Reeshma Nanaiah as the heroine for Dhruva Sarja For KD Film Reeshma Nanaiah: ಧ್ರುವ ಸರ್ಜಾಗೆ ನಾಯಕಿಯಾದ ರೀಷ್ಮಾ ನಾಣಯ್ಯ: ರಗಡ್‌ ಲುಕ್‌ನಲ್ಲಿ ಮಿಂಚಿದ ನಟಿ - Vistara News

South Cinema

Reeshma Nanaiah: ಧ್ರುವ ಸರ್ಜಾಗೆ ನಾಯಕಿಯಾದ ರೀಷ್ಮಾ ನಾಣಯ್ಯ: ರಗಡ್‌ ಲುಕ್‌ನಲ್ಲಿ ಮಿಂಚಿದ ನಟಿ

ಕೆ.ಡಿ ಸಿನಿಮಾದಲ್ಲಿ ರೀಷ್ಮಾ(Reeshma Nanaiah) ಅವರು ಮಚ್‌ಲಕ್ಷ್ಮೀ (Machhlakshmi) ಪಾತ್ರದಲ್ಲಿ ನಟಿಸುತ್ತಿದ್ದಾರೆ. ನಟಿಯ ರಗಡ್‌ ಲುಕ್‌ ಸಿನಿ ತಂಡ ರಿವೀಲ್‌ ಮಾಡಿದೆ.

VISTARANEWS.COM


on

Reeshma Nanaiah as the heroine for Dhruva Sarja For KD Film
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸಾಕಷ್ಟು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ನಟಿ ರೀಷ್ಮಾ ನಾಣಯ್ಯ (Reeshma Nanaiah) ಅವರು ಪ್ರೇಮ್‌ ನಿರ್ದೇಶನದ ʻಏಕ್​ ಲವ್ ಯಾʼ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಪದಾರ್ಪಣೆ ಮಾಡಿದರು. ಇದೀಗ ಪ್ರೇಮ್ ಮತ್ತು ಧ್ರುವ ಸರ್ಜಾ ಕಾಂಬಿನೇಷನ್ ನ ‘ಕೆಡಿ’ ಸಿನಿಮಾದ (‘KD’ ) ನಾಯಕಿಯಾಗಿ ರೀಷ್ಮಾ ನಾಣಯ್ಯ ಮತ್ತೆ ತೆರೆ ಮೆಲೆ ಮಿಂಚಲಿದ್ದಾರೆ. ಈ ಚಿತ್ರಕ್ಕೆ ನಾಯಕಿ ಯಾರೆಂಬುದನ್ನು ಏಪ್ರಿಲ್ 28ಕ್ಕೆ ಘೋಷಿಸುವುದಾಗಿ ನಿರ್ದೇಶಕ ಪ್ರೇಮ್ ತಿಳಿಸಿದ್ದರು. ಕೆ.ಡಿ ಸಿನಿಮಾದಲ್ಲಿ ರೀಷ್ಮಾ ಅವರು ಮಚ್‌ಲಕ್ಷ್ಮೀ (Machhlakshmi) ಪಾತ್ರದಲ್ಲಿ ನಟಿಸುತ್ತಿದ್ದಾರೆ. ನಟಿಯ ರಗಡ್‌ ಲುಕ್‌ ಸಿನಿ ತಂಡ ರಿವೀಲ್‌ ಮಾಡಿದೆ.

ಚಂದನವನದಲ್ಲಿ ಮಿಂಚುತ್ತಿರುವ ರೀಷ್ಮಾ

ರಿಯಲ್‌ ಸ್ಟಾರ್‌ ಉಪೇಂದ್ರ ಅವರ ʻಯುಐʼ ಸಿನಿಮಾದಲ್ಲಿ ನಟಿ ರೀಷ್ಮಾ ನಾಣಯ್ಯ (Reeshma Nanaiah) ನಟಿಸುತ್ತಿದ್ದಾರೆ ಎನ್ನಲಾಗುತ್ತಿದೆ. ಪ್ರೇಮ್ ನಿರ್ದೇಶನದ ‘ಏಕ್‌ ಲವ್ ಯಾ’ ಚಿತ್ರದಲ್ಲಿ ರೀಷ್ಮಾ ನಟಿಸಿದ್ದರು. ಮಡಿಕೇರಿ ಮೂಲದ ರೀಷ್ಮಾ ಬೆಂಗಳೂರಿನಲ್ಲಿ ಪದವಿ ಮುಗಿಸಿದ್ದಾರೆ. ಮೊದಲ ಚಿತ್ರದಲ್ಲೇ ಆಕೆಯ ನಟನೆ ಗಮನ ಸೆಳೆದಿತ್ತು. ಹಾಗಾಗಿ ‘KD’ ಚಿತ್ರಕ್ಕೂ ಆಕೆನೇ ನಾಯಕಿಯನ್ನಾಗಿ ಆಯ್ಕೆ ಮಾಡಿದ್ದಾರೆ. ಇನ್ನೊಂದೆಡೆ ರೀಷ್ಮಾ ಅವರ, ʼವಾಮನʼ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ. ʼಶೋಕ್ದಾರ್ʼ ಖ್ಯಾತಿಯ ಧನ್ವೀರ್‌ ಗೌಡ ನಾಯಕನಾಗಿ ನಟಿಸುತ್ತಿದ್ದು, ವಾಮನನಿಗೆ ನಟಿ ರೀಷ್ಮಾ ನಾಯಕಿಯಾಗಿ ಮಿಂಚಲಿದ್ದಾರೆ. ಗೋಲ್ಡ್‌ನ್‌ ಸ್ಟಾರ್‌ ಗಣೇಶ್‌ ಅಭಿನಯಿಸುತ್ತಿರುವ ಬಾನದಾರಿಯಲ್ಲಿ ಕೂಡ ರೀಷ್ಮಾ ನಾಣಯ್ಯ. ಅಭಿನಯಿಸುತ್ತಿದ್ದಾರೆ. ವನ್ಯಜೀವಿ ಛಾಯಾಗ್ರಾಹಕರಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರಕ್ಕಾಗಿ ಕೇವಲ 23 ದಿನಗಳಲ್ಲಿ 18 ಕೆಜಿ ತೂಕ ಇಳಿಸಿ ಧ್ರುವ ಸರ್ಜಾ ನಟಿಸಿದ್ದಾರೆ.

ಮಚ್‌ಲಕ್ಷ್ಮೀ ಅವತಾರದಲ್ಲಿ ರೀಷ್ಮಾ ನಾಣಯ್ಯ

ಇದನ್ನೂ ಓದಿ: Actress Ramya: ಮೋಹಕ ತಾರೆ ರಮ್ಯಾ ಕನ್ನಡ ಸಿನಿಮಾ ಪಯಣಕ್ಕೆ ಈಗ 20 ವರ್ಷ

ʻಕೆಡಿ’ ಸಿನಿಮಾದಲ್ಲಿ ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಸತ್ಯವತಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದಲ್ಲಿ ರವಿಚಂದ್ರನ್ ಮತ್ತು ಸಂಜಯ್ ದತ್ ಸಹ ನಟಿಸಿದ್ದಾರೆ. ಈ ಚಿತ್ರದ ಕಥೆ 1970ರ ದಶಕದಲ್ಲಿ ಸಾಗಲಿದೆ ಎಂದು ಹೇಳಲಾಗುತ್ತಿದೆ. ಟೈಟಲ್‌ ಟೀಸರ್‌ನಲ್ಲಿ ಧ್ರುವ ಸರ್ಜಾ ಮಾಸ್‌ ಆಗಿ ಕಾಣಿಸಿಕೊಂಡಿದ್ದಾರೆ. ‘ಕೆವಿಎನ್​ ಪ್ರೊಡಕ್ಷನ್ಸ್’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ. ಈ ಚಿತ್ರ ಕನ್ನಡ ಮಾತ್ರವಲ್ಲದೆ ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂನಲ್ಲಿ ಮೂಡಿ ಬರುತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Kiccha Sudeep: ಸಂದೇಶ್‌ ಪ್ರೊಡಕ್ಷನ್ಸ್‌ ಜತೆ ಕೈ ಜೋಡಿಸಿದ ಕಿಚ್ಚ ಸುದೀಪ್

Kiccha Sudeep: ಸಂದೇಶ್‌ ನಾಗರಾಜ್‌ ಅರ್ಪಿಸುವ ಸಂದೇಶ್‌ ಪ್ರೊಡಕ್ಷನ್‌ ಬ್ಯಾನರ್‌ನಲ್ಲಿ ಎನ್‌ ಸಂದೇಶ್‌ ನಿರ್ಮಾಣದಲ್ಲಿ ಕಿಚ್ಚ ಸುದೀಪ್‌ ಸಿನಿಮಾ ಮೂಡಿಬರುವುದು ಅಧಿಕೃತವಾಗಿದೆ. ಇತ್ತೀಚೆಗಷ್ಟೇ ಕಿಚ್ಚ ಸುದೀಪ್‌ ಅವರ ಜತೆಗೆ ಸಂದೇಶ್‌ ನಾಗರಾಜ್ ಮತ್ತು ಎನ್ ಸಂದೇಶ್‌ ಅವರು ಒಟ್ಟಿಗೆ ಇರುವ ಫೋಟೋ ಸೋಷಿಯಲ್‌ ಮೀಡಿಯಾದಲ್ಲಿ ಸಂಚಲನ ಸೃಷ್ಟಿಸಿತ್ತು. ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆ ನಿರ್ಮಾಣದ ಚಿತ್ರದಲ್ಲಿ ಕಿಚ್ಚ ಸುದೀಪ್ ಅವರು ನಾಯಕರಾಗಿ ನಟಿಸುತ್ತಿರುವ ಚಿತ್ರ ಶುರುವಾಗಲಿದೆ ಎಂದೇ ಹೇಳಲಾಗಿತ್ತು.

VISTARANEWS.COM


on

Kichcha Sudeep joined hands with Sandesh
Koo

ಬೆಂಗಳೂರು: ಕನ್ನಡ ಚಿತ್ರೋದ್ಯಮಕ್ಕೆ ತಮ್ಮದೇ ಆದ ಕೊಡುಗೆ ನೀಡಿರುವ ಸಂದೇಶ್‌ (kiccha sudeep) ಪ್ರೊಡಕ್ಷನ್ಸ್‌ ಸಂಸ್ಥೆ, ಈಗಾಗಲೇ ಸದಭಿರುಚಿಯ ಚಿತ್ರಗಳ ಜತೆಗೆ ಬಿಗ್‌ ಬಜೆಟ್‌ ಸಿನಿಮಾಗಳನ್ನು ಕನ್ನಡಕ್ಕೆ ನೀಡಿದೆ. ಕೆಲ ತಿಂಗಳ ಹಿಂದಷ್ಟೇ ಬಿಡುಗಡೆಯಾಗಿದ್ದ “ಘೋಸ್ಟ್‌” ಚಿತ್ರವೂ ಅದರಲ್ಲೊಂದು. ಇದೀಗ ಇದೇ ಸಂದೇಶ್‌ ಪ್ರೊಡಕ್ಷನ್ಸ್‌ ಸಂಸ್ಥೆ, ಮತ್ತೊಂದು ಬಿಗ್‌ ಸಿನಿಮಾವನ್ನು ಕೈಗೆತ್ತಿಕೊಂಡಿದೆ. ಈ ಸಲ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್‌ ಜತೆಗೆ ಕೈ ಜೋಡಿಸಿದ್ದಾರೆ ನಿರ್ಮಾಪಕ ಎನ್‌. ಸಂದೇಶ್‌.

ಸಂದೇಶ್‌ ನಾಗರಾಜ್‌ ಅರ್ಪಿಸುವ ಸಂದೇಶ್‌ ಪ್ರೊಡಕ್ಷನ್‌ ಬ್ಯಾನರ್‌ನಲ್ಲಿ ಎನ್‌ ಸಂದೇಶ್‌ ನಿರ್ಮಾಣದಲ್ಲಿ ಕಿಚ್ಚ ಸುದೀಪ್‌ ಸಿನಿಮಾ ಮೂಡಿಬರುವುದು ಅಧಿಕೃತವಾಗಿದೆ. ಇತ್ತೀಚೆಗಷ್ಟೇ ಕಿಚ್ಚ ಸುದೀಪ್‌ ಅವರ ಜತೆಗೆ ಸಂದೇಶ್‌ ನಾಗರಾಜ್ ಮತ್ತು ಎನ್ ಸಂದೇಶ್‌ ಅವರು ಒಟ್ಟಿಗೆ ಇರುವ ಫೋಟೋ ಸೋಷಿಯಲ್‌ ಮೀಡಿಯಾದಲ್ಲಿ ಸಂಚಲನ ಸೃಷ್ಟಿಸಿತ್ತು. ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆ ನಿರ್ಮಾಣದ ಚಿತ್ರದಲ್ಲಿ ಕಿಚ್ಚ ಸುದೀಪ್ ಅವರು ನಾಯಕರಾಗಿ ನಟಿಸುತ್ತಿರುವ ಚಿತ್ರ ಶುರುವಾಗಲಿದೆ ಎಂದೇ ಹೇಳಲಾಗಿತ್ತು. ಇದೀಗ ಆ ಊಹೆ ನಿಜವಾಗಿದೆ. ಸಂದೇಶ್‌ ಪ್ರೊಡಕ್ಷನ್ಸ್‌ ನಿರ್ಮಾಣ ಸಂಸ್ಥೆಯ ಅಡಿಯಲ್ಲಿ ಕಿಚ್ಚ ಸುದೀಪ್‌ ಸಿನಿಮಾ ಸೆಟ್ಟೇರಲಿದೆ.

ಇದನ್ನೂ ಓದಿ: Kiccha Sudeep: ಚಾಮುಂಡಿ ಬೆಟ್ಟಕ್ಕೆ ಕಿಚ್ಚ ಸುದೀಪ್ ಭೇಟಿ; ಇವರನ್ನು ನೋಡಲು ಜನವೋ ಜನ!

ಹಾಗಾದರೆ ಯಾವಾಗ ಶುರು?

ಸದ್ಯಕ್ಕೆ ಕಿಚ್ಚ ಸುದೀಪ್‌ ಸಂದೇಶ್‌ ಪ್ರೊಡಕ್ಷನ್ಸ್‌ ಅಡಿಯಲ್ಲಿ ಸಿನಿಮಾ ಮಾಡಲು ಒಪ್ಪಿಕೊಂಡಿದ್ದಾರೆ. ಈ ಸಿನಿಮಾ ಯಾವಾಗ ಶುರು, ನಿರ್ದೇಶಕರು ಯಾರು ಎಂಬ ಬಗ್ಗೆ ಮುಂದಿನ ದಿನಗಳಲ್ಲಿ ನಿರ್ಮಾಪಕರು ಘೋಷಣೆ ಮಾಡಲಿದ್ದಾರೆ. ಈ ನಡುವೆ ಇದೇ ಸಂದೇಶ್‌ ಪ್ರೊಡಕ್ಷನ್ಸ್‌ ಬ್ಯಾನರ್‌ನಲ್ಲಿ ನಿರ್ಮಾಣವಾಗಿರುವ ಪ್ರಭುದೇವ ನಟನೆಯ “ವುಲ್ಫ್” ಸಿನಿಮಾ ರೆಡಿಯಾಗಿದೆ. ಸೃಜನ್‌ ಲೋಕೇಶ್‌ ಜತೆಗಿನ ಜಿಎಸ್‌ಟಿ ಚಿತ್ರದ ಶೂಟಿಂಗ್‌ ಕೆಲಸಗಳೂ ಮುಕ್ತಾಯವಾಗಿದ್ದು, ಬಿಡುಗಡೆಯ ಹೊಸ್ತಿಲಲ್ಲಿದೆ. ಇದರ ಜತೆಗೆ “ಘೋಸ್ಟ್‌ 2” ಅಥವಾ ಶಿವಣ್ಣನ ಜತೆಗಿನ “ದಳವಾಯಿ ಮುದ್ದಣ್ಣ”, “ಬೀರಬಲ್ 2” ಸಿನಿಮಾಗಳೂ ಸೆಟ್ಟೇರಲಿವೆ.

Continue Reading

ಸ್ಯಾಂಡಲ್ ವುಡ್

Actor Jaggesh: ಬಾಲ್ಯದಲ್ಲಿ ನನ್ನನ್ನು ಕರಿಯ ಎಂದು ಗೇಲಿ ಮಾಡುತ್ತಿದ್ದರು, ಆದರೆ ನಾನು…; ಜಗ್ಗೇಶ್‌ ಮನದ ಮಾತು

Actor Jaggesh: ಬಾಡಿ ಶೇಮಿಂಗ್ ಬಗ್ಗೆ ಜಗ್ಗೇಶ್‌ ಅವರು ಈ ಮೂಲಕ ಹೇಳಿಕೊಂಡಿದ್ದಾರೆ. ನಟ ಜಗ್ಗೇಶ್ ತಮ್ಮ ಕಪ್ಪು ಮೈಬಣ್ಣದ ಬಗ್ಗೆ ಸಾಕಷ್ಟು ಬಾರಿ ಮಾತನಾಡಿದ್ದಾರೆ. ಕೆಲವೊಮ್ಮೆ ಅದನ್ನೇ ತಮಾಷೆಯಾಗಿ ಹೇಳಿಕೊಂಡು ನಕ್ಕಿದ್ದಾರೆ, ನಗಿಸಿದ್ದಾರೆ. ನವರಸ ನಾಯಕ ಜಗ್ಗೇಶ್ ಅವರ ಹಿರಿಯ ಪುತ್ರ ಗುರುರಾಜ್ ಅವರ ಮಗ ಅರ್ಜುನ್. ಮೊಮ್ಮಗ ಎಂದರೆ ಜಗ್ಗೇಶ್ ಅವರಿಗೆ ಬಹಳ ಪ್ರೀತಿ.

VISTARANEWS.COM


on

Actor Jaggesh talk about body shame
Koo

ಬೆಂಗಳೂರು: ನವರಸ ನಾಯಕ ಜಗ್ಗೇಶ್‌ (Actor Jaggesh) ಅವರು ಸೋಷಿಯಲ್‌ ಮೀಡಿಯಾ ಮೂಲಕ ಆಗಾಗ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಲೇ ಇರುತ್ತಾರೆ. ನಟ ಜಗ್ಗೇಶ್ ತಮ್ಮ ಕಪ್ಪು ಮೈಬಣ್ಣದ ಬಗ್ಗೆ ಸಾಕಷ್ಟು ಬಾರಿ ಮಾತನಾಡಿದ್ದಾರೆ. ಇದೀಗ ಈ ಬಗ್ಗೆ ಒಂದು ಇಂಟ್ರೆಸ್ಟಿಂಗ್ ಸಂಗತಿ ಬಿಚ್ಚಿಟ್ಟಿದ್ದಾರೆ.

ಜಗ್ಗೇಶ್‌ ಪೋಸ್ಟ್‌ನಲ್ಲಿ ʻʻನನ್ನನ್ನು ಕಪ್ಪು ಎಂದು ಅಣಕ ಮಾಡುತ್ತಿದ್ದರು ಬಾಲ್ಯದಲ್ಲಿ ಎಲ್ಲರು..!!
ಆಗ ನನಗೆ ಬಹಳ ಸಿಟ್ಟು ಬರುತ್ತಿತ್ತು. ನಾನು ಯವ್ವನದಲ್ಲಿ ಬೆಳ್ಳಗಾಗಲು ಅನೇಕ ಕೆಟ್ಟ ಪ್ರಯತ್ನ ಮಾಡಿದ್ದುಂಟು!
ನಟನಾದ ಮೇಲೆ ನನ್ನ ಮ್ಯಾಕ್ಸ್‌ ಫ್ಯಾಕ್ಟರ್‌ (max factor) ಮೇಕಪ್‌, ಅಂಬರೀಶ್‌ ಅವರ, ರಜನಿಯವರ, ವಿಜಯಕಾಂತ್, ಶಿವಣ್ಣ ಕೂಡ ಬಳಸುತ್ತಿದ್ದರು. ನಾನು ಬಳಸುತ್ತಿದ್ದ ಪ್ಯಾನ್‌ ಕೇಕ್‌ ಇಂದು ವಿಶ್ವದಲ್ಲಿ ಮರೆಯಾದ ಪ್ಯಾನ್‌ ಕೇಕ್‌ . ಆದರೆ ನನ್ನ ಅದೃಷ್ಟ ಅದು ನನ್ನ ಬಳಿ ಇನ್ನೂ 50 ಸಿನಿಮಾಗೆ ಸಾಕಾಗುತ್ತದೆ ಅಪ್ಟಿದೆ. ಅನೇಕರು ಕೇಳಿದರು ಈ ಪ್ಯಾನ್‌ ಕೇಕ್‌ ಕೊಡಿ ಎಂದು (pancake). ನಾನು ನೀಡುವುದಿಲ್ಲಾ ಎಂದೆ. ಕಾರಣ ಅದರ ಮೇಲಿನ ವಿಪರೀತ ಪ್ರೀತಿ ಹಾಗೂ ಭಕ್ತಿ. ಅದು ಹಚ್ಚಿದರೆ ನನ್ನ ಕಪ್ಪು ಅಂದವರು ಮೌನವಾಗುತ್ತಾರೆ. ಇದನ್ನು ಬಳಸುವಾಗ ಅಯ್ಯೋ ನಾನು ನಿಜವಾಗಲು ಈ ಬಣ್ಣ ಹೊಂದಿದ್ದರೆ ಚೆನ್ನಾಗಿರುತ್ತಿತ್ತು ಎನ್ನಿಸುತ್ತದೆ. ಆದರೆ ನನ್ನ ಮೊಮ್ಮಗ ಅರ್ಜುನ ಯಾವ pancake ಬಳಸದಂತೆ ಬಣ್ಣ ಹಚ್ಚಿಕೊಂಡೇ ಬಂದಿದ್ದಾನೆ. ಭೂಮಿಗೆ ಇಷ್ಟು ಹೇಳಲು ಕಾರಣ ಇಂದು ಇವನು 9ನೇ ವರ್ಷಕ್ಕೆ ಕಾಲಿಟ್ಟಿದ್ದಾನೆ. ಅಂದರೆ ಅವನ ಹುಟ್ಟುಹಬ್ಬ. ಹುಟ್ಟು ಹಬ್ಬದ ಶುಭಾಶಯಗಳು ಕಂದ. ದೇವರು ಒಳ್ಳೆಯದು ಮಾಡಲಿʼʼ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Actor Jaggesh: ರಂಗ ನಾಯಕ, ʻಕಿತ್ತೋದ್‌ ನನ್ಮಗʼ ಮಾತಿಗೆ ಹೀಗೆ ಪ್ರತಿಕ್ರಿಯಿಸಿದ್ದಾರೆ ಜಗ್ಗೇಶ್‌!

ಬಾಡಿ ಶೇಮಿಂಗ್ ಬಗ್ಗೆ ಜಗ್ಗೇಶ್‌ ಅವರು ಈ ಮೂಲಕ ಹೇಳಿಕೊಂಡಿದ್ದಾರೆ. ನಟ ಜಗ್ಗೇಶ್ ತಮ್ಮ ಕಪ್ಪು ಮೈಬಣ್ಣದ ಬಗ್ಗೆ ಸಾಕಷ್ಟು ಬಾರಿ ಮಾತನಾಡಿದ್ದಾರೆ. ಕೆಲವೊಮ್ಮೆ ಅದನ್ನೇ ತಮಾಷೆಯಾಗಿ ಹೇಳಿಕೊಂಡು ನಕ್ಕಿದ್ದಾರೆ, ನಗಿಸಿದ್ದಾರೆ. ನವರಸ ನಾಯಕ ಜಗ್ಗೇಶ್ ಅವರ ಹಿರಿಯ ಪುತ್ರ ಗುರುರಾಜ್ ಅವರ ಮಗ ಅರ್ಜುನ್. ಮೊಮ್ಮಗ ಎಂದರೆ ಜಗ್ಗೇಶ್ ಅವರಿಗೆ ಬಹಳ ಪ್ರೀತಿ.

ʻಕಾಮಿಡಿ ಕಿಲಾಡಿಗಳು ಶೋನಲ್ಲಿ ಜಗ್ಗೇಶ್‌ ಅವರು ಮುದ್ದಿನ ಶ್ವಾನ ಅರ್ಜುನನನ್ನು ನೆನೆದು ಭಾವುಕರಾಗಿದ್ದರು. ಕಾಮಿಡಿ ಕಿಲಾಡಿಗಳು ಶೋನಲ್ಲಿ ಜಗ್ಗೇಶ್ ಅವರು ʻಅರ್ಜುನʼ ಎಂಬ ಹೆಸರಿನ ಸಾಕು ನಾಯಿಯ ಜತೆ ಇರುವ ಫೋಟೊವನ್ನು ತೋರಿಸಿದಾಗ, ʻಇವನ ಹೆಸರನ್ನೇ ನಾನು ನನ್ನ ಮೊಮ್ಮಗನಿಗೆ ಇಟ್ಟಿದ್ದೇನೆ. ಕಾರಣವೇನೆಂದರೆ, ಲ್ಯಾಬ್ರೇಡರ್ ನಾಯಿ ಜಾಸ್ತಿ ದಿನ ಬದುಕುವುದಿಲ್ಲ. ಆದರೆ ಅವನು ಹದಿನಾಲ್ಕುವರೆ ವರ್ಷ ನಮ್ಮ ಜತೆ ಬದುಕಿದ್ದʼ ಎಂದಿದ್ದರು. ಸಿನಿಮಾಗಳ ವಿಚಾರಕ್ಕೆ ಬಂದರೆ ಕೊನೆಯದಾಗಿ ಜಗ್ಗೇಶ್ ನಟಿಸಿದ ‘ರಂಗನಾಯಕ’ ಸಿನಿಮಾ ತೆರೆಗೆ ಬಂದಿತ್ತು. ಆದರೆ ಚಿತ್ರ ಗೆಲ್ಲಲಿಲ್ಲ.

Continue Reading

ಟಾಲಿವುಡ್

Nandamuri Balakrishna: ನಟಿ ಅಂಜಲಿಯ ಹಿಂಭಾಗ ಟಚ್ ಮಾಡಿದ್ರಾ ಬಾಲಯ್ಯ?

Nandamuri Balakrishna: ನಟಿ ಅಂಜಲಿಯನ್ನು (Actress Anjali ) ವೇದಿಕೆಯಲ್ಲಿಯೇ ತಳ್ಳಿದ್ದರು ಬಾಲಯ್ಯ. ನಟಿ ಅಂಜಲಿ “ನಾವಿಬ್ಬರು ಗ್ರೇಟ್ ಫ್ರೆಂಡ್ಸ್” ಎಂದು ಹೇಳಿ ಆ ಚರ್ಚೆಗೆ ಬ್ರೇಕ್ ಹಾಕುವ ಪ್ರಯತ್ನ ಮಾಡಿದ್ದರು. . ಆದರೆ ಇದೀಗ ಅದೇ ಕಾರ್ಯಕ್ರಮದ ಮತ್ತೊಂದು ವೀಡಿಯೊ ವೈರಲ್ ಆಗಿ ಮತ್ತೆ ಬಾಲಯ್ಯ ಟ್ರೋಲ್ ಆಗುವಂತಾಗಿದೆ.

VISTARANEWS.COM


on

Nandamuri Balakrishna touch actress anjali back
Koo

ಬೆಂಗಳೂರು: ತೆಲುಗು ಸೂಪರ್‌ಸ್ಟಾರ್ ನಂದಮೂರಿ ಬಾಲಕೃಷ್ಣ (Nandamuri Balakrishna) ಇತ್ತೀಚೆಗೆ ತಮ್ಮ ಚಿತ್ರ `ಗ್ಯಾಂಗ್ಸ್ ಆಫ್ ಗೋದಾವರಿ’ (Gangs of Godavari) ಪ್ರಚಾರ ಸಮಾರಂಭದಲ್ಲಿ ಭಾಗಿಯಾಗಿದ್ದರು. ಈ ವೇಳೆ ನಟಿ ಅಂಜಲಿಯನ್ನು (Actress Anjali ) ವೇದಿಕೆಯಲ್ಲಿಯೇ ತಳ್ಳಿದ್ದರು. ಈ ವಿಡಿಯೊ ಭಾರಿ ವೈರಲ್‌ ಆಗಿ, ಸಖತ್‌ ಟ್ರೋಲ್‌ ಆಗಿದ್ದರು ಬಾಲಯ್ಯ. ನಟಿ ಅಂಜಲಿ “ನಾವಿಬ್ಬರು ಗ್ರೇಟ್ ಫ್ರೆಂಡ್ಸ್” ಎಂದು ಹೇಳಿ ಆ ಚರ್ಚೆಗೆ ಬ್ರೇಕ್ ಹಾಕುವ ಪ್ರಯತ್ನ ಮಾಡಿದ್ದರು. . ಆದರೆ ಇದೀಗ ಅದೇ ಕಾರ್ಯಕ್ರಮದ ಮತ್ತೊಂದು ವೀಡಿಯೊ ವೈರಲ್ ಆಗಿ ಮತ್ತೆ ಬಾಲಯ್ಯ ಟ್ರೋಲ್ ಆಗುವಂತಾಗಿದೆ. ವೇದಿಕೆಗೆ ಅಂಜಲಿ ಹೊರಟು ನಿಂತಾಗ ನಟ ಬಾಲಯ್ಯ ಆಕೆಯ ಹಿಂಬದಿಯನ್ನು ನಯವಾಗಿ ತಟ್ಟಿದ್ದಾರೆ ಎನ್ನಲಾಗಿದೆ.

ಕಾರ್ಯಕ್ರಮದ ವೇದಿಕೆ ಮುಂಭಾಗದಲ್ಲಿ ಬಾಲಕೃಷ್ಣ ಕುಳಿತಿದ್ದಾಗ ಅವರ ಕಾಲ ಬಳಿ ನೀರಿನ ಬಾಟಲ್‌ನಲ್ಲಿ ಮದ್ಯದ ರೀತಿಯ ಪಾನೀಯ ಇರುವುದು ಕಂಡುಬಂದಿತ್ತು. ಇದನ್ನು ನೋಡಿ ಅವರು ಕುಡಿದು ವೇದಿಕೆಯಲ್ಲಿ ಆ ರೀತಿ ನಡೆದುಕೊಂಡಿದ್ದಾರೆ ಎಂದು ಕೆಲವರು ಆರೋಪಿಸಿದ್ದರು. ಆದರೆ ಅದೆಲ್ಲಾ ಗ್ರಾಫಿಕ್ಸ್ ಎಂದು ಕಾರ್ಯಕ್ರಮದ ಆಯೋಜಕರು ಹೇಳಿಕೆ ನೀಡಿದ್ದರು.

ಇದನ್ನೂ ಓದಿ: Nandamuri Balakrishna: ವೇದಿಕೆ ಮೇಲೆ ತಳ್ಳಿದ್ದ ಬಾಲಯ್ಯ ಬಗ್ಗೆ ಕೊನೆಗೂ ಪ್ರತಿಕ್ರಿಯೆ ಕೊಟ್ಟ ನಟಿ ಅಂಜಲಿ!

ಬಾಲಯ್ಯ ಬಗ್ಗೆ ಕೊನೆಗೂ ಪ್ರತಿಕ್ರಿಯೆ ಕೊಟ್ಟ ನಟಿ ಅಂಜಲಿ!

‘ಗ್ಯಾಂಗ್ಸ್ ಆಫ್ ಗೋದಾವರಿ’ ಯ ಪ್ರೀ-ರಿಲೀಸ್ ಸಮಾರಂಭದಲ್ಲಿ (Vishwak Sen and Neha Shetty) ಬಾಲಕೃಷ್ಣ ಮುಖ್ಯ ಅತಿಥಿಯಾಗಿದ್ದರು. ನೇಹಾ ಶೆಟ್ಟಿ ಮೊದಲಾದವರು ವೇದಿಕೆ ಮೇಲೆ ನಿಂತಿದ್ದರು. ಬಾಲಯ್ಯ ಅವರು ಅಂಜಲಿಗೆ ಏನನ್ನೋ ಹೇಳುವ ಪ್ರಯುತ್ನ ಮಾಡಿದ್ದಾರೆ. ಆದರೆ, ಅವರಿಗೆ ಇದು ಕೇಳಿಲ್ಲ. ಇದರಿಂದ ಸಿಟ್ಟಾದ ಬಾಲಯ್ಯ ಅವರು ಅಂಜಲಿಯನ್ನು ತಳ್ಳಿದ್ದರು ಎಂದು ತೆಲುಗು ಮಾಧ್ಯಮಗಳು ವರದಿ ಮಾಡಿದ್ದವು.

ವೈರಲ್‌ ಆದ ವಿಡಿಯೊದಲ್ಲಿ ವೇದಿಕೆಯ ಮೇಲೆ ನೇಹಾ ಶೆಟ್ಟಿ ಮತ್ತು ಅಂಜಲಿ ಅಕ್ಕ ಪಕ್ಕ ನಿಂತಿದ್ದರು. ನೇಹಾ ಅವರಿಗೆ ನಯವಾಗಿ ಪಕ್ಕಕ್ಕೆ ಸರಿಯಲು ಕೇಳುತ್ತಾರೆ. ಕೆಲವು ಕ್ಷಣಗಳ ನಂತರ, ಬಾಲಯ್ಯ ಅವರು ಅಂಜಲಿಯನ್ನು ದೂರ ತಳ್ಳುತ್ತಾರೆ, ಬಹುತೇಕ ನಟಿ ಬಿದ್ದೇ ಬಿಡುವಂತಿದ್ದರು. ಆಗ ನೇಹಾ ಅವರು ಅಂಜಲಿ ಅವರನ್ನು ಗಟ್ಟಿಯಾಗಿ ಹಿಡಿದುಕೊಂಡಿದ್ದಾರೆ. ಬಳಿಕ ನಟಿಯರು ತಮಾಷೆಯಾಗಿ ಬಾಲಯ್ಯ ನೋಡಿ ನಕ್ಕಿದ್ದರು.

ಕಾರ್ಯಕ್ರಮದ ಕ್ಲಿಪ್ ಅನ್ನು ಹಂಚಿಕೊಂಡಿರುವ ಅಂಜಲಿ ಹೀಗೆ ಬರೆದುಕೊಂಡಿದ್ದರು “ಗ್ಯಾಂಗ್ಸ್ ಆಫ್ ಗೋದಾವರಿ ಪ್ರೀ-ರಿಲೀಸ್ ಈವೆಂಟ್‌ವನ್ನು ತಮ್ಮ ಉಪಸ್ಥಿತಿಯೊಂದಿಗೆ ಅಲಂಕರಿಸಿದ್ದಕ್ಕಾಗಿ ನಾನು ಬಾಲಕೃಷ್ಣ ಅವರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ಬಾಲಕೃಷ್ಣ ಅವರು ಮತ್ತು ನಾನು ಯಾವಾಗಲೂ ಪರಸ್ಪರ ಗೌರವವನ್ನು ಉಳಿಸಿಕೊಂಡಿದ್ದೇವೆ. ಬಹಳ ಹಿಂದಿನಿಂದಲೂ ನಾವಿಬ್ಬರು ಪರಸ್ಪರ ಉತ್ತಮ ಸ್ನೇಹ, ಗೌರವವನ್ನು ಹಂಚಿಕೊಂಡಿದ್ದೇವೆ ಎಂದು ಹೇಳುವುದಕ್ಕೆ ನಾನು ಬಯಸುತ್ತೇನೆ. ಅವರ ಜತೆ ವೇದಿಕೆ ಹಂಚಿಕೊಂಡಿದ್ದು ಅದ್ಭುತವಾಗಿತ್ತುʼʼಎಂದು ಬರೆದುಕೊಂಡಿದ್ದರು.

Continue Reading

ಸ್ಯಾಂಡಲ್ ವುಡ್

Dolly Dhananjay: ಕೆಆರ್​ಜಿ ಸ್ಟುಡಿಯೋಸ್ ಪಾಲಾದ ‘ಕೋಟಿ‌’ ವಿತರಣಾ ಹಕ್ಕು; ರಿಲೀಸ್‌ಗೆ ಕೌಂಟ್‌ ಡೌನ್!

Dolly Dhananjay: ಕನ್ನಡ ಚಿತ್ರರಂಗದಲ್ಲಿ ನಿರ್ಮಾಣ ಹಾಗೂ ವಿತರಣೆಯಲ್ಲಿ ಕೆಆರ್ ಜಿ ಸಂಸ್ಥೆ ಒಳ್ಳೆ ಹೆಸರು ಮಾಡಿದೆ. ಕೆಜಿಎಫ್ 1, ಕೆಜಿಎಫ್ 2, ಕಾಂತಾರ, ಚಾರ್ಲಿ 777, ಬಡವ ರಾಸ್ಕಲ್, ಪೈಲ್ವಾನ್, 12 ನೇ ಫೇಲ್, ಹನುಮಾನ್ ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರಗಳು ಈ ಸಂಸ್ಥೆಯ ಮೂಲಕವೇ ಬಿಡುಗಡೆಗೊಂಡಿದೆ. KRG ಸ್ಟುಡಿಯೋಸ್ ಇಲ್ಲಿಯವರೆಗೆ 100 ಕ್ಕೂ ಹೆಚ್ಚು ಚಲನಚಿತ್ರಗಳನ್ನು ವಿತರಿಸಿದೆ.

VISTARANEWS.COM


on

Dolly Dhananjay kotee distribution rights held by KRG Studios
Koo

ಬೆಂಗಳೂರು: ಡಾಲಿಯ ʻಕೋಟಿʼ (Dolly Dhananjay) ಸಿನಿಮಾ ಹವಾ ಎಲ್ಲೆಡೆ ಹಬ್ಬಿಕೊಂಡಿದೆ. ಬಿಡುಗಡೆಗೆ ಕೆಲವೇ ಕೆಲ ದಿನಗಳು ಬಾಕಿ ಇರುವಾಗಲೇ ಈ ಸಿನಿಮಾದೆಡೆಗಿನ ಕ್ರೇಜ್ ಅಚ್ಚರಿದಾಯಕವಾಗಿ ವ್ಯಾಪಿಸಿಕೊಂಡಿದೆ. ಇಂಥಾ ಸಕಾರಾತ್ಮಕ ವಾತಾವರಣದಲ್ಲಿ ದಿನಕ್ಕೊಂದರಂತೆ ಹೊಸಾ ಬಗೆಯ ಸುದ್ದಿಗಳು ಕೋಟಿ ಬಳಗದಿಂದ ಕಡೆಯಿಂದ ಬರುತ್ತಲೇ ಇದ್ದಾವೆ. ಇದೀಗ ʻಕೋಟಿʼ ವಿತರಣಾ ಹಕ್ಕುಗಳು KRG ಸ್ಟುಡಿಯೋಸ್ ಪಾಲಾಗಿದೆ. ಸಿನಿಮಾ ಮೂಡಿ ಬಂದಿರುವ ರೀತಿಯನ್ನು ಮೆಚ್ಚಿಕೊಳ್ಳುತ್ತಲೇ, ಭರವಸೆಯಿಂದ ಸದರಿ ಸಂಸ್ಥೆ ಡಾಲಿ ಸಿನಿಮಾ ವಿತರಣಾ ಹಕ್ಕನ್ನು ತನ್ನದಾಗಿಸಿಕೊಂಡಿದೆ.

ಕನ್ನಡ ಚಿತ್ರರಂಗದಲ್ಲಿ ನಿರ್ಮಾಣ ಹಾಗೂ ವಿತರಣೆಯಲ್ಲಿ ಕೆಆರ್ ಜಿ ಸಂಸ್ಥೆ ಒಳ್ಳೆ ಹೆಸರು ಮಾಡಿದೆ. ಕೆಜಿಎಫ್ 1, ಕೆಜಿಎಫ್ 2, ಕಾಂತಾರ, ಚಾರ್ಲಿ 777, ಬಡವ ರಾಸ್ಕಲ್, ಪೈಲ್ವಾನ್, 12 ನೇ ಫೇಲ್, ಹನುಮಾನ್ ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರಗಳು ಈ ಸಂಸ್ಥೆಯ ಮೂಲಕವೇ ಬಿಡುಗಡೆಗೊಂಡಿದೆ. KRG ಸ್ಟುಡಿಯೋಸ್ ಇಲ್ಲಿಯವರೆಗೆ 100 ಕ್ಕೂ ಹೆಚ್ಚು ಚಲನಚಿತ್ರಗಳನ್ನು ವಿತರಿಸಿದೆ. ಹಾಗೆಂದ ಮಾತ್ರಕ್ಕೆ, ಈ ಸಂಸ್ಥೆಯ ಕಡೆಯಿಂದ ಸಿನಿಮಾವೊಂದು ಬಿಡುಗಡೆಗೊಳ್ಳೋದು ಸಲೀಸಿನ ಸಂಗತಿಯಲ್ಲ. ಅದು ನಿಜಕ್ಕೂ ಪ್ರತಿಷ್ಠೆಯ ಸಂಗತಿ. ಯಾಕೆಂದರೆ, ಎಲ್ಲ ಬಗೆಯಲ್ಲಿಯೂ ಪರಿಪೂರ್ಣವಾಗಿರುವ, ಗೆಲುವಿನ ಲಕ್ಷಣಗಳನ್ನು ಹೊಂದಿರುವ ಚಿತ್ರಗಳನ್ನು ಮಾತ್ರವೇ ಈ ಸಂಸ್ಥೆ ತನ್ನಡಾಗಿಸಿಕೊಳ್ಳುತ್ತೆ. ಇದೀಗ ಕೋಟಿ ವಿತರಣಾ ಹಕ್ಕು ಕೆಆರ್ ಜಿ ಪಾಲಾಗಿರೋದೇ, ಈ ಚಿತ್ರದೆಡೆಗಿನ ನಿರೀಕ್ಷೆಯನ್ನು ಇಮ್ಮಡಿಗೊಳಿಸಿದೆ.

ಇದನ್ನೂ ಓದಿ: Dolly Dhananjay: ʻಕೋಟಿʼ ಸಿನಿಮಾ ಮೊದಲ ಹಾಡು ಬಿಡುಗಡೆ!

ಕೋಟಿ ಸಿನಿಮಾವನ್ನು ಇಡೀ ಕೆಆರ್ ಜಿ ಬಳಗ ವೀಕ್ಷಣೆ ಮಾಡಿದೆ. ಭಾವನಾತ್ಮಕ ಎಳೆಯುಳ್ಳ ಈ ಚಿತ್ರ ಐಪಿಎಲ್ ಹಾಗೂ ಚುನಾವಣಾ ಬಳಿಕ ಇಡೀ ಫ್ಯಾಮಿಲಿಗೆ ಹೇಳಿ ಮಾಡಿಸಿದ ಪರಿಪೂರ್ಣವಾದ ಔತಣದಂತಿದೆ ಎಂದಿದೆ.

ಕೆಆರ್‌ಜಿ ಸ್ಟುಡಿಯೋಸ್‌ನ ಸಂಸ್ಥಾಪಕ ಕಾರ್ತಿಕ್ ಗೌಡ ಮಾತನಾಡಿ, “ಧನಂಜಯ್ ಅವರೊಂದಿಗಿನ ನಮ್ಮ ಸಂಬಂಧವು ‘ಕೋಟಿ’ ಮೂಲಕ ಮತ್ತಷ್ಟು ವಿಸ್ತರಿಸಿದೆ. ನಾನು ಸಿನಿಮಾ ನೋಡಿದೆ. ಪರಮೇಶ್ವರ್ ಗುಂಡ್ಕಲ್ ಅವರ ಬರವಣಿಗೆ ಹಾಗೂ ಚಿತ್ರಕಥೆ ಹೆಣೆದಿರುವ ಸೊಗಸನ್ನು ನೋಡಿ ಥ್ರಿಲ್ ಆಗಿದ್ದೇನೆ. ಈ ಚಿತ್ರವನ್ನು ಪ್ರೇಕ್ಷಕರಿಗೆ ಪ್ರಸ್ತುತಪಡಿಸಲು ನಾವು ಉತ್ಸುಕರಾಗಿದ್ದೇವೆ. 250ಕ್ಕೂ ಹೆಚ್ಚು ಕೇಂದ್ರಗಳಲ್ಲಿ ಚಿತ್ರ ಬಿಡುಗಡೆ ಮಾಡುವ ಗುರಿಯನ್ನು ಹೊಂದಿದ್ದೇವೆ. ಈ ಅವಕಾಶವನ್ನು ನೀಡಿದ ಜಿಯೋ ಸ್ಟುಡಿಯೋಸ್‌ನ ಜ್ಯೋತಿ ದೇಶಪಾಂಡೆ ಅವರಿಗೆ ನಾನು ನನ್ನ ಧನ್ಯವಾದಗಳನ್ನು ಸಲ್ಲಿಸುತ್ತೇನೆ” ಎಂದಿದ್ದಾರೆ.

ಕೋಟಿ ಕನ್ನಡದಲ್ಲಿ ಜಿಯೋ ಸ್ಟುಡಿಯೋಸ್ ಚೊಚ್ಚಲ ನಿರ್ಮಾಣವಾಗಿದ್ದು, ನಿರ್ದೇಶಕ ಪರಮ್ ಅವರ ನೇತೃತ್ವದಲ್ಲಿ ಮತ್ತು ಜ್ಯೋತಿ ದೇಶಪಾಂಡೆ ನಿರ್ಮಿಸಿದ ಫ್ಯಾಮಿಲಿ ಡ್ರಾಮಾ ಥ್ರಿಲ್ಲರ್ ಚಿತ್ರವಾಗಿದೆ. ನಟರಾಕ್ಷಸ ಡಾಲಿ ಧನಂಜಯ, ರಮೇಶ್ ಇಂದಿರಾ, ಮೋಕ್ಷ ಕುಶಾಲ್, ರಂಗಾಯಣ ರಘು, ತಾರಾ ಮುಂತಾದವರು ಸಿನಿಮಾದಲ್ಲಿ ನಟಿಸಿದ್ದಾರೆ. ಪರಮ್ ಬರವಣಿಗೆ ಸಾರಥ್ಯದ ಕೋಟಿ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿದೆ. ಟೀಸರ್ ಹಾಗೂ ಹಾಡುಗಳು ಹಿಟ್ ಲೀಸ್ಟ್ ಸೇರಿದ್ದು,, ಜೂನ್ 14 ರಿಂದ ಚಿತ್ರ ತೆರೆಗೆ ಬರಲಿದೆ.

Continue Reading
Advertisement
Stray dogs attack in Shira 4 children one woman injured
ಪ್ರಮುಖ ಸುದ್ದಿ30 mins ago

Stray Dogs Attack: ಶಿರಾದಲ್ಲಿ ಬೀದಿ ನಾಯಿಗಳ ದಾಳಿ: 4 ಮಕ್ಕಳು, ಒಬ್ಬ ಮಹಿಳೆಗೆ ಗಂಭೀರ ಗಾಯ

Somnath Bharti
ದೇಶ40 mins ago

Somnath Bharti: ಮೋದಿ 3ನೇ ಸಲ ಪ್ರಧಾನಿಯಾದರೆ ತಲೆ ಬೋಳಿಸಿಕೊಳ್ಳುವೆ ಎಂದ ಆಪ್‌ ನಾಯಕ!

T 20 world cup
ಕ್ರೀಡೆ47 mins ago

T20 World Cup : ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ 60 ರನ್​ ಭರ್ಜರಿ ವಿಜಯ ಸಾಧಿಸಿದ ಭಾರತ

Exit Poll
ಪ್ರಮುಖ ಸುದ್ದಿ1 hour ago

Exit Poll 2024 : ಆ್ಯಕ್ಸಿಸ್​ ಮೈ ಇಂಡಿಯಾ ಪ್ರಕಾರ ಎನ್​ಡಿಎಗೆ 401 ಸೀಟು

Poll Of Polls
ದೇಶ2 hours ago

Poll Of Polls: ಎನ್‌ಡಿಎಗೆ 350+ ಸೀಟು, ದಕ್ಷಿಣದಲ್ಲೂ ಬಿಜೆಪಿಗೆ ಸ್ವೀಟು, ಇಂಡಿಯಾ ‌ಕೂಟಕ್ಕೆ ಹಿನ್ನಡೆಯ ಏಟು!

Exit Poll 2024
ಪ್ರಮುಖ ಸುದ್ದಿ3 hours ago

Exit Poll 2024 : ಟಿಎಂಸಿಯ ಭದ್ರಕೋಟೆಗೆ ಕಮಲ ಪಕ್ಷದ ಲಗ್ಗೆ; ಮಮತಾ ಬ್ಯಾನರ್ಜಿಗೆ ಮುಖಭಂಗ?

Bangalore rain
ಪ್ರಮುಖ ಸುದ್ದಿ3 hours ago

Bangalore Rain: ರಾಜಧಾನಿಯಲ್ಲಿ ಮಳೆ ಆರ್ಭಟ; ಬೆಂಗಳೂರು-ಹೊಸೂರು ಹೆದ್ದಾರಿ ಜಲಾವೃತ, ಮನೆಗಳಿಗೆ ನುಗ್ಗಿದ ನೀರು

Dinesh Karthik
ಪ್ರಮುಖ ಸುದ್ದಿ3 hours ago

Dinesh Karthik: ಜನ್ಮದಿನದಂದೇ ಕ್ರಿಕೆಟ್‌ ಬದುಕಿಗೆ ದಿನೇಶ್‌ ಕಾರ್ತಿಕ್‌ ಭಾವುಕ ವಿದಾಯ; ಕೊಡುಗೆ ನೆನೆದ ಆರ್‌ಸಿಬಿ ಫ್ಯಾನ್ಸ್

Exit Poll
ಪ್ರಮುಖ ಸುದ್ದಿ3 hours ago

Exit Poll 2024 : ಭರ್ಜರಿ ಗೆಲುವಿನ ಮುನ್ಸೂಚನೆ ಸಿಕ್ಕಿದ ತಕ್ಷಣ ಮತದಾರರಿಗೆ ಧನ್ಯವಾದ ತಿಳಿಸಿದ ಮೋದಿ

Exit Poll 2024
ದೇಶ4 hours ago

Exit Poll 2024 : ಮತಗಟ್ಟೆ ಸಮೀಕ್ಷೆಗಳನ್ನು ನಾವು ನಂಬಲ್ಲ; ಡಿಕೆಶಿ, ಎಂಬಿ ಪಾಟೀಲ್ ಸ್ಪಷ್ಟ ನುಡಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Liquor ban
ಬೆಂಗಳೂರು8 hours ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ2 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ4 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು5 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ5 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ6 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು6 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ2 weeks ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

ಟ್ರೆಂಡಿಂಗ್‌