Mental depression Head constable of Kudur police station commits suicideಮಾನಸಿಕ ಖಿನ್ನತೆಯಿಂದ ಕುದೂರು ಠಾಣೆಯ ಹೆಡ್‌ ಕಾನ್ಸ್‌ಟೇಬಲ್‌ ಆತ್ಮಹತ್ಯೆಗೆ ಶರಣು - Vistara News

ಕ್ರೈಂ

ಮಾನಸಿಕ ಖಿನ್ನತೆಯಿಂದ ಕುದೂರು ಠಾಣೆಯ ಹೆಡ್‌ ಕಾನ್ಸ್‌ಟೇಬಲ್‌ ಆತ್ಮಹತ್ಯೆಗೆ ಶರಣು

ಕುದೂರು ಪೊಲೀಸ್‌ ಠಾಣೆಯ (Kudur Police Station) ಹೆಡ್‌ ಕಾನ್ಸ್‌ಟೇಬಲ್‌ ಆತ್ಮಹತ್ಯೆಗೆ ಶರಣಾಗಿದ್ದಾರೆ. ನಾಲ್ಕುವರೆ ವರ್ಷದ ಮಗು ಕಳೆದುಕೊಂಡ ಬಳಿಕ ಮನನೊಂದು ಖಿನ್ನತೆಗೆ ಜಾರಿದ್ದರು ಎನ್ನಲಾಗಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನೆಲಮಂಗಲ: ಮಾನಸಿಕ ಖಿನ್ನತೆಯಿಂದ (Mental depression) ಬಳಲುತ್ತಿದ್ದ ಪೊಲೀಸ್ ಹೆಡ್‌ ಕಾನ್ಸ್‌ಟೇಬಲ್‌ (Kudur Police Station) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಜಮೀನಿನಲ್ಲಿದ್ದ ಹಲಸಿನ ಮರಕ್ಕೆ ನೇಣು ಬಿಗಿದುಕೊಂಡಿದ್ದಾರೆ. ಬೆಂಗಳೂರು ಗ್ರಾಮಾಂತರದ ನೆಲಮಂಗಲ ತಾಲೂಕಿನ ಅಗಳಕುಪ್ಪೆಯಲ್ಲಿ ಈ ಘಟನೆ ನಡೆದಿದೆ.

ಉಮೇಶ್ (37) ಮೃತ ದುರ್ದೈವಿ. ಕುದೂರು ಪೊಲೀಸ್ ಠಾಣೆಯಲ್ಲಿ ಉಮೇಶ್ ಕರ್ತವ್ಯ ನಿರ್ವಹಿಸುತ್ತಿದ್ದರು. ಕಳೆದ ಐದು ತಿಂಗಳ ಹಿಂದಷ್ಟೇ ಅನಾರೋಗ್ಯದಿಂದ ತಮ್ಮ ನಾಲ್ಕೂವರೆ ವರ್ಷದ ಮಗುವನ್ನು ಕಳೆದುಕೊಂಡಿದ್ದರು. ಈ ಘಟನೆಯಿಂದ ಉಮೇಶ್‌ ಮನನೊಂದು ಖಿನ್ನತೆಗೆ ಜಾರಿದ್ದರು. ಜತೆಗೆ ರಕ್ತದೊತ್ತಡ ಹಾಗೂ ಮಧುಮೇಹ ಕಾಯಿಲೆಯಿಂದಲೂ ಬಳಲುತ್ತಿದ್ದರು.

ಕಳೆದ ಶನಿವಾರ ರಾತ್ರಿ ತಮ್ಮ ಜಮೀನಿನಲ್ಲಿ ಬೈಕ್ ನಿಲ್ಲಿಸಿ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಳಗ್ಗೆ ಗ್ರಾಮಸ್ಥರು ನೋಡಿದಾಗ ವಿಷಯವನ್ನು ಪೊಲೀಸರಿಗೆ ಮುಟ್ಟಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ದಾಬಸ್‌ಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಡೆತ್‌ನೋಟ್‌ ಬರೆದಿಟ್ಟು 7ನೇ ಮಹಡಿಯಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ; ಮನನೊಂದಿದ್ದು ಯಾಕೆ?

ಬೆಂಗಳೂರು: ಡೆತ್‌ ನೋಟ್ (Death Note) ಬರೆದಿಟ್ಟು ವಿದ್ಯಾರ್ಥಿನಿಯೊಬ್ಬಳು ಏಳನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಟನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಿ.ಆರ್. ಆಯಿಶಾ ಮೃತ ದುರ್ದೈವಿ.

ಬಿನ್ನಿ ಮಿಲ್ ಸಮೀಪ ಇರುವ ಪೊಲೀಸ್ ಕ್ವಾರ್ಟರ್ಸ್‌ನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆಯಿಶಾ ಬಿ.ಎಸ್‌.ಸಿ ಕಂಪ್ಯೂಟರ್ ಸೈನ್ಸ್ ಓದುತ್ತಿದ್ದಳು ಎಂದು ತಿಳಿದು ಬಂದಿದೆ. ಇನ್ನು ಡೆತ್‌ನೋಟ್‌ನಲ್ಲಿ ನನ್ನ ಸಾವಿಗೆ ಯಾರೂ ಕಾರಣ ಅಲ್ಲ. ಈ ಜೀವನದ ಮೇಲೆ ಜಿಗುಪ್ಸೆ ಬಂದಿದೆ. ನಾನೇ ಸ್ವ ಇಚ್ಛೆಯಿಂದ ಕಟ್ಟಡದ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದೇನೆ ಎಂದು ಡೆತ್‌ನೋಟ್‌ ಬರೆದಿದ್ದಾಳೆ.

ಡೆತ್‌ನೋಟ್‌ನಲ್ಲಿ ಏನಿದೆ?

ನಾನು ನನ್ನ ಕುಟುಂಬಕ್ಕೆ ಹಾಗೂ ಬೀಮೇಶ್ ನಾಯಕ್ ಮೇಲೆ‌ ದೂರು ನೀಡಿದ್ದೆ. ನಾನು ನೀಡಿದ್ದ ಸುಳ್ಳು ದೂರಿನಿಂದ ಪಶ್ಚಾತ್ತಾಪ ಪಟ್ಟಿದ್ದೇನೆ. ಬೀಮೇಶ್ ನಾಯಕ್ ತುಂಬ ಸೂಕ್ಷ್ಮ ಮತ್ತು ಮುಗ್ದ ವ್ಯಕ್ತಿ ಆಗಿದ್ದಾನೆ. ಅವರ ಮತ್ತು ನನ್ನ ಮಧ್ಯೆ ಯಾವುದೇ ದೈಹಿಕ ಸಂಪರ್ಕ ಇರುವುದಿಲ್ಲ. ನಾನು ಮಾಡಿದ ಈ ಸುಳ್ಳು ಕೇಸಿನಿಂದಾಗಿ ಅವರ ತಂದೆ ಅನಾರೋಗ್ಯಕ್ಕೀಡಾಗಿದ್ದಾರೆ. ನನ್ನಿಂದ ಎರಡು ಕುಟುಂಬಗಳಿಗೂ ತುಂಬಾ ನೋವಾಗಿದೆ. ಈ ಪಶ್ಚಾತ್ತಾಪದಿಂದ ಹೊರಬರಲು ಆಗುತ್ತಿಲ್ಲ, ನಾನು ಮಾನಸಿಕವಾಗಿ ಕುಗ್ಗಿ ಹೋಗಿದ್ದೇನೆ. ಭೀಮೇಶ್ ನಾಯಕ್ ನನ್ನ ಆತ್ಮೀಯ ಸ್ನೇಹಿತ, ಆ್ಯಮ್ ವೆರಿ ಸಾರಿ.. ಐ ಲವ್ ಯೂ ಸೋ ಮಚ್ ಭೀಮೇಶ್ ಎಂದು ಪತ್ರದಲ್ಲಿ ಬರೆದಿದ್ದಾಳೆ.

ಇದನ್ನೂ ಓದಿ: Karnataka Election 2023: ನಾನು ಫಿಟ್‌ ಇದ್ದೇನೆ, ನನ್ನೊಂದಿಗೆ ರನ್ನಿಂಗ್‌ ರೇಸ್‌ಗೆ ಬನ್ನಿ; ಮೋದಿಗೆ ಸಿದ್ದರಾಮಯ್ಯ ಸವಾಲು

ಈ ನನ್ನ ಆತ್ಮಹತ್ಯೆಗೂ, ಬೀಮೇಶ್ ನಾಯಕನಿಗೂ ಯಾವುದೇ ಸಂಬಂಧ ಇಲ್ಲ. ಬೀಮೇಶ್ ಮಾಮ ಇವತ್ತು ನೀ ಆಫೀಸಿಗೆ ಹೋದಾಗ ಹಾಲು‌ ಕಾಯಿಸಿದರೂ ಕುಡಿಯದೆ ಹೋಗಿರುವೆ. ಥ್ಯಾಂಕ್ ಯೂ ಸೋ ಮಚ್ ಬೀಮೇಶ್ ನನ್ನನ್ನು ಕ್ಷಮಿಸಿದ್ದಕ್ಕೆ, ನೀನು ತುಂಬ ದೊಡ್ಡ ವ್ಯಕ್ತಿ. ಆ ದೇವರು ನಿನಗೆ ಒಳ್ಳೆಯದು ಮಾಡಲಿ ಮುದ್ದು. ನೀ ಇನ್ನೂ ಸ್ಟ್ರಾಂಗ್ ಆಗಿ ಚೆನ್ನಾಗಿ ತಿನ್ನು, ನಾನು ನಿನ್ನ ಜತೆ ತುಂಬಾ ಖುಷಿಯಾಗಿದ್ದೆ. ಆ ಸಂತೋಷ ಎಲ್ಲ ನನಗೆ ಕೊಟ್ಟಿದ್ದಕ್ಕೆ ಥ್ಯಾಂಕ್ಸ್.. I will miss you, May god bless you Dear, ನಮ್ಮ ಅಪ್ಪನಿಗೆ SORRY ಹೇಳು ಬೀಮೇಶ್, I am very sorry ಬೀಮೇಶ್ ನಿನ್ನನ್ನು ಜೈಲಿಗೆ ಕಳಿಸಿದ್ದಕ್ಕೆ. ಇಂತಿ‌ ನಿನ್ನ ಪ್ರೀತಿಯ ಆಯಿಶಾ ಬಿ.ಆರ್ ಎಂದು ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Prajwal Revanna Case: ʼಪ್ರತಿ ದಿನ ಫೋನ್‌ ಮಾಡಿ ಬಟ್ಟೆ ಕಳಚಲು ಹೇಳ್ತಿದ್ದ…ʼ ಪ್ರಜ್ವಲ್‌ ವಿರುದ್ಧ ದಾಖಲಾದ 4ನೇ ದೂರಿನಲ್ಲಿ ಏನಿದೆ?

Prajwal Revanna Case: ಮಹಿಳೆಗೆ ವಿಡಿಯೊ ಕಾಲ್ ಮಾಡಿ ವಿವಸ್ತ್ರವಾಗುವಂತೆ ಒತ್ತಾಯಿಸುತ್ತಿದ್ದ. ವಿವಸ್ತ್ರಗೊಂಡ ಮಹಿಳೆಯನ್ನು ನೋಡುತ್ತ ಹಸ್ತಮೈಥುನ ಮಾಡಿಕೊಳ್ಳುತ್ತಿದ್ದ. ವಿವಸ್ತ್ರವಾಗಲು ಒಪ್ಪದಿದ್ದಾಗ ವಿಡಿಯೊ ಸೇವ್ ಮಾಡಿಕೊಂಡಿರುವುದಾಗಿಯೂ, ವೈರಲ್ ಮಾಡುವುದಾಗಿಯೂ ಬೆದರಿಕೆ ಹಾಕಿದ್ದ ಎಂದು ಆರೋಪಿಸಲಾಗಿದೆ.

VISTARANEWS.COM


on

prajwal revanna case 4th
Koo

ಬೆಂಗಳೂರು: ಲೈಂಗಿಕ ದೌರ್ಜನ್ಯ (Physical Abuse) ಪ್ರಕರಣದ ಆರೋಪಿ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna Case) ವಿರುದ್ಧ ನಾಲ್ಕನೇ ಪ್ರಕರಣ ದಾಖಲಾಗಿದ್ದು, ಆರೋಪಿಯ ಕುರಿತು ಇನ್ನಷ್ಟು ವಿಕೃತಿಯ ದೂರುಗಳು ದಾಖಲಾಗಿವೆ. ಈ ಪ್ರಕರಣದಲ್ಲಿ ಮಾಜಿ ಶಾಸಕ ಪ್ರೀತಂ ಗೌಡ (Preetham Gowda) ಹೆಸರು ಕೂಡ ತಳುಕು ಹಾಕಿಕೊಂಡಿದೆ.

ಸಿಐಡಿ ಸೈಬರ್ ಕ್ರೈಂ (CID Cyber Crime) ಠಾಣೆಯಲ್ಲಿ ಸಂತ್ರಸ್ತೆ ನೀಡಿದ ದೂರಿನನ್ವಯ ಎಫ್ಐಆರ್ (FIR) ದಾಖಲಾಗಿದೆ. ಎಫ್ಐಆರ್‌ನಲ್ಲಿ ಸಂತ್ರಸ್ತೆಯಿಂದ ಉಲ್ಲೇಖವಾಗಿರುವ ಅಂಶಗಳು ಹೀಗಿವೆ: ಮಗನ ಶಾಲೆ‌ ವಿಚಾರಕ್ಕೆ ಪ್ರಜ್ವಲ್‌ನನ್ನು ಸಂತ್ರಸ್ತ ಮಹಿಳೆ ಭೇಟಿಯಾಗಿದ್ದರು. ಭೇಟಿ ವೇಳೆ ಸಂತ್ರಸ್ತೆಯಿಂದ ಪ್ರಜ್ವಲ್‌ ಫೋನ್‌ ನಂಬರ್ ಪಡೆದಿದ್ದ. ನಂಬರ್‌ ಪಡೆದು ವಿಡಿಯೊ ಕಾಲ್ ಮಾಡಿ ದಿನ ನಿತ್ಯ ಮಾತಾಡುತ್ತಿದ್ದ.

ನಂತರ ಮಹಿಳೆಗೆ ವಿಡಿಯೊ ಕಾಲ್ ಮಾಡಿ ವಿವಸ್ತ್ರವಾಗುವಂತೆ ಒತ್ತಾಯಿಸುತ್ತಿದ್ದ. ವಿವಸ್ತ್ರಗೊಂಡ ಮಹಿಳೆಯನ್ನು ನೋಡುತ್ತ ಹಸ್ತಮೈಥುನ ಮಾಡಿಕೊಳ್ಳುತ್ತಿದ್ದ. ವಿವಸ್ತ್ರವಾಗಲು ಒಪ್ಪದಿದ್ದಾಗ ವಿಡಿಯೊ ಸೇವ್ ಮಾಡಿಕೊಂಡಿರುವುದಾಗಿಯೂ, ವೈರಲ್ ಮಾಡುವುದಾಗಿಯೂ ಬೆದರಿಕೆ ಹಾಕಿದ್ದ ಎಂದು ಆರೋಪಿಸಲಾಗಿದೆ.

ನಂತರ ಏಕಾಏಕಿ ಸಾಮಾಜಿಕ ಜಾಲತಾಣದಲ್ಲಿ ಈ ಫೋಟೊ ವೈರಲ್ ಆಗಿರುವ ವಿಚಾರ ಸಂತ್ರಸ್ತೆ ಗಮನಕ್ಕೆ ಬಂದಿದೆ. ಈ ಕುರಿತು ಪ್ರಜ್ವಲ್‌ನನ್ನು ಸಂತ್ರಸ್ತ ಮಹಿಳೆ ಸಂಪರ್ಕ ಮಾಡಿದ್ದಾರೆ. ಆಗ ʼಸ್ಟೇ ತಂದಿದ್ದೇನೆ, ಏನೂ ಆಗಲ್ಲʼ ಎಂದಿದ್ದರಂತೆ. ಎರಡನೇ ಬಾರಿ ಫೋಟೊ ವೈರಲ್ ಆದಾಗ ಸಂತ್ರಸ್ತೆ ದೂರು ನೀಡಲು ಮುಂದಾಗಿದ್ದರು.

ವೈರಲ್ ಆದ ಕೆಲವು ಫೋಟೊಗಳನ್ನು ಕಿರಣ್, ಶರತ್ ಹಾಗೂ ಪ್ರೀತಂ ಗೌಡ ವೈರಲ್‌ ಮಾಡಿಸಿರುವ ಆರೋಪ ಇದೆ. ಈ ಹಿನ್ನೆಲೆಯಲ್ಲಿ ಒಟ್ಟು ನಾಲ್ಕು ಜನರ ಮೇಲೆ ದೂರು ನೀಡಲು ಮಹಿಳೆ ಮುಂದಾಗಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಎಸ್ಐಟಿ ಅಧಿಕಾರಿಗಳಿಂದ ತನಿಖೆ‌ ಚುರುಕುಗತಿ ಪಡೆದುಕೊಂಡಿದೆ.

ಜಾಮೀನು ಅರ್ಜಿ ಇಂದು ವಿಚಾರಣೆ

ಇಂದು ಹೊಳೆನರಸೀಪುರ ಟೌನ್ ಠಾಣೆಯಲ್ಲಿ ದಾಖಲಾಗಿರುವ ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಿಚಾರಣೆಗೆ ಬರಲಿದೆ. ಈ ಪ್ರಕರಣದಲ್ಲಿ ಜಾಮೀನು ಸಿಕ್ಕರೂ ಪ್ರಜ್ವಲ್‌ಗೆ ಬಿಡುಗಡೆ ಇಲ್ಲ. ಎಚ್.ಡಿ ರೇವಣ್ಣ (HD Revanna) ಹಾಗೂ ಪ್ರಜ್ವಲ್ ರೇವಣ್ಣ ಇಬ್ಬರೂ ಆರೋಪಿಗಳಾಗಿರುವ ಪ್ರಕರಣದಲ್ಲಿ 82ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಎಚ್‌ಡಿ ರೇವಣ್ಣ ಈಗಾಗಲೇ ಜಾಮೀನು ಪಡೆದಿದ್ದಾರೆ. ಮೊದಲು ಲೈಂಗಿಕ‌ ದೌರ್ಜನ್ಯ ಆರೋಪದಡಿ ದಾಖಲಾಗಿದ್ದ ಪ್ರಕರಣದಲ್ಲಿ ನಂತರ ಅತ್ಯಾಚಾರ ಆರೋಪವನ್ನು ಸೇರಿಸಲಾಗಿತ್ತು.

ಪುರುಷತ್ವ ಪರೀಕ್ಷೆಗೆ ಒಳಗಾಗಲಿರುವ ಸೂರಜ್‌

ಲೈಂಗಿಕ ದೌರ್ಜನ್ಯ (physical abuse) ಪ್ರಕರಣಗಳಲ್ಲಿ ತಮ್ಮ ಪ್ರಜ್ವಲ್‌ ರೇವಣ್ಣಗೆ (Prajwal Revanna Case) ಮಾಡಲಾಗಿದ್ದ ಪುರುಷತ್ವ ಪರೀಕ್ಷೆಯನ್ನು (Medical Test) ಇದೀಗ ಅಣ್ಣ ಸೂರಜ್‌ ರೇವಣ್ಣಗೂ (Suraj Revanna Case) ಮಾಡಲು ತನಿಖಾ ತಂಡ ಮುಂದಾಗಿದೆ. ಬೆದರಿಕೆಯೊಡ್ಡಿ ಸಲಿಂಗಕಾಮ, ಅಸಹಜ ಲೈಂಗಿಕ ಕ್ರಿಯೆಯ ಆರೋಪ ಸೂರಜ್‌ ರೇವಣ್ಣ ಮೇಲಿದೆ.

ಸೂರಜ್ ರೇವಣ್ಣ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ‌ ದೌರ್ಜನ್ಯ ಪ್ರಕರಣದಲ್ಲಿ, ಸೂರಜ್ ರೇವಣ್ಣಗೆ ಇಂದು ವೈದ್ಯಕೀಯ ಪರೀಕ್ಷೆ ಮಾಡಿಸುವ ಸಾಧ್ಯತೆ ಇದೆ. ಬೌರಿಂಗ್ ಆಸ್ಪತ್ರೆಯಲ್ಲಿ ಇಂದು ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಸೂರಜ್‌ ಪ್ರಕರಣದಲ್ಲಿ ಈಗಾಗಲೇ ಸಂತ್ರಸ್ತನ ವಿಚಾರಣೆ ಹಾಗೂ ವೈದ್ಯಕೀಯ ಪರೀಕ್ಷೆಯನ್ನು ಪೊಲೀಸರು ನಡೆಸಿದ್ದಾರೆ. ಮುಂದುವರಿದ ಭಾಗವಾಗಿ, ಇಂದು ಸೂರಜ್ ರೇವಣ್ಣ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗುತ್ತದೆ. ಸಂತ್ರಸ್ತನ ಮೇಲೆ ಲೈಂಗಿಕ ಆಕ್ರಮಣ ನಡೆಸಿರುವ ಸಾಧ್ಯತೆಗಳನ್ನು ಶೋಧಿಸಲಾಗುತ್ತದೆ.

ಈ ಪ್ರಕರಣ ಸ್ವಲ್ಪ ಭಿನ್ನವಾಗಿದ್ದು, ಆರೋಪಿ ಪುರುಷರ ಜೊತೆಗೆ ಲೈಂಗಿಕ ಕ್ರಿಯೆ ನಡೆಸಬಲ್ಲನೇ ಎಂಬುದನ್ನು ಪರೀಕ್ಷಿಸಲಾಗುತ್ತದೆ. ಸೂರಜ್‌ ಮೇಲೆ ಬಂದಿರುವ ಆರೋಪ ಬೆದರಿಕೆ ಹಾಕಿ ಸಲಿಂಗಕಾಮ ಎಸಗಿದ್ದಾಗಿರುವುದರಿಂದ, ಆರೋಪಿಗೆ ಸಲಿಂಗಕಾಮ ಸಹಜವಾದುದೇ ಎಂದು ಪರೀಕ್ಷಿಸಲು ಕೆಲವು ಪರೀಕ್ಷೆಗಳನ್ನು ನಡೆಸಲಾಗುತ್ತದೆ. ಹೀಗಾಗಿ ಇದು ಅಣ್ಣ ಪ್ರಜ್ವಲ್‌ಗೆ ನಡೆಸಿದ ಪರೀಕ್ಷೆಗಳಿಗಿಂತ ಸ್ವಲ್ಪ ಭಿನ್ನ. ಪ್ರಜ್ವಲ್‌ ಪ್ರಕರಣದಲ್ಲಿ ಸಂತ್ರಸ್ತರು ಮಹಿಳೆಯರಾಗಿದ್ದರು.

ಐಪಿಸಿ ಸೆಕ್ಷನ್ 377 ಹಾಕಿರುವ ಪ್ರಕರಣದಲ್ಲಿ ವೈದ್ಯಕೀಯ ಪರೀಕ್ಷೆ ಬಹಳ ಮುಖ್ಯವಾಗಿದೆ. ಇಲ್ಲಿ ಸಂತ್ರಸ್ತ ಹಾಗೂ ಆರೋಪಿ ಇಬ್ಬರ ವೈದ್ಯಕೀಯ ಪರೀಕ್ಷೆಯೂ ಮುಖ್ಯವಾಗಿದೆ. ಸಂತ್ರಸ್ತ ವೈದ್ಯಕೀಯ ಪರೀಕ್ಷೆಗೆ ಒಳಗಾಗಿದ್ದಾನೆ. ಆರೋಪಿ ಸೂರಜ್ ರೇವಣ್ಣ ಸದ್ಯ ಸಿಐಡಿ ಕಸ್ಟಡಿಯಲ್ಲಿ ಇದ್ದಾರೆ.

ತಮ್ಮ ಪ್ರಜ್ವಲ್‌ ರೇವಣ್ಣಗೆ ಮೂರು ಸಲ ವೈದ್ಯಕೀಯ ಪರೀಕ್ಷೆ ನಡೆಸಲಾಗಿತ್ತು. ಮೂರು ಬೇರೆ ಬೇರೆ ಪ್ರಕರಣಗಳಲ್ಲಿ ಈ ಪರೀಕ್ಷೆ ನಡೆಸಲಾಗಿದ್ದು, “ಪದೇ ಪದೆ ಖಾಸಗಿ ಅಂಗವನ್ನು ತೋರಿಸಲು ಮುಜುಗರವಾಗುತ್ತದೆ” ಎಂದು ನ್ಯಾಯಾಧೀಶರ ಮುಂದೆ ಪ್ರಜ್ವಲ್‌ ಅಲವತ್ತುಕೊಂಡಿದ್ದರು. ಇದೀಗ ಅಣ್ಣನೂ ಈ ಪರೀಕ್ಷೆಗೆ ಗುರಿಯಾಗಬೇಕಿದೆ. ಸೂರಜ್‌ ಎಷ್ಟು ಬಾರಿ ಪರೀಕ್ಷೆಗೊಳಗಾಗಲಿದ್ದಾನೆ ಎಂದು ನೋಡಬೇಕಿದೆ.

ಇದನ್ನೂ ಓದಿ: Suraj Revanna Case: ಸೂರಜ್‌ ರೇವಣ್ಣಗೇ ʼಹಿಂದಿನಿಂದ ಇರಿದವರುʼ ಯಾರು?

Continue Reading

ಸ್ಯಾಂಡಲ್ ವುಡ್

Vinay Gowda: ʻಡೆವಿಲ್ʼ ಸಿನಿಮಾದಲ್ಲಿ ನಾನೇ ವಿಲನ್, ಪ್ರಾಜೆಕ್ಟ್‌ ಏನಾಗುತ್ತೋ ಗೊತ್ತಿಲ್ಲ ಎಂದ ʻಬಿಗ್ ಬಾಸ್ʼ ಆನೆ ವಿನಯ್ ಗೌಡ!

Vinay Gowda: ಈ ಸಿನಿಮಾದಲ್ಲಿ ವಿಲನ್ ಆಗಿ ನಟಿಸುತ್ತಿರುವ ಬಿಗ್‌ಬಾಸ್ ಖ್ಯಾತಿಯ ವಿನಯ್ ಗೌಡ (Vinay Gowda) ವಿಲನ್ ಆಗಿ ನಟಿಸುತ್ತಿದ್ದಾರೆ. ಡೆವಿಲ್‌ ಸಿನಿಮಾದಲ್ಲಿ 30% ಶೂಟ್‌ ಆಗಿದೆ. ಫೈಟ್‌ ಸೀಕ್ವೆನ್ಸ್‌ ಬಾಕಿ ಇದೆ. ಟೈಲಾಗ್‌ ಸ್ವಲ್ಪ ಬಾಕಿ ಉಳಿದೆʼʼ ಎಂದರು.ಜತೆಗೆ ʻʻಪ್ರಾಜೆಕ್ಟ್‌ ಆರ್ಧಕ್ಕೆ ನಿಂತಿದೆ ಪ್ರಾಜೆಲ್ಟ್‌ ಭವಿಷ್ಯ ಯಾರಿಗೂ ಗೊತ್ತು, ಆದರೆ ಸೂಪರ್‌ ಪ್ರಾಜೆಕ್ಟ್ʼʼಎಂದು ಹೇಳಿಕೆ ನೀಡಿದ್ದಾರೆ.‌

VISTARANEWS.COM


on

Vinay Gowda acted darshan devil Movie and says Futture cant be predict
Koo

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ ಜೈಲು ಸೇರಿದ್ದಾರೆ. ಹೀಗಾಗಿ ಅವರ ʻಡೆವಿಲ್‌ʼ ಸಿನಿಮಾ ಚಿತ್ರೀಕರಣ ಅರ್ಧಕ್ಕೆ ನಿಂತಿದೆ. ಇದೇ ವೇಳೆ ಈ ಸಿನಿಮಾದಲ್ಲಿ ವಿಲನ್ ಆಗಿ ನಟಿಸುತ್ತಿರುವ ಬಿಗ್‌ಬಾಸ್ ಖ್ಯಾತಿಯ ವಿನಯ್ ಗೌಡ (Vinay Gowda) ವಿಲನ್ ಆಗಿ ನಟಿಸುತ್ತಿದ್ದಾರೆ. ವಿನಯ್‌ ಸಂದರ್ಶನವೊಂದರಲ್ಲಿ ಡೆವಿಲ್‌ ಸಿನಿಮಾ ಬಗ್ಗೆ ಮಾತನಾಡಿದ್ದಾರೆ. ಜತೆಗೆ ʻʻಪ್ರಾಜೆಕ್ಟ್‌ ಆರ್ಧಕ್ಕೆ ನಿಂತಿದೆ ಪ್ರಾಜೆಲ್ಟ್‌ ಭವಿಷ್ಯ ಯಾರಿಗೂ ಗೊತ್ತು, ಆದರೆ ಸೂಪರ್‌ ಪ್ರಾಜೆಕ್ಟ್ʼʼಎಂದು ಹೇಳಿಕೆ ನೀಡಿದ್ದಾರೆ.‌

ವಿನಯ್‌ ಗೌಡ ಮಾತನಾಡಿ ʻʻಬಿಗ್‌ ಬಾಸ್‌ ಮುಗಿಸಿದ ಬಳಿಕ ʻಡೆವಿಲ್‌ʼ ಸಿನಿಮಾ ಚಾನ್ಸ್‌ ಸಿಕ್ಕಿತು. ಈ ಸಿನಿಮಾ ಪರಿಚಯ ಹೇಗಾಯ್ತು ಎಂದರೆ ಪ್ರಕಾಶ್‌ ಅವರ ಜತೆ ಮುಂಚೆ ಕೆಲಸ ಮಾಡಿದ್ದೆ. ಒಂದಷ್ಟು ಧಾರಾವಾಹಿಗಳು ಮಾಡಿದ್ದೆ. ನನ್ನ ನಟನೆ ಗೊತ್ತು ಅವರಿಗೆ. ಈ ರೀತಿ ವಿಲನ್‌ ಕ್ಯಾರಕ್ಟರ್‌ ಬಗ್ಗೆ ಹೇಳಿದರು. ಬಳಿಕ ನಾನು ಸಿನಿಮಾಗೆ ಒಪ್ಪಿಗೆ ನೀಡಿದೆ. ಅವರ ಕೆಲಸ ಅಂತೂ ತುಂಬ ಕ್ಲೀನ್‌ ಹಾಗೂ ಕ್ಲೀಯರ್‌. ನಂದು ಡೆವಿಲ್‌ ಸಿನಿಮಾದಲ್ಲಿ 30% ಶೂಟ್‌ ಆಗಿದೆ. ಫೈಟ್‌ ಸೀಕ್ವೆನ್ಸ್‌ ಬಾಕಿ ಇದೆ. ಟೈಲಾಗ್‌ ಸ್ವಲ್ಪ ಬಾಕಿ ಉಳಿದೆʼʼ ಎಂದರು.

ಮುಂದೆ ಏನಾಗುತ್ತೆ? ಎಲ್ಲಿರವರೆಗೆ ಹೋಗುತ್ತೆ ಗೊತ್ತಿಲ್ಲ

ದರ್ಶನ್‌ ವಿವಾದದ ಬಗ್ಗೆ ಮಾತನಾಡಿ ʻʻನಾನು ಯಾರ ಬಗ್ಗೆ ಮಾತಾಡಲ್ಲ. ನಾವು ಈ ಉದ್ಯಮಕ್ಕೆ ಲೇಟ್‌ ಆಗಿ ಬಂದು ಕಡಿಮೆ ಕೊಡುಗೆ ಕೊಟ್ಟಿರಬಹುದು. ಆದರೆ ಈಗ ನಾನು ಇಂಡಸ್ಟ್ರಿಯಲ್ಲಿ ಇದ್ದೇನೆ. ಇಲ್ಲಿ ಈ ಬಗ್ಗ ಪ್ರಶ್ನೆ ಬಂದಾಗ. ಹೌದು ತೊಂದರೆ ಆಗಿದೆ. ಮುಂದೆ ಏನಾಗುತ್ತೆ? ಎಲ್ಲಿರವರೆಗೆ ಹೋಗುತ್ತೆ ಗೊತ್ತಿಲ್ಲ. ನಾನು ಈ ಚಿತ್ರರಂಗದ ಒಂದು ಭಾಗವೆಂದು ಅಂದುಕೊಂಡಿದ್ದೇನೆ. ಈಗ ಇಂತಹದ್ದೊಂದು ಘಟನೆ ನಡೆದಿದೆ. ಅದನ್ನು ಜಡ್ಜ್‌ ಮಾಡುವುದಕ್ಕೆ ನಾವ್ಯಾರೂ ಅಲ್ಲ. ಮಾಡಿರುವುದು ನಿಜನಾ? ಸುಳ್ಳಾ? ಅದ್ಯಾವುದೂ ನಮಗೆ ಗೊತ್ತಿಲ್ಲ. ಅದಕ್ಕೆ ಕಮೆಂಟ್ ಮಾಡುವುದು ನನಗೆ ಸೂಟ್ ಆಗುತ್ತೆ ಅಂತ ಅನಿಸುತ್ತಿಲ್ಲ.” ಎಂದು ವಿನಯ್ ಗೌಡ ಹೇಳಿದ್ದಾರೆ.

ಇದನ್ನೂ ಓದಿ: Pavithra Gowda : ಜೈಲಿನಲ್ಲಿರುವ ಪವಿತ್ರಾ ಗೌಡಗೆ ಬ್ಯಾಗ್​ ತುಂಬಾ ಸಾಮಗ್ರಿ ತಂದು ಕೊಟ್ಟ ಸಹೋದರ

ಸೂಪರ್‌ ಪ್ರಾಜೆಕ್ಟ್

ʻʻಈ ಘಟನೆ ಬಗ್ಗೆ ಹೇಳೋದೆನಂದರೆ ಒಂದು ಕಮೆಂಟ್‌ ಎಲ್ಲಿಯ ಹಂತದವರೆಗೆ ಹೋಗಿದೆ ನೋಡಿ. ಒಂದು ತಪ್ಪು ಕೆಲಸ ಮಾತ್ರ ಹೈಲೈಟ್‌ ಆಗತ್ತೆ. ತಪ್ಪು ಎಲ್ಲಿದೆ, ನೆಗೆಟಿವ್‌ ಎಲ್ಲಿದೆ ಅದು ಮಾತ್ರ ಹೈಲೈಟ್‌ ಆಗತ್ತೆ. ಪ್ರಾಜೆಕ್ಟ್‌ ಆರ್ಧಕ್ಕೆ ನಿಂತಿದೆ ಪ್ರಾಜೆಲ್ಟ್‌ ಭವಿಷ್ಯ ಯಾರಿಗೂ ಗೊತ್ತು, ಆದರೆ ಸೂಪರ್‌ ಪ್ರಾಜೆಕ್ಟ್.‌ ಆದರೆ ಬೇಜಾರಾಗತ್ತೆ. ಮುಂದೆ ಸರಿ ಹೋಗುತ್ತೆ ಎನ್ನುವ ನಂಬಿಕೆ ಅನ್ನೋದು ಇದೆಯಲ್ಲ. ಆ ಪ್ರಾಜೆಕ್ಟ್ ರಿಲೀಸ್ ಆದ್ಮೇಲೆ ಹಬ್ಬ ಇದೆಯಲ್ಲ. ಅದರ ಬಗ್ಗೆ ಯೋಚನೆ ಮಾಡುತ್ತಿರುತ್ತೇನೆ. ನಾನು ನೆಗೆಟಿವ್ ಯೋಚನೆ ಮಾಡುವುದಿಲ್ಲʼʼಎಂದರು.

ಕಾಟೇರ ಯಶಸ್ಸಿನ ಬಳಿಕ ಡೆವಿಲ್‌ ಎಂಬ ಸಿನಿಮಾದಲ್ಲಿ ದರ್ಶನ್‌ ನಟಿಸುತ್ತಿದ್ದಾರೆ. ಈ ವರ್ಷ ಚಿತ್ರಮಂದಿರಗಳಿಗೆ ಆಗಮಿಸುವ ನಿರೀಕ್ಷೆಯಿತ್ತು. ಈ ಸಿನಿಮಾದ ಶೂಟಿಂಗ್‌ ಭರದಿಂದ ನಡೆಯುತ್ತಿತ್ತು. ಈ ಚಿತ್ರದ ಗ್ಲಿಂಪ್ಸ್‌ ವಿಡಿಯೋ ಕೂಡ ರಿಲೀಸ್‌ ಮಾಡಲಾಗಿತ್ತು.ಡೆವಿಲ್‌ನಲ್ಲಿ ಬಾಲಿವುಡ್‌ ನಟ ಮಹೇಶ್‌ ಮಂಜ್ರೇಕರ್‌ ಕೂಡ ನಟಿಸುತ್ತಿದ್ದಾರೆ. ಪ್ರಕಾಶ್‌ ವೀರ್‌ ನಿರ್ದೇಶನದ ಡೆವಿಲ್‌ ಸಿನಿಮಾದ ಭವಿಷ್ಯ ಏನಾಗಬಹುದು ಎಂಬ ಆತಂಕ ಫ್ಯಾನ್ಸ್‌ಗೆ ಇದೆ.

Continue Reading

ವಿದೇಶ

Mass Shooting: ಅಮೆರಿಕದಲ್ಲಿ ಮತ್ತೊಂದು ಸಾಮೂಹಿಕ ಗುಂಡಿನ ದಾಳಿ; ನಾಲ್ವರನ್ನು ಕೊಂದು ಆತ್ಮಹತ್ಯೆಗೆ ಶರಣಾದ ದುಷ್ಕರ್ಮಿ

Mass Shooting: ಅಮೆರಿಕದಲ್ಲಿ ಮತ್ತೊಂದು ಸಾಮೂಹಿಕ ಗುಂಡಿನ ದಾಳಿಯ ಪ್ರಕರಣ ನಡೆದಿದ್ದು, 5 ಮಂದಿ ಮೃತಪಟ್ಟಿದ್ದಾರೆ. ಉತ್ತರ ಲಾಸ್ ವೇಗಾಸ್‌ನಲ್ಲಿ ಈ ಘಟನೆ ನಡೆದಿದ್ದು, ವ್ಯಕ್ತಿಯೊಬ್ಬ ಎರಡು ಅಪಾರ್ಟ್‌ಮೆಂಟ್‌ ಸಂಕೀರ್ಣಗಳಲ್ಲಿ ಗುಂಡು ಹಾರಿಸಿ ನಾಲ್ವರನ್ನು ಕೊಂದು ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಘಟನೆಯಲ್ಲಿ 13 ವರ್ಷದ ಬಾಲಕಿ ಗಂಭೀರ ಗಾಯಗೊಂಡಿದ್ದು ಆಕೆಯನ್ನು ಸ್ಥಳೀಯ ಆಸ್ಪತೆಗೆ ದಾಖಲಿಸಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ.

VISTARANEWS.COM


on

Mass Shooting
Koo

ವಾಷಿಂಗ್ಟನ್‌: ಅಮೆರಿಕದಲ್ಲಿ ಮತ್ತೊಂದು ಸಾಮೂಹಿಕ ಗುಂಡಿನ ದಾಳಿ (Mass Shooting)ಯ ಪ್ರಕರಣ ನಡೆದಿದ್ದು, 5 ಮಂದಿ ಮೃತಪಟ್ಟಿದ್ದಾರೆ. ಉತ್ತರ ಲಾಸ್ ವೇಗಾಸ್‌ನಲ್ಲಿ ಈ ಘಟನೆ ನಡೆದಿದ್ದು, ವ್ಯಕ್ತಿಯೊಬ್ಬ ಎರಡು ಅಪಾರ್ಟ್‌ಮೆಂಟ್‌ ಸಂಕೀರ್ಣಗಳಲ್ಲಿ ಗುಂಡು ಹಾರಿಸಿ ನಾಲ್ವರನ್ನು ಕೊಂದು ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಕೃತ್ಯ ಎಸಗಿದವನನ್ನು 47 ವರ್ಷದ ಎರಿಕ್ ಆಡಮ್ಸ್ (Eric Adams) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ 13 ವರ್ಷದ ಬಾಲಕಿ ಗಂಭೀರ ಗಾಯಗೊಂಡಿದ್ದು ಆಕೆಯನ್ನು ಸ್ಥಳೀಯ ಆಸ್ಪತೆಗೆ ದಾಖಲಿಸಲಾಗಿದೆ.

ಘಟನೆ ವಿವರ

ಸೋಮವಾರ ರಾತ್ರಿ ಕಾಸಾ ನಾರ್ಟೆ ಡ್ರೈವ್‌ನ ಅಪಾರ್ಟ್‌ಮೆಂಟ್‌ ಸಂಕೀರ್ಣದಲ್ಲಿ ಗುಂಡಿನ ದಾಳಿ ನಡೆಯುತ್ತಿರುವ ಬಗ್ಗೆ ಪೊಲೀಸರಿಗೆ ಕರೆಯೊಂದು ಬಂದಿತ್ತು. ಕೂಡಲೇ ಪೊಲೀಸರು ಸ್ಥಳಕ್ಕೆ ಧಾವಿಸಿದ್ದರು. ಈ ವೇಳೆ ಗುಂಡೇಟಿನಿಂದ ಗಾಯಗೊಂಡ 40 ಮತ್ತು 50 ವರ್ಷ ಆಸುಪಾಸಿನ ಇಬ್ಬರು ಮಹಿಳೆಯರು ಕಂಡು ಬಂದಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅಷ್ಟರಲ್ಲಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದರು.

ʼʼಪಕ್ಕದ ಅಪಾರ್ಟ್‌ಮೆಂಟ್‌ ಆವರಣದಲ್ಲಿ ಇನ್ನೂ ಇಬ್ಬರ ಶವ ಪತ್ತೆಯಾಗಿದೆ. ಇದರಲ್ಲಿ 20-30 ವರ್ಷ ಆಸುಪಾಸಿನ ಮಹಿಳೆ ಮತ್ತು ಪುರುಷ ಸೇರಿದ್ದಾರೆ. ಗಂಭೀರವಾಗಿ ಗಾಯಗೊಂಡ 13 ವರ್ಷದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಆಕೆಯ ಸ್ಥಿತಿ ಚಿಂತಾಜನಕವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆʼʼ ಎಂದು ಪೊಲೀಸರು ತಿಳಿಸಿದ್ದಾರೆ.

ಬಳಿಕ ಪೊಲೀಸರಿಗೆ ಕೃತ್ಯ ಎಸಗಿರುವುದು ಆಡಮ್ಸ್ ಎನ್ನುವ ವಿಚಾರ ತಿಳಿದು ಬಂತು ಮತ್ತು ಆತನ ಪತ್ತೆಗಾಗಿ ಯೋಧ ಕಾರ್ಯ ಆರಂಭಿಸಿದರು. ಕೊನೆಗೆ ಆತನನ್ನು ಸುತ್ತುವರಿದ ಪೊಲೀಸರು ಬಂದೂಕು ಕೆಳಗಿಳಿಸುವಂತೆ ಸೂಚನೆ ನೀಡಿದರು. ಆದರೆ ಆತ ಇದನ್ನು ನಿರ್ಲಕ್ಷಿಸಿ ಸ್ವತಃ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಸುದ್ದಿ ಸಂಸ್ಥೆ ಸಿಎನ್‌ಎನ್‌ ತಿಳಿಸಿದೆ. ಈಸ್ಟ್ ಲೇಕ್ ಮೀಡ್ ಬೌಲೆವಾರ್ಡ್‌ನಲ್ಲಿ ವ್ಯಾಪಾರಿಯಾಗಿರುವ ಆಡಮ್ಸ್ ಯಾಕಾಗಿ ಈ ಕೃತ್ಯ ಎಸಗಿದ್ದಾನೆ ಎನ್ನುವುದು ತಿಳಿದು ಬಂದಿಲ್ಲ. ಈ ಬಗ್ಗೆ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: Mass Shooting: ಗುಂಡಿನ ದಾಳಿ ನಡೆಸಿದ ಬಂಧೂಕುದಾರಿಯನ್ನೇ ನೆಲಕ್ಕೆ ಕೆಡವಿದರು; ವಿಡಿಯೊ ಇಲ್ಲಿದೆ

ಹಿಂದೆಯೂ ನಡೆದಿತ್ತು

ಅಮೆರಿಕದ ಮೈನ್‌ ಪ್ರದೇಶದ ಲೆವಿಸ್ಟನ್‌ ಎಂಬಲ್ಲಿ ಕಳೆದ ಅಕ್ಟೋಬರ್‌ನಲ್ಲಿ ಅಪರಿಚಿತ ದುಷ್ಕರ್ಮಿಯೊಬ್ಬ ನಡೆಸಿದ ಸಾಮೂಹಿಕ ಗುಂಡಿನ ದಾಳಿಯಲ್ಲಿ ಕನಿಷ್ಠ 16 ಮಂದಿ ಮೃತಪಟ್ಟಿದ್ದರು. ಸುಮಾರು 60 ಜನರು ಗಾಯಗೊಂಡಿದ್ದರು. ಈ ವೇಳೆ ಬಾರ್‌ ಮತ್ತು ರೆಸ್ಟೋರೆಂಟ್‌ನ ಎರಡು ಕಡೆ ದಾಳಿ ನಡೆದಿತ್ತು. ಬಂದೂಕು ಸಂಸ್ಕೃತಿ ವ್ಯಾಪಕವಾಗಿರುವ ಅಮೆರಿಕದಲ್ಲಿ ಕಳೆದ ವರ್ಷ 500ಕ್ಕೂ ಹೆಚ್ಚು ಸಾಮೂಹಿಕ ಗುಂಡಿನ ದಾಳಿ ನಡೆದಿತ್ತು.

ರಷ್ಯಾದ ಚರ್ಚ್‌ಗಳ ಮೇಲೆ ದಾಳಿ ನಡೆಸಿದ ಬಂಧೂಕುದಾರಿಗಳು

ಮಾಸ್ಕೋ: ಈ ಮಧ್ಯೆ ರಷ್ಯಾದ ಉತ್ತರ ಕಾಕಸಸ್ ಪ್ರದೇಶದ ಡಾಗೆಸ್ತಾನ್‌ನಲ್ಲಿ ಭಾನುವಾರ ಅಪರಿಚಿತ ಬಂಧೂಕುದಾರಿಗಳು ಅಪ್ರಚೋದಿತವಾಗಿ ಎರಡು ಚರ್ಚ್‌ ಮತ್ತು ಪೊಲೀಸ್ ಪೋಸ್ಟ್ ಮೇಲೆ ಗುಂಡು ಹಾರಿಸಿದ್ದು, ಪೊಲೀಸರು ಮತ್ತು ಪಾದ್ರಿ ಸೇರಿದಂತೆ ಕನಿಷ್ಠ 15 ಮಂದಿ ಮೃತಪಟ್ಟಿದ್ದಾರೆ. ದಾಳಿಯ ಹಿಂದೆ ಭಯೋತ್ಪಾದಕರ ಕೈವಾಡದ ಶಂಕೆ ವ್ಯಕ್ತವಾಗಿದೆ.

Continue Reading

ಕ್ರೈಂ

Rain News: ಭಾರಿ ಮಳೆಗೆ ಮನೆ ಗೋಡೆ ಕುಸಿದು ನಾಲ್ವರು ಸಾವು

Rain News: ಉಳ್ಳಾಲ ತಾಲೂಕಿನ ಕುತ್ತಾರು ಮದನಿ ನಗರ ಎಂಬಲ್ಲಿ ದುರ್ಘಟನೆ ನಡೆದಿದ್ದು, ಅಬೂಬಕ್ಕರ್ ಎಂಬವರಿಗೆ ಸಂಬಂಧಿಸಿದ ಮನೆಯ ಗೋಡೆ ಕುಸಿದಿದೆ. ಇದು ಪಕ್ಕದ ಯಾಸಿರ್ ಎಂಬವರ ಮನೆಯ ಗೋಡೆಗೆ ಬಿದ್ದು ಭಾರೀ ಅವಘಡ ಸಂಭವಿಸಿತು.

VISTARANEWS.COM


on

rain news wall collapse 4 death
Koo

ಮಂಗಳೂರು: ಭಾರಿ ಮಳೆಯ (Rain news) ಪರಿಣಾಮ ಮನೆಯ ಗೋಡೆ ಕುಸಿದು (Wall collapse) ಬಿದ್ದು ನಾಲ್ವರು‌ ದುರ್ಮರಣ (four death) ಹೊಂದಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದಲ್ಲಿ (Ullala) ನಡೆದಿದೆ.

ಉಳ್ಳಾಲ ತಾಲೂಕಿನ ಕುತ್ತಾರು ಮದನಿ ನಗರ ಎಂಬಲ್ಲಿ ದುರ್ಘಟನೆ ನಡೆದಿದ್ದು, ಅಬೂಬಕ್ಕರ್ ಎಂಬವರಿಗೆ ಸಂಬಂಧಿಸಿದ ಮನೆಯ ಗೋಡೆ ಕುಸಿದಿದೆ. ಇದು ಪಕ್ಕದ ಯಾಸಿರ್ ಎಂಬವರ ಮನೆಯ ಗೋಡೆಗೆ ಬಿದ್ದು ಭಾರೀ ಅವಘಡ ಸಂಭವಿಸಿತು. ಮನೆಯೊಳಗಿದ್ದ ಯಾಸಿರ್(45), ಅವರ ಪತ್ನಿ ಮರಿಯಮ್ಮ(40) ಮಕ್ಕಳಾದ ರಿಯಾನ ಮತ್ತು ರಿಫಾನ ಸಾವಿಗೀಡಾದರು.

ರಾತ್ರಿ ಸುರಿದ ಭಾರೀ ಮಳೆಗೆ ಈ ದುರಂತ ಸಂಭವಿಸಿದೆ. ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಾಲ್ವರ ಮೃತದೇಹವನ್ನೂ ಸ್ಥಳೀಯರು ಹೊರತೆಗೆದಿದ್ದಾರೆ.

ಅನಂತಕುಮಾರ್‌ ಹೆಗಡೆ ಮನೆಯಲ್ಲಿ ಬೆಂಕಿ ಆಕಸ್ಮಿಕ

ಕಾರವಾರ: ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ (Anantkumar Hegde) ಮನೆಯಲ್ಲಿ ಬೆಂಕಿ ಆಕಸ್ಮಿಕ (Fire mishop) ಸಂಭವಿಸಿದೆ. ಇದು ಶಾರ್ಟ್‌ ಸರ್ಕ್ಯೂಟ್‌ನಿಂದ (Short Circuit) ಆಗಿದೆ ಎಂದು ತಿಳಿದುಬಂದಿದೆ.

ಶಿರಸಿಯ ಕೆಎಚ್‌ಬಿ ಕಾಲೋನಿಯಲ್ಲಿ ಇರುವ ಮಾಜಿ ಸಂಸದ ಅನಂತಕುಮಾರ್ ಹೆಗಡೆ ಮನೆಯಲ್ಲಿ ಈ ಘಟನೆ ನಡೆದಿದೆ. ಮನೆಯ ಮೇಲ್ಭಾಗದ ಜಿಮ್ ಮಾಡುವ ಕೊಠಡಿಯಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಸೃಷ್ಟಿಯಾದ ಪರಿಣಾಮ ಜಿಮ್ ಮಾಡುವ ಯಂತ್ರಗಳಿಗೆ ಅಲ್ಪ ಹಾನಿಯಾಗಿದೆ. ಇದನ್ನು ಹೊರತುಪಡಿಸಿದರೆ ಹೊಗೆಯಿಂದ ಗೋಡೆಗಳಿಗೆ ಹಾನಿಯಾಗಿದ್ದು ಅಂದಾಜು 50 ಸಾವಿರದಷ್ಟು ಹಾನಿಯಾಗಿರಬಹುದು ಎಂದು ಅಂದಾಜಿಸಲಾಗಿದೆ.

ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದು ಯಾವುದೇ ದೊಡ್ಡ ಹಾನಿಯಾಗಿಲ್ಲ ಎಂದು ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಸುನೀಲ್ ಅವರು ಮಾಹಿತಿ ನೀಡಿದ್ದಾರೆ.

ಕರ್ನಾಟಕದ ಪ್ರವಾಸಿಗರಿಗೆ ಬಾಸುಂಡೆ ಬರುವಂತೆ ಥಳಿಸಿದ ಗೋವಾ ಅರಣ್ಯ ಇಲಾಖೆ ಸಿಬ್ಬಂದಿ

ಬೆಳಗಾವಿ: ಕರ್ನಾಟಕದ ಪ್ರವಾಸಿಗರನ್ನು (Karnataka Tourists) ಗೋವಾದ ಅರಣ್ಯ ಇಲಾಖೆ (Goa Forest department) ಸಿಬ್ಬಂದಿ ಮನಬಂದಂತೆ ಥಳಿಸಿದ (Assault Case) ಘಟನೆ ಗೋವಾ ಗಡಿಯಲ್ಲಿರುವ ಸೂರಲ್ ಜಲಪಾತದ (Sural Falls) ಬಳಿ ನಡೆದಿದೆ. ಜಲಪಾತ ವೀಕ್ಷಣೆಗೆ ಹೋಗಿದ್ದ ಕನ್ನಡದ ಪ್ರವಾಸಿಗರಿಗೆ ಮೈಮೇಲೆ ಬಾಸುಂಡೆ ಬರುವ ಹಾಗೆ ಥಳಿಸಿ, ಅವರಿಂದ ಹಣ ಕಿತ್ತುಕೊಂಡು ವಿಕೃತಿ ಮೆರೆದಿದ್ದಾರೆ.

ಬೆಳಗಾವಿ ಮತ್ತು ಗೋವಾ ಗಡಿಯಲ್ಲಿರುವ ಖಾನಾಪೂರ ತಾಲೂಕಿನ ಕಣಕುಂಬಿ ಬಳಿಯ ಸೂರಲ್ ಜಲಪಾತ ಬಳಿ ಇದು ನಡೆದಿದೆ. ಮಳೆಗಾಲ ಆರಂಭ ಆಗುತ್ತಿದ್ದಂತೆ ಕರ್ನಾಟಕದಿಂದ ಅತಿಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಇಲ್ಲಿಗೆ ತೆರಳುತ್ತಾರೆ. ಇದನ್ನೇ ಬಂಡವಾಳ ಮಾಡಿಕೊಂಡಿರುವ ಗೋವಾ ಅರಣ್ಯ ಇಲಾಖೆ ಸಿಬ್ಬಂದಿ ಪ್ರವಾಸಿಗರಿಂದ ಹೆಚ್ಚಿನ ಹಣ ವಸೂಲಿ ಮಾಡುವುದಲ್ಲದೆ, ಪ್ರಶ್ನಿಸಿದರೆ ಮೈಮೇಲೆ ಏರಿ ಬರುತ್ತಾರೆ.

ನಿರಂತರವಾಗಿ ಪ್ರವಾಸಿಗರಿಂದ ಒಂದಿಲ್ಲೊಂದು ಕಾರಣ ಹೇಳಿ ಹಣ ಕಿತ್ತುಕೊಳ್ಳುತ್ತಿರುವ ಆರೋಪ ಇವರ ಮೇಲಿದೆ. ಸೂರಲ್ ಜಲಪಾತದ ಪೊಲೀಸರು, ಅರಣ್ಯ ಇಲಾಖೆ ಅಧಿಕಾರಿಗಳಿಂದ ಹಣ ವಸೂಲಿ ಆರೋಪ ಮೊದಲಿನಿಂದಲೂ ಇದೆ. ಹುಕ್ಕೇರಿ ತಾಲೂಕಿನ ಸಂಕೇಶ್ವರದ ಐವರು ಯುವಕರ ತಂಡವನ್ನು ಇವರು ತಡೆದು ಥಳಿಸಿದ್ದಾರೆ. ಬೆನ್ನು, ಕಾಲು ಕೈಗೆ ಬಾಸುಂಡೆ ಬರುವ ಹಾಗೆ ಥಳಿಸಿ ವಿಕೃತಿ ತೋರಿದ್ದಾರೆ.

ಹಲ್ಲೆ ಮಾಡಿದ್ದಲ್ಲದೇ ಪರ್ಸ್‌ನಲ್ಲಿದ್ದ ಹಣವನ್ನೂ ಕಿತ್ತುಕೊಂಡಿದ್ದಾರೆ. 1 ಸಾವಿರ ಫೋನ್ ಪೇ ಮಾಡಿಸಿಕೊಂಡಿದ್ದು ಸೇರಿ ಒಟ್ಟು 9 ಸಾವಿರ ರೂಪಾಯಿ ಹಣ ಕಿತ್ತುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ದೌರ್ಜನ್ಯವನ್ನು ಸಾವಿರಾರು ಪ್ರವಾಸಿಗರು ಅನುಭವಿಸುತ್ತಿದ್ದು, ಯಾರೂ ದೂರು ನೀಡುತ್ತಿಲ್ಲ ಎಂದು ಹಲ್ಲೆಗೊಳಗಾದವರು ಅಲವತ್ತುಕೊಂಡಿದ್ದಾರೆ. ಗೋವಾ ಅರಣ್ಯ ಇಲಾಖೆಯ ಅಧಿಕಾರಿಗಳು ಇವರ ದೂರನ್ನು ಕೇಳಿಸಿಕೊಂಡಿಲ್ಲ.

ಇದನ್ನೂ ಓದಿ: Contaminated Water : ಬೆಳಗಾವಿ, ಕೋಲಾರದಲ್ಲಿ ಕಲುಷಿತ ನೀರು ಸೇವಿಸಿ ಇಬ್ಬರು ಸಾವು

Continue Reading
Advertisement
IRCTC
ದೇಶ5 mins ago

IRCTC: ಆನ್‌ಲೈನ್‌ನಲ್ಲಿ ರೈಲ್ವೇ ಟಿಕೆಟ್‌ ಬುಕ್ಕಿಂಗ್‌ ಮಾಡೋ ಮುನ್ನ ಹೊಸ ನಿಯಮದ ಬಗ್ಗೆ ಇರಲಿ ಗಮನ!

1983 World Cup
ಕ್ರೀಡೆ9 mins ago

1983 WC Win Anniversary: ಚೊಚ್ಚಲ ಏಕದಿನ ವಿಶ್ವಕಪ್ ಗೆಲುವಿನ​ ಸವಿ ನೆನಪನ್ನು ವಿಂಡೀಸ್​ನಲ್ಲಿ ಕೇಕ್​ ಕತ್ತರಿಸಿ ಸಂಭ್ರಮಿಸಿದ ರವಿಶಾಸ್ತ್ರಿ, ಗವಾಸ್ಕರ್, ​ಬಿನ್ನಿ

Viral Video
Latest10 mins ago

Viral Video: ಪೇಪರ್ ನೋಡದೆ ಪ್ರಮಾಣ ವಚನ ಸ್ವೀಕರಿಸಿ ಬೆರಗುಗೊಳಿಸಿದ ಅತ್ಯಂತ ಕಿರಿಯ ಸಂಸದೆ!

cm siddaramaiah water price hike
ಕರ್ನಾಟಕ15 mins ago

CM Siddaramaiah: ತೈಲ, ಹಾಲು ಆಯ್ತು; ಮುಂದಿನ ಸರದಿಯಲ್ಲಿ ನೀರು, ಆಟೋ, ಬಸ್‌ ಟಿಕೆಟ್‌ ದರ ಏರಿಕೆ ಗ್ಯಾರಂಟಿ

Neha Gowda in saree with baby bump
ಸ್ಯಾಂಡಲ್ ವುಡ್16 mins ago

Neha Gowda: ಸೀರೆಯುಟ್ಟು ಸಿಂಪಲ್‌ ಆಗಿ ಗಂಡನ ಜತೆ ಪೋಸ್‌ ಕೊಟ್ಟ ಗರ್ಭಿಣಿ ನೇಹಾ ಗೌಡ!

Viral Video
Latest17 mins ago

Viral Video : ‘ಅಲ್ಲಾಹು ಅಕ್ಬರ್’ ಎನ್ನದ ಹಿಂದೂ ಬಾಲಕನಿಗೆ ಎಂಜಲು ನೆಕ್ಕಲು ಹೇಳಿದ ಮುಸ್ಲಿಂ ಯುವಕರು

Lok Sabha Speaker
ದೇಶ19 mins ago

Lok Sabha Speaker: ಎರಡನೇ ಬಾರಿಗೆ ಲೋಕಸಭೆ ಸ್ಪೀಕರ್‌ ಆಗಿ ಓಂ ಬಿರ್ಲಾ ಆಯ್ಕೆ

Kaagada movie released on 5th July
ಕರ್ನಾಟಕ23 mins ago

Kannada New Movie: ಟ್ರೇಲರ್ ಮೂಲಕ ಸದ್ದು ಮಾಡುತ್ತಿರುವ “ಕಾಗದ” ಜುಲೈ 5ರಂದು ತೆರೆಗೆ

prajwal revanna case 4th
ಕ್ರೈಂ56 mins ago

Prajwal Revanna Case: ʼಪ್ರತಿ ದಿನ ಫೋನ್‌ ಮಾಡಿ ಬಟ್ಟೆ ಕಳಚಲು ಹೇಳ್ತಿದ್ದ…ʼ ಪ್ರಜ್ವಲ್‌ ವಿರುದ್ಧ ದಾಖಲಾದ 4ನೇ ದೂರಿನಲ್ಲಿ ಏನಿದೆ?

Famous Serial Actress kasthuri shankar half naked photos leaked
ಟಾಲಿವುಡ್1 hour ago

Famous Serial Actress: ಖ್ಯಾತ ಧಾರಾವಾಹಿ ನಟಿಯ ಅರೆನಗ್ನ ಫೋಟೊಗಳು ಲೀಕ್‌!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ5 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ6 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌