Dr. Pavitra says Priority should be given to extra-curricular activities along with the curriculum for the mental development of childrenKodagu News: ಮಕ್ಕಳ ಮಾನಸಿಕ ವಿಕಸನಕ್ಕೆ ಪಠ್ಯದ ಜತೆ ಪಠ್ಯೇತರ ಚಟುವಟಿಕೆಯೂ ಅಗತ್ಯ: ಡಾ. ಪವಿತ್ರಾ - Vistara News

ಕೊಡಗು

Kodagu News: ಮಕ್ಕಳ ಮಾನಸಿಕ ವಿಕಸನಕ್ಕೆ ಪಠ್ಯದ ಜತೆ ಪಠ್ಯೇತರ ಚಟುವಟಿಕೆಯೂ ಅಗತ್ಯ: ಡಾ. ಪವಿತ್ರಾ

Kodagu News: ಸೋಮವಾರಪೇಟೆಯ ಸಾಂದೀಪನಿ ಪ್ರೌಢ ಶಾಲೆ ಆವರಣದಲ್ಲಿ ಮಕ್ಕಳ ಕಲಿಕಾ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ಆಯೋಜಿಸಲಾಗಿತ್ತು. ಈ ವೇಳೆ ಬೆಂಗಳೂರು ವಿಶ್ವವಿದ್ಯಾನಿಲಯದ ಕಲಾ ಪ್ರಾಚಾರ್ಯರು ಹಾಗೂ ನಟಿ ಡಾ. ಪವಿತ್ರಾ ಅವರು, ಮಕ್ಕಳ ಮಾನಸಿಕ ಬೆಳವಣಿಗೆ ಹಾಗೂ ವ್ಯಕ್ತಿತ್ವ ವಿಕಸನದ ಬಗ್ಗೆ ಪೋಷಕರು ಗಮನ ಹರಿಸಬೇಕು ಎಂದು ಸಲಹೆ ನೀಡಿದರು.

VISTARANEWS.COM


on

Dr. Pavitra says Priority should be given to extra-curricular activities along with the curriculum for the mental development of children
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಸೋಮವಾರಪೇಟೆ: ಮಕ್ಕಳ ಮನಸ್ಸು ವಿಕಸನಗೊಳ್ಳಲು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗೂ ಪೋಷಕರು ಆದ್ಯತೆ ಕೊಡಬೇಕು ಎಂದು ಬೆಂಗಳೂರು ವಿಶ್ವವಿದ್ಯಾನಿಲಯದ ಕಲಾ ಪ್ರಾಚಾರ್ಯರು ಹಾಗೂ ನಟಿ ಡಾ. ಪವಿತ್ರಾ ಹೇಳಿದರು.

ಪಟ್ಟಣದ ಸಾಂದೀಪನಿ ಪ್ರೌಢ ಶಾಲೆ ಆವರಣದಲ್ಲಿ (Kodagu News) ಯಶೋದೆ ರಂಗ ಟ್ರಸ್ಟ್ ಆಶ್ರಯದಲ್ಲಿ ಕಳೆದ ಇಪ್ಪತ್ತು ದಿನಗಳಿಂದ ನಡೆದ ಮಕ್ಕಳ ಕಲಿಕಾ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

ಪ್ರಸ್ತುತ ದಿನಗಳಲ್ಲಿ ಪೋಷಕರು ತಮ್ಮ ಮಕ್ಕಳು ಹೆಚ್ಚಿನ ಅಂಕಗಳಿಸಬೇಕು, ರ‍್ಯಾಂಕ್ ಬರಬೇಕು ಎಂದು ಆಶಿಸುತ್ತಾರೆ. ಆದರೆ ಅವರ ಮಾನಸಿಕ ಬೆಳವಣಿಗೆ ಹಾಗೂ ವ್ಯಕ್ತಿತ್ವ ವಿಕಸನದ ಬಗ್ಗೆ ಗಮನವೇ ಹರಿಸುವುದಿಲ್ಲ ಎಂದು ವಿಷಾದಿಸಿದರು.

ಇದನ್ನೂ ಓದಿ | ರಾಜ ಮಾರ್ಗ ಅಂಕಣ : ಐಕಾನ್‌ಗಳು ಎರಡೆರಡು ಬಾರಿ ಹುಟ್ಟುತ್ತಾರೆ! ಆಶ್ಚರ್ಯ ಆಯ್ತಾ? ಇದನ್ನು ಓದಿ!

ನಿಮ್ಮ ಮಕ್ಕಳ ಅಂಕಗಳು ಅಂಕಪಟ್ಟಿಯಲ್ಲಿ ಕಂಡರೆ ಅವರ ಪಠ್ಯೇತರ ಚಟುವಟಿಕೆ ಅವರ ಮುಂದಿನ ಜೀವನದಲ್ಲಿ ಕಾಣಬಹುದು ಎಂದರು. ಪಠ್ಯೇತರ ಚಟುವಟಿಕೆಗಳು ಕೇವಲ ಬೇಸಿಗೆ ಶಿಬಿರಕ್ಕೆ ಮೀಸಲಾಗದೆ ಮಕ್ಕಳಿಗೆ ನಿತ್ಯವೂ ಪ್ರೋತ್ಸಾಹಿಸಬೇಕು ಎಂದು ಪೋಷಕರಿಗೆ ಸಲಹೆ ನೀಡಿದರು.

ಮುಖ್ಯ ಅತಿಥಿಯಾಗಿ ಆಗಮಿಸಿದ್ದ ನಾವು ದ್ರಾವಿಡ ಕನ್ನಡಿಗರು ಸಂಸ್ಥೆಯ ಮುಖ್ಯಸ್ಥ ಅಭಿಗೌಡ ಮಾತನಾಡಿ, ಇಂದಿನ ಒತ್ತಡದ ಶಿಕ್ಷಣದ ನಡುವೆ ಮಕ್ಕಳ ಮನಸ್ಸು ಉಲ್ಲಸಿತರಾಗಲು ಇಂತಹ ಬೇಸಿಗೆ ಶಿಬಿರಗಳು ಹಾಗೂ ತರಬೇತಿಗಳು ಸಹಕಾರಿಯಾಗುತ್ತವೆ. ಯಾವುದೇ ಮಕ್ಕಳ ಬಗ್ಗೆ ನಕಾರಾತ್ಮಕ ಚಿಂತನೆಗಳು ಬೇಡಾ ಅವರಿಗೆ ಸರಿಯಾದ ಸಮಯದಲ್ಲಿ ಸೂಕ್ತ ತರಬೇತಿ ಸಿಕ್ಕಿದರೆ ಒಳ್ಳೆಯ ವ್ಯಕ್ತಿಗಳಾಗಿ ರೂಪುಗೊಳ್ಳುತಾರೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜೀ ಕನ್ನಡ ವಾಹಿನಿಯ ಸರಿಗಮಪ ಪ್ರಶಸ್ತಿ ವಿಜೇತೆ ಪ್ರಗತಿ ಬಡಿಗೇರ್ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಗತಿ, ಉತ್ತಮವಾದ ತರಬೇತಿ ಹಾಗೂ ಮಾರ್ಗದರ್ಶನ ದೊರೆತರೆ ಎಂತಹವರೂ ಪ್ರತಿಭಾವಂತರಾಗುತಾರೆ. ಅದಕ್ಕೆ ನಾನೇ ಉದಾಹರಣೆ. ಕರ್ನಾಟಕ ಜನತೆಯ ಪ್ರೀತಿ ವಿಶ್ವಾದದಿಂದ ನಾನು ಜಯಗಳಿಸಲು ಸಾಧ್ಯವಾಯಿತು ಎಂದು ಕೃತಜ್ಞತೆಯಿಂದ ಸ್ಮರಿಸಿಕೊಂಡರು.

ಇದನ್ನೂ ಓದಿ | ರಾಜ ಮಾರ್ಗ ಅಂಕಣ: ನನ್ನ ಭಾರತವನ್ನು ಪ್ರೀತಿ ಮಾಡಲು ನೂರಾರು ಕಾರಣಗಳು!

ಶಿಬಿರದಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳಿಂದ ನಾಟಕ, ಯಕ್ಷಗಾನ, ನೃತ್ಯ ಪ್ರದರ್ಶನ ನಡೆಯಿತು. ಕುಶಾಲನಗರದ ಫ್ಯಾನ್ಸಿ ಮುತ್ತಣ್ಣ, ಯಶೋದೆ ರಂಗ ಟ್ರಸ್ಟ್‌ನ ಅಧ್ಯಕ್ಷ ಮುತ್ತಣ್ಣ, ಶಿಬಿರ ನಿರ್ದೇಶಕ ಗಣೇಶ್ ಎಂ.ಭೀಮನಕೋಣೆ, ಸಂಚಾಲಕರ ನಿಶಾಂತ್ ಮುತ್ತಣ್ಣ, ಸಂಪನ್ಮೂಲ ವ್ಯಕ್ತಿಗಳು ಹಾಗೂ ರಂಗ ಕಲಾವಿದರಾದ ಅರ್ಚನಾ ಸುರೇಶ್, ಸುಮಂತ್, ಯೋಗೀಶ್ಇ, ಇನ್ಸಾಫ್, ಶಿವಕುಮಾರ್ ತೀರ್ಥಹಳ್ಳಿ ಮತ್ತಿತರರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ರಾಜ್ಯಾದ್ಯಂತ ಮುಂದಿನ ಒಂದು ವಾರ ಗುಡುಗು ಸಹಿತ ಮಳೆ; ಬಿರುಗಾಳಿ ಸಾಥ್‌

Rain news : ರಾಜ್ಯದಲ್ಲಿ ಮಳೆ ಅಬ್ಬರ ಕಡಿಮೆ ಆಗಿದೆ. ಆದರೆ ಕರಾವಳಿ ಭಾಗದಲ್ಲಿ ವರುಣಾರ್ಭಟ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka weather Forecast) ನೀಡಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ಭಾನುವಾರ ರಾಜ್ಯಾದ್ಯಂತ ಕೆಲವೆಡೆ ಮಳೆಯ ಸಿಂಚನವಾಗಲಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದ ಹಲವು ಸ್ಥಳಗಳಲ್ಲಿ ಸಾಧಾರಣ ಮಳೆಯೊಂದಿಗೆ (Rain News) ಗುಡುಗು ಸಾಥ್‌ ನೀಡಲಿದೆ. ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ಜೂನ್‌ 16ರಂದು ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ ಮತ್ತು ರಾಯಚೂರು, ವಿಜಯಪುರ, ಯಾದಗಿರಿಯ ಪ್ರತ್ಯೇಕ ಸ್ಥಳದಲ್ಲಿ ಹಗುರವಾದ ಮಳೆಯಾಗುವ ನಿರೀಕ್ಷೆ ಇದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು, ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು ಸೇರಿದಂತೆ ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ. ಆದರೆ ಗಾಳಿ ವೇಗವು ಗಂಟೆಗೆ 40-50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ.

ಇದನ್ನೂ ಓದಿ: Bhandara Fair : ಲೋಕಾಪುರದ ಭಂಡಾರ ಜಾತ್ರೆಗೆ ಅದ್ಧೂರಿ ಚಾಲನೆ; ಭಂಡಾರದಲ್ಲಿ ಮಿಂದೆದ್ದ ಭಕ್ತ ಸಮೂಹ

ಮತ್ತೊಂದು ವಾರ ಮಳೆ ಎಚ್ಚರಿಕೆ ಕೊಟ್ಟ ತಜ್ಞರು

ಮುಂದಿನ ಒಂದು ವಾರ ಗುಡುಗು ಸಹಿತ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ತಜ್ಞರು ಕೊಟ್ಟಿದ್ದಾರೆ. ಮೊದಲ ಮೂರು ದಿನ ಅಂದರೆ ಜೂ. 17, 18, 19 ರಂದು ಕರಾವಳಿಯ ಹೆಚ್ಚಿನ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಒಳನಾಡಿನಲ್ಲಿ ಹಗುರದಿಂದ ಕೂಡಿರಲಿದೆ.

ಬಳಿಕ ಜೂನ್‌ 20 ಮತ್ತು 21ರಂದು ಕರಾವಳಿ ಬಹುತೇಕ ಕಡೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಮತ್ತು ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಒಳನಾಡಿನ ಉಳಿದೆಡೆ ಕೆಲವು ಸ್ಥಳಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ.

ಜಲಾಶಯಗಳ ನೀರಿನ ಮಟ್ಟ ಹೀಗಿದೆ

karnataka weather Forecast Dam Level

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ದಕ್ಷಿಣ ಒಳನಾಡು, ಮಲೆನಾಡಲ್ಲಿ ತಗ್ಗಿದ ಮಳೆ; ಕರಾವಳಿಯಲ್ಲಿ ಮುಂದುವರಿಯಲಿದೆ ಅಬ್ಬರ

Karnataka Weather Forecast : ರಾಜ್ಯಾದ್ಯಂತ ಮಳೆ (Rain News) ಪ್ರಮಾಣ ತಗ್ಗಿದ್ದು, ಮುಂದಿನ 24 ಗಂಟೆಯಲ್ಲಿ ಕರಾವಳಿ ಹಾಗೂ ಒಳನಾಡಿನ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ನೈರುತ್ಯ ಮುಂಗಾರು (Rain News) ಉತ್ತರ ಒಳನಾಡಿನಲ್ಲಿ ಸಾಧಾರಣವಾಗಿತ್ತು. ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ದುರ್ಬಲವಾಗಿತ್ತು. ಕರಾವಳಿಯ ಕೆಲವು ಸ್ಥಳಗಳಲ್ಲಿ ಮತ್ತು ಒಳನಾಡಿನ ಒಂದೆರಡು ಸ್ಥಳಗಳಲ್ಲಿ (Karnataka Weather Forecast) ಮಳೆಯಾಗಿದೆ.

ಎಲ್ಲೆಲ್ಲಿ ಮಳೆಯ ಸಿಂಚನ

ಉತ್ತರ ಒಳನಾಡು, ಕರಾವಳಿಯ ಕೆಲವೆಡೆ ಮಳೆಯಾಗಿರುವ ವರದಿ ಆಗಿದೆ. ರಾಯಚೂರಿನ ಗಬ್ಬೂರಿನಲ್ಲಿ 6 ಸೆಂ.ಮೀ, ಉಡುಪಿ, ಶೋರಾಪುರ, ಸೈದಾಪುರದಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ. ಅಂಕೋಲಾ, ಗೋಕರ್ಣ, ಕುಮಟಾ , ಕೆಂಭಾವಿ , ತಾವರಗೇರಾ , ಮುದಗಲ್, ಮಂಠಾಳದಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ. ಕೋಟ, ಹೊನಾವರ ವೀಕ್ಷಣಾಲಯ , ಕಾರ್ಕಳ, ಸಿದ್ದಾಪುರ, ಮಂಕಿ, ಯಲ್ಲಾಪುರ, ಯಡ್ರಾಮಿ ಸೇರಿದಂತೆ ದೇವದುರ್ಗ, ಕವಡಿಮಟ್ಟಿ ಎ.ಆ‌ರ್.ಜಿ, ಮಸ್ಕಿ, ಕಲಬುರಗಿ ವೀಕ್ಷಣಾಲಯ , ಕಕ್ಕೇರಿ, ಕಮಲಾಪುರ, ಮಾನ್ವಿಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

ಗುಡುಗು ಸಹಿತ ಮಳೆ ಎಚ್ಚರಿಕೆ

ಜೂನ್‌ 16ರಂದು ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಒಳನಾಡಿನ ಕೆಲವು ಸ್ಥಳಗಳಲ್ಲಿ ಕೆಲವೊಮ್ಮೆ ಗುಡುಗು ಜತೆಗೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ದಕ್ಷಿಣ ಒಳನಾಡು ಹಾಗೂ ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ತಗ್ಗಿದೆ. ಮೀನುಗಾರರಿಗೆ ನೀಡಲಾಗಿದ್ದ ಸೂಚನೆಯು ಮುಗಿದಿದೆ.

ರಾಜಧಾನಿ ಬೆಂಗಳೂರಿನಲ್ಲಿ ತಣ್ಣನೆಯ ವಾತಾವರಣ ಇರಲಿದ್ದು, ಮೋಡ ಕವಿದ ವಾತಾವರಣ ಇರಲಿದೆ. ಪ್ರತ್ಯೇಕ ಸ್ಥಳದಲ್ಲಿ ಗುಡುಗು ಸಹಿತ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶವು 31 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಇದನ್ನೂ ಓದಿ: Anekal News : ಯುವತಿ ಕೈ ಬಲಿ ಪಡೆದ ಅಕ್ರಮ ಡ್ರೈ ಕ್ಲೀನಿಂಗ್ ಕಾರ್ಖಾನೆ; ಚಿಕಿತ್ಸೆ ಕೊಡಿಸದೆ ಮಾಲೀಕ ಎಸ್ಕೇಪ್‌

ಮಳೆಗಾಲದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳುವುದು ಹೇಗೆ?

ಮುಂಗಾರು ಚುರುಕಾಗುತ್ತಿದೆ. ಮಳೆಗಾಲವನ್ನು ಸಿಕ್ಕಾಪಟ್ಟೆ ಪ್ರೀತಿಸುವವರು ಇದ್ದಷ್ಟೇ ಮುಖ ಹಿಂಡುವವರೂ ಇದ್ದಾರೆ. ಇದಕ್ಕೆ ಕಾರಣಗಳು ಬಹಳಷ್ಟಿದ್ದರೂ, ಈ ಒದ್ದೆ-ಥಂಡಿ-ಶೀತದ ದಿನಗಳಲ್ಲಿ ಕಾಡುವ ಸೋಂಕುಗಳು ಅವುಗಳಲ್ಲಿ ಒಂದು ಪ್ರಮುಖ ಕಾರಣ. ಹೊರಗೆ ಮೋಡ ಕಟ್ಟಿದಂತೆಯೇ ಒಳಗೆ ಮೂಗು ಕಟ್ಟಿ, ಹೊರಗಿನಂತೆ ಒಳಗೂ ಧಾರಾಕಾರ ಹರಿದು, ಗುಡುಗು-ಸಿಡಿಲಿನಂತೆ ಕೆಮ್ಮು ಪ್ರಾರಂಭವಾದರೆ- ಮಳೆಯನ್ನು ಪ್ರೀತಿಸಲು ಹೇಗೆ ಸಾಧ್ಯ? ರೋಗಾಣುಗಳನ್ನು ತಡೆಯಲು ಸಾಧ್ಯವಿಲ್ಲದಿದ್ದರೂ, ನಮ್ಮ ದೇಹವನ್ನು ಸದೃಢವಾಗಿ ಇರಿಸಿಕೊಳ್ಳಬಹುದಲ್ಲ. ರೋಗ ನಿರೋಧಕ ಶಕ್ತಿಗೆ ಬಲ ಬರುವುದೇ ನಮ್ಮ ಆಹಾರದಿಂದ. ಸೋಂಕು ದೂರ ಇರಿಸುವುದಕ್ಕೆ (Tips For Rainy Season) ಎಂಥ ಆಹಾರ ಒಳ್ಳೆಯದು?

Vitamin C foods

ವಿಟಮಿನ್‌ ಸಿ ಆಹಾರಗಳು

ದೇಹದ ರೋಗ ನಿರೋಧಕ ಶಕ್ತಿಯನ್ನು ಉದ್ದೀಪಿಸುವಲ್ಲಿ ಸಿ ಜೀವಸತ್ವ ಪ್ರಧಾನವಾಗಿ ಬೇಕು. ಅದರಲ್ಲೂ ನೆಗಡಿ, ಕೆಮ್ಮು, ಜ್ವರದಂಥ ಮಳೆಗಾಲದ ಸೋಂಕು ರೋಗಗಳನ್ನು ದೂರ ಇಡುವುದಕ್ಕೆ ವಿಟಮಿನ್‌ ಸಿ ಅಗತ್ಯವಾಗಿ ಬೇಕು. ಹಾಗಾಗಿ ಕಿತ್ತಳೆ, ನಿಂಬೆ, ದಾಳಿಂಬೆ, ಪಪ್ಪಾಯ, ಪೇರಳೆ, ಬ್ರೊಕೊಲಿ, ದಪ್ಪಮೆಣಸು, ಮೊಳಕೆ ಕಟ್ಟಿದ ಕಾಳುಗಳನ್ನು ತಪ್ಪದೆ ಆಹಾರದಲ್ಲಿ ಸೇರಿಸಿಕೊಳ್ಳಬೇಕು.

ginger

ಶುಂಠಿ

ಇದಕ್ಕೆ ಹಲವಾರು ಔಷಧೀಯ ಗುಣಗಳಿವೆ. ಅದರಲ್ಲೂ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ, ಬ್ಯಾಕ್ಟೀರಿಯ ನಿರೋಧಕ ಮತ್ತು ಉರಿಯೂತ ಶಾಮಕ ಗುಣಗಳು ಇದರಲ್ಲಿ ಧಾರಾಳವಾಗಿವೆ. ಕೆಮ್ಮು, ನೆಗಡಿ, ಕಫದಂಥ ಸಮಸ್ಯೆಗಳಿಗೆ ಶುಂಠಿ ಚಹಾ, ಶುಂಠಿ ಕಷಾಯಗಳು ಉಪಶಮನ ನೀಡಬಲ್ಲವು. ಗಂಟಲು ಕಟ್ಟಿದ್ದರೆ, ಗಂಟಲಲ್ಲಿ ನೋವಿದ್ದರೆ ಬೆಚ್ಚಗಿನ ಶುಂಠಿಯ ಕಷಾಯಕ್ಕೆ ಕೊಂಚ ಜೇನುತುಪ್ಪ ಸೇರಿಸಿ ಕುಡಿದರೆ ಆರಾಮ ದೊರೆತೀತು.

iamge of Zinc Foods

ಜಿಂಕ್‌ ಆಹಾರಗಳು

ನಮ್ಮ ಪ್ರತಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ಸತುವಿನಂಶ ಇರುವ ಆಹಾರಗಳು ಸಹ ಅಗತ್ಯ. ಇದನ್ನು ಸಿ ಜೀವಸತ್ವದಂತೆ ಹೇರಳವಾಗಿ ಪಡೆಯಲಾಗದು. ಬದಲಿಗೆ, ಹಲವಾರು ಆಹಾರಗಳಿಂದ ಮಿಲಿ ಗ್ರಾಂ ಗಳ ಲೆಕ್ಕದಲ್ಲಿಯೇ ಪಡೆಯಬೇಕು ನಾವು. ಇದಕ್ಕಾಗಿ ಅಣಬೆಗಳು, ಪಾಲಕ್‌ ಸೊಪ್ಪು, ದ್ವಿದಳ ಧಾನ್ಯಗಳು, ಮೊಸರು, ಹಾಲು, ಗೋಡಂಬಿ, ಕುಂಬಳಕಾಯಿ ಬೀಜ, ಶೇಂಗಾ, ಬಾದಾಮಿಯಂಥ ಆಹಾರಗಳ ಮೂಲಕ ಈ ಸತ್ವವನ್ನು ಪಡೆಯಬಹುದು.

ಒಮೇಗಾ 3 ಕೊಬ್ಬಿನಾಮ್ಲ

ಇದು ನಮ್ಮ ಮೆದುಳು ಮತ್ತು ಹೃದಯದ ಯೋಗಕ್ಷೇಮ ನೋಡಿಕೊಳ್ಳುವುದಷ್ಟೇ ಅಲ್ಲ, ಸೋಂಕುಗಳನ್ನು ದೂರ ಮಾಡುವ ಸಾಮರ್ಥ್ಯವನ್ನೂ ಹೊಂದಿದೆ. ಇದಕ್ಕಾಗಿ ಮಳೆಗಾಲದ ಆರಂಭದಲ್ಲಿ ದೊರೆಯುವ ಬೆಣ್ಣೆ ಹಣ್ಣುಗಳನ್ನು ಯಥೇಚ್ಛವಾಗಿ ಸೇವಿಸಿ. ಜೊತೆಗೆ ವಾಲ್‌ನಟ್‌, ಬಾದಾಮಿ, ಅಗಸೆಬೀಜ, ಕೊಬ್ಬಿರುವ ಮೀನುಗಳನ್ನು ಸೇವಿಸುವುದರಿಂದ ಒಮೇಗಾ ೩ ಕೊಬ್ಬಿನಾಮ್ಲ ವಿಫುಲವಾಗಿ ಲಭಿಸುತ್ತದೆ.

Probiotic foods

ಪ್ರೊಬಯಾಟಿಕ್‌ ಆಹಾರಗಳು

ನಮ್ಮ ಜೀರ್ಣಾಂಗಗಳ ಆರೋಗ್ಯ ಚೆನ್ನಾಗಿದ್ದರೆ ಮಾತ್ರವೇ ದೇಹದ ಪ್ರತಿರೋಧಕ ಶಕ್ತಿ ಬಲವಾಗಿರುತ್ತದೆ. ಜೀರ್ಣಾಂಗಗಳಲ್ಲಿ ಒಳ್ಳೆಯ ಬ್ಯಾಕ್ಟೀರಿಯಗಳ ಸಂಖ್ಯೆ ಭರಪೂರ ಇದ್ದಷ್ಟೂ ದೇಹ ರೋಗಮುಕ್ತವಾಗಿರುತ್ತದೆ ಎನ್ನುತ್ತವೆ ಅ‍ಧ್ಯಯನಗಳು. ಹಾಗಾಗಿ ಪ್ರೊಬಯಾಟಿಕ್‌ ಆಹಾರಗಳು ನಮ್ಮ ದೇಹಕ್ಕೆ ಬೇಕೇಬೇಕು. ಇದಕ್ಕಾಗಿ ಮೊಸರು, ಮಜ್ಜಿಗೆಯಂಥ ಹುದುಗು ಬರಿಸಿದ ಆಹಾರಗಳನ್ನು ಪ್ರತಿದಿನ ಸೇವಿಸಿ.

infusions

ಕಷಾಯಗಳು

ಶೀತದ ದಿನಗಳಲ್ಲಿ ದೇಹವನ್ನು ಬೆಚ್ಚಗೆ ಇರಿಸಿಕೊಳ್ಳುವುದಕ್ಕೆ ತರಹೇವಾರಿ ಕಷಾಯಗಳನ್ನು ಮಾಡಿಕೊಳ್ಳಬಹುದು. ಇದರಿಂದಲೂ ನಮ್ಮ ದೇಹದ ಸೋಂಕು ನಿರೋಧಕ ಶಕ್ತಿ ಪ್ರಬಲವಾಗುತ್ತದೆ. ಇದಕ್ಕಾಗಿ ಯಾವೆಲ್ಲ ವಸ್ತುಗಳನ್ನು ಉಪಯೋಗಿಸಬಹುದು ಎನ್ನುವುದಕ್ಕೆ ಉಪಯುಕ್ತ ವಿವರಗಳು ಇಲ್ಲಿವೆ. ಈ ಯಾವುದೇ ವಸ್ತುಗಳನ್ನು ಬಳಸಿ ಕಷಾಯ ಮಾಡಿಕೊಳ್ಳಬಹುದು.

Raw Turmeric with Powder Cutout

ಅರಿಶಿನ

ಇದರಲ್ಲಿರುವ ಕರ್ಕುಮಿನ್‌ ಎಂಬ ಪ್ರಬಲ ಉತ್ಕರ್ಷಣ ನಿರೋಧಕವು ಸೋಂಕುಗಳನ್ನು ಹೊಡೆದೋಡಿಸುತ್ತದೆ

Benefits Of Ginger

ಶುಂಠಿ

ಇದರ ಜಿಂಜರಾಲ್‌ ಅಂಶದಲ್ಲಿ ಉರಿಯೂತ ಶಮನ ಮಾಡಿ, ಪ್ರತಿರೋಧಕ ಶಕ್ತಿ ಹೆಚ್ಚಿಸುತ್ತದೆ

Garlic

ಬೆಳ್ಳುಳ್ಳಿ

ಇದರ ಅಲ್ಲಿಸಿನ್‌ ಅಂಶದಲ್ಲಿ ವೈರಸ್‌ ಮತ್ತು ಬ್ಯಾಕ್ಟೀರಿಯ ನಿರೋಧಕ ಗುಣವಿದೆ

Cinnamon sticks Anti Infective Foods

ದಾಲ್ಚಿನ್ನಿ ಚಕ್ಕೆ

ಇದರಲ್ಲಿರುವ ಉರಿಯೂತ ಶಾಮಕ ಸತ್ವಗಳು ರೋಗನಿರೋಧಕವೂ ಹೌದು

black pepper

ಕಾಳು ಮೆಣಸು

ಇದರ ಕ್ಯಾಪ್ಸೈಸಿನ್‌ನಲ್ಲಿ ದೇಹದ ಪ್ರತಿರೋಧಕತೆಯನ್ನು ವೃದ್ಧಿಸುವ ಸಾಮರ್ಥ್ಯವಿದೆ

cumin

ಜೀರಿಗೆ

ಇದರ ಉತ್ಕರ್ಷಣ ನಿರೋಧಕಗಳು ಸೋಂಕಗಳ ವಿರುದ್ಧ ಹೋರಾಡುವ ಸಾಮರ್ಥ್ಯವನ್ನು ಹೆಚ್ಚಿಸುತ್ತವೆ

coriander Coriander Benefits

ಧನಿಯ

ಇದರ ಉತ್ಕರ್ಷಣ ನಿರೋಧಕ ಸತ್ವಗಳು ಸೋಂಕುಗಳನ್ನು ನಿವಾರಿಸುತ್ತವೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಬೆಂಗಳೂರಲ್ಲಿ ವೀಕೆಂಡ್‌ಗೆ ಬ್ರೇಕ್‌ ಕೊಟ್ಟ ವರುಣ! ಈ 3 ಜಿಲ್ಲೆಗಳಿಗೆ ಮಳೆ ಎಚ್ಚರಿಕೆ

Rain News : ವಾರಾಂತ್ಯದಲ್ಲಿ ಮಳೆ ಮುಂದುವರಿದಿದೆ. ದಕ್ಷಿಣ ಒಳನಾಡಿನಲ್ಲಿ ಕೊಂಚ ತಗ್ಗಿದ್ದರೆ, ಕರಾವಳಿ-ಮಲೆನಾಡು, ಉತ್ತರ ಒಳನಾಡಿನಲ್ಲಿ ಮಳೆಯು (Karnataka Weather Forecast) ಜೋರಾಗಿ ಇರಲಿದೆ.

VISTARANEWS.COM


on

By

karnataka weather forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ನೈರುತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ಚುರುಕಾಗಿದ್ದು, ಕರಾವಳಿ, ದಕ್ಷಿಣ ಒಳನಾಡಿನಲ್ಲಿ (Karnataka Weather Forecast) ಸಾಮಾನ್ಯವಾಗಿದೆ. ವಾರಾಂತ್ಯದಲ್ಲಿ ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ.

ಉಳಿದ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಬಿರುಗಾಳಿ ಬೀಸಲಿದೆ. ಗಂಟೆಗೆ 40-50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ. ಕೆಲವೆಡೆ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಬೆಂಗಳೂರಲ್ಲಿ ಮೋಡ ಕವಿ ವಾತಾವರಣ

ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಆಗಾಗ ಸೂರ್ಯ ತನ್ನ ದರ್ಶನ ಕೊಡಲಿದ್ದಾನೆ. ಪ್ರತ್ಯೇಕ ಕಡೆಗಳಲ್ಲಿ ಗುಡುಗು ಸಹಿತ ಹಗುರದಿಂದ ಕೂಡಿದ ಮಳೆಯಾಗಲಿದೆ.

ಯೆಲ್ಲೋ ಅಲರ್ಟ್‌ ಘೋಷಣೆ

ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಾಳಿ ವೇಗವು ಗಂಟೆಗೆ 40-50 ವ್ಯಾಪ್ತಿಯಲ್ಲಿ ಬೀಸಲಿದೆ. ಹೀಗಾಗಿ ಉತ್ತರ ಒಳನಾಡಿನ ಬೀದರ್‌, ವಿಜಯಪುರ, ಕಲಬುರಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

ಇದನ್ನೂ ಓದಿ: Bus Accident : ವಾಹನ ಚಲಾಯಿಸುತ್ತಿದ್ದಾಗಲೇ ಚಾಲಕನಿಗೆ ತಲೆಸುತ್ತು; ರಸ್ತೆ ಬಿಟ್ಟು ಜಮೀನಿಗೆ ನುಗ್ಗಿದ ಬಸ್‌

ಮುಂಗಾರು ಮಳೆಗೆ ಪಪ್ಪಾಯಿ ಬೆಳೆ ಹಾನಿ

ಬಾಗಲಕೋಟೆಯಲ್ಲೂ ಮುಂಗಾರು ಮಳೆ ಅಬ್ಬರಕ್ಕೆ ತೋಟಗಾರಿಕಾ ಬೆಳೆ ಹಾನಿಯಾಗಿದ್ದು ರೈತರು ಆತಂಕದಲ್ಲಿದ್ದಾರೆ. ಬಾಗಲಕೋಟೆ ತಾಲೂಕಿನ ಹೊನ್ನಾಕಟ್ಟಿ ಗ್ರಾಮದಲ್ಲಿ ಫಸಲು ಕೈಗೆಟಕುವ ಮುನ್ನವೇ ಮಳೆಗೆ ಪಪ್ಪಾಯಿ ಆಹುತಿಯಾಗಿದೆ. ಅಧಿಕ ಮಳೆಯಿಂದಾಗಿ ತೇವಾಂಶದಿಂದ ಗಿಡದಿಂದ ಪಪ್ಪಾಯಿ ಉದುರುತ್ತಿದೆ.

ಪಪ್ಪಾಯಿ ಬೆಳೆದ ಹೊನ್ನಾಕಟ್ಟಿ ರೈತ ಯಲ್ಲಪ್ಪ ಜಿವೊಜಿ ಕಂಗಾಲಾಗಿದ್ದಾರೆ. 2 ಎಕರೆ ಜಮೀನಿನಲ್ಲಿ 2 ಲಕ್ಷ ರೂ. ಹೆಚ್ಚು ಖರ್ಚು ಮಾಡಿ ಪಪ್ಪಾಯಿ ಬೆಳೆಯಲಾಗಿತ್ತು. ಆದರೆ ಪಪ್ಪಾಯಿ ಫಸಲು ಚನ್ನಾಗಿ ಬಂದಿದ್ದರೂ, ಮಳೆಯಿಂದ ಪಪ್ಪಾಯಿಗೆ ಕೊಳೆ ರೋಗಕ್ಕೆ ಉದುರುತ್ತಿದೆ. 7- 8 ಲಕ್ಷ ರೂ ಲಾಭದ ನಿರೀಕ್ಷೆಯಲ್ಲಿದ್ದ ರೈತ ಯಲ್ಲಪ್ಪನಿಗೆ ಇದೀಗ ಸಾಲದ ಹೊರೆ ಹೆಚ್ಚಾಗಿದೆ. ನಿರಂತರ ಮಳೆಯಿಂದ ಪಪ್ಪಾಯಿ ಬೆಳೆ ಸಂಪೂರ್ಣ ಹಾನಿಯಾಗಿದೆ. ಸದ್ಯ ಸರ್ಕಾರದಿಂದ ಪರಿಹಾರದ ನಿರೀಕ್ಷೆಯಲ್ಲಿದ್ದಾರೆ.

ಮುಲ್ಲಾಮಾರಿ ಜಲಾಶಯದಿಂದ ನೀರು ಬಿಡುಗಡೆ; ಗ್ರಾಮಸ್ಥರಿಗೆ ಎಚ್ಚರಿಕೆ

ಕಲಬುರಗಿಯ ಚಿಂಚೊಳ್ಳಿ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ನಾಗರಾಳ‌ ಬಳಿ ಇರುವ ಮುಲ್ಲಾಮಾರಿ ಜಲಾಶಯದ ಒಳಹರಿವು 1,500 ಕ್ಯೂಸೆಕ್ ಹೆಚ್ಚಾಗಿದೆ. ಜಲಾಶಯದ ಗರಿಷ್ಠ ಮಟ್ಟ 491 ಮೀಟರ್ ಇದ್ದು, ಯಾವುದೇ ಕ್ಷಣದಲ್ಲಾದರೂ ಜಲಾಶಯದ ನೀರು ಬಿಡುಗಡೆ ಮಾಡಲಾಗುತ್ತದೆ. ಹೀಗಾಗಿ ಮುಲ್ಲಾಮಾರಿ ಕೆಡದಂಡೆ ಗ್ರಾಮಗಳಿಗೆ ಎಚ್ಚರಿಕೆಯಿಂದ ಇರಲು ಸೂಚನೆ ನೀಡಲಾಗಿದೆ. ಚಿಮ್ಮನಚೋಡ, ತಾಜಲಾಪುರ, ಗಾರಂಪಳ್ಳಿ ಸೇರಿ ಹಲವು ಗ್ರಾಮಗಳಿಗೆ ನದಿ ‌ದಡದಲ್ಲಿ ಹೋಗದಂತೆ ಎಇ‌ ಸೂಚನೆ ನೀಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Karnataka Weather forecast : ಕರಾವಳಿ, ಉತ್ತರ ಒಳನಾಡಿನಲ್ಲಿ ಮಳೆಯು (Rain News) ಅಬ್ಬರಿಸುತ್ತಿದ್ದು, ಇನ್ನೊಂದು ವಾರ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು/ಕಾರವಾರ: ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ಶುಕ್ರವಾರ ಉತ್ತರಕನ್ನಡ ಜಿಲ್ಲೆಯಲ್ಲಿ ಮತ್ತೆ ವರುಣಾರ್ಭಟ ಮುಂದುವರಿದಿದೆ. ಕರಾವಳಿ ತಾಲೂಕುಗಳಲ್ಲಿ ಗಾಳಿ ಸಹಿತ ಭಾರಿ ಮಳೆಯಾಗಿದೆ. ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ಭಾಗಗಳಲ್ಲಿ ಭಾರೀ ಗಾಳಿ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿತ್ತು. ಒಂದು ತಾಸಿಗೂ ಬಿರುಗಾಳಿ ಸಹಿತ ಭಾರಿ ಮಳೆಗೆ ಹಲವೆಡೆ ಮರಗಳು ನೆಲಕ್ಕುರುಳಿತ್ತು.

ಮುಂಗಾರು ಮಳೆಗೆ ಪಪ್ಪಾಯಿ ಬೆಳೆ ಹಾನಿ

ಬಾಗಲಕೋಟೆಯಲ್ಲೂ ಮುಂಗಾರು ಮಳೆ ಅಬ್ಬರಕ್ಕೆ ತೋಟಗಾರಿಕಾ ಬೆಳೆ ಹಾನಿಯಾಗಿದ್ದು ರೈತರು ಆತಂಕದಲ್ಲಿದ್ದಾರೆ. ಬಾಗಲಕೋಟೆ ತಾಲೂಕಿನ ಹೊನ್ನಾಕಟ್ಟಿ ಗ್ರಾಮದಲ್ಲಿ ಫಸಲು ಕೈಗೆಟಕುವ ಮುನ್ನವೇ ಮಳೆಗೆ ಪಪ್ಪಾಯಿ ಆಹುತಿಯಾಗಿದೆ. ಅಧಿಕ ಮಳೆಯಿಂದಾಗಿ ತೇವಾಂಶದಿಂದ ಗಿಡದಿಂದ ಪಪ್ಪಾಯಿ ಉದುರುತ್ತಿದೆ.

ಪಪ್ಪಾಯಿ ಬೆಳೆದ ಹೊನ್ನಾಕಟ್ಟಿ ರೈತ ಯಲ್ಲಪ್ಪ ಜಿವೊಜಿ ಕಂಗಾಲಾಗಿದ್ದಾರೆ. 2 ಎಕರೆ ಜಮೀನಿನಲ್ಲಿ 2 ಲಕ್ಷ ರೂ. ಹೆಚ್ಚು ಖರ್ಚು ಮಾಡಿ ಪಪ್ಪಾಯಿ ಬೆಳೆಯಲಾಗಿತ್ತು. ಆದರೆ ಪಪ್ಪಾಯಿ ಫಸಲು ಚನ್ನಾಗಿ ಬಂದಿದ್ದರೂ, ಮಳೆಯಿಂದ ಪಪ್ಪಾಯಿಗೆ ಕೊಳೆ ರೋಗಕ್ಕೆ ಉದುರುತ್ತಿದೆ. 7- 8 ಲಕ್ಷ ರೂ ಲಾಭದ ನಿರೀಕ್ಷೆಯಲ್ಲಿದ್ದ ರೈತ ಯಲ್ಲಪ್ಪನಿಗೆ ಇದೀಗ ಸಾಲದ ಹೊರೆ ಹೆಚ್ಚಾಗಿದೆ. ನಿರಂತರ ಮಳೆಯಿಂದ ಪಪ್ಪಾಯಿ ಬೆಳೆ ಸಂಪೂರ್ಣ ಹಾನಿಯಾಗಿದೆ. ಸದ್ಯ ಸರ್ಕಾರದಿಂದ ಪರಿಹಾರದ ನಿರೀಕ್ಷೆಯಲ್ಲಿದ್ದಾರೆ.

ಭಾರಿ ಮಳೆಗೆ ಕೆರೆಯಂತಾದ ಕಾಲಕಾಲೇಶ್ವರ ಗ್ರಾಮ

ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಕಾಲಕಾಲೇಶ್ವರ ಗ್ರಾಮದ ಸುತ್ತಮುತ್ತ ಭಾರಿ‌ ಮಳೆಯಾಗುತ್ತಿದ್ದು, ಕಾಲಕಾಲೇಶ್ವರ ಗ್ರಾಮದ ರಸ್ತೆಗಳು ಕೆರೆಯಂತಾಗಿದೆ. ರಸ್ತೆ ತುಂಬ ನೀರು ನಿಂತು ಜನರು ಓಡಾಡಲು ಪರದಾಡುವಂತಾಗಿತ್ತು. ಇತ್ತ ಕಾಲಕಾಲೇಶ್ವರ ಗುಡ್ಡದಲ್ಲಿ ಕಿರು ಜಲಪಾತ ಸೃಷ್ಟಿಯಾಗಿದ್ದು, ಜನರು ವೀಕ್ಷಣೆಗಾಗಿ ಬರುತ್ತಿದ್ದ ದೃಶ್ಯ ಕಂಡು ಬಂತು.

ಮುಲ್ಲಾಮಾರಿ ಜಲಾಶಯದಿಂದ ನೀರು ಬಿಡುಗಡೆ; ಗ್ರಾಮಸ್ಥರಿಗೆ ಎಚ್ಚರಿಕೆ

ಕಲಬುರಗಿಯ ಚಿಂಚೊಳ್ಳಿ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ನಾಗರಾಳ‌ ಬಳಿ ಇರುವ ಮುಲ್ಲಾಮಾರಿ ಜಲಾಶಯದ ಒಳಹರಿವು 1,500 ಕ್ಯೂಸೆಕ್ ಹೆಚ್ಚಾಗಿದೆ. ಜಲಾಶಯದ ಗರಿಷ್ಠ ಮಟ್ಟ 491 ಮೀಟರ್ ಇದ್ದು, ಯಾವುದೇ ಕ್ಷಣದಲ್ಲಾದರೂ ಜಲಾಶಯದ ನೀರು ಬಿಡುಗಡೆ ಮಾಡಲಾಗುತ್ತದೆ. ಹೀಗಾಗಿ ಮುಲ್ಲಾಮಾರಿ ಕೆಡದಂಡೆ ಗ್ರಾಮಗಳಿಗೆ ಎಚ್ಚರಿಕೆಯಿಂದ ಇರಲು ಸೂಚನೆ ನೀಡಲಾಗಿದೆ. ಚಿಮ್ಮನಚೋಡ, ತಾಜಲಾಪುರ, ಗಾರಂಪಳ್ಳಿ ಸೇರಿ ಹಲವು ಗ್ರಾಮಗಳಿಗೆ ನದಿ ‌ದಡದಲ್ಲಿ ಹೋಗದಂತೆ ಎಇ‌ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

ಕಲಬುರಗಿಯಲ್ಲಿ ಮನೆಗಳಿಗೆ ನುಗ್ಗಿದ ನೀರು

ಕಲಬುರಗಿಯ ಶಹಾಬಾದ್, ಆಳಂದ, ಚಿಂಚೊಳ್ಳಿ ಸೇರಿ ಹಲವು ಭಾಗದಲ್ಲಿ ಭಾರಿ ಮಳೆಯಾಗಿದ್ದು, ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದೆ. ಚಿತ್ತಾಪೂರ ತಾಲೂಕಿನ ತರ್ಕಸ್ ಪೇಟೆಯಲ್ಲಿ ಮನೆಗಳಿಗೆ ನೀರು ನುಗ್ಗಿದ್ದರಿಂದ, ಶೇಖರಿಸಿಟ್ಟಿದ್ದ ದವಸ ಧಾನ್ಯಗಳು ನೀರುಪಾಲಾಗಿದ್ದವು. ಜತೆಗೆ ಚಂದಾಪುರ ಪಟೇಲ್ ಕಾಲೋನಿಯಲ್ಲಿ ಇಪ್ಪತ್ತಕ್ಕೂ ಅಧಿಕ ಮನೆಗಳಿಗೆ ನೀರು ನುಗ್ಗಿ ಅವಾಂತರವೇ ಸೃಷ್ಟಿಯಾಗಿತ್ತು. ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದ‌ ಕಾರಣ‌ ಮಳೆ‌ ನೀರು ಮನೆಗೆ ನುಗ್ಗಿತ್ತು. ಪುರಸಭೆ ಅಧಿಕಾರಿಗಳ ವಿರುದ್ಧ ಜನರು ಹಿಡಿಶಾಪ ಹಾಕಿದರು.

ಮಳೆಗೆ ಮರ ಬಿದ್ದು ಸಂಚಾರ ಅಸ್ತವ್ಯಸ್ತ

ಭಾರಿ ಮಳೆಗೆ ರಸ್ತೆಗೆ ಅಡ್ಡಲಾಗಿ ಮರ ಬಿದ್ದು ಸಂಚಾರ ಅಸ್ತವ್ಯಸ್ತವಾಗಿತ್ತು. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ರಸ್ತೆಗೆ ಅಡ್ಡಲಾಗಿ ಮರ ಬಿದ್ದಿತ್ತು. ಮರ ಬಿದ್ದ ಪರಿಣಾಮ ಕಿ.ಮೀ ಗಟ್ಟಲೆ ವಾಹನ ದಟ್ಟಣೆ ಉಂಟಾಗಿತ್ತು. ಅಡ್ಡಲಾಗಿ ಬಿದ್ದ ಮರದ ಕೆಳಗಡೆಯಿಂದ ಸವಾರರು ರಸ್ತೆ ದಾಟುತ್ತಿದ್ದರು. ಮರ ಬಿದ್ದು ಗಂಟೆಗಟ್ಟಲೆ ಸಮಯ ಕಳೆದರೂ ಸ್ಥಳಕ್ಕೆ ಅಧಿಕಾರಿಗಳು ಬಾರದ ಹಿನ್ನೆಲೆಯಲ್ಲಿ ಸ್ಥಳೀಯರಿಂದಲೇ ಮರ ತೆರವುಗೊಳಿಸಲಾಯಿತು.

ಗುಡುಗು ಸಹಿತ ಮಳೆ ಎಚ್ಚರಿಕೆ

ಜೂನ್‌ 15ರಂದು ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ಗುಡುಗು ಸಹಿತ ಹಗುರದೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗಾಳಿವೇಗವು ಒಂದು ಎರಡು ಕಡೆಗಳಲ್ಲಿ 40-50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ. ಬೆಂಗಳೂರು ಸುತ್ತಮುತ್ತ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಹಾಗೂ ಕನಿಷ್ಠ ತಾಪಮಾನವು ಕ್ರಮವಾಗಿ 30-21 ಡಿ.ಸೆ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Rahul Gandhi
ದೇಶ8 mins ago

Rahul Gandhi: ಕಾಂಗ್ರೆಸ್‌ ಹೆಚ್ಚು ಕ್ಷೇತ್ರ ಗೆದ್ದರೂ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ರಾಹುಲ್‌ ಗಾಂಧಿ !

Euro 2024
ಕ್ರೀಡೆ23 mins ago

Euro 2024: ಡೆನ್ಮಾರ್ಕ್ ಸವಾಲನ್ನು ಮೆಟ್ಟಿ ನಿಂತೀತೇ ಸ್ಲೊವೇನಿಯಾ?; ಬಲಾಬಲ ಹೇಗಿದೆ?

Renuka Swamy murder
ಪ್ರಮುಖ ಸುದ್ದಿ24 mins ago

Renuka Swamy Murder:‌ ರೇಣುಕಾಸ್ವಾಮಿಗೆ 4 ಬಾರಿ ಎಲೆಕ್ಟ್ರಿಕ್ ಶಾಕ್; ಪೋಸ್ಟ್ ಮಾರ್ಟಂ ವರದಿಯಲ್ಲಿವೆ ಭಯಾನಕ ಅಂಶಗಳು!

Elon Musk
ಪ್ರಮುಖ ಸುದ್ದಿ1 hour ago

Elon Musk: ಕೃತಕ ಬುದ್ಧಿಮತ್ತೆ ಬಳಸಿ ಇವಿಎಂಗಳ ಹ್ಯಾಕಿಂಗ್‌ ಸಾಧ್ಯ ಎಲಾನ್‌ ಮಸ್ಕ್‌; ಬಿಜೆಪಿ ನಾಯಕ ಟಾಂಗ್!‌

Shootout Case
ಪ್ರಮುಖ ಸುದ್ದಿ1 hour ago

Shootout Case: ಭೀಮಾ ತೀರದಲ್ಲಿ ಗುಂಡಿನ ದಾಳಿ; ರೌಡಿಶೀಟರ್‌ ಸ್ಥಳದಲ್ಲೇ ಸಾವು

kusina mane
ರಾಮನಗರ1 hour ago

Kusina Mane: ಗ್ರಾಮೀಣ ಮಹಿಳೆಯರ ಪಾಲಿಗೆ ವರದಾನವಾದ ಕೂಸಿನ ಮನೆ; ಮಕ್ಕಳ ದಾಖಲಾತಿ ಹೆಚ್ಚಳ

Job Alert
ಉದ್ಯೋಗ2 hours ago

Job Alert: ನ್ಯಾಷನಲ್ ಫರ್ಟಿಲೈಸರ್ಸ್ ಲಿಮಿಟೆಡ್‌ನಲ್ಲಿದೆ 164 ಹುದ್ದೆ; ಆನ್‌ಲೈನ್‌ ಮೂಲಕ ಅಪ್ಲೈ ಮಾಡಿ

murder case in Bengaluru rural
ಬೆಂಗಳೂರು ಗ್ರಾಮಾಂತರ2 hours ago

Murder case : ತಾಯಿಗೆ ಚಿತ್ರಹಿಂಸೆ ನೀಡುತ್ತಿದ್ದ ಬಾಯ್‌ಫ್ರೆಂಡ್‌ನನ್ನು ಕೊಂದು ಮುಗಿಸಿದ ಮಗ

V Cinemas multiplex inauguration by dolly dhanjay Ramesh arvind
ಸ್ಯಾಂಡಲ್ ವುಡ್2 hours ago

V Cinemas: ರಮೇಶ್ ಅರವಿಂದ್ – ಡಾಲಿ ಧನಂಜಯರಿಂದ ‘ವಿ ಸಿನಿಮಾಸ್’ ಮಲ್ಟಿಪ್ಲೆಕ್ಸ್ ಉದ್ಘಾಟನೆ

Petrol Diesel Price
ರಾಜಕೀಯ2 hours ago

Petrol Diesel Price: ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಖಂಡಿಸಿ ನಾಳೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Vijayanagara News
ವಿಜಯನಗರ3 hours ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 day ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ2 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ2 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ5 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ5 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ5 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

ಟ್ರೆಂಡಿಂಗ್‌