Amala Akkineni reacts to poor reviews of Akhil Akkineni ‘Agent’ Akhil Akkineni: ಮಗನನ್ನು ಟ್ರೋಲ್‌ ಮಾಡಿದವರಿಗೆ ಅಮಲಾ ಅಕ್ಕಿನೇನಿ ಕ್ಲಾಸ್‌ - Vistara News

South Cinema

Akhil Akkineni: ಮಗನನ್ನು ಟ್ರೋಲ್‌ ಮಾಡಿದವರಿಗೆ ಅಮಲಾ ಅಕ್ಕಿನೇನಿ ಕ್ಲಾಸ್‌

ಸಿನಿಮಾ ಕೂಡ ಹೆಚ್ಚು ಟ್ರೋಲ್‌ಗೆ ಗುರಿಯಾಗಿದೆ. ಅಮಲಾ ಅಕ್ಕಿನೇನಿ (Akhil Akkineni) ಅಖಿಲ್​ರ ತಾಯಿ ಅಮಲಾ, ಮಗನ ಬೆಂಬಲಕ್ಕೆ ನಿಂತಿದ್ದು, ಟ್ರೋಲ್ ಮಾಡುತ್ತಿರುವವರಿಗೆ ತಿರುಗೇಟು ನೀಡಿದ್ದಾರೆ.

VISTARANEWS.COM


on

Amala Akkineni reacts to poor reviews of Akhil Akkineni ‘Agent’
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಅಖಿಲ್ ಅಕ್ಕಿನೇನಿ (Akhil Akkineni) ಅವರ ಬಹು ನಿರೀಕ್ಷಿತ ಚಿತ್ರ ‘ಏಜೆಂಟ್’ ಏಪ್ರಿಲ್‌ 28ರಂದು ಬಿಡುಗಡೆಗೊಂಡಿತು. ಅಷ್ಟಾಗಿ ಯಶಸ್ವಿ ಪ್ರದರ್ಶನ ಕಂಡಿಲ್ಲ. ಸಿನಿಮಾ ಕೂಡ ಹೆಚ್ಚು ಟ್ರೋಲ್‌ಗೆ ಗುರಿಯಾಗಿದೆ. ಅಮಲಾ ಅಕ್ಕಿನೇನಿ ಅಖಿಲ್​ರ ತಾಯಿ ಅಮಲಾ, ಮಗನ ಬೆಂಬಲಕ್ಕೆ ನಿಂತಿದ್ದು, ಟ್ರೋಲ್ ಮಾಡುತ್ತಿರುವವರಿಗೆ ತಿರುಗೇಟು ನೀಡಿದ್ದಾರೆ.

ಅಮಲಾ ಪೋಸ್ಟ್‌ನಲ್ಲಿ ʻʻಈ ಟ್ರೋಲ್‌ಗಳು ಅಭದ್ರತೆ ಅನುಭವಿಸುತ್ತಿರುವವರು ಹಾಗೂ ಏನಾದರೂ ಸಾಧಿಸಲು ವಿಫಲವಾದವರು ಮಾತ್ರ ಮಾಡುತ್ತಾರೆ. ನಾನು ನಿನ್ನೆ ಏಜೆಂಟ್ ಸಿನಿಮಾ ವೀಕ್ಷಿಸಿದೆ. ಚಿತ್ರವನ್ನು ಪ್ರಾಮಾಣಿಕವಾಗಿ ಆನಂದಿಸಿದೆ. ಕೆಲವು ನ್ಯೂನತೆಗಳನ್ನು ಹೊಂದಿದ್ದರೂ, ನೀವು ಅದನ್ನು ತೆರೆದ ಮನಸ್ಸಿನಿಂದ ನೋಡಿದರೆ, ನೀವು ಆಶ್ಚರ್ಯಚಕಿತರಾಗುವಿರಿʼʼ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲದೇ ʻʻಚಿತ್ರಮಂದಿರಗಳಲ್ಲಿ ಅರ್ಧದಷ್ಟು ಪ್ರೇಕ್ಷಕರು ಹೆಂಗಸರು, ತಾಯಂದಿರು ಮತ್ತು ಅಜ್ಜಿಯರು ಮತ್ತು ಅವರ ಗಂಡ ಮತ್ತು ಮಕ್ಕಳಿದ್ದರು. ಆ್ಯಕ್ಷನ್ ಸೀಕ್ವೆನ್ಸ್‌ಗಳು ಬಂದಿದ್ದಾಗ ಕಿರುಚಾಟಗಳು ಕೇಳಿ ಬಂದವು. ನನಗೆ ಭರವಸೆ ಇದೆ, ಮುಂದಿನದ್ದು ಇದಕ್ಕಿಂತಲೂ ದೊಡ್ಡದಾಗಿ ಹಾಗೂ ಬೆಟರ್ ಆಗಿ ಇರುತ್ತದೆ” ಎಂದಿದ್ದಾರೆ ಅಮಲಾ.

ಸಿನಿಮಾವನ್ನು ಸುರೇಂದರ್ ರೆಡ್ಡಿ ನಿರ್ಮಿಸಿದ್ದಾರೆ. ಮಮ್ಮುಟ್ಟಿ ಚಿತ್ರದ ಪ್ರಮುಖ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಸೈರಾ ನರಸಿಂಹ ರೆಡ್ಡಿ’ ಸಿನಿಮಾ ಖ್ಯಾತಿಯ ಸುರೇಂದ್ರ ರೆಡ್ಡಿ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ವಕ್ಕಂತಂ ವಂಶಿ ಕಥೆ ಬರೆದಿರುವ ಚಿತ್ರವನ್ನು ಎಕೆ ಎಂಟರ್‌ಟೈನ್‌ಮೆಂಟ್ಸ್ ಮತ್ತು ಸುರೇಂದರ್ 2 ಸಿನಿಮಾ ಬ್ಯಾನರ್‌ನಡಿ ರಾಮಬ್ರಹ್ಮ ಸುಂಕರ ನಿರ್ಮಾಣ ಮಾಡಿದ್ದಾರೆ. ಚಾಕೊಲೇಟ್ ಬಾಯ್ ಅವತಾರದಲ್ಲಿಯೇ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದ ನಟ ಇದೇ ಮೊದಲ ಬಾರಿಗೆ ಈ ಅವತಾರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: Akhil Akkineni: ʻಏಜೆಂಟ್‌ʼ ಸಿನಿಮಾ ಮೆಚ್ಚಿದ ಪ್ರೇಕ್ಷಕರು: ʻಒನ್ ಮ್ಯಾನ್ ಶೋʼ ಅಂದ್ರು ನೆಟ್ಟಿಗರು, ಇಲ್ಲಿದೆ ಟ್ವಿಟರ್ ವಿಮರ್ಶೆ!

ಇನ್ನೂ ಗಮನಿಸಬೇಕಾದ ಸಂಗತಿಯೆಂದರೆ, ಅವರು ತಮ್ಮ ತೂಕವನ್ನು ಇಳಿಕೆ ಮಾಡಿಕೊಂಡಿದ್ದಾರೆ. ಸೆನ್ಸೇಷನಲ್ ಮ್ಯೂಸಿಕ್ ಕಂಪೋಸರ್ ಹಿಪ್ ಹಾಪ್ ತಮಿಝಾ ಸಂಗೀತ ನೀಡಿದ್ದಾರೆ. ಚಿತ್ರಕ್ಕೆ ವಕ್ಕನಾಥಂ ವಂಶಿ ಕಥೆ ಬರೆದಿದ್ದು, ರಸೂಲ್ ಎಲ್ಲೂರು ಛಾಯಾಗ್ರಹಣ ಮಾಡಿದ್ದು, ರಾಷ್ಟ್ರ ಪ್ರಶಸ್ತಿ ವಿಜೇತ ನವೀನ್ ನೂಲಿ ಸಂಕಲನ, ಅವಿನಾಶ್ ಕೊಲ್ಲಾ ಕಲಾ ನಿರ್ದೇಶನ ಚಿತ್ರಕ್ಕಿದೆ. ಅಜಯ್ ಸುಂಕರ, ಪತಿ ದೀಪಾ ರೆಡ್ಡಿ ಸಹ ನಿರ್ಮಾಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಾಲಿವುಡ್

Actress Akshita: ಕನ್ನಡತಿ ಅಕ್ಷಿತಾ ಈಗ ತಮಿಳು ಚಿತ್ರದ ನಾಯಕಿ!

Actress Akshita : ಕನ್ನಡದ ಸಿದ್ಲಿಂಗು-2 ಚಿತ್ರವನ್ನು ನಿರ್ಮಾಣ ಮಾಡಿದ್ದ ಬ್ಯಾನರಿನಲ್ಲಿಯೇ ಈ ಚಿತ್ರವೂ ತಯಾರಾಗುತ್ತಿದೆ. ಇದು ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ಏಕಕಾಲದಲ್ಲಿಯೇ ರೂಪುಗೊಳ್ಳಲಿದೆ. ವಿಶೇಷವೆಂದರೆ, ಅಕ್ಷಿತಾ ಬಯಸಿದಂಥಾ ಪಾತ್ರವೇ ಇಲ್ಲಿ ಸಿಕ್ಕಿದೆ. ಸದ್ಯದ ಮಟ್ಟಿಗೆ ಈ ಸಿನಿಮಾ ಬಗೆಗಾಗಲಿ, ಅಕ್ಷಿತಾರ ಪಾತ್ರದ ಬಗೆಗಾಗಲಿ ಹೆಚ್ಚೇನೂ ಮಾಹಿತಿ ಜಾಹೀರು ಮಾಡುವಂತಿಲ್ಲ.

VISTARANEWS.COM


on

Actress Akshita entry to kollywood cinema
Koo

ಬೆಂಗಳೂರು: ಕನ್ನಡದ ನಟ ನಟಿಯರು ಬೇರೆ ಭಾಷೆಗಳಲ್ಲಿ ಮಿಂಚುವುದು ಹೊಸತೇನಲ್ಲ. ಆದರೆ, ಬೇರೆ ಭಾಷೆಗಳಲ್ಲಿ ಜನಪ್ರಿಯತೆ ದಕ್ಕಿದ ಮೇಲೂ ಕನ್ನಡತನವನ್ನೇ ಧ್ಯಾನಿಸುತ್ತಾ, ತಾಯ್ನೆಲದ ಪ್ರೇಕ್ಷಕರನ್ನು ಚೆಂದದ ಪಾತ್ರಗಳ ಮೂಲಕ ಪ್ರಧಾನ ಆದ್ಯತೆಯಾಗಿಸಿಕೊಂಡವರ ಸಂಖ್ಯೆ ಕಡಿಮೆಯಿದೆ. ಆ ಸಾಲಿಗೆ ಸೇರುವ ಗುಣ ಹೊಂದಿರುವವರು ಅಕ್ಷಿತಾ ಬೋಪಯ್ಯ. ಕನ್ನಡದ ಒಂದಷ್ಟು ಸಿನಿಮಾಗಳಲ್ಲಿ ನಾಯಕಿಯಾಗಿ ನಟಿಸಿ ಪ್ರೇಕ್ಷಕರ ಮನಗೆದ್ದಿರುವ ಅಕ್ಷಿತಾ, ಕಾಲದ ಸೆಳವಿಗೆ ಸಿಕ್ಕು ತಮಿಳು ಸೀರಿಯಲ್ ಜಗತ್ತಿಗೆ ಅಡಿಯಿರಿಸಿದ್ದರು. ಈವತ್ತಿಗೆ ಆಕೆಯ ಪಾಲಿಗೆ ತಮಿಳು ಕಿರುತೆರೆಯಲ್ಲಿ ದೊಡ್ಡ ಮಟ್ಟದ ಗೆಲುವು ಸಿಕ್ಕಿದೆ. ದೊಡ್ಡ ಸಂಖ್ಯೆಯ ಅಭಿಮಾನಿ ಬಳಗವನ್ನೂ ಸಂಪಾದಿಸಿಕೊಂಡಿರುವ ಅಕ್ಷಿತಾ ಈಗ ತಮಿಳು ಚಿತ್ರವೊಂದರ ಮೂಲಕ ನಾಯಕಿಯಾಗಿ ಬಡ್ತಿ ಪಡೆದುಕೊಂಡಿದ್ದಾರೆ.

ʻಬ್ರಹ್ಮಚಾರಿʼ, ʻಐ ಲವ್ ಯೂʼ, ʻಶಿವಾರ್ಜುನʼ ಮುಂತಾದ ಚಿತ್ರಗಳ ಮೂಲಕ ಅಕ್ಷಿತಾ ಕನ್ನಡದ ಪ್ರೇಕ್ಷಕರಿಗೆಲ್ಲ ಪರಿಚಿತರಾಗಿದ್ದಾರೆ. ಈ ನಡುವೆ ತಮಿಳು ಸೀರಿಯಲ್‌ಗಳಾಗಿ ನಟಿಸುವ ಮೂಲಕ ಭಾರೀ ಜನಪ್ರಿಯತೆಯನ್ನೂ ಪಡೆದುಕೊಂಡಿದ್ದಾರೆ. ಹಾಗೆ ಅಕ್ಷಿತಾ ನಟಿಸುತ್ತಿದ್ದ ಪ್ರಸಿದ್ಧ ತಮಿಳು ಧಾರಾವಾಹಿ ನಾಲ್ಕು ತಿಂಗಳ ಹಿಂದೆ ಮುಕ್ತಾಯಗೊಂಡಿತ್ತು. ಅದಾದ ನಂತರ ಸೀರಿಯಲ್ಲುಗಳ ಅವಕಾಶವಿದ್ದರೂ ಕೂಡಾ ಅಕ್ಷಿತಾರ ಆಸಕ್ತಿ ಹೊರಳಿಕೊಂಡಿದ್ದದ್ದು ಸಿನಿಮಾ ರಂಗದತ್ತ. ತಮಿಳು ಕಿರುತೆರೆ ಜಗತ್ತಿನ ಮುಖ್ಯ ನಾಯಕಿಯಾಗಿ ದಾಖಲಾಗಿದ್ದ ಅಕ್ಷಿತಾ, ಸಿನಿಮಾದಲ್ಲಿ ನಟಿಸುವ ಮೂಲಕ ಏಕತಾನತೆಯನ್ನು ದಾಟಿಕೊಳ್ಳುವ ನಿರ್ಧಾರ ಮಾಡಿದ್ದರು.
ಅಂಥಾ ಹೊತ್ತಿನಲ್ಲಿ ತಮಿಳಿನಲ್ಲೊಂದು ಚೆಂದದ ಅವಕಾಶ ಸಿಕ್ಕಿದೆ.

ಕನ್ನಡದ ಸಿದ್ಲಿಂಗು-2 ಚಿತ್ರವನ್ನು ನಿರ್ಮಾಣ ಮಾಡಿದ್ದ ಬ್ಯಾನರಿನಲ್ಲಿಯೇ ಈ ಚಿತ್ರವೂ ತಯಾರಾಗುತ್ತಿದೆ. ಇದು ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ಏಕಕಾಲದಲ್ಲಿಯೇ ರೂಪುಗೊಳ್ಳಲಿದೆ. ವಿಶೇಷವೆಂದರೆ, ಅಕ್ಷಿತಾ ಬಯಸಿದಂಥಾ ಪಾತ್ರವೇ ಇಲ್ಲಿ ಸಿಕ್ಕಿದೆ. ಸದ್ಯದ ಮಟ್ಟಿಗೆ ಈ ಸಿನಿಮಾ ಬಗೆಗಾಗಲಿ, ಅಕ್ಷಿತಾರ ಪಾತ್ರದ ಬಗೆಗಾಗಲಿ ಹೆಚ್ಚೇನೂ ಮಾಹಿತಿ ಜಾಹೀರು ಮಾಡುವಂತಿಲ್ಲ. ಆದರೆ, ಒಂದೊಳ್ಳ್ಳೆ ತಂಡ, ಹೊಸತೆನ್ನಿಸುವಂಥಾ ಕಥಾನಕದೊಂದಿಗೆ ಈ ಸಿನಿಮಾ ತಯಾರಾಗುತ್ತಿರುವ ಬಗ್ಗೆ ಅಕ್ಷಿತಾರೊಳಗೊಂದು ಖುಷಿ ಇದೆ. ಸದ್ಯ ಕೊಡಗಿನ ಸುತ್ತಮುತ್ತ ಸದರಿ ಸಿನಿಮಾದ ಚಿತ್ರೀಕರಣ ಸಂಪೂರ್ಣಗೊಂಡಿದೆ.

ಇದನ್ನೂ ಓದಿ: Vinay Gowda: ʻಡೆವಿಲ್ʼ ಸಿನಿಮಾದಲ್ಲಿ ನಾನೇ ವಿಲನ್, ಪ್ರಾಜೆಕ್ಟ್‌ ಏನಾಗುತ್ತೋ ಗೊತ್ತಿಲ್ಲ ಎಂದ ʻಬಿಗ್ ಬಾಸ್ʼ ಆನೆ ವಿನಯ್ ಗೌಡ!

ತಮಿಳು ಒಂದು ಹಂತದಲ್ಲಿ ಅಕ್ಷಿತಾ ಪಾಲಿಗೆ ಗುರುತಿರದ ಭಾಷೆಯಾಗಿತ್ತು. ಆ ಭಾಷೆಯಲ್ಲೇ ಧಾರಾವಾಹಿಯೊಂದರ ನಾಯಕಿಯಾಗೋ ಅವಕಾಶ ಕೂಡಿ ಬಂದಾಗ, ಪ್ರತಿಭೆಯ ಬಲದಿಂದಲೇ ಅದನ್ನು ತಮ್ಮದಾಗಿಸಿಕೊಂಡಿದ್ದವರು ಅಕ್ಷಿತಾ. ಹಾಗೆ ತಮಿಳು ಕಿರುತೆರೆಗೆ ತೆರಳಿ ಅಲ್ಲಿನ ಪ್ರೇಕ್ಷಕರನ್ನೆಲ್ಲ ಆವರಿಸಿಕೊಂಡಿರುವ ಅಕ್ಷಿತಾ ಪಾಲಿಗೆ, ಅಲ್ಲಿಯೇ ನಟಿಯಾಗಿ ನೆಲೆಗಾಣುವ ವಿಪುಲ ಅವಕಾಶಗಳಿದ್ದಾವೆ. ಆದರೂ ಕೂಡಾ ಕನ್ನಡ ಚಿತ್ರರಂಗವೇ ತನ್ನ ಪಾಲಿನ ಖಾಯಂ ನೆಲೆ ಅಂದುಕೊಂಡಿರುವ ಅವರು, ಈಗಾಗಲೇ ಕರ್ನಾಟಕದ ಅಳಿಯ, ಮಿಸ್ಟರ್ ಆಂಡ್ ಮಿಸೆಸ್ ಎಂಬೆರಡು ಚಿತ್ರಗಳಲ್ಲಿ ನಟಿಸಿದ್ದಾರೆ. ಅವೆರಡೂ ಸನಿಮಾಗಳೀಗ ಬಿಡುಗಡೆಯ ಹೊಸ್ತಿಲಿನಲ್ಲಿವೆ.

ಹೀಗೆ ಪರಭಾಷಾ ನೆಲದಲ್ಲಿಯೂ ನೆಲೆ ಕಂಡುಕೊಂಡು, ಕನ್ನಡ ಚಿತ್ರರಂಗದಲ್ಲಿಯೂ ಮಿಂಚುವ ಲಕ್ಷಣಗಳನ್ನ ಹೊಂದಿರುವ ಅಕ್ಷಿತಾ ಕೊಡಗಿನವರು. ಬಿಎಸ್‍ಸಿ ಪದವೀಧರೆಯಾಗಿರೋ ಅಕ್ಷಿತಾ ಕ್ಲಾಸಿಕಲ್ ಡ್ಯಾನ್ಸರ್ ಕೂಡಾ ಹೌದು. ಕುಟುಂಬದಲ್ಲಿ ಸಿನಿಮಾ ಹಿನ್ನಲೆ ಇಲ್ಲದಿದ್ದರೂ ಕೂಡಾ ಆರಂಭದಿಂದಲೇ ನಟಿಯಾಗೋ ಕನಸು ಸಾಕಿಕೊಂಡಿದ್ದವರು ಅಕ್ಷಿತಾ. ಪದವಿ ಮುಗಿಯುತ್ತಲೇ ಕೆಲಸಕ್ಕೆ ಸೇರಿಕೊಳ್ಳುವ ಸಂದರ್ಭ ಬಂದಾಗ ಸೀದಾ ತನ್ನ ಕನಸಿನ ಹಾದಿಯಲ್ಲಿ ಧೈರ್ಯವಾಗಿ ಹೆಜ್ಜೆಯೂರಿದ್ದ ಈಕೆ, ಸಾಯಿ ಕುಮಾರ್ ನಟಿಸಿದ್ದ ರಿಯಲ್ ಪೊಲೀಸ್ ಚಿತ್ರದ ಪಾತ್ರವೊಂದರಲ್ಲಿ ನಟಿಸಿದ್ದರು. ಆ ಮೂಲಕ ಎಂಟ್ರಿ ಪಡೆದುಕೊಂಡಿದ್ದ ಅಕ್ಷಿತಾ ಆ ನಂತರದಲ್ಲಿ ಒಂದಷ್ಟು ಚಿತ್ರಗಳಲ್ಲಿ ಸಹನಟಿಯಾಗಿ ನಟಿಸಿ, ನಂತರ ನಾಯಕಿಯಾಗಿಯೂ ಹೊರಹೊಮ್ಮಿದ್ದರು.

ಈ ನಡುವೆ ತಮಿಳು ಸೀರಿಯಲ್ಲುಗಳ ಅವಕಾಶ ಸಿಕ್ಕಿ, ಅಲ್ಲಿ ಪ್ರಸಿದ್ಧಿ ಬಂದರೂ ಕನ್ನಡವೇ ಅಕ್ಷಿತಾರ ಪಾಲಿಗೆ ಪ್ರಧಾನ ಆದ್ಯತೆಯಾಗಿತ್ತು. ಕನ್ನಡದ ನೆಲೆಯಿಂದಲೇ ಬೇರೆ ಬೇರೆ ಭಾಷೆಗಳಲ್ಲಿಯೂ ನಟಿಸಬೇಕೆಂಬುದು ಅವರ ಬಯಕೆ. ಓರ್ವ ನಟಿಯಾಗಿ ಅಕ್ಷಿತಾರದ್ದು ಭಿನ್ನ ಅಭಿರುಚಿ. ಸಿಕ್ಕ ಅವಕಾಶಗಳನ್ನು ಅಳೆದೂ ತೂಗಿ ಒಪ್ಪಿಕೊಳ್ಳುವ ಈಕೆಯ ಪ್ರಧಾನ ಆದ್ಯತೆ ಕಂಟೆಂಟ್ ಓರಿಯಂಟೆಡ್ ಸಿನಿಮಾಗಳೇ. ನಟನೆಗೆ ಅವಕಾಶವಿರುವ ಭಿನ್ನ ಪಾತ್ರಗಳಲ್ಲಿ ಮಿಂಚುವ ಆಸೆ ಹೊಂದಿರುವ ಅಕ್ಷಿತಾ ಈಗ ತಮಿಳಿನಲ್ಲಿ ನಾಯಕಿಯಾಗಿ ಅವತರಿಸಿದ್ದಾರೆ. ತೆಲುಗಿಗೂ ಎಂಟರಿ ಕೊಡುತ್ತಿದ್ದಾರೆ. ಇದೇ ಹೊತ್ತಿನಲ್ಲಿ ಕನ್ನಡದಲ್ಲಿಯೂ ಒಂದಷ್ಗಟು ಒಳ್ಳೆ ಅವಕಾಶಗಳು ಅವರನ್ನು ಅರಸಿಕೊಂಡು ಬರುತ್ತಿವೆ. ಸ್ತ್ರೀ ಪ್ರಧಾನ ಚಿತ್ರದ ಕನಸು ಹೊಂದಿರೋ ಅಕ್ಷಿತಾ, ಅಂಥಾದ್ದೊಂದು ಅಮೋಘ ಅವಕಾಶ ಕನ್ನಡದಿಂದಲೇ ಸಿಗುವ ನಿರೀಕ್ಷೆ ಹೊಂದಿದ್ದಾರೆ.

Continue Reading

ಸ್ಯಾಂಡಲ್ ವುಡ್

Tharun Sudhir: ದರ್ಶನ್‌ ತಮಾಷೆಯಿಂದಲೇ ಹುಟ್ಟಿತು ತರುಣ್‌- ಸೋನಲ್‌ ಪ್ರೀತಿ? ಇಬ್ಬರ ಲವ್ ಸ್ಟೋರಿ ಶುರುವಾಗಿದ್ದೇಗೆ?

Tharun Sudhir: ಚೌಕ’ ಚಿತ್ರದ ಮೂಲಕ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದ ತರುಣ್ ಮುಂದೆ ಒಂದರ ಹಿಂದೆಯಂತೆ ಎರಡು ಹಿಟ್ ಸಿನಿಮಾಗಳನ್ನು ಕೊಟ್ಟರು. ಇದೀಗ ತರುಣ್ 4ನೇ ಸಿನಿಮಾ ತಯಾರಿಯಲ್ಲಿದ್ದಾರೆ. ಖಳನಟ ಸುಧೀರ್ ಕಿರಿಯಪುತ್ರ ತರುಣ್ ಮದುವೆ ಬಗ್ಗೆ ಸಾಕಷ್ಟು ವದಂತಿಗಳು ಹಬ್ಬಿವೆ. ಈಗಾಗಲೇ ತರುಣ್‌ ಅವರ ಮದುವೆ ಫಿಕ್ಸ್‌ ಆಗಿದ್ದು, ಎರಡು ತಿಂಗಳಲ್ಲಿ ಮದುವೆ ಫಿಕ್ಸ್‌ ಎನ್ನುವ ವದಂತಿ ಹಬ್ಬಿದೆ.

VISTARANEWS.COM


on

Tharun Sudhir and sonal monteiro love story support By Darshan
Koo

ಬೆಂಗಳೂರು: ನಟಿ ಸೋನಾಲ್ ಮಂಥೆರೊ (sonal monteiro) ಹಾಗೂ ನಿರ್ದೇಶಕ ತರುಣ್ ಸುಧೀರ್ (Tharun Sudhir) ಮದುವೆಯಾಗುವುದು ಬಹುತೇಕ ಫಿಕ್ಸ್‌ ಎನ್ನಲಾಗುತ್ತಿದೆ. ತರುಣ್ ಸುಧೀರ್ ತಾಯಿ ಮಾಲತಿ ಸುಧೀರ್ ಈ ಮದುವೆ ವಿಚಾರವನ್ನು ಖಚಿತಪಡಿಸಿದ್ದಾರೆ ಎಂದು ವರದಿಯಾಗಿದೆ. ಶೀಘ್ರದಲ್ಲೇ ಸುದ್ದಿಗೋಷ್ಠಿ ನಡೆಸಿ ಜೋಡಿ ಅಧಿಕೃತವಾಗಿ ಹೇಳಿಕೆ ನೀಡಿಲಿದೆ ಎನ್ನಲಾಗಿದೆ. ‘ರಾಬರ್ಟ್’ ಚಿತ್ರದಲ್ಲಿ ಸೋನಲ್ ಕಾಣಿಸಿಕೊಂಡಿದ್ದರು. ಈ ಸಿನಿಮಾ ಶೂಟಿಂಗ್ ಸಮಯದಲ್ಲೇ ತರುಣ್- ಸೋನಲ್ ನಡುವೆ ಪ್ರೀತಿ ಹುಟ್ಟಿತ್ತು ಎಂದು ಹೇಳಲಾಗುತ್ತಿದೆ. ಇನ್ನು ದರ್ಶನ್‌ ಕೂಡ ಆಗಾಗ ತರುಣ್‌ಗೆ ಮದುವೆ ಮಾಡಿಸಬೇಕು ಎನ್ನುತ್ತಿದ್ದರಂತೆ. ಹಾಗಾಗಿ ಶೂಟಿಂಗ್‌ ಸೆಟ್‌ನಲ್ಲಿ ತರುಣ್- ಸೋನಲ್ ಇಬ್ಬರನ್ನು ತಮಾಷೆಯಾಗಿ ರೇಗಿಸುತ್ತಿದ್ದರು, ಇದೇ ಸಮಯದಲ್ಲಿ ಇಬ್ಬರ ನಡುವೆ ಪ್ರೀತಿ ಮೂಡಿರಬಹುದು ಎನ್ನಲಾಗಿದೆ.

ತರುಣ್ ನಿರ್ದೇಶನದ ‘ರಾಬರ್ಟ್’ ಚಿತ್ರದಲ್ಲಿ ರಾಘವ ವಿನೋದ್ ಪ್ರಭಾಕರ್ ಜೋಡಿ ತನು ಆಗಿ ಸೋನಲ್ ಮಿಂಚಿದ್ದರು. ಮಂಗಳೂರಿನಲ್ಲಿ ಹುಟ್ಟಿ ಬೆಳೆದ ಸೋನಲ್ ಮೊದಲಿಗೆ ತುಳು ಸಿನಿಮಾಗಳಲ್ಲಿ ನಟಿಸಿದ್ದರು. ‘ಅಭಿಸಾರಿಕೆ’ ಸಿನಿಮಾ ಮೂಲಕ ಸ್ಯಾಂಡಲ್‌ವುಡ್ ಪ್ರವೇಶಿಸಿದರು. ಇದೀಗ ಈ ಜೋಡಿ ಸಪ್ತಪದಿ ತುಳಿಯಲಿದೆ ಎನ್ನಲಾಗಿದೆ. ತರುಣ್‌ ಹಾಗೂ ಸೋನಲ್‌ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲ.

‘ಚೌಕ’ ಚಿತ್ರದ ಮೂಲಕ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದ ತರುಣ್ ಮುಂದೆ ಒಂದರ ಹಿಂದೆಯಂತೆ ಎರಡು ಹಿಟ್ ಸಿನಿಮಾಗಳನ್ನು ಕೊಟ್ಟರು. ಇದೀಗ ತರುಣ್ 4ನೇ ಸಿನಿಮಾ ತಯಾರಿಯಲ್ಲಿದ್ದಾರೆ. ಖಳನಟ ಸುಧೀರ್ ಕಿರಿಯಪುತ್ರ ತರುಣ್ ಮದುವೆ ಬಗ್ಗೆ ಸಾಕಷ್ಟು ವದಂತಿಗಳು ಹಬ್ಬಿವೆ. ಈಗಾಗಲೇ ತರುಣ್‌ ಅವರ ಮದುವೆ ಫಿಕ್ಸ್‌ ಆಗಿದ್ದು, ಎರಡು ತಿಂಗಳಲ್ಲಿ ಮದುವೆ ಫಿಕ್ಸ್‌ ಎನ್ನುವ ವದಂತಿ ಹಬ್ಬಿದೆ.

ಇದನ್ನೂ ಓದಿ: Tharun Sudhir: ಸೋನಲ್ ಜತೆ `ತರುಣ್ ಸುಧೀರ್‌’ಗೆ ಕೂಡಿಬಂತು ಕಂಕಣಭಾಗ್ಯ?

ಎಕ್ಸ್‌ಕ್ಯೂಸ್‌ಮಿ’ ಚಿತ್ರದ ಸಣ್ಣ ಪಾತ್ರದಲ್ಲಿ ನಟಿಸಿದರು. ‘ರ್ಯಾಂಬೊ’ ಚಿತ್ರದ ಸಹ ನಿರ್ದೇಶಕರಾಗಿ ಕೆಲಸ ಮಾಡಿ ತರುಣ್ ‘ಚೌಕ’ ಚಿತ್ರದಿಂದ ನಿರ್ದೇಶಕರಾದರು. ತರುಣ್‌ ಹಾಗೂ ಸೋನಲ್‌ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲ. ಅಗಸ್ಟ್‌ 10ಕ್ಕೆ ತರುಣ್‌ ಅವರ ಮದುವೆ ಎನ್ನಲಾಗಿದೆ.

ಮಂಗಳೂರಿನಲ್ಲಿ ಹುಟ್ಟಿ ಬೆಳೆದ ಸೋನಲ್ ಕಾಲೇಜು ದಿನಗಳಲ್ಲೇ ಮಾಡೆಲಿಂಗ್ ಆರಂಭಿಸಿದ್ದರು. ‘ಎಕ್ಕಾ ಸಕ್ಕಾ’ ಎನ್ನುವ ತುಳು ಚಿತ್ರದಲ್ಲಿ ಮೊದಲಿಗೆ ನಟಿಸಿದರು. ಬಳಿಕ ಮತ್ತೆರಡು ತುಳು ಸಿನಿಮಾ ಅವಕಾಶ ಸಿಕ್ಕಿತ್ತು. ನಂತರ ‘ಅಭಿಸಾರಿಕ’ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದರು.

‘ಎಂಎಲ್‌ಎ’, ‘ಮದುವೆ ದಿಬ್ಬಣ’, ‘ಪಂಚತಂತ್ರ’, ‘ಡೆಮೊ ಪೀಸ್’ ಹೀಗೆ ಸಾಲು ಸಾಲು ಸಿನಿಮಾಗಳಲ್ಲಿ ಸೋನಲ್ ಮಿಂಚಿದರು.ರಾಬರ್ಟ್’ ಬಳಿಕ ‘ಶಂಭೋ ಶಿವ ಶಂಕರ’, ‘ಗರಡಿ’, ‘ಶುಗರ್ ಫ್ಯಾಕ್ಟರಿ’ ಸಿನಿಮಾಗಳಲ್ಲಿ ಸೋನಲ್ ನಟಿಸಿದ್ದಾರೆ. ‘ಬುದ್ಧಿವಂತ-2’ ಹಾಗೂ ‘ಮಾರ್ಗರೆಟ್ ಲವರ್ ಆಫ್ ರಾಮಾಚಾರಿ’ ಸಿನಿಮಾಗಳಲ್ಲಿ ನಟಿಸಿದ್ದು ಇನ್ನಷ್ಟೇ ಈ ಸಿನಿಮಾಗಳು ತೆರೆಗೆ ಬರಬೇಕಿದೆ.

Continue Reading

ಕಾಲಿವುಡ್

Jayam Ravi: ಜಯಂ ರವಿ ದಾಂಪತ್ಯದಲ್ಲಿ ಬಿರುಕು? ಡಿವೋರ್ಸ್‌ ಹಾದಿಯಲ್ಲಿ ಮತ್ತೊಂದು ಸ್ಟಾರ್‌ ಜೋಡಿ!

Jayam Ravi: ಆರತಿ ರವಿ ಅವರು ಜಯಂ ರವಿ ಅವರೊಂದಿಗಿನ ಎಲ್ಲಾ ಫೋಟೋಗಳನ್ನು ಡಿಲಿಟ್‌ ಮಾಡಿದ್ದಾರೆ. ಜಯಂ ರವಿ ಅವರು 2009ರಲ್ಲಿ ನಿರ್ಮಾಪಕಿ ಸುಜಾತಾ ವಿಜಯಕುಮಾರ್ ಅವರ ಮಗಳು ಆರತಿಯನ್ನು ವಿವಾಹವಾದರು. ದಂಪತಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ .

VISTARANEWS.COM


on

Jayam Ravi's wife Aarti Ravi removes all her Instagram photos
Koo

ಬೆಂಗಳೂರು: ಬಣ್ಣದ ಲೋಕದಲ್ಲಿ (Jayam Ravi) ವಿಚ್ಛೇದನ ಪ್ರಕರಣಗಳು ಹೆಚ್ಚಾಗುತ್ತಿವೆ. ಇದೀಗ ತಮಿಳು ಸ್ಟಾರ್‌ ಜಯಂ ರವಿ ಮತ್ತು ಪತ್ನಿ ಆರತಿ ದಂಪತಿ ವಿಚ್ಛೇದನ ಪಡೆಯಲಿದ್ದಾರೆ ಎಂದು ವರದಿಯಾಗಿದೆ (Jayam Ravi’s wife Aarti Ravi). ಇತ್ತಿಚೆಗೆ ರವಿ ಹಾಗೂ ಆರತಿ ಅವರು ಫ್ಯಾಮಿಲಿ ಫೋಟೊಗಳನ್ನು ಇನ್‌ಸ್ಟಾದಲ್ಲಿ ಡಿಲೀಟ್‌ ಮಾಡಿದ್ದರು. ಹೀಗಾಗಿ ಜೋಡಿ ಬೇರ್ಪಟ್ಟಿದೆ ಎಂದು ವರದಿಯಾಗಿದೆ.

ಆರತಿ ರವಿ ಅವರು ಜಯಂ ರವಿ ಅವರೊಂದಿಗಿನ ಎಲ್ಲಾ ಫೋಟೋಗಳನ್ನು ಡಿಲಿಟ್‌ ಮಾಡಿದ್ದಾರೆ. ಜಯಂ ರವಿ ಅವರು 2009ರಲ್ಲಿ ನಿರ್ಮಾಪಕಿ ಸುಜಾತಾ ವಿಜಯಕುಮಾರ್ ಅವರ ಮಗಳು ಆರತಿಯನ್ನು ವಿವಾಹವಾದರು. ದಂಪತಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ . ಮಗ ಆರವ್‌ ಇತ್ತೇಚೆಗೆ ಟಿಕ್‌ ಟಿಕ್‌ ಸಿನಿಮಾದಲ್ಲಿ ನಟಿಸಿದ್ದ. ಇಬ್ಬರೂ ಮುದ್ದಾದ ಜೋಡಿ ಎಂದೇ ಗುರುತಿಸಿಕೊಂಡಿತ್ತು. ಇದೀಗ ಇಬ್ಬರೂ ಒಂದು ವರ್ಷಗಳಿಂದ ದೂರ ಇದ್ದಾರೆ ಎನ್ನಲಾಗಿದೆ.

ಜಯಂ ರವಿ ಅವರು ಮಣಿರತ್ನಂ ಅವರ ಪೊನ್ನಿಯನ್ ಸೆಲ್ವನ್ – 1 ಮತ್ತು 2 ರಲ್ಲಿ ಚೋಳ ಚಕ್ರವರ್ತಿ ಪಾತ್ರದಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದರು. ನಟನೆಗೆ ಮೊದಲು, ಜಯಂ ಅವರು ಕಮಲ್ ಹಾಸನ್ ನಟಿಸಿದ ಆಳವಂದನ್ (2001) ನಲ್ಲಿ ಸುರೇಶ್ ಕೃಷ್ಣ ಅವರಿಗೆ ಸಹಾಯಕ ನಿರ್ದೇಶಕರಾಗಿದ್ದರು.

ಇದನ್ನೂ ಓದಿ: Vinay Gowda: ʻಡೆವಿಲ್ʼ ಸಿನಿಮಾದಲ್ಲಿ ನಾನೇ ವಿಲನ್, ಪ್ರಾಜೆಕ್ಟ್‌ ಏನಾಗುತ್ತೋ ಗೊತ್ತಿಲ್ಲ ಎಂದ ʻಬಿಗ್ ಬಾಸ್ʼ ಆನೆ ವಿನಯ್ ಗೌಡ!

ಇದಕ್ಕೂ ಮೊದಲು ಜಯಂ ರವಿ ಅವರು ʼಜೀನಿʼ (Genie) ಚಿತ್ರದಲ್ಲಿ ಮಿಂಚಿದ್ದರು. ಅರ್ಜುನನ್ ಜೂನಿಯರ್ ( ʼಜೀನಿʼ ಫ್ಯಾಂಟಸಿ ಸಿನಿಮಾ. ಇದೇ ಮೊದಲ ಬಾರಿಗೆ ಜಯಂ ರವಿ ಫ್ಯಾಂಟಸಿ ಕಥೆಯಲ್ಲಿ ಬಣ್ಣ ಹಚ್ಚಿದ್ದರು. ಹೀಗಾಗಿ ಫಸ್ಟ್ ಲುಕ್ ಕೂಡ ವಿಭಿನ್ನವಾಗಿತ್ತು. ಸರಪಣಿಯಲ್ಲಿ ಬಂಧಿಯಾಗಿರುವ ಜಯಂ ರವಿ, ಜುಟ್ಟು ಕಟ್ಟಿ ಸ್ಟೈಲೀಶ್ ಲುಕ್‌ನಲ್ಲಿ ಮಿಂಚಿದ್ದರು.

ಇದೀಗ ಸೌತ್‌ನಲ್ಲಿ ಸಮಂತಾ ನಾಗಚೈತನ್ಯ ಜೋಡಿ ಬೇರೆಯಾಗಿಯೇ ಅಭಿಮಾನಿಗಳು ಬೇಸರದಲ್ಲಿದ್ದರು. ಇದಾದ ಬಳಿಕ ಧನುಷ್‌ ಹಾಗೂ ಐಶ್ವರ್ಯಾ, ಸಂಗೀತ ನಿರ್ದೇಶಕ ಜೀವಿ ಪ್ರಕಾಶ್‌ ಕೂಡ ಬೇರೆಯಾದರು. ಸ್ಯಾಂಡಲ್‌ವುಡ್‌ನಲ್ಲಿ ಚಂದನ್‌ ಶೆಟ್ಟಿ ಹಾಗೂ ನಿವೇದಿತಾ ಬೇರ್ಪಟ್ಟರು.

Continue Reading

ಟಾಲಿವುಡ್

Rashmika Mandanna: ರಶ್ಮಿಕಾ ಇದೀಗ ಟಾಲಿವುಡ್‌ಗೆ ಬೈ ಬೈ; ಬಾಲಿವುಡ್‌ನಲ್ಲಿಯೇ ಬಿಡಾರ!

Rashmika Mandanna: ಇತ್ತ ರಶ್ಮಿಕಾ ಮಂದಣ್ಣ ಪುಷ್ಪ 02 ಚಿತ್ರದ ಬಾಕಿ ಕೆಲಸ ಮುಗಿಸಿ, ಸಿಕಂದರ್ ಚಿತ್ರದ ಚಿತ್ರೀಕರಣಕ್ಕೆ ತೆರಳಲಿದ್ದಾರೆ. ಮತ್ತೊಂದೆಡೆ, ರಶ್ಮಿಕಾ ಅವರು ಪುಷ್ಪ 2 ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದ್ದಾರೆ. ಡಿಸೆಂಬರ್ 6 ರಂದು ಸಿನಿಮಾ ಬಿಡುಗಡೆಯಾಗಲಿದೆ.

VISTARANEWS.COM


on

Rashmika Mandanna Ayushmann Khurrana Team Up For Horror Comedy
Koo

ಬೆಂಗಳೂರು: ನ್ಯಾಶನಲ್‌ ಕ್ರಶ್‌ ರಶ್ಮಿಕಾ ಮಂದಣ್ಣ (Rashmika Mandanna) ಬಾಲಿವುಡ್‌ನಲ್ಲಿ ಮಿಂಚುತ್ತಿದ್ದಾರೆ. ಹಿಂದಿಯಲ್ಲಿ ಈಗಾಗಲೇ ಗುಡ್ ಬೈ, ಮಿಶನ್ ಮಜ್ನು, ಛಾವಾ ಚಿತ್ರಗಳನ್ನು ಮಾಡಿರುವ ರಶ್ಮಿಕಾ, ಸಲ್ಮಾನ್ ಖಾನ್ ಜತೆ ಕೂಡ ತೆರೆ ಹಂಚಿಕೊಳ್ಳುತ್ತಿದ್ದಾರೆ. ಸಲ್ಮಾನ್ ಅಭಿನಯದ `ಸಿಕಂದರ್’ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಇದರ ನಡುವೆ ರಶ್ಮಿಕಾ ಮಂದಣ್ಣ ಮತ್ತೊಂದು ಹಿಂದಿ ಚಿತ್ರಕ್ಕೆ ಗ್ನೀನ್ ಸಿಗ್ನಲ್ ನೀಡಿದ್ದಾರೆ, ಬಾಲಿವುಡ್‌ನ ಪ್ರತಿಭಾವಂತ ಹೀರೋ ಆಯುಷ್ಮಾನ್ ಖುರಾನಾಗೆ ನಾಯಕಿಯಾಗಿದ್ದಾರೆ ಎಂದು ವರದಿಯಾಗಿದೆ. ಆಯುಷ್ಮಾನ್ ಖುರಾನ ಮತ್ತು ರಶ್ಮಿಕಾ ಅಭಿನಯಿಸಲಿರುವ ಈ ಚಿತ್ರಕ್ಕೆ ʻವ್ಯಾಂಪೈರ್ಸ್‌ ಆಫ್ ವಿಜಯ್ ನಗರʼ ಎಂದು ಹೆಸರಿಡಲಾಗಿದೆ.

ʻಸ್ತ್ರೀʼ. ʻಬೇಡಿಯಾʼ.. ʻಮುಂಜ್ಯಾʼನಂತಹ ಹಾರರ್ ಕಾಮಿಡಿ ಸಿನಿಮಾಗಳನ್ನು ನಿರ್ಮಾಣ ಮಾಡಿರುವ ದಿನೇಶ್ ವಿಜನ್ ಆಯುಷ್ಮಾನ್ ಕುರಾನಾ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ಈ ಚಿತ್ರಕ್ಕೆ ಬಂಡವಾಳ ಹೂಡಲಿದ್ದಾರೆ.

ಈ ವರ್ಷದ ನವೆಂಬರ್‌ನಿಂದ ಚಿತ್ರ ಆರಂಭವಾಗಲಿದೆ ಎಂದು ಮೂಲಗಳು ತಿಳಿಸಿವೆ. “ಇದು ಆಯುಷ್ಮಾನ್ ಖುರಾನಾ ಮತ್ತು ರಶ್ಮಿಕಾ ಮಂದಣ್ಣ ಒಟ್ಟಿಗೆ ತೆರೆ ಹಂಚಿಕೊಳ್ಳುತ್ತಿರುವ ಮೊದಲ ಸಿನಿಮಾ. ಪ್ರಸ್ತುತ ಸಿನಿಮಾ ಸ್ಕ್ರಿಪ್ಟ್ ಆಗುತ್ತಿದೆ. ಶೀಘ್ರದಲ್ಲೇ ಪ್ರೀ-ಪ್ರೊಡಕ್ಷನ್ ಹಂತ ಮುಗಲಿದೆʼ ಎಂದು ವರದಿಯಾಗಿದೆ.

ಇದನ್ನೂ ಓದಿ: Vinay Gowda: ʻಡೆವಿಲ್ʼ ಸಿನಿಮಾದಲ್ಲಿ ನಾನೇ ವಿಲನ್, ಪ್ರಾಜೆಕ್ಟ್‌ ಏನಾಗುತ್ತೋ ಗೊತ್ತಿಲ್ಲ ಎಂದ ʻಬಿಗ್ ಬಾಸ್ʼ ಆನೆ ವಿನಯ್ ಗೌಡ!

ಆದಿತ್ಯ ಸತ್ಪೋದರ್ ಈ ಚಿತ್ರವನ್ನು ನಿರ್ದೇಶಿಸಲಿದ್ದಾರೆ. ಸದ್ಯಕ್ಕೆ ದಿನೇಶ್ ವಿಜನ್ ತಮ್ಮ ಸ್ತ್ರೀ 2 ಚಿತ್ರದ ಬಿಡುಗಡೆಯ ಕೆಲಸದಲ್ಲಿದ್ದಾರೆ. ಇತ್ತ ರಶ್ಮಿಕಾ ಮಂದಣ್ಣ ಪುಷ್ಪ 02 ಚಿತ್ರದ ಬಾಕಿ ಕೆಲಸ ಮುಗಿಸಿ, ಸಿಕಂದರ್ ಚಿತ್ರದ ಚಿತ್ರೀಕರಣಕ್ಕೆ ತೆರಳಲಿದ್ದಾರೆ.ಆಯುಷ್ಮಾನ್ ಖುರಾನಾ ಸದ್ಯಕ್ಕೆ ಕರಣ್ ಜೋಹರ್ ನಿರ್ಮಾಣದಲ್ಲಿ ಮೂಡಿ ಬರುತ್ತಿರುವ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಇನ್ನೂ ಆಯುಷ್ಮಾನ್ ಕೈಯಲ್ಲಿ ʻಬಾರ್ಡರ್ʼ ಚಿತ್ರದ ಸಿಕ್ವೆಲ್ ಕೂಡ ಇದೆ. ಮತ್ತೊಂದೆಡೆ, ರಶ್ಮಿಕಾ ಅವರು ಪುಷ್ಪ 2 ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದ್ದಾರೆ. ಡಿಸೆಂಬರ್ 6 ರಂದು ಸಿನಿಮಾ ಬಿಡುಗಡೆಯಾಗಲಿದೆ.

ʻಸಿಖಂದರ್’ ಸಿನಿಮಾ ಆಕ್ಷನ್ ಥ್ರಿಲ್ಲರ್ ಚಿತ್ರವಾಗಿರಲಿದೆ. 400 ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿನಿಮಾ ಸಿದ್ಧವಾಗುತ್ತಿದೆ ಎಂದು ವರದಿಯಾಗಿದೆ. ಸಲ್ಮಾನ್ ಖಾನ್ ಕೊನೆಯದಾಗಿ ‘ಟೈಗರ್ 3’ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು.ತಮಿಳು, ತೆಲುಗಿನಲ್ಲಿ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿರುವ ಎಆರ್ ಮುರುಗದಾಸ್ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರವನ್ನು ಸಾಜಿದ್ ನಾಡಿಯಾವಾಲ ನಿರ್ಮಾಣ ಮಾಡುತ್ತಿದ್ದು, ದೊಡ್ಡ ಬಜೆಟ್​ನಲ್ಲಿ ಸಿದ್ಧವಾಗುತ್ತಿದೆ. ಮುರುಗದಾಸ್ ಅವರು ಈ ಮೊದಲು ‘ಗಜಿನಿ’, ‘ಸ್ಟಾಲಿನ್’, ‘ಸೆವೆಂತ್ ಸೆನ್ಸ್’, ‘ತುಪ್ಪಾಕಿ’, ‘ಸ್ಪೈಡರ್’ ಸೇರಿ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ಕೊಟ್ಟಿದ್ದರು. ಮುರುಗದಾಸ್ ಅವರು ಆಮಿರ್ ಖಾನ್ ನಟಿಸಿದ್ದ ‘ಗಜಿನಿ’ ಚಿತ್ರವನ್ನು ಅವರೇ ನಿರ್ದೇಶನ ಮಾಡಿದ್ದರು.

Continue Reading
Advertisement
Prajwal revanna Case
ಕರ್ನಾಟಕ1 min ago

Prajwal Revanna Case: ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ವಜಾ; ಮತ್ತೆ ಜೈಲೇ ಗತಿ

Actress Akshita entry to kollywood cinema
ಕಾಲಿವುಡ್6 mins ago

Actress Akshita: ಕನ್ನಡತಿ ಅಕ್ಷಿತಾ ಈಗ ತಮಿಳು ಚಿತ್ರದ ನಾಯಕಿ!

ಕ್ರೀಡೆ8 mins ago

Yusuf Pathan: ಈಶ್ವರನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿ ಜೈ ಹಿಂದ್‌ ಘೋಷಣೆ ಕೂಗಿದ ಯೂಸುಫ್ ಪಠಾಣ್

ಕಿರುತೆರೆ34 mins ago

Shri Devi Mahathme: ಬರ್ತಿದೆ ಪಾರ್ವತಿ ಜಗನ್ಮಾತೆಯಾದ ಕಥೆ “ಶ್ರೀ ದೇವೀ ಮಹಾತ್ಮೆ”; ವೀಕ್ಷಣೆ ಎಲ್ಲಿ?

Renuka Swamy Murder
ಕರ್ನಾಟಕ41 mins ago

Renuka Swamy Murder: ರೇಣುಕಾಸ್ವಾಮಿ ಕೊಲೆ ಕೇಸ್‌; ಬೆಂಗಳೂರಿನಿಂದ ತುಮಕೂರು ಜೈಲು ಸೇರಿದ ನಾಲ್ವರು ಆರೋಪಿಗಳು

IND vs ENG Semi Final
ಕ್ರೀಡೆ41 mins ago

IND vs ENG Semi Final: ಇಂಡೋ-ಆಂಗ್ಲ ಸೆಮಿಫೈನಲ್​ ಪಂದ್ಯದ ಸಂಭಾವ್ಯ ತಂಡ, ಪಿಚ್​ ರಿಪೋರ್ಟ್​ ಹೀಗಿದೆ

Lok Sabha Speaker
ದೇಶ44 mins ago

Lok Sabha Speaker: ತುರ್ತು ಪರಿಸ್ಥಿತಿ ಬಗ್ಗೆ ಓಂ ಬಿರ್ಲಾ ಪ್ರಸ್ತಾಪ; ಪ್ರತಿಪಕ್ಷಗಳಿಂದ ಪ್ರತಿಭಟನೆ

actor producer and Cow lover Mahendra Munnoth donated 51 lakh rupees to cow shelter
ಬೆಂಗಳೂರು45 mins ago

Bengaluru News: ಗೋ ಶಾಲೆಗಳಿಗೆ 51 ಲಕ್ಷ ರೂ. ದೇಣಿಗೆ ನೀಡಿದ ಗೋಪ್ರೇಮಿ ಮಹೇಂದ್ರ ಮುನ್ನೋತ್

Bhaavaramayana Ramavatarana book release programme on June 29 in Bengaluru
ಕರ್ನಾಟಕ47 mins ago

Book Release: ಬೆಂಗಳೂರಿನಲ್ಲಿ ಜೂ.29ರಂದು ‘ಭಾವರಾಮಾಯಣ ರಾಮಾವತರಣʼ ಪುಸ್ತಕ ಲೋಕಾರ್ಪಣೆ

Varthur Santhosh Animal Transport Rules Violation Allegation
ಕ್ರೈಂ51 mins ago

Varthur Santhosh: ಹಳ್ಳಿಕಾರ್ ರೇಸ್ ನಡೆಸಲು ಸಜ್ಜಾಗುತ್ತಿದ್ದ ವರ್ತೂರು ಸಂತೋಷ್​ ವಿರುದ್ಧ ಪ್ರಕರಣ ದಾಖಲು

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ5 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ6 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌