Ukraine War: ಅಧ್ಯಕ್ಷ ವ್ಲಾಡಿಮಿರ್​ ಪುಟಿನ್​​ರನ್ನು ಕೊಲ್ಲಲು ಉಕ್ರೇನ್​ 2 ಡ್ರೋನ್​ ದಾಳಿ ನಡೆಸಿದೆ ಎಂದ ರಷ್ಯಾ - Vistara News

ವಿದೇಶ

Ukraine War: ಅಧ್ಯಕ್ಷ ವ್ಲಾಡಿಮಿರ್​ ಪುಟಿನ್​​ರನ್ನು ಕೊಲ್ಲಲು ಉಕ್ರೇನ್​ 2 ಡ್ರೋನ್​ ದಾಳಿ ನಡೆಸಿದೆ ಎಂದ ರಷ್ಯಾ

ಯುದ್ಧ ಸನ್ನಿವೇಶ, ಸಂಘರ್ಷದ ನಡುವೆ ಇಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಫಿನ್​ಲ್ಯಾಂಡ್​ಗೆ ಭೇಟಿ ಕೊಟ್ಟಿದ್ದಾರೆ. ಡ್ರೋನ್​ ದಾಳಿಯ ಬಗ್ಗೆ ಉಕ್ರೇನ್​ ಇದುವರೆಗೂ ಯಾವುದೇ ಹೇಳಿಕೆಯನ್ನೂ ಬಿಡುಗಡೆ ಮಾಡಿಲ್ಲ.

VISTARANEWS.COM


on

Ukraine attempted a drone strike to kill President Vladimir Says Russia
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಾಸ್ಕೋ: ಕಳೆದ ಒಂದೂವರೆ ವರ್ಷಗಳಿಂದ ಉಕ್ರೇನ್​ ದೇಶದ ಮೇಲೆ ಯುದ್ಧ (Ukraine War) ನಡೆಸುತ್ತಿರುವ ರಷ್ಯಾ ಈಗ ಹೊಸ ಆರೋಪವೊಂದನ್ನು ಮಾಡಿದೆ. ನಮ್ಮ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Russia President Vladimir Putin)​ರನ್ನು ಹತ್ಯೆ ಮಾಡಲು ಉಕ್ರೇನ್​ ಪ್ರಯತ್ನ ಮಾಡುತ್ತಿದೆ. ರಷ್ಯಾ ಅಧ್ಯಕ್ಷರ ಅಧಿಕೃತ ನಿವಾಸ ಕ್ರೆಮ್ಲಿನ್​ ಮೇಲೆ ಡ್ರೋನ್ ದಾಳಿ ನಡೆಸಿದೆ. ರಷ್ಯಾದ ಮಿಲಿಟರಿ ಮತ್ತು ಭದ್ರತಾ ಪಡೆಗಳು ಈ ಡ್ರೋನ್​​ನ್ನು ನಿಷ್ಕ್ರಿಯಗೊಳಿಸಿವೆ ಎಂದು ಕ್ರೆಮ್ಲಿನ್​ ಪ್ರಕಟಣೆ ಹೊರಡಿಸಿದೆ.

‘ರಷ್ಯಾದ ಮೇಲೆ ಉಕ್ರೇನ್​ 2 ಡ್ರೋನ್​ಗಳ ಮೂಲಕ​ ದಾಳಿಯನ್ನು ನಡೆಸಿದೆ. ಈ ಅಟ್ಯಾಕ್​​ನ್ನು ನಾವು ಯೋಜಿತ ಉಗ್ರ ದಾಳಿ ಎಂದು ಪರಿಗಣಿಸುತ್ತೇವೆ’ ಎಂದೂ ರಷ್ಯಾ ಸರ್ಕಾರ ಹೇಳಿಕೆ ನೀಡಿದೆ. ‘ಅಧ್ಯಕ್ಷ ವ್ಲಾಡಿಮಿರ್ ಪುಟಿನ್​​ಗೆ ಯಾವುದೇ ಅಪಾಯವಾಗಿಲ್ಲ. ಕಾರಣ ಅವರು ದಾಳಿ ನಡೆದ ಸಂದರ್ಭದಲ್ಲಿ ಮಾಸ್ಕೋದ ಹೊರಭಾಗದಲ್ಲಿರುವ ಅವರ ನೋವೋ ಒಗರಿಯೋವೊ ನಿವಾಸದಲ್ಲಿ ಇದ್ದರು. ಕ್ರೆಮ್ಲಿನ್​ ಕಟ್ಟಡಕ್ಕೂ ಹಾನಿಯಾಗಿಲ್ಲ’ ಎಂದು ಮಾಹಿತಿ ನೀಡಿದೆ. ಇನ್ನು ಉಕ್ರೇನ್​ ಹಾರಿಸಿದ ಡ್ರೋನ್​ನ್ನು ರಷ್ಯಾ ಮಿಲಿಟರಿ ಪಡೆಗಳು ನಿಷ್ಕ್ರಿಯಗೊಳಿಸಿದಾಗ ಭುಗಿಲೆದ್ದ ಹೊಗೆಯನ್ನು ತೋರಿಸುವ ವಿಡಿಯೊಗಳು ರಷ್ಯನ್ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದು, ಸೋಷಿಯಲ್ ಮೀಡಿಯಾದಲ್ಲಿ ಕೂಡ ವೈರಲ್ ಆಗುತ್ತಿವೆ.

ಯುದ್ಧ ಸನ್ನಿವೇಶ, ಸಂಘರ್ಷದ ನಡುವೆ ಇಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಫಿನ್​ಲ್ಯಾಂಡ್​ಗೆ ಭೇಟಿ ಕೊಟ್ಟಿದ್ದಾರೆ. ಡ್ರೋನ್​ ದಾಳಿಯ ಬಗ್ಗೆ ಉಕ್ರೇನ್​ ಇದುವರೆಗೂ ಯಾವುದೇ ಹೇಳಿಕೆಯನ್ನೂ ಬಿಡುಗಡೆ ಮಾಡಿಲ್ಲ. ರಷ್ಯಾ ಮಾಡುತ್ತಿರುವ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಉಕ್ರೇನ್ ಸರ್ಕಾರವನ್ನು ಕೆಲವು ಮಾಧ್ಯಮಗಳು ಪ್ರಶ್ನಿಸಿವೆ. ಆದರೆ ಸರ್ಕಾರ ಮೌನ ವಹಿಸಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: Russian oil : ಮಾರ್ಚ್‌ನಲ್ಲಿ ವಾಡಿಕೆಯ ಇರಾಕಿಗಿಂತ ರಷ್ಯಾದಿಂದಲೇ ಎರಡು ಪಟ್ಟು ಹೆಚ್ಚು ತೈಲ ಖರೀದಿಸಿದ ಭಾರತ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Cyclone Remal: ರೆಮಲ್‌ ಚಂಡಮಾರುತದ ಅಬ್ಬರಕ್ಕೆ ಜನ ಜೀವನ ಅಸ್ತವ್ಯಸ್ತ; 16 ಮಂದಿಯನ್ನು ಬಲಿ ಪಡೆದ ಭೀಕರ ಮಳೆ

Cyclone Remal: ಪ್ರಬಲ ಚಂಡಮಾರುತ ರೆಮಲ್‌ ಅಬ್ಬರಕ್ಕೆ ಪಶ್ಚಿಮ ಬಂಗಾಳ ಮತ್ತು ಬಾಂಗ್ಲಾದೇಶ ಅಕ್ಷರಶಃ ನಲುಗಿ ಹೋಗಿವೆ. ರೆಮಲ್ ಚಂಡಮಾರುತದ ಕಾರಣದಿಂದ ಬಂಗಾಳ ಕೊಲ್ಲಿಯ ಕರಾವಳಿಯಲ್ಲಿ ಭೂಕುಸಿತ ಉಂಟಾಗಿದ್ದು, ಬಾಂಗ್ಲಾದೇಶ ಮತ್ತು ಭಾರತದಾದ್ಯಂತ 16 ಮಂದಿಯನ್ನು ಬಲಿ ಪಡೆದುಕೊಂಡಿದೆ. ಬಾಂಗ್ಲಾದೇಶದಲ್ಲಿ ಕನಿಷ್ಠ 10 ಮಂದಿ ಮೃತಪಟ್ಟಿದ್ದು, ಉಳಿದ ಸಾವು ಪಶ್ಚಿಮ ಬಂಗಾಳದಲ್ಲಿ ವರದಿಯಾಗಿದೆ. ಈ ಪೈಕಿ ಕೆಲವರು ಸಂತ್ರಸ್ತ ಶಿಬಿರಕ್ಕೆ ಸ್ಥಳಾಂತರಿಸುವ ವೇಳೆ ಮೃತಪಟ್ಟರೆ, ಇನ್ನು ಹಲವರು ಭೀಕರ ಮಳೆಯಿಂದ ಮನೆ ಕುಸಿದು, ವಿದ್ಯುತ್‌ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

VISTARANEWS.COM


on

Cyclone Remal
Koo

ಕೋಲ್ಕತ್ತಾ: ಈ ವರ್ಷದ ಮೊದಲ ಪ್ರಬಲ ಚಂಡಮಾರುತ ರೆಮಲ್‌ (Cyclone Remal) ಅಬ್ಬರಕ್ಕೆ ಪಶ್ಚಿಮ ಬಂಗಾಳ ಮತ್ತು ಬಾಂಗ್ಲಾದೇಶ ಅಕ್ಷರಶಃ ನಲುಗಿ ಹೋಗಿವೆ. ರೆಮಲ್ ಚಂಡಮಾರುತದ ಕಾರಣದಿಂದ ಬಂಗಾಳ ಕೊಲ್ಲಿಯ ಕರಾವಳಿಯಲ್ಲಿ ಭೂಕುಸಿತ ಉಂಟಾಗಿದ್ದು, ಬಾಂಗ್ಲಾದೇಶ ಮತ್ತು ಭಾರತದಾದ್ಯಂತ 16 ಮಂದಿಯನ್ನು ಬಲಿ ಪಡೆದುಕೊಂಡಿದೆ ಎಂದು ರಾಯಿಟರ್ಸ್ ಸುದ್ದಿ ಸಂಸ್ಥೆ ವರದಿ ಮಾಡಿದೆ. ಬಾಂಗ್ಲಾದೇಶ ಮತ್ತು ಪಶ್ಚಿಮ ಬಂಗಾಳದ ಕರಾವಳಿ ಪ್ರದೇಶಗಳಲ್ಲಿ ಮಳೆಯಿಂದಾಗಿ ಹಲವು ಮಂದಿ ಗಾಯಗೊಂಡಿದ್ದು, ಅನೇಕ ಮನೆಗಳು, ಮರಗಳು ಧರೆಗುರುಳಿವೆ. ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ವಿದ್ಯುತ್ ಮಾರ್ಗಗಳಿಗೆ ತೀವ್ರ ಹಾನಿಯಾಗಿದೆ ಎಂದು ಮೂಲಗಳು ತಿಳಿಸಿವೆ.

ಗಂಟೆಗೆ 135 ಕಿ.ಮೀ ವೇಗದಲ್ಲಿ ಬೀಸಿದ ಚಂಡಮಾರುತವು ಭಾನುವಾರ ತಡರಾತ್ರಿ ಬಾಂಗ್ಲಾದೇಶದ ದಕ್ಷಿಣ ಬಂದರು ಮೊಂಗ್ಲಾ ಮತ್ತು ಪಶ್ಚಿಮ ಬಂಗಾಳದ ಪಕ್ಕದ ಸಾಗರ್ ದ್ವೀಪಗಳ ಸುತ್ತಮುತ್ತಲಿನ ಪ್ರದೇಶವನ್ನು ದಾಟಿದೆ ಎಂದು ಹವಾಮಾನ ಅಧಿಕಾರಿಗಳು ತಿಳಿಸಿದ್ದಾರೆ. ಬಾಂಗ್ಲಾದೇಶದಲ್ಲಿ ಕನಿಷ್ಠ 10 ಮಂದಿ ಮೃತಪಟ್ಟಿದ್ದು, ಉಳಿದ ಸಾವು ಪಶ್ಚಿಮ ಬಂಗಾಳದಲ್ಲಿ ವರದಿಯಾಗಿದೆ. ಈ ಪೈಕಿ ಕೆಲವರು ಸಂತ್ರಸ್ತ ಶಿಬಿರಕ್ಕೆ ಸ್ಥಳಾಂತರಿಸುವ ವೇಳೆ ಮೃತಪಟ್ಟರೆ, ಇನ್ನು ಹಲವರು ಭೀಕರ ಮಳೆಯಿಂದ ಮನೆ ಕುಸಿದು, ವಿದ್ಯುತ್‌ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ವಿದ್ಯುತ್ ಸ್ಪರ್ಶದಿಂದ ನಾಲ್ವರು ಸಾವನ್ನಪ್ಪಿದ್ದು, ರಾಜ್ಯದಲ್ಲಿ ಸಾವಿನ ಸಂಖ್ಯೆ 6ಕ್ಕೆ ಏರಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಚಂಡಮಾರುತದ ಪ್ರಭಾವ ವಿದ್ಯುತ್ ಮಾರ್ಗಗಳ ಮೇಲೂ ಬೀರಿದ್ದು, ಹಲವು ಕರಾವಳಿ ಪ್ರದೇಶಗಳಿಗೆ ಸಂಪರ್ಕ ಕಡಿತಗೊಂಡಿದೆ. ಪರಿಣಾಮ ಬಾಂಗ್ಲಾದೇಶದ ಲಕ್ಷಾಂತರ ಮಂದಿ ಮತ್ತು ಪಶ್ಚಿಮ ಬಂಗಾಳದ ಸಾವಿರಾರು ಮಂದಿ ವಿದ್ಯುತ್‌ ಇಲ್ಲದೆ ಪರದಾಡುವಂತಾಗಿದೆ. ಪಶ್ಚಿಮ ಬಂಗಾಳದಲ್ಲಿ ಕನಿಷ್ಠ 1,200 ವಿದ್ಯುತ್‌ ಕಂಬಗಳು ಧರೆಗುರುಳಿವೆ ಮತ್ತು 300 ಮಣ್ಣಿನ ಗುಡಿಸಲುಗಳು ನೆಲಸಮವಾಗಿದೆ ಎಂದು ಅಂದಾಜಿಸಲಾಗಿದೆ.

ʼʼಅಪಘಾತಗಳನ್ನು ತಪ್ಪಿಸಲು ಕೆಲವು ಪ್ರದೇಶಗಳಿಗೆ ವಿದ್ಯುತ್ ಸರಬರಾಜನ್ನು ಸ್ಥಗಿತಗೊಳಿಸಲಾಗಿದೆ. ಇತ್ತ ಮರಗಳು ಬಿದ್ದು ಅನೇಕ ಕರಾವಳಿ ಪಟ್ಟಣಗಳ ವಿದ್ಯುತ್‌ ಪೂರೈಕೆಗೆ ಅಡ್ಡಿಯಾಗಿದೆʼʼ ಎಂದು ಬಾಂಗ್ಲಾದೇಶದ ವಿದ್ಯುತ್ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ಬೀದಿಗಳಿಗೆ ನುಗ್ಗಿದ ನೆರೆ

ಚಂಡಮಾರುತ ಕಾರಣದಿಂದ ಮೇ 27ರಂದು ಭೀಕರ ಮಳೆಯಾಗಿದ್ದು, ಕೋಲ್ಕತ್ತಾದ ಹಲವು ಬೀದಿಗಳಿಗೆ ನೆರೆ ನೀರು ನುಗ್ಗಿದೆ. ಅನೇಕ ಕಡೆ ಗೋಡೆಗಳು ಕುಸಿದು ಬಿದ್ದಿದ್ದು, ಕನಿಷ್ಠ 52 ಮರಗಳು ಧರೆಗುರುಳಿವೆ. ಭಾನುವಾರ ಸುಮಾರು 50 ವಿಮಾನಗಳ ಹಾರಾಟವನ್ನು ನಿರ್ಬಂಧಿಸಲಾಗಿದ್ದು, ಸದ್ಯ ಸಂಚಾರ ಆರಂಭಿಸಿವೆ. ರೈಲು ಸಂಚಾರವನ್ನು ಪುನರಾರಂಭಿಸಲಾಗಿದೆ.

ಇದನ್ನೂ ಓದಿ: Cyclone Remal: ರೆಮಲ್‌ ಚಂಡ ಮಾರುತದ ಅಬ್ಬರ ಶುರು; ಬಾಂಗ್ಲಾದೇಶ, ಪ.ಬಂಗಾಳ ಸೇರಿದಂತೆ ಹಲವಡೆ ಭಾರೀ ಮಳೆ, ಭೂಕುಸಿತ ಸಾಧ್ಯತೆ

10 ಲಕ್ಷ ಮಂದಿಯ ಸ್ಥಳಾಂತರ

ಭಾರತ ಮತ್ತು ಬಾಂಗ್ಲಾದೇಶದ ಕನಿಷ್ಠ 10 ಲಕ್ಷ ಮಂದಿಯನ್ನು ಈಗಾಗಲೇ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ. ʼʼನದಿ ನೀರಿನ ಮಟ್ಟ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ತಗ್ಗು ಪ್ರದೇಶಗಳ ಜನರನ್ನು ನಿರಾಶ್ರಿತ ಶಿಬಿರಗಳಿಗೆ ಕರೆದೊಯ್ಯಲಾಗಿದೆʼʼ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Continue Reading

ದೇಶ

Viral Video: ಬೆಂಗಳೂರಿನಲ್ಲಷ್ಟೇ ಅಲ್ಲ, ಮೌಂಟ್ ಎವರೆಸ್ಟ್ ನಲ್ಲೂ ಈಗ ಟ್ರಾಫಿಕ್ ಜಾಮ್!!

ಮೌಂಟ್ ಎವರೆಸ್ಟ್ ನಲ್ಲಿ ಪರ್ವತಾರೋಹಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದು,ಈ ಬಗ್ಗೆ ಭಾರತದ ಪರ್ವತಾರೋಹಿ ರಾಜನ್ ದ್ವಿವೇದಿ ಹಂಚಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video)ಆಗಿದೆ. ಅಲ್ಲೇಕೆ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ? ಈ ಕುರಿತ ಕುತೂಹಲಕರ ವರದಿ ಇಲ್ಲಿದೆ.

VISTARANEWS.COM


on

By

Viral Video
Koo

ಮೌಂಟ್ ಎವರೆಸ್ಟ್ ನಲ್ಲಿ (Mount Everest) ಪರ್ವತಾರೋಹಿಗಳು (climber) ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದು, ಆರೋಹಿಗಳ ಉದ್ದನೆಯ ಸರತಿಯ ಬಗ್ಗೆ ಇನ್ ಸ್ಟಾಗ್ರಾಮ್ ನಲ್ಲಿ (Instagram) ಭಾರತದ (indian) ಪರ್ವತಾರೋಹಿ ರಾಜನ್ ದ್ವಿವೇದಿ (Rajan Dwivedi) ಹಂಚಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ (social media) ವೈರಲ್ (Viral Video) ಆಗಿದೆ.

ಮೌಂಟ್ ಎವರೆಸ್ಟ್ ನಲ್ಲಿ ಮಂಗಳವಾರ ಪರ್ವತಾರೋಹಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು. ಬ್ರಿಟಿಷ್ ಪರ್ವತಾರೋಹಿ ಮಾರ್ ಪ್ಯಾಟರ್ಸನ್ (39) ಮತ್ತು ನೇಪಾಳಿ ಶೆರ್ಪಾ ಪಾಸ್ತೆಂಜಿ (23) ಅವರು ಹಿಲರಿ ಹಂತವನ್ನು ಹತ್ತುವಾಗ ಕುಸಿದು ಬಿದ್ದಿದ್ದಾರೆ ಎಂದು ನ್ಯೂಯಾರ್ಕ್ ಪೋಸ್ಟ್ ವರದಿ ಮಾಡಿದೆ.

ಮೇ 20ರಂದು ರಾಜನ್ ದ್ವಿವೇದಿ ಅವರು ಇನ್ ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡ ವಿಡಿಯೋ ಅವರ ಹಿಂದೆ ಇರುವ ಆರೋಹಿಗಳ ಗುಂಪಿನ ಚಿತ್ರಣವನ್ನು ತೋರಿಸಿದೆ.

ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ದ್ವಿವೇದಿ ಅವರು ಮೌಂಟ್ ಎವರೆಸ್ಟ್ ಅನ್ನು ಏರುವಾಗ ಎದುರಾಗುವ ಸವಾಲುಗಳ ಬಗ್ಗೆ ಹೇಳಿದ್ದಾರೆ. ಒಂದೇ ಹಗ್ಗವನ್ನು ಹಿಡಿದುಕೊಂಡು ನಾವೆಲ್ಲ ಜೊತೆಯಾಗಿ ಸಾಗುತ್ತಿದ್ದೇವೆ. ಪರ್ವತ ಏರಲು, ಇಳಿಯಲು ಟ್ರಾಫಿಕ್ ತೊಂದರೆ ಎದುರಾಗಿದೆ. ಇದಕ್ಕೆ ಮುಖ್ಯ ಕಾರಣ ಇಲ್ಲಿನ ಹವಾಮಾನ. ಆರೋಹಿಗಳ ದೊಡ್ಡ ಸಾಲು ಬರುತ್ತಿರುವುದನ್ನು ನೋಡುವಾಗ ನನಗೆ ಕೆಳಗೆ ಬರುವುದು ಒಂದು ದುಃಸ್ವಪ್ನದಂತೆ ಕಂಡಿತ್ತು ಮತ್ತು ತೀವ್ರವಾಗಿ ದಣಿದಿದ್ದೆ ಎಂದು ಹೇಳಿದ್ದಾರೆ.


ದ್ವಿವೇದಿ ಆರೋಹಣದ ಮೂರು ನಿರ್ದಿಷ್ಟ ಪ್ರಯಾಸಕರ ವಿಭಾಗಗಳನ್ನು ಏರಿದ್ದಾರೆ. ಖುಂಬು ಐಸ್‌ಫಾಲ್ಸ್, ಕ್ಯಾಂಪ್ 3 ರಿಂದ ಕ್ಯಾಂಪ್ 4 ಕ್ಕೆ ಆರೋಹಣ. ಕ್ಯಾಂಪ್ 4 ರಿಂದ ಶಿಖರದ ಅಂತಿಮ ವಲಯ ಸಾವಿನ ವಲಯ ವೆಂದು ಪರಿಗಣಿಸಲ್ಪಟ್ಟಿದೆ. ಇಲ್ಲಿ ರಾತ್ರಿಯ ಸಮಯದಲ್ಲಿ ಹೆಪ್ಪುಗಟ್ಟಿದ ತಾಪಮಾನದ ನಡುವೆ ಪ್ರವಾಸ ಕೈಗೊಳ್ಳಲಾಗುತ್ತದೆ.

ಮೌಂಟ್ ಎವರೆಸ್ಟ್ ಏರುವುದು ಒಂದು ತಮಾಷೆಯ ಸಂಗತಿ ಅಲ್ಲ ಮತ್ತು ವಾಸ್ತವವಾಗಿ ಅದು ಗಂಭೀರ ಆರೋಹಣ ಎಂದು ದ್ವಿವೇದಿ ಪೋಸ್ಟ್‌ನಲ್ಲಿ ಬರೆದಿದ್ದಾರೆ. ಶಿಖರದಿಂದ ಇಳಿಯುವುದು ಸವಾಲಿನ ಕಾರ್ಯವಾಗುತ್ತಿದೆ. ವಿಶೇಷವಾಗಿ ಹವಾಮಾನ ವೈಪರೀತ್ಯದ ನಡುವೆಯೂ ಹೆಚ್ಚಿನ ಸಂಖ್ಯೆಯ ಆರೋಹಿಗಳು ಮೇಲೆ ಏರುತ್ತಿದ್ದಾರೆ ಎಂದು ದ್ವಿವೇದಿ ತಿಳಿಸಿದ್ದಾರೆ.

ಪ್ರಪಂಚದಾದ್ಯಂತ ಸುಮಾರು 500 ಆರೋಹಿಗಳು, ಹವ್ಯಾಸಿಗಳು ಮತ್ತು ಅನನುಭವಿಗಳು ಇದನ್ನು ಏರಲು ಪ್ರಯತ್ನಿಸುತ್ತಾರೆ. ಬಹುಶಃ 250- 300 ಮಂದಿ ಮಾತ್ರ ಯಶಸ್ವಿಯಾಗುತ್ತಾರೆ. ಅನೇಕರು ಗಾಯಗೊಂಡು ಪ್ರವಾಸವನ್ನು ಕೊನೆಗೊಳಿಸುತ್ತಾರೆ ಎಂದು ಅವರು ಹೇಳಿದ್ದಾರೆ.

ದ್ವಿವೇದಿ ಹಂಚಿಕೊಂಡಿರುವ ವಿಡಿಯೋವು ಒಂದು ಹಗ್ಗದ ಸಾಲಿನಲ್ಲಿ ದೀರ್ಘ ಕಾಯುವಿಕೆ ಮತ್ತು ಟ್ರಾಫಿಕ್ ಅಪ್‌ಸ್ಟ್ರೀಮ್ ಮತ್ತು ಡೌನ್‌ಸ್ಟ್ರೀಮ್‌ನಲ್ಲಿ ಇಂಟರ್‌ಚೇಂಜ್‌ಗಳ ಮಾತುಕತೆಗಳನ್ನು ತೋರಿಸುತ್ತದೆ.

ಇದನ್ನೂ ಓದಿ: Snake Bite : ಮುಳ್ಳು ಚುಚ್ಚಿದೆ ಎಂದು ನಿದ್ರೆಗೆ ಜಾರಿದವನ ಮೈ ಸೇರಿತು ಹಾವಿನ ವಿಷ! ಬೆಳಗಾಗುವಷ್ಟರಲ್ಲಿ ಮೃತ್ಯು


ಉದ್ದನೆಯ ಸರದಿಯ ಮತ್ತೊಂದು ವಿಡಿಯೋ ವನ್ನು ಹಂಚಿಕೊಂಡ ಮಾಸ್ಸಿಮೊ ಎಕ್ಸ್ ನಲ್ಲಿ ಟ್ರಾಫಿಕ್ ಜಾಮ್‌ಗಳ ಕಾರಣಗಳು, ತಾಪಮಾನದಲ್ಲಿ ತೀವ್ರ ಕುಸಿತ, ಹಗ್ಗಗಳನ್ನು ಸರಿಪಡಿಸಿದ ದಿನಾಂಕ ಮತ್ತು ನಿಧಾನ ಪ್ರಯಾಣ, ಅನನುಭವಿ ಆರೋಹಿಗಳ ಕುರಿತು ಹೇಳಿಕೊಂಡಿದ್ದಾರೆ.

ಅನೇಕ ಪರಿಸರವಾದಿಗಳು ಮತ್ತು ಆರೋಹಿಗಳು ಎವರೆಸ್ಟ್‌ನಲ್ಲಿ ಜನಸಂದಣಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಪರ್ವತದ ಮೇಲೆ ಅನೇಕ ಅಪಘಾತಗಳು ಮತ್ತು ಸಾವುಗಳ ಹೊರತಾಗಿಯೂ ನೂರಾರು ಜನರು ವಿಶ್ವದ ಅತಿ ಎತ್ತರದ ಶಿಖರವನ್ನು ಏರಲು ತಯಾರಾಗುತ್ತಾರೆ.

Continue Reading

ಕರ್ನಾಟಕ

Prajwal Revanna Video: ನಾನು ‘ಅಮಾಯಕ’ ಎನ್ನುವ ಪ್ರಜ್ವಲ್‌ಗೆ ‘ವಿಸ್ತಾರ ನ್ಯೂಸ್‌’ 10 ಪ್ರಶ್ನೆಗಳು

Prajwal Revanna Video: ನನಗೆ ಪ್ರಕರಣದ ಬಗ್ಗೆ ಗೊತ್ತೇ ಇರಲಿಲ್ಲ, ನಾನು ತಪ್ಪೇ ಮಾಡಿಲ್ಲ, ಕಾನೂನಿನ ಬಗ್ಗೆ ಗೌರವ ಇದೆ ಎನ್ನುವ ಪ್ರಜ್ವಲ್‌ ರೇವಣ್ಣ ಅವರು ಕಳೆದ 1 ತಿಂಗಳಿಂದ ಏಕೆ ವಿಚಾರಣೆಗೆ ಹಾಜರಾಗಲಿಲ್ಲ? ಸಾರ್ವಜನಿಕರಿಗೆ ಮುಖ ತೋರಿಸಲಿಲ್ಲ? ಇಂತಹ ಹತ್ತಾರು ಪ್ರಶ್ನೆಗಳು ನಿಮ್ಮ ಮನಸ್ಸಿನಲ್ಲೂ ಇರಬಹುದು. ಅವುಗಳನ್ನು ವಿಸ್ತಾರ ನ್ಯೂಸ್‌ ಕೇಳಿದೆ.

VISTARANEWS.COM


on

Prajwal Revanna Video
Koo

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಕಳೆದ ಒಂದು ತಿಂಗಳಿನಿಂದ ತಲೆಮರೆಸಿಕೊಂಡಿದ್ದ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರೀಗ ವಿಡಿಯೊದಲ್ಲಿ ಪ್ರತ್ಯಕ್ಷರಾಗಿದ್ದಾರೆ. ವಿದೇಶದಲ್ಲಿದ್ದಾರೆ ಎನ್ನಲಾಗುವ ಪ್ರಜ್ವಲ್‌ ರೇವಣ್ಣ, ವಿಡಿಯೊ (Prajwal Revanna Video) ಬಿಡುಗಡೆ ಮಾಡಿದ್ದು, “ನಾನು ಮೇ 31ರಂದು ವಿಚಾರಣೆಗೆ ಹಾಜರಾಗುತ್ತೇನೆ. ನಾನು ಪ್ರಕರಣದಲ್ಲಿ ಯಾವುದೇ ತಪ್ಪು ಮಾಡಿಲ್ಲ. ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ ನಡೆಯುತಿದ್ದು, ಆರೋಪಮುಕ್ತನಾಗಿ ಹೊರಬರುತ್ತೇನೆ ಎಂಬ ವಿಶ್ವಾಸವಿದೆ” ಎಂದಿದ್ದಾರೆ. ಆದರೆ, ನನಗೆ ಪ್ರಕರಣದ ಬಗ್ಗೆ ಗೊತ್ತೇ ಇರಲಿಲ್ಲ, ನಾನು ತಪ್ಪೇ ಮಾಡಿಲ್ಲ, ಕಾನೂನಿನ ಬಗ್ಗೆ ಗೌರವ ಇದೆ ಎನ್ನುವ ಪ್ರಜ್ವಲ್‌ ರೇವಣ್ಣ (Prajwal Revanna) ಅವರು ಕಳೆದ 1 ತಿಂಗಳಿಂದ ಏಕೆ ವಿಚಾರಣೆಗೆ ಹಾಜರಾಗಲಿಲ್ಲ? ಸಾರ್ವಜನಿಕರಿಗೆ ಮುಖ ತೋರಿಸಲಿಲ್ಲ? ಜನರ ಮನಸಲ್ಲಿರುವ ಇಂತಹ 10 ಪ್ರಶ್ನೆಗಳನ್ನು ‘ವಿಸ್ತಾರ ನ್ಯೂಸ್’‌ ಪ್ರಜ್ವಲ್‌ ರೇವಣ್ಣ ಅವರಿಗೆ ಕೇಳಿದೆ. ಅವು ಇಂತಿವೆ.

ವಿಸ್ತಾರ ನ್ಯೂಸ್‌ 10 ಪ್ರಶ್ನೆಗಳು

  1. ನನ್ನ ವಿರುದ್ಧ ಸುಳ್ಳು ಪ್ರಕರಣ ದಾಖಲಾಗಿದೆ ಎಂದು ಹೇಳುತ್ತಿರುವ ನೀವು ಒಂದು ತಿಂಗಳಿಂದ ತಲೆಮರೆಸಿಕೊಂಡಿರುವುದು ಏಕೆ?
  2. ಯುಟ್ಯೂಬ್‌ ಮೂಲಕ ಪ್ರಕರಣ ಗೊತ್ತಾಗಿದೆ ಅಂತಿದ್ದೀರಿ, ಗೊತ್ತಾದ ಮೇಲೂ ವಿದೇಶದಲ್ಲೇ ಇರುವುದೇಕೆ? ಆಗಲೇ ಸ್ಪಷ್ಟನೆ ನೀಡಲಿಲ್ಲ ಏಕೆ?
  3. ಅಮಾಯಕರಾದ ನೀವು ಕಾಂಗ್ರೆಸ್‌ನ ನವೀನ್‌ ಗೌಡ ಸೇರಿ ಹಲವರ ವಿರುದ್ಧ ಕೇಸ್‌ ದಾಖಲಿಸಿದ್ದೇಕೆ?
  4. ನ್ಯಾಯಾಂಗದ ಮೇಲೆ ವಿಶ್ವಾಸ ಇದೆ ಎಂದು ಹೇಳುವ ನೀವು, ನೋಟಿಸ್‌ ನೀಡಿದರೂ ವಿಚಾರಣೆಗೆ ಹಾಜರಾಗಲಿಲ್ಲ ಏಕೆ?
  5. ತಪ್ಪೇ ಮಾಡದ, ಸತ್ಯಸಂಧರಾದ ನೀವು ಒಂದು ತಿಂಗಳು ಮೊದಲೇ ಸ್ಟೇ ತಂದಿದ್ದು ಏಕೆ?
  6. ತಾತ, ತಂದೆ-ತಾಯಿ, ಚಿಕ್ಕಪ್ಪನ ಮೇಲೆ ಗೌರವ ಇರುವ ನೀವು, ಅವರು ವಾಪಸ್‌ ಬಾ ಎಂದರೂ ಏಕೆ ಬರಲಿಲ್ಲ?
  7. ವಿಚಾರಣೆ ಎದುರಿಸಿ, ದೋಷಮುಕ್ತರಾಗುವ ವಿಶ್ವಾಸ ಇರುವ ನೀವು ಎಸ್‌ಐಟಿಗೆ ಒಂದು ವಾರ ಕಾಲಾವಕಾಶ ಏಕೆ ಕೇಳಿದಿರಿ?
  8. ಒಂದು ವಾರ ಕಾಲಾವಕಾಶ ಕೇಳಿದ ಬಳಿಕವೂ ನಿಗದಿತ ದಿನಾಂಕದಂದು ಭಾರತಕ್ಕೆ ಏಕೆ ಬರಲಿಲ್ಲ? ಏಕೆ ವಿಚಾರಣೆ ಎದುರಿಸಲಿಲ್ಲ?
  9. ತಾತ, ತಂದೆ-ತಾಯಿ, ಕುಮಾರಣ್ಣನ ಮೇಲೆ ಗೌರವ ಹೊಂದಿರುವ ನೀವು, ಅವರ ಮಾತನ್ನು ಏಕೆ ಕೇಳಲಿಲ್ಲ?
  10. ವಿದೇಶದಲ್ಲಿದ್ದೇನೆ ಎಂದು ಹೇಳುವ ನೀವು ಏಕೆ ಯಾವ ದೇಶದಲ್ಲಿದ್ದೇನೆ ಎಂದು ಹೇಳುತ್ತಿಲ್ಲ?

ವಿಡಿಯೊದಲ್ಲಿ ಏನಿದೆ?

“ನಾನು ಎಲ್ಲಿದ್ದೇನೆ ಎಂಬ ಮಾಹಿತಿ ನೀಡಲು ಬಂದಿದ್ದೇನೆ. ನಾನು ಎಲ್ಲಿಯೂ ಓಡಿ ಹೋಗಿಲ್ಲ. ನನ್ನ ರಾಜಕೀಯ ಬೆಳವಣಿಗೆ ಸಹಿಸಲಾಗದೆ ಷಡ್ಯಂತ್ರ ರೂಪಿಸಲಾಗಿದೆ. ನನ್ನ ವಿರುದ್ಧ ಪಿತೂರಿ ಮಾಡಲಾಗಿದೆ. ಕೆಲವು ಶಕ್ತಿಗಳು ಒಟ್ಟಾಗಿ ನನ್ನ ವಿರುದ್ಧ ಪಿತೂರಿ ನಡೆಸಿವೆ. ಇಷ್ಟಾದರೂ ನಾನು ನನ್ನ ತಾತ, ಜೆಡಿಎಸ್‌ ಕಾರ್ಯಕರ್ತರಿಗೆ ಕ್ಷಮೆಯಾಚಿಸುತ್ತೇನೆ. ನಾನು ಮೇ 31ರಂದು ಬೆಳಗ್ಗೆ 10 ಗಂಟೆಗೆ ಭಾರತಕ್ಕೆ ಬಂದು ಎಸ್‌ಐಟಿ ಎದುರು ವಿಚಾರಣೆಗೆ ಹಾಜರಾಗುತ್ತೇನೆ. ವಿದೇಶ ಪ್ರವಾಸವು ಮೊದಲೇ ನಿಗದಿಯಾಗಿತ್ತು. ಆದರೂ, ನಾನು ಭಾರತಕ್ಕೆ ಬಂದು ವಿಚಾರಣೆ ಎದುರಿಸುತ್ತೇನೆ” ಎಂಬುದಾಗಿ ಪ್ರಜ್ವಲ್‌ ರೇವಣ್ಣ ವಿಡಿಯೊದಲ್ಲಿ ತಿಳಿಸಿದ್ದಾರೆ.

“ನಾನು ಇದೇ ಶುಕ್ರವಾರ ಕರ್ನಾಟಕಕ್ಕೆ ಆಗಮಿಸಿ, ಎಸ್‌ಐಟಿ ತನಿಖೆಗೆ ಸಹಕಾರ ನೀಡುತ್ತೇನೆ. ನನಗೆ ಕಾನೂನಿನ ಮೇಲೆ ಅಪಾರ ಗೌರವವಿದೆ. ನನ್ನ ವಿರುದ್ಧ ಮಾಡಿದ ಆರೋಪಗಳನ್ನು ಕೇಳಿ ನನಗೆ ಶಾಕ್‌ ಆಯಿತು. ಇದೇ ಕಾರಣಕ್ಕಾಗಿ ನಾನು ಕೆಲ ದಿನಗಳಿಂದ ಐಸೋಲೇಷನ್‌ನಲ್ಲಿ ಇದ್ದೆ. ವಿದೇಶ ಪ್ರವಾಸವು ಮೊದಲೇ ನಿಗದಿಯಾಗಿತ್ತು. ನಾನು ವಿದೇಶಕ್ಕೆ ಬಂದ ಬಳಿಕ ಪ್ರಕರಣ ತಿಳಿಯಿತು. ನನ್ನ ವಿರುದ್ಧ ರಾಹುಲ್‌ ಗಾಂಧಿ ಸೇರಿ ಎಲ್ಲರೂ ವೇದಿಕೆ ಮೇಲೆಯೇ ಹೇಳಿಕೆಗಳನ್ನು ಕೊಟ್ಟರು. ಆ ಮೂಲಕ ರಾಜಕೀಯ ಪಿತೂರಿ ನಡೆಸಿದರು. ಆದರೂ, ನಾನು ರಾಜ್ಯಕ್ಕೆ ಆಗಮಿಸಿ ತನಿಖೆಗೆ ಸಹಕಾರ ನೀಡುತ್ತೇನೆ. ನಾನು ಈ ಪ್ರಕರಣದಿಂದ ಆರೋಪಮುಕ್ತನಾಗಿ ಹೊರಬರುತ್ತೇನೆ ಎಂಬ ವಿಶ್ವಾಸವಿದೆ” ಎಂಬುದಾಗಿ ಹೇಳಿದ್ದಾರೆ.

ಇದನ್ನೂ ಓದಿ: Prajwal Revanna Video: ವಿದೇಶದಿಂದಲೇ ಪ್ರಜ್ವಲ್‌ ವಿಡಿಯೊ ಮೆಸೇಜ್; ಮೇ 31ರ ಬೆಳಗ್ಗೆ 10ಕ್ಕೆ ಎಸ್‌ಐಟಿಗೆ ಹಾಜರ್‌!

Continue Reading

ಕರ್ನಾಟಕ

Prajwal Revanna Video: ವಿದೇಶದಿಂದಲೇ ಪ್ರಜ್ವಲ್‌ ವಿಡಿಯೊ ಮೆಸೇಜ್; ಮೇ 31ರ ಬೆಳಗ್ಗೆ 10ಕ್ಕೆ ಎಸ್‌ಐಟಿಗೆ ಹಾಜರ್‌!

Prajwal Revanna Video: ಪ್ರಜ್ವಲ್‌ ರೇವಣ್ಣ ಅವರ ಡಿಪ್ಲೊಮ್ಯಾಟಿಕ್ ಪಾಸ್‌ಪೋರ್ಟ್‌ ರದ್ದುಗೊಳಿಸಬೇಕು ಎಂದು ರಾಜ್ಯ ಸರ್ಕಾರವು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರ ಬರೆದ ಬೆನ್ನಲ್ಲೇ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಪಾಸ್‌ಪೋರ್ಟ್‌ ರದ್ದತಿಯ ಪ್ರಕ್ರಿಯೆ ಆರಂಭಿಸಿದೆ. ಇದರ ಬೆನ್ನಲ್ಲೇ, ಕೇಂದ್ರ ಸರ್ಕಾರವು ಪ್ರಜ್ವಲ್‌ ರೇವಣ್ಣನಿಗೆ ಶೋಕಾಸ್‌ ನೋಟಿಸ್‌ ಜಾರಿಗೊಳಿಸಿದೆ. ಇದರ ಬೆನ್ನಲ್ಲೇ, ವಿದೇಶದಿಂದಲೇ ಪ್ರಜ್ವಲ್‌ ರೇವಣ್ಣ ಅವರು ಹೊಸ ವಿಡಿಯೊ ಬಿಡುಗಡೆ ಮಾಡಿದ್ದಾರೆ.

VISTARANEWS.COM


on

Prajwal revanna Case
Koo

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ವಿದೇಶಕ್ಕೆ ಪರಾರಿಯಾಗಿರುವ ಪ್ರಜ್ವಲ್‌ ರೇವಣ್ಣ (Prajwal Revanna Video) ಕೂಡಲೇ ಕರ್ನಾಟಕಕ್ಕೆ ಬಂದು, ನೆಲದ ಕಾನೂನು ಗೌರವಿಸಬೇಕು ಎಂದು ಸಂಸದನ ಅಜ್ಜ, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ (H D Deve Gowda) ಅವರು ಬಹಿರಂಗ ಪತ್ರ ಬರೆದಿದ್ದಾರೆ. ಇದರ ಬೆನ್ನಲ್ಲೇ ಪ್ರಜ್ವಲ್‌ ರೇವಣ್ಣ ಅವರು ಭಾರತಕ್ಕೆ ಬರುವುದಾಗಿ ಘೋಷಣೆ ಮಾಡಿದ್ದಾರೆ. ಈ ಕುರಿತು ಪ್ರಜ್ವಲ್‌ ರೇವಣ್ಣ ಅವರು ಹೊಸ ವಿಡಿಯೊ ಬಿಡುಗಡೆ ಮಾಡಿದ್ದು, “ಮೇ 31ರಂದು ಭಾರತಕ್ಕೆ ಬಂದು ವಿಚಾರಣೆಗೆ ಹಾಜರಾಗುವುದಾಗಿ ಘೋಷಣೆ ಮಾಡಿದ್ದಾರೆ.

ವಿಡಿಯೊದಲ್ಲಿ ಏನಿದೆ?

“ನಾನು ಎಲ್ಲಿದ್ದೇನೆ ಎಂಬ ಮಾಹಿತಿ ನೀಡಲು ಬಂದಿದ್ದೇನೆ. ನಾನು ಎಲ್ಲಿಯೂ ಓಡಿ ಹೋಗಿಲ್ಲ. ನನ್ನ ರಾಜಕೀಯ ಬೆಳವಣಿಗೆ ಸಹಿಸಲಾಗದೆ ಷಡ್ಯಂತ್ರ ರೂಪಿಸಲಾಗಿದೆ. ನನ್ನ ವಿರುದ್ಧ ಪಿತೂರಿ ಮಾಡಲಾಗಿದೆ. ಕೆಲವು ಶಕ್ತಿಗಳು ಒಟ್ಟಾಗಿ ನನ್ನ ವಿರುದ್ಧ ಪಿತೂರಿ ನಡೆಸಿವೆ. ಇಷ್ಟಾದರೂ ನಾನು ನನ್ನ ತಾತ, ಜೆಡಿಎಸ್‌ ಕಾರ್ಯಕರ್ತರಿಗೆ ಕ್ಷಮೆಯಾಚಿಸುತ್ತೇನೆ. ನಾನು ಮೇ 31ರಂದು ಬೆಳಗ್ಗೆ 10 ಗಂಟೆಗೆ ಭಾರತಕ್ಕೆ ಬಂದು ಎಸ್‌ಐಟಿ ಎದುರು ವಿಚಾರಣೆಗೆ ಹಾಜರಾಗುತ್ತೇನೆ. ವಿದೇಶ ಪ್ರವಾಸವು ಮೊದಲೇ ನಿಗದಿಯಾಗಿತ್ತು. ಆದರೂ, ನಾನು ಭಾರತಕ್ಕೆ ಬಂದು ವಿಚಾರಣೆ ಎದುರಿಸುತ್ತೇನೆ” ಎಂಬುದಾಗಿ ಪ್ರಜ್ವಲ್‌ ರೇವಣ್ಣ ವಿಡಿಯೊದಲ್ಲಿ ತಿಳಿಸಿದ್ದಾರೆ.

“ನಾನು ಇದೇ ಶುಕ್ರವಾರ ಕರ್ನಾಟಕಕ್ಕೆ ಆಗಮಿಸಿ, ಎಸ್‌ಐಟಿ ತನಿಖೆಗೆ ಸಹಕಾರ ನೀಡುತ್ತೇನೆ. ನನಗೆ ಕಾನೂನಿನ ಮೇಲೆ ಅಪಾರ ಗೌರವವಿದೆ. ನನ್ನ ವಿರುದ್ಧ ಮಾಡಿದ ಆರೋಪಗಳನ್ನು ಕೇಳಿ ನನಗೆ ಶಾಕ್‌ ಆಯಿತು. ಇದೇ ಕಾರಣಕ್ಕಾಗಿ ನಾನು ಕೆಲ ದಿನಗಳಿಂದ ಐಸೋಲೇಷನ್‌ನಲ್ಲಿ ಇದ್ದೆ. ವಿದೇಶ ಪ್ರವಾಸವು ಮೊದಲೇ ನಿಗದಿಯಾಗಿತ್ತು. ನಾನು ವಿದೇಶಕ್ಕೆ ಬಂದ ಬಳಿಕ ಪ್ರಕರಣ ತಿಳಿಯಿತು. ನನ್ನ ವಿರುದ್ಧ ರಾಹುಲ್‌ ಗಾಂಧಿ ಸೇರಿ ಎಲ್ಲರೂ ವೇದಿಕೆ ಮೇಲೆಯೇ ಹೇಳಿಕೆಗಳನ್ನು ಕೊಟ್ಟರು. ಆ ಮೂಲಕ ರಾಜಕೀಯ ಪಿತೂರಿ ನಡೆಸಿದರು. ಆದರೂ, ನಾನು ರಾಜ್ಯಕ್ಕೆ ಆಗಮಿಸಿ ತನಿಖೆಗೆ ಸಹಕಾರ ನೀಡುತ್ತೇನೆ. ನಾನು ಈ ಪ್ರಕರಣದಿಂದ ಆರೋಪಮುಕ್ತನಾಗಿ ಹೊರಬರುತ್ತೇನೆ ಎಂಬ ವಿಶ್ವಾಸವಿದೆ” ಎಂಬುದಾಗಿ ಹೇಳಿದ್ದಾರೆ.

ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಪ್ರಮುಖ ಆರೋಪಿಯಾಗಿರುವ ಪ್ರಜ್ವಲ್‌ ರೇವಣ್ಣ ಅವರ ಡಿಪ್ಲೊಮ್ಯಾಟಿಕ್ ಪಾಸ್‌ಪೋರ್ಟ್‌ಅನ್ನು ರದ್ದುಗೊಳಿಸಬೇಕು ಎಂದು ಸಿದ್ದರಾಮಯ್ಯ ಅವರು ಎರಡು ಬಾರಿ ಪತ್ರ ಬರೆದಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಡಿಪ್ಲೊಮ್ಯಾಟಿಕ್ ಪಾಸ್‌ಪೋರ್ಟ್‌ ರದ್ದುಗೊಳಿಸುವ ಪ್ರಕ್ರಿಯೆ ಆರಂಭಿಸಿದೆ. ಇನ್ನು, ಇದರ ಭಾಗವಾಗಿಯೇ ಕೇಂದ್ರ ಸರ್ಕಾರವು ಪ್ರತಿಕ್ರಿಯೆ ಕೋರಿ ಪ್ರಜ್ವಲ್‌ ರೇವಣ್ಣಗೆ ಶೋಕಾಸ್‌ ನೋಟಿಸ್‌ ಜಾರಿಗೊಳಿಸಿದೆ. ಶೋಕಾಸ್‌ ನೋಟಿಸ್‌ಗೂ ಉತ್ತರ ನೀಡದಿದ್ದರೆ, ಕೇಂದ್ರ ಸರ್ಕಾರವು ಪಾಸ್‌ಪೋರ್ಟ್‌ ರದ್ದುಗೊಳಿಸಲಿದೆ ಎಂದು ಹೇಳಲಾಗುತ್ತಿತ್ತು. ಇದರ ಬೆನ್ನಲ್ಲೇ ಪ್ರಜ್ವಲ್‌ ರೇವಣ್ಣ ಅವರು ವಿಡಿಯೊ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ, ಲೈಂಗಿಕ ದೌರ್ಜನ್ಯ ಸಂತ್ರಸ್ತೆಯ ಅಪಹರಣ ಸೇರಿ ಹಲವು ಪ್ರಕರಣಗಳಲ್ಲಿ ಪ್ರಜ್ವಲ್‌ ರೇವಣ್ಣ ಪ್ರಮುಖ ಆರೋಪಿಯಾಗಿದ್ದಾರೆ. ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣ ಅವರ ತಂದೆ ಎಚ್‌.ಡಿ.ರೇವಣ್ಣ ಅವರು ಕೂಡ ಜೈಲುವಾಸ ಅನುಭವಿಸಿ, ಜಾಮೀನಿನ ಮೇಲೆ ಹೊರಬಂದಿದ್ದಾರೆ. ಇಷ್ಟಾದರೂ, ಪ್ರಜ್ವಲ್‌ ರೇವಣ್ಣ ಭಾರತಕ್ಕೆ ಬರದ ಕಾರಣ ಅವರ ತಾತ ಎಚ್‌.ಡಿ.ದೇವೇಗೌಡ ಅವರು ಬಹಿರಂಗ ಪತ್ರ ಬರೆದಿದ್ದರು. ನನ್ನ ಮೇಲೆ ಗೌರವ ಇದ್ದರೆ ವಾಪಸ್‌ ಬಾ ಎಂದಿದ್ದರು.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ರೇವಣ್ಣ ಅಜ್ಞಾತವಾಸಕ್ಕೆ ಒಂದು ತಿಂಗಳು, ಎಲ್ಲಿದ್ದೀಯಪ್ಪಾ ಪ್ರಜ್ವಲ್?

Continue Reading
Advertisement
Veer Savarkar flyover
ಕರ್ನಾಟಕ8 seconds ago

Veer Savarkar flyover: ವೀರ ಸಾವರ್ಕರ್ ಮೇಲ್ಸೇತುವೆ ನಾಮಫಲಕಕ್ಕೆ ಮಸಿ; ಎನ್‌ಎಸ್‌ಯುಐ ಕಾರ್ಯಕರ್ತರು ವಶಕ್ಕೆ

T20 World Cup 2024
ಕ್ರೀಡೆ24 mins ago

T20 World Cup 2024: ಟಿ20 ವಿಶ್ವಕಪ್​ನಲ್ಲಿ ಅತ್ಯಧಿಕ ಸಿಕ್ಸರ್​ ಬಾರಿಸಿದ ಭಾರತದ ಬ್ಯಾಟರ್​ಗಳಿವರು

Viral Video
ವೈರಲ್ ನ್ಯೂಸ್24 mins ago

Viral Video: ವಿಮಾನದ ರೆಕ್ಕೆ ಮೇಲೆ ನಡೆದುಕೊಂಡು ಹೊರ ಬಂದ ಪ್ರಯಾಣಿಕರು; ವೈರಲಾಯ್ತು ವಿಡಿಯೋ

self harming chandrashekar ವಾಲ್ಮೀಕಿ
ಪ್ರಮುಖ ಸುದ್ದಿ29 mins ago

ವಾಲ್ಮೀಕಿ ನಿಗಮ ಅಧೀಕ್ಷಕ ಆತ್ಮಹತ್ಯೆ ಪ್ರಕರಣ: ಮೂವರ ಮೇಲೆ ಎಫ್‌ಐಆರ್; ಡೆತ್‌ ನೋಟ್‌ನಲ್ಲಿರುವ ಸಚಿವ ಯಾರು?

Chetan and Naveen gowda
ಕರ್ನಾಟಕ42 mins ago

Prajwal Revanna Case: ಪೆನ್ ಡ್ರೈವ್ ಹಂಚಿಕೆ ಪ್ರಕರಣ; ಚೇತನ್, ನವೀನ್ ಗೌಡ ಎಸ್ಐಟಿ ವಶಕ್ಕೆ

Pushpa 2
ಸಿನಿಮಾ1 hour ago

Pushpa 2: ʼಪುಷ್ಪ 2ʼ ಸಿನಿಮಾ ತಂಡದಿಂದ ಅಲ್ಲು ಅರ್ಜುನ್‌ ಫ್ಯಾನ್ಸ್‌ಗೆ ಗುಡ್‌ನ್ಯೂಸ್‌; ಎರಡನೇ ಹಾಡು ರಿಲೀಸ್‌ಗೆ ಮುಹೂರ್ತ ಫಿಕ್ಸ್‌

Traffic Violation Case filed against driver if petrol runs out and vehicle stops on road
ಬೆಂಗಳೂರು1 hour ago

Traffic Violation : ಪೆಟ್ರೋಲ್ ಖಾಲಿಯಾಗಿ ರಸ್ತೆಯಲ್ಲಿ ವಾಹನ ನಿಂತುಬಿಟ್ಟರೆ ಚಾಲಕನ ಮೇಲೆ ಕೇಸ್!

Aravind Kejriwal
ದೇಶ1 hour ago

Arvind Kejriwal: ಕೇಜ್ರಿವಾಲ್‌ಗೆ ಮತ್ತೆ ಹಿನ್ನಡೆ; ಜಾಮೀನು ವಿಸ್ತರಣೆಗೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ

Success Story
ಕೃಷಿ2 hours ago

Success Story: ಎರಡೇ ತಿಂಗಳಲ್ಲಿ ಆನ್ ಲೈನ್ ಮೂಲಕ 1,800 ಕೆ.ಜಿ. ಮಾವು ಮಾರಿದ ರಾಯಚೂರಿನ ರೈತ!

Radhika Pandit
ಸ್ಯಾಂಡಲ್ ವುಡ್2 hours ago

Radhika Pandit: ಅಭಿಮಾನಿಗಳ ಪ್ರಶ್ನೆ ಎದುರಿಸಲು ನಟಿ ರಾಧಿಕಾ ಪಂಡಿತ್ ಸಿದ್ಧ; ಹೊಸ ಸಿನಿಮಾ ಘೋಷಿಸ್ತಾರಾ ಸ್ಯಾಂಡಲ್‌ವುಡ್‌ ಸಿಂಡ್ರೆಲ್ಲಾ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ21 hours ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ2 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು2 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ5 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ6 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ7 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು1 week ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ1 week ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಟ್ರೆಂಡಿಂಗ್‌