Samantha Ruth Prabhu takes ice bath Samantha Ruth Prabhu: ಚಿತ್ರಹಿಂಸೆಯ ಸಮಯ ಎಂದ ಸಮಂತಾ: ಏನಿದು ಐಸ್ ಬಾತ್ ಥೆರಪಿ? - Vistara News

South Cinema

Samantha Ruth Prabhu: ಚಿತ್ರಹಿಂಸೆಯ ಸಮಯ ಎಂದ ಸಮಂತಾ: ಏನಿದು ಐಸ್ ಬಾತ್ ಥೆರಪಿ?

ಸಮಂತಾ (Samantha Ruth Prabhu) ಐಸ್ ಬಾತ್ ಫೋಟೊವನ್ನು ಇನ್‌ಸ್ಟಾದಲ್ಲಿ ಹಂಚಿಕೊಂಡು ʻʻಚಿತ್ರಹಿಂಸೆಯ ಸಮಯʼʼಎಂದು ಬರೆದುಕೊಂಡಿದ್ದಾರೆ.

VISTARANEWS.COM


on

Samantha Ruth Prabhu takes ice bath
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸಮಂತಾ ರುತ್ ಪ್ರಭು (Samantha Ruth Prabhu) ಮಯೋಸಿಟಿಸ್ ಕಾಯಿಲೆಯಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಇದೀಗ ಆ್ಯಕ್ಷನ್ ಸ್ಪೈ ಥ್ರಿಲ್ಲರ್ ಸಿಟಾಡೆಲ್ ಸಿರೀಸ್‌ ಚಿತ್ರೀಕರಣದಲ್ಲಿದ್ದಾರೆ. ಆ್ಯಕ್ಷನ್ ಸೀಕ್ವೆನ್ಸ್‌ಗಳನ್ನು ನಿರ್ವಹಿಸಲು ಫಿಟ್ ದೇಹವನ್ನು ಹೊಂದಿರಬೇಕು. ಇದೀಗ ಸಮಂತಾ ಐಸ್ ಬಾತ್ ಫೋಟೊವನ್ನು ಇನ್‌ಸ್ಟಾದಲ್ಲಿ ಹಂಚಿಕೊಂಡು ʻʻಚಿತ್ರಹಿಂಸೆಯ ಸಮಯʼʼ ಎಂದು ಬರೆದುಕೊಂಡಿದ್ದಾರೆ. ಫೋಟೊದಲ್ಲಿ, ನಟಿ ಐಸ್ ಬಕೆಟ್‌ನಲ್ಲಿ ಸ್ನಾನ ಮಾಡುವುದನ್ನು ಕಾಣಬಹುದು.

ಸಮಂತಾ ಜಿಮ್‌ನಲ್ಲಿ ವರ್ಕೌಟ್‌ ಮಾಡುವ ಫೋಟೊಗಳು ಹಾಗೂ ವಿಡಿಯೊಗಳನ್ನು ಆಗಾಗ ಇನ್‌ಸ್ಟಾದಲ್ಲಿ ಹಂಚಿಕೊಳ್ಳುತ್ತಲೇ ಇರುತ್ತಾರೆ. ಕೆಲವು ದಿನಗಳ ಹಿಂದೆ ಸಿರೀಸ್‌ಗಾಗಿ ಆ್ಯಕ್ಷನ್ ದೃಶ್ಯಕ್ಕೆ ತರಬೇತಿ ಪಡೆಯುತ್ತಿರುವುದನ್ನು ಕಾಣಬಹುದು. ವರ್ಕೌಟ್‌ ಬಳಿಕ ಐಸ್ ಬಾತ್ ಥೆರಪಿ ದೇಹಕ್ಕೆ ತುಂಬ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. ಇದರಿಂದ ಪ್ರಯೋಜನಗಳೇನೆಂಬುದು ನೋಡೋಣ.

  • ಐಸ್ ಬಾತ್ ಥೆರಪಿಯು ದೇಹವನ್ನು ದೃಢಗೊಳಿಸುತ್ತದೆ.
  • ವರ್ಕೌಟ್‌ ಬಳಿಕ ಐಸ್ ಬಾತ್ ಥೆರಪಿ ದೇಹಕ್ಕೆ ತುಂಬ ಪ್ರಯೋಜನಕಾರಿ.
  • ಐಸ್ ಬಾತ್ ದೇಹವನ್ನು ತಂಪಾಗಿರುತ್ತದೆ. ಇದು ಮಾನಸಿಕ ಆರೋಗ್ಯ ಮತ್ತು ನಿದ್ರೆಯನ್ನು ಸುಧಾರಿಸುತ್ತದೆ.
  • ಇದು ರಕ್ತ ಪರಿಚಲನೆ ಸುಧಾರಿಸುತ್ತದೆ ಮತ್ತು ದೇಹದಲ್ಲಿ ಆಮ್ಲಜನಕದ ಮಟ್ಟವನ್ನು ಹೆಚ್ಚಿಸುತ್ತದೆ.
  • ಒತ್ತಡವನ್ನು ನಿಭಾಯಿಸುವ ಸಾಮರ್ಥ್ಯವನ್ನು ಇದು ಹೊಂದಿದೆ.
  • ಸ್ನಾಯು ನೋವು ಕೂಡ ಕಡಿಮೆ ಮಾಡುತ್ತದೆ.
  • ಹೃದಯರಕ್ತನಾಳದ ಕಾಯಿಲೆ ಅಥವಾ ಅಧಿಕ ರಕ್ತದೊತ್ತಡ ಹೊಂದಿರುವ ಜನ ಜಾಗರೂಕರಾಗಿರಬೇಕು.
  • ವೈದ್ಯರ ಸಲಹೆಯ ಮೇರೆಗೆ ಈ ಐಸ್ ಬಾತ್ ಥೆರಪಿ ಮಾಡಬೇಕು.

ಇದನ್ನೂ ಓದಿ: Samantha Ruth Prabhu: ನಾಗಚೈತನ್ಯ ಜತೆಗೆ ವಾಸವಿದ್ದ ಮನೆಯನ್ನೇ ಭಾರಿ ಮೊತ್ತಕ್ಕೆ ಖರೀದಿಸಿದ್ರಾ ಸಮಂತಾ?

ನಟಿ ಈಗ ಸಿಟಾಡೆಲ್‌ ಸೀರೀಸ್‌ನ ಭಾರತೀಯ ರೂಪಾಂತರಕ್ಕಾಗಿ ಬಾಲಿವುಡ್ ಸ್ಟಾರ್ ವರುಣ್ ಧವನ್ ಅವರೊಂದಿಗೆ ಕೈಜೋಡಿಸಿದ್ದಾರೆ. ದಿ ಫ್ಯಾಮಿಲಿ ಮ್ಯಾನ್ ಚಿತ್ರವನ್ನು ನಿರ್ದೇಶಿಸಿದ ರಾಜ್ ಮತ್ತು ಡಿಕೆ ಇದನ್ನು ನಿರ್ದೇಶಿಸಲಿದ್ದಾರೆ. ಈಗಾಗಲೇ ಚಿತ್ರೀಕರಣ ಪ್ರಾರಂಭವಾಗಿದೆ. ಈ ಸಿನಿಮಾ ಜತೆಗೆ ಸಮಂತಾ ತೆಲುಗಿನಲ್ಲಿ ʼಖುಷಿʼ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ವಿಜಯ್ ದೇವರಕೊಂಡ ಜತೆ ಸಮಂತಾ ಅಭಿನಯಿಸುತ್ತಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Kannada New Movie: ಭಾರಿ ಮೊತ್ತಕ್ಕೆ ಮಾರಾಟವಾಯ್ತು ನಿವೇದಿತಾ ಶಿವರಾಜ್ ಕುಮಾರ್ ನಿರ್ಮಾಣದ ಸಿನಿಮಾ ಆಡಿಯೊ ಹಕ್ಕು

Kannada New Movie: ವಂಶಿ ಚೊಚ್ಚಲ ಬಾರಿಗೆ ನಿರ್ದೇಶಿಸಿ ನಟಿಸುತ್ತಿರುವ ʻಫೈರ್ ಫ್ಲೈʼ ಸಿನಿಮಾಗೆ ಚರಣ್ ರಾಜ್ ಅದ್ಭುತ ಸಂಗೀತ ಒದಗಿಸಿದ್ದಾರೆ. ಶೀಘ್ರದಲ್ಲಿಯೇ ಚರಣ್ ಟ್ಯೂನ್ ಹಾಕಿರುವ ಹಾಡುಗಳ ಹಬ್ಬ ಆನಂದ್ ಆಡಿಯೊ ಯೂಟ್ಯೂಬ್ ನಲ್ಲಿ ಶುರುವಾಗಲಿದೆ. ಆನಂದ್ ಆಡಿಯೋ ಸಂಸ್ಥೆ ಒಂದೊಳ್ಳೆ ಮೊತ್ತಕ್ಕೆ ಫೈರ್ ಫ್ಲೈ ಆಡಿಯೋ ಹಕ್ಕನ್ನು ತನ್ನ ತೆಕ್ಕೆಗೆ ಹಾಕಿಕೊಂಡಿದೆ.

VISTARANEWS.COM


on

Kannada New Movie Audio rights of Niveditha Shivarajkumar produced movie sold for huge amount
Koo

ಬೆಂಗಳೂರು: ಕನ್ನಡದ ಬಹುನಿರೀಕ್ಷಿತ ಸಿನಿಮಾ ʻಫೈರ್ ಫ್ಲೈʼ (Kannada New Movie) ಬಹಳ ವಿಶೇಷವಾಗಿದೆ. ನಿವೇದಿತಾ ಶಿವರಾಜ್ ಕುಮಾರ್ ನಿರ್ಮಾಣದ ಚೊಚ್ಚಲ ಚಿತ್ರ ಎಂಬ ಕಾರಣದ ಜತೆಗೆ ಹೆಸರಾಂತ ತಾರೆಯರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಅಚ್ಯುತ್ ಕುಮಾರ್ ಹಾಗೂ ಸುಧಾರಾಣಿ ಈ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ನವ ನಾಯಕ ಮತ್ತು ನಿರ್ದೇಶಕ ವಂಶಿ ಸಾರಥ್ಯದಲ್ಲಿ ಮೂಡಿ ಬರ್ತಿರುವ ʻಫೈರ್ ಫ್ಲೈʼ ಸಿನಿಮಾದ ಆಡಿಯೊ ಹಕ್ಕು ದಾಖಲೆ ಮೊತ್ತಕ್ಕೆ ಮಾರಾಟವಾಗಿದೆ.

ವಂಶಿ ಚೊಚ್ಚಲ ಬಾರಿಗೆ ನಿರ್ದೇಶಿಸಿ ನಟಿಸುತ್ತಿರುವ ʻಫೈರ್ ಫ್ಲೈʼ ಸಿನಿಮಾಗೆ ಚರಣ್ ರಾಜ್ ಅದ್ಭುತ ಸಂಗೀತ ಒದಗಿಸಿದ್ದಾರೆ. ಶೀಘ್ರದಲ್ಲಿಯೇ ಚರಣ್ ಟ್ಯೂನ್ ಹಾಕಿರುವ ಹಾಡುಗಳ ಹಬ್ಬ ಆನಂದ್ ಆಡಿಯೊ ಯೂಟ್ಯೂಬ್ ನಲ್ಲಿ ಶುರುವಾಗಲಿದೆ. ಆನಂದ್ ಆಡಿಯೋ ಸಂಸ್ಥೆ ಒಂದೊಳ್ಳೆ ಮೊತ್ತಕ್ಕೆ ಫೈರ್ ಫ್ಲೈ ಆಡಿಯೋ ಹಕ್ಕನ್ನು ತನ್ನ ತೆಕ್ಕೆಗೆ ಹಾಕಿಕೊಂಡಿದೆ.

‘ಫೈರ್ ಫ್ಲೈ’ ಸಿನಿಮಾದಲ್ಲಿ ವಂಶಿ ಅವರು ಹೀರೋ ಆಗಿ ಅಭಿನಯಿಸುತ್ತಿದ್ದಾರೆ. ಅಲ್ಲದೇ, ಅವರೇ ನಿರ್ದೇಶನ ಕೂಡ ಮಾಡುತ್ತಿದ್ದಾರೆ. ‘ಹ್ಯಾಟ್ರಿಕ್​ ಹೀರೋ’ ಶಿವರಾಜ್​ಕುಮಾರ್​ ಅವರ ಪುತ್ರಿ ನಿವೇದಿತಾ ಅವರು ಈ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ. ಈ ಚಿತ್ರದ ಮೂಲಕ ವಂಶಿ ಅವರು ಸ್ವತಂತ್ರ ನಿರ್ದೇಶಕರಾಗಿ ಹಾಗೂ ಪೂರ್ಣಪ್ರಮಾಣದ ಹೀರೋ ಆಗಿ ಪ್ರೇಕ್ಷಕರರ ಮುಂದೆ ಬರಲಿದ್ದಾರೆ.

ಇದನ್ನೂ ಓದಿ: Actor Dhanush: ಮೂರೇ ದಿನಕ್ಕೆ 50 ಕೋಟಿ ರೂ. ಕಲೆಕ್ಷನ್‌ ಮಾಡಿದ ಧನುಷ್‌ ನಟನೆಯ ʻ50ʼನೇ ಸಿನಿಮಾ!

ಈ ಚಿತ್ರಕ್ಕೆ ಜಯ್ ರಾಮ್ ಅವರು ಸಹ-ನಿರ್ದೇಶಕನ ಮಾಡುತ್ತಿದ್ದಾರೆ. ಅಭಿಲಾಷ್ ಕಳತ್ತಿ ಅವರ ಛಾಯಾಗ್ರಹಣ, ಚರಣ್ ರಾಜ್ ಅವರ ಸಂಗೀತ ನಿರ್ದೇಶನ, ರಘು ನಿಡುವಳ್ಳಿ ಅವರ ಸಂಭಾಷಣೆ ಈ ಸಿನಿಮಾಗಿದೆ. ಬೆಳಕಿನ ಹಬ್ಬ ದೀಪಾವಳಿಗೆ ಫೈರ್ ಫ್ಲೈ ಸಿನಿಮಾ ಥಿಯೇಟರ್ ಬೆಳಗಲಿದೆ.

Continue Reading

ಕಾಲಿವುಡ್

Arjun Sarja: ಸ್ಟೈಲಿಶ್ ಅವತಾರದಲ್ಲಿ ಅರ್ಜುನ್ ಸರ್ಜಾ: ‘ವಿಡಮುಯಾರ್ಚಿ’ಲುಕ್‌ ಔಟ್‌!

Arjun Sarja: ಅಜಿತ್ ಅವರ ವೃತ್ತಿಜೀವನದಲ್ಲಿ, ಬ್ಲಾಕ್ಬಸ್ಟರ್ ಚಲನಚಿತ್ರಗಳಲ್ಲಿ ಒಂದಾದ ‘ಮಂಗತ’ ಅಜಿತ್ ಕುಮಾರ್, ತ್ರಿಶಾ ಮತ್ತು ಆಕ್ಷನ್ ಕಿಂಗ್ ಅರ್ಜುನ್ ತಮ್ಮ ಅಭಿನಯದ ಮೂಲಕ ಪ್ರೇಕ್ಷಕರನ್ನು ರಂಜಿಸಿದರು. ಈಗ ಮತ್ತೊಮ್ಮೆ ಈ ಮೂರೂ ಪ್ರೇಕ್ಷಕರ ಮನಸೂರೆಗೊಳ್ಳಲಿದೆ. ಅಲ್ಲದೆ, ಆರವ್, ರೆಜಿನಾ ಕಸ್ಸಂದ್ರ, ನಿಖಿಲ್ ಮತ್ತು ಇತರರು ಈ ಚಿತ್ರದಲ್ಲಿ ಪ್ರಮುಖ ಪಾತ್ರಗಳನ್ನು ನಿರ್ವಹಿಸಿದ್ದಾರೆ.

VISTARANEWS.COM


on

Arjun Sarja Vidaamuyarchi Heats Up Character Poster
Koo

ಬೆಂಗಳೂರು: ಅಜಿತ್ ಕುಮಾರ್ ನಟಿಸುತ್ತಿರುವ ‘ವಿಡಮುಯಾರ್ಚಿ’ ಕಾಲಿವುಡ್ ಚಿತ್ರರಂಗದ ಬಹುನಿರೀಕ್ಷಿತ ಸಿನಿಮಾ. ದಕ್ಷಿಣ ಚಿತ್ರರಂಗದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ ನಡಿ ಬಹಳ ಅದ್ಧೂರಿಯಾಗಿ ಈ ಚಿತ್ರ ಮೂಡಿ ಬರುತ್ತಿದೆ. ಅದರಲ್ಲಿಯೂ ಅಜಿತ್ ಡೇಂಜರಸ್ ಸ್ಟಂಟ್ ವಿಡಿಯೋ ವೈರಲ್ ಆದ್ಮೇಲಂತೂ ಪ್ರೇಕ್ಷಕರನ್ನು ಒಂಟಿಗಾಲಲ್ಲಿ ನಿಲ್ಲಿಸಿದೆ. ಇದೀಗ ಮಿಡಮುಯಾರ್ಚಿ ಸಿನಿಮಾದಲ್ಲಿ ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ಲುಕ್ ಹೇಗಿರಲಿದೆ ಎಂಬ ಕುತೂಹಲಕ್ಕೆ ಬ್ರೇಕ್ ಬಿದ್ದಿದೆ.

ತಮ್ಮ ವೈವಿಧ್ಯಮಯ ಪಾತ್ರಗಳ ಮೂಲಕ ದಕ್ಷಿಣ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ನಟ ಅರ್ಜುನ್, ‘ವಿಡಮುಯಾರ್ಚಿ’ ಮೂಲಕ ಮತ್ತೊಮ್ಮೆ ಪ್ರೇಕ್ಷಕರನ್ನು ರಂಜಿಸಲು ಸಜ್ಜಾಗಿದ್ದಾರೆ. ಆಕ್ಷನ್ ಕಿಂಗ್ ರಸ್ತೆಯ ಮೇಲೆ ಸ್ಟೈಲಿಶ್ ಆಗಿ ನಿಂತಿದ್ದಾರೆ. ಹಿನ್ನಲೆಯಲ್ಲಿ ಅಜಿತ್ ಅವರ ಸಿಲೂಯೆಟ್ ನಿಗೂಢತೆ ಮತ್ತು ನಿರೀಕ್ಷೆಯ ಭಾವವನ್ನು ಹುಟ್ಟುಹಾಕುತ್ತದೆ. ‘ಪ್ರಯತ್ನಗಳು ಎಂದಿಗೂ ವಿಫಲವಾಗುವುದಿಲ್ಲ’ ಎಂಬ ಕುತೂಹಲ ಕೆರಳಿಸುವ ಅಡಿಬರಹವು ಚಿತ್ರದ ಸುತ್ತಲಿನ ಕುತೂಹಲವನ್ನು ಹೆಚ್ಚಿಸಿದೆ.

ಅಜಿತ್ ಅವರ ವೃತ್ತಿಜೀವನದಲ್ಲಿ, ಬ್ಲಾಕ್ಬಸ್ಟರ್ ಚಲನಚಿತ್ರಗಳಲ್ಲಿ ಒಂದಾದ ‘ಮಂಗತ’ ಅಜಿತ್ ಕುಮಾರ್, ತ್ರಿಶಾ ಮತ್ತು ಆಕ್ಷನ್ ಕಿಂಗ್ ಅರ್ಜುನ್ ತಮ್ಮ ಅಭಿನಯದ ಮೂಲಕ ಪ್ರೇಕ್ಷಕರನ್ನು ರಂಜಿಸಿದರು. ಈಗ ಮತ್ತೊಮ್ಮೆ ಈ ಮೂರೂ ಪ್ರೇಕ್ಷಕರ ಮನಸೂರೆಗೊಳ್ಳಲಿದೆ. ಅಲ್ಲದೆ, ಆರವ್, ರೆಜಿನಾ ಕಸ್ಸಂದ್ರ, ನಿಖಿಲ್ ಮತ್ತು ಇತರರು ಈ ಚಿತ್ರದಲ್ಲಿ ಪ್ರಮುಖ ಪಾತ್ರಗಳನ್ನು ನಿರ್ವಹಿಸಿದ್ದಾರೆ.

ಇದನ್ನೂ ಓದಿ: Actor Dhanush: ಮೂರೇ ದಿನಕ್ಕೆ 50 ಕೋಟಿ ರೂ. ಕಲೆಕ್ಷನ್‌ ಮಾಡಿದ ಧನುಷ್‌ ನಟನೆಯ ʻ50ʼನೇ ಸಿನಿಮಾ!

ಮಾಗಿಲ್ ತಿರುಮೇನಿ ನಿರ್ದೇಶನದ ಈ ಚಿತ್ರಕ್ಕೆಡ ಕಾಲಿವುಡ್ ಮ್ಯೂಸಿಕಲ್ ರಾಕ್ ಸ್ಟಾರ್ ಅನಿರುದ್ಧ್ ಈಗಾಗಲೇ ಚಾರ್ಟ್ ಬಸ್ಟರ್ ಆಲ್ಬಂ ಅನ್ನು ಸಿದ್ಧಪಡಿಸುತ್ತಿದ್ದಾರೆ. ಓಂ ಪ್ರಕಾಶ್ ಈ ಚಿತ್ರಕ್ಕೆ ಛಾಯಾಗ್ರಾಹಕರಾಗಿ ಕೆಲಸ ಮಾಡುತ್ತಿದ್ದಾರೆ. ಎನ್.ಬಿ.ಶ್ರೀಕಾಂತ್ ಸಂಕಲನಕಾರರಾಗಿ ಮತ್ತು ಮಿಲನ್ ಕಲಾ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದಾರೆ. ಅಂದಹಾಗೆ, ಈ ಚಿತ್ರಕ್ಕೆ ಸುಂದರ್ ಸಾಹಸ ಸಂಯೋಜನೆ ಮಾಡುತ್ತಿದ್ದರೆ, ಅನು ವರ್ಧನ್ ಕಾಸ್ಟ್ಯೂಮ್ ಡಿಸೈನರ್ ಆಗಿ ಕೆಲಸ ಮಾಡುತ್ತಿದ್ದಾರೆ. ಸುಬ್ರಮಣಿಯನ್ ನಾರಾಯಣನ್ ಕಾರ್ಯಕಾರಿ ನಿರ್ಮಾಪಕರಾಗಿ, ಜೆ.ಗಿರಿನಾಥನ್ ಮತ್ತು ಕೆ.ಜಯಶೀಲನ್ ನಿರ್ಮಾಣ ಕಾರ್ಯನಿರ್ವಾಹಕರಾಗಿ ಕೆಲಸ ಮಾಡುತ್ತಿದ್ದಾರೆ.

ಅಜಿತ್ ಕುಮಾರ್ ಅಭಿನಯದ ‘ವಿಡಮುಯಾರ್ಚಿ’ ಚಿತ್ರದ ಸ್ಯಾಟಲೈಟ್ ಹಕ್ಕುಗಳನ್ನು ಸನ್ ಟಿವಿ ಪಡೆದುಕೊಂಡಿದ್ದರೆ, OTT ಹಕ್ಕುಗಳನ್ನು ನೆಟ್‌ಫ್ಲಿಕ್ಸ್ ಪಡೆದುಕೊಂಡಿದೆ. ಈ ಚಿತ್ರವನ್ನು ಅಕ್ಟೋಬರ್ 31 ರಂದು ಬಿಡುಗಡೆ ಮಾಡಲು ನಿರ್ಮಾಪಕರು ಯೋಜಿಸಿದ್ದಾರೆ.

Continue Reading

ಕಾಲಿವುಡ್

Actor Dhanush: ಮನೆ ಬಗ್ಗೆ ಮಾತಾಡಿ ಸಿಕ್ಕಾಪಟ್ಟೆ ಟ್ರೋಲ್ ಆದ ಬೆನ್ನಲ್ಲೇ ಹೊಸ ಪೋಸ್ಟ್‌ ಹಂಚಿಕೊಂಡ ನಟ ಧನುಷ್‌!

Actor Dhanush: ಜುಲೈ 26 ರಂದು ರಾಯನ್ ಬಿಡುಗಡೆಯಾಯಿತು. ವಾರಾಂತ್ಯದಲ್ಲಿ 75 ಕೋಟಿ ರೂಪಾಯಿಗಳನ್ನು ಗಳಿಸಿದೆ ಎಂದು ವರದಿಯಾಗಿದೆ. ಚಿತ್ರವನ್ನು ನಿರ್ಮಿಸಿರುವ ಸನ್ ಪಿಕ್ಚರ್ಸ್ ಈ ಚಿತ್ರವನ್ನು ‘ಬ್ಲಾಕ್ ಬಸ್ಟರ್’ ಎಂದು ಘೋಷಿಸಿದೆ. ರಾಯನ್ ಚಿತ್ರವನ್ನು ಧನುಷ್ ನಿರ್ದೇಶಿಸಿದ್ದಾರೆ. ಅವರು ನಾಯಕನಾಗಿ ನಟಿಸಿರುವ ಈ ಚಿತ್ರ ಧನುಷ್ ಅವರ 50 ನೇ ಚಿತ್ರವಾಗಿದೆ.

VISTARANEWS.COM


on

Actor Dhanush Shares FIRST Post After Speech
Koo

ಬೆಂಗಳೂರು: ಪೋಯಸ್ ಗಾರ್ಡನ್‌ನಲ್ಲಿ ಮನೆ ಖರೀದಿಸುವ ಕುರಿತು ಮಾಡಿದ ಭಾಷಣಕ್ಕಾಗಿ (Actor Dhanush) ಟೀಕೆಗೊಳಗಾದ ನಂತರ ಧನುಷ್ ತಮ್ಮ ಮೊದಲ ಸಾಮಾಜಿಕ ಮಾಧ್ಯಮ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ. ಸಿನಿಮಾ ನಿರ್ಮಾಪಕನ ಮಗನಾಗಿದ್ದರೂ ತನ್ನನ್ನು ತಾನು ಹೊರಗಿನವನೆಂದು ಬಿಂಬಿಸಿಕೊಂಡಿದ್ದಕ್ಕಾಗಿ ನಟ ಟೀಕೆಗೆ ಗುರಿಯಾದರು. ಇದೀಗ ನಟ ಈ ಬಗ್ಗೆ ಏನೂ ವ್ಯಕ್ತಪಡಿಸಿದೇ ಇದ್ದರೂ ತಮ್ಮ ಜನ್ಮದಿನ ಹಾಗೂ ʻರಾಯನ್‌ʼ ಸಿನಿಮಾಗೆ ನೀಡಿದ ಪ್ರೀತಿಗಾಗಿ ಧನ್ಯವಾದಗಳನ್ನು ಸೂಚಿಸಿದರು. ನಟನ ಹುಟ್ಟುಹಬ್ಬದ ಸಮಯದಲ್ಲೇ ಚಿತ್ರ ಬಿಡುಗಡೆಯಾಗಿ ಬ್ಲಾಕ್ ಬಸ್ಟರ್ ಆಗಿ ಹೊರಹೊಮ್ಮಿದೆ.

ನಟ ಎಕ್ಸ್‌ನಲ್ಲಿ ಹೀಗೆ ಬರೆದುಕೊಂಡಿದ್ದಾರೆ “ಪ್ರೇಕ್ಷಕರು, ಚಲನಚಿತ್ರ ಬಂಧುಗಳು, ಸ್ನೇಹಿತರು, ಮಾಧ್ಯಮಗಳು ಮತ್ತು ನನ್ನ ಆಧಾರ ಸ್ತಂಭಗಳಿಗೆ ಧನ್ಯವಾದಗಳು . ನನ್ನ ಅಭಿಮಾನಿಗಳು ಆಶೀರ್ವಾದಳನ್ನು ಧಾರೆಯೆರೆದರು. ನನ್ನ ಹುಟ್ಟುಹಬ್ಬದ ಉಡುಗೊರೆಯಾಗಿದೆ, ”ಎಂದು ಅವರು ಬರೆದಿದ್ದಾರೆ.

ಜುಲೈ 26 ರಂದು ರಾಯನ್ ಬಿಡುಗಡೆಯಾಯಿತು. ವಾರಾಂತ್ಯದಲ್ಲಿ 75 ಕೋಟಿ ರೂಪಾಯಿಗಳನ್ನು ಗಳಿಸಿದೆ ಎಂದು ವರದಿಯಾಗಿದೆ. ಚಿತ್ರವನ್ನು ನಿರ್ಮಿಸಿರುವ ಸನ್ ಪಿಕ್ಚರ್ಸ್ ಈ ಚಿತ್ರವನ್ನು ‘ಬ್ಲಾಕ್ ಬಸ್ಟರ್’ ಎಂದು ಘೋಷಿಸಿದೆ. ರಾಯನ್ ಚಿತ್ರವನ್ನು ಧನುಷ್ ನಿರ್ದೇಶಿಸಿದ್ದಾರೆ. ಅವರು ನಾಯಕನಾಗಿ ನಟಿಸಿರುವ ಈ ಚಿತ್ರ ಧನುಷ್ ಅವರ 50 ನೇ ಚಿತ್ರವಾಗಿದೆ.

ಎಸ್.ಜೆ.ಸೂರ್ಯ, ಪ್ರಕಾಶ್ ರಾಜ್, ಸೆಲ್ವರಾಘವನ್, ಸಂದೀಪ್ ಕಿಶನ್, ಕಾಳಿದಾಸ್ ಜಯರಾಮ್, ದುಶಾರ ವಿಜಯನ್, ಅಪರ್ಣಾ ಬಾಲಮುರಳಿ, ವರಲಕ್ಷ್ಮಿ ಶರತ್‌ಕುಮಾರ್ ಮತ್ತು ಸರವಣನ್ ಕೂಡ ಇದ್ದಾರೆ. ಎಆರ್ ರೆಹಮಾನ್ ಸಂಗೀತ ನೀಡಿದ್ದಾರೆ. ಇದು ವರ್ಷದ ಬಹು ನಿರೀಕ್ಷಿತ ತಮಿಳು ಚಿತ್ರಗಳಲ್ಲಿ ಒಂದಾಗಿದೆ. ಚಿತ್ರವು ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ (CBFC) ನಿಂದ A ಸರ್ಟಿಫಿಕೇಟ್‌ ಪಡೆದುಕೊಂಡಿದೆ.

ಧನುಷ್ (Actor Dhanush) ಬರೆದು ನಿರ್ದೇಶಿಸಿರುವ ಸನ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ʻರಾಯನ್ʼ ಸಿನಿಮಾವನ್ನು ಕಲಾನಿಧಿ ಮಾರನ್ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಸಿನಿಮಾ ರಿಲೀಸ್‌ ಆಗಿ ಭಾರತದಲ್ಲಿ 50 ಕೋಟಿ ರೂ, ಕಲೆಕ್ಷನ್‌ ಮಾಡಿದೆ.ಬಿಡುಗಡೆಯಾದ ಕೇವಲ ಮೂರೇ ದಿನಕ್ಕೆ ಸಿನಿಮಾ ಭರ್ಜರಿ ಗಳಿಕೆ ಕಂಡು ಮುನ್ನುಗ್ಗುತ್ತಿದೆ. ಸಿನಿಮಾ ರಿಲೀಸ್‌ ಆದ ಬಳಿಕ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಇದನ್ನೂ ಓದಿ: Actor Dhanush: ಮೂರೇ ದಿನಕ್ಕೆ 50 ಕೋಟಿ ರೂ. ಕಲೆಕ್ಷನ್‌ ಮಾಡಿದ ಧನುಷ್‌ ನಟನೆಯ ʻ50ʼನೇ ಸಿನಿಮಾ!

ಸದ್ಯ ‘ಕುಬೇರ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದು, ಶೀಘ್ರದಲ್ಲೇ ಸೂಟಿಂಗ್‌ ಮುಕ್ತಾಯವಾಗುವ ನಿರೀಕ್ಷೆಯಿದೆ. ‘ಕುಬೇರ’ ತ್ರಿಭಾಷಾ ಚಿತ್ರವಾಗಿದ್ದು, ಏಕಕಾಲದಲ್ಲಿ ತಮಿಳು, ತೆಲುಗು ಮತ್ತು ಹಿಂದಿಯಲ್ಲಿ ಚಿತ್ರೀಕರಣವಾಗುತ್ತಿದೆ.ʻಕುಬೇರ’ ಬಹು ನಿರೀಕ್ಷಿತ ಪ್ಯಾನ್-ಇಂಡಿಯನ್ ಚಲನಚಿತ್ರಗಳಲ್ಲಿ ಒಂದಾಗಿದೆ, ಇದನ್ನು ರಾಷ್ಟ್ರೀಯ ಪ್ರಶಸ್ತಿ ವಿಜೇತ ನಿರ್ದೇಶಕ ಶೇಖರ್ ಕಮ್ಮುಲ ನಿರ್ದೇಶಿಸಿದ್ದಾರೆ.

Continue Reading

ಕಾಲಿವುಡ್

Actor Dhanush: ಮೂರೇ ದಿನಕ್ಕೆ 50 ಕೋಟಿ ರೂ. ಕಲೆಕ್ಷನ್‌ ಮಾಡಿದ ಧನುಷ್‌ ನಟನೆಯ ʻ50ʼನೇ ಸಿನಿಮಾ!

Actor Dhanush: ಸಂದೀಪ್ ಕಿಶನ್, ಕಾಳಿದಾಸ್ ಜಯರಾಮ್, ಎಸ್‌ಜೆ ಸೂರ್ಯ, ಪ್ರಕಾಶ್ ರಾಜ್, ದುಶಾರ ವಿಜಯನ್ ಮತ್ತು ಸೆಲ್ವರಾಘವನ್ ಪ್ರಮುಖ ಪಾತ್ರಗಳಲ್ಲಿ ಇದ್ದಾರೆ. ಚಿತ್ರವು ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ (CBFC) ನಿಂದ ‘A’ ಪ್ರಮಾಣಪತ್ರವನ್ನು ಪಡೆದುಕೊಂಡಿದೆ.

VISTARANEWS.COM


on

Actor Dhanush Raayan box office Day 3
Koo

ಬೆಂಗಳೂರು: ಧನುಷ್ (Actor Dhanush) ಬರೆದು ನಿರ್ದೇಶಿಸಿರುವ ಸನ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ʻರಾಯನ್ʼ ಸಿನಿಮಾವನ್ನು ಕಲಾನಿಧಿ ಮಾರನ್ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಸಿನಿಮಾ ರಿಲೀಸ್‌ ಆಗಿ ಭಾರತದಲ್ಲಿ 50 ಕೋಟಿ ರೂ, ಕಲೆಕ್ಷನ್‌ ಮಾಡಿದೆ.ಬಿಡುಗಡೆಯಾದ ಕೇವಲ ಮೂರೇ ದಿನಕ್ಕೆ ಸಿನಿಮಾ ಭರ್ಜರಿ ಗಳಿಕೆ ಕಂಡು ಮುನ್ನುಗ್ಗುತ್ತಿದೆ. ಸಿನಿಮಾ ರಿಲೀಸ್‌ ಆದ ಬಳಿಕ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಭಾನುವಾರ (ಜುಲೈ 28) ಬಿಡುಗಡೆಯಾದ ನಂತರ ಅತಿ ಹೆಚ್ಚು ಕಲೆಕ್ಷನ್ ದಾಖಲಿಸಿದೆ. ಮೂರು ದಿನಗಳ ಆರಂಭಿಕ ವಾರಾಂತ್ಯದ ಸಂಗ್ರಹ ಈಗ ಭಾರತದಲ್ಲಿ 42.15 ಕೋಟಿ ರೂ ಜುಲೈ 28 ರಂದು, ‘ರಾಯನ್‌’ ಭಾರತದಲ್ಲಿ ಸರಿಸುಮಾರು ರೂ 14.75 ಕೋಟಿ ಗಳಿಸಿತು. ಇ ದಿನ 1 ಮತ್ತು ದಿನದ 2 ​​ಸಂಗ್ರಹಕ್ಕಿಂತ ಸ್ವಲ್ಪ ಹೆಚ್ಚಾಗಿದೆ. ಭಾನುವಾರದಂದು ಚಿತ್ರವು ಒಟ್ಟಾರೆ ಶೇಕಡಾ 67.31 ರಷ್ಟು ಆಕ್ಯುಪೆನ್ಸಿಯನ್ನು ಹೊಂದಿತ್ತು.

ಟ್ರೇಡ್ ವರದಿಗಳ ಪ್ರಕಾರ, ‘ರಾಯನ್‌’ ಕೇವಲ ಎರಡು ದಿನಗಳಲ್ಲಿ ವಿಶ್ವಾದ್ಯಂತ 50 ಕೋಟಿ ರೂಪಾಯಿಗಳನ್ನು ದಾಟಿದೆ. ಮುಂಬರುವ ವಾರದಲ್ಲಿ 100 ಕೋಟಿ ರೂ, ಕಲೆಕ್ಷನ್‌ ಮಾಡಲಿದೆ ಎಂದು ವರದಿಯಾಗಿದೆ.

ಸಂದೀಪ್ ಕಿಶನ್, ಕಾಳಿದಾಸ್ ಜಯರಾಮ್, ಎಸ್‌ಜೆ ಸೂರ್ಯ, ಪ್ರಕಾಶ್ ರಾಜ್, ದುಶಾರ ವಿಜಯನ್ ಮತ್ತು ಸೆಲ್ವರಾಘವನ್ ಪ್ರಮುಖ ಪಾತ್ರಗಳಲ್ಲಿ ಇದ್ದಾರೆ. ಚಿತ್ರವು ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ (CBFC) ನಿಂದ ‘A’ ಪ್ರಮಾಣಪತ್ರವನ್ನು ಪಡೆದುಕೊಂಡಿದೆ. ಸನ್ ಪಿಕ್ಚರ್ಸ್‌ಗಾಗಿ ಕಲಿನಿತಿ ಮಾರನ್ ನಿರ್ಮಿಸಿರುವ ಈ ಚಿತ್ರಕ್ಕೆ ಎಆರ್ ರೆಹಮಾನ್ ಸಂಗೀತ ಸಂಯೋಜನೆ, ಓಂ ಪ್ರಕಾಶ್ ಅವರ ಛಾಯಾಗ್ರಹಣ ಮತ್ತು ಪ್ರಸನ್ನ ಜಿಕೆ ಸಂಕಲನವಿದೆ.

ಇದನ್ನೂ ಓದಿ: Actor Dhanush: ಧನುಷ್‌ ಬರ್ತ್‌ಡೇ ಸ್ಪೆಷಲ್‌; ‘ಕುಬೇರ’ ಸಿನಿಮಾದಿಂದ ಲುಕ್‌ ಪೋಸ್ಟರ್‌ ಔಟ್‌!

ಧನುಷ್ (Actor Dhanush) ಅವರ ಎರಡನೇ ನಿರ್ದೇಶನದ ಸಿನಿಮಾ ರಾಯನ್‌’ (Raayan). ಧನುಷ್ ಕಳೆದ ವರ್ಷ ಜುಲೈನಲ್ಲಿ ಈ ಸಿನಿಮಾದ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದರು. ಈ ಸಿನಿಮಾಗಾಗಿ ನಟ ತಲೆಯನ್ನು ಬೋಳಿಸಿಕೊಂಡಿದ್ದರು. 2017 ರಲ್ಲಿ ತೆರೆಕಂಡ ‘ಪಾ ಪಾಂಡಿ’ ಚಿತ್ರದ ಮೂಲಕ ಧನುಷ್ ನಿರ್ದೇಶಕರಾಗಿ ಪದಾರ್ಪಣೆ ಮಾಡಿದರು. ಈ ಚಿತ್ರಕ್ಕಾಗಿ ಫಿಲ್ಮ್‌ಫೇರ್‌ನಲ್ಲಿ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಯನ್ನು ಪಡೆದುಕೊಂಡಿದ್ದರು. ಇದೀಗ ʻರಾಯನ್‌ʼ ಅವರ ಎರಡನೇ ನಿರ್ದೇಶನದ ಸಿನಿಮಾ. ಧನುಷ್‌ ಕೊನೆಯದಾಗಿ ‘ಕ್ಯಾಪ್ಟನ್ ಮಿಲ್ಲರ್’ ಚಿತ್ರದಲ್ಲಿ ಕಾಣಿಸಿಕೊಂಡರು. ಅರುಣ್ ಮಾಥೇಶ್ವರನ್ ನಿರ್ದೇಶನದ ಈ ಚಿತ್ರದಲ್ಲಿ ಶಿವ ರಾಜ್‌ಕುಮಾರ್, ಪ್ರಿಯಾಂಕಾ ಮೋಹನ್, ನಿವೇದಿತಾ ಸತೀಶ್, ಜಾನ್ ಕೊಕ್ಕೆನ್ ಮತ್ತು ಮೂರ್ ಪ್ರಮುಖ ಪಾತ್ರಗಳಲ್ಲಿದ್ದರು.

ಸದ್ಯ ‘ಕುಬೇರ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದು, ಶೀಘ್ರದಲ್ಲೇ ಸೂಟಿಂಗ್‌ ಮುಕ್ತಾಯವಾಗುವ ನಿರೀಕ್ಷೆಯಿದೆ. ‘ಕುಬೇರ’ ತ್ರಿಭಾಷಾ ಚಿತ್ರವಾಗಿದ್ದು, ಏಕಕಾಲದಲ್ಲಿ ತಮಿಳು, ತೆಲುಗು ಮತ್ತು ಹಿಂದಿಯಲ್ಲಿ ಚಿತ್ರೀಕರಣವಾಗುತ್ತಿದೆ.ʻಕುಬೇರ’ ಬಹು ನಿರೀಕ್ಷಿತ ಪ್ಯಾನ್-ಇಂಡಿಯನ್ ಚಲನಚಿತ್ರಗಳಲ್ಲಿ ಒಂದಾಗಿದೆ, ಇದನ್ನು ರಾಷ್ಟ್ರೀಯ ಪ್ರಶಸ್ತಿ ವಿಜೇತ ನಿರ್ದೇಶಕ ಶೇಖರ್ ಕಮ್ಮುಲ ನಿರ್ದೇಶಿಸಿದ್ದಾರೆ.

Continue Reading
Advertisement
HP OmniBook X,
ತಂತ್ರಜ್ಞಾನ6 mins ago

HP OmniBook X : ಕೃತಕ ಬುದ್ಧಿಮತ್ತೆ ಹೊಂದಿರುವ ಎರಡು ಲ್ಯಾಪ್​ಟಾಪ್​​ಗಳನ್ನು ಬಿಡುಗಡೆ ಮಾಡಿದ ಎಚ್​ಪಿ

Russia Ukraine War
ದೇಶ37 mins ago

Russia-Ukraine War: ಕೆಲಸ ಕೊಡಿಸ್ತೇವೆ ಅಂತಾ ಸೇನೆಗೆ ತಳ್ಳಿದ್ರು..ರಷ್ಯಾ-ಉಕ್ರೇನ್‌ ಯುದ್ಧದಲ್ಲಿ ಭಾರತೀಯ ಯುವಕ ಸಾವು

HD Devegowda
ಕರ್ನಾಟಕ39 mins ago

HD Devegowda: ಮೋದಿ ಬಜೆಟ್‌ಗೆ ಎಚ್‌.ಡಿ.ದೇವೇಗೌಡರ ಮೆಚ್ಚುಗೆ; ಬೆಂಗಳೂರು ನೀರಿನ ಸಮಸ್ಯೆ ಬಗೆಹರಿಸಲು ಮನವಿ

Dengue Fever
ಆರೋಗ್ಯ45 mins ago

Dengue Fever: ಡೆಂಗ್ಯೂ ಜ್ವರ ಕಡಿಮೆ ಆದ ಮೇಲೆ ಎಚ್ಚರ ತಪ್ಪಿದರೆ ಪ್ರಾಣಾಪಾಯ!

Paris Olympics 2024 :Satwik-Chirag reach men's doubles quarter-finals
ಪ್ರಮುಖ ಸುದ್ದಿ52 mins ago

Paris Olympics 2024 : ಒಲಿಂಪಿಕ್ಸ್ ಕ್ವಾರ್ಟರ್​ಫೈನಲ್​ಗೇರಿ ದಾಖಲೆ ಸೃಷ್ಟಿಸಿದ ಬ್ಯಾಡ್ಮಿಂಟನ್ ಪುರುಷರ ಡಬಲ್ಸ್ ಜೋಡಿ ಸಾತ್ವಿಕ್​- ಚಿರಾಗ್​

veterinary officer recruitment
ಪ್ರಮುಖ ಸುದ್ದಿ1 hour ago

Veterinary Officer Recruitment: 400 ಪಶು ವೈದ್ಯಾಧಿಕಾರಿಗಳ ಹುದ್ದೆಗೆ ಅರ್ಜಿ ಆಹ್ವಾನ; ಶುಲ್ಕ, ಅರ್ಹತೆಯ ಮಾಹಿತಿ ಇಲ್ಲಿದೆ

Parisl Olympics 2024
ಪ್ರಮುಖ ಸುದ್ದಿ1 hour ago

Paris Olympics 2024 : ಮತ್ತೊಂದು ಗೆಲವು ಕಂಡ ಷಟ್ಲರ್ ಲಕ್ಷ್ಯ ಸೇನ್​

Bollywood Divorce Case
Latest1 hour ago

Bollywood Divorce Case: ವಿಚ್ಛೇದನದ ಬಳಿಕ ಪತ್ನಿಗೆ ದುಬಾರಿ ʼಜೀವನಾಂಶʼ ನೀಡಿದ ಬಾಲಿವುಡ್ ಸ್ಟಾರ್‌ಗಳಿವರು!

Rahul Gandhi
ದೇಶ1 hour ago

Rahul Gandhi: ರಾಹುಲ್‌ ಮಾತಿಗೆ ಹಣೆ ಚಚ್ಚಿಕೊಂಡು, ಮುಖ ಮುಚ್ಚಿಕೊಂಡ ಸಚಿವೆ ನಿರ್ಮಲಾ: ಭಾರೀ ವೈರಲಾಗ್ತಿದೆ ಈ ವಿಡಿಯೋ

Star Shirt Saree Fashion
ಫ್ಯಾಷನ್2 hours ago

Star Shirt Saree Fashion: ಏನಿದು ಶರ್ಟ್‌ ಸೀರೆ? ಹೊಸ ಟ್ರೆಂಡ್‌ ಬಗ್ಗೆ ನಟಿ ತಾರಾ ಏನಂತಾರೆ?

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ4 hours ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ5 hours ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ8 hours ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ1 day ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ1 day ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ1 day ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ1 day ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

Karnataka weather Forecast
ಮಳೆ2 days ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ2 days ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ2 days ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

ಟ್ರೆಂಡಿಂಗ್‌