Telugu choreographer Chaitanya dies by suicide Choreographer Chaitanya Death: ತೆಲುಗು ಕೋರಿಯೊಗ್ರಾಫರ್‌ ಚೈತನ್ಯ ಆತ್ಮಹತ್ಯೆ - Vistara News

South Cinema

Choreographer Chaitanya Death: ತೆಲುಗು ಕೋರಿಯೊಗ್ರಾಫರ್‌ ಚೈತನ್ಯ ಆತ್ಮಹತ್ಯೆ

ವರದಿ ಪ್ರಕಾರ ಚೈತನ್ಯ (Choreographer Chaitanya Death) ಅವರು ಸಾಯುವ ಮುನ್ನ ತಮ್ಮ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ಗಳಲ್ಲಿ ವಿಡಿಯೊವನ್ನು ಹಂಚಿಕೊಂಡಿದ್ದಾರೆ. ವಿಡಿಯೊದಲ್ಲಿ ಕೋರಿಯೊಗ್ರಾಫರ್‌ ಚೈತನ್ಯ ಹೇಳಿದ್ದೇನು?

VISTARANEWS.COM


on

Telugu choreographer Chaitanya dies by suicide
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ತೆಲುಗು ಕೋರಿಯೊಗ್ರಾಫರ್‌ ಚೈತನ್ಯ (Choreographer Chaitanya Death) ಏಪ್ರಿಲ್ 30ರಂದು ನಿಧನರಾಗಿದ್ದಾರೆ. ಚೈತನ್ಯ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಸಾಲ ತೀರಿಸಲಾಗದೇ ಮನನೊಂದು ಆಂಧ್ರಪ್ರದೇಶದ ನೆಲ್ಲೂರಿನಲ್ಲಿ ನೇಣು ಬಿಗಿದುಕೊಂಡಿದ್ದಾರೆ ಎಂದು ವರದಿಯಾಗಿದೆ. ಚೈತನ್ಯ ಅವರು ತೆಲುಗಿನ ಜನಪ್ರಿಯ ಡ್ಯಾನ್ಸ್‌ ಶೋ ʻಧೀʼ ಮೂಲಕ ಖ್ಯಾತಿ ಗಳಿಸಿದ್ದರು.

ಇಂಡಿಯಾ ಟುಡೇ ವರದಿ ಪ್ರಕಾರ ಚೈತನ್ಯ ಅವರು ಸಾಯುವ ಮುನ್ನ ತಮ್ಮ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ಗಳಲ್ಲಿ ವಿಡಿಯೊವನ್ನು ಹಂಚಿಕೊಂಡಿದ್ದಾರೆ. ವಿಡಿಯೊದಲ್ಲಿ ತಮ್ಮ ಸಾಲವನ್ನು ಮರುಪಾವತಿಸಲು ಸಾಧ್ಯವಾಗದ ಕಾರಣ ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಬಹಿರಂಗಪಡಿಸಿದ್ದಾರೆ

ವಿಡಿಯೊದಲ್ಲಿ ಚೈತನ್ಯ ಹೇಳಿದ್ದೇನು?

ವಿಡಿಯೊದಲ್ಲಿ ʻʻನನ್ನ ತಾಯಿ, ತಂದೆ ಮತ್ತು ಸಹೋದರಿ ನನ್ನನ್ನು ಯಾವುದೇ ಸಮಸ್ಯೆಗಳನ್ನು ಎದುರಿಸಲು ಬಿಡದೆ ಚೆನ್ನಾಗಿ ನೋಡಿಕೊಂಡರು. ನನ್ನ ಎಲ್ಲ ಸ್ನೇಹಿತರಿಗೆ ಕ್ಷಮೆಯಾಚಿಸುತ್ತೇನೆ. ನಾನು ಅನೇಕ ಜನರಿಗೆ ತೊಂದರೆ ನೀಡಿದ್ದೇನೆ ಮತ್ತು ಎಲ್ಲರಿಗೂ ಕ್ಷಮೆಯಾಚಿಸುತ್ತೇನೆ. ಹಣದ ವಿಷಯದಲ್ಲಿ ನಾನು ನನ್ನ ಒಳ್ಳೆಯತನವನ್ನು ಕಳೆದುಕೊಂಡೆ. ಕೇವಲ ಸಾಲ ತೆಗೆದುಕೊಳ್ಳುವುದಲ್ಲ, ಅದನ್ನು ಮರುಪಾವತಿ ಮಾಡುವ ಸಾಮರ್ಥ್ಯ ಹೊಂದಿರಬೇಕು. ಆದರೆ ನಾನು ಅದನ್ನು ಮಾಡಲು ಸಾಧ್ಯವಾಗಲಿಲ್ಲ. ಪ್ರಸ್ತುತ, ನಾನು ನೆಲ್ಲೂರಿನಲ್ಲಿ ಇದ್ದೇನೆ. ಇದು ನನ್ನ ಕೊನೆಯ ದಿನವಾಗಿದೆ. ನನ್ನ ಸಾಲಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ನಾನು ಎದುರಿಸಲು ಸಾಧ್ಯವಿಲ್ಲ, ”ಎಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಮಾನಸಿಕ ಖಿನ್ನತೆಯಿಂದ ಕುದೂರು ಠಾಣೆಯ ಹೆಡ್‌ ಕಾನ್ಸ್‌ಟೇಬಲ್‌ ಆತ್ಮಹತ್ಯೆಗೆ ಶರಣು

ಚೈತನ್ಯ ಅವರ ಸಾವಿನ ಸುದ್ದಿ ವೈರಲ್‌ ಆಗುತ್ತಿದ್ದಂತೆ ಅವರ ಅಭಿಮಾನಿಗಳು ಸೋಷಿಯಲ್‌ ಮೀಡಿಯಾ ಮೂಲಕ ಸಂತಾಪ ಸೂಚಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Kannada New Movie: ʻರಾಮರಸ’ಸಿನಿಮಾಗೆ ಬಿಗ್ ಬಾಸ್ ವಿನ್ನರ್ ಕಾರ್ತಿಕ್ ಹೀರೊ ; ಬೆಂಬಲಿಸಿದ ಸುದೀಪ್!

Kannada New Movie: ಬಿಗ್ ಬಾಸ್ ವಿನ್ನರ್ ಕಾರ್ತಿಕ್ ಮಹೇಶ್ “ರಾಮರಸ” ಚಿತ್ರದ ನಾಯಕನಾಗಿ ನಟಿಸುತ್ತಿದ್ದಾರೆ. ಇತ್ತೀಚಿಗೆ ನಡೆದ ಸಮಾರಂಭದಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಾಯಕನಟನನ್ನು ಪರಿಚಯಿಸುವ ವಿಶೇಷ ವಿಡಿಯೋ ಬಿಡುಗಡೆ ಮಾಡುವ ಮೂಲಕ “ರಾಮರಸ” ಚಿತ್ರದ ನಾಯಕ ಕಾರ್ತಿಕ್ ಮಹೇಶ್ ಎಂದು ತಿಳಿಸಿದರು.

VISTARANEWS.COM


on

Kannada New Movie RAMARASA Hero Introduction By Kiccha Sudeepa
Koo

ಬೆಂಗಳೂರು: ಗುರುದೇಶಪಾಂಡೆ ಅವರು ನಿರ್ಮಿಸುತ್ತಿರುವ, ‘ಜಟ್ಟ’ ಗಿರಿರಾಜ್‍ ನಿರ್ದೇಶನದ ‘ರಾಮರಸ’ ಚಿತ್ರದಲ್ಲಿ “ಜಿ ಅಕಾಡೆಮಿ”ಯಲ್ಲಿ ನಟನೆ ಕಲಿತಿರುವ ಹದಿನಾರು ಪ್ರತಿಭೆಗಳು ನಟಿಸುತ್ತಿರುವುದು ಗೊತ್ತಿರುವ ವಿಷಯ. ಈ ಹದಿನಾರು ಜನ ಯುವಪ್ರತಿಭೆಗಳೊಂದಿಗೆ ಖ್ಯಾತ ನಟರೊಬ್ಬರು ನಾಯಕನಾಗಿ ನಟಿಸಲಿದ್ದಾರೆ ಎಂದು ತಿಳಿಸಲಾಗಿತ್ತು. ಈಗ “ರಾಮರಸ” ಚಿತ್ರಕ್ಕೆ ನಾಯಕನ‌ ಆಯ್ಕೆಯಾಗಿದೆ. ಬಿಗ್ ಬಾಸ್ ವಿನ್ನರ್ ಕಾರ್ತಿಕ್ ಮಹೇಶ್ “ರಾಮರಸ” ಚಿತ್ರದ ನಾಯಕನಾಗಿ ನಟಿಸುತ್ತಿದ್ದಾರೆ. ಇತ್ತೀಚಿಗೆ ನಡೆದ ಸಮಾರಂಭದಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಾಯಕನಟನನ್ನು ಪರಿಚಯಿಸುವ ವಿಶೇಷ ವಿಡಿಯೋ ಬಿಡುಗಡೆ ಮಾಡುವ ಮೂಲಕ “ರಾಮರಸ” ಚಿತ್ರದ ನಾಯಕ ಕಾರ್ತಿಕ್ ಮಹೇಶ್ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸುದೀಪ್‍, ‘ನಾನು ‘ಬಿಗ್‍ ಬಾಸ್‍’ ಕಾರ್ಯಕ್ರಮವನ್ನು ಎಷ್ಟು ವರ್ಷಗಳಿಂದ ನಡೆಸಿಕೊಂಡು ಬರುತ್ತಿದ್ದೇನೆ. ಆದರೆ, ಪ್ರತಿ ಸೀಸನ್‍ನಲ್ಲೂ ಒಬ್ಬ ಹೊಸ ಹೀರೋ ಹುಟ್ಟಿಕೊಳ್ಳುತ್ತಿದ್ದಾನೆ. ‘ಬಿಗ್‍ ಬಾಸ್‍’ ಗೆಲ್ಲುವುದು ಅಷ್ಟು ಸುಲಭವಲ್ಲ. ಕಾರ್ತಿಕ್‍ ಅವರಿಗಂತೂ ಬಹಳಷ್ಟು ಸ್ಪರ್ಧಿಗಳಿದ್ದರು. ಅದು ಅವರಿಗೆ ಗೊತ್ತು. “ಬಿಗ್ ಬಾಸ್” ಗೆದ್ದ ಮೇಲೆ ಕಾರ್ತಿಕ್ ಅವರಿಗೆ ಒಳ್ಳೆಯ ಅವಕಾಶಗಳು ಬರುತ್ತಿದೆ‌. ಕಾರ್ತಿಕ್ ಸರಿಯಾದ ಹಾದಿಯಲ್ಲಿದ್ದಾರೆ. ಪ್ಯಾಷನೇಟ್‍ ಜನರು ಅವರ ಜೊತೆಯಾಗಿದ್ದಾರೆ. ಈ ಅವಕಾಶವನ್ನು ಚೆನ್ನಾಗಿ ಬಳಸಿಕೊಳ್ಳಿ’ ಎಂದು ಹಾರೈಸಿದರು. ನಿರ್ಮಾಪಕ ಗುರು ದೇಶಪಾಂಡೆ ನಿರ್ಮಾಣದ ಶೈಲಿ ಹಾಗೂ ನಿರ್ದೇಶಕ ಗಿರಿರಾಜ್ ಅವರ ಕಾರ್ಯವೈಖರಿಯನ್ನು ಸುದೀಪ್ ಶ್ಲಾಘಿಸಿದರು.

ಇದನ್ನೂ ಓದಿ: Actress Nayanathara: ‘ಬಾಹುಬಲಿ’ ಸಿನಿಮಾ ದೃಶ್ಯದ ಮರುಸೃಷ್ಟಿಯಲ್ಲಿ ವಿಘ್ನೇಶ್ ಶಿವನ್ ಪುತ್ರರು!

ನಾಯಕ ಕಾರ್ತಿಕ್‍ ಮಹೇಶ್‍ ಮಾತನಾಡಿ, ʻʻಮೊದಲಿನಿಂದಲೂ ನನಗೆ ಸುದೀಪ್ ಸರ್ ಪ್ರೋತ್ಸಾಹ ನೀಡುತ್ತ ಬಂದಿದ್ದಾರೆ. ಅವರಿಗೆ ಹಾಗೂ ಈ ಚಿತ್ರದಲ್ಲಿ ಅವಕಾಶ ಕೊಟ್ಟ ನಿರ್ಮಾಪಕರಿಗೆ, ನಿರ್ದೇಶಕರಿಗೆ ಧನ್ಯವಾದಗಳು. ಒಳ್ಳೆಯ ತಂಡದೊಂದಿಗೆ ಕೆಲಸ ಮಾಡುತ್ತಿರುವ ಖುಷಿಯಿದೆ. ಸುದೀಪ್ ಅವರ ಮೇಲೆ ನನಗೆ ವಿಶೇಷ ಪ್ರೀತಿ ಹಾಗೂ ಗೌರವ. ಹಾಗಾಗಿ “ಬಿಗ್ ಬಾಸ್” ಫಿನಾಲೆಯಲ್ಲಿ ಅವರು ಕೊಟ್ಟಿದ್ದ ಡ್ರೆಸ್ ಅನ್ನು ಇಂದು ಹಾಕಿಕೊಂಡು ಬಂದಿದ್ದೇನೆʼʼ ಎಂದರು.

ʻʻಪ್ರತಿಯೊಬ್ಬ ನಿರ್ದೇಶಕನಿಗೂ ಗುರು ದೇಶಪಾಂಡೆ ಅವರಂತಹ‌ ನಿರ್ಮಾಪಕರು ಸಿಗಬೇಕು.‌ ಅವರಿಗೆ ಸಿನಿಮಾ ಮೇಲೆ ತುಂಬಾ ಪ್ರೀತಿ. ಅದ್ದೂರಿಯಾಗಿ ಮೂಡಿಬಂದಿರುವ ನಾಯಕನ ಪರಿಚಯದ ವಿಶೇಷ ವಿಡಿಯೋ ಅದಕ್ಕೆ ಸಾಕ್ಷಿ. ಕಾರ್ತಿಕ್ ಮಹೇಶ್ ಅವರು ಈ ಚಿತ್ರದ ನಾಯಕನಾಗಿ ಆಯ್ಕೆಯಾಗಿದ್ದಾರೆ. ಸುದೀಪ್ ಅವರು ನಾಯಕನನ್ನು ಪರಿಚಯಿಸಿದ್ದಾರೆ. ಈ ಸಂದರ್ಭದಲ್ಲಿ ಸುದೀಪ್ ಅವರಿಗೆ ವಿಶೇಷ ಧನ್ಯವಾದ ತಿಳಿಸುತ್ತೇನೆʼʼ ಎಂದರು ನಿರ್ದೇಶಕ ಗಿರಿರಾಜ್.

ಜಿ ಅಕಾಡೆಮಿಯ 16 ಜನ ಹೊಸ ಪ್ರತಿಭೆಗಳಿಗೆ ತರಬೇತಿ ನೀಡಿ ಈ ಚಿತ್ರದಲ್ಲಿ ನಟಿಸಲು ಅವಕಾಶ ನೀಡಲಾಗಿದೆ. ಅವರೊಂದಿಗೆ ಜನಪ್ರಿಯ ನಟರೊಬ್ಬರು ನಾಯಕನಾಗಿ ನಟಿಸಲಿದ್ದಾರೆ ಎಂದು ನಾನು ಮೊದಲು ತಿಳಿಸಿದೆ. “ರಾಮರಸ” ಚಿತ್ರಕ್ಕೆ ಕಾರ್ತಿಕ್ ಮಹೇಶ್ ನಾಯಕನಾಗಿದ್ದಾರೆ. ನಮ್ಮ ಚಿತ್ರದ ನಾಯಕನನ್ನು ಪರಿಚಯಿಸುವ ಟೀಸರ್ ಬಿಡುಗಡೆ ಮಾಡಿಕೊಟ್ಟ ಕಿಚ್ಚ ಸುದೀಪ್ ಅವರಿಗೆ ಅನಂತ ಧನ್ಯವಾದಗಳು ಎಂದರು ನಿರ್ಮಾಪಕ ಗುರು ದೇಶಪಾಂಡೆ.

‘ರಾಮರಸ’ ಚಿತ್ರಕ್ಕೆ ಬಿ.ಜೆ. ಭರತ್ ಸಂಗೀತ, ಎ.ವಿ. ಕೃಷ್ಣಕುಮಾರ್, ಅರ್ಜುನ್‍ ಕಿಟ್ಟು ಸಂಕಲನವಿದೆ. ಮುರಳಿ ಮಾಸ್ಟರ್ ನೃತ್ಯ ನಿರ್ದೇಶನ ಹಾಗೂ ಪುನೀತ್ ಆರ್ಯ ಅವರ ಗೀತರಚನೆಯಿರುವ ಈ‌ ಚಿತ್ರದ ಕಾರ್ಯಕಾರಿ ನಿರ್ಮಾಪಕರು‌ ಸುನೀಲ್ ಹೆಚ್ ಸಿ ಗೌಡ.

Continue Reading

ಕ್ರೈಂ

Actor Darshan: ಅಂದು `ತಗಡು’ ಅಂದಿದ್ದ ದರ್ಶನ್‌ಗೆ ಇಂದು ಉಮಾಪತಿ ಕೌಂಟರ್!

Actor Darshan: ಈ ಹಿಂದೆ ಉಮಾಪತಿ ಅವರು ಕಾಟೇರ ಟೈಟಲ್‌ ನಾನೇ ಕೊಟ್ಟಿದ್ದು ಎಂದು ಹಲವಾರು ಸಂದರ್ಶನಗಳಲ್ಲಿ ಹೇಳಿದ್ದರು. ದರ್ಶನ್‌ ಈ ಬಗ್ಗೆ ಮಾತನಾಡಿ ʻʻತಗಡೇ, ರಾಬರ್ಟ್‌ ಕಥೆ ನಿನಗೆ ಕೊಟ್ಟಿದ್ದು ನಾವು. ಇಂಥ ಒಳ್ಳೆ ಕಥೆ ಮತ್ತೆ ಯಾಕ್‌ ಬಿಟ್ಟೆ ನೀನು?ʼʼ ಎಂದು ವೇದಿಕೆ ಮೇಲೆಯೇ ಉಮಾಪತಿಗೆ ಪ್ರಶ್ನೆ ಮಾಡಿದ್ದರು. ʻಈ ಕಥೆ ನಾನು ಮಾಡಿಸಿದೆ, ಕಥೆ ನಾನು ಕೊಟ್ಟೆ ಎಂದು ಎಂದು ಹೇಳಿಕೊಂಡು ಬಂದಿದ್ದೆಯಲ್ವಾ?ಇಂಥ ಒಳ್ಳೆ ಕಥೆ ಯಾಕೆ ಬಿಟ್ಟೆ ನೀನು. ಅಯ್ಯೋ ತಗಡೇ… ಎಲ್ಲ ಆಧಾರ ಇಟ್ಟುಕೊಂಡೇ ಮಾತನಾಡಬೇಕುʼʼ ಎಂದು ಉಮಾಪತಿಗೆ ನೇರವಾಗಿ ದರ್ಶನ್‌ ಖಡಕ್ ವಾರ್ನಿಂಗ್ ಕೊಟ್ಟಿದ್ದರು.

VISTARANEWS.COM


on

Actor Darshan tagadu word umapathy counter now
Koo

ಬೆಂಗಳೂರು: ʻಕಾಟೇರʼ ಸಿನಿಮಾದ 50ನೇ ದಿನದ ಸಂಭ್ರಮಾಚರಣೆ ಸಂದರ್ಭದಲ್ಲಿ ದರ್ಶನ್‌ (Actor Darshan) ʻರಾಬರ್ಟ್ʼ ಸಿನಿಮಾದ ನಿರ್ಮಾಪಕ ಉಮಾಪತಿಗೆ ‘ತಗಡು’ ಇನ್ನಿತರೆ ಕಠು ಪದಗಳನ್ನು ಬಳಸಿ ನಿಂದಿಸಿದ್ದರು. ಇದಾದ ಬಳಿಕ ನಿರ್ಮಾಪಕ ಉಮಾಪತಿ ಕೂಡ ಬೇಸರದಲ್ಲಿಯೇ ಪ್ರತಿಕ್ರಿಯೆ ನೀಡಿದ್ದರು. ಇದೀಗ ದರ್ಶನ್‌ ಕೊಲೆ ಕೇಸ್‌ನಲ್ಲಿ ಅರೆಸ್ಟ್‌ ಆಗಿದ್ದಾರೆ. ಅಂದು ʻತಗಡುʼ ಅಂದಿದ್ದ ದರ್ಶನ್‌ಗೆ ಇಂದು ಉಮಾಪತಿ ಪರೋಕ್ಷವಾಗಿ ಪೋಸ್ಟ್‌ ಮೂಲಕ ತಿರುಗೇಟು ಕೊಟ್ಟಿದ್ದಾರೆ. “ತಾಳ್ಮೆ ಕೆಲವೊಮ್ಮೆ ಶಕ್ತಿ” ಎಂದು ವಿಡಿಯೊ ಪೋಸ್ಟ್ ಮಾಡಿದ್ದಾರೆ ಉಮಾಪತಿ.

ತಗಡು ಯಾರು ಗೊತಾಯ್ತಾ? ಎಂದು ಪರೋಕ್ಷವಾಗಿ ಕೌಂಟರ್ ಕೊಟ್ಟಿದ್ದಾರೆ ಉಮಾಪತಿ. ಉಮಾಪತಿ ಪರವಾಗಿ ಹಲವು ಮೀಮ್ಸ್ ವೈರಲ್ ಆಗಿದ್ದವು. ಇವುಗಳನ್ನು ರಿಪೋಸ್ಟ್‌ ಮಾಡಿಕೊಳ್ಳುತ್ತಿದ್ದಾರೆ ಉಮಾಪತಿ.

ದರ್ಶನ್‌ ಉಮಾಪತಿಗೆ ವಾರ್ನಿಂಗ್‌ ನೀಡಿದ್ದೇನು?

ಈ ಹಿಂದೆ ಉಮಾಪತಿ ಅವರು ಕಾಟೇರ ಟೈಟಲ್‌ ನಾನೇ ಕೊಟ್ಟಿದ್ದು ಎಂದು ಹಲವಾರು ಸಂದರ್ಶನಗಳಲ್ಲಿ ಹೇಳಿದ್ದರು. ದರ್ಶನ್‌ ಈ ಬಗ್ಗೆ ಮಾತನಾಡಿ ʻʻತಗಡೇ, ರಾಬರ್ಟ್‌ ಕಥೆ ನಿನಗೆ ಕೊಟ್ಟಿದ್ದು ನಾವು. ಇಂಥ ಒಳ್ಳೆ ಕಥೆ ಮತ್ತೆ ಯಾಕ್‌ ಬಿಟ್ಟೆ ನೀನು?ʼʼ ಎಂದು ವೇದಿಕೆ ಮೇಲೆಯೇ ಉಮಾಪತಿಗೆ ಪ್ರಶ್ನೆ ಮಾಡಿದ್ದರು. ʻಈ ಕಥೆ ನಾನು ಮಾಡಿಸಿದೆ, ಕಥೆ ನಾನು ಕೊಟ್ಟೆ ಎಂದು ಎಂದು ಹೇಳಿಕೊಂಡು ಬಂದಿದ್ದೆಯಲ್ವಾ?ಇಂಥ ಒಳ್ಳೆ ಕಥೆ ಯಾಕೆ ಬಿಟ್ಟೆ ನೀನು. ಅಯ್ಯೋ ತಗಡೇ… ಎಲ್ಲ ಆಧಾರ ಇಟ್ಟುಕೊಂಡೇ ಮಾತನಾಡಬೇಕುʼʼ ಎಂದು ಉಮಾಪತಿಗೆ ನೇರವಾಗಿ ದರ್ಶನ್‌ ಖಡಕ್ ವಾರ್ನಿಂಗ್ ಕೊಟ್ಟಿದ್ದರು.

ಇದನ್ನೂ ಓದಿ: Actress Nayanathara: ‘ಬಾಹುಬಲಿ’ ಸಿನಿಮಾ ದೃಶ್ಯದ ಮರುಸೃಷ್ಟಿಯಲ್ಲಿ ವಿಘ್ನೇಶ್ ಶಿವನ್ ಪುತ್ರರು!

ದೇಹ ತೂಕ ವಿದ್ದರೆ ಸಾಲದು ಮಾತು ತೂಕವಿರಬೇಕು

ನಟ ದರ್ಶನ್ ಬಳಸಿದ ಪದ ಬಳಕೆ ಬಗ್ಗೆ ಬಳಿಕ ಉಮಾಪತಿ ಮಾತನಾಡಿ ʻʻಅದು ತಪ್ಪು ಸರ್, ಸಮಸ್ಯೆಗಳು ಎಲ್ಲ ಕಡೆ ಬರುತ್ತದೆ. ಆದರೆ ಅದನ್ನು ಹ್ಯಾಂಡಲ್ ಮಾಡುವ ರೀತಿ ಗೊತ್ತಿರಬೇಕು. ಸಮಾಜದಲ್ಲಿ ತೂಕವಿರುವ ವ್ಯಕ್ತಿ ಘನತೆಯಿಂದ ನಡೆದುಕೊಳ್ಳಬೇಕು. ದೇಹ ತೂಕ ವಿದ್ದರೆ ಸಾಲದು ಮಾತು ತೂಕವಿರಬೇಕು. ನಾನು ತಪ್ಪು ಮಾಡಿದರೂ ತಪ್ಪೆ. ಬೇರೆ ಯಾರಾದರೂ ತಪ್ಪು ಮಾಡಿದರೆ ತಪ್ಪೇ. ನಾವೆಲ್ಲ ಸಿನಿಮಾ ಮುಖಾಂತರ ಮೆಸೆಜ್ ಕೊಡಬೇಕು. ಈ ವಿವಾದಿಂದ ಸಂದೇಶ ಕೊಡುವಂತದ್ದು ಏನಿಲ್ಲʼʼಎಂದಿದ್ದರು.

Continue Reading

Latest

Actress Nayanathara: ‘ಬಾಹುಬಲಿ’ ಸಿನಿಮಾ ದೃಶ್ಯದ ಮರುಸೃಷ್ಟಿಯಲ್ಲಿ ವಿಘ್ನೇಶ್ ಶಿವನ್ ಪುತ್ರರು!

Actress Nayanathara: ಬಾಹುಬಲಿ…. ಈ ಸಿನಿಮಾದ ಹೆಸರು ಕೇಳುತ್ತಲೇ ಮೈ ನವಿರೇಳುತ್ತದೆ. ಜನಮಾನಸದಲ್ಲಿ ಹಾಸುಹೊಕ್ಕಾಗಿರುವ ಸಿನಿಮಾವಿದು. ದಕ್ಷಿಣ ಭಾರತದ ಹಿಟ್ ಚಲನಚಿತ್ರಗಳಲ್ಲಿ ಒಂದಾದ ಬಾಹುಬಲಿ ಚಿತ್ರ ಜನರ ಮೆಚ್ಚುಗೆಯನ್ನು ಪಡೆದ ಸೂಪರ್ ಹಿಟ್ ಚಿತ್ರವಾಗಿತ್ತು. ಅದರ ಒಂದೊಂದು ದೃಶ್ಯವು ಅಮೋಘವಾಗಿ ಮೂಡಿಬಂದಿತ್ತು. ಈ ಸೂಪರ್ ಹಿಟ್ ಚಿತ್ರದ ದೃಶ್ಯವೊಂದನ್ನು ನಯನತಾರಾ ಹಾಗೂ ವಿಘ್ನೇಶ್ ಪುತ್ರರು ಮರುಸೃಷ್ಟಿ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿದ ಫೋಟೊವನ್ನು ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಳ್ಳುವ ಮೂಲಕ ನಟಿ ನಯನತಾರಾ ವಿಘ್ನೇಶ್ ಶಿವನ್ ಅವರಿಗೆ ತಂದೆಯ ದಿನದ ಶುಭಾಶಯ ತಿಳಿಸಿದ್ದಾರೆ.

VISTARANEWS.COM


on

Actress Nayanathara
Koo

ಬೆಂಗಳೂರು: ಕಾಲಿವುಡ್ ನಟಿ ನಯನತಾರಾ(Actress Nayanathara) ಹಾಗೂ ನಿರ್ಮಾಪಕ ವಿಘ್ನೇಶ್ ದಂಪತಿ ಉಯಿರ್ ಮತ್ತು ಉಲಗ್ ಎಂಬ ಅವಳಿ ಮಕ್ಕಳನ್ನು ಹೊಂದಿರುವ ವಿಚಾರ ಎಲ್ಲರಿಗೂ ತಿಳಿದಿದೆ. ಈ ದಂಪತಿ ಇತ್ತೀಚಿಗೆ ತಮ್ಮ ಮುದ್ದಿನ ಮಕ್ಕಳೊಂದಿಗೆ ಖುಷಿ ಖುಷಿಯಾಗಿ ಸಮಯವನ್ನು ಕಳೆಯುತ್ತಿದ್ದಾರೆ. ಈ ನಡುವೆ ಈ ದಂಪತಿ ಸೂಪರ್ ಹಿಟ್ ಸಿನಿಮಾವೊಂದರ ದೃಶ್ಯವನ್ನು ತಮ್ಮ ಮಕ್ಕಳ ಮೂಲಕ ಮರು ಸೃಷ್ಟಿ ಮಾಡಿದ್ದಾರೆ.

ದಕ್ಷಿಣ ಭಾರತದ ಹಿಟ್ ಚಲನಚಿತ್ರಗಳಲ್ಲಿ ಒಂದಾದ ಬಾಹುಬಲಿ ಚಿತ್ರ ಜನರ ಮೆಚ್ಚುಗೆಯನ್ನು ಪಡೆದ ಸೂಪರ್ ಹಿಟ್ ಚಿತ್ರವಾಗಿತ್ತು. ಅದರ ಒಂದೊಂದು ದೃಶ್ಯವು ಅಮೋಘವಾಗಿ ಮೂಡಿಬಂದಿತ್ತು. ಹಾಗಾಗಿ ಅದು ಹೆಚ್ಚಿನ ಪ್ರೇಕ್ಷಕರನ್ನು ಆಕರ್ಷಿಸಿತ್ತು. ಇಂತಹ ಸೂಪರ್ ಹಿಟ್ ಚಿತ್ರ ದೃಶ್ಯವೊಂದನ್ನು ನಯನತಾರಾ ಹಾಗೂ ವಿಘ್ನೇಶ್ ಪುತ್ರರು ಮರುಸೃಷ್ಟಿ ಮಾಡಿದ್ದಾರೆ.

ಈ ಚಿತ್ರದಲ್ಲಿ ರಮ್ಯಕೃಷ್ಣರವರು ಶಿವಗಾಮಿ ಪಾತ್ರದಲ್ಲಿ ನೀರಿನಲ್ಲಿ ಮುಳುಗುತ್ತಿರುವಾಗ ಬಾಹುಬಲಿಯನ್ನು ಕೈಯಲ್ಲಿ ಎತ್ತಿ ಹಿಡಿದಿರುವ ದೃಶ್ಯ ಇಂದಿಗೂ ಎಲ್ಲರ ಮನದಲ್ಲಿ ನೆಲೆಯೂರಿದೆ. ಅಂತಹ ದೃಶ್ಯವನ್ನು ಇದೀಗ ವಿಘ್ನೇಶ್‌ ಅವರು ಮರುಸೃಷ್ಟಿ ಮಾಡಿದ್ದಾರೆ. ತಮ್ಮ ಮಕ್ಕಳಿಗೆ ಬಾಹುಬಲಿ ಸಾಂಪ್ರದಾಯಿಕ ಉಡುಗೆಯನ್ನು ತೊಡಿಸಿ, ವಿಘ್ನೇಶ್ ಅವರು ನೀರಿನಲ್ಲಿ ಮುಳುಗಿಕೊಂಡು ತಮ್ಮ ಮಕ್ಕಳನ್ನು ಕೈಯಲ್ಲಿ ಎತ್ತಿ ಹಿಡಿದಿದ್ದಾರೆ. ಹಾಗೇ ಇದಕ್ಕೆ ಸಂಬಂಧಿಸಿದ ಫೋಟೊವನ್ನು ನಯನತಾರಾ ಅವರು ಇನ್ ಸ್ಟಾಗ್ರಾಂನಲ್ಲಿ ಹಂಚಿಕೊಂಡು “My dear Baahubali 1&2 cos of U 2. It’s a Happy Father’s Day. Life with U boys sooo sooo amazingly satisfying. Love you my uyir & ulag @nayanathara(sic)” ಎಂಬ ಶೀರ್ಷಿಕೆ ನೀಡಿದ್ದಾರೆ.

ನಯನತಾರಾ ಈ ಫೋಟೊವನ್ನು ಹಂಚಿಕೊಳ್ಳುವ ಮೂಲಕ ವಿಘ್ನೇಶ್ ಶಿವನ್ ಅವರಿಗೆ ತಂದೆಯ ದಿನದ ಶುಭಾಶಯ ತಿಳಿಸಿದ್ದಾರೆ. ಹಾಗೇ ಮಕ್ಕಳ ಆಗಮನದಿಂದ ಅವರ ಜೀವನ ಎಷ್ಟು ತೃಪ್ತಿಕರವಾಗಿದೆ ಎಂಬುದನ್ನು ವಿವರಿಸಿದ್ದಾರೆ.
ನಯನತಾರಾ ಹಾಗೂ ವಿಘ್ನೇಶ್ ತಮ್ಮ ಅವಳಿ ಗಂಡುಮಕ್ಕಳಾದ ಉಯಿರ್ ಮತ್ತು ಉಲಗ್ ಅವರನ್ನು ಅಕ್ಟೋಬರ್ 2022ರಲ್ಲಿ ಬಾಡಿಗೆ ತಾಯ್ತನದ ಮೂಲಕ ಸ್ವಾಗತಿಸಿದರು. ಅಂದಿನಿಂದ ಅವರು ತಮ್ಮ ಮುದ್ದಾದ ಮಕ್ಕಳೊಂದಿಗಿನ ಫೋಟೊಗಳು ಮತ್ತು ವಿಡಿಯೊಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಇತ್ತೀಚಿಗೆ ಅವರು ತಮ್ಮ ಮಕ್ಕಳೊಂದಿಗೆ ಮೋಜು ಮಸ್ತಿ ಮಾಡಲು ಹಾಂಗ್‌ಕಾಂಗ್‌ಗೆ ಹೋಗಿದ್ದರು.

ಇದನ್ನೂ ಓದಿ: Viral Video: ನಾಯಿ ಜತೆ ವಾಕಿಂಗ್ ನೋಡಿರುತ್ತೀರಿ, ಹುಲಿ ಜತೆ? ಈ ವಿಡಿಯೊ ನೋಡಿ!

ಪ್ರಸ್ತುತ ನಯನತಾರಾ ಅವರು ನಿವಿನ್ ಪೌಲಿ ಅವರೊಂದಿಗೆ ‘ಡಿಯರ್ ಸ್ಟೂಡೆಂಟ್ಸ್’ ಚಿತ್ರದ ಚಿತ್ರೀಕರಣದಲ್ಲಿದ್ದಾರೆ. ಹಾಗೇ ಟೆಸ್ಟ್’ ಮತ್ತು ‘ಮನ್ನಂಗಟ್ಟಿ 1960’ ಬಿಡುಗಡೆಗಾಗಿ ಕಾಯುತ್ತಿದ್ದಾರೆ. ನಿರ್ಮಾಪಕ, ನಿರ್ದೇಶಕ ವಿಘ್ನೇಶ್ ಅವರು ಪ್ರದೀಪ್ ರಂಗನಾಥನ್, ಕೃತಿ ಶೆಟ್ಟಿ ಮತ್ತು ಎಸ್.ಜೆ ಸೂರ್ಯ ಅಭಿನಯದ ‘ಲವ್ ಇನ್ಶೂರೆನ್ಸ್ ಕಾರ್ಪೊರೇಷನ್’ ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ.

Continue Reading

ಸ್ಯಾಂಡಲ್ ವುಡ್

Actor Darshan: ಕೊಲೆಯನ್ನು ಆತುರದಲ್ಲಿ ಮಾಡಿರ್ತಾನೆ ಬಳಿಕ ಕೊರಗುತ್ತಾನೆ; ದರ್ಶನ್ ಹಳೆಯ ಸಂದರ್ಶನ ವೈರಲ್‌!

Actor Darshan: ದರ್ಶನ್‌ ರೇಣುಕಾ ಸ್ವಾಮಿ ಕೊಲೆ ಕೇಸ್‌ ಒಂದಲ್ಲ ಸಾಕಷ್ಟು ಕೇಸ್‌ಗಳು ಇದೀಗ ಬೆಳಕಿಗೆ ಬರುತ್ತಿದೆ. ಈಗ ದರ್ಶನ್‌ ಅವರ ವಿಡಿಯೊವೊಂದು ವೈರಲ್‌ ಆಗಿದೆ. ʻʻಕೊಲೆ ಮಾಡುವವನು ಆತುರದಲ್ಲಿ ಮಾಡಿರುತ್ತಾನೆ. ಆಮೇಲೆ ಆ ಬಗ್ಗೆ ಕೊರಗುತ್ತಾ ಇರುತ್ತಾನೆ. ಏನೋ ಸಮಯ ಕೊಡಬಹುದಿತ್ತು. ಪರಿಹಾರ ಕಂಡುಹಿಡಯಬಹುದಿತ್ತಲ್ಲ ಎಂದು ಆಮೇಲೆ ಕೊರಗುತ್ತಾನೆʼʼಎಂದು ಹೇಳಿದ್ದರು. ಇದೀಗ ದರ್ಶನ್‌ ಅವರ ಈ ವಿಡಿಯೊ ಕಂಡು ನೆಟ್ಟಿಗರು ʻʻದರಾನ್‌ ತಾವು ಕಲಿತ ಪಾಠವನ್ನೇ ಮರೆತು ಬಿಟ್ರಲ್ಲʼʼಎಂದು ಕಮೆಂಟ್‌ ಮಾಡುತ್ತಿದ್ದಾರೆ.

VISTARANEWS.COM


on

Actor Darshan old interview goes viral Explain About Murder And His Mindset
Koo

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ (Actor Darshan) ಅರೆಸ್ಟ್‌ ಆಗಿದ್ದಾರೆ. ಈ ಪ್ರಕರಣಕ್ಕೂ ಮುಂಚೆ 2011ರಲ್ಲಿ ಪತ್ನಿ ವಿಜಯಲಕ್ಷ್ಮಿ ಮೇಲೆ ದರ್ಶನ್ ಮಾರಣಾಂತಿಕ ಹಲ್ಲೆ ಮಾಡಿದ್ದರು. ಆ ಪ್ರಕರಣದಲ್ಲಿ 14 ದಿನ ನ್ಯಾಯಾಂಗ ಬಂಧನದಲ್ಲಿದ್ದರು ದರ್ಶನ್‌. ಆ ಸಮಯದಲ್ಲಿ ದರ್ಶನ್‌ ಅವರು ಜೈಲಿನ ಅನುಭವವನ್ನು ಹೇಳಿಕೊಂಡಿದ್ದರು. ಇದೀಗ ಈ ವಿಡಿಯೊ ಭಾರಿ ವೈರಲ್‌ ಆಗುತ್ತಿದೆ. ವಿಡಿಯೊದಲ್ಲಿ ದರ್ಶನ್‌ ʻʻಕೊಲೆ ಮಾಡುವವನು ಆತುರದಲ್ಲಿ ಮಾಡಿರುತ್ತಾನೆ. ಆಮೇಲೆ ಆ ಬಗ್ಗೆ ಕೊರಗುತ್ತಾ ಇರುತ್ತಾನೆ. ಏನೋ ಸಮಯ ಕೊಡಬಹುದಿತ್ತು. ಪರಿಹಾರ ಕಂಡುಹಿಡಯಬಹುದಿತ್ತಲ್ಲ ಎಂದು ಆಮೇಲೆ ಕೊರಗುತ್ತಾನೆʼʼಎಂದು ಹೇಳಿದ್ದರು. ಇದೀಗ ದರ್ಶನ್‌ ಅವರ ಈ ವಿಡಿಯೊ ಕಂಡು ನೆಟ್ಟಿಗರು ʻʻದರಾನ್‌ ತಾವು ಕಲಿತ ಪಾಠವನ್ನೇ ಮರೆತು ಬಿಟ್ರಲ್ಲʼʼಎಂದು ಕಮೆಂಟ್‌ ಮಾಡುತ್ತಿದ್ದಾರೆ.

ದರ್ಶನ್‌ ರೇಣುಕಾ ಸ್ವಾಮಿ ಕೊಲೆ ಕೇಸ್‌ ಒಂದಲ್ಲ ಸಾಕಷ್ಟು ಕೇಸ್‌ಗಳು ಇದೀಗ ಬೆಳಕಿಗೆ ಬರುತ್ತಿದೆ. ಈಗ ದರ್ಶನ್‌ ಅವರ ವಿಡಿಯೊವೊಂದು ವೈರಲ್‌ ಆಗಿದೆ. ಈ ಹಿಂದೆ 14 ದಿನ ಜೈಲಿನಲ್ಲಿ ಇದ್ದು ಬಂದ ದರ್ಶನ್‌ ವಿಡಿಯೊದಲ್ಲಿ ಈ ರೀತಿ ಹೇಳಿಕೊಂಡಿದ್ದಾರೆ. ʻನಾನು 14 ದಿನ ಜೈಲಿನಲ್ಲಿ ಇದ್ದವನು. ಸುಮಾರು ಜನರನ್ನ ನಾನು ಮೀಟ್‌ ಮಾಡ್ದೆ ಅಲ್ಲಿ. ಕೆಲವರು ಮಾಡದೇ ಇರುವ ತಪ್ಪಿಗೆ ಅಲ್ಲಿ ಇದ್ದಾರೆ. ಇನ್ನು ಕೆಲವರಿಗೆ ಕೋಪ ಆ ಟೈಮಿಗೆ ಕೈ ಕೊಟ್ಟು ಜೈಲು ಪಾಲಾಗಿದ್ದರು. ಆ ಬಗ್ಗೆ ಅವತ್ತು ನಾನು ಯೋಚನೆ ಮಾಡಿದಾಗ, ಕೊಲೆ ಮಾಡುವವನು ಆತುರದಲ್ಲಿ ಮಾಡಿರುತ್ತಾನೆ. ಬಳಿಕ ಕೊರಗುತ್ತಿರುತ್ತಾನೆ. ಸ್ವಲ್ಪ ಸಮಯ ಕೊಡಬೇಕಿತ್ತು. ಏನೋ ಪರಿಹಾರ ಕಂಡು ಹಿಡಿಯಬಹುದಾಗಿತ್ತು ಎಂದು ಅವನಿಗೆ ಆಮೇಲೆ ಅನ್ನಿಸಿರುತ್ತದೆ. ಇದೆಲ್ಲ ನಾನು ಜೈಲಿನಲ್ಲಿ ಇದ್ದಾಗ ಕಲಿತ ಪಾಠʼʼಎಂದಿದ್ದರು. ಇದೀಗ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್‌ ಈ ಪಾಠ ಮರೆತು ಬಿಟ್ರಾ ಎಂದು ಕಮೆಂಟ್‌ ಮಾಡುತ್ತಿದ್ದಾರೆ ನೆಟ್ಟಿಗರು. ಇದೀಗ ಟ್ರೋಲಿಗರಿಗೂ ಈ ವಿಡಿಯೊ ಆಹಾರವಾಗಿದೆ.

ಇದನ್ನೂ ಓದಿ: Actor Darshan: ಬಂಧಿತರಲ್ಲಿ ಹಲವರಿಗೆ ದರ್ಶನ್ ನೇರ ಪರಿಚಯವೇ ಇಲ್ವಂತೆ; ʻದಚ್ಚುʼ ಅರೆಸ್ಟ್ ಆದ ಬಳಿಕವೇ ಮುಖಾಮುಖಿ!

ಹೊಸ ಆರೋಪಗಳು ಬೆಳಕಿಗೆ

10 ವರ್ಷಗಳ ಹಿಂದೆ, ಪರಿಹಾರ ಕೇಳಲು ಹೋಗಿದ್ದ ಕೂಲಿ ಕೆಲಸಗಾರನ ಮೇಲೆ ನಾಯಿ ಛೂ ಬಿಟ್ಟು ವಿಕೃತಿ ಮೆರೆದಿದ್ದರೆಂಬ ಗಂಭೀರ ಆರೋಪ ಕೇಳಿ ಬಂದಿದೆ. ಟಿ. ನರಸೀಪುರ ಸಮೀಪದ ತೂಗುದೀಪ ಫಾರ್ಮ್​ಹೌಸ್​ನಲ್ಲಿ ಚಾಮರಾಜನಗರ ತಾಲೂಕಿನ ನಿಜಲಿಂಗನಪುರದ ಮಹೇಶ್ ಕೆಲಸ ಮಾಡುತ್ತಿದ್ದರು. ಕೆಲಸ ಮಾಡುವ ವೇಳೆ ಇವರಿಗೆ ಎತ್ತು ಕೊಂಬಿನಿಂದ ತಿವಿದಿತ್ತು. ಎತ್ತಿನ ಕೊಂಬು ಕಣ್ಣಿನಿಂದ ತೂರಿ ತಲೆ ಹೊರಗೆ ಬಂದಿತ್ತು. ಇದರಿಂದ ಅವರ ಕಣ್ಣು ಹೋಗಿತ್ತು. ಆ ಬಳಿಕ ದರ್ಶನ್‌ ಕಡೆಯವರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ ಮನೆಗೆ ತಂದು ಬಿಟ್ಟು ಹೋಗಿದ್ದರು. ಆ ಬಳಿಕ ದರ್ಶನ್ ಈ ಕುಟುಂಬದ ಕಡೆ ತಿರುಗಿಯೂ ನೋಡಿಲ್ಲ. ಬಳಿಕ ಕಾರ್ಮಿಕ ತನ್ನ ಸಂಬಂಧಿಕರ ಜತೆ ಪರಿಹಾರ ಕೇಳಲು ಫಾರ್ಮ್ ಹೌಸ್​ಗೆ ಹೋದರೆ ದರ್ಶನ್‌ ಗ್ಯಾಂಗ್‌ ಅವರ ಮೇಲೆ ಸಾಕುನಾಯಿ ಛೂ ಬಿಟ್ಟಿದ್ದರಂತೆ. ಮೈಸೂರಿನ ಹೊಟೇಲ್​ಗೆ ಮಾತುಕತೆಗೆ ಕರೆಸಿ ರೌಡಿಗಳಿಂದ ಬೆದರಿಕೆ ಹಾಕಲಾಗಿತ್ತು ಎನ್ನಲಾಗಿದೆ.

ಮಹಿಳೆ ಮೇಲೆ ನಟ ದರ್ಶನ್ ಕ್ರೌರ್ಯ

ಮತ್ತೊಂದು ಪ್ರಕರಣದಲ್ಲಿ ಕೊಡಗಿನ ಹೋಂ ಸ್ಟೇ ಒಂದರಲ್ಲಿ ಮಹಿಳೆ ಮೇಲೆ ನಟ ದರ್ಶನ್ ಕ್ರೌರ್ಯ ಮೆರೆದಿದ್ದಾರೆ ಎನ್ನಲಾಗಿದೆ. ಕೊಡಗು ಜಿಲ್ಲೆಯ ಹೊಂ ಸ್ಟೇ ಯಲ್ಲಿ ಕೆಲವು ವರ್ಷಗಳ ಹಿಂದೆ ಘಟನೆ ನಡೆದಿತ್ತು. ನಟ ದರ್ಶನ್ ಸ್ನೇಹಿತರ ಜತೆ ಹೋಂ ಸ್ಟೇ ಯಲ್ಲಿ ಉಳಿದುಕೊಂಡಿದ್ದರು. ಈ ವೇಳೆ ಹೋಂ ಸ್ಟೇಯಲ್ಲಿ ಕೆಲಸ ಮಾಡುವ ಮಹಿಳೆಗೆ ಸಿಗರೇಟ್‌ನಿಂದ ಸುಟ್ಟು ಹಲ್ಲೆ ಮಾಡಿದ್ದರು ಎಂದು ಆರೋಪ ಮಾಡಿದ್ದಾರೆ.

Continue Reading
Advertisement
Dawood Ibrahim
ವಿದೇಶ8 mins ago

Dawood Ibrahim: ವೃದ್ಧ ಡಾನ್‌ ದಾವೂದ್‌ ಇಬ್ರಾಹಿಂ ಈಗ ಅಮೆರಿಕದ ಕೇಂದ್ರ ಗುಪ್ತಚರ ಸಂಸ್ಥೆಯ ಕೈಗೊಂಬೆ?

Two drown in quarry
ಕರ್ನಾಟಕ9 mins ago

Drown in Quarry: ಕ್ವಾರಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರ ಸಾವು

MAHE Manipal 1 Day Treatment Capacity Development Training Program at KMC
ಬೆಂಗಳೂರು20 mins ago

MAHE Manipal: ಕೆಎಂಸಿಯಲ್ಲಿ 1 ದಿನದ ಚಿಕಿತ್ಸಾ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ

Job Recruitment
Latest21 mins ago

Job Recruitment: ಬ್ಯಾಂಕ್ ಆಫ್ ಬರೋಡಾದಲ್ಲಿ 627 ಹುದ್ದೆಗಳಿಗೆ ಅರ್ಜಿ ಆಹ್ವಾನ; 55 ಲಕ್ಷದವರೆಗೆ ಸಂಬಳ!

Viral Video
Latest29 mins ago

Viral Video: ಯುಪಿಎಸ್‌ಸಿ ಪರೀಕ್ಷಾ ಕೇಂದ್ರಕ್ಕೆ ನೋ ಎಂಟ್ರಿ; ಗೇಟ್ ಬಳಿ ಮೂರ್ಛೆ ಹೋದ ತಾಯಿ!

Kannada New Movie RAMARASA Hero Introduction By Kiccha Sudeepa
ಸ್ಯಾಂಡಲ್ ವುಡ್35 mins ago

Kannada New Movie: ʻರಾಮರಸ’ಸಿನಿಮಾಗೆ ಬಿಗ್ ಬಾಸ್ ವಿನ್ನರ್ ಕಾರ್ತಿಕ್ ಹೀರೊ ; ಬೆಂಬಲಿಸಿದ ಸುದೀಪ್!

Eid Prayers
ದೇಶ36 mins ago

Eid Prayers: ಬಕ್ರೀದ್‌ ದಿನವೂ ಶ್ರೀನಗರದ ಜಾಮಾ ಮಸೀದಿಯಲ್ಲಿ ನಮಾಜ್‌ಗೆ ಭದ್ರತಾ ಸಿಬ್ಬಂದಿ ನಕಾರ; ಏಕೆ?‌

Road Accident
ಬೆಳಗಾವಿ37 mins ago

Road Accident : ರಸ್ತೆ ದಾಟುವಾಗ ಹರಿದ ಕಾರು; ಒದ್ದಾಡಿ ಪ್ರಾಣಬಿಟ್ಟ ಬಾಲಕ

HPCL Job Interview
ಉದ್ಯೋಗ43 mins ago

HPCL Job Interview: ಎಚ್ ಪಿ ಸಿ ಎಲ್ ಸಿಎಂಡಿ ಹುದ್ದೆ ಸಂದರ್ಶನ; ಘಟಾನುಘಟಿ 8 ಅಭ್ಯರ್ಥಿಗಳು ಫೇಲ್!

Team India
ಕ್ರೀಡೆ1 hour ago

Team India: ಬಾರ್ಬಡೋಸ್​ನಲ್ಲಿ ಬೀಚ್​ ವಾಲಿಬಾಲ್​ ಆಡಿದ ಟೀಮ್​ ಇಂಡಿಯಾ; ವಿಡಿಯೊ ವೈರಲ್​

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು4 hours ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು4 hours ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ23 hours ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ24 hours ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 day ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ3 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ3 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌