ಮಂಡ್ಯ ಪೊಲೀಸರನ್ನು ಪೂರ್ತಿ ಹೈರಾಣಾಗಿಸಿದ ಅರ್ಧ ದೇಹ: ಊರೂರು ಅಲೆಯುತ್ತಿರುವ ಖಾಕಿ ಪಡೆ - Vistara News

ಕ್ರೈಂ

ಮಂಡ್ಯ ಪೊಲೀಸರನ್ನು ಪೂರ್ತಿ ಹೈರಾಣಾಗಿಸಿದ ಅರ್ಧ ದೇಹ: ಊರೂರು ಅಲೆಯುತ್ತಿರುವ ಖಾಕಿ ಪಡೆ

ದೇಹದ ಸುಳಿವು ಸಿಗದಂತೆ ದೇಹವನ್ನು ಅರ್ಧ ತುಂಡರಿಸಿ ದುಷ್ಕರ್ಮಿಗಳು ಎಸೆದಿದ್ದರು ಎನ್ನಲಾಗಿದೆ. ಕಾಲುಗಳು ಕಟ್ಟಿದ‌ ಸ್ಥಿತಿಯಲ್ಲಿ ಎರಡೂ ಮೃತದೇಹದ ಕೆಳಭಾಗ ಮಾತ್ರ ಪತ್ತೆಯಾಗಿತ್ತು. ಮಾಹಿತಿಗಾಗಿ ಮಂಡ್ಯ ಪೊಲೀಸ್‌ ತಡಕಾಡುತ್ತಿದ್ದಾರೆ.

VISTARANEWS.COM


on

ಮಹಿಳೆಯರ ಸುಳಿವು
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಂಡ್ಯ: ಅದೊಂದು ಮೃತದೇಹ ಮಂಡ್ಯ ಪೊಲೀಸ್‌ ನಿದ್ದೆಗೆಡಿಸಿದೆ. ದೊಡ್ಡ ದೊಡ್ಡ ಕೊಲೆ, ಅಪರಾಧ ಪ್ರಕರಣಗಳನ್ನು ಭೇದಿಸಿದ ಮಂಡ್ಯ ಪೊಲೀಸರ ಕಾರ್ಯಕ್ಷಮತೆಗೇ ಸವಾಲೊಡ್ಡುವಂತೆ ಕಳೆದ ೧೫ ದಿನದ ಹಿಂದೆ ಪತ್ತೆಯಾದ ಎರಡು ಅರ್ಧ ದೇಹಗಳ ಕುರಿತು ಯಾವುದೇ ಸುಳಿವು ಸಿಗದೆ ಪೊಲೀಸರು ಒದ್ದಾಡುತ್ತಿದ್ದಾರೆ. ಕೊನೆಗೆ, ಈ ದೇಹಗಳ ಕುರಿತು ಸುಳಿವು ನೀಡಿದವರಿಗೆ ₹೧ ಲಕ್ಷ ಬಹುಮಾನ ಕೊಡುತ್ತೇವೆ ಎಂದು ಘೋಷಿಸುವ ಅನಿವಾರ್ಯತೆಗೆ ಸಿಲುಕಿದ್ದಾರೆ.

ಜೂನ್‌ ೭ರಂದು ಪಾಂಡವಪುರ ತಾಲೂಕು ಬೇಬಿ ಗ್ರಾಮದ ನಾಲೆಯಲ್ಲಿ ಒಂದು ಶವ ಪತ್ತೆಯಾದರೆ, ಮತ್ತೊಂದು ಶವ ಶ್ರೀರಂಗಪಟ್ಟಣ ತಾಲೂಕಿನ ಅರಕೆರೆ ಗ್ರಾಮದ ಭತ್ತದ ಗದ್ದೆಯಲ್ಲಿ ಪತ್ತೆಯಾಗಿತ್ತು. ಎರಡೂ ದೇಹ ಮಹಿಳೆಯರದ್ದು. ಪಾಂಡವಪುರದಲ್ಲಿ ದೊರೆದ ಶವ ಸುಮಾರು ೩೦-೩೨ ವರ್ಷ, ಅರಕೆರೆಯಲ್ಲಿ ಪತ್ತೆಯಾದ ಶವ ಸುಮಾರು ೪೦-೪೫ ವರ್ಷದ ಮಹಿಳೆಯದ್ದು ಎನ್ನುವುದನ್ನು ಬಿಟ್ಟರೆ ಮತ್ತಾವುದೇ ಮಾಹಿತಿ ಇರಲಿಲ್ಲ.

ಇದನ್ನೂ ಓದಿ | Rain In Bangalore | ಮಿಥುನ್‌ ಮೃತದೇಹ ಹುಡುಕಲು ಬೋಟ್‌ ಬಳಕೆ, ಹೇಗೆ ನಡೀತಿದೆ ಕಾರ್ಯಾಚರಣೆ?

ಮಂಡ್ಯ ಪೊಲೀಸರು ಪ್ರಕಟಿಸಿರುವ ಪೋಸ್ಟರ್‌

ದೇಹದ ಸುಳಿವು ಸಿಗದಂತೆ ದೇಹವನ್ನು ಸೊಂಟದ ಭಾಗಕ್ಕೆ ಸರಿಯಾಗಿ ತುಂಡರಿಸಿ ದುಷ್ಕರ್ಮಿಗಳು ಎಸೆದಿದ್ದರು. ಎರಡೂ ದೇಹದ ಕಾಳುಗಳನ್ನು ಕಟ್ಟಲಾಗಿತ್ತು. ಈ ಸ್ಥಿತಿಯಲ್ಲಿ ಎರಡೂ ಮೃತದೇಹದ ಕೆಳಭಾಗ ಮಾತ್ರ ಪತ್ತೆಯಾಗಿತ್ತು. ಆದರೆ ಇಲ್ಲಿವರೆಗೆ ದೇಹದ ಮೇಲ್ಭಾಗಕ್ಕಾಗಿ ಶೋಧ ಕಾರ್ಯ ಮುಂದುವರಿದೇ ಇದೆ.

ಎರಡೂ ಪ್ರಕರಣಗಳಲ್ಲಿ ಸಾಮ್ಯತೆ ಇರುವುದರಿಂದ, ಸಾಕ್ಷ್ಯನಾಶದ ಉದ್ದೇಶಕ್ಕಾಗಿ ಹೀಗೆ ಮಾಡಿರುವ ಅನುಮಾನ ವ್ಯಕ್ತವಾಗಿದೆ. 15 ದಿನ ಕಳೆದರೂ ಮೃತದೇಹದ ಪತ್ತೆ ಸಿಗದೆ ಮಂಡ್ಯ ಪೊಲೀಸ್‌ ಹೈರಾಣಾಗಿದ್ದಾರೆ. ಈ ಪ್ರಕರಣಗಳು ಪೊಲೀಸರಿಗೆ ತಲೆನೋವಾಗಿದ್ದು, ಆದಷ್ಟು ಬೇಗನೆ ಪ್ರಕರಣ ಬೇಧಿಸುವಂತೆ ಮೇಲಧಿಕಾರಿಗಳಿಂದಲೂ ಒತ್ತಡ ಇದೆ. ಈ ಕಾರಣಕ್ಕೆ ಪೊಲೀಸರು ಮಾಹಿತಿಗಾಗಿ ಊರೂರು ಸುತ್ತುತ್ತಿದ್ದಾರೆ. ಮೃತದೇಹಗಳ ಮಾಹಿತಿ ನೀಡುವಂತೆ ಸಾರ್ವಜನಿಕರನ್ನು ಕೇಳುತ್ತಿದ್ದಾರೆ. ಗ್ರಾಮಗಳಲ್ಲಿ ಪೋಸ್ಟರ್‌ ಅಂಟಿಸಿ, ಮಾಹಿತಿ ನೀಡಿದವರಿಗೆ ₹೧ ಲಕ್ಷ ಬಹುಮಾನ ಘೋಷಿಸಿ, ಎಲ್ಲೆಡೆ ಕರಪತ್ರ ಹಂಚುತ್ತಿದ್ದಾರೆ.

ಇದನ್ನೂ ಓದಿ | ತುಮಕೂರಿನ ದಲಿತ ಮುಖಂಡನ ಕೊಲೆ; ಗುಬ್ಬಿಯಲ್ಲಿ ಟೀ ಕುಡಿಯುತ್ತಿದ್ದಾಗ ಕೊಚ್ಚಿ ಕೊಂದರು!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Self Harming: ಟಿಸಿ ಕೊಟ್ಟಿಲ್ಲವೆಂದು ಬೇಸರಗೊಂಡು ವಿದ್ಯಾರ್ಥಿ ಆತ್ಮಹತ್ಯೆ

Self Harming: ಉಡುಪಿ ಜಿಲ್ಲೆಯ ಬೈಂದೂರು ಸರ್ಕಾರಿ ಪ್ರೌಢಶಾಲೆಯ ಹೈಸ್ಕೂಲ್ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಟಿಸಿ ಕೊಡದೆ ಮುಖ್ಯೋಪಾಧ್ಯಾಯ ಬೈದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

VISTARANEWS.COM


on

Self Harming
Koo

ಉಡುಪಿ: ಟಿಸಿ ಕೊಟ್ಟಿಲ್ಲವೆಂದು ಬೇಸರಗೊಂಡು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಬೈಂದೂರಿನಲ್ಲಿ ನಡೆದಿದೆ. ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣನಾಗಿದ್ದ ಬೈಂದೂರು ಸರ್ಕಾರಿ ಪ್ರೌಢಶಾಲೆಯ ಹೈಸ್ಕೂಲ್ ವಿದ್ಯಾರ್ಥಿ ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾನೆ.

ನಿತಿನ್ ಆಚಾರಿ (16) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಬೈಂದೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣನಾಗಿದ್ದ ನಿತಿನ್‌ ಆಚಾರಿ, ಪಿಯುಸಿ ಸೇರ್ಪಡೆಯಾಗಲು ಟಿಸಿ ಪಡೆಯಲು ಶಾಲೆಗೆ ಹೋಗಿದ್ದ. ಈ ವೇಳೆ ಶಾಲೆಯ ಮುಖ್ಯೋಪಾಧ್ಯಾಯ ಸುರೇಶ್ ಭಟ್ ಬೈದಿದ್ದರಿಂದ ಬೇಸರಗೊಂಡು ಡೆತ್ ನೋಟ್ ಬರೆದು ಬಾಲಕ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಹಾಜಬ್ಬರ ಶಾಲೆ ಕಾಂಪೌಂಡ್ ಗೋಡೆ ಕುಸಿದು ವಿದ್ಯಾರ್ಥಿನಿ ದಾರುಣ ಸಾವು

Compound Wall Collapse

ಮಂಗಳೂರು: ಶಾಲೆಯ ಕಾಂಪೌಂಡ್ ಗೋಡೆ ಕುಸಿದು ವಿದ್ಯಾರ್ಥಿನಿ ದಾರುಣವಾಗಿ ಮೃತಪಟ್ಟಿರುವ ಘಟನೆ (Compound Wall Collapse) ದಕ್ಷಿಣ ಕನ್ನಡ ಜಿಲ್ಲೆಯ ‌ಉಳ್ಳಾಲ ತಾಲೂಕಿನ ನ್ಯೂಪಡ್ಪುನಲ್ಲಿ ನಡೆದಿದೆ. ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ (Harekala Hajabba) ಅವರು ಕಟ್ಟಿದ ನ್ಯೂಪಡ್ಪು ಶಾಲೆಯ ಕಾಂಪೌಂಡ್ ಗೋಡೆ ಕುಸಿದು ದುರ್ಘಟನೆ ಸಂಭವಿಸಿದೆ.

ನ್ಯೂಪಡ್ಪು ನಿವಾಸಿ ಸಿದ್ದೀಖ್ ಜಮೀಲಾ ಪುತ್ರಿ ಶಾಜಿಯಾ (7) ಮೃತ ಬಾಲಕಿ. ಹಾಜಬ್ಬರ ಶಾಲೆಯಲ್ಲಿ ವಿದ್ಯಾರ್ಥಿನಿ ಶಾಜಿಯಾ 3ನೇ ತರಗತಿ ಓದುತ್ತಿದ್ದಳು. ಶಾಲೆಯಲ್ಲಿ ನಡೆಯುತ್ತಿದ್ದ ಎನ್‌ಎಸ್‌ಎಸ್ ಶಿಬಿರದಲ್ಲಿ ಭಾಗಿಯಾಗಿದ್ದ ವಿದ್ಯಾರ್ಥಿನಿ ಗೇಟಿನ ಬಳಿ ಆಟವಾಡುತ್ತಿದ್ದಾಗ ಕಾಂಪೌಡ್ ಗೋಡೆ ಕುಸಿದಿದ್ದರಿಂದ ದುರ್ಘಟನೆ ಸಂಭವಿಸಿದೆ. ಉಳ್ಳಾಲ ತಾಲೂಕಿನಲ್ಲಿ ಮೊದಲ ಮಳೆಗೆ ಅನಾಹುತ ಸಂಭವಿಸಿದೆ.

ಇದನ್ನೂ ಓದಿ | Physical Abuse & Murder: ಬಾಲಕಿ ಮೇಲೆ ಅತ್ಯಾಚಾರ, ಸಜೀವ ದಹನ ಕೇಸ್‌; ಹಂತಕರಿಗೆ ಮರಣದಂಡನೆ

ಕಳ್ಳತನವೂ ಈಗ ಪ್ರೊಫೆಷನಲ್‌; ಕದಿಯೋಕೆ ತಿಂಗಳ ಸ್ಯಾಲರಿ ಕೊಡುತ್ತಿದ್ದ ಪ್ರಳಯಾಂತಕ!

theft case

ತುಮಕೂರು: ಕಳ್ಳತನವೂ ಈಗ ಪ್ರೊಫೆಷನಲ್‌ ಆಗಿಬಿಟ್ಟಿದೆ. ಭೂಪನೊಬ್ಬ ಬೋರ್‌ವೇಲ್‌ ಕೇಬಲ್‌ಗಳನ್ನು ಕದಿಯೋಕೆ ಅಂತಲೇ ತಿಂಗಳ ಸಂಬಳಕ್ಕೆ ಕಳ್ಳನನ್ನು (Theft Case) ನೇಮಿಸಿಕೊಂಡಿರುವ ಅಪರೂಪದ ಪ್ರಕರಣವೊಂದು ತುಮಕೂರಿನಲ್ಲಿ ಬೆಳಕಿಗೆ ಬಂದಿದೆ.

ವೆಂಕಟೇಶ್‌ ಎಂಬಾತ ಕಳ್ಳತನಕ್ಕಾಗಿಯೇ ಬೆಂಗಳೂರು ಮೂಲದ ರಾಘವೇಂದ್ರ ಎಂಬಾತನನ್ನು ಕೆಲಸಕ್ಕೆ ಇಟ್ಟುಕೊಂಡಿದ್ದ. ವೆಂಕಟೇಶ್‌ ಕಳ್ಳತನ ಮಾಡುವ ರಾಘವೇಂದ್ರನಿಗೆ ತಿಂಗಳ ಲೆಕ್ಕದಲ್ಲಿ ಸಂಬಳ ಕೊಡುತ್ತಿದ್ದ. ರಾಘವೇಂದ್ರ ತಿಂಗಳಿಗೆ 20 ಸಾವಿರ ರೂ. ಸಂಬಳ ಪಡೆಯುತ್ತಿದ್ದಾಗಿ ಪೊಲೀಸರ ತನಿಖೆ ವೇಳೆ ಬಾಯಿ ಬಿಟ್ಟಿದ್ದಾನೆ.

ಈ ಖದೀಮರು ಗ್ರಾಮೀಣ ಭಾಗದಲ್ಲಿರುವ ಬೋರ್‌ವೇಲ್‌ ಕೇಬಲ್ ಕಳ್ಳತನ ಮಾಡುತ್ತಿದ್ದರು. ಕೊರಟಗೆರೆ ತಾಲೂಕಿನಲ್ಲಿ ಬೋರ್‌ವೇಲ್‌ ಕೇಬಲ್‌ಗಳ ಕಳುವಿನಿಂದ ರೈತರು ಹೈರಾಣಾಗಿದ್ದರು. ಕೊರಟಗೆರೆಯಲ್ಲಿ ಒಂದು ತಿಂಗಳಿಂದ ನಿರಂತರವಾಗಿ ಕಳ್ಳರು ಬೋರ್‌ವೇಲ್‌ ಕೇಬಲ್ ಕಳ್ಳತನ ಮಾಡುತ್ತಿದ್ದರು. ವಡ್ಡಗೆರೆ ಬಳಿ ಖತರ್ನಾಕ್ ಕಳ್ಳರ ಕೈಚಳಕ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.

Theft Case The thief was paid a salary for theft

ಇದನ್ನೂ ಓದಿ: Road Accident : ಬಸ್‌ ಗುದ್ದಿದ ರಭಸಕ್ಕೆ ಕಾರು ಛಿದ್ರ ಛಿದ್ರ; ಚಾಲಕ ಸ್ಪಾಟ್‌ ಡೆತ್‌, ನಾಲ್ವರಿಗೆ ಗಾಯ

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆಗಿಳಿದ ಪೊಲೀಸರು ಕೃತ್ಯಕ್ಕೆ ಬಳಸಿದ್ದ ಕಾರಿನ ಚಲನವಲನ ಗಮನಿಸಿ ಕಳ್ಳರನ್ನು ಪತ್ತೆ ಹಚ್ಚಿದ್ದರು. ಕೊರಟಗೆರೆ ಪೊಲೀಸರು ಖತರ್ನಾಕ್ ಕಳ್ಳನ ಸಹಿತ ಮೂವರ ಹೆಡೆಮುರಿ ಕಟ್ಟಿದ್ದಾರೆ. ಐನಾತಿ ಕಳ್ಳರು ಕದ್ದ ಮಾಲನ್ನು ವಿನೇಶ್ ಪಟೇಲ್ ಎಂಬಾತನಿಗೆ ಮಾರಾಟ ಮಾಡುತ್ತಿದ್ದರು.

ಸದ್ಯ ಮೂವರು ಆರೋಪಿಗಳಾದ ವೆಂಕಟೇಶ್, ರಾಘವೇಂದ್ರ ಹಾಗೂ ವಿನೇಶ್‌ನನ್ನು ಕೊರಟಗೆರೆ ಪೊಲೀಸರು ಬೆಂಗಳೂರಿನ ಕಾಮಾಕ್ಷಿಪಾಳ್ಳದಲ್ಲಿ ಬಂಧಿಸಿದ್ದಾರೆ. ಇನ್‌ಸ್ಪೆಕ್ಟರ್‌ ಅನಿಲ್‌ ಹಾಗೂ ತಂಡ ಕಳ್ಳರನ್ನು ಕೋರ್ಟ್‌ಗೆ ಹಾಜರು ಪಡಿಸಿದ್ದಾರೆ. ಕಳ್ಳರ ಬಂಧನದಿಂದ ಕೊರಟಗೆರೆ ರೈತರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Compound Wall Collapse: ಹಾಜಬ್ಬರ ಶಾಲೆ ಕಾಂಪೌಂಡ್ ಗೋಡೆ ಕುಸಿದು ವಿದ್ಯಾರ್ಥಿನಿ ದಾರುಣ ಸಾವು

Compound Wall Collapse: ದಕ್ಷಿಣ ಕನ್ನಡ ಜಿಲ್ಲೆಯ ‌ಉಳ್ಳಾಲ ತಾಲೂಕಿನ ನ್ಯೂಪಡ್ಪುನಲ್ಲಿ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರು ಕಟ್ಟಿದ ಶಾಲೆಯ ಕಾಂಪೌಂಡ್ ಗೋಡೆ ಕುಸಿದು ದುರ್ಘಟನೆ ನಡೆದಿದೆ.

VISTARANEWS.COM


on

Compound Wall Collapse
Koo

ಮಂಗಳೂರು: ಶಾಲೆಯ ಕಾಂಪೌಂಡ್ ಗೋಡೆ ಕುಸಿದು ವಿದ್ಯಾರ್ಥಿನಿ ದಾರುಣವಾಗಿ ಮೃತಪಟ್ಟಿರುವ ಘಟನೆ (Compound Wall Collapse) ದಕ್ಷಿಣ ಕನ್ನಡ ಜಿಲ್ಲೆಯ ‌ಉಳ್ಳಾಲ ತಾಲೂಕಿನ ನ್ಯೂಪಡ್ಪುನಲ್ಲಿ ನಡೆದಿದೆ. ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ (Harekala Hajabba) ಅವರು ಕಟ್ಟಿದ ನ್ಯೂಪಡ್ಪು ಶಾಲೆಯ ಕಾಂಪೌಂಡ್ ಗೋಡೆ ಕುಸಿದು ದುರ್ಘಟನೆ ಸಂಭವಿಸಿದೆ.

ನ್ಯೂಪಡ್ಪು ನಿವಾಸಿ ಸಿದ್ದೀಖ್ ಜಮೀಲಾ ಪುತ್ರಿ ಶಾಜಿಯಾ (7) ಮೃತ ಬಾಲಕಿ. ಹಾಜಬ್ಬರ ಶಾಲೆಯಲ್ಲಿ ವಿದ್ಯಾರ್ಥಿನಿ ಶಾಜಿಯಾ 3ನೇ ತರಗತಿ ಓದುತ್ತಿದ್ದಳು. ಶಾಲೆಯಲ್ಲಿ ನಡೆಯುತ್ತಿದ್ದ ಎನ್‌ಎಸ್‌ಎಸ್ ಶಿಬಿರದಲ್ಲಿ ಭಾಗಿಯಾಗಿದ್ದ ವಿದ್ಯಾರ್ಥಿನಿ ಗೇಟಿನ ಬಳಿ ಆಟವಾಡುತ್ತಿದ್ದಾಗ ಕಾಂಪೌಡ್ ಗೋಡೆ ಕುಸಿದಿದ್ದರಿಂದ ದುರ್ಘಟನೆ ಸಂಭವಿಸಿದೆ. ಉಳ್ಳಾಲ ತಾಲೂಕಿನಲ್ಲಿ ಮೊದಲ ಮಳೆಗೆ ಅನಾಹುತ ಸಂಭವಿಸಿದೆ.

ಇದನ್ನೂ ಓದಿ | Physical Abuse & Murder: ಬಾಲಕಿ ಮೇಲೆ ಅತ್ಯಾಚಾರ, ಸಜೀವ ದಹನ ಕೇಸ್‌; ಹಂತಕರಿಗೆ ಮರಣದಂಡನೆ

ಕೂಡ್ಲಿಗಿಯಲ್ಲಿ ಹಿಟ್ ಆ್ಯಂಡ್ ರನ್; ಬೈಕ್‌ಗೆ ಲಾರಿ ಡಿಕ್ಕಿಯಾಗಿ ಯುವತಿ ಸಾವು

Hit And Run Case

ವಿಜಯನಗರ: ಬೈಕ್‌ಗೆ ಲಾರಿ ಡಿಕ್ಕಿಯಾಗಿ ಯುವತಿ ಸ್ಥಳದಲ್ಲೇ ಮೃತಪಟ್ಟು, ಯುವಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಶಿವಪುರದ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ. ಅಪಘಾತದ (Hit And Run Case) ಬಳಿಕ ಲಾರಿ ಸಮೇತ ಚಾಲಕ ಪರಾರಿಯಾಗಿದ್ದು, ಆತನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಮೇಘನಾ (18) ಮೃತ ಯುವತಿ. ಹೊಸಪೇಟೆಯಿಂದ ಕೂಡ್ಲಿಗಿ ಕಡೆ ಹೊರಟಿದ್ದ ಬೈಕ್ ಮೇಲೆ ಯುವಕ, ಯುವತಿ ಹೋಗುತ್ತಿದ್ದಾಗ ಲಾರಿ ಡಿಕ್ಕಿಯಾಗಿದೆ. ಈ ವೇಳೆ ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದು, ಯುವಕ ಕೈಲಾಶ್‌ ಎಂಬಾತನಿಗೆ ಗಂಭೀರ ಗಾಯಗಳಾಗಿವೆ. ಆತನನ್ನು ಹೆಚ್ಚಿನ ಚಿಕಿತ್ಸೆಗೆ ಬಳ್ಳಾರಿಯ ವಿಮ್ಸ್‌ಗೆ ರವಾನೆ ಮಾಡಲಾಗಿದೆ. ಕೂಡ್ಲಿಗಿ ಡಿವೈಎಸ್ಪಿ ಮಲ್ಲೇಶಪ್ಪ, ಸಿಪಿಐ ವಿನಾಯಕ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಹಿಟ್ ಆ್ಯಂಡ್ ರನ್ ಮಾಡಿದ ಲಾರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಇದನ್ನೂ ಓದಿ | Baby Death : ಮಲತಾಯಿಯ ಕ್ರೌರ್ಯಕ್ಕೆ ಬಲಿಯಾಯ್ತಾ 3 ವರ್ಷದ ಕಂದಮ್ಮ?

Continue Reading

ಕರ್ನಾಟಕ

Hit And Run Case: ಕೂಡ್ಲಿಗಿಯಲ್ಲಿ ಹಿಟ್ ಆ್ಯಂಡ್ ರನ್; ಬೈಕ್‌ಗೆ ಲಾರಿ ಡಿಕ್ಕಿಯಾಗಿ ಯುವತಿ ಸಾವು

Hit And Run Case: ಹೊಸಪೇಟೆಯಿಂದ ಕೂಡ್ಲಿಗಿ ಕಡೆ ಬೈಕ್‌ ಮೇಲೆ ಯುವಕ, ಯುವತಿ ಹೋಗುತ್ತಿದ್ದಾಗ ಲಾರಿ ಡಿಕ್ಕಿಯಾಗಿ ಘಟನೆ ಸಂಭವಿಸಿದೆ. ಅಪಘಾತದಲ್ಲಿ ಯುವತಿ ಸ್ಥಳದಲ್ಲೇ ಮೃತಪಟ್ಟು, ಯುವಕನಿಗೆ ಗಂಭೀರ ಗಾಯಗಳಾಗಿವೆ.

VISTARANEWS.COM


on

Hit And Run Case
Koo

ವಿಜಯನಗರ: ಬೈಕ್‌ಗೆ ಲಾರಿ ಡಿಕ್ಕಿಯಾಗಿ ಯುವತಿ ಸ್ಥಳದಲ್ಲೇ ಮೃತಪಟ್ಟು, ಯುವಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಶಿವಪುರದ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ. ಅಪಘಾತದ (Hit And Run Case) ಬಳಿಕ ಲಾರಿ ಸಮೇತ ಚಾಲಕ ಪರಾರಿಯಾಗಿದ್ದು, ಆತನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಮೇಘನಾ (18) ಮೃತ ಯುವತಿ. ಹೊಸಪೇಟೆಯಿಂದ ಕೂಡ್ಲಿಗಿ ಕಡೆ ಹೊರಟಿದ್ದ ಬೈಕ್ ಮೇಲೆ ಯುವಕ, ಯುವತಿ ಹೋಗುತ್ತಿದ್ದಾಗ ಲಾರಿ ಡಿಕ್ಕಿಯಾಗಿದೆ. ಈ ವೇಳೆ ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದು, ಯುವಕ ಕೈಲಾಶ್‌ ಎಂಬಾತನಿಗೆ ಗಂಭೀರ ಗಾಯಗಳಾಗಿವೆ. ಆತನನ್ನು ಹೆಚ್ಚಿನ ಚಿಕಿತ್ಸೆಗೆ ಬಳ್ಳಾರಿಯ ವಿಮ್ಸ್‌ಗೆ ರವಾನೆ ಮಾಡಲಾಗಿದೆ. ಕೂಡ್ಲಿಗಿ ಡಿವೈಎಸ್ಪಿ ಮಲ್ಲೇಶಪ್ಪ, ಸಿಪಿಐ ವಿನಾಯಕ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಹಿಟ್ ಆ್ಯಂಡ್ ರನ್ ಮಾಡಿದ ಲಾರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಇದನ್ನೂ ಓದಿ | Baby Death : ಮಲತಾಯಿಯ ಕ್ರೌರ್ಯಕ್ಕೆ ಬಲಿಯಾಯ್ತಾ 3 ವರ್ಷದ ಕಂದಮ್ಮ?

ಬಸ್‌ ಗುದ್ದಿದ ರಭಸಕ್ಕೆ ಕಾರು ಛಿದ್ರ ಛಿದ್ರ; ಚಾಲಕ ಸ್ಪಾಟ್‌ ಡೆತ್‌, ನಾಲ್ವರಿಗೆ ಗಾಯ

Drowned in water.. road Accident

ಮಂಡ್ಯ: ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಕಾರಿನ ನಡುವೆ ಭೀಕರ ಅಪಘಾತ (Road Accident ) ಸಂಭವಿಸಿದ್ದು, ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿ ರಸ್ತೆಯ ಬೋರಾಪುರದಲ್ಲಿ ಅಪಘಾತ ನಡೆದಿದೆ.

ಮದ್ದೂರಿನಿಂದ ಮಳವಳ್ಳಿ ಕಡೆಗೆ ಸ್ವಿಫ್ಟ್ ಕಾರು ತೆರಳುತ್ತಿತ್ತು. ಕೆಎಸ್‌ಆರ್‌ಟಿಸಿ ಬಸ್‌ ಮಳವಳ್ಳಿಯಿಂದ ಮದ್ದೂರು ಕಡೆಗೆ ಬರುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ಛಿದ್ರಗೊಂಡಿದೆ. ಬಸ್‌ನ ಮುಂಭಾಗ ಜಖಂಗೊಂಡಿದೆ.

ಕಾರಿನಲ್ಲಿ ಐವರು ಪ್ರಯಾಣ ಮಾಡುತ್ತಿದ್ದರು. ಅಪಘಾತದಲ್ಲಿ ಸ್ಥಳದಲ್ಲೇ ಕಾರು ಚಾಲಕ ಮೃತಪಟ್ಟರೆ, ನಾಲ್ವರು ಗಾಯಗೊಂಡಿದ್ದಾರೆ. ಕಾರಿನಲ್ಲಿ ಸಿಲುಕಿದ್ದ ಗಾಯಾಳುಗಳನ್ನು ಸ್ಥಳೀಯರು ರಕ್ಷಿಸಿದ್ದು, ಮದ್ದೂರು ತಾಲೂಕು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಇನ್ನೂ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಹಾಗೂ ಚಾಲಕ, ನಿರ್ವಾಹಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಅಪಘಾತದಿಂದಾಗಿ ಬೋರಾಪುರ ರಸ್ತೆಯಲ್ಲಿ ಟ್ರಾಫಿಕ್‌ ಜಾಮ್‌ ಉಂಟಾಗಿತ್ತು.

ಇದನ್ನೂ ಓದಿ: Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಮದ್ದೂರು ಪಟ್ಟಣ ಠಾಣೆ ಪೊಲೀಸರು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದರು. ಛಿದ್ರಗೊಂಡಿದ್ದ ಕಾರನ್ನು ತೆರವು ಮಾಡಿದ್ದರು. ಮದ್ದೂರು ಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

Continue Reading

ಕ್ರೈಂ

HD Revanna: ರೇವಣ್ಣಗೆ ಜಾಮೀನು ಸಿಕ್ಕರೂ ಸಿಗದ ರಿಲೀಫ್‌; ಎಸ್‌ಐಟಿಯಿಂದ ಹೈಕೋರ್ಟ್‌ ಮೊರೆ

HD Revanna: ಇವತ್ತು ನಮಗೆ ನ್ಯಾಯಾಲಯದಲ್ಲಿ ಜಯ ಸಿಕ್ಕಿದೆ. ಐದು ಲಕ್ಷ ರೂಪಾಯಿಯ ಬಾಂಡ್ ಮೇಲೆ ರೇವಣ್ಣಗೆ ಜಾಮೀನು ಸಿಕ್ಕಿದೆ. ಕೆ.ಆರ್. ನಗರ ಕೇಸ್‌ನಲ್ಲಿ ರೇವಣ್ಣ ಅವರಿಗೆ ಸಿಕ್ಕಿದ ಜಾಮೀನು ಆದೇಶವನ್ನು ಪ್ರಶ್ನಿಸಿ ಎಸ್‌ಐಟಿ ಹೈಕೋರ್ಟ್ ಮೊರೆ ಹೋಗಿರುವುದು ಸರ್ಕಾರದ ಹುನ್ನಾರವಾಗಿದೆ. ಇದರಲ್ಲಿ ರೇವಣ್ಣ ಅವರನ್ನು ಸಿಲುಕಿಸುವ ಪ್ರಯತ್ನ ನಡೆದಿದೆ. ಅವರ ಕಾನೂನು ಹೋರಾಟಕ್ಕೆ ನಾವು ಕೂಡ ಸಮರ್ಥವಾಗಿ ಹೈಕೋರ್ಟ್‌ನಲ್ಲಿ ಹೋರಾಟ ಮಾಡುತ್ತೇವೆ ಎಂದು ಜೆಡಿಎಸ್‌ ಮುಖಂಡ ಎ.ಪಿ. ರಂಗನಾಥ್ ಹೇಳಿದ್ದಾರೆ.

VISTARANEWS.COM


on

Holenarasipura sexual assault case SIT moves HC against HD Revanna bail order
Koo

ಬೆಂಗಳೂರು: ಹೊಳೆನರಸೀಪುರ (Holenarasipura) ಠಾಣೆಯಲ್ಲಿ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ (physical abuse) ಪ್ರಕರಣದಲ್ಲೂ ಮಾಜಿ ಸಚಿವ ಎಚ್‌ಡಿ ರೇವಣ್ಣ (HD Revanna case) ಅವರಿಗೆ ಜಾಮೀನು (Bail) ಮಂಜೂರಾಗಿದೆ. ಇನ್ನೊಂದು ಪ್ರಕರಣದಲ್ಲಿ ಈಗಾಗಲೇ ಜಾಮೀನು ದೊರೆತಿರುವುದರಿಂದ ರೇವಣ್ಣಗೆ ಬಿಗ್‌ ರಿಲೀಫ್‌ ದೊರೆತಂತಾಗಿದೆ ಎಂದು ಅಂದುಕೊಳ್ಳುತ್ತಿರುವಂತೆ ಅವರಿಗೆ ಎಸ್‌ಐಟಿ ಶಾಕ್‌ ನೀಡಿದೆ. ಜಾಮೀನು ಅರ್ಜಿಯನ್ನು ಪ್ರಶ್ನೆ ಮಾಡಿ ಹೈಕೋರ್ಟ್‌ ಮೊರೆ ಹೋಗಿದೆ.

ಜನಪ್ರತಿನಿಧಿಗಳ ಕೋರ್ಟ್ ನೀಡಿರುವ ಜಾಮೀನು ಪ್ರಶ್ನಿಸಿ ಎಸ್ಐಟಿ ಹೈಕೋರ್ಟ್ ಮೆಟ್ಟಿಲೇರಿದ್ದು, ಈ ಆದೇಶವನ್ನು ಪ್ರಶ್ನೆ ಮಾಡಲಿದೆ.

ಈ ಸಂಬಂಧ ಜೆಡಿಎಸ್‌ ಮುಖಂಡ ಎ.ಪಿ. ರಂಗನಾಥ್ ಮಾಧ್ಯಮದವರೊಂದಿಗೆ ಮಾತನಾಡಿ, ಕಳೆದ ವಾರ ವಾದ – ಪ್ರತಿವಾದಗಳು ನಡೆದಿದ್ದವು. ಹೊಸ ಪ್ರಯೋಗ ಮಾಡಲು ಹೋಗಿ ಎಸ್‌ಐಟಿಗೆ ಮುಖಭಂಗವಾಗಿದೆ. ಇವತ್ತು ನ್ಯಾಯಾಲಯ ಎಸ್‌ಐಟಿಯ ನಡೆಯನ್ನು ವಜಾ ಮಾಡಿದೆ. ಇದೇ ಎಸ್‌ಐಟಿಯ ಎಸ್‌ಪಿಪಿ ಹೆಚ್ಚುವರಿ ಸೆಕ್ಷನ್ ಸೇರಿಸಲ್ಲವೆಂದು ಕೋರ್ಟ್‌ಗೆ ಹೇಳಿದ್ದರು. ಕೊನೆಗೆ 354 ಕೇಸ್‌ನಲ್ಲಿನ ಜಾಮೀನು ತೆಗೆದುಕೊಳ್ಳಲು ಬಂದಾಗ 376 ಸೇರಿಸಿದ್ದೇವೆ ಎಂದು ಹೇಳಿಕೊಂಡರು. ರೇವಣ್ಣ ಪರ ಹಿರಿಯ ಪರ ವಕೀಲ ಸಿ.ವಿ. ನಾಗೇಶ ವಾದ ಮಂಡಿಸಿ, ಎಸ್‌ಐಟಿ ತಪ್ಪುಗಳನ್ನು ಕೋರ್ಟ್‌ ಗಮನಕ್ಕೆ ತಂದರು. ಇವತ್ತು ನಮಗೆ ನ್ಯಾಯಾಲಯದಲ್ಲಿ ಜಯ ಸಿಕ್ಕಿದೆ. ಐದು ಲಕ್ಷ ರೂಪಾಯಿಯ ಬಾಂಡ್ ಮೇಲೆ ರೇವಣ್ಣಗೆ ಜಾಮೀನು ಸಿಕ್ಕಿದೆ. ಕೆ.ಆರ್. ನಗರ ಕೇಸ್‌ನಲ್ಲಿ ರೇವಣ್ಣ ಅವರಿಗೆ ಸಿಕ್ಕಿದ ಜಾಮೀನು ಆದೇಶವನ್ನು ಪ್ರಶ್ನಿಸಿ ಎಸ್‌ಐಟಿ ಹೈಕೋರ್ಟ್ ಮೊರೆ ಹೋಗಿರುವುದು ಸರ್ಕಾರದ ಹುನ್ನಾರವಾಗಿದೆ. ಇದರಲ್ಲಿ ರೇವಣ್ಣ ಅವರನ್ನು ಸಿಲುಕಿಸುವ ಪ್ರಯತ್ನ ನಡೆದಿದೆ. ಅವರ ಕಾನೂನು ಹೋರಾಟಕ್ಕೆ ನಾವು ಕೂಡ ಸಮರ್ಥವಾಗಿ ಹೈಕೋರ್ಟ್‌ನಲ್ಲಿ ಹೋರಾಟ ಮಾಡುತ್ತೇವೆ ಎಂದು ಹೇಳಿದರು.

ಹೊಳೆನರಸೀಪುರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಚ್‌ಡಿ ರೇವಣ್ಣಗೆ ಜಾಮೀನು

ಜಾಮೀನಿಗೆ ಐದು ಲಕ್ಷ ರೂಪಾಯಿ ಬಾಂಡ್ ಹಾಗೂ ಒಬ್ಬರ ಶ್ಯೂರಿಟಿ ನೀಡುವಂತೆ ನ್ಯಾಯಾಧೀಶರು ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿದ್ದಾರೆ. 42ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರಾದ ಪ್ರೀತ್ ಜೆ. ಅವರು ಆದೇಶ ಹೊರಡಿಸಿದ್ದಾರೆ. ಇಂದು ವಿಚಾರಣೆಗೆ ರೇವಣ್ಣ ಬರಿಗಾಲಲ್ಲೇ ಹಾಜರಾಗಿದ್ದರು. ಜಾಮೀನು ದೊರೆತ ಬಳಿಕ ಅವರ ಮುಖದಲ್ಲಿ ನಿರಾಳತೆ ಕಂಡುಬಂತು.

ಗುರುವಾರ ಮಧ್ಯಂತರ ಜಾಮೀನು ನೀಡಿ ಶುಕ್ರವಾರಕ್ಕೆ (ಮೇ 17) ವಿಚಾರಣೆಯನ್ನು ಮುಂದೂಡಲಾಗಿತ್ತು. ಶುಕ್ರವಾರ ವಾದ – ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶರು ಸೋಮವಾರಕ್ಕೆ (ಮೇ 20) ವಿಚಾರಣೆಯನ್ನು ಮುಂದೂಡಿದ್ದರು. ಇದೀಗ ಎರಡನೇ ಪ್ರಕರಣದಲ್ಲಿ ಅವರಿಗೆ ಜಾಮೀನು ಲಭ್ಯವಾಗಿದೆ.

ಚಾಮರಾಜನಗರದ ಸಂತ್ರಸ್ತೆಯ ಕಿಡ್‌ನ್ಯಾಪ್‌ ಪ್ರಕರಣಕ್ಕೆ ಸಂಬಂಧಿಸಿ ರೇವಣ್ಣ ಅವರನ್ನು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳಿಸಲಾಗಿತ್ತು. ಆರು ದಿನಗಳ ನಿರಂತರ ಕಾನೂನು ಸಮರದ ಬಳಿಕ ಅವರಿಗೆ ಜಾಮೀನು ದೊರೆತಿತ್ತು.

ಹೊಳೆನರಸೀಪುರ ಪ್ರಕರಣದಲ್ಲಿ ಎಸ್‌ಐಟಿ ಪರ ವಾದ ಮಂಡಿಸಿದ ಎಸ್‌ಪಿಪಿ ಜಯ್ನಾ ಕೊಠಾರಿ, ಎಚ್.‌ ಡಿ. ರೇವಣ್ಣ ಅವರಿಗೆ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು ಎಂದು ಮನವಿ ಮಾಡಿದ್ದರು. ಆರೋಪಿ ರೇವಣ್ಣ ಅವರನ್ನು ಪೊಲೀಸರ ವಶಕ್ಕೆ ನೀಡಬೇಕು. ಇದೇ ಪ್ರಕರಣದ ಇನ್ನೊಬ್ಬ ಆರೋಪಿ ವಿಚಾರಣೆಗೆ ಹಾಜರಾಗಿಲ್ಲ. ಮತ್ತೊಬ್ಬ ಆರೋಪಿ ದೇಶ ಬಿಟ್ಟು ಹೋಗಿದ್ದಾರೆ. ಹೀಗಾಗಿ ಸಮಯ ನೀಡಬಾರದು. ಇಂದೇ ವಿಚಾರಣೆ ನಡೆಸಿ ಆದೇಶ ನೀಡಿ ಅಥವಾ ಪೊಲೀಸರ ವಶಕ್ಕೆ ನೀಡಬೇಕು ಎಂದು ವಾದಿಸಿದರು.

ಇದಕ್ಕೆ ಪ್ರತಿವಾದ ಮಂಡಿಸಿದ ರೇವಣ್ಣ ಪರ ವಕೀಲ ಅರುಣ್, ಎಚ್.ಡಿ. ರೇವಣ್ಣ ವಿರುದ್ಧ ಯಾವುದೇ ನಾನ್ ಬೇಲೆಬಲ್ ಸೆಕ್ಷನ್ ಇಲ್ಲ. ಜಾಮೀನು ನೀಡುವಂತಹ ಸೆಕ್ಷನ್‌ಗಳು ಇವೆ ಎಂದು ಹೇಳಿದರು. ನಾನ್ ಬೇಲೆಬಲ್ ಸೆಕ್ಷನ್ ಪ್ರಕರಣದಲ್ಲಿ ಸರ್ಕಾರದ ಪರ ವಕೀಲರಿಗೆ ಆಕ್ಷೇಪಣೆ ಸಲ್ಲಿಸುವ ಅಧಿಕಾರವೇ ಇಲ್ಲ. ಎಸ್‌ಪಿಪಿಗೆ ಆಕ್ಷೇಪಣೆ ಸಲ್ಲಿಸುವ ಅಧಿಕಾರ ಇದೆಯೇ ಎಂಬುದು ಮೊದಲು ನಿರ್ಧಾರ ಆಗಲಿ. ಈಗಾಗಲೇ ಎಚ್.ಡಿ. ರೇವಣ್ಣ ಅವರನ್ನು ಬಂಧಿಸಲಾಗಿತ್ತು. ಆಗಲೇ ಈ ಪ್ರಕರಣದ ಬಗ್ಗೆ ವಿಚಾರಣೆ ನಡೆಸಬಹುದಿತ್ತು. ಈಗ ಎಸ್ಐಟಿ ಕಸ್ಟಡಿಗೆ ಕೇಳುತ್ತಿರುವುದು ಸರಿಯಲ್ಲ ಎಂದು ಹೇಳಿದರು.

ರೇವಣ್ಣ ಪರ ವಕೀಲರ ವಾದ ಹೀಗಿತ್ತು

ವಾದದ ವೇಳೆ ರೇವಣ್ಣ ಪರ ವಕೀಲರು ಪ್ರಕರಣದ ದೋಷಗಳನ್ನು ಕೋರ್ಟ್‌ ಮುಂದೆ ಎತ್ತಿ ತೋರಿಸಿದರು. ಪೊಲೀಸರು ದಾಖಲಿಸಿಕೊಂಡಿರುವ ದೂರಿನಲ್ಲಿ ಉಲ್ಲೇಖವಾಗಿರುವ ಮಹಿಳೆಯ ಹೇಳಿಕೆಯಲ್ಲಿನ ಗೊಂದಲದ ಬಗ್ಗೆ ಗಮನ ಸೆಳೆದಿದ್ದಾರೆ.

ಹೊಳೆನರಸೀಪುರದಲ್ಲಿ ಎಚ್.ಡಿ. ರೇವಣ್ಣ ನಡೆಸಿದ್ದಾರೆನ್ನಲಾದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ರೇವಣ್ಣ ಅವರಿಗೆ ಜಾಮೀನು ನೀಡುವ ಬಗ್ಗೆ ವಾದ ಮಂಡಿಸಿದ ವಕೀಲ ಸಿ.ವಿ. ನಾಗೇಶ್‌, ದೂರುದಾರೆಯ ಹೇಳಿಕೆ ಬಗ್ಗೆ ಕೋರ್ಟ್‌ ಗಮನಕ್ಕೆ ತಂದರು. ಈ ಹೇಳಿಕೆಯು ಸಂಪೂರ್ಣ ಗೊಂದಲಮಯವಾಗಿದೆ. ಬೇಕೆಂದೇ ನಮ್ಮ ಕಕ್ಷಿದಾರರನ್ನು ಇಲ್ಲಿ ಫಿಟ್‌ ಮಾಡಲಾಗಿದೆ. ಇದೊಂದು ಸುಳ್ಳು ಕೇಸ್‌ ಎಂದು ವಾದಿಸಿದರು.

ಕೋರ್ಟ್‌ನಲ್ಲಿ ವಾದ ಮಂಡಿಸಿದ ಸಿ.ವಿ. ನಾಗೇಶ್‌, ದೂರುದಾರರು ಹೊಳೆನರಸೀಪುರ ಪೊಲೀಸ್ ಠಾಣೆಗೆ ದೂರು ನೀಡಿಲ್ಲ. ಹೊಳೆನರಸೀಪುರ ಪೊಲೀಸ್ ಠಾಣೆ ಸಬ್ ಇನ್ಸ್‌ಪೆಕ್ಟರ್ ಒಬ್ಬರು ಬೆಂಗಳೂರಿಗೆ ಬಂದು ದೂರುದಾರರಿಂದ ತಮಗೆ ನೀಡಿದಂತೆ ದೂರು ಬರೆಸಿಕೊಂಡು ಹೋಗಿ ಕೇಸ್ ದಾಖಲಿಸಿದ್ದಾರೆ ಎಂಬುದನ್ನು ಗಮನಕ್ಕೆ ತಂದರು. ಅಲ್ಲದೆ, ಪೊಲೀಸರು ದಾಖಲು ಮಾಡಿಕೊಂಡಿರುವ ಹೇಳಿಕೆಯನ್ನು ಕೋರ್ಟ್‌ ಮುಂದೆ ಓದಿದರು.

ಇದು ಸಂತ್ರಸ್ತೆ ನೀಡಿದ ದೂರೇ ಅಲ್ಲ

ಪ್ರಜ್ವಲ್ ರೇವಣ್ಣ ಮೇಲೆ‌ ಲೈಂಗಿಕ ದೌರ್ಜನ್ಯವೆಸಗಿರುವ ಬಗ್ಗೆ ಏಪ್ರಿಲ್ 24ರ ರಾತ್ರಿ‌ 11 ಗಂಟೆಗೆ ಬೆಂಗಳೂರಿನಲ್ಲಿರುವ ಸಂತ್ರಸ್ತೆಯೊಬ್ಬರು ದೂರು ನೀಡಲು‌ ಬಂದಿದ್ದರು. ಅವರು ಮಾನಸಿಕವಾಗಿ ಕುಗ್ಗಿ ಹೋಗಿದ್ದರು. ಆ ಬಗ್ಗೆ ಹಿರಿಯ ಅಧಿಕಾರಿಗಳಿಗೆ ವಿಷಯ ತಿಳಿಸಿ, ಮಹಿಳಾ ಸಿಬ್ಬಂದಿಯೊಂದಿಗೆ ಸಂತ್ರಸ್ತೆ ಇರುವ ಸ್ಥಳಕ್ಕೆ ಹೋಗಿ ದೂರು ಪಡೆದು‌ ಕೇಸ್ ದಾಖಲಿಸಿದ್ದಾಗಿ ಸ್ಟೇಷನ್ ಬುಕ್‌ನಲ್ಲಿ‌ ಉಲ್ಲೇಖಿಸಿದ್ದಾರೆ. ಇಲ್ಲಿ ಸ್ಪಷ್ಟವಾಗಿ ಗೊತ್ತಾಗುವುದೇನೆಂದರೆ ಈ ದೂರು ರಿಜಿಸ್ಟರ್ ಆಗಿರುವುದಲ್ಲ‌. ದೂರನ್ನು ತಿದ್ದುಪಡಿ ಮಾಡಿ ತಮಗೆ ಬೇಕಾದ ಹಾಗೆ ಮಾಡಿಕೊಂಡಿದ್ದಾರೆ. ರೇವಣ್ಣ ವಿರುದ್ಧ ದೂರುದಾರೆ ನೀಡಿದ ದೂರನ್ನು ಮಹಿಳಾ ಅಧಿಕಾರಿ ದಾಖಲಿಸಿಕೊಳ್ಳಲ್ಲಿಲ್ಲ. ಆಕೆಯ ಹೇಳಿಕೆಯನ್ನು ಲಿಖಿತ ರೂಪದಲ್ಲಿ ದಾಖಲಿಸಿಕೊಂಡಿಲ್ಲ. ಇದು ಸಂತ್ರಸ್ತೆ ನೀಡಿದ ದೂರೇ ಅಲ್ಲ. ಬೇಕಂತಲೇ ಸೃಷ್ಟಿಯಾಗಿರುವ ಕೇಸ್ ಆಗಿದೆ. ಆಕೆಗೆ ಲೈಂಗಿಕ ದೌರ್ಜನ್ಯ ಅಂದರೇನು ಅಂತ ಗೊತ್ತೇ ಇರುವುದಿಲ್ಲ ಎಂದು ಸಿ.ವಿ. ನಾಗೇಶ್ ವಾದಿಸಿದರು.

ಸಂತ್ರಸ್ತೆ ಹೇಳಿಕೆಯಲ್ಲಿ ಭಾರಿ ಗೊಂದಲ!

ಲೈಂಗಿಕ ದೌರ್ಜನ್ಯವೇ ಬೇರೆ, ಅತ್ಯಾಚಾರವೇ ಬೇರೆ. ಸಂತ್ರಸ್ತೆ ನೀಡಿದ ದೂರಿನ ಅಂಶಗಳನ್ನು ಓದಿ ಹೇಳಿದ ಸಿ.ವಿ. ನಾಗೇಶ್‌, ಸಂತ್ರಸ್ತೆಯ ಪತಿ ಆಕೆಯ ಮೇಲೆ ಪಟ್ಟ ಅನುಮಾನವನ್ನು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಆಕೆ ನನ್ನ ಮೇಲೆ ಆ ರೀತಿ ಕೃತ್ಯ ನಡೆದಿಲ್ಲ ಎಂದು ಹೇಳಿದ್ದಾಳೆ. ನಾಲ್ಕೈದು ವರ್ಷಗಳ ಹಿಂದೆ ನಡೆದಿರುವ ಕೃತ್ಯದ ಬಗ್ಗೆ ಆರೋಪಿಸಿದ್ದಾರೆ. ಒಂದು ಕಡೆ ರೇವಣ್ಣ ಹಾಗೂ ಪ್ರಜ್ವಲ್‌ ರೇವಣ್ಣ ನೀಡಿದ್ದ ಲೈಂಗಿಕ ದೌರ್ಜನ್ಯದ ಬಗ್ಗೆ ಹೇಳುತ್ತಾರೆ. ಮತ್ತೊಂದೆಡೆ ಸಂತ್ರಸ್ತೆ ಗಂಡ ಬೇರೆ ಹೆಣ್ಣು‌ ಮಕ್ಕಳ ವಿಡಿಯೊ ಬಗ್ಗೆ ಕೇಳಿದಾಗ ನನ್ನ ಮೇಲೆ ಆ ರೀತಿ ಆಗಿಲ್ಲ‌ ಅಂತ ಹೇಳಿದ್ದಾಳೆ. ಮತ್ತೊಂದೆಡೆ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಕಿರುಕುಳ ತಾಳಲಾರದೆ ಮನೆ ಕೆಲಸ ಬಿಟ್ಟು ಬಂದೆ ಎಂದು ಹೇಳುತ್ತಾಳೆ. ತನಿಖಾಧಿಕಾರಿಗಳು ಸಂತ್ರಸ್ತೆ ಹೇಳಿಕೆ ಆಧಾರದ ಮೇಲೆ 376 ದಾಖಲಿಸಲು ಅನುಮತಿ ಕೇಳಿದ್ದಾರೆ. ಯಾರ ಮೇಲೆ ಸೆಕ್ಷನ್‌ 376 ದಾಖಲಿಸುತ್ತಾರೆ ಎಂದು ಸಿ.ವಿ. ನಾಗೇಶ್ ಪ್ರಶ್ನೆ ಮಾಡಿದರು.

ಇದನ್ನೂ ಓದಿ: Prajwal Revanna Case: ಪ್ರಜ್ವಲ್ ರೇವಣ್ಣಗೆ ಸಂಕಷ್ಟ; ಅರೆಸ್ಟ್ ವಾರಂಟ್ ನೀಡಿದ ಕೋರ್ಟ್‌

ದೂರುದಾರರು ಲೈಂಗಿಕ ದೌರ್ಜನ್ಯ ತಾಳಲಾರದೆ 4 ವರ್ಷದ ಹಿಂದೆ ಮನೆ ಕೆಲಸ ಬಿಟ್ಟೆ ಎಂದು ಹೇಳುತ್ತಾರೆ. ಮನೆ ಬಿಟ್ಟು ಬಂದಿದ್ದಕ್ಕೆ ಪೊಲೀಸರನ್ನು ಕಳುಹಿಸಿ ಆಶ್ರಯ ಮನೆ ಖಾಲಿ ಮಾಡಿಸಿದರು ಎಂದು ಆರೋಪಿಸುತ್ತಾರೆ. ತಮ್ಮ ಒಡವೆ, ಬಟ್ಟೆ ಎಲ್ಲವನ್ನೂ ಕಿತ್ತುಕೊಂಡರು ಎಂದು ಹೇಳುತ್ತಾರೆ. ಹಾಗಾದರೆ ನಾಲ್ಕೂವರೆ ವರ್ಷದ ಹಿಂದೆ ಅವರ ಮನೆಯಲ್ಲಿದ್ದಾಗ ನಡೆದ ಅತ್ಯಾಚಾರ, ಲೈಂಗಿಕ ದೌರ್ಜನ್ಯವು ಅವರಿಗೆ ಗೊತ್ತಾಗಲಿಲ್ಲವೇ? ಮನೆ ಖಾಲಿ ಮಾಡಿಸಿದ ಮೇಲೆ ಯಾಕೆ ಲೈಂಗಿಕ ದೌರ್ಜನ್ಯ, ಅತ್ಯಾಚಾರ ನಡೆದಿದೆ ಅಂತ ಗೊತ್ತಾಯ್ತಾ ಎಂದು ಸಿ.ವಿ. ನಾಗೇಶ್ ಪ್ರಶ್ನೆ ಮಾಡಿದರು.

Continue Reading
Advertisement
MS Dhoni Bike Riding
ಕ್ರೀಡೆ30 mins ago

MS Dhoni Bike Riding: ಐಪಿಎಲ್​ ಮುಗಿಸಿ ತವರಿಗೆ ಮರಳಿದ್ದೇ ತಡ, ಬೈಕ್ ರೈಡಿಂಗ್​ ಮಾಡಿದ ಧೋನಿ​

Self Harming
ಕರ್ನಾಟಕ49 mins ago

Self Harming: ಟಿಸಿ ಕೊಟ್ಟಿಲ್ಲವೆಂದು ಬೇಸರಗೊಂಡು ವಿದ್ಯಾರ್ಥಿ ಆತ್ಮಹತ್ಯೆ

AAP Funds
ದೇಶ54 mins ago

AAP Funds: ನಿಯಮ ಉಲ್ಲಂಘಿಸಿ ಬೇರೆ ದೇಶಗಳಿಂದ ಆಪ್‌ 7 ಕೋಟಿ ರೂ. ದೇಣಿಗೆ ಸ್ವೀಕಾರ; ಇ.ಡಿ ಸ್ಫೋಟಕ ಮಾಹಿತಿ!

Karnataka weather Forecast
ಕರ್ನಾಟಕ1 hour ago

Coastal Weather: ದಕ್ಷಿಣ ಕನ್ನಡ, ಉಡುಪಿಯಲ್ಲಿ ಎರಡು ದಿನ ಭಾರೀ ಮಳೆ ಸಾಧ್ಯತೆ

KMF Nandini Logo
ಕ್ರೀಡೆ1 hour ago

KMF Nandini Logo: ನಂದಿನಿಗೆ ಸ್ವಾಗತಿಸಿ ಟಿ20 ವಿಶ್ವಕಪ್​ ಜೆರ್ಸಿ ಬಿಡುಗಡೆಗೊಳಿಸಿದ ಐರ್ಲೆಂಡ್ ತಂಡ

Siddaramaiah government performance is zero says BY Vijayendra
ರಾಜಕೀಯ2 hours ago

BY Vijayendra: ಮಹಿಳಾ ಸುರಕ್ಷತೆಯನ್ನೂ ನೀಡದ ಕೊಲೆಗಡುಕ ಸರ್ಕಾರದಿಂದ ಸಾಧನೆ ಶೂನ್ಯ: ಬಿ.ವೈ. ವಿಜಯೇಂದ್ರ ಆಕ್ರೋಶ

Nutrition Alert
ಆರೋಗ್ಯ2 hours ago

Nutrition Alert: ಎಳನೀರು ಕುಡಿಯುವುದರಿಂದಲೂ ನಮ್ಮ ದೇಹಕ್ಕೆ ಸೈಡ್‌ ಎಫೆಕ್ಟ್‌ ಇದೆಯೆ?

Postal Ballot
ದೇಶ2 hours ago

Postal Ballot: ಅನಾರೋಗ್ಯದ ಕಾರಣ ಅಂಚೆ ಮತದಾನ ಕೋರಿ 78ರ ಅಜ್ಜಿ ಅರ್ಜಿ; ಬೇಡವೆಂದ ಸುಪ್ರೀಂ!

Model PSI Varsha repaired the road at own expense
ಕರ್ನಾಟಕ2 hours ago

Mysore News: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೊಳಿಸಿ ಮಾದರಿಯಾದ ಪಿಎಸ್‌ಐ

Driving Licence New Rules
ದೇಶ2 hours ago

Driving Licence New Rules: ಡ್ರೈವಿಂಗ್‌ ಲೈಸೆನ್ಸ್‌; ಜೂನ್‌ 1ರಿಂದ ಹೊಸ ರೂಲ್ಸ್‌!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ9 hours ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ1 day ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ1 day ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ1 day ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ3 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ4 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ4 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು4 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌