Air India Recruitment of more than 1,000 pilots by Air IndiaAir India : ಏರ್‌ ಇಂಡಿಯಾದಿಂದ 1,000ಕ್ಕೂ ಹೆಚ್ಚು ಪೈಲಟ್‌ಗಳ ನೇಮಕ - Vistara News

ಪ್ರಮುಖ ಸುದ್ದಿ

Air India : ಏರ್‌ ಇಂಡಿಯಾದಿಂದ 1,000ಕ್ಕೂ ಹೆಚ್ಚು ಪೈಲಟ್‌ಗಳ ನೇಮಕ

Air India ಏರ್‌ ಇಂಡಿಯಾ 1000ಕ್ಕೂ ಹೆಚ್ಚು ಪೈಲಟ್‌ಗಳನ್ನು ನೇಮಕ ಮಾಡಿಕೊಳ್ಳುವುದಾಗಿ ತಿಳಿಸಿದೆ. ವಿವರ ಇಲ್ಲಿದೆ.

VISTARANEWS.COM


on

Air India Flights
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಟಾಟಾ ಸಮೂಹದ ಒಡೆತನದಲ್ಲಿರುವ ಏರ್‌ ಇಂಡಿಯಾ 1,000 ಪೈಲಟ್‌ಗಳನ್ನು ನೇಮಕ ಮಾಡಿಕೊಳ್ಳಲು ನಿರ್ಧರಿಸಿದೆ. (Air India) ಕ್ಯಾಪ್ಟನ್‌, ಟ್ರೈನರ್‌ಗಳನ್ನೂ ನೇಮಿಸಲಿದೆ. ಏರ್‌ಲೈನ್‌ ಪ್ರಸ್ತುತ 1,800 ಪೈಲಟ್‌ಗಳನ್ನು ಹೊಂದಿದೆ. ಏರ್‌ಲೈನ್‌ ತನ್ನ ವಿಮಾನಗಳ ನೆಟ್‌ ವರ್ಕ್‌ ಅನ್ನು ವಿಸ್ತರಿಸುತ್ತಿದೆ. ಬೋಯಿಂಗ್‌ ಮತ್ತು ಏರ್‌ಬಸ್‌ನಿಂದ 470 ವಿಮಾನಗಳನ್ನು ಖರೀದಿಸಲು ಆರ್ಡರ್‌ ಕೊಟ್ಟಿದೆ.

ಏರ್‌ ಇಂಡಿಯಾ ಹೊಸ ನೇಮಕಾತಿಗೆ ಸಂಬಂಧಿಸಿ ಗುರುವಾರ ಜಾಹೀರಾತು ಪ್ರಕಟಿಸಿದೆ. ತನ್ನ ಎ320, ಬಿ777, ಬಿ787 ಮತ್ತು ಬಿ737 ವಿಮಾನಗಳ ವಿಭಾಗಕ್ಕೆ ಪೈಲಟ್‌ ಮತ್ತು ಇತರ ಸಿಬ್ಬಂದಿಯನ್ನು ನೇಮಿಸಲಿದೆ. ಇತ್ತೀಚಿನ ಏರ್‌ಬಸ್‌ ಆರ್ಡರ್‌ನಲ್ಲಿ 210 ಎ320/321 ನಿಯೊ/ಎಕ್ಸ್‌ಎಲ್‌ಆರ್‌ ಮತ್ತು 40 ಎ350-900/100 ವಿಮಾನಗಳು ಇವೆ. ಬೋಯಿಂಗ್‌ಗೆ ನೀಡಿರುವ ಆರ್ಡರ್‌ನಲ್ಲಿ 190 737-ಮ್ಯಾಕ್ಸ್‌ ಸೇರಿದೆ. ಏರ್‌ ಇಂಡಿಯಾ ಇತ್ತೀಚೆಗೆ ಪೈಲಟ್‌ಗಳ ವೇತನ ಪರಿಷ್ಕರಿಸಿತ್ತು. ಆದರೆ ಇದರ ಬಗ್ಗೆ ಸಿಬ್ಬಂದಿಯ ಅಸಮಾಧಾನದ ನಡುವೆ ಹೊಸ ಪೈಲಟ್‌ಗಳ ನೇಮಕ ಮಾಡಲು ನಿರ್ಧರಿಸಿದೆ.

ಏರ್‌ ಇಂಡಿಯಾ, (Air India) ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ಮತ್ತು ಬ್ಯಾಂಕ್‌ ಆಫ್‌ ಬರೋಡಾದಿಂದ 14,000 ಕೋಟಿ ರೂ. ಸಾಲವನ್ನು ಗಳಿಸಿದೆ. ಇದರಲ್ಲಿ ಹೊಸ ಸಾಲ ಹಾಗೂ ಹಾಲಿ ಸಾಲದ ಪುನಾರಚನೆ ಸೇರಿದೆ. ಸಾಲ ಪುನಾರಚನೆಯ ಭಾಗವಾಗಿ 12,500 ಕೋಟಿ ರೂ. ಹಾಗೂ ತುರ್ತು ಸಾಲದ ರೂಪದಲ್ಲಿ 1,500 ಕೋಟಿ ರೂ. ಸಿಗಲಿದೆ ಎಂದು ವರದಿಯಾಗಿದೆ.

ಈ ಸಾಲದಿಂದ ಏರ್‌ ಇಂಡಿಯಾಗೆ ಹೊಸ ಹಾಗೂ ಲೀಸ್‌ಗೆ ವಿಮಾನಗಳನ್ನು ಪಡೆದು ದೇಶೀಯ ಮತ್ತು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮುಂದಿನ ಹಂತದ ವಿಸ್ತರಣೆಗೆ ನೆರವಾಗಲಿದೆ. ಏರ್‌ ಇಂಡಿಯಾ ಈಗಾಗಲೇ ತನ್ನ ಸಿಬ್ಬಂದಿಗೆ ಸ್ವಯಂ ನಿವೃತ್ತಿ ಯೋಜನೆಯನ್ನು (VRS) ಘೋಷಿಸಿದ್ದು, ಇದಕ್ಕೆ 200 ಕೋಟಿ ರೂ. ವೆಚ್ಚವಾಗುವ ನಿರೀಕ್ಷೆ ಇದೆ.

ಏರ್‌ಲೈನ್‌ ಈಗ (2021-22ರಲ್ಲಿ) ಒಟ್ಟು 15,317 ಕೋಟಿ ರೂ. ಸಾಲವನ್ನು ಒಳಗೊಂಡಿದೆ. 2020-21ರಲ್ಲಿ ಒಟ್ಟು 45,037 ಕೋಟಿ ರೂ. ಸಾಲವನ್ನು ಹೊಂದಿತ್ತು. 2022ರ ಜನವರಿಯಲ್ಲಿ ಟಾಟಾ ಗ್ರೂಪ್‌, ಏರ್‌ ಇಂಡಿಯಾದ ನಿಯಂತ್ರಣವನ್ನು ಗಳಿಸಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Krishna River Tragedy: ಕೃಷ್ಣಾ ನದಿಯಲ್ಲಿ ತೆಪ್ಪ ಮುಗುಚಿ ಆರು ಮಂದಿ ನೀರುಪಾಲು, ಒಬ್ಬರ ಮೃತದೇಹ ಪತ್ತೆ

Krishna River Tragedy: ಅಂದರ್‌ ಬಾಹರ್ (ಇಸ್ಪೇಟ್) ಆಡುವಾಗ ಪೊಲೀಸರು ದಾಳಿ ನಡೆಸಿದ ವೇಳೆ ಕೃಷ್ಣಾ ನದಿಯಲ್ಲಿ ತೆಪ್ಪದ ಮೂಲಕ ಎಸ್ಕೇಪ್ ಆಗಲು ಯತ್ನಿಸಿದಾಗ ಏಳೆಂಟು ಜನರು ನೀರುಪಾಲು ಆಗಿರುವ ಶಂಕೆ ವ್ಯಕ್ತವಾಗಿದೆ.

VISTARANEWS.COM


on

Krishna River Tragedy
Koo

ವಿಜಯಪುರ: ಕೃಷ್ಣಾ ನದಿಯಲ್ಲಿ ತೆಪ್ಪ ಮುಗುಚಿ ಆರು ಜನ ನೀರುಪಾಲಾಗಿದ್ದು, ಒಬ್ಬರ ಮೃತದೇಹ ಪತ್ತೆಯಾಗಿದೆ. ಕೊಲ್ಹಾರ ತಾಲೂಕಿನ ಬಳೂತಿ ಜಾಕವೆಲ್ ಬಳಿ ಕೃಷ್ಣಾ ನದಿಯಲ್ಲಿ ದುರ್ಘಟನೆ ನಡೆದಿದೆ. ನದಿ ಆಚೆಯ ನಡುಗಡ್ಡೆಗೆ ತೆರಳಿ ವಾಪಸ್‌ ಬರುತ್ತಿದ್ದ ವೇಳೆ ಘಟನೆ ನಡೆದಿದ್ದು, ಸ್ಥಳಕ್ಕೆ ಕೊಲ್ಹಾರ ಠಾಣೆ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಹೆಚ್ಚುವರಿ ಎಸ್.ಪಿ. ಶಂಕರ ಮಾರಿಹಾಳ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಸ್ಥಳೀಯರು ಹಾಗೂ ಅಧಿಕಾರಿಗಳಿಂದ ನೀರು ಪಾಲಾದವರಿಗಾಗಿ (raft capsizes) ಶೋಧಕಾರ್ಯ ನಡೆಯುತ್ತಿದೆ.

ಅಂದರ್ ಬಾಹರ್ (ಇಸ್ಪೇಟ್) ಆಡುವಾಗ ಪೊಲೀಸರು ದಾಳಿ ನಡೆಸಿದ ವೇಳೆ ಕೃಷ್ಣಾ ನದಿಯಲ್ಲಿ ತೆಪ್ಪದ ಮೂಲಕ ಎಸ್ಕೇಪ್ ಆಗಲು ಯತ್ನಿಸಿದಾಗ ಏಳೆಂಟು ಜನರು ನೀರುಪಾಲು ಆಗಿರುವ ಶಂಕೆ ವ್ಯಕ್ತವಾಗಿದೆ. ಅದರಲ್ಲಿ ಒಬ್ಬರ ಮೃತದೇಹ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಪುಂಡಲೀಕ ಯಂಕಂಚಿ (35) ಎಂದು ಗುರುತಿಸಲಾಗಿದೆ. ಅದೃಷ್ಟವಶಾತ್ ಒಬ್ಬ ನದಿಯಿಂದ ಹೊರಗೆ ಬಂದು ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ | Bomb Blast: ಜೋಯಿಡಾದಲ್ಲಿ ಪತ್ರಕರ್ತರು ಸಾಗುತ್ತಿದ್ದ ಕಾರಿನಡಿ ನಾಡ ಬಾಂಬ್ ಸ್ಫೋಟ

ತೆಪ್ಪದಲ್ಲಿ ತೆರಳಿದವರು ಕೊಲ್ಹಾರ ಹಾಗೂ ಬಳೂತಿ ಗ್ರಾಮದವರು ಎನ್ನಲಾಗಿದೆ. ಸ್ಥಳಕ್ಕೆ ಹೆಚ್ಚುವರಿ ಎಸ್ಪಿ ಶಂಕರ ಮಾರಿಹಾಳ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಗ್ರಾಮಸ್ಥರು ದೌಡಾಯಿಸಿದ್ದು, ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

Sandalwood theft : ಶ್ರೀಗಂಧ ಕದಿಯಲು ಬಂದವನಿಗೆ ಗುಂಡೇಟು;‌ ಮತ್ತೊಬ್ಬ ಗಾಯಾಳು ಸೇರಿ ಹಲವರು ಪರಾರಿ

ಕೋಲಾರ : ಅರಣ್ಯ ಪ್ರದೇಶದಲ್ಲಿ ಶ್ರೀಗಂಧವನ್ನು ಕದಿಯಲು (Sandalwood theft) ಬಂದವನು ಅರಣ್ಯ ಇಲಾಖೆ ಸಿಬ್ಬಂದಿಯಿಂದ ಗುಂಡೇಟು ತಿಂದಿದ್ದಾನೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕಾಶಿಪುರ ಅರಣ್ಯ ಪ್ರದೇಶದಲ್ಲಿ (Kashipura Forest) ಘಟನೆ ನಡೆದಿದೆ.

ತಾಯಲೂರು ಗ್ರಾಮದ ಭತ್ಯಪ್ಪ ಎಂಬಾತ ಕಾಲಿಗೆ ಗುಂಡು ತಗುಲಿದೆ. ಅರಣ್ಯ ಇಲಾಖೆ ರಕ್ಷಕ ಅನಿಲ್ ಗುಂಡು ಹಾರಿಸಿದ್ದಾರೆ. ಶ್ರೀಗಂಧ ಕಳ್ಳತನಕ್ಕೆ ಆಂಧ್ರಪ್ರದೇಶದ ಐದಾರು ಮಂದಿ ಜತೆಗೆ ಭತ್ಯಪ್ಪ ಬಂದಿದ್ದ. ಈ ವೇಳೆ ರಕ್ಷಕ ಅನಿಲ್ ಮೇಲೆ ಹಲ್ಲೆಗೆ ಮುಂದಾಗಿದ್ದ.

ರಕ್ಷಣೆಗಾಗಿ ಭತ್ಯಪ್ಪ ಹಾಗೂ ಮತ್ತೋರ್ವನಿಗೆ ಅರಣ್ಯ ಸಿಬ್ಬಂದಿ ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ ಭತ್ಯಪ್ಪ ಸಿಕ್ಕಿಬಿದ್ದರೆ ಉಳಿದವರು ಕಾಲ್ಕಿತ್ತಿದ್ದಾರೆ. ಗಾಯಾಳು ಭತ್ಯಪ್ಪಗೆ ಮುಳಬಾಗಿಲು ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ: Drowned In water : ರಭಸವಾಗಿ ಹರಿಯುತ್ತಿದ್ದ ನೀರಲ್ಲಿ ಈಜಲು ಹೋಗಿ ಕೊಚ್ಚಿ ಹೋದ ಮಾಜಿ ಸೈನಿಕ

ಕೋರ್ಟ್‌ ಆವರಣದಲ್ಲೇ ಡೆಡ್ಲಿ ಅಟ್ಯಾಕ್‌

ಕಲಬುರಗಿ ಕೋರ್ಟ್ ಆವರಣದಲ್ಲಿ ಸಿನಿಮೀಯ ಶೈಲಿಯಲ್ಲಿ ವ್ಯಕ್ತಿಯ ಬೆನ್ನತ್ತಿ ದುಷ್ಕರ್ಮಿಗಳು ತಲವಾರ್‌ನಿಂದ ದಾಳಿ ನಡೆಸಿದ್ದಾರೆ. ಧೀರಜ್ ಎಂಬಾತನ ಮೇಲೆ ತಲವಾರ್‌‌ನಿಂದ ದಾಳಿ ನಡೆಸಿದ್ದಾರೆ.

ತಲವಾರ್ ದಾಳಿಯಿಂದ ಧೀರಜ್‌ ಎಂಬಾತ ಗಾಯಗೊಂಡಿದ್ದು ಸ್ಥಳೀಯರು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಇತ್ತ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ ದುಷ್ಕರ್ಮಿಗಳನ್ನು ಸಾರ್ವಜನಿಕರು ಹಾಗೂ ವಕೀಲರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಘಟನೆ ಸಂಬಂಧ ಪ್ರಶಾಂತ್ ಪಾಟೀಲ್ (20), ವಿರೇಶ್ ಪಾಟೀಲ್ (19), ರಾಮು ಪಾಟೀಲ್ (38) ಈ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಕಲಬುರಗಿ ನಗರದ ಬಾಪುನಗರ ಬಡಾವಣೆಯ ನಿವಾಸಿಗಳು ಎನ್ನಲಾಗಿದೆ. ವೈಯುಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Hathras Stampede : ಹತ್ರಾಸ್​ ಸತ್ಸಂಗದಲ್ಲಿ ಕಾಲ್ತುಳಿತಕ್ಕೆ ಮೃತಪಟ್ಟವರ ಸಂಖ್ಯೆ 107 ಕ್ಕೆ ಏರಿಕೆ

Hathras Stampede : ಹತ್ರಾಸ್ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆಯುತ್ತಿದ್ದ ಸತ್ಸಂಗದಲ್ಲಿ ಕಾಲ್ತುಳಿತ ಸಂಭವಿಸಿದೆ ಎಂದು ಮಾಹಿತಿ ನೀಡಿದ್ದಾರೆ. ‘ಸಕರ್ ವಿಶ್ವ ಹರಿ’ ಅಥವಾ ‘ಭೋಲೆ ಬಾಬಾ’ ಎಂದೂ ಕರೆಯಲ್ಪಡುವ ಸ್ವಯಂ ಘೋಷಿತ ದೇವಮಾನವ ನಾರಾಯಣ್ ಸಕರ್ ಹರಿ ಅವರಿಗೆ ಸೇರಿದ “ಮಾನವ್ ಮಂಗಲ್ ಮಿಲನ್ ಸದ್ಭಾವನಾ ಸಮಾಗಮ್’ ಸಮಿತಿ ಸತ್ಸಂಗ ಆಯೋಜಿಸಿತ್ತು.

VISTARANEWS.COM


on

Hathras Stampede
Koo

ನವದೆಹಲಿ: ಉತ್ತರ ಪ್ರದೇಶದ ಹತ್ರಾಸ್​​ನಲ್ಲಿ ಮಂಗಳವಾರ ಸತ್ಸಂಗ ನಡೆಯುತ್ತಿದ್ದ ವೇಳೆ ಉಂಟಾದ ಕಾಲ್ತುಳಿತಕ್ಕೆ 107 ಜನರು (Hathras Stampede) ಮೃತಪಟ್ಟಿದ್ದಾರೆ. ಮೃತರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳು. ಮೃತರನ್ನು ಹತ್ರಾಸ್ ಮತ್ತು ನೆರೆಯ ಇಟಾ ಜಿಲ್ಲೆಯ ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ. ಅಲಿಗಢದ ಕಮಿಷನರ್ ಚೈತ್ರಾ ವಿ ಅವರು 107 ಜನರು ಸಾವನ್ನಪ್ಪಿದ್ದಾರೆ ಎಂದು ದೃಢಪಡಿಸಿದ್ದಾರೆ. ಅದರಲ್ಲಿ 27 ಜನರು ಇಟಾ ಜಿಲ್ಲೆಯವರು. ಕಾಲ್ತುಳಿತಕ್ಕೆ ಸುಮಾರು 18 ಜನರು ಗಾಯಗೊಂಡಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಹಿರಿಯ ಪೊಲೀಸ್ ಅಧಿಕಾರಿ ರಾಜೇಶ್ ಕುಮಾರ್ ಸಿಂಗ್, ಹತ್ರಾಸ್ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆಯುತ್ತಿದ್ದ ಸತ್ಸಂಗದಲ್ಲಿ ಕಾಲ್ತುಳಿತ ಸಂಭವಿಸಿದೆ ಎಂದು ಮಾಹಿತಿ ನೀಡಿದ್ದಾರೆ. ‘ಸಕರ್ ವಿಶ್ವ ಹರಿ’ ಅಥವಾ ‘ಭೋಲೆ ಬಾಬಾ’ ಎಂದೂ ಕರೆಯಲ್ಪಡುವ ಸ್ವಯಂ ಘೋಷಿತ ದೇವಮಾನವ ನಾರಾಯಣ್ ಸಕರ್ ಹರಿ ಅವರಿಗೆ ಸೇರಿದ “ಮಾನವ್ ಮಂಗಲ್ ಮಿಲನ್ ಸದ್ಭಾವನಾ ಸಮಾಗಮ್’ ಸಮಿತಿ ಸತ್ಸಂಗ ಆಯೋಜಿಸಿತ್ತು.

ನಜ್ಜುಗುಜ್ಜಾದ ಜನ


ಈ ಭಯಾನಕ ಘಟನೆಯ ಪ್ರತ್ಯಕ್ಷದರ್ಶಿಯೊಬ್ಬರು “ನಾವು ಸತ್ಸಂಗಕ್ಕಾಗಿ ಬಂದಿದ್ದೆವು. ದೊಡ್ಡ ಜನಸಮೂಹವಿತ್ತು. ಸತ್ಸಂಗ ಮುಗಿದ ನಂತರ ನಾವು ಹೊರಡಲು ಪ್ರಾರಂಭಿಸಿದೆವು. ನಿರ್ಗಮನ ದ್ವಾರ ಕಿರಿದಾಗಿತ್ತು. ನಾವು ಮೈದಾನದ ಕಡೆಗೆ ನಿರ್ಗಮಿಸಲು ಪ್ರಯತ್ನಿಸಿದಾಗ, ಇದ್ದಕ್ಕಿದ್ದಂತೆ, ಗದ್ದಲ ಪ್ರಾರಂಭವಾಯಿತು ಎಂದು ಹೇಳಿದ್ದಾರೆ.

ನಿಧನಕ್ಕೆ ರಾಷ್ಟ್ರೀಯ ನಾಯಕರ ಸಂತಾಪ

ಮೃತರ ಕುಟುಂಬಗಳಿಗೆ ಸಂತಾಪ ವ್ಯಕ್ತಪಡಿಸಿದ ಅಧ್ಯಕ್ಷ ದ್ರೌಪದಿ ಮುರ್ಮು, ಈ ಘಟನೆ ಹೃದಯ ದುಃಖಕರ ಎಂದು ಹೇಳಿದ್ದಾರೆ. “ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಅನೇಕ ಭಕ್ತರು ಸಾವನ್ನಪ್ಪಿದ ಸುದ್ದಿ ಆಘಾತ ತಂದಿದೆ. ಕುಟುಂಬ ಸದಸ್ಯರನ್ನು ಕಳೆದುಕೊಂಡವರಿಗೆ ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ ಮತ್ತು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಅವರು ತಮ್ಮ ಅಧಿಕೃತ ಎಕ್ಸ್ ಹ್ಯಾಂಡಲ್​​ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: Pune Porsche Crash : ಪೋರ್ಶೆ ಕಾರು ಗುದ್ದಿಸಿ ಇಬ್ಬರ ಸಾವಿಗೆ ಕಾರಣನಾದ ಬಾಲಕನ ಅಪ್ಪ, ಅಜ್ಜನಿಗೆ ಜಾಮೀನು

ಲೋಕಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, “ಹತ್ರಾಸ್​​ ದುರಂತದಲ್ಲಿ ಪ್ರಾಣ ಕಳೆದುಕೊಂಡವರಿಗೆ ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಗಾಯಗೊಂಡವರು ಶೀಘ್ರದಲ್ಲೇ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ರಾಜ್ಯ ಸರ್ಕಾರ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ. ಕೇಂದ್ರ ಸರ್ಕಾರ ಸಂಪರ್ಕದಲ್ಲಿದೆ. ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವು ನೀಡಲಾಗುವುದು” ಎಂದು ಹೇಳಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಎಕ್ಸ್​ ಪೋಸ್ಟ್​​ ಮಾಡಿ, ದುರಂತದಿಂದ ನನಗೆ ತೀವ್ರ ದುಃಖವಾಗಿದೆ. ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ನನ್ನ ಸಂತಾಪ ಸೂಚಿಸುತ್ತೇನೆ. ಈ ನೋವನ್ನು ಭರಿಸುವ ಶಕ್ತಿಯಷನ್ನು ದೇವರು ಅವರಿಗೆ ನೀಡಲಿ. ಸ್ಥಳೀಯ ಆಡಳಿತವು ಪರಿಹಾರ ಕಾರ್ಯದಲ್ಲಿ ತೊಡಗಿದೆ ಎಂದು ಹೇಳಿದ್ದಾರೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿನಾಥ, ತಕ್ಷಣವೇ ಸ್ಥಳಕ್ಕೆ ತಲುಪಿ ಪರಿಹಾರ ಕಾರ್ಯಗಳನ್ನು ಚುರುಕುಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ ಮುಖ್ಯಮಂತ್ರಿಗಳು, ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿ ಆದಿತ್ಯನಾಥ್ ಅವರು ಪೊಲೀಸ್ ಮಹಾನಿರ್ದೇಶಕರು, ಇಬ್ಬರು ಹಿರಿಯ ಸಚಿವರು ಮತ್ತು ಮುಖ್ಯ ಕಾರ್ಯದರ್ಶಿಯನ್ನು ಸ್ಥಳಕ್ಕೆ ಕಳುಹಿಸಿದ್ದಾರೆ.

ಇದೊಂದು ಅತ್ಯಂತ ನೋವಿನ ಘಟನೆ ಎಂದು ಹೇಳಿದ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ” ದುಃಖಿತ ಕುಟುಂಬಗಳಿಗೆ ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ/ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಆಶಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

Continue Reading

ದೇಶ

Narendra Modi: ನನ್ನ ದನಿಯೂ ಗಟ್ಟಿಯಿದೆ, ಸಂಕಲ್ಪವೂ; ಈ ಮೋದಿ ಯಾರಿಗೂ ಹೆದರಲ್ಲ, ಬಗ್ಗಲ್ಲ: ಸಂಸತ್‌ನಲ್ಲಿ ಪ್ರಧಾನಿ ಅಬ್ಬರ

Narendra Modi: ಮುಂದಿನ 5 ವರ್ಷಗಳಲ್ಲಿ ನಾವು ನಮ್ಮ ಹಿಂದಿನ ಎಲ್ಲ ರೆಕಾರ್ಡ್‌ಗಳನ್ನು ಮುರಿಯುತ್ತೇವೆ. ಇನ್ನೂ ಮೂರು ಕೋಟಿ ಬಡವರಿಗೆ ಸುಸಜ್ಜಿತವಾದ ಮನೆಗಳನ್ನು ನಿರ್ಮಿಸಿಕೊಡುತ್ತೇವೆ. ದೇಶದ ಬಡವರು, ರೈತರು, ಹೆಣ್ಣುಮಕ್ಕಳ ಸಬಲೀಕರಣಕ್ಕಾಗಿ ದುಡಿಯುತ್ತೇವೆ. ವಿಕಸಿತ ಭಾರತಕ್ಕೆ ಭದ್ರ ಬುನಾದಿಯನ್ನು ಹಾಕಿಕೊಡುತ್ತೇವೆ. ಸಬ್‌ ಕಾ ಸಾಥ್‌ ಸಬ್‌ ಕಾ ವಿಕಾಸ್ ತತ್ವದಲ್ಲಿ ಆಡಳಿತ ನಡೆಸುತ್ತೇವೆ ಎಂದು ನರೇಂದ್ರ ಮೋದಿ ಹೇಳಿದರು.

VISTARANEWS.COM


on

Narendra Modi
Koo

ನವದೆಹಲಿ: ಜವಾಹರ ಲಾಲ್‌ ನೆಹರು ಅವರಿಂದ ಹಿಡಿದು ಸೀತಾರಾಮ್‌ ಕೇಸರಿ ಅವರತನಕ ಉದಾಹರಣೆ, ನಿದರ್ಶನ, ಕತೆಗಳು, ಉಪಕತೆಗಳ ಮೂಲಕ ನರೇಂದ್ರ ಮೋದಿ (Narendra Modi) ಅವರು ಸಂಸತ್‌ನಲ್ಲಿ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದರು. ರಾಷ್ಟ್ರಪತಿಯವರ ಭಾಷಣದ ಮೇಲಿನ ವಂದನಾ ನಿರ್ಣಯದ ಕುರಿತು ಮಾತನಾಡಿದ ನರೇಂದ್ರ ಮೋದಿ, ರಾಹುಲ್‌ ಗಾಂಧಿ (Rahul Gandhi), ಕಾಂಗ್ರೆಸ್‌ ವಿರುದ್ಧ ಹರಿಹಾಯ್ದರು. ಇನ್ನು ಭಾಷಣದ ಕೊನೆಯಲ್ಲಿ, “ನನ್ನ ದನಿ ಇನ್ನೂ ಗಟ್ಟಿ ಇದೆ. ಸಂಕಲ್ಪವೂ ಅಷ್ಟೇ ದೃಢವಾಗಿದೆ. ಈ ಮೋದಿ ಯಾರಿಗೂ ಹೆದರುವುದಿಲ್ಲ” ಎಂದು ಅಬ್ಬರಿಸಿದರು.

“ನಾನು ಕಾಂಗ್ರೆಸ್‌ನವರಿಗೆ ಜಾಣತನ ಕೊಡಲಿ ಎಂಬುದಾಗಿ ದೇವರಲ್ಲಿ ಪ್ರಾರ್ಥಿಸುತ್ತೇನೆ. ಬಾಲಬುದ್ಧಿಯ ನಾಯಕನಿಗೂ ಬುದ್ಧಿ ಕೊಡಲಿ. ರಾಷ್ಟ್ರಪತಿಯವರ ಭಾಷಣಕ್ಕೆ ನಾನು ಧನ್ಯವಾದ ತಿಳಿಸುತ್ತೇನೆ. ಹಾಗೆಯೇ, ಇಷ್ಟು ಹೊತ್ತು ನನಗೆ ಅವಕಾಶ ಮಾಡಿಕೊಟ್ಟಿದ್ದಕ್ಕಾಗಿಯೂ ಧನ್ಯವಾದ ತಿಳಿಸುತ್ತೇನೆ. ಯಾರು ಎಷ್ಟೇ ಗಲಾಟೆ ಮಾಡಿದರೂ ನನ್ನ ಧ್ವನಿಯನ್ನು, ಸತ್ಯದ ಧ್ವನಿಯನ್ನು ಅಡಗಿಸಲು ಆಗುವುದಿಲ್ಲ. ನಾನು ಇದುವರೆಗೆ ಸತ್ಯದ ಅನುಭವವನ್ನು ಅನುಭವಿಸಿದ್ದೇನೆ” ಎಂದು ಹೇಳಿದರು.

ನೀಟ್‌ ಅಕ್ರಮ ಕುರಿತು ಪ್ರಸ್ತಾಪ

ಪ್ರತಿಪಕ್ಷಗಳ ಆಗ್ರಹದ ಮಧ್ಯೆಯೇ ನರೇಂದ್ರ ಮೋದಿ ಅವರು ನೀಟ್‌ ಅಕ್ರಮದ ಕುರಿತು ಮಾತನಾಡಿದರು. “ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಗಂಭೀರ ವಿಷಯವಾಗಿದೆ. ಇದು ನಮಗೂ ಆತಂಕ ತಂದಿದೆ. ಆದರೆ, ದೇಶದ ಯುವಕ-ಯುವತಿಯರಿಗೆ ನಮ್ಮ ಸರ್ಕಾರ ಒಂದು ಭರವಸೆ ನೀಡುತ್ತದೆ. ಯಾವುದೇ ಕಾರಣಕ್ಕೂ ನಿಮ್ಮ ಭವಿಷ್ಯಕ್ಕೆ ತೊಂದರೆಯಾಗಲು ನಾವು ಬಿಡುವುದಿಲ್ಲ. ನೀಟ್‌ ವಿಷಯದಲ್ಲಿ ಅಕ್ರಮ ಎಸಗಿದವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತಿದೆ. ಇದಕ್ಕಾಗಿ ಮುಂದಿನ ದಿನಗಳಲ್ಲೂ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ. ಈಗಾಗಲೇ ಹಲವು ಕ್ರಮ ತೆಗೆದುಕೊಳ್ಳಲಾಗಿದೆ. ಹಾಗಾಗಿ, ದೇಶದ ಯುವಕ-ಯುವತಿಯರು ಯೋಚಿಸಬೇಕಾದ ಅವಶ್ಯಕತೆ ಇಲ್ಲ” ಎಂದು ಹೇಳಿದರು.

ಲೋಕಸಭೆ ಚುನಾವಣೆ ಗೆಲುವಿನ ಕುರಿತು ಕೂಡ ನರೇಂದ್ರ ಮೋದಿ ಮಾತನಾಡಿದರು. “ದೇಶದಲ್ಲಿ ಮೂರನೇ ಬಾರಿಗೆ ಆಡಳಿತಕ್ಕೆ ಬರುವುದು ಸುಲಭವಲ್ಲ. ಜನರ ಪರವಾದ ಆಡಳಿತವನ್ನೇ ತಪಸ್ಸಿನ ರೀತಿ ಮಾಡಿದ ಕಾರಣದಿಂದಾಗಿ ನಮಗೆ ದೇಶದ ಜನ ಮೂರನೇ ಬಾರಿಗೆ ಅವಕಾಶ ನೀಡಿದ್ದಾರೆ. ಕಳೆದ 60 ವರ್ಷಗಳಲ್ಲಿಯೇ ದೇಶದ ಜನರು ಯಾರನ್ನೂ ಮೂರನೇ ಬಾರಿಗೆ ಆಯ್ಕೆ ಮಾಡಿಲ್ಲ. ನಮ್ಮ ಮೇಲಿನ ಭರವಸೆ, ನಂಬಿಕೆಯಿಂದಲೇ ಮೂರನೇ ಬಾರಿಗೆ ಗೆಲ್ಲಿಸಿದ್ದಾರೆ” ಎಂದು ಹೇಳಿದರು.

ಇದನ್ನೂ ಓದಿ: Narendra Modi: ಸಂಸತ್ತಲ್ಲಿ ಹಿಂದುಗಳಿಗೆ ಅವಮಾನ, ದೇವರಿಗೆ ಅಪಮಾನ, ಇದನ್ನು ಹಿಂದುಗಳು ಮರೆಯಲಾರರು ಎಂದ ಮೋದಿ

Continue Reading

ಪ್ರಮುಖ ಸುದ್ದಿ

Pune Porsche Crash : ಪೋರ್ಶೆ ಕಾರು ಗುದ್ದಿಸಿ ಇಬ್ಬರ ಸಾವಿಗೆ ಕಾರಣನಾದ ಬಾಲಕನ ಅಪ್ಪ, ಅಜ್ಜನಿಗೆ ಜಾಮೀನು

Pune Porsche Crash : ಕುಡಿದ ಮತ್ತಿನಲ್ಲಿ 17 ವರ್ಷದ ಬಾಲಕ ಚಲಾಯಿಸುತ್ತಿದ್ದ ಪೋರ್ಷೆ ಕಾರು ಬೈಕ್ ಹೋಗುದ್ದಿ ಇಬ್ಬರು ಸಾಫ್ಟ್ ವೇರ್ ಎಂಜಿನಿಯರ್ ಗಳಿಗೆ ಡಿಕ್ಕಿ ಹೊಡೆದಿತ್ತು. ಈ ಪ್ರಕರಣದಲ್ಲಿ ಅಪಹರಣ ಮತ್ತು ಅಕ್ರಮ ಬಂಧನ ಪ್ರಕರಣದಲ್ಲಿ ತನ್ನ ಕಕ್ಷಿದಾರರಿಗೆ ನ್ಯಾಯಾಲಯ ಜಾಮೀನು ನೀಡಿದೆ ಎಂದು ಪ್ರತಿವಾದಿ ವಕೀಲ ಪ್ರಶಾಂತ್ ಪಾಟೀಲ್ ಮಾಹಿತಿ ನೀಡಿದರು.

VISTARANEWS.COM


on

Pune Porsche Crash
Koo

ಪುಣೆ: ಐಷಾರಾಮಿ ಪೋರ್ಷೆ ಕಾರು ಅಪಘಾತದ (Pune Porsche Crash) ಆರೋಪಿಯಾಗಿರುವ ಬಾಲಕನ ತಂದೆ ಮತ್ತು ಅಜ್ಜನಿಗೆ ಪುಣೆ ನ್ಯಾಯಾಲಯ ಮಂಗಳವಾರ ಜಾಮೀನು ನೀಡಿದೆ. ಅವರಿಬ್ಬರನ್ನು ಕುಟುಂಬದ ಚಾಲಕನನ್ನು ಅಪಹರಿಸಿದ ಪ್ರಕರಣದಲ್ಲಿ ಬಂಧಿಸಲಾಗಿತ್ತು. ಮೇ ಅಂತ್ಯಕ್ಕೆ 17 ವರ್ಷದ ಬಾಲಕನ ತಂದೆ, ಮಹಾರಾಷ್ಟ್ರದ ಬಿಲ್ಡರ್ ವಿಶಾಲ್ ಅಗರ್ವಾಲ್ ಮತ್ತು ಆತನ ಅಜ್ಜನಿಗೆ ಮ್ಯಾಜಿಸ್ಟ್ರೇಟ್ ಪ್ರಥಮ ದರ್ಜೆ ನ್ಯಾಯಾಲಯ ಜಾಮೀನು ನೀಡಿದೆ.

ಪೊಲೀಸರ ಪ್ರಕಾರ, ಬಾಲಕನ ತಂದೆ ಮತ್ತು ಅಜ್ಜ ಮೇ 19 ರಂದು ರಾತ್ರಿ 11 ಗಂಟೆಗೆ ಪೊಲೀಸ್ ಠಾಣೆಯಿಂದ ಹೊರಟ ನಂತರ ತಮ್ಮ ಕುಟುಂಬ ಕಾರು ಚಾಲಕನನ್ನು ಅಪಹರಿಸಿದ್ದರು. ಅವರನ್ನು ತಮ್ಮ ಬಂಗಲೆಯಲ್ಲಿ ಇಟ್ಟುಕೊಂಡು ಅಪಘಾತ ಸಂಭವಿಸಿದಾಗ ನಾನೇ ಕಾರು ಓಡಿಸುತ್ತಿದ್ದೆ ಎಂದು ಒಪ್ಪಿಕೊಳ್ಳುವಂತೆ ಬೆದರಿಕೆ ಒಡ್ಡಿದ್ದರು. ಈ ಪ್ರಕರಣದಲ್ಲಿ ಅವರನ್ನು ಬಂಧಿಸಲಾಗಿತ್ತು.

ಕುಡಿದ ಮತ್ತಿನಲ್ಲಿ 17 ವರ್ಷದ ಬಾಲಕ ಚಲಾಯಿಸುತ್ತಿದ್ದ ಪೋರ್ಷೆ ಕಾರು ಬೈಕ್ ಹೋಗುದ್ದಿ ಇಬ್ಬರು ಸಾಫ್ಟ್ ವೇರ್ ಎಂಜಿನಿಯರ್ ಗಳಿಗೆ ಡಿಕ್ಕಿ ಹೊಡೆದಿತ್ತು. ಈ ಪ್ರಕರಣದಲ್ಲಿ ಅಪಹರಣ ಮತ್ತು ಅಕ್ರಮ ಬಂಧನ ಪ್ರಕರಣದಲ್ಲಿ ತನ್ನ ಕಕ್ಷಿದಾರರಿಗೆ ನ್ಯಾಯಾಲಯ ಜಾಮೀನು ನೀಡಿದೆ ಎಂದು ಪ್ರತಿವಾದಿ ವಕೀಲ ಪ್ರಶಾಂತ್ ಪಾಟೀಲ್ ಮಾಹಿತಿ ನೀಡಿದರು.

ಇದನ್ನೂ ಓದಿ: NEET PG exam : ಮೋಸ ತಡೆಯಲು ಕ್ರಮ; ನೀಟ್ ಪರೀಕ್ಷೆ ಆರಂಭಕ್ಕೆ ಕೆಲವೇ ಗಂಟೆಗಳ ಮೊದಲು ಪ್ರಶ್ನೆ ಪತ್ರಿಕೆ ತಯಾರಿ!

ನನ್ನ ಕಕ್ಷಿದಾರರು ತನಿಖಾ ಸಂಸ್ಥೆಯೊಂದಿಗೆ ಸಹಕರಿಸುತ್ತಾರೆ. ನ್ಯಾಯಾಲಯದ ಕಠಿಣ ಷರತ್ತುಗಳಿಗೆ ಬದ್ಧರಾಗಿರುತ್ತಾರೆ ಎಂದು ಪಾಟೀಲ್ ಹೇಳಿದ್ದಾರೆ. ಬಾಲಾಪರಾಧಿ ನ್ಯಾಯ ಕಾಯ್ದೆಗೆ ಸಂಬಂಧಿಸಿದ ಪ್ರಕರಣದಲ್ಲಿ ಮೇ 21 ರಂದು ಬಂಧಿಸಲ್ಪಟ್ಟ ಅಗರ್ವಾಲ್​ಗೆ ಕಳೆದ ತಿಂಗಳು ನ್ಯಾಯಾಲಯ ಜಾಮೀನು ನೀಡಿತ್ತು. ಪೋಷಕರಾಗಿ ತನ್ನ ಕರ್ತವ್ಯವನ್ನು ನಿರ್ವಹಿಸಲು ವಿಫಲವಾದ ಕಾರಣ ಬಿಲ್ಡರ್ ವಿರುದ್ಧ ಮೋಟಾರು ವಾಹನ ಕಾಯ್ದೆ (ಎಂವಿಎ) ಮತ್ತು ಬಾಲನ್ಯಾಯ ಕಾಯ್ದೆ (ಜೆಜೆಎ) ಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಜೂನ್ 25 ರಂದು, ಬಾಂಬೆ ಹೈಕೋರ್ಟ್ ಬಾಲಕನನ್ನು ವೀಕ್ಷಣಾ ಗೃಹದಿಂದ ಬಿಡುಗಡೆ ಮಾಡುವಂತೆ ನಿರ್ದೇಶನ ನೀಡಿತು. ಅವನ ಬಂಧನದ ಬಗ್ಗೆ ಬಾಲನ್ಯಾಯ ಮಂಡಳಿಯ (ಜೆಜೆಬಿ) ಆದೇಶವು ಕಾನೂನುಬಾಹಿರವಾಗಿದೆ ಎಂದು ಹೇಳಿತ್ತು.

Continue Reading
Advertisement
Krishna River Tragedy
ಕರ್ನಾಟಕ8 mins ago

Krishna River Tragedy: ಕೃಷ್ಣಾ ನದಿಯಲ್ಲಿ ತೆಪ್ಪ ಮುಗುಚಿ ಆರು ಮಂದಿ ನೀರುಪಾಲು, ಒಬ್ಬರ ಮೃತದೇಹ ಪತ್ತೆ

Stampedes in India
ದೇಶ16 mins ago

Stampedes in India: ದೇಶದಲ್ಲಿ ಈ ಹಿಂದೆಯೂ ನಡೆದಿವೆ ಭಾರೀ ಕಾಲ್ತುಳಿತ ದುರಂತ; ಇಲ್ಲಿದೆ ಲಿಸ್ಟ್‌

Agniveer
ರಾಜಕೀಯ24 mins ago

Agniveer: ಹುತಾತ್ಮ ʼಅಗ್ನಿವೀರʼನ ಕುಟುಂಬಕ್ಕೆ 1.08 ಕೋಟಿ ರೂ. ಪರಿಹಾರ; ರಾಹುಲ್‌ ಗಾಂಧಿ ಆರೋಪ ಠುಸ್‌!

Hathras Stampede
ಪ್ರಮುಖ ಸುದ್ದಿ27 mins ago

Hathras Stampede : ಹತ್ರಾಸ್​ ಸತ್ಸಂಗದಲ್ಲಿ ಕಾಲ್ತುಳಿತಕ್ಕೆ ಮೃತಪಟ್ಟವರ ಸಂಖ್ಯೆ 107 ಕ್ಕೆ ಏರಿಕೆ

KMF Milk Production
ಕರ್ನಾಟಕ40 mins ago

KMF Milk Production: ದಿನಕ್ಕೆ 1 ಕೋಟಿ ಲೀಟರ್ ಹಾಲು ಉತ್ಪಾದನೆ; ಕೆಎಂಎಫ್ ಸಾಧನೆ ಬಗ್ಗೆ ಸಿಎಂ ಮೆಚ್ಚುಗೆ‌

Narendra Modi
ದೇಶ58 mins ago

Narendra Modi: ನನ್ನ ದನಿಯೂ ಗಟ್ಟಿಯಿದೆ, ಸಂಕಲ್ಪವೂ; ಈ ಮೋದಿ ಯಾರಿಗೂ ಹೆದರಲ್ಲ, ಬಗ್ಗಲ್ಲ: ಸಂಸತ್‌ನಲ್ಲಿ ಪ್ರಧಾನಿ ಅಬ್ಬರ

Printed Handbags Fashion
ಫ್ಯಾಷನ್1 hour ago

Printed Handbags Fashion: ಉದ್ಯೋಗಸ್ಥ ಮಹಿಳೆಯರನ್ನು ಸೆಳೆಯುತ್ತಿರುವ ಪ್ರಿಂಟೆಡ್‌ ಹ್ಯಾಂಡ್‌ ಬ್ಯಾಗ್ಸ್

Bomb Blast
ಕರ್ನಾಟಕ1 hour ago

Bomb Blast: ಜೋಯಿಡಾದಲ್ಲಿ ಪತ್ರಕರ್ತರು ಸಾಗುತ್ತಿದ್ದ ಕಾರಿನಡಿ ನಾಡ ಬಾಂಬ್ ಸ್ಫೋಟ

Pune Porsche Crash
ಪ್ರಮುಖ ಸುದ್ದಿ1 hour ago

Pune Porsche Crash : ಪೋರ್ಶೆ ಕಾರು ಗುದ್ದಿಸಿ ಇಬ್ಬರ ಸಾವಿಗೆ ಕಾರಣನಾದ ಬಾಲಕನ ಅಪ್ಪ, ಅಜ್ಜನಿಗೆ ಜಾಮೀನು

K Annamalai
ರಾಜಕೀಯ1 hour ago

K Annamalai: ಕೆ ಅಣ್ಣಾಮಲೈ ಯುಕೆ ಫೆಲೋಶಿಪ್‌ಗೆ ಆಯ್ಕೆ; ಬಿಜೆಪಿ ರಾಜ್ಯಾಧ್ಯಕ್ಷತೆಗೆ ರಾಜೀನಾಮೆ?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 hours ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ1 day ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ2 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು2 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ3 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ3 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ4 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

ಟ್ರೆಂಡಿಂಗ್‌