IPL 2023 : ಬಯಲಾಯ್ತು ಕೊಹ್ಲಿ, ಗಂಭೀರ್ ನಡುವಿನ ಬೈಗುಳಗಳು! ಏನಂದರು ಅವರಿಬ್ಬರು? - Vistara News

ಕ್ರಿಕೆಟ್

IPL 2023 : ಬಯಲಾಯ್ತು ಕೊಹ್ಲಿ, ಗಂಭೀರ್ ನಡುವಿನ ಬೈಗುಳಗಳು! ಏನಂದರು ಅವರಿಬ್ಬರು?

ವಿರಾಟ್ ಕೊಹ್ಲಿ ಹಾಗೂ ಗೌತಮ್​ ಗಂಭೀರ್ ಐಪಿಎಲ್​ ನಿಯಮಗಳನ್ನು ಉಲ್ಲಂಘಿಸಿದ ಕಾರಣಕ್ಕೆ ದೊಡ್ಡ ಮೊತ್ತದ ದಂಡ ವಿಧಿಸಿದ್ದಾರೆ.

VISTARANEWS.COM


on

Kohli and Gambhir's abusive comments have come to the fore! What did the two of them say?
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಖನೌ: ಆರ್​ಸಿಬಿ ತಂಡದ ಮಾಜಿ ನಾಯಕ ವಿರಾಟ್​ ಕೊಹ್ಲಿ ಹಾಗೂ ಲಖನೌ ತಂಡದ ಮೆಂಟರ್​ ಗೌತಮ್​ ಗಂಭೀರ್​ ಮೈದಾನದಲ್ಲೇ ವಾಗ್ಯುದ್ಧಕ್ಕೆ ಇಳಿದದ್ದು ದೊಡ್ಡ ಸುದ್ದಿಯಾಗಿತ್ತು. ಐಪಿಎಲ್​ ಆಡಳಿತ ಮಂಡಳಿ ಅವರಿಬ್ಬರಿಗೆ ದಂಡ ವಿಧಿಸಿದ್ದೂ ಆಯಿತು. ಆದರೆ, ಜಗಳಕ್ಕೆ ಕಾರಣವೇನು ಮತ್ತು ಅವರು ಬೈದಾದಿಕೊಂಡಿದ್ದೇನು ಎಂಬುದು ಬಹಿರಂಗವಾಗಿರಲಿಲ್ಲ. ಆದರೆ, ಪ್ರತ್ಯಕ್ಷದರ್ಶಿಯೊಬ್ಬರ ಹೇಳಿಕೆ ಮೇಲೆ ಕೊಹ್ಲಿ ಮತ್ತು ಗಂಭೀರ್​ ಏನೆಲ್ಲ ಮಾತುಗಳನ್ನು ಆಡಿದರು ಎಂಬುದನ್ನು ಟೈಮ್ಸ್ ಆಫ್​ ಇಂಡಿಯಾ ವರದಿ ಮಾಡಿದೆ. ಅವರ ವರದಿ ಹೀಗಿದೆ.

ಪಂದ್ಯದ ಅಂತಿಮ ಕ್ಷಣದಲ್ಲಿ ಲಖನೌ ತಂಡದ ಪರ ಬ್ಯಾಟಿಂಗ್ ಮಾಡುತ್ತಿದ್ದ ನವಿನ್​ ಉಲ್​ ಹಕ್​ ಹಾಗೂ ವಿರಾಟ್​ ಕೊಹ್ಲಿಯ ನಡುವೆ ಗಲಾಟೆ ಉಂಟಾಗಿತ್ತು. ಅವರಿಬ್ಬರೂ ಗುರಾಯಿಸಿ ನೋಡಿ ಕಚ್ಚಾಡಿಕೊಂಡಿದ್ದರು. ಪಂದ್ಯ ಮುಗಿದು ಪರಸ್ಪರ ಹಸ್ತಲಾಘವ ಮಾಡುವ ವೇಳೆ ಮತ್ತೆ ಅವರು ಮಾತಿನ ಚಕಮಕಿ ನಡೆಸಿದ್ದರು. ಇದರಿಂದ ಸಿಟ್ಟಿಗೆದ್ದ ಗಂಭೀರ್ ಕೊಹ್ಲಿಯ ಬಗ್ಗೆ ಏನೂ ಹೇಳಲು ಹೋದರು. ಈ ವೇಳೆ ಮಾತಿನ ಚಕಮಕಿ ಉಂಟಾಯಿತು.

ಪಂದ್ಯ ಮುಗಿದ ಬಳಿಕ ವಿರಾಟ್​ ಕೊಹ್ಲಿ ಬಳಿಗೆ ಹೋದ ಲಕ್ನೊ ತಂಡದ ಬ್ಯಾಟರ್​ ಕೈಲ್​ ಮೇಯರ್ಸ್​ ನೀವ್ಯಾಕೆ ನವೀನ್​ ಜತೆ ಜಗಳವಾಡಿದ್ದು ಎಂದು ಕೇಳಿದ್ದಾರೆ. ವಿರಾಟ್ ಕೊಹ್ಲಿ ವಿಷಯವನ್ನು ವಿವರಿಸಿ ಹೇಳುತ್ತಿದ್ದರು. ಈ ವೇಳೆ ಅಲ್ಲಿಗೆ ಬಂದ ಗೌತಮ್​ ಗಂಭೀರ್​ ಕೈಲ್​ ಮೇಯರ್ಸ್​ ಅವರನ್ನು ಕೊಹ್ಲಿಯ ಬಳಿಯಿಂದ ಎಳೆದುಕೊಂಡು ಹೋಗುತ್ತಾರೆ. ಆಗ ವಿರಾಟ್​ ಕೊಹ್ಲಿ ಏನೂ ಹೇಳುತ್ತಾರೆ.

ಇದನ್ನೂ ಓದಿ : IPL 2023: ನಿಧಾನಗತಿ ಬೌಲಿಂಗ್​: ವಿರಾಟ್​ ಕೊಹ್ಲಿಗೆ 24 ಲಕ್ಷ ರೂ. ದಂಡ

ಕೊಹ್ಲಿ ಗೊಣಗಿದ್ದನ್ನು ಕೇಳಿದ ಗೌತಮ್​ ಗಂಭೀರ್, ಏನು ಹೇಳಿದೆ? ಮತ್ತೊಮ್ಮೆ ಜೋರಾಗಿ ಹೇಳು ಎಂದು ಹತ್ತಿರ ಬರುತ್ತಾರೆ. ​ ನಾನು ಏನೂ ಹೇಳದೇ ಇರುವಾಗ ನನ್ನನ್ನು ಬಂದು ಪ್ರಶ್ನಿಸುವುದು ಯಾಕೆ ಎಂದು ವಿರಾಟ್​ ಕೊಹ್ಲಿ ಮರು ಪ್ರಶ್ನೆ ಹಾಕುತ್ತಾರೆ. ಈ ವೇಳೆ ಗಂಭೀರ್​, ನೀನು ನನ್ನ ತಂಡದ ಆಟಗಾರರಿಗೆ ನಿಂದಿಸಿದ್ದೀಯಾ. ಅಂದರೆ ನೀನು ನನ್ನ ಕುಟುಂಬದ ಸದಸ್ಯರಿಗೆ ನಿಂದಿಸಿದ ಹಾಗೆ. ಅದನ್ನು ನಾನು ಪ್ರಶ್ನಿಸಿದ್ದೇನೆ ಎಂದ ಹೇಳುತ್ತಾರೆ.. ಈ ವೇಳೆ ವಿರಾಟ್​ ಕೊಹ್ಲಿ , ಆಟಗಾರರು ನಿನ್ನ ಕುಟುಂಬದ ಸದಸ್ಯರು ಎಂದಾದರೆ ಅವರನ್ನು ಮೊದಲು ಸಂಭಾಳಿಸುವುಕ್ಕೆ ಕಲಿಯಿರಿ ಎಂದು ಪ್ರತ್ಯುತ್ತರ ನೀಡುತ್ತಾರೆ.

ಕೊಹ್ಲಿ ಮಾತಿಗೆ ಕೆಂಡಾಮಂಡಲರಾದ ಗೌತಮ್ ಗಂಭೀರ್​, ನಾನು ನಿನ್ನಿಂದ ಕಲಿಯುವುದು ಏನೂ ಇಲ್ಲ. ನಾನೇನು ನಿನ್ನಿಂದ ಕಲಿಯಬೇಕಾ ಎಂದು ಹೇಳುತ್ತಾರೆ. ಅಷ್ಟರಲ್ಲಿ ಆಟಗಾರರು, ಅಂಪೈರ್​ಗಳು ಸೇರಿ ಜಗಳ ಬಿಡಿಸುತ್ತಾರೆ.

ಭಾರಿ ಪ್ರಮಾಣದ ದಂಡ

ಅಂತೆಯೇ ವಿರಾಟ್​ ಕೊಹ್ಲಿ ಹಾಗೂ ಗೌತಮ್​ ಗಂಭೀರ್​ಗೆ ನಿನ್ನೆಯ ಪಂದ್ಯದ ಫುಲ್​ ಸಂಭಾವನೆ ಕಡಿತ ಮಾಡಲಾಗಿದೆ. ನಿನ್ನೆ ಆಡಿದ್ದಕ್ಕೆ ಅವರಿಬ್ಬರಿಗೆ ಸಂಬಳವೇ ಇಲ್ಲ. ಅಂದ ಹಾಗೆ ಕೊಹ್ಲಿ ಒಂದು ಪಂದ್ಯಕ್ಕೆ 1.07 ಕೋಟಿ ರೂಪ ಪಡೆದರೆ, ಗಂಭೀರ್​ 25 ಲಕ್ಷ ರೂಪಾಯಿ ಪಡೆದುಕೊಳ್ಳುತ್ತಾರೆ. ಇದೇ ವೇಲೆ ಲಖನೌ ಸೂಪರ್​ ಜಯಂಟ್ಸ್ ತಂಡದ ಆಟಗಾರ ಹಾಗೂ ಅಫಘಾನಿಸ್ತಾನದ ವೇಗಿ ನವೀನ್​ ಉಲ್ ಹಕ್​ಗೂ ಶೇಕಡಾ 50 ಸಂಬಳ ಕಡಿತ ಮಾಡಲಾಗಿದೆ. ಅವರು 1.79 ಲಕ್ಷ ರೂಪಾಯಿ ಪಾವತಿಸಬೇಕಾಗಿದೆ.

ಪಂದ್ಯದ ರೆಫರಿ ಈ ಮೂವರಿಗೂ ದಂಡ ವಿಧಿಸಿದ್ದು ಇಂಥ ಘಟನೆಗಳನು ಮುಂದುವರಿಯಬಾರದೂ ಎಂದು ಹೇಳಿದ್ದಾರೆ. ಮೂವರೂ ತಮ್ಮ ತಪ್ಪುಗಳನ್ನು ಒಪ್ಪಿಕೊಂಡು ದಂಡ ಕಟ್ಟಲಿದ್ದಾರೆ. ಐಪಿಎಲ್‌ ಕೋಡ್‌ ಆಫ್‌ ಕಂಡಕ್ಟ್‌ ಎರಡನೇ ಹಂತದ ಅಪರಾಧವೆಸಗಿದ ಕಾರಣ ಕೊಹ್ಲಿ ಹಾಗೂ ಗಂಭೀರ್‌ಗೆ ದುಬಾರಿ ದಂಡ ವಿಧಿಸಲಾಗಿದೆ.

“ಲಖನೌದ ಅಟಲ್‌ ಬಿಹಾರಿ ವಾಜಪೇಯಿ ಏಕನಾ ಮೈದಾನದಲ್ಲಿ ನಡೆದಿದ್ದ ರಾಯಲ್‌ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಟಾಟಾ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಪಂದ್ಯದಲ್ಲಿ ಐಪಿಎಲ್‌ ನಿಯಮ ಉಲ್ಲಂಘಿಸಿದ ಕಾರಣ ಲಖನೌ ಸೂಪರ್‌ ಜಯಂಟ್ಸ್‌ ಮೆಂಟರ್‌ ಗೌತಮ್‌ ಗಂಭೀರ್‌ಗೆ ಪಂದ್ಯದ ಶುಲ್ಕದಲ್ಲಿ ಶೇ. 100 ರಷ್ಟು ದಂಡವನ್ನು ವಿಧಿಸಲಾಗಿದೆ,” ಎಂದು ಐಪಿಎಲ್ ಪ್ರಕಟಣೆ ಹೊರಡಿಸಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

T20 World Cup 2024: ಒಮಾನ್​ ವಿರುದ್ಧ ಪ್ರಯಾಸದ ಗೆಲುವು ಸಾಧಿಸಿದ ಆಸ್ಟ್ರೇಲಿಯಾ

T20 World Cup 2024: ಒಮಾನ್​ ಉತ್ತಮ ಬೌಲಿಂಗ್​ ದಾಳಿ ನಡೆಸಿದರೂ ಕೂಡ ಬ್ಯಾಟಿಂಗ್​ನಲ್ಲಿ ವಿಫಲವಾಯಿತು. ಸೋಲು ಕಂಡರೂ ಕೂಡ ಬಲಿಷ್ಠ ಆಸ್ಟ್ರೇಲಿಯಾದಂತಹ ತಂಡಕ್ಕೆ ತೀವ್ರ ಪೈಪೋಟಿ ನೀಡಿದನ್ನು ಮಾತ್ರ ಮೆಚ್ಚಲೇ ಬೇಕು.

VISTARANEWS.COM


on

T20 World Cup 2024
Koo

ಗಯಾನ: ಗುರುವಾರ ನಡೆದ ಟಿ20 ವಿಶ್ವಕಪ್(T20 World Cup 2024)​ ಪಂದ್ಯದಲ್ಲಿ ಆಸ್ಟ್ರೇಲಿಯಾ ಮತ್ತು ಉಗಾಂಡ ಗೆಲುವಿನ ನಗೆ ಬೀರಿದೆ. ‘ಸಿ’ ಗುಂಪಿನ ಪಂದ್ಯದಲ್ಲಿ ಉಗಾಂಡ ತಂಡ ಪಪುವಾ ನ್ಯೂ ಗಿನಿಯಾಯನ್ನು(Papua New Guinea vs Uganda) 3 ವಿಕೆಟ್​ಗಳ ಅಂತರದಿಂದ ಮಣಿಸಿದರೆ, ‘ಬಿ’ ಗುಂಪಿನ ಪಂದ್ಯದಲ್ಲಿ ಒಮಾನ್​ ತಂಡ ಆಸ್ಟ್ರೇಲಿಯಾಕ್ಕೆ(Australia vs Oman) ಶರಣಾಯಿತು.

ಖಾತೆ ತೆರೆದ ಉಗಾಂಡ


ಉಂಗಾಡ ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಟೂರ್ನಿಯಲ್ಲಿ ಗೆಲುವಿನ ಖಾತೆ ತೆರೆಯಿತು. ಅಫಘಾನಿಸ್ತಾನ ವಿರುದ್ಧ ಆಡಿದ ಮೊದಲ ಪಂದ್ಯದಲ್ಲಿ 125 ರನ್​ಗಳ ಹೀನಾಯ ಸೋಲು ಕಂಡಿತ್ತು. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಪಪುವಾ ನ್ಯೂ ಗಿನಿಯಾ ತಂಡ 19.1 ಓವರ್​ಗಳಲ್ಲಿ 77 ರನ್​ಗೆ ಆಲೌಟ್​ ಆಯಿತು. ಸಣ್ಣ ಮೊತ್ತವನ್ನು ಬೆನ್ನಟ್ಟಿದ ಉಗಾಂಡ 18.2 ಓವರ್​ಗಳಲ್ಲಿ 7 ವಿಕೆಟ್​ ನಷ್ಟಕ್ಕೆ 78 ರನ್​ ಬಾರಿಸಿ ಗೆಲುವು ಸಾಧಿಸಿತು.

ಚೇಸಿಂಗ್​ ವೇಳೆ ಉಂಗಾಂಡ ನಾಟಕೀಯ ಕುಸಿತ ಕಂಡಿತು. 26 ರನ್​ ಗಳಿಗೆ 5 ವಿಕೆಟ್​ ಕಳೆದುಕೊಂಡು ಸೋಲಿನ ಸೂಚನೆ ನೀಡಿತು. ಈ ವೇಳೆ ರಿಯಾಝತ್ ಅಲಿ ಶಾ 33 ರನ್​ ಬಾರಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು. ಒಂದೊಮ್ಮೆ ಇವರ ವಿಕೆಟ್​ ಕೂಡ ಬೀಳುತ್ತಿದ್ದರೆ ಉಂಗಾಡ ಸೋಲು ಕಾಣುತ್ತಿತ್ತು.

ಆಸ್ಟ್ರೇಲಿಯಾಕ್ಕೆ ಭರ್ಜರಿ ಗೆಲುವು


ದಿನದ ಮತ್ತೊಂದು ಪಂದ್ಯದಲ್ಲಿ ಮಾಜಿ ಚಾಂಪಿಯನ್​ ಆಸ್ಟ್ರೇಲಿಯಾ ತಂಡ ಒಮಾನ್​ ವಿರುದ್ಧ 39 ರನ್​ಗಳ ಪ್ರಯಾಸದ ಗೆಲುವು ಸಾಧಿಸಿ ಟೂರ್ನಿಯಲ್ಲಿ ಶುಭಾರಂಭ ಕಂಡಿದೆ. ಟಾಸ್​ ಸೋತು ಬ್ಯಾಟಿಂಗ್​ಗೆ ಇಳಿಸಲ್ಪಟ್ಟ ಆಸ್ಟ್ರೇಲಿಯಾ ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್​ಗೆ 164 ರನ್​ ಬಾರಿಸಿತು. ಆಸೀಸ್​ ತಂಡದ ಸಾಮರ್ಥ್ಯಕ್ಕೆ ಇದು ಕನಿಷ್ಠ ಮೊತ್ತ. ಜವಾಬಿತ್ತ ಒಮಾನ್​ ಉತ್ತಮ ಪೈಪೋಟಿ ನೀಡಿ 9 ವಿಕೆಟ್​ಗೆ 125 ರನ್​ ಗಳಿಸಿ ಸಣ್ಣ ಅಂತರದ ಸೋಲು ಕಂಡಿತು.

ಆಸೀಸ್​ ಪರ ವಿದಾಯದ ಟೂರ್ನಿಯನ್ನಾಡುತ್ತಿರುವ ಡೇವಿಡ್​ ವಾರ್ನರ್​ ಅವರು ಅಧರ್ಶತಕ ಬಾರಿಸಿ ಮಿಂಚಿದರು. ಒಟ್ಟು 51 ಎಸೆತ ಎದುರಿಸಿ 6 ಬೌಂಡರಿ ಮತ್ತು 1 ಸಿಕ್ಸರ್​ ನೆರವಿನಿಂದ 56 ರನ್​ ಗಳಿಸಿದರು. ಐಪಿಎಲ್​ನಲ್ಲಿ ಸನ್​ರೈಸರ್ಸ್​ ತಂಡದ ಪರ ವಿಸ್ಫೋಟಕ ಬ್ಯಾಟಿಂಗ್​ ನಡೆಸಿ ಗಮನಸೆಳೆದಿದ್ದ ಟ್ರಾವಿಸ್​ ಹೆಡ್​ (12) ಮತ್ತು ನಾಯಕ ಮಿಚೆಲ್​ ಮಾರ್ಷ್​ (14), ಆರ್​ಸಿಬಿ ತಂಡದ ಗ್ಲೆನ್​ ಮ್ಯಾಕ್ಸ್​ವೆಲ್​ ಶೂನ್ಯ ಸುತ್ತಿ ಘೋರ ವೈಫಲ್ಯ ಕಂಡರು. ಅಂತಿಮ ಹಂತದಲ್ಲಿ ಮಾರ್ಕಸ್​ ಸ್ಟೋಯಿನಿಸ್​ ಬಾರಿಸಿದ ಅಜೇಯ 67 ರನ್​ಗಳ ನೆರವಿನಿಂದ ಆಸೀಸ್​ 150ರ ಗಡಿ ದಾಟಿತು. ಒಂದೊಮ್ಮೆ ಸ್ಟೋಯಿನಿಸ್​ ತಂಡಕ್ಕೆ ಆಸರೆಯಾಗದೇ ಹೋಗಿದ್ದರೆ ಆಸೀಸ್​ ಸೋಲುವ ಎಲ್ಲ ಸಾಧ್ಯತೆಯೂ ಇರುತ್ತಿತ್ತು.

ಇದನ್ನೂ ಓದಿ

ಒಮಾನ್​ ಉತ್ತಮ ಬೌಲಿಂಗ್​ ದಾಳಿ ನಡೆಸಿದರೂ ಕೂಡ ಬ್ಯಾಟಿಂಗ್​ನಲ್ಲಿ ವಿಫಲವಾಯಿತು. ಸೋಲು ಕಂಡರೂ ಕೂಡ ಬಲಿಷ್ಠ ಆಸ್ಟ್ರೇಲಿಯಾದಂತಹ ತಂಡಕ್ಕೆ ತೀವ್ರ ಪೈಪೋಟಿ ನೀಡಿದನ್ನು ಮಾತ್ರ ಮೆಚ್ಚಲೇ ಬೇಕು. ಒಮಾನ್​ ಪರ ಮೆಹ್ರಾನ್ ಖಾನ್ 2 ವಿಕೆಟ್​ ಕಿತ್ತರು. ಆಸೀಸ್​ ಪರ ಸ್ಪಿನ್ನರ್​ ಝಾಂಪ (20), ಮಾರ್ಕಸ್​ ಸ್ಟೋಯಿನಿಸ್​(3) ಮಿಚೆಲ್​ ಸ್ಟಾರ್ಕ್​(2) ಮತ್ತು ನಥಾನ್​ ಎಲ್ಲಿಸ್​(2) ವಿಕೆಟ್​ ಕಿತ್ತರು.

Continue Reading

ಕ್ರೀಡೆ

Rohit Sharma: ಹಲವು ದಾಖಲೆಗಳ ಸರದಾರನಾದ ಹಿಟ್​ಮ್ಯಾನ್​ ರೋಹಿತ್​

Rohit Sharma:ಟಿ20 ಕ್ರಿಕೆಟ್​ನಲ್ಲಿ 4 ಸಾವಿರ ರನ್​ ಪೂರೈಸಿದ ದಾಖಲೆಯನ್ನು ಕೂಡ ರೋಹಿತ್(4026)​ ತಮ್ಮ ಹೆಸರಿಗೆ ಬರೆದರು. ಈ ಸಾಧನೆ ಮಾಡಿದ ವಿಶ್ವದ ದ್ವಿತೀಯ ಬ್ಯಾಟರ್​ ಎನಿಸಿಕೊಂಡರು. ದಾಖಲೆ ವಿರಾಟ್​ ಕೊಹ್ಲಿ ಹೆಸರಿನಲ್ಲಿದೆ. ಕೊಹ್ಲಿ 4038 ರನ್​ ಬಾರಿಸಿದ್ದಾರೆ. ಪಾಕಿಸ್ತಾನದ ಬಾಬರ್​ ಅಜಂ(4023) ಮೂರನೇ ಸ್ಥಾನದಲ್ಲಿದ್ದಾರೆ.

VISTARANEWS.COM


on

Rohit Sharma
Koo

ನ್ಯೂಯಾರ್ಕ್​: ಐರ್ಲೆಂಡ್​ ವಿರುದ್ಧ ಬುಧವಾರ ನಡೆದ ಟಿ20 ವಿಶ್ವಕಪ್(T20 World Cup 2024)​ ಪಂದ್ಯದಲ್ಲಿ ಟೀಮ್​ ಇಂಡಿಯಾದ ನಾಯಕ, ಹಿಟ್​ಮ್ಯಾನ್​ ಖ್ಯಾತಿಯ ರೋಹಿತ್​ ಶರ್ಮಾ(Rohit Sharma) ಅವರು ಅರ್ಧಶತಕ ಬಾರಿಸುವ ಮೂಲಕ ಹಲವು ದಾಖಲೆಗಳನ್ನು ಬರೆದಿದ್ದಾರೆ. ಅವರ ದಾಖಲೆಯ ಪಟ್ಟಿ ಇಂತಿದೆ.

600 ಸಿಕ್ಸರ್​


ಐರ್ಲೆಂಡ್​ ವಿರುದ್ಧ ಮೂರು ಸಿಕ್ಸರ್​ಗಳನ್ನು ಬಾರಿಸುವ ಮೂಲಕ ರೋಹಿತ್​ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 600 (ಏಕದಿನದಲ್ಲಿ 323, ಟಿ20ಯಲ್ಲಿ 193, ಟೆಸ್ಟ್​ನಲ್ಲಿ 84)​ ಸಿಕ್ಸರ್​ ಪೂರೈಸಿದರು. ಈ ಸಾಧನೆ ಮಾಡಿದ ವಿಶ್ವದ ಮೊದಲ ಬ್ಯಾಟರ್​ ಎನಿಸಿಕೊಂಡರು. ಕ್ರಿಸ್​ ಗೇಲ್ 553 ಸಿಕ್ಸರ್​, ಶಾಹೀದ್​ ಅಫ್ರೀದಿ 476 ಸಿಕ್ಸರ್​ ಬಾರಿಸಿ ಕ್ರಮವಾಗಿ 2 ಮತ್ತು 3ನೇ ಸ್ಥಾನದಲ್ಲಿದ್ದಾರೆ.

4 ಸಾವಿರ ರನ್​


ಟಿ20 ಕ್ರಿಕೆಟ್​ನಲ್ಲಿ 4 ಸಾವಿರ ರನ್​ ಪೂರೈಸಿದ ದಾಖಲೆಯನ್ನು ಕೂಡ ರೋಹಿತ್(4026)​ ತಮ್ಮ ಹೆಸರಿಗೆ ಬರೆದರು. ಈ ಸಾಧನೆ ಮಾಡಿದ ವಿಶ್ವದ ದ್ವಿತೀಯ ಬ್ಯಾಟರ್​ ಎನಿಸಿಕೊಂಡರು. ದಾಖಲೆ ವಿರಾಟ್​ ಕೊಹ್ಲಿ ಹೆಸರಿನಲ್ಲಿದೆ. ಕೊಹ್ಲಿ 4038 ರನ್​ ಬಾರಿಸಿದ್ದಾರೆ. ಪಾಕಿಸ್ತಾನದ ಬಾಬರ್​ ಅಜಂ(4023) ಮೂರನೇ ಸ್ಥಾನದಲ್ಲಿದ್ದಾರೆ.

ಟಿ20 ವಿಶ್ವಕಪ್​ನಲ್ಲಿ ಸಾವಿರ ರನ್​


ಅರ್ಧಶತಕ ಬಾರಿಸುವ ಮೂಲಕ ಟಿ20 ವಿಶ್ವಕಪ್​ ಟೂರ್ನಿಯಲ್ಲಿ ರೋಹಿತ್(1015)​ ಸಾವಿರ ರನ್​ ಪೂರೈಸಿದರು. ಈ ಸಾಧನೆ ಮಾಡಿದ ಮೂರನೇ ಹಾಗೂ 2ನೇ ಭಾರತೀಯ ಎನಿಸಿಕೊಂಡರು. ಕಿಂಗ್​ ಖ್ಯಾತಿಯ ವಿರಾಟ್​ ಕೊಹ್ಲಿ(1142) ಮೊದಲ ಸ್ಥಾನದಲ್ಲಿದ್ದರೆ, ಶ್ರೀಲಂಕಾದ ಮಾಜಿ ಆಟಗಾರ ಮಹೇಲಾ ಜಯವರ್ಧನೆ(1016) ದ್ವಿತೀಯ ಸ್ಥಾನದಲ್ಲಿದ್ದಾರೆ. ರೋಹಿತ್​ ಮುಂದಿನ ಪಂದ್ಯದಲ್ಲಿ 2 ರನ್​ ಗಳಿಸಿದರೆ ಜಯವರ್ಧನೆ ದಾಖಲೆ ಪತನಗೊಳ್ಳಲಿದೆ.

ಇದನ್ನೂ ಓದಿ India vs Ireland: ರೋಹಿತ್​ ಅರ್ಧಶತಕ; ಐರ್ಲೆಂಡ್​ ವಿರುದ್ಧ ಭಾರತಕ್ಕೆ ಭರ್ಜರಿ​ ಗೆಲುವು

ಮೊದಲ ಅರ್ಧಶತಕ


ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಅರ್ಧಶತಕ ಬಾರಿಸಿದ ಮೊದಲ ಟೀಮ್​ ಇಂಡಿಯಾ ನಾಯಕ ಎನ್ನುವ ಹಿರಿಮೆಗೂ ರೋಹಿತ್​ ಪಾತ್ರರಾದರು. ಐರ್ಲೆಂಡ್​ ವಿರುದ್ಧ ರೋಹಿತ್​ 3 ಸಿಕ್ಸರ್​ ಮತ್ತು 4 ಬೌಂಡರಿ ಬಾರಿಸಿ 52 ರನ್​ ಗಳಿಸಿದರು. ಇದು ಮಾತ್ರವಲ್ಲದೆ ರೋಹಿತ್​ ನಾಯಕತ್ವದಲ್ಲಿ ಭಾರತ ಅತಿ ಹೆಚ್ಚು ಟಿ20 ಪಂದ್ಯ ಗೆದ್ದ ದಾಖಲೆ ಬರೆಯಿತು.

ಪಂದ್ಯ ಗೆದ್ದ ಭಾರತ


ಹಾರ್ದಿಕ್​ ಪಾಂಡ್ಯ(3), ಜಸ್​ಪ್ರೀತ್​ ಬುಮ್ರಾ(2) ಅವರ ಉತ್ಕೃಷ್ಟ ಮಟ್ಟದ ಬೌಲಿಂಗ್​ ದಾಳಿ, ನಾಯಕ ರೋಹಿತ್​ ಶರ್ಮಾ ಅವರ ಅರ್ಧಶತಕದ ನೆರವಿನಿಂದ ಭಾರತ ತಂಡ ಐರ್ಲೆಂಡ್(India vs Ireland)​ ವಿರುದ್ಧ 8 ವಿಕೆಟ್​ಗಳ ಗೆಲುವು ಸಾಧಿಸಿತು. ಈ ಮೂಲಕ ಟಿ20 ವಿಶ್ವಕಪ್​ ಟೂರ್ನಿಯಲ್ಲಿ (T20 World Cup 2024 ಶುಭಾರಂಭ ಕಂಡಿದೆ. ಭಾರತ ತನ್ನ ದ್ವಿತೀಯ ಪಂದ್ಯವನ್ನು ಜೂನ್​ 9 ರಂದು ಬದ್ಧ ಎದುರಾಳಿ ಪಾಕಿಸ್ತಾನ ವಿರುದ್ಧ ಆಡಲಿದೆ. ಇತ್ತಂಡಗಳ ಈ ಹೈವೋಲ್ಟೇಜ್​ ಪಂದ್ಯ ಕೂಡ ಇದೇ ಸ್ಟೇಡಿಯಂನಲ್ಲಿ ನಡೆಯಲಿದೆ.

ಇಲ್ಲಿನ ನಸೌ ಕೌಂಟಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಗೆದ್ದು ಫೀಲ್ಡಿಂಗ್​ ಆಯ್ದುಕೊಂಡ ನಾಯಕ ರೋಹಿತ್​ ಶರ್ಮಾ ಅವರ ಆಯ್ಕೆಯನ್ನು ಬೌಲರ್​ಗಳು ಸಮರ್ಥಿಸಿಕೊಂಡರು. ಹಾರ್ದಿಕ್​ ಪಾಂಡ್ಯ, ಅರ್ಶದೀಪ್​, ಜಸ್​ಪ್ರೀತ್ ಬುಮ್ರಾ, ಸಿರಾಜ್ ಮತ್ತು ಅಕ್ಷರ್​​ ಜಿದ್ದಿಗೆ ಬಿದ್ದವರಂತೆ ಬೌಲಿಂಗ್​ ದಾಳಿ ನಡೆಸಿ ವಿಕೆಟ್​ ಕಿತ್ತು ಪಾರಮ್ಯ ಮೆರೆದರು. ಭಾರತೀಯ ಬೌಲಿಂಗ್​ ದಾಳಿಯನ್ನು ಸಮರ್ಥವಾಗಿ ಎದುರಿಸುವಲ್ಲಿ ವಿಫಲವಾದ ಐರ್ಲೆಂಡ್​ ಕೇವಲ 96 ರನ್​ಗಳಿಗೆ ಸರ್ವಪತನ ಕಂಡಿತು. ಜವಾಬಿತ್ತ ಭಾರತ, ಈ ಸಣ್ಣ ಮೊತ್ತವನ್ನು 12.2 ಓವರ್​ಗಳಲ್ಲಿ 2 ವಿಕೆಟ್​ ನಷ್ಟಕ್ಕೆ 97 ರನ್​ ಬಾರಿಸಿ ಭರ್ಜರಿ ಗೆಲುವು ತನ್ನದಾಗಿಸಿಕೊಂಡಿತು.

Continue Reading

ಕ್ರೀಡೆ

India vs Ireland: ರೋಹಿತ್​ ಅರ್ಧಶತಕ; ಐರ್ಲೆಂಡ್​ ವಿರುದ್ಧ ಭಾರತಕ್ಕೆ ಭರ್ಜರಿ​ ಗೆಲುವು

India vs Ireland: ನಿಧಾನಗತಿಯ ಟ್ರ್ಯಾಕ್​ನಲ್ಲಿ ಆರಂಭದಲ್ಲಿ ರನ್​ ಗಳಿಸಲು ತಿಣುಕಾಡಿದ ರೋಹಿತ್, ಆ​ ಬಳಿಕ ಸಿಡಿದು ನಿಂತರು. ಸತತವಾಗಿ ಸಿಕ್ಸರ್​ ಮತ್ತು ಬೌಂಡರಿ ಬಾರಿಸಿ ಅರ್ಧಶತಕ ಪೂರ್ತಿಗೊಳಿಸಿದರು. ಇದೇ ವೇಳೆ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ 4 ಸಾವಿರ ರನ್​ ಪೂರೈಸಿದ ಮೈಲುಗಲ್ಲು ನಿರ್ಮಿಸಿದರು.

VISTARANEWS.COM


on

India vs Ireland
Koo

ನ್ಯೂಯಾರ್ಕ್​: ಹಾರ್ದಿಕ್​ ಪಾಂಡ್ಯ(3), ಜಸ್​ಪ್ರೀತ್​ ಬುಮ್ರಾ(2) ಅವರ ಉತ್ಕೃಷ್ಟ ಮಟ್ಟದ ಬೌಲಿಂಗ್​ ದಾಳಿ, ನಾಯಕ ರೋಹಿತ್​ ಶರ್ಮಾ ಅವರ ಅರ್ಧಶತಕದ ನೆರವಿನಿಂದ ಭಾರತ ತಂಡ ಐರ್ಲೆಂಡ್(India vs Ireland)​ ವಿರುದ್ಧ 8 ವಿಕೆಟ್​ಗಳ ಗೆಲುವು ಸಾಧಿಸಿದೆ. ಈ ಮೂಲಕ ಟಿ20 ವಿಶ್ವಕಪ್​ ಟೂರ್ನಿಯಲ್ಲಿ (T20 World Cup 2024 ಶುಭಾರಂಭ ಕಂಡಿದೆ. ಭಾರತ ತನ್ನ ದ್ವಿತೀಯ ಪಂದ್ಯವನ್ನು ಜೂನ್​ 9 ರಂದು ಬದ್ಧ ಎದುರಾಳಿ ಪಾಕಿಸ್ತಾನ ವಿರುದ್ಧ ಆಡಲಿದೆ. ಇತ್ತಂಡಗಳ ಈ ಹೈವೋಲ್ಟೇಜ್​ ಪಂದ್ಯ ಕೂಡ ಇದೇ ಸ್ಟೇಡಿಯಂನಲ್ಲಿ ನಡೆಯಲಿದೆ.

ಇಲ್ಲಿನ ನಸೌ ಕೌಂಟಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಗೆದ್ದು ಫೀಲ್ಡಿಂಗ್​ ಆಯ್ದುಕೊಂಡ ನಾಯಕ ರೋಹಿತ್​ ಶರ್ಮಾ ಅವರ ಆಯ್ಕೆಯನ್ನು ಬೌಲರ್​ಗಳು ಸಮರ್ಥಿಸಿಕೊಂಡರು. ಹಾರ್ದಿಕ್​ ಪಾಂಡ್ಯ, ಅರ್ಶದೀಪ್​, ಜಸ್​ಪ್ರೀತ್ ಬುಮ್ರಾ, ಸಿರಾಜ್ ಮತ್ತು ಅಕ್ಷರ್​​ ಜಿದ್ದಿಗೆ ಬಿದ್ದವರಂತೆ ಬೌಲಿಂಗ್​ ದಾಳಿ ನಡೆಸಿ ವಿಕೆಟ್​ ಕಿತ್ತು ಪಾರಮ್ಯ ಮೆರೆದರು. ಭಾರತೀಯ ಬೌಲಿಂಗ್​ ದಾಳಿಯನ್ನು ಸಮರ್ಥವಾಗಿ ಎದುರಿಸುವಲ್ಲಿ ವಿಫಲವಾದ ಐರ್ಲೆಂಡ್​ ಕೇವಲ 96 ರನ್​ಗಳಿಗೆ ಸರ್ವಪತನ ಕಂಡಿತು. ಜವಾಬಿತ್ತ ಭಾರತ, ಈ ಸಣ್ಣ ಮೊತ್ತವನ್ನು 12.2 ಓವರ್​ಗಳಲ್ಲಿ 2 ವಿಕೆಟ್​ ನಷ್ಟಕ್ಕೆ 97 ರನ್​ ಬಾರಿಸಿ ಭರ್ಜರಿ ಗೆಲುವು ತನ್ನದಾಗಿಸಿಕೊಂಡಿತು.

ಕೊಹ್ಲಿವಿಫಲ


ರೋಹಿತ್​ ಶರ್ಮಾ ಮತ್ತು ವಿರಾಟ್​ ಕೊಹ್ಲಿ ಇದೇ ಮೊದಲ ಬಾರಿಗೆ ಐಸಿಸಿ ಟೂರ್ನಿಯಲ್ಲಿ ಆರಂಭಿಕರಾಗಿ ಕಣಕ್ಕಿಳಿದರು. ಆದರೆ, ಕೊಹ್ಲಿ ಈ ಪ್ರಯೋಗದಲ್ಲಿ ಯಶಸ್ಸು ಕಾಣಲಿಲ್ಲ. ಕೇವಲ 1 ರನ್​ಗೆ ವಿಕೆಟ್​ ಕಳೆದುಕೊಂಡರು. ಇದಕ್ಕೂ ಮುನ್ನ ಈ ಜೋಡಿ 2019ರಲ್ಲಿ ಅಹಮದಾಬಾದ್​ನಲ್ಲಿ ನಡೆದಿದ್ದ ಇಂಗ್ಲೆಂಡ್​ ವಿರುದ್ಧ ಟಿ20 ಸರಣಿಯಲ್ಲಿ ಆರಂಭಿಕರಾಗಿ ಬ್ಯಾಟ್​ ಬೀಸಿತ್ತು. ಕೊಹ್ಲಿ ಐರ್ಲೆಂಡ್​ ವಿರುದ್ಧ ಆರಂಭಿಕನಾಗಿ ಆಡಿದ ಕಾರಣ ಜೈಸ್ವಾಲ್​ಗೆ ಅವಕಾಶ ಕೈತಪ್ಪಿತು.

ರೋಹಿತ್​ ಅರ್ಧಶತಕ


ನಿಧಾನಗತಿಯ ಟ್ರ್ಯಾಕ್​ನಲ್ಲಿ ಮೊದಲು ರನ್​ ಗಳಿಸಲು ತಿಣುಕಾಡಿದ ರೋಹಿತ್, ಆ​ ಬಳಿಕ ಸಿಡಿದು ನಿಂತರು. ಸತತ ಸಿಕ್ಸರ್​ ಮತ್ತು ಬೌಂಡರಿ ಬಾರಿಸಿ ಅರ್ಧಶತಕ ಪೂರ್ತಿಗೊಳಿಸಿದರು. ಇದೇ ವೇಳೆ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ 4 ಸಾವಿರ ರನ್​ ಪೂರೈಸಿದ ಮೈಲುಗಲ್ಲು ನಿರ್ಮಿಸಿದರು. 36 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ರೋಹಿತ್​, 52 ರನ್​ ಗಳಿಸಿದ ವೇಳೆ ಭುಜದ ಗಾಯದ ಸಮಸ್ಯೆಗೆ ಸಿಲುಕಿ ರಿಟರ್ಡ್ ಹರ್ಟ್ ಆದರು. ಅವರ ಈ ಅರ್ಧಶತಕ ಬ್ಯಾಟಿಂಗ್​ ಇನಿಂಗ್ಸ್​ನಲ್ಲಿ 4 ಬೌಂಡರಿ ಮತ್ತು 3 ಸಿಕ್ಸರ್​ ಸಿಡಿಯಿತು. ಅಂತಿಮವಾಗಿ ರಿಷಭ್​ ಪಂತ್ ಅಜೇಯ 36(3 ಬೌಂಡರಿ, 2 ಸಿಕ್ಸರ್​) ರನ್​ ಬಾರಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು. ಗೆಲುವಿಗೆ ರನ್​ ಬೇಕಿದ್ದಾಗ ಸಿಕ್ಸರ್​ ಬಾರಿಸುವ ಯತ್ನದಲ್ಲಿ ವಿಫಲವಾದ ಸೂರ್ಯಕುಮಾರ್(2)​ ಕ್ಯಾಚ್​ ನೀಡಿ ವಿಕೆಟ್​ ಕಳೆದುಕೊಂಡರು.

ಇದಕ್ಕೂ ಮುನ್ನ ಇನಿಂಗ್ಸ್​ ಆರಂಭಿಸಿದ ಐರ್ಲೆಂಡ್​ಗೆ ಎಡಗೈ ವೇಗಿ ಅರ್ಶ್​ದೀಪ್​ ತಮ್ಮ ದ್ವಿತೀಯ ಓವರ್​ನಲ್ಲಿ ಆಘಾತವಿಕ್ಕಿದರು. ನಾಯಕ ಪೌಲ್​ ಸ್ಟಿರ್ಲಿಂಗ್(7) ವಿಕೆಟ್​ ಕಿತ್ತು ಭಾರತಕ್ಕೆ ಮೊದಲ ಯಶಸ್ಸು ತಂದುಕೊಟ್ಟರು. ಇಷ್ಟಕ್ಕೇ ತೃಪ್ತಿಯಾಗದ ಅರ್ಶ್​ದೀಪ್ ಇದೇ ಓವರ್​ನ ಅಂತಿಮ ಎಸೆತದಲ್ಲಿ ಮತ್ತೊಂದು ವಿಕೆಟ್​ ಉಡಾಯಿಸಿದರು. ಐರ್ಲೆಂಡ್​ 9 ರನ್​ಗೆ ಆರಂಭಿಕರಿಬ್ಬರ ವಿಕೆಟ್​ ಕಳೆದುಕೊಂಡಿತು.

ಇದನ್ನೂ ಓದಿ T20 World Cup 2024: ಟಿ20 ವಿಶ್ವಕಪ್​ನಲ್ಲಿ ನೂತನ ದಾಖಲೆ ಸೃಷ್ಟಿಸಿದ ಲಂಕಾ-ದಕ್ಷಿಣ ಆಫ್ರಿಕಾ ಪಂದ್ಯ

ಅರ್ಶದೀಪ್​ ಬಳಿಕ ಜಸ್​ಪ್ರೀತ್​ ಬುಮ್ರಾ ಮತ್ತು ಹಾರ್ದಿಕ್​ ಪಾಂಡ್ಯ ಕೂಡ ಜಿದ್ದಿಗೆ ಬಿದ್ದವರಂತೆ ಬೌಲಿಂಗ್​ ದಾಳಿ ನಡೆಸಿ ವಿಕೆಟ್​ ಬೇಟೆಯಾಡಿದರು. ಮೊದಲೇ ಆರಂಭಿಕ ಆಘಾತ ಕಂಡಿದ್ದ ಐರ್ಲೆಂಡ್​ಗೆ ಚೇತರಿಸಿಕೊಳ್ಳಲು ಸಮಯವೇ ಸಿಗಲಿಲ್ಲ. ಬಡಬಡನೆ ವಿಕೆಟ್​ ಕಳೆದುಕೊಂಡು ಪೆವಿಯನ್​ ಕಡೆಗೆ ಹೆಜ್ಜೆ ಹಾಕಿದರು. 10ನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ ನಡೆಸಿದ ಜೋಶುವಾ ಲಿಟಲ್(14) ಮತ್ತು 7ನೇ ಕ್ರಮಾಂಕದ ಬ್ಯಾಟರ್​ ಗರೆಥ್ ಡೆಲಾನಿ ಕೊನೆಯ ಹಂತದಲ್ಲಿ ಶಕ್ತಿ ಮೀರಿ ನಡೆಸಿದ ಹೋರಾಟದ ಫಲದಿಂದ ತಂಡ 100ರ ಸನಿಹದ ಮೊತ್ತ ಕಲೆಹಾಕಿತು.

ಪಾಂಡ್ಯ ಬೌಲಿಂಗ್​ ಕಮಾಲ್​

ಆರಂಭಿಕ ಮೂರು ಓವರ್​ಗಳಲ್ಲಿ ಉತ್ತಮ ಬೌಲಿಂಗ್​ ದಾಳಿ ನಡೆಸಿ 2 ವಿಕೆಟ್​ ಕಿತ್ತಿದ್ದ ಅರ್ಶದೀಪ್​ ಸಿಂಗ್​ ತಮ್ಮ ಅಂತಿಮ ಓವರ್​ನಲ್ಲಿ 2 ಬೌಂಡರಿ ಮತ್ತು 1 ಸಿಕ್ಸರ್​ ಬಿಟ್ಟುಕೊಟ್ಟು 15 ರನ್​ ಹೊಡೆಸಿಕೊಂಡರು. ಗರೆಥ್ ಡೆಲಾನಿ 14 ಎಸೆತಗಳಿಂದ ತಲಾ 2 ಸಿಕ್ಸರ್​ ಮತ್ತು ಬೌಂಡರಿ ಬಾರಿಸಿ 26 ರನ್​ ಗಳಿಸಿ ರನೌಟ್​ ಆದರು. ಇವರ ವಿಕೆಟ್​ ಪತನದೊಂದಿಗೆ ಐರ್ಲೆಂಡ್​ ಬ್ಯಾಟಿಂಗ್​ ಇನಿಂಗ್ಸ್​ ಕೂಡ ಮುಕ್ತಾಯ ಕಂಡಿತು. ಭಾರತ ಪರ ಉಪನಾಯಕ ಹಾರ್ದಿಕ್​ ಪಾಂಡ್ಯ 4 ಓವರ್​ ಎಸೆದು 1 ಮೇಡನ್​ ಸಹಿತ 27 ರನ್​ ವೆಚ್ಚದಲ್ಲಿ 3 ವಿಕೆಟ್​ ಉರುಳಿಸಿದರು. ಉಳಿದಂತೆ ಬುಮ್ರಾ ಮತ್ತು ಅರ್ಶ್​ದೀಪ್​ ತಲಾ 2, ಸಿರಾಜ್​ ಮತ್ತು ಅಕ್ಷರ್​ ತಲಾ 1 ವಿಕೆಟ್​ ಪಡೆದರು. ಆದರೆ ಅನುಭವಿ ಸ್ಪಿನ್ನರ್​ ಜಡೇಜಾ ವಿಕೆಟ್​ ಲೆಸ್​ ಎನಿಸಿಕೊಂಡರು. ಅಲ್ಲದೆ ಒಂದು ಕ್ಯಾಚ್​ ಕೂಡ ಕೈಚೆಲ್ಲಿದರು. ಅಕ್ಷರ್​ ಪಟೇಲ್​ ಅವರು ಒಂದು ವಿಕೆಟ್​ ಕೀಳುವ ಮೂಲಕ ಟಿ20 ಕ್ರಿಕೆಟ್​ನಲ್ಲಿ 50 ವಿಕೆಟ್​ ಪೂರ್ತಿಗೊಳಿಸಿದ ಮೈಲುಗಲ್ಲು ತಲುಪಿದರು.

Continue Reading

ಕ್ರೀಡೆ

India vs Ireland: ಟಾಸ್​ ಗೆದ್ದು ಫೀಲ್ಡಿಂಗ್​ ಆಯ್ದುಕೊಂಡ ಭಾರತ; ರೋಹಿತ್​ ಜತೆ ಕೊಹ್ಲಿ ಇನಿಂಗ್ಸ್​ ಆರಂಭ

India vs Ireland: ನಸೌ ಕ್ರಿಕೆಟ್​ ಸ್ಟೇಡಿಯಂನ ಪಿಚ್ ಕೂಡ ಅತ್ಯಂತ ಆಘಾತಕಾರಿಯಾಗಿ ವರ್ತಿಸುತ್ತಿದೆ. ಬ್ಯಾಟರ್​ಗಳು ಇಲ್ಲಿ ರನ್​ಗಳಿಸಲು ಪರದಾಡಿದ್ದಾರೆ. ಇದೇ ಕಾರಣಕ್ಕೆ ಪಿಚ್​ ವರ್ತನೆಯನ್ನು ಅರ್ಥ ಮಾಡಿಕೊಳ್ಳುವ ಸಲುವಾಗಿಯೇ ರೋಹಿತ್​ ಟಾಸ್​ ಗೆದ್ದು ಫೀಲ್ಡಿಂಗ್​ ಆಯ್ದುಕೊಂಡಂತಿದೆ.

VISTARANEWS.COM


on

India vs Ireland
Koo

ನ್ಯೂಯಾರ್ಕ್​: ಐರ್ಲೆಂಡ್(India vs Ireland)​ ವಿರುದ್ಧದ ಟಿ20 ವಿಶ್ವಕಪ್​ ಪಂದ್ಯದಲ್ಲಿ ಟೀಮ್​ ಇಂಡಿಯಾ ನಾಯಕ ರೋಹಿತ್​ ಶರ್ಮಾ(Rohit Sharma) ಅವರು ಟಾಸ್​ ಗೆದ್ದು ಫೀಲ್ಡಿಂಗ್​ ಆಯ್ದುಕೊಂಡಿದ್ದಾರೆ. ನಿರೀಕ್ಷೆಯಂತೆ ರೋಹಿತ್​ ಜತೆ ವಿರಾಟ್​ ಕೊಹ್ಲಿ(Virat Kohli) ಅವರು ಭಾರತದ ಇನಿಂಗ್ಸ್​ ಆರಂಭಿಸಲಿದ್ದಾರೆ. ಎಡಗೈ ಬ್ಯಾಟರ್​ ಯಶಸ್ವಿ ಜೈಸ್ವಾಲ್​ಗೆ ಅವಕಾಶ ಸಿಗಲಿಲ್ಲ.

ಭಾರತ ಈ ಪಂದ್ಯಕ್ಕೆ ಅಚ್ಚರಿಯ ತಂಡವನ್ನು ಕಣಕ್ಕಿಳಿಸಿದೆ. ನಿರೀಕ್ಷೆಯೇ ಮಾಡದ ಶಿವಂ ದುಬೆ, ಅಕ್ಷರ್​ ಪಟೇಲ್​ ಮತ್ತು ಅರ್ಶದೀಪ್​ ಸಿಂಗ್​ ಅವರು ಪ್ಲೇಯಿಂಗ್​ ಇಲೆವೆನ್​ನಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಅನುಭವಿ ಸ್ಪಿನ್ನರ್​ಗಳಾದ ಕುಲ್​ದೀಪ್​ ಯಾದವ್​ ಮತ್ತು ಯಜುವೇಂದ್ರ ಚಹಲ್​ ಬೆಂಚ್​ ಕಾಯಬೇಕಿದೆ. ರಿಷಭ್​ ಪಂತ್​ ವಿಕೆಟ್​ ಕೀಪರ್​ ಆಗಿದ್ದಾರೆ. ಅಲ್ಲದೆ ಮೂರನೇ ಕ್ರಮಾಂಕದಲ್ಲಿ ಆಡುವ ಸಾಧ್ಯತೆ ಇದೆ. ಒಟ್ಟು 4 ವೇಗಿಗಳು ತಂಡದಲ್ಲಿ ಕಾಣಿಸಿಕೊಂಡಿದ್ದಾರೆ. ದುಬೆ ಕೂಡ ಬೌಲಿಂಗ್​ ಮಾಡಿದರೆ 5 ಮಂದಿ ವೇಗಿಗಳು ಆಡಿದಂತಾಗುತ್ತದೆ.

ನಸೌ ಕ್ರಿಕೆಟ್​ ಸ್ಟೇಡಿಯಂನ ಪಿಚ್ ಕೂಡ ಅತ್ಯಂತ ಆಘಾತಕಾರಿಯಾಗಿ ವರ್ತಿಸುತ್ತಿದೆ. ಬ್ಯಾಟರ್​ಗಳು ಇಲ್ಲಿ ರನ್​ಗಳಿಸಲು ಪರದಾಡಿದ್ದಾರೆ. ಇದೇ ಕಾರಣಕ್ಕೆ ಪಿಚ್​ ವರ್ತನೆಯನ್ನು ಅರ್ಥ ಮಾಡಿಕೊಳ್ಳುವ ಸಲುವಾಗಿಯೇ ರೋಹಿತ್​ ಟಾಸ್​ ಗೆದ್ದು ಫೀಲ್ಡಿಂಗ್​ ಆಯ್ದುಕೊಂಡಂತಿದೆ.

ಟಿ20 ಮುಖಾಮುಖಿ


ಉಭಯ ತಂಡಗಳು ಇದುವೆರೆಗೆ ಟಿ20 ಕ್ರಿಕೆಟ್​ನಲ್ಲಿ ಒಟ್ಟು 7 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಎಲ್ಲ ಪಂದ್ಯಗಳನ್ನು ಭಾರತ ಗೆದ್ದಿದೆ. ಇದರಲ್ಲೊಂದು ಟಿ20 ವಿಶ್ವಕಪ್​ ಪಂದ್ಯವಾಗಿದೆ. ಈ ಲೆಕ್ಕಾಚಾರದಲ್ಲಿ ಭಾರತ ಬಲಿಷ್ಠವಾಗಿ ಗೋಚರಿಸಿದರೂ ಕೂಡ ಐರ್ಲೆಂಡ್​ ಸವಾಲನ್ನು ಹಗುರವಾಗಿ ಕಾಣುವಂತಿಲ್ಲ. ಏಕೆಂದರೆ ಬಲಿಷ್ಠ ತಂಡಗಳು ಕೂಡ ದುರ್ಬಲ ತಂಡದ ವಿರುದ್ಧ ಸೋತ ಹಲವು ನಿದರ್ಶನಗಳಿವೆ. ಹೀಗಾಗಿ ಪ್ರತಿ ಹೆಚ್ಚುಗೂ ಎಚ್ಚರಿಕೆಯಿಂದ ಆಡಬೇಕು.

ಇದನ್ನು ಓದಿ Rahul Dravid: ಸುದ್ದಿಗೋಷ್ಠಿಯಲ್ಲಿ ಉರ್ದು ಮಾತನಾಡಿದ ರಾಹುಲ್​ ದ್ರಾವಿಡ್​; ವಿಡಿಯೊ ವೈರಲ್​

ಪಂದ್ಯದ ಪ್ರಸಾರ


ನ್ಯೂಯಾರ್ಕ್​ನಲ್ಲಿ ಈ ಪಂದ್ಯ ಹಗಲು ನಡೆದರೂ ಕೂಡ ಭಾರತದಲ್ಲಿ ರಾತ್ರಿ 8 ಗಂಟೆಗೆ ಪಂದ್ಯ ಪ್ರಸಾರಗೊಳ್ಳಲಿದೆ. ಸ್ಟಾರ್​ ಸ್ಪೋರ್ಟ್ಸ್​ ಮತ್ತು ಡಿಡಿ ದೂರದರ್ಶನದಲ್ಲಿ ಪಂದ್ಯಗಳು ನೇರಪ್ರಸಾರ ಇರಲಿದೆ. ಪಂದ್ಯದ ಲೈವ್ ಸ್ಟ್ರೀಮಿಂಗ್ ಡಿಸ್ನಿ + ಹಾಟ್‌ಸ್ಟಾರ್‌ ಮೊಬೈಲ್​ನಲ್ಲಿ ಉಚಿತವಾಗಿ ವೀಕ್ಷಿಸಬಹುದು.

ಇತ್ತಂಡಗಳ ಆಡುವ ಬಳಗ


ಭಾರತ: ರೋಹಿತ್ ಶರ್ಮಾ(ನಾಯಕ), ವಿರಾಟ್ ಕೊಹ್ಲಿ, ರಿಷಭ್​ ಪಂತ್(ವಿಕೆಟ್​ ಕೀಪರ್​), ಸೂರ್ಯಕುಮಾರ್ ಯಾದವ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್.

ಐರ್ಲೆಂಡ್​: ಪಾಲ್ ಸ್ಟಿರ್ಲಿಂಗ್(ನಾಯಕ), ಆಂಡ್ರ್ಯೂ ಬಾಲ್ಬಿರ್ನಿ, ಲೋರ್ಕನ್ ಟಕರ್(ವಿಕೆಟ್​ ಕೀಪರ್​), ಹ್ಯಾರಿ ಟೆಕ್ಟರ್, ಕರ್ಟಿಸ್ ಕ್ಯಾಂಫರ್, ಜಾರ್ಜ್ ಡಾಕ್ರೆಲ್, ಗರೆಥ್ ಡೆಲಾನಿ, ಮಾರ್ಕ್ ಅಡೇರ್, ಬ್ಯಾರಿ ಮೆಕಾರ್ಥಿ, ಜೋಶುವಾ ಲಿಟಲ್, ಬೆಂಜಮಿನ್ ವೈಟ್.

Continue Reading
Advertisement
Rishta Laboni Shimana passes away
ಸಿನಿಮಾ9 mins ago

Rishta Laboni Shimana: ಚಿಕಿತ್ಸೆ ಫಲಕಾರಿಯಾಗದೆ ಖ್ಯಾತ ನಟಿ ರಿಶ್ತಾ ನಿಧನ

Bhavani Revanna
ಪ್ರಮುಖ ಸುದ್ದಿ23 mins ago

Bhavani Revanna: ಕಿಡ್ನಾಪ್‌ ಪ್ರಕರಣದಲ್ಲಿ ಭವಾನಿ ರೇವಣ್ಣರನ್ನು ಮರೆತೇ ಬಿಟ್ಟ ಎಸ್‌ಐಟಿ!

Aishwarya Arjun reception dates out
ಟಾಲಿವುಡ್30 mins ago

Aishwarya Arjun: ಅರ್ಜುನ್ ಸರ್ಜಾ ಪುತ್ರಿ ವಿವಾಹ; ಅದ್ಧೂರಿಯಾಗಿ ನಡೆಯಲಿದೆ ಆರತಕ್ಷತೆ ಕಾರ್ಯಕ್ರಮ

Indonesia Open
ಕ್ರೀಡೆ31 mins ago

Indonesia Open: ಮತ್ತೆ ಮುಂದುವರಿದ ಸಿಂಧು ವೈಫಲ್ಯ; ಇಂಡೋನೇಷ್ಯಾ ಟೂರ್ನಿಯ ಮೊದಲ ಸುತ್ತಿನಲ್ಲೇ ಸೋಲು

CBSE
ದೇಶ33 mins ago

CBSE: ಪ್ರಾಯೋಗಿಕ ಪರೀಕ್ಷೆಗಳಲ್ಲಿ ಬೇಕಾಬಿಟ್ಟಿ ಅಂಕ!ಖಾಸಗಿ ಶಾಲೆಗಳಿಗೆ ಸಿಬಿಎಸ್‌ಇ ಖಡಕ್‌ ವಾರ್ನಿಂಗ್

Uddhav Thackeray
Lok Sabha Election 202438 mins ago

Uddhav Thackeray: ಉದ್ಧವ್ ಠಾಕ್ರೆ ಎನ್‌ಡಿಎಗೆ ವಾಪಸ್? ಇಂಡಿ ಒಕ್ಕೂಟದ ಸಭೆಗೆ ಹೋಗದ ಶಿವಸೇನೆ ನಾಯಕ!

T20 World Cup 2024
ಕ್ರೀಡೆ45 mins ago

T20 World Cup 2024: ಒಮಾನ್​ ವಿರುದ್ಧ ಪ್ರಯಾಸದ ಗೆಲುವು ಸಾಧಿಸಿದ ಆಸ್ಟ್ರೇಲಿಯಾ

Postal Ballets
ದೇಶ1 hour ago

Postal Ballots: ಕೈ ಹಿಡಿದ ಅಂಚೆ ಮತಗಳು..ಕೊನೆಯ ಕ್ಷಣದಲ್ಲಿ ಸೋತು ಗೆದ್ದ ಅಭ್ಯರ್ಥಿಗಳಿವರು

Megha Shetty Pose With R Madhavan
ಕಿರುತೆರೆ1 hour ago

Megha Shetty: ನಟ ಮಾಧವನ್​ ಭೇಟಿ ಮಾಡಿ ಖುಷಿ ಹಂಚಿಕೊಂಡ ಮೇಘಾ ಶೆಟ್ಟಿ!

valmiki corporation scam nagendra siddaramaiah
ಕರ್ನಾಟಕ2 hours ago

Valmiki Corporation Scam: ವಾಲ್ಮೀಕಿ ನಿಗಮ ಹಗರಣ; ಇಂದೇ ಸಚಿವ ನಾಗೇಂದ್ರ ರಾಜೀನಾಮೆ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election Result 2024 Live
ದೇಶ2 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ3 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ3 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ4 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು5 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ7 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ2 weeks ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

ಟ್ರೆಂಡಿಂಗ್‌