Viral Video: ಅಯೋಧ್ಯೆ ನದಿಯಲ್ಲಿ ಸ್ನಾನ ಮಾಡುವಾಗ ಪತ್ನಿಗೆ ಮುತ್ತುಕೊಟ್ಟು ಜನರಿಂದ ಗೂಸಾ ತಿಂದ! - Vistara News

ವೈರಲ್ ನ್ಯೂಸ್

Viral Video: ಅಯೋಧ್ಯೆ ನದಿಯಲ್ಲಿ ಸ್ನಾನ ಮಾಡುವಾಗ ಪತ್ನಿಗೆ ಮುತ್ತುಕೊಟ್ಟು ಜನರಿಂದ ಗೂಸಾ ತಿಂದ!

ಸರಯೂ ಘಾಟ್‌ (Ayodhya Saryu Ghat) ಪವಿತ್ರ ಸ್ಥಳ. ಇಲ್ಲಿ ಅಸಭ್ಯ ವರ್ತನೆ ಮಾಡುವಂತಿಲ್ಲ. ಸಾರ್ವಜನಿಕವಾಗಿ ಕಿಸ್‌ ಮಾಡುವುದು ನಮ್ಮ ಸಂಸ್ಕೃತಿಯಲ್ಲ ಎಂದು ಹಲ್ಲೆ ಮಾಡಿದವರು ಹೇಳಿದ್ದಾರೆ.

VISTARANEWS.COM


on

Ayodhya Sarayu Ghat
ಘಟನೆಯ ದೃಶ್ಯ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಅಯೋಧ್ಯೆ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ಸರಯೂ ನದಿಯ ಸ್ನಾನ ಘಟ್ಟದಲ್ಲಿ ಪತ್ನಿಯೊಂದಿಗೆ ಸ್ನಾನ ಮಾಡುತ್ತಿದ್ದ ಯುವಕನೊಬ್ಬನಿಗೆ ಸ್ಥಳೀಯರ ಗುಂಪೊಂದು ಥಳಿಸಿದೆ. ಪವಿತ್ರ ನದಿಯಲ್ಲಿ ಸ್ನಾನ ಮಾಡುವಾಗ ಆತ ಪತ್ನಿಗೆ ಮುತ್ತು ಕೊಟ್ಟ ಎಂಬ ಕಾರಣಕ್ಕೆ ಹೀಗೆ ಹೊಡೆಯಲಾಗಿದೆ. ಸರಯೂ ಪವಿತ್ರ ನದಿ. ಇಲ್ಲಿ ಯಾರೇ ಆಗಲಿ ಅಸಭ್ಯವಾಗಿ ವರ್ತಿಸಲು ನಾವು ಅವಕಾಶ ಕೊಡುವುದಿಲ್ಲ ಎಂದು ಹಲ್ಲೆ ಮಾಡಿದವರು ಹೇಳಿಕೊಂಡಿದ್ದಾರೆ.

ಸರಯೂ ನದಿಯಲ್ಲಿ ಈ ದಂಪತಿ ಮುಳುಗೆದ್ದು ಸ್ನಾನ ಮಾಡುತ್ತಿದ್ದರು. ಒಬ್ಬರಿಗೊಬ್ಬರು ಹಿಡಿದುಕೊಂಡಿದ್ದರು. ಈ ವೇಳೆ ಪತಿ ತನ್ನ ಪತ್ನಿಗೆ ಚುಂಬಿಸಿದ್ದಾನೆ. ಅಷ್ಟರಲ್ಲಿ ಅವರ ಹಿಂದೆ ಸ್ನಾನ ಮಾಡುತ್ತಿದ್ದ ಒಂದಷ್ಟು ಜನ ಬಂದು ಆತನನ್ನು ಎಳೆದುಕೊಂಡು ಹೋಗಿ ನಿಂದಿಸಿದ್ದಲ್ಲದೆ, ಹಲ್ಲೆಯನ್ನೂ ಮಾಡಿದ್ದಾರೆ. ಸಾರ್ವಜನಿಕ ಸ್ಥಳ, ಅದರಲ್ಲೂ ಶ್ರೀರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಇಂಥ ಕೃತ್ಯ ನಡೆಯುವುದನ್ನು ನಾವು ಸಹಿಸುವುದಿಲ್ಲ ಎಂದಿದ್ದಾರೆ. ಆ ಮಹಿಳೆ ತನ್ನ ಪತಿಯನ್ನು ಕಾಪಾಡಲು ಹೋಗಿ ವಿಫಲಳಾಗಿದ್ದಾಳೆ. ವಿಡಿಯೋ ಸೋಷಿಯಲ್‌ ಮೀಡಿಯಾಗಳಲ್ಲಿ ಸಿಕ್ಕಾಪಟೆ ವೈರಲ್‌ ಆಗುತ್ತಿದೆ. ʼಪತಿ-ಪತ್ನಿ ಮಧ್ಯೆ ಚುಂಬನ, ರೊಮ್ಯಾನ್ಸ್‌ಗಳು ತಪ್ಪಲ್ಲ. ಆದರೆ ಅದಕ್ಕೊಂದು ಸ್ಥಳ ಎಂದಿರುತ್ತದೆ. ಇಂಥ ಪವಿತ್ರ ಪ್ರದೇಶದಲ್ಲಿ, ಸಾರ್ವಜನಿಕವಾಗಿ ಮುತ್ತುಕೊಡುವುದು ಭಾರತೀಯ ಸಂಸ್ಕೃತಿಯೂ ಅಲ್ಲʼ ಎಂಬ ಅಭಿಪ್ರಾಯ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದೆ.

ಅಂದಹಾಗೇ, ಘಟನೆ ನಡೆದಿದ್ದು ತಮ್ಮ ಗಮನಕ್ಕೂ ಬಂದಿದೆ. ವಿಡಿಯೋವನ್ನು ನೋಡಿದ್ದೇವೆ. ಆದರೆ ನಮಗೆ ಯಾರೂ ದೂರು ಕೊಟ್ಟಿಲ್ಲ. ಹಾಗಿದ್ದಾಗ್ಯೂ ದಂಪತಿಯನ್ನು ಪತ್ತೆಹಚ್ಚಲು ಪ್ರಯತ್ನ ನಡೆಸಿದ್ದೇವೆ. ಅವರೇನಾದರೂ ದೂರು ಕೊಟ್ಟರೆ ಹಲ್ಲೆ ಮಾಡಿದವರ ವಿರುದ್ಧ ಎಫ್‌ಐಆರ್‌ ದಾಖಲು ಮಾಡುತ್ತೇವೆ ಎಂದು ಅಯೋಧ್ಯೆ ಹಿರಿಯ ಪೊಲೀಸ್‌ ಅಧೀಕ್ಷಕ ಶೈಲೇಶ್‌ ಪಾಂಡೆ ತಿಳಿಸಿದ್ದಾರೆ.

ಇದನ್ನೂ ಓದಿ: Viral Video: ಅಸಭ್ಯ ವರ್ತನೆ; ಪ್ರತಿಭಟನೆ ವೇಳೆ ಪೊಲೀಸರ ಮೇಲೆ ಉಗುಳಿದ ಕಾಂಗ್ರೆಸ್‌ ನಾಯಕಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Viral News: ವಿದ್ಯಾರ್ಥಿಗಳಿಗೆ ಬಡಿಸಿದ್ದ ಊಟದ ತಟ್ಟೆಯಲ್ಲಿತ್ತು ಸತ್ತ ಹಾವು! ವಿಡಿಯೊ ನೋಡಿ

Viral News: ಆಹಾರವನ್ನು ಅನ್ನಪೂರ್ಣೆ ಎಂದು ಕಣ್ಣಿಗೊತ್ತಿ ಸೇವಿಸುವ ನಂಬಿಕೆಯುಳ್ಳ ಈ ದೇಶದಲ್ಲಿ ಇಂದು ತಿನ್ನುವ ಆಹಾರವನ್ನು ಅನುಮಾನದಿಂದ ನೋಡುವ ಕಾಲ ಬಂದಿದೆ. ಬಿಹಾರದ ಬಂಕಾದ ಸರ್ಕಾರಿ ಕಾಲೇಜಿನ ವಿದ್ಯಾರ್ಥಿಯೊಬ್ಬ ಕಾಲೇಜಿನ ಅವ್ಯವಸ್ಥೆಯಿಂದ ಹಿಡಿದು ಕಳಪೆ ಗುಣಮಟ್ಟದ ಆಹಾರವನ್ನು ನೀಡುತ್ತಿರುವ ವಿಚಾರಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಬಯಲು ಮಾಡಿದ್ದಾನೆ. ವಿದ್ಯಾರ್ಥಿಗಳಿಗೆ ನೀಡಲಾಗಿದ್ದ ಊಟದಲ್ಲಿ ಸತ್ತ ಹಾವು ಇತ್ತು ಎಂದು ತನ್ನ ಸೋಷಿಯಲ್ ಮೀಡಿಯಾ ಪೇಜ್ ನಲ್ಲಿ ಬರೆದಿದ್ದಾನೆ. ಆ ಆಹಾರವನ್ನು ಸೇವಿಸಿದ ವಿದ್ಯಾರ್ಥಿಗಳು ಅನಾರೋಗ್ಯಕ್ಕೀಡಾಗಿದ್ದರು ಎಂಬುದಾಗಿ ತಿಳಿಸಿದ್ದಾನೆ.

VISTARANEWS.COM


on

Viral News
Koo

ಬಿಹಾರ : ಎಲ್ಲಾ ಶಾಲಾ ಕಾಲೇಜುಗಳಲ್ಲಿ ಸರ್ಕಾರ ಮಕ್ಕಳಿಗೆ ಬಿಸಿಯೂಟ ಯೋಜನೆಯನ್ನು ನೀಡುತ್ತಿದೆ. ಅದರಂತೆ ಮಕ್ಕಳಿಗೆ ಮಧ್ಯಾಹ್ನದ ಊಟವನ್ನು ಶಾಲೆಯಲ್ಲಿಯೇ ತಯಾರಿಸಿ ಉಚಿತವಾಗಿ ನೀಡಲಾಗುತ್ತಿದೆ. ಆದರೆ ಈ ಊಟ ಸೇವಿಸಿ ಹಲವು ಬಾರಿ ಮಕ್ಕಳು ಅಸ್ವಸ್ಥರಾದ ಬಗ್ಗೆ ನಾವು ಕೇಳಿದ್ದೇವೆ. ಅಂತಹದೊಂದು ಘಟನೆ ಬಿಹಾರದ ಬಂಕಾದಲ್ಲಿ ನಡೆದಿದ್ದು, ಈ ಬಗ್ಗೆ ಇಲ್ಲಿನ ವಿದ್ಯಾರ್ಥಿಯೊಬ್ಬ ಸಾಕ್ಷಿ ಸಮೇತ ನಿರೂಪಿಸಿದ್ದಾನೆ. ಈ ಸುದ್ದಿ ಈಗ ಎಲ್ಲೆಡೆ ವೈರಲ್‌ (Viral News) ಆಗಿದೆ.

ಬಿಹಾರದ ಬಂಕಾದ ಸರ್ಕಾರಿ ಕಾಲೇಜಿನ ವಿದ್ಯಾರ್ಥಿ ರಿಷಿ ಸಿಂಗ್ ಕಾಲೇಜಿನ ಅವ್ಯವಸ್ಥೆಯಿಂದ ಹಿಡಿದು ಕಳಪೆ ಗುಣಮಟ್ಟದ ಆಹಾರವನ್ನು ನೀಡುತ್ತಿರುವ ವಿಚಾರಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಬಯಲು ಮಾಡಿದ್ದಾನೆ.
ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗೆ ನೀಡಲಾಗಿದ್ದ ಊಟದಲ್ಲಿ ಸತ್ತ ಹಾವು ಇತ್ತು ಎಂದು ತನ್ನ ಸೋಷಿಯಲ್‌ ಮೀಡಿಯಾ ಪೇಜ್ ನಲ್ಲಿ ಬರೆದಿದ್ದಾನೆ. ಆ ಆಹಾರವನ್ನು ಸೇವಿಸಿದ ವಿದ್ಯಾರ್ಥಿಗಳು ಅನಾರೋಗ್ಯಕ್ಕೀಡಾಗಿದ್ದರು ಎಂಬುದಾಗಿ ತಿಳಿಸಿದ್ದಾನೆ. ಇದಕ್ಕೆ ಸಂಬಂಧಿಸಿದ ಪೋಟೊಗಳನ್ನು ಪೋಸ್ಟ್ ಮಾಡಿದ್ದಾನೆ.

ಹಾಗೇ ಮತ್ತೊಂದು ಪೋಸ್ಟ್ ನಲ್ಲಿ ಸರ್ಕಾರಿ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ ಬ್ರೆಡ್‌ನ ಬಗ್ಗೆ ತಿಳಿಸಿದ್ದಾನೆ. ಬ್ರೆಡ್‌ಗೆ ಅವಧಿ ಮೀರಿದ ಕಾರಣ ಅದರಲ್ಲಿ ಇರುವೆ, ಹುಳುಗಳು ಇವೆ. ಅದನ್ನು ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ. ಇದು ವಿದ್ಯಾರ್ಥಿಗಳ ಆರೋಗ್ಯವನ್ನು ಹಾಳುಮಾಡುತ್ತದೆ ಎಂದು ಅದಕ್ಕೆ ಸಂಬಂಧಪಟ್ಟ ವಿಡಿಯೊ ತುಣುಕೊಂದನ್ನು ಪೋಸ್ಟ್ ಮಾಡಿದ್ದಾನೆ.

ಅಲ್ಲದೇ ಇದರ ಕುರಿತು ಕ್ರಮ ತೆಗೆದುಕೊಳ್ಳಲು ಕಾಲೇಜು ಆಡಳಿತ ಮತ್ತು ಸ್ಥಳೀಯ ಪ್ರಾಧಿಕಾರ ಯಾರು ಮುಂದೆ ಬರುತ್ತಿಲ್ಲ ಎಂದು ವಿದ್ಯಾರ್ಥಿಯು ತಿಳಿಸಿದ್ದಾನೆ. ಹಾಗಾಗಿ ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತ ಬಂಕಾಗೆ ಟ್ಯಾಗ್ ಮಾಡಿದ್ದಾನೆ. ಜೂನ್ 17 ಸೋಮವಾರದಿಂದು ಈ ಘಟನೆ ವರದಿಯಾಗಿದೆ.

ಇದನ್ನೂ ಓದಿ: Viral Video: ಯುಪಿಎಸ್‌ಸಿ ಪರೀಕ್ಷಾ ಕೇಂದ್ರಕ್ಕೆ ನೋ ಎಂಟ್ರಿ; ಗೇಟ್ ಬಳಿ ಮೂರ್ಛೆ ಹೋದ ತಾಯಿ!

ಈ ಘಟನೆಯ ನಂತರ ಬಂಕಾ ಜಿಲ್ಲಾ ಮ್ಯಾಜಿಸ್ಟ್ರೇಟ್ ಅಂಶುಲ್ ಕುಮಾರ್ ಮತ್ತು ಇತರ ಕೆಲವು ಅಧಿಕಾರಿಗಳು ಈ ವಿಷಯವನ್ನು ತನಿಖೆ ಮಾಡಲು ಮೆಸ್ ಗೆ ಭೇಟಿ ನೀಡಿದ್ದಾರೆ ಮತ್ತು ಮೆಸ್ ಮಾಲೀಕರಿಗೆ ದಂಡ ವಿಧಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

Continue Reading

Latest

Video Viral: ಮಹಿಳೆಯನ್ನು ತಿವಿದು ರಸ್ತೆಯುದ್ದಕ್ಕೂ ಎಳೆದೊಯ್ದ ಎಮ್ಮೆ! ವಿಡಿಯೊ ಇದೆ

Video Viral: ಮಹಿಳೆಯೊಬ್ಬಳು ಕಿರಿದಾದ ಓಣಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಎದುರು ಬದಿಯಿಂದ ಓಡಿ ಬರುತ್ತಿರುವ ಎಮ್ಮೆ ಆಕೆಯನ್ನು ತಿವಿದಿದೆ. ಆಗ ಎಮ್ಮೆಯ ಕೊಂಬಿಗೆ ಮಹಿಳೆಯ ಉಡುಪು ಸಿಕ್ಕಿಹಾಕಿಕೊಂಡಿದ್ದ ಪರಿಣಾಮ ಬೀದಿಯಲ್ಲಿ 500 ಮೀಗಳಷ್ಟು ದೂರ ಅದು ಎಳೆದುಕೊಂಡು ಹೋಗಿದೆ. ಕೊನೆಗೆ ಸ್ಥಳೀಯರು ಎಮ್ಮೆಯಿಂದ ಮಹಿಳೆಯನ್ನು ಕಾಪಾಡಿದ್ದಾರೆ. ಹಾಗೇ ಆಕೆಗೆ ಗಂಭೀರ ಗಾಯಗಳಾದ ಹಿನ್ನೆಲೆ ಆಕೆಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.ಈ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

VISTARANEWS.COM


on

Viral Video
Koo

ಚೆನ್ನೈ : ಮಹಿಳೆಯೊಬ್ಬಳನ್ನು ಎಮ್ಮೆಯೊಂದು ರಸ್ತೆಯುದ್ದಕ್ಕೂ 500 ಮೀಗಳಷ್ಟು ದೂರ ತಿವಿದುಕೊಂಡು ಹೋಗಿ ಗಂಭೀರವಾಗಿ ಗಾಯಗೊಳಿಸಿದ ಆಘಾತಕಾರಿ ಘಟನೆ ಚೆನ್ನೈನ ತಿರುವೊಟ್ರಿಯೂರ್‌ನಲ್ಲಿ ನಡೆದಿದೆ. ಈ ಘಟನೆ ಸಿಸಿಟಿಯಲ್ಲಿ ಸೆರೆಯಾಗಿದ್ದು, ಅದನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಲಾಗಿದೆ. ಇದೀಗ ಸಿಕ್ಕಾಪಟ್ಟೆ ವೈರಲ್ (Video Viral) ಆಗಿದೆ.

ವಿಡಿಯೊದಲ್ಲಿ ಮಹಿಳೆಯನ್ನು ಎಮ್ಮೆ ಎಳೆದುಕೊಂಡು ಹೋಗುತ್ತಿದ್ದು, ಅನೇಕರು ಮಹಿಳೆಗೆ ಸಹಾಯ ಮಾಡಲು ಅದರ ಹಿಂದೆ ಓಡಿ ಬರುತ್ತಿರುವ ದೃಶ್ಯ ಕಂಡುಬಂದಿದೆ. ಭಾನುವಾರ ಮಧ್ಯಾಹ್ನದ ವೇಳೆ 35 ವರ್ಷದ ಈ ಮಹಿಳೆ ಗ್ರಾಮದ ಕಿರಿದಾದ ಓಣಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಎದುರು ಬದಿಯಿಂದ ಓಡಿ ಬರುತ್ತಿರುವ ಎಮ್ಮೆ ಆಕೆಯನ್ನು ತಿವಿದಿದೆ. ಆಗ ಎಮ್ಮೆಯ ಕೊಂಬಿಗೆ ಮಹಿಳೆಯ ಉಡುಪು ಸಿಕ್ಕಿಹಾಕಿಕೊಂಡಿದ್ದ ಪರಿಣಾಮ ಬೀದಿಯಲ್ಲಿ 500 ಮೀಗಳಷ್ಟು ದೂರ ಅದು ಎಳೆದುಕೊಂಡು ಹೋಗಿದೆ. ಕೊನೆಗೆ ಸ್ಥಳೀಯರು ಎಮ್ಮೆಯಿಂದ ಮಹಿಳೆಯನ್ನು ಕಾಪಾಡಿದ್ದಾರೆ. ಹಾಗೇ ಆಕೆಗೆ ಗಂಭೀರ ಗಾಯಗಳಾದ ಹಿನ್ನೆಲೆ ಆಕೆಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಮಹಿಳೆಗೆ ದೇಹದ ಹಲವು ಭಾಗಗಳಲ್ಲಿ ಗಾಯಗಳಾಗಿದ್ದು ಆಕೆ ಚಿಕಿತ್ಸೆ ಪಡೆಯುತ್ತಿದ್ದಾಳೆ ಮತ್ತು ಪ್ರಾಣಾಪಾಯದಿಂದ ಪಾರಾಗಿದ್ದಾಳೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ. ಮಹಿಳೆಯನ್ನು ಎಮ್ಮೆಯಿಂದ ಬಿಡಿಸಿದ ನಂತರ ಆ ಎಮ್ಮೆ ರಸ್ತೆ ಬದಿಯಲ್ಲಿ ನಿಲ್ಲಿಸಿದ ಸಿಕ್ಕ ಸಿಕ್ಕ ವಾಹನಗಳನ್ನು ಕೆಡವಿದೆ. ಹಾಗಾಗಿ ಎಮ್ಮೆಯನ್ನು ಸೆರೆ ಹಿಡಿಯಲು ಗ್ರೇಟರ್ ಚೆನ್ನೈ ಕಾರ್ಪೋರೇಷನ್ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಅದನ್ನು ಹಿಡಿದು, ಪುಲಿಯಂಥೋಪ್‌ನಲ್ಲಿರುವ ಗ್ರೇಟರ್ ಚೆನ್ನೈ ಕಾರ್ಪೋರೇಷನ್‌ ಆಶ್ರಯಕ್ಕೆ ಕರೆದೊಯ್ಯಲಾಯಿತು ಎಂಬುದಾಗಿ ತಿಳಿದುಬಂದಿದೆ.

ಇದನ್ನೂ ಓದಿ: Viral Video: 7 ಅಜ್ಜಂದಿರ ಜೊತೆ ಸಂಸಾರ ನಡೆಸುತ್ತಿರುವ ಯುವತಿ; ಆಕೆಯ ಪ್ಲ್ಯಾನ್ ಇಂಟರೆಸ್ಟಿಂಗ್!

ಈ ವರ್ಷದ ಕಾರ್ಪೋರೇಷನ್ ಬಜೆಟ್ ಮಂಡನೆಯ ವೇಳೆ ಮೇಯರ್ ಆರ್. ಪ್ರಿಯಾ ಅವರು ನಗರದಾದ್ಯಂತ ಹಸುಗಳಿಗೆ ಪರವಾನಗಿ ಮತ್ತು ದಕ್ಷಿಣ ಚೆನ್ನೈನಲ್ಲಿ ಹೆಚ್ಚುವರಿ ಆಶ್ರಯಗಳ ಸ್ಥಾಪನೆಯ ಯೋಜನೆ ಜಾರಿಗೊಳಿಸಿದ್ದರು. ಆದರೆ ಲೋಕಸಭಾ ಚುನಾವಣೆಯ ಕಾರಣದಿಂದ ಈ ಎರಡೂ ಯೋಜನೆಗಳಿಗೆ ಕೆಲಸ ಪ್ರಾರಂಭಿಸಲು ಸಾಧ್ಯವಾಗಿಲ್ಲ ಎಂಬುದಾಗಿ ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ.

Continue Reading

Latest

Viral Video: ಗಂಭೀರ ಸ್ಥಿತಿಯಲ್ಲಿರುವ ಅಪ್ಪನ ಆಸೆ ಈಡೇರಿಕೆ; ಆಸ್ಪತ್ರೆಯ ಐಸಿಯುನಲ್ಲೇ ಮಗಳ ಮದುವೆ!

Viral Video: ಹೆಣ್ಣುಮಕ್ಕಳ ಮದುವೆಯನ್ನು ಕಣ್ತುಂಬಿಸಿಕೊಳ್ಳಬೇಕು ಎಂಬ ಆಸೆ ಎಲ್ಲಾ ತಂದೆಯರಿಗಿರುತ್ತದೆ. ಆದರೆ ಆ ಸಂದರ್ಭದಲ್ಲಿ ಆರೋಗ್ಯ ಕೈ ಕೊಟ್ಟರೆ ಆ ತಂದೆಯ ಪರಿಸ್ಥಿತಿ ಹೇಗಿರಬೇಡ? ಇಂತಹದ್ದೇ ಒಂದು ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.ಇನ್ನೇನು ಕೆಲವೇ ದಿನಗಳಲ್ಲಿ ಹೆಣ್ಣುಮಕ್ಕಳ ಮದುವೆ ಇದೆಯೆನ್ನುವಾಗ ತಂದೆಯೊಬ್ಬರಿಗೆ ಆರೋಗ್ಯ ಸಮಸ್ಯೆ ಎದುರಾಗಿ ಐಸಿಯುಗೆ ದಾಖಲಾದರು. ಮಕ್ಕಳ ಮದುವೆಯ ವೇಳೆ ಅವರನ್ನು ಡಿಸ್ಚಾರ್ಜ್ ಮಾಡಲು ವೈದ್ಯರು ನಿರಾಕರಿಸಿದರು. ಹಾಗಾಗಿ ಅವರ ಮಕ್ಕಳ ಮದುವೆ ನೋಡಬೇಕೆಂಬ ಬಯಕೆಯನ್ನು ಈಡೇರಿಸಲು ಆಸ್ಪತ್ರೆಯ ವೈದ್ಯರ ಬೆಂಬಲದೊಂದಿಗೆ ಅವರಿದ್ದ ಐಸಿಯುನಲ್ಲಿಯೇ ಅವರ ಮಕ್ಕಳಿಗೆ ಮದುವೆ ಮಾಡಲಾಗಿದೆ.

VISTARANEWS.COM


on

Viral Video
Koo

ಲಕ್ನೋ : ಆಸ್ಪತ್ರೆಗೆ ಎಲ್ಲರೂ ಅನಾರೋಗ್ಯಕ್ಕೆ ಚಿಕಿತ್ಸೆಗೆಂದು ಹೋಗುತ್ತಾರೆ. ಆದರೆ ಉತ್ತರ ಪ್ರದೇಶದ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆಗೆಂದು ಬಂದ ರೋಗಿಯ ಹೆಣ್ಣು ಮಕ್ಕಳಿಗೆ ಐಸಿಯುನಲ್ಲಿ ಮದುವೆ ಮಾಡಲಾಗಿದೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು ಸಿಕ್ಕಾಪಟ್ಟೆ ವೈರಲ್(Viral Video) ಆಗಿದೆ.

ಉತ್ತರ ಪ್ರದೇಶದ ಲಕ್ನೋದ ಎರಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಲಕ್ನೋ ನಿವಾಸಿಯಾದ ಮೊಹಮ್ಮದ್ ಇಕ್ಬಾಲ್ (51) ಅವರು ದಾಖಲಾಗಿದ್ದರು. ಆದರೆ ಇನ್ನೂ ಕೆಲವೇ ದಿನಗಳಲ್ಲಿ ಅವರ ಹೆಣ್ಣುಮಕ್ಕಳ ಮದುವೆ ಇತ್ತು. ಇಕ್ಬಾಲ್ ಅವರು ತೀವ್ರ ಎದೆ ನೋವಿನಿಂದ ನರಳುತ್ತಿರುವ ಹಿನ್ನೆಲೆಯಲ್ಲಿ ಅವರನ್ನು ಐಸಿಯುಗೆ ದಾಖಲಿಸಲಾಗಿತ್ತು. ಆದರೆ ಮಕ್ಕಳ ಮದುವೆಯ ವೇಳೆ ಅವರನ್ನು ಡಿಸ್ಚಾರ್ಜ್ ಮಾಡಲು ವೈದ್ಯರು ನಿರಾಕರಿಸಿದರು. ಹಾಗಾಗಿ ಅವರ ಮಕ್ಕಳ ಮದುವೆ ನೋಡಬೇಕೆಂಬ ಬಯಕೆಯನ್ನು ಈಡೇರಿಸಲು ಆಸ್ಪತ್ರೆಯ ವೈದ್ಯರ ಬೆಂಬಲದೊಂದಿಗೆ ಅವರಿದ್ದ ಐಸಿಯುನಲ್ಲಿಯೇ ಅವರ ಮಕ್ಕಳಿಗೆ ಮದುವೆ ಮಾಡಲಾಯಿತು!

ಇಕ್ಬಾಲ್ ಸಂಬಂಧಿಕರು ಆತ ಇಲ್ಲದೇ ಮಕ್ಕಳ ಮದುವೆಗೆ ಸಿದ್ಧತೆ ನಡೆಸುತ್ತಿದ್ದರು. ಆದರೆ ಇಕ್ಬಾಲ್ ಮದುವೆಗೆ ಬರಲು ಸಾಧ್ಯವಾಗದ ಕಾರಣ ಆಸ್ಪತ್ರೆಯಲ್ಲಿಯೇ ಸರಳವಾಗಿ ಮದುವೆಯಾಗಲು ಅವಕಾಶ ನೀಡುವಂತೆ ವೈದ್ಯರ ಬಳಿ ಮನವಿ ಮಾಡಿದ್ದರು. ಸಾಕಷ್ಟು ಚರ್ಚೆಯ ಬಳಿಕ ವೈದ್ಯರು ಮದುವೆಗೆ ಅನುಮತಿ ನೀಡಿದ ಕಾರಣ ಅವರ ಮಕ್ಕಳ ಮದುವೆ ಅವರ ಕಣ್ಣುಮುಂದೆಯೇ ನಡೆದಿದೆ. ಇಕ್ಬಾಲ್ ಮೊದಲ ಮಗಳು ಐಸಿಯುನಲ್ಲಿ ಗುರುವಾರ ಮದುವೆಯಾದರೆ, ಅವರ ಎರಡನೇ ಮಗಳು ಮರುದಿನ ಮದುವೆಯಾಗಿದ್ದಾರೆ ಎಂಬುದಾಗಿ ತಿಳಿದುಬಂದಿದೆ.
ಇದಕ್ಕೆ ಸಂಬಂಧಿಸಿದ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಹಾಗೇ ಈ ಅದ್ಭುತ ಕ್ಷಣವನ್ನು ಆಸ್ಪತ್ರೆಯಲ್ಲಿ ನಡೆಸುವ ಮುನ್ನ ಆಸ್ಪತ್ರೆಯ ಸಿಬ್ಬಂದಿ ಮತ್ತು ಆಡಳಿತ ವರ್ಗ, ಇತರರ ರೋಗಗಳಿಗೆ ಸಮಸ್ಯೆಯಾಗುವುದನ್ನು ತಡೆಯಲು ವಿಶೇಷ ವ್ಯವಸ್ಥೆಯನ್ನು ಮಾಡಿದ್ದಾರೆ. ಮತ್ತು ಮಾನವೀಯತೆಯಿಂದ ಈ ಮದುವೆಗೆ ಐದು ಜನರಿಗೆ ಭಾಗವಹಿಸಲು ಅವಕಾಶ ನೀಡಿದ್ದರು ಎಂಬುದಾಗಿ ತಿಳಿದುಬಂದಿದೆ. ವರದಿ ಪ್ರಕಾರ ಇಕ್ಬಾಲ್ ಮಕ್ಕಳ ಮದುವೆ ಜೂನ್ 22ರಂದು ಮುಂಬೈನಲ್ಲಿ ನಿಗದಿಯಾಗಿತ್ತು.

ಇದನ್ನೂ ಓದಿ: Viral Video: 7 ಅಜ್ಜಂದಿರ ಜೊತೆ ಸಂಸಾರ ನಡೆಸುತ್ತಿರುವ ಯುವತಿ; ಆಕೆಯ ಪ್ಲ್ಯಾನ್ ಇಂಟರೆಸ್ಟಿಂಗ್!

“ನಮ್ಮ ತಂದೆ ನಮ್ಮ ಜಗತ್ತು. ಮತ್ತು ಅವರ ಆಶೀರ್ವಾದವಿಲ್ಲದೆ ಮದುವೆಯಾಗಲು ನಮಗೆ ಇಷ್ಟವಿಲ್ಲ. ಇದಕ್ಕೆ ಅವಕಾಶ ಮಾಡಿಕೊಟ್ಟ ಆಸ್ಪತ್ರೆಯ ಆಡಳಿತ ವರ್ಗಕ್ಕೆ ನಾವು ಕೃತಜ್ಞತೆ ಸಲ್ಲಿಸುತ್ತೇವೆ. ನಮ್ಮ ತಂದೆ ವೆಂಟಿಲೇಟರ್ ಸಹಾಯದಿಂದ ಪ್ರಜ್ಞೆಯಲ್ಲಿದ್ದರು. ನಮ್ಮ ಮದುವೆ ನೋಡಿ ಅವರ ಕಣ್ಣು ತೃಪ್ತಿಯಿಂದ ತುಂಬಿದವು” ಎಂದು ಇಕ್ಬಾಲ್ ಮಕ್ಕಳು ಹೇಳಿದ್ದಾರೆ.

Continue Reading

ಪ್ರಮುಖ ಸುದ್ದಿ

ಸೆಕ್ಸ್‌ ವರ್ಕರ್‌ಗೆ ಮಾಡಿದ ಮೆಸೇಜ್‌ ಗೊತ್ತಾಗಿ ಪತ್ನಿ ವಿಚ್ಛೇದನ; ಆ್ಯಪಲ್‌ ಕಂಪನಿ ವಿರುದ್ಧ ಕೇಸ್‌ ಜಡಿದ ಪತಿ!

ಲಂಡನ್‌ ಉದ್ಯಮಿಯೊಬ್ಬ ಆ್ಯಪಲ್‌ ಕಂಪನಿ ವಿರುದ್ಧ ಮೊಕದ್ದಮೆ ಹೂಡಿದ್ದಾನೆ. ಉದ್ಯಮಿಯ ಮನೆಯಲ್ಲಿರುವ ಸದಸ್ಯರ ಬಳಕೆಗಾಗಿ ಐಮ್ಯಾಕ್‌ ಇದೆ. ಐಮ್ಯಾಕ್‌ನಲ್ಲಿ ಐಮೆಸೇಜ್‌ ಮೂಲಕ ಹಲವು ಸೆಕ್ಸ್‌ ವರ್ಕರ್‌ಗಳ ಜತೆ ರೊಮ್ಯಾಂಟಿಕ್‌ ಆಗಿ ಚಾಟ್‌ (Sexting) ಮಾಡಿದ್ದಾನೆ. ಈ ಮೆಸೇಜ್‌ಗಳನ್ನು ಡಿಲೀಟ್‌ ಮಾಡಿದರೂ ಪತ್ನಿಗೆ ಕಾಣಿಸಿವೆ. ಇದರಿಂದಾಗಿ ಕಂಪನಿ ವಿರುದ್ಧವೇ ಉದ್ಯಮಿಯು ಮೊಕದ್ದಮೆ ಹೂಡಿದ್ದಾನೆ.

VISTARANEWS.COM


on

Sex Worker
Koo

ಲಂಡನ್:‌ ಸುರಕ್ಷತೆಯ ದೃಷ್ಟಿಯಿಂದ ಆ್ಯಪಲ್‌ ಕಂಪನಿಯ ಉತ್ಪನ್ನಗಳನ್ನು ಜನ ಹೆಚ್ಚಿನ ದುಡ್ಡು ಕೊಟ್ಟು ಖರೀದಿಸುತ್ತಾರೆ. ಐಫೋನ್‌ ಹಾಗೂ ಐಮ್ಯಾಕ್‌ಗಳನ್ನು ಇದೇ ಕಾರಣಕ್ಕಾಗಿ ಖರೀದಿಸುತ್ತಾರೆ. ಆದರೆ, ಲಂಡನ್‌ನಲ್ಲಿ ವ್ಯಕ್ತಿಯೊಬ್ಬ ಸುರಕ್ಷತೆಗೆ ಧಕ್ಕೆ ಬಂದ ಹಿನ್ನೆಲೆಯಲ್ಲಿ ಆ್ಯಪಲ್‌ ಕಂಪನಿ (Apple Company) ವಿರುದ್ಧವೇ ಮೊಕದ್ದಮೆ ಹೂಡಿದ್ದಾನೆ. ವ್ಯಕ್ತಿಯೊಬ್ಬ ಐಮ್ಯಾಕ್‌ನಲ್ಲಿ ಲೈಂಗಿಕ ಕಾರ್ಯಕರ್ತೆ (Sex Worker) ಜತೆ ಚಾಟ್‌ ಮಾಡಿದ್ದು, ಆ ಮೆಸೇಜ್‌ಗಳನ್ನು ಬಳಿಕ ಡಿಲೀಟ್‌ ಮಾಡಿದ್ದಾನೆ. ಆದರೆ, ಪರ್ಮನೆಂಟ್‌ ಆದ ಮೆಸೇಜ್‌ಗಳು ಹೆಂಡತಿಗೆ ಕಾಣಿಸಿದ ಕಾರಣ ವ್ಯಕ್ತಿಯು ಆ್ಯಪಲ್‌ ಕಂಪನಿ ವಿರುದ್ಧ ಕೇಸ್‌ ಹಾಕಿದ್ದಾನೆ ಎಂದು ತಿಳಿದುಬಂದಿದೆ.

ಹೌದು, ಲಂಡನ್‌ ಉದ್ಯಮಿಯೊಬ್ಬ ಆ್ಯಪಲ್‌ ಕಂಪನಿ ವಿರುದ್ಧ ಮೊಕದ್ದಮೆ ಹೂಡಿದ್ದಾನೆ. ಉದ್ಯಮಿಯ ಮನೆಯಲ್ಲಿರುವ ಸದಸ್ಯರ ಬಳಕೆಗಾಗಿ ಐಮ್ಯಾಕ್‌ ಇದೆ. ಐಮ್ಯಾಕ್‌ನಲ್ಲಿ ಐಮೆಸೇಜ್‌ ಮೂಲಕ ಹಲವು ಸೆಕ್ಸ್‌ ವರ್ಕರ್‌ಗಳ ಜತೆ ರೊಮ್ಯಾಂಟಿಕ್‌ ಆಗಿ ಚಾಟ್‌ (Sexting) ಮಾಡಿದ್ದಾನೆ. ಐಮ್ಯಾಕ್‌ನಲ್ಲಿ ಕಳುಹಿಸಿದ ಮೆಸೇಜ್‌ಗಳನ್ನು ಆತ ತನ್ನ ಐಫೋನ್‌ನಲ್ಲಿ ಡಿಲೀಟ್‌ ಮಾಡಿದ್ದಾನೆ. ಪರ್ಮನೆಂಟ್‌ ಆಗಿ ಮೆಸೇಜ್‌ಗಳನ್ನು ಡಿಲೀಟ್‌ ಮಾಡಿದ್ದಾನೆ. ಆದರೂ, ಈ ಮೆಸೇಜ್‌ಗಳನ್ನು ಪತ್ನಿಯು ಪತ್ತೆಹಚ್ಚಿದ್ದಾರೆ. ಇದು ಉದ್ಯಮಿಯ ಪಿತ್ತ ನೆತ್ತಿಗೇರುವಂತೆ ಮಾಡಿದೆ.

Hiring to Apple

ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ

ಪತಿಯು ರೆಡ್‌ಲೈಟ್‌ ಏರಿಯಾದ ಲಲನೆಯರ ಜತೆ ‘ಸರಸ’ದ ಮೆಸೇಜ್‌ಗಳನ್ನು ಮಾಡಿರುವುದು ಪತ್ತೆ ಹಚ್ಚಿದ ಪತ್ನಿಯು ಈಗ ವಿಚ್ಛೇದನ ಅರ್ಜಿ ಹಾಕಿದ್ದಾರೆ. ಅಷ್ಟೇ ಅಲ್ಲ, ಸುಮಾರು 52 ಕೋಟಿ ರೂ. (50 ಲಕ್ಷ ಪೌಂಡ್ಸ್)‌ ಜೀವನಾಂಶ ಕೊಡಬೇಕು ಎಂದು ಕೋರ್ಟ್‌ ಮೊರೆಹೋಗಿದ್ದಾರೆ. ಇದು ಈಗ ಹೆಸರು ಹೇಳಲು ಇಚ್ಛಿಸದ ಉದ್ಯಮಿಗೆ ಪೇಚಾಟ ತಂದಿದೆ. ಹೆಂಡತಿ ಇದ್ದರೂ ಬೇರೆ ಹೆಣ್ಣುಮಕ್ಕಳ ಜತೆ ಚಾಟ್‌ ಮಾಡಿದ್ದರಿಂದ ಕುಟುಂಬಸ್ಥರು ಹಾಗೂ ಗೆಳೆಯರ ಎದುರು ಅವಮಾನ ಆಗಿದೆ. ಇದರ ಮಧ್ಯೆಯೇ ಪತ್ನಿಯು ವಿಚ್ಛೇದನಕ್ಕೆ ಅರ್ಜಿ ಹಾಕಿರುವುದು ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ಆ್ಯಪಲ್‌ ವಿರುದ್ಧ ಕೇಸ್‌ ಏಕೆ?

ಐಮ್ಯಾಕ್‌ನಲ್ಲಿ ಮಾಡಿದ ಮೆಸೇಜ್‌ಗಳನ್ನು ಐಫೋನ್‌ನಲ್ಲಿ ಡಿಲೀಟ್‌ ಮಾಡಿದ್ದರಿಂದ ಉದ್ಯಮಿಯ ಪತ್ನಿಗೆ ಐಮ್ಯಾಕ್‌ನಲ್ಲಿ ಮಾಡಿದ ಮೆಸೇಜ್‌ಗಳು ಸಿಕ್ಕಿವೆ. ಹಾಗಾಗಿ, “ಲಿಂಕ್‌ ಆದ ಡಿವೈಸ್‌ಗಳ ಮೂಲಕ ಕಳುಹಿಸಿದ ಮೆಸೇಜ್‌ಗಳನ್ನು ಎಲ್ಲ ಕಡೆಯೂ ಡಿಲೀಟ್‌ ಮಾಡಬೇಕು ಎಂಬುದರ ಕುರಿತು ಆ್ಯಪಲ್‌ ಕಂಪನಿಯು ಗ್ರಾಹಕರಿಗೆ ಮಾಹಿತಿ ನೀಡಿಲ್ಲ. ಇದರಿಂದ ನಾನೀಗ ನನ್ನ ಪತ್ನಿ, ಅಪಾರ ಪ್ರಮಾಣದ ಹಣ ಕಳೆದುಕೊಳ್ಳುವಂತಾಗಿದೆ” ಎಂದು ಉದ್ಯಮಿಯು ಕೋರ್ಟ್‌ ಮೊರೆ ಹೋಗಿದ್ದಾನೆ.

ಇದನ್ನೂ ಓದಿ: Murder Case : ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಚಟ್ಟ ಕಟ್ಟಿದಳು ಹೆಂಡತಿ

Continue Reading
Advertisement
How Much Salt Is Too Much
ಆರೋಗ್ಯ11 mins ago

How Much Salt Is Too Much: ಉಪ್ಪು ಅತಿಯಾಗದಿರಲಿ; ದಿನಕ್ಕೆ ನಾವೆಷ್ಟು ಉಪ್ಪು ತಿನ್ನುತ್ತಿದ್ದೇವೆ ಗೊತ್ತಿರಲಿ

T20 World Cup 2024
ಕ್ರೀಡೆ13 mins ago

T20 World Cup 2024: ಸೂಪರ್​-8 ಪಂದ್ಯಕ್ಕೂ ಮುನ್ನ ಭಾರತ ತಂಡಕ್ಕೆ ಆಘಾತ; ಅಭ್ಯಾಸದ ವೇಳೆ ಸ್ಟಾರ್​ ಆಟಗಾರನಿಗೆ ಗಾಯ

Narendra Modi
ದೇಶ24 mins ago

Narendra Modi: ಮೂರನೇ ಬಾರಿ ಪ್ರಧಾನಿ ಪಟ್ಟಕ್ಕೇರಿದ ಬಳಿಕ ಇಂದು ಸ್ವಕ್ಷೇತ್ರ ವಾರಾಣಸಿಗೆ ಮೋದಿ ಮೊದಲ ಭೇಟಿ

Prajwal revanna case
ಪ್ರಮುಖ ಸುದ್ದಿ40 mins ago

Prajwal Revanna Case: ಇಂದು ಪ್ರಜ್ವಲ್ ರೇವಣ್ಣ ಎಸ್ಐಟಿ ಕಸ್ಟಡಿ ಅಂತ್ಯ, ಮತ್ತೊಂದು ಕೇಸ್‌ನಲ್ಲಿ ಅಂದರ್!‌

Team India Coach
ಕ್ರೀಡೆ51 mins ago

Team India Coach: ಜಾಂಟಿ ರೋಡ್ಸ್ ಟೀಮ್​ ಇಂಡಿಯಾದ ಮುಂದಿನ ಫೀಲ್ಡಿಂಗ್​ ಕೋಚ್​

pattanagere shed actor darshan renuka swamy murder
ಕ್ರೈಂ1 hour ago

Actor Darshan: ಆ ಭೀಕರ ಶೆಡ್‌ನಲ್ಲಿ ಇನ್ನೂ ಹಲವರ ರಕ್ತದ ಕಲೆ ಪತ್ತೆ! ಏನ್‌ ನಡೆದಿತ್ತು ಇಲ್ಲಿ?

Beer Side Effect
ಆರೋಗ್ಯ1 hour ago

Beer Side Effect: ಬಿಯರ್‌ ಕುಡಿದರೆ ತೂಕ ಹೆಚ್ಚುತ್ತದೆ ಎನ್ನುವುದು ನಿಜವೇ?

Nuclear Weapon
ದೇಶ1 hour ago

Nuclear Weapon: ಭಾರತದಲ್ಲಿದೆ ಪಾಕಿಸ್ತಾನಕ್ಕಿಂತ ಹೆಚ್ಚಿನ ಪರಮಾಣು ಶಸ್ತ್ರಾಸ್ತ್ರ; ಹೀಗಿದೆ ಹೊಸ ಅಂಕಿ-ಅಂಶ

Neeraj Chopra
ಕ್ರೀಡೆ1 hour ago

Neeraj Chopra: ಇಂದು ಪಾವೊ ನೂರ್ಮಿ ಗೇಮ್ಸ್​ನಲ್ಲಿ ನೀರಜ್ ಚೋಪ್ರಾ ಸ್ಪರ್ಧೆ

Euro 2024
ಕ್ರೀಡೆ2 hours ago

Euro 2024: ಉಕ್ರೇನ್​ಗೆ ಆಘಾತವಿಕ್ಕಿದ ರೊಮೇನಿಯಾ; 3-0 ಗೋಲ್​ ಅಂತರದ ಗೆಲುವು

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು22 hours ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು22 hours ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ2 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ2 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ2 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ3 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ4 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು4 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು4 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ4 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌