ದೇವರ ಸೇಡು ಕ್ರೂರವಾಗಿರುತ್ತದೆ, ರಾಜೀವ್​ ಗಾಂಧಿಯ ಛಿದ್ರವಾದ ದೇಹದ ಒಂದು ತುಂಡೂ ಸಿಗಲಿಲ್ಲ: ಆಜಂ ಖಾನ್ ವಿವಾದ - Vistara News

ದೇಶ

ದೇವರ ಸೇಡು ಕ್ರೂರವಾಗಿರುತ್ತದೆ, ರಾಜೀವ್​ ಗಾಂಧಿಯ ಛಿದ್ರವಾದ ದೇಹದ ಒಂದು ತುಂಡೂ ಸಿಗಲಿಲ್ಲ: ಆಜಂ ಖಾನ್ ವಿವಾದ

40 ವರ್ಷದ ರಾಜಕೀಯ ಅನುಭವವನ್ನು ಹಂಚಿಕೊಂಡ ಆಜಂ ಖಾನ್​ ‘ಕಾವಲಿಯಿಂದ ರೊಟ್ಟಿ ಯಾವಾಗ ಮಗುಚಿ ಬೀಳುತ್ತದೆ ಎಂಬುದು ಗೊತ್ತಾಗುವುದಿಲ್ಲ. ಒಮ್ಮೆ ಸರ್ಕಾರ ಬದಲಾಗುತ್ತಿದ್ದಂತೆ ಎಲ್ಲವೂ ಬದಲಾಗುತ್ತದೆ ಎಂದು ಆಜಂ ಖಾನ್ ಹೇಳಿದ್ದಾರೆ.

VISTARANEWS.COM


on

azam khan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ರಾಜಕೀಯ ನಿಂತ ನೀರಲ್ಲ. ಇಲ್ಲಿನ ಸನ್ನಿವೇಶ ಪ್ರತಿದಿನ ಬದಲಾಗುತ್ತಿರುತ್ತದೆ ಎಂಬ ಬಗ್ಗೆ ಮಾತನಾಡುವ ಭರದಲ್ಲಿ ಸಮಾಜವಾದಿ ನಾಯಕ ಆಜಂ ಖಾನ್ (Azam Khan) ಅವರು ವಿವಾದವೊಂದನ್ನು ಸೃಷ್ಟಿಸಿದ್ದಾರೆ. ಆ ದೇವರು ತೀರಿಸಿಕೊಳ್ಳುವ ಪ್ರತೀಕಾರ ಯಾವಾಗಲೂ ಅತ್ಯಂತ ಕ್ರೂರವಾಗಿರುತ್ತದೆ. ರಾಜೀವ್ ಗಾಂಧಿಯವರನ್ನೇ ನೋಡಿ, ಅವರ ಜತೆ ಅದೆಷ್ಟೆಲ್ಲ ಸಂಖ್ಯೆಯ ಸಂಸದರು ಇದ್ದರು. ಆದರೆ ಅವರು ಮೃತಪಟ್ಟ ವೇಳೆ ಛಿದ್ರವಾದ ದೇಹದ ಒಂದು ತುಂಡೂ ಸಿಗಲಿಲ್ಲ’ ಎಂದು ಹೇಳಿದ್ದು ಅನೇಕರ ಆಕ್ರೋಶಕ್ಕೆ ಕಾರಣವಾಗಿದೆ.

ಉತ್ತರ ಪ್ರದೇಶದ ರಾಂಪುರ ಮುನ್ಸಿಪಲ್ಟಿಯ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಸಮಾಜವಾದಿ ಪಕ್ಷದ ಅಭ್ಯರ್ಥಿ ಫಾತಿಮಾ ಜಾಬಿ ಪರ ಪ್ರಚಾರ ನಡೆಸಿದ ಆಜಂ ಖಾನ್ ‘ನಾನು ಇಂದಿರಾಗಾಂಧಿ ಆಡಳಿತವನ್ನು ನೋಡಿದ್ದೇನೆ. ಅವರಿಗೆ ಏನಾಯಿತು. ರಾಜೀವ್ ಗಾಂಧಿಗೆ ಏನಾಯಿತು. ಅಷ್ಟೆಲ್ಲ ಸಂಸದರಿದ್ದರೂ ಕೊನೇ ಕ್ಷಣದಲ್ಲಿ ಅವರ ದೇಹದ ಒಂದು ತುಂಡು ಕೂಡ ಸಿಗಲಿಲ್ಲ. ಸಂಜಯ್​ ಗಾಂಧಿಯವರಂತವರೂ ಆಕಾಶದಲ್ಲಿ ಹಾರಾಡುತ್ತಾರೆ, ಪೀಸ್​ಪೀಸ್ ಆಗಿ ಪತ್ತೆಯಾಗುತ್ತಾರೆ’ ಎಂದು ಹೇಳಿದ್ದಾರೆ.

ತಮ್ಮ 40 ವರ್ಷದ ರಾಜಕೀಯ ಅನುಭವವನ್ನು ಹಂಚಿಕೊಂಡ ಆಜಂ ಖಾನ್​ ‘ಕಾವಲಿಯಿಂದ ರೊಟ್ಟಿ ಯಾವಾಗ ಮಗುಚಿ ಬೀಳುತ್ತದೆ ಎಂಬುದು ಗೊತ್ತಾಗುವುದಿಲ್ಲ. ಒಮ್ಮೆ ಸರ್ಕಾರ ಬದಲಾಗುತ್ತಿದ್ದಂತೆ ಎಲ್ಲವೂ ಬದಲಾಗುತ್ತದೆ. ಆಡಳಿತ, ಪೊಲೀಸರು ಎಲ್ಲರೂ ಬದಲಾಗುತ್ತಾರೆ. ಯಾವುದೋ ಸರ್ಕಾರವಿದ್ದಾಗ ನಮ್ಮ ಮನೆಯ ಬಾಗಿಲು, ಗೋಡೆ ಮುರಿದ ಪೊಲೀಸರು, ನಾವು ಸರ್ಕಾರ ರಚನೆ ಮಾಡಿದಾಗ ನಮ್ಮೆದುರು ನಿಂತು ಸೆಲ್ಯೂಟ್ ಹೊಡೆಯುತ್ತಾರೆ. ಈ ಬದಲಾವಣೆ ಪ್ರಕ್ರಿಯೆ ನಿರಂತರ’ ಎಂದು ಹೇಳಿದರು. ಈ ಮೂಲಕ ಆಜಂ ಖಾನ್​ ಬಿಜೆಪಿ ಸರ್ಕಾರವನ್ನೂ ವ್ಯಂಗ್ಯ ಮಾಡಿದರು.

ಇದನ್ನೂ ಓದಿ: Karnataka Election: ಉತ್ತರ ಪ್ರದೇಶ ಮಾದರಿ ಎಂದ ಯೋಗಿಗೆ ಸಿದ್ದರಾಮಯ್ಯ 10 ಸವಾಲು; ಇದೇನಾ ಮಾದರಿ?

ಆಜಂ ಖಾನ್​
ಆಜಂ ಖಾನ್​ ಅವರು ರಾಂಪುರದ ಮಾಜಿ ಶಾಸಕ. 2017ರಲ್ಲಿ ಯೋಗಿ ಆದಿತ್ಯನಾಥ್​ ಅವರ ನೇತೃತ್ವದ ಸರ್ಕಾರ ಬಂದಾಗಿನಿಂದ ಇವರ ವಿರುದ್ಧ 90ಕ್ಕೂ ಹೆಚ್ಚು ಕ್ರಿಮಿನಲ್ ಕೇಸ್​ಗಳು ದಾಖಲಾಗಿವೆ. ದ್ವೇಷ ಭಾಷಣ ಕೇಸ್​​ನಲ್ಲಿ ಮೂರು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿ, ತಮ್ಮ ಶಾಸಕ ಸ್ಥಾನದಿಂದ ಅನರ್ಹಗೊಂಡಿದ್ದಾರೆ. 2020ರಲ್ಲಿ ಅಲಹಾಬಾದ್​ ಕೋರ್ಟ್​ನಿಂದ ಜಾಮೀನು ಪಡೆದು, ಸದ್ಯ ಹೊರಗೆ ಇದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Physical assault : ಹೆಣ್ಣು ಮಕ್ಕಳಿಗೆ ಅಶ್ಲೀಲ ಚಿತ್ರ ತೋರಿಸುತ್ತಿದ್ದ ಶಿಕ್ಷಕ; ಸಿಟ್ಟಿಗೆದ್ದು ಶಾಲೆಯನ್ನೇ ಸುಟ್ಟು ಹಾಕಿದ ಗ್ರಾಮಸ್ಥರು

Physical assault :

VISTARANEWS.COM


on

Koo

ಗುವಾಹಟಿ: ಇಲ್ಲಿನ ಶಾಲೆಯೊಂದರ ಶಿಕ್ಷಕ ಶಾಲೆಯಲ್ಲಿ ಕಲಿಯುತ್ತಿರುವ ಹೆಣ್ಣು ಮಕ್ಕಳಿಗೆ ಅಶ್ಲೀಲ ಚಿತ್ರಗಳನ್ನು ತೋರಿಸಿ ಲೈಂಗಿಕ ಕಿರುಕುಳ (Physical assault) ನೀಡುತ್ತಿದ್ದ ಬಗ್ಗೆ ದೂರು ದಾಖಲಾಗಿದೆ. ಪ್ರಕರಣ ಬಯಲಿಗೆ ಬಂದ ತಕ್ಷಣ ಗ್ರಾಮಸ್ಥರು ಶಾಲೆಗೆ ಬೆಂಕಿ ಹಚ್ಚಿ ಸುಟ್ಟು ಹಾಕಿದ್ದಾರೆ. ಅಸ್ಸಾಂನ ಕರೀಂಗಂಜ್ ಜಿಲ್ಲೆಯಲ್ಲಿ ನಡೆದಿದೆ. ಶಿಕ್ಷಕನ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶಾಲೆಗೆ ಬೆಂಕಿ ಹಚ್ಚಿದ್ದಕ್ಕಾಗಿ ಸ್ಥಳೀಯರು ಸಹ ಪೊಲೀಸ್ ಪ್ರಕರಣವನ್ನು ಎದುರಿಸುವಂತಾಗಿದೆ.

ಘಟನೆ ಬಳಿಕ 37 ವರ್ಷದ ಶಿಕ್ಷಕ ಪರಾರಿಯಾಗಿದ್ದು, ಪ್ರಕರಣದ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆ ಆಗಸ್ಟ್ 12 ರಂದು ನಡೆದಿದ್ದು, ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಹಲವಾರು ವಿಭಾಗಗಳ ಅಡಿಯಲ್ಲಿ ಪೊಲೀಸರು ಶಿಕ್ಷಕನ ವಿರುದ್ಧ ಪ್ರಕರಣ ದಾಖಲಿಸಿದ್ದೇವೆ ಎಂದು ಕರೀಂಗಂಜ್ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಪಾರ್ಥ ಪ್ರತಿಮ್ ದಾಸ್ ತಿಳಿಸಿದ್ದಾರೆ. ಘಟನೆಯ ಬಗ್ಗೆ ಹೇಳಲು ಆರಂಭದಲ್ಲಿ ಮಕ್ಕಳು ಹಿಂಜರಿಯುತ್ತಿದ್ದರು. ಆದರೆ ನಂತರ ಬಾಲಕಿಯೊಬ್ಬಳು ತನ್ನ ತಾಯಿಗೆ ವಿಷಯ ತಿಳಿಸಿದ್ದಳು ಎಂದು ಪೊಲೀಸರು ಹೇಳಿದ್ದಾರೆ. ಬಳಿಕ ಆ ಸುದ್ದಿ ಎಲ್ಲೆಡೆ ಹರಿಡಿದ್ದು ಸಿಟ್ಟಿಗೆದ್ದ ಗ್ರಾಮಸ್ಥರು ಹಲ್ಲೆ ಮಾಡಿದ್ದಾರೆ

“ಅಶ್ಲೀಲ ಚಿತ್ರಗಳನ್ನು ನೋಡುವಂತೆ ಶಿಕ್ಷಕರು ಬಲವಂತಪಡಿಸಿದ್ದಾರೆ ಎಂದು ಅವಳು ಹೇಳಿದ್ದಳು. ವಿಡಿಯೊ ತೋರಿಸಿದ ಬಳಿಕ ಬಾಲಕಿಯನ್ನು ಅನುಚಿತವಾಗಿ ಸ್ಪರ್ಶಿಸಿದ್ದ” ಎಂದು ಕುಟುಂಬದ ಸದಸ್ಯರೊಬ್ಬರು ಹೇಳಿದರು. ಕೋಪಗೊಂಡ ಸ್ಥಳೀಯರು ಶಿಕ್ಷಕನ ಮೇಲೆ ಹಲ್ಲೆ ಮಾಡಲು ಪ್ರಯತ್ನಿಸಿದ್ದರು. ಆದರೆ ಅವನು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದ ಎಂದು ಎಸ್ಪಿ ಹೇಳಿದ್ದಾರೆ.

ಇದನ್ನೂ ಓದಿ: Sourav Ganguly : ಕೊಲೆಗಡುಕರಿಗೆ ಈ ರೀತಿ ಮಾಡಿ; ಕೋಲ್ಕೊತಾ ವೈದ್ಯೆಯ ಅತ್ಯಾಚಾರ, ಕೊಲೆ ಬಗ್ಗೆ ಸೌರವ್​ ಗಂಗೂಲಿ ಅಭಿಪ್ರಾಯ ಹೀಗಿತ್ತು

“ಸ್ಥಳೀಯರು ಸರ್ಕಾರಿ ಆಸ್ತಿಗೆ ಹಾನಿ ಮಾಡಿರುವುದರಿಂದ, ನಾವು ಅವರ ವಿರುದ್ಧವೂ ಪ್ರಕರಣ ದಾಖಲಿಸುತ್ತೇವೆ. ನಾವು ಈ ಬಗ್ಗೆ ತನಿಖೆ ನಡೆಸುತ್ತಿದ್ದೇವೆ” ಎಂದು ಅವರು ಹೇಳಿದ್ದಾರೆ.

“ನಾವು ನಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸುತ್ತೇವೆ ಇದರಿಂದ ಅವರು ಶಿಕ್ಷಣವನ್ನು ಪಡೆಯುತ್ತಾರೆ ಮತ್ತು ಉತ್ತಮ ಮಾನವರಾಗುತ್ತಾರೆ ಎಂದುಕೊಂಡಿದ್ದೆವು. ಆದರೆ ಈ ರೀತಿಯ ಶಿಕ್ಷಕರಿಂದ ಅವರು ಏನು ಕಲಿಯುತ್ತಾರೆ” ಎಂದು ಸ್ಥಳೀಯರೊಬ್ಬರು ಹೇಳಿದರು.

Continue Reading

ಪ್ರಮುಖ ಸುದ್ದಿ

Sourav Ganguly : ಕೊಲೆಗಡುಕರಿಗೆ ಈ ರೀತಿ ಮಾಡಿ; ಕೋಲ್ಕೊತಾ ವೈದ್ಯೆಯ ಅತ್ಯಾಚಾರ, ಕೊಲೆ ಬಗ್ಗೆ ಸೌರವ್​ ಗಂಗೂಲಿ ಅಭಿಪ್ರಾಯ ಹೀಗಿತ್ತು

Sourav Ganguly: ಕೋಲ್ಕತಾ ಆಸ್ಪತ್ರೆಯಲ್ಲಿ ತರಬೇತಿ ವೈದ್ಯೆಯ ಭೀಕರ ಅತ್ಯಾಚಾರ-ಕೊಲೆಯ ವಿರುದ್ಧ ಹೆಚ್ಚುತ್ತಿರುವ ಪ್ರತಿಭಟನೆಗಳ ಮಧ್ಯೆ, ಭಾರತೀಯ ವೈದ್ಯಕೀಯ ಸಂಘ (ಐಎಂಎ) ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ, ಈ ಸಮಯದಲ್ಲಿ ವಾಡಿಕೆಯ ಒಪಿಡಿ ಸೇವೆಗಳು ಮತ್ತು ಚುನಾಯಿತ ಶಸ್ತ್ರಚಿಕಿತ್ಸೆಗಳನ್ನು ನಡೆಯುವುದಿಲ್ಲ. ಆದಾಗ್ಯೂ, ಎಲ್ಲಾ ತುರ್ತು ಸೇವೆಗಳು ಸಿಗಲಿವೆ.

VISTARANEWS.COM


on

Sourav Ganguly
Koo

ಕೋಲ್ಕತಾ: ಇಲ್ಲಿನ ಆರ್​​ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣವು ರಾಷ್ಟ್ರವನ್ನು ಬೆಚ್ಚಿಬೀಳಿಸಿದೆ. ದೇಶಾದ್ಯಂತ ಪ್ರತಿಭಟನೆಗಳು ನಡೆದಿವೆ. ಅಲ್ಲಿನ ಹೈಕೋರ್ಟ್ ಆದೇಶದ ಮೇರೆಗೆ ಸಿಬಿಐ ತನಿಖೆ ನಡೆಸುತ್ತಿದೆ. ಕನಿಷ್ಠ 30 ಶಂಕಿತರನ್ನು ಗುರುತಿಸಿದ್ದು ಪ್ರಶ್ನಿಸಲು ಪ್ರಾರಂಭಿಸಿದ್ದೇವೆ” ಎಂದು ಸಿಬಿಐ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಬಿಸಿಸಿಐ ಮಾಜಿ ಅಧ್ಯಕ್ಷ ಹಾಗೂ ಪಶ್ಚಿಮ ಬಂಗಾಳದ ಕ್ರೀಡಾ ಐಕಾನ್ ಸೌರವ್ ಗಂಗೂಲಿ (Sourav Ganguly) ಕಠಿಣ ಶಿಕ್ಷೆಯಿಂದ ಮಾತ್ರ ಇಂಥ ಪ್ರಕರಣಗಳಿಗೆ ಕೊನೆ ಎಂದು ತಮ್ಮ ಅಭಿಪ್ರಾಯ ಹೇಳಿದ್ದಾರೆ.

ಸೌರವ್ ಗಂಗೂಲಿ ಈ ಘಟನೆಯನ್ನು ಖಂಡಿಸಿದ್ದು, ಶಿಕ್ಷೆಯನ್ನು ಕಠಿಣಗೊಳಿಸಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. ಈ ವಿಷಯದ ಬಗ್ಗೆ ಅವರು ತಮ್ಮ ಹಿಂದಿನ ಹೇಳಿಕೆಗಳಿಗೆ ಎದುರಾದ ಟೀಕೆಗಳಿಗೆ ಉತ್ತರ ಕೊಟ್ಟಿದ್ದಾರೆ. ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಈ ಹಿಂದೆ ಗಂಗೂಲಿ ಇದನ್ನು ‘ಯಾವುದೋ ಒಂದು ಘಟನೆ ಎಂದು ಕರೆದಿದ್ದರು ಎಂದು ಆರೋಪಿಸಿದ್ದರು. ಕೋಲ್ಕತಾ ಮೂಲದ ಭಾರತದ ಮಾಜಿ ತಾರೆ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು ಇದನ್ನು ಸಂದರ್ಭಕ್ಕೆ ಅನುಗುಣವಾಗಿ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಕಳೆದ ಭಾನುವಾರ ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಮತ್ತು ವ್ಯಾಖ್ಯಾನಿಸಲಾಗಿದೆ. ನಾನು ಇದನ್ನು ಈ ಹಿಂದೆಯೂ ಹೇಳಿದ್ದೇನೆ ಇದೊಂದು ಭಯಾನಕ ಘಟನೆ. ಈಗ ಸಿಬಿಐ, ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ನಡೆದಿರುವುದು ತುಂಬಾ ನಾಚಿಕೆಗೇಡಿನ ಸಂಗತಿ. ಈ ಬಗ್ಗೆ ತನಿಖೆ ನಡೆಸುತ್ತಿರುವ ಸಿಬಿಐ, ಅಪರಾಧಿಯನ್ನು ಪತ್ತೆ ಹೆಚ್ಚಿ ಕಠಿಣ ಶಿಕ್ಷೆ ನೀಡಬೇಕು ಎಂದು ನಾನು ಆಗ್ರಹಿಸುತ್ತೇನೆ. ಶಿಕ್ಷೆಯು ಹೇಗಿರಬೇಕು ಎಂದರೆ ಯಾರೂ ತಮ್ಮ ಜೀವನದಲ್ಲಿ ಮತ್ತೆ ಅಂತಹ ಅಪರಾಧವನ್ನು ಮಾಡಲು ಧೈರ್ಯ ಮಾಡಬಾರದು ಎಂದು ಸೌರವ್ ಗಂಗೂಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ರಾಷ್ಟ್ರ ವ್ಯಾಪಿ ಮುಷ್ಕರ

ಕೋಲ್ಕತಾ ಆಸ್ಪತ್ರೆಯಲ್ಲಿ ತರಬೇತಿ ವೈದ್ಯೆಯ ಭೀಕರ ಅತ್ಯಾಚಾರ-ಕೊಲೆಯ ವಿರುದ್ಧ ಹೆಚ್ಚುತ್ತಿರುವ ಪ್ರತಿಭಟನೆಗಳ ಮಧ್ಯೆ, ಭಾರತೀಯ ವೈದ್ಯಕೀಯ ಸಂಘ (ಐಎಂಎ) ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ, ಈ ಸಮಯದಲ್ಲಿ ವಾಡಿಕೆಯ ಒಪಿಡಿ ಸೇವೆಗಳು ಮತ್ತು ಚುನಾಯಿತ ಶಸ್ತ್ರಚಿಕಿತ್ಸೆಗಳನ್ನು ನಡೆಯುವುದಿಲ್ಲ. ಆದಾಗ್ಯೂ, ಎಲ್ಲಾ ತುರ್ತು ಸೇವೆಗಳು ಸಿಗಲಿವೆ.

ಸಾರ್ವಜನಿಕ ಹಿತದೃಷ್ಟಿಯಿಂದ ತಮ್ಮ ಕರ್ತವ್ಯಗಳನ್ನು ಪುನರಾರಂಭಿಸುವಂತೆ ಆರೋಗ್ಯ ಸಚಿವಾಲಯವು ಪ್ರತಿಭಟನಾನಿರತ ವೈದ್ಯರನ್ನು ವಿನಂತಿಸಿದೆ. ಆರೋಗ್ಯ ಸೇವಾ ಕಾರ್ಯನಿರತರ ಸುರಕ್ಷತೆಗಾಗಿ ಸಮಿತಿಯನ್ನು ರಚಿಸಲಾಗುವುದು ಎಂದು ಭರವಸೆ ನೀಡಿದೆ. ಸಮಿತಿಯೊಂದಿಗೆ ತಮ್ಮ ಸಲಹೆಗಳನ್ನು ಹಂಚಿಕೊಳ್ಳಲು ರಾಜ್ಯ ಸರ್ಕಾರಗಳು ಸೇರಿದಂತೆ ಎಲ್ಲಾ ಪಾಲುದಾರರ ಪ್ರತಿನಿಧಿಗಳನ್ನು ಸಲಹೆ ನೀಡಲಾಗಿದೆ.

ಇದನ್ನೂ ಓದಿ: Power Banks : ಇನ್ನು ಮುಂದೆ ರೈಲಿನಲ್ಲಿ ಪ್ರಯಾಣಿಸುವಾಗ ಪವರ್​ ಬ್ಯಾಂಕ್​ಗಳನ್ನು ಬಾಡಿಗೆಗೆ ಪಡೆಯಬಹುದು!

ಭಾರತದ ವೈದ್ಯರ ಅತಿದೊಡ್ಡ ಸಂಘಟನೆಯಾದ ಐಎಂಎ, 36 ಗಂಟೆಗಳ ಪಾಳಿ ಮತ್ತು ವಿಶ್ರಾಂತಿ ಪಡೆಯಲು ಸುರಕ್ಷಿತ ಸ್ಥಳಗಳು ಸೇರಿದಂತೆ ನಿವಾಸಿ ವೈದ್ಯರ ಕೆಲಸ ಮತ್ತು ಜೀವನ ಪರಿಸ್ಥಿತಿಗಳನ್ನು ಕೂಲಂಕಷವಾಗಿ ಪರಿಶೀಲಿಸಬೇಕೆಂದು ಒತ್ತಾಯಿಸಿದೆ. ಕೆಲಸದ ಸ್ಥಳಗಳಲ್ಲಿ ವೈದ್ಯಕೀಯ ವೃತ್ತಿಪರರ ವಿರುದ್ಧದ ಹಿಂಸಾಚಾರವನ್ನು ತಡೆಗಟ್ಟಲು ಕಾನೂನು ರಚನೆಗೆ ಕೋರಿದೆ.

Continue Reading

ಪ್ರಮುಖ ಸುದ್ದಿ

Power Banks : ಇನ್ನು ಮುಂದೆ ರೈಲಿನಲ್ಲಿ ಪ್ರಯಾಣಿಸುವಾಗ ಪವರ್​ ಬ್ಯಾಂಕ್​ಗಳನ್ನು ಬಾಡಿಗೆಗೆ ಪಡೆಯಬಹುದು!

Power Banks : ಪ್ರಯಾಣಿಕರು ಪವರ್ ಬ್ಯಾಂಕ್ ಅನ್ನು ಬಾಡಿಗೆಗೆ ಪಡೆಯಬಹುದು ಮತ್ತು ತಮ್ಮ ಪ್ರಯಾಣದ ಸಮಯದಲ್ಲಿ ಅದನ್ನು ತಮ್ಮೊಂದಿಗೆ ಕೊಂಡೊಯ್ಯಬಹುದು. ಈ ಸೇವೆಯನ್ನು ಸುಲಭಗೊಳಿಸಲು ಆರ್​ಆರ್​ಟಿಸಿ ನಿಲ್ದಾಣಗಳಲ್ಲಿ ವಿಶೇಷ ಆಟೋಮ್ಯಾಟಿಕ್​​ ಯಂತ್ರಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

VISTARANEWS.COM


on

Power Banks
Koo

ನವದೆಹಲಿ: ನಿವೇನಾದರೂ ನಮೋ ಭಾರತ್ ರೈಲುಗಳಲ್ಲಿ ಪ್ರಯಾಣಿಸುವವರಾಗಿದ್ದರೆ ನಿಮ್ಮಲ್ಲಿರುವ ಪವರ್​ ಬ್ಯಾಂಕ್​ (Power Banks) ಗಳನ್ನು 50 ರೂ.ಗಳಿಂದ ಪ್ರಾರಂಭವಾಗುವಂಥೆ ಬಾಡಿಗೆಗೆ ಪಡೆಯಬಹುದು. ಇಂಥದ್ದೊಂದು ವ್ಯವಸ್ಥೆಯನ್ನು ಎನ್​ಆರ್​ಸಿಟಿಸಿ ಆರಂಭಿಸಿದೆ. ಈ ಬಗೆಯ ಮೊದಲ ಸೇವೆ ಈಗ ಸಾಹಿಬಾಬಾದ್ ಆರ್​ಆರ್​ಟಿಎಸ್​ ನಿಲ್ದಾಣದಲ್ಲಿ ಲಭ್ಯವಿದೆ ಎಂದು ಅದು ಹೇಳಿದೆ.

ವಿವಿಧ ನಿಲ್ದಾಣಗಳಲ್ಲಿ ಎಲೆಕ್ಟ್ರಿಕ್ ವಾಹನ ಚಾರ್ಜಿಂಗ್ ಸೌಲಭ್ಯಗಳನ್ನು ಪರಿಚಯಿಸುವ ಯೋಜನೆಗಳಿವೆ ಮತ್ತು ಸಿದ್ಧತೆಗಳು ನಡೆಯುತ್ತಿವೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಐಫೋನ್​ಗಳು, ಮೈಕ್ರೋ ಯುಎಸ್​ಬಿ ಮತ್ತು ಸಿ-ಪೋರ್ಟ್ ಸಂಪರ್ಕಗಳು ಸೇರಿದಂತೆ ವಿವಿಧ ಸಾಧನಗಳಿಗೆ ಸ್ಥಳಾವಕಾಶ ಕಲ್ಪಿಸಲು ಬಾಡಿಗೆ ಪವರ್ ಬ್ಯಾಂಕ್ ಮೂರು ರೀತಿಯ ಚಾರ್ಜಿಂಗ್ ಪಿನ್​​ಗಳನ್ನು ಹೊಂದಿದೆ. ಬಾಡಿಗೆ ಯೋಜನೆಗಳು ಕೇವಲ 50 ರೂ.ಗಳಿಂದ ಪ್ರಾರಂಭವಾಗುತ್ತವೆ, ವಾರ್ಷಿಕ ಯೋಜನೆ 1,199 ರೂಪಾಯಿಗೆ ಲಭ್ಯವಿದೆ.

ಪ್ರಯಾಣಿಕರು ಪವರ್ ಬ್ಯಾಂಕ್ ಅನ್ನು ಬಾಡಿಗೆಗೆ ಪಡೆಯಬಹುದು ಮತ್ತು ತಮ್ಮ ಪ್ರಯಾಣದ ಸಮಯದಲ್ಲಿ ಅದನ್ನು ತಮ್ಮೊಂದಿಗೆ ಕೊಂಡೊಯ್ಯಬಹುದು. ಈ ಸೇವೆಯನ್ನು ಸುಲಭಗೊಳಿಸಲು ಆರ್​ಆರ್​ಟಿಸಿ ನಿಲ್ದಾಣಗಳಲ್ಲಿ ವಿಶೇಷ ಆಟೋಮ್ಯಾಟಿಕ್​​ ಯಂತ್ರಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ವೆಂಡಿಂಗ್ ಮೆಷಿನ್​ ಮೂಲಕ ಪವರ್ ಬ್ಯಾಂಕ್ ಅನ್ನು ಬಾಡಿಗೆಗೆ ಪಡೆಯಬಹುದು. ಅದನ್ನು ಎನ್​​ಸಿಆರ್​ನಾದ್ಯಂತ ಇದೇ ರೀತಿಯ ಯಾವುದೇ ಯಂತ್ರದಲ್ಲಿ ಹಿಂದಿರುಗಿಸಬಹುದು. ಈ ಸೌಲಭ್ಯವು ಮೊಬೈಲ್ ಫೋನ್ ಚಾರ್ಜಿಂಗ್​ಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಪರಿಹರಿಸುತ್ತದೆ. ಪ್ರಯಾಣಿಕರಿಗೆ ಅನುಕೂಲಕರ ಪರಿಹಾರವನ್ನು ಒದಗಿಸುತ್ತದೆ ಎಂದು ಹೇಳಿದೆ.

ಈ ಸೇವೆಯನ್ನು ಶೀಘ್ರದಲ್ಲೇ ಇತರ ಆರ್​ಆರ್​ಟಿಸಿ ನಿಲ್ದಾಣಗಳಿಗೂ ವಿಸ್ತರಿಸಲಾಗುವುದು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ನಮೋ ಭಾರತ್ ರೈಲಿನ ಕಾರ್ಯಾಚರಣೆ ಮತ್ತು ನಿರ್ವಹಣೆಯನ್ನು ‘ಡಿಬಿ-ಆಆರ್​ಆರ್​ಟಿಎಸ್ ಆಪರೇಷನ್ಸ್ ಇಂಡಿಯಾ’ ನಿರ್ವಹಿಸುತ್ತದೆ. ನಮೋ ಭಾರತ್ ರೈಲು ಮತ್ತು ಆಆರ್​ಆರ್​ಟಿಎಸ್ ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ಆರಾಮ ಮತ್ತು ಸೌಲಭ್ಯಗಳಿಗೆ ವಿಶೇಷ ಗಮನ ನೀಡುತ್ತಿದೆ.

ನಿಗದಿತ ಯಂತ್ರಗಳಿಂದ ಪವರ್ ಬ್ಯಾಂಕ್ ಅನ್ನು ಬಾಡಿಗೆಗೆ ಪಡೆಯುವ ಮೂಲಕ ಜನರು ತಮ್ಮ ಮೊಬೈಲ್ ಫೋನ್​ಗಳನ್ನು ಚಾರ್ಜ್ ಮಾಡಬಹುದು. ವಿವಿಧ ಬಾಡಿಗೆ ಯೋಜನೆಗಳು ಲಭ್ಯವಿವೆ. ನಿಮ್ಮ ಅಗತ್ಯಗಳಿಗೆ ಸೂಕ್ತವಾದದನ್ನು ಆಯ್ಕೆ ಮಾಡಬೇಕಾಗುತ್ತದೆ. ಪವರ್ ಬ್ಯಾಂಕ್ ಯಂತ್ರಗಳನ್ನು ಈಗಾಗಲೇ ಅನೇಕ ಸ್ಥಳಗಳಲ್ಲಿ ಸ್ಥಾಪಿಸಲಾಗಿದೆ. ಅವು ಶೀಘ್ರದಲ್ಲೇ ಗೊತ್ತುಪಡಿಸಿದ ಸ್ಥಳಗಳಲ್ಲಿ ಸಂಪೂರ್ಣವಾಗಿ ಕಾರ್ಯನಿರ್ವಹಿಸಲಿವೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: CM siddaramaiah : ಕಾಂಗ್ರೆಸ್ ಪಕ್ಷ, ಸರ್ಕಾರ ಸಿದ್ದರಾಮಯ್ಯ ಬೆಂಬಲಕ್ಕಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬಾಡಿಗೆ ಪವರ್ ಬ್ಯಾಂಕ್ ಸೌಲಭ್ಯವು ಪ್ರಸ್ತುತ ಸಾಹಿಬಾಬಾದ್ ನಿಲ್ದಾಣದ ಪಾವತಿಸದ ಪ್ರದೇಶದಲ್ಲಿ ಲಭ್ಯವಿದೆ, ಇದು ರೈಲು ಟಿಕೆಟ್ ಖರೀದಿಸುವ ಅಗತ್ಯವಿಲ್ಲದೆ ಎಲ್ಲರಿಗೂ ಪ್ರವೇಶಿಸುತ್ತದೆ. ಯಾರು ಬೇಕಾದರೂ ನಿಲ್ದಾಣಕ್ಕೆ ಭೇಟಿ ನೀಡಬಹುದು ಮತ್ತು ಈ ಸೇವೆಯ ಲಾಭವನ್ನು ಪಡೆಯಬಹುದು. ಈ ಸೌಲಭ್ಯವನ್ನು ಬಳಸಲು, ಜನರು ತಮ್ಮ ಫೋನ್ನಲ್ಲಿ ‘ಎ 3 ಚಾರ್ಜ್’ ಮೊಬೈಲ್ ಅಪ್ಲಿಕೇಶನ್ ಅನ್ನು ಇನ್ಸ್ಟಾಲ್ ಮಾಡಬೇಕಾಗುತ್ತದೆ

ವಿವಿಧ ಬಾಡಿಗೆ ಯೋಜನೆಗಳು ಲಭ್ಯವಿವೆ, ಬಳಕೆದಾರರಿಗೆ ತಮ್ಮ ಅಗತ್ಯಗಳಿಗೆ ಸೂಕ್ತವಾದ ಯೋಜನೆಯನ್ನು ಆಯ್ಕೆ ಮಾಡಲು ಅನುವು ಮಾಡಿಕೊಡುತ್ತದೆ. ಆಯ್ಕೆ ಮಾಡಿದ ಯೋಜನೆಯನ್ನು ಅವಲಂಬಿಸಿ, ಪವರ್ ಬ್ಯಾಂಕ್ ಅನ್ನು ಸಂಪೂರ್ಣವಾಗಿ ಚಾರ್ಜ್ ಮಾಡಿದ ಒಂದಕ್ಕೆ ಪ್ರತಿದಿನ ಬದಲಾಯಿಸಬಹುದು. ಪ್ರತಿ ಯಂತ್ರದಲ್ಲಿ ಪವರ್ ಬ್ಯಾಂಕ್ಗಳು ಮತ್ತು ಸ್ಲಾಟ್ಗಳ ಲಭ್ಯತೆಯ ಬಗ್ಗೆ ಅಪ್ಲಿಕೇಶನ್ ನೈಜ ಸಮಯದ ಮಾಹಿತಿಯನ್ನು ಒದಗಿಸುತ್ತದೆ, ಬಳಕೆದಾರರಿಗೆ ತಡೆರಹಿತ ಅನುಭವವನ್ನು ಖಾತ್ರಿಪಡಿಸುತ್ತದೆ.

ಇತ್ತೀಚಿನ ಹಾಡುಗಳನ್ನು ಮಾತ್ರ ಕೇಳಿ, JioSaavn.com
ಪ್ರಯಾಣಿಕರು ಮೊಬೈಲ್ ಚಾರ್ಜಿಂಗ್ ಸೌಲಭ್ಯಗಳಿಗೆ ಪ್ರವೇಶವನ್ನು ಹೊಂದಿದ್ದಾರೆ, ಪ್ರತಿ ಬೋಗಿಯ ಪ್ರತಿ ಆಸನದಲ್ಲಿ ಚಾರ್ಜಿಂಗ್ ಪೋರ್ಟ್ಗಳನ್ನು ಸ್ಥಾಪಿಸಲಾಗಿದೆ. ಪ್ರೀಮಿಯಂ ಕೋಚ್ ಲ್ಯಾಪ್ಟಾಪ್ಗಳಿಗೆ ಚಾರ್ಜಿಂಗ್ ಪೋರ್ಟ್ಗಳನ್ನು ಸಹ ನೀಡುತ್ತದೆ.

Continue Reading

ಆರೋಗ್ಯ

Dengue Vaccine: ಭಾರತದ ಮೊದಲ ಡೆಂಗ್ಯೂ ಲಸಿಕೆ; 3ನೇ ಹಂತದ ಪ್ರಯೋಗ ಪ್ರಾರಂಭ

ಡೆಂಗ್ಯೂಗೆ ಭಾರತೀಯ ಲಸಿಕೆ (Dengue Vaccine) 3ನೇ ಹಂತದ ಪ್ರಯೋಗದಲ್ಲಿದೆ. ಈ ಹಿಂದೆ ನಡೆಸಿರುವ ಎರಡು ಪ್ರಯೋಗಗಳು ಯಶಸ್ವಿಯಾಗಿದ್ದು, ಐಸಿಎಂಆರ್ ಸಹಯೋಗದೊಂದಿಗೆ 3 ಹಂತದ ಪ್ರಯೋಗವು 18 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಒಟ್ಟು 19 ಪ್ರದೇಶಗಳಲ್ಲಿ 10,335ಕ್ಕೂ ಹೆಚ್ಚು ಆರೋಗ್ಯವಂತ ವಯಸ್ಕರ ಮೇಲೆ ನಡೆಯಲಿದೆ. ಈ ಲಸಿಕೆ ಯಶಸ್ವಿಯಾದರೆ ಡೆಂಗ್ಯೂ ರೋಗದಿಂದ ಉಂಟಾಗುತ್ತಿರುವ ಸಾವು ತಪ್ಪಿಸಬಹುದು.

VISTARANEWS.COM


on

By

Dengue Vaccine
Koo

ಪಂಡಿತ್ ಭಾಗವತ್ ದಯಾಳ್ ಶರ್ಮಾ ಪೋಸ್ಟ್ ಗ್ರಾಜುಯೇಟ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (PGIMS) ರೋಹ್ಟಕ್‌ನಲ್ಲಿ ಭಾರತದ ಮೊದಲ ಸ್ಥಳೀಯ ಡೆಂಗ್ಯೂ ಲಸಿಕೆ (Dengue Vaccine) 3ನೇ ಹಂತದ ಪ್ರಯೋಗವನ್ನು ಪ್ರಾರಂಭಿಸಿದೆ ಎಂದು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ICMR) ಮತ್ತು ಪ್ಯಾನೇಸಿಯಾ ಬಯೋಟೆಕ್ (Panacea Biotec) ಘೋಷಿಸಿದೆ.

ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರು ಈ ಉಪಕ್ರಮವನ್ನು ಶ್ಲಾಘಿಸಿದ್ದು, ಡೆಂಗ್ಯೂ ಚಿಕೆತ್ಸೆಗಾಗಿ ಭಾರತದ ಮೊದಲ ಸ್ಥಳೀಯ ಲಸಿಕೆಯ 3 ಕ್ಲಿನಿಕಲ್ ಪ್ರಯೋಗದ ಪ್ರಾರಂಭವು ಡೆಂಗ್ಯೂ ವಿರುದ್ಧದ ನಮ್ಮ ಹೋರಾಟದಲ್ಲಿ ನಿರ್ಣಾಯಕ ಪ್ರಗತಿಯನ್ನು ಸೂಚಿಸುತ್ತದೆ ಎಂದು ಹೇಳಿದರು.

ಡೆಂಗ್ಯೂ ಲಸಿಕೆ ಅಭಿವೃದ್ಧಿಗೆ ಐಸಿಎಂಆರ್ ಮತ್ತು ಪ್ಯಾನೇಸಿಯಾ ಬಯೋಟೆಕ್ ನಡುವಿನ ಸಹಯೋಗದ ಪ್ರಾಮುಖ್ಯತೆಯನ್ನು ತಿಳಿಸಿದ ಕೇಂದ್ರ ಆರೋಗ್ಯ ಸಚಿವರು, ಈ ಪಾಲುದಾರಿಕೆಯ ಮೂಲಕ ನಾವು ನಮ್ಮ ಜನರ ಆರೋಗ್ಯ ಮತ್ತು ಯೋಗಕ್ಷೇಮವನ್ನು ಖಾತ್ರಿಪಡಿಸುವತ್ತ ಹೆಜ್ಜೆ ಇಡುತ್ತಿದ್ದೇವೆ. ಆರೋಗ್ಯ ಕ್ಷೇತ್ರದಲ್ಲಿ ಆತ್ಮನಿರ್ಭರ ಭಾರತ್‌ನ ನಮ್ಮ ದೃಷ್ಟಿಯನ್ನು ಬಲಪಡಿಸುತ್ತದೆ ಎಂದು ತಿಳಿಸಿದರು.


ಪ್ರಸ್ತುತ ದೇಶವು ಡೆಂಗ್ಯೂಗೆ ಯಾವುದೇ ಆಂಟಿವೈರಲ್ ಚಿಕಿತ್ಸೆ ಅಥವಾ ಪರವಾನಗಿ ಪಡೆದ ಲಸಿಕೆಯನ್ನು ಹೊಂದಿಲ್ಲ. ಪರಿಣಾಮಕಾರಿ ಲಸಿಕೆಯನ್ನು ಅಭಿವೃದ್ಧಿಪಡಿಸುವುದು ಸಂಕೀರ್ಣ ಮತ್ತು ತುರ್ತು ಅಗತ್ಯವಾಗಿದೆ. ಡೆಂಗ್ಯೂ ವೈರಸ್‌ನ ಎಲ್ಲಾ ನಾಲ್ಕು ಸಿರೊಟೈಪ್‌ಗಳಲ್ಲಿ ಹೆಚ್ಚಿನ ಪರಿಣಾಮಕಾರಿತ್ವವನ್ನು ಸಾಧಿಸುವಲ್ಲಿ ಸವಾಲು ಇದೆ. ಇದು ದೇಶದ ಅನೇಕ ಪ್ರದೇಶಗಳಲ್ಲಿ ಹರಡುತ್ತಿದೆ ಎಂದರು.

ಟೆಟ್ರಾವಲೆಂಟ್ ಡೆಂಗ್ಯೂ ಲಸಿಕೆ ಸ್ಟ್ರೈನ್ (TV003/TV005) ಆರಂಭದಲ್ಲಿ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಹೆಲ್ತ್ (NIH), ಯುಎಸ್ ಎನಿಂದ ಅಭಿವೃದ್ಧಿಪಡಿಸಲಾಯಿತು. ಜಾಗತಿಕವಾಗಿ ಪೂರ್ವಭಾವಿ ಮತ್ತು ಕ್ಲಿನಿಕಲ್ ಪ್ರಯೋಗಗಳಲ್ಲಿ ಭರವಸೆಯ ಫಲಿತಾಂಶಗಳನ್ನು ತೋರಿಸಿದೆ. ಇದರ ಪ್ರಯೋಗ ಆರಂಭಿಸಿದ ಮೂರು ಭಾರತೀಯ ಕಂಪೆನಿಗಳಲ್ಲಿ ಒಂದಾದ Panacea Biotec ಸಂಪೂರ್ಣ ಲಸಿಕೆಯನ್ನು ಅಭಿವೃದ್ಧಿಪಡಿಸುವಲ್ಲಿ ಹೆಚ್ಚು ಪ್ರಗತಿ ಸಾಧಿಸಿದೆ.

ಈ ಕೆಲಸಕ್ಕಾಗಿ ಕಂಪನಿಯು ಪ್ರಕ್ರಿಯೆಯ ಪೇಟೆಂಟ್ ಅನ್ನು ಹೊಂದಿದೆ. 2018-19ರಲ್ಲಿ ಭಾರತೀಯ ಲಸಿಕೆ ಕ್ಲಿನಿಕಲ್ ಪ್ರಯೋಗ ಹಂತ 1 ಮತ್ತು 2 ಪೂರ್ಣಗೊಂಡಿವೆ. ಇದು ಭರವಸೆಯ ಫಲಿತಾಂಶಗಳನ್ನು ನೀಡಿದೆ.
ಐಸಿಎಂಆರ್ ಸಹಯೋಗದೊಂದಿಗೆ ನಡೆಸಲಾದ ಹಂತ 3 ಕ್ಲಿನಿಕಲ್ ಪ್ರಯೋಗವು 18 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 10,335 ಕ್ಕೂ ಹೆಚ್ಚು ಆರೋಗ್ಯವಂತ ವಯಸ್ಕ ಭಾಗವಹಿಸುವವರನ್ನು ಒಳಗೊಂಡ 19 ಪ್ರದೇಶಗಳಲ್ಲಿ ನಡೆಯಲಿದೆ.

ಇದನ್ನೂ ಓದಿ: Bridge Collapse: 9 ವರ್ಷಗಳಿಂದ ನಿರ್ಮಾಣವಾಗುತ್ತಿರುವ ಸೇತುವೆ 3ನೇ ಬಾರಿ ಕುಸಿದು ಬಿತ್ತು; ವಿಡಿಯೊ ನೋಡಿ

ಭಾರತವು ಡೆಂಗ್ಯೂ ರೋಗದ ಅತಿ ಹೆಚ್ಚು ಸಂಭವವಿರುವ ಟಾಪ್ 30 ದೇಶಗಳಲ್ಲಿ ಒಂದಾಗಿದೆ. ಡಬ್ಲ್ಯೂ ಹೆಚ್‌ಒ ವರದಿಯ ಪ್ರಕಾರ ಭಾರತದಲ್ಲಿ ಸುಮಾರು ಶೇ. 75-80ರಷ್ಟು ಸೋಂಕುಗಳು ಲಕ್ಷಣ ರಹಿತವಾಗಿವೆ. ಆದರೂ ಈ ವ್ಯಕ್ತಿಗಳು ಈಡಿಸ್ ಸೊಳ್ಳೆಗಳ ಕಡಿತದ ಮೂಲಕ ಸೋಂಕನ್ನು ಹರಡಬಹುದು. ರೋಗ ಲಕ್ಷಣಗಳು ಪ್ರಾಯೋಗಿಕವಾಗಿ ಸ್ಪಷ್ಟವಾಗಿ ಕಂಡುಬರುವ ಶೇ. 20-25 ಪ್ರಕರಣಗಳಲ್ಲಿ ಮಕ್ಕಳು ಹೆಚ್ಚಾಗಿ ಆಸ್ಪತ್ರೆಗೆ ದಾಖಲಾಗುತ್ತಿದ್ದು, ಮರಣದ ಅಪಾಯವೂ ಹೆಚ್ಚಾಗಿರುತ್ತದೆ.

Continue Reading
Advertisement
ಪ್ರಮುಖ ಸುದ್ದಿ2 hours ago

Physical assault : ಹೆಣ್ಣು ಮಕ್ಕಳಿಗೆ ಅಶ್ಲೀಲ ಚಿತ್ರ ತೋರಿಸುತ್ತಿದ್ದ ಶಿಕ್ಷಕ; ಸಿಟ್ಟಿಗೆದ್ದು ಶಾಲೆಯನ್ನೇ ಸುಟ್ಟು ಹಾಕಿದ ಗ್ರಾಮಸ್ಥರು

Sourav Ganguly
ಪ್ರಮುಖ ಸುದ್ದಿ2 hours ago

Sourav Ganguly : ಕೊಲೆಗಡುಕರಿಗೆ ಈ ರೀತಿ ಮಾಡಿ; ಕೋಲ್ಕೊತಾ ವೈದ್ಯೆಯ ಅತ್ಯಾಚಾರ, ಕೊಲೆ ಬಗ್ಗೆ ಸೌರವ್​ ಗಂಗೂಲಿ ಅಭಿಪ್ರಾಯ ಹೀಗಿತ್ತು

Power Banks
ಪ್ರಮುಖ ಸುದ್ದಿ3 hours ago

Power Banks : ಇನ್ನು ಮುಂದೆ ರೈಲಿನಲ್ಲಿ ಪ್ರಯಾಣಿಸುವಾಗ ಪವರ್​ ಬ್ಯಾಂಕ್​ಗಳನ್ನು ಬಾಡಿಗೆಗೆ ಪಡೆಯಬಹುದು!

Maheshchandra Guru
ಪ್ರಮುಖ ಸುದ್ದಿ3 hours ago

Maheshchandra Guru : ನಿವೃತ್ತ ಪ್ರಾಧ್ಯಾಪಕ, ಪ್ರಗತಿಪರ ಚಿಂತಕ ಮಹೇಶ್​ಚಂದ್ರ ಗುರು ನಿಧನ

cm siddaramaiah
ಪ್ರಮುಖ ಸುದ್ದಿ4 hours ago

CM siddaramaiah : ಕಾಂಗ್ರೆಸ್ ಪಕ್ಷ, ಸರ್ಕಾರ ಸಿದ್ದರಾಮಯ್ಯ ಬೆಂಬಲಕ್ಕಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

Kundapura Kannada Habba
ಕರ್ನಾಟಕ4 hours ago

Kundapura Kannada Habba: ನನ್ನ ಸಿನಿಮಾ ಕಥೆಗಳಿಗೆ ಊರು, ಯಕ್ಷಗಾನವೇ ಪ್ರೇರಣೆ; ರಿಷಬ್ ಶೆಟ್ಟಿ

NPS News
ಕರ್ನಾಟಕ4 hours ago

NPS News: ಹೊಸ ಪಿಂಚಣಿ ರದ್ದುಗೊಳಿಸಲು ಸಮಿತಿ ಪುನರ್‌ ರಚನೆ; ಎನ್‌ಪಿಎಸ್‌ ನೌಕರರ ಸಂಘ ವಿರೋಧ

ಪ್ರಮುಖ ಸುದ್ದಿ5 hours ago

7th pay commission : 7ನೇ ವೇತನ ಆಯೋಗ ಜಾರಿ ಬಳಿಕ ನೌಕರರ ಸಂಬಳ ಏರಿಕೆ ಎಷ್ಟು? ಅಧಿಕೃತ ಪಟ್ಟಿ ಬಿಡುಗಡೆ

Prabhas New Film
ಸಿನಿಮಾ5 hours ago

Prabhas New Film: ಹೊಸ ಯುದ್ಧ ಶುರು; ಪ್ರಭಾಸ್ ಅಭಿನಯದ ಮುಂದಿನ ಚಿತ್ರ ಸುಳಿವು!

NPS
ಬೆಂಗಳೂರು5 hours ago

Government Employee: ಹಳೇ ಪಿಂಚಣಿ ವ್ಯವಸ್ಥೆ (OPS) ಜಾರಿ ಸಾಧ್ಯತೆ ಪರಿಶೀಲನೆಗೆ ಸರ್ಕಾರದಿಂದ ಸಮಿತಿ ಪುನರ್‌ ರಚನೆ

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ1 week ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 week ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 week ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌