ 130 ಕೋಟಿ ರೂ. ದಾಟಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಿರುತೆರೆ

Vijay Deverakonda: ಸಿನಿಮಾಗಳ ಸತತ ಸೋಲಿನ ಬೆನ್ನಲ್ಲೆ ಹೊಸ ಸಿನಿಮಾ ಅನೌನ್ಸ್‌ ಮಾಡಿದ ವಿಜಯ್‌ ದೇವರಕೊಂಡ!

Vijay Deverakonda: ವಿಜಯ್ ದೇವರಕೊಂಡ (Vijay Deverakonda) ಮತ್ತು ಮೃಣಾಲ್ ಠಾಕೂರ್ ( Mrunal Thakur) ಅಭಿನಯದ ಚಿತ್ರ ʻಫ್ಯಾಮಿಲಿ ಸ್ಟಾರ್ʼ ಭಾರತದಲ್ಲಿ ಸಾಧಾರಣ ಓಪನಿಂಗ್‌ (Family Star Box Office) ಪಡೆದುಕೊಂಡಿತ್ತು. ಏಪ್ರಿಲ್ 26 ರಿಂದ ಅಮೆಜಾನ್‌ ಪ್ರೈಮ್‌ನಲ್ಲಿ ಸ್ಟ್ರೀಮಿಂಗ್‌ ಆಗಿತ್ತು.ಇದೀಗ ಹೊಸ ಸಿನಿಮಾ ಅನೌನ್ಸ್‌ ಮಾಡಿದ್ದಾರೆ ವಿಜಯ್‌ ದೇವರಕೊಂಡ.ತೆಲುಗು ನಟ ವಿಜಯ್ ದೇವರಕೊಂಡ ಅವರು ದಿಲ್ ರಾಜು ಅವರೊಂದಿಗೆ ಹೈ-ಆಕ್ಟೇನ್ ಆಕ್ಷನ್ ಸಿನಿಮಾಗಾಗಿ ಕೈ ಜೋಡಿಸಿದ್ದಾರೆ.

VISTARANEWS.COM


on

Vijay Devarakonda announces new film
Koo

ಬೆಂಗಳೂರು: ʻಲೈಗರ್‌ʼ ಸಿನಿಮಾ ಸೋಲಿನ ಬಳಿಕ ನಟ ವಿಜಯ್‌ ದೇವರಕೊಂಡ (Vijay Deverakonda) ಯಾವ ಸಿನಿಮಾವನ್ನು ಮಾಡಲಿದ್ದಾರೆ ಎಂಬ ಕುತೂಹಲ ಅವರ ಅಭಿಮಾನಿಗಳಲ್ಲಿತ್ತು. ಇದಾದ ಬಳಿ ಸಾಕಷ್ಟು ಸಿನಿಮಾಗಳು ತೆರೆ ಕಂಡವು. ʻಖುಷಿʼ ಹಾಗೂ ʻಫ್ಯಾಮಿಲಿ ಸ್ಟಾರ್‌ʼ ಸಿನಿಮಾಗಳು ರಿಲೀಸ್‌ ಆದರೂ ತಕ್ಕ ಮಟ್ಟಿಗೆ ಸಕ್ಸೆಸ್‌ ಏನು ಆಗಿಲ್ಲ. ಇದೀಗ ಹೊಸ ಸಿನಿಮಾ ಅನೌನ್ಸ್‌ ಮಾಡಿದ್ದಾರೆ ವಿಜಯ್‌ ದೇವರಕೊಂಡ.

ತೆಲುಗು ನಟ ವಿಜಯ್ ದೇವರಕೊಂಡ ಅವರು ದಿಲ್ ರಾಜು ಅವರೊಂದಿಗೆ ಹೈ-ಆಕ್ಟೇನ್ ಆಕ್ಷನ್ ಸಿನಿಮಾಗಾಗಿ ಕೈ ಜೋಡಿಸಿದ್ದಾರೆ. ಈ ಸಿನಿಮಾಗೆ ರವಿ ಕರಣ್ ಕೋಲಾ (Ravi Kiran Kola) ನಿರ್ದೇಶನವಿದೆ. ರವಿಕಿರಣ್ ಕೋಲಾ ಅವರು ‘ರಾಜಾ ವರು ರಾಣಿ ಗಾರು’ (Raja Vaaru Rani Gaaru) ಮತ್ತು ‘ಅಶೋಕ ವನಮ್ಲೋ ಅರ್ಜುನ ಕಲ್ಯಾಣಂ'(Ashoka Vanamlo Arjuna Kalyanam) ಸಿನಿಮಾಗೆ ಹೆಸರುವಾಸಿಯಾಗಿದ್ದಾರೆ. ಚಿತ್ರದ ಶೀರ್ಷಿಕೆ, ತಾರಾಗಣ ಮತ್ತು ಬಿಡುಗಡೆಯ ದಿನಾಂಕ ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ.

ವಿಜಯ್ ದೇವರಕೊಂಡ (Vijay Deverakonda) ಮತ್ತು ಮೃಣಾಲ್ ಠಾಕೂರ್ ( Mrunal Thakur) ಅಭಿನಯದ ಚಿತ್ರ ʻಫ್ಯಾಮಿಲಿ ಸ್ಟಾರ್ʼ ಭಾರತದಲ್ಲಿ ಸಾಧಾರಣ ಓಪನಿಂಗ್‌ (Family Star Box Office) ಪಡೆದುಕೊಂಡಿತ್ತು. ಏಪ್ರಿಲ್ 26 ರಿಂದ ಅಮೆಜಾನ್‌ ಪ್ರೈಮ್‌ನಲ್ಲಿ ಸ್ಟ್ರೀಮಿಂಗ್‌ ಆಗಿತ್ತು.

ಇದನ್ನೂ ಓದಿ: Rashmika Mandanna: ವಿಜಯ್‌ ದೇವರಕೊಂಡ ಜತೆಗಿನ ಸಂಬಂಧ ಒಪ್ಪಿಕೊಂಡ್ರಾ ರಶ್ಮಿಕಾ ಮಂದಣ್ಣ?

ಕೆಲವರು ಇದು ಸರಾಸರಿಗಿಂತ ಕಡಿಮೆ ಚಿತ್ರ ಎಂದು ಹೇಳುತ್ತಿದ್ದರೆ, ಇನ್ನು ಕೆಲವರು ಈ ಚಿತ್ರಕ್ಕಿಂತ ಧಾರಾವಾಹಿ ಉತ್ತಮವಾಗಿದೆ ಎಂದು ಕಮೆಂಟ್ ಮಾಡಿದ್ದರು. ಸಂಗೀತ ಅಷ್ಟಾಗಿ ಆಕರ್ಷಣೀಯವಾಗಿಲ್ಲ ಎಂಬ ಮಾತು ಕೂಡ ಇದೆ. ಈ ಸಿನಿಮಾ ಅಷ್ಟೊಂದು ಪ್ರಭಾವಶಾಲಿಯಾಗಿಲ್ಲ, ಹೊಸತನವೇನೂ ಇಲ್ಲ ಎಂದಿದ್ದರು.

ಹಾಯ್ ನಾನ್ನʼ (2023), ʻಸೀತಾ ರಾಮಂʼ (2022)ಬಳಿಕ ಮೃಣಾಲ್ ಠಾಕೂರ್ ಅವರ ಮೂರನೇ ತೆಲುಗು ಚಿತ್ರ ಇದು. ʻಫ್ಯಾಮಿಲಿ ಸ್ಟಾರ್ʼ ಸಿನಿಮಾವನ್ನು ಪರುಶುರಾಮ್ ನಿರ್ದೇಶಿಸಿದ್ದಾರೆ. ಈ ಮುಂಚೆ ವಿಜಯ್‌ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ʻಗೀತ ಗೋವಿಂದಂʼ (2018) ಸಿನಿಮಾಗೆ ನಿರ್ದೇಶನ ಮಾಡಿದ್ದರು.

Continue Reading

ಟಾಲಿವುಡ್

Bandaru Supritha Naidu: ವಿಜಯ್‌ದೇವರಕೊಂಡರನ್ನು ಮದುವೆಯಾಗುತ್ತಿದ್ದಾರಂತೆ ತೆಲುಗು ಖ್ಯಾತ ನಟಿಯ ಮಗಳು!

Bandaru Supritha Naidu: ಸುರೇಖಾ ವಾಣಿ ಅವರ ಪುತ್ರಿ ಸುಪ್ರಿತಾ ತೆಲುಗು ಮಂದಿಗೆ ಚಿರಪರಿಚಿತ. ಇತ್ತೀಚೆಗೆ ತನ್ನ ಇನ್‌ಸ್ಟಾಗ್ರಾಂ ಖಾತೆಯ ಮೂಲಕ ಲೈವ್‌ಗೆ ಬಂದಿದ್ದರು.ಈ ವೇಳೆ ನೀವು ಯಾವ ಅವಿವಾಹಿತ ಹೀರೊನಾ ಮದುವೆ ಆಗಲು ಬಯಸುತ್ತೀರಾ? ಎಂದು ಪ್ರಶ್ನೆ ಮಾಡಿದ್ದರು. ನಟಿಯ ಉತ್ತರಕ್ಕೆ ನೆಟ್ಟಿಗರು ಶಾಕ್‌ ಆಗಿದ್ದಾರೆ.

VISTARANEWS.COM


on

Bandaru Supritha Naidu surekha vani daughter wants to marry vijay deverakonda
Koo

ತೆಲುಗಿನ ಹಿರಿಯ ನಟಿ ಸುರೇಖಾ ವಾಣಿ ಅವರ ಪುತ್ರಿ ಸುಪ್ರಿತಾ (Bandaru Supritha Naidu) ಹೆಸರು ವಿಜಯ್ ದೇವರಕೊಂಡ ಜತೆ ಕೇಳಿಬರುತ್ತಿದೆ.

ಸುರೇಖಾ ವಾಣಿ ಅವರ ಪುತ್ರಿ ಸುಪ್ರಿತಾ ತೆಲುಗು ಮಂದಿಗೆ ಚಿರಪರಿಚಿತ. ಇತ್ತೀಚೆಗೆ ತನ್ನ ಇನ್‌ಸ್ಟಾಗ್ರಾಂ ಖಾತೆಯ ಮೂಲಕ ಲೈವ್‌ಗೆ ಬಂದಿದ್ದರು. ತಮ್ಮನ್ನು ಫಾಲೋ ಮಾಡುವವರಿಗೆ ನಿಮ್ಮಲ್ಲಿ ಏನಾದರೂ ಪ್ರಶ್ನೆಗಳಿದ್ದರೆ ಕೇಳಿ ಎಂದಿದ್ದರು. ಈ ವೇಳೆ ನೆಟ್ಟಿಗರು ಪ್ರಶ್ನೆಗಳನ್ನು ಕೇಳಿದ್ದರು.

ಈ ವೇಳೆ ನೀವು ಯಾವ ಅವಿವಾಹಿತ ಹೀರೊನಾ ಮದುವೆ ಆಗಲು ಬಯಸುತ್ತೀರಾ? ಎಂದು ಪ್ರಶ್ನೆ ಮಾಡಿದ್ದರು.ಈ ಪ್ರಶ್ನೆಗೆ ಸುಪ್ರಿತಾ ವಿಜಯ್ ದೇವರಕೊಂಡ ಎಂದು ಹೇಳಿದ್ದಾರೆ. ವಿಜಯ್ ದೇವರಕೊಂಡ ಅವರ ಫೋಟೊವನ್ನು ಕೂಡ ಶೇರ್ ಮಾಡಿಕೊಂಡಿದ್ದರು.

ಇದನ್ನೂ ಓದಿ: MI vs KKR: ಮತ್ತೆ ಮುಂಬೈ ವಿರುದ್ಧ ಕೇಳಿಬಂದ ಟಾಸ್​ ಫಿಕ್ಸಿಂಗ್​ ಆರೋಪ

ಇದೀಗ ನೆಟ್ಟಿಗರು ವಿಜಯ್ ದೇವರಕೊಂಡ ಜೊತೆ ಸುಪ್ರಿತಾರನ್ನು ಮದುವೆ ಮಾಡಿಸುವುದಕ್ಕೆ ನಿಂತಿದ್ದಾರೆ.

ಅಮರ್ ದೀಪ್ ಚೌಧರಿ ನಾಯಕನಾಗಿ ನಟಿಸುತ್ತಿರುವ ಸಿನಿಮಾ ಮೂಲಕ ಸುಪ್ರಿತಾ ನಾಯಕಿಯಾಗಿ ಪರಿಚಯವಾಗುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

Continue Reading

ಕಾಲಿವುಡ್

Aishwarya Rajinikanth: ಮಗಳ ಹೊಸ ಮನೆ ಕಂಡು ಹುಬ್ಬೇರಿಸಿದ ರಜನಿಕಾಂತ್!

Aishwarya Rajinikanth: ರಜನಿಕಾಂತ್ ಮಗಳು ಐಶ್ವರ್ಯಾ ಅವರ ಹೊಸದಾಗಿ ಖರೀದಿಸಿದ ಮನೆಗೆ ರಜನಿ ದಂಪತಿ ಭೇಟಿ ಕೊಟ್ಟಿದ್ದಾರೆ. . ಬಾಗಿಲಲ್ಲಿ ಮಗಳು ತಂದೆ ತಾಯಿಗೆ ಸ್ವಾಗತಿಸಿದ ಬಳಿಕ ರಜನಿ ಬಾಲ್ಕನಿಗೆ ಹೋಗಿ ಮನೆ ತುಂಬ ಚೆನ್ನಾಗಿದೆ ಎಂದು ಹೇಳಿದ್ದಾರೆ. ಮನೆಯ ಒಳಾಂಗಣ ಮತ್ತು ಇಂಟಿರಿಯರ್‌ ಡಿಸೈನ್‌ ಕಂಡು ರಜನಿ ಫುಲ್‌ ಫಿದಾ ಆದರು.

VISTARANEWS.COM


on

Aishwarya Rajinikanth new house priceless reaction Rajinikanth
Koo

ಬೆಂಗಳೂರು: ರಜನಿಕಾಂತ್ ಪುತ್ರಿ ಐಶ್ವರ್ಯಾ ರಜನಿಕಾಂತ್ (Aishwarya Rajinikanth) ಹೊಸ ಅಪಾರ್ಟ್‌ಮೆಂಟ್ ಖರೀದಿಸಿದ್ದಾರೆ. ರಜನಿ ಮತ್ತು ಪತ್ನಿ ಲತಾ ಮಗಳ ಹೊಸ ಮನೆಗೆ ಭೇಟಿ ನೀಡಿದ್ದರು. ಮಾತ್ರವಲ್ಲ ಮನೆಯ ಒಳಾಂಗಣ ಮತ್ತು ಇಂಟಿರಿಯರ್‌ ಡಿಸೈನ್‌ ಕಂಡು ರಜನಿ ಫುಲ್‌ ಫಿದಾ ಆದರು. ಮನೆಯ ಒಳಗೆ ಬರಬರುತ್ತಲೇ ಅಲಂಕಾರಗಳನ್ನು ಕಂಡು ಹುಬ್ಬೇರಿಸಿದ್ದಾರೆ. ಇದೀಗ ಈ ವಿಡಿಯೊಗಳು ವೈರಲ್‌ ಆಗಿವೆ.

ರಜನಿಕಾಂತ್ ಮಗಳು ಐಶ್ವರ್ಯಾ ಅವರು ಹೊಸದಾಗಿ ಖರೀದಿಸಿದ ಮನೆಗೆ ರಜನಿ ದಂಪತಿ ಭೇಟಿ ಕೊಟ್ಟಿದ್ದಾರೆ. . ಬಾಗಿಲಲ್ಲಿ ಮಗಳು ತಂದೆ ತಾಯಿಗೆ ಸ್ವಾಗತಿಸಿದ ಬಳಿಕ ರಜನಿ ಬಾಲ್ಕನಿಗೆ ಹೋಗಿ ಮನೆ ತುಂಬ ಚೆನ್ನಾಗಿದೆ ಎಂದು ಹೇಳಿದ್ದಾರೆ. ಇಡೀ ಮನೆ ಅಲಂಕಾರಗಳಿಂದ ಕಂಗೊಳಿಸುತ್ತಿತ್ತು. ಬಳಿಕ ಲತಾ ಅವರು ದೇವರ ಮನೆಯಲ್ಲಿ ದೀಪ ಹಚ್ಚಿ ಮಗಳಿಗೆ ವಿಶ್‌ ಮಾಡಿದ್ದಾರೆ.

 ನಟ ಧನುಷ್ (Actor Dhanush) ಹಾಗೂ ನಿರ್ದೇಶಕಿ ಐಶ್ವರ್ಯಾ ರಜನಿಕಾಂತ್ ಇತ್ತೀಚೆಗೆ ಚೆನ್ನೈ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಅಕ್ಟೋಬರ್ 7ರಂದು ಇಬ್ಬರೂ ನ್ಯಾಯಾಲಯಕ್ಕೆ ಹಾಜರಾಗುವಂತೆ ಆದೇಶಿಸಿದೆ. ಈ ಸಂಬಂಧ ನೋಟಿಸ್ ನೀಡಿರುವುದಾಗಿ ವರದಿಯಾಗಿದೆ.

ಇದನ್ನೂ ಓದಿ: Aishwaryaa Rajinikanth: ಐಶ್ವರ್ಯಾ ರಜನಿಕಾಂತ್ ಮನೆಯಲ್ಲಿ ಕದ್ದ ಕಳ್ಳರು ಕೊನೆಗು ಸಿಕ್ಕಿಬಿದ್ದರು; ಯಾರವರು?

ಪರಸ್ಪರ ಒಪ್ಪಿಗೆ ಮೇರೆಗೆ ಜೋಡಿ ವಿಚ್ಛೇದನ ಸಲ್ಲಿಸಿತ್ತು. ಕಳೆದ ಎರಡು ವರ್ಷಗಳಿಂದ ಧನುಷ್ ಮತ್ತು ಐಶ್ವರ್ಯ ಬೇರೆ ಬೇರೆಯಾಗಿ ವಾಸಿಸುತ್ತಿದ್ದಾರೆ. ಧನುಷ್ ಹಾಗೂ ಐಶ್ವರ್ಯಾ ಪರಸ್ಪರ ಪ್ರೀತಿಸಿ ಮದುವೆ ಆಗಿದ್ದರು. ಮದುವೆಯಾಗಿ ಬರೋಬ್ಬರಿ 18 ವರ್ಷಗಳ ಬಳಿಕ ದೂರಾಗುತ್ತಿರುವುದಾಗಿ ಹೇಳಿದ್ದರು. ವಿಚ್ಛೇದನ ವಿಚಾರ ಘೋಷಣೆ ಬಳಿಕ ಇಬ್ಬರು ತಮ್ಮ ಮಕ್ಕಳಾದ ಯಾತ್ರಾ ಮತ್ತು ಲಿಂಗ ಶಾಲೆಯ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡಿದ್ದರು.

ಜನವರಿ 2022ರಲ್ಲಿ ಬೇರೆಯಾಗುತ್ತಿದ್ದೇವೆ ಎಂದು ದಂಪತಿ ಘೋಷಿಸಿದ್ದರು. “18 ವರ್ಷಗಳ ಕಾಲ ಸ್ನೇಹಿತರು, ದಂಪತಿಗಳಾಗಿ , ಪೋಷಕರಾಗಿ ಹಿತೈಷಿಗಳಾಗಿ ಒಟ್ಟಿಗೆ ಇದ್ದೆವು. ಈ ಪಯಣ ನಮ್ಮಿಬ್ಬರ ಪ್ರಗತಿ, ತಿಳಿವಳಿಕೆ, ಹೊಂದಾಣಿಕೆ ಮತ್ತು ಪರಸ್ಪರ ಸ್ವೀಕಾರದ ಹಾದಿಯಾಗಿತ್ತು. ಇಂದು ನಾವು ನಮ್ಮ ಪ್ರತ್ಯೇಕ ಮಾರ್ಗಗಳನ್ನು ಕಂಡುಕೊಂಡಿದ್ದೇವೆ. ಐಶ್ವರ್ಯಾ ಮತ್ತು ನಾನು ದಂಪತಿಗಳಾಗಿ ಬೇರೆಯಾಗಲು ನಿರ್ಧರಿಸಿದ್ದೇವೆ. ನಮ್ಮನ್ನು ನಾವು ಅರ್ಥ ಮಾಡಿಕೊಳ್ಳುವುದಕ್ಕೆ ಸಮಯ ಹಿಡಿಯಲಿದೆ. ದಯವಿಟ್ಟು ನಮ್ಮ ನಿರ್ಧಾರವನ್ನು ಗೌರವಿಸಿ. ಓಂ ನಮಶಿವಾಯ” ಎಂದು ಒಂದೂವರೆ ವರ್ಷದ ಹಿಂದೆ ಧನುಷ್ ಟ್ವೀಟ್ ಮಾಡಿದ್ದರು. ಹಿರಿಯ ನಟ ರಜನಿಕಾಂತ್ ಅವರ ಪುತ್ರಿ ಧನುಷ್ ಮತ್ತು ಐಶ್ವರ್ಯಾ ಅವರು 2004ರಲ್ಲಿ ವಿವಾಹವಾಗಿದ್ದರು.
ಇಬ್ಬರೂ ಮತ್ತೆ ಒಂದಾಗಬೇಕು ಎಂದು ಆಪ್ತರು, ಅಭಿಮಾನಿಗಳು ಬಯಸಿದ್ದರು. ಆದರೆ ಈಗ ಸದ್ಯದಲ್ಲೇ ಇವರ ವಿಚ್ಛೇದನ ಅಂತಿಮಗೊಳ್ಳಲಿದೆ. ಈ ವಿಚಾರದಲ್ಲಿ ಅಭಿಮಾನಿಗಳಿಗೆ ನಿರಾಸೆಯಾಗಿದೆ.

ಐಶ್ವರ್ಯಾ ಇತ್ತೀಚೆಗೆ ʻಲಾಲ್ ಸಲಾಂʼ ಚಿತ್ರದ ಮೂಲಕ ನಿರ್ದೇಶನಕ್ಕೆ ಮರಳಿದ್ದರು. ಇದರಲ್ಲಿ ರಜನಿಕಾಂತ್ ಅವರು ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಚಿತ್ರದಲ್ಲಿ ವಿಷ್ಣು ವಿಶಾಲ್ ಮತ್ತು ವಿಕ್ರಾಂತ್ ಕೂಡ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದರು

Continue Reading

ಸ್ಯಾಂಡಲ್ ವುಡ್

Kannada New Movie: ‘ ರಂಗಸ್ಥಳ’ ಸಿನಿಮಾಗೆ ಮಲಯಾಳಂನ ಖ್ಯಾತ ನಟ ಎಂಟ್ರಿ

Kannada New Movie: ಇನ್ನು ಈ ಚಿತ್ರ ನಿರ್ದೇಶನ ಮಾಡುತ್ತಿರುವ ಯುವ ಪ್ರತಿಭೆ ಈಶ್ವರ್ ನಿತಿನ್ ಪ್ರಥಮ ಪ್ರಯತ್ನ ಇದಾಗಿದೆ. ಡೆಂಟಲ್ ವಿದ್ಯಾರ್ಥಿ ಆಗಿದ್ದ ನಿತಿನ್ , ಎಲ್. ವಿ. ಪ್ರಸಾದ್ ಫಿಲಂ ಇನ್ಸ್ಟಿಟ್ಯೂಟ್ ನಲ್ಲಿ ತರಬೇತಿ ಪಡೆದು ಒಂದಷ್ಟು ಕಿರು ಚಿತ್ರ , ಹ್ಯಾಡ್ ಫಿಲಂ ನಲ್ಲಿ ವರ್ಕ್ ಮಾಡುವ ಮೂಲಕ ಪೂರ್ಣ ಪ್ರಮಾಣದ ಸಿನಿಮಾ ಮಾಡಲು ಮುಂದಾಗಿದ್ದಾರೆ. ಈ ಚಿತ್ರದಲ್ಲಿ ನಾಯಕನ ಒಬ್ಬ ಯಕ್ಷಗಾನ ಕಲಾವಿದ ಹಾಗೂ ನಾಯಕಿ ವೈಲ್ಡ್ ಲೈಫ್ ಫೋಟೋಗ್ರಾಫರ್. ಹಾಗೆಯೇ ಮಲಯಾಳಂನ ಖ್ಯಾತ ನಟ ಮನೋಜ್. ಕೆ. ಜಯನ್ ಒಂದು ನೆಗೆಟಿವ್ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ.

VISTARANEWS.COM


on

Kannada New Movie Rangasthala movie
Koo

ಬೆಂಗಳೂರು: ಚಂದನವನಕ್ಕೆ ಯುವಕರ ಬಳಗವು ಪೂರ್ವ ತಯಾರಿಯೊಂದಿಗೆ ಒಂದು ಕಂಪನಿಯ ಮಾದರಿಯಲ್ಲಿ ತಂಡವನ್ನು ಕಟ್ಟಿಕೊಂಡು ಚಿತ್ರ (Kannada New Movie) ನಿರ್ಮಾಣಕ್ಕೆ ಮುಂದಾಗಿದೆ. ಜೀವನವೇ ಒಂದು ರಂಗ ಪ್ರಪಂಚ ಅಲ್ಲಿ ಎಲ್ಲಾ ರೀತಿಯ ಏಳು, ಬೀಳುಗಳು, ಪಾತ್ರಧಾರಿಗಳು ಕಣ್ಣ ಮುಂದೆ ಹಾದು ಹೋಗುತ್ತಾರೆ. ಅಂತಹದ್ದೇ ಒಂದು ವಿಭಿನ್ನ ಕಥೆಯ ಮೂಲಕ ʻಅಘೋರ್ ಮೋಶನ್ ಪಿಚ್ಚರ್ಸ್ʼ ಅಡಿಯಲ್ಲಿ ಡಾ. ರೇವಣ್ಣ ನಿರ್ಮಾಣದ ‘ರಂಗಸ್ಥಳ ‘ ಎಂಬ ನೂತನ ಚಿತ್ರದ ಟೈಟಲ್ ಲಾಂಚ್ ಬಿಡುಗಡೆ ಮಾಡಲಾಯಿತು. ಈ ಕಾರ್ಯಕ್ರಮಕ್ಕೆ ರಾಜಕೀಯ ಮುಖಂಡ ಮಂಜುನಾಥ್ , ಸಂತೋಷ್ ಸೇರಿದಂತೆ ಹಲವರು ಹಾಜರಿದ್ದರು. ಬಹುತೇಕ (manoj jayan) ಯುವ ಪ್ರತಿಭೆಗಳ ತಂಡ ಸೇರಿಕೊಂಡು ಸಿದ್ಧಪಡಿಸುತ್ತಿರುವ ಈ ಚಿತ್ರದ ಪತ್ರಿಕಾಗೋಷ್ಠಿಯನ್ನ MMB ಲೆಗೆಸಿ ಆಯೋಜಿಸಲಾಗಿದ್ದು , ಮಾಧ್ಯಮದವರ ಮುಂದೆ ಚಿತ್ರ ತಂಡ ಮಾಹಿತಿಯನ್ನು ಹಂಚಿಕೊಳ್ಳಲು ಮುಂದಾದರು.

ಈ ಚಿತ್ರದ ನಿರ್ಮಾಪಕ ಡಾ. ರೇವಣ್ಣ ಮಾತನಾಡಿ ʻʻನಾನು ಮೂಲತಃ ರೈತ ಕುಟುಂಬದಿಂದ ಬಂದವನು, ವಿದ್ಯಾಭ್ಯಾಸದಲ್ಲಿ ಹೆಚ್ಚು ಗಮನ ಇಲ್ಲದಿದ್ದರೂ ಮನೆಯವರ ಒತ್ತಾಯದ ಮೇರೆಗೆ ಮುಗಿಸಿ ಡಿಗ್ರಿ ಮುಗಿಸಿಕೊಂಡೆ. ಭದ್ರಾವತಿಯ ಉಕ್ಕಿನ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿರುವ ಸಂದರ್ಭದಲ್ಲಿ ನನ್ನ ಎತ್ತರವನ್ನು ಗಮನಿಸಿದಂತಹ ಹಿರಿಯರೊಬ್ಬರು ನನಗೆ ವಾಲಿಬಾಲ್ ತಂಡಕ್ಕೆ ಸೇರಿಸಿದರು. ನಂತರ ನಾನು ಜಿಲ್ಲಾ ಮಟ್ಟದಿಂದ ರಾಜ್ಯಮಟ್ಟಕ್ಕೂ ಆಡಿ ಪ್ರಶಸ್ತಿಯನ್ನು ಪಡೆದೆ. ನನ್ನ ಸೇವೆಯನ್ನು ಗುರುತಿಸಿ ಡಾಕ್ಟರೇಟ್ ಪದವಿಯು ಸಿಕ್ಕಿತು. ಸಿನಿಮಾ ಬಗ್ಗೆ ನಮಗೇನು ಹೆಚ್ಚು ಒಲವಿಲ್ಲ ಆದರೆ ನನ್ನ ಇಬ್ಬರು ಮಕ್ಕಳಾದ ವಿನೋದ್ ಕುಮಾರ್ ಜೈ ಕೀರ್ತಿ ಹಾಗೂ ವಿನಯ್ ಕುಮಾರ್ ಜೈ ಕೀರ್ತಿ ಅಮೇರಿಕಾದಲ್ಲಿ ಸ್ವಂತ ಉದ್ಯೋಗವನ್ನು ಆರಂಭಿಸಿದರು , ಅದು ಹಂತ ಹಂತವಾಗಿ ದೊಡ್ಡ ಮಟ್ಟಕ್ಕೆ ಬೆಳೆದಿದೆ. ಅವರ ಜೊತೆ ನಾನು ನನ್ನ ಮಡಿದಿ ಕೂಡ ಈಗ ಕೈಜೋಡಿಸಿದ್ದೇವೆ. ಈ ಒಂದು ಚಿತ್ರವನ್ನ ಸಾಫ್ಟ್ವೇರ್ ಕಂಪನಿಯ ಕಾರ್ಯ ವೈಖರಿಯಂತೆ ಬಹಳ ಅಚ್ಚುಕಟ್ಟಾಗಿ ಆರಂಭಿಸಿದ್ದೇವೆ, ಕಲಾವಿದರು , ತಂತ್ರಜ್ಞಾನರ ಆಯ್ಕೆಯ ಜೊತೆಗೆ ವಿಶೇಷವಾಗಿ ಮಲಯಾಳಂನ ಖ್ಯಾತ ನಟ ಮನೋಜ್. ಕೆ.ಜಯನ್ ಆಯ್ಕೆಯನ್ನು ನನ್ನ ಸುಪುತ್ರ ವಿನೋದ್ ಫೈನಲ್ ಮಾಡಿದ್ರು. ಈಗಾಗಲೇ ಚಿತ್ರೀಕರಣ ಶುರುವಾಗಿದೆ. ತಂಡ ಅಚ್ಚುಕಟ್ಟಾಗಿ ಕೆಲಸ ಮಾಡ್ತಿದೆ. ನಮ್ಮಿಂದ 150 ಕುಟುಂಬಗಳಿಗೆ ಅನುಕೂಲವಾದರೆ ಸಾಕು , ನಮಗೆ ಲಾಭ ಬೇಡ ಹಾಕಿದ ಹಣ ಬಂದರೆ ಸಾಕು , ನಮ್ಮ ಸಂಸ್ಥೆಯಿಂದ ಹೊಸಬರಿಗೆ ಮುಂದೆಯೂ ಅವಕಾಶ ಕೊಡುವ ಉದ್ದೇಶವಿದೆ. ಹಾಗೆಯೇ ವಾಲಿಬಾಲ್ ಗೆ ಸಂಬಂಧಪಟ್ಟ ಚಿತ್ರವನ್ನು ನಿರ್ಮಿಸುವ ಆಸೆಯೂ ನನಗಿದೆʼʼ ಎಂದು ಹೇಳಿಕೊಂಡರು.

ಇದನ್ನೂ ಓದಿ: Mallikarjuna Kharge: ಪ್ರಧಾನಿ ಮೋದಿ ವಡೋದರಾ ಬಿಟ್ಟು ವಾರಣಾಸಿಗೆ ಓಡಲಿಲ್ಲವೇ?; ಖರ್ಗೆ ಕಿಡಿ

ಇನ್ನು ಈ ಚಿತ್ರದಲ್ಲಿ ಬಹಳ ಪ್ರಮುಖ ಪಾತ್ರದಲ್ಲಿ ಮಲಯಾಳಂನ ಖ್ಯಾತ ನಟ ಮನೋಜ್. ಕೆ .ಜಯನ್ ಅಭಿನಯಿಸುತ್ತಿದ್ದಾರೆ. ಮಲಯಾಳಂ , ತಮಿಳು , ತೆಲುಗು ಸೇರಿದಂತೆ ಸುಮಾರು 200ಕ್ಕೂಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಮಲಯಾಳಂ ಚಿತ್ರದಲ್ಲಿ ಎರಡು ಬಾರಿ ಉತ್ತಮ ನಟ ಪ್ರಶಸ್ತಿಯನ್ನು ಪಡೆದಿದ್ದಾರೆ. ಸುಮಾರು 2005ರಲ್ಲಿ ಉಗ್ರ ನರಸಿಂಹ ಚಿತ್ರದಲ್ಲಿ ಅಭಿನಯಿಸಿದ್ದ ಮನೋಜ್ ಸುಮಾರು 18 ವರ್ಷಗಳ ನಂತರ ಮತ್ತೊಮ್ಮೆ ರಂಗಸ್ಥಳ ಮೂಲಕ ವಿಲನ್ ಪಾತ್ರದಲ್ಲಿ ಕಾಡಿಸಿಕೊಂಡಿದ್ದಾರೆ. ಮಲಯಾಳಂ ವ್ಯಕ್ತಿಯಾಗಿ ಪಾತ್ರವನ್ನು ನಿರ್ವಹಿಸಿದ್ದು , ಚಿತ್ರದ ಕಥೆಗೆ ಪೂರಕವಾಗಿ ಮೂಡಿ ಬರ್ತಿದೆಯಂತೆ. ಮಲಯಾಳಂ ಭಾಷೆಯಲ್ಲಿ ಮಾತನಾಡುತ್ತಾ ʻʻಕನ್ನಡ ಭಾಷೆಗೆ ದೈವಿಕ ಶಕ್ತಿ ಇದೆ. ನಾನು ಡಾ. ರಾಜ್ ಕುಮಾರ್ ಅವರ ಅಭಿಮಾನಿ. ಅವರು ತಮ್ಮ ಚಿತ್ರಗಳಲ್ಲಿ ತಾವೇ ಹಾಡುತ್ತಾ ಅಭಿನಯಿಸುತ್ತಿದ್ದು ನನಗೆ ಬಹಳ ಸಂತೋಷವಾಗುತ್ತಿತ್ತು.ನನಗೆ ಮತ್ತೊಮ್ಮೆ ಕನ್ನಡ ಚಿತ್ರದಲ್ಲಿ ಅಭಿನಯಿಸಲು ಅವಕಾಶ ನೀಡಿದಂತಹ ನಿರ್ಮಾಪಕ , ನಿರ್ದೇಶಕ ಹಾಗೂ ನನ್ನ ಸ್ನೇಹಿತರಿಗೆ ಧನ್ಯವಾದ ತಿಳಿಸುತ್ತೇನೆʼʼ ಎಂದು ಹೇಳಿದರು.

ಇನ್ನು ಈ ಚಿತ್ರ ನಿರ್ದೇಶನ ಮಾಡುತ್ತಿರುವ ಯುವ ಪ್ರತಿಭೆ ಈಶ್ವರ್ ನಿತಿನ್ ಪ್ರಥಮ ಪ್ರಯತ್ನ ಇದಾಗಿದೆ. ಡೆಂಟಲ್ ವಿದ್ಯಾರ್ಥಿ ಆಗಿದ್ದ ನಿತಿನ್ , ಎಲ್. ವಿ. ಪ್ರಸಾದ್ ಫಿಲಂ ಇನ್ಸ್ಟಿಟ್ಯೂಟ್ ನಲ್ಲಿ ತರಬೇತಿ ಪಡೆದು ಒಂದಷ್ಟು ಕಿರು ಚಿತ್ರ , ಹ್ಯಾಡ್ ಫಿಲಂ ನಲ್ಲಿ ವರ್ಕ್ ಮಾಡುವ ಮೂಲಕ ಪೂರ್ಣ ಪ್ರಮಾಣದ ಸಿನಿಮಾ ಮಾಡಲು ಮುಂದಾಗಿದ್ದಾರೆ. ಇದೊಂದು ಗ್ರಾಮೀಣ ಸೊಗಡಿನ ಕಥೆಯಾಗಿದ್ದು , ನಮ್ಮ ಪುತ್ತೂರು , ಸುಳ್ಯ , ಭಾಗದ ಭಾಷೆ , ಸೊಗಡು , ಆಚಾರ , ವಿಚಾರ , ಕಲೆ, ಬದುಕಿನ ಸುತ್ತ ನೈಜಕ್ಕೆ ಪೂರಕ ಎನ್ನುವಂತಹ ಕಥೆಯನ್ನು ಆಯ್ಕೆ ಮಾಡಿಕೊಂಡಿದ್ದು, ರಂಗಸ್ಥಳ ಎಂದರೆ ನನ್ನ ಪ್ರಕಾರ ಒಂದು ವೇದಿಕೆ , ರಂಗ ಕಲೆಗಳ ಪ್ರದರ್ಶನ ನಡೆಯುವ ಸ್ಥಳ. ಅದೇ ರೀತಿ ನನ್ನ ಕಥೆಗೆ ಬರುವ ಪಾತ್ರಧಾರಿಗಳ ಒಬ್ಬೊಬ್ಬರದು ಒಂದೊಂದು ರೀತಿಯ ಮನಸ್ಥಿತಿ. ಅದು ಹೇಗೆ , ಯಾವ ರೀತಿ , ಏನೆಲ್ಲಾ ತೊಂದರೆಗಳನ್ನು ನೀಡುತ್ತದೆ. ಈ ರಂಗ ಮಂಟಪದಲ್ಲಿ ಏನೆಲ್ಲಾ ನಡೆಯುತ್ತದೆ ಎಂಬುದನ್ನು ಹೇಳುವ ಪ್ರಯತ್ನ ಮಾಡಿದ್ದೇನೆ.

ಈ ಚಿತ್ರದಲ್ಲಿ ನಾಯಕನ ಒಬ್ಬ ಯಕ್ಷಗಾನ ಕಲಾವಿದ ಹಾಗೂ ನಾಯಕಿ ವೈಲ್ಡ್ ಲೈಫ್ ಫೋಟೋಗ್ರಾಫರ್. ಹಾಗೆಯೇ ಮಲಯಾಳಂನ ಖ್ಯಾತ ನಟ ಮನೋಜ್. ಕೆ. ಜಯನ್ ಒಂದು ನೆಗೆಟಿವ್ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಬಹಳಷ್ಟು ಹೊಸಬರು ಹಾಗೂ ಅನುಭವಿ ಕಲಾವಿದರು ಅಭಿನಯಿಸುತ್ತಿದ್ದು , ಈಗಾಗಲೇ 25 ದಿನಗಳ ಕಾಲ ಚಿತ್ರೀಕರಣ ಮಾಡಿದ್ದು , 40% ಕೆಲಸ ಮುಗಿದಿದೆ. ಇಂದು ಚಿತ್ರದ ಟೈಟಲ್ ಬಿಡುಗಡೆ ಮಾಡಿದ್ದೇವೆ ಎಂದು ಹೇಳಿಕೊಂಡರು.

ನಾಯಕನಾಗಿ ಅಭಿನಯಿಸುತ್ತಿರುವ ವಿಲೋಕ್ ರಾಜ್ ಚಿತ್ರರಂಗದಲ್ಲಿ ಬಹಳಷ್ಟು ವರ್ಷ ಕೆಲಸ ಮಾಡಿದ್ದು , ಸುಮಾರು 9 ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಗಿರ್ಕಿ ಚಿತ್ರದ ನಂತರ ಈ ‘ರಂಗಸ್ಥಳ’ ವಿಲೋಕ್ ಚಿತ್ರ ಜೀವನಕ್ಕೆ ಒಂದು ತಿರುವು ನೀಡುವಂತಹ ಸಿನಿಮಾ ವಾಗಲಿದೆಯಂತೆ. ಈ ಚಿತ್ರದಲ್ಲಿ ಒಬ್ಬ ಯಕ್ಷಗಾನ ಕಲಾವಿದನಾಗಿ ಅಭಿನಯಿಸುತ್ತಿದ್ದು , ಇದಕ್ಕಾಗಿ ಮೂರು ತಿಂಗಳ ತರಬೇತಿಯನ್ನು ಕೂಡ ಪಡೆದಿದ್ದಾರಂತೆ. ಹಾಗೆಯೇ ಭಾಷೆಯ ವಿಚಾರವಾಗಿಯೂ ಬಹಳ ಸೂಕ್ಷ್ಮವಾಗಿ ಗಮನಹರಿಸುತ್ತಿದ್ದು , ನಿರ್ದೇಶಕರು ಹೇಳಿದಂತೆ ಬಹಳ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದೇನೆ. ನಿರ್ಮಾಪಕ ಡಾ. ರೇವಣ್ಣ ಈ ಚಿತ್ರವನ್ನು ದೊಡ್ಡ ಮಟ್ಟದಲ್ಲಿ ನಿರ್ಮಿಸುತ್ತಿದ್ದಾರೆ. ನಾವು ಮೊದಲು ಸಣ್ಣ ಬಜೆಟ್ ಪ್ಲಾನ್ ಮಾಡಿಕೊಂಡಿದ್ದೇವು, ಆದರೆ ನಿರ್ಮಾಪಕರ ಪುತ್ರ ವಿನೋದ್ ಸಹಕಾರದೊಂದಿಗೆ ಈ ಚಿತ್ರ ಬೇರೆದೇ ರೂಪ ಪಡೆಯುತ್ತಿದೆ. ನಮ್ಮಂತ ಪ್ರತಿಭೆಗಳನ್ನು ಪ್ರೋತ್ಸಾಹಿಸಿ , ಬೆಳೆಸಿ ಎಂದು ಕೇಳಿಕೊಂಡರು.
ಇನ್ನು ಮಂಗಳೂರು ಮೂಲದ ಬೆಡಗಿ ಶಿಲ್ಪ ಕಾಮತ್ ಶಾರ್ಟ್ ಮೂವೀಸ್ ನಲ್ಲಿ ಅಭಿನಯಿಸಿದ್ದು , ಆಡಿಷನ್ ಮೂಲಕ ಈ ಚಿತ್ರ ತಂಡಕ್ಕೆ ಸೇರ್ಪಡೆಯಾಗಿದ್ದಾರೆ. ಈ ಚಿತ್ರದಲ್ಲಿ ಒಬ್ಬ ವೈಲ್ಡ್ ಲೈಫ್ ಫೋಟೋಗ್ರಾಫರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರಂತೆ. ಈ ಚಿತ್ರದಲ್ಲಿ ಮನೋಜ್ ಜೆಬೆ ಎಂಬ ಮಲಯಾಳಂ ಪ್ರತಿಭೆ ಕಾಮಿಡಿ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಹಾಗೆ ಮತ್ತೊಬ್ಬ ಪ್ರತಿಭೆ ಸಂಧ್ಯಾ ಅರ್ಕೆರೆ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ.

ಈ ಚಿತ್ರಕ್ಕೆ ಎನಾಷ್ ಒಲಿವೇರ ಛಾಯಾಗ್ರಹಣ ಮಾಡುತ್ತಿದ್ದು , ಜೂಡೋ ಸ್ಯಾಂಡಿ ಆರು ಹಾಡುಗಳಿಗೆ ಸಂಗೀತವನ್ನು ನೀಡುತ್ತಿದ್ದು , ಪ್ರಭಾಕರನ್ ರಾಮು ಕಲಾ ನಿರ್ದೇಶನ ಈ ಚಿತ್ರಕ್ಕೆ ಇದೆ.

Continue Reading
Advertisement
HD Revanna
ಕರ್ನಾಟಕ20 mins ago

HD Revanna: ಛೇ, ಎಂಥ ಸ್ಥಿತಿ ಬಂತಪ್ಪ; ಎಸ್‌ಐಟಿ ಸೆಲ್‌ನಲ್ಲಿ ಗಳಗಳನೆ ಅತ್ತ ಎಚ್‌.ಡಿ.ರೇವಣ್ಣ

Road Accident
ಕರ್ನಾಟಕ25 mins ago

Road Accident: ಕಾರು-ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವು

Virat kohli
ಪ್ರಮುಖ ಸುದ್ದಿ25 mins ago

IPL 2024 : ಟೀಕೆಗಳಿಗೆ ಪ್ರತಿಕ್ರಿಯಿಸುವುದು ಯಾಕೆ? ಕೊಹ್ಲಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಗವಾಸ್ಕರ್​

IPL 2024
ಕ್ರೀಡೆ47 mins ago

IPL 2024 : ಅತಿ ವೇಗದ ಬೌಲರ್​ ಮಯಾಂಕ್ ಐಪಿಎಲ್​ನಿಂದ ಔಟ್​​

HD Revanna
ಕರ್ನಾಟಕ1 hour ago

HD Revanna: ಎಸ್‌ಐಟಿ ಸೆಲ್‌ನಲ್ಲೇ ‘ಮೊದಲ ರಾತ್ರಿ’ ಕಳೆಯಲಿರುವ ರೇವಣ್ಣ; ಬೆಳಗ್ಗೆ ಜಡ್ಜ್‌ ಎದುರು ಹಾಜರ್!

IPL 2024
ಕ್ರೀಡೆ1 hour ago

IPL 2024 : ಅಭಿಮಾನಿಗಳಿಗೆ ಸತಾಯಿಸಿ ಖುಷಿ ಕೊಟ್ಟ ಆರ್​ಸಿಬಿ, ಗುಜರಾತ್​ ವಿರುದ್ಧ 4 ವಿಕೆಟ್​ ಜಯ

Dingaleshwar Swamiji
ಕರ್ನಾಟಕ1 hour ago

Dingaleshwar Swamiji: ದ್ವೇಷ ಭಾಷಣ; ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಎಫ್‌ಐಆರ್

Virat kohli
ಕ್ರೀಡೆ2 hours ago

Virat kohli : ಸಿಕ್ಸರ್ ಹೊಡೆದು ಕಿಂಗ್​ ಥರ ಪೋಸ್​​ ಕೊಟ್ಟ ಕೊಹ್ಲಿ, ಇಲ್ಲಿದೆ ವಿಡಿಯೊ

Prajwal Revanna Case
ಕರ್ನಾಟಕ2 hours ago

Prajwal Revanna Case: ನನ್ನ ಸಾಯಿಸ್ತಾರೆ; ಪ್ರಜ್ವಲ್‌ ವಿದೇಶದಲ್ಲಿದ್ದರೂ ಸಂತ್ರಸ್ತೆಗೆ ಭಯ, ಪೊಲೀಸರಿಗೂ ಮಾಹಿತಿ ನೀಡಲು ಹಿಂಜರಿಕೆ!

Bangalore To Belagavi Train
ಕರ್ನಾಟಕ2 hours ago

Bangalore To Belagavi Train: ಮೇ 6ರಂದು ಬೆಂಗಳೂರು-ಬೆಳಗಾವಿ ವಿಶೇಷ ರೈಲು ಸಂಚಾರ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ19 hours ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ1 day ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ2 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ2 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ3 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ5 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20245 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20246 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ6 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20246 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

ಟ್ರೆಂಡಿಂಗ್‌