I will not rest until my dreams come true says Siddharth Singh BJP candidate from Vijayanagar constituency Karnataka election 2023 UpdatesKarnataka election 2023: ವಿಜಯನಗರಕ್ಕೆ ಮೆಡಿಕಲ್, ನರ್ಸಿಂಗ್, ಲಾ ಕಾಲೇಜು ತರುವೆ; ಅಲ್ಲೀವರೆಗೂ ವಿರಮಿಸಲ್ಲ: ಸಿದ್ದಾರ್ಥ ಸಿಂಗ್ - Vistara News

ಕರ್ನಾಟಕ

Karnataka election 2023: ವಿಜಯನಗರಕ್ಕೆ ಮೆಡಿಕಲ್, ನರ್ಸಿಂಗ್, ಲಾ ಕಾಲೇಜು ತರುವೆ; ಅಲ್ಲೀವರೆಗೂ ವಿರಮಿಸಲ್ಲ: ಸಿದ್ದಾರ್ಥ ಸಿಂಗ್

Assembly Election: ಸಾರ್ವತ್ರಿಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ವಿಜಯನಗರ ಕ್ಷೇತ್ರದ ಕಾರಿಗನೂರು, ಸಂಕ್ಲಾಪುರ, 21 ಮತ್ತು 22ನೇ ವಾರ್ಡ್‌ಗಳಲ್ಲಿ ಭರ್ಜರಿ ಪ್ರಚಾರ ನಡೆಸಿದ ಬಿಜೆಪಿ ಅಭ್ಯರ್ಥಿ ಸಿದ್ದಾರ್ಥ ಸಿಂಗ್‌, ವಿಜಯನಗರ ಕ್ಷೇತ್ರಕ್ಕೆ ಕೃಷಿ ವಿಶ್ವವಿದ್ಯಾಲಯ, ಮೆಡಿಕಲ್, ನರ್ಸಿಂಗ್ ಹಾಗೂ ಲಾ ಕಾಲೇಜು ತರುವವರೆಗೂ ವಿರಮಿಸುವುದಿಲ್ಲ ಎಂದು ತಿಳಿಸಿದ್ದಾರೆ.

VISTARANEWS.COM


on

Karnataka election 2023 I will not rest until my dreams come true says Siddharth Singh BJP candidate from Vijayanagar constituency
ವಿಜಯನಗರ ವಿಧಾನಸಭಾ ಕ್ಷೇತ್ರದ ಕಾರಿಗನೂರು ಗ್ರಾಮದಲ್ಲಿ ಗುರುವಾರ ಬಿಜೆಪಿ ಅಭ್ಯರ್ಥಿ ಸಿದ್ದಾರ್ಥ ಸಿಂಗ್ ಭರ್ಜರಿ ಚುನಾವಣೆ ಪ್ರಚಾರ ನಡೆಸಿದರು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೊಸಪೇಟೆ: ವಿಜಯನಗರ ಕ್ಷೇತ್ರಕ್ಕೆ ಕೃಷಿ ವಿಶ್ವವಿದ್ಯಾಲಯ (Agricultural University), ಮೆಡಿಕಲ್, ನರ್ಸಿಂಗ್ ಹಾಗೂ ಲಾ ಕಾಲೇಜುಗಳನ್ನು ತರುವವರೆಗೂ ವಿರಮಿಸುವುದಿಲ್ಲ ಎಂದು ಬಿಜೆಪಿ ಅಭ್ಯರ್ಥಿ ಸಿದ್ದಾರ್ಥ ಸಿಂಗ್ ಹೇಳಿದರು.

ಸಾರ್ವತ್ರಿಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಗುರುವಾರ ಕಾರಿಗನೂರು ಗ್ರಾಮದಲ್ಲಿ ಚುನಾವಣೆ ಪ್ರಚಾರ ನಡೆಸಿ ಮಾತನಾಡಿದ ಅವರು, ದೇಶದ ಜನಪ್ರಿಯ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮೊನ್ನೆಯಷ್ಟೇ ಪ್ರಚಾರ ನಿಮಿತ್ತ ಹೊಸಪೇಟೆಗೆ ಬಂದಾಗ ಕ್ಷೇತ್ರಕ್ಕೆ ಉಜ್ವಲ ಭವಿಷ್ಯವಿದ್ದು, ರೈತರನ್ನು ಉತ್ತೇಜಿಸುವ ದೂರದೃಷ್ಟಿಯಿಂದ ಕೃಷಿ ವಿಶ್ವವಿದ್ಯಾಲಯ ತರುವ ವಿಚಾರ ಪ್ರಸ್ತಾಪಿಸಿದ್ದಾರೆ. ಅವರ ಮಾತು ಶೀಘ್ರ ಈಡೇರುವ ಭರವಸೆ ಇದೆ ಎಂದರು.

ಇದನ್ನೂ ಓದಿ: ವಿಸ್ತಾರ Explainer: The Kerala Story: ದಿ ಕಾಶ್ಮೀರ್ ಫೈಲ್ ಬಳಿಕ ಮತ್ತೊಂದು ಸಿನಿ ಸಂಚಲನ: ನಾಳೆ ತೆರೆಗೆ

ವಿವಿಧ ಅಭಿವೃದ್ಧಿಗಳ ಸಾಕಾರದ ಜತೆ ಜತೆಗೆ ಕೃಷಿ, ಶಿಕ್ಷಣ, ಆರೋಗ್ಯ ಸಂಬಂಧಿ ನನ್ನ ಕನಸುಗಳು ನನಸಾಗಿಸಲು ಅವಿರತ ಶ್ರಮಿಸುವೆ ಎಂದು ಅವರು ತಿಳಿಸಿದರು.

ವಿಜಯನಗರ ಕ್ಷೇತ್ರ ಪುಣ್ಯಭೂಮಿ

ವಿಜಯನಗರ ಕ್ಷೇತ್ರ ಅದೃಷ್ಟದ ಕ್ಷೇತ್ರವಾಗಿದೆ. ಒಂದೆಡೆ ಖನಿಜ ಸಂಪತ್ತು, ಇನ್ನೊಂದೆಡೆ ಐತಿಹಾಸಿಕ ಹಂಪಿ ಮತ್ತು ಮತ್ತೊಂದೆಡೆ ತುಂಗಭದ್ರಾ ನದಿ ಹರಿಯುತ್ತಿದ್ದು, ಪುಣ್ಯಭೂಮಿಯಾಗಿದೆ. ಇಂತಹ ಪುಣ್ಯ ನೆಲೆದ ಸೇವಕನಾಗಿ ಆನಂದ್ ಸಿಂಗ್ ಅವರಿಗೆ ಆಶೀರ್ವದಿಸಿದಂತೆ ನನಗೂ ಆಶೀರ್ವದಿಸಿದರೆ ಮುಂದಿನ ದಿನಗಳಲ್ಲಿ ಅವರ ಮಾರ್ಗದರ್ಶನದಲ್ಲಿ ಇನ್ನೂ ಹೆಚ್ಚಿನ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಪ್ರಯತ್ನಿಸುವೆ ಎಂದರು.

ಆನಂದ್ ಸಿಂಗ್ ಜನಪರ ಕಾಳಜಿ ಇರುವ ನಾಯಕ

ನಗರಸಭೆ ಸದಸ್ಯ ಪರಮೇಶಪ್ಪ ಮಾತನಾಡಿ, ಸಚಿವ ಆನಂದ್ ಸಿಂಗ್ ಕಾರಿಗನೂರಿಗೆ 75 ಲಕ್ಷ ರೂ. ವೆಚ್ಚದಲ್ಲಿ ಸಮುದಾಯ ಭವನ ನಿರ್ಮಿಸಿ ಕೊಟ್ಟಿದ್ದಾರೆ. ಶಾಲೆಗೆ ಕಾಂಪೌಂಡ್, ಓಣಿಗಳಲ್ಲಿ ಸಿಸಿ ರಸ್ತೆ ನಿರ್ಮಾಣ ಕುಡಿಯುವ ನೀರು, ಬೈಪಾಸ್ ರಸ್ತೆ ನಿರ್ಮಿಸಿ ಕೊಟ್ಟಿದ್ದು ಆನಂದ್ ಸಿಂಗ್ ಯಾವತ್ತೂ ಜನಪರ ಕಾಳಜಿ ಇರುವ ನಾಯಕ ಎಂದರು.

ಈ ವೇಳೆ ಮುಖಂಡರಾದ ಬಜಾರಪ್ಪ, ಸಾಬಣ್ಣ, ರಾಮಕೃಷ್ಟ ಇತರರು ಮಾತನಾಡಿದರು. ಈ ಸಂದರ್ಭದಲ್ಲಿ ನಗರಸಭೆ ಸದಸ್ಯೆ ಗಂಗಮ್ಮ ನಾಗೇಂದ್ರ, ಸದಸ್ಯ ಜೀವರತ್ನಂ, ಪಕ್ಷದ ಹಿರಿಯರಾದ ಖಂಡೋಜಿರಾವ್, ಹೊನ್ನೂರು ಸ್ವಾಮಿ, ಮಂಜುನಾಥ, ವೆಂಕಟೇಶ್, ನಾಗರಾಜ ಹಾಗೂ ಇತರರಿದ್ದರು.

ಇದನ್ನೂ ಓದಿ: IPL 2023: ಬುಧವಾರದ ಡಬಲ್​ ಹೆಡರ್​​ ಪಂದ್ಯಗಳ ಬಳಿಕ ಐಪಿಎಲ್​ ಅಂಕಪಟ್ಟಿ ಈ ರೀತಿ ಇದೆ

ಎಂಎಲ್‌ಎ ಹೆಸರಿನ ಕೇಕ್ ಕಟ್

ಬಿಜೆಪಿ ಅಭ್ಯರ್ಥಿ ಸಿದ್ದಾರ್ಥ ಸಿಂಗ್ ಶಾಸಕರಾಗುವ ಆತ್ಮವಿಶ್ವಾಸ ಹೊಂದಿದ ಕಾರಿಗನೂರಿನ ಯುವಕರು ಸಿದ್ದಾರ್ಥ ಸಿಂಗ್ ಎಂಎಲ್ ಎ ಎಂಬ ದೊಡ್ಡ ಗಾತ್ರದ ಕೇಕ್ ಅನ್ನು ಅಭ್ಯರ್ಥಿ ಸಿದ್ದಾರ್ಥ ಸಿಂಗ್ ಕೈಯಿಂದ ಕಟ್ ಮಾಡಿಸಿ ಅಭಿಮಾನ ಮೆರೆದರು. ಗೆಲುವಿನ ಭರವಸೆಯುಳ್ಳ ಇಲ್ಲಿನ ಜನತೆ ಸಿದ್ದಾರ್ಥಸಿಂಗ್ ಪರ ಘೋಷಣೆ ಕೂಗಿದರು. ಯುವಕರಾದ ಮಂಜುನಾಥ, ಅನಿಲ್, ಪಂಪಾಪತಿ, ಮಜ್ಜಿಗಿ ಬಸಪ್ಪ ಇನ್ನಿತರರಿದ್ದರು.

ಬಿಜೆಪಿ ಅಭ್ಯರ್ಥಿ ಸಿದ್ದಾರ್ಥ ಸಿಂಗ್ ಶಾಸಕರಾಗುವ ಆತ್ಮವಿಶ್ವಾಸ ಹೊಂದಿದ ಕಾರಿಗನೂರಿನ ಯುವಕರು ಸಿದ್ದಾರ್ಥ ಸಿಂಗ್ ಎಂಎಲ್‌ಎ ಎಂಬ ದೊಡ್ಡ ಗಾತ್ರದ ಕೇಕ್ ಅನ್ನು ಅವರ ಕೈಯಿಂದಲೇ ಕಟ್ ಮಾಡಿಸಿ ಅಭಿಮಾನ ಮೆರೆದರು.

ಕುದುರೆ ಮೇಲೆ ಸಿದ್ದಾರ್ಥ ಸಿಂಗ್

ನಗರದ 22ನೇ ವಾರ್ಡಿನ ಮೆಹಬೂಬ ನಗರದಲ್ಲಿ ಅಭ್ಯರ್ಥಿ ಸಿದ್ಧಾರ್ಥ ಸಿಂಗ್ ಅವರನ್ನು ಕುದುರೆಯ ಮೇಲೆ ಕೂರಿಸಿ ಮತಯಾಚನೆ ಮಾಡಿಸಿ ತಮ್ಮ ನೆಚ್ಚಿನ ಯುವ ನಾಯಕನ ಮೇಲಿನ ಪ್ರೀತಿಯನ್ನು ಅನಾವರಣಗೊಳಿಸಿದ್ದು ವಿಶೇಷವಾಗಿತ್ತು.

ಕೊಟ್ಟಿದ್ದು ಪಟ್ಟದ ಅಸಲಿ ದಾಖಲೆ

ವಿಜಯನಗರ ಕ್ಷೇತ್ರದ ಸಿರಸನಕಲ್ ಹಾಗೂ ಗುರುಭವನ ಪ್ರದೇಶದ ಬಹಿರಂಗ ಸಭೆಯಲ್ಲಿ ಮಾತನಾಡಿದ ಅಭ್ಯರ್ಥಿ ಸಿದ್ದಾರ್ಥಸಿಂಗ್, ಆರೋಪ ಮಾಡಲು ವಿಷಯಗಳು ಸಿಗದ ಹಿನ್ನೆಲೆಯಲ್ಲಿ ಕ್ಷೇತ್ರದ ಕಾಂಗ್ರೆಸ್ ಮುಖಂಡರು ದಾಖಲೆಗಳನ್ನು ಕೂಲಂಕಷವಾಗಿ ಪರಿಶೀಲಿಸದೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದನ್ನೂ ಓದಿ: Modi in Karnataka : ಮೋದಿ ಬೆಂಗಳೂರು ರೌಂಡ್ಸ್‌ಗೆ ಭರ್ಜರಿ ಸಿದ್ಧತೆ; ಮೇ 6ರಂದು ಇಡೀ ದಿನ ರೋಡ್‌ ಶೋ

ಈವರೆಗೆ ವಿತರಿಸಿರುವ ಆಶ್ರಯ ಹಾಗೂ ಇತರೆ ಪಟ್ಟಾ ಮನೆಗಳ ದಾಖಲೆ ಪತ್ರಗಳು ನಕಲಿ ಎಂದು ಕಾಂಗ್ರೆಸ್ ಮುಖಂಡರು ಹೇಳಿ ಮತದಾರರ ದಾರಿ ತಪ್ಪಿಸುತ್ತಿದ್ದಾರೆ. ನಕಲಿ ಮಾಡುವುದು ಅಪರಾಧ ಎಂಬ ಪರಿಜ್ಞಾನ ಎಲ್ಲರಿಗೂ ಗೊತ್ತಿದ್ದು, ಅವರೇಕೆ ಹೀಗೆ ಅಪಪ್ರಚಾರ ಮಾಡುತಿದ್ದಾರೆಯೋ ತಿಳಿಯುತಿಲ್ಲ. ಸರ್ಕಾರ ಮಟ್ಟದಲ್ಲಿ ಸಾಮಾನ್ಯ ಜನರಿಗೆ, ಮತದಾರರಿಗೆ ಮೋಸ ಮಾಡುವಂಥ ಸಣ್ಣ ಮಟ್ಟದ ಆಲೋಚನೆ ನಮ್ಮಲಿಲ್ಲ. ನೀತಿ ಸಂಹಿತೆ ಇರುವ ಕಾರಣಕ್ಕೆ ಸಾಂಕೇತಿಕವಾಗಿ ಕೆಲವರಿಗೆ ಮನೆಯ ಪಟ್ಟಾ ನೀಡಲಾಗಿದೆ. ಚುನಾವಣೆ ಬಳಿಕ ಫಲಾನುಭವಿಗಳ ಮನೆ ಮನೆಗೆ ತೆರಳಿ ಪಟ್ಟಾದ ದಾಖಲೆ ತಲುಪಿಸಲಾಗುವುದು ಎಂದರು.

ವಿವಿಧೆಡೆ ಮತ ಬೇಟೆ

ಸಂಕ್ಲಾಪುರ, 21ನೇ ವಾರ್ಡಿನ ಸುಡುಗಾಡು ಸಿದ್ಧರ ಆಶ್ರಯ ಕಾಲೋನಿ, ಸಿರಸಿನಕಲ್ ಮತ್ತು ಗುರುಭವನ ಪ್ರದೇಶ, ಮೆಹಬೂಬ ನಗರ, ಜಂಬುನಾಥ ರಸ್ತೆಯ ಪ್ರದೇಶದಲ್ಲಿ ಅಭ್ಯರ್ಥಿ ಸಿದ್ದಾರ್ಥ ಸಿಂಗ್ ಕಮಲದ ಗುರುತಿಗೆ ಮತ ಹಾಕುವಂತೆ ಮನವಿ ಮಾಡಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಪ್ರಮುಖ ಸುದ್ದಿ

Lok Sabha Election Results 2024: ರಾಜ್ಯದ 474 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ನಿರ್ಧಾರಕ್ಕೆ ಕೌಂಡ್ ಡೌನ್

Lok Sabha Election Results 2024: ರಾಜ್ಯದ 28 ಕ್ಷೇತ್ರಗಳ ಮತ ಎಣಿಕಾ ಕೇಂದ್ರಗಳಲ್ಲಿ ಮೂರು ಹಂತದ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಬೆಳಗ್ಗೆ 8ಗಂಟೆಗೆ ಮತ ಎಣಿಕೆ ಆರಂಭವಾಗಿದೆ.

VISTARANEWS.COM


on

Lok Sabha Election Results 2024
Koo

ಬೆಂಗಳೂರು: ರಾಜ್ಯದಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ (Lok Sabha Election Results 2024) ಸ್ಪರ್ಧಿಸಿದ್ದ ಒಟ್ಟು 474 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ನಿರ್ಧಾರಕ್ಕೆ ಕೌಂಡ್ ಡೌನ್ ಶುರುವಾಗಿದೆ. ಮತ ಎಣಿಕೆ ಹಿನ್ನೆಲೆಯಲ್ಲಿ ರಾಜ್ಯದ 28 ಕ್ಷೇತ್ರಗಳ ಮತ ಎಣಿಕಾ ಕೇಂದ್ರಗಳಲ್ಲಿ ಮೂರು ಹಂತದ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಬೆಳಗ್ಗೆ 8ಗಂಟೆಗೆ ಮತ ಎಣಿಕೆ ಆರಂಭವಾಗಿದೆ. ಮಧ್ಯಾಹ್ನ 12 ರೊಳಗೆ ಬಹುತೇಕ ಯಾರು ಗೆಲ್ಲಲಿದ್ದಾರೆ ಎಂಬ ಚಿತ್ರಣ ಸಿಗಲಿದ್ದು, ಸಂಜೆ ಅಂತಿಮ ಫಲಿತಾಂಶ ಹೊರಬೀಳಲಿದೆ.

ಬೆಳಗ್ಗೆ 7:45 ರ ಸುಮಾರಿಗೆ ಚುನಾವಣಾಧಿಕಾರಿಗಳ ಸಮ್ಮುಖದಲ್ಲಿ ಸ್ಟ್ರಾಂಗ್ ರೂಂ ಓಪನ್ ಮಾಡಲಾಗಿದ್ದು, ನಂತರ ಮತ ಎಣಿಕೆ ಕೊಠಡಿಗೆ ಇವಿಎಂಗಳನ್ನು ಅಧಿಕಾರಿಗಳು ಕೊಂಡೊಯ್ದರು. ಒಂದು ಕೊಠಡಿಯಲ್ಲಿ 14 ಟೇಬಲ್‌ಗಳ ವ್ಯವಸ್ಥೆ ಮಾಡಲಾಗಿದ್ದು, ಕೊಠಡಿ ದೊಡ್ಡದಿದ್ದರೆ ಹೆಚ್ಚುವರಿ ಟೇಬಲ್ ಹಾಕಲು ಅವಕಾಶ ಮಾಡಿಕೊಡಲಾಗಿದೆ. 20-25 ಸುತ್ತಿನವರೆಗೆ ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ.

ಇದನ್ನೂ ಓದಿ | Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ರಾಜ್ಯದಲ್ಲಿ ಏಪ್ರಿಲ್ 26 ರಂದು ನಡೆದ ಮೊದಲ ಹಂತದಲ್ಲಿ 247 ಅಭ್ಯರ್ಥಿಗಳು ಹಾಗೂ ಮೇ 7 ರಂದು ನಡೆದ ಎರಡನೇ ಹಂತದಲ್ಲಿ 227 ಅಭ್ಯರ್ಥಿಗಳು ಅಖಾಡದಲ್ಲಿದ್ದಾರೆ. ಒಟ್ಟು 474 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ಇಂದು ಬಹಿರಂಗವಾಗಲಿದೆ.

Continue Reading

ಮಳೆ

Karnataka Weather : ಹವಾಮಾನ ತಜ್ಞರ ವಾರ್ನಿಂಗ್‌; ಇನ್ನೊಂದು ವಾರ ವಿಪರೀತ ಮಳೆ, ಜೂ.6ರ ವರೆಗೂ ಮೀನುಗಾರಿಕೆಗೆ ಬ್ರೇಕ್‌

Heavy Rain Warning: ರಾಜ್ಯಾದ್ಯಂತ (Karnataka Weather forecast) ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್‌ ಘೋಷಣೆ (Yellow Alert) ಮಾಡಲಾಗಿದೆ. ಜತೆಗೆ ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ (Fisher Waring) ನೀಡಲಾಗಿದೆ

VISTARANEWS.COM


on

By

karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ನೈರುತ್ಯ ಮುಂಗಾರು (Monsoon rains) ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು, ಕರಾವಳಿ, ಮಲೆನಾಡಿನ ಕೆಲವು ಭಾಗಗಳಲ್ಲಿ ಮುಂದುವರೆದಿದೆ. ಜೂ.4ರಂದು ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ (Heavy Rain) ಸಾಧ್ಯತೆಯಿದೆ. ಮಲೆನಾಡು ಮತ್ತು ಕರಾವಳಿ ಭಾಗಗಳಲ್ಲಿ ಸಾಧಾರಣ (Rain News) ಮಳೆಯಾಗಲಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು, ಮಿಂಚು ಸಹಿತ ಮತ್ತು ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ಮಂಡ್ಯ ಮತ್ತು ಮೈಸೂರಿನಲ್ಲಿ ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ವಿಜಯಪುರ, ಧಾರವಾಡ, ಗದಗದಲ್ಲಿ ಭಾರೀ ಮಳೆಯಾಗುವ ಸೂಚನೆ ಇದೆ. ಜತೆಗೆ ಬೀದರ್, ಕಲಬುರಗಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಉಳಿದೆಡೆ ಹಗುರದಿಂದ ಕೂಡಿದ ಮಳೆಯಾಗಲಿದೆ.

ಮಲೆನಾಡಿನ ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಬಹುದು. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಹಗುರದೊಂದಿಗೆ ಶುರುವಾಗಿ ಸಾಧಾರಣ ಮಳೆಯಾಗಲಿದೆ.

ಇದನ್ನೂ ಓದಿ: Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

ಜೂ.6ರ ವರೆಗೆ ಮೀನುಗಾರಿಕೆಗೆ ತೆರಳದಂತೆ ಸೂಚನೆ

ಕರ್ನಾಟಕ ಕರಾವಳಿಯಲ್ಲಿ 35- 45 ಕಿ.ಮೀ ಗಾಳಿ ಬೀಸಲಿದೆ. ಸಮುದ್ರ ಮಟ್ಟದಲ್ಲಿ ಗಂಟೆಗೆ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಇದೆ. ಹೀಗಾಗಿ ಜೂನ್ 4 ರಿಂದ ಜೂನ್ 6ವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

ಯೆಲ್ಲೋ‌ ಅಲರ್ಟ್‌ ಘೋಷಣೆ

ಗುಡುಗು ಸಹಿತ ಭಾರೀ ಮಳೆಯೊಂದಿಗೆ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಮಂಡ್ಯ, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕೃಷಿ

Arecanut Price: ಅಡಿಕೆ ಧಾರಣೆ ನಿರೀಕ್ಷೆ ಮೀರಿ ಏರಲಿದೆ! ಇದು ರೈತರ ‘ನಂಬಿಕೆ’ ಮತ್ತು ‘ಅಭಿಪ್ರಾಯ’ಗಳ ಎಕ್ಸಿಟ್ ಪೋಲ್!

Arecanut Price: ಅಡಿಕೆ ಬೆಳೆಗಾರರ ನಿರೀಕ್ಷೆ, ಸಮೀಕ್ಷೆ, ಪರೀಕ್ಷೆಗಳ ಲೆಕ್ಕಾಚಾರಕ್ಕೆ ‘ಯಾಕೆ ಹೀಗೆ ಅನ್ನುವ’ ಪ್ರಶ್ನೆಗೆ ಅಡ್ಡ ಬಂದಿದ್ದು ಈ ಬಾರಿಯ ಲೋಕಸಭಾ ಚುನಾವಣೆ!!ಈಗ ಅದೂ ಮುಗಿದು, ಪಲಿತಾಂಶಕ್ಕೆ ಕಾಯುತ್ತಿರುವಾಗ, ಅಡಿಕೆ ದರ ಮೇಲ್ಮುಖವಾಗಿದೆ. ಪುನಃ ₹.55,000 ಗಡಿ ಸಮೀಪ ಬಂದಿದೆ.
ನೀತಿ ಸಂಹಿತೆಯ ಬ್ಯಾರಿಕೇಡ್‌ಗಳು ತೆರವುಗೊಂಡ ಮೇಲೆ ಅಡಿಕೆ ಧಾರಣೆ ಗಣನೀಯವಾಗಿ ಏರಬಹುದು ಎಂದು ಲೆಕ್ಕಾಚಾರದಲ್ಲಿ ರೈತರು ಕಾಯುತ್ತಿದ್ದಾರೆ.

VISTARANEWS.COM


on

Arecanut Price
Koo

-ಅರವಿಂದ ಸಿಗದಾಳ್, ಮೇಲುಕೊಪ್ಪ
ಬೆಂಗಳೂರು: ಜುಲೈ ಕೊನೆಯಲ್ಲಿ ಬಯಲು ಸೀಮೆಯ ಅಡಿಕೆ ಬರಲು ಪ್ರಾರಂಭವಾಗುವ ಕಾಲ. ಆಗಸ್ಟ್‌ನಿಂದ ಸಹಜವಾಗಿ ಅಡಿಕೆ ಪ್ರಮಾಣ ಮಾರುಕಟ್ಟೆಗೆ ಬರುವುದು ಹೆಚ್ಚುವುದರಿಂದ ಅಡಿಕೆ ಧಾರಣೆ ಇಳಿಯಲು ಪ್ರಾರಂಭವಾಗುತ್ತದೆ. ಕಳೆದ ವರ್ಷ ಜುಲೈ‌ನಲ್ಲಿ ₹ 55,000 ದಾಟಿದ ಅಡಿಕೆ ದರ, ಸೆಪ್ಟೆಂಬರ್‌ನಲ್ಲಿ ₹.50,000 ಕ್ಕಿಂತ ಕೆಳಕ್ಕೆ ಬರಲು ಪ್ರಾರಂಭವಾಯಿತು. ಇಳಿದ ಅಡಿಕೆ ಧಾರಣೆ ₹ 47,000 ದಲ್ಲಿ ಕೆಲಕಾಲ ಸ್ಥಿರತೆಯಲ್ಲಿ ಉಳಿದಿತ್ತು. ಈ ವರ್ಷ ಮೇ ತಿಂಗಳ ಪ್ರಾರಂಭದಲ್ಲಿ ₹ 55,000 ದ ಸಮೀಪಕ್ಕೆ ಏರಿ ಬಂದ ರಾಶಿ ಇಡಿ ಅಡಿಕೆ ಧಾರಣೆ ಮತ್ತೆ ಇಳಿಯುವುದಕ್ಕೆ ಶುರವಾಗಿತ್ತು (Arecanut Price).

ಅಡಿಕೆ ಬೆಳೆಗಾರರ ನಿರೀಕ್ಷೆ, ಸಮೀಕ್ಷೆ, ಪರೀಕ್ಷೆಗಳ ಲೆಕ್ಕಾಚಾರಕ್ಕೆ ‘ಯಾಕೆ ಹೀಗೆ ಅನ್ನುವ’ ಪ್ರಶ್ನೆಗೆ ಅಡ್ಡ ಬಂದಿದ್ದು ಈ ಬಾರಿಯ ಲೋಕಸಭಾ ಚುನಾವಣೆ! ಈಗ ಅದೂ ಮುಗಿದು, ಪಲಿತಾಂಶಕ್ಕೆ ಕಾಯುತ್ತಿರುವಾಗ, ಅಡಿಕೆ ದರ ಮೇಲ್ಮುಖವಾಗಿದೆ. ಪುನಃ ₹ 55,000 ಗಡಿ ಸಮೀಪ ಬಂದಿದೆ.

ನೀತಿ ಸಂಹಿತೆಯ ಬ್ಯಾರಿಕೇಡ್‌ಗಳು ತೆರವುಗೊಂಡ ಮೇಲೆ ಅಡಿಕೆ ಧಾರಣೆ ಗಣನೀಯವಾಗಿ ಏರಬಹುದು ಎಂದು ಲೆಕ್ಕಾಚಾರದಲ್ಲಿ ರೈತರು ಕಾಯುತ್ತಿದ್ದಾರೆ.

ಅಡಿಕೆ ಧಾರಣೆಯ ವಿಚಾರದಲ್ಲಿ ಇರುವ ‘ನಂಬಿಕೆ’ಗಳು

ಅಡಿಕೆ ಧಾರಣೆಯ ಏರಿಕೆಯ ವಿಚಾರದಲ್ಲಿ ಮಲೆನಾಡಿನಲ್ಲಿ ಕೆಲವು ನಂಬಿಕೆಗಳು ಇವೆ. ವೈಜ್ಞಾನಿಕ ವಿಶ್ಲೇಷಣೆಗೆ ಹೊರತಾಗಿದ್ದರೂ, ನಂಬಿಕೆಗಳನ್ನು ಇಟ್ಟುಕೊಂಡೇ ಅನೇಕ ಅಡಿಕೆ ಬೆಳೆಗಾರರು ಇಂದಿಗೂ ವ್ಯವಹಾರ ನೆಡೆಸುತ್ತಾರೆ.
‘ವರ್ಷದ ಯಾವುದೇ ತಿಂಗಳಲ್ಲಿ ಮಂಗಳವಾರ ಅಮವಾಸ್ಯೆ ಬಂದರೆ ಆ ವರ್ಷ ಅಡಿಕೆಗೆ ಅತ್ಯಧಿಕ ಬೆಲೆ’, ‘ಶ್ರಾವಣ ಮಾಸದಲ್ಲಿ ಅಡಿಕೆಗೆ ರೇಟಾಗುವುದು’, ‘ಮುತ್ತುಗದ ಮರದ ನೆತ್ತಿಯಲ್ಲಿ ಮಾತ್ರ ಹೂವಾದರೆ ಅಡಿಕೆ ದರ ಎತ್ತರಕ್ಕೇರುತ್ತದೆ’ ಕಾಡು ಕೋಳಿ ಕಾಡಂಚಿಗೆ ಬಂದು ಕೂಗಿದರೆ. ಅದು ಅಡಿಕ ದರ ಏರುವಿಕೆಯ ಸೂಚನೆಯಂತೆ! ಪಂಚಾಂಗದ ಪ್ರಕಾರ ‘ಕುಜ’ ರಾಜನಾದಾಗ ಅಡಿಕೆ ದರ ನಿರೀಕ್ಷೆ ಮಟ್ಟವನ್ನು ಮೀರಿ ಏರುತ್ತದೆ… ಇತ್ಯಾದಿ ಹತ್ತಾರು ನಂಬಿಕೆಗಳು ಮಲೆನಾಡಿನ ಅಡಿಕೆ ಬೆಳೆಗಾರರಲ್ಲಿವೆ. ಅಡಿಕೆ ಧಾರಣೆಯ ವಿಷಯ ಚರ್ಚೆಗೆ ಬಂದಾಗ ಇಂತಹ ನಂಬಿಕೆಗಳು ಗಾದೆ ಮಾತಿನಂತೆ ಹೊರಗೆ ಬರುತ್ತವೆ.

ಈ ನಂಬಿಕೆಗಳಿಗೆ ಪೂರಕವಾಗಿ ಎಂಬಂತೆ ಹತ್ತು ವರ್ಷಗಳ ಹಿಂದೆ ಅಡಿಕೆ ಧಾರಣೆ ಲಕ್ಷ ರೂ. ದಾಟಿದಾಗ ಪಂಚಾಂಗದ ಪ್ರಕಾರ ಕುಜ ರಾಜನಾಗಿದ್ದನಂತೆ! ಈ ವರ್ಷವೂ ಕುಜನೇ ಅಧಿಪತಿಯಂತೆ. ಅನಿರೀಕ್ಷಿತ ಅಡಿಕೆ ಧಾರಣೆ ಈ ವರ್ಷವೂ ಏರಲಿದೆ ಅನ್ನುವುದು ಜ್ಯೋತಿಷ್ಯ ನಂಬಿಕೆಯ ಅಭಿಪ್ರಾಯ. ಈ ನಂಬಿಕೆಗೆ ಬೇಷರತ್ ಬೆಂಬಲದಂತೆ ಈ ವರ್ಷ ಅನೇಕ ಕಡೆ ಮುತ್ತುಗದ ಮರದ ನೆತ್ತಿಯಲ್ಲಿ ಹೋವು ಅರಳಿತ್ತಂತೆ.

ಏರುಮುಖ ನಿರೀಕ್ಷೆ

ಎಲೆಕ್ಷನ್ ಮುಗಿದ ಮೇಲೆ ಅಡಿಕೆ ವ್ಯವಹಾರದಲ್ಲಿ ದರ ಏರುಮುಖ ಕಾಣಲಿದೆ ಎನ್ನುವುದಕ್ಕೆ ಪೂರಕವಾಗಿ, ಚುನಾವಣೆಯ ಪಲಿತಾಂಶದ ಹಿಂದಿನೆರಡು ದಿನಗಳಲ್ಲಿ ಅಡಿಕೆ ಏರಿಕೆಯ ಗ್ರಾಫ್‌ನ ಬಾಣ! ಕುಜ ಅಡಿಕೆಯ ದರ ಎತ್ತಲಿದ್ದಾನಾ? ಮುತ್ತುಗದ ಹೂವಿನ ಸೂಚನೆ ನಿಜವಾ? ನಂಬಿಕೆಗಳು ಕೆಲಸ ಮಾಡುತ್ತವಾ? ಚುನಾವಣೆಯ ನಂತರ ಅಡಿಕೆಗೆ ಬೇಡಿಕೆ ಹೆಚ್ಚಲಿದೆಯಾ? ಅಡಿಕೆ ಧಾರಣೆಯಲ್ಲಿ ರೈತರ ನಂಬಿಕೆಗಳ ಮತ್ತು ಅಭಿಪ್ರಾಯಗಳ ಎಕ್ಸಿಟ್ ಪೋಲ್ ನಿಜ ಆಗಲಿದೆಯಾ? ಕಾದು ನೋಡೋಣ.

ಇದನ್ನೂ ಓದಿ: Arecanut Price: ಮಲೆನಾಡಿನ ರಾಶಿ ಇಡಿ ಅಡಿಕೆ ಧಾರಣೆ ‘ಅಬ್‌ ಕಿ ಬಾರ್ ₹60,000 ಪಾರ್ ಆಗಲಿದೆಯಾ?

Continue Reading

ಉತ್ತರ ಕನ್ನಡ

Uttara Kannada News: ವಿಶ್ವದರ್ಶನ ಕಾಲೇಜಿನಲ್ಲಿ ಪ್ರಥಮ ಪಿಯು ತರಗತಿ ಪ್ರಾರಂಭೋತ್ಸವ

Uttara Kannada News: ಯಲ್ಲಾಪುರ ಪಟ್ಟಣದ ವಿಶ್ವದರ್ಶನ ಕಾಲೇಜಿನಲ್ಲಿ ಪ್ರಥಮ ಪಿಯು ತರಗತಿ ಪ್ರಾರಂಭೋತ್ಸವ ಕಾರ್ಯಕ್ರಮ ಸೋಮವಾರ ನಡೆಯಿತು.

VISTARANEWS.COM


on

First PU Class Commencement Programme at Vishwadarshana College
Koo

ಯಲ್ಲಾಪುರ: ಪಟ್ಟಣದ ವಿಶ್ವದರ್ಶನ ಕಾಲೇಜಿನಲ್ಲಿ ಪ್ರಥಮ ಪಿಯು ತರಗತಿ ಪ್ರಾರಂಭೋತ್ಸವ ಕಾರ್ಯಕ್ರಮ ಸೋಮವಾರ (Uttara Kannada News) ನಡೆಯಿತು.

ವಿಶ್ವದರ್ಶನ ಶಿಕ್ಷಣ ಸಮೂಹದ ಸಿಇಒ ಅಜಯ್ ಭಾರತೀಯ ಕಾರ್ಯಕ್ರಮದಲ್ಲಿ ಮಾತನಾಡಿ, ನಾವು ಮಾಡುವ ಕಾರ್ಯ ಸ್ವಹಿತದ ಜತೆಗೆ ದೇಶದ ಹಿತವನ್ನು ಸಾಧಿಸುವಂತಿರಬೇಕು. ಶಿಕ್ಷಣ ನೀಡಬೇಕಾದ, ಪಡೆಯಬೇಕಾದ ಎಲ್ಲರೂ ರಾಷ್ಟ್ರದ ಘನತೆ, ಗೌರವವನ್ನು ಕಾಪಾಡುವ ಆಲೋಚನೆಯನ್ನು ಸದಾ ಮಾಡುತ್ತಿರಬೇಕು ಎಂದು ಹೇಳಿದರು.

ಇದನ್ನೂ ಓದಿ: Book Release: ಬೆಂಗಳೂರಿನಲ್ಲಿ ಜೂ. 5ರಂದು ಗ್ರಂಥ ಲೋಕಾರ್ಪಣೆ, ಪ್ರಶಸ್ತಿ ಪ್ರದಾನ

ಕಾಲೇಜಿನ ಪ್ರಾಚಾರ್ಯ ಡಿ.ಕೆ. ಗಾಂವ್ಕರ್ ಪ್ರಾಸ್ತಾವಿಕವಾಗಿ ಮಾತನಾಡಿ, ಮಕ್ಕಳಿಗಾಗಿ ಸಂಪತ್ತು ಮಾಡುವುದಕ್ಕಿಂತ ಮಕ್ಕಳನ್ನೇ ಸಂಪತ್ತಾಗಿಸುವುದು ಸೂಕ್ತ. ಜ್ಞಾನ ಸಂಪತ್ತಿನಿಂದ ಮಕ್ಕಳನ್ನು ಶ್ರೀಮಂತರಾಗಿಸುವ ಮಾರ್ಗವೇ ಶ್ರೇಷ್ಠವಾದದ್ದು ಆ ಕಾರ್ಯವನ್ನು ವಿಶ್ವದರ್ಶನ ಮಾಡುತ್ತಿದೆ‌ ಎಂದರು.

ಅದಕ್ಕಾಗಿ ನಮ್ಮ ಪಿಯು ಕಾಲೇಜು ಉತ್ತಮ ಮೂಲಸೌಕರ್ಯ ಮತ್ತು ನುರಿತ ಉಪನ್ಯಾಸಕ ವರ್ಗವನ್ನು ಹೊಂದಿದೆ ಎಂದು ಹೇಳಿದರಲ್ಲದೇ, ಪ್ರಥಮ ಪಿಯು ವಿದ್ಯಾರ್ಥಿಗಳಿಗೆ ಮತ್ತು ಪಾಲಕರಿಗೆ ಕಾಲೇಜಿನ ಉಪನ್ಯಾಸಕ ವರ್ಗವನ್ನು ಪರಿಚಯಿಸಿ, ಕಾಲೇಜಿನ ವಿಶೇಷತೆಗಳ ಕುರಿತು ಮಾಹಿತಿ ನೀಡಿದರು.

ಕಾಲೇಜಿನ ಮಾಜಿ ವಿದ್ಯಾರ್ಥಿಗಳಾದ ಅಪೂರ್ವ ಹಾಗೂ ಶ್ರೀಗೌರಿ ಭಟ್, ಕಾಲೇಜಿನಲ್ಲಿ ತಮ್ಮ ಅನುಭವ ಜೀವನಪೂರ್ತಿ ಸ್ಮರಿಸುವಂತದ್ದು ಎಂದು ಅನಿಸಿಕೆ ಹಂಚಿಕೊಂಡರು. ಇದೇ ಸಂದರ್ಭದಲ್ಲಿ ಕಳೆದ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 42 ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಿ, ಗೌರವಿಸಲಾಯಿತು.

ಇದನ್ನೂ ಓದಿ: Samsung: ಸ್ಯಾಮ್‌ಸಂಗ್‌ನ ʼಬಿಗ್‌ ಟಿವಿ ಡೇಸ್‌ʼ ಸೇಲ್‌; ದೊಡ್ಡ ಟಿವಿಗಳ ಮೇಲೆ ಅತ್ಯಾಕರ್ಷಕ ಆಫರ್‌!

ಶ್ರಾವ್ಯ ಪ್ರಾರ್ಥಿಸಿದಳು. ಉಪನ್ಯಾಸಕ ಗುರುರಾಜ್ ಭಟ್ ನಿರ್ವಹಿಸಿದರು. ಉಪ ಪ್ರಾಂಶುಪಾಲ ನಾಗರಾಜ ಹೆಗಡೆ ವಂದಿಸಿದರು.

Continue Reading
Advertisement
Election Results 2024
ಪ್ರಮುಖ ಸುದ್ದಿ3 mins ago

Election Results 2024 : ಲೋಕಸಭಾ ಚುನಾವಣಾ ಮತ ಎಣಿಕೆ ಆರಂಭ; ಇವಿಎಂಗಳಲ್ಲಿದ್ದ ಪಕ್ಷಗಳ ಭವಿಷ್ಯ ಬಹಿರಂಗ

Lok Sabha Election 2024
ದೇಶ12 mins ago

Lok Sabha Election 2024:ಮತ ಎಣಿಕೆ ಮೊದಲೇ ಕಾಂಗ್ರೆಸ್ ನಾಯಕರಿಂದ ಮತಯಂತ್ರ ದೂಷಣೆ ಆರಂಭ!

Lok Sabha Election Results 2024
ಪ್ರಮುಖ ಸುದ್ದಿ12 mins ago

Lok Sabha Election Results 2024: ರಾಜ್ಯದ 474 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ನಿರ್ಧಾರಕ್ಕೆ ಕೌಂಡ್ ಡೌನ್

Election Results 2024 modi face 400 par
ಪ್ರಮುಖ ಸುದ್ದಿ45 mins ago

Election Results 2024: ಎನ್‌ಡಿಎ 400 ಸ್ಥಾನ ತಲುಪಲು ಈ ರಾಜ್ಯಗಳೇ ಹೆದ್ದಾರಿ! ಸಮೀಕ್ಷೆಗಳು ಹೇಳಿದ್ದೇನು?

Lok Sabha Election Result 2024 Live
ದೇಶ1 hour ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Benefits Of Litchi
ಆರೋಗ್ಯ1 hour ago

Benefits Of Litchi: ಸಿಹಿಯಾದ, ರುಚಿಯಾದ ಲಿಚಿ ಹಣ್ಣನ್ನು ತಿಂದರೆ ಆರೋಗ್ಯ ಲಾಭ ಹಲವಾರು

Exit Poll 2024
ಪ್ರಮುಖ ಸುದ್ದಿ1 hour ago

Election Results 2024: ಇಂದು ಹೊರಬೀಳಲಿದೆ ಫಲಿತಾಂಶ; ಎಕ್ಸಿಟ್‌ ಪೋಲ್‌ಗಳು ಹೇಳಿದ್ದೇನು?

karnataka weather Forecast
ಮಳೆ2 hours ago

Karnataka Weather : ಹವಾಮಾನ ತಜ್ಞರ ವಾರ್ನಿಂಗ್‌; ಇನ್ನೊಂದು ವಾರ ವಿಪರೀತ ಮಳೆ, ಜೂ.6ರ ವರೆಗೂ ಮೀನುಗಾರಿಕೆಗೆ ಬ್ರೇಕ್‌

Home Remedies For Mosquito Bite
ಆರೋಗ್ಯ2 hours ago

Home Remedies For Mosquito Bite: ಸೊಳ್ಳೆ ಕಚ್ಚಿದ ಜಾಗದಲ್ಲಿ ವಿಪರೀತ ಉರಿಯೇ? ಈ ಸರಳ ಮನೆಮದ್ದುಗಳನ್ನು ಬಳಸಿ

Lok Sabha Election Result
ದೇಶ3 hours ago

Lok Sabha Election Result 2024: ಇಂದು ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಶುರು; ದೇಶದ ಚುಕ್ಕಾಣಿ ಹಿಡಿಯೋರು ಯಾರು?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election Result 2024 Live
ದೇಶ1 hour ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ17 hours ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ17 hours ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ2 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು3 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ5 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ7 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು7 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

ಟ್ರೆಂಡಿಂಗ್‌