Hanuman Chalisa: Significance and importance Of Reciting Hanuman Chalisa in kannada Hanuman Chalisa : ಏನಿದು ಹನುಮಾನ್‌ ಚಾಲೀಸಾ? ಇದರ ಮಹತ್ವವೇನು? - Vistara News

ಧಾರ್ಮಿಕ

Hanuman Chalisa : ಏನಿದು ಹನುಮಾನ್‌ ಚಾಲೀಸಾ? ಇದರ ಮಹತ್ವವೇನು?

ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ (congress manifesto ) ಬಜರಂಗದಳ ನಿಷೇಧದ ಪ್ರಸ್ತಾಪವಿರುವುದರಿಂದ ಬಜರಂಗ ದಳವು ಪ್ರತಿಭಟನೆಯಾಗಿ ಹನುಮಾನ್‌ ಚಾಲೀಸಾ (Hanuman Chalisa) ಪಠಿಸಲು ಕರೆ ನೀಡಿದೆ. ಹನುಮಾನ್‌ ಚಾಲೀಸಾದ ಮಹತ್ವವನ್ನು ಇಲ್ಲಿ ಸಂಕ್ಷಿಪ್ತವಾಗಿ ತಿಳಿಸಿಕೊಡಲಾಗಿದೆ.

VISTARANEWS.COM


on

Hanuman Chalisa: Significance and importance Of Reciting Hanuman Chalisa in kannada
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ಸಮಾಜದಲ್ಲಿ ದ್ವೇಷವನ್ನು ಬಿತ್ತಿ ವಿಭಜನೆಗೆ ಕಾರಣವಾಗುವ ಯಾವುದೇ ಶಕ್ತಿಗಳನ್ನು ಸಹಿಸುವುದಿಲ್ಲ. ಬಜರಂಗ ದಳ, ಪಿಎಫ್‌ಐ ಸೇರಿದಂತೆ ಯಾವುದೇ ಸಂಘಟನೆಗಳಾದರೂ ನಿಷೇಧವೂ (Bajaranga dal ban) ಸೇರಿದಂತೆ ಬಲವಾದ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ‌ (Congress Manifesto) ಹೇಳಿದೆ. ಈ ಭರವಸೆಯ ವಿರುದ್ಧ ಹಿಂದೂ ಸಂಘಟನೆಗಳು ಸಿಡಿದೆದ್ದಿದ್ದು, ಪ್ರತಿಭಟನೆ ನಡೆಸುತ್ತಿವೆ. ಬಜರಂಗ ದಳ ಸಂಘಟನೆಯು ಮೇ 4ರಂದು ರಾಜ್ಯಾದ್ಯಂತ ಹನುಮಾನ್‌ ಚಾಲೀಸಾ (Hanuman Chalisa) ಪಠಣವನ್ನು ಆಯೋಜಿಸಿದೆ.

ಹನುಮಾನ್‌ ಚಾಲೀಸಾ ಎಂದರೆ ಏನು? ಇದಕ್ಕಿರುವ ಮಹತ್ವವೇನು ಎಂಬುದನ್ನು ಇಲ್ಲಿ ತಿಳಿಸಲಾಗಿದೆ.

ಏನಿದು ಹನುಮಾನ್‌ ಚಾಲೀಸಾ?

ಶ್ರೀ ರಾಮಚಂದ್ರನ ಪರಮ ಭಕ್ತ ಹನುಮಂತನನ್ನು ಸ್ತುತಿಸುವ ನಲವತ್ತು ಪದ್ಯ ಚರಣಗಳನ್ನು ʻಹನುಮಾನ್‌ ಚಾಲೀಸಾʼ ಎಂದು ಕರೆಯಲಾಗುತ್ತದೆ. ಶ್ರೀ ರಾಮಚ೦ದ್ರನ ಪರಮಭಕ್ತರಾಗಿದ್ದ ಸಂತಪಟ್ಟ ಪಡೆದ ಕವಿ ಗೋಸ್ವಾಮಿ ತುಳಸೀದಾಸರು ಹನುಮಾನ್ ಚಾಲೀಸಾ ರಚಿಸಿದವರು. ಹನುಮಾನ್ ಚಾಲೀಸಾದಲ್ಲಿ ನಲವತ್ತು ಪದ್ಯ ಚರಣಗಳಿರುವುದರಿಂದ ಈ ಕಾರಣಕ್ಕಾಗಿಯೇ ಇದರ ಹೆಸರು “ಚಾಲೀಸಾ” ಎ೦ದಾಗಿದೆ.

ಹನುಮಾನ್ ಚಾಲೀಸಾಗೆ ದೈವತ್ವವು ತಳುಕುಹಾಕಿಕೊ೦ಡಿದೆ. ಇದರ ಪಠಣದಿಂದ ಮನುಷ್ಯನು ಎಲ್ಲ ರೀತಿಯ ಸಂಕಷ್ಟಗಳಿಂದ ಪಾರಾಗಬಹುದು, ಅಧೈರ್ಯವನ್ನು ಹೋಗಲಾಡಿಸಿಕೊಂಡು, ದುಃಖಗಳಿಂದ ಮುಕ್ತಿ ಪಡೆಯಬಹುದು ಎಂದು ನಂಬಲಾಗಿದೆ. ಮುಖ್ಯವಾಗಿ ಶನಿಕಾಟ ಹೊಂದಿರುವವರು ರಕ್ಷಣೆಯಾಗಿ ಹನುಮಾನ್‌ ಚಾಲೀಸಾ ಓದುತ್ತಾರೆ.

ಇದನ್ನು ಸಂತ ತುಳಸೀದಾಸರು ರಚಿಸಿದ ಸಂದರ್ಭದ ಕುರಿತು ಅನೇಕ ಕತೆಗಳಿವೆ. ವಾಲ್ಮೀಕಿ ಮಹರ್ಷಿಯ ಅವತಾರವೆಂದು ತುಳಸೀದಾಸರನ್ನು ಬಣ್ಣಿಸಲಾಗುತ್ತಿದ್ದು, ಹರಿದ್ವಾರದಲ್ಲಿ ಕುಂಭಮೇಳ ನಡೆಯುವ ಸಂದರ್ಭದಲ್ಲಿ ತುಳಸಿದಾಸರು ಸಮಾಧಿ ಸ್ಥಿತಿಯಲ್ಲಿ ಹನುಮಾನ್ ಚಾಲೀಸವನ್ನು ರಚಿಸಿದರೆಂದು ಹೇಳಲಾಗಿದೆ.

ಇನ್ನೊಂದು ಕತೆಯ ಪ್ರಕಾರ ತಮ್ಮ ಮಾತು ಕೇಳದ ತುಳಸೀದಾಸರನ್ನು ದೊರೆ ಅಕ್ಬರ್‌ ಬಂಧಿಸಿಟ್ಟಿದ್ದ. ಈ ಸಂದರ್ಭದಲ್ಲಿ ಅವರು ಹನುಮಾನ್‌ ಚಾಲೀಸಾ ರಚಿಸಿದರು. ಇದರ ರಚನೆ ಪೂರ್ಣವಾಗುತ್ತಿದ್ದಂತೆಯೇ ವಾನರ ಸೇನೆ ಅಕ್ಬರನ ಅರಮನೆಗೆ ದಾಳಿ ನಡೆಸಿತ್ತು. ಇದರಿಂದ ಹೆದರಿದ ಅಕ್ಬರ್‌ ತುಳಸೀದಾಸರನ್ನು ಬಿಡುಗಡೆ ಮಾಡಿ ಕ್ಷಮೆಯಾಚಿಸಿದ.

ಹನುಮನ ವಿಚಾರಧಾರೆಯ ಅರಿವು! ಈ ಉಪನ್ಯಾಸವನ್ನು ಇಲ್ಲಿ ಕೇಳಿ

ಪಠಣದಿಂದ ಪ್ರಯೋಜನವೇನು?

ತುಳಸಿದಾಸರು ಹೇಳಿರುವಂತೆ ಹನುಮಾನ್ ಚಾಲೀಸಾವನ್ನು ಪಠಿಸುವವರೆಲ್ಲರಿಗೂ ಹನುಮಂತನ ಅನಂತ ಅನುಗ್ರಹ ಪ್ರಾಪ್ತಿಯಾಗುತ್ತದೆ. ದಿವ್ಯವಾದ ಹನುಮಾನ್ ಚಾಲೀಸಾವು ಬಹಳ ಶಕ್ತಿಶಾಲಿಯಾಗಿದೆ. ಇದರ ಪಠಣದಿಂದ ನಿಮ್ಮೆಲ್ಲ ಮನೋಕಾಮನೆಗಳು ಈಡೇರುತ್ತವೆ. ಶನಿ ಮತ್ತು ಮಂಗಳಗ್ರಹದ ಕ್ಲೇಶವಿದ್ದಾಗ ಹನುಮಾನ್ ಚಾಲೀಸವನ್ನು ಪಠಿಸುವುದರಿಂದ ಧನಾತ್ಮಕ ಪರಿಣಾಮ ಉಂಟಾಗುತ್ತದೆ, ನಿರ್ದಿಷ್ಟ ಶ್ಲೋಕಗಳ ಪಠಣದಿಂದ ನಿರ್ದಿಷ್ಟ ಫಲಿತಾಂಶಗಳು ದೊರೆಯುತ್ತವೆ.

ಭೀತಿಯನ್ನು ಎದುರಿಸುವವರು ಹನುಮಾನ್ ಚಾಲೀಸಾವನ್ನು ಪಠಿಸುವ ಮೂಲಕ ಋಣಾತ್ಮಕ ಶಕ್ತಿಗಳನ್ನು ದೂರ ಮಾಡಿಕೊಳ್ಳಬಹುದು. ಇದರಿಂದ ರಾತ್ರಿ ಸುಖ ನಿದ್ರೆ ಸಾಧ್ಯವಾಗುತ್ತದೆ. ನಿದ್ರೆಯಲ್ಲಿ ಹೆದರುವ ಮಕ್ಕಳು ಕೂಡ ಹನುಮಾನ್ ಚಾಲೀಸಾವನ್ನು ತಪ್ಪದೇ ಓದಬೇಕು. ವಿಶೇಷವಾಗಿ ಹನುಮಾನ್ ಚಾಲೀಸಾವನ್ನು ಪ್ರತಿ ರಾತ್ರಿ ಪಠಿಸುವ ಮೂಲಕ ಜೀವನದಲ್ಲಿ ಎದುರಾಗುವ ಪೀಡೆಗಳಿಂದ ಮುಕ್ತಿ ಪಡೆಯಬಹುದು ಎಂದು ಹೇಳಲಾಗಿದೆ.

ಯಾವಾಗ ಓದಬೇಕು?

ಶಾಸ್ತ್ರ ಪುರಾಣಗಳ ಪ್ರಕಾರ ಹನುಮಾನ್ ಚಾಲೀಸಾವನ್ನು ದಿನಕ್ಕೆ 100 ಬಾರಿ ಪಠಿಸಬೇಕು. ನಿಮ್ಮ ಬಳಿ ಅಷ್ಟು ಬಾರಿ ಪಠಿಸಲು ಸಮಯವಿಲ್ಲದೇ ಇದ್ದರೆ ಕನಿಷ್ಠ 7, 11 ಅಥವಾ 21 ಬಾರಿ ಪಠಿಸಿಸಬಹುದು. ಹನುಮಾನ್‌ ಚಾಲೀಸಾ ಪಠಿಸುವ ಮೊದಲು ಗಣಪತಿಯನ್ನು ಮತ್ತು ಶ್ರೀ ರಾಮನನ್ನು ನೆನೆಯಲೇ ಬೇಕು.

ಬೆಳಗ್ಗೆ ಮತ್ತು ಸಂಜೆ ದೇವರ ಭಜನೆ ಮಾಡುವಂತೆ ಹನುಮಾನ್‌ ಚಾಲೀಸಾವನ್ನು ಪಠಿಸಬಹುದು. ಕೆಲವರು ಮಲಗುವ ಮೊದಲೂ ಪಠಿಸುವುದುಂಟು. ಆದರೆ ಬರೀ ನೆಲದ ಮೇಲೆ, ಹಾಸಿಗೆಯ ಮೇಲೆ ಕುಳಿತು ಚಾಲೀಸಾ ಪಠಿಸಬಾರದೆಂಬ ನಿಯಮವಿದೆ. ಕೆಂಪು ಬಟ್ಟೆಯ ಮೇಲೆ ಕುಳಿತು ಚಾಲೀಸಾ ಪಠಿಸುವುದು ಹೆಚ್ಚು ಶ್ರೇಯಸ್ಕರ.

ವಿಶೇಷವಾಗಿ ಶನಿಗ್ರಹದ ಪ್ರಭಾವದಿಂದ ಉಪಟಳ ಇರುವ ವ್ಯಕ್ತಿಗಳು ಪ್ರತಿ ಶನಿವಾರ ರಾತ್ರಿ ಎಂಟು ಬಾರಿ ಪಠಿಸಿ ಮಲಗುವ ಮೂಲಕ ವಿಪತ್ತಿನಿಂದ ಪಾರಾಗಬಹುದು ಎಂದು ಜ್ಯೋತಿಷ್ಯ ಶಾಸ್ತ್ರ ಹೇಳಿದೆ.

Indian Railway sends notice to lord Hanuman Chalisa: Significance and importance Of Reciting Hanuman Chalisa in kannada Hanuman for land encroachment

ಹನುಮಾನ್ ಚಾಲೀಸಾ ಹೀಗಿದೆ…

ದೋಹಾ
ಶ್ರೀ ಗುರು ಚರಣ ಸರೋಜ ರಜ ನಿಜಮನ ಮುಕುರ ಸುಧಾರಿ ।
ವರಣೌ ರಘುವರ ವಿಮಲಯಶ ಜೋ ದಾಯಕ ಫಲಚಾರಿ ॥
ಬುದ್ಧಿಹೀನ ತನುಜಾನಿಕೈ ಸುಮಿರೌ ಪವನ ಕುಮಾರ ।
ಬಲ ಬುದ್ಧಿ ವಿದ್ಯಾ ದೇಹು ಮೋಹಿ ಹರಹು ಕಲೇಶ ವಿಕಾರ ॥

ಧ್ಯಾನಂ
ಗೋಷ್ಪದೀಕೃತ ವಾರಾಶಿಂ ಮಶಕೀಕೃತ ರಾಕ್ಷಸಮ್ ।
ರಾಮಾಯಣ ಮಹಾಮಾಲಾ ರತ್ನಂ ವಂದೇ-(ಅ)ನಿಲಾತ್ಮಜಮ್ ॥
ಯತ್ರ ಯತ್ರ ರಘುನಾಥ ಕೀರ್ತನಂ ತತ್ರ ತತ್ರ ಕೃತಮಸ್ತಕಾಂಜಲಿಮ್ ।
ಭಾಷ್ಪವಾರಿ ಪರಿಪೂರ್ಣ ಲೋಚನಂ ಮಾರುತಿಂ ನಮತ ರಾಕ್ಷಸಾಂತಕಮ್ ॥

ಚೌಪಾಈ
ಜಯ ಹನುಮಾನ ಜ್ಞಾನ ಗುಣ ಸಾಗರ ।
ಜಯ ಕಪೀಶ ತಿಹು ಲೋಕ ಉಜಾಗರ ॥ 1 ॥

ರಾಮದೂತ ಅತುಲಿತ ಬಲಧಾಮಾ ।
ಅಂಜನಿ ಪುತ್ರ ಪವನಸುತ ನಾಮಾ ॥ 2 ॥

ಮಹಾವೀರ ವಿಕ್ರಮ ಬಜರಂಗೀ ।
ಕುಮತಿ ನಿವಾರ ಸುಮತಿ ಕೇ ಸಂಗೀ ॥3 ॥

ಕಂಚನ ವರಣ ವಿರಾಜ ಸುವೇಶಾ ।
ಕಾನನ ಕುಂಡಲ ಕುಂಚಿತ ಕೇಶಾ ॥ 4 ॥

ಹಾಥವಜ್ರ ಔ ಧ್ವಜಾ ವಿರಾಜೈ ।
ಕಾಂಥೇ ಮೂಂಜ ಜನೇವೂ ಸಾಜೈ ॥ 5॥

ಶಂಕರ ಸುವನ ಕೇಸರೀ ನಂದನ ।
ತೇಜ ಪ್ರತಾಪ ಮಹಾಜಗ ವಂದನ ॥ 6 ॥

ವಿದ್ಯಾವಾನ ಗುಣೀ ಅತಿ ಚಾತುರ ।
ರಾಮ ಕಾಜ ಕರಿವೇ ಕೋ ಆತುರ ॥ 7 ॥

ಪ್ರಭು ಚರಿತ್ರ ಸುನ್ ಸುನ್ ಕೋ ರಸಿಯಾ ।
ರಾಮಲಖನ ಸೀತಾ ಮನ ಬಸಿಯಾ ॥ 8॥

ಸೂಕ್ಷ್ಮ ರೂಪಧರಿ ಸಿಯಹಿ ದಿಖಾವಾ ।
ವಿಕಟ ರೂಪಧರಿ ಲಂಕ ಜಲಾವಾ ॥ 9 ॥

ಭೀಮ ರೂಪಧರಿ ಅಸುರ ಸಂಹಾರೇ ।
ರಾಮಚಂದ್ರ ಕೇ ಕಾಜ ಸಂವಾರೇ ॥ 10 ॥

ಲಾಯ ಸಂಜೀವನ ಲಖನ ಜಿಯಾಯೇ ।
ಶ್ರೀ ರಘುವೀರ ಹರಷಿ ಉರಲಾಯೇ ॥ 11 ॥

ರಘುಪತಿ ಕೀನ್ಹೀ ಬಹುತ ಬಡಾಯೀ ।
ತುಮ ಮಮ ಪ್ರಿಯ ಭರತ ಸಮ ಭಾಯೀ ॥ 12 ॥

ಸಹಸ್ರ ವದನ ತುಮ್ಹರೋ ಯಶಗಾವೈ ।
ಅಸ ಕಹಿ ಶ್ರೀಪತಿ ಕಂಠ ಲಗಾವೈ ॥ 13 ॥

ಸನಕಾದಿಕ ಬ್ರಹ್ಮಾದಿ ಮುನೀಶಾ ।
ನಾರದ ಶಾರದ ಸಹಿತ ಅಹೀಶಾ ॥ 14 ॥

ಯಮ ಕುಬೇರ ದಿಗಪಾಲ ಜಹಾಂ ತೇ ।
ಕವಿ ಕೋವಿದ ಕಹಿ ಸಕೇ ಕಹಾಂ ತೇ ॥ 15 ॥

ತುಮ ಉಪಕಾರ ಸುಗ್ರೀವಹಿ ಕೀನ್ಹಾ ।
ರಾಮ ಮಿಲಾಯ ರಾಜಪದ ದೀನ್ಹಾ ॥ 16 ॥

ತುಮ್ಹರೋ ಮಂತ್ರ ವಿಭೀಷಣ ಮಾನಾ ।
ಲಂಕೇಶ್ವರ ಭಯೇ ಸಬ ಜಗ ಜಾನಾ ॥ 17 ॥

ಯುಗ ಸಹಸ್ರ ಯೋಜನ ಪರ ಭಾನೂ ।
ಲೀಲ್ಯೋ ತಾಹಿ ಮಧುರ ಫಲ ಜಾನೂ ॥ 18 ॥

ಪ್ರಭು ಮುದ್ರಿಕಾ ಮೇಲಿ ಮುಖ ಮಾಹೀ ।
ಜಲಧಿ ಲಾಂಘಿ ಗಯೇ ಅಚರಜ ನಾಹೀ ॥ 19 ॥

ದುರ್ಗಮ ಕಾಜ ಜಗತ ಕೇ ಜೇತೇ ।
ತುಮ್ಹರೇ ತೇತೇ || 20||

ರಾಮ ದುಆರೇ ತುಮ ರಖವಾರೇ ।
ಹೋತ ನ ಆಜ್ಞಾ ಬಿನು ಪೈಸಾರೇ ॥ 21 ॥

ಸಬ ಸುಖ ಲಹೈ ತುಮ್ಹಾರೀ ಶರಣಾ ।
ತುಮ ರಕ್ಷಕ ಕಾಹೂ ಕೋ ಡರ ನಾ ॥ 22 ॥

ಆಪನ ತೇಜ ಸಮ್ಹಾರೋ ಆಪೈ ।
ತೀನೋಂ ಲೋಕ ಹಾಂಕ ತೇ ಕಾಂಪೈ ॥ 23 ॥

ಭೂತ ಪಿಶಾಚ ನಿಕಟ ನಹಿ ಆವೈ ।
ಮಹವೀರ ಜಬ ನಾಮ ಸುನಾವೈ ॥ 24 ॥

ನಾಸೈ ರೋಗ ಹರೈ ಸಬ ಪೀರಾ ।
ಜಪತ ನಿರಂತರ ಹನುಮತ ವೀರಾ ॥ 25 ॥

ಸಂಕಟ ಸೇ ಹನುಮಾನ ಛುಡಾವೈ ।
ಮನ ಕ್ರಮ ವಚನ ಧ್ಯಾನ ಜೋ ಲಾವೈ ॥ 26 ॥

ಸಬ ಪರ ರಾಮ ತಪಸ್ವೀ ರಾಜಾ ।
ತಿನಕೇ ಕಾಜ ಸಕಲ ತುಮ ಸಾಜಾ ॥ 27 ॥

ಔರ ಮನೋರಧ ಜೋ ಕೋಯಿ ಲಾವೈ ।
ತಾಸು ಅಮಿತ ಜೀವನ ಫಲ ಪಾವೈ ॥ 28 ॥

ಚಾರೋ ಯುಗ ಪ್ರತಾಪ ತುಮ್ಹಾರಾ ।
ಹೈ ಪ್ರಸಿದ್ಧ ಜಗತ ಉಜಿಯಾರಾ ॥ 29 ॥

ಸಾಧು ಸಂತ ಕೇ ತುಮ ರಖವಾರೇ ।
ಅಸುರ ನಿಕಂದನ ರಾಮ ದುಲಾರೇ ॥ 30 ॥

ಅಷ್ಠಸಿದ್ಧಿ ನವ ನಿಧಿ ಕೇ ದಾತಾ ।
ಅಸ ವರ ದೀನ್ಹ ಜಾನಕೀ ಮಾತಾ ॥ 31 ॥

ರಾಮ ರಸಾಯನ ತುಮ್ಹಾರೇ ಪಾಸಾ ।
ಸದಾ ರಹೋ ರಘುಪತಿ ಕೇ ದಾಸಾ ॥ 32 ॥

ತುಮ್ಹರೇ ಭಜನ ರಾಮಕೋ ಪಾವೈ ।
ಜನ್ಮ ಜನ್ಮ ಕೇ ದುಖ ಬಿಸರಾವೈ ॥ 33 ॥

ಅಂತ ಕಾಲ ರಘುಪತಿ ಪುರಜಾಯೀ ।
ಜಹಾಂ ಜನ್ಮ ಹರಿಭಕ್ತ ಕಹಾಯೀ ॥ 34 ॥

ಔರ ದೇವತಾ ಚಿತ್ತ ನ ಧರಯೀ ।
ಹನುಮತ ಸೇಯಿ ಸರ್ವ ಸುಖ ಕರಯೀ ॥ 35 ॥

ಸಂಕಟ ಕ(ಹ)ಟೈ ಮಿಟೈ ಸಬ ಪೀರಾ ।
ಜೋ ಸುಮಿರೈ ಹನುಮತ ಬಲ ವೀರಾ ॥ 36 ॥

ಜೈ ಜೈ ಜೈ ಹನುಮಾನ ಗೋಸಾಯೀ ।
ಕೃಪಾ ಕರಹು ಗುರುದೇವ ಕೀ ನಾಯೀ ॥ 37 ॥

ಜೋ ಶತ ವಾರ ಪಾಠ ಕರ ಕೋಯೀ ।
ಛೂಟಹಿ ಬಂದಿ ಮಹಾ ಸುಖ ಹೋಯೀ ॥ 38 ॥

ಜೋ ಯಹ ಪಡೈ ಹನುಮಾನ ಚಾಲೀಸಾ ।
ಹೋಯ ಸಿದ್ಧಿ ಸಾಖೀ ಗೌರೀಶಾ ॥ 39 ॥

ತುಲಸೀದಾಸ ಸದಾ ಹರಿ ಚೇರಾ ।
ಕೀಜೈ ನಾಥ ಹೃದಯ ಮಹ ಡೇರಾ ॥ 40 ॥

ದೋಹಾ
ಪವನ ತನಯ ಸಂಕಟ ಹರಣ ಮಂಗಳ ಮೂರತಿ ರೂಪ್ ।
ರಾಮ ಲಖನ ಸೀತಾ ಸಹಿತ – ಹೃದಯ ಬಸಹು ಸುರಭೂಪ್ ॥
ಸಿಯಾವರ ರಾಮಚಂದ್ರಕೀ ಜೈ । ಪವನಸುತ ಹನುಮಾನಕೀ ಜೈ । ಬೋಲೋ ಭಾಯೀ ಸಬ ಸಂತನಕೀ ಜೈ ।

ಇದನ್ನೂ ಓದಿ: Prerane : ಹನುಮಂತನ ಆದರ್ಶ ಮತ್ತು ಅದರ ಫಲ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಶಿವಮೊಗ್ಗ

Shivamogga News: ವಿಜೃಂಭಣೆಯ ರಿಪ್ಪನ್‌ಪೇಟೆ ಶ್ರೀ ಸಿದ್ಧಿವಿನಾಯಕ ಸ್ವಾಮಿಯ ರಥೋತ್ಸವ

Shivamogga News: ರಿಪ್ಪನ್‌ಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಸಿದ್ಧಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವವು ಗುರುವಾರ ಅಪಾರ ಭಕ್ತರ ಮಧ್ಯೆ ವಿಜೃಂಭಣೆಯಿಂದ ಜರುಗಿತು.

VISTARANEWS.COM


on

Sri Siddhivinayaka Swami SrimanMaharathotsava in Ripponpet
Koo

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ಧ ಶ್ರೀ ಸಿದ್ಧಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವವು ಗುರುವಾರ ಅಪಾರ ಭಕ್ತರ ಮಧ್ಯೆ ವಿಜೃಂಭಣೆಯಿಂದ ಜರುಗಿತು. ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಶ್ರೀ ಆಭಿನವ ಚನ್ನಬಸವ ಸ್ವಾಮೀಜಿ ರಥೋತ್ಸವಕ್ಕೆ ಚಾಲನೆ ನೀಡಿ, ಈ ವರ್ಷ ನಾಡಿಗೆ ಸಮೃದ್ಧ ಮಳೆ-ಬೆಳೆಯಾಗಿ ರೈತರ ಬದುಕು ಹಸನಾಗಲೆಂದು ಮತ್ತು ಜಗತ್ತಿನಲ್ಲೆಡೆ ಶಾಂತಿ, ನೆಮ್ಮದಿಯನ್ನು ಕರುಣಿಸುವಂತಾಗಲಿ ಎಂದು ಸಿದ್ಧಿವಿನಾಯಕ ದೇವರಲ್ಲಿ ಶ್ರೀಗಳು ಪ್ರಾರ್ಥಿಸಿದರು.

ಇದನ್ನೂ ಓದಿ: IPL 2024 : ಐಪಿಎಲ್​ ಮಧ್ಯದಲ್ಲಿಯೇ ಕೆಕೆಆರ್​ ತಂಡ ತೊರೆದ ಆರಂಭಿಕ ಆಟಗಾರ

ಮನ್ಮಹಾರಥೋತ್ಸವದ ಅಂಗವಾಗಿ ದೇವಸ್ಥಾನದಲ್ಲಿ ಶಿವಮೊಗ್ಗದ ವಸಂತ ಭಟ್ ಮತ್ತು ಚಂದ್ರಶೇಖರ ಭಟ್ ಹಾಗೂ ಗುರುರಾಜ ಭಟ್ ಅವರ ನೇತೃತ್ವದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು. ಭಕ್ತಾಧಿಗಳು ಶ್ರದ್ಧಾ ಭಕ್ತಿಯಿಂದ ರಥವನ್ನು ಎಳೆದು ಇಷ್ಠಾರ್ಥ ಸಿದ್ಧಿಗಾಗಿ ಪ್ರಾರ್ಥಿಸಿದರು. ಭಕ್ತರಿಗೆ ಉಚಿತವಾಗಿ ಕಬ್ಬಿನ ಹಾಲು ಮತ್ತು ಐಸ್‌ಕ್ರೀಮ್, ಕುಡಿಯುವ ನೀರಿನ ವ್ಯವಸ್ಥೆಯನ್ನು ವಿವಿಧ ಸಂಘಟನೆಗಳಿಂದ ಆಯೋಜಿಸಲಾಗಿತ್ತು.

ಇದನ್ನೂ ಓದಿ: Karnataka Weather : ರಾಜ್ಯದಲ್ಲಿ ಮುಂದುವರಿಯಲಿದೆ ಶಾಖದ ಹೊಡೆತ; ಕೋಲಾರದಲ್ಲಿ ಮೊದಲ ಮಳೆಯ ಸಿಂಚನ

ಈ ಸಂದರ್ಭದಲ್ಲಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಈಶ್ವರಶಟ್ಟಿ, ಎನ್. ಸತೀಶ್, ಗಣೇಶ್ ಎನ್. ಕಾಮತ್, ಎಂ.ಡಿ. ಇಂದ್ರಮ್ಮ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸುಧೀಂದ್ರ ಪೂಜಾರಿ, ತುಳೋಜಿರಾವ್, ಸ್ವಾಮಿ ದೊಡ್ಡಿನಕೊಪ್ಪ, ವೈ.ಜೆ. ಕೃಷ್ಣ, ಉಮೇಶ್ ಆರ್., ಮಂಜನಾಯ್ಕ್, ಎಂ.ಬಿ. ಮಂಜುನಾಥ, ಎಂ. ಸುರೇಶ್‌ ಸಿಂಗ್, ಸುಧೀರ್ ಪಿ., ರವೀಂದ್ರ ಕೆರೆಹಳ್ಳಿ, ನಾಗರತ್ನ ದೇವರಾಜ್, ಎಸ್.ಎನ್. ಬಾಲಚಂದ್ರ, ಕುಸುಮಾ ಬಾಲಚಂದ್ರ, ಪದ್ಮಾ ಸುರೇಶ್, ನಿವೃತ್ತ ಶಿಕ್ಷಕ ರಾಧಾಕೃಷ್ಣ, ಜಯಲಕ್ಷ್ಮಿ ಮೋಹನ್ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಪಾಲ್ಗೊಂಡಿದ್ದರು.

Continue Reading

ಧಾರ್ಮಿಕ

Ballari News: ಬಾಯಿಯೊಳಗೆ ತ್ರಿಶೂಲ; ಬೆನ್ನಿಗೆ ಕೊಕ್ಕೆ ಕಟ್ಟಿಕೊಂಡು ಕಾರು, ರಿಕ್ಷಾ ಎಳೆದ ಭಕ್ತರು!

Ballari News: ಕಂಪ್ಲಿ ಕೋಟೆಯ ಮೀನುಗಾರರ ಕಾಲೋನಿಯಲ್ಲಿ ಮೀನುಗಾರ ಸಮುದಾಯದ ಆರಾಧ್ಯ ದೈವ ಶ್ರೀ ಕಾಳಮ್ಮ ದೇವಿಯ ಪೂಜಾ ಮಹೋತ್ಸವವು ಮಂಗಳವಾರ ಅದ್ಧೂರಿಯಾಗಿ ಜರುಗಿತು. ಹರಕೆ ತೀರಿಸುವ ಭಕ್ತರ ಆಚರಣೆಗಳು ಗಮನ ಸೆಳೆದವು.

VISTARANEWS.COM


on

Kalamma Devi Pooja Mahotsava in Kampli
Koo

ಕಂಪ್ಲಿ: ಕಂಪ್ಲಿ ಕೋಟೆಯ ಮೀನುಗಾರರ ಕಾಲೋನಿಯಲ್ಲಿ ಮೀನುಗಾರ ಸಮುದಾಯದ ಆರಾಧ್ಯ ದೈವ ಶ್ರೀ ಕಾಳಮ್ಮ ದೇವಿಯ ಪೂಜಾ ಮಹೋತ್ಸವವು ಮಂಗಳವಾರ ಅದ್ಧೂರಿಯಾಗಿ (Ballari News) ಜರುಗಿತು.

ಸೋಮವಾರ ಸಂಜೆ ಗಂಗೆಸ್ಥಳ ಮತ್ತು ಅಗ್ನಿ ಕುಂಭೋತ್ಸವ ಸೇರಿದಂತೆ ವಿವಿಧ ರೀತಿಯ ಧಾರ್ಮಿಕ ಕಾರ್ಯಕ್ರಮಗಳು ಶ್ರದ್ಧಾಭಕ್ತಿಯಿಂದ ಜರುಗಿದವು. ಮೆರವಣಿಗೆಯಲ್ಲಿ ಮೂವರು ಭಕ್ತಾದಿಗಳು ಬಾಯಿಗೆ 12 ಅಡಿ ಉದ್ದದ ತ್ರಿಶೂಲ ಅಸ್ತ್ರವನ್ನು ಹಾಕಿಸಿಕೊಂಡು ಕಲ್ಲುಗುಂಡು, ಇಬ್ಬರು ಭಕ್ತಾದಿಗಳು ಆಟೋರಿಕ್ಷಾ, ಇಬ್ಬರು ಭಕ್ತರು ಕಾರುಗಳನ್ನು ತಮ್ಮ ಬೆನ್ನುಗಳಿಗೆ ಹಾಕಿದ್ದ ಕಬ್ಬಿಣದ ಕೊಕ್ಕೆಗಳಿಂದ ಎಳೆದು ತಮ್ಮ ಹರಕೆ ತೀರಿಸಿದರು. ಟ್ರ್ಯಾಕ್ಟರ್‌ಗೆ ಹಾಕಲಾಗಿದ್ದ ಬೊಂಬುಗಳಿಗೆ ತಮ್ಮ ಬೆನ್ನಿಗೆ ಹಾಕಲಾಗಿದ್ದ ಕೊಕ್ಕೆಯಿಂದ ಜೋತು ಬೀಳುವ ಮೂಲಕ ಭಕ್ತಿ ಸಮರ್ಪಿಸಿದರು.

ಇದನ್ನೂ ಓದಿ: Job Alert: ನೈವೇಲಿ ಲಿಗ್ನೈಟ್ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಪದವಿ ಪಡೆದವರು ಅರ್ಜಿ ಸಲ್ಲಿಸಿ

ಮೆರವಣಿಗೆಯು ಶ್ರೀ ಕಾಳಮ್ಮ ದೇವಸ್ಥಾನದಿಂದ ಶ್ರೀ ಸುಂಕಲಮ್ಮ ದೇವಸ್ಥಾನದ ವರೆಗೂ ಜರುಗಿತು. ಭಕ್ತಾದಿಗಳು ರಸ್ತೆಯುದ್ದಕ್ಕೂ ತಮ್ಮ ಬೆನ್ನಿಗೆ ಹಾಕಲಾಗಿದ್ದ ಕೊಕ್ಕೆಯಿಂದ ತಮ್ಮ ಹರಕೆಯಂತೆ ಸುಡು ಬಿಸಿಲ ಮಧ್ಯೆಯು ಗುಂಡು, ಆಟೋ, ಕಾರುಗಳನ್ನು ಎಳೆದೊಯ್ದು ಭಕ್ತಿ ಸಮರ್ಪಿಸಿದರು.

ಪಟ್ಟಣದ ಸೇರಿದಂತೆ ತಾಲೂಕಿನ ವಿವಿಧೆಡೆಗಳಿಂದ ಆಗಮಿಸಿದ್ದಂತಹ ಭಕ್ತರು ವಿಶೇಷ ಆಚರಣೆಯನ್ನು ನೋಡಿ ಕಣ್ ತುಂಬಿಕೊಳ್ಳುವ ಮೂಲಕ ಆಶ್ಚರ್ಯ ಚಕಿತರಾದರು. ಕಾರ್ಯಕ್ರಮದ ಪೌರೋಹಿತ್ಯವನ್ನು ಮಾರೆಪ್ಪ ಪೂಜಾರಿ ವಹಿಸಿದ್ದರು.

ಇದನ್ನೂ ಓದಿ: Koppala News: ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಸಿಗುವಂತೆ ಕ್ರಮ ಕೈಗೊಳ್ಳಲು ಜಿ.ಪಂ ಸಿಇಒ ಸೂಚನೆ

ಈ ಸಂದರ್ಭದಲ್ಲಿ ಮೀನುಗಾರ ಸಹಕಾರ ಸಂಘದ ಅಧ್ಯಕ್ಷ ಚೆನ್ನರಾಜು, ಉಪಾಧ್ಯಕ್ಷ ಷಣ್ಮುಖಪ್ಪ, ಮುಖಂಡರಾದ ಮಾರೆಪ್ಪ ಪೂಜಾರಿ, ಸ್ವಾಮಿ ದೊರೆ, ಎ. ಗಣೇಶ್, ಎಸ್.ಜಿ.ಪೂಜಾರಿ, ಗುರುಮೂರ್ತಿ, ಪಣಿಯಪ್ಪ, ಆರ್. ಕೃಷ್ಣ ಪೂಜಾರಿ, ಎಸ್.ಆರ್. ಸುರೇಶ್ ಸೇರಿದಂತೆ ಸರ್ವ ಸಮುದಾಯಗಳ ಸದ್ಭಕ್ತರು ಪಾಲ್ಗೊಂಡಿದ್ದರು.

Continue Reading

ಬೆಂಗಳೂರು

Sadhguru Jaggi Vasudev: ಮೆದುಳಿನ ಶಸ್ತ್ರಚಿಕಿತ್ಸೆಯ ತಿಂಗಳ ಬಳಿಕ ಕಾಂಬೋಡಿಯಾಗೆ ಸದ್ಗುರು ಪ್ರವಾಸ

Sadhguru Jaggi Vasudev: ಕಾಂಬೋಡಿಯಾದ ಸಾಂಸ್ಕೃತಿಕ ಮತ್ತು ಅಧ್ಯಾತ್ಮಿಕತೆಯ ಅನ್ವೇಷಣೆಗಾಗಿ ಸದ್ಗುರು ಜಗ್ಗಿ ವಾಸುದೇವ್‌ ಅವರು ತೆರಳಿದ್ದಾರೆ. ಇದು ಶಸ್ತ್ರಚಿಕಿತ್ಸೆಯ ಒಂದು ತಿಂಗಳ ನಂತರ ಸದ್ಗುರುಗಳ ಮೊದಲ ಪ್ರಯಾಣವಾಗಿದೆ.

VISTARANEWS.COM


on

Sadhguru Jaggi Vasudev
Koo

ಸೀಮ್‌ ರೀಪ್‌(ಕಾಂಬೋಡಿಯಾ): ಮೆದುಳಿನ ಶಸ್ತ್ರಚಿಕಿತ್ಸೆಯ ಒಂದು ತಿಂಗಳ ನಂತರ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕತೆಯ ಆಳದ ಅನ್ವೇಷಣೆಗಾಗಿ ಆಧ್ಯಾತ್ಮಿಕ ಗುರು ಹಾಗೂ ಈಶ ಫೌಂಡೇಶನ್‌ ಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್‌ (Sadhguru Jaggi Vasudev) ಅವರು ಕಾಂಬೋಡಿಯಾಗೆ ತೆರಳಿದ್ದಾರೆ. ಕಾಂಬೋಡಿಯಾ ಪ್ರವಾಸೋದ್ಯಮ ಸಚಿವ ಎಚ್.ಇ. ಎಸ್ಒಕೆ ಸೋಕೆನ್ ಅವರು ಸೀಮ್ ರೀಪ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸದ್ಗುರುಗಳನ್ನು ಆತ್ಮೀಯತೆಯಿಂದ ಸ್ವಾಗತಿಸಿದರು.

ಗಮನಾರ್ಹ ಆತಿಥ್ಯದ ಜತೆಗೆ ಸಚಿವರು, ಕಾಂಬೋಡಿಯಾದ ಪ್ರಧಾನ ಮಂತ್ರಿಯವರ ವೈಯಕ್ತಿಕ ಪತ್ರವನ್ನು ಸದ್ಗುರುಗಳಿಗೆ ಪ್ರಸ್ತುತಪಡಿಸಿದರು. ಸಚಿವರೊಂದಿಗೆ ಅವರ ಪತ್ನಿ, ಕಾಂಬೋಡಿಯಾದ ಪ್ರವಾಸೋದ್ಯಮ ಸಚಿವಾಲಯದ ಅಧಿಕಾರಿಗಳು ಮತ್ತು ಭಾರತದ ಕಾನ್ಸುಲೇಟ್ ಜನರಲ್ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಇದು ಶಸ್ತ್ರಚಿಕಿತ್ಸೆಯ ಒಂದು ತಿಂಗಳ ನಂತರ ತಮ್ಮ ಚಟುವಟಿಕೆಗಳಿಗೆ ಮರಳಿರುವ ಸದ್ಗುರುಗಳ ಮೊದಲ ಪ್ರಯಾಣ. ಅಲ್ಲಿ ಅವರು ಸ್ಥಳೀಯ ಸಂಸ್ಕೃತಿ ಮತ್ತು ದೇವಾಲಯಗಳ ಹಿಂದಿನ ವಿಜ್ಞಾನವನ್ನು ಅನ್ವೇಷಿಸಲಿದ್ದಾರೆ. ಅವರ ಕಾರ್ಯಕ್ರಮವು ಏಪ್ರಿಲ್ 30 ರವರೆಗೆ ಜರುಗಲಿದ್ದು, ಈ ಸಮಯದಲ್ಲಿ ಅಲ್ಲಿನ ಸ್ಥಳೀಯ ಸಂಸ್ಕೃತಿಯಲ್ಲಿ ಮಿಂದೇಳುವುದರ ಜತೆಗೆ, ಕಾಂಬೋಡಿಯಾದ ಸೀಮ್ ರೀಪ್‌ನಲ್ಲಿರುವ ಬೇಯಾನ್ ಮತ್ತು ಅಂಕೋರ್ ವಾಟ್ ದೇವಾಲಯಗಳಿಗೆ ಭೇಟಿ ನೀಡಲಿದ್ದಾರೆ.

ಯಾವುದೇ ಬೋಧನೆ, ತತ್ವಶಾಸ್ತ್ರ, ಮತಧರ್ಮ ಅಥವಾ ನಂಬಿಕೆಯ ವ್ಯವಸ್ಥೆಗಳಿಗೆ ಒಳಗಾಗದ ಸದ್ಗುರುಗಳು, ತಮ್ಮ ಆಧ್ಯಾತ್ಮಿಕ ಮತ್ತು ಸಾಮಾಜಿಕ ಪ್ರಯತ್ನಗಳು, ಪರಿಸರ ಕಾರ್ಯಗಳು, ಗ್ರಾಮೀಣ ಶಿಕ್ಷಣ ಮತ್ತು ಇನ್ನೂ ಹೆಚ್ಚಿನವುಗಳ ಮೂಲಕ ವಿಶ್ವದಾದ್ಯಂತ ಲಕ್ಷಾಂತರ ಜನರನ್ನು ತಲುಪಿದ್ದಾರೆ. ಪ್ರಪಂಚದಾದ್ಯಂತ ಮೂವತ್ತು ಲಕ್ಷ ಜನರು ಅವರ ಪ್ರಮುಖ ಕಾರ್ಯಕ್ರಮವಾದ ಇನ್ನರ್ ಎಂಜಿನಿಯರಿಂಗ್ ಕಾರ್ಯಕ್ರಮದ ಪ್ರಯೋಜನ ಪಡೆದಿದ್ದಾರೆ. ಆ ಮೂಲಕ ಜನರು ತಮ್ಮ ಜೀವನದ ಗ್ರಹಿಕೆಯಲ್ಲಿ ಹೆಚ್ಚಿನ ಸಮತೋಲನ ಮತ್ತು ಗಮನಾರ್ಹ ಸ್ಪಷ್ಟತೆಯನ್ನು ಪಡೆದುಕೊಂಡಿದ್ದಾರೆ.

ಇದನ್ನೂ ಓದಿ | Prerane : ಗೆಲುವಿಗೆ ಸೂತ್ರಗಳಿವೆಯೇ? ಸದ್ಗುರು ಹೀಗೆನ್ನುತ್ತಾರೆ!

2023 ರಲ್ಲಿ ಸದ್ಗುರುಗಳ ಸಾಮಾಜಿಕ ಮಾಧ್ಯಮವು 4.37 ಶತಕೋಟಿಗೂ ಹೆಚ್ಚು ವೀಕ್ಷಣೆಗಳನ್ನು ಪಡೆದಿತ್ತು. ಈ ಹಿನ್ನೆಲೆಯಲ್ಲಿ ಕಾಂಬೋಡಿಯಾದ ಅವರ ಅನ್ವೇಷಣೆಯು, ಆ ದೇಶದ ಬಗೆಗಿನ ಅವರ ಒಳನೋಟಗಳಿಂದ ಪ್ರಯೋಜನ ಪಡೆಯಲು ಜಗತ್ತಿಗೆ ಒಂದು ವಿಶಿಷ್ಟ ಅವಕಾಶವನ್ನು ಒದಗಿಸಲಿದೆ.

Continue Reading

ಬೆಂಗಳೂರು

Bengaluru Karaga: ವೈಭವದ ಕರಗ ಮಹೋತ್ಸವ ಸಂಪನ್ನ; ಲಕ್ಷಾಂತರ ಭಕ್ತರ ನಡುವೆ ಮಸ್ತಾನ್ ಸಾಬ್ ದರ್ಗಾಗೆ ಭೇಟಿ

Bengaluru Karaga: ಸಂಪ್ರದಾಯದಂತೆ ಹಜರತ್ ತವಕಲ್ ಮಸ್ತಾನ್ ಷಾ ದರ್ಗಕ್ಕೆ ಕರಗ ಭೇಟಿ ನೀಡಿತು. ಹಜರತ್ ತವಕಲ್‌ ಮಸ್ತಾನ್ ಷಾನಲ್ಲಿ ಕರಗದ ಆಗಮನಕ್ಕಾಗಿ ಸಕಲ‌ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ವಿದ್ಯುತ್ ದೀಪಗಳಿಂದ ಕಂಗೊಳಿಸಿತು. ದರ್ಗದಲ್ಲಿ ಕರಗಕ್ಕೆ ‌ಪೂಜೆ ಸಲ್ಲಿಸಲಾಗಿದ್ದು, ನಂತರ ದರ್ಗಾವನ್ನು ಪ್ರದಕ್ಷಿಣೆ ಮಾಡಿ ಅಣ್ಣಮ್ಮ ದೇವಸ್ಥಾನದತ್ತ ತೆರಳಿತು.

VISTARANEWS.COM


on

bengaluru karaga in darga
Koo

ಬೆಂಗಳೂರು: ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವ (Bengaluru karaga Festival) ಮಂಗಳವಾರ ರಾತ್ರಿ ಅದ್ಧೂರಿಯಾಗಿ ನೆರವೇರಿತು. ನಗರ್ತಪೇಟೆಯಲ್ಲಿ ಧರ್ಮರಾಯಸ್ವಾಮಿ (Dharmaraya swamy) ರಥೋತ್ಸವ ಬಳಿಕ ರಾತ್ರಿ 2 ಗಂಟೆಗೆ ಕರಗ ಶಕ್ತ್ಸೋತ್ಸವಕ್ಕೆ (Bangalore Karaga) ಚಾಲನೆ ನೀಡಲಾಯಿತು. ಮುಂಜಾನೆ ಹಾಜಿ ಮಸ್ತಾನ್‌ ಸಾಬ್‌ ದರ್ಗಾಗೂ (Haji Mastan Saab Darga) ಭೇಟಿ ಕೊಟ್ಟು 5.45ರ ವೇಳೆಗೆ ಧರ್ಮರಾಯ ಸ್ವಾಮಿ ದೇವಸ್ಥಾನದೊಳಗೆ ಕರಗ ಸೇರಿಕೊಂಡಿತು. ವೈಭವದ ಕರಗ ಕಣ್ತುಂಬಿಕೊಳ್ಳಲು ವಿವಿಧೆಡೆಯಿಂದ ಲಕ್ಷಾಂತರ ಜನರು ಆಗಮಿಸಿದ್ದರು.

ನಿನ್ನೆ ರಾತ್ರಿ ಧರ್ಮರಾಯ ಸ್ವಾಮಿ ದೇವಾಲಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಂಸದ ತೇಜಸ್ವಿ ಸೂರ್ಯ, ಶಾಸಕ ಹ್ಯಾರಿಸ್‌, ಕಾಂಗ್ರೆಸ್‌ ಅಭ್ಯರ್ಥಿ ಸೌಮ್ಯ ರೆಡ್ಡಿ ಮುಂತಾದವರು ಭೇಟಿ ನೀಡಿದರು. ಬೆಳಗ್ಗೆಯಿಂದಲೇ ತಾಯಿಗೆ ಬಳೆ ಶಾಸ್ತ್ರ, ತಾಳಿ ಶಾಸ್ತ್ರ, ಹೂ ಶಾಸ್ತ್ರ ವಿಶೇಷ ಪೂಜೆ ಸಲ್ಲಿಸಲಾಯಿತು. ಮಂಗಳವಾರ ರಾತ್ರಿ 10.30ಕ್ಕೆ ಕಲ್ಯಾಣಿಗೆ ಹೋಗಿ ಪೂಜೆ ಸಲ್ಲಿಸಲಾಯಿತು. ಅಲ್ಲಿಂದ ವಾಪಸ್ ಬಂದು ಧರ್ಮರಾಯ ದೇವಸ್ಥಾನದಲ್ಲಿ ಪೂಜೆ ಮಾಡಲಾಯಿತು. ರಥೋತ್ಸವದ ಬಳಿಕ ಭಕ್ತರ ಗೋವಿಂದ… ಗೋವಿಂದ… ಎಂಬ ಘೋಷಣೆಗಳ ನಡುವೆ ಅರ್ಚಕ ಜ್ಞಾನೇಂದ್ರ ಅವರು ಕರಗ ಹೊತ್ತು ಸಾಗಿದರು.

ಮುಖ್ಯ ರಥ ಧರ್ಮರಾಯಸ್ವಾಮಿ ರಥದಲ್ಲಿ ಅರ್ಜುನ‌ ಮತ್ತು ದ್ರೌಪದಿ ದೇವಿ ವಿರಾಜಮಾನರಾಗಿದ್ದರು. ಚಿಕ್ಕ ರಥದಲ್ಲಿ ಗ್ರಾಮದೇವಿ ಮುತ್ಯಾಲಮ್ಮ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿತ್ತು. ಪಾಂಡವರ ಮೂರ್ತಿಗಳು ಸೇರಿ ಒಟ್ಟು ಒಂಬತ್ತು ಮೂರ್ತಿಗಳಿಗೆ ವೀರಕುಮಾರರಿಂದ ಪೂಜೆ ಸಲ್ಲಿಸಿದ ಬಳಿಕ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ರಥಗಳು ಮುಂದೆ ಸಾಗುತ್ತಿದ್ದಂತೆ ದೇಗುಲದಿಂದ ದ್ರೌಪದಿ ದೇವಿ ಕರಗ ಹೊರಬಂದಿತು.

ಕರಗ ಸಾಗುವ ರಾಜಬೀದಿಗಳೆಲ್ಲಾ ಬಣ್ಣ ಬಣ್ಣದ ಲೈಟಿಂಗ್‌ ಹಾಗೂ ಜನರಿಂದ ಕಂಗೊಳಿಸಿದವು. ಸಾಂಪ್ರದಾಯಿಕವಾಗಿ ಎ. ಜ್ಞಾನೇಂದ್ರ 14ನೇ ಬಾರಿ ಕರಗ ಹೊತ್ತರು. ಒಂದು ರಥದಲ್ಲಿ ಮುತ್ಯಾಲಮ್ಮ ಮೂರ್ತಿ ಪ್ರತಿಷ್ಠಾಪನೆಯಾಗಿದ್ದು, ಪಾಂಡವರ ಮೂರ್ತಿಗಳು ಸೇರಿದಂತೆ ಒಟ್ಟು ಒಂಬತ್ತು ಮೂರ್ತಿಗಳಿಗೆ ವೀರಕುಮಾರರಿಂದ ಪೂಜೆ ಸಂದಿತು. ಪೂಜೆ ನಂತರ ಮತ್ತೊಂದು ರಥದಲ್ಲಿ ದ್ರೌಪದಿ ಮತ್ತು ಅರ್ಜುನ ಮೂರ್ತಿ ಪ್ರತಿಷ್ಠಾಪನೆಯಾಯಿತು. ನಂತರ ರಥಗಳ ಮೆರವಣಿಗೆ ಆರಂಭವಾಯಿತು. ಖಡ್ಗಗಳನ್ನು ಹಿಡಿದು ನೂರಾರು ವೀರಕುಮಾರರು ಮೆರವಣಿಗೆಯಲ್ಲಿ ತೆರಳಿದರು. ರಥಗಳು ಮುಂದೆ ಸಾಗುತ್ತಿದ್ದಂತೆ ದ್ರೌಪದಿ ದೇವಿ ಕರಗ ದೇಗುಲದಿಂದ ಹೊರ ಬಂದಿದ್ದು, ಅದನ್ನು ಕಂಡು ಭಕ್ತರು ಹರ್ಷೋದ್ಗಾರ ಮಾಡಿದರು.

ಸಂಪ್ರದಾಯದಂತೆ ಹಜರತ್ ತವಕಲ್ ಮಸ್ತಾನ್ ಷಾ ದರ್ಗಕ್ಕೆ ಕರಗ ಭೇಟಿ ನೀಡಿತು. ಹಜರತ್ ತವಕಲ್‌ ಮಸ್ತಾನ್ ಷಾನಲ್ಲಿ ಕರಗದ ಆಗಮನಕ್ಕಾಗಿ ಸಕಲ‌ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ವಿದ್ಯುತ್ ದೀಪಗಳಿಂದ ಕಂಗೊಳಿಸಿತು. ದರ್ಗದಲ್ಲಿ ಕರಗಕ್ಕೆ ‌ಪೂಜೆ ಸಲ್ಲಿಸಲಾಗಿದ್ದು, ನಂತರ ದರ್ಗಾವನ್ನು ಪ್ರದಕ್ಷಿಣೆ ಮಾಡಿ ಅಣ್ಣಮ್ಮ ದೇವಸ್ಥಾನದತ್ತ ತೆರಳಿತು. ಒಟ್ಟು 11-12 ಕಿಲೋಮೀಟರ್ ಕರಗದ ಮೆರವಣಿಗೆ ಸಾಗಿದೆ.

ಕರಗ ಮೆರವಣಿಗೆ ಮಾರ್ಗ

ರಥೋತ್ಸವದ ನಂತರ ಮಧ್ಯರಾತ್ರಿ 1 ಗಂಟೆಯಿಂದ ಕರಗ ಮಹೋತ್ಸವದ ಮೆರವಣಿಗೆ ಸಾಗಿತು. ನಗರ್ತಪೇಟೆಯ ಧರ್ಮರಾಯಸ್ವಾಮಿ ದೇವಸ್ಥಾನದಿಂದ ಕರಗ ಮೆರವಣಿಗೆ ಆರಂಭವಾಗಿ ಕಬ್ಬನ್​ಪೇಟೆ, ಗಾಣಿಗರಪೇಟೆ, ಅವೆನ್ಯೂ ರಸ್ತೆ ಮೂಲಕ ಸಾಗಿ ನಂತರ ಕೆ.ಆರ್. ರಸ್ತೆಯಲ್ಲಿರುವ ಕೋಟೆ ಆಂಜನೇಯ ದೇಗುಲಕ್ಕೆ ತೆರಳಿತು. ಬಳಿಕ ಸಿಟಿ ಮಾರ್ಕೆಟ್ ಪೊಲೀಸ್ ಠಾಣೆ ರಸ್ತೆಯ ರಾಣಾಸಿಂಗ್​ಪೇಟೆ, ಅಕ್ಕಿಪೇಟೆ, ಅರಳಿಪೇಟೆ, ಒಟಿಸಿ ರಸ್ತೆ, ಮಸ್ತಾನ್ ಸಾಹೇಬ್ ದರ್ಗಾ, ಬಳೆಪೇಟೆ ಮುಖ್ಯ ರಸ್ತೆ, ಕೆ.ಜಿ.ರಸ್ತೆ, ಎಸ್​ಪಿ ರಸ್ತೆ ಮೂಲಕ ಸಾಗಿ ಅಣ್ಣಮ್ಮ ದೇಗುಲಕ್ಕೆ ಬಂದು ಅದೇ ಮಾರ್ಗದಲ್ಲಿ ವಾಪಸಾಯಿತು. ಬೆಳಗ್ಗೆ 5.45 ಗಂಟೆಗೆ ಧರ್ಮರಾಯಸ್ವಾಮಿ ದೇವಾಲಯ ಸೇರಿತು. ಬೆಳಗ್ಗೆ 8 ಗಂಟೆಗೆ ತಾಯಿಗೆ ವಿಶೇಷ ಪೂಜೆ ಸಲ್ಲಿಸುವುದರೊಂದಿಗೆ ಕರಗಕ್ಕೆ ತೆರೆ ಬೀಳಲಿದೆ.

ಇದನ್ನೂ ಓದಿ | Bengaluru Karaga 2024: ಬೆಂಗಳೂರು ಕರಗ ಶಕ್ತ್ಸೋತ್ಸವಕ್ಕೆ ಕೌಂಟ್‌ ಡೌನ್‌; 8 ಲಕ್ಷ ಜನ ಭಾಗಿ!

Continue Reading
Advertisement
Vistara Editorial
ಸಂಪಾದಕೀಯ17 mins ago

ವಿಸ್ತಾರ ಸಂಪಾದಕೀಯ: ಹಾಸನ ಲೈಂಗಿಕ ದೌರ್ಜನ್ಯ ಪ್ರಕರಣ, ನಿಷ್ಪಕ್ಷಪಾತ ತನಿಖೆಯಾಗಲಿ

Drinking Water Before Meals
ಆರೋಗ್ಯ18 mins ago

Drinking Water Before Meals: ಊಟಕ್ಕಿಂತ ಎಷ್ಟು ಮೊದಲು ನೀರು ಕುಡಿದರೆ ಒಳ್ಳೆಯದು?

World Laughter Day
ಆರೋಗ್ಯ1 hour ago

World Laughter Day 2024: ಇಂದು ವಿಶ್ವ ನಗುವಿನ ದಿನ; ನಗುನಗುತ ಬಾಳೋಣ

Dina Bhavishya
ಭವಿಷ್ಯ1 hour ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

HD Revanna
ಕರ್ನಾಟಕ6 hours ago

HD Revanna: ಛೇ, ಎಂಥ ಸ್ಥಿತಿ ಬಂತಪ್ಪ; ಎಸ್‌ಐಟಿ ಸೆಲ್‌ನಲ್ಲಿ ಗಳಗಳನೆ ಅತ್ತ ಎಚ್‌.ಡಿ.ರೇವಣ್ಣ

Road Accident
ಕರ್ನಾಟಕ6 hours ago

Road Accident: ಕಾರು-ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವು

Virat kohli
ಪ್ರಮುಖ ಸುದ್ದಿ6 hours ago

IPL 2024 : ಟೀಕೆಗಳಿಗೆ ಪ್ರತಿಕ್ರಿಯಿಸುವುದು ಯಾಕೆ? ಕೊಹ್ಲಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಗವಾಸ್ಕರ್​

IPL 2024
ಕ್ರೀಡೆ7 hours ago

IPL 2024 : ಅತಿ ವೇಗದ ಬೌಲರ್​ ಮಯಾಂಕ್ ಐಪಿಎಲ್​ನಿಂದ ಔಟ್​​

HD Revanna
ಕರ್ನಾಟಕ7 hours ago

HD Revanna: ಎಸ್‌ಐಟಿ ಸೆಲ್‌ನಲ್ಲೇ ‘ಮೊದಲ ರಾತ್ರಿ’ ಕಳೆಯಲಿರುವ ರೇವಣ್ಣ; ಬೆಳಗ್ಗೆ ಜಡ್ಜ್‌ ಎದುರು ಹಾಜರ್!

IPL 2024
ಕ್ರೀಡೆ7 hours ago

IPL 2024 : ಅಭಿಮಾನಿಗಳಿಗೆ ಸತಾಯಿಸಿ ಖುಷಿ ಕೊಟ್ಟ ಆರ್​ಸಿಬಿ, ಗುಜರಾತ್​ ವಿರುದ್ಧ 4 ವಿಕೆಟ್​ ಜಯ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ1 hour ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ1 day ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ2 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ2 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ2 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ3 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ5 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20246 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20246 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ6 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

ಟ್ರೆಂಡಿಂಗ್‌