karnataka elections ks eshwarappa asks mallikarjuna kharge to retire from politics Karnataka Elections : ಮೋದಿಯನ್ನು ವಿಷದ ಹಾವು ಎಂದ ಖರ್ಗೆ ರಾಜಕೀಯದಲ್ಲಿ ಇರಬಾರದು; ಕೆ.ಎಸ್‌ ಈಶ್ವರಪ್ಪ - Vistara News

ಕರ್ನಾಟಕ

Karnataka Elections : ಮೋದಿಯನ್ನು ವಿಷದ ಹಾವು ಎಂದ ಖರ್ಗೆ ರಾಜಕೀಯದಲ್ಲಿ ಇರಬಾರದು; ಕೆ.ಎಸ್‌ ಈಶ್ವರಪ್ಪ

KS Eshwarappa : ಪ್ರಧಾನಿ ನರೇಂದ್ರ ಮೋದಿ ಅವರನ್ನು ವಿಷದ ಹಾವೆಂದು ಕರೆಯುವ ಮೂಲಕ ಖರ್ಗೆ ಅವರು ಸೋನಿಯಾ ಹಾಗೂ ರಾಹುಲ್‌ ಗಾಂಧಿ ಅವರನ್ನು ಓಲೈಸುತ್ತಿದ್ದಾರೆ ಎಂದಿದ್ದಾರೆ ಕೆ.ಎಸ್‌. ಈಶ್ವರಪ್ಪ.

VISTARANEWS.COM


on

karnataka elections ks eshwarappa asks mallikarjuna kharge to retire from politics
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹಾಸನ: ʻʻಮಲ್ಲಿಕಾರ್ಜುನ ಖರ್ಗೆ (Mallikarjuna Kharge) ಅವರೇ ನಿಮಗೆ ಇಳಿ ವಯಸ್ಸು ಇದು. ನಾವೆಲ್ಲರೂ ಗೌರವ ಕೊಡ್ತಾ ಇದ್ದಂತಹ ಖರ್ಗೆ ನೀವು. ನಿಮ್ಮ‌ ಬಾಯಲ್ಲಿ ಇಂತಹ ಮಾತು ಬಂದ ಮೇಲೆ ನೀವು ರಾಜಕೀಯ ನಿವೃತ್ತಿ ತಗೋಳೋದೇ ಒಳ್ಳೆಯದು. ರಾಜಕೀಯದಲ್ಲಿ ಇರಬೇಡಿ ನೀವುʼʼ- ಪ್ರಧಾನಿ ನರೇಂದ್ರ ಮೋದಿ ಅವರನ್ನು ವಿಷದ ಹಾವಿಗೆ ಹೋಲಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ಇದು.

ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಹಳ್ಳಿಮೈಸೂರಿಗೆ ವಿಧಾನಸಭಾ ಚುನಾವಣೆಯ (Karnataka Elections) ಪ್ರಚಾರಕ್ಕೆ ಬಂದಿದ್ದ ಅವರು ಹೇಳಿಕೆ ನೀಡಿ, ʻʻಎಐಸಿಸಿ ಅಧ್ಯಕ್ಷ ಸ್ಥಾನ ಗಿಟ್ಟಿಸಿಕೊಂಡ ನಂತರ ಇನ್ನೇನಾದರೂ ಒಳ್ಳೆಯ ಸ್ಥಾನ ತಗೊಬೇಕು ಅಂದರೆ ಆ ಇಬ್ಬರನ್ನು ತೃಪ್ತಿಯಲ್ಲಿ ಇಟ್ಕಬೇಕು (ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ) ಎಂದು ವಿಶ್ವ ನಾಯಕ ನರೇಂದ್ರಮೋದಿ ಅವರನ್ನು ವಿಷ ಸರ್ಪಕ್ಕೆ ಹೋಲಿಸುತ್ತಿದ್ದೀರಾ ಮಾನ್ಯ ಖರ್ಗೆಯವರೇʼʼ ಎಂದು ಪ್ರಶ್ನಿಸಿದರು.

ʻʻಯುವಕರು, ಹೆಣ್ಣುಮಕ್ಕಳು ಖರ್ಗೆ ಬಾಯಲ್ಲಿ ಏನು ಬರುತ್ತೆ ಅಂತ ನೋಡುತ್ತಾ ಇರ್ತಾರೆ. ಇಂತಹ ಸಂದರ್ಭದಲ್ಲಿ ನೀವು ಮೋದಿ ಅವರನ್ನು ವಿಷದ ಹಾವು ಅಂದರೆ ಹೇಗೆ? ನನಗೆ ಖರ್ಗೆ ಅವರನ್ನು ಟೀಕೆ ಮಾಡುವಂತಹ ಪದಗಳೇ ಬರ್ತಿಲ್ಲ. ಏಕೆಂದರೆ ಅವರು ಹಿರಿಯರು. ನಮ್ಮ ಪಕ್ಷದಲ್ಲಿ ಹಿರಿಯರಿಗೆ ಗೌರವ ಕೊಡಬೇಕು ಅಂತ ಕಲಿಸಿಕೊಡಲಾಗುತ್ತದೆ., ನಮ್ಮ‌ ಸಂಸ್ಕೃತಿಯೇ ಅದು. ಆದರೆ ಹಿರಿತನಕ್ಕೆ ಬೆಲೆ ಕೊಡದಿದ್ದಾಗ ಏನು ಮಾಡಬೇಕು? ನಾನು ಇದನ್ನು ರಾಜ್ಯದ ಜನಕ್ಕೆ ಬಿಡುತ್ತೇನೆ. ಖರ್ಗೆ ಹೇಳಿದ್ದು ಸರಿನೋ ತಪ್ಪೋ ನೀವು ತೀರ್ಮಾನ ಮಾಡಿ. ಮೋದಿ ಅವರ ಬಗ್ಗೆ ಖರ್ಗೆ ಹೇಳಿದ್ದು ಸರಿ ಅಂದರೆ ಕಾಂಗ್ರೆಸ್‌ಗೆ ಓಟು ಕೊಡಿ, ಅಯೋಗ್ಯದ ಮಾತು ಅನಿಸಿದರೆ ಬಿಜೆಪಿಗೆ ವೋಟು ಕೊಡಿʼʼ ಎಂದು ಹೇಳಿದರು.

ʻʻಮಲ್ಲಿಕಾರ್ಜುನ ಖರ್ಗೆ ಅವರ ಬಗ್ಗೆ ನನಗೆ ಬಹಳ ಗೌರವವಿತ್ತು. ತಂದೆ ಸಮಾನ ಅಂತ ಅಂದುಕೊಂಡಿದ್ದೆ ನಾನು. ರಾಜಕಾರಣ ಮಾಡಲಿ ನಾನು ಬೇಡ ಅನ್ನಲ್ಲ. ಆದರೆ ಅವರ ಬಾಯಿಂದ ಬರ್ತಿರುವ ಮಾತು ಕೇಳಿ ನನಗೆ ತುಂಬಾ ನೋವಾಯ್ತು. ಸ್ವಲ್ಪ ದಿನದ ಕೆಳಗೆ ವಿಶ್ವವೆ ಮೆಚ್ಚಿರುವ ಮೋದಿಯನ್ನು ರಾವಣ ಅಂತ ಕರೆದ್ರು. ನಿನ್ನೆ ವಿಷದ ಹಾವು ಎಂದರು. ಇದು ಸರಿಯಾ ನೀವೇ ತೀರ್ಮಾನ ಮಾಡಿʼʼ ಎಂದು ಹೇಳಿದರು.

ಸಿದ್ಧಾಂತವಿಲ್ಲ ವಿರೋಧ ಪಕ್ಷಗಳು

ʻʻಒಂದ್ಕಡೆ ಡಿ.ಕೆ.ಶಿವಕುಮಾರ್ ಕ್ಯಾಂಡಿಡೇಟ್, ಇನ್ನೊಂದು ಕಡೆ ಸಿದ್ದರಾಮಯ್ಯ ಅವರ ಕ್ಯಾಂಡಿಡೇಟ್, ಇನ್ನೊಂದು ಕಡೆ ದೇವೇಗೌಡರ ಕ್ಯಾಂಡಿಡೇಟ್. ಮೂರು ವ್ಯಕ್ತಿಗಳು ಯಾವುದಾದರೂ ಸಿದ್ಧಾಂತದ ತಳಹದಿ ಮೇಲೆ ಓಟು ಕೇಳ್ತಾ ಇದ್ದಾರೆʼʼ ಎಂದು ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷಗಳನ್ನು ಟೀಕಿಸಿದರು ಕೆ.ಎಸ್‌. ಈಶ್ವರಪ್ಪ.

ʻʻಸಿದ್ದರಾಮಯ್ಯ ಡಿ.ಕೆ.ಶಿವಕುಮಾರ್ ಬಹಳ ಚೆನ್ನಾಗಿ ಬಡಿದಾಡುತ್ತಿದ್ದಾರೆ. ಅವರ ಅಭ್ಯರ್ಥಿ ವಿರುದ್ಧ ಇವರು, ಇವರ ಅಭ್ಯರ್ಥಿ ವಿರುದ್ಧ ಅವರು. ಮೇಲ್ನೋಟಕ್ಕೆ ಹೇಳ್ತಿದ್ದಾರೆ ಕಾಂಗ್ರೆಸ್ ಪಕ್ಷ ಗೆಲ್ಲುತ್ತೆ ಅಂತ. ಕಾಂಗ್ರೆಸ್ ಪಕ್ಷದವರು ಯಾರು, ಅದರಲ್ಲಿ ರೆಬೆಲ್ ಆಗಿ ನಿಂತೋರ ಪಕ್ಷ ಯಾವುದು?ʼʼ ಎಂದು ಕೇಳಿದ ಅವರು, ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಒಟ್ಟಿಗೆ ನಿಂತು ಅರಕಲಗೂಡಿನಲ್ಲಿ ಇಬ್ಬರೂ ಸೇರಿ ಒಬ್ಬರನ್ನ ಗೆಲ್ಲಿಸುತ್ತೇವೆ ಎಂದು ಸವಾಲು ಹಾಕಿದರು.

ʻʻಒಂದ್ಕಡೆ ಎಲ್ಲಾ ಒಕ್ಕಲಿಗರು ನನ್ನ ಹಿಂದೆ ಬನ್ನಿ ನಾನು ಮುಖ್ಯಮಂತ್ರಿ ಆಗ್ತೀನಿʼʼ ಎಂದು ಡಿ.ಕೆ.ಶಿವಕುಮಾರ್ ಹೇಳುತ್ತಿದ್ದಾರೆ, ಮತ್ತೊಂದು ಕಡೆ ಸಿದ್ದರಾಮಯ್ಯನವರು ಎಲ್ಲಾ ಹಿಂದುಳಿದ ವರ್ಗದವರು ನನ್ನ ಹಿಂದೆ ಬನ್ನಿ ನಾನು ಮುಖ್ಯಮಂತ್ರಿ ಆಗುತ್ತೇನೆ ಎನ್ನುತ್ತಿದ್ದಾರೆ. ಒಂದ್ಕಡೆ ಒಕ್ಕಲಿಗರು ಬರಬೇಕಂತೆ, ಒಂದ್ಕಡೆ ಹಿಂದುಳಿದವರು ಬರಬೇಕಂತೆ. ಇದರ ನಡುವೆ ಅವರೇ ಭಾರತೀಯ ಜನತಾ ಪಾರ್ಟಿ ಕೋಮುವಾದಿ ಅಂತಾರೆ. ಎಷ್ಟು ಚೆನ್ನಾಗಿದೆ ನೋಡ್ರಿ ಈ ವಾದʼʼ ಎಂದು ಪ್ರಶ್ನಿಸಿದರು.

ʻʻಇಡೀ ದೇಶ ನಮ್ಮದು, ಪ್ರತಿಯೊಬ್ಬ ಕಾರ್ಯಕರ್ತನ ಹೃದಯದಲ್ಲಿ ಭಾರತ ನಮ್ಮದು ಎಂಬ ಭಾವನೆ ಸೃಷ್ಟಿ ಮಾಡುತ್ತಿರುವ ಭಾರತೀಯ ಜನತಾ ಪಾರ್ಟಿಗೆ ಕೋಮುವಾದಿ ಅಂತ ಕರಿತೀದ್ದಾರಲ್ಲಾ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಇವರ ನಾಲಿಗೆಗೆ ಹುಳ ಬೀಳುತ್ತಾ ಇಲ್ವೋ ನೀವೇ ಹೇಳಿʼʼ ಎಂದು ಕೇಳಿದರು ಕೆ.ಎಸ್‌. ಈಶ್ವರಪ್ಪ.

ಇದನ್ನೂ ಓದಿ : Karnataka Election 2023: ಖರ್ಗೆ ತುಂಬಾ ಒಳ್ಳೆಯವರು, ಅವರು ಸಿದ್ದರಾಮಯ್ಯ ರೀತಿ ಮಾತನಾಡೋದು ಬೇಡ ಎಂದ ಸಿಂಹ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

CM Siddaramaiah: 370 ನಿವೃತ್ತ ಅಧಿಕಾರಿಗಳಿಗೆ ಬಾಗಿಲು ತೋರಿಸಿದ ಸರಕಾರ

CM Siddaramaiah: ಸದ್ಯ 20 ಇಲಾಖೆಗಳ ಮುಖ್ಯಸ್ಥರಿಗೆ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಈ ಬಗ್ಗೆ ಪತ್ರ ಬರೆದಿದ್ದಾರೆ. ವಿವಿಧ ಹುದ್ದೆಗಳಿಗೆ ನೇಮಕವಾಗಿದ್ದ ನಿವೃತ್ತ ಅಧಿಕಾರಿಗಳಿಗೆ ಶಾಕ್ ಆಗುವಂತೆ, ಸರಿಸುಮಾರು 370ಕ್ಕೂ ಹೆಚ್ಚು ನಿವೃತ್ತ ನೌಕರರಿಗೆ ಸರ್ಕಾರದಿಂದ ಖೊಕ್ ಸಿಗುತ್ತಿದೆ.

VISTARANEWS.COM


on

CM Siddaramaiah and Vidhanasoudha
Koo

ಬೆಂಗಳೂರು: ಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿರುವ ನಿವೃತ್ತ ಅಧಿಕಾರಿಗಳನ್ನು (retired employees) ಸೇವೆಯಿಂದ ಕೈ ಬಿಡುವಂತೆ ವಿವಿಧ ಇಲಾಖಾ ಮುಖ್ಯಸ್ಥರಿಗೆ ಮುಖ್ಯಮಂತ್ರಿಗಳ (CM Siddaramaiah) ಮುಖ್ಯ ಕಾರ್ಯದರ್ಶಿ (Chief Secretary) ಪತ್ರ ಬರೆದಿದ್ದಾರೆ. ಸರಕಾರದ (Karnataka Govt) ಮೇಲಿನ ಹಣದ ಹೊರೆ (Fiscal deficit) ತಪ್ಪಿಸಲು ಈ ನಡೆ ಕೈಗೊಳ್ಳಲಾಗಿದೆ.

ಆರ್ಥಿಕ ಶಿಸ್ತು ಜಾರಿ‌ ಮಾಡಲು ನಾನಾ ಕಸರತ್ತು ನಡೆಸುತ್ತಿರುವ ಸಿಎಂ ಸಿದ್ದರಾಮಯ್ಯ, ಈ ಹಿಂದೆಯೂ ಒಮ್ಮೆ ಈ ಕೆಲಸ ಮಾಡಲು ಸೂಚಿಸಿದ್ದರು. ಸದ್ಯ 20 ಇಲಾಖೆಗಳ ಮುಖ್ಯಸ್ಥರಿಗೆ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಈ ಬಗ್ಗೆ ಪತ್ರ ಬರೆದಿದ್ದಾರೆ. ವಿವಿಧ ಹುದ್ದೆಗಳಿಗೆ ನೇಮಕವಾಗಿದ್ದ ನಿವೃತ್ತ ಅಧಿಕಾರಿಗಳಿಗೆ ಶಾಕ್ ಆಗುವಂತೆ, ಸರಿಸುಮಾರು 370ಕ್ಕೂ ಹೆಚ್ಚು ನಿವೃತ್ತ ನೌಕರರಿಗೆ ಸರ್ಕಾರದಿಂದ ಖೊಕ್ ಸಿಗುತ್ತಿದೆ.

ಆರ್ಥಿಕ ಹೊರೆ ತಪ್ಪಿಸಲು ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಜನವರಿ 9ರಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದರು. ಹೊರಗುತ್ತಿಗೆಯಲ್ಲಿ ನೇಮಕವಾದ ನಿವೃತ್ತ ಅಧಿಕಾರಿಗಳನ್ನು ಸೇವೆಯಿಂದ ಬಿಡುಗಡೆ ಮಾಡಿ; ಆ ಹುದ್ದೆಯಲ್ಲಿ ಸೇವೆಯಲ್ಲಿರುವ ಅಧಿಕಾರಿಗಳನ್ನು ನಿಯೋಜನೆ ಮಾಡಿ ಎಂದು ಸೂಚನೆ ನೀಡಿದ್ದರು. ಸಿಎಂ ಸೂಚನೆ ಮೇರೆಗೆ ಜನವರಿ 23 ಮತ್ತು ಫೆಬ್ರವರಿ 22ರಂದು ಇಲಾಖೆಗಳಿಗೆ ಸಿಎಸ್ ಅವರಿಂದ ಟಿಪ್ಪಣಿ ರವಾನೆ ಆಗಿತ್ತು.

ಆದರೂ ನಿವೃತ್ತ ನೌಕರರನ್ನು ಕೈ ಬಿಡುವ ಪ್ರಕ್ರಿಯೆ ಯಾವುದೇ ಮುನ್ನಡೆ ಕಂಡಿರಲಿಲ್ಲ. ಹೀಗಾಗಿ ಮತ್ತೊಮ್ಮೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದು, ಸಿಎಂ ಸೂಚನೆ ಮೇರೆಗೆ ವಿವಿಧ ಇಲಾಖೆಗಳಿಗೆ ಸಿಎಸ್ ಪತ್ರ ಬರೆದಿದ್ದಾರೆ. ಹೊರಗುತ್ತಿಗೆ ಆಧಾರದಲ್ಲಿ ನಿರ್ವಹಿಸಲಾಗುತ್ತಿರುವ ಈ ಕಾರ್ಯಗಳ ಹೆಚ್ಚಿನ ಹೊಣೆ ಈಗಿನ ಇಲಾಖಾ ಅಧಿಕಾರಿಗಳ ಮೇಲೆ ಬೀಳಲಿದೆ.

ಈ ಹಿಂದಿನ ಸಿಎಂ ಟಿಪ್ಪಣಿಯಲ್ಲೇನಿದೆ?

“ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಹಿತ ಹಲವು ಇಲಾಖೆ- ಸಚಿವಾಲಯಗಳಲ್ಲಿ ಅನಗತ್ಯವಾಗಿ ಹುದ್ದೆಗಳನ್ನು ಸೃಷ್ಟಿಸಿ, ಸರ್ಕಾರಿ ಸೇವೆಯಿಂದ ನಿವೃತ್ತಿ ಹೊಂದಿದ ಅಧಿಕಾರಿ, ನೌಕರರನ್ನು ಸಮಾಲೋಚಕ, ವಿಶೇಷ ಸಂಪನ್ಮೂಲ ವ್ಯಕ್ತಿಗಳೆಂದು ಹಾಗೂ ಕೆಲವು ಗ್ರೂಪ್-ಎ ವೃಂದದ ಹುದ್ದೆಗಳಿಗೂ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಂಡಿರುವುದು ಗಮನಕ್ಕೆ ಬಂದಿದೆ. ಈ ನಿವೃತ್ತ ನೌಕರರಿಗೆ ವೇತನ, ವಾಹನ ಸೌಲಭ್ಯ ಇನ್ನಿತರ ಸೌಲಭ್ಯ ನೀಡಲಾಗುತ್ತಿದೆ. ಇದರಿಂದ ಬೊಕ್ಕಸಕ್ಕೆ ಹೆಚ್ಚುವರಿ ಹೊರೆಯಾಗುವುದಲ್ಲದೆ, ಕಾರ್ಯಕ್ಷಮತೆಯ ಗುಣಮಟ್ಟ ಹಾಗೂ ಉತ್ತರದಾಯಿತ್ವದ ಕೊರತೆಯೂ ಎದ್ದು ಕಾಣುತ್ತಿದೆ. ಆದ್ದರಿಂದ, ಸದರಿ ಹುದ್ದೆಗಳಿಗೆ ಹಾಲಿ ಸರ್ಕಾರಿ ಸೇವೆಯಲ್ಲಿರುವ ಅಧಿಕಾರಿ, ನೌಕರರನ್ನು ನಿಯೋಜಿಸಲು ಸೂಚಿಸಲಾಗಿದೆ.”

“ಹಾಗೆಯೇ, ವಿವಿಧ ಇಲಾಖೆಗಳಲ್ಲಿ ಗುತ್ತಿಗೆ, ಹೊರಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ನಿವೃತ್ತ ನೌಕರರನ್ನು ಕೂಡಲೇ ಸೇವೆಯಿಂದ ಬಿಡುಗಡೆಗೊಳಿಸಲು ಅಗತ್ಯ ಕ್ರಮ ವಹಿಸುವಂತೆ ಸೂಚಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸೂಚನೆ ಆಧರಿಸಿ ಅಗತ್ಯ ಕ್ರಮ ಕೈಗೊಂಡು ವರದಿಯನ್ನು ತಮ್ಮ ಕಚೇರಿಗೆ ಸಲ್ಲಿಸುವಂತೆ” ಸಿಎಎಸ್ ನಿರ್ದೇಶನ ನೀಡಿದ್ದಾರೆ.

ನಿವೃತ್ತ ಅಧಿಕಾರಿಗಳನ್ನು ಹೀಗೆ ನೇಮಕ ಮಾಡಿಕೊಳ್ಳುವುದನ್ನು ವಿರೋಧಿಸಿ ಸಚಿವಾಲಯ ನೌಕರರ ಸಂಘವೂ ಹೋರಾಟ ಮಾಡಿತ್ತು. ಸಂಘದ ಹಿಂದಿನ ಅಧ್ಯಕ್ಷ ಪಿ. ಗುರುಸ್ವಾಮಿ, ಎನ್‌ಪಿಎಸ್ ನೌಕರರ ಸಂಘದ ಅಧ್ಯಕ್ಷ ಶಾಂತಾರಾಂ ಹಾಗೂ ಇತರ ಮುಖಂಡರು ಸಾಕಷ್ಟು ಬಾರಿ ಮುಖ್ಯ ಕಾರ್ಯದರ್ಶಿ ಹಾಗೂ ಅಧಿಕಾರಿಗಳಿಗೆ ಮನವಿ ಮಾಡಿಕೊಂಡಿದ್ದರು.

ಇದನ್ನೂ ಓದಿ: NCERT Textbooks: ರಾಜಕೀಯ ಶಾಸ್ತ್ರದ ಪಠ್ಯದಿಂದ ‘ಬಾಬ್ರಿ ಮಸೀದಿ’ ಅಧ್ಯಾಯ ತೆಗೆದ ಎನ್‌ಸಿಇಆರ್‌ಟಿ!

Continue Reading

ಕ್ರೈಂ

Drowned: ಈಜಲು ಹೋಗಿ ಬಾಲಕರು ನೀರುಪಾಲು; ಕಮಲ ಕೊಯ್ಯಲು ಹೋಗಿ ಕೆಸರಿನಲ್ಲಿ ವ್ಯಕ್ತಿ ಸಮಾಧಿ

Drowned: ಮುಸ್ಸಂಜೆ ವೇಳೆ ಈಜಲು ತೆರಳಿದ್ದ ಈ ಯುವಕರು ಈಜುವ ವೇಳೆ ದುರ್ಘಟನೆ ನಡೆದಿದೆ. ನಡು ಕೆರೆಯಲ್ಲಿದ್ದಾಗ ಬಳಲಿ ತೀರಕ್ಕೆ ಬರಲಾಗದೆ ಮುಳುಗಿ ಮೃತಪಟ್ಟಿದ್ದಾರೆ

VISTARANEWS.COM


on

Drowned in river
Koo

ಮೈಸೂರು: ಈಜಲು (Swimming) ಹೋಗಿ ಇಬ್ಬರು ಬಾಲಕರು ನೀರು ಪಾಲಾದ ಘಟನೆ (Drowned) ಮೈಸೂರಿನ ಸೌಕಾರಹುಂಡಿ ಕೆರೆಯಲ್ಲಿ (Lake) ನಡೆದಿದೆ. ಹೂಟಗಳ್ಳಿ ಹೌಸಿಂಗ್ ಬೋರ್ಡ್ ನಿವಾಸಿ ವರುಣ್ (16) ಹಾಗೂ ಬಸವನಪುರ ನಿವಾಸಿ ಜಸ್ವಂತ್ (14) ಮೃತ ದುರ್ದೈವಿಗಳು.

ಮುಸ್ಸಂಜೆ ವೇಳೆ ಈಜಲು ತೆರಳಿದ್ದ ಈ ಯುವಕರು ಈಜುವ ವೇಳೆ ದುರ್ಘಟನೆ ನಡೆದಿದೆ. ನಡು ಕೆರೆಯಲ್ಲಿದ್ದಾಗ ಬಳಲಿ ತೀರಕ್ಕೆ ಬರಲಾಗದೆ ಮುಳುಗಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಇಲವಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ತಾವರೆ ಕೊಯ್ಯಲು ಹೋಗಿ ಹೂವಿನ ವ್ಯಾಪಾರಿ ಸಾವು

ತುಮಕೂರು: ಕೆರೆಯಲ್ಲಿದ್ದ ಕಮಲ ಕೀಳಲು ಹೋಗಿದ್ದ ವ್ಯಕ್ತಿ ಕೆಸರಿನಲ್ಲಿ ಸಿಲುಕಿ ಸಾವಿಗೀಡಾದ ಘಟನೆ ತುಮಕೂರು ತಾಲೂಕಿನ ಅರಕೆರೆ ಕೆರೆಯಲ್ಲಿ ನಡೆದಿದೆ. ಕೊರಟಗೆರೆ ತಾಲೂಕಿನ ಮಧ್ಯವೆಂಕಟಪುರದ ನಿವಾಸಿ ಶ್ರೀನಿವಾಸ್ (35) ಮೃತ ದುರ್ದೈವಿ.

ಹೂವಿನ ವ್ಯಾಪಾರಿಯಾಗಿದ್ದ ಶ್ರೀನಿವಾಸ್ ಅವರು, ಅದೇ ಊರಿನ ಕೆಂಪರಾಮಯ್ಯ, ಚಿಕ್ಕಹನುಮಯ್ಯ ಜೊತೆ ಕಮಲದ ಹೂ ಕೀಳಲು ಹೋಗಿದ್ದರು. ಈ ವೇಳೆ ಕೆಸರಲ್ಲಿ ಸಿಲುಕಿ ಮೇಲೇಳಲಾಗದೆ ಸಾವನ್ನಪ್ಪಿದ್ದಾರೆ. ನಿನ್ನೆ ಮಧ್ಯಾಹ್ನದ ಹೊತ್ತಿಗೆ ದುರ್ಘಟನೆ ನಡೆದಿದ್ದು, ಜೊತೆಗಿದ್ದವರು ಊರಿಗೆ ಹೋಗಿ ತಿಳಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅತ್ತಿಬೆಲಯಲ್ಲಿ ಬಾಲಕ ನೀರುಪಾಲು

ಆನೇಕಲ್: ಸ್ನೇಹಿತರ ಜತೆ ಕೆರೆಗೆ ಈಜಲು ಹೋದ ಬಾಲಕ ನೀರುಪಾಲಾಗಿರುವ ಘಟನೆ (Drowns in lake) ಬೆಂಗಳೂರಿನ ಹೊರವಲಯದ ಆನೇಕಲ್ ತಾಲೂಕಿನ ಬಳ್ಳೂರು ಅತ್ತಿಬೆಲೆ ಸಮೀಪದ ಬಳ್ಳೂರು ಕೆರೆಯಲ್ಲಿ ನಡೆದಿದೆ. ಅತ್ತಿಬೆಲೆ ವಾಸಿ ಧನುಷ್ (14) ಮೃತ ಬಾಲಕ.

ರೈನ್ ಬೋ ಖಾಸಗಿ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ ಬಾಲಕ, ಭಾನುವಾರ ಶಾಲೆಗೆ ರಜೆ ಇದಿದ್ದದ್ದರಿಂದ ಸ್ನೇಹಿತರ ಜತೆ ಈಜಲು ಕೆರೆಗೆ ಹೋಗಿದ್ದ. ಈ ವೇಳೆ ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಬಾಲಕನ ಮೃತ ದೇಹವನ್ನು ಅಗ್ನಿಶಾಮಕ ದಳ ಸಿಬ್ಬಂದಿ ಹೊರತೆಗೆದಿದ್ದು, ಸ್ಥಳಕ್ಕೆ ಅತ್ತಿಬೆಲೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಖಾಸಗಿ ಬಸ್- ಸ್ಕೂಟರ್ ಡಿಕ್ಕಿಯಾಗಿ ಸವಾರ ಸಾವು

ಕೊಡಗು: ಖಾಸಗಿ ಬಸ್ ಹಾಗೂ ದ್ವಿಚಕ್ರ ನಡುವೆ ಭೀಕರ ಅಪಘಾತ (Road Accident) ಸಂಭವಿಸಿ, ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಸುಂಟಿಕೊಪ್ಪದ ಗದ್ದೆಹಳ್ಳ ಬಳಿ‌ ನಡೆದಿದೆ. ಸುಂಟಿಕೊಪ್ಪ‌ ನಿವಾಸಿ ಪಟ್ಟೆಮನೆ ಲೋಕೇಶ್ ಕುಮಾರ್ (59) ಮೃತ ದುರ್ದೈವಿ.

ಕಳೆದ ಹಲವು ವರ್ಷಗಳಿಂದ ಲೋಕೇಶ್‌ ವಾಹನ ಚಾಲಕರಾಗಿದ್ದರು. ಸುಂಟಿಕೊಪ್ಪದ ಗದ್ದೆಹಳ್ಳ ಬಳಿ‌ ತೆರಳುತ್ತಿದ್ದಾಗ ಖಾಸಗಿ ಬಸ್‌ನೊಂದಿಗೆ ಡಿಕ್ಕಿಯಾಗಿ ಮೃತಪಟ್ಟಿದ್ದಾರೆ.

ಗುಂಡಿನ ದಾಳಿ; ರೌಡಿಶೀಟರ್‌ ಸ್ಥಳದಲ್ಲೇ ಸಾವು

ವಿಜಯಪುರ: ಭೀಮಾ ತೀರದಲ್ಲಿ ಗುಂಡಿನ ದಾಳಿ ನಡೆದು, ರೌಡಿಶೀಟರ್‌ ಮೃತಪಟ್ಟಿದ್ದಾನೆ. ಜಿಲ್ಲೆಯ ಚಡಚಣ ಪಟ್ಟಣದ ನೀವರಗಿ ರಸ್ತೆಯ ಮನೆ ಬಳಿ ಇದ್ದಾಗ ದುಷ್ಕರ್ಮಿಗಳು ಗುಂಡಿನ ದಾಳಿ (Shootout Case) ನಡೆಸಿ ರೌಡಿಶೀಟರ್‌ನ ಕೊಲ್ಲಲಾಗಿದೆ.

ಅಶೋಕ ಮಲ್ಲಪ್ಪ ಗಂಟಗಲ್ಲಿ ಮೃತ. ಮನೆಯಿಂದ ಚಡಚಣ ಪಟ್ಟಣಕ್ಕೆ ಆಗಮಿಸುತ್ತಿದ್ದ ವೇಳೆ ಹಂತಕರು ದಾಳಿ ಮಾಡಿದ್ದಾರೆ. ಅಶೋಕ‌ ಬೆನ್ನಿಗೆ ಮೂರಕ್ಕೂ ಅಧಿಕ ಗುಂಡಿಗಳು ತಾಗಿದ್ದರಿಂದ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇತ್ತೀಚೆಗೆ ಜೈಲಿನಿಂದ ಪೆರೋಲ್ ಮೇಲೆ ಅಶೋಕ ಹೊರಬಂದಿದ್ದ. ಕೊಲೆ ಹಾಗೂ ಇತರೆ ಕೇಸ್‌ಗಳಲ್ಲಿ ಅಪರಾಧಿಯಾಗಿದ್ದ ವ್ಯಕ್ತಿಯನ್ನು ಹಳೆ ದ್ವೇಷದಿಂದ ಕೊಲೆ ಮಾಡಿರೋ ಸಂಶಯ ಮೂಡಿದೆ. ಕೊಲೆಗೀಡಾದ ಅಶೋಕ ಪತ್ನಿ ಚಡಚಣ ಪಟ್ಟಣದ ವಾರ್ಡ್ ನಂಬರ್ 2ರ ಬಿಜೆಪಿ ಸದಸ್ಯೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಚಡಚಣ ಪೊಲೀಸರ ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ | Electric Shock: ಕುಷ್ಟಗಿಯಲ್ಲಿ ವಿದ್ಯುತ್ ತಂತಿ ತಗುಲಿ ರೈತ, 2 ಎತ್ತುಗಳ ಸಾವು

Continue Reading

ಕ್ರೈಂ

Actor Darshan: ಹತ್ಯೆಯಾದ ರೇಣುಕಾಸ್ವಾಮಿ ಮೊಬೈಲ್‌ ಹೋಯಿತೆಲ್ಲಿ?

Actor Darshan: ಜೂನ್‌ 8ರಂದು ಆರೋಪಿ ರಾಘವೇಂದ್ರ ಮತ್ತು ಸಹಚರರು ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಕಿಡ್ನಾಪ್ ಮಾಡಿ ಕರೆತಂದಿದ್ದರು. ಜೂನ್ 8ರಂದು ಬೆಳಿಗ್ಗೆ ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಮೊಬೈಲ್ ಸ್ವಿಚ್ ಆಫ್ ಆಗಿತ್ತು.

VISTARANEWS.COM


on

Actor Darshan Renukaswamy Send His Photos To Pavitra Gowda
Koo

ಬೆಂಗಳೂರು: ನಟ ದರ್ಶನ್‌ (Actor Darshan) ಟೀಮ್‌ನಿಂದ ಹತ್ಯೆಯಾದ ಚಿತ್ರದುರ್ಗದ ರೇಣುಕಾಸ್ವಾಮಿ (Renukaswamy Murder Case) ಮೊಬೈಲ್‌ಗಾಗಿ (mobile phone) ಪೊಲೀಸರು ತೀವ್ರ ಹುಡುಕಾಟ ನಡೆಸಿದ್ದಾರೆ. ರೇಣುಕಾಸ್ವಾಮಿ ಕೊಲೆಯಾಗಿ ಹತ್ತು ದಿನ ಕಳೆಯುತ್ತಿದ್ದರೂ ಮೊಬೈಲ್ ಪತ್ತೆಯಾಗಿಲ್ಲ. ಕೊಲೆಗೆ ಸಂಬಂಧಿಸಿದ ಮಹತ್ವದ ಸಾಕ್ಷಿಗಳು (Evidence) ಇದರಲ್ಲಿವೆ.

ದರ್ಶನ್ ಮತ್ತು ಗ್ಯಾಂಗ್‌ನಿಂದ ಜೂನ್ 8ರ ಸಂಜೆ ರೇಣುಕಾಸ್ವಾಮಿ ಭೀಕರವಾಗಿ ಹತ್ಯೆಯಾಗಿದ್ದ. ಪಟ್ಟಣಗೆರೆ ಶೆಡ್‌ನಲ್ಲಿ ರೇಣುಕಾಸ್ವಾಮಿ ಕೊಲೆ ಮಾಡಲಾಗಿತ್ತು. ಕೊಲೆ ಪ್ರಕರಣದಲ್ಲಿ ದರ್ಶನ್‌ ಸೇರಿ 17ಕ್ಕೂ ಹೆಚ್ಚು ಮಂದಿಯ ಬಂಧನವಾಗಿದೆ. ಪವಿತ್ರಾ ಗೌಡ (Pavithra Gowda) ಸಹ ಬಂಧನದಲ್ಲಿದ್ದಾಳೆ.

ಜೂನ್‌ 8ರಂದು ಆರೋಪಿ ರಾಘವೇಂದ್ರ ಮತ್ತು ಸಹಚರರು ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಕಿಡ್ನಾಪ್ ಮಾಡಿ ಕರೆತಂದಿದ್ದರು. ಜೂನ್ 8ರಂದು ಬೆಳಿಗ್ಗೆ ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಮಧ್ಯಾಹ್ನದ ವೇಳೆ ಆರ್‌ಆರ್ ನಗರದಲ್ಲಿ ಸ್ವಿಚ್ ಆನ್ ಆಗಿತ್ತು. ಜೂನ್ 8ರ ಸಂಜೆ ವೇಳೆ ಆರ್‌ಆರ್ ನಗರದ ಪಟ್ಟಣಗೆರೆಯಲ್ಲಿ ಮತ್ತೆ ಸ್ವಿಚ್ ಆಫ್ ಆಗಿತ್ತು.

ಅದೇ ದಿನ ತಡರಾತ್ರಿ ರೇಣುಕಾಸ್ವಾಮಿ‌ ಮೃತದೇಹವನ್ನು ಕೇಶವ್, ಕಾರ್ತಿಕ್, ನಿಖಿಲ್ ನಾಯಕ್ ಬಿಸಾಡಿದ್ದರು. ಸುಮ್ಮನಹಳ್ಳಿಯ ಸತ್ವ ಅಪಾರ್ಟ್ಮೆಂಟ್ ಮುಂಭಾಗದ ರಾಜಕಾಲುವೆಯಲ್ಲಿ ಮೃತದೇಹ ಬಿಸಾಡಲಾಗಿತ್ತು. ನಂತರ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಗೆ ಕೇಶವ್, ಕಾರ್ತಿಕ್, ನಿಖಿಲ್ ನಾಯಕ್ ಮತ್ತು ರಾಘವೇಂದ್ರ ಶರಣಾಗಿದ್ದರು. ಪೊಲೀಸ್ ವಿಚಾರಣೆ ವೇಳೆ, ರೇಣುಕಾಸ್ವಾಮಿ ಮೊಬೈಲ್ ಅನ್ನು ಸುಮ್ಮನಹಳ್ಳಿ ರಾಜಕಾಲುವೆಗೆ ಬಿಸಾಡಿದ್ದಾಗಿ ಬಾಯ್ಬಿಟ್ಟಿದ್ದರು.

ಕಳೆದ ಹತ್ತು ದಿನಗಳಿಂದ ಹುಡುಕಾಡಿದರೂ ರೇಣುಕಾಸ್ವಾಮಿ ಮೊಬೈಲ್ ಪತ್ತೆಯಾಗಿಲ್ಲ. ರೇಣುಕಾಸ್ವಾಮಿ ಮೊಬೈಲ್ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಯಾಗಿದೆ. ಅಶ್ಲೀಲ ಕಮೆಂಟ್ ಸಂಬಂಧಪಟ್ಟಂತೆ ಇದರಿಂದ ಸಾಕ್ಷಿಗಳನ್ನು ರಿಟ್ರೀವ್‌ ಮಾಡಬೇಕಾಗಿದೆ. ಆರೋಪಿಗಳು ರೇಣುಕಾಸ್ವಾಮಿ ಮೊಬೈಲ್‌ನಲ್ಲೇ ಕ್ಷಮಾಪಣಾ ವಿಡಿಯೋ ಮಾಡಿಸಿದ್ದರು. ಆರ್‌ಆರ್ ನಗರ ಪಟ್ಟಣಗೆರೆ ಶೆಡ್, ಕಿಡ್ನಾಪ್ ಮಾಡಿದ ರವಿಯ ಈಟಿಯೋಸ್ ಕಾರು ಸೇರಿ ಹಲವು ಕಡೆ ಹುಡುಕಿದರೂ ಮೊಬೈಲ್ ಪತ್ತೆಯಾಗಿಲ್ಲ.

ಗ್ಯಾಂಗ್‌ನಿಂದ 10 ಮೊಬೈಲ್‌ ವಶ; ಪಾಸ್‌ವರ್ಡ್ ನೀಡಲು ನಖರಾ

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಆದರೆ, ವಿಚಾರಣೆ ವೇಳೆ ಮೊಬೈಲ್‌ ಪಾಸ್‌ವರ್ಡ್‌ (Mobile Password) ನೀಡಲು ದರ್ಶನ್‌ ಮತ್ತು ಆತನ ಗ್ಯಾಂಗ್‌ ನಿರಾಕರಿಸುತ್ತಿದೆ. ಇದರಿಂದ ಪೊಲೀಸರ ತನಿಖೆಗೆ ಅಡಚಣೆಯಾಗುತ್ತಿದೆ ಎಂದು ತಿಳಿದುಬಂದಿದೆ.

ದರ್ಶನ್‌ & ಗ್ಯಾಂಗ್‌ನಿಂದ ಪೊಲೀಸರು ಇದುವರೆಗೆ 10 ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಡೇಟಾ ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ. ಇನ್ನು ಕೆಲವು ಮೊಬೈಲ್‌ಗಳಲ್ಲಿದ್ದ ಸಾಕ್ಷ್ಯಗಳ ಆಧಾರದ ಮೇಲೆ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದು, ಆರೋಪಿಗಳು ಇನ್ನೂ ಕೆಲವು ಮೊಬೈಲ್‌ಗಳ ಪಾಸ್‌ವರ್ಡ್‌ ನೀಡುತ್ತಿಲ್ಲ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಇಷ್ಟಾದರೂ ಪಟ್ಟು ಬಿಡದ ಪೊಲೀಸ್‌ ಅಧಿಕಾರಿಗಳು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Actor Darshan

ಪ್ರಶ್ನೆಗಳ ಸುರಿಮಳೆ

ಶರಣಾಗಿರುವ ಆರೋಪಿಗಳನ್ನು ಡ್ರಿಲ್‌ ಮಾಡುತ್ತಿರುವ ಪೊಲೀಸರು, ಪ್ರಶ್ನೆಗಳ ಸುರಿಮಳೆಗೈಯುತ್ತಿದ್ದಾರೆ. ಪ್ರಕರಣದ ಸಂಬಂಧ ನೀವೇನಾದರೂ ಹಣ ಪಡೆದಿದ್ರಾ? ನಿಮ್ಮನ್ನು ಸಂಪರ್ಕಿಸಿದವರು ಯಾರು? ಯಾರ ಮಾತನ್ನು ನೀವು ಕೇಳಿ ನೀವು ಪ್ರಕರಣದಲ್ಲಿ ಭಾಗಿಯಾದಿರಿ? ದರ್ಶನ ಜತೆ ನೀವೇನಾದರೂ ನೇರವಾಗಿ ಸಂಪರ್ಕದಲ್ಲಿ ಇದ್ರಾ? ಆರೋಪಿ ರಘು ನಿಮ್ಮನ್ನು ಭೇಟಿಯಾಗಿ ಹೇಳಿದ್ದೇನು? ಶೆಡ್‌ ಒಳಗೆ ಯಾರೆಲ್ಲ ಹೋದರು? ನೀವೂ ಹೋಗಿದ್ರಾ ಎಂಬುದು ಸೇರಿ ಹತ್ತಾರು ಪ್ರಶ್ನೆಗಳನ್ನು ಕೇಳಿದ್ದಾರೆ ಎಂದು ತಿಳಿದುಬಂದಿದೆ.

ತನಿಖೆಯ ಟೀಮ್‌ಗೆ ಇನ್ಸ್‌ಪೆಕ್ಟರ್‌ ಗಿರೀಶ್‌ ನಾಯ್ಕ್‌ ಸೇರ್ಪಡೆ

ಆರೋಪಿ ದರ್ಶನ್‌ನನ್ನು ಮೈಸೂರಿನಲ್ಲಿ ವಶಕ್ಕೆ ಪಡೆದುಕೊಂಡು, ಬೆಂಗಳೂರಿಗೆ ಕರೆತಂದಿದ್ದ ಇನ್ಸ್‌ಪೆಕ್ಟರ್‌ ಗಿರೀಶ್‌ ನಾಯ್ಕ್‌ ಅವರು ಮತ್ತೆ ತನಿಖಾ ತಂಡವನ್ನು ಸೇರಿಕೊಂಡಿದ್ದು, ತನಿಖೆಗೆ ಬಲ ಬಂದಂತಾಗಿದೆ. ಎಸಿಪಿ ಚಂದನ್‌ ಹಾಗೂ ಗಿರೀಶ್‌ ನಾಯ್ಕ್‌ ಅವರು ದರ್ಶನ್‌ನನ್ನು ಮೈಸೂರಿನಿಂದ ಕರೆತಂದಿದ್ದರು. ಆರಂಭದಲ್ಲಿ ಗಿರೀಶ್‌ ನಾಯ್ಕ್‌ ಅವರೇ ಕೊಲೆ ಪ್ರಕರಣದ ತನಿಖಾಧಿಕಾರಿಯಾಗಿದ್ದರು. ಚುನಾವಣೆ ನಿಮಿತ್ತ ಕಾಮಾಕ್ಷಿಪಾಳ್ಯ ಪೊಲೀಸ್‌ ಠಾಣೆಗೆ ವರ್ಗಾವಣೆಯಾಗಿದ್ದರು. ಬಳಿಕ ಮತ್ತೆ ಸಿ.ಕೆ.ಅಚ್ಚುಕಟ್ಟು ಪೊಲೀಸ್‌ ಠಾಣೆಗೆ ವರ್ಗಾವಣೆಯಾಗಿದ್ದರು.

ಗಿರೀಶ್‌ ನಾಯ್ಕ್‌ ಅವರ ವರ್ಗಾವಣೆ ಹಿನ್ನೆಲೆಯಲ್ಲಿ ಎಸಿಪಿ ಚಂದನ್‌ ಅವರನ್ನು ತನಿಖಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ. ಆರೋಪಿಗಳ ಹೆಚ್ಚಿನ ವಿಚಾರಣೆ ಹಿನ್ನೆಲೆಯಲ್ಲಿ ಈಗ ಗಿರೀಶ್‌ ನಾಯ್ಕ್‌ ಅವರನ್ನು ಮತ್ತೆ ಸಹಾಯಕ ತನಿಖಾಧಿಕಾರಿಯನ್ನಾಗಿ ನೇಮಿಸಲಾಗಿದೆ.

Continue Reading

ಮಳೆ

Karnataka weather : ಇಂದು ಕರಾವಳಿ, ಮಲೆನಾಡಿನಲ್ಲಿ ಹಗುರ, ಒಳನಾಡಿನಲ್ಲಿ ಸಾಧಾರಣ ಮಳೆ ಸಾಧ್ಯತೆ

Karnataka Weather Forecast : ರಾಜ್ಯಾದ್ಯಂತ ನೈರುತ್ಯ ಮುಂಗಾರು ದುರ್ಬಲಗೊಂಡಿದೆ. ಇದರ ನಡುವೆಯೂ ಕರಾವಳಿ, ಮಲೆನಾಡು ಭಾಗದಲ್ಲಿ ಹಗುರದಿಂದ ಕೂಡಿದ ಮಳೆಯಾದರೆ, ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ (Rain News) ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

Karnataka weather Forecast
Koo

ಬೆಂಗಳೂರು: ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆಯಿದೆ. ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಒಳನಾಡಿನ ಕೆಲವು ಭಾಗಗಳಲ್ಲಿ ಹಗುರದೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಇದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.

ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದ ಹಲವು ಸ್ಥಳಗಳಲ್ಲಿ ಸಾಧಾರಣ ಮಳೆಯೊಂದಿಗೆ (Rain News) ಗುಡುಗು ಸಾಥ್‌ ನೀಡಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ ಮತ್ತು ರಾಯಚೂರು, ವಿಜಯಪುರ, ಯಾದಗಿರಿಯ ಪ್ರತ್ಯೇಕ ಸ್ಥಳದಲ್ಲಿ ಹಗುರವಾದ ಮಳೆಯಾಗುವ ನಿರೀಕ್ಷೆ ಇದೆ. ಗಾಳಿ ವೇಗವು ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು, ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು ಸೇರಿದಂತೆ ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ. ಆದರೆ ಗಾಳಿ ವೇಗವು ಗಂಟೆಗೆ 40-50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ.

ಇದನ್ನೂ ಓದಿ: Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

ಆರೋಗ್ಯಕರ ಆಗಿರಬೇಕಿದ್ದರೆ ನಮ್ಮ ಬೆಳಗಿನ ತಿಂಡಿ ಹೇಗಿರಬೇಕು?

ಹೆಚ್ಚಿನ ಜನಕ್ಕೆ ಬೆಳಗಿನ ತಿಂಡಿಯ ಮಹತ್ವವೇ ತಿಳಿದಿರುವುದಿಲ್ಲ. ಈ ಮಾತನ್ನು ಹೇಳುವುದಕ್ಕೂ ಕಾರಣವಿದೆ. ಬೆಳಗ್ಗೆ (Morning Nutrition) ತಿಂಡಿಯನ್ನು ಎದ್ದ ನಾಲ್ಕು ತಾಸುಗಳ ನಂತರ ತಿನ್ನುವುದು, ಕೆಲವೊಮ್ಮೆ ತಿಂಡಿಯನ್ನೇ ತಿನ್ನದಿರುವುದು, ದಿನದ ಪ್ರಾರಂಭಕ್ಕೆ ಸೂಕ್ತ ಅಲ್ಲದ್ದನ್ನು ತಿನ್ನುವುದು, ಕೇವಲ ಕಾಫಿ/ಟೀ ಕುಡಿದು ಮಧ್ಯಾಹ್ನ ಊಟ ಮಾಡುವುದು- ಇಂಥ ಉದಾಹರಣೆಗಳು ಕಡಿಮೆಯೇನಿಲ್ಲ. ಆದರೆ ಬೆಳಗಿನ ತಿಂಡಿಯನ್ನು ದಿನದ ಅತ್ಯಂತ ಆರೋಗ್ಯಕರ ಊಟವನ್ನಾಗಿ ಮಾಡುವುದು ಮಹತ್ವದ್ದು ಎನ್ನುತ್ತಾರೆ ಪೌಷ್ಟಿಕಾಂಶ ತಜ್ಞರು. ರಾತ್ರಿಡೀ ದೇಹಕ್ಕೆ ಅಗತ್ಯವಾದ ವಿಶ್ರಾಂತಿಯನ್ನು ನೀಡಿದ್ದಾಗಿದೆ. ಇನ್ನೀಗ ಮುಂಜಾನೆದ್ದು ದಿನವನ್ನು ಪ್ರಾರಂಭಿಸಬೇಕು ಎನ್ನುವಾಗ, ದೇಹಕ್ಕೆ ನೀಡುವಂಥ ಗ್ರಾಸ ಹೇಗಿರಬೇಕು? ಅಧಿಕ ಸತ್ವಗಳನ್ನು ಹೊಂದಿದ ಆಹಾರವನ್ನೇ ತಿನ್ನಬೇಕು ಎಂದಾದರೆ, ಏಕೆ ಹಾಗೆ? ಬೆಳಗ್ಗೆ ತಿಂಡಿ ತಿನ್ನದಿದ್ದರೆ ತೂಕ ಇಳಿಸುವುದು ಸಾಧ್ಯವಿಲ್ಲವೇ? ಇಂತಹ ಹಲವಾರು ಪ್ರಶ್ನೆಗಳು ಮನದಲ್ಲಿದ್ದರೆ, ಅವಕ್ಕೆಲ್ಲ ಉತ್ತರ ಹುಡುಕುವ ಪ್ರಯತ್ನ ಇಲ್ಲಿದೆ. ಬೆಳಗಿನ ತಿಂಡಿಗೆ ಆರೋಗ್ಯಕರ ಕೊಬ್ಬುಗಳು, ಸಂಕೀರ್ಣ ಪಿಷ್ಟ ಮತ್ತು ಪ್ರೊಟೀನ್‌ ಇರುವಂಥ ಆಹಾರ ಅಗತ್ಯ. ಈ ಸತ್ವಗಳ ಮಿಶ್ರಣವು ದೇಹವು ದೀರ್ಘಕಾಲದವರೆಗೆ ಬಳಲದಂತೆ ನೋಡಿಕೊಳ್ಳುತ್ತದೆ. ದಿನವಿಡೀ ಅಗತ್ಯವಾದ ಚೈತನ್ಯವನ್ನು ದೇಹಕ್ಕೆ ನೀಡುತ್ತದೆ ಮತ್ತು ಆಹಾರ ತಿಂದ ತೃಪ್ತಿಯನ್ನು ಒದಗಿಸುತ್ತದೆ. ಜೊತೆಗೆ, ಬೇಗ ಹಸಿವಾಗುವುದನ್ನು ತಡೆಯುತ್ತದೆ. ಇಂಥ ಆಹಾರವು ದೇಹಕ್ಕೆ ಮಾತ್ರವಲ್ಲ, ಮನಸ್ಸಿಗೂ ಬೇಕಾದ ಗ್ರಾಸವನ್ನು ಒದಗಿಸಿಕೊಡುತ್ತದೆ. ಈ ಬಗ್ಗೆ ವಿವರಣೆ ಇಲ್ಲಿದೆ.

South Indian breakfast

ಸಂಕೀರ್ಣ ಪಿಷ್ಟಗಳು

ನಮ್ಮೆಲ್ಲ ಚಟುವಟಿಕೆಗಳನ್ನು ಮಾಡುವುದಕ್ಕೆ ನಮಗೆ ಪಿಷ್ಟ ಅಥವಾ ಕಾರ್ಬೊಹೈಡ್ರೇಟ್‌ಗಳು ಬೇಕು. ಆದರೆ ಮೈದಾ ಅಥವಾ ಸಂಸ್ಕರಿತ ತಿನಿಸುಗಳಿಂದ ಬರುವಂಥ ಸರಳ ಪಿಷ್ಟವಲ್ಲ, ದೀರ್ಘ ಕಾಲದವರೆಗೆ ಶಕ್ತಿಯನ್ನು ಉಣಿಸುವಂಥ ಸಂಕೀರ್ಣವಾದ ಪಿಷ್ಟಗಳು ಬೇಕು. ಇದನ್ನು ಇಡೀ ಧಾನ್ಯಗಳು, ಓಟ್ಸ್‌, ಸಿರಿ ಧಾನ್ಯಗಳು, ಕಿನೊವಾ, ರಾಗಿ ಮುಂತಾದ ನಾರುಭರಿತ ಅಂದರೆ ತೌಡು ಸಹಿತವಾದ ಧಾನ್ಯಗಳಿಂದ ಪಡೆಯಬಹುದು. ಈ ಧಾನ್ಯಗಳಿಂದ ಉಪ್ಪಿಟ್ಟು, ಅವಲಕ್ಕಿ, ದೋಸೆ, ಇಡ್ಲಿ, ಚಿತ್ರಾನ್ನ… ನಿಮಗೆ ಇಷ್ಟವಾದ ಯಾವುದನ್ನಾದರೂ ಮಾಡಿ.

ಪ್ರೊಟೀನ್‌

ಬೆಳಗಿನ ತಿಂಡಿಗೆ ಹೆಚ್ಚಿನ ಪ್ರಮಾಣದ ಪ್ರೊಟೀನ್‌ ಅಗತ್ಯ. ಇದರಿಂದ ದೇಹದ ರಿಪೇರಿ ಕೆಲಸ, ಹಾರ್ಮೋನುಗಳ ಕ್ಷಮತೆ, ಕಿಣ್ವಗಳ ಉತ್ಪಾದನೆ ಮುಂತಾದ ಮಹತ್ವದ ಕೆಲಸಗಳೆಲ್ಲವೂ ಮಟ್ಟಸವಾಗಿ ಇರುತ್ತದೆ. ಇದಕ್ಕಾಗಿ ಹಾಲು, ಮೊಸರು, ಗ್ರೀಕ್‌ ಯೋಗರ್ಟ್‌, ಪನೀರ್‌, ತೋಫು, ಮೊಟ್ಟೆ, ಕಾಳುಗಳು, ಸೋಯಾ, ಕಾಯಿ ಮತ್ತು ಬೀಜಗಳು ಬೆಳಗಿನ ಆಹಾರದಲ್ಲಿ ಇರಬೇಕು. ಆಮ್ಲೆಟ್‌ ಜೊತೆಗೆ ಇಡೀಧಾನ್ಯದ ಬ್ರೆಡ್‌ ಅಥವಾ ಚಪಾತಿಯಂಥವು ಬೇಕು ಎನ್ನುವುದು ಸ್ಪಷ್ಟವಾಗಿದೆಯಲ್ಲವೇ?

ಆರೋಗ್ಯಕರ ಕೊಬ್ಬು

ಇದು ಸಹ ಅತಿ ಮುಖ್ಯವಾದ ಸತ್ವ. ದೇಹದ ತೂಕವನ್ನು ನಿಯಂತ್ರಿಸಲು, ಹೆಚ್ಚಿನ ಕೊಬ್ಬು ದೇಹದಲ್ಲಿ ಜಮೆಯಾಗದಂತೆ ಕಾಯ್ದುಕೊಳ್ಳಲು ಇದು ಅಗತ್ಯ. ದೇಹದ ಅಂಗಾಂಗಗಳೆಲ್ಲ ಸರಿಯಾಗಿ ಕೆಲಸ ಮಾಡಲು ಈ ಕೊಬ್ಬು ಬೇಕೇಬೇಕು. ಇದಕ್ಕಾಗಿ ಅವಕಾಡೊ, ಕಾಯಿ-ಬೀಜಗಳು, ತುಪ್ಪ, ಕೊಬ್ಬರಿ ಎಣ್ಣೆಯಂಥ ಆರೋಗ್ಯಕರ ತೈಲಗಳು, ಪೀನಟ್‌ಬಟರ್‌ ಅಥವಾ ಇನ್ನಾವುದಾದರೂ ಬೀಜಗಳ ತುಪ್ಪ- ಇವೆಲ್ಲ ಶರೀರಕ್ಕೆ ಬೇಕು. ಮೆದುಳಿನ ಆರೋಗ್ಯ ರಕ್ಷಣೆಗಂತೂ ಇವು ತೀರಾ ಅಗತ್ಯವಾದವು. ಇವುಗಳಲ್ಲಿರುವ ಒಮೇಗಾ ೩ ಕೊಬ್ಬಿನಾಮ್ಲವು ಇಡೀ ದೇಹದ ಸ್ವಾಸ್ಥ್ಯಕ್ಕೆ ಅಗತ್ಯವಾಗಿದ್ದು.

drinking water

ನೀರು

ಇದಿಷ್ಟರ ಜೊತೆಗೆ ದಿನಕ್ಕೆ ಮೂರು ಲೀ. ನೀರು ಕುಡಿಯುವುದು ಬಹುಮುಖ್ಯ. ರಾತ್ರಿಡೀ ನೀರಿಲ್ಲದೆ ಇರುವಂಥ ದೇಹಕ್ಕೆ ಬೆಳಗಿನ ಹೊತ್ತು ಒಂದೆರಡು ಗ್ಲಾಸ್‌ ನೀರು ಕುಡಿಸಿ. ಬರೀ ನೀರು ಕುಡಿಯುವುದು ಕಷ್ಟ ಎನಿಸಿದರೆ, ಸಕ್ಕರೆ ರಹಿತವಾದ ಯಾವುದೇ ರಸಗಳನ್ನು ಸೇರಿಸಿಕೊಳ್ಳಬಹುದು. ಜೊತೆಗೆ, ದಿನವಿಡೀ ಹರ್ಬಲ್‌ ಚಹಾಗಳು, ಎಳನೀರು, ರಸಭರಿತ ಹಣ್ಣು-ತರಕಾರಿಗಳು, ಮಜ್ಜಿಗೆ- ಇಂಥವೆಲ್ಲ ದಿನದ ಮೂರು ಲೀ. ನೀರು ಕುಡಿಯುವ ಗುರಿಯನ್ನು ಪೂರ್ಣಗೊಳಿಸಲು ನೆರವಾಗುತ್ತವೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Kiccha Sudeep Replies To Darshan Ban Matter Entertainment
ಸ್ಯಾಂಡಲ್ ವುಡ್6 mins ago

Kiccha Sudeep: ಜಗ್ಗೇಶ್‌ಗೆ ಹೇಗೆ ಮಾತನಾಡಬೇಕು, ಹೇಗೆ ಎಸ್ಕೇಪ್ ಆಗಬೇಕು ಅನ್ನೋದು ಗೊತ್ತು ಎಂದ ಕಿಚ್ಚ!

T20 World Cup 2024
ಕ್ರೀಡೆ8 mins ago

T20 World Cup 2024: ಸೂಪರ್​-8 ಹಂತದ ವೇಳಾಪಟ್ಟಿ ಪ್ರಕಟ; 8 ತಂಡಗಳ ಮಾಹಿತಿ ಹೀಗಿದೆ

Nikhil Gupta
ವಿದೇಶ13 mins ago

Nikhil Gupta: ಗುರುಪತ್ವಂತ್‌ ಸಿಂಗ್‌ ಪನ್ನುನ್‌ ಹತ್ಯೆಗೆ ಸಂಚು ಆರೋಪ; ಜೆಕ್‌ ಗಣರಾಜ್ಯದಿಂದ ನಿಖಿಲ್‌ ಗುಪ್ತಾ ಅಮೆರಿಕಕ್ಕೆ ಹಸ್ತಾಂತರ

BAN vs NEP
ಕ್ರೀಡೆ41 mins ago

BAN vs NEP: ಸೂಪರ್​-8 ಪ್ರವೇಶಿಸಿದ ಬಾಂಗ್ಲಾದೇಶ; ನೇಪಾಳ ವಿರುದ್ಧ 21 ರನ್​ ಗೆಲುವು

Actor Darshan of many acquaintance unknown of darshan
ಸ್ಯಾಂಡಲ್ ವುಡ್46 mins ago

Actor Darshan: ಬಂಧಿತರಲ್ಲಿ ಹಲವರಿಗೆ ದರ್ಶನ್ ನೇರ ಪರಿಚಯವೇ ಇಲ್ವಂತೆ; ʻದಚ್ಚುʼ ಅರೆಸ್ಟ್ ಆದ ಬಳಿಕವೇ ಮುಖಾಮುಖಿ!

Lok Sabha Election Result
Lok Sabha Election 202450 mins ago

Rajat Sharma: ಕಾಂಗ್ರೆಸ್ ನಾಯಕರ ವಿರುದ್ಧ ಖ್ಯಾತ ಪತ್ರಕರ್ತ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದೇಕೆ?

Flesh-Eating Bacteria
ಆರೋಗ್ಯ1 hour ago

Flesh-Eating Bacteria: ಆತಂಕ ಮೂಡಿಸಿದ ಮಾಂಸ ಭಕ್ಷಕ ಬ್ಯಾಕ್ಟೀರಿಯಾ; ಸೋಂಕು ತಗುಲಿದ 48 ಗಂಟೆಯಲ್ಲೇ ಸಾವು!

CM Siddaramaiah and Vidhanasoudha
ಪ್ರಮುಖ ಸುದ್ದಿ1 hour ago

CM Siddaramaiah: 370 ನಿವೃತ್ತ ಅಧಿಕಾರಿಗಳಿಗೆ ಬಾಗಿಲು ತೋರಿಸಿದ ಸರಕಾರ

Euro 2024
ಕ್ರೀಡೆ1 hour ago

Euro 2024: ಗೆಲುವಿನ ಶುಭಾರಂಭ ಕಂಡ ಇಂಗ್ಲೆಂಡ್​; ರೋಚಕ ಗೆಲುವು ಸಾಧಿಸಿದ ನೆದರ್ಲೆಂಡ್ಸ್

Nayana Nagaraj ginirama serial fame got married with suhas
ಕಿರುತೆರೆ1 hour ago

Nayana Nagaraj: 10 ವರ್ಷದ ಪ್ರೀತಿ! ಮನಮೆಚ್ಚಿದ ಹುಡುಗನ ಜತೆ ಸಪ್ತಪದಿ ತುಳಿದ ʻಗಿಣಿರಾಮʼ ನಟಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Renukaswamy murder case The location of the accused is complete
ಸಿನಿಮಾ16 hours ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ17 hours ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ22 hours ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ3 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ3 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ6 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

ಟ್ರೆಂಡಿಂಗ್‌