ಅತೀಕ್​-ಅಶ್ರಫ್​​ನನ್ನು ಆಸ್ಪತ್ರೆಗೆ ಕಾಲ್ನಡಿಗೆಯಲ್ಲಿ ಕರೆದುಕೊಂಡು ಹೋಗಿದ್ದೇಕೆ?; ಸುಪ್ರೀಂಕೋರ್ಟ್​ ಪ್ರಶ್ನೆ - Vistara News

ದೇಶ

ಅತೀಕ್​-ಅಶ್ರಫ್​​ನನ್ನು ಆಸ್ಪತ್ರೆಗೆ ಕಾಲ್ನಡಿಗೆಯಲ್ಲಿ ಕರೆದುಕೊಂಡು ಹೋಗಿದ್ದೇಕೆ?; ಸುಪ್ರೀಂಕೋರ್ಟ್​ ಪ್ರಶ್ನೆ

ಅತೀಕ್​ ಅಹ್ಮದ್​ ಮತ್ತು ಅಶ್ರಾಫ್​​ನನ್ನು ಯಾಕೆ ಆಸ್ಪತ್ರೆ ಬಾಗಿಲಿನವರೆಗೂ ಆ್ಯಂಬುಲೆನ್ಸ್​ನಲ್ಲಿ ಕರೆದೊಯ್ಯಲಾಗಿಲ್ಲ? ಎಂದು ಪ್ರಶ್ನಿಸಿದ ಸುಪ್ರೀಂಕೋರ್ಟ್​, ಉತ್ತರ ಪ್ರದೇಶ ಸರ್ಕಾರಕ್ಕೆ ಉತ್ತರಿಸಲು ಮೂರು ವಾರ ಕಾಲಾವಕಾಶ ಕೊಟ್ಟಿದೆ.

VISTARANEWS.COM


on

Why were Atiq Ahmed taken in an ambulance to the hospital Ask Supreme court to UP Government
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಖನೌ: ಉತ್ತರ ಪ್ರದೇಶದ ಗ್ಯಾಂಗ್​ಸ್ಟರ್​ ಅತೀಕ್​ ಅಹ್ಮದ್ (Atiq Ahmed Murder​​) ಮತ್ತು ಆತನ ಸಹೋದರ ಅಶ್ರಫ್​ ಅಹ್ಮದ್​​ನ ಹತ್ಯೆ ಕೇಸ್​​ನ್ನು ವಿಚಾರಣೆ ನಡೆಸುತ್ತಿರುವ ಸುಪ್ರೀಂಕೋರ್ಟ್ (Supreme Court)​ ‘ಅತೀಕ್​ ಅಹ್ಮದ್​ ಮತ್ತು ಅಶ್ರಾಫ್​​ನನ್ನು ಯಾಕೆ ಆಸ್ಪತ್ರೆ ಬಾಗಿಲಿನವರೆಗೂ ಆ್ಯಂಬುಲೆನ್ಸ್​ನಲ್ಲಿ ಕರೆದೊಯ್ಯಲಾಗಿಲ್ಲ? ಪೊಲೀಸ್ ವಾಹನವನ್ನು ಆಸ್ಪತ್ರೆಯ ಗೇಟ್​ಗಿಂತಲೂ ಸ್ವಲ್ಪ ದೂರ ನಿಲ್ಲಿಸಿ, ಅಲ್ಲಿಂದ ಯಾಕೆ ನಡೆಸಿಕೊಂಡು ಹೋಗಲಾಯಿತು?‘ ಎಂದು ಉತ್ತರ ಪ್ರದೇಶ ಸರ್ಕಾರವನ್ನು ಪ್ರಶ್ನಿಸಿದೆ. ಹಾಗೇ, ಈ ಬಗ್ಗೆ ಇನ್ನು ಮೂರು ವಾರದಲ್ಲಿ ವರದಿ ನೀಡುವಂತೆ ಸೂಚಿಸಿದೆ. ಅಷ್ಟೇ ಅಲ್ಲ ‘ಅತೀಕ್ ಅಹ್ಮದ್ ಮತ್ತು ಅಶ್ರಾಫ್​ ಹತ್ಯೆಯನ್ನು ನಾವು ಟಿವಿಯಲ್ಲಿ ನೋಡಿದ್ದೇವೆ. ಆ ಶೂಟರ್​ಗಳಿಗೆ ಅದೇ ದಿನ ಅತೀಕ್ ಮತ್ತು ಅಶ್ರಾಫ್​ನನ್ನು ಆಸ್ಪತ್ರೆಗೆ ಕರೆದೊಯ್ಯುತ್ತಾರೆ ಎಂಬುದು ಹೇಗೆ ಗೊತ್ತಾಯಿತು?’ ಎಂದೂ ನ್ಯಾಯಾಧೀಶರು ಪ್ರಶ್ನೆ ಮಾಡಿದ್ದಾರೆ.

ಬಿಎಸ್​​ಪಿ ಶಾಸಕ ರಾಜು ಪಾಲ್​ ಹತ್ಯೆಯ ಆರೋಪಿಗಳಾದ ಗ್ಯಾಂಗ್​ಸ್ಟರ್​/ರಾಜಕಾರಣಿ ಅತೀಕ್​ ಅಹ್ಮದ್​ ಮತ್ತು ಆತನ ತಮ್ಮ ಅಶ್ರಾಫ್ ಅಹ್ಮದ್​ನ ಹತ್ಯೆಯ ಬೆನ್ನಲ್ಲೇ ವಕೀಲ ವಿಶಾಲ್​ ತಿವಾರಿ ಎಂಬುವರು ಸುಪ್ರೀಂಕೋರ್ಟ್​ಗೆ ಮನವಿ ಸಲ್ಲಿಸಿದ್ದರು. 2017ರಿಂದ ಉತ್ತರ ಪ್ರದೇಶದಲ್ಲಿ 183 ಎನ್​ಕೌಂಟರ್​ಗಳಾಗಿವೆ. ಈ ಎನ್​ಕೌಂಟರ್​​ಗಳ ಸತ್ಯಾಸತ್ಯತೆ ಬಗ್ಗೆ ತನಿಖೆಯಾಗಬೇಕು ಎಂದು ಅವರು ಆಗ್ರಹಿಸಿದ್ದರು. ಹಾಗೇ, ಇತ್ತೀಚೆಗೆ ನಡೆದ ಅತೀಕ್​ ಅಹ್ಮದ್ ಮತ್ತು ಅಶ್ರಾಫ್ ಅಹ್ಮದ್​ ಹತ್ಯೆ, ಅದಕ್ಕೂ ಮೊದಲು ನಡೆದ ಅತೀಕ್ ಪುತ್ರ ಅಸಾದ್​ ಅಹ್ಮದ್ ಎನ್​ಕೌಂಟರ್​ನ್ನು ತನಿಖೆ ನಡೆಸುವಂತೆಯೂ ಅರ್ಜಿಯಲ್ಲಿ ಉಲ್ಲೇಖ ಮಾಡಿದ್ದರು. ಒಟ್ಟಾರೆ ಎನ್​ಕೌಂಟರ್​​ಗಳ ಬಗ್ಗೆ ತನಿಖೆ ನಡೆಸಲು ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ಸಮಿತಿ ರಚಿಸಬೇಕು ಎಂದೂ ಬೇಡಿಕೆಯಿಟ್ಟಿದ್ದಾರೆ. ಈ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಎಸ್​.ರವೀಂದ್ರ ಭಟ್​ ಮತ್ತು ದೀಪಾಂಕರ್​ ದತ್ತಾ ಕೈಗೆತ್ತಿಕೊಂಡಿದ್ದಾರೆ.

ಇದನ್ನೂ ಓದಿ: Atiq Ahmad : ಅತೀಕ್‌ ಅಹ್ಮದ್‌ ಪರ ಘೋಷಣೆ ಕೂಗುವವರಿಗೆ ಕಂಡಲ್ಲಿ ಗುಂಡಿಕ್ಕಬೇಕು ಎಂದು ಖಂಡಿಸಿದ ಕೇಂದ್ರ ಸಚಿವ

ಇಂದು ನ್ಯಾಯಾಲಯದಲ್ಲಿ ಉತ್ತರಿಸಿದ ಉತ್ತರ ಪ್ರದೇಶ ಸರ್ಕಾರ ‘ಅತೀಕ್​ ಮತ್ತು ಅಶ್ರಾಫ್​ ಹತ್ಯೆ ಕೇಸ್​ ತನಿಖೆ ನಡೆಸಲು ನ್ಯಾಯಾಂಗ ಆಯೋಗವನ್ನು ರಚಿಸಲಾಗಿದೆ. ಆದರೂ ಅರ್ಜಿದಾರರು ತನಿಖಾ ಆಯೋಗ ರಚಿಸಬೇಕು ಎಂದು ಆಗ್ರಹಿಸುತ್ತಿದ್ದಾರೆ. ಸರ್ಕಾರವನ್ನೇ ಅನುಮಾನಿಸುತ್ತಿದ್ದಾರೆ. ಕೋರ್ಟ್​ನ ಆದೇಶದಂತೆ ಅತೀಕ್​ ಅಹ್ಮದ್​ ಮತ್ತು ಅಶ್ರಫ್​ನನ್ನು ಎರಡು ದಿನಗಳಿಗೆ ಒಮ್ಮೆ ವೈದ್ಯಕೀಯ ತಪಾಸಣೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಈ ವಿಷಯ ಮಾಧ್ಯಮದವರಿಗೆ ಗೊತ್ತೇ ಇದೆ. ಅತೀಕ್ ಮತ್ತು ಅವನ ಇಡೀ ಕುಟುಂಬದವರು ಕಳೆದ 30ವರ್ಷಗಳಿಂದಲೂ ಹಲವು ಕ್ರೈಂಗಳನ್ನು ನಡೆಸಿದ್ದಾರೆ. ಆದರೂ ಅವರಿಬ್ಬರು ಹತ್ಯೆಗೀಡಾಗಿದ್ದು ದುರಂತ. ಶೂಟರ್​ಗಳನ್ನು ನಾವೀಗಾಗಲೇ ಬಂಧಿಸಿದ್ದೇವೆ’ ಎಂದು ಉತ್ತರ ಪ್ರದೇಶ ಸರ್ಕಾರದ ಪರ ವಕೀಲ ಮುಕುಲ್ ರೋಹಟಗಿ ಕೋರ್ಟ್​​ನಲ್ಲಿ ವಾದಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Subramanian Swamy: ರಾಹುಲ್‌ ಗಾಂಧಿಯ ಭಾರತೀಯ ಪೌರತ್ವ ರದ್ದುಗೊಳಿಸಿ; ಹೈಕೋರ್ಟ್‌ಗೆ ಮೊರೆ ಹೋದ ಸುಬ್ರಮಣಿಯನ್ ಸ್ವಾಮಿ

Subramanian Swamy: ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಮತ್ತಪಮ್ಮೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಿರುದ್ಧ ಗುಡುಗಿದ್ದಾರೆ. ರಾಹುಲ್ ಗಾಂಧಿ ಅವರ ಭಾರತೀಯ ಪೌರತ್ವವನ್ನು ರದ್ದುಗೊಳಿಸುವಂತೆ ಗೃಹ ಸಚಿವಾಲಯಕ್ಕೆ ರ್ದೇಶನ ನೀಡುವಂತೆ ಸುಬ್ರಮಣಿಯನ್ ಸ್ವಾಮಿ ಶುಕ್ರವಾರ ದೆಹಲಿ ಹೈಕೋರ್ಟ್‌ಗೆ ಮೊರೆ ಹೋಗಿದ್ದಾರೆ.

VISTARANEWS.COM


on

Subramanian Swamy
Koo

ನವದೆಹಲಿ: ನೇರ ಮಾತಿನ ಮೂಲಕ ರಾಜಕಾರಣಿಗಳ ನಿದ್ದೆಗೆಡಿಸಿರುವ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ (Subramanian Swamy) ಹಲವು ದಿನಗಳ ಬಳಿಕ ಮತ್ತೊಮ್ಮೆ ದೇಶಾದ್ಯಂತ ಸುದ್ದಿಯಾಗಿದ್ದಾರೆ. ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಅವರ ಭಾರತೀಯ ಪೌರತ್ವವನ್ನು ರದ್ದುಗೊಳಿಸುವಂತೆ ಗೃಹ ಸಚಿವಾಲಯಕ್ಕೆ (MHA) ನಿರ್ದೇಶನ ನೀಡುವಂತೆ ಸುಬ್ರಮಣಿಯನ್ ಸ್ವಾಮಿ ಶುಕ್ರವಾರ ದೆಹಲಿ ಹೈಕೋರ್ಟ್‌ಗೆ ಮೊರೆ ಹೋಗಿದ್ದಾರೆ.

ಹೈಕೋರ್ಟ್ ಮುಂದಿನ ವಾರ ಅರ್ಜಿಯ ವಿಚಾರಣೆ ನಡೆಸುವ ನಿರೀಕ್ಷೆಯಿದೆ. ವಕೀಲ ಸತ್ಯ ಸಭರ್ವಾಲ್ ಈ ಅರ್ಜಿಯನ್ನು ಸಲ್ಲಿಸಿದ್ದಾರೆ.

ಸುಬ್ರಮಣಿಯನ್ ಸ್ವಾಮಿ ವಾದವೇನು?

ರಾಹುಲ್ ಗಾಂಧಿ ತಮ್ಮದು ಬ್ರಿಟಿಷ್ ಪೌರತ್ವ ಎಂಬುದಾಗಿ ದಾಖಲೆಗಳಲ್ಲಿ ಉಲ್ಲೇಖಿಸಿದ್ದಾರೆ ಎಂದು ಸುಬ್ರಮಣಿಯನ್ ಸ್ವಾಮಿ ಆರೋಪಿಸಿದ್ದಾರೆ. 2003ರಲ್ಲಿ ನೋಂದಾಯಿಸಲಾದ ಇಂಗ್ಲೆಂಡ್‌ ಮೂಲದ ಕಂಪೆನಿ ಬ್ಯಾಕ್ಆಪ್ಸ್ ಲಿಮಿಟೆಡ್‌ನ ನಿರ್ದೇಶಕರು ಮತ್ತು ಕಾರ್ಯದರ್ಶಿಗಳಲ್ಲಿ ರಾಹುಲ್ ಗಾಂಧಿ ಒಬ್ಬರು ಎಂದು ಸ್ವಾಮಿ 2019ರಲ್ಲಿಯೇ ಗೃಹ ಸಚಿವಾಲಯಕ್ಕೆ ಪತ್ರ ಬರೆದಿದ್ದರು. 2005 ಮತ್ತು 2006ರಂದು ಸಲ್ಲಿಸಿದ ಸಂಸ್ಥೆಯ ವಾರ್ಷಿಕ ರಿಟರ್ನ್ಸ್‌ನಲ್ಲಿ ರಾಹುಲ್ ಗಾಂಧಿ ಅವರು ತಮ್ಮ ರಾಷ್ಟ್ರೀಯತೆಯನ್ನು ಬ್ರಿಟಿಷ್‌ ಎಂದು ಘೋಷಿಸಿದ್ದಾರೆ ಎಂದು ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ. 2009ರಂದು ಬ್ಯಾಕ್‌ಆಪ್ಸ್ ಲಿಮಿಟೆಡ್‌ನ ವಿಸರ್ಜನೆಯ ಅರ್ಜಿಯಲ್ಲಿ ರಾಹುಲ್‌ ಗಾಂಧಿ ಅವರ ರಾಷ್ಟ್ರೀಯತೆಯನ್ನು ಮತ್ತೆ ಬ್ರಿಟಿಷ್ ಎಂದು ಘೋಷಿಸಲಾಗಿದೆ ಎಂದು ಅವರು ತಿಳಿಸಿದ್ದಾರೆಂದು ಮೂಲಗಳು ತಿಳಿಸಿವೆ.

ಇದು ಭಾರತದ ಸಂವಿಧಾನದ 9ನೇ ವಿಧಿ ಮತ್ತು 1955ರ ಭಾರತೀಯ ಪೌರತ್ವ ಕಾಯ್ದೆಯನ್ನು ಉಲ್ಲಂಘಿಸುತ್ತದೆ ಎಂದು ಸುಬ್ರಮಣಿಯನ್ ಸ್ವಾಮಿ ಆರೋಪಿಸಿದ್ದಾರೆ. 2019ರ ಏಪ್ರಿಲ್ 29ರಂದು ಗೃಹ ಸಚಿವಾಲಯವು ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದು ಪೌರತ್ವದ ಬಗ್ಗೆ ಮಾಹಿತಿ ನೀಡುವಂತೆ ಕೇಳಿತ್ತು. 15 ದಿನದೊಳಗೆ ಉತ್ತರಿಸುವಂತೆಯೂ ತಿಳಿಸಿತ್ತು. ಅವರು ಪತ್ರ ಬರೆದು 5 ವರ್ಷಗಳು ಕಳೆದರೂ ರಾಹುಲ್ ಗಾಂಧಿ ಅವರ ಬಗ್ಗೆ ತೆಗೆದುಕೊಂಡ ನಿರ್ಧಾರದ ಬಗ್ಗೆ ಗೃಹ ಸಚಿವಾಲಯದಿಂದ ಸ್ಪಷ್ಟತೆ ಇಲ್ಲ ಎಂದು ಸ್ವಾಮಿ ತಿಳಿಸಿದ್ದಾರೆ.

ಈ ಹಿಂದೆ ಸುಬ್ರಮಣಿಯನ್ ಸ್ವಾಮಿ ಅವರು ನ್ಯಾಷನಲ್ ಹೆರಾಲ್ಡ್ ಪ್ರಕರಣ ಕುರಿತು ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮೋತಿಲಾಲ್ ವೋರಾ, ಆಸ್ಕರ್ ಫರ್ನಾಂಡಿಸ್, ಸುಮನ್ ದುಬೇ, ಸ್ಯಾಮ್ ಪಿತ್ರೋಡಾ ಕುರಿತು ಖಾಸಗಿ ದೂರು ನೀಡಿದ್ದರು. 

ಇದನ್ನೂ ಓದಿ: Modi Degree Certificate: ವಿವಾದದ ಬೆನ್ನಲ್ಲೇ ಮೋದಿ ಡಿಗ್ರಿ ಸರ್ಟಿಫಿಕೇಟ್ ಬಿಡುಗಡೆ ಮಾಡಿದ ಸುಬ್ರಮಣಿಯನ್‌ ಸ್ವಾಮಿ

ಮೋದಿ ವಿರುದ್ಧವೂ ಕಿಡಿಕಾರಿದ್ದ ಬಿಜೆಪಿ ನಾಯಕ

ಅಚ್ಚರಿ ಎಂದರೆ ಸುಬ್ರಮಣಿಯನ್ ಸ್ವಾಮಿ ಕೆಲವು ತಿಂಗಳ ಹಿಂದೆ ಪ್ರಧಾನಿ ಮೋದಿ ವಿರುದ್ಧವೂ ಕಿಡಿಕಾರಿದ್ದರು. “ಟ್ವಿಟರ್‌ನಲ್ಲಿ ನರೇಂದ್ರ ಮೋದಿ ಅವರನ್ನು ಫಾಲೋ ಮಾಡುತ್ತಿರುವವರು ಮೂರ್ಖರು” ಎಂದು ಹೇಳಿ ಬಿಜೆಪಿ ನಾಯಕ ಕೆಂಗಣ್ಣಿಗೆ ಗುರಿಯಾಗಿದ್ದರು. “ಟ್ವಿಟರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಫಾಲೋ ಮಾಡುತ್ತಿರುವವರು ಮೂರ್ಖರು. ನರೇಂದ್ರ ಮೋದಿ ಅವರು ನನ್ನನ್ನು ಸಂಸದನನ್ನಾಗಿ ಮಾಡುವುದಿಲ್ಲ ಎಂದು ಫಾಲೋವರ್‌ಗಳು ಯಾವಾಗಲೂ ಹೇಳುತ್ತಿರುತ್ತಾರೆ. ಆದರೆ ಮೂರ್ಖರಿಗೆ ಇದು ಗೊತ್ತಿಲ್ಲ. ನಾನು ಈಗಾಗಲೇ ಸಂಸತ್ತನ್ನು ಆರು ಬಾರಿ ಪ್ರವೇಶಿಸಿದ್ದೇನೆ. ಮೂರು ಬಾರಿ ಲೋಕಸಭೆ ಸದಸ್ಯನಾಗಿ, ಮೂರು ಬಾರಿ ರಾಜ್ಯಸಭೆ ಸದಸ್ಯನಾಗಿದ್ದೇನೆ. ನಾನು ಮನಸ್ಸು ಮಾಡಿದರೆ ವಾರಾಣಸಿಯಿಂದಲೇ (ಮೋದಿ ಅವರ ಕ್ಷೇತ್ರ) ಸ್ಪರ್ಧಿಸಿ ಏಳನೇ ಬಾರಿ ಲೋಕಸಭೆ ಪ್ರವೇಶಿಸಬಲ್ಲೆ” ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದರು.

Continue Reading

ದೇಶ

Kolkata Doctor Murder Case: ಇಂದು ದೇಶಾದ್ಯಂತ ವೈದ್ಯರ ಮುಷ್ಕರ; ಏನಿರುತ್ತೆ? ಏನಿರಲ್ಲ?

Kolkata Doctor Murder Case: ಪಶ್ಚಿಮ ಬಂಗಾಳದ ಕೋಲ್ಕತಾ ಆರ್‌ಜಿ ಕರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದಿರುವ ಟ್ರೈನಿ ವೈದ್ಯೆಯ ಸಾಮೂಹಿಕ ಅತ್ಯಾಚಾರ ಹಾಗೂ ಬರ್ಬರ ಕೊಲೆಯನ್ನು ಖಂಡಿಸಿ ಇಂದು ದೇಶಾದ್ಯಂತ ವೈದ್ಯರು ಮುಷ್ಕರ ನಡೆಸುತ್ತಿದ್ದಾರೆ. ಶನಿವಾರ ಬೆಳಿಗ್ಗೆ 6 ಗಂಟೆಯಿಂದ ಭಾನುವಾರ ಬೆಳಿಗ್ಗೆ 6 ಗಂಟೆವರೆಗೆ 24 ಗಂಟೆಗಳ ಕಾಲ ರಾಷ್ಟ್ರವ್ಯಾಪಿ ತುರ್ತು ವೈದ್ಯಕೀಯ ಸೇವೆಯನ್ನು ಹೊರತುಪಡಿಸಿ ಉಳಿದೆಲ್ಲ ಹಿಂತೆಗೆದುಕೊಳ್ಳುವುದಾಗಿ ಭಾರತೀಯ ವೈದ್ಯಕೀಯ ಸಂಘ ಘೋಷಿಸಿದೆ.

VISTARANEWS.COM


on

Kolkata Doctor Murder Case
Koo

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಕೋಲ್ಕತಾ ಆರ್‌ಜಿ ಕರ್‌ (RG Kar Medical College and Hospital) ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದಿರುವ ಟ್ರೈನಿ ವೈದ್ಯೆಯ ಸಾಮೂಹಿಕ ಅತ್ಯಾಚಾರ ಹಾಗೂ ಬರ್ಬರ ಕೊಲೆಯ (Kolkata Doctor Murder Case) ವಿರುದ್ಧ ದೇಶಾದ್ಯಂತ ವ್ಯಾಪಕ ಆಕ್ರೋಶ ಭುಗಿಲೆದ್ದಿದ್ದು, ಭಾರತೀಯ ವೈದ್ಯಕೀಯ ಸಂಘ (Indian Medical Association) ಇಂದು (ಆಗಸ್ಟ್ 17) ದೇಶಾದ್ಯಂತ ಮುಷ್ಕರಕ್ಕೆ ಕರೆ ನೀಡಿದೆ. ಶನಿವಾರ ಬೆಳಿಗ್ಗೆ 6 ಗಂಟೆಯಿಂದ ಭಾನುವಾರ ಬೆಳಿಗ್ಗೆ 6 ಗಂಟೆವರೆಗೆ 24 ಗಂಟೆಗಳ ಕಾಲ ರಾಷ್ಟ್ರವ್ಯಾಪಿ ತುರ್ತು ವೈದ್ಯಕೀಯ ಸೇವೆಯನ್ನು ಹೊರತುಪಡಿಸಿ ಉಳಿದೆಲ್ಲ ಹಿಂತೆಗೆದುಕೊಳ್ಳುವುದಾಗಿ ಘೋಷಿಸಿದೆ.

ಸರ್ಕಾರಿ ಮತ್ತು ಖಾಸಗಿ ಆಸ್ಫತ್ರೆಗಳ ಓಪಿಡಿ ಬಂದ್ ಇರಲಿದ್ದು, ಎಮರ್ಜೆನ್ಸಿ ರೋಗಿಗಳಿಗೆ ಮಾತ್ರ ಚಿಕಿತ್ಸೆ ಸಿಗಲಿದೆ‌. ಎಲ್ಲ ವೈದ್ಯರು ಓಪಿಡಿ ಸೇವೆಗಳಿಗೆ ಹಾಜರಾಗದೆ ಪ್ರತಿಭಟನೆ ನಡೆಸಲಿದ್ದಾರೆ. ಇನ್ನು ಸರ್ಕಾರಿ ವೈದ್ಯರು ಕೈಗೆ ಕಪ್ಪು ಪಟ್ಟಿ ಧರಿಸಿ ಎಮರ್ಜೆನ್ಸಿ ಸೇವೆಯನ್ನ ಮಾತ್ರ ನೀಡಲಿದ್ದಾರೆ.

ಐಎಂಎ ಮುಂದಿಟ್ಟ 5 ಬೇಡಿಕೆ

ಭಾರತೀಯ ವೈದ್ಯಕೀಯ ಸಂಘ ಶುಕ್ರವಾರ 5 ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದೆ.

  • ವೈದ್ಯರ ಕರ್ತವ್ಯದ ಅವಧಿ ಮತ್ತು ಅವರು ಜೀವನ ರೀತಿಗಳನ್ನು ಕೂಲಂಕಷವಾಗಿ ಪರಿಶೀಲಿಸಬೇಕು. ಆರ್‌ಜಿ ಕರ್‌ ಆಸ್ಪತ್ರೆಯ ಸಂತ್ರಸ್ತೆ 36 ಗಂಟೆಗಳ ಕಾಲ ಕರ್ತವ್ಯ ನಿರ್ಶಿವಹಿಸಿದ್ದರು ಮತ್ತು ವಿಶ್ರಾಂತಿ ಪಡೆಯಲು ಅವರಿಗೆ ಸುರಕ್ಷಿತ ಸ್ಥಳಗಳ ಕೊರತೆ ಇತ್ತು. ಈ ಬಗ್ಗೆಯೂ ಗಮನ ಹರಿಸಬೇಕು ಎಂದು ಭಾರತೀಯ ವೈದ್ಯಕೀಯ ಸಂಘ ಆಗ್ರಹಿಸಿದೆ.
  • 1897ರ ಸಾಂಕ್ರಾಮಿಕ ರೋಗಗಳ ಕಾಯ್ದೆಗೆ 2023ರಲ್ಲಿ ಮಾಡಿದ ತಿದ್ದುಪಡಿಗಳನ್ನು 2019ರ ಉದ್ದೇಶಿತ ಆಸ್ಪತ್ರೆ ಸಂರಕ್ಷಣಾ ಮಸೂದೆಗೆ ಸೇರಿಸಬೇಕು. ಇದರಿಂದ 25 ರಾಜ್ಯಗಳಲ್ಲಿ ಅಸ್ತಿತ್ವದಲ್ಲಿರುವ ಕಾನೂನಿಗೆ ಇನ್ನಷ್ಟು ಬಲ ತುಂಬಿದಂತಾಗುತ್ತದೆ. ಕೋವಿಡ್ -19ರ ಸಮಯದಲ್ಲಿ ಜಾರಿಗೆ ತಂದ ಸುಗ್ರೀವಾಜ್ಞೆ ಈ ಪರಿಸ್ಥಿತಿಯಲ್ಲಿ ಸೂಕ್ತವಾಗಿದೆ ಎಂದು ಐಎಂಎ ಸೂಚಿಸಿದೆ.
  • ಆರ್‌ಜಿ ಕರ್ ಆಸ್ಪತ್ರೆಯ ಆವರಣದಲ್ಲಿ ನಡೆದ ವಿಧ್ವಂಸಕ ಕೃತ್ಯದಲ್ಲಿ ಭಾಗಿಯಾಗಿರುವವರನ್ನು ಗುರುತಿಸಿ ಕಠಿಣ ಶಿಕ್ಷೆ ವಿಧಿಸಬೇಕು. ಜತೆಗೆ ನಿರ್ದಿಷ್ಟ ಕಾಲಮಿತಿಯೊಳಗೆ ನಿಖರವಾದ ಮತ್ತು ವೃತ್ತಿಪರ ತನಿಖೆ ನಡೆಸಿ ನ್ಯಾಯ ಒದಗಿಸಬೇಕು ಎಂದು ಐಎಂಎ ಒತ್ತಾಯಿಸಿದೆ.
  • ಎಲ್ಲ ಆಸ್ಪತ್ರೆಗಳ ಭದ್ರತಾ ಪ್ರೋಟೋಕಾಲ್‌ಗಳನ್ನು ವಿಮಾನ ನಿಲ್ದಾಣದಲ್ಲಿರುವಂತೆ ಜಾರಿಗೊಳಿಸಬೇಕು. ಆಸ್ಪತ್ರೆಗಳನ್ನು ಸುರಕ್ಷಿತ ವಲಯಗಳಾಗಿ ಘೋಷಿಸಬೇಕು. ಸಿಸಿಟಿವಿ ಕ್ಯಾಮೆರಾಗಳು, ಭದ್ರತಾ ಸಿಬ್ಬಂದಿಯ ನಿಯೋಜನೆ ಮುಂತಾದ ಅಗತ್ಯ ಕ್ರಮ ಜಾರಿಯಾಗಬೇಕು ಎಂದು ಮನವಿ ಮಾಡಲಾಗಿದೆ.
  • ಕ್ರೌರ್ಯಕ್ಕೆ ಅನುಗುಣವಾಗಿ ದುಃಖಿತ ಕುಟುಂಬಕ್ಕೆ ಸೂಕ್ತ ಮತ್ತು ಘನತೆಯ ಪರಿಹಾರವನ್ನು ಒದಗಿಸಬೇಕು ಎಂದು ಭಾರತೀಯ ವೈದ್ಯಕೀಯ ಸಂಘ ಬೇಡಿಕೆ ಇಟ್ಟಿದೆ.

ಇಂದು ಲಭ್ಯವಿರುವ ಸೇವೆಗಳು

ತುರ್ತು ಚಿಕಿತ್ಸೆ, ಮೆಡಿಕಲ್ ಶಾಪ್ಸ್, ಇನ್ ಪೇಷೆಂಟ್ ಸೇವೆ, ಹೆರಿಗೆ ಮತ್ತು ಎಮರ್ಜೆನ್ಸಿ ಸರ್ಜರಿ.

ಲಭ್ಯವಿಲ್ಲದ ಸೇವೆಗಳು

ಓಪಿಡಿ, ಡಯಾಲಿಸಿಸ್, ಕ್ಲಿನಿಕ್ ಸೇವೆ, ಮಕ್ಕಳ ಓಪಿಡಿ, ಡೆಂಟಲ್ ಸರ್ವಿಸ್.

ಇದನ್ನೂ ಓದಿ: Kolkata Doctor murder case: ವೈದ್ಯೆ ಕೊಲೆ ಕೇಸ್‌; ಪ್ರತಿಭಟನಾಕಾರರ ಮೇಲೆ ವಾಹನ ಹರಿಸಲು ಪೊಲೀಸ್‌ ಯತ್ನ?

Continue Reading

ದೇಶ

Sabarmati Express: ಮತ್ತೊಂದು ರೈಲು ದುರಂತ; ಹಳಿ ತಪ್ಪಿದ ಸಬರ್‌ಮತಿ ಎಕ್ಸ್‌ಪ್ರೆಸ್‌

Sabarmati Express: ಉತ್ತರ ಪ್ರದೇಶದಲ್ಲಿ ಇಂದು (ಆಗಸ್ಟ್‌ 17) ಸಬರ್‌ಮತಿ ಎಕ್ಸ್‌ಪ್ರೆಸ್‌ ರೈಲಿನ ಕನಿಷ್ಠ 20 ಬೋಗಿಳು ಹಳಿ ತಪ್ಪಿವೆ. ಅದೃಷ್ಟವಶಾತ್‌ ಘಟನೆಯಲ್ಲಿ ಯಾರಿಗೂ ಯಾವುದೇ ರೀತಿಯ ಗಾಯಗಳಾಗಿಲ್ಲ. ವಾರಣಾಸಿಯಿಂದ ಅಹಮದಾಬಾದ್‌ಗೆ ತೆರಳುತ್ತಿದ್ದ ಸಬರ್‌ಮತಿ ಎಕ್ಸ್‌ಪ್ರೆಸ್‌ (ರೈಲು ಸಂಖ್ಯೆ 19168) ರೈಲಿನ 20 ಬೋಗಿಗಳು ಶನಿವಾರ ಮುಂಜಾನೆ ಉತ್ತರ ಪ್ರದೇಶದ ಕಾನ್ಪುರ ಮತ್ತು ಭೀಮಸೇನ್ ನಿಲ್ದಾಣಗಳ ನಡುವೆ ಹಳಿ ತಪ್ಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

VISTARANEWS.COM


on

Sabarmati Express
Koo

ಲಕ್ನೋ: ದೇಶದಲ್ಲಿ ಮತ್ತೊಂದು ರೈಲು ದುರಂತ ಸಂಭವಿಸಿದೆ. ಉತ್ತರ ಪ್ರದೇಶದಲ್ಲಿ ಇಂದು (ಆಗಸ್ಟ್‌ 17) ಸಬರ್‌ಮತಿ ಎಕ್ಸ್‌ಪ್ರೆಸ್‌ (Sabarmati Express) ರೈಲಿನ ಕನಿಷ್ಠ 20 ಬೋಗಿಳು ಹಳಿ ತಪ್ಪಿವೆ (Train Derail). ಅದೃಷ್ಟವಶಾತ್‌ ಘಟನೆಯಲ್ಲಿ ಯಾರಿಗೂ ಯಾವುದೇ ರೀತಿಯ ಗಾಯಗಳಾಗಿಲ್ಲ ಎಂದು ಮೂಲಗಳು ತಿಳಿಸಿವೆ.

ವಾರಣಾಸಿಯಿಂದ ಅಹಮದಾಬಾದ್‌ಗೆ ತೆರಳುತ್ತಿದ್ದ ಸಬರ್‌ಮತಿ ಎಕ್ಸ್‌ಪ್ರೆಸ್‌ (ರೈಲು ಸಂಖ್ಯೆ 19168) ರೈಲಿನ 20 ಬೋಗಿಗಳು ಶನಿವಾರ ಮುಂಜಾನೆ ಉತ್ತರ ಪ್ರದೇಶದ ಕಾನ್ಪುರ ಮತ್ತು ಭೀಮಸೇನ್ ನಿಲ್ದಾಣಗಳ ನಡುವೆ ಹಳಿ ತಪ್ಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಳಿಯಲ್ಲಿ ಬಿದ್ದಿದ್ದ ಬಂಡೆಗೆ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.

ʼʼಘಟನೆಯಲ್ಲಿ ಯಾವುದೇ ಪ್ರಾಣಹಾನಿ, ಗಾಯ ಉಂಟಾಗಿಲ್ಲ. ಪ್ರಯಾಣಿಕರನ್ನು ಕಾನ್ಪುರಕ್ಕೆ ತಲುಪಿಸಲು ಭಾರತೀಯ ರೈಲ್ವೆ ಇಲಾಖೆ ಸ್ಥಳಕ್ಕೆ ಬಸ್ಸುಗಳನ್ನು ಕಳುಹಿಸಿದೆ ಮತ್ತು ಅಲ್ಲಿಂದ ಅಹಮದಾಬಾದ್‌ಗೆ ಪ್ರಯಾಣ ಮುಂದುವರಿಸಲು ವ್ಯವಸ್ಥೆ ಮಾಡಲಾಗಿದೆʼʼ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಸುದ್ದಿ ತಿಳಿದ ಕೂಡಲೇ ಅವಘಡ ನಡೆದ ಸ್ಥಳಕ್ಕೆ ಅಗ್ನಿಶಾಮಕ ವಾಹನ ಮತ್ತು ಆ್ಯಂಬುಲೆನ್ಸ್‌ ಧಾವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ರೈಲ್ವೆ ಇಲಾಖೆ ಹೇಳಿದ್ದೇನು?

ರೈಲ್ವೆ ರೈಲು ವಿಚಾರಣಾ ವೆಬ್‌ಸೈಟ್‌ ಪ್ರಕಾರ, ಶನಿವಾರ ಮುಂಜಾನೆ 2:29ಕ್ಕೆ ಕಾನ್ಪುರ ಸೆಂಟ್ರಲ್ ನಿಲ್ದಾಣದಿಂದ ಹೊರಟ ಸುಮಾರು 30 ನಿಮಿಷಗಳ ನಂತರ ರೈಲು ಹಳಿ ತಪ್ಪಿದೆ. ಬಂಡೆಯೊಂದು ಎಂಜಿನ್‌ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಇಂಟೆಲಿಜೆನ್ಸ್‌ ಬ್ಯೂರೋ (Intelligence Bureau) ಮತ್ತು ಉತ್ತರ ಪ್ರದೇಶ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿರುವುದರಿಂದ ಘಟನಾ ಸ್ಥಳದಲ್ಲಿನ ಪುರಾವೆಗಳನ್ನು ಸಂರಕ್ಷಿಸಲಾಗುತ್ತಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.

ಹಲವು ರೈಲು ಸಂಚಾರ ರದ್ದು

ಘಟನೆಯ ಹಿನ್ನೆಲೆಯಲ್ಲಿ ಈ ಮಾರ್ಗದಲ್ಲಿ ಸಂಚರಿಸುತ್ತಿದ್ದ ಹಲವು ರೈಲು ಸೇವೆಗಳನ್ನು ರದ್ದುಗೊಳಿಸಲಾಗಿದೆ ಮತ್ತು ಕೆಲವು ರೈಲುಗಳಿಗೆ ಬದಲಿ ಮಾರ್ಗಗಳನ್ನು ಸೂಚಿಸಲಾಗಿದೆ.

ರದ್ದಾರ ರೈಲುಗಳು

  • ರೈಲು ಸಂಖ್ಯೆ 01823/01824 (ವಾರಣಾಸಿ ಜಂಕ್ಷನ್ – ಲಕ್ನೋ ಜಂಕ್ಷನ್)
  • ರೈಲು 11109 (ವಾರಣಾಸಿ ಜಂಕ್ಷನ್ – ಲಖಿಂಪುರ)
  • ರೈಲು 14110/14109 (ಕಾನ್ಪುರ – ಚಿತ್ರಕೂಟಂ)

ತಾತ್ಕಾಲಿಕವಾಗಿ ರದ್ದಾದ ರೈಲುಗಳು

  • ರೈಲು ಸಂಖ್ಯೆ 04143 (ಕುರೆಗಾಂವ್ – ಕಾನ್ಪುರ)
  • ರೈಲು ಸಂಖ್ಯೆ 04144 (ಕಾನ್ಪುರ – ಕುರೆಗಾಂವ್)

ಬದಲಿ ಮಾರ್ಗಗಳಲ್ಲಿ ಸಂಚರಿಸುವ ರೈಲುಗಳು

  • ರೈಲು ಸಂಖ್ಯೆ 05326 (ಲೋಕಮಾನ್ಯ ತಿಲಕ್ – ಗೋರಖ್ಪುರ)
  • ರೈಲು 20180/20181 (ಕಾನ್ಪುರ – ಮೀರತ್)
  • ರೈಲು ಸಂಖ್ಯೆ 01814/01813 (ಕಾನ್ಪುರ – ವಾರಣಾಸಿ ಜಂಕ್ಷನ್)
  • ರೈಲು ಸಂಖ್ಯೆ 01887/01888 (ಗ್ವಾಲಿಯರ್ – ಇಟಾವಾ)
  • ರೈಲು ಸಂಖ್ಯೆ 01889/01890 (ಗ್ವಾಲಿಯರ್ – ಬಿನಾ)
  • ರೈಲು ಸಂಖ್ಯೆ 11110 (ಲಖಿಂಪುರ – ವಾರಣಾಸಿ ಜಂಕ್ಷನ್)
  • ರೈಲು ಸಂಖ್ಯೆ 22537 (ಗೋರಖ್ಪುರ – ಲೋಕಮಾನ್ಯ ತಿಲಕ್)
  • ರೈಲು 20104 (ಗೋರಖ್ಪುರ – ಲೋಕಮಾನ್ಯ ತಿಲಕ್)

ಹೆಲ್ಪ್‌ಲೈನ್‌ ನಂಬರ್‌

ಪ್ರಯಾಗ್ ರಾಜ್ – 0532-2408128, 0532-2407353, ಕಾನ್ಪುರ – 0512-2323018, 0512-2323015, ಮಿರ್ಜಾಪುರ – 054422200097, ಇಟಾವಾ – 7525001249, ತುಂಡ್ಲಾ – 7392959702, ಅಹಮದಾಬಾದ್ – 07922113977, ವಾರಣಾಸಿ ನಗರ – 8303994411, ಗೋರಖ್ಪುರ – 0551-2208088.

ಇದನ್ನೂ ಓದಿ: Train Accident : ಎಕ್ಸ್​ಪ್ರೆಸ್​ ರೈಲು ಅಪಘಾತ; ನಾಲ್ವರ ಸಾವು, ಹಲವರಿಗೆ ಗಾಯ

Continue Reading

ಪ್ರಮುಖ ಸುದ್ದಿ

PM Narendra Modi: ಬೆಂಗಳೂರಿಗೆ ಸಿಹಿ ಸುದ್ದಿ; ನಮ್ಮ ಮೆಟ್ರೋ 3ನೇ ಹಂತಕ್ಕೆ ಕೇಂದ್ರ ಅಸ್ತು; ರಾಜ್ಯಕ್ಕೆ ಪ್ರಧಾನಿ ಮೋದಿ ವರಮಹಾಲಕ್ಷ್ಮಿ ಹಬ್ಬದ ಕೊಡುಗೆ

PM Narendra Modi: ಉದ್ದೇಶಿತ ಕಾರಿಡಾರ್‌-1ರಡಿ ಜೆ.ಪಿ.ನಗರ 4ನೇ ಹಂತದಿಂದ ಹೊರವರ್ತುಲ ರಸ್ತೆ ಮೂಲಕ ಹೆಬ್ಬಾಳದ ಕೆಂಪಾಪುರದವರೆಗೆ 32.15 ಕಿ.ಮೀ ಉದ್ದದ ಮೆಟ್ರೋ ಮಾರ್ಗ ನಿರ್ಮಾಣವಾಗಲಿದೆ. ಕಾರಿಡಾರ್‌-2ರಡಿ ಹೊಸಹಳ್ಳಿಯಿಂದ ಮಾಗಡಿ ರಸ್ತೆಯ ಕಡಬಗೆರೆವರೆಗೆ 12.50 ಕಿ.ಮೀ. ಉದ್ದದ ಮಾರ್ಗ ನಿರ್ಮಿಸಲಾಗುತ್ತಿದೆ.

VISTARANEWS.COM


on

namma metro pm narendra modi
Koo

ಬೆಂಗಳೂರು: ʼನಮ್ಮ ಮೆಟ್ರೋ’ದ (Namma Metro) ಬಹುನಿರೀಕ್ಷಿತ ಮೂರನೇ ಹಂತದ ಯೋಜನೆಗೆ ಕೇಂದ್ರ ಸಚಿವ ಸಂಪುಟ (Central Cabinet) ಶುಕ್ರವಾರ ಅನುಮೋದನೆ ನೀಡಿದೆ. ಈ ಮೂರನೇ ಹಂತದಲ್ಲಿ ಹೊಸದಾಗಿ ಎರಡು ಕಾರಿಡಾರ್‌ಗಳಲ್ಲಿ 44.65 ಕಿ.ಮೀ. ಉದ್ದದ ಮೆಟ್ರೋ ಮಾರ್ಗ ನಿರ್ಮಾಣವಾಗಲಿದೆ. ಇದು ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ನೀಡಿರುವ ವರಮಹಾಲಕ್ಷ್ಮಿ (Varamahalkshmi Festival) ಹಬ್ಬದ ಕೊಡುಗೆ ಎಂದು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ (HD Kumaraswamy) ಸಂತಸ ವ್ಯಕ್ತಪಡಿಸಿದ್ದಾರೆ.

“ಬಹು ನಿರೀಕ್ಷಿತ ₹15,611 ಕೋಟಿ ವೆಚ್ಚದ ಬೆಂಗಳೂರು ಮೆಟ್ರೋ ರೈಲು ಯೋಜನೆ ಹಂತ-3ರ ಎರಡು ಪಥಗಳ ಯೋಜನೆಗೆ ಕೇಂದ್ರ ಸಂಪುಟ ಅನುಮೋದನೆ ನೀಡಿದ್ದು, ಇದಕ್ಕಾಗಿ ನಾನು ಗೌರವಾನ್ವಿತ ಪ್ರಧಾನಿಗಳಾದ ನರೇಂದ್ರ ಮೋದಿ ಅವರನ್ನು ಅಭಿನಂದಿಸುತ್ತೇನೆ. ಕೇಂದ್ರ ಸರಕಾರವು ಬೆಂಗಳೂರು ನಗರದ ಜನತೆಗೆ ನೀಡಿರುವ ವರ ಮಹಾಲಕ್ಷ್ಮೀ ಹಬ್ಬದ ಉಡುಗೊರೆ ಎಂದೇ ನಾನು ಭಾವಿಸಿದ್ದೇನೆ. ಕರ್ನಾಟಕದ ಅಭಿವೃದ್ಧಿಯ ಬಗ್ಗೆ ಸಾಕಷ್ಟು ಉತ್ತೇಜನ ನೀಡುತ್ತಿರುವ ಮಾನ್ಯ ಪ್ರಧಾನಿಗಳಿಗೆ ನನ್ನ ಧನ್ಯವಾದಗಳು” ಎಂದು ಕುಮಾರಸ್ವಾಮಿ ಟ್ವೀಟ್‌ ಮಾಡಿದ್ದಾರೆ. ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ, ಸಂಸದರಾದ ಬಸವರಾಜ ಬೊಮ್ಮಾಯಿ, ಪಿಸಿ ಮೋಹನ್, ತೇಜಸ್ವಿ ಸೂರ್ಯ ಕೂಡ ಇದನ್ನು ಸ್ವಾಗತಿಸಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಎಲ್ಲಿಂದ ಎಲ್ಲಿವರೆಗೆ ಮೆಟ್ರೋ ಮಾರ್ಗ?

ಉದ್ದೇಶಿತ ಕಾರಿಡಾರ್‌-1ರಡಿ ಜೆ.ಪಿ.ನಗರ 4ನೇ ಹಂತದಿಂದ ಹೊರವರ್ತುಲ ರಸ್ತೆ ಮೂಲಕ ಹೆಬ್ಬಾಳದ ಕೆಂಪಾಪುರದವರೆಗೆ 32.15 ಕಿ.ಮೀ ಉದ್ದದ ಮೆಟ್ರೋ ಮಾರ್ಗ ನಿರ್ಮಾಣವಾಗಲಿದೆ. ಈ ಮಾರ್ಗದಲ್ಲಿ ಒಟ್ಟು 21 ನಿಲ್ದಾಣಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ. ಜೆ.ಪಿ.ನಗರ 4ನೇ ಹಂತ-ಕೆಂಪಾಪುರ ಮೆಟ್ರೋ ಮಾರ್ಗವು ಕೆ.ಆರ್‌.ಪುರ-ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಾರ್ಗದೊಂದಿಗೆ ಸಂಪರ್ಕ ಬೆಸೆಯಲಿದೆ. ಅಲ್ಲದೆ, ಹಸಿರು ಬಣ್ಣದ ಮಾರ್ಗಕ್ಕೂ ಸಂಪರ್ಕ ಬೆಸೆಯಲಿದೆ. ಸಾರಕ್ಕಿ ಜಂಕ್ಷನ್‌ನಲ್ಲೂ ಇಂಟರ್‌ಚೇಂಜ್‌ ನಿಲ್ದಾಣ ನಿರ್ಮಾಣವಾಗುವ ಸಾಧ್ಯತೆಗಳಿವೆ.

ಕಾರಿಡಾರ್‌-2ರಡಿ ಹೊಸಹಳ್ಳಿಯಿಂದ ಮಾಗಡಿ ರಸ್ತೆಯ ಕಡಬಗೆರೆವರೆಗೆ 12.50 ಕಿ.ಮೀ. ಉದ್ದದ ಮಾರ್ಗ ನಿರ್ಮಿಸಲಾಗುತ್ತಿದೆ. ಈ ಮಾರ್ಗದಲ್ಲಿ ಒಟ್ಟು 9 ನಿಲ್ದಾಣಗಳು ಇರಲಿವೆ. ಈ ಮೆಟ್ರೋ ಯೋಜನೆಯು ಉಪನಗರ ರೈಲು, ಬಸ್‌ ನಿಲ್ದಾಣ, ಮೆಟ್ರೋ ನಿಲ್ದಾಣ ಸೇರಿದಂತೆ 9 ಕಡೆ ಸಂಪರ್ಕ ಕಲ್ಪಿಸುತ್ತದೆ. ಸುಮನಹಳ್ಳಿ ಜಂಕ್ಷನ್‌ನಲ್ಲಿ ಇಂಟರ್‌ಚೇಂಜ್‌ ನಿಲ್ದಾಣ ನಿರ್ಮಾಣವಾಗಲಿದೆ.

ಮೆಟ್ರೋ 3ನೇ ಹಂತದ ಯೋಜನೆಗೆ 15,611 ಕೋಟಿ ರೂ. ವೆಚ್ಚವಾಗಬಹುದೆಂದು ಅಂದಾಜಿಸಲಾಗಿದ್ದು, 2029ಕ್ಕೆ ಪೂರ್ಣಗೊಳಿಸಲು ಉದ್ದೇಶಿಸಲಾಗಿದೆ. ಮೆಟ್ರೋ 3ನೇ ಹಂತದಡಿ 44.65 ಕಿ.ಮೀ. ಮಾರ್ಗ ನಿರ್ಮಾಣದೊಂದಿಗೆ ಬೆಂಗಳೂರಿನ ಮೆಟ್ರೋ ಜಾಲವು 220.20 ಕಿ.ಮೀ.ಗೆ ವಿಸ್ತರಿಸಲ್ಪಡಲಿದೆ. ಈ ಬಹುನಿರೀಕ್ಷಿತ ಮೆಟ್ರೋ ಯೋಜನೆಗೆ ಕೇಂದ್ರ ಸಚಿವ ಸಂಪುಟವು ಒಪ್ಪಿಗೆ ಕೊಟ್ಟಿದೆ.

ಕಾರಿಡಾರ್‌-1ರಲ್ಲಿನ ನಿಲ್ದಾಣಗಳು

ಜೆ.ಪಿ.ನಗರ 4ನೇ ಹಂತ, ಜೆ.ಪಿ.ನಗರ 5ನೇ ಹಂತ, ಜೆ.ಪಿ.ನಗರ, ಕದಿರೇನಹಳ್ಳಿ, ಕಾಮಾಕ್ಯ ಬಸ್‌ ನಿಲ್ದಾಣ, ಹೊಸಕೆರೆಹಳ್ಳಿ ಕ್ರಾಸ್‌, ಪಿಇಎಸ್‌ ಕಾಲೇಜು, ಮೈಸೂರು ರಸ್ತೆಯ ನಾಗರಬಾವಿ ವೃತ್ತ, ವಿನಾಯಕ ಲೇಔಟ್‌, ಅಂಬೇಡ್ಕರ್‌ ಇನ್ಸ್‌ಟಿಟ್ಯೂಟ್‌ ಆಫ್‌ ಎಂಜಿನಿಯರಿಂಗ್‌ ಕಾಲೇಜು, ನಾಗರಬಾವಿ ಬಿಡಿಎ ಕಾಂಪ್ಲೆಕ್ಸ್‌, ಸುಮನಹಳ್ಳಿ ಜಂಕ್ಷನ್‌, ಚೌಡೇಶ್ವರಿನಗರ, ಫ್ರೀಡಂ ಫೈಟರ್‌ ಕ್ರಾಸ್‌, ಕಂಠೀರವ ಸ್ಟುಡಿಯೋ, ಪೀಣ್ಯ, ಬಾಹುಬಲಿನಗರ, ಬಿಇಎಲ್‌ ವೃತ್ತ, ಪಟೇಲಪ್ಪ ಲೇಔಟ್‌, ಹೆಬ್ಬಾಳ, ಕೆಂಪಾಪುರ.

ಕಾರಿಡಾರ್‌-2ರಲ್ಲಿನ ನಿಲ್ದಾಣಗಳು

ಹೊಸಹಳ್ಳಿ, ಕೆಎಚ್‌ಬಿ ಕಾಲೋನಿ, ವಿನಾಯಕ ನಗರ, ಸುಮನಹಳ್ಳಿ ಜಂಕ್ಷನ್‌, ಸುಂಕದಕಟ್ಟೆ, ಹೇರೋಹಳ್ಳಿ, ಬ್ಯಾಡರಹಳ್ಳಿ, ಫಾರೆಸ್ಟ್‌ ಗೇಟ್‌, ಕಡಬಗೆರೆ.

ಇದನ್ನೂ ಓದಿ: Namma Metro: ಹಸಿರು ಮಾರ್ಗದಲ್ಲಿ ಇಂದಿನಿಂದ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯ

Continue Reading
Advertisement
Subramanian Swamy
ದೇಶ9 mins ago

Subramanian Swamy: ರಾಹುಲ್‌ ಗಾಂಧಿಯ ಭಾರತೀಯ ಪೌರತ್ವ ರದ್ದುಗೊಳಿಸಿ; ಹೈಕೋರ್ಟ್‌ಗೆ ಮೊರೆ ಹೋದ ಸುಬ್ರಮಣಿಯನ್ ಸ್ವಾಮಿ

Pro Kabaddi 2024
ಕ್ರೀಡೆ14 mins ago

Pro Kabaddi 2024: ಈ ಬಾರಿ ಬೆಂಗಳೂರು ಬುಲ್ಸ್​ ತಂಡ ಹೇಗಿದೆ?

Stree 2 Box Office Day 2 Shraddha Kapoor-Rajkummar Rao Film Creates History
ಬಾಲಿವುಡ್23 mins ago

Stree 2 Box Office: ಗೆದ್ದು ಬೀಗಿದ ‘ಸ್ತ್ರೀ 2’ ಚಿತ್ರ; ಎರಡೇ ದಿನದಲ್ಲಿ 100 ಕೋಟಿ ರೂ. ಭರ್ಜರಿ ಕಲೆಕ್ಷನ್‌!

tipper road accident
ಬೆಂಗಳೂರು27 mins ago

Road Accident: ಟಿಪ್ಪರ್‌ ರೂಪದಲ್ಲಿ ಬಂದ ಯಮ, ಮನೆ ಮುಂದೆ ಆಟವಾಡುತ್ತಿದ್ದ ಇಬ್ಬರು ಮಕ್ಕಳು ನಜ್ಜುಗುಜ್ಜು

car death udupi news
ಉಡುಪಿ52 mins ago

Udupi News: ಕಾರಿನ ಗ್ಲಾಸ್ ಮುಚ್ಚಿ ಮಲಗಿದ್ದ ವ್ಯಕ್ತಿ ಉಸಿರುಗಟ್ಟಿ ಸಾವು

Robin Uthappa
ಕ್ರೀಡೆ58 mins ago

Robin Uthappa: ಚೆಕ್ ಬೌನ್ಸ್ ಪ್ರಕರಣದಲ್ಲಿ ರಾಬಿನ್ ಉತ್ತಪ್ಪಗೆ ಬಿಗ್ ರಿಲೀಫ್; ಜಾಮೀನು ರಹಿತ ವಾರೆಂಟ್​ಗೆ ಹೈಕೋರ್ಟ್ ತಡೆ

Kolkata Doctor Murder Case
ದೇಶ1 hour ago

Kolkata Doctor Murder Case: ಇಂದು ದೇಶಾದ್ಯಂತ ವೈದ್ಯರ ಮುಷ್ಕರ; ಏನಿರುತ್ತೆ? ಏನಿರಲ್ಲ?

Kannada New Movie Langoti man trailer Out d k shivakumar invite
ಸ್ಯಾಂಡಲ್ ವುಡ್1 hour ago

Kannada New Movie: ಆಗಸ್ಟ್ 19 ರಂದು ʻಲಂಗೋಟಿ ಮ್ಯಾನ್ʼ ಚಿತ್ರದ ಟ್ರೈಲರ್‌ ಬಿಡುಗಡೆ ಸಮಾರಂಭ; ಡಿ.ಕೆ.ಶಿವಕುಮಾರ್‌ಗೆ ಆಹ್ವಾನ ಕೊಟ್ಟ ಚಿತ್ರತಂಡ!

doctors strike opd close
ಕರ್ನಾಟಕ1 hour ago

Doctors Strike: ಗಮನಿಸಿ, ಇಂದು ಯಾವುದೇ ಆಸ್ಪತ್ರೆಯಲ್ಲಿ ಒಪಿಡಿ ಇಲ್ಲ

Raksha Bandhan 2024
Latest1 hour ago

Raksha Bandhan 2024: ರಕ್ಷಾ ಬಂಧನದ ಹಿನ್ನೆಲೆ ಏನು? ರಾಖಿ ಕಟ್ಟಲು ಯಾವುದು ಶುಭ ಮುಹೂರ್ತ?

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ1 week ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 week ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 week ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌