weekly horoscope ; check astrological predictions for all zodiac signs for april may first week Weekly Horoscope : ಈ ವಾರ ನಿಮ್ಮ ಭವಿಷ್ಯ ಹೇಗಿರಲಿದೆ? ಯಾವೆಲ್ಲಾ ರಾಶಿಗಳಿಗೆ ಶುಭ-ಅಶುಭ ಫಲಗಳಿವೆ? - Vistara News

ಪ್ರಮುಖ ಸುದ್ದಿ

Weekly Horoscope : ಈ ವಾರ ನಿಮ್ಮ ಭವಿಷ್ಯ ಹೇಗಿರಲಿದೆ? ಯಾವೆಲ್ಲಾ ರಾಶಿಗಳಿಗೆ ಶುಭ-ಅಶುಭ ಫಲಗಳಿವೆ?

ಈ ವಾರ ಅಂದರೆ ಏಪ್ರಿಲ್‌ 30 ರಿಂದ ಮೇ 06 ರವರೆಗೆ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ (Weekly Horoscope), ಯಾವ ರಾಶಿಯವರ ಅದೃಷ್ಟ ಸಂಖ್ಯೆ ಎಷ್ಟು, ಶುಭ ದಿಕ್ಕು ಯಾವುದು ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

horoscope today
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೇಷ: ಕಸದಿಂದಲೇ ರಸ ಎಂಬುದ ಅರಿಯಿರಿ!

Weekly Horoscope

ಪೂರ್ವಾಪರ ವಿಚಾರಗಳ ಬಗೆಗೆ ಸೂಕ್ತವಾಗಿ ತಿಳಿದು ಹೆಜ್ಜೆ ಇರಿಸುವ ಪ್ರಯತ್ನ ಮಾಡಿ. ಎಂತದೇ ಕ್ಲಿಷ್ಟ ಸಂದರ್ಭಗಳಲ್ಲೂ ಶನೈಶ್ವರನೇ ನಿಮ್ಮನ್ನು ಕಾಯುವ ರುದ್ರ ಶಕ್ತಿಯಾಗಿ ಮಾರ್ಪಾಡುಗೊಳ್ಳುತ್ತಾನೆ. ದುಡಿಯುವ ಶಕ್ತಿಯನ್ನು ಕೈಗಳಿಗೆ ಒದಗಿಸುತ್ತಾನೆ. ಮನಸ್ಸನ್ನು ನಿಯಂತ್ರಿಸಿ. ಯುದ್ಧದ ಮುನ್ನವೇ ಸೋಲಲು ತಯಾರಾಗಲು ಮುಂದಾಗದಿರಿ. ಕಸದಿಂದಲೇ ರಸ ಎಂಬುದನ್ನು ಅರಿತಿರಿ. ಚಿನ್ನ, ಬೆಳ್ಳಿ, ಮುತ್ತು ರತ್ನ ವ್ಯಾಪಾರಗಳಿಗಿಂತ ರದ್ದಿ ಸಾಮಾನು, ಕಬ್ಬಿಣದ ವಸ್ತುಗಳು ಭಾಗ್ಯ ತರಬಹುದಾಗಿದೆ. ಶ್ರೀ ಹರಿಯನ್ನು ಸ್ತುತಿಸಿ.
ಶುಭ ಸಂಖ್ಯೆ : 8 ಶುಭ ದಿಕ್ಕು: ಪೂರ್ವ

ವೃಷಭ: ಶನೈಶ್ವರನಿಂದ ಬದುಕು ಬಂಗಾರ

Weekly Horoscope

ಸುಖದ ದಾರಿಯು ಜರೂರಾಗಿ ಸಿಕ್ಕಿದರೆ ದುಡಿದು ಕೋಟಿ ಕೋಟಿ ಸಂಪಾದಿಸಬಲ್ಲೆ ಎಂಬ ಯೋಚನೆಯಲ್ಲೇ ಇರಬೇಡಿ. ಜೀವನದ ಓಟದಲ್ಲಿ ಕಟ್ಟ ಕಡೆಗೆ ನೂರಕ್ಕೆ ನೂರು ಸುಖಿ ತಾನು ಎಂದು ತಿಳಿಯುವ ವ್ಯಕ್ತಿ ಇಲ್ಲವೇ ಇಲ್ಲ. ಜಗತ್ತಿನಲ್ಲಿ ಇರುವ ಸುಖವೇ ಅದ್ಭುತ ಎಂದರಿತು ಮುಂದಡಿ ಇರಿಸಿ. ನಿಮ್ಮ ಬದುಕನ್ನು ಬಂಗಾರವಾಗಿಸುವ ಶನೈಶ್ವರ ಹಾಗೂ ಕೇತು ಗ್ರಹಗಳು ಅಮಿತ ಉತ್ಸಾಹವನ್ನು, ಲವಲವಿಕೆಯನ್ನು ನಿಮ್ಮಲ್ಲಿ ತುಂಬಿ ಅಗಾಧವಾದುದನ್ನು ಸಾಧಿಸುವ ದಾರಿ ತೋರಬಲ್ಲರು. ಗಣೇಶನನ್ನು ಸ್ತುತಿಸಿ.
ಶುಭ ಸಂಖ್ಯೆ : 2 ಶುಭ ದಿಕ್ಕು: ನೈಋತ್ಯ

ಮಿಥುನ: ಗೊಂದಲ ಬಿಡಿ, ಗುರಿಯತ್ತ ಮುನ್ನೆಡೆಯಿರಿ

Weekly Horoscope

ಅಗಾಧವಾದ ಗುರು ಬಲ, ಕೃಷ್ಣವೇಣಿ ತಟಿನೀ ತೀರದಲ್ಲಿ ಸಂಸ್ಥಾಪಿತಳಾದ ಮಾಯಿ ದುರ್ಗಾಂಬಾ ನಿಮಗೆ ಸಂಭ್ರಮ ತರುವ ವಿಚಾರದಲ್ಲಿ ಕಟಿಬದ್ಧ ಎನ್ನಬಹುದು. ನಿಮ್ಮ ದ್ವಿಸ್ವಭಾವದ ರೀತಿ ನೀತಿಗಳಾಗಿರುವ, ಅದು, ಇದು, ಹಾಗೆ, ಹೀಗೆ ಎಂದು ಬದಲಾಗುವ ಯೋಚನೆಗಳ ಕಾರಣದಿಂದ ಯಾವುದೇ ಪ್ರಯೋಜನವಾಗುವುದಿಲ್ಲ. ವಿಷಕಕ್ಕುವ ರಾಹುವೇ ಲಾಭ ಒದಗಿಸುವ ಶ್ರೀ ಮನ್ನಾರಾಯಣನಾಗಿರುವಾಗ ನಿಮ್ಮ ಗುರಿ ತಲುಪಲು ಪ್ರಯತ್ನಿಸಿ. ಗೆಲುವಿಗೆ ಶ್ರೀ ದೇವಿಯ ಸಹಾಯವಿದೆ. ಅವಳನ್ನು ಸ್ತುತಿಸಿ.
ಶುಭ ಸಂಖ್ಯೆ : 5 ಶುಭ ದಿಕ್ಕು: ಉತ್ತರ

ಕಟಕ: ಕಾಲಾಯ ತಸ್ಮೈ ನಮಃ ಎಂಬುದ ತಿಳಿದಿರಿ

Weekly Horoscope

ಮನೆಯಲ್ಲಿಯೇ ಶಾಂತಿ ಸಿಗದು ಎಂದಾದರೆ ಮನಸ್ಸು ರೋಸಿ ಹೋಗುತ್ತದೆ. ನಿರಂತರವಾದ ಶೂಲದಿಂದ ಶನೈಶ್ವರ ತಿವಿದು ತತ್ತರಿಸುವಂತೆ ಮಾಡುತ್ತಿದ್ದಾನೆ ಎಂಬುದು ಸರಿಯೇ. ಅಷ್ಟಮ ಶನಿ ಕಾಟದಿಂದ ಒದ್ದಾಟದಲ್ಲಿ ಇದ್ದೀರಿ. ಬಿರುಗಾಳಿಯಾಗುವ ಮನದ ಸ್ಥಿತಿಗತಿಗಳನ್ನು ನಿಯಂತ್ರಿಸಿ. ಮಾತು ಕಡಿಮೆ ಮಾಡಿ. ನೀವು ಬುದ್ಧಿವಂತರೇ ಸರಿ. ಆದರೆ ಕಾಲ ಘಟ್ಟದ ಈ ಬಿಂದುವಿನಲ್ಲಿ ಮಹಾ ದಡ್ಡನೊಬ್ಬ ವಿದ್ವಾಂಸ ಎಂದು ಪೂಜಿತನಾಗಬಹುದು. ಕಾಲ ಹಾಗಿದೆ. ಕಾಲಾಯ ತಸ್ಮೈ ನಮಃ ಎಂಬುದನ್ನು ತಿಳಿದಿರಿ. ಮಾರುತಿಯನ್ನು ಸ್ತುತಿಸಿ.
ಶುಭ ಸಂಖ್ಯೆ : 9 ಶುಭ ದಿಕ್ಕು: ಈಶಾನ್ಯ

ಸಿಂಹ: ಹೊಸ ಕೆಲಸ, ಪ್ರಮೋಷನ್‌ ಪಡೆಯಲು ಸಕಾಲ

Weekly Horoscope

ನಿಮ್ಮಲ್ಲಿ ಸಿಂಹ ಶಕ್ತಿಯೂ ಯುಕ್ತಿಯೂ ಇದೆ. ಬಿರುಸಾಗಿ ಇರುವ ಧೂರ್ತರನ್ನು ನಿಗ್ರಹಿಸುವ ಒರಟುತನವೂ ಇದೆ. ಆದರೆ ಒರಟುತನ ಬೇಡ. ನುಡಿದರೆ ಮುತ್ತಿನ ಹಾರದಂತಿರಬೇಕು. ಬಸವಣ್ಣನವರ ಈ ವಚನವನ್ನು ನೆನಪಿನಲ್ಲಿ ಇಟ್ಟುಕೊಳ್ಳಿ. ಧೈರ್ಯ, ಸಾಹಸ, ಬೌದ್ಧಿಕ ಶಕ್ತಿ ಇತ್ಯಾದಿ ಸರ್ವ ಸಂಪನ್ನತೆಗಳನ್ನು ಹೊಂದಿದ ನೀವು ಈಗ ಹೊಸ ಕೆಲಸವನ್ನು ಸಂಪಾದಿಸಿಕೊಳ್ಳಬಲ್ಲಿರಿ. ಇರುವಲ್ಲೇ ಪ್ರಮೋಷನ್‌ ಪಡೆಯಬಲ್ಲಿರಿ. ವಿದೇಶಕ್ಕೆ ಹೋಗಿ ಕೆಲಸ ಮಾಡುವ ಯೋಚನೆ ಕೈ ಬಿಡದಿರಿ. ದುರ್ಗಾಳನ್ನು ಸ್ತುತಿಸಿ.
ಶುಭ ಸಂಖ್ಯೆ : 3 ಶುಭ ದಿಕ್ಕು: ದಕ್ಷಿಣ

ಕನ್ಯಾ: ಆಳಾಗಿ ದುಡಿದರೆ ಅರಸನಾಗಿ ಆಳುವಿರಿ!

Weekly Horoscope

ನಿಮ್ಮ ಮನೆಯಂಗಳದಲ್ಲಿ ಪಂಡಿತರು, ವಿದ್ವಾಂಸರು ಸೇರಿ ನಿಮ್ಮ ಜತೆಗಿನ ಸ್ನೇಹ ಬಯಸುವ ಕಾಲ ಇದು. ಯಾಕೆಂದರೆ ನಿಮಗೀಗ ಚುನಾವಣೆಯಿರಲಿ, ಯಾರನ್ನೇ ದೊರೆಯಾಗಿಸುವ ಕಿಂಗ್‌ ಮೇಕರ್‌ ಶಕ್ತಿ ಇರಲಿ, ನಿಯಂತ್ರಣ ಸಾಧಿಸಿ ಸೊಗಸಾಗಿ ಮಾತನಾಡಿ ಜನಮನ ಗೆಲ್ಲುವ ಪ್ರತಿಭೆಯೇ ಇರಲಿ, ಒಳ್ಳೆಯ ವರ್ಚಸ್ಸನ್ನು ಒದಗಿಸುವ ಸಂಪನ್ನತೆಯನ್ನು ಪಡೆದಿದೆ. ಆಳಾಗಿ ದುಡಿಯುವ ಉತ್ಸಾಹ ತೋರಿದರೆ ಅರಸನಾಗಿ ಉಣ್ಣುವ ಅದೃಷ್ಟವೂ ಘನವಾಗಿದೆ. ಶ್ರೀ ಲಕ್ಷ್ಮೀ ವಲ್ಲಭ ವೇಣುಗೋಪಾಲಸ್ವಾಮಿಯನ್ನು ಆರಾಧಿಸಿ, ಒಳಿತಿದೆ.
ಶುಭ ಸಂಖ್ಯೆ : 8 ಶುಭ ದಿಕ್ಕು: ವಾಯವ್ಯ

ತುಲಾ: ಆತ್ಮವಿಶ್ವಾಸವೇ ಗೆಲುವಿನ ಮೆಟ್ಟಿಲು

Weekly Horoscope

ಮಾತು ತೂಕಬದ್ಧವಾಗಿರಲಿ. ಮೌನವೂ ತೊಂದರೆ ತರಬಹುದು. ಪಂಚಮಶನಿ ಕಾಟದಿಂದಾಗಿ ನಿಮಗೆ ರಾಹು, ಕೇತು, ಚಂದ್ರ, ಶನೈಶ್ವರರು ಹಲವು ತೊಂದರೆಗಳಿಗೆ ಕಾರಣರಾಗುವ ಸಂದರ್ಭ ಅಧಿಕವೇ ಆದರೂ ಆತ್ಮವಿಶ್ವಾಸವಿರಲಿ. ಯಾವುದೋ ಕಿವಿಗಳು ಎಷ್ಟೇ ಗೋಗರೆದರೂ ನಿಮ್ಮ ನೋವಿನ ಮಾತುಗಳನ್ನು ಕೇಳಿಸಿಕೊಳ್ಳಲಾರವು. ಕೇಳಿಸಿಕೊಳ್ಳುವ ಹೃದಯವಂತಿಕೆ ದೇವರಿಂದ ಮಾತ್ರ ಸಾಧ್ಯ. ಮನೆದೇವರು, ಮಾರುತಿ, ದುರ್ಗಾ ಹಾಗೂ ಗಣೇಶರನ್ನು ಆರಾಧಿಸಿ. ಅನಿರೀಕ್ಷಿತ ಸಹಾಯ ನಿಮಗೆ ಪ್ರಾಪ್ತವಾಗುತ್ತದೆ.
ಶುಭ ಸಂಖ್ಯೆ : 4 ಶುಭ ದಿಕ್ಕು: ನೈಋತ್ಯ

ವೃಶ್ಚಿಕ: ವಿವಾಹಾಪೇಕ್ಷಿಗಳಿಗೆ ಶುಭ ಕಾಲ

Weekly Horoscope

ಎಂದೂ ಸಹಕಾರಿಯಾಗದ ಶನೈಶ್ವರ ನಿಮಗೆ ಅತುಳ ಬಲವನ್ನು ಒದಗಿಸುತ್ತಾನೆ. ನಂಬಿಕೆ ಇಡಿ. ಅಂದುಕೊಂಡಿದ್ದು ತುಸು ವಿಳಂಬ ನೆರವೇರಿದರೆ ತಾಳ್ಮೆ ಕಳಕೊಳ್ಳದಿರಿ. ವಿಳಂಬವಾದರೂ ಸರಿ ಪರಿಪೂರ್ಣವಾದ ಯಶಸ್ಸು ಶತಃಸಿದ್ಧ. ದಾಂಪತ್ಯದ ವಿಷಯದಲ್ಲಿ ಸಹಕಾರ, ಹೊಂದಾಣಿಕೆ ನಿಮಗೆ ಲಭ್ಯವಾಗಲಿದೆ. ವಿವಾಹಾಪೇಕ್ಷಿಗಳಿಗೆ ಇದು ಕನಸು ಈಡೇರಲು ಶುಭ ಸಂದರ್ಭವೂ ಆಗಿದೆ. ಹಠತ್ತಾದ ಆರೋಗ್ಯದಲ್ಲಿನ ಏರುಪೇರುಗಳ ಬಗೆಗೆ ನಿಗಾ ಇರಲಿ. ನಿರ್ಜಲೀಕರಣದ ತೊಂದರೆ ಎದುರಾದೀತು. ದುರ್ಗಾಳ ಆರಾಧನೆಯಿಂದ ಒಳಿತು.
ಶುಭ ಸಂಖ್ಯೆ : 2 ಶುಭ ದಿಕ್ಕು: ದಕ್ಷಿಣ

ಧನಸ್ಸು: ಬಾಳ ಸಂಗಾತಿಯೊಂದಿಗೆ ಆಪ್ತವಾಗಿರಿ!

Weekly Horoscope

ನಿಮ್ಮ ಬೆಂಬಲಕ್ಕೆ ಘನವಾದ ಶಕ್ತಿಯ ಮೂಲ ನಿಧಿಯೇ ಶನೈಶ್ವರನಾಗಿದ್ದಾನೆ. ವೈರಿಗಳನ್ನು ಹಣಿಯುವ ಶಕ್ತಿ ಪಡೆಯುತ್ತೀರಿ. ದೈವ ಬಲ ನಿಮ್ಮ ದೊಡ್ಡ ಆಸ್ತಿ. ಗಣೇಶನ ಆರಾಧನೆ ಮುಖ್ಯವಾಗಲಿ. ಹಿರಿಯರ ಆಸ್ತಿಯೇ ಇರಲಿ. ಇನ್ನೇನೋ ವಿಧದ ಪ್ರಾಪ್ತಿಗಳೇ ಇರಲಿ ನಿಮಗೆ ಲಭ್ಯವಾಗಲು ಇದು ಸಕಾಲ. ಬಾಳ ಸಂಗಾತಿಯ ಜತೆ ಆಪ್ತವಾಗಿ ಮಾತನಾಡಿ. ಹಲವು ರೀತಿಯ ಒತ್ತಡಗಳಿಂದ ದೂರ ಸರಿಯಲು ಇದು ಸಂಜೀವಿನಿಯಾಗಿದೆ. ರಾಹು ಪೀಡೆಯಿಂದಾಗಿ ಕಿರಿಕಿರಿ ಇದೆ. ಮಕ್ಕಳನ್ನು ಮೃದುಮಾತುಗಳಿಂದ ಸಂತೈಸಿ.
ಶುಭ ಸಂಖ್ಯೆ : 6 ಶುಭ ದಿಕ್ಕು: ಪೂರ್ವ

ಜ್ಯೋತಿಷ್ಯಕ್ಕೆ ಸಂಬಂಧಿಸಿದ ವಿಷಯಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ.

ಮಕರ: ಎಲ್ಲರನ್ನೂ ಯೋಚಿಸದೇ ನಂಬಬೇಡಿ!

Weekly Horoscope

ಹೊಸ ಹೊಸ ಅನುಭವ ಪಡೆಯಲಿದ್ದೀರಿ. ʻʻದುಷ್ಮಾನ್‌ ಕಹಾ ಹೈʼʼ ಎಂದು ಕೇಳಿದರೆ ʻʻದುಷ್ಮನ್‌ ಬಗಲ್‌ ಮೇ ಹೈʼʼ ಎಂಬ ಆಶ್ಚರ್ಯ ಚಕಿತ ಉದ್ಗಾರ ನಿಮ್ಮ ಬಾಯಿಂದ ಹೊರಬರಬಹುದು. ಹೀಗಾಗಿ ಎಲ್ಲರನ್ನೂ ಸರ್ರನೆ ನಂಬದಿರಿ. ಬೆನ್ನಿಗೆ ಚೂರಿ ಹಾಕುವ ಜನ ಧೂರ್ತತನ ತೋರಬಲ್ಲ, ದರಿದ್ರತನದಿಂದ ನಿಮ್ಮ ಮನಸ್ಸಿಗೆ ಖೇದ ತರುವ ಸಂದರ್ಭ ಆಪ್ತರಿಂದಲೇ ನಿರ್ಮಾಣವಾಗುತ್ತದೆ. ಆರ್ಥಿಕ ಬಲಾಢ್ಯತೆ ನಿಮಗೆ ಒದಗಿದರೂ ಟೋಪಿ ಹಾಕುವವರಿದ್ದಾರೆ ಎಚ್ಚರ. ರಾಮರಕ್ಷಾಸ್ತ್ರೋತ್ರ ಓದಿ. ಬಿರುಗಾಳಿಯನ್ನು ತಡೆಯಿರಿ.
ಶುಭ ಸಂಖ್ಯೆ : 9 ಶುಭ ದಿಕ್ಕು: ಆಗ್ನೇಯ

ಕುಂಭ: ತಪ್ಪು ಆಗದಂತೆ ಎಚ್ಚರಿಕೆ ವಹಿಸಿ

Weekly Horoscope

ಶುಕ್ರ ಹಾಗೂ ಬುಧರಿಂದ ಸಮಾಧಾನದ ನಿಟ್ಟುಸಿರು ಬಿಡಬಲ್ಲಿರಿ. ಬಿಟ್ಟರೆ ಕುಜ, ಕೇತು, ರಾಹು, ರವಿ ಕಾಡಬಲ್ಲರು. ಯಾಕೆಂದರೆ ಸಾಡೇಸಾತಿ ದಿನಗಳಿವು. ಶತ್ರುಗಳು ಮಾನಸಿಕ ಹಿಂಸೆ ಕೊಡುತ್ತಾರೆ. ಹೀಗಾಗಿ ವೈರಿಗಳನ್ನು ಸೃಷ್ಟಿಸಿಕೊಳ್ಳಬೇಡಿ. ವಾದವಿವಾದಗಳು ಬೆಳೆಯದಂತೆ ಜಾಣ್ಮೆ ತೋರಿ. ತಪ್ಪು ಸಂಭವಿಸಲಿ ನಿಮ್ಮಿಂದ ಎಂದು ಸೂಕ್ತ ಸಂದರ್ಭಕ್ಕಾಗಿ ಕಾದಿರುವ ಜನ ಸರತಿ ಸಾಲಲ್ಲಿ ನಿಂತಿದ್ದಾರೆ. ನೀವು ಅಯೋಗ್ಯರು ಎಂದು ಪ್ರಚಾರ ಮಾಡುತ್ತಾರೆ. ಎಚ್ಚರ ಇರಲಿ. ಹನುಮಾನ್‌ ಚಾಲೀಸಾ ಓದಿ.
ಶುಭ ಸಂಖ್ಯೆ : 1 ಶುಭ ದಿಕ್ಕು: ಉತ್ತರ

ಮೀನ: ಮಕ್ಕಳಿಂದ ಕಿರಿಕಿರಿ ಸಾಧ್ಯತೆ

Weekly Horoscope

ಹಲವಾರು ಹಸಿರು ಫಲವಂತಿಕೆಯ ದೊಡ್ಡ ಅಂಗಳ ಕಂಡರೂ ವಾಸ್ತವದಲ್ಲಿ ಅದು ಬರಡು ಭೂಮಿಯಾಗಿ ಬಿಡುತ್ತದೆ. ಗುರು ಬಲ ಇದ್ದರೂ ರಾಹುವು ಗುರುವಿನ ಕೈ ಕಟ್ಟಿದ್ದಾನೆ. ಉತ್ತಮವಾದರೂ ಚಂದ್ರನ ಬಲ ಸಾಕಾಗದು. ಮಕ್ಕಳು ಕಿರಿಕಿರಿ ತರಬಹುದಾಗಿದೆ. ಕುಜನಿಂದ ಒಂದು ದೃಢ ಚಿತ್ತವು ಒದಗಿ ಬರಲು ಸಾಧ್ಯವಿದೆ. ಆದರೆ ಇದೊಂದೇ ಬಲ ಸಾಕಾಗದು. ಆದರೂ ಕೆಲಸದ ಸ್ಥಳದಲ್ಲಿ ಕೆಲವು ಸಹೃದಯರು ಸಿಗಲು ಸಾಧ್ಯತೆ ಇದೆ. ದಶರಥರಾಜ ವಿರಚಿತ ಶನೈಶ್ವರ ಸ್ತ್ರೋತ್ರ ಪಠಿಸಿದರೆ ಕ್ಷೇಮ.
ಶುಭ ಸಂಖ್ಯೆ : 7 ಶುಭ ದಿಕ್ಕು: ಪಶ್ಚಿಮ

ಎಂ.ಎಂ.ಕೆ. ಶರ್ಮ, ಬೆಂಗಳೂರು
ಮೊಬೈಲ್‌ ನಂ.: 9632980996

ಇದನ್ನೂ ಓದಿ : Astrology: ನಿಮ್ಮ ರಾಶಿಗೆ ಸಾಡೇಸಾತಿ ಮತ್ತು ಶನಿ ದೆಸೆ ಯಾವಾಗ ಇದೆ ಗೊತ್ತೆ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Lok Sabha Election : ಕುರುಬರಿಗೆ ಟಿಕೆಟ್ ಕೊಡದ ಮೋದಿ ಕಂಬಳಿ ತೊಟ್ಟು ಡ್ರಾಮಾ ಆಡ್ತಾರೆ: ಸಿದ್ದರಾಮಯ್ಯ

Lok Sabha Election: ಬಸವಣ್ಣ ಹುಟ್ಟಿದ ಸ್ಥಳವಾಗಿರುವ ಬಸವನಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ರಚನೆಯನ್ನು ಈ ಬಜೆಟ್ ನಲ್ಲಿ ಘೋಷಿಸಲಾಗಿದೆ. 2013 ರಲ್ಲಿ ಬಸವಣ್ಣನವರ ಜನ್ಮದಿಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನವನ್ನು ಸ್ವೀಕರಿಸಿದ್ದೇನೆ. ನನಗೆ ಬಸವಾದಿ ಶರಣರ ತತ್ವಾದರ್ಶಗಳ ಮೇಲೆ ಅಪಾರ ನಂಬಿಕೆಯಿದೆ. ಶರಣರ ಹಾದಿಯಲ್ಲಿ ನಡೆಯುವ ಪ್ರಯತ್ನ ಮಾಡುತ್ತಿದ್ದೇನೆ.

VISTARANEWS.COM


on

Lok Sabha Election
Koo

ಬಾಗಲಕೋಟೆ: ರೈತ ಸಾಲ ಮನ್ನಾ ಮಾಡಲು ಯಾವುದೇ ಕಾರಣಕ್ಕೂ ಒಪ್ಪದ ಮೋದಿ (Narendra modi) ಅತ್ಯಂತ ಶ್ರೀಮಂತ ಬಂಡವಾಳಶಾಹಿಗಳ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ್ದಾರೆ. ಆದರೆ ಮೋದಿಯವರು ಬಡ ಭಾರತೀಯರನ್ನು ನಂಬಿಸಿದ್ದ, ಭಾಷಣಗಳಲ್ಲಿ ಹೇಳಿದ ಯಾವುದೇ ಭರವಸೆಗಳನ್ನು ಈಡೇರಿಸದೇ ‘ಸುಳ್ಳಿನ ಸರದಾರ’ ಆಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ ಮಾಡಿದರು. ಅವರು ಇಂದು ಪ್ರಜಾಧ್ವನಿ-02 ಲೋಕಸಭಾ ಚುನಾವಣಾ ಪ್ರಚಾರ (Lok Sabha Election) ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಪಕ್ಷದ ಅಭ್ಯರ್ಥಿ ಸಂಯುಕ್ತ ಪಾಟೀಲ್ ಅವರ ಪರವಾಗಿ ಮತದಾರರಲ್ಲಿ ಮತ ಯಾಚಿಸಿ ಮಾತನಾಡಿದರು.

ಬಸವಣ್ಣ ಹುಟ್ಟಿದ ಸ್ಥಳವಾಗಿರುವ ಬಸವನಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ರಚನೆಯನ್ನು ಈ ಬಜೆಟ್ ನಲ್ಲಿ ಘೋಷಿಸಲಾಗಿದೆ. 2013 ರಲ್ಲಿ ಬಸವಣ್ಣನವರ ಜನ್ಮದಿಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನವನ್ನು ಸ್ವೀಕರಿಸಿದ್ದೇನೆ. ನನಗೆ ಬಸವಾದಿ ಶರಣರ ತತ್ವಾದರ್ಶಗಳ ಮೇಲೆ ಅಪಾರ ನಂಬಿಕೆಯಿದೆ. ಶರಣರ ಹಾದಿಯಲ್ಲಿ ನಡೆಯುವ ಪ್ರಯತ್ನ ಮಾಡುತ್ತಿದ್ದೇನೆ. ಬಸವಣ್ಣನವರ ವಿಚಾರಧಾರೆಯನ್ನು ಪಾಲಿಸಬೇಕೆಂಬ ಉದ್ದೇಶದಿಂದ ಅವರ ಭಾವಚಿತ್ರವನ್ನು ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಇಡಬೇಕೆಂದು ಆದೇಶ ಮಾಡಿದೆ. ಜಾತಿ ವರ್ಗ ವ್ಯವಸ್ಥೆ ತೊಲಗಿ ಸಮಾನತೆ ಸ್ಥಾಪನೆಯಾಗಿ, ಜಾತ್ಯಾತೀತ ಸಮಾಜ ನಿರ್ಮಾಣವಾಗಬೇಕೆಂಬ ಆಶಯವನ್ನು ಬಸವಣ್ಣನವರು ಹೊಂದಿದ್ದರು. ವಿಶ್ವಗುರು ಬಸವಣ್ಣನವರನ್ನು ‘ಸಾಂಸ್ಕೃತಿಕ ನಾಯಕ’ ಎಂದು ನಮ್ಮ ಸರ್ಕಾರ ಘೋಷಣೆ ಮಾಡಿದೆ. ಈ ಕಾರ್ಯವನ್ನು ಬಿಜೆಪಿಯಿಂದ ಮುಖ್ಯಮಂತ್ರಿಗಳಾಗಿದ್ದ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿಯವರಾಗಲಿ ಮಾಡಲಿಲ್ಲ ಎಂದರು.

ಮೋದಿಯವರು ಕಂಬಳಿ ಹಾಕಿಕೊಂಡು ಮಾಡಿದ ಭಾಷಣ ಕೇವಲ ನಾಟಕ

ಕಾಂಗ್ರೆಸ್ ನವರು ಶಿವಾಜಿ ಮಹಾರಾಜರು ಹಾಗೂ ಕಿತ್ತೂರು ರಾಣಿ ಚೆನ್ನಮ್ಮನಿಗೆ ಗೌರವ ನೀಡಲಿಲ್ಲ ಎಂದು ಮೋದಿಯವರು ಸುಳ್ಳು ಹೇಳಿದ್ದರು , ಆದರೆ ಸರ್ಕಾರದ ವತಿಯಿಂದ ಕಿತ್ತೂರು ಚೆನ್ನಮ್ಮ ದಿನಾಚರಣೆಯನ್ನು ಆಚರಿಸಬೇಕೆಂಬ ಆದೇಶವನ್ನು ಮಾಡಿದ್ದು ನಮ್ಮ ಕಾಂಗ್ರೆಸ್ ಸರ್ಕಾರವೇ. ಮೋದಿಯವರು ಕರಿಕಂಬಳಿ ವೇಷ ಹಾಕಿಕೊಂಡು ಭಾಷಣ ಮಾಡಿರುವುದು ಕೇವಲ ನಾಟಕವೇ ಹೊರತು, ಕುರುಬ ಸಮುದಾಯದ ಮೇಲಿನ ಪ್ರೀತಿಯಿಂದಲ್ಲ. ಇವರ ವೇಷ ಭೂಷಣ ನಾಟಕಗಳು ಭಾರತೀಯರಿಗೆ ಈಗ ಅರ್ಥವಾಗಿದೆ ಎಂದರು.

ಕರ್ನಾಟಕದ 28 ಲೋಕಸಭಾ ಚುನಾವಣೆಯಲ್ಲಿ ಒಬ್ಬ ಕುರುಬ ಸಮುದಾಯದವರಿಗಾದರೂ ಟಿಕೇಟನ್ನು ಬಿಜೆಪಿಯ ಮೋದಿ ನೀಡಿಲ್ಲ , ಒಬ್ಬ ಮುಸಲ್ಮಾನನಿಗಾಗಲಿ, ಒಬ್ಬ ಕ್ರಿಶ್ಚಯನ್ನರಿಗಾಗಲಿ ಟಿಕೇಟು ನೀಡಿಲ್ಲ. ಏಕೆಂದರೆ ಬಿಜೆಪಿಯವರಿಗೆ ಸಾಮಾಜಿಕ ನ್ಯಾಯದಲ್ಲಿ ನಂಬಿಕೆಯೇ ಇಲ್ಲ ಎಂದರು.

ಬಿಜೆಪಿ ರೈತ ಸಾಲ ಮನ್ನಾ ಮಾಡಿಲ್ಲ

ಸ್ವಾಮಿನಾಥನ್ ವರದಿ ಜಾರಿಯಾಗದೇ , ರೈತರು ತಮ್ಮ ಬೆಳೆಗಳಿಗೆ ನ್ಯಾಯಯುತ ಬೆಲೆ ನೀಡಲು ಹೋರಾಟ ಮಾಡುತ್ತಲೇ ಇದ್ದಾರೆ. ಈ ಹೋರಾಟದಲ್ಲಿ 700 ಕ್ಕೂ ಹೆಚ್ಚು ರೈತರು ಮೃತಪಟ್ಟರು. ಮೋದಿಯವರು 10 ವರ್ಷಗಳ ಪ್ರಧಾನಿಯ ಅವಧಿಯಲ್ಲಿ ಒಮ್ಮೆಯೂ ರೈತರ ಸಾಲ ಮನ್ನಾ ಮಾಡಲಿಲ್ಲ. ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ, 76 ಸಾವಿರ ಕೋಟಿ ರೈತರ ಸಾಲ ಮನ್ನಾ ಮಾಡಿದರು. ನಾನು ಸಿಎಂ ಆದ ನಂತರ 27 ಲಕ್ಷ ರೈತರಿಗೆ 8165 ಕೋಟಿ ರೈತ ಸಾಲ ಮನ್ನಾ ಮಾಡಿದೆ. ಬಿಜೆಪಿಯವರು ರೈತ ಸಾಲ ಮನ್ನಾ ಮಾಡಲೇ ಇಲ್ಲ. ಯಡಿಯೂರಪ್ಪನವರು ‘ರೈತ ಸಾಲ ಮನ್ನಾ ಮಾಡಲು ಮನವಿ ಮಾಡಿದಾಗ,’ನಮ್ಮಲ್ಲಿ ನೋಟು ಪ್ರಿಂಟ್ ಮಾಡುವ ಮಷೀನು ಇಲ್ಲ ’ ಎಂದಿದ್ದರು. ರೈತ ಸಾಲ ಮನ್ನಾ ಮಾಡದಿದ್ದ ಮೋದಿಯವರು ದೇಶದ ಬಂಡವಾಳಶಾಹಿಗಳ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ್ದಾರೆ. ಮೋದಿಯವರು ನೀಡಿದ ಯಾವುದೇ ಭರವಸೆಗಳನ್ನು ಈಡೇರಿಸದೇ ‘ಸುಳ್ಳಿನ ಸರದಾರ’ ಆಗಿದ್ದಾರೆ ಎಂದರು.

ಇದನ್ನೂ ಓದಿ: Lok Sabha Election : ಮೋದಿ ಗ್ಯಾರಂಟಿ ಪಡೆಯಲು ಜೋಶಿ ಗೆಲ್ಲಿಸಿ; ಏಕನಾಥ ಶಿಂಧೆ

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಈಡೇರಿಸಿದ್ದೇವೆ. ಗ್ಯಾರಂಟಿ ಯೋಜನೆಗಳು ಎಲ್ಲ ಜಾತಿ ಧರ್ಮದವರಿಗೆ ತಲುಪುತ್ತಿದೆ. ಶಕ್ತಿ ಯೋಜನೆ ಸೇರಿದಂತೆ ಎಲ್ಲ ಗ್ಯಾರಂಟಿಗಳಿಗೆ ರಾಜ್ಯದ ಮಹಿಳೆಯರಿಂದ ಹೆಚ್ಚಿನ ಪ್ರಶಂಸೆ ದೊರೆತಿದೆ ಎಂದರು.

ಮೀಸಲಾತಿಯಲ್ಲಿ ಬಿಜೆಪಿಗೆ ನಂಬಿಕೆ ಇಲ್ಲ

ಮೀಸಲಾತಿಯಲ್ಲಿ ಬಿಜೆಪಿಗೆ ನಂಬಿಕೆ ಇಲ್ಲ. ನರೇಂದ್ರ ಮೋದಿಯವರು ದಲಿತರಿಗೆ, ಹಿಂದುಳಿದವರ ಮೀಸಲಾತಿಯನ್ನು ಕಿತ್ತು ಮುಸಲ್ಮಾನರಿಗೆ ಕಾಂಗ್ರೆಸ್ ಕೊಡುತ್ತಾರೆ ಎಂದು ಸುಳ್ಳು ತಮ್ಮ ಪ್ರಚಾರ ಭಾಷಣದಲ್ಲಿ ಹೇಳುತ್ತಾರೆ. ಮೋದಿಯವರು ನಮ್ಮ ಸಂವಿಧಾನವನ್ನು ಓದಬೇಕು. ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಹಿಂದುಳಿದವರಿಗೆ ಜಾತಿ ಧರ್ಮ ಭೇದವಿಲ್ಲದೆ ಎಲ್ಲರೂ ಮೀಸಲಾತಿಗೆ ಅರ್ಹರು ಎಂದು ಸಂವಿಧಾನ ಸ್ಪಷ್ಟವಾಗಿ ಹೇಳುತ್ತದೆ. ನರೇಂದ್ರ ಮೋದಿಗೆ ದಲಿತರು, ಹಿಂದುಳಿದವರನ್ನು ಮುಸಲ್ಮಾನರ ವಿರುದ್ಧ ಎತ್ತಿ ಕಟ್ಟುತ್ತಾ ದ್ವೇಶದ ರಾಜಕಾರಣ ಮಾಡಲು ನಾಚಿಕೆಯಾಗುವುದಿಲ್ಲವೇ ಎಂದು ಪ್ರಶ್ನಿಸಿದರು.

ಗ್ಯಾರಂಟಿ ಗಳನ್ನು ಜಾರಿಗೆ ತಂದ ಮೇಲೆ ಸರ್ಕಾರದಲ್ಲಿ ಸಂಬಳ ಕೊಡಲು ದುಡ್ಡಿಲ್ಲ ಎಂದು ಸುಳ್ಳು ಹೇಳಿದ್ದಾರೆ. ಅವರಿಗೆ ಕರ್ನಾಟಕದ ಹಣಕಾಸಿನ ಪರಿಸ್ಥಿತಿ ಗೊತ್ತಿದೆಯೋ ಇಲ್ಲವೋ ತಿಳಿದಿಲ್ಲ.ಖಜಾನೆ ಖಾಲಿಯಾಗಿದ್ದರೆ ನಾವು ಅಧಿಕಾರಕ್ಕೆ ಬಂದ ನಂತರ ಗ್ಯಾರಂಟಿಗಳನ್ನು ಜಾರಿ ಮಾಡಲು ಸಾಧ್ಯವಾಗುತ್ತಿ ತ್ತೇ? 36000 ಕೋಟಿ ರೂಗಳನ್ನು ವೆಚ್ಚ ಮಾಡಲು ಸಾಧ್ಯವಾಗುತ್ತಿತ್ತೆ. ಯಾರಾದರೂ ಸರ್ಕಾರಿ ನೌಕರ ನಮಗೆ ಸಂಬಳ ನಿಂತುಹೋಗಿದೆ ಎಂದರೆ ನಾನು ರಾಜಕೀಯ ನಿವೃತಿ ಪಡೆಯುತ್ತೇನೆ. ಸುಳ್ಳು ಹೇಳಲು ಇತಿಮಿತಿ ಇರಬೇಕು ಎಂದರು.

ಅಪಪ್ರಚಾರವನ್ನು ಬಿಜೆಪಿ ಕೂಡಲೇ ನಿಲ್ಲಿಸಬೇಕು.

1.20 ಲಕ್ಷ ಕೋಟಿ ರೂ.ಗಳನ್ನು ಅಭಿವೃದ್ಧಿಗೆ ಹಾಗೂ ಗ್ಯಾರಂಟಿಗಳಿಗೆ ಮೀಸಲಿರಿಸಲಾಗಿದೆ ನರೇಂದ್ರ ಮೋದಿಯವರೇ ಎಂದರು. ಕಾಂಗ್ರೆಸ್ ಸರ್ಕಾರದ ಮೇಲೆ ಅಪಪ್ರಚಾರ ಮಾಡುತ್ತಿದ್ದಾರೆ. ಮೊದಲು ಗ್ಯಾರಂಟಿ ಜಾರಿ ಮಾಡಿದರೆ ಆರ್ಥಿಕವಾಗಿ ದಿವಾಳಿಯಾಗುತ್ತಾರೆ ಎನ್ನುತ್ತಿದ್ದವರು ಈಗ ಚುನಾವಣೆ ಯಾಗುವರೆಗೆ ಮಾತ್ರ ಗ್ಯಾರಂಟಿಗಳು ಇರಲಿವೆ ಎನ್ನುತ್ತಿದ್ದಾರೆ. ಅಪಪ್ರಚಾರವನ್ನು ಬಿಜೆಪಿ ಕೂಡಲೇ ನಿಲ್ಲಿಸಬೇಕು. ಯಾವ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ ಎಂದರು. ಇದು ನಿರಂತರ. ಜನ ಆಶೀರ್ವದಿಸಿ ಮತ್ತೆ ಅಧಿಕಾರ ಕೊಟ್ಟರೇ ಮುಂದೆಯೂ ಜಾರಿಯಾಗಲಿದೆ ಎಂದರು.

ಸಾಮಾಜಿಕವಾಗಿ ಶಕ್ತಿ ತುಂಬುವವರು

ಮೋದಿಯವರು ಲೂಟಿ ಹೊಡೆಯುವ ಗ್ಯಾಂಗ್ ಬಂದಿದೆ ಎಂದಿದ್ದಾರೆ. ನಾವು ಲೂಟಿ ಹೊಡೆಯುವವರಲ್ಲ. ಈ ರಾಜ್ಯದ ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಮಹಿಳೆಯರು ಆರ್ಥಿಕವಾಗಿ ಸಾಮಾಜಿಕವಾಗಿ ಶಕ್ತಿ ತುಂಬುವವರು. ಸಮಾಜದ ಮುಖ್ಯವಾಹಿನಿಗೆ ಅವರು ಬರಬೇಕೆಂದು ನಂಬಿಕೆ ಇಟ್ಟವರು ಕಾಂಗ್ರೆಸ್ ನವರು . ಲೂಟಿ ಮಾಡಲು ಬಂದಿದ್ದವರು ಬಿಜೆಪಿಯವರು ಎಂದರು.

40% ಆರೋಪ ಸಾಬೀತಾದರೆ ಲೂಟಿ ಹೊಡೆದ ಗ್ಯಾಂಗ್ ನ್ನು ಪತ್ತೆ ಹಚ್ಚಿ ಶಿಕ್ಷೆ

ಗುತ್ತಿಗೆದಾರರ ಸಂಘದವರು 40% ಸರ್ಕಾರ ಎಂದು ಹೇಳಿದ್ದರು. ಇದರ ತನಿಖೆಗೆ ಆಯೋಗ ಈಗಾಗಲೇ ರಚನೆಯಾಗಿ ತನಿಖೆ ನಡೆಯುತ್ತಿದೆ. ಆರೋಪ ಸಾಬೀತಾದರೆ ಲೂಟಿ ಹೊಡೆದ ಗ್ಯಾಂಗ್ ನ್ನು ಪತ್ತೆ ಹಚ್ಚಿ ಶಿಕ್ಷೆ ಕೊಡಿಸುವ ಕೆಲಸ ಮಾಡುತ್ತೇವೆ. ನಾವು ನುಡಿದಂತೆ ನಡೆದಿದ್ದೇವೆ. ಮತ ಹಾಕುವ ಮುನ್ನ ನುಡಿದಂತೆ ಯಾರು ನಡೆದಿದ್ದಾರೆ ಎಂದು ಮತದಾರರು ಪರಿಶೀಲಿಸಬೇಕು ಎಂದರು.

ಕೇಂದ್ರ ಸರ್ಕಾರದಲ್ಲಿ 30 ಲಕ್ಷ ಹುದ್ದೆಗಳು ಖಾಲಿ ಇವೆ

ಕೇಂದ್ರ ಸರ್ಕಾರದಲ್ಲಿ 30 ಲಕ್ಷ ಹುದ್ದೆಗಳು ಖಾಲಿ ಇವೆ. ಅವನ್ನೂ ಭರ್ತಿ ಮಾಡಿಲ್ಲ.ಭರ್ತಿ ಮಾಡಿದ್ದರೆ ದಲಿತರು ಹಿಂದುಳಿದವರಿಗೆ 50% ಮೀಸಲಾತಿ ದೊರೆಯುತ್ತಿತ್ತು. ಉಳಿದದ್ದು ಇತರರಿಗೆ ದೊರೆಯುತ್ತಿತ್ತು. ನರೇಂದ್ರ ಮೋದಿಯವರು ಅದನ್ನೂ ಮಾಡಲಿಲ್ಲ. ಎಲ್ಲಾ ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ ಏರಿದೆ. ಇವನ್ನು ಕಡಿಮೆ ಮಾಡುವುದಾಗಿ ಹೇಳಿದ್ದರು. ಯಾವುದರ ಬೆಲೆಯೂ ಕಡಿಮೆ ಮಾಡಲು ಆಗಲಿಲ್ಲ. ಒಳ್ಳೆಯ ದಿನಗಳು ಬರುತ್ತವೆ ಎಂದು ಹೇಳಿ ಹತ್ತು ವರ್ಷ ಗಳಾದರೂ ಬಡವರ ಜೀವನ ಸುಧಾರಣೆ ಆಗಲಿಲ್ಲ. ಬದಲಿಗೆ ಕಷ್ಟಕ್ಕೆ ಸಿಲುಕಿದ್ದಾರೆ ಎಂದರು. ರೈತರು ವ್ಯವಸಾಯಕ್ಕೆ ವೆಚ್ಚ ಮಾಡುವ ಹಣ ಮೂರು ಪಟ್ಟು ಹೆಚ್ಚಾಯಿತು ಹೊರತು ಆದಾಯ ದುಪ್ಪಟ್ಟು ಆಗಲಿಲ್ಲ. ಇದನ್ನು ಜನ ಅರ್ಥ ಮಾಡಿಕೊಳ್ಳಬೇಕು ಎಂದರು.

Continue Reading

ದೇಶ

Tsering Namgyal: ಲಡಾಕ್‌ನಲ್ಲಿ ತ್ಸೆರಿಂಗ್‌ ನಾಮ್‌ಗ್ಯಾಲ್‌ಗೆ ಟಿಕೆಟ್‌ ಕೊಟ್ಟ ಕಾಂಗ್ರೆಸ್; ಭಾರಿ ಹೈಡ್ರಾಮಾ

Tsering Namgyal: ತ್ಸೆರಿಂಗ್‌ ನಾಮ್‌ಗ್ಯಾಲ್‌ ಅವರೀಗ ಗುರುವಾರ ಕಾಂಗ್ರೆಸ್‌ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಐದನೇ ಹಂತದಲ್ಲಿ ಅಂದರೆ ಮೇ 20ರಂದು ಲಡಾಕ್‌ನಲ್ಲಿ ಮತದಾನ ನಡೆಯಲಿದೆ.

VISTARANEWS.COM


on

Tsering Namgyal
Koo

ನವದೆಹಲಿ: ಕಾಂಗ್ರೆಸ್‌ ನಾಯಕ ತ್ಸೆರಿಂಗ್‌ ನಾಮ್‌ಗ್ಯಾಲ್‌ (Tsering Namgyal) ಅವರು ಲಡಾಕ್‌ (Ladakh) ಲೋಕಸಭೆ ಕ್ಷೇತ್ರದಲ್ಲಿ ಗುರುವಾರ (ಮೇ 2) ಕಾಂಗ್ರೆಸ್‌ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಇವರು ಕಾಂಗ್ರೆಸ್‌ನಿಂದ ಸ್ಪರ್ಧಿಸಲು ಚುನಾವಣೆ ಆಯೋಗವೂ ಅನುಮತಿ ನೀಡಿದೆ. ತ್ಸೆರಿಂಗ್‌ ನಾಮ್‌ಗ್ಯಾಲ್‌ ಅವರು ನಾಮಪತ್ರ ಸಲ್ಲಿಸುತ್ತಲೇ ತುಸು ಗೊಂದಲ ಉಂಟಾಗಿತ್ತು. ಇದಾದ ಬಳಿಕ ಚುನಾವಣೆ ಆಯೋಗವು ತ್ಸೆರಿಂಗ್‌ ನಾಮ್‌ಗ್ಯಾಲ್‌ ಅವರು ಕಾಂಗ್ರೆಸ್‌ನಿಂದ ಸ್ಪರ್ಧಿಸಬಹುದು ಎಂದು ತಿಳಿಸಿದೆ. ಲಡಾಕ್‌ನಲ್ಲಿ ಮೇ 20ರಂದು ಮತದಾನ ನಡೆಯಲಿದೆ.

ಲಡಾಕ್‌ನಲ್ಲಿ ಹೈಡ್ರಾಮಾ

ಲೋಕಸಭೆ ಚುನಾವಣೆಯ ಎರಡು ಹಂತದ ಮತದಾನ ಮುಗಿದರೂ, ಲಡಾಕ್‌ನಲ್ಲಿ ರಾಜಕೀಯ ಹೈಡ್ರಾಮಾ ಮಾತ್ರ ಮುಂದುವರಿದಿದೆ. ಲಡಾಕ್‌ನಲ್ಲಿ ಕಾಂಗ್ರೆಸ್‌ ಹಾಗೂ ನ್ಯಾಷನಲ್‌ ಕಾನ್ಫರೆನ್ಸ್‌ ಪಕ್ಷಗಳ ಜಂಟಿ ಅಭ್ಯರ್ಥಿಯಾಗಿ ಹಾಜಿ ಹನಿಫಾ ಅವರು ಹೊರಹೊಮ್ಮಿದ್ದರು. ಆದರೆ, ಗುರುವಾರ (ಮೇ 2) ಬೆಳಗ್ಗೆ ತ್ಸೆರಿಂಗ್‌ ನಾಮ್‌ಗ್ಯಾಲ್‌ ಅವರು ಕಾಂಗ್ರೆಸ್‌ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಇದು ಹೈಡ್ರಾಮಾಗೆ ಕಾರಣವಾಗಿತ್ತು. ಗೊಂದಲದ ಬಳಿಕ ಕಾಂಗ್ರೆಸ್‌ ನಾಯಕ ರಿಗ್ಜಿನ್‌ ಜೋರಾ ಅವರು ತ್ಸೆರಿಂಗ್‌ ನಾಮ್‌ಗ್ಯಾಲ್‌ ಅವರು ಕಾಂಗ್ರೆಸ್‌ ಅಭ್ಯರ್ಥಿ ಎಂಬುದಾಗಿ ಘೋಷಿಸಿದರು.

ಬಿಜೆಪಿಯಿಂದ ತಾಶಿ ಗ್ಯಾಲ್ಸನ್‌ ಅವರು ಬುಧವಾರ (ಮೇ 1) ನಾಮಪತ್ರ ಸಲ್ಲಿಸಿದ್ದಾರೆ. ಇನ್ನು ಬಿಜೆಪಿ ಸಂಸದ ತ್ಸೆರಿಂಗ್‌ ನಾಮ್‌ಗ್ಯಾಲ್‌ ಅವರು ಲಡಾಕ್‌ನಲ್ಲಿ ಬಿಜೆಪಿಯ ಪ್ರಮುಖ ನಾಯಕರಾಗಿದ್ದು, ಇತ್ತೀಚೆಗೆ ಪಕ್ಷದಲ್ಲಿಯೇ ಅವರನ್ನು ಮರೆಗೆ ಸರಿಸಲಾಗುತ್ತಿತ್ತು. ಅಲ್ಲದೆ, ಅವರಿಗೆ ಟಿಕೆಟ್‌ ಕೂಡ ನಿರಾಕರಿಸಿದ ಕಾರಣ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ. ಮೇ 3 ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಕಾರಣ ಬಿಜೆಪಿ ಸಂಸದ ಪಕ್ಷೇತರರಾಗಿ ಸ್ಪರ್ಧಿಸಲಿದ್ದಾರೆಯೇ ಎಂಬ ಕುತೂಹಲ ಮೂಡಿದೆ.

ಇದಕ್ಕೂ ಮೊದಲು ಬಿಜೆಪಿ ಸಂಸದ ತ್ಸೆರಿಂಗ್‌ ನಾಮ್‌ಗ್ಯಾಲ್‌ ಅವರೇ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ ಎಂದು ಹೇಳಲಾಗುತ್ತಿತ್ತು. ಕೆಲ ಮಾಧ್ಯಮಗಳಲ್ಲಿ ಕಾಂಗ್ರೆಸ್‌ ಮಾಸ್ಟರ್‌ ಸ್ಟ್ರೋಕ್‌ ಎಂದೇ ವರದಿಯಾಗಿತ್ತು. ಆದರೆ, ಕೆಲ ಹೊತ್ತಿನ ಬಳಿಕ ಕಣಕ್ಕಿಳಿದವರು ಕಾಂಗ್ರೆಸ್‌ ನಾಯಕನೇ ಹೊರತು, ಬಿಜೆಪಿ ಸಂಸದ ಅಲ್ಲ ಎಂಬ ವಿಷಯ ಗೊತ್ತಾಯಿತು. ಇಬ್ಬರ ಹೆಸರೂ ಒಂದೇ ಇರುವುದರಿಂದ ಗೊಂದಲ ಉಂಟಾಗಿತ್ತು.

ಇದನ್ನೂ ಓದಿ: ಲೈಂಗಿಕ ಕಿರುಕುಳ ಆರೋಪಿ ಬ್ರಿಜ್‌ ಭೂಷಣ್‌ಗಿಲ್ಲ ಟಿಕೆಟ್‌; ಮಗನಿಗೆ ಮಣೆ, ರಾಯ್‌ಬರೇಲಿಗೂ ಅಭ್ಯರ್ಥಿ ಘೋಷಿಸಿದ ಬಿಜೆಪಿ

Continue Reading

ಪ್ರಮುಖ ಸುದ್ದಿ

IPL 2024 : ರಾಜಸ್ಥಾನ್ ವಿರುದ್ಧ ಎಸ್​​ಆರ್​ಎಚ್​​ ತಂಡಕ್ಕೆ ರೋಚಕ 1 ರನ್ ಗೆಲುವು

IPL 2024: ಟಾಸ್ ಗೆದ್ದ ಎಸ್​ಆರ್​ಎಚ್​ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು ನಿಗದಿತ 20 ಓವರ್​ಗಳಲ್ಲಿ 3 ವಿಕೆಟ್​ಗೆ 201 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ರಾಜಸ್ಥಾನ್ ತಂಡ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 7 ವಿಕೆಟ್​ಗೆ 200 ರನ್ ಬಾರಿಸಿ ಸೋಲೊಪ್ಪಿಕೊಂಡಿತು.

VISTARANEWS.COM


on

IPL 2024
Koo

ಹೈದರಾಬಾದ್​​: ಕೊನೇ ಓವರ್​ನ ಕೊನೇ ಎಸೆತದ ತನಕವೂ ಕುತೂಹಲ ಮೂಡಿಸಿದ್ದ ರಾಜಸ್ಥಾನ್​ ರಾಯಲ್ಸ್​ ಹಾಗೂ ಸನ್​ ರೈಸರ್ಸ್​ ಹೈದರಾಬಾದ್​ ನಡುವಿನ ಪಂದ್ಯದಲ್ಲಿ ರೋಚಕ ಒಂದು ರನ್ ಗೆಲುವಿನ ಫಲಿತಾಂಶ ಮೂಡಿ ಬಂತು. ಇದರೊಂದಿಗೆ ಐಪಿಎಲ್​ 17ನೇ ಆವೃತ್ತಿಯಲ್ಲಿ (IPL 2024) ಸತತ ಎರಡು ಸೋಲುಗಳ ಮೂಲಕ ನಿರಾಸೆ ಎದುರಿಸಿದ್ದ ಹೈದರಾಬಾದ್ ತಂಡ ಗೆಲುವಿನ ಹಾದಿಗೆ ಮರಳಿತು. ಅತ್ತ ರಾಜಸ್ಥಾನ್​ ​ ತಂಡ ಎರಡನೇ ಸೋಲಿಗೆ ಒಳಗಾಯಿತು. ಕೊನೇ ಎಸೆತದಲ್ಲಿ ರಾಯಲ್ಸ್ ತಂಡದ ಗೆಲುವಿಗೆ ಎರಡು ರನ್​ ಬೇಕಾಗಿದ್ದವು. ಆದರೆ, ಭುವನೇಶ್ವರ್ ಕುಮಾರ್​ ರಾಯಲ್ಸ್​ ಬ್ಯಾಟರ್​ ಪೊವೆಲ್​ ರೊವ್ಮನ್​ ಪೊವೆಲ್​ ಅವರನ್ನು ಎಲ್​ಬಿಡಬ್ಲ್ಯು ಮಾಡಿ ತವರು ತಂಡಕ್ಕೆ ಗೆಲುವು ತಂದುಕೊಟ್ಟರು.

ಇಲ್ಲಿನ ರಾಜೀವ್​ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಎಸ್​ಆರ್​ಎಚ್​ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು ನಿಗದಿತ 20 ಓವರ್​ಗಳಲ್ಲಿ 3 ವಿಕೆಟ್​ಗೆ 201 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ರಾಜಸ್ಥಾನ್ ತಂಡ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 7 ವಿಕೆಟ್​ಗೆ 200 ರನ್ ಬಾರಿಸಿ ಸೋಲೊಪ್ಪಿಕೊಂಡಿತು. ಕೊನೇ ಓವರ್​ನಲ್ಲಿ ರಾಯಲ್ಸ್ ತಂಡಕ್ಕೆ 13 ರನ್​ಗಳು ಬೇಕಾಗಿತ್ತು. ಪೊವೆಲ್​ ನಿಖರವಾಗಿ ರನ್​ ಗಳಿಸಿ ತಂಡವನ್ನು ಗೆಲುವಿನ ಹೊಸ್ತಿಲಲ್ಲಿ ತಂದು ನಿಲ್ಲಿಸಿದ್ದರು. ಆದರೆ, ಭುವನೇಶ್ವರ್ ಕುಮಾರ್​ ಲೊ ಪುಲ್​ಟಾಸ್​ ಹಾಕುವ ಮೂಲಕ ಪೊವೆಲ್ ಅವರನ್ನು ಎಲ್​ಬಿಡಬ್ಲ್ಯು ಬಲೆಗೆ ಕೆಡವಿದರು.

ನಿತೀಶ್ ಅರ್ಧ ಶತಕ

ಬ್ಯಾಟಿಂಗ್ ಆರಂಭಿಸಿದ ಎಸ್​ಆರ್​​ಎಚ್​ ತಂಡ ಅಭಿಶೇಕ್​ ಶರ್ಮಾ ಅವರನ್ನು 12 ರನ್​ಗೆ ಕಳೆದುಕೊಂಡಿತು. ಈ ವೇಳೆ ತಂಡದ ಮೊತ್ತ 25 ಆಗಿತ್ತು. ನಂತರ ಬಂದ ಅನ್ಮೋಲ್ ಪ್ರೀತ್ ಸಿಂಗ್​ 5 ರನ್​ಗೆ ಔಟಾಗಿ ನಿರಾಸೆ ಮೂಡಿಸಿದರು. ಆ ಬಳಿಕ ಜತೆಯಾದ ನಿತೀಶ್​ ಕುಮಾರ್ ರೆಡ್ಡಿ ಅರಂಭಿಕ ಬ್ಯಾಟರ್​ ಟ್ರಾವಿಸ್​ ಹೆಡ್​ ಜತೆ ಉತ್ತಮವಾಗಿ ಬ್ಯಾಟ್ ಬೀಸಿದರು. ಅವರಿಬ್ಬರೂ ನಾಲ್ಕನೇ ವಿಕೆಟ್​ಗೆ 96 ರನ್ ಜತೆಯಾಟ ನೀಡಿದರು. ಹೆಡ್​ 58 ರನ್ ಬಾರಿಸಿದರೆ ನಿತೀಶ್​ 76 ರನ್ ಬಾರಿಸಿ ಅಜೇಯವಾಗಿ ಉಳಿದರು. ಕೊನೆಯಲ್ಲಿ ಹೆನ್ರಿಚ್ ಕ್ಲಾಸೆನ್​ 19 ಎಸೆತಕ್ಕೆ 42 ರನ್​ ಬಾರಿಸುವ ಮೂಲಕ ತಂಡದ ಮೊತ್ತವನ್ನು 200 ರ ಗಡಿ ದಾಟಿಸಲು ನೆರವಾದರು.

ಇದನ್ನೂ ಓದಿ: M S Dhoni : ಧೋನಿಯನ್ನು ರನ್​ಔಟ್ ಮಾಡಿದ ಜಿತೇಶ್​ ಶರ್ಮಾ ನಿಂದಿಸಿದ ಅಭಿಮಾನಿಗಳು!

ದೊಡ್ಡ ಗುರಿ ಬೆನ್ನಟ್ಟಲು ಅರಂಭಿಸಿದ ಎಸ್​ಆರ್​​ಎಚ್​ 1 ರನ್​ಗೆ 2 ವಿಕೆಟ್ ಕಳೆದುಕೊಂಡಿತು. ಜೋಸ್ ಬಟ್ಲರ್​ ಹಾಗೂ ನಾಯಕ ಸಂಜು ಸ್ಯಾಮ್ಸನ್​ ಶೂನ್ಯಕ್ಕೆ ಔಟಾಗಿದ್ದರು. ಆದರೆ, ಆರಂಭಿಕ ಬ್ಯಾಟರ್​ ಜೈಸ್ವಾಲ್ 67 ರನ್ ಬಾರಿಸಿ ವಿಕೆಟ್​ ಬೀಳದಂತೆ ನೋಡಿಕೊಂಡರು. ರಿಯಾನ್ ಪರಾಗ್​ 77 ರನ್ ಬಾರಿಸಿ ತಂಡಕ್ಕೆ ಗೆಲುವಿನ ಆಸೆ ಮೂಡಿಸಿದರು. ಆದರೆ, ಆ ಬಳಿಕ ಸತತವಾಗಿ ವಿಕೆಟ್ ಕಳೆದುಕೊಂಡು ಸೋಲೊಪ್ಪಿಕೊಂಡಿತು. ಭುವನೇಶ್ವರ್ ಕುಮಾರ್​ 3 ವಿಕೆಟ್​ ಪಡೆದು ಮಿಂಚಿದರು.

Continue Reading

ಸಿನಿಮಾ

Ragini Khanna: ಕ್ರೈಸ್ತ ಧರ್ಮಕ್ಕೆ ಮತಾಂತರ ಆಗಿದ್ದಕ್ಕೆ ಕ್ಷಮೆ ಕೇಳಿದ ನಟ ಗೋವಿಂದ ಸೋದರ ಸೊಸೆ!

Ragini Khanna: ನಟ ಗೋವಿಂದ ಅವರ ಸೋದರ ಸೊಸೆಯಾಗಿರುವ ರಾಗಿಣಿ ಖನ್ನಾ ಅವರು ಗುರುಗಾಂವ್‌, ಡಬಲ್‌ ದಿ ತ್ರಿಬಲ್‌, ಘೂಮಕೇತು, ಪೋಷಂ ಪಾ ಸೇರಿ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಇವರು ಇತ್ತೀಚೆಗೆ ಕ್ರೈಸ್ತ ಧರ್ಮ ಸ್ವೀಕರಿಸಿದ್ದಾರೆ ಎನ್ನಲಾಗಿತ್ತು. ಈಗ ಅವರು ಹಿಂದು ಧರ್ಮಕ್ಕೆ ಮರಳಿದ್ದು, ಕ್ರೈಸ್ತ ಧರ್ಮ ಸ್ವೀಕರಿಸಿದ್ದಕ್ಕಾಗಿ ಕ್ಷಮೆಯಾಚಿಸಿದ್ದಾರೆ.

VISTARANEWS.COM


on

Ragini Khanna
Koo

ಮುಂಬೈ: ಬಾಲಿವುಡ್‌ ನಟ ಗೋವಿಂದ (Actor Govinda) ಅವರ ಸೋದರ ಸೊಸೆ, ನಟಿ ರಾಗಿಣಿ ಖನ್ನಾ (Ragini Khanna) ಅವರು ಕ್ರೈಸ್ತ ಧರ್ಮಕ್ಕೆ (Christianity) ಮತಾಂತರ ಆಗಿರುವುದಕ್ಕೆ ಕ್ಷಮೆಯಾಚಿಸಿದ್ದಾರೆ. “ನಾನು ಹಿಂದು ಧರ್ಮ ಬಿಟ್ಟು ಕ್ರೈಸ್ತ ಧರ್ಮಕ್ಕೆ ಮತಾಂತರವಾಗಿರುವುದಕ್ಕೆ ವಿಷಾದವಿದೆ. ಈ ಕುರಿತು ನಾನು ಕ್ಷಮೆಯಾಚಿಸುತ್ತೇನೆ. ನಾನೀಗ ಹಿಂದು ಧರ್ಮಕ್ಕೆ ಮರಳಿದ್ದು, ನಾ ಖಟ್ಟರ್‌ ಹಿಂದು ಸನಾತನವಾದಿಯಾಗಿದ್ದೇನೆ. ನಾನೀಗ ನನ್ನ ಬೇರುಗಳಿಗೆ ಮರಳಿದ್ದೇನೆ ಎಂಬುದಾಗಿ ಅನಿಸುತ್ತಿದೆ” ಎಂದು ಅವರು ಹೇಳಿದ್ದಾರೆ ಎಂದು ವರದಿಯಾಗಿದೆ.

ಇದಕ್ಕೂ ಮೊದಲು ಚುಕುದಾರ್‌ಬಹದ್ದೂರ್‌ 2.0 ಎಂಬ ಇನ್‌ಸ್ಟಾಗ್ರಾಂ ಖಾತೆಯಲ್ಲಿ ರಾಗಿಣಿ ಖನ್ನಾ ಅವರು ಕ್ರೈಸ್ತ ಧರ್ಮ ಸ್ವೀಕರಿಸಿದ ಕುರಿತು ಪೋಸ್ಟ್‌ ಮಾಡಲಾಗಿತ್ತು. “ನಾನು ರಾಗಿಣಿ ಖನ್ನಾ. ನಾನೀಗ ಕ್ರೈಸ್ತ ಧರ್ಮವನ್ನು ಸ್ವೀಕರಿಸಿದ್ದೇನೆ. ಕ್ರೈಸ್ತನು ಈಗ ನನಗೆ ದೇವರಾಗಿದ್ದು, ಆತನ ಬೋಧನೆಗಳೊಂದಿಗೆ ನಾನು ನನ್ನ ಜೀವನದ ಮಾರ್ಗವನ್ನು ಕಂಡುಕೊಳ್ಳುತ್ತೇನೆ” ಎಂಬುದಾಗಿ ಪೋಸ್ಟ್‌ ಮಾಡಲಾಗಿತ್ತು.

“ನಾನು ಮನಸಾರೆ ಕ್ರೈಸ್ತ ಧರ್ಮವನ್ನು ಸ್ವೀಕರಿಸಿದ್ದೇನೆ. ಭಕ್ತಿಯ ಹಾದಿಯಲ್ಲಿ ನಾನು ನಂಬಿಕೆಯೊಂದಿಗೆ ಮುನ್ನಡೆಯುತ್ತೇನೆ. ಶಾಂತಿ ಹಾಗೂ ಪ್ರೀತಿಯನ್ನು ಹಂಚುತ್ತ ಮುಂದೆ ಸಾಗುತ್ತೇನೆ. ಪ್ರಾರ್ಥನೆಗಳ ಮೂಲಕ ನನ್ನ ಸುತ್ತಮುತ್ತಲಿನ ವಾತಾವರಣದಲ್ಲಿ ಸಕಾರಾತ್ಮಕಗೆ ಮೂಡುವಂತೆ ಮಾಡುತ್ತೇನೆ” ಎಂದು ಮಾಡಿರುವ ಪೋಸ್ಟ್‌ ವೈರಲ್‌ ಆಗಿತ್ತು. ರಾಗಿಣಿ ಖನ್ನಾ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಜನ ಆಕ್ರೋಶ ವ್ಯಕ್ತಪಡಿಸಿದ್ದರು.

ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿ, ಪೋಸ್ಟ್‌ ವೈರಲ್‌ ಆದ ಬಳಿಕ ರಾಗಿಣಿ ಖನ್ನಾ ಅವರು ಕ್ಷಮೆಯಾಚಿಸಿದ್ದಾರೆ. ನಾನೀಗ ಖಟ್ಟರ್‌ ಹಿಂದು ಎಂದು ಅವರು ಹೇಳಿದ್ದಾರೆ. ಈಗ ಜನರು ರಾಗಿಣಿ ಖನ್ನಾ ಅವರ ನಿರ್ಧಾರವನ್ನು ಬೆಂಬಲಿಸಿದ್ದಾರೆ. ನಟ ಗೋವಿಂದ ಅವರ ಸೋದರ ಸೊಸೆಯಾಗಿರುವ ರಾಗಿಣಿ ಖನ್ನಾ ಅವರು ಗುರುಗಾಂವ್‌, ಡಬಲ್‌ ದಿ ತ್ರಿಬಲ್‌, ಘೂಮಕೇತು, ಪೋಷಂ ಪಾ ಸೇರಿ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ: Swara Bhasker: ಕಂಗನಾ- ಸ್ವರಾ ಭಾಸ್ಕರ್ ನಡುವಿನ ದೊಡ್ಡ ವ್ಯತ್ಯಾಸವೇನು? ನಟಿಯ ಬಾಯಲ್ಲೇ ಕೇಳಿ!

Continue Reading
Advertisement
Lok Sabha Election
ಪ್ರಮುಖ ಸುದ್ದಿ1 hour ago

Lok Sabha Election : ಕುರುಬರಿಗೆ ಟಿಕೆಟ್ ಕೊಡದ ಮೋದಿ ಕಂಬಳಿ ತೊಟ್ಟು ಡ್ರಾಮಾ ಆಡ್ತಾರೆ: ಸಿದ್ದರಾಮಯ್ಯ

Tsering Namgyal
ದೇಶ1 hour ago

Tsering Namgyal: ಲಡಾಕ್‌ನಲ್ಲಿ ತ್ಸೆರಿಂಗ್‌ ನಾಮ್‌ಗ್ಯಾಲ್‌ಗೆ ಟಿಕೆಟ್‌ ಕೊಟ್ಟ ಕಾಂಗ್ರೆಸ್; ಭಾರಿ ಹೈಡ್ರಾಮಾ

IPL 2024
ಪ್ರಮುಖ ಸುದ್ದಿ1 hour ago

IPL 2024 : ರಾಜಸ್ಥಾನ್ ವಿರುದ್ಧ ಎಸ್​​ಆರ್​ಎಚ್​​ ತಂಡಕ್ಕೆ ರೋಚಕ 1 ರನ್ ಗೆಲುವು

Ragini Khanna
ಸಿನಿಮಾ2 hours ago

Ragini Khanna: ಕ್ರೈಸ್ತ ಧರ್ಮಕ್ಕೆ ಮತಾಂತರ ಆಗಿದ್ದಕ್ಕೆ ಕ್ಷಮೆ ಕೇಳಿದ ನಟ ಗೋವಿಂದ ಸೋದರ ಸೊಸೆ!

Rain News
ಪ್ರಮುಖ ಸುದ್ದಿ2 hours ago

Rain News : ಬೆಂಗಳೂರಿನಲ್ಲಿ ಸಂಜೆ ಸುರಿದ ಸಣ್ಣ ಮಳೆಗೆ ಕೆಲವೆಡೆ ಅನಾಹುತ

Election campaign for Congress candidate Samyukta Patil in Prajadhwani convention at Bagalkot
ರಾಜಕೀಯ2 hours ago

Lok Sabha Election 2024: ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತ ಪಾಟೀಲ್‌ ಪರ ಭರ್ಜರಿ ಪ್ರಚಾರ

Lok Sabha Election
ದೇಶ2 hours ago

Lok Sabha Election : ಮೋದಿ ಗ್ಯಾರಂಟಿ ಪಡೆಯಲು ಜೋಶಿ ಗೆಲ್ಲಿಸಿ; ಏಕನಾಥ ಶಿಂಧೆ

Amit Shah
ದೇಶ2 hours ago

Amit Shah: ಮತದಾನ ಕುಸಿತದಿಂದ ಬಿಜೆಪಿಗೆ ನಷ್ಟ? ಅಮಿತ್ ಶಾ ಹೇಳೋದೇನು?

K. Annamalai
ಪ್ರಮುಖ ಸುದ್ದಿ3 hours ago

K. Annamalai : ಪ್ರಚಾರ ಸಭೆಯಲ್ಲಿ ಅಣ್ಣಾಮಲೈ ಹೊಗಳಿದಾಗ ಕಣ್ಣೀರು ಹಾಕಿದ ವಿಜಯಪುರ ಅಭ್ಯರ್ಥಿ ಜಿಗಜಿಣಗಿ

Mumbai
ದೇಶ3 hours ago

ಆಸ್ಪತ್ರೆಯಲ್ಲಿ ಟಾರ್ಚ್‌ ಬಳಸಿ ಹೆರಿಗೆ; ತಾಯಿ, ಮಗು ಸಾವು; 3 ಈಡಿಯಟ್ಸ್‌ ಸಿನಿಮಾ ದೃಶ್ಯ ಇಲ್ಲಿ ದುರಂತ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case Another victim gives statement before judge Will Revanna get anticipatory bail
ಕ್ರೈಂ6 hours ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ20 hours ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ3 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20244 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20244 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20244 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20244 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20245 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20245 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

ಟ್ರೆಂಡಿಂಗ್‌